Tag: ಕೋವಿಡ್ ಸೆಂಟರ್

  • ಕೋವಿಡ್ ಕೇರ್ ಸೆಂಟರ್‌ನಲ್ಲಿ ಮನರಂಜನೆಗೆ ಮನಸೋತ ಸೋಂಕಿತರು

    ಕೋವಿಡ್ ಕೇರ್ ಸೆಂಟರ್‌ನಲ್ಲಿ ಮನರಂಜನೆಗೆ ಮನಸೋತ ಸೋಂಕಿತರು

    ಗದಗ: ರಾಜ್ಯದೆಲ್ಲೆಡೆ ಕೋವಿಡ್ ಸೋಂಕಿತರು ಮಾನಸಿಕ ಹಾಗೂ ಭಯದ ಆತಂಕದ ನಡುವೆ ತಮ್ಮ ಉಸಿರು ಚೆಲ್ಲುತ್ತಿದ್ದಾರೆ. ಅವರಲ್ಲಿ ಕೊಂಚ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಜಿಲ್ಲೆ ಮುಂಡರಗಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಸಂಗೀತ ಕಾರ್ಯಕ್ರಮ ಜರುಗಿತು.

    ಜಾನಪದ ಕಲಾವಿದ ಗವಿಶಿದ್ದಯ್ಯ ಹಳ್ಳಿಕೇರಿಮಠ ಕಲಾ ಬಳಗದವರು ಸೋಂಕಿತರಿಗೆ ಸಂಗೀತದ ರಸದೌತನ ನೀಡಿದ್ರು. ಜಾನಪದ, ತತ್ವ ಪದ, ಗೀಗೀ ಪದ, ಸಂತ ಶಿಶುನಾಳ ಶರೀಫರ್ ಗೀತೆಗಳನ್ನ ಹಾಡುವ ಮೂಲಕ ಸೋಂಕಿತರಿಗೆ ಮನರಂಜನೆ ನೀಡಲಾಯಿತು.

    ಜಾನಪದ ಹಾಡುಗಳಿಗೆ ಧ್ವನಿಗೂಡಿಸಿದ ಕೊರೊನಾ ಸೋಂಕಿತರು, ಹಾಡುಗಳ ತಾಳಕ್ಕೆ ಚಪ್ಪಾಳೆ ಹಾಕುವ ಮೂಲಕ ತಮಗೆ ಖಾಯಿಲೆ ಇದೆ ಅನ್ನೋದನ್ನ ಮರೆತು ಸಂಗೀತದಲ್ಲಿ ಮೈಮರೆತಂತಿತ್ತು. ”ಒಳಿತು ಮಾಡು ಮನುಷ್ಯ ನೀ ಇರೋದು ಮೂರು ದಿವಸ. ಉಸಿರು ನಿಂತ ಮ್ಯಾಲೆ ನಿನ್ನ ಹೆಸರು ಹೇಳುತಾರಾ, ಹೆಣಾ ಅನ್ನುತಾರ” ಎಂಬ ಹಾಡಿಗೆ ಕೆಲವು ಸೋಂಕಿತ ತಮ್ಮ ಜೀವನದ ಅನುಭವ ನೆನಪಿಸಿಕೊಂಡು ಕಣ್ಣೀರಿಟ್ಟರು. ಇದನ್ನೂ ಓದಿ: ಕೋವಿಡ್ ಕೇಂದ್ರದಲ್ಲಿ ಯೋಗ ಟೀಚರ್ ಆದ ರೇಣುಕಾಚಾರ್ಯ

    ಸಿನಿಮಾ ಹಾಡಿಗಿಂತ ಕೆಲವು ಜಾನಪದ ಹಾಡುಗಳನ್ನು ಕೇಳಿ ಮತ್ತೊಮ್ಮೆ ಹಾಡಿ, ಮತ್ತೊಮ್ಮೆ ಹಾಡಿ ಅಂತ ಸೋಂಕಿತರು ದುಂಬಾಲು ಬಿದ್ದರು. ಕೆಲವು ಸೋಂಕಿತರು ಮತ್ತೊಮ್ಮೆ ಕೇಳಲೆಂದು ತಮ್ಮ ಮೊಬೈಲ್‍ನಲ್ಲಿ ಚಿತ್ರಿಕರಿಸಿಕೊಂಡರು. ಇವರಲ್ಲಿರುವ ಸಂಗೀತದ ಉತ್ಸಾಹ ಕಂಡ ವೈದ್ಯಕೀಯ ಸಿಬ್ಬಂದಿ ಹಾಗೂ ಅಧಿಕಾರಿಗಳು ಖುಷಿಪಟ್ಟರು.

    ಸೋಂಕಿರಲ್ಲಿರುವ ಮಾನಸಿಕ ಕಿನ್ನಲೆ, ಕಿಳರುಮೆ ನಿಜಕ್ಕೂ ಕಡಿಮೆ ಆದಂತಿದೆ ಎಂದು ಹೆಮ್ಮೆ ಪಡುವಂತಾಯಿತು. ಈ ಕಾರ್ಯಕ್ರಮದಲ್ಲಿ ಮುಂಡರಗಿ ವೈದ್ಯಕೀಯ ಸಿಬ್ಬಂದಿ, ತಹಶೀಲ್ದಾರ್, ತಾ.ಪಂ ಅಧಿಕಾರಿ ಸೇರಿದಂತೆ ಕಂದಾಯ ಇಲಾಖೆ ಅನೇಕ ಸಿಬ್ಬಂದಿ ಪಾಲ್ಗೊಂಡಿದ್ದರು.  ಇದನ್ನೂ ಓದಿ: ಕೊರೊನಾ ಕೇರ್ ಸೆಂಟರ್‌ನಲ್ಲಿ ಸಂಗೀತ ರಸಮಂಜರಿ

  • ಕೋವಿಡ್ ಸೆಂಟರ್‌ನಲ್ಲಿರೋ ಸೋಂಕಿತರಿಗೆ ಯೋಗ ಹೇಳಿಕೊಟ್ಟ ಶಾಸಕ ಅಪ್ಪಚ್ಚು ರಂಜನ್

    ಕೋವಿಡ್ ಸೆಂಟರ್‌ನಲ್ಲಿರೋ ಸೋಂಕಿತರಿಗೆ ಯೋಗ ಹೇಳಿಕೊಟ್ಟ ಶಾಸಕ ಅಪ್ಪಚ್ಚು ರಂಜನ್

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಂಕಿತ ಪ್ರಕರಣಗಳು ದಿನ ಕಳೆದಂತೆ ಕೊಂಚ ಇಳಿಮುಖಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಕೋವಿಡ್ ಕೇರ್ ಸೆಂಟರ್ ನಲ್ಲಿ ಇರುವ ಸೋಂಕಿತರ ಯೋಗಕ್ಷೇಮ ವಿಚಾರಿಸಲು ತೆರಳಿದ್ದಾರೆ.

    ಇಂದು ಬೆಳ್ಳಂಬೆಳಗ್ಗೆ ಮಡಿಕೇರಿ ಸಮೀಪ ಇರುವ ನವೋದಯದ ಶಾಲೆಯಲ್ಲಿ ತೆರೆದಿರುವ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿದ ಶಾಸಕರು, ಕೋವಿಡ್ ಕೇರ್ ಸೆಂಟರ್ ನಲ್ಲಿರುವ ಸೋಂಕಿತರಿಗೆ ಯೋಗ ಹೇಳಿಕೊಟ್ಟರು. ಇತ್ತೀಚಿನ ದಿನಗಳಲ್ಲಿ ಸೋಂಕಿತರು ಉಸಿರಾಟದ ತೊಂದರೆಯಿಂದ ಬಳಲುತ್ತಿರುತ್ತಾರೆ. ಹೀಗಾಗಿ ಬೆಳಗ್ಗೆ ಎದ್ದು ಯೋಗ ಧ್ಯಾನ ಮಾಡಬೇಕು ಎಂದರು.

