Tag: ಕೋವಿಡ್-19 ಟೆಸ್ಟ್

  • ಕೊರೊನಾ ಪರೀಕ್ಷೆಗೆ ಸರ್ಕಾರದಿಂದ ದರ ನಿಗದಿ

    ಕೊರೊನಾ ಪರೀಕ್ಷೆಗೆ ಸರ್ಕಾರದಿಂದ ದರ ನಿಗದಿ

    ಬೆಂಗಳೂರು: ಸರ್ಕಾರ ಕೊರೊನಾ ಪರೀಕ್ಷೆಯ ದರವನ್ನು ನಿಗದಿ ಪಡಿಸಿದ್ದು, ಸರ್ಕಾರ ಸೂಚಿಸಿದ ರೋಗಿಗಳಿಗೆ 2000 ಹಾಗೂ ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ತೆರಳಿ ಪರೀಕ್ಷೆ ಮಾಡಿಸಿಕೊಂಡರೆ 3000 ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

    ಕೋವಿಡ್ ಟಾಸ್ಕ್ ಫೋರ್ಸ್ ಸಭೆ ಬಳಿಕ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಟೆಸ್ಟ್ ದರ ಇಳಿಕೆ ಮಾಡಲಾಗಿದ್ದು, ಸರ್ಕಾರದಿಂದ ಸೂಚಿಸಿದ ರೋಗಿಗಳ ಟೆಸ್ಟ್ ಗೆ 2000 ರೂ. ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಟೆಸ್ಟ್ ಮಾಡಿಸಿದರೆ 3000 ರೂ. ನಿಗದಿ ಮಾಡಲಾಗಿದೆ. ಅಲ್ಲದೆ ಖಾಸಗಿ ಆಸ್ಪತ್ರೆಯಲ್ಲಿ ತಾಯಿ ಮಕ್ಕಳ ವಿಭಾಗ ಬಿಟ್ಟು ಉಳಿದ ಬೆಡ್ ತೆಗೆದುಕೊಳ್ಳಲು ಸೂಚಿಸಲಾಗಿದೆ. ಆದರೆ ಖಾಸಗಿಯವರಿಂದ ಶೇ.50 ಬೆಡ್ ಸರ್ಕಾರ ಪಡೆದುಕೊಳ್ಳಲಿದೆ. ಉಳಿದ ಶೇ.50ರಷ್ಟು ಬೆಡ್‍ಗಳನ್ನು ಅವರು ಯಾವುದಕ್ಕೆ ಬೇಕಾದರೂ ಬಳಸಿಕೊಳ್ಳಬಹುದು. ಸರ್ಕಾರಕ್ಕೆ ನೀಡಿರುವ ಶೇ.50ರಷ್ಟು ಬೆಡ್ ಗಳನ್ನು ಕೋವಿಡ್ ಹೊರತುಪಡಿಸಿ ಬೇರೆ ಯಾವುದಕ್ಕೂ ಬಳಕೆ ಮಾಡಬಾರದು ಸೂಚಿಸಿದರು.

    ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಹಣ ವಸೂಲಿ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು. ಎನ್‍ಡಿಆರ್ ಎಫ್, ಕೆಪಿಎಂಇ, ಎಪಿಡಮಿಕ್ ಕಾಯ್ದೆ ಇದೆ. ಈ ನಿಟ್ಟಿನಲ್ಲಿ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗಿದೆ. ಸಂಘರ್ಷದ ಹಾದಿ ಬೇಡ ಎಂದು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲು ಸಿಎಂ ಹಂತ ಹಂತವಾಗಿ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಸುಧಾಕರ್ ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಸಿದ್ದಾರೆ.

    ಈಗ ಒಂದು ಲಕ್ಷ ರ‍್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್ ಇವೆ, ನಾಲ್ಕು ಲಕ್ಷ ಆಂಟಿಜೆನ್ ಟೆಸ್ಟ್ ಕಿಟ್ ಖರೀದಿ ಮಾಡುತ್ತೇವೆ. ಒಟ್ಟು 5 ಲಕ್ಷ ಕಿಟ್ ಬಳಸುತ್ತೇವೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಆಂಟಿಜೆನ್ ಟೆಸ್ಟ್ ಕಿಟ್ ಬಳಸುತ್ತೇವೆ. 35 ಲಕ್ಷ ಪಿಪಿಇ ಕಿಟ್, 35 ಲಕ್ಷ ಮಾಸ್ಕ್ ಖರೀದಿಗೆ ಅನುಮೋದನೆ ನೀಡಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಇಂದು ಸುಮಾರು 500 ಕೋಟಿ ರೂ. ಅನುದಾನಕ್ಕೆ ಅನುಮೋದನೆ ಮಾಡಿದ್ದೇವೆ ಎಂದರು.

    ನರ್ಸ್‍ಗಳ ವೇತನವನ್ನು 30 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ. 6 ತಿಂಗಳ ಕಾಲ ನರ್ಸ್‍ಗಳ ವೇತನ ಹೆಚ್ಚಳವಾಗಲಿದೆ. ಬಿಬಿಎಂಪಿ, ಆರೋಗ್ಯ, ಆಯುಷ್ ಎಲ್ಲ ನರ್ಸ್ ಗಳಿಗೂ ವೇತನ ಹೆಚ್ಚಳ ಅನ್ವಯವಾಗಲಿದೆ. ಖಾಸಗಿ ಆಸ್ಪತ್ರೆಗಳಲ್ಲೂ ಆಯುಷ್ಮಾನ್ ಭಾರತ್ ಯೋಜನೆ ಅಡಿ ದರ ಪಡೆಯಬೇಕು ಎಂದು ಸೂಚಿಸಿದರು.

    ಜಿಲ್ಲಾ ಸರ್ಕಾರಿ ಆಸ್ಪತ್ರೆಗಳನ್ನು ಕೋವಿಡ್ ಆಸ್ಪತ್ರೆ ಮಾಡಲು ನಿರ್ಣಯ ಮಾಡಲಾಗಿದೆ. ಜಿಲ್ಲಾ ಕೇಂದ್ರದ ಖಾಸಗಿ ಆಸ್ಪತ್ರೆಗಳು ನಾನ್ ಕೋವಿಡ್ ಸೇವೆಗೆ ಲಭ್ಯವಿರುತ್ತವೆ. ಆಯುಷ್ ವೈದ್ಯರ ವೇತನವನ್ನು 48 ಸಾವಿರಕ್ಕೆ ಏರಿಕೆ ಮಾಡಲಾಗಿದೆ. ತಾತ್ಕಾಲಿಕವಾಗಿ ಕೋವಿಡ್ ಕಾರ್ಯನಿರ್ವಹಣೆಗೆ ನೇಮಕ ಮಾಡಿಕೊಳ್ಳುವ ಎಂಬಿಬಿಎಸ್ ವೈದ್ಯರಿಗೆ 80 ಸಾವಿರ ರೂ. ವೇತನ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

    ನಾನ್ ಕೋವಿಡ್ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲು ತೀರ್ಮಾನ ಮಾಡಲಾಗಿದ್ದು, ಒಪಿಡಿ ದರ 10 ರೂಪಾಯಿ ಕೊಡುವಂತಿಲ್ಲ. ಅಲ್ಲದೆ ರೋಗಿಗಳ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕೆಲವು ಕ್ರಮಗಳನ್ನು ಕೈಗೊಳ್ಳಲು ಆಯುಷ್ ಇಲಾಖೆಯಿಂದ ಪ್ರಸ್ತಾವನೆ ಬಂದಿತ್ತು. ಆ ಪ್ರಸ್ತಾವನೆಯನ್ನು ಉನ್ನತ ಮಟ್ಟದ ಸಮಿತಿಗೆ ನೀಡಲಾಗಿದೆ. ಮುಂದಿನ ವಾರ ವರದಿ ನೀಡಲಿದೆ ಎಂದರು.

  • ದುಡುಕಿ ಮಾತನಾಡಿಲ್ಲ – ಕೊರೊನಾ ಕಿರಿಕ್‍ಗೆ ಶ್ರೀಕಂಠೇಗೌಡ ಸಮರ್ಥನೆ

    ದುಡುಕಿ ಮಾತನಾಡಿಲ್ಲ – ಕೊರೊನಾ ಕಿರಿಕ್‍ಗೆ ಶ್ರೀಕಂಠೇಗೌಡ ಸಮರ್ಥನೆ

    – ಪುತ್ರನ ಬಗ್ಗೆ ಕೇಳಿದ ತಕ್ಷಣ ಉತ್ತರಿಸದ ಶಾಸಕ

    ಮಂಡ್ಯ: ಶ್ರೀಕಂಠೇಗೌಡರು ಯಾವಾಗಲೂ ಮೃದುವಾಗಿಯೇ ಮಾತನಾಡುವುದು. ಯಾವತ್ತು ದುಡುಕಿ ಮಾತನಾಡುವುದಿಲ್ಲ ಎಂದು ಜೆಡಿಎಸ್ ವಿಧಾನಪರಿಷತ್ ಸದಸ್ಯ ಕೆ.ಟಿ ಶ್ರೀಕಂಠೇಗೌಡ ತಮ್ಮ ಮತ್ತು ಮಗನ ವರ್ತನೆಯನ್ನು ಸಮರ್ಥಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶ್ರೀಕಂಠೇಗೌಡ, ಅಂಬೇಡ್ಕರ್ ಭವನ ಜನನಿಬೀಡ ಪ್ರದೇಶ. ಹೀಗಾಗಿ ಜನನಿಬೀಡ ಪ್ರದೇಶದಲ್ಲಿ ಟೆಸ್ಟಿಂಗ್ ಸೆಂಟರ್ ಮಾಡಬಾರದು ಎಂದು ಜನರು ನನಗೆ ದೂರು ನೀಡಿದ್ದರು. ನಂತರ ನಾನು ವಾರ್ತಾ ಅಧಿಕಾರಿಗಳನ್ನು ಹೋಗಿ ಕೇಳಿದೆ. ಆಗ ಅವರು ನಾವು ತಪ್ಪು ಮಾಡಿದ್ದೀವಿ ಬೇರೆಡೆಗೆ ಶಿಫ್ಟ್ ಮಾಡುತ್ತೇನೆ ಎಂದಿದ್ದರು ಅಂತ ಹೇಳಿದರು. ಇದನ್ನೂ ಓದಿ: ಗೂಂಡಾಗಿರಿ ಮಾಡಿ ಎಂಎಲ್‍ಸಿ ಆಗಿ ಮುಂದುವರಿಯೋಕೆ ಯಾವ ಅರ್ಹತೆ ಇದೆ: ಶ್ರೀಕಂಠೇಗೌಡ ವಿರುದ್ಧ ಸುಮಲತಾ ಕಿಡಿ

    ಕೊರೊನಾ ಟೆಸ್ಟಿಂಗ್‍ನ ಐಸೋಲೇಷನ್ ಕಟ್ಟಡದಲ್ಲಿ ಮಾಡಬೇಕು. ಜನನಿಬೀಡ ಪ್ರದೇಶದಲ್ಲಿ ಮಾಡಬಾರದು. ಸಾರ್ವಜನಿಕರು ಓಡಾಡುವ ಪ್ರದೇಶದಲ್ಲಿ ಮಾಡುವುದು ಬೇಡ ಐಸೋಲೇಷನ್ ಕಟ್ಟಡದಲ್ಲಿ ಮಾಡಬೇಕೆಂದು ನಮ್ಮ ಮನವಿ ಅಷ್ಟೇ. ಜನರು ನಮ್ಮ ಬಳಿ ಬಂದು, ನಾವು ಟೆಸ್ಟಿಂಗ್ ಸೆಂಟರ್ ನಿಂದ 10 ಅಡಿ ದೂರದಲ್ಲಿ ವಾಸ ಮಾಡುತ್ತಿದ್ದೇವೆ. ಇಲ್ಲಿ ಟೆಸ್ಟಿಂಗ್ ಸೆಂಟರ್ ಮಾಡುವುದು ಬೇಡ ಐಸೋಲೇಷನ್ ಕಟ್ಟಡಕ್ಕೆ ಶಿಫ್ಟ್ ಮಾಡಬೇಕು ಎಂದು ಮನವಿ ಮಾಡಿದ್ದರು. ಹೀಗಾಗಿ ನಾನು ಬಂದು ಅವರಿಗೆ ಹೇಳಿದೆ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡರು.

    ಶ್ರೀಕಂಠಗೌಡರು ಯಾವಾಗಲೂ ಮೃದುವಾಗಿಯೇ ಮಾತನಾಡುವುದು. ದುಡುಕಿ ಮಾತನಾಡುವುದಿಲ್ಲ. ನನ್ನ ಮಗ ಸಾರ್ವಜನಿಕವಾಗಿ ಬಂದಿದ್ದು, ಮಾಧ್ಯಮದವರು ಮೊದಲಿಗೆ ಜೋರಾಗಿ ಮಾತನಾಡಿದ್ದು, ನಾವು ಜೋರಾಗಿ ಮಾತನಾಡಿಲ್ಲ ಎಂದು ತಮ್ಮ ಮಗನ ಬಗ್ಗೆ ಕೇಳಿದ ತಕ್ಷಣ ಉತ್ತರಿಸಿದೆ ಹೋದರು.

    ನಡೆದಿದ್ದೇನು?
    ನಗರದ ಅಂಬೇಡ್ಕರ್ ಭವನದಲ್ಲಿ ಇಂದು ಪತ್ರಕರ್ತರ ಕೋವಿಡ್ 19 ಟೆಸ್ಟ್ ಇತ್ತು. ಆದರೆ ಅಂಬೇಡ್ಕರ್ ಭವನದ ಬಳಿಯೇ ವಿಧಾನಸಭಾ ಸದಸ್ಯ ಕೆ.ಟಿ ಶ್ರೀಕಂಠೇಗೌಡ ಅವರ ಮನೆಯಿದೆ. ಹೀಗಾಗಿ ಇಲ್ಲಿ ಟೆಸ್ಟ್ ಮಾಡಬೇಡಿ ಎಂದು ತನ್ನ ಸಂಗಡಿಗರನ್ನು ಕರೆದುಕೊಂಡು ಬಂದು ಖ್ಯಾತೆ ತೆಗೆದಿದ್ದರು. ಅಲ್ಲದೆ ಕೋವಿಡ್ ಟೆಸ್ಟ್ ನಿಲ್ಲಿಸುವಂತೆ ಜಗಳ ಮಾಡಿದ್ದರು.

    ಇದೇ ವೇಳೆ ಕೆಟಿಎಸ್ ಪುತ್ರ ಪತ್ರಕರ್ತರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದ. ಇದೀಗ ಕೋವಿಡ್_19 ಟೆಸ್ಟ್ ನಡೆಸದಂತೆ ಕಿರಿಕ್ ಮಾಡಿದ್ದ ಶ್ರೀಕಂಠೇಗೌಡ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143(ಅಕ್ರಮ ಗುಂಪು), 147(ದೊಂಬಿ) 341(ಅಕ್ರಮವಾಗಿ ತಡೆಯುವುದು) ಅಡಿ ಪ್ರಕರಣ ದಾಖಲಾಗಿದೆ. ಶ್ರೀಕಂಠೇಗೌಡ ಎ1, ಪುತ್ರ ಕೃಷಿಕ್ ಗೌಡ ಎ2, ಬೆಂಬಲಿಗರಾದ ಚಂದ್ರಕಲಾ ಎ3, ಜಗದೀಶ್ ನಾಲ್ಕನೇ ಆರೋಪಿ ಆಗಿದ್ದಾರೆ.

  • ಕೊರೊನಾ ಟೆಸ್ಟ್ ನಡೆಸದಂತೆ ಕಿರಿಕ್ – ಜೆಡಿಎಸ್ ಎಂಎಲ್‍ಸಿ, ಪುತ್ರನ ವಿರುದ್ಧ ಎಫ್‍ಐಆರ್

    ಕೊರೊನಾ ಟೆಸ್ಟ್ ನಡೆಸದಂತೆ ಕಿರಿಕ್ – ಜೆಡಿಎಸ್ ಎಂಎಲ್‍ಸಿ, ಪುತ್ರನ ವಿರುದ್ಧ ಎಫ್‍ಐಆರ್

    ಮಂಡ್ಯ: ಕೋವಿಡ್-19 ಟೆಸ್ಟ್ ನಡೆಸದಂತೆ ಕಿರಿಕ್ ಮಾಡಿದ್ದ ಜೆಡಿಎಸ್ ವಿಧಾನಪರಿಷತ್ ಸದಸ್ಯ ಶ್ರೀಕಂಠೇಗೌಡ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143 (ಅಕ್ರಮ ಗುಂಪು), 147 (ದೊಂಬಿ) 341 (ಅಕ್ರಮವಾಗಿ ತಡೆಯುವುದು), ವಿಪತ್ತು ನಿರ್ವಹಣಾ ಕಾಯ್ದೆ 2005 ಅಡಿ ಪ್ರಕರಣ ದಾಖಲಾಗಿದೆ. ಶ್ರೀಕಂಠೇಗೌಡ ಎ2, ಪುತ್ರ ಕೃಷಿಕ್ ಗೌಡ ಎ3, ಬೆಂಬಲಿಗರಾದ ಚಂದ್ರಕಲಾ ಎ4, ಜಗದೀಶ್ ಐದನೇ ಆರೋಪಿ ಆಗಿದ್ದಾರೆ.

    ನಗರದ ಅಂಬೇಡ್ಕರ್ ಭವನದಲ್ಲಿ ಇಂದು ಪತ್ರಕರ್ತರ ಕೋವಿಡ್ 19 ಟೆಸ್ಟ್ ಇತ್ತು. ಆದರೆ ಅಂಬೇಡ್ಕರ್ ಭವನದ ಬಳಿಯೇ ವಿಧಾನಸಭಾ ಸದಸ್ಯ ಕೆ.ಟಿ ಶ್ರೀಕಂಠೇಗೌಡ ಅವರ ಮನೆಯಿದೆ. ಹೀಗಾಗಿ ಇಲ್ಲಿ ಟೆಸ್ಟ್ ಮಾಡಬೇಡಿ ಎಂದು ತನ್ನ ಸಂಗಡಿಗರನ್ನು ಕರೆದುಕೊಂಡು ಬಂದು ಖ್ಯಾತೆ ತೆಗೆದಿದ್ದರು. ಅಲ್ಲದೆ ಕೋವಿಡ್ ಟೆಸ್ಟ್ ನಿಲ್ಲಿಸುವಂತೆ ಜಗಳ ಮಾಡಿದ್ದರು.

    ಇದೇ ವೇಳೆ ಕೆಟಿಎಸ್ ಪುತ್ರ ಪತ್ರಕರ್ತರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದ. ಈ ಹಿನ್ನೆಲೆಯಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ.

    ಈ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿ ವೆಂಕಟೇಶ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಕೆಟಿಎಸ್ ನಡೆದುಕೊಂಡ ರೀತಿ ಕಾನೂನು ಬಾಹಿರ ಹಾಗೂ ಅಕ್ಷಮ್ಯ ಅಪರಾಧವಾಗಿದೆ. ಈ ಸಂಬಂಧ ದೂರು ಪರಿಶೀಲಿಸಿ ಎಫ್‍ಐಆರ್ ದಾಖಲಿಸಲು ನಿರ್ಧಾರ ಮಾಡುವುದಾಗಿ ತಿಳಿಸಿದ್ದರು.

  • ಕೋವಿಡ್ ಟೆಸ್ಟ್ ನಡೆಸದಂತೆ ಮಂಡ್ಯ ಎಂಎಲ್‌ಸಿ ಕಿರಿಕ್

    ಕೋವಿಡ್ ಟೆಸ್ಟ್ ನಡೆಸದಂತೆ ಮಂಡ್ಯ ಎಂಎಲ್‌ಸಿ ಕಿರಿಕ್

    ಮಂಡ್ಯ: ಕೋವಿಡ್_19 ಟೆಸ್ಟ್ ನಡೆಸದಂತೆ ಜೆಡಿಎಸ್ ಎಂಎಲ್‌ಸಿ ಕಿರಿಕ್ ಮಾಡಿದ ಘಟನೆ ಇಂದು ಮಂಡ್ಯದಲ್ಲಿ ನಡೆದಿದೆ.

    ನಗರದ ಅಂಬೇಡ್ಕರ್ ಭವನದಲ್ಲಿ ಇಂದು ಪತ್ರಕರ್ತರ ಕೋವಿಡ್ 19 ಟೆಸ್ಟ್ ಇತ್ತು. ಆದರೆ ಅಂಬೇಡ್ಕರ್ ಭವನದ ಬಳಿಯೇ ವಿಧಾನಸಭಾ ಸದಸ್ಯ ಕೆ.ಟಿ ಶ್ರೀಕಂಠೇಗೌಡ ಅವರ ಮನೆಯಿದೆ. ಹೀಗಾಗಿ ಇಲ್ಲಿ ಟೆಸ್ಟ್ ಮಾಡಬೇಡಿ ಎಂದು ತನ್ನ ಸಂಗಡಿಗರನ್ನು ಕರೆದುಕೊಂಡು ಬಂದು ಖ್ಯಾತೆ ತೆಗೆದಿದ್ದಾರೆ. ಅಲ್ಲದೆ ಕೋವಿಡ್ ಟೆಸ್ಟ್ ನಿಲ್ಲಿಸುವಂತೆ  ಅವಾಜ್ ಹಾಕಿದ್ದಾರೆ.

    ಇದೇ ವೇಳೆ ಕೆಟಿಎಸ್ ಪುತ್ರ ಪತ್ರಕರ್ತರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ.

    ಈ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿ ವೆಂಕಟೇಶ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಕೆಟಿಎಸ್ ನಡೆದುಕೊಂಡ ರೀತಿ ಕಾನೂನು ಬಾಹಿರ ಹಾಗೂ ಅಕ್ಷಮ್ಯ ಅಪರಾಧವಾಗಿದೆ. ಈ ಸಂಬಂಧ ದೂರು ಪರಿಶೀಲಿಸಿ ಎಫ್‍ಐಆರ್ ದಾಖಲಿಸಲು ನಿರ್ಧಾರ ಮಾಡುವುದಾಗಿ ತಿಳಿಸಿದ್ದಾರೆ. ಸದ್ಯ ಕೆಟಿಎಸ್ ಪುತ್ರನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.