ಹಾಸನ: ಕೌಟುಂಬಿಕ ಕಲಹದಿಂದ (Family Feud) ಮನನೊಂದ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ (Hassan) ಜಿಲ್ಲೆ ಬೇಲೂರು (Belur) ತಾಲೂಕಿನ ಲಿಂಗಾಪುರ (Lingapura) ಗ್ರಾಮದಲ್ಲಿ ನಡೆದಿದೆ.
ಹರಿಣಾಕ್ಷಿ (40) ಆತ್ಮಹತ್ಯೆಗೆ ಶರಣಾದ ಮಹಿಳೆ. ಹರಿಣಾಕ್ಷಿ 16 ವರ್ಷಗಳ ಹಿಂದೆ ಲಿಂಗಾಪುರ ಗ್ರಾಮದ ಶೇಖರ್ ಜೊತೆ ವಿವಾಹವಾಗಿದ್ದರು. ಪತಿ ತನ್ನ ಪತ್ನಿಯನ್ನು ಸದಾ ಅನುಮಾನದಿಂದ ನೋಡುತ್ತಿದ್ದ. ಇದೇ ವಿಚಾರಕ್ಕೆ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಎರಡೂ ಕುಟುಂಬಗಳ ಹಿರಿಯರು ಹಲವು ಬಾರಿ ರಾಜಿ ಸಂಧಾನ ಕೂಡ ಮಾಡಿದ್ದರು. ಆದರೂ ಪತಿ-ಪತ್ನಿ ನಡುವೆ ಜಗಳ ನಡೆಯುತ್ತಲೇ ಇತ್ತು. ಇದನ್ನೂ ಓದಿ: ಸರ್ಕಾರಿ ಬಸ್, ಆಟೋರಿಕ್ಷಾ ನಡುವೆ ಭೀಕರ ಅಪಘಾತ – 6 ಮಂದಿ ದುರ್ಮರಣ
ಹಾಸನ: ಕೌಟುಂಬಿಕ ಕಲಹ (Family Feud) ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ (Hassan) ಜಿಲ್ಲೆ ಚನ್ನರಾಯಪಟ್ಟಣ (Channarayapatna) ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ.
ಜಯಂತಿ (60), ಭರತ್ (35) ಆತ್ಮಹತ್ಯೆಗೆ ಶರಣಾದ ತಾಯಿ-ಮಗ. ಭರತ್ ಕಳೆದ ಎಂಟು ತಿಂಗಳ ಹಿಂದಷ್ಟೇ ಅರಸೀಕೆರೆ (Arasikere) ತಾಲೂಕು ಬಾಗೂರನಹಳ್ಳಿ ಗ್ರಾಮದ ಯುವತಿಯೊಂದಿಗೆ ವಿವಾಹವಾಗಿದ್ದರು. ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇಲ್ಲದೆ ಪದೇಪದೇ ಜಗಳ ನಡೆಯುತ್ತಿತ್ತು. ಇದೇ ಕಾರಣಕ್ಕೆ ಭರತ್ ಪತ್ನಿ ಮನೆಬಿಟ್ಟು ತವರು ಮನೆಗೆ ಹೋಗಿದ್ದರು. ಇದನ್ನೂ ಓದಿ: ನಲ್ಲೂರು ಮಠ ವರ್ಸಸ್ ಬಡಾಮಕಾನ್ ತೆರವು ವಿವಾದ – ಜಿಲ್ಲಾ ವಕ್ಫ್ ಅಧಿಕಾರಿ ಅಮಾನತು
ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಎರಡು ಬಾರಿ ರಾಜಿ ಪಂಚಾಯ್ತಿ ಮಾಡಿದ್ದರು. ಆದರೂ ಭರತ್ ಪತ್ನಿ ಗಂಡನ ಜೊತೆ ಇರದೇ ತವರು ಮನೆಗೆ ಹೋಗಿದ್ದರು. ಇದರಿಂದ ಮನನೊಂದಿದ್ದ ಭರತ್ ಹಾಗೂ ತಾಯಿ ಜಯಂತಿ ಕೆರೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ನಾವ್ ಹೇಳಿದಂಗೆ ಕೆಲ್ಸ ಮಾಡೋ ಹಾಗಿದ್ರೆ ಇಲ್ಲಿರಿ, ಇಲ್ಲ ನಡೀರಿ: ಮಹಿಳಾ ಅಧಿಕಾರಿ ಮೇಲೆ ಸಚಿವ ವೆಂಕಟೇಶ್ ದರ್ಪ
ಹೈದರಾಬಾದ್: ಕೌಟುಂಬಿಕ ಕಲಹ (Family Feud) ಹಿನ್ನೆಲೆ ಮಾಜಿ ಸೈನಿಕ (Ex Serviceman) ತನ್ನ ಪತ್ನಿಯನ್ನು ಹತ್ಯೆಗೈದು, ಮೃತದೇಹವನ್ನು ತುಂಡುತುಂಡಾಗಿ ಕತ್ತರಿಸಿದ ನಂತರ ಕುಕ್ಕರ್ನಲ್ಲಿ ಬೇಯಿಸಿ ಕೆರೆಗೆ ಎಸೆದ ಘಟನೆ ಹೈದರಾಬಾದ್ನ (Hyderabad) ಮೀರಪೇಟೆಯಲ್ಲಿ (Meerpet) ನಡೆದಿದೆ.