    ಅಲ್ಲದೆ ಕೋವಿಡ್ 19 ಮಹಾಮಾರಿ ಇಂದಿಗೆ-ನಾಳೆಗೆ ತೊಲಗುವುದಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಅಂತರ ಕಾಯ್ದುಕೊಳ್ಳಬೇಕು. ಜ್ವರ, ಕೆಮ್ಮು, ನೆಗಡಿ, ತಲೆನೋವು ಇತರೆ ತೊಂದರೆ ಉಂಟಾದಲ್ಲಿ ತಕ್ಷಣವೇ ಹತ್ತಿರದ ವೈದ್ಯರನ್ನು ಭೇಟಿ ಮಾಡಿ ಆರೋಗ್ಯ ಪರೀಕ್ಷಿಕೊಳ್ಳಬೇಕು. ಆದರೆ ಆತಂಕಕ್ಕೆ ತುತ್ತಾಗಬಾರದು ಎಂದರು.

    ಪ್ರತಿಯೊಬ್ಬರೂ ಆರೋಗ್ಯ ಕಡೆ ಹೆಚ್ಚಿನ ಗಮನಹರಿಸಿದಾಗ ಮಾತ್ರ ಕೋವಿಡ್ 19 ದೂರ ಇರಬಹುದಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರ ವಹಿಸುವುದು ಅಗತ್ಯ, ಸೋಂಕಿತರು ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಾಗಿ ಔಷಧಿ ಪಡೆಯಬೇಕು. ಧೈರ್ಯವಾಗಿರಬೇಕು, ವಾಕ್ (ನಡಿಗೆ) ಮತ್ತು ವ್ಯಾಯಾಮ ಮಾಡಬೇಕು, ಬಿಸಿಯಾದ ಆಹಾರ ಸೇವಿಸಬೇಕು. ಬಿಸಿ ನೀರು ಕುಡಿಯಬೇಕು ಎಂದು ಶಾಸಕರು ಸಲಹೆ ಮಾಡಿದರು.

    ಬಳಿಕ ನವೋದಯ ಶಾಲೆಯ ಕೋವಿಡ್ ಆರೈಕೆ ಕೇಂದ್ರಕ್ಕೆ ಸರಸ್ವತಿ ಡಿಇಡಿ ಕಾಲೇಜಿನಿಂದ ಪೂರೈಕೆಯಾಗುವ ಸ್ಥಳಕ್ಕೆ ಶಾಸಕರು ಭೇಟಿ ನೀಡಿ ಪರಿಶೀಲಿಸಿದರು, ಇಲ್ಲಿನ ಸ್ವಚ್ಚತೆ, ಅಡುಗೆ ತಯಾರಿ ಮಾಡುವುದನ್ನು ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

  • ಕೋವಿಡ್ ಘಟಕದಲ್ಲಿ ಬೆಂಕಿ ಅಗ್ನಿ ಅವಘಡ- ಇಬ್ಬರು ಸಾವು

    ಕೋವಿಡ್ ಘಟಕದಲ್ಲಿ ಬೆಂಕಿ ಅಗ್ನಿ ಅವಘಡ- ಇಬ್ಬರು ಸಾವು

    – ಮಾಲ್ ಒಳಗೆ ಇರುವ ಆಸ್ಪತ್ರೆ

    ಮುಂಬೈ: ಮಾಲ್ ಒಳಗಿರುವ ಕೋವಿಡ್ ಸೆಂಟರ್‍ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಮೃತಪಟ್ಟಿರುವ ಘಟನೆ ಮುಂಬೈನ ಭಾಂಡುಪ್‍ನ ಆಸ್ಪತ್ರೆಯಲ್ಲಿ ನಡೆದಿದೆ. 6 ಮಂದಿ ಒಳಗೆ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

    ಭಾಂಡುಪ್‍ನ ಡ್ರೀಮ್ ಮಾಲ್‍ನ ಮೂರನೇ ಮಹಡಿಯಲ್ಲಿ ಕೋವಿಡ್ ಕೇರ್ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆರು ಮಂದಿ ಒಳಗೆ ಸಿಲುಕಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಅಗ್ನಿಶಾಮಕದಳ ಸಿಬ್ಬಂದಿ ಕಾರ್ಯಾಚರಣೆ ಮಾಡುತ್ತಿದ್ದಾರೆ. ಸಾವು-ನೋವುಗಳ ಸಂಖ್ಯೆಯಲ್ಲಿ ಹೆಚ್ಚಾಗುವ ಸಾಧ್ಯತೆಗಳಿವೆ.

