Tag: ಕ್ರೀಡೆ

  • ಯುವ ಆಟಗಾರರ ಪರ್ಯಾಯ ವೃತ್ತಿ ಬದುಕಿಗೂ ದ್ರಾವಿಡ್ ಚಿಂತನೆ

    ಯುವ ಆಟಗಾರರ ಪರ್ಯಾಯ ವೃತ್ತಿ ಬದುಕಿಗೂ ದ್ರಾವಿಡ್ ಚಿಂತನೆ

    ಮುಂಬೈ: ಯಾವುದೇ ಕ್ರೀಡಾಪಟುವಿಗೂ ವೃತ್ತಿ ಜೀವನ ಅಂತ್ಯದ ಬಳಿಕ ಅವಕಾಶ ಪಡೆಯುವುದು ಕಷ್ಟಸಾಧ್ಯವಾಗುತ್ತದೆ. ಆದರೆ ಸದ್ಯದ ಸ್ಥಿತಿಯಲ್ಲಿ ಯುವ ಜನಾಂಗ ಕ್ರೀಡೆಯ ಬಗ್ಗೆ ಹೆಚ್ಚಿನ ಒಲವು ತೋರುತ್ತಿದ್ದು, ಆದರೆ ಇಲ್ಲಿಯೂ ಕೂಡ ಅವಕಾಶಗಳ ಕೊರತೆ ದೊಡ್ಡ ಮಟ್ಟದಲ್ಲಿದೆ. ಆದ್ದರಿಂದ ರಾಹುಲ್ ದ್ರಾವಿಡ್ ಹೊಸ ಯೋಚನೆಯೊಂದಿಗೆ ಮುಂದೆ ಬಂದಿದ್ದಾರೆ.

    17 ರಿಂದ 21 ವರ್ಷದ ಯುವ ಆಟಗಾರರು ವೃತ್ತಿ ಜೀವನದ ಆರಂಭದಲ್ಲಿ ಉತ್ತಮ ಪ್ರದರ್ಶನ ನೀಡದಿದ್ದರೆ ಮುಂದಿನ ಅವಕಾಶ ಪಡೆಯುವುದು ಕಷ್ಟಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಅಂಡರ್ 19 ತಂಡ ಹಾಗೂ ಎ ತಂಡಗಳ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಆಟಗಾರರ ಭವಿಷ್ಯದ ಬಗ್ಗೆ ಗಮನ ಹರಿಸಿದ್ದು, ಯುವ ಆಟಗಾರರ ಪರ್ಯಾಯ ವೃತ್ತಿ ಜೀವನ ಕಲ್ಪಿಸುವ ಬಗ್ಗೆ ಬಿಸಿಸಿಐ ಮುಂದೆ ಪ್ರಸ್ತಾಪ ಮಾಡಿದ್ದಾರೆ.

    ಕ್ರೀಡೆಯ ಹೊರತಾಗಿಯೂ ಕೂಡ ಆಟಗಾರರು ಉದ್ಯೋಗ ಅವಕಾಶ ಪಡೆಯುವ ಕೌಶಲ್ಯ ಹಾಗೂ ಸಾಮಥ್ರ್ಯವನ್ನು ಗಳಿಸಬೇಕಿದೆ. ಇಂತಹ ಒಂದು ಕಲ್ಪನೆಯನ್ನು ದ್ರಾವಿಡ್ ಮೊದಲ ಬಾರಿಗೆ ಪ್ರಸ್ತಾಪಿಸಿದ್ದಾರೆ. ಇದಕ್ಕೆ ಇತರೇ ಕೋಚ್ ಗಳು ಕೂಡ ಸಭೆಯಲ್ಲಿ ಬೆಂಬಲ ನೀಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಕಳೆದ ಮೂರು ವರ್ಷಗಳಿಂದ ಎರಡು ತಂಡಗಳ ಯುವ ಆಟಗಾರ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ರಾಹುಲ್ ದ್ರಾವಿಡ್, ಯುವ ಆಟಗಾರರು ಕ್ರೀಡಾ ವೃತ್ತಿ ಜೀವನ ಮುಂದುವರಿಸಲು ಕಷ್ಟಸಾಧ್ಯವಾದರೆ ಮುಂದೇನು ಎಂಬುವುದು ಅವರ ಯೋಜನೆ ಆಗಿದೆ. ಆದ್ದರಿಂದ ವೃತ್ತಿ ಜೀವನದ ಆಚೆಗೂ ಆಟಗಾರರಿಗೆ ಶಿಕ್ಷಣ ಸೇರಿದಂತೆ, ಕೌಶಲ್ಯಗಳ ಅಗತ್ಯತೆಯ ಪೂರೈಸುವ ಯೋಜನೆಯ ಚಿಂತನೆಯನ್ನು ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆಡಿದ್ದು 532 ಟೆಸ್ಟ್, ಗೆಲುವು 150-ಟೀಂ ಇಂಡಿಯಾ ಟೆಸ್ಟ್ ಪಂದ್ಯದ ಪಯಣ

    ಆಡಿದ್ದು 532 ಟೆಸ್ಟ್, ಗೆಲುವು 150-ಟೀಂ ಇಂಡಿಯಾ ಟೆಸ್ಟ್ ಪಂದ್ಯದ ಪಯಣ

    ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದ್ದು, 150ನೇ ಟೆಸ್ಟ್ ಗೆದ್ದ ವಿಶ್ವದ 5ನೇ ದೇಶವಾಗಿ ಹೊರ ಹೊಮ್ಮಿದೆ. ಈ ವರ್ಷ ವಿದೇಶಿ ನೆಲದಲ್ಲಿ ಟೀಂ ಇಂಡಿಯಾ ಗೆದ್ದ ನಾಲ್ಕನೇ ಪಂದ್ಯ ಇದಾಗಿದೆ.

    ಆಸ್ಟ್ರೇಲಿಯಾ 384, ಇಂಗ್ಲೆಂಡ್ 364, ವೆಸ್ಸ್ ಇಂಡೀಸ್ 171 ಮತ್ತು ದಕ್ಷಿಣ ಆಫ್ರಿಕಾ 162 ಟೆಸ್ಟ್ ಪಂದ್ಯಗಳನ್ನು ಗೆಲ್ಲುವ ಮೂಲಕ ಮೊದಲ ನಾಲ್ಕು ಸ್ಥಾನಗಳಲ್ಲಿವೆ. ಇಂದಿನ ಪಂದ್ಯ ಜಯಿಸುವ ಮೂಲಕ ಟೀಂ ಇಂಡಿಯಾ 150ನೇ ಬಾರಿ ವಿಜಯ ಪತಾಕೆ ಹಾರಿಸುವ ಮೂಲಕ 5ನೇ ಸ್ಥಾನವನ್ನು ಪಡೆದುಕೊಂಡಿದೆ.

    1932ರಿಂದ ಭಾರತ ಇದೂವರೆಗೂ 532 ಟೆಸ್ಟ್ ಪಂದ್ಯಗಳನ್ನು ಆಡಿದೆ. ಇದರಲ್ಲಿ 150 ಗೆಲುವು, 165 ಸೋಲು ಮತ್ತು 216 ಡ್ರಾ ಮಾಡಿಕೊಂಡಿದ್ದರೆ, ಒಂದು ಪಂದ್ಯ ಟೈಯಲ್ಲಿ ಅಂತ್ಯವಾಗಿದೆ. 562ರಲ್ಲಿ ವಿದೇಶಿ ನೆಲದಲ್ಲಿ 265 ಟೆಸ್ಟ್ ಆಡಿದೆ. ವಿದೇಶದಲ್ಲಿ ಆಡಿದ ಟೆಸ್ಟ್ ಪಂದ್ಯಗಳ ಪೈಕಿ 49ರಲ್ಲಿ ಗೆಲುವು ಸಾಧಿಸಿದ್ರೆ, 113ರಲ್ಲಿ ಸೋಲು ಕಂಡಿತ್ತು. 103 ಪಂದ್ಯಗಳು ಟೀಂ ಇಂಡಿಯಾ ಡ್ರಾ ಮಾಡಿಕೊಂಡಿದೆ. ಇದನ್ನೂ ಓದಿ: ಗಂಗೂಲಿ ದಾಖಲೆ ಟೈ, ಧೋನಿಗೆ ಸಮನಾಗಲು ಕೊಹ್ಲಿಗೆ ಬೇಕು 1 ಗೆಲುವು!

    50 ವರ್ಷಗಳ ನಂತರ ಟೀಂ ಇಂಡಿಯಾ ವಿದೇಶದಲ್ಲಿ ಒಂದೇ ವರ್ಷ ನಾಲ್ಕು ಟೆಸ್ಟ್ ಗಳಲ್ಲಿ ಗೆಲುವು ಕಾಣುವ ಮೂಲಕ ದಾಖಲೆ ಬರೆದಿದೆ. ದಕ್ಷಿಣ ಆಫ್ರಿಕಾದ ಜೋಹನೆಸ್ ಬರ್ಗ್, ಇಂಗ್ಲೆಂಡ್ ನ ಟ್ರೆಂಟಬ್ರಿಜಾ, ಆಸ್ಟ್ರೇಲಿಯಾದ ಅಡಿಲೇಡ್ ಮತ್ತು ಮೆಲ್ಬೊರ್ನ್ ನಲ್ಲಿ ಟೀಂ ಇಂಡಿಯಾ ಗೆದ್ದಿದೆ. ಈ ಹಿಂದೆ 1968ರಲ್ಲಿ ಟೀಂ ಇಂಡಿಯಾ ವಿದೇಶದಲ್ಲಿ ಉತ್ತಮ ಪ್ರದರ್ಶನ ನೀಡಿತ್ತು. ಇದಾದ 50 ವರ್ಷದ ಬಳಿಕ ಅಂದ್ರೆ 2018ರಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಹಲವು ದಾಖಲೆಗಳನ್ನು ತನ್ನ ಮುಡಿಗೇರಿಸಿಕೊಂಡಿದೆ. ಇದನ್ನೂ ಓದಿಟೀಂ ಇಂಡಿಯಾಗೆ 150ನೇ ಟೆಸ್ಟ್ ಗೆಲುವು – ಕೀಪರ್ ರಿಷಭ್, ಇಶಾಂತ್ ಶರ್ಮಾ, ಬೂಮ್ರಾ ದಾಖಲೆ!

    2000ನೇ ಇಸವಿಯಿಂದ ಇಂದಿನವರೆಗೂ ಟೀಂ ಇಂಡಿಯಾ 202 ಟೆಸ್ಟ್ ಪಂದ್ಯಗಳನ್ನು ಆಡಿದೆ. ಇವುಗಳಲ್ಲಿ 89ರಲ್ಲಿ ಗೆಲುವು, 56ರಲ್ಲಿ ಸೋಲು, 57 ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ. 1952ರಲ್ಲಿ ಭಾರತ ತನ್ನ 25ನೇ ಟೆಸ್ಟ್ ನಲ್ಲಿ ಮೊದಲು ಗೆಲುವು ದಾಖಲಿಸಿತ್ತು. 1994ರಲ್ಲಿ 286ನೇ ಟೆಸ್ಟ್ ಪಂದ್ಯದಲ್ಲಿ 50ನೇ ಗೆಲುವನ್ನು ದಾಖಲಿಸಿತು. 27ನೇ ನವೆಂಬರ್ 2009ರಲ್ಲಿ ಆಡಿದ 432ನೇ ಮ್ಯಾಚ್ ನಲ್ಲಿ 100ನೇ ಗೆಲುವು ಪಡೆದಿತ್ತು. ಇಂದು ಆಸ್ಟೇಲಿಯಾ ವಿರುದ್ಧದ ಪಂದ್ಯದಲ್ಲಿ 150ನೇ ಗೆಲುವನ್ನು ಟೀಂ ಇಂಡಿಯಾ ತನ್ನದಾಗಿಸಿಕೊಂಡಿದೆ. ಟೀಂ ಇಂಡಿಯಾ ಈ ವರ್ಷ ಅಂದ್ರೆ 2018ರಲ್ಲಿ ಒಟ್ಟು 48 ಪಂದ್ಯಗಳನ್ನು ಆಡಿದ್ದು, 5 ಟೆಸ್ಟ್ ಗಳನ್ನು ಡ್ರಾ ಮಾಡಿಕೊಂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಏಷ್ಯನ್ ಓಪನ್ ಶಾರ್ಟ್ ಟ್ರ್ಯಾಕ್ ಸ್ಪೀಡ್ ಸ್ಕೇಟಿಂಗ್: ಅಶ್ವಿನ್ ಡಿಸಿಲ್ವಾಗೆ ಕಂಚು

    ಏಷ್ಯನ್ ಓಪನ್ ಶಾರ್ಟ್ ಟ್ರ್ಯಾಕ್ ಸ್ಪೀಡ್ ಸ್ಕೇಟಿಂಗ್: ಅಶ್ವಿನ್ ಡಿಸಿಲ್ವಾಗೆ ಕಂಚು

    ಮಂಗಳೂರು: ಇಂಡೊನೇಷ್ಯಾದ ಜಕಾರ್ತದಲ್ಲಿ ನಡೆದ ಪುರುಷರ ಜೂನಿಯರ್ ವಿಭಾಗದ 1,000 ಮೀಟರ್ ಏಷ್ಯನ್ ಓಪನ್ ಶಾರ್ಟ್ ಟ್ರ್ಯಾಕ್ ಸ್ಪೀಡ್ ಸ್ಕೇಟಿಂಗ್ ನಲ್ಲಿ ನಗರದ ಅಶ್ವಿನ್ ಕ್ಯಾಲೆನ್ ಡಿಸಿಲ್ವಾ ಕಂಚಿನ ಪದಕ ಪಡೆದಿದ್ದಾರೆ.

    ಅಶ್ವಿನ್ ಕ್ಯಾಲೆನ್ ಡಿಸಿಲ್ವಾ ಮಂಗಳೂರಿನ ಆಲ್ವಿನ್ ಮತ್ತು ಆಶಾ ಡಿಸಿಲ್ವಾ ದಂಪತಿಯ ಪುತ್ರನಾಗಿದ್ದಾರೆ. ಇದೇ ಡಿಸೆಂಬರ್ 1 ಮತ್ತು 2 ರಂದು ಜಕಾರ್ತದಲ್ಲಿ ನಡೆದ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಸ್ಪರ್ಧೆಯಲ್ಲಿ ಅಶ್ವಿನ್ ಕಂಚಿನ ಪದಕ ಗೆಲ್ಲುವ ಮೂಲಕ ಜನವರಿಯಲ್ಲಿ ಕೆನಡಾದಲ್ಲಿ ನಡೆಯಲಿರುವ ವರ್ಲ್ಡ್ ಜೂನಿಯರ್ ಚಾಂಪಿಯನ್ ಶಿಪ್ ಗೂ ಸಹ ಅರ್ಹತೆಯನ್ನು ಗಿಟ್ಟಿಸಿಕೊಂಡಿದ್ದಾರೆ.

    ಇದಲ್ಲದೇ ಫೆಬ್ರವರಿಯಲ್ಲಿ ಜರ್ಮನಿಯ ಡ್ರೆಸ್ಡೆನ್ ನಲ್ಲಿ ನಡೆಯಲಿರುವ ವರ್ಲ್ಡ್ ಕಪ್ ಚಾಂಪಿಯನ್ ಶಿಪ್ ನಲ್ಲಿಯೂ ಭಾರತವನ್ನು ಪ್ರತಿನಿಧಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಫೋರ್ಬ್ಸ್ ಟಾಪ್ 100 ಭಾರತೀಯ ಸೆಲೆಬ್ರಿಟಿ – ಸಲ್ಮಾನ್, ಕೊಹ್ಲಿ, ದೀಪಿಕಾ ಮೋಡಿ- ಯಾರ ಆದಾಯ ಎಷ್ಟು ಕೋಟಿ?

    ಫೋರ್ಬ್ಸ್ ಟಾಪ್ 100 ಭಾರತೀಯ ಸೆಲೆಬ್ರಿಟಿ – ಸಲ್ಮಾನ್, ಕೊಹ್ಲಿ, ದೀಪಿಕಾ ಮೋಡಿ- ಯಾರ ಆದಾಯ ಎಷ್ಟು ಕೋಟಿ?

    ನವದೆಹಲಿ: ಟೀಂ ಇಂಡಿಯಾ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಭಾರತದ ಶ್ರೀಮಂತ ಕ್ರೀಡಾಪಟು ಸ್ಥಾನದಲ್ಲಿ ಮುಂದುವರಿದಿದ್ದಾರೆ. ಕಳೆದ ವರ್ಷದಂತೆ ಸಚಿನ್ ತೆಂಡೂಲ್ಕರ್, ಎಂಎಸ್ ಧೋನಿ ಅವರನ್ನು ಹಿಂದಿಕ್ಕಿ ಈ ವರ್ಷವೂ ಫೋರ್ಬ್ಸ್ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಅಲಂಕರಿಸಿದ್ದಾರೆ.

    ಫೋರ್ಬ್ಸ್ ಇಂಡಿಯಾ ಬಿಡುಗಡೆ ಮಾಡಿರುವ 2018ರ ