Tag: ಕ್ಯೂ

  • ನಾಗಶೇಖರ್ ಚಿತ್ರಕ್ಕೆ ಬಾಲಿವುಡ್ ನಟಿ ಆವಂತಿಕಾ ದಸ್ಸಾನಿ ನಾಯಕಿ

    ನಾಗಶೇಖರ್ ಚಿತ್ರಕ್ಕೆ ಬಾಲಿವುಡ್ ನಟಿ ಆವಂತಿಕಾ ದಸ್ಸಾನಿ ನಾಯಕಿ

    ಗಾಗಲೇ ನಾಗಶೇಖರ್ (Nagasekhar) ನಿರ್ದೇಶನದ ‘ಸಂಜು ವೆಡ್ಸ್ ಗೀತಾ’ ಚಿತ್ರದ ಚಿತ್ರೀಕರಣ ಮುಗಿದು ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದೆ. ಅದರ ಹಿಂದೆಯೇ ನಾಗಶೇಖರ್ ತಮ್ಮ ಮುಂದಿನ ಪ್ರಾಜೆಕ್ಟನ್ನು ಅನೌನ್ಸ್ ಮಾಡಿದ್ದಾರೆ. ಕನ್ನಡ, ತೆಲುಗು, ತಮಿಳು ಸೇರಿದಂತೆ ೩ ಭಾಷೆಗಳಲ್ಲಿ, ಬಿಗ್ ಬಜೆಟ್ ನಲ್ಲಿ  ನಿರ್ಮಾಣವಾಗುತ್ತಿರುವ ಆ ಚಿತ್ರದ ಹೆಸರು ‘ಕ್ಯೂ’.

    ತಮ್ಮದೇ ಆದ ನಾಗಶೇಖರ್ ಮ್ಯಾಜಿಕ್ಸ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸುತ್ತಿರುವ ನಾಗಶೇಖರ್ ಕಥೆ, ಚಿತ್ರಕಥೆಯ ಜೊತೆಗೆ ಸಂಗೀತದ ಜವಾಬ್ದಾರಿಯನ್ನೂ ಸಹ ತಾವೇ  ಹೊತ್ತಿದ್ದಾರೆ. ರಾಮ್ ಚಿರು ಲೈನ್ ಪ್ರೊಡ್ಯೂಸರ್ ಆಗಿರುವ  ಈ ಚಿತ್ರವನ್ನು ಭಾವನಾ ರವಿ ಅವರು ಪ್ರೆಸೆಂಟ್ ಮಾಡುತ್ತಿದ್ದಾರೆ.

     

    ಈ ಚಿತ್ರದ ಮೂಲಕ ನಾಗಶೇಖರ್ ಅವರು, ಮೈನೆ ಪ್ಯಾರ್ ಕಿಯಾ ಖ್ಯಾತಿಯ ನಟಿ ಭಾಗ್ಯಶ್ರೀ ಅವರ ಪುತ್ರಿ ಅವಂತಿಕಾ ದಸ್ಸಾನಿ  (Avantika Dassani) ಅವರನ್ನು ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಉಪೇಂದ್ರ ಅಣ್ಣನ ಪುತ್ರ ನಿರಂಜನ್ ಚಿತ್ರದ ನಾಯಕ. ಮುಂದಿನ ತಿಂಗಳಿಂದ ಈ ಚಿತ್ರದ ಶೂಟಿಂಗ್ ಆರಂಭವಾಗಲಿದ್ದು, ಡಿ.ಜೆ. ಚಕ್ರವರ್ತಿ ಸಂಭಾಷಣೆ ರಚಿಸಿದ್ದಾರೆ.

  • ಕ್ಯೂನಲ್ಲಿ ನಿಂತೆ 16 ಸಾವಿರ ರೂಪಾಯಿ ಸಂಪಾದಿಸುತ್ತಾನೆ

    ಕ್ಯೂನಲ್ಲಿ ನಿಂತೆ 16 ಸಾವಿರ ರೂಪಾಯಿ ಸಂಪಾದಿಸುತ್ತಾನೆ

    ಲಂಡನ್: ಕ್ಯೂನಲ್ಲಿ ನಿಂತು ಕಾಯುವುದು ಎಂದರೆ ಎಲ್ಲರಿಗೂ ಕಷ್ಟ. ಆದರೆ ಇಲ್ಲೊಬ್ಬ ವ್ಯಕ್ತಿಗೆ ಕ್ಯೂನಲ್ಲಿ ನಿಲ್ಲೊದನ್ನೇ ಕೆಲಸವನ್ನಾಗಿ ಮಾಡಿಕೊಂಡಿದ್ದಾರೆ. ಕ್ಯೂನಲ್ಲಿ ನಿಂತ್ರೆ ಸಾಕು ದಿನಕ್ಕೆ 16 ಸಾವಿರ ರೂಪಾಯಿ ಸಂಪಾದನೆ ಮಾಡುತ್ತಾನೆ. ವಿಚಿತ್ರ ಎನಿಸಿದರು ಇದು ಸತ್ಯ, ಹಿಗೊಂದು ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ಲಂಡನ್‍ನ ವ್ಯಕ್ತಿಯೊಬ್ಬ ದಿನವೊಂದಕ್ಕೆ ಸಾವಿರಾರು ರೂಪಾಯಿ ಗಳಿಸುತ್ತಾನೆ. ಕ್ಯೂನಲ್ಲಿ ನಿಲ್ಲಲಾಗದ ಶ್ರೀಮಂತರ ಪರ ತಾನೇ ಕ್ಯೂನಲ್ಲಿ ನಿಂತು ಅವರ ಕೆಲಸ ಮಾಡುತ್ತಾನೆ. ಈ ಕೆಲಸಕ್ಕೆ 2,028 ರೂಪಾಯಿ ಚಾರ್ಜ್ ಮಾಡುತ್ತಾನೆ. ಹೀಗೆ ಪ್ರತಿದಿನವು 16 ಸಾವಿರ ರೂಪಾಯಿ ಸಂಪಾದನೆ ಮಾಡುತ್ತಾನೆ. ಇದನ್ನೂ ಓದಿ: ಸಲಿಂಗ ಸಂಗಾತಿ ಜೊತೆಗೆ ವಧು ಎಸ್ಕೇಪ್

    ಲಂಡನ್ ನಿವಾಸಿ ಫ್ರೆಡ್ಡಿ ದಿನದ 8 ಗಂಟೆಗಳ ಕಾಲ ಕ್ಯೂನಲ್ಲಿ ನಿಲ್ಲುತ್ತಾನೆ. ಹೆಚ್ಚಿನ ಹಣವಿದ್ದರು ಕೆಲವು ಶ್ರೀಮಂತರಿಗೆ ಸಮಯ ಇರುವುದಿಲ್ಲ. ಥಿಯೇಟರ್‌ಗಳಲ್ಲಿ ಟಿಕೆಟ್‍ಗಾಗಿ, ಹಿರಿಯನಾಗರಿಕರಿಗೆ ಸಹಾಯವನ್ನು ಮಾಡುತ್ತಾನೆ. ಇದನ್ನೂ ಓದಿ: ಆಟವಾಡುತ್ತಾ ಚರಂಡಿಗೆ ಬಿದ್ದು ಪ್ರಾಣ ಬಿಟ್ಟ ಅಕ್ಕ, ತಮ್ಮ

    ಈ ಕುರಿತಾಗಿ ಮಾತನಾಡಿದ ಫ್ರೆಡ್ಡಿ ಕ್ಯೂನಲ್ಲಿ ನಿಲ್ಲುವುದು ಸುಲಭದ ಮಾತು ಅಲ್ಲ. ಕೊರೆಯುವ ಚಳಿಯಲ್ಲಿ ಕ್ಯೂ ನಿಲ್ಲಬೇಕಾದ ಸಂದರ್ಭವನ್ನು ಎದುರಿಸಿದ್ದೇನೆ. ಬೆಸಿಗೆ ಬಿಸಿಲಿನ ಸಮಯದಲ್ಲಿ ತುಂಬಾ ಕೆಲಸವಿರುತ್ತದೆ. ಕ್ಯೂ ನಿಲ್ಲುವ ಕೆಲಸಕ್ಕೆ ನಾನು  ಜಾಹೀರಾತು ನೀಡಿದ್ದೆ. 2,028 ರೂಪಾಯಿಗಿಂತ ಹೆಚ್ಚಿನ ಹಣವನ್ನು ನಾನು ಕೇಳುವುದಿಲ್ಲ ಎಂದಿದ್ದಾನೆ. ಇದನ್ನೂ ಓದಿ: ಟ್ರ್ಯಾಕ್ಟರ್‌ಗೆ ಗುದ್ದಿದ ಕಾರ್- ಐದು ಮಂದಿ ಸ್ಥಳದಲ್ಲೇ ಸಾವು

  • ಹೆಚ್ಚಿದ ಕೋವಿಡ್ ಮರಣ- ಚಿತಾಗಾರಗಳಲ್ಲಿ ಅಂಬುಲೆನ್ಸ್‌ಗಳ ಕ್ಯೂ

    ಹೆಚ್ಚಿದ ಕೋವಿಡ್ ಮರಣ- ಚಿತಾಗಾರಗಳಲ್ಲಿ ಅಂಬುಲೆನ್ಸ್‌ಗಳ ಕ್ಯೂ

    ಬೆಂಗಳೂರು: ಕೊರೊನಾ ಸೋಂಕಿತರ ಸಾವಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದ್ದು, ಬಿಬಿಎಂಪಿ ಚಿತಾಗಾರಗಳಿಗೆ ಒತ್ತಡ ಹೆಚ್ಚಿದೆ. ಬೆಳಗ್ಗೆ 7ರಿಂದ ರಾತ್ರಿ 12 ಗಂಟೆಯಾದರೂ ಸಾರ್ವಜನಿಕರು ಹೆಣ ಸುಡಲು ಸರತಿಯಲ್ಲಿ ನಿಲ್ಲುವ ಪರಿಸ್ಥಿತಿ ಎದುರಾಗಿದೆ. ನಿತ್ಯ ಹತ್ತಾರು ಅಂಬುಲೆನ್ಸ್ ವಾಹನಗಳು ಸಾಲುಗಟ್ಟಿ ನಿಲ್ಲುತ್ತಿವೆ.

    ಯಲಹಂಕದ ಮೇಡಿ ಸ್ಮಶಾನದಲ್ಲಿ ಇಂತಹ ದುಸ್ಥಿತಿ ಎದುರಾಗಿದೆ. ನಗರದ ಐದು ಕಡೆ ಕೋವಿಡ್ ಶವ ಸುಡಲು ಅವಕಾಶ ನೀಡಲಾಗಿದೆ. ಆದರೆ ಎರಡು ಕಡೆ ಮಿಷನ್ ಕೆಟ್ಡಿದೆ. ಹೀಗಾಗಿ ಉಳಿದ ಶವಾಗಾರಗಳಲ್ಲಿ ಒತ್ತಡ ಹೆಚ್ಚಿದೆ. ಸರತಿಯಲ್ಲಿ ಅಂಬುಲೆನ್ಸ್ ಗಳು ನಿಲ್ಲುವುದು ಸಹ ಹೆಚ್ಚಿದೆ. ಒಂದು ಹೆಣ ಸುಡಲು 1 ಗಂಟೆ ಬೇಕು. ಹೀಗಾಗಿ ಸರತಿಯಲ್ಲಿ ನಿಲ್ಲುವವರ ಸಂಖ್ಯೆ ಹೆಚ್ಚುತ್ತಿದೆ.

    ಇತ್ತ ಕೋವಿಡ್ ಮರಣ ಪ್ರಮಾಣದಲ್ಲಿ ಸಹ ಏರಿಕೆ ಕಂಡಿದ್ದು, ಬೆಳಗ್ಗೆ 7 ರಿಂದ ರಾತ್ರಿ 12 ಗಂಟೆ ವರೆಗೆ ಕೆಲಸ ಮಾಡಿದರೂ ಸಾಕಾಗುತ್ತಿಲ್ಲ. ಹೀಗಾಗಿ ಅಂಬುಲೆನ್ಸ್ ಗಳು ಸಾಲುಗಟ್ಟಿ ನಿಲ್ಲುತ್ತಿವೆ.

    ಸೌಲಭ್ಯಗಳೂ ಇಲ್ಲ
    ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ಶವ ಸಂಸ್ಕಾರಕ್ಕೆ ಸೌಲಭ್ಯ ಇತ್ತು. ಈ ಬಾರಿ ಸ್ಯಾನಿಟೈಸರ್, ಗ್ಲೌಸ್, ಮಾಸ್ಕ್, ಪಿಪಿಇ ಕಿಟ್ ಯಾವುದನ್ನೂ ಕೊಟ್ಟಿಲ್ಲ. ಹೀಗಾಗಿ ನಮಗೆ ರಕ್ಷಣೆ ಇಲ್ಲ, ಜೀವ ಭಯ ಕಾಡುತ್ತಿದೆ ಎಂದು ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ.

  • ಎಣ್ಣೆಗಾಗಿ ಮದ್ಯ ಪ್ರಿಯರು ಕ್ಯೂ- ಬಾಸ್ಕೆಟ್, ಬ್ಯಾಗ್‍ಗಳಲ್ಲಿ ತುಂಬಿಕೊಳ್ಳುತ್ತಿರೋ ಜನ

    ಎಣ್ಣೆಗಾಗಿ ಮದ್ಯ ಪ್ರಿಯರು ಕ್ಯೂ- ಬಾಸ್ಕೆಟ್, ಬ್ಯಾಗ್‍ಗಳಲ್ಲಿ ತುಂಬಿಕೊಳ್ಳುತ್ತಿರೋ ಜನ

    – ಕಿಲೋ ಮೀಟರ್‌ಗಟ್ಟಲೇ ದಿನಸಿಗಾಗಿ ಕ್ಯೂ

    ಬೆಂಗಳೂರು: ಕೊರೊನಾ ಭಯದಿಂದ ಈಗಾಗಲೇ ಜನರು ಬೆಂಗಳೂರು ಬಿಟ್ಟು ಹೋಗುತ್ತಿದ್ದಾರೆ. ಇತ್ತ ನಾಳೆ ಸಂಜೆಯಿಂದ ಒಂದು ವಾರ ಲಾಕ್‍ಡೌನ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮದ್ಯದಂಗಡಿ, ದಿನಸಿ, ಬ್ಯಾಂಕ್ ಮತ್ತು ಎಟಿಎಂ ಮುಂದೆ ನೂರಾರು ಜನರು ಕ್ಯೂ ನಿಂತಿದ್ದಾರೆ.