    ಬೆಂಕಿ ಕಾಣಿಸಿಕೊಂಡಿರುವುದಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ಮಾಲ್‍ನ ಒಳಗಡೆ ಆಸ್ಪತ್ರೆ ನಿರ್ಮಿಸಿರುವುದನ್ನು ನಾನು ಇದೇ ಮೊದಲು ಕೇಳಿರುವುದು. ಈ ಕುರಿತಾಗಿ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ. ಈ ಆಸ್ಪತ್ರೆಯಲ್ಲಿ 76 ಮಂದಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅದರಲ್ಲಿ 73 ಮಂದಿ ಕೋವಿಡ್ ಸೋಂಕಿತರಾಗಿದ್ದರು. ಆಸ್ಪತ್ರೆಯಲ್ಲಿದ್ದವರನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ ಎಂದು ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಹೇಳಿದ್ದಾರೆ.

  • ಕೋವಿಡ್ ಸೆಂಟರ್‌ನಲ್ಲಿ ಸೋಂಕಿತರಿಗೆ ಹೋಳಿಗೆ ಊಟ ಬಡಿಸಿದ ರೇಣುಕಾಚಾರ್ಯ

    ಕೋವಿಡ್ ಸೆಂಟರ್‌ನಲ್ಲಿ ಸೋಂಕಿತರಿಗೆ ಹೋಳಿಗೆ ಊಟ ಬಡಿಸಿದ ರೇಣುಕಾಚಾರ್ಯ

    ದಾವಣಗೆರೆ: ಕೊರೊನಾ ಸೋಂಕು ತಗುಲಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಇರುವವರಿಗೆ ಗಣಪತಿ ಹಬ್ಬ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಇಂದು ಕೋವಿಡ್ ಕೇಸ್ ಸೆಂಟರ್ ನಲ್ಲಿ ಗಣಪತಿ ಹಬ್ಬವನ್ನು ಆಚರಣೆ ಮಾಡಿದ್ದಾರೆ.

    ದಾವಣಗೆರೆಯ ಮಾದನಬಾವಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿರುವ ಕೋವಿಡ್ ಕೇರ್ ಸೆಂಟರಿನಲ್ಲಿ 150ಕ್ಕೂ ಹೆಚ್ಚು ಪಾಸಿಟಿವ್ ಬಂದಿರುವ ಜನರಿದ್ದು, ರೇಣುಕಾಚಾರ್ಯ ಕುಟುಂಬದ ಹಾಗೂ ಆಪ್ತರ ಜೊತೆ ಸೇರಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಇರುವವರಿಗೆ ಹೋಳಿಗೆ ಊಟ ನೀಡಿದ್ದಾರೆ.

    ಸ್ವತಃ ಶಾಸಕರೇ ತೆರಳಿ ಹೋಳಿಗೆ ಮಾಡಿ ಅಲ್ಲಿರುವ ಸಿಬ್ಬಂದಿಗೆ ಹಾಗೂ ಸೋಂಕಿತರಿಗೆ ಬಡಿಸಿದ್ದಾರೆ. ಅಲ್ಲದೆ ಅಲ್ಲಿರುವ ಸೋಂಕಿತರಿಗೆ ಧೈರ್ಯ ತುಂಬಿ ಬೇಗ ಗುಣಮುಖರಾಗಿ ಬರುವಂತೆ ಹಾರೈಸಿದರು. ಸೋಂಕಿತರ ಮನೆಗಳನ್ನು ಸೀಲ್ ಡೌನ್ ಮಾಡಿದ್ದ ಹಿನ್ನೆಲೆಯಲ್ಲಿ ಅಂತಹ ಮನೆಗಳಿಗೆ ರೇಷನ್ ಕಿಟ್ ನೀಡುವ ಮೂಲಕ ಕೊರೊನಾ ವಿರುದ್ಧ ಹೋರಾಟ ಮಾಡಬೇಕು ಎಂದು ಗ್ರಾಮಸ್ಥರಿಗೆ ಪ್ರತಿನಿತ್ಯ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.

  • ಗದಗ ಕೋವಿಡ್ ಕೇರ್ ಕೇಂದ್ರದಲ್ಲಿ ಡೋಂಟ್ ಕೇರ್

    ಗದಗ ಕೋವಿಡ್ ಕೇರ್ ಕೇಂದ್ರದಲ್ಲಿ ಡೋಂಟ್ ಕೇರ್

    ಗದಗ: ಕೋವಿಡ್ ಕೇರ್ ಕೇಂದ್ರದಲ್ಲಿನ ಅವ್ಯವಸ್ಥೆಯಿಂದ ಸೋಂಕಿತರು ನರಕಯಾತನೆ ಅನುಭವಿಸುತ್ತಿರುವ ಘಟನೆ ಜಿಲ್ಲೆ ನರಗುಂದ ತಾಲೂಕಿನ ಬೆನಕೊಪ್ಪ ಕೋವಿಡ್ ಕೇಂದ್ರದಲ್ಲಿ ಕಂಡುಬಂದಿದೆ.

    ಜಿಲ್ಲೆಯ ಅನೇಕ ತಾಲೂಕು ಕೋವಿಡ್ ಕೇಂದ್ರಗಳು ಅವ್ಯವಸ್ಥೆ ಆಗರವಾಗಿದ್ದು, ಸೋಂಕಿತರನ್ನು ಸರ್ಕಾರ ಅಮಾನವೀಯವಾಗಿ ನೋಡಿಕೊಳ್ಳುತ್ತಿಯಾ? ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಸರಿಯಾದ ಊಟ, ಉಪಹಾರ, ನೀರು, ಬೆಡ್ ವ್ಯವಸ್ಥೆ ಹಾಗೂ ಸ್ವಚ್ಛತೆ ಇಲ್ಲದ ಕಾರಣ ಸೋಂಕಿತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಈ ಬಗ್ಗೆ ನರಗುಂದ ತಹಶೀಲ್ದಾರ್ ಗಮನಕ್ಕೆ ತಂದ್ರೂ ಡೋಂಟ್ ಕೇರ್ ಅಂತಿದ್ದಾರೆ ಎಂಬ ಆರೋಪ ಸೋಂಕಿತರದ್ದಾಗಿದೆ. ಬಾತ್ ರೂಮ್, ಟಾಯ್ಲೆಟ್ ಗೆ ಬಾಗಿಲುಗಳೇ ಇಲ್ಲ. ಮಹಿಳೆಯರ ಪರಸ್ಥಿತಿಯಂತೂ ಇಲ್ಲಿ ಕೆಳತಿರದು. ಕೇರ್ ಇಲ್ಲದ ಕೇರ್ ಸೆಂಟರ್ ಗಳ ಅವ್ಯವಸ್ಥೆಯಿಂದ ಸೋಂಕಿತರು ಗುಣಮುಖ ಆಗೋದಾದ್ರೂ ಹೇಗೆ ಅಂತ ಜಿಲ್ಲಾಡಳಿತ ವಿರುದ್ಧ ಕಿಡಿಕಾರಿದರು.

    ನರಗುಂದ ತಾಲೂಕಿನ ಬೆನಕೊಪ್ಪ ಕೋವಿಡ್ ಕೇರ್ ಕೇಂದ್ರದ ಅವ್ಯವಸ್ಥೆ ವಿಡಿಯೋ ಮಾಡಿ ಸಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

  • ಚಾಮರಾಜನಗರದಲ್ಲಿ ಮತ್ತೊಂದು ಕೋವಿಡ್ ಕೇರ್ ಸೆಂಟರ್: ಕೊರೊನಾ ವಾರಿಯರ್ಸ್‍ಗೆ 50 ಬೆಡ್ ಮೀಸಲು

    ಚಾಮರಾಜನಗರದಲ್ಲಿ ಮತ್ತೊಂದು ಕೋವಿಡ್ ಕೇರ್ ಸೆಂಟರ್: ಕೊರೊನಾ ವಾರಿಯರ್ಸ್‍ಗೆ 50 ಬೆಡ್ ಮೀಸಲು

    – ಕೋವಿಡ್ ಕೇಂದ್ರಗಳಲ್ಲಿ ಟಿವಿ, ಮಕ್ಕಳಿಗೆ ಆಟಿಕೆ ವ್ಯವಸ್ಥೆ

    ಚಾಮರಾಜನಗರ: ಜಿಲ್ಲೆಯಲ್ಲಿ ಇನ್ನೊಂದು ವಾರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 500 ಗಡಿ ದಾಟಲಿದೆ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತೊಂದು ಕೋವಿಡ್ ಕೇರ್ ಸೆಂಟರ್ ತೆರೆಯಲು ಸಿದ್ದೆತೆ ನಡೆಸಿದೆ.

    ಕಳೆದ 15 ದಿನಗಳಿಂದ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಕೊಳ್ಳೇಗಾಲ, ಗುಂಡ್ಲುಪೇಟೆಯಲ್ಲಿ ಹಾಗೂ ಚಾಮರಾಜನಗರ ಪಟ್ಟಣದಲ್ಲಿ ಅತಿ ಹೆಚ್ಚು ಕರೊನಾ ಸೋಂಕಿತರಿದ್ದಾರೆ. ಮುಂದಿನ ಒಂದು ವಾರದಲ್ಲಿ ಕರೊನಾ ಪ್ರಕರಣಗಳು 500 ಗಡಿ ದಾಟಲಿದೆ ಎಂಬ ವರದಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಗರದ ಹೊರವಲಯದ ಬೇಡರಪುರದಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ 250 ಹಾಸಿಗೆ ಸಾಮಥ್ರ್ಯದ ಕೋವಿಡ್ ಕೇರ್ ಕೇಂದ್ರವನ್ನು ಸಜ್ಜುಗೊಳಿಸುತ್ತಿದೆ.

    ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾದಲ್ಲಿ ಮೊದಲು ಕೋವಿಡ್-19 ಆಸ್ಪತ್ರೆಗೆ ದಾಖಲು ಮಾಡಿಕೊಂಡು, ಆರೋಗ್ಯ ಸುಧಾರಣೆಯಾಗಿರುವ ಹಾಗೂ ರೋಗಲಕ್ಷಣಗಳಿಲ್ಲದವರನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಶಿಫ್ಟ್ ಮಾಡಲು ನಿರ್ಧರಿಸಲಾಗಿದೆ. ಕೊರೊನಾ ವಿರುದ್ದ ಹೋರಾಡುತ್ತಿರುವ 27 ಕೊರೊನಾ ವಾರಿಯರ್ಸ್ ಗಳಿಗೆ ಸೋಂಕು ಧೃಡ ಪಟ್ಟಿದೆ. ಕರೊನಾ ವಾರಿಯರ್ಸ್ ಗೆ ಎಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಬ್ಲಾಕ್ ನಲ್ಲಿ 150 ಹಾಸಿಗೆಗಳು ಹಾಗೂ ಸಿವಿಲ್ ಬ್ಲಾಕ್ ನಲ್ಲಿ 100 ಹಾಸಿಗೆಗಳನ್ನ ಮೀಸಲಿಡಲಾಗಿದೆ.

    ಕೋವಿಡ್ ಕೇರ್ ಸೆಂಟರ್ ನಲ್ಲಿ ಶುಚಿತ್ವ ಕಾಪಾಡುವಂತೆ ಸೂಚನೆ ನೀಡಲಾಗಿದೆ. ಮರಂಜನೆಗಾಗಿ ದೊಡ್ಡ ಟಿವಿಗಳನ್ನು ಅಳವಡಿಸಿ ಮಕ್ಕಳಿಗೆ ಬೇಸರವಾಗದಂತೆ ಕಾಲಕಳೆಯಲು ಆಟಿಕೆಗಳನ್ನ ನೀಡಿ, ದಿನಪತ್ರಿಕೆ ಇಡುವ ವ್ಯವಸ್ಥೆ ಮಾಡಲಾಗಿದೆ. ಕರೊನಾ ಸೋಂಕಿತರಿಗೆ ಉತ್ತಮ ಗುಣ ಮಟ್ಟ ಹಾಗೂ ಪೌಷ್ಟಿಕಾಂಶವುಳ್ಳ ಆಹಾರ ನೀಡಲು ಕಟ್ಟು ನೀಟ್ಟಿನ ಸೂಚನೆ ನೀಡಲಾಗಿದೆ.