ಪ್ರಕರಣ ಸಂಬಂಧ ಮಾಜಿ ಸೈನಿಕ ಗುರುಮೂರ್ತಿಯನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಮೂಲದ ಗುರುಮೂರ್ತಿ (45) ಸ್ವಲ್ಪ ಕಾಲ ಸೇನೆಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಪ್ರಸ್ತುತ ಕಾಂಚನ್ಬಾಗ್ನಲ್ಲಿ ಡಿಆರ್ಡಿಒದಲ್ಲಿ ಹೊರಗುತ್ತಿಗೆ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಜನವರಿ 18ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: IND vs ENG 1st T20I: 20 ಬಾಲ್ಗೆ 50 ರನ್ ಚಚ್ಚಿದ ಅಭಿಷೇಕ್- ಆಂಗ್ಲರ ವಿರುದ್ಧ ಭಾರತಕ್ಕೆ 7 ವಿಕೆಟ್ಗಳ ಭರ್ಜರಿ ಜಯ
ಮೀರಪೇಟೆಯ ನ್ಯೂ ವೆಂಕಟೇಶ್ವರ ನಗರ ಕಾಲೋನಿಯಲ್ಲಿ ಗುರುಮೂರ್ತಿ ಪತ್ನಿ ವೆಂಕಟ ಮಾಧವಿ (35) ಮತ್ತು ಇಬ್ಬರು ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಕಳೆದ ಹಲವು ದಿನಗಳಿಂದ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಈ ಹಿನ್ನೆಲೆ ಗುರುಮೂರ್ತಿ ಪತ್ನಿಯನ್ನು ಹತ್ಯೆಗೈದು ಬಳಿಕ ಮೃತದೇಹವನ್ನು ತುಂಡುತುಂಡಾಗಿ ಕತ್ತರಿಸಿ ಕುಕ್ಕರ್ನಲ್ಲಿ ಬೇಯಿಸಿ ಕೆರೆಗೆ ಎಸೆದಿದ್ದಾನೆ. ಇದನ್ನೂ ಓದಿ: ಸಾರ್ವಜನಿಕವಾಗಿ ಹಸು ಕೊಂದು ಅಡುಗೆ ಮಾಡಿದ ವೀಡಿಯೋ ಹರಿಬಿಟ್ರು – ಅಸ್ಸಾಂನಲ್ಲಿ 6 ಮಂದಿ ಬಂಧನ
ಹತ್ಯೆಯ ಬಳಿಕ ಗುರುಮೂರ್ತಿ ತನ್ನ ಹೆಂಡತಿ ನಾಪತ್ತೆಯಾಗಿದ್ದಾಳೆ ಎಂದು ಸಂಬಂಧಿಕರಿಗೆ ತಿಳಿಸಿದ್ದ. ಅಲ್ಲದೇ ಮೀರಪೇಟೆ ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದಾನೆ. ದೂರು ದಾಖಲಿಸುವ ಸಲುವಾಗಿ ತನ್ನ ಅತ್ತೆ ಮಾವನೊಂದಿಗೆ ಪೊಲೀಸ್ ಠಾಣೆಗೆ ತೆರಳಿದ ಗುರುಮೂರ್ತಿ, ತನ್ನ ಹೆಂಡತಿ ಎಲ್ಲಿದ್ದಾಳೆಂದು ತಿಳಿದಿಲ್ಲ ಎಂಬಂತೆ ನಟಿಸಿದ್ದ. ಇಷ್ಟುಮಾತ್ರವಲ್ಲದೇ ಆಕೆಯನ್ನು ಹುಡುಕುವಲ್ಲಿ ಪೊಲೀಸರಿಗೆ ಬೆಂಬಲ ಕೂಡ ನೀಡಿದ್ದ. ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಸಿಎಂ ಆಗೋದನ್ನ ಯಾರೂ ತಪ್ಪಿಸಲು ಆಗಲ್ಲ: ಹೆಚ್.ವಿಶ್ವನಾಥ್
ಆದರೆ ಪೊಲೀಸರು ಅನುಮಾನದ ಮೇಲೆ ಗುರುಮೂರ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಸಂದರ್ಭ ಕೊಲೆ ರಹಸ್ಯ ಬಾಯ್ಬಿಟ್ಟಿದ್ದಾನೆ. ಮೀರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಕರ್ನಾಟಕ ಎಕ್ಸ್ಪ್ರೆಸ್ ರೈಲು ಹರಿದು 11 ಮಂದಿ ಸಾವು – ಅವಘಡ ಹೇಗಾಯ್ತು?
ಲಕ್ನೋ: ಕೌಟುಂಬಿಕ ಕಲಹದ (Family Dispute) ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ತಾಯಿ ಮತ್ತು ನಾಲ್ವರು ಸಹೋದರಿಯರನ್ನು ಹತ್ಯೆ ಮಾಡಿರುವ ಘಟನೆ ಯುಪಿ ರಾಜಧಾನಿ ಲಕ್ನೋದ ಹೋಟೆಲ್ನಲ್ಲಿ (Lucknow Hotel) ನಡೆದಿದೆ.