    ಮಂಗಳವಾರ ರಾತ್ರಿಯಿಂದ ಲಾಕ್‍ಡೌನ್ ಜಾರಿಯಾಗಲಿದೆ. ಹೀಗಾಗಿ ಇಂದೇ ಎಣ್ಣೆಗಾಗಿ ಮದ್ಯ ಪ್ರಿಯರು ಮುಗಿಬಿದ್ದಿದ್ದಾರೆ. ಹೋಲ್ ಸೇಲ್ ಅಂಗಡಿಗಳ ಮುಂದೆ ಎಣ್ಣೆಗಾಗಿ ಜನ ಕ್ಯೂ ನಿಂತಿದ್ದಾರೆ. ರಾಜಾಜಿನಗರದ ವಿಕ್ಟೋರಿಯಾ ವೈನ್ಸ್ ಮುಂಭಾಗ ಜನರು ಕ್ಯೂ ನಿಂತಿದ್ದು, ವಾರಕ್ಕಾಗುವಷ್ಟು ಎಣ್ಣೆ ಖರೀದಿ ಮಾಡಿಕೊಂಡು ಹೋಗುತ್ತಿದ್ದಾರೆ. ಬಾಸ್ಕೆಟ್, ಬಾಕ್ಸ್, ಬ್ಯಾಗ್‍ಗಳಲ್ಲಿ ಎಣ್ಣೆ ತುಂಬಿಕೊಂಡು ಹೋಗುತ್ತಿದ್ದಾರೆ.

    ಲಾಕ್‍ಡೌನ್ ವಾರ ಇರುತ್ತೊ, ತಿಂಗಳು ಇರುತ್ತೊ ಗೊತ್ತಿಲ್ಲ. ಹಣ ಇರುವವರು ಮದ್ಯ ಖರೀದಿ ಮಾಡಿ ಇಟ್ಟಿಕೊಳ್ಳುತ್ತಾರೆ. ಆ ಮೇಲೆ ಬ್ಲಾಕ್‍ನಲ್ಲಿ ಎಣ್ಣೆಯನ್ನು ಮಾರಿ ಹಣ ಮಾಡುತ್ತಾರೆ. ಮೊದಲೇ ಮೂರ್ನಾಲ್ಕು ತಿಂಗಳಿಂದ ಕೆಲಸ ಇಲ್ಲ. ಹೀಗಾಗಿ ಬ್ಲಾಕ್‍ನಲ್ಲಿ ಮದ್ಯ ಖರೀದಿ ಮಾಡಲು ಸಾಧ್ಯವಿಲ್ಲ. ಕಳೆದ ಲಾಕ್‍ಡೌನ್‍ನಲ್ಲಿ ಹಿಂಗೆ ಮಾಡಿದ್ದರು. ಹೀಗಾಗಿ ಎಷ್ಟು ಬೇಕೋ ಅಷ್ಟು ಸ್ಟಾಕ್ ಮಾಡಿಕೊಳ್ಳುತ್ತಿದ್ದೀವಿ ಎಂದು ಮದ್ಯ ಖರೀದಿಗೆ ಬಂದ ಗ್ರಾಹಕರು ಹೇಳಿದ್ದಾರೆ.

    ದಿನಸಿಗಾಗಿ ಜನರ ಕ್ಯೂ:
    ಇತ್ತ ಜನರ ಲಾಕ್‍ಡೌನ್ ಭಯದಿಂದ ದಿನಸಿ ಸ್ಟಾಕ್ ಮಾಡಿಕೊಳ್ಳಲು ಮುಂದಾಗಿದ್ದು, ಅತ್ಯಗತ್ಯ ದಿನಸಿ ಖರೀದಿಗಾಗಿ ಜನರು ಕ್ಯೂನಲ್ಲಿ ನಿಂತಿದ್ದಾರೆ. ಟೋಲ್ ಗೇಟ್ ಡಿ ಮಾರ್ಟ್ ಮುಂದೆ ಕಿಲೋ ಮೀಟರ್‌ಗಟ್ಟಲೇ ದಿನಸಿಗಾಗಿ ಜನರು ಕ್ಯೂ ನಿಂತಿದ್ದಾರೆ. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಜನರು ದಿನಸಿ ಖರೀದಿ ಮಾಡುತ್ತಿದ್ದಾರೆ.

