Tag: ಕೋವಿಡ್ ಟೆಸ್ಟ್

  • ಕೋವಿಡ್ ಟೆಸ್ಟ್ ಮಾಡಿಸಿಕೊಂಡ ಸಿಎಂ ಬೊಮ್ಮಾಯಿ

    ಕೋವಿಡ್ ಟೆಸ್ಟ್ ಮಾಡಿಸಿಕೊಂಡ ಸಿಎಂ ಬೊಮ್ಮಾಯಿ

    ಬೆಂಗಳೂರು: ನಾಳೆ ಮೋದಿ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದಾರೆ.

    ಪಿಎಂ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಆಗಿರಬೇಕು ಎಂದು ಪೊಲೀಸ್ ಇಲಾಖೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ  ಇಂದು ಸಿಎಂ ಬಸವರಾಜ ಬೊಮ್ಮಾಯಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಅವರ ಆರ್.ಟಿ. ನಗರ ನಿವಾಸಕ್ಕೆ ಆಗಮಿಸಿದ ಆರೋಗ್ಯ ಸಿಬ್ಬಂದಿ ಬಂದು ಮನೆಯಲ್ಲೇ ಕೋವಿಡ್ ಪರೀಕ್ಷೆ ಮಾಡಿದ್ದಾರೆ.

    ಮೋದಿ ಕಾರ್ಯಕ್ರಮಕ್ಕೆ ಕೋವಿಡ್ ಟೆಸ್ಟ್ ಕಡ್ಡಾಯ ಹಿನ್ನೆಲೆ ಮೋದಿ ಕಾರ್ಯಕ್ರಮದ ಬಂದೋಬಸ್ತ್‌ನಲ್ಲಿ ಭಾಗಿಯಾಗಿರುವ 500 ಪೊಲೀಸರು ಕೋವಿಡ್ ಟೆಸ್ಟ್‌ಗೆ ಒಳಗಾಗಿದ್ದಾರೆ. ಬಿಬಿಎಂಪಿ ಆರೋಗ್ಯ ಸಿಬ್ಬಂದಿ ನಿನ್ನೆ ಪ್ಯಾಲೇಸ್ ಗ್ರೌಂಡ್‌ನಲ್ಲಿ ಪೊಲೀಸರನ್ನು ಕೋವಿಡ್ ಟೆಸ್ಟ್  ಮಾಡಿದ್ದು, ಇಂದು ರಿಪೋರ್ಟ್‌ ಹೊರಬೀಳಲಿದೆ. ಇದನ್ನೂ ಓದಿ: ಕೇವಲ 1 ಗಂಟೆಯಲ್ಲಿ 3,182 ಪುಷ್‌-ಅಪ್‌ ಮಾಡಿ ಗಿನ್ನಿಸ್‌ ವರ್ಲ್ಡ್‌ ರೆಕಾರ್ಡ್‌ ಮಾಡಿದ ಭೂಪ!

    8ನೇ ಅಂತಾರಾಷ್ಟ್ರೀಯ ಯೋಗದಿನಾಚರಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡುತ್ತಿದ್ದು, ಜೂನ್ 20 ಮತ್ತು 21ರಂದು ಎರಡು ದಿನ ಮೋದಿ ಬೆಂಗಳೂರು ಮತ್ತು ಮೈಸೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಜೂ. 20ರಂದು ಮಧ್ಯಾಹ್ನ 11.55ಕ್ಕೆ ಬೆಂಗಳೂರು ಯಲಹಂಕ ವಾಯುನೆಲೆಗೆ ಆಗಮಿಸಿ ನಂತರ ಮಧ್ಯಾಹ್ನ 12:30ಕ್ಕೆ ಇಂಡಿಯನ್ ಇನ್ಸಿಟ್ಯೂಟ್ ಆಫ್ ಸೈನ್ಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 1.45ಕ್ಕೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಮೋದಿ: ಕಾರ್ಯಕ್ರಮಗಳಲ್ಲಿ ಬದಲಾವಣೆ – ಪಟ್ಟಿ ಹೀಗಿದೆ..

    Live Tv

  • ಕೋವಿಡ್ ಪ್ರಕರಣ ಹೆಚ್ಚಳ – ಕರ್ನಾಟಕ ಸೇರಿದಂತೆ 5 ರಾಜ್ಯಗಳಿಗೆ ಕೇಂದ್ರದಿಂದ ಪತ್ರ

    ಕೋವಿಡ್ ಪ್ರಕರಣ ಹೆಚ್ಚಳ – ಕರ್ನಾಟಕ ಸೇರಿದಂತೆ 5 ರಾಜ್ಯಗಳಿಗೆ ಕೇಂದ್ರದಿಂದ ಪತ್ರ

    ನವದೆಹಲಿ: ದೇಶಾದ್ಯಂತ ಮತ್ತೆ ಕೋವಿಡ್ ಕೇಸ್‌ಗಳು ಹೆಚ್ಚಾಗುತ್ತಿದ್ದು, ಕೇಂದ್ರ ಆರೋಗ್ಯ ಸಚಿವಾಲಯ 5 ರಾಜ್ಯಗಳಿಗೆ ಕಣ್ಗಾವಲು ಹಾಗೂ ಪರೀಕ್ಷೆಗಳನ್ನು ಮುಂದುವರಿಸಲು ಸೂಚನೆ ನೀಡಿದೆ. ಈ 5 ರಾಜ್ಯಗಳಲ್ಲಿ ಕರ್ನಾಟಕವೂ ಸೇರಿದೆ.

    ಕೇಂದ್ರ ಆರೋಗ್ಯ ಸಚಿವಾಲಯ ಕೋವಿಡ್ ಪ್ರಕರಣಗಳ ಹಿನ್ನೆಲೆ ತಮಿಳುನಾಡು, ಕೇರಳ, ತೆಲಂಗಾಣ, ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದೆ. ಇದನ್ನೂ ಓದಿ: ಕಾಶ್ಮೀರದ ಹತ್ಯೆಗಳಿಗೆ ಪಾಕಿಸ್ತಾನವನ್ನು ದೂರಿದ ಕೇಂದ್ರ

    corona

    ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಈ 5 ರಾಜ್ಯಗಳಿಗೆ ಕಣ್ಗಾವಲು ಹಾಗೂ ಪರೀಕ್ಷೆಗಳನ್ನು ಹೆಚ್ಚಿಸಲು ತಿಳಿಸಿದ್ದಾರೆ. ಜನರಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ಹಾಗೂ ಉಸಿರಾಟದ ಸಮಸ್ಯೆ ಇದ್ದಲ್ಲಿ ತಕ್ಷಣವೇ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇದರಿಂದ ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಬಹುದು ಎಂದಿದ್ದಾರೆ. ಇದನ್ನೂ ಓದಿ: ಬೀದರ್ ಪ್ರವೇಶಕ್ಕೆ ಪ್ರಮೋದ್ ಮುತಾಲಿಕ್, ಆಂದೋಲನ ಶ್ರೀಗಳಿಗೆ ಬ್ಯಾನ್

    ಈ 5 ರಾಜ್ಯಗಳು ಕೇಂದ್ರಕ್ಕೆ ನೀಡುವ ಅಂಕಿ ಅಂಶಗಳ ಪ್ರಕಾರ ಕೇರಳದ 11 ಜಿಲ್ಲೆಗಳು, ತಮಿಳುನಾಡುನ 2 ಜಿಲ್ಲೆಗಳು, ಮಹಾರಾಷ್ಟ್ರದ 6 ಜಿಲ್ಲೆಗಳು, ಕರ್ನಾಟಕದ ಬೆಂಗಳೂರು ಹಾಗೂ ತೆಲಂಗಾಣದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ.

  • ಕೋವಿಡ್‌ ಟೆಸ್ಟ್‌ ಮಾಡಿಸಿಕೊಳ್ಳಿ ಎಂದ ಆರೋಗ್ಯ ಅಧಿಕಾರಿ ವಿರುದ್ಧ ಡಿಕೆಶಿ ಗರಂ

    ಕೋವಿಡ್‌ ಟೆಸ್ಟ್‌ ಮಾಡಿಸಿಕೊಳ್ಳಿ ಎಂದ ಆರೋಗ್ಯ ಅಧಿಕಾರಿ ವಿರುದ್ಧ ಡಿಕೆಶಿ ಗರಂ

    ರಾಮನಗರ: ಕೋವಿಡ್‌ ಟೆಸ್ಟ್‌ ಮಾಡಿಸಿಕೊಳ್ಳಿ ಎಂದಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಆರೋಗ್ಯ ಅಧಿಕಾರಿಯ ಮೇಲೆಯೇ ಗರಂ ಆದ ಪ್ರಸಂಗ ನಡೆದಿದೆ.

    ಮೊದಲ ದಿನದ ಪಾದಯಾತ್ರೆಯ ಬಳಿಕ ಕನಕಪುರದ ದೊಡ್ಡಾಲಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಡಿಕೆಶಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಆರೋಗ್ಯ ಅಧಿಕಾರಿಗಳು, ಸರ್‌ ರ‍್ಯಾಂಡಮ್‌ ಟೆಸ್ಟ್‌ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾಯಕತ್ವಕ್ಕಾಗಿ ಡಿಕೆಶಿಯಿಂದ ಪಾದಯಾತ್ರೆ ಡ್ರಾಮಾ: ಕಟೀಲ್

    ಇದಕ್ಕೆ ಗರಂ ಆದ ಡಿಕೆಶಿ, ನಾನು ಫಿಟ್‌ ಆಂಡ್‌ ಫೈನ್‌ ಆಗಿದ್ದೇನೆ. ಈಗ ಪಾದಯಾತ್ರೆ ಮಾಡಿದ್ದು ನನ್ನ ಆರೋಗ್ಯ ಚೆನ್ನಾಗಿದೆ. ಸರ್ಕಾರ ಪಾದಯಾತ್ರೆ ನಿಲ್ಲಿಸಲು ಮಾಡಿರುವ ಷಡ್ಯಂತ್ರ ಎಂದು ಹೇಳಿ ಆರೋಗ್ಯ ಅಧಿಕಾರಿಗಳ ಮೇಲೆಯೇ ಸಿಟ್ಟು ಹೊರ ಹಾಕಿದರು.

    ರಾತ್ರಿ ಶಿವಕುಮಾರ್ ಸ್ವಗ್ರಾಮ ದೊಡ್ಡಾಲಹಳ್ಳಿಯಲ್ಲಿ ರೋಡ್ ಶೋ ನಡೆಸಿದರು. ಈ ವೇಳೆ ಮಾತನಾಡಿ, ನಾನು ಈ ಗಡ್ಡ ಬಿಟ್ಟಿದ್ದು ತಿಹಾರ್ ಜೈಲಿನಲ್ಲಿ. ಈ ಗಡ್ಡಕ್ಕೆ ನೀವೇ ಮುಕ್ತಿ ಕೊಡಬೇಕು.  ನಾನು ಮತ ಕೇಳಲು ಬರುವುದಿಲ್ಲ. ನಮ್ಮ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ. ನನ್ನನ್ನು ಮತ್ತೆ ಜೈಲಿಗೆ ಕಳುಹಿಸುವ ಹುನ್ನಾರ ನಡೆಯುತ್ತಿದೆ. ತಾಕತ್ತಿದ್ದರೆ ಪೊಲೀಸರು ಕೇಸ್ ಹಾಕಲಿ. ಸಿಎಂ ಬೊಮ್ಮಾಯಿಯವರೇ ನಮ್ಮನ್ನು ಜೈಲಿಗೆ ಕಳಿಸಿ ನೀವು ಹಾಲು ಕುಡಿಯಿರಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸರ್ಕಾರ ಬದುಕಿದ್ಯಾ, ಸತ್ತಿದ್ಯಾ ಅನ್ನೋದನ್ನ ತೋರಿಸ್ತೀವಿ: ಸಚಿವ ಸುಧಾಕರ್

    ಎರಡನೇ ದಿನದ ಪಾದಯಾತ್ರೆ:
    ಎರಡನೇ ದಿನ ಬೆಳಗ್ಗೆ 8:30ಕ್ಕೆ ದೊಡ್ಡಾಲಹಳ್ಳಿಯಿಂದ ಪಾದಯಾತ್ರೆ ಆರಂಭವಾಗಲಿದೆ. ಇಂದು ಒಟ್ಟು 16 ಕಿಲೋ ಮೀಟರ್ ಪಾದಯಾತ್ರೆ ನಡೆಯಲಿದೆ. ಮೊದಲಾರ್ಧ 8 ಕಿ.ಮೀ. ಪಾದಯಾತ್ರೆ ನಡೆಯಲಿದೆ. ಮಧ್ಯಾಹ್ನ ಮಾದಪ್ಪನ ದೊಡ್ಡಿ, ಕರಿಯಣ್ಣ ದೊಡ್ಡಿಯಲ್ಲಿ ಭೋಜನ ವಿರಾಮದ ಬಳಿಕ 8 ಕಿ.ಮೀ. ಪಾದಯಾತ್ರೆ ನಡೆದು ಸಂಜೆ ಕನಕಪುರದಲ್ಲಿ ಮುಕ್ತಯವಾಗಲಿದೆ. ಇಲ್ಲೇ ರಾತ್ರಿ ಸಭೆ ನಡೆಯಲಿದೆ.


    ಭಾಗಿಯಾಗುತ್ತಿಲ್ಲ  ಸಿದ್ದರಾಮಯ್ಯ:
    ಮೊದಲ ದಿನದದ ಪಾದಯಾತ್ರೆ ವೇಳೆ ಸಿದ್ದರಾಮಯ್ಯಗೆ ಕೊಂಚ ಸುಸ್ತು ಕಾಡಿತ್ತು. ಕೊರೊನಾ ಬೂಸ್ಟರ್ ಡೋಸ್ ಪಡೆದಿದ್ದ ಸಿದ್ದರಾಮಯ್ಯಗೆ ಸಹಜವಾಗಿ ಮೈಕೈ ನೋವು, ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಸಂಗಮದಿಂದ ಬೆಂಗಳೂರಿಗೆ ವೈದ್ಯರ ಸಲಹೆ ಮೇರೆಗೆ ವಾಪಸಾಗಿದ್ದರು. ಇಂದು ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ ಎಂಬ ಸುದ್ದಿ ಆರಂಭದಲ್ಲಿ ಸಿಕ್ಕಿತ್ತು. ಆದರೆ ವೈದ್ಯರ ಸಲಹೆಯಂತೆ ಮನೆಯಲ್ಲೇ ಸಿದ್ದರಾಮಯ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ.

  • ಹೊಸ ಸ್ವರೂಪ ಪಡೆದ ಕೊರೊನಾ-ಕಣ್ಣೀರಿನಿಂದಲೂ ಸೋಂಕು ಹಬ್ಬುತ್ತೆ, ಎಚ್ಚರ..!

    ಹೊಸ ಸ್ವರೂಪ ಪಡೆದ ಕೊರೊನಾ-ಕಣ್ಣೀರಿನಿಂದಲೂ ಸೋಂಕು ಹಬ್ಬುತ್ತೆ, ಎಚ್ಚರ..!

    ಬೆಂಗಳೂರು: ಕೊರೊನಾ ಮೂರನೇ ಅಲೆಯ ಆತಂಕದ ಬೆನ್ನಲ್ಲೇ ಹೆಮ್ಮಾರಿ ವೈರಸ್ ಮತ್ತೊಂದು ಸ್ಬರೂಪ ಪಡೆದಿದೆ. ಕಣ್ಣೀರಿನಿಂದಲೂ ಕೊರೊನಾ ಹರಡುತ್ತೆ ಎಂದು ಪಂಜಾಬ್ ವಿಶ್ವವಿದ್ಯಾಲಯದ ಸಂಶೋಧನೆಯಲ್ಲಿ ತಿಳಿದು ಬಂದಿದೆ.

    ಕಣ್ಣೀರಿನ ಮೂಲಕವೂ ಮತ್ತೊಬ್ಬರಿಗೆ ಸೋಂಕು ಹರಡಬಹುದೆಂದು ಸಂಶೋಧನೆಯಲ್ಲಿ ತಿಳಿದು ಬಂದಿದ್ದು, ನೇತ್ರ ತಜ್ಞರು ಮುನ್ನೆಚ್ಚರಿಕೆ ವಹಿಸಬೇಕಾದ ಅಗತ್ಯವಿದೆ ಎಂದು ಸಂಶೋಧನೆಯ ಮೂಲಕ ಎಚ್ಚರಿಕೆ ನೀಡಿದ್ದಾರೆ. ಪಂಜಾಬ್ ನ ಅಮೃತಸರದ ಸರ್ಕಾರಿ ವೈದ್ಯ ಕಾಲೇಜು ನಡೆಸಿದ ಅಧ್ಯಯನದಲ್ಲಿ ಈ ವರದಿ ಬೆಳಕಿಗೆ ಬಂದಿದೆ. ದೇಹದ ಯಾವುದಾದರೂ ಭಾಗದಲ್ಲಿ ಕಾಯಿಲೆ ಕಾಣಿಸಿಕೊಂಡರೆ, ಕಣ್ಣಿನಲ್ಲಿ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದನ್ನು ಅಕ್ಯೂಲರ್ ಮ್ಯಾನಿಫೆಸ್ಟೇಷನ್(Ocular Manifestations) ಎಂದು ಕರೆಯಲಾಗುತ್ತದೆ. ಮ್ಯಾನಿಫೆಸ್ಟೇಷನ್ ತುತ್ತಾಗಿರುವ, ತುತ್ತಾಗದೇ ಇರುವ ಕೋವಿಡ್ ಸೋಂಕಿತನ ಕಣ್ಣೀರಲ್ಲಿ ಸೋಂಕು ಇದೆಯೇ ಎಂಬುದನ್ನು ಪತ್ತೆ ಮಾಡಲು ತಂಡ ಮುಂದಾಗಿತ್ತು. ಈ ಅಧ್ಯಯನಕ್ಕೆ ಒಟ್ಟು 120 ರೋಗಿಗಳನ್ನು ಒಳಪಡಿಸಲಾಗಿತ್ತು. ಈ ವೇಳೆ 60 ಮಂದಿಯಲ್ಲಿ ಅಕ್ಯೂಲರ್ ಮ್ಯಾಮಿಫೆಸ್ಟೇಷನ್ ಕಂಡು ಬಂದ್ರೆ, 41 ರೋಗಿಗಳಲ್ಲಿ ಕಣ್ಣು ಕೆಂಪಾಗುವುದು ಕಂಡು ಬಂದಿದೆ. ಇದನ್ನೂ ಓದಿ: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಕೇಸ್ 3,703ಕ್ಕೆ ಏರಿಕೆ- 360 ಡೆತ್

