Tag: ಕ್ರಿಕೆಟ್ ಪಂದ್ಯಾವಳಿ

  • ಜ.18ರಂದು ಚಿಕ್ಕಬಳ್ಳಾಪುರದಲ್ಲಿ T20I ಲೀಗ್ – ಕಣದಲ್ಲಿ ಅಬ್ಬರಿಸಲಿದ್ದಾರೆ ಸಚಿನ್, ಯುವಿ, ಜಯಸೂರ್ಯ

    ಜ.18ರಂದು ಚಿಕ್ಕಬಳ್ಳಾಪುರದಲ್ಲಿ T20I ಲೀಗ್ – ಕಣದಲ್ಲಿ ಅಬ್ಬರಿಸಲಿದ್ದಾರೆ ಸಚಿನ್, ಯುವಿ, ಜಯಸೂರ್ಯ

    – 8 ದೇಶಗಳ 24 ಆಟಗಾರರು ಭಾಗಿ

    ಚಿಕ್ಕಬಳ್ಳಾಪುರ: ತಾಲೂಕಿನ ಮುದ್ದೇನಹಳ್ಳಿಯ (Muddenahalli) ಶ್ರೀ ಸತ್ಯಸಾಯಿ ಗ್ರಾಮದಲ್ಲಿ ಗುರುವಾರ ಅಂತಾರಾಷ್ಟ್ರೀಯ ಕ್ರಿಕೆಟ್  ದಿಗ್ಗಜರ ಸಮಾಗಮ ಆಗಲಿದೆ.

    ಸತ್ಯಸಾಯಿ ಗ್ರಾಮದಲ್ಲಿ ನಿರ್ಮಾಣವಾಗಿರುವ ಅಂತರಾಷ್ಟ್ರೀಯ ಮಟ್ಟದ ಸಾಯಿಕೃಷ್ಣನ್ ಕ್ರಿಕೆಟ್ ಸ್ಟೇಡಿಯಂನಲ್ಲಿ (Saikrishnan Cricket Stadium) ಗುರುವಾರ (ಜ.18) ಟಿ20 ಕ್ರಿಕೆಟ್ (T20 Cricket) ಟೂರ್ನಿಯನ್ನು ಆಯೋಜನೆ ಮಾಡಲಾಗಿದೆ. ಈ ಸೌಹಾರ್ದಯುತ ಪಂದ್ಯಾವಳಿಯಲ್ಲಿ 8 ದೇಶಗಳ 24 ದಿಗ್ಗಜ ಆಟಗಾರರು ಎರಡು ತಂಡಗಳಾಗಿ ಪಂದ್ಯವಾಡಲಿದ್ದಾರೆ. ಭಾರತದ ಮೂಲ ಧ್ಯೇಯ ವ್ಯಾಕ್ಯ ವಸುಧೈವ ಕುಟುಂಬಕಂ ಎಂಬ ಮಾತಿಗೆ ಪ್ರತಿರೂಪವೆಂಬಂತೆ ಒಂದು ಪ್ರಪಂಚ ಒಂದು ಕುಟುಂಬ ಕಪ್ ಎಂಬ ಹೆಸರಿನಡಿ ಪಂದ್ಯಾವಳಿ ಆಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಕ್ಲೀನ್‌ ಸ್ವೀಪ್‌ ಉತ್ಸಾಹದಲ್ಲಿ ಭಾರತ – ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಪಂದ್ಯ ವೀಕ್ಷಿಸುವ ಕ್ರಿಕೆಟ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್

    ನೂತನ ಹೊಸ ಸಾಯಿಕೃಷ್ಣನ್ ಸ್ಟೇಡಿಯಂ ಉದ್ಘಾಟನಾ ಅಂಗವಾಗಿ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿದೆ. ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ನೇತೃತ್ವದಲ್ಲಿ ಪಂದ್ಯಾವಳಿಗೆ ಬೇಕಾದ ಎಲ್ಲಾ ತಯಾರಿಗಳು ನಡೆದಿವೆ. ಇನ್ನೂ ಈ ಒಂದು ಪಂದ್ಯಾವಳಿಯಲ್ಲಿ ಸಚಿನ್ ತೆಂಡೂಲ್ಕರ್, ಯುವರಾಜ್ ಸಿಂಗ್, ಮೊಹಮ್ಮದ್ ಕೈಫ್, ಇರ್ಫಾನ್ ಪಠಾಣ್, ಸನತ್ ಜಯಸೂರ್ಯ, ಮುತ್ತಯ್ಯ ಮುರಳೀಧರನ್, ಚಮಿಂಡಾ ವಾಸ್ ಸೇರಿದಂತೆ 24 ಮಂದಿ ಮಾಜಿ ಕ್ರಿಕೆಟ್ ಆಟಗಾರರು ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ vs ಅಫ್ಘಾನಿಸ್ತಾನ ಮೂರನೇ ಟಿ20 – ಧೋನಿ ದಾಖಲೆ ಮುರಿತಾರಾ ರೋಹಿತ್?

    ಗುರುವಾರ ಬೆಳಗ್ಗೆ 09:00 ಗಂಟೆಗೆ ಸ್ಟೇಡಿಯಂನ ಉದ್ಘಾಟನೆಯಾಗಲಿದ್ದು, 10 ಗಂಟೆಗೆ ಟಾಸ್ ನಡೆಯಲಿದೆ. 10:30ರಿಂದ 12:30ರ ವರೆಗೆ ಮೊದಲ ಇನ್ನಿಂಗ್ಸ್ ಹಾಗೂ 1 ಗಂಟೆಯಿಂದ 3 ಗಂಟೆಯವೆರಗೆ ಸೆಕೆಂಡ್ ಇನ್ನಿಂಗ್ಸ್ ನಡೆಯಲಿದೆ. ತದನಂತರ 4 ಗಂಟೆಗೆ ಸಾಯಿ ಸಿಂಪೋನಿ ಆರ್ಕೆಸ್ಟ್ರಾ ತಂಡದಿಂದ ವಾದ್ಯಗೋಷ್ಠಿ ನಡೆಯಲಿದ್ದು, ಕಪ್ ಬಹುಮಾನ ವಿತರಣೆ ನಂತರ ಕಾರ್ಯಕ್ರಮ ಮುಕ್ತಾಯವಾಗಲಿದೆ. ಇದನ್ನೂ ಓದಿ: ಕೂಚ್ ಬೆಹಾರ್ ಟ್ರೋಫಿ ಫೈನಲ್‍ನಲ್ಲಿ ಯುವಿ ದಾಖಲೆ ಮುರಿದ ಕರ್ನಾಟಕದ ಓಪನರ್ ಪ್ರಖರ್ ಚತುರ್ವೇದಿ

    ಇನ್ನೂ ಈ ಪಂದ್ಯಾವಳಿಗೆ ಕೇವಲ ಆಮಂತ್ರಿತರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, 10 ಸಾವಿರ ಮಂದಿಗೆ ಅಮಂತ್ರಣ ನೀಡಲಾಗಿದೆ ಎನ್ನಲಾಗಿದೆ. ಉಳಿದಂತೆ ಸತ್ಯಸಾಯಿ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು, ಉದ್ಯೋಗಿಗಳು, ಭಕ್ತರು ಭಾಗಿಯಾಗಲಿದ್ದಾರೆ. ಇನ್ನೂ ಪಂದ್ಯಾವಳಿಯ ನೇರಪ್ರಸಾರವನ್ನು ಟಿವಿ ಮೂಲಕ ವೀಕ್ಷಣೆ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಇದನ್ನೂ ಓದಿ: ಯಶಸ್ಸಿನ ಶ್ರೇಯಸ್ಸು ಮಹಿ ಅಣ್ಣನಿಗೆ, CSKಗೆ ಸಲ್ಲಬೇಕು – ಚೆನ್ನೈಗೆ ಕ್ರೆಡಿಟ್‌ ಕೊಟ್ಟ ಶಿವಂ ದುಬೆ

  • ನೀತಿ ಸಂಹಿತೆ ಉಲ್ಲಂಘನೆ – ಬಿಜೆಪಿ ಜಿಲ್ಲಾಧ್ಯಕ್ಷನ ವಿರುದ್ಧ ಎಫ್‌ಐಆರ್ ದಾಖಲು

    ನೀತಿ ಸಂಹಿತೆ ಉಲ್ಲಂಘನೆ – ಬಿಜೆಪಿ ಜಿಲ್ಲಾಧ್ಯಕ್ಷನ ವಿರುದ್ಧ ಎಫ್‌ಐಆರ್ ದಾಖಲು

    ಕಲಬುರಗಿ: ಬಿಜೆಪಿ (BJP) ಪಕ್ಷದ ಚಿಹ್ನೆ ಹಾಗೂ ಜಿಲ್ಲಾಧ್ಯಕ್ಷನ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿ (Cricket Tournament) ಆಯೋಜನೆ ಮಾಡಿದ್ದಕ್ಕಾಗಿ ಬಿಜೆಪಿ ಕಲಬುರಗಿ (Kalaburagi) ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ (Shivaraj Patil Raddewadgi) ಮೇಲೆ ಎಫ್‌ಐಆರ್ ದಾಖಲಾಗಿದೆ.

    ರಾಜ್ಯಾದ್ಯಂತ ನೀತಿ ಸಂಹಿತೆ (Code of Conduct) ಜಾರಿಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ನಡುವೆ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಿದ ಶಿವರಾಜ್ ಪಾಟೀಲ್ ರದ್ದೇವಾಡಗಿ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗ್ಲಿ- ಅಭಿಮಾನಿಗಳಿಂದ ಶಬರಿಮಲೆಗೆ ಹರಕೆ  

    ಶಿವರಾಜ್ ಪಾಟೀಲ್ ರದ್ದೇವಾಡಗಿ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ (Election) ಜಿಲ್ಲೆಯ ಜೇವರ್ಗಿ ಮತಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇದನ್ನೂ ಓದಿ: ಚಿನ್ನ ಕಳ್ಳತನ – ಸೋಷಿಯಲ್ ಮೀಡಿಯಾ ಸ್ಟಾರ್ ಅರೆಸ್ಟ್

  • ಗ್ರೌಂಡಿಗಿಳಿದು ಬ್ಯಾಟ್ ಬೀಸಿದ ಮಹಾರಾಜರ ಪತ್ನಿ

    ಗ್ರೌಂಡಿಗಿಳಿದು ಬ್ಯಾಟ್ ಬೀಸಿದ ಮಹಾರಾಜರ ಪತ್ನಿ

    ಮೈಸೂರು: ದಿವಂಗತ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ನೆನಪಿನಾರ್ಥ ಆಯೋಜಿಸಲಾಗಿದ್ದ ಕ್ರಿಕೆಟ್ ಟೂರ್ನಿಯನ್ನು ಬ್ಯಾಟಿಂಗ್ ಮಾಡುವ ಮೂಲಕ ಮೈಸೂರಿನ ಯದುವಂಶದ ಸೊಸೆ ತ್ರಿಷಿಕಾ ಕುಮಾರಿ ಸಿಂಗ್ ಉದ್ಘಾಟಿಸಿದ್ದಾರೆ.

    ಇಂದು ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ನೆನಪಿನಾರ್ಥ ಅರಸು ಮಂಡಳಿ ವತಿಯಿಂದ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿದೆ. ಈ ಪಂದ್ಯಾವಳಿಗೆ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪತ್ನಿ ತ್ರಿಷಿಕಾ ಅವರು ಬ್ಯಾಟ್ ಬೀಸುವ ಮೂಲಕ ಚಾಲನೆ ನೀಡಿದರು.

    ತ್ರಿಷಿಕಾ ಅವರು ಕ್ರಿಕೆಟ್ ಪಿಚ್‌ನಲ್ಲಿ ಬ್ಯಾಟಿಂಗ್ ಮಾಡಿ ಕಾರ್ಯಕ್ರಮ ಉದ್ಘಾಟಿಸಿ ಖುಷಿ ಪಟ್ಟಿದ್ದಾರೆ. ಹಾಗೆಯೇ ಪಂದ್ಯಾವಳಿಯಲ್ಲಿ ಸ್ಪರ್ಧಿಸುತ್ತಿರುವ ಎಲ್ಲಾ ಕ್ರಿಕೆಟ್ ತಂಡಕ್ಕೂ ಶುಭಹಾರೈಸಿದ್ದು, ಅವರ ಪ್ರೋತ್ಸಾಹಕ್ಕೆ ಆಟಗಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ತ್ರಿಷಿಕಾ ಅವರು ಬ್ಯಾಟಿಂಗ್ ಮಾಡಿದ ದೃಶ್ಯವನ್ನು ಸ್ಥಳದಲ್ಲಿದ್ದವರು ಕ್ಯಾಮೆರಾ ಕಣ್ಣಲ್ಲಿ ಸೆರೆಹಿಡಿದಿದ್ದಾರೆ.