    ಇನ್ನೂ ಒಂದು ವಾರ ಲಾಕ್‍ಡೌನ್ ಹಿನ್ನೆಲೆಯಲ್ಲಿ ಬ್ಯಾಂಕ್ ಮತ್ತು ಎಟಿಎಂಗಳ ಮುಂಭಾಗ ಫುಲ್ ಕ್ಯೂ ನಿಂತಿದ್ದಾರೆ. ಬನಶಂಕರಿ ಬ್ಯಾಂಕ್‍ನ ಮುಂಭಾಗ ಜನರು ನಿಂತಿದ್ದು, ಲಾಕ್‍ಡೌನ್ ಇರುವುದರಿಂದ ಬ್ಯಾಂಕ್‍ಗಳಲ್ಲಿ ತುರ್ತು ಕಾರ್ಯ ಮುಗಿಸಿಕೊಳ್ಳುತ್ತಿದ್ದಾರೆ. ಇತ್ತ ಎಟಿಎಂಗಳ ಮುಂದೆಯೂ ಸಾಮಾಜಿಕ ಅಂತರ ಕಾಯ್ದುಕೊಂಡು ಜನರು ಸಾಲಾಗಿ ನಿಂತಿದ್ದಾರೆ.

  • ಸರದಿಯಲ್ಲಿ ಚಪ್ಪಲಿ ಇಟ್ಟು ಗುಂಪುಗೂಡಿ ನಿಂತ ಮದ್ಯ ಪ್ರಿಯರು

    ಸರದಿಯಲ್ಲಿ ಚಪ್ಪಲಿ ಇಟ್ಟು ಗುಂಪುಗೂಡಿ ನಿಂತ ಮದ್ಯ ಪ್ರಿಯರು

    – ಎಣ್ಣೆಗಾಗಿ 1 ಕಿ.ಮೀ.ಗಟ್ಟಲೇ ಕ್ಯೂ
    – ಮದ್ಯದಂಗಡಿಗೆ ದಿನಕ್ಕೆ 500 ಟೋಕನ್ ಮಾತ್ರ

    ಚೆನ್ನೈ: ಸುಪ್ರೀಂಕೋರ್ಟ್ ಮದ್ರಾಸ್ ಹೈಕೋರ್ಟ್ ಆದೇಶವನ್ನು ತಡೆಹಿಡಿದ ಬೆನ್ನಲ್ಲೇ ತಮಿಳುನಾಡು ಸರ್ಕಾರವು ಮದ್ಯದಂಗಡಿಯನ್ನು ಮತ್ತೆ ಓವನ್ ಮಾಡಲು ಆದೇಶ ಹೊರಡಿಸಿದೆ. ಇದರಿಂದಾಗಿ ಫುಲ್ ಖುಷಿಯಾದ ಮದ್ಯ ಪ್ರಿಯರು ಕಿ.ಮೀ.ಗಟ್ಟಲೇ ಕ್ಯೂ ನಿಂತು ಎಣ್ಣೆ ಖರೀದಿಸಿದ್ದಾರೆ. ಕೆಲವಡೆ ಸರದಿಯಲ್ಲಿ ನಿಲ್ಲುವ ಬದಲು ಸಾಲಿನಲ್ಲಿ ಚಪ್ಪಲಿ ಇಟ್ಟು ಗುಂಪುಗೂಡಿ ನಿಂತ ದೃಶ್ಯಗಳು ಕಂಡು ಬಂದವು.

    ತಮಿಳುನಾಡಿನಲ್ಲಿ ಸರ್ಕಾರಿ ಮದ್ಯದಂಗಡಿಗಳನ್ನು ಮುಚ್ಚುವಂತೆ ನಿರ್ದೇಶಿಸಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿತ್ತು. ಹೀಗಾಗಿ ರಾಜ್ಯ ಸರ್ಕಾರವು ಇಂದಿನಿಂದ ಸರ್ಕಾರಿ ಸ್ವಾಮ್ಯದ ತಮಿಳುನಾಡು ರಾಜ್ಯ ಮಾರ್ಕೆಟಿಂಗ್ ಕಾರ್ಪೊರೇಷನ್ (ಟ್ಯಾಸ್ಮಾಕ್) ಮದ್ಯದಂಗಡಿಗಳನ್ನು ಮತ್ತೆ ತೆರೆಯುವ ಆದೇಶವನ್ನು ಶುಕ್ರವಾರ ನೀಡಿತ್ತು. ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಆದರೆ ಚೆನ್ನೈ, ತಿರುವಳ್ಳೂರು, ಮಾಲ್‍ಗಳು ಮತ್ತು ಕಂಟೈನ್‍ಮೆಂಟ್ ವಲಯಗಳಲ್ಲಿ ಮದ್ಯ ಮಾರಾಟವನ್ನು ತಮಿಳುನಾಡು ನಿರ್ಬಂಧಿಸಿದೆ.

    ಮದ್ಯದಂಡಿಗಳನ್ನು ತೆರೆಲು ಸರ್ಕಾರ ಆದೇಶ ನೀಡುತ್ತಿದ್ದಂತೆ ಎಣ್ಣೆ ಪ್ರಿಯರು ಫುಲ್ ಖುಷ್ ಆಗಿದ್ದರು. ಇಂದು ಮದ್ಯದಂಗಡಿ ತೆರೆಯುವುದಕ್ಕೂ ಮುನ್ನವೇ ಕುಡುಕರು ಕಿ.ಮೀ.ಗಟ್ಟಲೇ ಕ್ಯೂ ನಿಂತಿದ್ದಾರೆ. ಬಿರು ಬಿಸಿಲಿನಲ್ಲಿ ನಿಲ್ಲಲು ಸಾಧ್ಯವಾಗದೆ ಕೆಲವೆಡೆ ಸರದಿ ಸಾಲಿನಲ್ಲಿ ಚಪ್ಪಲಿ ಬಿಟ್ಟು ಗುಂಪುಗೂಡಿ ನೆರಳಿನಲ್ಲಿ ನಿಂತಿರುವ ದೃಶ್ಯಗಳು ಸಾಮಾನ್ಯವಾಗಿವೆ.

    ತಮಿಳುನಾಡು ಸರ್ಕಾರದ ಆದೇಶದ ಪ್ರಕಾರ, ಮದ್ಯದಂಗಡಿ ಮಾರಾಟಗಾರರು ಟೋಕನ್ ವ್ಯವಸ್ಥೆಯನ್ನು ಅನುಸರಿಸಬೇಕಾಗುತ್ತದೆ. ನಿರ್ದಿಷ್ಟ ಅಂಗಡಿಗೆ ಪ್ರತಿದಿನ 500 ಟೋಕನ್‍ಗಳನ್ನು ಮಾತ್ರ ನೀಡಲಾಗುತ್ತದೆ. ಮದ್ಯವನ್ನು ಖರೀದಿಸಲು ಬಯಸುವ ಜನರು ಮಾಸ್ಕ್ ಧರಿಸವು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್-19 ಹರಡದಂತೆ ಎಲ್ಲಾ ನಿಯಮಗಳನ್ನು ಅನುಸರಿಸಲು ಬದ್ಧರಾಗಿರಬೇಕು.

    ಕೋವಿಡ್-19 ಹರಡದಂತೆ ಘೋಷಿಸಲಾದ ನಿಯಮಗಳನ್ನು ಮದ್ಯ ಖರೀದಿಯ ವೇಳೆ ಉಲ್ಲಂಘಿಸಲಾಗುತ್ತಿದೆ ಎಂದು ಮದ್ರಾಸ್ ಹೈಕೋರ್ಟ್ ಮದ್ಯದಂಗಡಿಗಳನ್ನು ಮುಚ್ಚಲು ಆದೇಶಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಟ್ಯಾಸ್ಮಾಕ್ ಸಂಸ್ಥೆ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಸುಪ್ರೀಂಕೋರ್ಟ್ ನ್ಯಾಯಾಧೀಶರಾದ ಎಲ್.ನಾಗೇಶ್ವರ ರಾವ್, ಸಂಜಯ್ ಕಿಶನ್ ಕೌಲ್ ಮತ್ತು ಬಿ.ಆರ್.ಗವಾಯಿ ಅವರ ನೇತೃತ್ವದ ನ್ಯಾಯಪೀಠವು ಶುಕ್ರವಾರ ಮದ್ರಾಸ್ ಹೈಕೋರ್ಟ್ ಆದೇಶವನ್ನು ತಡೆಯಿತು. ಈ ಮೂಲಕ ತಮಿಳುನಾಡಿನಲ್ಲಿ ಸರ್ಕಾರಿ ಸ್ವಾಮ್ಯದ ಮದ್ಯ ಮಾರಾಟವನ್ನು ಪುನಃ ತೆರೆಯಲು ದಾರಿ ಮಾಡಿಕೊಟ್ಟಿದೆ.