ಆರೋಪಿಯನ್ನು ಅರ್ಷದ್ ಎಂದು ಗುರುತಿಸಲಾಗಿದ್ದು, ಕುಟುಂಬಸ್ಥರಿಗೆ ಡ್ರಿಂಕ್ಸ್ ಮತ್ತು ಆಹಾರದಲ್ಲಿ ಅಮಲಿನ ಪದಾರ್ಥ ನೀಡಿ ಹತ್ಯೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ (Preliminary Investigation) ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 8 ಗಂಟೆ ಕೆಲಸ ಮಾಡ್ತಾ ಕುಳಿತರೆ ಹೆಂಡ್ತಿ ಓಡಿಹೋಗ್ತಾಳೆ – ಗೌತಮ್ ಅದಾನಿ ಹಾಸ್ಯ!
ಆಗ್ರಾ ಮೂಲದ ಕುಟುಂಬವು ಡಿಸೆಂಬರ್ 30 ರಿಂದ ಲಕ್ನೋದ ಖಾಸಗಿ ಹೋಟೆಲ್ನಲ್ಲಿ ಉಳಿದುಕೊಂಡಿತ್ತು. ಮೃತರನ್ನು ಆರೋಪಿ ಅರ್ಷದ್ ತಾಯಿ ಅಸ್ಮಾ ಮತ್ತು ಅವರ ಸಹೋದರಿಯರು ಕ್ರಮವಾಗಿ 9, 16, 18 ಮತ್ತು 19 ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದೆ. ಅಮಲಿನ ಪದಾರ್ಥ ನೀಡಿದ ಬಳಿಕ ಕೆಲವರನ್ನು ಕತ್ತು ಹಿಸುಕಿ, ಇನ್ನೂ ಕೆಲವರನ್ನು ಬ್ಲೇಡ್ ಬಳಿಸಿ ಹತ್ಯೆ ಮಾಡಿದ್ದಾನೆ.
ಪೊಲೀಸ್ ಮೂಲಗಳ ಪ್ರಕಾರ, ಘಟನೆಗೂ ಮುನ್ನ ಕುಟುಂಬ ಸದಸ್ಯರಿಗೆ ಅಮಲಿನ ಪದಾರ್ಥ ಇರುವ ಆಹಾರ ಬಡಿಸಲಾಗಿದೆ. ಕೊಲೆ ಪ್ರಕರಣದಲ್ಲಿ ಅರ್ಷದ್ನ ತಂದೆ ಬಾದರ್ನನ್ನೂ ಶಂಕಿತ ಆರೋಪಿ ಎಂದು ಗುರುತಿಸಲಾಗಿದೆ. ಆದ್ರೆ ಆತ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.
ಹತ್ಯೆಯ ಬಗ್ಗೆ ಪ್ರತಿಕ್ರಿಯಿಸಿದ ಸಮಾಜವಾದಿ ಪಕ್ಷದ ವಕ್ತಾರ ಫಕ್ರುಲ್ ಹಸನ್ ಚಂದ್, ಕುಟುಂಬವು ಇನ್ನಿಲ್ಲದಿರುವುದು ದುಃಖಕರವಾಗಿದೆ. ನಿರುದ್ಯೋಗ, ಒತ್ತಡ, ಬಡತನಬವೂ ಹತ್ಯೆಯ ಹಿಂದಿನ ಒಂದು ಕಾರಣವಾಗಿರಬಹುದು. ನಮ್ಮ ಪಕ್ಷವು ಸಂತ್ರಸ್ತರ ಪರವಾಗಿ ನಿಂತಿದೆ ಮತ್ತು ಅವರ ಸಾವಿನ ಬಗ್ಗೆ ದುಃಖವನ್ನು ವ್ಯಕ್ತಪಡಿಸುತ್ತದೆ ಎಂದಿದ್ದಾರೆ.
ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ (Hassan) ಜಿಲ್ಲೆ, ಸಕಲೇಶಪುರ (Sakaleshapura) ತಾಲ್ಲೂಕಿನ, ಬಾಚೀಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕರುಣಾಕರ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕಾಫಿ ಬೆಳೆಗಾರನಾಗಿದ್ದ ಕರುಣಾಕರಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಗುವಿದ್ದು ಪತ್ನಿ ಹಾಗೂ ಅತ್ತೆ ನಡುವೆ ಹೊಂದಾಣಿಕೆ ಇರಲಿಲ್ಲ ಎನ್ನಲಾಗಿದೆ. ಇದರಿಂದಾಗಿ ತಾಯಿ ಬೇರೆ ಮನೆಯಲ್ಲಿ ವಾಸವಿದ್ದರು. ಅತ್ತೆ-ಸೊಸೆ ಜಗಳದಿಂದ ಕರುಣಾಕರ ಮನನೊಂದಿದ್ದ. ಇಂದು ಬೆಳಗ್ಗೆ ಮನೆಯಲ್ಲಿಯೇ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: Kalaburagi| ಒಂದೇ ರಾತ್ರಿ 6 ಮನೆ ಕಳ್ಳತನ- 4.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು
ಮಂಗಳೂರು: ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಇಬ್ಬರನ್ನು ಮುಲ್ಕಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೃತ ಕಾರ್ತಿಕ್ ತಾಯಿ ಶ್ಯಾಮಲಾ ಭಟ್, ಸಹೋದರಿ ಕಣ್ಮಣಿ ಬಂಧಿತರು. ಆತ್ಮಹತ್ಯೆಗೆ ಮೊದಲು ಕೌಟುಂಬಿಕ ಕಲಹದ ಬಗ್ಗೆ ಕಾರ್ತಿಕ್ ಭಟ್ ಡೆತ್ ನೋಟ್ ಬರೆದಿದ್ದ. ಈ ಹಿನ್ನೆಲೆಯಲ್ಲಿ ಕಾರ್ತಿಕ್ ಕುಟುಂಬದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಡೆತ್ ನೋಟ್ನಲ್ಲಿ ಏನಿತ್ತು?
ನಮ್ಮ ಸಂಸಾರ ಹಾಳು ಮಾಡಿದ್ದೇ ತಂದೆ, ತಾಯಿ, ಸಹೋದರಿ. ಇಂತಹ ತಂದೆ, ತಾಯಿ ಯಾರಿಗೂ ಸಿಗಬಾರದು. ನಮ್ಮ ಅಂತ್ಯಸಂಸ್ಕಾರವನ್ನು ಅತ್ತೆ ಮಾವ ನಡೆಸಿಕೊಡಬೇಕು ಎಂದು ಡೆತ್ ನೋಟ್ನಲ್ಲಿ ಮೃತ ಕಾರ್ತಿಕ್ ಬರೆದುಕೊಂಡಿದ್ದ.
ಪ್ರಿಯಾಂಕ ಪೋಷಕರು ಕಾರ್ತಿಕ್ ತಂದೆ ತಾಯಿ ಹಾಗೂ ಸಹೋದರಿ ವಿರುದ್ಧ ದೂರು ನೀಡಿದ್ದರು. ಕಾರ್ತಿಕ್ ಕೊಲೆ ಮಾಡುದಕ್ಕೆ ಸಾಧ್ಯವೇ ಇಲ್ಲ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಅತ್ತೆ ಮಾವ ಕಿರುಕುಳದಿಂದಲೇ ಈ ದುರಂತ ನಡೆದಿದೆ. ಸೂಕ್ತ ತನಿಖೆ ನಡೆಸುವಂತೆ ಮೃತ ಪ್ರಿಯಾಂಕಾ ಪೋಷಕರು ಆಗ್ರಹಿಸಿದ್ದಾರೆ.
ಪ್ರಕರಣ ಏನು?
ಸಹಕಾರಿ ಬ್ಯಾಂಕ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಭಟ್ (32) ತನ್ನ ಪತ್ನಿ ಪ್ರಿಯಾಂಕ (28) ಹಾಗೂ ಮಗು ಹೃದಯ್ನನ್ನು (4) ಹತ್ಯೆಗೈದು ಬಳಿಕ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಪತ್ನಿಗೆ ಅತ್ತೆ ಮಾವನೊಂದಿಗೆ ಮನಸ್ತಾಪ ಇದ್ದ ಹಿನ್ನೆಲೆ ಕಾರ್ತಿಕ್ ಕುಟುಂಬ ಮನೆಯ ಕೋಣೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಕಾರ್ತಿಕ್ ತಂದೆ ಜನಾರ್ದನ ಭಟ್ ಪಕ್ಷಿಕೆರೆ ಜಂಕ್ಷನ್ನಲ್ಲಿ ಹೋಟೆಲ್ ನಡೆಸಿಕೊಂಡಿದ್ದು, ಎಂದಿನಂತೆಯೇ ನ.9ರಂದು ಹೋಟೆಲ್ಗೆ ತೆರಳಿದ್ದರು. ಈ ವೇಳೆ ಹೆಂಡತಿ ಮಗುವನ್ನು ಕಾರ್ತಿಕ್ ಹತ್ಯೆ ಮಾಡಿದ್ದ. ಹತ್ಯೆಯ ಬಳಿಕ ಮಧ್ಯಾಹ್ನದ ವೇಳೆಗೆ ರೈಲಿಗೆ ತಲೆ ಕೊಟ್ಟು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.
– ಸೊಸೆ, ಮೊಮ್ಮಗನ ಮೃತದೇಹ ಮನೆಯಲ್ಲಿದ್ದರೂ ಅತ್ತೆ – ಮಾವನಿಗೆ ಗೊತ್ತೇ ಇಲ್ಲ
ಮಂಗಳೂರು: ಪತ್ನಿ ಹಾಗೂ ಮಗುವನ್ನು ಕೊಂದು ಪತಿ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು (Mangaluru) ಹೊರವಲಯದ ಪಕ್ಷಿಕೆರೆಯಲ್ಲಿ (Pakshikere) ನಡೆದಿದೆ.
ಸಹಕಾರಿ ಬ್ಯಾಂಕ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಭಟ್ (32) ತನ್ನ ಪತ್ನಿ ಪ್ರಿಯಾಂಕ (28) ಹಾಗೂ ಮಗು ಹೃದಯ್ನನ್ನು (4) ಹತ್ಯೆಗೈದು ಬಳಿಕ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಪತ್ನಿಗೆ ಅತ್ತೆ ಮಾವನೊಂದಿಗೆ ಮನಸ್ತಾಪ ಇದ್ದ ಹಿನ್ನೆಲೆ ಕಾರ್ತಿಕ್ ಕುಟುಂಬ ಮನೆಯ ಕೋಣೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಕಾರ್ತಿಕ್ ತಂದೆ ಜನಾರ್ದನ ಭಟ್ ಪಕ್ಷಿಕೆರೆ ಜಂಕ್ಷನ್ನಲ್ಲಿ ಹೋಟೆಲ್ ನಡೆಸಿಕೊಂಡಿದ್ದು, ಎಂದಿನಂತೆಯೇ ಶುಕ್ರವಾರವೂ ಹೋಟೆಲ್ಗೆ ತೆರಳಿದ್ದರು. ಈ ವೇಳೆ ಹೆಂಡತಿ ಮಗುವನ್ನು ಕಾರ್ತಿಕ್ ಹತ್ಯೆ ಮಾಡಿದ್ದ. ಹತ್ಯೆಯ ಬಳಿಕ ಮಧ್ಯಾಹ್ನದ ವೇಳೆಗೆ ರೈಲಿಗೆ ತಲೆ ಕೊಟ್ಟು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ನಾಯಿ ಮರಿಯ ಶಬ್ದ ಕೇಳಲಾಗದೇ ಮೀರತ್ನಲ್ಲಿ 5 ನಾಯಿ ಮರಿಗಳಿಗೆ ಬೆಂಕಿ ಹಚ್ಚಿದ ಮಹಿಳೆಯರು: ಕೇಸ್ ದಾಖಲು
ಮನಸ್ತಾಪದ ಹಿನ್ನೆಲೆ ಶುಕ್ರವಾರ ರಾತ್ರಿಯೂ ಮಗ, ಸೊಸೆ ಹಾಗೂ ಮೊಮ್ಮಗ ಕೋಣೆಯಲ್ಲಿಯೇ ಇದ್ದಾರೆಂದು ಮಾವ ಜನಾರ್ದನ ಭಟ್ ಭಾವಿಸಿ ಶನಿವಾರ ಕೂಡ ಎಂದಿನಂತೆಯೇ ಹೋಟೆಲ್ಗೆ ತೆರಳಿದ್ದರು. ಇತ್ತ ಕಾರ್ತಿಕ್ ಮೃತದೇಹ ಪತ್ತೆಯಾದ ಕಾರಣ ಆತನ ವಿಳಾಸ ಹುಡುಕಿಕೊಂಡು ಪೊಲೀಸರು ಮನೆಗೆ ಬಂದಿದ್ದಾರೆ. ಕೋಣೆಯ ಬಾಗಿಲು ತೆರೆದು ನೋಡಿದಾಗ ಪತ್ನಿ ಹಾಗೂ ಮಗುವಿನ ಮೃತದೇಹ ಪತ್ತೆಯಾಗಿದೆ. ಕಾರ್ತಿಕ್ ಪತ್ನಿ ಪ್ರಿಯಾಂಕ ಶಿವಮೊಗ್ಗ ಮೂಲದವರಾಗಿದ್ದರು. ಮಾತುಕತೆ ಇಲ್ಲದ ಕಾರಣ ಸೊಸೆ ಹಾಗೂ ಮೊಮ್ಮಗನ ಮೃತದೇಹ ಮನೆಯಲ್ಲಿದ್ದರೂ ವೃದ್ಧ ಅತ್ತೆ ಮಾವನಿಗೆ ಗೊತ್ತೇ ಆಗಿರಲಿಲ್ಲ. ಇದನ್ನೂ ಓದಿ: ಯೋಗ ಶಿಕ್ಷಕಿ ಜೀವಂತ ಸಮಾಧಿ ಕೇಸ್ | ಮರ್ಡರ್ ಮಾಡೋಕೆ 4 ಲಕ್ಷ ಸುಪಾರಿ, 1 ಲಕ್ಷ ಅಡ್ವಾನ್ಸ್ – ರಹಸ್ಯ ಸ್ಫೋಟ
ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ತಿಕ್ ತನ್ನ ಹೆಂಡತಿ ಹಾಗೂ ಮಗುವನ್ನು ಗ್ಲಾಸ್ ಪೀಸ್ನಿಂದ ಚುಚ್ಚಿ ಹತ್ಯೆ ಮಾಡಿದ್ದಾನೆ. ಶುಕ್ರವಾರ ಮಧ್ಯಾಹ್ನ ಕಾರ್ತಿಕ್ ಮೃತದೇಹ ಪತ್ತೆಯಾಗಿತ್ತು. ಇಂದು ಮಧ್ಯಾಹ್ನದ ವೇಳೆಗೆ ಕಾರ್ತಿಕ್ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕಾರ್ತಿಕ್ ಕುಟುಂಬಕ್ಕೆ ಮೂರು ವರ್ಷದಿಂದ ತಂದೆ-ತಾಯಿ ಜೊತೆ ಮಾತುಕತೆ ಇರಲಿಲ್ಲ. ಶುಕ್ರವಾರ ರಾತ್ರಿ ಕಾರ್ತಿಕ್ ಕುಟುಂಬ ಹೊರಗೆ ಹೋಗಿರಬಹುದು ಎಂದು ಕಾರ್ತಿಕ್ ತಂದೆ ಭಾವಿಸಿದ್ದರು. ಇಂದು ಮಧ್ಯಾಹ್ನವೇ ಅವರಿಗೆ ವಿಷಯ ಗೊತ್ತಾಗಿದೆ ಎಂದರು. ಇದನ್ನೂ ಓದಿ: ಈ ಸರ್ಕಾರ ತೆಗೆಯೋವರೆಗೆ ಮನೆಯಲ್ಲಿ ಮಲಗಲ್ಲ – ಗುಡುಗಿದ ಗೌಡರು
