Tag: ಕ್ರಸ್ಟ್‌ ಗೇಟ್‌

  • ತುಂಗಭದ್ರಾ ಡ್ಯಾಂನ 8 ಗೇಟ್ ಜಾಮ್,  ಮೇಲೆತ್ತಲು ಸಾಧ್ಯವಾಗುತ್ತಿಲ್ಲ: ಶಿವರಾಜ ತಂಗಡಗಿ

    ತುಂಗಭದ್ರಾ ಡ್ಯಾಂನ 8 ಗೇಟ್ ಜಾಮ್, ಮೇಲೆತ್ತಲು ಸಾಧ್ಯವಾಗುತ್ತಿಲ್ಲ: ಶಿವರಾಜ ತಂಗಡಗಿ

    – ಇದೇ ವರ್ಷದಿಂದ ಡ್ಯಾಂ ಗೇಟ್ ಅಳವಡಿಕೆಗೆ ಚಿಂತನೆ

    ಕೊಪ್ಪಳ: ಕಳೆದ ವರ್ಷ ಕಿತ್ತು ಹೋಗಿದ್ದ ತುಂಗಭದ್ರಾ ಜಲಾಶಯದ (Tungabhadra Dam) 19ನೇ ಗೇಟ್ ಸೇರಿ ಒಟ್ಟು 8 ಕ್ರಸ್ಟ್‌ ಗೇಟ್ (Crest Gate) ನಿಷ್ಕ್ರಿಯಗೊಂಡಿದ್ದು, ಮೇಲೆ ಎತ್ತಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಸಂಗ್ರಹ ಸಾಮರ್ಥ್ಯವನ್ನು ಕೇವಲ 80 ಟಿಎಂಸಿಗೆ ಇಳಿಕೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್‌ ತಂಗಡಗಿ (Shivaraj Tangadagi) ಹೇಳಿದರು.

    ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

    ತುಂಗಭದ್ರಾ ಜಲಾಶಯದ 11, 18, 20, 24, 27 ಮತ್ತು 28 ಕ್ರಸ್ಟ್ ಗೇಟ್ ಸಂಪೂರ್ಣವಾಗಿ ಜಾಮ್ ಆಗಿದ್ದು, ಮೇಲಕ್ಕೆ ಎತ್ತಲು ಆಗುತ್ತಿಲ್ಲ. ಈ ಎಲ್ಲಾ ಗೇಟ್‌ಗಳು ಅಲ್ಲಿ ಬೆಂಡ್ ಆಗಿದ್ದರಿಂದ ಚೈನ್ ಮೂಲಕ ಗೇಟ್ ಮೇಲೆ ಎತ್ತಲು ಸಾಧ್ಯವಾಗುತ್ತಿಲ್ಲ. ಜೊತೆಗೆ 4ನೇ ಕ್ರಸ್ಟ್‌ ಗೇಟ್ ಕೇವಲ 2 ಫೀಟ್ ಮಾತ್ರ ಮೇಲೆ ಎತ್ತಲು ಸಾಧ್ಯವಾಗುತ್ತಿದೆ. ಇದರಿಂದ ಜಲಾಶಯದ ಒಟ್ಟು 8 ಕ್ರಸ್ಟ್‌ ಗೇಟ್ ಗೆ ಚಲನೆ ಇಲ್ಲದಂತಾಗಿದೆ. ಈ ಕಾರಣಕ್ಕೆ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಸಂಗ್ರಹ ಸಾಮರ್ಥ್ಯವನ್ನು ಕೇವಲ 80 ಟಿಎಂಸಿಗೆ ಇಳಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

    ಜಲಾಶಯ ಒಟ್ಟು 105 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಡ್ಯಾಂ ಭರ್ತಿ ಮಾಡಿದರೆ ಮುಂದೆ ಸಾಕಷ್ಟು ಸವಾಲು ಎದುರಾಗುವ ಸಾಧ್ಯತೆ ಇದೆ. ಒಂದೊಮ್ಮೆ ಏಕಾಏಕಿ 1.50 ಲಕ್ಷ ಕ್ಯೂಸೆಕ್ ಒಳಹರಿವು ಹರಿದು ಬಂದರೆ, ಅದೇ ಪ್ರಮಾಣದ ನೀರನ್ನು ಎಲ್ಲ ಗೇಟ್ ಎತ್ತರಿಸುವ ಮೂಲಕ ನದಿಗೆ ಬಿಡ ಬೇಕಾಗುತ್ತದೆ. ಆದರೆ, ಸುಮಾರು 8 ಕ್ರಸ್ಟ್‌ ಗೇಟ್ ಗಳು ಸದ್ಯಕ್ಕೆ ಎತ್ತಲು ಸಾಧ್ಯವಿಲ್ಲದ ಸ್ಥಿತಿ ತಲುಪಿವೆ. ಹೀಗಾದಾಗ ಡ್ಯಾಂ ಭರ್ತಿ ಮಾಡುವುದು ಸರಿಯಲ್ಲ ಎಂಬ ತಜ್ಞರ ಸಲಹೆಯಂತೆ ಸಂಗ್ರಹ ಸಾಮರ್ಥ್ಯ ಕೇವಲ 80 ಟಿಎಂಸಿಗೆ ಇಳಿಕೆ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬನ್ನೇರುಘಟ್ಟ ಸಫಾರಿ ವೇಳೆ ಬೊಲೆರೋ ಹಿಂಬಾಲಿಸಿ ಬಾಲಕನ ಮೇಲೆ ಚಿರತೆ ದಾಳಿ

    ಮೊದಲಿಗೆ ಎಲ್ಲಾ 33 ಕ್ರಸ್ಟ್‌ ಗೇಟ್ ನಿರ್ಮಾಣಕ್ಕೆ ಒಂದೇ ಟೆಂಡರ್ ಕರೆಯಲಾಗಿತ್ತು. ಆದರೆ ಯಾವುದೇ ಕಂಪನಿ ಟೆಂಡರ್‌ನಲ್ಲಿ ಭಾಗವಹಿಸಲಿಲ್ಲ. ಇದೀಗ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಎಲ್ಲ ಗೇಟ್ ಅಳವಡಿಕೆಗೆ ಕನಿಷ್ಠ 8 ತಿಂಗಳು ಸಮಯವನ್ನು ಕಂಪನಿ ಕೇಳಿದೆ. ರೈತರೊಂದಿಗೆ ಚರ್ಚೆ ಮಾಡಿ, ಈ ಬಾರಿ ಒಂದು ಬೆಳೆಯ ನಂತರ ಎಲ್ಲ ನೀರು ಹೊರಗೆ ಬಿಟ್ಟು ಗೇಟ್ ಅಳವಡಿಕೆ ಕೆಲಸ ಶುರು ಮಾಡಬೇಕು ಎಂಬ ಚಿಂತನೆ ಇದೆ. ಈ ಬಗ್ಗೆ ರೈತರೊಂದಿಗೆ ಚರ್ಚೆ ಮಾಡಿ ಕ್ರಮ ವಹಿಸಲಾಗುವುದು ಎಂದರು.

    ಜಿಲ್ಲೆಯಲ್ಲಿ ಯೂರಿಯಾ ಕೊರತೆ ಸಂಪೂರ್ಣವಾಗಿ ನೀಗಿಸಲಾಗಿದೆ. ಸದ್ಯ ಯೂರಿಯಾ ಎಲ್ಲರಿಗೂ ಸಿಗುವಂತೆ ಮಾಡಿದ್ದೇವೆ. ಜೊತೆಗೆ ಸುಮಾರು 2,365 ಟನ್ ದಾಸ್ತಾನು ಉಳಿಸಿಕೊಂಡಿದ್ದೇವೆ. ಜಿಲ್ಲೆಯಲ್ಲಿ ಯಾವುದೇ ತೊಂದರೆ ಆಗದಂತೆ ಯೂರಿಯಾ ಪೂರೈಕೆ ಮಾಡುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿದರು.

    ಕೊಪ್ಪಳದಲ್ಲಿ ಕೊಲೆಯಾದ ಗವಿಸಿದ್ಧಪ್ಪ ನಾಯಕ ಕೊಲೆ ಪ್ರಕರಣದಲ್ಲಿ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ಕೊಪ್ಪಳ ಪೊಲೀಸರು ಎಲ್ಲ ಆರೋಪಿ ಗಳನ್ನು ಬಂಧಿಸಿದ್ದಾರೆ. ಮೃತನ ತಾಯಿ ದೂರಿನ ಹಿನ್ನೆಲೆ ಘಟನೆಗೆ ಕಾರಣರಾದ ಬಾಲಕಿಯನ್ನು ವಿಚಾರಣೆ ಮಾಡಲಾಗಿದೆ. ‌ಸತ್ತ ಮನೆಯಲ್ಲಿ ರಾಜಕಾರಣ ಮಾಡುವುದು ಬಿಜೆಪಿಗೆ ಹೊಸದಲ್ಲ. ಸತ್ತ ಮನೆಯಲ್ಲಿ ರಾಜಕೀಯ ಮಾಡುವುದಕ್ಕಿಂತ ಸಾತ್ವನ ಹೇಳಬೇಕು. ಇದನ್ನು ಬಿಜೆಪಿ ಮುಖಂಡರು ಕಲಿಯಲಿ ಎಂದು ತಿರುಗೇಟು ನೀಡಿದರು.

  • ಕೆಆರ್‌ಎಸ್ ಡ್ಯಾಂನ ಹಳೆಯ ಕ್ರಸ್ಟ್‌ಗೇಟ್‌ ಮಾರಾಟ ಮಾಡಲು ಹುನ್ನಾರ

    ಕೆಆರ್‌ಎಸ್ ಡ್ಯಾಂನ ಹಳೆಯ ಕ್ರಸ್ಟ್‌ಗೇಟ್‌ ಮಾರಾಟ ಮಾಡಲು ಹುನ್ನಾರ

    ಮಂಡ್ಯ: ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ನಿರ್ಮಾಣವಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ (KRS Dam) 150 ಕ್ರಸ್ಟ್ ಗೇಟ್‌ಗಳನ್ನು (Crust Gate) ಬದಲು ಮಾಡಲಾಗಿದೆ. ಇದೀಗ ಈ ಹಳೆಯ ಗೇಟ್‌ಗಳನ್ನು ತೂಕದ ಲೆಕ್ಕದಲ್ಲಿ ಮಾರಾಟ ಮಾಡುವ ಹುನ್ನಾರ ಸದ್ದಿಲ್ಲದೆ ನಡೆಯುತ್ತಿದೆ.

    ಈ 150 ಕ್ರಸ್ಟ್ ಗೇಟ್‌ಗಳ ಪೈಕಿ ಒಂದೊಂದು ಗೇಟ್‌ಗಳು ಸುಮಾರು 650 ಟನ್ ತೂಕ ಬರುತ್ತವೆ. ಇದೀಗ ಒಂದು ಕೆಜಿಗೆ 6 ರೂ.ನಂತೆ 36 ಗೇಟ್‌ಗಳನ್ನು 36 ಲಕ್ಷ ರೂ.ಗೆ ಮಾರಾಟ ಮಾಡುವ ಪ್ರಯತ್ನ ನಡೆದಿದೆ. ಆದ್ರೆ ಈ 36 ಗೇಟ್‌ಗಳ ಮೌಲ್ಯ ಸುಮಾರು 3 ಕೋಟಿ ರೂ.ಗಳಷ್ಟಾಗಲಿದೆ ಎಂದು ಅಂದಾಜಿಸಲಾಗಿದೆ. ಹಾಗಾಗಿ 90 ವರ್ಷದ ಹಳೆಯ ಗೇಟ್‌ಗಳನ್ನು ಮಾರಿ ಕೋಟ್ಯಂತರ ರೂ.ಗಳನ್ನ ಗುಳಂ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ ಎಂಬ ಸ್ಥಳೀಯರು ಹಾಗೂ ರೈತರಿಂದ (Farmers) ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ದಶಕಗಳ ಬಳಿಕ ಅಪ್ಪಳಿಸಿದ ಭೀಕರ ಪ್ರವಾಹಕ್ಕೆ ಸ್ಪೇನ್‌ ತತ್ತರ – ಸಾವಿನ ಸಂಖ್ಯೆ 205ಕ್ಕೆ ಏರಿಕೆ

    ಹಲವು ಕಡೆ ಮೊದಲು ಡ್ಯಾಂನ ಗೇಟ್‌ಗಳು ಸೋರಿಕೆಯಾಗುತ್ತಿದ್ದ ಕಾರಣ ಕಳೆದ ಬಿಜೆಪಿ‌ ಸರ್ಕಾರ ಸಂಪೂರ್ಣವಾಗಿ 150 ಕ್ರಸ್ಟ್‌ ಗೇಟ್‌ಗಳನ್ನು ಬದಲು ಮಾಡಲು ಮುಂದಾಗಿತ್ತು. ಸದ್ಯ ಹೀಗಾಗಲೇ ಈ ಕಾಮಗಾರಿ ಮುಕ್ತಾಯದ ಅಂಚಿನಲ್ಲಿ ಇದ್ದು, ಹಳೆ‌ಯ ಗೇಟ್‌ಗಳನ್ನು ಮಾರುವ ಹುನ್ನಾರ ಮಾಡಲಾಗುತ್ತಿದೆ.‌ ಇದಕ್ಕೆ ರೈತರು ಹಾಗೂ ಪ್ರಗತಿಪರರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ದರ್ಶನ್ ಎಡಗಾಲಿಗೂ ಸಮಸ್ಯೆ – ಫಿಜಿಯೋಥೆರಪಿನಾ? ಆಪರೇಷನ್‌ನಾ?

    ಹಳೆಯ ಗೇಟ್‌ಗಳನ್ನು ಮಾರಾಟ ಮಾಡುವ ಬದಲು ಬೃಂದಾವನದ ವ್ಯಾಪ್ತಿಯಲ್ಲಿ ಒಂದು ಮ್ಯೂಸಿಯಂ ಮಾಡಬೇಕು. ಆ ಮ್ಯೂಸಿಯಂನಲ್ಲಿ ಕನ್ನಂಬಾಡಿ ಕಟ್ಟೆ ಕಟ್ಟಿದ ಬಗೆ ಹಾಗೂ ಆ ಸಂದರ್ಭದಲ್ಲಿ ನಡೆದ ಘಟನಾವಳಿಗಳನ್ನು ವಿವರಿಸಬೇಕು. ಜೊತೆಗೆ ಈ 150 ಕ್ರಸ್ಟ್‌ಗಳನ್ನು ಅಲ್ಲಿಟ್ಟು, ಇಷ್ಟೊಂದು ಬೃಹತ್ ಗೇಟ್‌ಗಳನ್ನು ಯಂತ್ರಗಳ ಸಹಾಯವಿಲ್ಲದೇ ಹೇಗೆ ನಿರ್ಮಾಣ ಮಾಡಿದರು ಎಂಬುದನ್ನು ಜನರಿಗೆ ತೋರಿಸಬೇಕು. ಒಂದು ವೇಳೆ ವಿರೋಧದ ನಡೆವೆಯೇ ಗೇಟ್‌ಗಳನ್ನು ಮಾರಾಟ ಮಾಡಲು ಮುಂದಾದರೆ ರೈತ ಸಂಘ ಹೋರಾಟ ಮಾಡುವುದಾಗಿ ರೈತ ಸಂಘದ ಕೆಂಪೂಗೌಡ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ರಾಯಚೂರು| ಪಟಾಕಿ ಕಿಡಿ ತಗುಲಿ ಅಂಗಡಿಗೆ ಬೆಂಕಿ – ಅಂಗಡಿಯಲ್ಲಿದ್ದ ವಸ್ತುಗಳು ಭಸ್ಮ

  • ಟಿಬಿ ಡ್ಯಾಂ ಒಳಹರಿವು ಹೆಚ್ಚಳ – 4 ದಿನಗಳಲ್ಲಿ ಹರಿದು ಬಂತು 7 ಟಿಎಂಸಿ ನೀರು

    ಟಿಬಿ ಡ್ಯಾಂ ಒಳಹರಿವು ಹೆಚ್ಚಳ – 4 ದಿನಗಳಲ್ಲಿ ಹರಿದು ಬಂತು 7 ಟಿಎಂಸಿ ನೀರು

    ಕೊಪ್ಪಳ: ತುಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟಗೇಟ್ (Crest Gate) ಕೊಚ್ಚಿಕೊಂಡು ಹೋಗಿದ್ದು ದೊಡ್ಡ ಮಟ್ಟದ ಆತಂಕವನ್ನು ಹೆಚ್ಚಿಸಿತ್ತು. ಆದರೆ ವಾರದ ನಂತರ ಜಲಾಶಯಕ್ಕೆ ಸ್ಟಾಪ್ ಲಾಗ್‌ಗೇಟ್ ಅಳವಡಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದರು. ಸದ್ಯ ಡ್ಯಾಂ ಗೆ ಒಳಹರಿವು ಹೆಚ್ಚಾಗ್ತಿದ್ದು, ಕಳೆದ 4 ದಿನಗಳಲ್ಲಿ 7 ಟಿಎಂಸಿ ನೀರು ಹರಿದು ಬಂದಿದೆ. ಮತ್ತೊಮ್ಮೆ ಡ್ಯಾಂ ತುಂಬುವ ಭರವಸೆ ಮೂಡಿದೆ.

    ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ಜಲಾಶಯದಿಂದ ಒಂದೇ ವಾರದಲ್ಲಿ 41 ಟಿಎಂಸಿಗೂ ಹೆಚ್ಚು ನೀರು ವ್ಯರ್ಥವಾಗಿ ಹರಿದು ಹೋಗಿತ್ತು. ಸತತ ಶ್ರಮದಿಂದ ಸ್ಟಾಪ್‌ಲಾಗ್ ಗೇಟ್‌ನ ಐದು ಎಲಿಮೆಂಟ್‌ಗಳನ್ನು ಅಳವಡಿಸಿ, ಹರಿಯುವ ನೀರನ್ನು ತಡೆಯುವಲ್ಲಿ ಗೇಟ್ ನಿಪುಣ ಕನ್ನಯ್ಯ ನಾಯ್ಡು ಮತ್ತು ತಂಡ ಸಫಲವಾಗಿದೆ. ಡ್ಯಾಂ ನೀರು ಖಾಲಿಯಾಗುವ ಆತಂಕದಲ್ಲಿದ್ದ ಈ ಭಾಗದ ಜನರ ಆತಂಕವನ್ನು ದೂರ ಮಾಡಿದ್ದಾರೆ. ಸದ್ಯ ಒಳಹರಿವು ಹೆಚ್ಚಾಗಿದ್ದು ಜನರಲ್ಲಿ ಡ್ಯಾಂ ತುಂಬುವ ಆಶಾಭಾವನೆ ಮೂಡಿದೆ. ಇದನ್ನೂ ಓದಿ: ಮೀನು ಸಂಸ್ಕರಿಸಿ ಯಶಸ್ವಿ ಉದ್ಯಮಿಯಾದ ಕೊಡಗಿನ ಮಹಿಳೆ – PMFME ಯೋಜನೆಯ ಲಾಭ ನೀವೂ ಪಡೆಯಿರಿ!

    ಆಗಸ್ಟ್ 17 ರಂದು ಜಲಾಶಯದಲ್ಲಿ 71 ಟಿಎಂಸಿ ನೀರು ಇತ್ತು. ಆದರೆ ಕಳೆದ ನಾಲ್ಕು ದಿನಗಳಲ್ಲಿ ಪ್ರತಿ ದಿನ ಒಂದೂವರೆ ಟಿಎಂಸಿ ಅಷ್ಟು ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಇಂದು ಕೂಡ 31,033 ಕ್ಯೂಸೆಕ್‌ ನೀರು ಒಳ ಹರಿವು ಇದ್ದು, ಜಲಾಶಯದ ನೀರಿನ ಸಂಗ್ರಹ 78 ಟಿಎಂಸಿಗೆ ಹೆಚ್ಚಳವಾಗಿದೆ. ನಾಲ್ಕು ದಿನದಲ್ಲಿ ಏಳು ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ.

    ಜಲಾಶಯದ ಗೇಟ್ ಸಂಪೂರ್ಣವಾಗಿ ಬಂದ್ ಆಗಿರುವುದು ಒಂದು ಕಡೆ ಖುಷಿ ಹೆಚ್ಚಾದ್ರೆ ಇನ್ನೊಂದು ಕಡೆ ಮತ್ತೆ ಜಲಾಶಯಕ್ಕೆ ನೀರು ಬರುತ್ತಿರುವುದು ಜನರ ಸಂತಸವನ್ನು ಇಮ್ಮಡಿಗೊಳಿಸಿದೆ. ಇದನ್ನೂ ಓದಿ: ಅಂಗಡಿ ಬಳಿ ಕುಳಿತಿದ್ದ ಆರ್‌ಜೆಡಿ ನಾಯಕನ ಗುಂಡಿಕ್ಕಿ ಹತ್ಯೆ

     

    ಕ್ಯುಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
    ಕ್ಯೂಸೆಕ್ ಎಂಬುದು Cubic feet per Secondನ ಹ್ರಸ್ವರೂಪ ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯುಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯುಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯುಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.

  • Tungabhadra Dam | ನನ್ನ ಕಡೆಯಿಂದ ಪ್ರತಿ ಕಾರ್ಮಿಕನಿಗೆ 50 ಸಾವಿರ : ಜಮೀರ್‌ ಘೋಷಣೆ

    Tungabhadra Dam | ನನ್ನ ಕಡೆಯಿಂದ ಪ್ರತಿ ಕಾರ್ಮಿಕನಿಗೆ 50 ಸಾವಿರ : ಜಮೀರ್‌ ಘೋಷಣೆ

    ಬಳ್ಳಾರಿ: ತುಂಗಭದ್ರಾ ಜಲಾಶಯ (Tungabhadra Dam) ಸ್ಟಾಪ್‌ಲಾಗ್‌ ಗೇಟ್‌ ಅಳವಡಿಸುವ ಜಾಗಕ್ಕೆ ಇಂದು ವಿಜಯನಗರ ಉಸ್ತುವಾರಿ ಸಚಿವ ಜಮೀರ್‌ ಅಹ್ಮದ್‌ (Zameer Ahmad) ಭೇಟಿ ನೀಡಿ ಕೆಲಸಗಾರರ ಜೊತೆ ಮಾತನಾಡಿ ಧೈರ್ಯ ತುಂಬಿದ್ದಾರೆ.

    ಈ ವೇಳೆ ಮಾತನಾಡಿದ ಅವರು, ಧೈರ್ಯ ಕಳೆದುಕೊಳ್ಳದೇ ಕೆಲಸ ಮಾಡಿ. ನಾಳೆ ಗೇಟ್ ಕೂಡಿಸಿ ಕಾರ್ಯ ಯಶಸ್ವಿ ಮಾಡಿ. ನನ್ನ ಕಡೆಯಿಂದ ಪ್ರತಿ ಕಾರ್ಮಿಕನಿಗೆ 50 ಸಾವಿರ ರೂ. ಕೊಡುತ್ತೇನೆ. ಧೈರ್ಯವಾಗಿ ಕೆಲಸ ಮಾಡಿ ಎಂದು ಹೇಳಿದರು.

    ಸ್ಟಾಪ್ ಲಾಗ್ ಗೇಟ್ ಕೂರಿಸಲು ಕನ್ನಯ್ಯ ಮತ್ತು ತಂಡದ ಸದಸ್ಯರು ಇಂದು ಹರಸಾಹಸ ಪಟ್ಟಿದ್ದಾರೆ. ಸಚಿವ ಜಮೀರ್ ಅಹ್ಮದ್ 50 ಸಾವಿರ ರೂ. ಕೊಡುತ್ತೇನೆ ಎಂದಿದ್ದಕ್ಕೆ ಕಾರ್ಮಿಕರು ಸಂತಸಪಟ್ಟಿದ್ದಾರೆ. ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ – ಪತಿ, ಮಕ್ಕಳ ವಿರುದ್ಧ ಕೊಲೆ ಆರೋಪ

     

    ಶುಕ್ರವಾರ ಮತ್ತೆ ಪ್ರಯತ್ನ
    ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ ಗೇಟ್ ಕೊಚ್ಚಿ ಹೋಗಿ ಐದು ದಿನಗಳಾಗಿದೆ. ಅದರ ಜಾಗದಲ್ಲಿ ಇಂದು ತಾತ್ಕಾಲಿಕ ಗೇಟ್ ಕೂರಿಸುವ ಪ್ರಯತ್ನ ಫಲ ಕೊಡಲಿಲ್ಲ. ಗೇಟ್ ಎಲಿಮೆಂಟ್‌ನಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಗ್ಯಾರಂಟಿಗಳ ಭಾರದಿಂದ ಕಂಗೆಟ್ಟ ಸರ್ಕಾರ – ಶೀ‍ಘ್ರವೇ ಆಪರೇಷನ್ ಬಿಪಿಎಲ್ ಕಾರ್ಡ್‌

    ಶುಕ್ರವಾರ ಮತ್ತೊಮ್ಮೆ ಪ್ರಯತ್ನ ನಡೆಸಲಾಗುತ್ತದೆ. ಮೊದಲ ಎಲಿಮೆಂಟ್ ಅಳವಡಿಕೆ ಯಶಸ್ವಿಯಾದಲ್ಲಿ 25 ಟಿಎಂಸಿ ನೀರು ಜಲಾಶಯದಿಂದ ಹೊರಹೋಗುವುದನ್ನು ತಪ್ಪಿಸಿದಂತಾಗುತ್ತದೆ. ಮೊನ್ನೆಯವರೆಗೂ 25 ಸಾವಿರ ಕ್ಯೂಸೆಕ್‌ಗಿಂತ ಕಡಿಮೆ ಇದ್ದ ಒಳಹರಿವು ನಿನ್ನೆಯಿಂದ 35ಸಾವಿರ ಕ್ಯೂಸೆಕ್‌ಗೆ ಹೆಚ್ಚಿದೆ.

     

  • ಟಿಬಿ ಡ್ಯಾಂಗೆ ಸ್ಟಾಪ್ ಲಾಗ್ ಗೇಟ್ ಅಳವಡಿಸಲು ಪ್ಲಾನ್ – ಏನೇನು ತಯಾರಿ ನಡೆಯುತ್ತಿದೆ?

    ಟಿಬಿ ಡ್ಯಾಂಗೆ ಸ್ಟಾಪ್ ಲಾಗ್ ಗೇಟ್ ಅಳವಡಿಸಲು ಪ್ಲಾನ್ – ಏನೇನು ತಯಾರಿ ನಡೆಯುತ್ತಿದೆ?

