Tag: ಕ್ರೀಡಾಪಟು

  • ಯಾದಗಿರಿ ಜಿಲ್ಲಾ ಕ್ರೀಡಾ ಕಚೇರಿಯಲ್ಲಿ ಬೀದಿ ನಾಯಿಗಳದ್ದೇ ದರ್ಬಾರ್

    ಯಾದಗಿರಿ ಜಿಲ್ಲಾ ಕ್ರೀಡಾ ಕಚೇರಿಯಲ್ಲಿ ಬೀದಿ ನಾಯಿಗಳದ್ದೇ ದರ್ಬಾರ್

    ಯಾದಗಿರಿ: ಜಿಲ್ಲಾ ಕ್ರೀಡಾ ಕಚೇರಿಯಲ್ಲಿ ಬೀದಿ ನಾಯಿಗಳದ್ದೇ (Street Dogs) ದರ್ಬಾರ್ ಎನ್ನುವಂತಾಗಿದೆ.

    ಯುವ ಜನ ಮತ್ತು ಕ್ರೀಡಾ ಕಚೇರಿ ಕೊಠಡಿಯಲ್ಲೇ ಬೀದಿ ನಾಯಿಗಳು ಗಡದ್ದಾಗಿ ನಿದ್ದೆ ಮಾಡುತ್ತಿವೆ. ಕ್ರೀಡಾಧಿಕಾರಿ ಕೊಠಡಿಯ ಪ್ರಾಂಗಣದಲ್ಲೇ ಬೀದಿ ನಾಯಿಗಳ ಆಟಾಟೋಪ ಜೋರಾಗಿದೆ. ಕ್ರೀಡಾ ಕಚೇರಿಯಲ್ಲಿ ಡಿ ಗ್ರೂಪ್ ಸಿಬ್ಬಂದಿ ಇದ್ರೂ ಯಾವುದೇ ಪ್ರಯೋಜನಕ್ಕೆ ಬಾರದಂತಾಗಿದೆ.

    ಜಿಲ್ಲಾ ಕ್ರೀಡಾಂಗಣದಲ್ಲಿಯೇ ಕ್ರೀಡಾ ಕಚೇರಿ ಇದೆ. ಕ್ರೀಡಾ ಕಚೇರಿಯಲ್ಲಿ ನಾಯಿಗಳು ವಾಸವಿದ್ರೂ ನಾಯಿ ಓಡಿಸದೇ ನಿರ್ಲಕ್ಷ್ಯ ಮಾಡ್ತಿರೋದ್ರಿಂದ, ಕ್ರೀಡಾ ಕಚೇರಿಗೆ ಬರುವ ಕ್ರೀಡಾಪಟುಗಳಿಗೆ ಬೀದಿ ನಾಯಿಗಳ ಭಯ ಶುರುವಾಗಿದೆ. ಇದನ್ನೂ ಓದಿ: ಸಂಪುಟ ಪುನಾರಚನೆ ಇಲ್ಲ, ಕರ್ನಾಟಕದಿಂದ ಪ್ರಧಾನಿ ಅಭ್ಯರ್ಥಿ ಯಾರೂ ಇಲ್ಲ: ಸಿಎಂ

  • ಬಾಲಕಿಯರ ಕಬಡ್ಡಿ ಪಂದ್ಯಾಟಕ್ಕೆ ಟಾಯ್ಲೆಟ್‌ನಲ್ಲಿ ಊಟ ತಯಾರಿ!

    ಬಾಲಕಿಯರ ಕಬಡ್ಡಿ ಪಂದ್ಯಾಟಕ್ಕೆ ಟಾಯ್ಲೆಟ್‌ನಲ್ಲಿ ಊಟ ತಯಾರಿ!

    ಲಕ್ನೋ: ಉತ್ತರಪ್ರದೇಶದ (Uttar Pradesh) ಸಹರಾನ್ ಪುರದಲ್ಲಿ ನಡೆದ ಬಾಲಕಿಯರ (Girls) ಕಬಡ್ಡಿ ಟೂರ್ನಿ (Kabaddi Tournament) ವೇಳೆ ಶೌಚಾಲಯದಲ್ಲಿ (Toilet) ಬೇಯಿಸಿದ ಆಹಾರವನ್ನೇ ಕ್ರೀಡಾಪಟುಗಳಿಗೆ ಬಡಿಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ.

    ಶೌಚಾಲಯ ನೆಲದ ಮೇಲೆ ಬೇಯಿಸಿದ ಅನ್ನದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗುತ್ತಿದ್ದಂತೆ ವಿವಾದ ಬುಗಿಲೆದ್ದಿದೆ. ಇದನ್ನೂ ಓದಿ: ರಾಕೇಶ್ ‘ಕಿಸ್’ ಕೊಟ್ಟಿದ್ದು ನಿಜ. ಆದರೆ, ಅದು ಅಮ್ಮನ ಮುತ್ತಿನಂತಿತ್ತು: ಸೋನು ಶ್ರೀನಿವಾಸ್ ಗೌಡ

    ಶುಕ್ರವಾರ (ಸೆಪ್ಟೆಂಬರ್ 16) ದಿಂದ ಆರಂಭವಾದ ಮೂರು ದಿನಗಳ ರಾಜ್ಯಮಟ್ಟದ ಅಂಡರ್-17 ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ (Kabaddi Tournament) ಭಾಗವಹಿಸಿದ್ದ ಸುಮಾರು 200 ಕ್ರೀಡಾಪಟುಗಳಿಗೆ ಶೌಚಾಲಯದ ನೆಲದಲ್ಲಿ ಬೇಯಿಸಿದ ಆಹಾರವನ್ನೇ (Food) ನೀಡಲಾಗಿದೆ. ಜೊತೆಗೆ ಒಂದು ಕಾಗದದ ಮೇಲೆ ಪೂರಿಯನ್ನು ಇಡಲಾಗಿತ್ತು. ಅದನ್ನೇ ಆಟಗಾರರಿಗೆ ಬಡಿಸಲಾಗಿದೆ ಎಂದು ಕ್ರೀಡಾಪಟುಗಳು ಆರೋಪಿಸಿದ್ದಾರೆ.

    ಈ ಆರೋಪ ತಳ್ಳಿಹಾಕಿರುವ ಕ್ರೀಡಾಧಿಕಾರಿ ಅನಿಮೇಶ್ ಸಕ್ಸೇನಾ ಅವರು, ಇದು ಆಧಾರ ರಹಿತ ಆರೋಪ ಎಂದು ಹೇಳಿದ್ದಾರೆ. ಇದನ್ನೂ ಓದಿ: ಖಾತೆಗಳನ್ನು ಖಾಲಿ ಉಳಿಸಿಕೊಂಡು ಕಾಲಹರಣ ಮಾಡೋ ಬದ್ಲು, ಸಚಿವ ಸ್ಥಾನ ನೀಡಿ: ಬಿಜೆಪಿ MLC

    ಇಲ್ಲಿ ಆಟಗಾರರಿಗೆ ನೀಡಲಾಗುವ ಆಹಾರವು ಉತ್ತಮ ಗುಣಮಟ್ಟದ್ದಾಗಿದೆ. ಅಕ್ಕಿ, ದಾಲ್, ಸಬ್ಜಿ ಸೇರಿದಂತೆ ಎಲ್ಲ ರೀತಿಯ ಆಹಾರವನ್ನು ಈಜುಕೊಳದ (Swimming Pool) ಬಳಿಯೇ ಸಾಂಪ್ರದಾಯಿಕ ಇಟ್ಟಿಗೆ ಒಲೆಯಲ್ಲಿ ದೊಡ್ಡ ಪಾತ್ರೆಗಳಲ್ಲಿ ಸಿದ್ಧಪಡಿಸಿ ಕೊಡಲಾಗಿದೆ. ಸ್ಥಳದ ಕೊರತೆಯಿದ್ದರಿಂದಾಗಿ ಕ್ರೀಡಾಂಗಣದ ಪೂಲ್ ಬಳಿಯೇ ಅಡುಗೆ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

    ಕೆಲ ಆಟಗಾರರು ಕ್ರೀಡಾಂಗಣದ ಅಧಿಕಾರಿಗಳ ಮುಂದೆ ವಿಷಯ ಪ್ರಸ್ತಾಪಿಸಿದ ಬಳಿಕ ಅನಿಮೇಶ್ ಸಕ್ಸೇನಾ ಅಡುಗೆಯವರಿಗೆ ಛೀಮಾರಿ ಹಾಕಿದ್ದು, ಶಿಸ್ತು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನೀರಜ್ ಚೋಪ್ರಾ ಸೇರಿದಂತೆ 12 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ

    ನೀರಜ್ ಚೋಪ್ರಾ ಸೇರಿದಂತೆ 12 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ

    ನವದೆಹಲಿ: ಒಲಿಂಪಿಕ್ಸ್​​ನಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ (Neeraj Chopra), ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಮತ್ತು ಫುಟ್ಬಾಲ್ ದಂತಕಥೆ ಸುನಿಲ್ ಛೆಟ್ರಿ ಸೇರಿದಂತೆ 12 ಕ್ರೀಡಾಪಟುಗಳನ್ನು ಈ ಬಾರಿಯ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ (Khel Ratna) ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

    NEERAJ

    ಪ್ಯಾರಾಲಿಂಪಿಕ್ಸ್ ಪದಕ ವಿಜೇತ, ಕನ್ನಡಿಗ ಐಎಎಸ್ ಅಧಿಕಾರಿ ಸುಭಾಶ್ ಯತಿರಾಜ್, ಕ್ರಿಕೆಟಿಗ ಶಿಖರ್ ಧವನ್ ಸೇರಿದಂತೆ 35 ಕ್ರೀಡಾಪಟುಗಳಿಗೆ ಅರ್ಜುನ ಅವಾರ್ಡ್ ಪ್ರಕಟಿಸಲಾಗಿದೆ. ಮೇಜರ್ ಧ್ಯಾನ್‍ಚಂದ್ ಖೇಲ್‍ರತ್ನ ಪ್ರಶಸ್ತಿಗೆ ಒಲಂಪಿಯನ್ ಅಥ್ಲಿಟ್ ನೀರಜ್ ಚೋಪ್ರಾ ಸೇರಿ 12 ಸಾಧಕರು ಭಾಜನರಾಗಿದ್ದಾರೆ. ಇದನ್ನೂ ಓದಿ:  ಚಪ್ಪಲಿ ತೆಗೆದು ಅಭಿಮಾನಿಗಳಿಂದ ಅಪ್ಪುಗೆ ಅಂತಿಮ ನಮನ- ಬಿಬಿಎಂಪಿಯಿಂದ ರಾಶಿ ರಾಶಿ ಸ್ಲಿಪ್ಪರ್ಸ್ ತೆರವು

    ಒಲಂಪಿಯನ್‍ಗಳಾದ ಕುಸ್ತಿಪಟು ರವಿ ಕುಮಾರ್ ದಹಿಯಾ, ಹಾಕಿ ಆಟಗಾರ ಶ್ರೀಜೇಶ್, ಮನ್‍ಪ್ರೀತ್ ಸಿಂಗ್, ಬಾಕ್ಸರ್ ಲವ್ಲಿನಾ, ಫುಟ್ಬಾಲ್ ಆಟಗಾರ ಸುನೀಲ್ ಚೆಟ್ರಿ, ಮಹಿಳಾ ಕ್ರಿಕೆಟರ್ ಮಿಥಾಲಿ ರಾಜ್, ಪ್ಯಾರಾ ಒಲಂಪಿಯನ್‍ಗಳಾದ ಬ್ಯಾಡ್ಮಿಂಟನ್ ಆಟಗಾರ ಪ್ರಮೋದ್ ಭಗತ್, ಜಾವೆಲಿನ್ ತ್ರೋ ಕ್ರೀಡಾಪಟು ಸುಮಿತ್ ಅಂಟಿಲ್, ಶೂಟರ್ ಅವನಿ ಲಖರಾ, ಬ್ಯಾಡ್ಮಿಂಟನ್ ಆಟಗಾರ ಕೃಷ್ಣ ನಗರ್ ಮತ್ತು ಮನೀಶ್ ನರ್ವಾಲ್‍ಗೆ ಖೇಲ್‍ರತ್ನ ಪಶಸ್ತಿ ಘೋಷಣೆ ಆಗಿದೆ. ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಯನ್ನು ನವೆಂಬರ್ 13ರಂದು ದೆಹಲಿಯಲ್ಲಿ ಪ್ರದಾನ ಮಾಡಲಾಗುತ್ತದೆ.

  • ಬೆಳ್ಳಿ ಪದಕ ಗೆದ್ದ ಪ್ರವೀಣ್ ಕುಮಾರ್‌ಗೆ ಮೋದಿ ವಿಶ್

    ಬೆಳ್ಳಿ ಪದಕ ಗೆದ್ದ ಪ್ರವೀಣ್ ಕುಮಾರ್‌ಗೆ ಮೋದಿ ವಿಶ್

    ನವದೆಹಲಿ: ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಹೈಜಂಪ್‍ನಲ್ಲಿ ಬೆಳ್ಳಿ ಪದಕ ಗೆದ್ದ ಪ್ರವೀಣ್ ಕುಮಾರ್ ಅವರನ್ನು ಅಭಿನಂದಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, ಪ್ಯಾರಾಲಿಂಪಿಕ್ಸ್  ಬೆಳ್ಳಿ ಪದಕ ಗೆದ್ದ ಪ್ರವೀಣ್ ಕುಮಾರ್ ಬಗ್ಗೆ ಹೆಮ್ಮೆ ಪಡುತ್ತೇನೆ. ಈ ಪದಕವು ಅವರ ಕಠಿಣ ಪರಿಶ್ರಮ ಮತ್ತು ಸಾಟಿಯಿಲ್ಲದ ಸಮರ್ಪಣೆಯ ಫಲವಾಗಿದೆ. ಅವರಿಗೆ ಅಭಿನಂದನೆಗಳು. ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಕೆಗಳು ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಟೋಕಿಯೊ ಪ್ಯಾರಾಲಿಂಪಿಕ್ಸ್- ಹೈಜಂಪ್‍ನಲ್ಲಿ ಬೆಳ್ಳಿ ಗೆದ್ದ ತಂಗವೇಲು, ಕಂಚು ಶರದ್ ಕುಮಾರ್‌ಗೆ

    ಹೈಜಂಪ್ ಟಿ64 ವಿಭಾಗದಲ್ಲಿ ದ್ವೀತಿಯ ಸ್ಥಾನ ಪಡೆದ ಪ್ರವೀಣ್ ಕುಮಾರ್ ರಜಲ್ ಪದಕಕ್ಕೆ ಕೊರಳೊಡ್ಡಿದ್ದಾರೆ. ಇದೇ ಮೊದಲ ಭಾರಿಗೆ ಪ್ಯಾರಾಲಿಂಪಿಕ್ಸ್​ನಲ್ಲಿ ಭಾಗವಹಿಸುತ್ತಿರುವ 18 ವರ್ಷದ ಪ್ರವೀಣ್ ಕುಮಾರ್ 2.07 ಮೀಟರ್ ಎತ್ತರ ಜಿಗಿದು ದಾಖಲೆ ಬರೆದಿದ್ದಾರೆ.

    ಚಿನ್ನ ಗೆದ್ದ ಬ್ರಿಟನ್ ಕ್ರೀಡಾಪಟು ಜೋನಾಥನ್ ಬ್ರೂಮ್ ಎಡ್ವಡ್ರ್ಸ್ 2.10 ಮೀಟರ್ ಎತ್ತರ ಜಿಗಿದರು. ರಿಯೋ ಪ್ಯಾರಾಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದಿದ್ದ ಪೊಲಾಂಡ್‍ನ ಮಸಿಜ್ ಲೆಪಿಯಾಟೊ 2.04 ಮೀಟರ್ ಜಿಗಿದು ಮೂರನೇ ಸ್ಥಾನ ಪಡೆದಿದ್ದಾರೆ.

  • ಒಲಿಂಪಿಕ್ಸ್ ಕ್ರೀಡಾಪಟುಗಳು ಗೆದ್ದ ಪದಕವನ್ನು ಕಚ್ಚಲು ಇದು ಅಸಲಿ ಕಾರಣ!

    ಒಲಿಂಪಿಕ್ಸ್ ಕ್ರೀಡಾಪಟುಗಳು ಗೆದ್ದ ಪದಕವನ್ನು ಕಚ್ಚಲು ಇದು ಅಸಲಿ ಕಾರಣ!

    ಟೋಕಿಯೋ: ಒಲಿಂಪಿಕ್ಸ್ ಅಥವಾ ಬೇರೆ ಯಾವುದೇ ಕ್ರೀಡಾಕೂಟದಲ್ಲೂ ಕೂಡ ಆಥ್ಲೀಟ್ಸ್ ಗಳು ತಾವು ಪದಕ ಗೆದ್ದರೆ ಅದನ್ನು ಕಚ್ಚುವ ಫೋಟೋ ನಾವು ನೋಡಿರುತ್ತೇವೆ. ಹಾಗಾದರೆ ಈ ರೀತಿ ಪದಕ ಕಚ್ಚಲು ಕಾರಣವೇನು? ಈ ಕುರಿತು ಅಸಲಿ ಕಾರಣ ಕೇಳಿದರೆ ನೀವು ಕೂಡ ಒಂದು ಕ್ಷಣ ನಗುತ್ತೀರಿ.

    ಹೌದು, ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಆಥ್ಲೀಟ್ಸ್ ಗಳು ಕಷ್ಟ ಪಟ್ಟು ತಮ್ಮ ದೇಶಕ್ಕಾಗಿ, ರಾಜ್ಯಕ್ಕಾಗಿ, ಚಿನ್ನ, ಬೆಳ್ಳಿ ಅಥವಾ ಕಂಚಿನ ಪದಕ ಗೆದ್ದರೆ ಆ ಪದಕವನ್ನು ಕಚ್ಚಿಕೊಂಡು ನಿಂತಿರುವ ಫೋಟೋವನ್ನು ಸಾಕಷ್ಟು ಬಾರಿ ನಾವೆಲ್ಲರೂ ನೋಡಿದ್ದೇವೆ. ಪದಕ ಕಚ್ಚುವುದು ಇತಿಹಾಸದಿಂದಲೂ ನಡೆದುಕೊಂಡು ಬರುತ್ತಿದೆ. ಈ ಹಿಂದೆ ಚಿನ್ನದ ವ್ಯಾಪಾರಿಗಳು ಅಸಲಿ ಚಿನ್ನವನ್ನು ತಿಳಿಯಲು ಕಚ್ಚುತ್ತಿದ್ದರಂತೆ. ಅಸಲಿ ಚಿನ್ನ ಮೃದು ಲೋಹವಾಗಿರುವುದರಿಂದ ಕಚ್ಚಿದ ಭಾಗದಲ್ಲಿ ಹಲ್ಲಿನ ಗುರುತು ಕಾಣಿಸಿಕೊಳ್ಳುತ್ತಿತ್ತು. ಈ ಮೂಲಕ ಅಸಲಿ ಮತ್ತು ನಕಲಿ ಚಿನ್ನವನ್ನು ಪತ್ತೆ ಹಚ್ಚುತ್ತಿದ್ದರಂತೆ. ಇದನ್ನೂ ಓದಿ: ನನ್ನ ದೇಶಕ್ಕಾಗಿ ಬೆಳ್ಳಿ ಪದಕ ಗೆದ್ದಿದ್ದು ಅತೀವ ಆನಂದ ನೀಡಿದೆ: ಮೀರಾಬಾಯಿ ಚಾನು

    ಆದರೆ ಕ್ರೀಡಾಪಟುಗಳು ಕೂಡ ಈ ರೀತಿ ಚಿನ್ನವನ್ನು ಪರೀಕ್ಷಿಸುತ್ತಿದ್ದಾರ ಎಂಬ ಅನುಮಾನ ಮೂಡಿದರೆ ಅದು ತಪ್ಪು. ಒಲಿಂಪಿಕ್ಸ್‍ನಲ್ಲಿ ನೀಡುವ ಪದಕ ಪೂರ್ತಿ ಚಿನ್ನದಾಗಿರುವುದಿಲ್ಲ ಅಲ್ಪ ಪ್ರಮಾಣದ ಚಿನ್ನದ ಲೇಪಣ ಇರುತ್ತದೆ. ಇದು ಕ್ರೀಡಾಪಟುಗಳಿಗು ತಿಳಿದಿದೆ. ಆದರೂ ಕೂಡ ಆಥ್ಲೀಟ್ಸ್‍ಗಳು ಮಾತ್ರ ಆತನ ಕಣ್ಣಿಗೆ ಸುಂದರವಾಗಿ ಕಾಣಲು ಪದಕವನ್ನು ಕಚ್ಚುತ್ತಾರೆ ಎಂಬುದು ಬಯಲಾಗಿದೆ.

    ಹಾಗಾದರೆ ಆತ ಯಾರು ಗೊತ್ತ ಆತ ಬೇರೆಯಾರು ಅಲ್ಲ ಫೋಟೋಗ್ರಾಫರ್. ಹೌದು ಪದಕ ಗೆದ್ದ ಕ್ರೀಡಾಪಟುಗಳು ಪದಕ ಗೆದ್ದ ಖುಷಿಯನ್ನು ಬೇರೆ ಬೇರೆ ರೀತಿಯಾಗಿ ಕ್ಯಾಮೆರಾ ಕಣ್ಣಿನಲ್ಲಿ ಸೆರೆ ಹಿಡಿಯಲು ಈ ಹಿಂದೆ ಫೋಟೋಗ್ರಾಫರ್ ಒಬ್ಬರು ಪದಕವನ್ನು ಕಚ್ಚಿ ಫೋಸ್ ನೀಡುವಂತೆ ಕ್ರೀಡಾಪಟುವಿಗೆ ಸೂಚಿಸಿದ್ದರಂತೆ. ಅದು ಮುಂದುವರಿದಿದ್ದು, ಇದೀಗ ಕೂಡ ಪದಕ ಗೆದ್ದವರು ಈ ರೀತಿ ಪದಕ ಕಚ್ಚಿಕೊಂಡು ಫೋಟೋ ತೆಗೆಸಿಕೊಳ್ಳುತ್ತಿದ್ದಾರೆ.

  • ದಸರಾ ಕ್ರೀಡಾಪಟುಗಳ ನಗದು ಬಹುಮಾನ ವಿಳಂಬ- ಒಂದೇ ದಿನದಲ್ಲಿ ಸಚಿವ ಸೋಮಣ್ಣ ಇತ್ಯರ್ಥ

    ದಸರಾ ಕ್ರೀಡಾಪಟುಗಳ ನಗದು ಬಹುಮಾನ ವಿಳಂಬ- ಒಂದೇ ದಿನದಲ್ಲಿ ಸಚಿವ ಸೋಮಣ್ಣ ಇತ್ಯರ್ಥ

    ಮೈಸೂರು: ದಸರಾ ಮುಗಿದು ಮೂರು ತಿಂಗಳು ಕಳೆಯುತ್ತಾ ಬಂದಿದೆ. ಆದರೂ ದಸರಾ ಕ್ರೀಡಾಕೂಟದಲ್ಲಿ ಗೆದ್ದ ಕ್ರೀಡಾಪಟುಗಳಿಗೆ ನಗದು ಬಹುಮಾನ ನೀಡಲು ವಿಳಂಬ ಮಾಡಿದ್ದ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಬೆವರಳಿಸಿದ ಕೆಲವೇ ಗಂಟೆಗಳಲ್ಲಿ ಪ್ರಶಸ್ತಿಯ ನಗದು ಹಣ ಬಿಡುಗಡೆಯಾಗಿದೆ.

    ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾಗಿದ್ದ ಕ್ರೀಡಾಪಟುಗಳಿಗೆ ಬಹುಮಾನದ ಹಣವನ್ನು ಈವರೆಗೆ ಬಿಡುಗಡೆ ಮಾಡಿರಲಿಲ್ಲ. ಶುಕ್ರವಾರ ಬೆಳಗ್ಗೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸರ್ಕಾರಿ ನೌಕರರ ಕ್ರೀಡಾಕೂಟ ಉದ್ಘಾಟನೆಗೆ ಆಗಮಿಸಿದ್ದ ಸಚಿವರ ಗಮನಕ್ಕೆ ಈ ವಿಷಯ ಬಂತು. ಬಹುಮಾನ ಹಣ ಪಾವತಿಸಲು ವಿಳಂಬ ಮಾಡಿದ್ದ ಅಧಿಕಾರಿಗಳಿಗೆ ಸ್ಥಳದಲ್ಲೇ ತರಾಟೆ ತೆಗೆದುಕೊಂಡಿದ್ದು, ಸಚಿವರು ತಕ್ಷಣ ಸಮಸ್ಯೆ ಇತ್ಯರ್ಥ ಆಗಬೇಕು ಎಂದು ತಾಕೀತು ಮಾಡಿದರು.

    ಅಷ್ಟೇ ಅಲ್ಲದೇ ಈ ಸಮಸ್ಯೆ ಇತ್ಯರ್ಥಕ್ಕೆ ಬೇಕಾದ 54 ಲಕ್ಷ ರೂ. ಅನುದಾನವನ್ನು ಸಚಿವರು ಸಂಜೆಯೊಳಗೆ ಬಿಡುಗಡೆ ಮಾಡಿಸಿದ್ದಾರೆ. ದಸರಾ ಕ್ರೀಡಾಕೂಟದ 1,451 ವಿಜೇತರಿಗೆ ಬಹುಮಾನ ಹಣವನ್ನು ನೀಡಬೇಕಾಗಿತ್ತು. ಈ ಪೈಕಿ 726 ವೈಯಕ್ತಿಕ ಬಹುಮಾನಗಳು ಹಾಗೂ 725 ಗುಂಪು ಸ್ಪರ್ಧೆ ಬಹುಮಾನಗಳು ಸೇರಿವೆ. ಈ ಎಲ್ಲರ ಬ್ಯಾಂಕ್ ಖಾತೆಗೆ ಈಗ ಹಣ ವರ್ಗಾವಣೆ ಆಗುತ್ತಿದೆ.

    ಎಲ್ಲಾ ಬಹುಮಾನದ ಹಣವನ್ನು ಆರ್.ಟಿ.ಜಿ.ಎಸ್. ಮೂಲಕ ಫಲಾನುಭವಿಗಳ ಖಾತೆಗೆ ಕೂಡಲೇ ವರ್ಗಾಯಿಸಲಾಗುವುದು. ಕ್ರೀಡಾಪಟುಗಳು ಆತಂಕಪಡಬೇಕಿಲ್ಲ ಎಂದು ಸಚಿವರು ಭರವಸೆ ನೀಡಿದ್ದಾರೆ. ಕ್ರೀಡಾಕೂಟಕ್ಕೆ ಊಟೋಪಚಾರ ಸರಬರಾಜು ಮಾಡಿದವರಿಗೂ ಬಿಲ್ ಬಾಕಿ ಇದ್ದು, ಅದನ್ನೂ ಕೂಡ ಕೂಡಲೇ ಪಾವತಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

  • ಶೂ ಇಲ್ಲದ್ದಕ್ಕೆ ಬ್ಯಾಂಡೇಜ್ ಸುತ್ತಿಕೊಂಡು ಓಡಿ 3 ಚಿನ್ನದ ಪದಕ ಗೆದ್ದ ಬಾಲಕಿ

    ಶೂ ಇಲ್ಲದ್ದಕ್ಕೆ ಬ್ಯಾಂಡೇಜ್ ಸುತ್ತಿಕೊಂಡು ಓಡಿ 3 ಚಿನ್ನದ ಪದಕ ಗೆದ್ದ ಬಾಲಕಿ

    ಮನಿಲಾ: ಫಿಲಿಪೈನ್ಸ್‍ನ 11 ವರ್ಷದ ಕ್ರೀಡಾಪಟು ಒಬ್ಬಳು ಶೂ ಇಲ್ಲದ್ದಕ್ಕೆ ಬ್ಯಾಂಡೇಜ್ ಸುತ್ತಿಕೊಂಡು ಓಡಿ 3 ಚಿನ್ನ ಪದಕ ಗೆದ್ದಿದ್ದಾಳೆ. ಸದ್ಯ ಈ ಬಾಲಕಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

    ಇಲೊಯಿಲೊ ಪ್ರಾಂತ್ಯದ ಸ್ಥಳೀಯ ಶಾಲೆಯಲ್ಲಿ ಇಂಟರ್ ಸ್ಕೂಲ್ ಕ್ರೀಡಾಕೂಟ ಆಯೋಜನೆಗೊಂಡಿತ್ತು. ಇದರಲ್ಲಿ 11 ವರ್ಷದ ರಿಯಾ ಬುಲೋಸ್ 400 ಮೀ, 800 ಮೀ ಮತ್ತು 1500 ಮೀ ಓಟಗಳಲ್ಲಿ ಭಾಗವಹಿಸಿ, ಶೂಗಳಿಲ್ಲದೆ ಓಡಿದ್ದಳು. ಆದರೆ ಮೂರು ವಿಭಾಗಗಳಲ್ಲೂ ಚಿನ್ನದ ಪದಕ ಗೆಲ್ಲುವ ಮೂಲಕ ಬಾಲಕಿ ಎಲ್ಲರನ್ನು ಅಚ್ಚರಿಗೊಳಿಸಿದ್ದಾಳೆ.

    ರಿಯಾಳ ಜಯವನ್ನು ಇಲಾಯ್ಲೊ ಸ್ಪೋಟ್ರ್ಸ್ ಕೌನ್ಸಿಲ್ ಮೀಟ್ ಕೋಚ್ ಪ್ರೆಡೆರಿಕ್ ಬಿ. ವೇಲೆನ್‍ಜುವೆಲಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಿಯಾ ಆಟದ ವೇಳೆ ಶೂಗಳನ್ನು ಧರಿಸುವುದಿಲ್ಲ. ಬದಲಿಗೆ ತನ್ನ ಪಾದಗಳಿಗೆ ಬ್ಯಾಂಡೇಜ್ ಧರಿಸಿದ್ದಾಳೆ. ಅಷ್ಟೇ ಅಲ್ಲದೆ ಪಾದಗಳಿಗೆ ಶೂಗಳಂತೆ ಸುತ್ತಿಕೊಂಡ ಬ್ಯಾಂಡೇಜ್ ಮೇಲೆ ನೈಕ್ ಎಂದು ಬರೆದುಕೊಂಡಿದ್ದಾಳೆ.

    ವೇಲೆನ್‍ಜುವೆಲಾ ಅವರ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೂರಾರು ನೆಟ್ಟಿಗರು ರಿಯಾಳಿಗೆ ಹೊಸ ಶೂಗಳನ್ನು ನೀಡಲು ಮುಂದಾದರು. ಬ್ಯಾಸ್ಕೆಟ್‍ಬಾಲ್ ಅಂಗಡಿಯೊಂದರ ಮಾಲೀಕರು ಟ್ವಿಟ್ ಮೂಲಕ ಬಾಲಕಿಯ ಶೂ ಸೈಜ್ ಕೇಳಿ ಸಹಾಯ ಮಾಡಿದ್ದಾರೆ.

  • ಆಟದ ಮಧ್ಯೆಯೇ ಹಾಲುಣಿಸಿ ತಾಯಿ ಪ್ರೇಮ ಮೆರೆದ ಆಟಗಾರ್ತಿ- ನೆಟ್ಟಿಗರಿಂದ ಮೆಚ್ಚುಗೆ

    ಆಟದ ಮಧ್ಯೆಯೇ ಹಾಲುಣಿಸಿ ತಾಯಿ ಪ್ರೇಮ ಮೆರೆದ ಆಟಗಾರ್ತಿ- ನೆಟ್ಟಿಗರಿಂದ ಮೆಚ್ಚುಗೆ

    ಐಜಾಲ್: ಕ್ರೀಡಾಂಗಣದಲ್ಲಿ ಪಂದ್ಯಾವಳಿ ನಡೆಯುತ್ತಿದ್ದರೂ, ಇದರ ಮಧ್ಯೆಯೇ ಬ್ರೇಕ್ ತೆಗೆದುಕೊಂಡು ವಾಲಿಬಾಲ್ ಆಟಗಾರ್ತಿಯೊಬ್ಬರು ತನ್ನ ಮಗುವಿಗೆ ಹಾಲು ಕುಡಿಸುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಮಿಜೋರಾಂನ ಮ್ಯಾಸ್ಕಾಟ್‍ನಲ್ಲಿ ಈ ಘಟನೆ ನಡೆದಿದ್ದು, ನಿಂಗ್ಲುನ್ ಹಂಘಲ್ ಎಂಬ ಫೇಸ್ಬುಕ್ ಖಾತೆಯಿಂದ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಮೂಲವಾಗಿ ಇದನ್ನು ಲಿಂಡಾ ಚಕ್ಚುವಾಕ್ ಎಂಬವರು ಪೋಸ್ಟ್ ಮಾಡಿದ್ದಾರೆ. ಟುಕುಮ್ ಮಾವಿಲಿಬಾಲ್ ತಂಡದ ಆಟಗಾರ್ತಿ ಲಾಲ್ವೆಂಟ್ಲುವಾಂಗಿ ಅವರು ಈ ವಿಡಿಯೋದಲ್ಲಿ ತನ್ನ ಮಗುವಿಗೆ ಎದೆಹಾಲು ಕುಡಿಸುತ್ತಿದ್ದಾರೆ. ಹಂಘಲ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಈ ಕುರಿತು ಬರೆದುಕೊಂಡಿದ್ದು, ಲಾಲ್ವೆಂಟ್ಲುವಾಂಗಿ ಅವರು ವಾಲಿಬಾಲ್ ಆಟವಾಡುತ್ತಿದ್ದರು. ಆಗ ಚಿಕ್ಕ ವಿರಾಮ ತೆಗೆದುಕೊಂಡು ಪ್ಲೇಯರ್ಸ್ ಕ್ಯಾಂಪ್ ಬಳಿ 7 ತಿಂಗಳ ಮಗುವಿಗೆ ಎದೆ ಹಾಲು ಕುಡಿಸುತ್ತಿದ್ದರು ಎಂದು ಹೊಗಳಿದ್ದಾರೆ.

    ಪೋಸ್ಟ್ ನ ಮಾಹಿತಿ ಪ್ರಕಾರ 2019ರ ಮಿಜೋರಾಂ ರಾಜ್ಯ ಮಟ್ಟದ ಆಟಗಳು ಮ್ಯಾಸ್ಕಾಟ್‍ನಲ್ಲಿ ನಡೆಯುತ್ತಿದ್ದವು. ಈ ವೇಳೆ ಲಾಲ್ವೆಂಟ್ಲುವಾಂಗಿ ಅವರು ತಮ್ಮ ಮಗುವಿಗೆ ಹಾಲು ಕುಡಿಸಿದ್ದಾರೆ. ಅಲ್ಲದೆ ಇದಕ್ಕೆ ಪ್ರೋತ್ಸಾಹ ನೀಡಲು ಮೀಜೊರಾಂನ ಕ್ರೀಡಾ ಸಚಿವ ರಾಬರ್ಟ್ ರೊಮಾವಿಯಾ ರಾಯ್ಟೆ ಅವರು ಲಾಲ್ವೆಂಟ್ಲುವಾಂಗಿ ಅವರಿಗೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡಿದರು ಎಂದು ಫೇಸ್ಬುಕ್ ಪೋಸ್ಟಿನಲ್ಲಿ ಬರೆಯಲಾಗಿದೆ.

    ಈ ಪೋಸ್ಟಿಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಲಾಲ್ವೆಂಟ್ಲುವಾಂಗಿ ಅವರು ಕ್ರೀಡಾಪಟುವಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ತಾಯಿಯಾಗಿಯೂ ತಮ್ಮ ಕರ್ತವ್ಯವನ್ನು ನಿರ್ವಹಿಸಿದ್ದಾರೆ ಎಂದು ಕಮೆಂಟ್ ಮಾಡಿದ್ದರೆ. ಇನ್ನೊಬ್ಬ ಬಳಕೆದಾರರು ತಾಯಿ ಎಂದರೆ ತಾಯಿ, ಸದಾ ಮಕ್ಕಳ ಸೇವೆಯಲ್ಲಿಯೇ ತೊಡಗಿರುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಶಿವಮೊಗ್ಗದಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಒಲಿಂಪಿಕ್ ಕ್ರೀಡಾಕೂಟ ಆಯೋಜನೆ

    ಶಿವಮೊಗ್ಗದಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಒಲಿಂಪಿಕ್ ಕ್ರೀಡಾಕೂಟ ಆಯೋಜನೆ

    ಶಿವಮೊಗ್ಗ: ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ನವೆಂಬರ್ 23 ರಿಂದ 30 ರವರೆಗೆ ರಾಜ್ಯಮಟ್ಟದ ಒಲಿಂಪಿಕ್ ಕ್ರೀಡಾಕೂಟ ನಡೆಸಲು ನಿರ್ಧರಿಸಲಾಗಿದೆ.

    ಯುವಜನ ಸೇವಾ ಮತ್ತು ಕ್ರೀಡಾ ಸಚಿವರಾಗಿ ಈಶ್ವರಪ್ಪ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಶಿವಮೊಗ್ಗದಲ್ಲಿ ಈ ರೀತಿಯ ರಾಜ್ಯಮಟ್ಟದ ಕ್ರೀಡಾಕೂಟ ನಡೆಸಲು ನಿರ್ಧರಿಸಲಾಗಿದ್ದು ಇದು ಜಿಲ್ಲೆಯ ಅಭಿವೃದ್ಧಿ ಜೊತೆಗೆ ಕ್ರೀಡಾಪಟುಗಳ ಉತ್ತೇಜನಕ್ಕೆ ಸಹಕಾರಿಯಾಗಿದೆ. ಈ ಕ್ರೀಡಾಕೂಟವು ಶಿವಮೊಗ್ಗದ ನೆಹರೂ ಕ್ರೀಡಾಂಗಣ, ಒಳಾಂಗಣ ಕ್ರೀಡಾಂಗಣ ಸೇರಿದಂತೆ, ನಗರದ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ನಡೆಸಲು ಭರ್ಜರಿ ತಯಾರಿ ಮಾಡಿಕೊಳ್ಳಲಾಗುತ್ತಿದೆ.

    ಕ್ರೀಡಾಕೂಟದ ಯಶಸ್ವಿ ಅಯೋಜನೆಗೆ ಸಾರ್ವಜನಿಕ ಸಂಘ-ಸಂಸ್ಥೆಗಳಿಗೆ ಕೈ ಜೋಡಿಸಲು ಮನವಿ ಕೂಡ ಮಾಡಿಕೊಳ್ಳಲಾಗಿದೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳ ವಸತಿ ಊಟ ಉಪಹಾರ ಮತ್ತು ಸಾರಿಗೆ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು ಹಾಗು ಎಲ್ಲಾ ಕ್ರೀಡಾ ಸಂಸ್ಥೆಗಳು ಸಕ್ರಿಯವಾಗಿ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಕ್ರೀಡಾ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಈ ಬಗ್ಗೆ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ಸಚಿವರು ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಕೈ ಜೋಡಿಸಿ ಎಂದು ಮನವಿ ಕೂಡ ಮಾಡಿಕೊಂಡಿದ್ದಾರೆ.

    ಇದೇ ಪ್ರಥಮ ಬಾರಿಗೆ ಶಿವಮೊಗ್ಗದಲ್ಲಿ ಈ ಒಲಿಂಪಿಕ್ ಕ್ರೀಡಾಕೂಟ ಆಯೋಜಿಸಲಾಗಿದ್ದು ಈ ಕ್ರೀಡಾಕೂಟದಲ್ಲಿ, ಒಟ್ಟು 25 ವಿವಿಧ ಕ್ರೀಡಾಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಸುಮಾರು 4 ಸಾವಿರ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸುವ ನಿರೀಕ್ಷೆ ಇದ್ದು, ಶಿವಮೊಗ್ಗ ಸೇರಿದಂತೆ ತಾಲೂಕು ಕೇಂದ್ರಗಳಲ್ಲಿ ಕೆಲವು ಸ್ಪರ್ಧೆಗಳನ್ನು ಆಯೋಜಿಸಲು ಕೂಡ ಉದ್ದೇಶಿಸಲಾಗಿದೆ.

    ಈ ಒಲಿಂಪಿಕ್ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಸ್ವಿಮ್ಮಿಂಗ್, ರೆಸ್ಲಿಂಗ್, ಆರ್ಚರಿ, ಫೆನ್ಸಿಂಗ್, ಸೈಕ್ಲಿಂಗ್, ಜೂಡೋ, ಹಾಕಿ, ಬಾಲ್ ಬ್ಯಾಡ್ಮಿಂಟನ್, ನೆಟ್ಬಾಲ್ ಬ್ಯಾಡ್ಮಿಂಟನ್ ಸೇರಿದಂತೆ 25 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ನಗರದ ನೆಹರು ಕ್ರೀಡಾಂಗಣ, ಒಳಾಂಗಣ ಕ್ರೀಡಾಂಗಣ, ಕ್ರೀಡಾ ಸಂಕೀರ್ಣ, ಸೇರಿದಂತೆ ವಿವಿಧ ಕಾಲೇಜುಗಳ ಕ್ರೀಡಾಂಗಣಗಳಲ್ಲಿ ಹಲವು ಸ್ಪರ್ಧೆಗಳನ್ನ ಆಯೋಜಿಸಲು ತೀರ್ಮಾನಿಸಲಾಗಿದೆ.

  • ಅಂಗವೈಕಲ್ಯವನ್ನ ಮೆಟ್ಟಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಕ್ರೀಡಾ ಪಟುವಿಗೆ ಸಹಾಯ ಬೇಕಿದೆ

    ಅಂಗವೈಕಲ್ಯವನ್ನ ಮೆಟ್ಟಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಕ್ರೀಡಾ ಪಟುವಿಗೆ ಸಹಾಯ ಬೇಕಿದೆ

    ವಿಜಯಪುರ: ಸಾಧಿಸುವ ಛಲವೊಂದಿದ್ದರೆ ಸಾಕು ಏನು ಬೇಕಾದರು ಸಾಧಿಸಬಹುದು. ಅಂಗವೈಕಲ್ಯವಿದ್ದರು ಅದನ್ನು ಮೆಟ್ಟಿ ನಿಂತು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ರಾಜ್ಯದ ಹೆಸರನ್ನು ಖ್ಯಾತಿಗೊಳಿಸಿದ್ದಾರೆ. ಆದರೆ ಈ ಕ್ರೀಡಾಪಟುವಿಗೆ ಈಗ ಸಾಧನೆಗೆ ಬಡತನ ಅಡ್ಡಿ ಆಗಿದ್ದು, ಹಣಕಾಸಿನ ನೆರವು ಸಿಕ್ಕರೆ ದೇಶದ ಕೀರ್ತಿ ಪತಾಕೆಯನ್ನ ಆಗಸದೆತ್ತರಕ್ಕೆ ಹಾರಿಸುವ ಛಲ ಹೊಂದಿದ್ದಾರೆ. ಅದಕ್ಕಾಗಿಯೇ ಈಗ ಸಹಾಯ ಹಸ್ತ ಕೈ ಚಾಚಿ ಬೆಳಕು ಕಾರ್ಯಕ್ರಮಕ್ಕೆ ಬಂದಿದ್ದಾರೆ.