    ಜಿಲ್ಲೆಯಲ್ಲಿ ಒಟ್ಟು 346 ಕೊರೊನಾ ಪ್ರಕರಣಗಳು ಕಂಡು ಬಂದಿದ್ದು, 143 ಕೊರೊನಾ ಸಕ್ರೀಯ ಪ್ರಕರಣಗಳಿದ್ದು, 199 ಮಂದಿ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆದ್ರೆ ನಾಲ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.

    ಕೋವಿಡ್-19 ಚಿಕಿತ್ಸೆಗೆ ಯಾವುದೇ ಹಣದ ಕೊರತೆ ಇಲ್ಲ. ಸರ್ಕಾರ 6.15 ಕೋಟಿ ರೂಪಾಯಿ ವೆಚ್ಚಕ್ಕೆ ಅನುಮೋದನೆ ನೀಡಿದೆ. ಪ್ರಸ್ತುತ ಈ ಹಣವನ್ನು ಬಳಸಲಾಗುತ್ತಿದೆ. ಎಸ್.ಡಿ.ಆರ್.ಎಫ್ ಫಂಡ್ ನಲ್ಲಿ 11 ಕೋಟಿ ರೂಪಾಯಿ ಇದೆ, ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಲ್ಲಿ 3 ಕೋಟಿ ರೂಪಾಯಿ ಇದೆ. ಕೊರೊನಾ ನಿರ್ವಹಣೆಯನ್ನು ಜಿಲ್ಲಾಡಳಿತ ಸಮರ್ಥವಾಗಿ ನಿಭಾಯಿಸಲಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

  • ಕೊರೊನಾ ಸೋಂಕಿತರಿಗಾಗಿ ಹಾಸನದಲ್ಲಿ ಹೆಚ್ಚುವರಿ 300ಕ್ಕೂ ಹೆಚ್ಚು ಬೆಡ್‍ಗಳ ವ್ಯವಸ್ಥೆ

    ಕೊರೊನಾ ಸೋಂಕಿತರಿಗಾಗಿ ಹಾಸನದಲ್ಲಿ ಹೆಚ್ಚುವರಿ 300ಕ್ಕೂ ಹೆಚ್ಚು ಬೆಡ್‍ಗಳ ವ್ಯವಸ್ಥೆ

    ಹಾಸನ: ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಹಾಸನ ಕೋವಿಡ್ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಕಡಿಮೆ ಮಾಡಲು ಹಾಸನ ಜಿಲ್ಲಾಡಳಿತ ಮತ್ತೊಂದು ಕೋವಿಡ್ ಸೆಂಟರ್ ಓಪನ್ ಮಾಡಿದೆ.

    ಹಾಸನ ನಗರದ ಹೃದಯ ಭಾಗದಲ್ಲಿರುವ ಮಂಜುನಾಥ ಆಯುರ್ವೇದಿಕ್‌ ಆಸ್ಪತ್ರೆಯ ಒಂದು ಭಾಗವನ್ನು ತೆಗೆದುಕೊಂಡಿದ್ದು, ಮೂನ್ನೂರು ರೋಗಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಸಕಲ ವ್ಯವಸ್ಥೆ ಮಾಡಿದ್ದಾರೆ. ಒಂದು ರೂಮಿನಲ್ಲಿ ಮೂವರು ಕೋವಿಡ್ ರೋಗಿ ಹೊರತು ಪಡಿಸಿ ಬೇರೆಯವರಿಗೆ ಈ ಆಸ್ಪತ್ರೆಯಲ್ಲಿ ಪ್ರವೇಶವಿಲ್ಲ.

    ಕೊರೊನಾ ಸೋಂಕಿನ ಲಕ್ಷಣ ಇಲ್ಲದೇ ಪಾಸಿಟಿವ್ ಬಂದಿರುವ ವ್ಯಕ್ತಿಗಳಿಗೆ ಹೊಸ ಕೋವಿಡ್ ಆಸ್ಪತ್ರೆ ಮಾಡಲಾಗಿದೆ. ಹಾಸನದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಂದಿನಿಂದ ಮತ್ತೊಂದು ಹೊಸ ಕೋವಿಡ್ ಸೆಂಟರ್ ಕಾರ್ಯನಿರ್ವಹಿಸಲಿದೆ. ಈ ಮೂಲಕ ಹಾಸನದಲ್ಲಿ ಕೋವಿಡ್ ಸೋಂಕಿತರಿಗಾಗಿ ಸುಮಾರು 700ಕ್ಕೂ ಹೆಚ್ಚು ಬೆಡ್ ವ್ಯವಸ್ಥೆ ಮಾಡಿದಂತಾಗಿದೆ.

  • ಕೊಡಗಿನ ಗಡಿದಾಟಿದ್ರೆ ಕೋವಿಡ್ ಸೆಂಟರೇ ಗತಿ: ಡಿಸಿ ವಾರ್ನಿಂಗ್

    ಕೊಡಗಿನ ಗಡಿದಾಟಿದ್ರೆ ಕೋವಿಡ್ ಸೆಂಟರೇ ಗತಿ: ಡಿಸಿ ವಾರ್ನಿಂಗ್

    ಮಡಿಕೇರಿ: ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ಕೊಡಗು ಜಿಲ್ಲಾಡಳಿತ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಅದರಲ್ಲೂ ಅತೀ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿರುವ ಕೇರಳ ಮತ್ತು ಕರ್ನಾಟಕಕ್ಕೆ ಸಂಪರ್ಕವನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಹೀಗಿರುವಾಗ ಯಾರಾದ್ರೂ ನಿಯಮವನ್ನು ಮೀರಿ ಕರ್ನಾಟಕದ ಕೊಡಗಿಗೆ ಅಥವಾ ಕೊಡಗಿನಿಂದ ಕೇರಳಕ್ಕೆ ಎಂಟ್ರಿ ಕೊಟ್ಟರೆ ಯಾವುದೇ ಪರಿಶೀಲನೆಯನ್ನೂ ಮಾಡದೇ 14 ದಿನಗಳ ಕಾಲ ಕೋವಿಡ್ ಸೆಂಟರಿಗೆ ಕಳುಹಿಸುತ್ತಿದ್ದೇವೆ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಿಣಿ ಜಾಯ್ ಎಚ್ಚರಿಸಿದ್ದಾರೆ.

    ಗಡಿ ದಾಟಿ ಬಂದವರು ವಿದೇಶದಿಂದ ವಾಪಸ್ ಆಗಿರುವ ಇತಿಹಾಸ ಇಲ್ಲದಿದ್ದರೂ ನೇರವಾಗಿ ಕೋವಿಡ್ ಸೆಂಟರಿಗೆ ಕಳುಹಿಸುತ್ತಿದ್ದೇವೆ. ಈಗಾಗಲೇ ಕೇರಳದಿಂದ ಬಂದ ಇಬ್ಬರನ್ನು ಕೊಡಗಿನಲ್ಲಿರುವ ಕೋವಿಡ್ ಸೆಂಟರಿಗೆ ಕಳುಹಿಸಿದ್ದೇವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

    ವಿದೇಶದಿಂದ ಬಂದು ಹೋಂ ಕ್ವಾರಂಟೈನ್‍ನಲ್ಲಿ ಇರುವವರು ನಿಯಮ ಮೀರಿ ಹೊರಗೆ ಓಡಾಡಿದರೆ ಅವರ ವಿರುದ್ಧ ಕೇಸ್ ದಾಖಲಿಸುತ್ತೇವೆ. ಕಾನೂನು ಪ್ರಕಾರ ಶಿಕ್ಷೆಯಾಗುತ್ತೆ. ಹೀಗೆ ಶಿಕ್ಷೆಗೆ ಒಳಗಾದವರ ಪಾಸ್‍ಪೋರ್ಟ್ ಅಥವಾ ವೀಸಾಗಳಿಗೆ ಸಮಸ್ಯೆಯಾಗಲಿದ್ದು, ನಂತರ ಪುನಃ ನೀವು ವಿದೇಶಕ್ಕೆ ತೆರಳು ಸಮಸ್ಯೆಯಾಗುತ್ತೆ ಎಂದು ಕಟ್ಟುನಿಟ್ಟಿನ ಎಚ್ಚರಿಕೆ ಸಂದೇಶ ನೀಡಿದ್ದಾರೆ.