ಕಾರ್ತಿಕ್ ಇತ್ತೀಚಿಗೆ ಆರ್ಥಿಕ ಸಮಸ್ಯೆಯಿಂದ ಇರೋದು ಕೂಡಾ ಗೊತ್ತಾಗಿದೆ. ವಾಷ್ರೂಂನ ಕಿಟಕಿ ಗ್ಲಾಸ್ ಒಡೆದು ಪತ್ನಿ, ಮಗುವಿನ ಹತ್ಯೆ ಮಾಡಿದ್ದಾನೆ. ಇಬ್ಬರ ದೇಹದ ಬೇರೆ ಬೇರೆ ಭಾಗದಲ್ಲಿ ಗಾಯಗಳಾಗಿವೆ. ಕೋಣೆಯಲ್ಲೇ ಫ್ಯಾನ್ಗೆ ನೇಣುಹಾಕಲು ಯತ್ನಿಸಿದ್ದಾನೆ. ಬಳಿಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾರ್ತಿಕ್ ಕೃತ್ಯ ಎಸಗುವ ಮುನ್ನ ಸುಧೀರ್ಘ ಡೆತ್ನೋಟ್ ಬರೆದಿದ್ದಾನೆ. ತನ್ನ ಅಂತ್ಯಸಂಸ್ಕಾರ, ಆಸ್ತಿ ಯಾರ ಪಾಲಾಗಬೇಕೆಂದು ಡೆತ್ ನೋಟ್ನಲ್ಲಿದೆ. ತನ್ನ ತಂದೆ ತಾಯಿ ಅಂತ್ಯಸಂಸ್ಕಾರ ಮಾಡಬಾರದು ಎಂಬುವುದು ಉಲ್ಲೇಖಿಸಿದ್ದಾನೆ. ತಮ್ಮ ಸಾವಿಗೆ ಯಾರೂ ಕಾರಣ ಅಲ್ಲ ಎಂದು ಡೆತ್ನೋಟ್ ನಲ್ಲಿ ಬರೆದಿದ್ದಾನೆ. ಕಾರ್ತಿಕ್ ಪತ್ನಿ ಪ್ರಿಯಾಂಕ ಶಿವಮೊಗ್ಗ ಮೂಲದವರು. ಆಕೆಯ ಹೆತ್ತವರು ಬಂದ ಬಳಿಕ ಶವ ಪೋಸ್ಟ್ಮಾರ್ಟಂಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುತ್ತದೆ ಎಂದು ಕಮೀಷನರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ | ದೇವರ ಹುಂಡಿ ಹಣಕ್ಕೂ ಖನ್ನಾ ಹಾಕಿದ್ರಾ ಅಧಿಕಾರಿಗಳು?
ಆನೇಕಲ್: ಪಟ್ಟಣದಲ್ಲಿ ಮತ್ತೆ ಡಬಲ್ ಬ್ಯಾರಲ್ ಗನ್ ಸದ್ದು ಮಾಡಿದೆ. ಇಬ್ಬರ ಜಗಳ ಬಿಡಿಸಲು ಹೋದಾಗ ಮೂರನೆ ವ್ಯಕ್ತಿಗೆ ಗುಂಡೇಟು ತಗುಲಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ (Anekal) ತಾಲೂಕಿನ ಸಿಡಿ ಹೊಸಕೋಟೆ ಗ್ರಾಮದಲ್ಲಿ ನಡೆದಿದೆ.
ಸಂಪಂಗಿ ಗುಂಡೇಟು ತಿಂದ ವ್ಯಕ್ತಿಯಾಗಿದ್ದು, ಚಂದ್ರಶೇಖರ್ ಗನ್ ನಿಂದ ಗುಂಡು ಹಾರಿಸಿರುವ ಆರೋಪಿ. ಚಂದ್ರಶೇಖರ್ ಹಾಗೂ ಶ್ರೀನಿವಾಸ್ ಸಿಡಿ ಹೊಸಕೋಟೆ (Hosakote) ಗ್ರಾಮದ ಮುನಿರಾಜು ವೆಂಬು ಅವರ ಮಗನಾಗಿದ್ದು ತಂದೆ ಮಕ್ಕಳು ಇಬ್ಬರು ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಳ್ಳುತ್ತಿದ್ದರು. ಇದೇ ಸಮಯದಲ್ಲಿ ಹಲ್ಲೆ ಮಾಡುತ್ತಿದ್ದಾಗ ಬಿಡಿಸಲು ಮುನಿರಾಜು ಅವರ ಅಣ್ಣನಾದ ಸಂಪಂಗಿ ಹಾಗೂ ಪತ್ನಿ ಬಂದಿದ್ದಾರೆ.
ಬಂದು ಸಮಾಧಾನ ಮಾಡಲು ಬಂದಿದ್ದ ಚಂದ್ರಶೇಖರ್ ಸಂಪಂಗಿಯ ಮೇಲೆ ಫೈರಿಂಗ್ ಮಾಡಿದ್ದಾನೆ. ಸಂಪಂಗಿಯ ಹೊಟ್ಟೆ ಹಾಗೂ ಎದೆ ಭಾಗಕ್ಕೆ ಗಂಭೀರ ಗಾಯವಾಗಿದ್ದು ಆನೇಕಲ್ನ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ಕೊಡಿಸಲಾಗಿದೆ ಹೆಚ್ಚಿನ ಚಿಕಿತ್ಸೆಗಾಗಿ ಸಂಪಂಗಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ವಕ್ಫ್ ಆಸ್ತಿ ವಿವಾದದ ಕಿಚ್ಚು – ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ
ಮಂಡ್ಯ: ಮಂಡ್ಯದಲ್ಲಿ (Mandya) ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಡಾ.ನಟರಾಜ್ (Dr Nataraj) ಬೆಂಗಳೂರಿನಲ್ಲಿ (Bengaluru) ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ಈ ಆತ್ಮಹತ್ಯೆಗೆ ಮೇಲಾಧಿಕಾರಿಗಳ ಕಿರುಕುಳ ಕಾರಣ ಎಂದು ಆರೋಪ ಮಾಡಲಾಗಿದೆ. ಈ ಆರೋಪವನ್ನು ಮಂಡ್ಯ ಡಿಹೆಚ್ಒ (DHO) ಡಾ.ಮೋಹನ್ ತಳ್ಳಿ ಹಾಕಿದ್ದಾರೆ.
ಡಾ.ನಟರಾಜ್ ಕುಣಿಗಲ್ ತಾಲೂಕಿನ ಚೌಡನಕುಪ್ಪೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಮಂಡ್ಯದ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಯಾಗಿ ವರ್ಗಾವಣೆಯಾಗಿತ್ತು. ಅಧಿಕಾರ ವಹಿಸಿಕೊಂಡು ಮೂರು ತಿಂಗಳು ಆಗಿದೆ. ಆದರೆ ಇವರು ಕೆಲಸ ಮಾಡಿರುವುದು ಎರಡು ತಿಂಗಳು ಮಾತ್ರ. 30 ದಿನಗಳ ಕಾಲ ಆರೋಗ್ಯ ಸಮಸ್ಯೆ ಎಂದು ರಜೆ ಹಾಕಿದ್ದರು. ಕೌಟುಂಬಿಕ ಕಲಹದಿಂದಾಗಿ ಇವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರಿಗೆ ಹೆಚ್ಚಿನ ಕಾರ್ಯ ಒತ್ತಡವನ್ನು ನೀಡುತ್ತಿರಲಿಲ್ಲ. ಕೌಟುಂಬಿಕ ಕಲಹದಿಂದಾಗಿ ಮಾನಸಿಕ ಕಿರುಕುಳದಿಂದ ಬಳಲುತ್ತಿದ್ದ ನಟರಾಜ್ ಈ ಹಿಂದೆ ಮೂರು ಬಾರಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದರು ಎಂದರು. ಇದನ್ನೂ ಓದಿ: ತೆಲಂಗಾಣ ಶಾಸಕರಿಗೆ ಮಟನ್, ಚಿಕನ್ ಬಿರಿಯಾನಿ ಬೇಕಾ ಅಂತ ವಿಚಾರಿಸಲು ಡಿಕೆಶಿ ತೆರಳಿದ್ದು: ಆರ್.ಅಶೋಕ್
ಕಳೆದ ನವೆಂಬರ್ 11 ರಂದು ಕೌಟುಂಬಿಕ ಕಲಹ ಹಾಗೂ ಅನಾರೋಗ್ಯದಿಂದ ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಮೊದಲು ಇದ್ದ ಚೌಡನಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಯಾಗಿ ನೇಮಕ ಮಾಡುವಂತೆ ಸಚಿವ ಚಲುವರಾಯಸ್ವಾಮಿ ಹಾಗೂ ಡಿಹೆಚ್ಒಗೆ ನಟರಾಜ್ ಪತ್ರ ಬರೆದ್ದರು. ಇವರ ಸಾವಿಗೆ ಇವರ ಕೌಟುಂಬಿಕ ಕಲಹದಿಂದ ಉಂಟಾದ ಮಾನಸಿಕ ಖಿನ್ನತೆಯೇ ಕಾರಣ. ಈ ಆತ್ಮಹತ್ಯೆಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಡಾ.ಮೋಹನ್ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯ ರಾಜಕೀಯ ಒತ್ತಡದ ನಡುವೆ ಕ್ಷೇತ್ರಕ್ಕೆ ಟೈಂ ಕೊಡಲು ಆಗ್ತಿಲ್ಲ: ಡಿಕೆಶಿ
ಮಂಡ್ಯ: ಕೌಟುಂಬಿಕ ಕಲಹ (Family Feud) ಹಿನ್ನೆಲೆ ಸ್ವಂತ ತಂದೆಯೇ ತನ್ನ ಇಬ್ಬರು ಮಕ್ಕಳ ಕತ್ತು ಸೀಳಿ ಹತ್ಯೆಗೈದ (Murder) ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಲಬುರಗಿ (Kalaburagi) ಜಿಲ್ಲೆಯ ಜೇವರ್ಗಿಯಲ್ಲಿ (Jevargi) ಪೊಲೀಸರು ಬಂಧಿಸಿದ್ದಾರೆ.
ಶ್ರೀಕಾಂತ್ ಬಂಧಿತ ಆರೋಪಿ. ಈತ ಕಲಬುರಗಿ ಜಿಲ್ಲೆಯ ಗಾಣಗಪುರದವನಾಗಿದ್ದು, ಲಕ್ಷ್ಮಿ ಎಂಬಾಕೆಯನ್ನು ವರಿಸಿದ್ದ. ಮದುವೆಯಾದಾಗಿನಿಂದ ಇವರಿಬ್ಬರ ಮಧ್ಯೆ ಒಂದಲ್ಲ ಒಂದು ವಿಚಾರಕ್ಕೆ ಗಲಾಟೆ ನಡೆಯುತ್ತಲೇ ಇತ್ತು. ಬುಧವಾರ ಈತ ತನ್ನ ತಂದೆ-ತಾಯಿಯೊಂದಿಗೆ ಜಗಳ ಮಾಡಿಕೊಂಡು ಶ್ರೀರಂಗಪಟ್ಟಣ (Srirangapatna) ಸಮೀಪದ ಮರಳಗಾಲ ಗ್ರಾಮದ ವಿರೂಪಾಕ್ಷ ಎಂಬವರ ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ. ನಂತರ ಅತ್ತೆ-ಮಾವನ ಮನೆಗೆ ಬಂದಿದ್ದ. ಅಲ್ಲದೇ ನಮಗೆ ಇಲ್ಲಿಯೇ ಕೆಲಸ ಕೊಡಿಸಿ, ಕೆಲಸ ಮಾಡಿಕೊಂಡು ಇಲ್ಲಿಯೇ ಇರುತ್ತೇವೆ ಎಂದು ಶ್ರೀಕಾಂತ್ ಹೇಳಿದ್ದ. ಇದನ್ನೂ ಓದಿ: 3 ವರ್ಷದ ಹಿಂದಿನ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ – ಮಹಿಳೆಯ ಅಸ್ತಿಪಂಜರ ಸೆಪ್ಟಿಕ್ ಟ್ಯಾಂಕ್ನಲ್ಲಿ ಪತ್ತೆ
ಇದಕ್ಕೆ ಒಪ್ಪಿಕೊಂಡ ಅವರ ಅತ್ತೆ-ಮಾವ ಊಟ ಮಾಡಿ ಮಲಗಿದ್ದರು. ಗುರುವಾರ ಬೆಳಗ್ಗಿನ ಜಾವ ಏಕಾಏಕಿ ಶ್ರೀಕಾಂತ್ ತನ್ನ ಹೆಂಡತಿಗೆ ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಅಲ್ಲೇ ಪಕ್ಕದಲ್ಲಿದ್ದ ಆದರ್ಶ್ (4) ಮತ್ತು ಅಮೂಲ್ಯ (2) ಎಂಬ ತನ್ನ ಇಬ್ಬರು ಮಕ್ಕಳ ಕತ್ತು ಸೀಳಿ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದ. ಕೊಲೆ ಮಾಡಿದ ಪಾಪಿ ಶ್ರೀಕಾಂತ್ ಪರಾರಿಯಾಗಿ ತನ್ನ ಹುಟ್ಟೂರಾದ ಜೇವರ್ಗಿಗೆ ಬಂದು ಯಾವುದೇ ಪಾಪಪ್ರಜ್ಞೆ ಇಲ್ಲದೇ ಕುಡಿದು ಮಲಗಿದ್ದ. ಟಿವಿಯಲ್ಲಿ ಹತ್ಯೆ ವಿಚಾರ ತಿಳಿದ ಈತನ ತಂದೆ-ತಾಯಿ ಮನೆಯಲ್ಲಿ ಶ್ರೀಕಾಂತ್ ಇರುವಿಕೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪತ್ನಿಯ ಜೊತೆ ಅಕ್ರಮ ಸಂಬಂಧ – ಪ್ರಿಯಕರನ ಕತ್ತು ಸೀಳಿ ರಕ್ತ ಕುಡಿದ ಗಂಡ
ಮಾಹಿತಿ ಆಧಾರದ ಮೇಲೆ ಪೊಲೀಸರು ಆರೋಪಿ ಶ್ರೀಕಾಂತ್ನನ್ನು ಜೇವರ್ಗಿಯಲ್ಲಿ ಬಂಧಿಸಿದ್ದಾರೆ. ವಿಚಾರಣೆ ವೇಳೆ ಕೊಲೆಯ ಅಸಲಿ ಸತ್ಯವನ್ನು ಶ್ರೀಕಾಂತ್ ಬಾಯಿ ಬಿಟ್ಟಿದ್ದಾನೆ. ತನ್ನ ಹೆಂಡತಿ ಯಾವಾಗಲೂ ಯಾರದ್ದೋ ಜೊತೆ ಫೋನ್ನಲ್ಲಿ ಗಂಟೆಗಟ್ಟಲೆ ಮಾತನಾಡುತ್ತಿದ್ದಳು. ಈ ಹಿನ್ನೆಲೆ ಪತ್ನಿಯ ಶೀಲ ಶಂಕಿಸಿ ಮಕ್ಕಳನ್ನು ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಪ್ರತಿದಿನ ಲಕ್ಷ್ಮಿ ಶೀಲ ಶಂಕಿಸಿ ಮನೆಯಲ್ಲಿ ಗಲಾಟೆ ನಡೆಯುತ್ತಿತ್ತು. ಇಬ್ಬರು ಮಕ್ಕಳು ನನ್ನದಲ್ಲ ಎಂದು ಸದಾ ಮಕ್ಕಳು ಮತ್ತು ಹೆಂಡತಿಯ ಮೇಲೆ ಹಲ್ಲೆ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಇದೀಗ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಇದನ್ನೂ ಓದಿ: ಲೇಡಿಸ್ ಪಿಜಿಗಳೇ ಟಾರ್ಗೆಟ್ – ಸ್ನಾನ ಮಾಡುವುದನ್ನು ಕದ್ದುಮುಚ್ಚಿ ವೀಡಿಯೋ ಮಾಡುತ್ತಿದ್ದಾಗಲೇ ಕಿರಾತಕ ಲಾಕ್