    – ನೀರಿನಲ್ಲೇ ಮೊದಲ ಬಾರಿಗೆ ಕಾರ್ಯಾಚರಣೆ

    ಬೆಂಗಳೂರು: ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟ್‌ ಗೇಟ್ ಕೊಚ್ಚಿಹೋಗಿ ಬರೋಬ್ಬರಿ 70 ಗಂಟೆ ಕಳೆದಿದೆ. ಇದೀಗ 19ನೇ ಗೇಟ್ ಜಾಗದಲ್ಲಿ ಸ್ಟಾಪ್‌ಲಾಗ್ ಗೇಟ್ ಅಳವಡಿಕೆ ಪ್ರಯತ್ನಗಳು ನಡೆದಿವೆ. ಜಲಾಶಯದ ನೀರನ್ನು ಕ್ರಸ್ಟ್ ಗೇಟ್ ಕೆಳಗಿನವರೆಗೂ ಖಾಲಿ ಮಾಡದೇ, ಅದಕ್ಕೂ ಮೊದಲೇ ಸ್ಟಾಪ್‌ಲಾಗ್ ಗೇಟ್ ಅಳವಡಿಕೆಗೆ ತುಂಗಾಭದ್ರಾ ಬೋರ್ಡ್, ಕರ್ನಾಟಕ (Karnataka) ಮತ್ತು ಆಂಧ್ರ (Andra Pradesh) ಅಧಿಕಾರಿಗಳು ತೀರ್ಮಾನಿಸಿದ್ದಾರೆ.

    ಸ್ಟಾಪ್ ಲಾಗ್‌ನ 10 ಪುಟಗಳ ನೀಲಿನಕ್ಷೆ ಆಧರಿಸಿ ಸಮರೋಪಾದಿಯಲ್ಲಿ ಐದು ಎಂಜಿನಿಯರಿಂಗ್ ಕಂಪನಿಗಳು ಗೇಟ್‌ಗಳನ್ನು ನಿರ್ಮಿಸುತ್ತಿವೆ. 20 ಅಡಿ ಎತ್ತರ, 60 ಅಡಿ ಅಗಲ, 48 ಟನ್ ಭಾರದ ಸ್ಟಾಪ್ ಲಾಗ್‌ಗೇಟನ್ನು ಏಕಕಾಲದಲ್ಲಿ ಡ್ಯಾಂ ಮೇಲೆ ಕೊಂಡೊಯ್ಯಲು ಸಾಧ್ಯವಾಗುವುದಿಲ್ಲ. ಹೀಗಾಗಿ ಈ ತುರ್ತು ಗೇಟನ್ನು ಐದು ಭಾಗಗಳಾಗಿ ತಯಾರಿಸಲಾಗ್ತಿದೆ. ನಂತರ ಇದನ್ನು ಡ್ಯಾಂ ಮೇಲೆ ಕೊಂಡೊಯ್ದು, 18 ಮತ್ತು 19ನೇ ಪಿಯರ್‌ಗಳ ನಡುವೆ ಹಂತ ಹಂತವಾಗಿ ಎಲಿಮೆಂಟ್‌ಗಳನ್ನು ಇಳಿಸಿ ತುರ್ತು ಗೇಟ್ ನಿರ್ಮಿಸಲಾಗುತ್ತದೆ.

    ಬುಧವಾರ ಈ ಪ್ರಕ್ರಿಯೆ ಆರಂಭ ಆಗಲಿದ್ದು, ತುರ್ತು ಗೇಟ್ ಅಳವಡಿಕೆ ಕೆಲಸ ಮುಗಿಯಲು ಮೂರ್ನಾಲ್ಕು ದಿನ ಹಿಡಿಯಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ. ಆಗಸ್ಟ್ 17ರಿಂದ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಅಷ್ಟರೊಳಗೆ ಗೇಟ್ ಅಳವಡಿಸುವ ಗುರಿಯನ್ನು ಅಧಿಕಾರಿಗಳು ಹೊಂದಿದ್ದಾರೆ. ನೀರಿನಲ್ಲಿಯೇ ಗೇಟ್ ಅಳವಡಿಕೆ ಕಾರ್ಯಕ್ಕೆ ಮುಂದಾಗಿರುವುದು ದೇಶದ ಇತಿಹಾಸಲ್ಲಿ ಇದೇ ಮೊದಲು ಎನ್ನಲಾಗುತ್ತಿದೆ.  ಇದನ್ನೂ ಓದಿ: ಹೆಚ್ಚುವರಿ ನೀರು ಲೆಕ್ಕಕ್ಕೆ ಪರಿಗಣಿಸಿ – CWRC ಮುಂದೆ ಕರ್ನಾಟಕದ ಮನವಿ

    ಈ ಕಾರ್ಯಾಚರಣೆ ನೇತೃತ್ವವನ್ನು ಡ್ಯಾಂ ಗೇಟ್‌ಗಳ ತಜ್ಞ ಕನ್ನಯ್ಯ ನಾಯ್ಡು ವಹಿಸಿದ್ದಾರೆ. ಮುಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಪಡೆಗಳು ಬೀಡುಬಿಟ್ಟಿವೆ. ಅಂದ ಹಾಗೇ, ಡ್ಯಾಂನಿಂದ ಈಗಾಗಲೇ 30ಕ್ಕೂ ಹೆಚ್ಚು ಟಿಎಂಸಿ ನೀರು ಹೊರಗೆ ಹರಿದಿದೆ. ಇಂದು ಹೊರಹರಿವಿನ ಪ್ರಮಾಣವನ್ನು 1.40 ಲಕ್ಷ ಕ್ಯುಸೆಕ್‌ಗೆ ಹೆಚ್ಚಿಸಲಾಗಿದೆ.

     

    ಗೇಟ್ ಅಳವಡಿಕೆಗೆ ಏನೆಲ್ಲಾ ತಯಾರಿ?
    19ನೇ ಗೇಟ್ ಜಾಗದಲ್ಲಿ ಸ್ಟಾಪ್‌ಲಾಗ್ ಅಳವಡಿಕೆ ಪ್ರಯತ್ನ ಮಾಡಲಾಗುತ್ತದೆ. 20 ಅಡಿ ಎತ್ತರ, 60 ಅಡಿ ಅಗಲ, 48 ಟನ್ ಭಾರದ ಸ್ಟಾಪ್‌ಲಾಗ್ ಗೇಟ್‌ ಅನ್ನು ಒಂದೇ ಬಾರಿಗೆ ಡ್ಯಾಂ ಮೇಲೆ ಕೊಂಡೊಯ್ಯುವುದು ಕಷ್ಟ ಸಾಧ್ಯ. ಹೀಗಾಗಿ ಗೇಟನ್ನು ಐದು ಭಾಗಗಳಾಗಿ ವಿಭಜಿಸಿ ನಿರ್ಮಾಣ ಕಾರ್ಯ ಮಾಡಲಾಗುತ್ತಿದೆ.

    ಮೊದಲ ಎಲಿಮೆಂಟ್‌ನ ಎತ್ತರ 2 ಅಡಿ, 2ನೇ ಎಲಿಮೆಂಟ್‌ನ ಎತ್ತರ 4 ಅಡಿ, 3ನೇ ಎಲಿಮೆಂಟ್‌ನ ಎತ್ತರ 6 ಅಡಿ, 4 ಮತ್ತು 5ನೇ ಎಲಿಮೆಂಟ್‌ನ ಎತ್ತರ ತಲಾ 4 ಅಡಿ ಇರಲಿದೆ. ಗೇಟ್‌ಗಳ ಎಲ್ಲಾ ಎಲಿಮೆಂಟ್‌ಗಳ ಅಗಲ 60 ಅಡಿ ಇರಲಿದ್ದು 2 ಕಡೆ ರೋಲರ್ ಅಳವಡಿಸಲಾಗುತ್ತದೆ. ಇದನ್ನೂ ಓದಿ: ಈಗ ನೀರು ಹರಿಸಿದ್ರೂ ಅಕ್ಟೋಬರ್‌ ವೇಳೆಗೆ ಡ್ಯಾಂ ತುಂಬುವ ಸಾಧ್ಯತೆಯಿದೆ – ಸಿದ್ದರಾಮಯ್ಯ ವಿಶ್ವಾಸ

    ಕ್ರೇನ್ ಸಹಾಯದಿಂದ ಗೇಟ್‌ನ ಐದು ಎಲಿಮೆಂಟ್‌ಗಳ ಅಳವಡಿಸಲಾಗುತ್ತದೆ. 18 ಮತ್ತು 19ನೇ ಪಿಯರ್‌ಗಳ ನಡುವೆ 5 ಹಂತಗಳಲ್ಲಿ ಎಲಿಮೆಂಟ್‌ಗಳ ಇಳಿಸಿ ಸ್ಟಾಪ್‌ಲಾಗ್ ಗೇಟ್‌ ಹಾಕಲಾಗುತ್ತದೆ.

  • ಈಗ ನೀರು ಹರಿಸಿದ್ರೂ ಅಕ್ಟೋಬರ್‌ ವೇಳೆಗೆ ಡ್ಯಾಂ ತುಂಬುವ ಸಾಧ್ಯತೆಯಿದೆ – ಸಿದ್ದರಾಮಯ್ಯ ವಿಶ್ವಾಸ

    ಈಗ ನೀರು ಹರಿಸಿದ್ರೂ ಅಕ್ಟೋಬರ್‌ ವೇಳೆಗೆ ಡ್ಯಾಂ ತುಂಬುವ ಸಾಧ್ಯತೆಯಿದೆ – ಸಿದ್ದರಾಮಯ್ಯ ವಿಶ್ವಾಸ

    – ಬಿಜೆಪಿಯವರಿಗೆ ಗೂಬೆ ಕೂರಿಸುವುದೇ ಕಸುಬು: ಸಿಎಂ ಕಿಡಿ

    ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ, 19ನೇ ಕ್ರಸ್ಟ್ ಗೇಟ್ ವೀಕ್ಷಣೆ ಮಾಡಿದರು. ಸಿಎಂ ಆಗಮನದ ಹಿನ್ನೆಲೆ ಜಲಾಶಯದ ಬಳಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿತ್ತು. ಒಬ್ಬರು ಎಸ್ಪಿ, ಇಬ್ಬರು ಅಡಿಷನಲ್ ಎಸ್ಪಿ ಸೇರಿದಂತೆ 400ಕ್ಕೂ ಸಿಬ್ಬಂದಿಯನ್ನ ನಿಯೋಜಿಸಲಾಗಿತ್ತು. ಅಲ್ಲದೇ ಮುಖ್ಯ ದ್ವಾರದ ಮುಂದೆ ಸಾರ್ವಜನಿಕರ ಅಹವಾಲು ಸ್ವೀಕಾರಕ್ಕೂ ವ್ಯವಸ್ಥೆ

    ಟಿಬಿ ಡ್ಯಾಂನ 19ನೇ ಕ್ರಸ್ಟ್‌ಗೇಟ್‌ ವೀಕ್ಷಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಜಲಾಶಯ 1952-53ರಲ್ಲಿ ಪೂರ್ಣಗೊಂಡಿತ್ತು. ಆಗಿನಿಂದ ಏನೂ ತೊಂದರೆ ಆಗಿರಲಿಲ್ಲ. ಈಗ ತೊಂದರೆಯಾಗಿದೆ. 19ನೇ ಕ್ರಸ್ಟ್ ಗೇಟ್ ಚೈನ್ ಕಟ್ಟಾಗಿದ್ದರಿಂದ ಸಮಸ್ಯೆಯಾಗಿದೆ. ಈಗ ಗೇಟ್ ರಿಪೇರಿ ಮಾಡೋದಕ್ಕೆ ಸುಮಾರು 60 ಟಿಎಂಸಿನಷ್ಟು ನೀರನ್ನ ಹೊರಗೆ ಬಿಡಬೇಕು. ಆದ್ರೆ ಇನ್ನೂ ಅಕ್ಟೋಬರ್ ವರೆಗೆ ಮಳೆ ಇರೋದ್ರಿಂದ ಈಗ ಹೊರಗೆ ಹೋದಷ್ಟು ನೀರು ತುಂಬುವ ಸಾಧ್ಯತೆ ಇದೆ. ಈ ವಿಶ್ವಾಸವನ್ನು ನಾವೆಲ್ಲರೂ ಇಟ್ಟುಕೊಳ್ಳೋಣ ಎಂದು ನುಡಿದರು. ಇದನ್ನೂ ಓದಿ: ಜಲಾಶಯ ನಿರ್ವಹಣೆಗೆ ಕೇಂದ್ರ ಸಮಿತಿ ಸಲಹೆ ಧಿಕ್ಕರಿಸಿದೆ ರಾಜ್ಯ ಸರ್ಕಾರ: ಜೋಶಿ ಆರೋಪ

    ಈಗ ಕ್ರಸ್ಟ್ ಗೇಟ್ ರಿಪೇರಿ ಮಾಡಬೇಕು ಅಂದ್ರೆ, ನೀರು ಹೊರಕ್ಕೆ ಬಿಡಬೇಕು. ಇದರಿಂದ ರೈತರಿಗೆ ಮೊದಲ ಬೆಳೆಗೆ ಯಾವುದೇ ತೊಂದರೆ ಆಗಲ್ಲ. ಅಲ್ಲದೇ ಹವಾಮಾನ ಮುನ್ಸೂಚನೆ ಪ್ರಕಾರ ಅಕ್ಟೋಬರ್ ವರೆಗೆ ಮಳೆ ಇರುವುದರಿಂದ ಈಗ ಹರಿದಷ್ಟೂ ನೀರು ಡ್ಯಾಂಗೆ ತುಂಬುವ ಸಾಧ್ಯತೆಯಿದೆ. ನಮ್ಮದು ರೈತಪರ ಸರ್ಕಾರ, ರೈತರಿಗೆ ತೊಂದರೆಯಾಗೋದಕ್ಕೆ ಬಿಡಲ್ಲ ಅಂತ ಸಿಎಂ ಆಶ್ವಾಸನೆ ನೀಡಿದರು. ಇದನ್ನೂ ಓದಿ: ಜಲಾಶಯ ನಿರ್ವಹಣೆಗೆ ಕೇಂದ್ರ ಸಮಿತಿ ಸಲಹೆ ಧಿಕ್ಕರಿಸಿದೆ ರಾಜ್ಯ ಸರ್ಕಾರ: ಜೋಶಿ ಆರೋಪ

    ಇದೇ ವೇಳೆ ಬಿಜೆಪಿ ನಾಯಕರ ಟೀಕೆಗೆ ತಿರುಗೇಟು ನೀಡಿದ ಸಿಎಂ, ಜಲಾಶಯಗಳ ನಿರ್ವಹಣೆಗೆ ಒಂದು ಬೋರ್ಡ್ ಇದೆ. ಅದು ಕೇಂದ್ರದ ಸುಪರ್ದಿಗೆ ಬರುತ್ತೆ. ಈ ಬೋರ್ಡ್‌ನಲ್ಲಿ ತೆಲಂಗಾಣ, ಆಂಧ್ರ ಪ್ರದೇಶ ಹಾಗೂ ಕರ್ನಾಟಕದ ಅಧಿಕಾರಿಗಳು ಇದ್ದಾರೆ. ಆದ್ರೆ ಈ ವಿಚಾರದಲ್ಲಿ ನಾನು ರಾಜಕೀಯ ಮಾಡಲ್ಲ. ಯಾರ ಮೇಲೂ ತಪ್ಪು ಹೊರಿಸಲ್ಲ. ಸರಿಪಡಿಸುವ ಕೆಲಸ ಆಗುತ್ತೆ ಎಂದರು.

    ಮುಂದುವರಿದು, ಬಿಜೆಪಿಯವರು ರಾಜಕೀಯವಾಗಿ ಟೀಕೆ ಮಾಡ್ತಿದ್ದಾರೆ. ಕ್ರಸ್ಟ್ ಗೇಟ್ ಕಟ್ಟಾಗಿ ನೀರು ಹೊರಗೆ ಹೋಗ್ತಿದೆ. ಸರ್ಕಾರದ ಹೊಣೆಗೇಡಿತನ ಅಂದ್ರೆ ಏನರ್ಥ? ಬಿಜೆಪಿಯವರಿಗೆ ಗೂಬೆ ಕೂರಿಸುವುದೇ ಕಸುಬು, ನಾವು ರೈತರ ಪರವಾಗಿದ್ದೇವೆ. ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: Bengaluru | ಬಿಎಂಟಿಸಿ ವೋಲ್ವೋ ಬಸ್‌ನಿಂದ ಸರಣಿ ಅಪಘಾತ; ನಡುರಸ್ತೆಯಲ್ಲೇ ವಾಹನ ಸವಾರರ ಚಿರಾಟ!