  • ಮಧ್ಯ ರಾತ್ರಿಯಾದ್ರೂ ಬ್ಯಾಂಕ್‍ಗಳ ಮುಂದೆ ಕ್ಯೂ ನಿಂತ ಜನ

    ಮಧ್ಯ ರಾತ್ರಿಯಾದ್ರೂ ಬ್ಯಾಂಕ್‍ಗಳ ಮುಂದೆ ಕ್ಯೂ ನಿಂತ ಜನ

    ಚಾಮರಾಜನಗರ: ದೇಶದಲ್ಲಿ ನೋಟ್ ಬ್ಯಾನ್ ಆದ ಸಂದರ್ಭದಲ್ಲಿ ಜನ ತಮ್ಮ ಹಳೆ ನೋಟುಗಳನ್ನು ಕೊಟ್ಟು ಹೊಸ ನೋಟ್ ಪಡೆಯಲು ರಾತ್ರಿ ಇಡೀ ಸರದಿ ಸಾಲಿನಲ್ಲಿ ನಿಲ್ಲುತ್ತಿದ್ದರು. ಆದರೆ ಇದೀಗ ಚಾಮರಾಜನಗರದಲ್ಲಿ ಮಧ್ಯ ರಾತ್ರಿಯಾದರೂ ಬ್ಯಾಂಕ್‍ಗಳ ಮುಂದೆ ಜನರು ಸಾಲುಗಟ್ಟಿ ನಿಲ್ಲುತ್ತಿದ್ದಾರೆ.

    ದೇಶದ ಪ್ರಜೆ ಎಂದು ಗುರುತಿಸುವ ಆಧಾರ್ ಕಾರ್ಡ್ ನ ಲೋಪ ದೋಷಗಳನ್ನು ಸರಿಪಡಿಸಿಕೊಳ್ಳುವ ಉದ್ದೇಶದಿಂದ ಹಾಗೂ ರೇಷನ್ ಕಾರ್ಡ್ ಗೆ ಹೆಬ್ಬೆರಳು ಗುರುತು ನೀಡಲು ಇಲ್ಲಿನ ಜನರು ಬ್ಯಾಂಕ್‍ಗಳ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ. ಇದಲ್ಲದೆ ಇಡೀ ದಿನ ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಜನರು ಬ್ಯಾಂಕ್‍ಗಳನ್ನು ಕಾಯುವ ಕಾಯಕದಲ್ಲಿ ಇದ್ದಾರೆ. ಚಾಮರಾಜನಗರ ಪಟ್ಟಣ ಸೇರಿದಂತೆ ಜಿಲ್ಲೆಯ ಗುಂಡ್ಲುಪೇಟೆ, ಕೊಳ್ಳೆಗಾಲ, ಹನೂರು, ಯಳಂದೂರು ತಾಲೂಕಿನಲ್ಲೂ ಇದೆ ಪರಿಸ್ಥಿತಿ ನಿರ್ಮಾಣವಾಗಿದೆ.

    ಜನರು ರಾತ್ರಿ ಇಡೀ ಕ್ಯೂನಲ್ಲಿ ನಿಲ್ಲಲು ಕೇಂದ್ರ ಸರ್ಕಾರದ ನಿಯಮವೇ ಕಾರಣವಾಗಿದೆ. ಈ ಆಧಾರ್ ಕಾರ್ಡ್ ಎಡಿಟ್ ಮಾಡಲು ಮತ್ತು ರೇಷನ್ ಕಾರ್ಡ್ ಗೆ ಹೆಬ್ಬೆಟ್ಟು ಗುರುತು ನೀಡಲು ತಾಲೂಕುಗಳ ಮಿನಿ ವಿಧಾನ ಸೌಧ ಹಾಗೂ ಕೆಲವೇ ಕೆಲವು ಬ್ಯಾಂಕ್‍ಗಳನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡಿಕೊಂಡಿದೆ. ಆದರೂ ಕೂಡ ಒಂದು ಕಡೆ ಪ್ರತಿ ದಿನ 20 ಆಧಾರ್ ಕಾರ್ಡನ್ನು ಎಡಿಟ್ ಮಾಡಲು ಸಾಧ್ಯವಾಗುತ್ತಿದೆ. ಹೀಗಾಗಿ ಹೆಚ್ಚು ಹೆಚ್ಚು ಜನರ ಆಧಾರ್ ಕಾರ್ಡ್ ಎಡಿಟ್ ಮಾಡಿಸಲು ಮತ್ತು ಹೆಬ್ಬೆಟ್ಟು ಗುರುತು ನೀಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಜನರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಜನರು ತಮ್ಮ ಹಕ್ಕನ್ನು ಬಳಕೆ ಮಾಡಿಕೊಳ್ಳಲು ರಾತ್ರಿ ಇಡೀ ಬ್ಯಾಂಕ್‍ಗಳನ್ನು ಕಾಯುವ ಸ್ಥಿತಿ ನಿರ್ಮಾಣವಾಗಿದೆ ಎಂದು ಬ್ಯಾಂಕ್ ಮುಂದೆ ಕುಳಿತ ತಾಯಿಬಾಯಿ ಹೇಳಿದ್ದಾರೆ.

    ಕೇಂದ್ರ ಸರ್ಕಾರ ಜನರ ಕಷ್ಟಗಳನ್ನು ಅರಿತು ಜಿಲ್ಲೆ ಹಾಗೂ ತಾಲೂಕು ಕೇಂದ್ರದಲ್ಲಿ ಆಧಾರ್ ಎಡಿಟ್ ಹಾಗೂ ರೇಶನ್ ಕಾರ್ಡ್ ಹೆಬ್ಬೆಟ್ಟು ಮಾಡುವ ಕೇಂದ್ರಗಳನ್ನು ತೆರೆದು ಜನರಿಗೆ ಅನುಕೂಲ ಮಾಡಿಕೊಡಬೇಕು ಎನ್ನುವುದೇ ಸಾರ್ವಜನಿಕರ ಆಗ್ರಹವಾಗಿದೆ.

  • ನಿಮ್ಮ ಯೋಗ್ಯತೆಗೆ 30 ಕುರ್ಚಿ ಹಾಕಕ್ಕೆ ಆಗಲ್ವಾ – ಕ್ಯೂ ನಿಂತಿದ್ದ ಗರ್ಭಿಣಿಯರನ್ನ ನೋಡಿ ಸಚಿವರ ತರಾಟೆ

    ನಿಮ್ಮ ಯೋಗ್ಯತೆಗೆ 30 ಕುರ್ಚಿ ಹಾಕಕ್ಕೆ ಆಗಲ್ವಾ – ಕ್ಯೂ ನಿಂತಿದ್ದ ಗರ್ಭಿಣಿಯರನ್ನ ನೋಡಿ ಸಚಿವರ ತರಾಟೆ

    ಬೀದರ್: ಸ್ಕ್ಯಾನಿಂಗ್ ಗಾಗಿ ಎರಡು ಗಂಟೆಗಳಿಂದ ಕ್ಯೂನಲ್ಲಿ ನಿಂತಿರುವ ಗರ್ಭಿಣಿಯರು ಹಾಗೂ ರೋಗಿಗಳನ್ನು ನೋಡಿ ಕೆಂಡಾಮಂಡಲರಾದ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ್ ಬ್ರಿಮ್ಸ್ ನಿರ್ದೇಶಕರಿಗೆ ಫುಲ್ ತರಾಟೆ ತೆಗೆದುಕೊಂಡು ಘಟನೆ ನಡೆದಿದೆ.

    ಕ್ಯೂನಲ್ಲಿ ನಿಂತಿರುವ ಗರ್ಭಿಣಿಯರಿಗೆ ನಿಮ್ಮ ಯೋಗ್ಯತೆಗೆ 30 ಕುರ್ಚಿ ಹಾಕುವುದಕ್ಕೆ ಆಗಲ್ವಾ. ಗರ್ಭಿಣಿಯರು ಬೆಳಗ್ಗೆಯಿಂದಲೂ ನಿಂತಿದ್ದರು ಕುರ್ಚಿ ಹಾಕಲು ನಿಮ್ಮ ಬಳಿ ಹಣ ಇಲ್ವಾ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಬ್ರಿಮ್ಸ್ ನಿರ್ದೇಶಕರಿಗೆ ರೋಗಿಗಳ ಮುಂದೆಯೇ ಫಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಸಚಿವರು ಗರಂ ಆದ ತಕ್ಷಣ ಬ್ರಿಮ್ಸ್ ನಿರ್ದೇಶಕ ಕ್ಷೀರಸಾಗರ ಇನ್ನು ಟೆಂಡರ್ ಆಗಬೇಕು ಸರ್ ಎಂದಿದ್ದಾರೆ. ಅದಕ್ಕೆ ಸಚಿವರು ಟೆಂಡರ್ ಬಿಡ್ರೀ ಒಂದು ಗಂಟೆಯಲ್ಲಿ ಇಲ್ಲಿ ಕುರ್ಚಿ ಹಾಕಬೇಕು ಎಂದು ಸಚಿವರು ತಾಕೀತು ಮಾಡಿದ್ದಾರೆ. ಬೆಳಗ್ಗೆಯಿಂದ ನಾವು ಸ್ಕ್ಯಾನಿಂಗ್‍ಗಾಗಿ ಕ್ಯೂ ನಿಂತಿದ್ದೇವೆ. ನಮಗೆ ಹೋಗಲಿ ಗರ್ಭಿಣಿಯರು ಕ್ಯೂನಲ್ಲಿ ನಿಂತರೂ ಆರೋಗ್ಯ ಅಧಿಕಾರಿ ಸ್ಕ್ಯಾನಿಂಗ್ ಮಾಡಲು ರೆಡಿ ಇಲ್ಲಾ ಎಂದು ರೋಗಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.