    ರಾಜ್ಯದಿಂದ ಹೊರ ರಾಜ್ಯಕ್ಕೆ ಹೋಗುವರಿಗೂ ಕೋವಿಡ್ ಟೆಸ್ಟ್ ಕಡ್ಡಾಯ:
    ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದಂತೆ, ರಾಜ್ಯಕ್ಕೆ ಅಪಾಯದ ಮುನ್ಸೂಚನೆ ಬಂದಿದೆ. ಕೇರಳ ಪ್ರಯಾಣಿಕರಿಂದಲೇ ಸೋಂಕು ಹಬ್ಬುವ ಆತಂಕ ಇರುವ ಹಿನ್ನೆಲೆ, ಟಫ್ ರೂಲ್ಸ್ ಗೆ ಸರ್ಕಾರ ಮುಂದಾಗಿದೆ. ರಾಜ್ಯದಿಂದ ಮಹಾರಾಷ್ಟ್ರ, ಕೇರಳಕ್ಕೆ ಹೋಗುವ, ಬರುವ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಅಂತರ್ ರಾಜ್ಯ ಬಸ್ ಹತ್ತಲು ಸ್ಥಳೀಯರಿಗೂ ನೆಗಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ.

    ಕರ್ನಾಟಕದಿಂದ ಕೇರಳ, ಮಹಾರಾಷ್ಟ್ರಕ್ಕೆ ಹೋಗುವ ರಾಜ್ಯದ ಸ್ಥಳೀಯರು ಕೋವಿಡ್ ನೆಗಟಿವ್ ರಿಪೋರ್ಟ್9 ತೋರಿಸಲೇಬೇಕು. ರೈಲಿನಲ್ಲಿ ಆಗಮಿಸಿದ್ರೆ ಇಳಿಯುವಾಗ ನಿಲ್ದಾಣದಲ್ಲಿ ನೆಗಟಿವ್ ರಿಪೋರ್ಟ್9 ತೋರಿಸಬೇಕು. ನೆಗಟಿವ್ ರಿಪೋರ್ಟ್9 ಇಲ್ಲದಿದ್ದರೆ ಪರೀಕ್ಷೆಗೆ ಒಳಪಡಿಸಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಕ್ವಾರಂಟೈನ್ ಮಾಡುವಂತೆ ಸ್ಥಳೀಯ ಆಡಳಿತಗಳಿಗೆ ರಾಜ್ಯ ಆರೋಗ್ಯ ಇಲಾಖೆ ನಿರ್ದೇಶನ ನೀಡಿದೆ.

    ಅಂತರ್ ರಾಜ್ಯಗಳಿಂದ, ರಾಜ್ಯಕ್ಕೆ ಬರುವ ಪ್ರಯಾಣಿಕರ ಬಳಿ 72ಗಂಟೆಯೊಳಗಿನ ಕೊವೀಡ್ ನೆಗಟಿವ್ ರಿಪೋರ್ಟ್9 ಇರಲೇಬೇಕು. ಹೊರ ರಾಜ್ಯದ ಪ್ರಯಾಣಿಕರ ಮೇಲೆ ತೀವ್ರ ನಿಗಾವಹಿಸಲು ಮೆಜೆಸ್ಟಿಕ್, ಯಶವಂತಪುರ, ಕಂಟೋನ್ಮೆಂಟ್, ಕೆ.ಆರ್ ಪುರಂ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ತಪಾಸಣೆಗೆ ಬಿಬಿಎಂಪಿ ವಿಶೇಷ ತಂಡಗಳ ರಚನೆ ಮಾಡಿ, ಕೋವಿಡ್ ಪರೀಕ್ಷೆ ನಡೆಸುತ್ತಿದೆ.

  • ಮೂರನೇ ಅಲೆ ಭೀತಿ – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣು

    ಮೂರನೇ ಅಲೆ ಭೀತಿ – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣು

    ಬೆಂಗಳೂರು: ಮೂರನೇ ಅಲೆಯ ಭೀತಿ ಹೆಚ್ಚುತ್ತಿದ್ದಂತೆ, ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಅಂತರ್ ಜಿಲ್ಲೆ, ಅಂತರ್ ರಾಜ್ಯಗಳಿಂದ ಬರುವ ಪ್ರತಿ ಪ್ರಯಾಣಿಕರ ಮೇಲೂ ನಿಗಾ ವಹಿಸಲಾಗಿದ್ದು, ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ.

    ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಆವರಣದಲ್ಲಿ ಬೆಳಗಿನ ಜಾವ 4 ಗಂಟೆಯಿಂದ 15ಕ್ಕೂ ಹೆಚ್ಚು ತಂಡಗಳಿಂದ ಕೋವಿಡ್ ಪರೀಕ್ಷೆ ನಡೆಯುತ್ತಿದ್ದು, ಎಂಟ್ರಿ, ಎಕ್ಸಿಟ್ ಭಾಗಗಳಲ್ಲಿ ಪ್ರತಿ ಪ್ರಯಾಣಿಕರ ಮೇಲೂ ಆರೋಗ್ಯ ಸಿಬ್ಬಂದಿ ನಿಗಾ ವಹಿಸಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಒಟ್ಟು 30 ತಂಡಗಳಿಂದ ತಲಾ 300 ಜನರಿಗೆ ನಿತ್ಯ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ. ರೈಲ್ವೆ ನಿಲ್ದಾಣದಲ್ಲಿ ಮಾರ್ಷಲ್ಸ್ ಗಳು ಕೂಡ ಪ್ರಯಾಣಿಕರ ಮೇಲೆ ನಿಗಾ ವಹಿಸಿತ್ತಿದ್ದೂ ಮಾಸ್ಕ್ ಹಾಕದವರಿಗೆ ದಂಡವನ್ನು ವಿಧಿಸಲಾಗುತ್ತಿದೆ.

    ಆಟೋ ಚಾಲಕರ ಹಾವಳಿ:
    ಅಂತರ್ ರಾಜ್ಯ, ಅಂತರ್ ಜಿಲ್ಲೆಯ ಪ್ರಯಾಣಿಕರಿಗೆ ಆರೋಗ್ಯ ಸಿಬ್ಬಂದಿ ಕೋವಿಡ್ ಪರೀಕ್ಷೆ ಮಾಡುತ್ತಿದ್ದಾರೆ. ಪ್ರಯಾಣಿಕರನ್ನು ಕರೆದುಕೊಂಡು ಹೋಗುವ ಆತುರದಲ್ಲಿ ಆರೋಗ್ಯ ಸಿಬ್ಬಂದಿಗೆ ಆಟೋ ಚಾಲಕರು ಕಿರಿಕಿರಿ ಮಾಡುತ್ತಿದ್ದಾರೆ. ಸರಿಯಾಗಿ ಮಾಸ್ಕ್ ಧರಿಸದೇ ಬೇಕಾಬಿಟ್ಟಿಯಾಗಿ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಆವರಣದಲ್ಲಿ ಓಡಾಡುತ್ತಿದ್ದಾರೆ. ಮಾಸ್ಕ್ ಹಾಕಿ ಎಂದು ಮಾರ್ಷಲ್ಸ್ ಗಳು ಪ್ರಶ್ನೆ ಮಾಡಿದರೆ, ಮಾರ್ಷಲ್ಸ್ ಗಳ ಮೇಲೆಯೇ ಆಟೋ ಚಾಲಕರು ಗಲಾಟೆ ಮಾಡುತ್ತಿದ್ದಾರೆ ಎಂದು ಮಾರ್ಷಲ್ಸ್ ಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಇದನ್ನೂ ಓದಿ:ಮುಂದಿನ ಚುನಾವಣೆ ಜವಾಬ್ದಾರಿ ನನ್ನ ಮೇಲಿದೆ: ಸಿಎಂ ಬಿಎಸ್‍ವೈ

  • ಕೋವಿಡ್ ರಿಸಲ್ಟ್ ವಿಳಂಬ – 40 ಲ್ಯಾಬ್‍ಗಳ ಮೇಲೆ ದಂಡ ಪ್ರಯೋಗ

    ಕೋವಿಡ್ ರಿಸಲ್ಟ್ ವಿಳಂಬ – 40 ಲ್ಯಾಬ್‍ಗಳ ಮೇಲೆ ದಂಡ ಪ್ರಯೋಗ

    – ಕೋವಿಡ್ ಪರೀಕ್ಷೆ ವ್ಯವಸ್ಥೆ ಅವಲೋಕಿಸಿದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ
    – 9 ಜಿಲ್ಲೆಗಳಲ್ಲಿ ಟೆಸ್ಟ್ ಹೆಚ್ಚಿಸಲು ಸೂಚನೆ
    – 3 ಲಕ್ಷ ವೈಲ್ಸ್ ಬ್ಲ್ಯಾಕ್ ಫಂಗಸ್ ಔಷಧಿಯ ತುರ್ತು ಖರೀದಿಗೆ ನಿರ್ದೇಶನ

    ಬೆಂಗಳೂರು: ಕೋವಿಡ್ ಪರೀಕ್ಷೆ ವರದಿಗಳನ್ನು ವಿಳಂಬ ಮಾಡಿದ ಸರ್ಕಾರಿ ಮತ್ತು ಖಾಸಗಿ ಲ್ಯಾಬ್‍ಗಳ ಮೇಲೆ ಸರ್ಕಾರ ಮೊದಲೇ ಎಚ್ಚರಿಕೆ ನೀಡಿದಂತೆ ದಂಡ ಪ್ರಯೋಗ ಮಾಡಿದೆ.

    ಸ್ಯಾಂಪಲ್ ಕಳಿಸಿಕೊಟ್ಟ 24 ಗಂಟೆಗಳ ಒಳಗಾಗಿ ರಿಸಲ್ಟ್ ಕೊಡದೆ, ಐಸಿಎಂಆರ್ ಪೋರ್ಟಲ್ ಗೆ ಅಪ್‍ಲೋಡ್ ಮಾಡದ ಕಾರಣಕ್ಕೆ ಪ್ರತೀ ಒಂದು ಸ್ಯಾಂಪಲ್ ಮೇಲೆ 200 ರೂ.ನಂತೆ ದಂಡ ವಿಧಿಸಲಾಗಿದೆ.

    ರಾಜ್ಯ ಕೋವಿಡ್ ಕಾರ್ಯಪಡೆ ಮುಖ್ಯಸ್ಥರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಸಭೆಯ ನಂತರ ಡಿಸಿಎಂ ಈ ಮಾಹಿತಿ ಹಂಚಿಕೊಂಡರು.

    ಡಿಸಿಎಂ ಹೇಳಿದ್ದಿಷ್ಟು;
    24 ಗಂಟೆ ಒಳಗಾಗಿ ರಿಸಲ್ಟ್ ಕೊಡಬೇಕು ಎಂದು ಸರಕಾರವು ಲ್ಯಾಬ್‍ಗಳಿಗೆ ಡೆಡ್‍ಲೈನ್ ವಿಧಿಸಿತ್ತು. ಆದರೆ, ಕೆಲ ಲ್ಯಾಬ್‍ಗಳು ಪರಿಸ್ಥಿತಿಯ ತೀವ್ರತೆ ಅರಿಯದೇ ಉಪೇಕ್ಷೆ ಮಾಡಿರುವುದು ಅಕ್ಷಮ್ಯ. ಹೀಗಾಗಿ ದಂಡ ಹಾಕಲಾಗಿದೆ. ಮೇ 8ರಿಂದ ಜಾರಿಗೆ ಬರುವಂತೆ ದಂಡ ಕ್ರಮ ಕೈಗೊಳ್ಳಲಾಗಿದ್ದು, 3,034 ಸ್ಯಾಂಪಲ್‍ಗಳ ವರದಿ ನೀಡಲು ತಡ ಮಾಡಿದ ಕಾರಣಕ್ಕೆ ಸರಕಾರಿ ಸ್ವಾಮ್ಯದ 9 ಪ್ರಮುಖ ಲ್ಯಾಬ್‍ಗಳಿಗೆ 6,06,800 ರೂ. ಹಾಗೂ ಖಾಸಗಿ ವಲಯದ 31 ಲ್ಯಾಬ್‍ಗಳಿಂದ 7,069 ಸ್ಯಾಂಪಲ್‍ಗಳು ವಿಳಂಬವಾಗಿ ಬಂದಿದ್ದು, ಅವುಗಳಿಗೆ ಒಟ್ಟು 14,13,800 ರೂ. ದಂಡ ವಿಧಿಸಲಾಗಿದೆ.

    ಐಸಿಎಂಆರ್ ಪೋರ್ಟಲ್ ಗೆ ಅಪ್‍ಲೋಡ್ ಮಾಡದೇ ಫಲಿತಾಂಶದ ವರದಿಗಳನ್ನು ಬಹಿರಂಗ ಮಾಡಿದ ಕಾರಣಕ್ಕಾಗಿ 5 ಲ್ಯಾಬ್‍ಗಳಿಗೆ ದಂಡ ವಿಧಿಸಿ ಮುಚ್ಚಿಸಲಾಗಿದೆ. ಜತೆಗೆ, ಇನ್ನೂ ಬಹಳ ವಿಳಂಬ ಮಾಡಿದ 41 ಲ್ಯಾಬ್‍ಗಳಿಗೆ ಶೋಕಾಸ್ ನೋಟೀಸ್ ಜಾರಿ ಮಾಡಲಾಗಿದೆ. ಸ್ಯಾಂಪಲ್ ತಲುಪಿದ 24 ಗಂಟೆಯೊಳಗೆ ರಿಸಲ್ಟ್ ಕೊಡುವುದರ ಜತೆಗೆ, ಪಾಸಿಟೀವ್ ಬಂದವರ ಮಾಹಿತಿಯನ್ನು ಐಸಿಎಂಆರ್ ಪೋರ್ಟಲ್  ಗೆ ಆಪ್‍ಲೋಡ್ ಮಾಡಬೇಕು. ಹೀಗೆ ಆಗದಿರುವುದರಿಂದ ಚಿಕಿತ್ಸೆ ತಡವಾಗಿ ಅನೇಕರು ಜೀವ ಕಳೆದುಕೊಂಡಿದ್ದಾರೆ. ಲ್ಯಾಬ್‍ಗಳ ಇಂಥ ದೋರಣೆಯನ್ನು ಸಹಿಸಲು ಸಾಧ್ಯವಿಲ್ಲ.

    1,100 ಸ್ಯಾಂಪಲ್ ರಿಸಲ್ಟ್ ತಡ ಮಾಡಿದ್ದಕ್ಕೆ ಮೆಡ್‍ಜಿಯೋನೋಂ ಲ್ಯಾಬ್‍ಗೆ 2,20,000 ರೂ., 862 ರಿಸಲ್ಟ್ ತಡ ಮಾಡಿದ ಕಿದ್ವಾಯಿ ಸ್ಮಾರಕ ಆಸ್ಪತ್ರೆಯ ಲ್ಯಾಬ್‍ಗೆ 1,72,400 ರೂ.,  659 ವರದಿ ವಿಳಂಬ ಮಾಡಿದ ಯುರೋಫಿನ್ಸ್ ಕ್ಲಿನಿಕಲ್ ಗೆನೆಟಿಕ್ಸ್ ಇಂಡಿಯಾ ಲ್ಯಾಬ್‍ಗೆ  1,31,800 ರೂ. ದಂಡ ವಿಧಿಸಲಾಗಿದೆ. ಸರಕಾರಿ ಸ್ವಾಮ್ಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ದಂಡಕ್ಕೆ ತುತ್ತಾದ ಲ್ಯಾಬ್‍ಗಳಿವು.

    ಇನ್ನು, ಖಾಸಗಿ ಲ್ಯಾಬ್‍ಗಳಿಗೆ ಬಂದರೆ 938 ವರದಿಗಳನ್ನು ತಡವಾಗಿ ನೀಡಿದ ಡಾ.ಲಾಲ್ ಪಾಥ್‍ ಲ್ಯಾಬ್ಸ್ ಗೆ  1,87,600 ರೂ., 918  ರಿಸಲ್ಟ್ ನೀಡಲು ತಡ ಮಾಡಿದ್ದಕ್ಕೆ ಮೆಡ್‍ಜಿಯೋನೋಂ ಲ್ಯಾಬ್‍ಗೆ 1,83,600 ರೂ., ಮಣಿಪಾಲ್ ಆಸ್ಪತ್ರೆಯ ಲ್ಯಾಬ್ 880  ವರದಿಗಳನ್ನು ತಡ ಮಾಡಿದ್ದಕ್ಕಾಗಿ 1,76,000 ರೂ., 756 ರಿಸಲ್ಟ್ ತಡ ಮಾಡಿದ ಪ್ರಿಮಾ ಡಯಾಗ್ನಿಸ್ಟಿಕ್ ಲ್ಯಾಬ್‍ಗೆ 1,51,200 ರೂ., 585 ವರದಿ ವಿಳಂಬ ಮಾಡಿದ 1ಎಂಜಿ ಲ್ಯಾಬ್ಸ್‍ಗೆ 1,17,000 ರೂ., ಬೆಂಗಳೂರು ಅರ್ಬನ್ ಲ್ಯಾಬ್ಸ್ (05) 509 ವರದಿಗಳನ್ನು ವಿಳಂಬ ಮಾಡಿದ್ದಕ್ಕಾಗಿ 1,01,800 ರೂ. ದಂಡ ವಿಧಿಸಲಾಗಿದೆ. ಖಾಸಗಿ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಹೆಚ್ಚು ದಂಡಕ್ಕೆ ತುತ್ತಾದ ಲ್ಯಾಬ್‍ಗಳಿವು.

    ಟೆಸ್ಟ್ ಹೆಚ್ಚಿಸಲು ಸೂಚನೆ:
    ಸದ್ಯಕ್ಕೆ 9 ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳು ಹೆಚ್ಚಾಗಿರುವುದರಿಂದ ಎಲ್ಲಡೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಮನೆಮನೆಗೂ ತೆರಳಿ ರೋಗ ಲಕ್ಷಣಗಳಿದ್ದವರನ್ನು ಪರೀಕ್ಷೆ ಮಾಡಬೇಕು. ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷೆ ಪ್ರಮಾಣವನ್ನು ದುಪ್ಪಟ್ಟು ಮಾಡಬೇಕು. ಒಬ್ಬ ಪಾಸೀಟಿವ್ ಬಂದವರು ಪತ್ತೆಯಾದರೆ ಅವರಿಗೆ ಪ್ರಾಥಮಿಕ ಹಂತದಲ್ಲಿ ಸಂಪರ್ಕಕ್ಕೆ ಬಂದ ಕನಿಷ್ಠ ನಾಲ್ವರನ್ನಾದರೂ ಪರೀಕ್ಷೆಗೆ ಒಳಪಡಿಸಬೇಕು ಹಾಗೂ ಸೋಂಕು ಕಂಡು ಬಂದರೆ ಅಂಥವರನ್ನು ಕೂಡಲೇ ಸ್ಥಳೀಯ ಕೋವಿಡ್ ಕೇರ್ ಗಳಿಗೆ  ಶಿಫ್ಟ್ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು.

    ಚಾಮರಾಜನಗರದಲ್ಲಿ ಕಿಟ್‍ಗಳಿಲ್ಲ ಅಂತ ನೆಪ ಹೇಳಿ ಪರೀಕ್ಷೆ ನಡೆಸುತ್ತಿಲ್ಲ ಎಂಬ ಮಾಹಿತಿಯನ್ನು ಶಾಲಿನಿ ರಜನೀಶ್ ಗಮನಕ್ಕೆ ತಂದರು. ಕೂಡಲೇ ಅಲ್ಲಿಗೆ ಅಗತ್ಯವಾದ ರಾಟ್ ಮತ್ತು  ಆರ್‍ಟಿಪಿಸಿಆರ್ ಕಿಟ್‍ಗಳನ್ನು ಕಳಿಸುವಂತೆ ಸೂಚಿಸಿದ್ದೇನೆ.

    ಬ್ಲ್ಯಾಕ್ ಫಂಗಸ್ ತುರ್ತು ಔಷಧಿ ಖರೀದಿ:
    ಸದ್ಯಕ್ಕೆ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಔಷಧಿಗೆ ಬಹಳ ಬೇಡಿಕೆ ಇದ್ದು, ತಮ್ಮಲ್ಲಿ ಸ್ಟಾಕ್ ಇದ್ದರೆ ಯಾರು ಬೇಕಾದರೂ ತುರ್ತಾಗಿ  ಪೂರೈಕೆ ಮಾಡಬಹುದು. ನಿಗದಿತ ದರ ನೀಡಿ ಸರಕಾರ ತಕ್ಷಣ ಖರೀದಿ ಮಾಡಲಿದೆ. ಆಂಫೊಟೆರಿಸಿನ್-ಬಿ ಔಷಧಿಯನ್ನು (Amphotericin-B; 50mg) 3 ಲಕ್ಷ ವೈಲ್ಸ್ ಖರೀದಿ ಮಾಡುವಂತೆ ಸಭೆಯಲ್ಲಿದ್ದ ಕೋವಿಡ್ ಔಷಧಿ ಉಸ್ತುವಾರಿ ಅಧಿಕಾರಿ ಅಜುಂ ಪರ್ವೇಜ್ ಅವರಿಗೆ ನಿರ್ದೇಶನ ನೀಡಲಾಯಿತು. ಇನ್ನು, ರಾಜ್ಯದಲ್ಲಿ ರೆಮಿಡಿಸಿವರ್ ಬೇಡಿಕೆಗಿಂತ ಹೆಚ್ಚು ಪ್ರಮಾಣದಲ್ಲಿ ದಾಸ್ತಾನಿದೆ.

    ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಲ್ಯಾಬ್ ಉಸ್ತುವಾರಿ ಅಧಿಕಾರಿ ಶಾಲಿನಿ ರಜನೀಶ್,  ಕೋವಿಡ್ ಔಷಧಿ ಉಸ್ತುವಾರಿ ಅಧಿಕಾರಿ ಅಜುಂ ಪರ್ವೇಜ್, ಡಿಸಿಎಂ ಕಾರ್ಯದರ್ಶಿ ಪ್ರದೀಪ್ ಪ್ರಭಾಕರ್ ಮುಂತಾದವರು ಸಭೆಯಲ್ಲಿದ್ದರು.

  • ಕೋವಿಡ್ ನಂತರ ರಾಜ್ಯದ ಆರೋಗ್ಯ ಮೂಲಸೌಕರ್ಯದಲ್ಲಿ ಮಹತ್ತರ ಪ್ರಗತಿ – ಸುಧಾಕರ್

    ಕೋವಿಡ್ ನಂತರ ರಾಜ್ಯದ ಆರೋಗ್ಯ ಮೂಲಸೌಕರ್ಯದಲ್ಲಿ ಮಹತ್ತರ ಪ್ರಗತಿ – ಸುಧಾಕರ್

    -ಕಳೆದೊಂದು ವರ್ಷದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಚುರುಕು
    -ಹಾಸಿಗೆ ಸಾಮಥ್ರ್ಯ ದುಪ್ಪಟ್ಟು, ಆಕ್ಸಿಜನ್ ಉತ್ಪಾದನೆಗೆ ಒತ್ತು

    ಬೆಂಗಳೂರು: ದಿನಕ್ಕೆ ಒಂದೂವರೆ-ಎರಡು ಲಕ್ಷ ಕೋವಿಡ್ ಪರೀಕ್ಷೆ ನಡೆಸುವ ಸಾಮಥ್ರ್ಯ, 1,015 ಮೆಟ್ರಿಕ್ ಟನ್ ಆಕ್ಸಿಜನ್ ಲಭ್ಯತೆ, 22 ಸಾವಿರಕ್ಕೂ ಅಧಿಕ ಆಕ್ಸಿಜನ್ ಹಾಸಿಗೆ, ಅಗತ್ಯಕ್ಕೆ ತಕ್ಕಷ್ಟು ರೆಮ್ ಡಿಸಿವಿರ್ ಔಷಧಿ ಪೂರೈಕೆ ಸೇರಿದಂತೆ ಕೋವಿಡ್ ಸಾಂಕ್ರಾಮಿಕವನ್ನು ನಿಯಂತ್ರಣಕ್ಕೆ ತರಲು ಆರೋಗ್ಯ ಮೂಲ ಸೌಕರ್ಯವನ್ನು ರಾಜ್ಯ ಸರ್ಕಾರ ಗಣನೀಯವಾಗಿ ಅಭಿವೃದ್ಧಿಪಡಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ರವರು  ಹೇಳಿದ್ದಾರೆ.

    ಸಚಿವ ಡಾ.ಕೆ.ಸುಧಾಕರ್‌ರವರು ಎರಡೂ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಈ ಹಿಂದೆಯೇ ಸೂಚನೆ ನೀಡಿದ್ದು, ಅದರಂತೆ ಎರಡೂ ಇಲಾಖೆಗಳು ಒಂದಾಗಿ ಕಾರ್ಯನಿರ್ವಹಿಸಿ ಮೂಲಸೌಕರ್ಯ ಅಭಿವೃದ್ಧಿಪಡಿಸಿವೆ. ಇದರಿಂದಾಗಿ ಕೋವಿಡ್ ಎರಡನೇ ಅಲೆಯ ತೀವ್ರತೆಯನ್ನು ತಗ್ಗಿಸಲು, ರೋಗಿಗಳಿಗೆ ಸೂಕ್ತ ಕಾಲದಲ್ಲಿ ಉತ್ತಮ ಚಿಕಿತ್ಸೆ ನೀಡಲು ಸಹಕಾರಿಯಾಗಿದೆ ಎಂದರು.

    ಪರೀಕ್ಷೆ ಹೆಚ್ಚಳ: ಫೆಬ್ರವರಿ ಅಂತ್ಯಕ್ಕೆ ದಿನಕ್ಕೆ 60-70 ಸಾವಿರ ಪರೀಕ್ಷೆ ನಡೆಸುತ್ತಿದ್ದು, ನಂತರ ಒಂದೂವರೆ ಲಕ್ಷಕ್ಕೆ ಏರಿಸಲಾಯಿತು. ಮೇ 22 ರವರೆಗೆ, 2.85 ಕೋಟಿ ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 2.38 ಕೋಟಿ ಪರೀಕ್ಷೆಗಳು ಆರ್ ಟಿ-ಪಿಸಿಆರ್ ಟೆಸ್ಟ್‍ಗಳಾಗಿವೆ. ಕೇಂದ್ರ ಸರ್ಕಾರ 70:30 ಅನುಪಾತದಲ್ಲಿ ಆರ್‍ಟಿಪಿಸಿಆರ್ ಹಾಗೂ ರಾಪಿಡ್ ಆ್ಯಂಟಿಜೆನ್ ಪರೀಕ್ಷೆ ಮಾಡಲು ಸೂಚಿಸಿದ್ದರೆ, ರಾಜ್ಯದಲ್ಲಿ ಶೇ.80%ಕ್ಕಿಂತ ಹೆಚ್ಚು ಪರೀಕ್ಷೆಗಳು ಆರ್ ಟಿ-ಪಿಸಿಆರ್ ಪರೀಕ್ಷೆಗಳಾಗಿವೆ. 2020 ರ ಫೆಬ್ರವರಿಯಲ್ಲಿ 2 ಲ್ಯಾಬ್ ಗಳಿದ್ದರೆ, ಈಗ 241 (91 ಸರ್ಕಾರಿ, 150 ಖಾಸಗಿ) ಲ್ಯಾಬ್ ಗಳಿವೆ ಎಂದು ಹೇಳಿದರು.

    ಹಾಸಿಗೆ ಸಾಮಥ್ರ್ಯ ಏರಿಕೆ: 2020ರ ಮಾರ್ಚ್‍ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯ ಆಸ್ಪತ್ರೆಗಳಲ್ಲಿ 1,970 ಆಕ್ಸಿಜನ್ ಹಾಸಿಗೆಗಳಿದ್ದು, 22,001 ಹೊಸದಾಗಿ ಅಳವಡಿಸಲಾಗಿದೆ. ಇದರಿಂದ ಒಟ್ಟು ಆಕ್ಸಿಜನ್ ಹಾಸಿಗೆ ಸಂಖ್ಯೆ 23,971ಕ್ಕೆ ಏರಿಕೆಯಾಗಿದೆ. 444 ಐಸಿಯು ಹಾಸಿಗೆ ಇದ್ದು, 701 ಹೊಸದಾಗಿ ಅಳವಡಿಸಲಾಗಿದೆ. ಇದರಿಂದ ಒಟ್ಟು ಐಸಿಯು ಹಾಸಿಗೆ ಸಂಖ್ಯೆ 1,145 ಕ್ಕೆ ಏರಿಕೆಯಾಗಿದೆ. 610 ವೆಂಟಿಲೇಟರ್ ಇದ್ದು, ಹೊಸದಾಗಿ 1,548 ಅಳವಡಿಸಿ ಒಟ್ಟು ಸಂಖ್ಯೆಯನ್ನು 2,158 ಕ್ಕೆ ಏರಿಸಲಾಗಿದೆ. ಹೊಸದಾಗಿ 1,248 ಎಚ್‍ಎಫ್‍ಎನ್‍ಸಿ ಹಾಸಿಗೆ ಅಳವಡಿಸಲಾಗಿದೆ ಎಂದು ಹೇಳಿದರು.

    ವೈದ್ಯಕೀಯ ಶಿಕ್ಷಣ ಇಲಾಖೆಯಡಿಯ ಆಸ್ಪತ್ರೆಗಳಲ್ಲಿ, 4,700 ಆಕ್ಸಿಜನ್ ಹಾಸಿಗೆಗಳಿದ್ದು, ಹೊಸದಾಗಿ 4,705 ಅಳವಡಿಸಲಾಗಿದೆ. ಇದರಿಂದ ಒಟ್ಟು ಆಕ್ಸಿಜನ್ ಹಾಸಿಗೆ ಸಂಖ್ಯೆ 9,405 ಕ್ಕೆ ಏರಿಕೆಯಾಗಿದೆ. 341 ವೆಂಟಿಲೇಟರ್ ಇದ್ದು, ಹೊಸದಾಗಿ 305 ಅಳವಡಿಸಿ ಒಟ್ಟು ಸಂಖ್ಯೆಯನ್ನು 646 ಕ್ಕೆ ಏರಿಸಲಾಗಿದೆ. 15 ಎಚ್‍ಎಫ್‍ಎನ್ಸಿ ಹಾಸಿಗೆ ಇದ್ದು, 555 ಹೊಸದಾಗಿ ಅಳವಡಿಸಿದ್ದರಿಂದ ಒಟ್ಟು ಸಂಖ್ಯೆ 570 ಕ್ಕೆ ಏರಿಕೆಯಾಗಿದೆ. 151 ಕೆಎಲ್ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಸೌಲಭ್ಯವಿದ್ದು, 73 ಕೆಎಲ್ ಅಳವಡಿಸಿ, ಒಟ್ಟು ಸಾಮಥ್ರ್ಯವನ್ನು 224 ಕೆಎಲ್ ಗೆ ಏರಿಸಲಾಗಿದೆ ಎಂದು ತಿಳಿಸಿದರು.

    ವೈದ್ಯಕೀಯ ಆಮ್ಲಜನಕ: ರಾಜ್ಯದಲ್ಲಿ 815 ಟನ್ ಆಕ್ಸಿಜನ್ ಉತ್ಪಾದನೆಯಾಗುತ್ತಿದ್ದು, ಕೇಂದ್ರ ಸರ್ಕಾರದಿಂದ 1,015 ಟನ್ ಹಂಚಿಕೆಯಾಗಿದೆ. ಯಾದಗಿರಿ, ಕೆಜಿಎಫ್ ನಲ್ಲಿ ಎರಡು ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪಿಸಲಾಗಿದೆ. ಡಿಆರ್ ಡಿಒ ನೆರವಿನಲ್ಲಿ 1,000 ಎಲ್ ಪಿಎಂ ಸಾಮಥ್ರ್ಯದ ಮೂರು ಆಕ್ಸಿಜನ್ ಘಟಕಗಳನ್ನು ಸಿವಿ ರಾಮನ್ ಆಸ್ಪತ್ರೆ, ಕಲಬುರ್ಗಿ ಇಎಸ್‍ಐ ಮೆಡಿಕಲ್ ಕಾಲೇಜು, ಕೊಪ್ಪಳ ಮೆಡಿಕಲ್ ಸೈನ್ಸಸ್ ಸಂಸ್ಥೆಯಲ್ಲಿ ಆರಂಭಿಸಲಾಗುತ್ತಿದೆ. ಬಳ್ಳಾರಿಯಲ್ಲಿ 1,000 ಆಕ್ಸಿಜನ್ ಹಾಸಿಗೆಯುಳ್ಳ ಆಸ್ಪತ್ರೆ ಆರಂಭಿಸಲಾಗಿದೆ. ಕೇಂದ್ರ ಸರ್ಕಾರವು 600 ಎಲ್‍ಪಿಎಂ ಸಾಮಥ್ರ್ಯದ 6 ಪಿಎಸ್‍ಎ ಘಟಕ ಆರಂಭಕ್ಕೆ ಅನುಮೋದನೆ ನೀಡಿದೆ. 10 ಆಕ್ಸಿಜನ್ ಎಕ್ಸ್ ಪ್ರೆಸ್ ರೈಲುಗಳಲ್ಲಿ ಸುಮಾರು 1000 ಮೆಟ್ರಿಕ್ ಟನ್ ಆಕ್ಸಿಜನ್ ರಾಜ್ಯಕ್ಕೆ ಪೂರೈಕೆಯಾಗಿದೆ ಎಂದರು.

    ರೆಮ್ ಡಿಸಿವಿರ್: 5 ಲಕ್ಷ ವೈಲ್ಸ್ ಖರೀದಿಗೆ ಜಾಗತಿಕ ಟೆಂಡರ್ ಕರೆಯಲಾಗಿದೆ. ಮೇನಲ್ಲಿ 51,360 ವೈಲ್ ಖರೀದಿಗೆ ಆದೇಶಿಸಿದ್ದು, 11,000 ದೊರೆತಿದೆ. ಸಿಎಸ್‍ಆರ್ ನಡಿ, 900 ವೈಲ್ ಪಡೆಯಲಾಗಿದೆ. ಕೇಂದ್ರ ಸರ್ಕಾರದಿಂದ 56,943 ವೈಲ್ ಪಡೆಯಲಾಗಿದೆ ಎಂದು ತಿಳಿಸಿದರು.

    ಕೋವಿಡ್ ಲಸಿಕೆ: ರಾಜ್ಯದ ಎಲ್ಲರಿಗೂ ಕೋವಿಡ್ ಲಸಿಕೆ ನೀಡುವ ಗುರಿಯೊಂದಿಗೆ ಹಂತಹಂತವಾಗಿ ಲಸಿಕೆ ನೀಡಲಾಗುತ್ತಿದೆ. ಮೇ 22 ರವರೆಗೆ, 1,20,14,015
    ಲಸಿಕೆ ಡೋಸ್‍ಗಳನ್ನು ನೀಡಲಾಗಿದೆ. ಕೇಂದ್ರ ಸರ್ಕಾರ ಪೂರೈಸಿರುವ 1,13,26,340 ಡೋಸ್ ಜೊತೆಗೆ ರಾಜ್ಯ ಸರ್ಕಾರ ಖರೀದಿ ಮಾಡಲು ಮುಂದಾಗಿರುವ ಲಸಿಕೆಯಲ್ಲಿ 14,94,170 ಲಭ್ಯವಾಗಿದೆ ಎಂದು ನುಡಿದರು.

    ಕೋವಿಡ್ ನಂತರದ ಕಾಲದಲ್ಲಿ ಆರೋಗ್ಯ ಮೂಲಸೌಕರ್ಯದಲ್ಲಿ ಸಾಕಷ್ಟು ಪ್ರಗತಿ ಸಾಧಿಸಲಾಗಿದೆ. ಆರ್ಥಿಕ ಸಂಕಷ್ಟವಿದ್ದರೂ ಹೆಚ್ಚು ಸಂಪನ್ಮೂಲವನ್ನು ಬಳಸಿ ಆರೋಗ್ಯ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಗಮನಹರಿಸಲಾಗಿದೆ. ಇದರಿಂದ ಭವಿಷ್ಯದಲ್ಲಿ ‘ಆರೋಗ್ಯ ಕರ್ನಾಟಕ’ ನಿರ್ಮಾಣ ಸಾಕಾರವಾಗಲಿದೆ ಎಂದು ಹೇಳಿದರು.

  • ಕೊರೊನಾ ಸೋಂಕಿನ ಶಂಕೆ – ಮಹಿಳೆ ಆತ್ಮಹತ್ಯೆ

    ಕೊರೊನಾ ಸೋಂಕಿನ ಶಂಕೆ – ಮಹಿಳೆ ಆತ್ಮಹತ್ಯೆ

    ಗದಗ: ಕೊರೊನಾ ಸೋಂಕಿನ ಶಂಕೆಗೆ ಮಹಿಳೆ ಆತ್ಮಹತ್ಯೆ ಮಾಡಿರುವ ಘಟನೆ ತಾಲೂಕಿನ ಕದಡಿ ಗ್ರಾಮದಲ್ಲಿ ನಡೆದಿದೆ.

    ಮೃತಪಟ್ಟ ಮಹಿಳೆಯನ್ನು ಲಲಿತಾ ರೋಣ(45) ಎಂದು ಗುರುತಿಸಲಾಗಿದ್ದು, ಇವರು ನಿತ್ಯ ತರಕಾರಿ ಮಾರುತ್ತಿದ್ದರು. ಆದರೆ ಕಳೆದ ಹತ್ತಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಕುಟುಂಬಸ್ಥರು ಹಾಗೂ ಸ್ಥಳಿಯರು ಒತ್ತಾಯಿಸಿದ್ದಾರೆ.

    ಮಹಿಳೆ ನನಗೂ ಕೊರೊನಾ ಇರಬಹುದೆಂದು ಭಯಗೊಂಡು ಯಾರು ಇಲ್ಲದ ವೇಳೆ ಹೊರವಲಯದಲ್ಲಿ ತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಚಾಮರಾಜನಗರ ಪ್ರವಾಸಿ ತಾಣದಲ್ಲಿ ಇನ್ಮುಂದೆ ನಡೆಯಲಿದೆ ಕೋವಿಡ್ ಟೆಸ್ಟ್

    ಚಾಮರಾಜನಗರ ಪ್ರವಾಸಿ ತಾಣದಲ್ಲಿ ಇನ್ಮುಂದೆ ನಡೆಯಲಿದೆ ಕೋವಿಡ್ ಟೆಸ್ಟ್

    ಚಾಮರಾಜನಗರ: ವೀಕೆಂಡ್, ರಜಾದಿನ ಬಂದರೆ ಸಾಕು ಚಾಮರಾಜನಗರ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ದಂಡೆ ಹರಿದು ಬರುತ್ತಿದೆ. ಆದರೆ ಇದೀಗ ಪ್ರವಾಸಕ್ಕೆ ಬಂದವರಿಗೆ ಪ್ರವಾಸಿ ಸ್ಥಳದಲ್ಲೇ ಕೋವಿಡ್ ಟೆಸ್ಟ್ ಮಾಡಲು ಜಿಲ್ಲಾಡಳಿತ ತೀರ್ಮಾನಿಸಿದೆ.

    ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕೇಂದ್ರ ಸರ್ಕಾರದ ಗೈಡ್ ಲೈನ್ಸ್ ಪ್ರಕಾರ ಹೆಚ್ಚು ಕೋವಿಡ್ ಟೆಸ್ಟ್ ಮಾಡಿ, ಸೋಂಕಿತರ ಪತ್ತೆ ಹಚ್ಚುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಅಲ್ಲದೇ ಲಾಕ್‍ಡೌನ್ ಸಡಿಲಿಕೆಯಿಂದ ಪ್ರವಾಸಿಗರ ಸ್ವರ್ಗದಂತಿರುವ ಜಿಲ್ಲೆಯ ಪ್ರವಾಸಿತಾಣಗಳಿಗೆ ಪ್ರವಾಸಿಗರು ದಂಡೆ ಹರಿದು ಬರುತ್ತಿದೆ.

    ಹಿಮವದ್ ಗೋಪಾಲಸ್ವಾಮಿ ಬೆಟ್ಟ, ಬಂಡೀಪುರ ರಾಷ್ಟ್ರೀಯ ಉದ್ಯಾನವನ, ಬಿಆರ್ ಟಿ, ಮಲೆ ಮಹದೇಶ್ವರ ಬೆಟ್ಟ, ಮಲೆಹದೇಶ್ವರ ವನ್ಯಧಾಮ, ಭರಚುಕ್ಕಿ ಸೇರಿದಂತೆ ಹಲವು ಪ್ರವಾಸಿ ತಾಣಗಳ ವೀಕ್ಷಣೆಗೆ ರಾಜ್ಯ, ಹೊರ ರಾಜ್ಯದಿಂದಲು ಸಾಕಷ್ಟು ಜನರು ಬರುತ್ತಿದ್ದಾರೆ. ಅದರಲ್ಲಿಯೂ ವಾರಾಂತ್ಯದ ದಿನಗಳು ಹಾಗೂ ರಜೆ ದಿನಗಳಲ್ಲಿ ಪ್ರೇಕ್ಷಣೀಯ ಸ್ಥಳಗಳು ಕಿಕ್ಕಿರಿದು ತುಂಬಿರುತ್ತವೆ. ಇದರಿಂದ ಹೊಸ ಚಿಂತನೆ ಮಾಡಿರುವ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಪ್ರವಾಸಿ ಸ್ಥಳಗಳಲ್ಲೇ ಕೋವಿಡ್ ಟೆಸ್ಟ್ ಮಾಡಲು ತೀರ್ಮಾನ ಮಾಡಿದೆ. ಈ ಕುರಿತು ಚಾಮರಾಜನಗರ ಡಿಎಚ್‍ಒ ಡಾ.ರವಿ ಅವರು ಮಾಹಿತಿ ನೀಡಿದ್ದಾರೆ.

    ರ‍್ಯಾಪಿಡ್ ಮತ್ತು ಆರ್ ಟಿಪಿಸಿಆರ್ ಸ್ವಾಬ್ ಕಲೆಕ್ಷನ್ ಎರಡು ರೀತಿ ಕೋವಿಡ್ ಟೆಸ್ಟ್ ಮಾಡಲು ಆರೋಗ್ಯ ಇಲಾಖೆ ತೀರ್ಮಾನಿಸಿದೆ. ರೋಗ ಲಕ್ಷಣವಿರುವ ಹಾಗೂ ವಯಸ್ಸಾಗಿರುವ ಪ್ರವಾಸಿಗರನ್ನು ರ‍್ಯಾಪಿಡ್ ಟೆಸ್ಟ್ ಗೆ ಒಳಪಡಿಸುತ್ತೇವೆ. ಬಳಿಕ ಆರ್ ಟಿಪಿಸಿಆರ್ ಟೆಸ್ಟ್ ಮಾಡುತ್ತೇವೆ. ಕೋವಿಡ್ ಟೆಸ್ಟ್ ಕಡ್ಡಾಯವಾಗಿ ಮಾಡಿಸಿ ಎಂದು ನಾವು ಒತ್ತಾಯ ಮಾಡಲು ಕೂಡ ಸಾಧ್ಯವಿಲ್ಲ. ಆದರೆ ಎಲ್ಲರನ್ನು ಮನವೊಲಿಸಿ ಕೋವಿಡ್ ಟೆಸ್ಟ್ ಮಾಡಿಸಲು ಪ್ರಯತ್ನಿಸುತ್ತೇವೆ. ಅದು ಅವರ ಮತ್ತು ಅವರ ಸುತ್ತಲಿನವರ ಆರೋಗ್ಯ ದೃಷ್ಟಿಯಿಂದ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

    ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಲ್ಲಿ ಪ್ರವಾಸಿಗರಿಗೆ ಕೋವಿಡ್ ಟೆಸ್ಟ್ ಮಾಡಲು ಜಿಲ್ಲಾಡಳಿತ ತೀರ್ಮಾನಿಸಿರುವುದು ಜನರ ಆರೋಗ್ಯ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಾಗಿದೆ. ಪ್ರವಾಸಿಗರು ಎಷ್ಟರ ಮಟ್ಟಿಗೆ ಜಿಲ್ಲಾಡಳಿತದ ತೀರ್ಮಾನಕ್ಕೆ ಬೆಂಬಲ ನೀಡಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾಗಿಯಾಗುತ್ತಾರೆ ಕಾದು ನೋಡಬೇಕಿದೆ.

  • ಇನ್ಮುಂದೆ ಮಾಲ್, ಸೂಪರ್ ಮಾರ್ಕೆಟ್, ಪಾರ್ಕ್‌ಗಳಲ್ಲಿ ಕೋವಿಡ್ ಟೆಸ್ಟ್: ಬಿಬಿಎಂಪಿ

    ಇನ್ಮುಂದೆ ಮಾಲ್, ಸೂಪರ್ ಮಾರ್ಕೆಟ್, ಪಾರ್ಕ್‌ಗಳಲ್ಲಿ ಕೋವಿಡ್ ಟೆಸ್ಟ್: ಬಿಬಿಎಂಪಿ

    ಬೆಂಗಳೂರು: ಕೊರೊನಾ ವಿರುದ್ಧ ಪಾಲಿಕೆ ಹೊಸ ಪ್ಲ್ಯಾನ್ ಮಾಡಿದ್ದು, ಇನ್ನೂ ಮುಂದೆ ಜನಸಂದಣಿ ಜಾಸ್ತಿ ಇರುವ ಕಡೆ ಕೊರೊನಾ ಟೆಸ್ಟ್ ಮಾಡಿಸಲು ನಿರ್ಧರಿಸಲಾಗಿದೆ.

    ಈ ಬಗ್ಗೆ ಮಾತನಾಡಿದ ಬಿಬಿಎಂಪಿ ಕಮಿಷನರ್ ಮಂಜುನಾಥ್ ಪ್ರಸಾದ್, ಮಾಲ್, ಸೂಪರ್ ಮಾರ್ಕೆಟ್, ಪಾರ್ಕ್‌ಗಳಲ್ಲಿ ಕೊರೊನಾ ಟೆಸ್ಟ್ ಮಾಡಲು ನಿರ್ಧರಿಸಲಾಗಿದೆ. ಅಲ್ಲದೇ ಕಬ್ಬನ್ ಪಾರ್ಕ್ ಮತ್ತು ಲಾಲ್‍ಬಾಗ್ ಗೇಟ್ ಬಳಿ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ. ಪ್ರಾಥಮಿಕ, ದ್ವಿತೀಯ ಸಂಪರ್ಕ ಹಾಗೂ ಅನ್ಯ ರೋಗಗಳಿಗೆ ತುತ್ತಾದವರಿಗೂ ಕೋವಿಡ್ ಟೆಸ್ಟ್ ಮಾಡಲಾಗುತ್ತದೆ. ನೂರಾರು ಸಂಖ್ಯೆಯ ಜನ ಓಡಾಡುವ ಕಡೆಯೂ ಟೆಸ್ಟ್ ಮಾಡಲಾಗುತ್ತದೆ ಎಂದರು.

    ಮಾಲ್‍ಗಳಲ್ಲಿ ನಿಯಮ ಉಲ್ಲಂಘಿಸಿರುವುದು ಗಮನಕ್ಕೆ ಬಂದಿದೆ. ಸೂಪರ್ ಮಾರ್ಕೆಟ್, ಮಾಲ್‍ನಲ್ಲಿ ನಿಯಮ ಉಲ್ಲಂಘನೆಯಾದರೆ ಮಾಲೀಕರೇ ಹೊಣೆಯಾಗುತ್ತಾರೆ. ಹೀಗಾಗಿ ಮಾಲ್ ಮಾಲೀಕರು, ಶಾಪ್‍ನ ಮಾಲೀಕರು ಕೊರೊನಾ ರೂಲ್ಸ್ ಪಾಲಿಸುವಂತೆ ಕಾಯಬೇಕು.

    ಒಂದು ವೇಳೆ ಪದೇ ಪದೇ ನಿಯಮ ಉಲ್ಲಂಘಿಸಿದರೆ ಮಾಲ್ ಹಾಗೂ ಶಾಪನ್ನು ಕ್ಲೋಸ್ ಮಾಡಲು ಆದೇಶ ನೀಡಲಾಗುತ್ತದೆ. ಹೀಗಾಗಿ ಮಾಲ್‍ನಲ್ಲಿ ಸಾಮಾಜಿಕ ಅಂತರ ಕಾಯಲೇಬೇಕು. ಇಲ್ಲವಾದರೇ ದಂಡ ಹಾಕಲಾಗುತ್ತದೆ. 60 ವರ್ಷ ಮೇಲ್ಪಟ್ಟವರು, 10 ವರ್ಷ ಕೆಳಗಿನ ಮಕ್ಕಳು ಮನೆಯಿಂದ ಹೊರಗೆ ಹೋಗಬೇಡಿ ಎಂದು ಎಚ್ಚರಿಕೆ ನೀಡಿದರು.

    ಇನ್ನೂ ದುರ್ಗಾ ಪೂಜೆ ವೇಳೆ ಪ್ರತಿಮೆಯಿಡುವ ವೇಳೆಯೂ ಕ್ರಮ ವಹಿಸಲಾಗುತ್ತದೆ. ಮೈದಾನದಲ್ಲಿ ಕಾರ್ಯಕ್ರಮ ಮಾಡಿದರೂ ನಿಯಮ ಪಾಲಿಸಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕಾರ್ಯಕ್ರಮ ಆಯೋಜಕರ ಮೇಲೆ ಕೇಸ್ ದಾಖಲಿಸಲಾಗುತ್ತದೆ. ಓಪನ್ ಜಾಗದಲ್ಲಿ ಕಾರ್ಯಕ್ರಮ ಮಾಡುವುದಾದರೆ ಪಾಲಿಕೆ ನಿರ್ಧಾರ ಮಾಡಲಿದೆ. ಆರೋಗ್ಯ ಇಲಾಖೆಯು ಈ ಸಂಬಂಧ ಆದೇಶ ಹೊರಡಿಸಲಿದೆ ಎಂದು ನವರಾತ್ರಿ ವೇಳೆ ಜನಸಂದಣಿ ವಿಚಾರವಾಗಿ ಪ್ರತಿಕ್ರಿಯಿಸಿದರು.

    ಟೆಸ್ಟಿಂಗ್ ಕೇಸ್‍ಗಳ ಸಂಖ್ಯೆ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದ್ದು, ನಿತ್ಯ 50 ಸಾವಿರ ಟೆಸ್ಟ್ ಮಾಡಲು ಚಿಂತನೆ ಮಾಡಲಾಗಿದೆ. ಸದ್ಯಕ್ಕೆ ನಿತ್ಯ 38 ಸಾವಿರ ಕೇಸ್ ಟೆಸ್ಟ್ ಆಗುತ್ತಿದೆ. ಅರದಲ್ಲಿ ಈಗ 5 ಸಾವಿರ ಕೇಸ್ ಬರುತ್ತಿದೆ. ಇನ್ನೂ ಶೇ.1.23 ಸಾವು ಆಗುತ್ತಿದೆ. ನಾವು ಸಾವಿನ ಪ್ರಮಾಣವನ್ನು ಶೇ.1 ರಷ್ಟು ಇಳಿಕೆ ಮಾಡಲು ಪ್ರಯತ್ನಿಸುತ್ತಿದ್ದೇವೆ. ಹೀಗಾಗಿ ಉಸಿರಾಟದ ತೊಂದರೆಯಾದಾಗ ಆಸ್ಪತ್ರೆಗೆ ಬಂದರೆ ಜೀವ ಉಳಿಸಲು ಸಾಧ್ಯವಾಗಿದೆ ಎಂದು ಮಂಜುನಾಥ್ ಪ್ರಸಾದ್ ಹೇಳಿದರು.