Tag: ಕ್ರಿಕೆಟ್

  • 17 ವರ್ಷಗಳ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಕೆಟ್ಟ ಸಾಧನೆ ಬರೆದ ಕೊಹ್ಲಿ

    17 ವರ್ಷಗಳ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಕೆಟ್ಟ ಸಾಧನೆ ಬರೆದ ಕೊಹ್ಲಿ

    ಅಡಿಲೇಡ್: 17 ವರ್ಷಗಳ ವೃತ್ತಿಜೀವನದಲ್ಲಿ ಮೊದಲ ಬಾರಿ ವಿರಾಟ್‌ ಕೊಹ್ಲಿ  ಕೆಟ್ಟ ಸಾಧನೆ ಮಾಡಿದ್ದಾರೆ. ಆಸ್ಟ್ರೇಲಿಯಾ (Australia) ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲೂ ಕೊಹ್ಲಿ (Virat Kohli) ಶೂನ್ಯಕ್ಕೆ ಔಟಾಗುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.

    ನಾಯಕ ಶುಭಮನ್‌ ಗಿಲ್‌ 9 ರನ್‌ ಗಳಿಸಿ ಬಾರ್ಟ್ಲೆಟ್‌ಗೆ ವಿಕೆಟ್‌ ಒಪ್ಪಿಸಿದರು. ನಂತರ ಬಂದ ಕೊಹ್ಲಿ 4 ಎಸೆತ ಎದುರಿಸಿ ಎಲ್‌ಬಿಗೆ ಔಟಾದರು. ಈ ಮೂಲಕ 17 ರನ್‌ಗಳಿಗೆ ಎರಡು ಅಮೂಲ್ಯ ವಿಕೆಟ್‌ಗಳನ್ನು ಭಾರತ ಕಳೆದುಕೊಂಡಿತು.  ಇದನ್ನೂ ಓದಿ:  ಏಷ್ಯಾಕಪ್‌ ವಿವಾದದ ಬೆನ್ನಲ್ಲೇ ನವೆಂಬರ್‌ನಲ್ಲಿ ಪಾಕ್‌ ವಿರುದ್ಧ ಆಡಲಿದೆ ಭಾರತ

    ಅ.19 ರಂದು ಪರ್ತ್‌ನಲ್ಲಿ ನಡೆದ ಪಂದ್ಯದಲ್ಲೂ ಕೊಹ್ಲಿ ಶೂನ್ಯಕ್ಕೆ ಔಟಾಗಿದ್ದರು. ಸರಣಿಯೊಂದರಲ್ಲಿ ಕೊಹ್ಲಿ ಸತತ ಎರಡು ಬಾರಿ ಶೂನ್ಯಕ್ಕೆ ಇಲ್ಲಿಯವರೆಗ ಔಟ್‌ ಆಗಿರಲಿಲ್ಲ. ಈ ಹಿಂದೆ 2021 ರಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆದ ಪಂದ್ಯದಲ್ಲಿ ಟೆಸ್ಟ್‌ ಮತ್ತು ಟಿ20 ಪಂದ್ಯದಲ್ಲಿ ಸತತ ಎರಡು ಬಾರಿ ಶೂನ್ಯಕ್ಕೆ ಔಟಾಗಿದ್ದರು.

    ಈ ಪಂದ್ಯಲ್ಲಿ ಸೊನ್ನೆ ಸುತ್ತುವ ಮೂಲಕ ಕೊಹ್ಲಿ ಏಕದಿನದಲ್ಲಿ ಒಟ್ಟು 40 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ವಿರಾಟ್‌ ಕೊಹ್ಲಿ ಜುಲೈ 3 ರಂದು ಐಪಿಎಲ್‌ ಫೈನಲ್‌ ಪಂದ್ಯದ ಬಳಿಕ ಯಾವುದೇ ಟೂರ್ನಿಯಲ್ಲಿ ಭಾಗವಹಿಸರಲಿಲ್ಲ.

    ಐಪಿಲ್‌ ಬಳಿಕ ಕೊಹ್ಲಿ ಕುಟುಂಬದ ಸದಸ್ಯರ ಜೊತೆಗೆ ಯುಕೆಗೆ ಹೋಗಿದ್ದರು. ಅಲ್ಲಿ ಫಿಟ್ನೆಸ್‌ ಕಾಪಾಡಿಕೊಂಡಿದ್ದರೂ ಪಂದ್ಯದ ಅಭ್ಯಾಸ ಮಾಡಿಕೊಂಡಿರಲಿಲ್ಲ.

    ಒಟ್ಟು ಮೂರು ಪಂದ್ಯಗಳ ಸರಣಿಯಲ್ಲಿ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ಜಯಗಳಿಸಿದೆ. ಅ.25 ರಂದು ಮೂರನೇ ಏಕದಿನ ಪಂದ್ಯ ನಡೆಯಲಿದೆ.

  • ಏಷ್ಯಾಕಪ್‌ ವಿವಾದದ ಬೆನ್ನಲ್ಲೇ ನವೆಂಬರ್‌ನಲ್ಲಿ ಪಾಕ್‌ ವಿರುದ್ಧ ಆಡಲಿದೆ ಭಾರತ

    ಏಷ್ಯಾಕಪ್‌ ವಿವಾದದ ಬೆನ್ನಲ್ಲೇ ನವೆಂಬರ್‌ನಲ್ಲಿ ಪಾಕ್‌ ವಿರುದ್ಧ ಆಡಲಿದೆ ಭಾರತ

    ಮುಂಬೈ: ಹ್ಯಾಂಡ್‌ಶೇಕ್‌, ಏಷ್ಯಾ ಕಪ್‌ (Asia Cup) ವಿವಾದದ ಬೆನ್ನಲ್ಲೇ ಮತ್ತೆ ಭಾರತ (India) ಮತ್ತು ಪಾಕಿಸ್ತಾನದ (Pakistan) ಮಧ್ಯೆ ಕ್ರಿಕೆಟ್‌ ಪಂದ್ಯ ನಡೆಯಲಿದೆ.

    ಇದೇ ನ. 7 ರಿಂದ 9 ರವರೆಗೆ ಈ ಟೂರ್ನಿ ಹಾಂಕಾಂಗ್‌ನಲ್ಲಿ ನಡೆಯಲಿದೆ. ಹಾಂಕಾಂಗ್‌ ಕ್ರಿಕೆಟ್‌ ಸಿಕ್ಸಸ್‌ (Hong Kong Cricket Sixes) ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ, ಕುವೈತ್‌ ಒಂದೇ ಗುಂಪಿನಲ್ಲಿದೆ.

    ಹಾಂಕಾಂಗ್‌ ಸಿಕ್ಸಸ್ ಆರು ಓವರ್‌ ಪಂದ್ಯಾವಳಿಯಾಗಿದ್ದು, ಒಟ್ಟು 12 ತಂಡಗಳು ಭಾಗವಹಿಸುತ್ತಿವೆ. ಭಾರತವನ್ನು ಮಾಜಿ ವಿಕೆಟ್ ಕೀಪರ್-ಬ್ಯಾಟರ್ ದಿನೇಶ್ ಕಾರ್ತಿಕ್ ಮುನ್ನಡೆಸಲಿದ್ದಾರೆ. ಕಾರ್ತಿಕ್‌ ಅಲ್ಲದೇ ಮಾಜಿ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಕೂಡ ತಂಡದ ಭಾಗವಾಗಿದ್ದಾರೆ.

    ಮೂರು ದಿನಗಳ ಈ ಪಂದ್ಯಾವಳಿಯಲ್ಲಿ ಆಫ್ರಿಕಾ, ಅಫ್ಘಾನಿಸ್ತಾನ, ನೇಪಾಳ, ಆಸ್ಟ್ರೇಲಿಯಾ, ಇಂಗ್ಲೆಂಡ್, ಯುಎಇ, ಭಾರತ, ಪಾಕಿಸ್ತಾನ, ಕುವೈತ್, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಹಾಂಕಾಂಗ್‌ ತಂಡಗಳು ಭಾಗವಹಿಸಲಿವೆ. ಇದನ್ನೂ ಓದಿ:  ಡ್ರೆಸ್ಸಿಂಗ್‌ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ್ಕೆ ಕ್ಯಾಪ್ಟನ್ಸಿಯಿಂದ ರಿಜ್ವಾನ್‌ ಔಟ್‌!

    ಯಾವ ರೀತಿ ಪಂದ್ಯ?
    ಹಾಂಕಾಂಗ್‌ ಸಿಕ್ಸಸ್ ತಲಾ ಆರು ಓವರ್‌ಗಳ ಪಂದ್ಯಾವಳಿಯಾಗಿದ್ದು, ಪ್ರತಿಯೊಬ್ಬ ಆಟಗಾರ (ವಿಕೆಟ್ ಕೀಪರ್ ಹೊರತುಪಡಿಸಿ) ಕನಿಷ್ಠ ಒಂದು ಓವರ್ ಬೌಲ್ ಮಾಡಬೇಕು ಮತ್ತು ಒಬ್ಬ ಆಟಗಾರನಿಗೆ ಮಾತ್ರ ಸತತವಾಗಿ ಎರಡು ಓವರ್‌ಗಳನ್ನು ಬೌಲ್ ಮಾಡುವ ಅವಕಾಶ ಸಿಗುತ್ತದೆ.

    5 ಓವರ್‌ಗಳು ಪೂರ್ಣಗೊಳ್ಳುವ ಮೊದಲು ಐದು ವಿಕೆಟ್‌ಗಳು ಪತನಗೊಂಡರೆ ಉಳಿದಿರುವ ಕೊನೆಯ ಬ್ಯಾಟ್ಸ್‌ಮನ್ ಬ್ಯಾಟಿಂಗ್ ಮಾಡುತ್ತಾನೆ ಮತ್ತು ಐದನೇ ಬ್ಯಾಟ್ಸ್‌ಮನ್ ರನ್ನರ್ ಆಗಿ ಕಾರ್ಯನಿರ್ವಹಿಸುತ್ತಾನೆ. ಕೊನೆಯ ಬ್ಯಾಟರ್‌ ಯಾವಾಗಲೂ ಸ್ಟ್ರೈಕ್ ತೆಗೆದುಕೊಳ್ಳುತ್ತಾನೆ. ಆರನೇ ವಿಕೆಟ್ ಪತನಗೊಂಡರೆ ಇನ್ನಿಂಗ್ಸ್ ಪೂರ್ಣಗೊಳ್ಳುತ್ತದೆ. ಇದನ್ನೂ ಓದಿ:  ಏಪ್ಯಾ ಕಪ್ ಗೆದ್ದ ಭಾರತಕ್ಕೆ ವಿಶ್, ಬಳಿಕ ಟ್ವಿಸ್ಟ್ ಕೊಟ್ಟ ನಖ್ವಿ!

    ಹಾಂಕಾಂಗ್‌ನಲ್ಲಿ ಕ್ರಿಕೆಟ್‌ ಜನಪ್ರಿಯಗೊಳಿಸಲು ಈ ಚುಟುಕು ಕ್ರಿಕೆಟ್ ಪಂದ್ಯಾವಳಿಯನ್ನು ಕ್ರಿಕೆಟ್‌ ಹಾಂಕಾಂಗ್‌ ಆಯೋಜಿಸುತ್ತಿದೆ.
  • Test Twenty | ಟೆಸ್ಟ್‌ನಲ್ಲೂ ಚುಟುಕು ಕ್ರಿಕೆಟ್ ಶುರು – ಏನಿದು ಟೆಸ್ಟ್ ಟ್ವೆಂಟಿ? ಯಾವಾಗ ಶುರು? ಸ್ವರೂಪ ಹೇಗಿದೆ?

    Test Twenty | ಟೆಸ್ಟ್‌ನಲ್ಲೂ ಚುಟುಕು ಕ್ರಿಕೆಟ್ ಶುರು – ಏನಿದು ಟೆಸ್ಟ್ ಟ್ವೆಂಟಿ? ಯಾವಾಗ ಶುರು? ಸ್ವರೂಪ ಹೇಗಿದೆ?

    2007ರಲ್ಲಿ ನಡೆದ ಚೊಚ್ಚಲ ಟಿ20 ವಿಶ್ವಕಪ್ (T20 World Cup) ಟೂರ್ನಿ ಭಾರತೀಯ ಕ್ರಿಕೆಟ್ ಇತಿಹಾಸದಲ್ಲೇ ನೆನಪಿನಲ್ಲಿಡಬೇಕಾದ ವರ್ಷ. ಏಕೆಂದರೆ ಆಗಷ್ಟೇ ಮಹತ್ವ ಪಡೆದುಕೊಳ್ಳುತ್ತಿದ್ದ ಮೊಟ್ಟ ಮೊದಲ ಚುಟುಕು ಕ್ರಿಕೆಟ್‌ಗೆ ಬುನಾದಿ ಹಾಕಿಕೊಟ್ಟ ಟೂರ್ನಿ ಅದಾಗಿತ್ತು. ಆಗ ಚುಟುಕು ಕ್ರಿಕೆಟ್‌ ಮಾದರಿಯನ್ನ ಬಹಳಷ್ಟು ಜನ ಟೀಕಿಸುತ್ತಿದ್ರು. ಭಾರತ ಚೊಚ್ಚಲ ಟಿ20 ವಿಶ್ವಕಪ್‌ ಮುಡಿಗೇರಿಸಿಕೊಂಡ ಬಳಿಕ ಜನಪ್ರಿಯತೆ ಪಡೆದುಕೊಂಡಿತು. 2008ರಲ್ಲಿ ಪದಾರ್ಪಣೆ ಮಾಡಿದ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿ ಚುಟುಕು ಕ್ರಿಕೆಟ್‌ ಮಹತ್ವವನ್ನ ಜಗತ್ತಿಗೇ ಸಾರಿತು. ಇದೀಗ ಟೆಸ್ಟ್‌ ಕ್ರಿಕೆಟ್‌ (Test Cricket) ಸ್ವರೂಪಕ್ಕೂ ಟಿ20 ಸ್ಪರ್ಶ ನೀಡಲು ಕ್ರಿಕೆಟ್‌ ತಜ್ಞರು ಮುಂದಾಗಿದ್ದಾರೆ.

    ಕ್ರಿಕೆಟ್‌ ದಿಗ್ಗಜರಾದ ಎಬಿ ಡಿವಿಲಿಯರ್ಸ್ (AB De Villiers), ಸರ್ ಕ್ಲೈವ್ ಲಾಯ್ಡ್, ಮ್ಯಾಥ್ಯೂ ಹೇಡನ್ ಮತ್ತು ಹರ್ಭಜನ್ ಸಿಂಗ್ ಅವರನ್ನೊಳಗೊಂಡ ಸಲಹಾ ಮಂಡಳಿಯು ಈ ನಾಲ್ಕನೇ ಸ್ವರೂಪದ ಟೆಸ್ಟ್‌ ಕ್ರಿಕೆಟ್‌ನ್ನು ಅನುಮೋದಿಸಿದ್ದಾರೆ. ಈ ಸ್ವರೂಪದ ಟೂರ್ನಿ 2026ರ ಜನವರಿಯಿಂದಲೇ ಅನುಷ್ಠಾನಕ್ಕೆ ತರಲು ದಿ ಒನ್ ಒನ್ ಸಿಕ್ಸ್ ನೆಟ್‌ವರ್ಕ್‌ನ ಕಾರ್ಯನಿರ್ವಾಹಕ ಅಧ್ಯಕ್ಷ ಕ್ರೀಡಾ ಉದ್ಯಮಿ ಗೌರವ್ ಬಹಿರ್ವಾನಿ ಮುಂದಾಗಿದ್ದಾರೆ.

    ಏನಿದು ಟೆಸ್ಟ್‌ ಟ್ವೆಂಟಿ? ಹೇಗಿರಲಿದೆ ಸ್ವರೂಪ?
    13 ರಿಂದ 19 ವರ್ಷದೊಳಗಿನವರಿಗಾಗಿ ಟೆಸ್ಟ್‌ 20 (Test Twenty) ಕ್ರಿಕೆಟ್‌ ಮಾದರಿಯನ್ನ ಅನುಷ್ಠಾನಗೊಳಿಸಲಾಗುತ್ತಿದೆ. ಇದು ಸಹ ರೆಡ್‌ ಬಾಲ್‌ ಕ್ರಿಕೆಟ್‌ ಆಗಿರಲಿದ್ದು, 80 ಓವರ್‌ಗಳ ಪಂದ್ಯವಾಗಿರಲಿದೆ. ಉಭಯ ತಂಡಗಳು ಒಂದು ಪಂದ್ಯದಲ್ಲಿ ತಲಾ 20 ಓವರ್‌ನಂತೆ 2 ಇನ್ನಿಂಗ್ಸ್‌ಗಳನ್ನು ಟೆಸ್ಟ್‌ ಮಾದರಿಯಲ್ಲೇ ಆಡಲಿವೆ. 4 ವಿರಾಮಗಳು ಇರಲಿದ್ದು, ಒಂದು ದಿನದಲ್ಲೇ ಮುಕ್ತಾಯಗೊಳ್ಳುವ ಟೆಸ್ಟ್‌ ಸ್ವರೂಪದ ಕ್ರಿಕೆಟ್‌ ಆಗಿರಲಿದೆ.

    ನಿಯಮ ಹೇಗೆ ಅನ್ವಯ?
    ಪ್ರತಿ ತಂಡವು ಪಂದ್ಯದಲ್ಲಿ ಒಮ್ಮೆಗೆ 4 ಓವರ್‌ ಪವರ್‌ ಪ್ಲೇ ತೆಗೆದುಕೊಳ್ಳಬಹುದಾಗಿದೆ. ಅಲ್ಲದೇ ಮೊದಲ ಇನ್ನಿಂಗ್ಸ್‌ನಲ್ಲಿ 75 ರನ್‌ ಅಥವಾ ಅದಕ್ಕಿಂತಲೂ ಹೆಚ್ಚು ರನ್‌ಗಳಿಂದ ಮುನ್ನಡೆ ಸಾಧಿಸಿದ್ರೆ, ಎದುರಾಳಿ ತಂಡ ಫಾಲೋ ಆನ್‌ ಹೇರಬಹುದಾಗಿದೆ. ಪಂದ್ಯದುದ್ದಕ್ಕೂ ಗರಿಷ್ಠ 5 ಬೌಲರ್‌ಗಳನ್ನ ಬಳಸಬಹುದಾಗಿದೆ. ಪ್ರತಿ ಬೌಲರ್‌ಗೆ ಗರಿಷ್ಠ 8 ಓವರ್‌ ಬೌಲಿಂಗ್‌ ಮಾಡಲು ಅವಕಾಶ ಇರಲಿದೆ.

    ಮೊದಲ ಸೀಸನ್‌ ಯಾವಾಗ?
    ಟೆಸ್ಟ್‌ ಟ್ವೆಂಟಿಯ ಮೊದಲ ಸೀಸನ್‌ 2026ರ ಜನವರಿಯಲ್ಲಿ ಶುರುವಾಗಲಿದೆ. ಮೊದಲ ಟೂರ್ನಿ 6 ಜಾಗತಿಕ ಫ್ರಾಂಚೈಸಿಗಳನ್ನು ಒಳಗೊಂಡಿರಲಿದೆ. ಭಾರತರಿಂದ ಮೂರು ತಂಡಗಳು ಹಾಗೂ ದುಬೈ, ಲಂಡನ್ ಮತ್ತು ಯುನೈಟೆಡ್ ಸ್ಟೇಟ್ಸ್ ಪ್ರತಿನಿಧಿಸುವ ಮೂರು ತಂಡಗಳು ಪಾಲ್ಗೊಳ್ಳಲಿವೆ. ಪ್ರತಿ ತಂಡವು 16 ಆಟಗಾರರನ್ನ ಒಳಗೊಂಡಿರಲಿದ್ದು, 8 ಭಾರತೀಯರು 8 ವಿದೇಶಿ ಆಟಗಾರರು ತಂಡದಲ್ಲಿರಲಿದ್ದಾರೆ.

    ಎಬಿಡಿ ಹೇಳಿದ್ದೇನು?
    ಟೆಸ್ಟ್‌ ಟ್ವೆಂಟಿ ಕುರಿತು ಮಾತನಾಡಿರುವ ಕ್ರಿಕೆಟ್‌ ದಿಗ್ಗಜ ಎಬಿಡಿ ವಿಲಿಯರ್ಸ್‌, ಭವಿಷ್ಯದ ದೃಷ್ಟಿಯಿಂದ ಆಟದ ಸ್ವರೂಪಗಳನ್ನ ನಾವು ಗೌರವಿಸಬೇಕು. ಇದು ಯುವ ಆಟಗಾರರ ಮುಂದಿನ ಭವಿಷ್ಯಕ್ಕೆ ದೊಡ್ಡ ವೇದಿಕೆಯಾಗಲಿದೆ. ಜೊತೆಗೆ ಅಭಿಮಾನಿಗಳಿಗೂ ಹೊಸತನದ ಅನುಭವ ನೀಡುತ್ತದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

  • ಹಲವು ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ 1,000 ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟರ್!

    ಹಲವು ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ 1,000 ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟರ್!

    ವಿಶಾಖಪಟ್ಟಣಂ: ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ (ICC Women’s World Cup) ಕ್ರಿಕೆಟ್‌  ಟೂರ್ನಿಯಲ್ಲಿಂದು ತನ್ನ 4ನೇ ಪಂದ್ಯವಾಡಿದ ಭಾರತ ಮಹಿಳಾ ತಂಡ, ಆಸ್ಟ್ರೇಲಿಯಾ ಮಹಿಳಾ ತಂಡದ ಬಿರುದ್ಧ ಭರ್ಜರಿ ಬ್ಯಾಟಿಂಗ್‌ ಮಾಡಿದೆ. 48.5 ಓವರ್‌ಗಳಲ್ಲಿ 330 ರನ್‌ ಗಳಿಸಿ, ಆಸೀಸ್‌ಗೆ 331 ರನ್‌ಗಳ ಬೃಹತ್‌ ಗುರಿ ನೀಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಟೀಂ ಇಂಡಿಯಾ ಪರ ಸ್ಮೃತಿ ಮಂದಾನ (Smriti Mandhana) ಹಲವು ವಿಶ್ವದಾಖಲೆಗಳನ್ನ ಬರೆದಿದ್ದಾರೆ.

    ಆರಂಭಿಕ ಆಟಗಾರ್ತಿಯಾಗಿ ಕಣಕ್ಕಿಳಿದ ಮಂದಾನ 66 ಎಸೆತಗಳಲ್ಲಿ 80 ರನ್‌ (3 ಸಿಕ್ಸರ್‌, 9 ಬೌಂಡರಿ) ಚಚ್ಚಿದರು. ಈ ಮೂಲಕ ಹಲವು ವಿಶ್ವದಾಖಲೆಗಳನ್ನ ಮುಡಿಗೇರಿಸಿಕೊಂಡರು. ಅಲ್ಲದೇ ಕ್ಯಾಲೆಂಡರ್‌ ವರ್ಷದಲ್ಲಿ 1,000 ರನ್‌ ಪೂರೈಸಿದ ವಿಶ್ವದ ಮೊದಲ ಮಹಿಳಾ ಬ್ಯಾಟರ್‌ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಇನ್ನ ಹಲವು ವಿಶ್ವದಾಖಲೆಗಳ ಬಗ್ಗೆ ನೋಡೋಣ…

    ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟರ್ಸ್‌
    * 1,068 – ಸ್ಮೃತಿ ಮಂಧಾನ (ಭಾರತ), 18 ಇನ್ನಿಂಗ್ಸ್‌ – 2025
    * 970 – ಬೆಲಿಂಡಾ ಕ್ಲಾರ್ಕ್ (ಆಸ್ಟ್ರೇಲಿಯಾ), 14 ಇನ್ನಿಂಗ್ಸ್‌ – 1997
    * 882 – ಲಾರಾ ವೋಲ್ವಾರ್ಡ್ಟ್ (ದಕ್ಷಿಣ ಆಫ್ರಿಕಾ), 18 ಇನ್ನಿಂಗ್ಸ್‌ – 2022
    * 880 – ಡೆಬ್ಬಿ ಹಾಕ್ಲಿ (ನ್ಯೂಜಿಲೆಂಡ್), 16 ಇನ್ನಿಂಗ್ಸ್‌ – 1997
    * 853 – ಆಮಿ ಸ್ಯಾಟರ್ತ್‌ವೈಟ್ (ನ್ಯೂಜಿಲೆಂಡ್), 14 ಇನ್ನಿಂಗ್ಸ್‌ – 2016

    5,000 ರನ್ನರ್ಸ್‌ ಕ್ಲಬ್‌ಗೆ ಮಂದಾನ
    ಅಷ್ಟೇ ಅಲ್ಲದೇ ಮಹಿಳಾ ಏಕದಿನ ಪಂದ್ಯಗಳಲ್ಲಿ ಸ್ಮೃತಿ ಮಂಧಾನ ಕೂಡ 5,000 ರನ್ ಪೂರೈಸಿದರು. ಈ ಸಾಧನೆ ಮಾಡಿದ 2ನೇ ಭಾರತೀಯ ಮತ್ತು ವಿಶ್ವದ 5ನೇ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಸ್ಮೃತಿ ಕೇವಲ 112 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲು ಸಾಧಿಸಿದರು. 211 ಇನ್ನಿಂಗ್ಸ್‌ಗಳಲ್ಲಿ 7,805 ರನ್‌ ಗಳಿಸಿರುವ ಟೀಂ ಇಂಡಿಯಾದ ಮಾಜಿ ನಾಯಕಿ ಮಿಥಾಲಿ ರಾಜ್‌ ಮಹಿಳಾ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್‌ಗಳಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

    ಮಹಿಳಾ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್‌ ಗಳಿಸಿದವರು
    * 7,805 – ಮಿಥಾಲಿ ರಾಜ್ (ಭಾರತ), 211 ಇನ್ನಿಂಗ್ಸ್‌
    * 5,992 – ಷಾರ್ಲೆಟ್ ಎಡ್ವರ್ಡ್ಸ್ (ಇಂಗ್ಲೆಂಡ್), 180 ಇನ್ನಿಂಗ್ಸ್‌
    * 5,925 – ಸುಜಿ ಬೇಟ್ಸ್ (ನ್ಯೂಜಿಲೆಂಡ್), 167 ಇನ್ನಿಂಗ್ಸ್‌
    * 5.873 – ಸ್ಟೆಫಾನಿ ಟೇಲರ್ (ವೆಸ್ಟ್ ಇಂಡೀಸ್), 163 ಇನ್ನಿಂಗ್ಸ್‌
    * 5,022 – ಸ್ಮೃತಿ ಮಂಧಾನ (ಭಾರತ), 112 ಇನ್ನಿಂಗ್ಸ್‌

  • ಅಭಿಷೇಕ್‌ ಶರ್ಮಾ ಔಟ್‌ ಮಾಡೋಕೆ ಕೇವಲ 3 ಎಸೆತ ಸಾಕು: ಪಾಕ್‌ ವೇಗಿ ಸವಾಲ್

    ಅಭಿಷೇಕ್‌ ಶರ್ಮಾ ಔಟ್‌ ಮಾಡೋಕೆ ಕೇವಲ 3 ಎಸೆತ ಸಾಕು: ಪಾಕ್‌ ವೇಗಿ ಸವಾಲ್

    ಮುಂಬೈ: ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್‌ ಅಭಿಷೇಕ್‌ ಶರ್ಮಾರನ್ನ (Abhishek Sharma) ಕೇವಲ 3 ಎಸೆತಗಳಲ್ಲಿ ಔಟ್‌ ಮಾಡುತ್ತೇನೆ ಎಂದು ಪಾಕಿಸ್ತಾನದ ವೇಗಿ ಇಹ್ಸಾನುಲ್ಲಾ (Ihsanullah) ಸವಾಲು ಹಾಕಿದ್ದಾರೆ.

    ಇಹ್ಸಾನುಲ್ಲಾ ಸವಾಲು ಹಾಕಿರುವ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಶರ್ಮಾ ಅವರನ್ನು ಔಟ್‌ ಮಾಡಲು ಮೂರು ಎಸೆತಗಳನ್ನು ಸಾಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದಿಲ್ಲಿಯಲ್ಲಿ ಬೌಲರ್‌ಗಳ ದರ್ಬಾರ್‌ – ಫಾಲೋ ಆನ್‌ ಬಳಿಕ ವಿಂಡೀಸ್‌ ದಿಟ್ಟ ಹೋರಾಟ; ಭಾರತಕ್ಕೆ ಇನ್ನಿಂಗ್ಸ್‌ & 97 ರನ್‌ಗಳ ಮುನ್ನಡೆ

    ಅಭಿಷೇಕ್ ಶರ್ಮಾ ನನ್ನ ವಿರುದ್ಧ ಆರು ಎಸೆತಗಳಿಗಿಂತ ಹೆಚ್ಚು ಸಮಯ ಆಡುವುದಿಲ್ಲ. ನಾನು ಅವರನ್ನು ಮೂರು ಎಸೆತಗಳಲ್ಲಿ ಔಟ್ ಮಾಡುತ್ತೇನೆ ಎಂದು ಸವಾಲೆಸೆದಿದ್ದಾರೆ.

    ಇಹ್ಸಾನುಲ್ಲಾ ಬಲಗೈ ವೇಗದ ಬೌಲರ್ ಆಗಿದ್ದು, 2023 ರಲ್ಲಿ ಮುಲ್ತಾನ್ ಸುಲ್ತಾನ್ಸ್ ಪರ 5/12 ವಿಕೆಟ್ ಪಡೆಯುವ ಮೂಲಕ ಗಮನ ಸೆಳೆದಿದ್ದರು. ಪಿಎಸ್ಎಲ್ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಮತ್ತು ಬೌಲರ್ ಆಫ್ ದಿ ಟೂರ್ನಮೆಂಟ್ ಗೌರವಕ್ಕೂ ಭಾಜನರಾಗಿದ್ದಾರೆ. ಅವರ ಬೌಲಿಂಗ್ ವೇಗವು ಗಂಟೆಗೆ 144 ಕಿಮೀ ಸರಾಸರಿಯಲ್ಲಿದೆ. ಇದನ್ನೂ ಓದಿ: ದಿಲ್ಲಿಯಲ್ಲಿ ದರ್ಬಾರ್‌, ದಿಲ್‌ ಗೆದ್ದ ಗಿಲ್‌ – ಭಾರತದ ಹಿಡಿತದಲ್ಲಿ ಪಂದ್ಯ, ವಿಂಡೀಸ್‌ 140ಕ್ಕೆ 4 ವಿಕೆಟ್‌

    2023 ರಲ್ಲಿ ಪಾಕಿಸ್ತಾನ ಪರ T20I ಮತ್ತು ODI ಎರಡರಲ್ಲೂ ಆಡಿದ್ದರು. 2023-24ರಲ್ಲಿ ಮೊಣಕೈ ಸಮಸ್ಯೆ ಎದುರಿಸಿದರು. ಮತ್ತೆ ಅವರ ಪುನರಾಗಮನವಾಗಿಲ್ಲ. 2025 ರ ಡ್ರಾಫ್ಟ್‌ನಲ್ಲಿ ಮಾರಾಟವಾಗದಿದ್ದಕ್ಕೆ PSL ಅನ್ನು ಬಹಿಷ್ಕರಿಸುವ ಪ್ರತಿಜ್ಞೆ ಮಾಡಿದ್ದರು.

  • ಮಹಿಳಾ ವಿಶ್ವಕಪ್‌ನಲ್ಲೂ ನೋ ಹ್ಯಾಂಡ್‌ಶೇಕ್‌ – ಪಾಕ್‌ ತಂಡಕ್ಕೆ ಮತ್ತೆ ಮುಖಭಂಗ

    ಮಹಿಳಾ ವಿಶ್ವಕಪ್‌ನಲ್ಲೂ ನೋ ಹ್ಯಾಂಡ್‌ಶೇಕ್‌ – ಪಾಕ್‌ ತಂಡಕ್ಕೆ ಮತ್ತೆ ಮುಖಭಂಗ

    ಕೊಲಂಬೊ: ಇತ್ತೀಚೆಗಷ್ಟೇ ಮುಕ್ತಾಯಗೊಂಡ ಪುರುಷರ ಟಿ20 ಏಷ್ಯಾಕಪ್‌ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಗಳಲ್ಲಿ ಸಾಕಷ್ಟು ವಿವಾದಗಳು ಕಂಡುಬಂದಿತ್ತು. ಆದ್ರೆ ಟೀಂ ಇಂಡಿಯಾ (Team India) ಲೀಗ್‌, ಸೂಪರ್‌-4 ಹಾಗೂ ಫೈನಲ್‌ನಲ್ಲಿ ಪಾಕ್‌ಗೆ ಸೋಲುಣಿಸುವ ಮೂಲಕ ತಿರುಗೇಟು ಕೊಟ್ಟಿತು. ಇದೀಗ ಮಹಿಳಾ ಏಕದಿನ ವಿಶ್ವಕಪ್‌ ಟೂರ್ನಿಗೂ ವಿವಾದ ಕಾಲಿಟ್ಟಿದೆ.

    ಈ ಬಾರಿ ಮಹಿಳಾ ಏಕದಿನ ವಿಶ್ವಕಪ್‌ ಟೂರ್ನಿ ಭಾರತದ ಆತಿಥ್ಯದಲ್ಲೇ ಇದ್ದರೂ, ಪಾಕ್‌ ಜೊತೆಗಿನ ಸಂಘರ್ಷದಿಂದಾಗಿ ಶ್ರೀಲಂಕಾದಲ್ಲಿ ನಡೆಸಲಾಗುತ್ತಿದೆ. ಇಂದು ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ಮತ್ತು ಪಾಕ್‌ ಮುಖಾಮುಖಿಯಾಗಿವೆ. ಟಾಸ್‌ ಗೆದ್ದ ಪಾಕ್‌ ನಾಯಕಿ ಫಾತಿಮಾ ಸನಾ (Fatima Sana) ಮೊದಲು ಫೀಲ್ಡಿಂಗ್‌ ಆಯ್ದುಕೊಂಡಿದ್ದು, ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಭಾರತಕ್ಕೆ ಬಿಟ್ಟುಕೊಟ್ಟಿದ್ದಾರೆ. ಆದ್ರೆ ಟಾಸ್‌ ವೇಳೆ ಟೀಂ ಇಂಡಿಯಾ ನಾಯಕಿ ಹರ್ಮನ್‌ ಪ್ರೀತ್‌ ಕೌರ್‌ (Harmanpreet Kaur) ಪಾಕ್‌ ನಾಯಕಿಯ ಕೈಕುಲುಕದೇ ಹಿಂದೆ ಸರಿದಿದ್ದಾರೆ. ಇದು ಪಾಕ್‌ ತಂಡಕ್ಕೆ ಮತ್ತೆ ಮುಜುಗರ ತರಿಸಿದೆ.

    ಟೀಂ ಇಂಡಿಯಾ ಪ್ಲೇಯಿಂಗ್‌-11
    ಪ್ರತೀಕಾ ರಾವಲ್, ಸ್ಮೃತಿ ಮಂಧಾನ, ಹರ್ಲಿನ್‌ ಡಿಯೋಲ್‌, ಹರ್ಮನ್‌ ಪ್ರೀತ್‌ ಕೌರ್‌ (ನಾಯಕಿ), ಜೆಮಿಮಾ ರೊಡ್ರಿಗ್ಸ್‌, ದೀಪ್ತಿ ಶರ್ಮಾ, ರಿಚಾ ಘೋಷ್‌, ಸ್ನೇಹ್‌ ರಾಣಾ, ರೇಣುಕಾ ಸಿಂಗ್‌, ಕ್ರಾಂತಿ ಗೌಡ್‌, ಶ್ರೀ ಚಾರಣಿ.

    ಪಾಕ್‌ ಪ್ಲೇಯಿಂಗ್‌-11
    ಮುನಿಬಾ ಅಲಿ, ಸದಾಫ್ ಶಮಾಸ್, ಸಿದ್ರ್ ಅಮೀನ್, ರಮೆನ್ ಶಮೀಮ್, ಆಲಿಯಾ ರಿಯಾಜ್, ಸಿದ್ಧ ನವಾಜ್, ಫಾತಿಮಾ ಸನಾ (ನಾಯಕಿ), ನಟಾಲಿಯಾ ಪರ್ವೈಜ್, ಡಯಾನಾ ಬೇಗ್, ನಶ್ರ್ ಸಂಧು, ಸಾಲಿಯಾ ಇಕ್ಬಾಲ್.

  • 1 ಗಂಟೆ ಹೈಡ್ರಾಮಾ, ಟ್ರೋಫಿ ಜೊತೆ ಓಡಿದ ನಖ್ವಿ – ಮಧ್ಯರಾತ್ರಿ ಏನಾಯ್ತ? ಇಲ್ಲಿದೆ ಪೂರ್ಣ ವಿವರ

    1 ಗಂಟೆ ಹೈಡ್ರಾಮಾ, ಟ್ರೋಫಿ ಜೊತೆ ಓಡಿದ ನಖ್ವಿ – ಮಧ್ಯರಾತ್ರಿ ಏನಾಯ್ತ? ಇಲ್ಲಿದೆ ಪೂರ್ಣ ವಿವರ

    ದುಬೈ: ಏಷ್ಯಾ ಕಪ್‌ (Asia Cup) ಫೈನಲ್‌ ಗೆದ್ದ ಬಳಿಕ ಸುಮಾರು 1 ಗಂಟೆಗಳ ಕಾಲ ದುಬೈ ಮೈದಾನದಲ್ಲಿ ದೊಡ್ಡ ಹೈಡ್ರಾಮಾವೇ ನಡೆಯಿತು. ಅಂತಿಮವಾಗಿ ಭಾರತ (Team India) ತಂಡಕ್ಕೆ ಟ್ರೋಫಿ ನೀಡದೇ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಧ್ಯಕ್ಷ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಅಧ್ಯಕ್ಷ ಮೊಹ್ಸಿನ್ ನಖ್ವಿ ಮುಜುಗರ ಅನುಭವಿಸಿದರು.

    ಮಧ್ಯ ರಾತ್ರಿ ಏನಾಯ್ತು?
    ಮಧ್ಯರಾತ್ರಿ 12 ಗಂಟೆಯ ವೇಳೆಗೆ ಪಾಕ್‌ ತಂಡವನ್ನು ಸೋಲಿಸಿ ಭಾರತ ಚಾಂಪಿಯನ್‌ ಪಟ್ಟ ಅಲಂಕರಿಸಿತು. ಜಯಗಳಿಸಿದ ಬಳಿಕ ಪಿಸಿಬಿ ಅಧ್ಯಕ್ಷ ಮೊಹ್ಸಿನ್‌ ನಖ್ವಿ ಅವರಿಂದ ಪೋಡಿಯಂನಲ್ಲಿ ಪ್ರಶಸ್ತಿಯನ್ನು ಸೂರ್ಯಕುಮಾರ್‌ ಸ್ವೀಕರಿಸುವುದಿಲ್ಲ ಬಿಸಿಸಿಐ ಎಸಿಸಿಗೆ ಹೇಳಿತು. ವೇದಿಕೆಯ ಮೇಲಿದ್ದ ಬೇರೆ ಗಣ್ಯರಿಂದ ಪ್ರಶಸ್ತಿಯನ್ನು ವಿತರಿಸುವಂತೆ ಮನವಿ ಮಾಡಿತು.

    ಈ ವಿಚಾರವನ್ನು ಎಸಿಸಿ ನಖ್ವಿ ಬಳಿ ಹೇಳಿದಾಗ, ಪ್ರಶಸ್ತಿಯನ್ನು ನೀಡುವುದಾದರೆ ನಾನೇ ನೀಡುತ್ತೇನೆ. ಬೇರೆಯವರು ಪ್ರಶಸ್ತಿ ನೀಡಲು ನಾನು ಒಪ್ಪಿಗೆ ನೀಡುವುದಿಲ್ಲ ಎಂದು ಹೇಳಿದರು. ಈ ವಿಚಾರದ ಬಗ್ಗೆ ಎಸಿಸಿ ಮತ್ತು ಪಿಸಿಬಿ ಮಧ್ಯೆ ದೊಡ್ಡ ಚರ್ಚೆ ನಡೆಯುತ್ತಲೇ ಇತ್ತು.

    ಭಾರತ ನಖ್ವಿಯಿಂದ ಪ್ರಶಸ್ತಿ ಸ್ವೀಕರಿಸದೇ ಇರಲು ಕಾರಣ ಸಹ ಇದೆ. ಮೊದಲಿನಿಂದಲೂ ಭಾರತವನ್ನು ಕಟು ಪದಗಳಿಂದ ಟೀಕಿಸುತ್ತಿದ್ದ ನಖ್ವಿ ಏಷ್ಯಕಪ್‌ನಲ್ಲೂ ಟೀಂ ಇಂಡಿಯಾದ ವಿರುದ್ಧ ಕಿಡಿಕಾರಿದ್ದರು. ಈ ಕಾರಣಕ್ಕೆ ಭಾರತ ನಖ್ವಿಯಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿತ್ತು.

    ಇನ್ನೊಂದು ಕಡೆ ಸೋತ ಬಳಿಕ ಡ್ರೆಸ್ಸಿಂಗ್‌ ರೂಂ ಒಳಗಡೆ ಹೋದ ಪಾಕ್‌ ಆಟಗಾರರು ಹೊರಗೆ ಬರಲೇ ಇಲ್ಲ. ಇದರಿಂದಾಗಿ ಪ್ರಶಸ್ತಿ ವಿತರಣಾ ಕಾರ್ಯಕ್ರಮ ತಡವಾಯಿತು. ಪಂದ್ಯ ಮುಗಿದರೂ ಪ್ರಶಸ್ತಿ ವಿತರಣೆಯಾಗದ್ದಕ್ಕೆ ಕಮೆಂಟ್ರಿ ಹೇಳುತ್ತಿದ್ದ ರವಿಶಾಸ್ತ್ರಿ, ಪಂದ್ಯ ಮುಗಿದು 45 ನಿಮಿಷವಾಯಿತು. ಮೈದಾನದಿಂದ ಅಭಿಮಾನಿಗಳು ಹೊರ ಹೋಗುತ್ತಿದ್ದು, ಆಟಗಾರರು ಕಾಯುತ್ತಿದ್ದಾರೆ. ಏನು ನಡೆಯುತ್ತಿದೆ ಎಂದು ಪ್ರಶ್ನಿಸುವ ಮೂಲಕ ಆಕ್ರೋಶ ಹೊರಹಾಕಿದರು.  ಇದನ್ನೂ ಓದಿ:  Asia Cup 2025 | ಚಾಂಪಿಯನ್‌ ಭಾರತ ತಂಡಕ್ಕೆ ಬಿಸಿಸಿಐನಿಂದ 21 ಕೋಟಿ ಗಿಫ್ಟ್‌

    ಅಂತಿಮವಾಗಿ ಸುಮಾರು 1 ಗಂಟೆಯ ನಂತರ ಪಾಕ್‌ ಆಟಗಾರರು ಮೈದಾನಕ್ಕೆ ಆಗಮಿಸಿದ ಬಳಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಆರಂಭವಾಯಿತು. ಕುಲದೀಪ್‌ ಯಾದವ್‌, ತಿಲಕ್‌ ವರ್ಮಾ, ಅಭಿಷೇಕ್‌ ಶರ್ಮಾ ಪ್ರಶಸ್ತಿಗಳನ್ನು ಸ್ವೀಕರಿಸಿದ ಬಳಿಕ ಪಾಕ್‌ ತಂಡಕ್ಕೆ ರನ್ನರ್‌ ಅಪ್‌ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ನಂತರ ಎರಡೂ ಕಡೆಯ ನಾಯಕರನ್ನು ಸೈಮನ್ ಡೌಲ್ ಕರೆಸಿ ಮಾತನಾಡಿದರು. ಕೊನೆಗೆ “ಭಾರತೀಯ ಕ್ರಿಕೆಟ್ ತಂಡವು ಇಂದು ರಾತ್ರಿ ತಮ್ಮ ಪ್ರಶಸ್ತಿಗಳನ್ನು ಪಡೆಯುವುದಿಲ್ಲ ಎಂದು ಎಸಿಸಿಯಿಂದ ನನಗೆ ತಿಳಿಸಲಾಗಿದೆ. ಹೀಗಾಗಿ ಇಲ್ಲಿಗೆ ಈ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಮುಕ್ತಾಯವಾಗಲಿದೆ” ಎಂದು ಹೇಳಿದರು. ಬೆನ್ನಲ್ಲೇ ವೇದಿಕೆಯಲ್ಲಿದ್ದ ಗಣ್ಯರು ಮೈದಾನವನ್ನು ತೊರೆದರು. ನಖ್ವಿ ತೊರೆಯುತ್ತಿದ್ದಂತೆ ಎಸಿಸಿ ಅಧಿಕಾರಿಯೊಬ್ಬರು ಟ್ರೋಫಿಯನ್ನು ಎತ್ತಿಕೊಂಡು ಮೈದಾನದಿಂದ ಹೊರಹೋದರು. ಇದನ್ನೂ ಓದಿ:  ಯುದ್ಧವನ್ನ ಕ್ರೀಡೆಗೆ ಎಳೆದು ತರೋದು ಹತಾಶೆಯನ್ನ ತೋರಿಸುತ್ತೆ – ಮೋದಿ ಟ್ವೀಟ್‌ಗೆ ನಖ್ವಿ ರಿಯಾಕ್ಷನ್‌

    ಭಾರತೀಯ ತಂಡವು ಟ್ರೋಫಿಗಾಗಿ ಬಹಳ ತಾಳ್ಮೆಯಿಂದ ಕಾಯುತ್ತಿತ್ತು. ʼಚಾಂಪಿಯನ್ಸ್ʼ ಎಂದು ಬರೆದ ಫಲಕವನ್ನು ಮೈದಾನದ ಸಿಬ್ಬಂದಿ ಎರಡು ಬಾರಿ ತಂದು ನಂತರ ಹಿಂದಕ್ಕೆ ತೆಗೆದುಕೊಂಡು ಹೋದರು. ಕಾರ್ಯಕ್ರಮ ಮುಗಿದ ಬಳಿಕ ಟ್ರೋಫಿ ಎತ್ತಿಕೊಂಡು ಹೋದರೂ ಟೀಂ ಇಂಡಿಯಾ ಆಟಗಾರರು ಮೈದಾನದಲ್ಲೇ ಇದ್ದು ಫೋಟೋ ಕ್ಲಿಕ್ಕಿಸಿ ಸಂಭ್ರಮಿಸುತ್ತಿದ್ದರು. ಕೆಲವರು ಅಭಿಮಾನಿಗಳ ಬಳಿ ಹೋಗಿ ಕೈ ಎತ್ತಿ ವಿಜಯದ ನಗೆ ಬೀರುತ್ತಿದ್ದರು.

    ಈ ಸಂದರ್ಭದಲ್ಲಿ ಹಾರ್ದಿಕ್‌ ಪಾಂಡ್ಯ ಪೋಡಿಯಂ ಹತ್ತಿ ಸೆಲ್ಫಿ ತೆಗೆಯತೊಡಗಿದರು. ನಂತರ ಉಳಿದ ಆಟಗಾರರು ಪೋಡಿಯಂ ಮೇಲೆ ಹತ್ತಿದರು. ಎಲ್ಲರೂ ಪೋಡಿಯಂನಲ್ಲಿ ಇರುವಾಗ ನಾಯಕ ಸೂರ್ಯಕುಮಾರ್‌ ಯಾದವ್‌ ಅವರು ರೋಹಿತ್ ಶರ್ಮಾ ಅವರ ಐಕಾನಿಕ್ ಟಿ20 ವಿಶ್ವಕಪ್ 2024 ರ ನಡಿಗೆಯನ್ನು ಅನುಕರಿಸುತ್ತಾ ಕಾಲ್ಪನಿಕ ಟ್ರೋಫಿಯನ್ನು ಹಿಡಿದುಕೊಂಡು ತಂಡದ ಬಳಿ ಬಂದು ಕೈಯನ್ನು ಎತ್ತಿ ಟ್ರೋಫಿ ಎತ್ತಿದ್ದಂತೆ ಸಂಭ್ರಮಿಸಿದರು. ಈ ಸಂಭ್ರಮಾಚರಣೆಗೆ ಉಳಿದ ಆಟಗಾರರು ಜೊತೆಗೂಡಿದರು.

    ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಟ್ರೋಫಿಯನ್ನು ನೀಡದ್ದಕ್ಕೆ ಸೂರ್ಯಕುಮಾರ್‌ ಯಾದವ್‌ ಎಸಿಸಿಯನ್ನು ಟೀಕಿಸಿದರು. ನಾನು ಎಲ್ಲಿಯೂ ಚಾಂಪಿಯನ್ ತಂಡಕ್ಕೆ ಟ್ರೋಫಿ ನಿರಾಕರಿಸುವುದನ್ನು ನೋಡಿಲ್ಲ. ನಾವು ಬಹಳ ಕಷ್ಟಪಟ್ಟು ಚಾಂಪಿಯನ್‌ ಆಗಿದ್ದೇವೆ ಎಂದು ಹೇಳಿದರು. ಇದಕ್ಕೆ ಅಭಿಷೇಕ್‌ ಶರ್ಮಾ, ನಮಗೆ ಒಂದು ಟ್ರೋಫಿ ಸಿಕ್ಕಿದೆ. ಸೂರ್ಯ ತಂದು ಕೊಟ್ಟಿದ್ದು ನಾವು ಸಂಭ್ರಮಿಸಿದ್ದೇವೆ. ಆ ಟ್ರೋಫಿಯ ತೂಕದ ಮಹತ್ವ ನಮಗೆ ತಿಳಿದಿದೆ ಎಂದು ಹೇಳುವ ಮೂಲಕ ನಖ್ವಿಗೆ ಟಾಂಗ್‌ ನೀಡಿದರು.

    ಭಾರತದ ಬಿಸಿಸಿಐ ಪ್ರತಿನಿಧಿಗಳು ಫೈನಲ್‌ ಪಂದ್ಯ ವೀಕ್ಷಿಸಲು ದುಬೈಗೆ ಮೈದಾನಕ್ಕೆ ಬಂದಿರಲಿಲ್ಲ. ಭಾನುವಾರ ಬಿಸಿಸಿಐ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಮಿಥುನ್‌ ಮನ್ಹಾಸ್ ಅವರನ್ನು ಅವಿರೋಧವಾಗಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು. ಫೈನಲ್‌ ಪಂದ್ಯದ ಬಳಿಕ ನಡೆದ ಪ್ರಶಸ್ತಿ ವಿತರಣಾ ವೇದಿಕೆಯಲ್ಲಿ ಬಿಸಿಸಿಐ ಪ್ರತಿನಿಧಿ ಇರಬೇಕಿತ್ತು. ಆದರೆ ಚುನಾವಣೆ ನೆಪದಲ್ಲಿ ಬಿಸಿಸಿಐ ಪ್ರತಿನಿಧಿಗಳು ನಿನ್ನೆ ದುಬೈ ಮೈದಾನದಲ್ಲಿ ಕಾಣಿಸದೇ ಫೈನಲ್‌ ಪಂದ್ಯದಿಂದ ಅಂತರವನ್ನು ಕಾಯ್ದುಕೊಂಡಿದ್ದರು.

  • ಮತ್ತೆ ಪಾಕಿಗೆ ನೋ ಎಂದ ಸ್ಕೈ – ನಾನು ಏನು ಹೇಳಲ್ಲ ಎಂದ ಸಲ್ಮಾನ್ ಅಲಿ

    ಮತ್ತೆ ಪಾಕಿಗೆ ನೋ ಎಂದ ಸ್ಕೈ – ನಾನು ಏನು ಹೇಳಲ್ಲ ಎಂದ ಸಲ್ಮಾನ್ ಅಲಿ

    ದುಬೈ: ಏಷ್ಯಾ ಕಪ್‌ ಫೈನಲ್‌ (Asia Cup Final) ಫೋಟೋಶೂಟ್‌ನಲ್ಲಿ ಭಾಗವಹಿಸದ ಮೂಲಕ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್‌ ಯಾದವ್‌ (Suryakumar Yadav) ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

    ಐಸಿಸಿ, ಏಷ್ಯಾಕಪ್‌ನಂತಹ ಪ್ರತಿಷ್ಠಿತ ಟೂರ್ನಿಯ ಫೈನಲ್‌ ಪಂದ್ಯಕ್ಕೂ ಮೊದಲು ಎರಡು ತಂಡಗಳ ನಾಯಕರು ಕಪ್‌ ಜೊತೆ ನಿಂತುಕೊಂಡು ಫೋಟೋಶೂಟ್‌ ಮಾಡಿಸುತ್ತಾರೆ. ಆದರೆ ಈ ಬಾರಿ ಸೂರ್ಯಕುಮಾರ್‌ ಯಾದವ್‌ ಫೋಟೋಶೂಟ್‌ಗೆ (Photoshoot) ʼನೋʼ ಎಂದಿದ್ದಾರೆ.  ಇದನ್ನೂ ಓದಿ:  ಏಷ್ಯಾ ಕಪ್‌ಗಾಗಿ ಇಂದು ಭಾರತ-ಪಾಕ್‌ ಸಮರ – 41 ವರ್ಷಗಳ ಇತಿಹಾಸಲ್ಲೇ ಫೈನಲ್‌ನಲ್ಲಿ ಮೊದಲ ಮುಖಾಮುಖಿ

    ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾಕಿಸ್ತಾನ (Pakistan) ನಾಯಕ ಸಲ್ಮಾನ್ ಅಲಿ ಆಘಾ, ಫೋಟೋಶೂಟ್ ನಲ್ಲಿ ಭಾಗವಹಿಸಬೇಕೆ ಅಥವಾ ಬೇಡವೇ ಎಂಬುದು ಸೂರ್ಯಕುಮಾರ್ ಅವರ ನಿರ್ಧಾರ. ಈ ವಿಚಾರದ ಬಗ್ಗೆ ನಾನು ಏನು ಹೇಳಲಾರೆ ಎಂದು ತಿಳಿಸಿದರು.

    ಈ ಬಾರಿಯ ಏಷ್ಯಾ ಕಪ್‌ನಲ್ಲಿ ಭಾರತ ಪಾಕಿಸ್ತಾನ ಮೂರನೇ ಬಾರಿ ಮುಖಾಮುಖಿಯಾಗುತ್ತಿವೆ. ಲೀಗ್‌ ಮತ್ತು ಸೂಪರ್‌ 4 ಎರಡೂ ಪಂದ್ಯಗಳಲ್ಲಿ ಭಾರತವೇ ಜಯಗಳಿಸಿದೆ. ಅಷ್ಟೇ ಅಲ್ಲದೇ ಭಾರತ ಅಜೇಯವಾಗಿ ಫೈನಲ್‌ ಪ್ರವೇಶಿಸಿದೆ.

  • ಕೊನೆಯಲ್ಲಿ ಬೌಲರ್‌ಗಳ ಮ್ಯಾಜಿಕ್‌ – ಸೂಪರ್‌ ಓವರ್‌ನಲ್ಲಿ ಭಾರತಕ್ಕೆ ರೋಚಕ ಜಯ

    ಕೊನೆಯಲ್ಲಿ ಬೌಲರ್‌ಗಳ ಮ್ಯಾಜಿಕ್‌ – ಸೂಪರ್‌ ಓವರ್‌ನಲ್ಲಿ ಭಾರತಕ್ಕೆ ರೋಚಕ ಜಯ

    ದುಬೈ: ಏಷ್ಯಾಕಪ್‌ (Asia Cup) ಸೂಪರ್‌4 ಸೂಪರ್‌ ಓವರ್‌ನಲ್ಲಿ ಶ್ರೀಲಂಕಾ (Sri Lanka) ವಿರುದ್ಧ ಭಾರತ (Team India) ಜಯಗಳಿಸಿ ಅಜೇಯವಾಗಿ ಫೈನಲ್‌ ಪ್ರವೇಶಿಸಿದೆ.

    ಆಟಕ್ಕುಂಟು ಲೆಕ್ಕಕ್ಕೆ ಇಲ್ಲದ ಪಂದ್ಯದಲ್ಲಿ ಪಾತುಮ್ ನಿಸ್ಸಂಕ (Pathum Nissanka) ಅವರ ಸ್ಫೋಟಕ ಶತಕ, ಕುಸಾಲ್ ಪೆರೆರಾ (Kusal Perera) ಅವರ ಅರ್ಧಶತಕದ ನೆರವಿನಿಂದ ಶ್ರೀಲಂಕಾ 5 ವಿಕೆಟ್‌ ನಷ್ಟಕ್ಕೆ 202 ರನ್‌ ಗಳಿಸುವ ಮೂಲಕ ಪಂದ್ಯ ಟೈನಲ್ಲಿ ಅಂತ್ಯವಾಯಿತು. ಆದರೆ ಸೂಪರ್‌ ಓವರ್‌ನಲ್ಲಿ ಸೂರ್ಯ ಕುಮಾರ್‌ ಮೊದಲ ಎಸೆತದಲ್ಲಿ 3 ರನ್‌ ಹೊಡೆಯುವ ಮೂಲಕ ಭಾರತ ರೋಚಕ ಜಯ ಗಳಿಸಿತು.

    ಸೂಪರ್‌ ಓವರ್‌ ಹೇಗಿತ್ತು?
    ಆರ್ಶ್‌ದೀಪ್‌ ಎಸೆದ ಮೊದಲ ಓವರ್‌ ಮೊದಲ ಎಸೆತವನ್ನು ಕುಸಲ್ ಪೆರೆರಾ ಸಿಕ್ಸ್‌ ಹೊಡೆಯಲು ಹೋಗಿ ರಿಂಕು ಸಿಂಗ್‌ಗೆ ಕ್ಯಾಚ್‌ ನೀಡಿದರು. ನಂತರ ಎರಡನೇ ಎಸೆತದಲ್ಲಿ ಒಂದು ರನ್‌ ಬಂತು. ನಂತರದ ಎರಡು ಎಸೆತದಲ್ಲಿ ಯಾವುದೇ ರನ್‌ ಬರಲಿಲ್ಲ. 4ನೇ ಎಸೆತ ವೈಡ್‌ ಆಯ್ತು. ನಂತರ ಎಸೆತದಲ್ಲಿ ಯಾವುದೇ ರನ್‌ ಬರಲಿಲ್ಲ. 5 ಎಸೆತದಲ್ಲಿ ಶನಕ ಸಿಕ್ಸ್‌ ಸಿಡಿಸಲು ಹೋಗಿ ಜಿತೇಶ್‌ ಶರ್ಮಾಗೆ ಕ್ಯಾಚ್‌ ನೀಡಿದರು. ಸೂಪರ್‌ ಓವರ್‌ನಲ್ಲಿ ಎರಡು ವಿಕೆಟ್‌ ಪತನಗೊಂಡರೆ ಇನ್ನಿಂಗ್ಸ್‌ ಮುಗಿದ ಕಾರಣ ಲಂಕಾ ಭಾರತಕ್ಕೆ 3 ರನ್‌ಗಳ ಗುರಿಯನ್ನು ನೀಡಿತ್ತು.

    ಭಾರತದ ಪರ ಓಪನರ್‌ಗಳಾಗಿ ನಾಯಕ ಸೂರ್ಯಕುಮಾರ್‌ ಮತ್ತು ಶುಭಮನ್‌ ಗಿಲ್‌ ಕ್ರೀಸ್‌ಗೆ ಆಗಮಿಸಿದರು. ಹಸರಂಗ ಎಸೆದ ಮೊದಲ ಎಸೆತವನ್ನು ಸೂರ್ಯಕುಮಾರ್‌ ಎಕ್ಸ್‌ಟ್ರಾ ಕವರ್‌ಗೆ ತಳ್ಳಿ ಮೂರು ರನ್‌ ಓಡುವ ಮೂಲಕ ಭಾರತ ಜಯ ಸಾಧಿಸಿತು.

     

    ಪಂದ್ಯ ಟೈ ಆಗಿದ್ದು ಹೇಗೆ?
    ಕೊನೆಯ ಎರಡು ಓವರ್‌ಗಳಲ್ಲಿ 2 ಓವರ್‌ಗಳಲ್ಲಿ 23 ರನ್‌ ಬೇಕಿತ್ತು. ಅರ್ಶ್‌ದೀಪ್‌ ಎಸೆದ 19ನೇ ಓವರ್‌ನಲ್ಲಿ 11 ರನ್‌ ನೀಡಿದರು. ಕೊನೆಯ ಓವರ್‌ನಲ್ಲಿ 12 ರನ್‌ ಬೇಕಿತ್ತು. ಇದನ್ನೂ ಓದಿ:  ಸಿಕ್ಸ್‌ ಆಯ್ತು ಈಗ ಏಷ್ಯಾಕಪ್‌ನಲ್ಲಿ ಮತ್ತೊಂದು ದಾಖಲೆ ಬರೆದ ಅಭಿಷೇಕ್‌ ಶರ್ಮಾ

    ಹರ್ಷಿತ್‌ ರಾಣಾ ಎಸೆದ ಮೊದಲ ಓವರ್‌ನಲ್ಲಿ  107 ರನ್‌(58 ಎಸೆತ, 7 ಬೌಂಡರಿ, 6 ಸಿಕ್ಸ್‌) ಹೊಡೆದಿದ್ದ ಪಾತುಮ್ ನಿಸ್ಸಂಕ ವರುಣ್‌ ಚಕ್ರವರ್ತಿಗೆ ಕ್ಯಾಚ್‌ ನೀಡಿ ಔಟಾದರು. ಇದು ಪಂದ್ಯಕ್ಕೆ ರೋಚಕ ತಿರುವು ನೀಡಿತು. ನಂತರದ ಎಸೆತದಲ್ಲಿ 2, 1 ಬೈ, 2, 4 ರನ್‌ ಬಂತು. ಕೊನೆಯ ಓವರ್‌ನಲ್ಲಿ 3 ರನ್‌ ಬೇಕಿತ್ತು. ಶನಕ ಬೌಂಡರಿ ಹೊಡೆಯುವ ಪ್ರಯತ್ನ ನಡೆಸಿದರೂ 2 ರನ್‌ ಓಡಿದ ಪರಿಣಾಮ ಪಂದ್ಯ ಟೈನಲ್ಲಿ ಅಂತ್ಯವಾಯಿತು.


    ಲಂಕಾದ ಉತ್ತಮ ಆಟ:
    ಗೆಲ್ಲಲು 203 ರನ್‌ಗಳ ಕಠಿಣ ಸವಾಲನ್ನು ಪಡೆದ ಲಂಕಾ ಮೊದಲ ಓವರಿನಲ್ಲಿ ಕುಸಾಲ್ ಮೆಂಡಿಸ್ ಅವರ ವಿಕೆಟ್‌ ಕಳೆದುಕೊಂಡಿತ್ತು. ಎರಡನೇ ವಿಕೆಟಿಗೆ ಪಾತುಮ್ ನಿಸ್ಸಂಕ, ಕುಸಾಲ್ ಪೆರೆರಾ 70 ಎಸೆತಗಳಲ್ಲಿ 127 ರನ್‌ ಜೊತೆಯಾಟವಾಡಿ ಭದ್ರವಾದ ಇನ್ನಿಂಗ್ಸ್‌ ಕಟ್ಟಿದರು. ಕುಸಾಲ್ ಪೆರೆರಾ 58 ರನ್‌ (32 ಎಸೆತ, 8 ಬೌಂಡರಿ, 1 ಸಿಕ್ಸ್‌) ಗಳಿಸಿದ್ದಾಗ ಸ್ಟಂಪ್‌ ಔಟಾದರು. ನಂತರ ಬಂದ ನಾಯಕ ಚರಿತ್‌ ಅಸಲಂಕಾ ಸಿಕ್ಸ್‌ ಸಿಡಿಸಲು ಹೋಗಿ 5 ರನ್‌ ಗಳಿಸಿ ಕ್ಯಾಚ್‌ ನೀಡಿದರು. ಕಮಿಂಡು ಮೆಂಡಿಸ್‌ 3 ರನ್‌ಗಳಿಸಿ ವಿಕೆಟ್‌ ಒಪ್ಪಿಸಿದರು.

    ಇಂದಿನ ಪಂದ್ಯದಲ್ಲಿ ಬುಮ್ರಾ ಬದಲು ಅರ್ಶ್‌ದೀಪ್‌ ಸಿಂಗ್‌ ಅವರನ್ನು ಆಡಿಸಲಾಗಿತ್ತು. ಆದರೆ ಭಾರತದ ಬೌಲರ್‌ಗಳು ರನ್‌ ನಿಯಂತ್ರಣಕ್ಕೆ ಕಡಿವಾಣ ಹಾಕಲು ವಿಫಲರಾದರು. ಪಾಂಡ್ಯ ಕೇವಲ ಒಂದು ಓವರ್‌ ಎಸೆದು ಮೈದಾನ ತೊರೆದಿದ್ದು ಭಾರತಕ್ಕೆ ಹಿನ್ನಡೆ ಆಗಿತ್ತು.

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಭಾರತ ಅಭಿಷೇಕ್‌ ಶರ್ಮಾ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 202 ರನ್‌ ಗಳಿಸಿತ್ತು.ಶ್ರೀಲಂಕಾ ವಿರುದ್ಧದ ಇಂದಿನ ಪಂದ್ಯದಲ್ಲಿ ಅಭಿಷೇಕ್‌ ಶರ್ಮಾ 31 ಎಸೆತಗಳಲ್ಲಿ 61 ರನ್‌(8 ಬೌಂಡರಿ, 2 ಸಿಕ್ಸ್‌ ) ಸಿಡಿಸಿ ಔಟಾದರು. ತಿಲಕ್‌ ವರ್ಮಾ ಔಟಾಗದೇ 49 ರನ್‌(34 ಎಸೆತ, 4 ಬೌಂಡರಿ, 1 ಸಿಕ್ಸ್‌), ಸಂಜು ಸ್ಯಾಮ್ಸನ್‌ 39 ರನ್‌(23 ಎಸೆತ, 1 ಬೌಂಡರಿ, 3 ಸಿಕ್ಸ್‌), ಅಕ್ಷರ್‌ ಪಟೇಲ್‌ ಔಟಾಗದೇ 21 ರನ್‌(15 ಎಸೆತ, 1 ಬೌಂಡರಿ, 1 ಸಿಕ್ಸ್‌) ಹೊಡೆದರು.

  • ಸಿಕ್ಸ್‌ ಆಯ್ತು ಈಗ ಏಷ್ಯಾಕಪ್‌ನಲ್ಲಿ ಮತ್ತೊಂದು ದಾಖಲೆ ಬರೆದ ಅಭಿಷೇಕ್‌ ಶರ್ಮಾ

    ಸಿಕ್ಸ್‌ ಆಯ್ತು ಈಗ ಏಷ್ಯಾಕಪ್‌ನಲ್ಲಿ ಮತ್ತೊಂದು ದಾಖಲೆ ಬರೆದ ಅಭಿಷೇಕ್‌ ಶರ್ಮಾ

    ದುಬೈ: ಸಿಕ್ಸ್‌ ಸಿಡಿಸಿ ದಾಖಲೆ ಬರೆದಿದ್ದ ಅಭಿಷೇಕ್‌ ಶರ್ಮಾ (Abhishek Sharma) ಈಗ ಏಷ್ಯಾಕಪ್‌ (Asia Cup) ವಿರಾಟ್‌ ಕೊಹ್ಲಿ, ಮೊಹಮ್ಮದ್‌ ರಿಜ್ವಾನ್‌ ದಾಖಲೆ ಮುರಿದು ಇತಿಹಾಸ ಸೃಷ್ಟಿಸಿದ್ದಾರೆ.

    ಏಷ್ಯಾಕಪ್‌ ಒಂದು ಆವೃತ್ತಿಯಲ್ಲಿ 300 ರನ್‌ ಗಡಿ ದಾಟಿದ ಮೊದಲ ಬ್ಯಾಟರ್‌ ಅಲ್ಲದೇ ಅತಿ ಹೆಚ್ಚು ರನ್‌ ಸಿಡಿಸಿದ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಸದ್ಯ ಈಗ 309 ರನ್‌ ಸಿಡಿಸುವ ಮೂಲಕ ಅತಿ ಹೆಚ್ಚು ರನ್‌ ಸಿಡಿಸಿದ ಆಟಗಾರನಾಗಿ ಹೊರಹೊಮ್ಮಿದ್ದಾರೆ.

    ಅತಿಹೆಚ್ಚು ರನ್‌ ಹೊಡೆದ ಆಟಗಾರರ ಪೈಕಿ ಮೊದಲ ಸ್ಥಾನದಲ್ಲಿ ಇಲ್ಲಿಯವರೆಗೆ ಪಾಕಿಸ್ತಾನದ ಮೊಹಮ್ಮದ್‌ ರಿಜ್ವಾನ್‌ ಇದ್ದರೆ ಎರಡನೇ ಸ್ಥಾನದಲ್ಲಿ ವಿರಾಟ್‌ ಕೊಹ್ಲಿ ಇದ್ದರು. 2022 ರ ಆವೃತ್ತಿಯಲ್ಲಿ ರಿಜ್ವಾನ್‌ 281 ರನ್‌ ಹೊಡೆದರೆ ಕೊಹ್ಲಿ 276 ರನ್‌ ಹೊಡೆದಿದ್ದರು. ಇದನ್ನೂ ಓದಿ: ಸಿಕ್ಸ್‌ ಮೇಲೆ ಸಿಕ್ಸ್‌ – ಏಷ್ಯಾಕಪ್‌ನಲ್ಲಿ ದಾಖಲೆ ಬರೆದ ಅಭಿಷೇಕ್‌ ಶರ್ಮಾ

    ಶ್ರೀಲಂಕಾ ವಿರುದ್ಧದ ಇಂದಿನ ಪಂದ್ಯದಲ್ಲಿ ಅಭಿಷೇಕ್‌ ಶರ್ಮಾ 31 ಎಸೆತಗಳಲ್ಲಿ 61 ರನ್‌(8 ಬೌಂಡರಿ, 2 ಸಿಕ್ಸ್‌) ಸಿಡಿಸಿ ಔಟಾದರು. ತಿಲಕ್‌ ವರ್ಮಾ ಔಟಾಗದೇ 49 ರನ್‌(34 ಎಸೆತ, 4 ಬೌಂಡರಿ, 1 ಸಿಕ್ಸ್‌), ಸಂಜು ಸ್ಯಾಮ್ಸನ್‌ 39 ರನ್‌(23 ಎಸೆತ, 1 ಬೌಂಡರಿ, 3 ಸಿಕ್ಸ್‌), ಅಕ್ಷರ್‌ ಪಟೇಲ್‌ 21 ರನ್‌(15 ಎಸೆತ, 1 ಬೌಂಡರಿ, 1 ಸಿಕ್ಸ್‌) ನೆರವಿನಿಂದ ಭಾರತ 202 ರನ್‌ ಹೊಡೆದಿದೆ.