    ಯುವಕನ ಹೆಸರು ರಾಜೇಶ್ ಸುರೇಶ್ ಪವಾರ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇಬೇವನೂರು ಗ್ರಾಮದವರು. 6 ವರ್ಷ ಇರುವಾಗಲೇ ಪೊಲೀಯೋಗೆ ತುತ್ತಾಗಿದ್ದು, ಎಡಗಾಲು ಸ್ವಾಧೀನತೆಯನ್ನು ಕಳೆದುಕೊಂಡ ಅಂಗವಿಕಲರಾಗಿದ್ದಾರೆ. ಯುವಕ ಬಿಎ ಓದುವಾಗ ಜೊತೆಯಲ್ಲಿದ್ದವರು ನಿನ್ನಿಂದ ಯಾವುದೇ ಸಾಧನೆ ಮಾಡಲು ಆಗೋದಿಲ್ಲ ಎಂದು ಹೀಯಾಳಿಸಿ ದೂರ ತಳ್ಳುತ್ತಿದ್ದರು. ಇದನ್ನೇ ಚಾಲೆಂಜ್ ಆಗಿ ಸ್ವೀಕರಿಸಿ ಪ್ಯಾರಾ ಆಥ್ಲೆಟಿಕ್‍ನಲ್ಲಿ ಸಾಧನೆ ಮಾಡಿ ತೋರಿಸಿದ್ದಾರೆ.

    ತನ್ನ ಅಂಗವಿಕಲತೆಯನ್ನು ಮೆಟ್ಟಿ ನಿಂತು ಆಥ್ಲೆಟಿಕ್‍ನಲ್ಲಿ ಸಾಧನೆ ಮಾಡಿರುವ ರಾಜೇಶ್ ಸುರೇಶ್ ಪವಾರ ಸಿಂಗಪೂರ, ಶ್ರೀಲಂಕಾ, ಚೈನಾ ಸೇರಿದಂತೆ ವಿವಿಧ ದೇಶಗಳಲ್ಲಿ ಭಾರತದಿಂದ ಸ್ಪರ್ಧಿಸಿ ರಾಜ್ಯಮಟ್ಟದಲ್ಲಿ 8 ಪದಕ, ರಾಷ್ಟ್ರಮಟ್ಟದಲ್ಲಿ 9 ಪದಕ, ಅಂತರಾಷ್ಟ್ರೀಯ ಮಟ್ಟದಲ್ಲಿ 5 ಪದಕ ಹಾಗೂ ಪ್ರಥಮ ಮತ್ತು ದ್ವಿತೀಯ ಮಟ್ಟದಲ್ಲಿ ಸೇರಿ ಒಟ್ಟು 23 ಬೆಳ್ಳಿ ಮತ್ತು ಚಿನ್ನದ ಪದಕ ಗೆದ್ದು ದೇಶದ ಕೀರ್ತಿ ತಂದಿದ್ದಾರೆ.

    ಶ್ರೀಲಂಕಾ ಹಾಗೂ ಥೈಲಾಂಡ್ ನಲ್ಲಿ ಇಂಟರ್ ನ್ಯಾಷನಲ್ ಪ್ಯಾರಾ ಅಥ್ಲೇಟಿಕ್ಸ್ ನಲ್ಲಿ ಫ್ರಥಮ ಸ್ಥಾನ ಪಡೆದಿರೋದು ಹೆಮ್ಮೆಯ ವಿಚಾರವಾಗಿದೆ. ಆದರೆ ಬಡತನ ಇವರ ಸಾಧನೆಗೆ ಅಡ್ಡಿಯಾಗುತ್ತಿದೆ. ಇನ್ನೂ ರಾಜ್ಯ ಕ್ರೀಡಾ ಇಲಾಖೆ ಅಂತರಾಷ್ಟ್ರೀಯ ಕ್ರೀಡೆಯಲ್ಲಿ ಪಾಲ್ಗೊಳ್ಳಲು ವೆಚ್ಚ ಭರಿಸುತ್ತದೆ. ಆದರೆ ಇದುವರೆಗೂ ಸಾಲ ಮಾಡಿ ವ್ಯಯಿಸಿದ ಹಣ ನೀಡದೇ ಇರೋದು ದುರಂತ.

    ದುಬೈನಲ್ಲಿ ನಡೆಯಲಿರುವ ಇಂಟರ್ ನ್ಯಾಷನಲ್ ಪ್ಯಾರಾ ಅಥ್ಲೇಟಿಕ್ಸ್ ನಲ್ಲಿ ಆಯ್ಕೆಯಾಗಿದ್ದು, ತರಬೇತಿ ಹಾಗೂ ದುಬೈಗೆ ಹೋಗಲು ಖರ್ಚು ವೆಚ್ಚಗಳನ್ನು ಸ್ವತಃ ಭರಿಸಲು ಅಸಹಾಯಕನಾಗಿದ್ದಾರೆ. ಅಂಗವಿಕಲತೆಯನ್ನೇ ಹಿಮೆಟ್ಟಿ ಸಾಧಿಸುವ ಛಲವನ್ನು ಹೊಂದಿರುವ ಅಂಗವಿಕಲ ರಾಜೇಶ್‍ಗೆ, ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿ ಪತಾಕೆಯನ್ನು ಹಾರಿಸಲು ದಾನಿಗಳ ಅವಶ್ಯಕತೆ ಇದೆ. ಹೀಯಾಳಿಕೆಯನ್ನು ಚಾಲೆಂಜಾಗಿ ಸ್ವೀಕರಿಸಿ ಸಾಧಿಸಿ ತೋರಿಸುತ್ತಿರುವ ರಾಜೇಶ್ ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮದ ಮೂಲಕ ದಾನಿಗಳಿಂದ ನೆರವು ಬಯಸುತ್ತಿದ್ದಾರೆ.

    https://www.youtube.com/watch?v=jYEeV6HZ8rc

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews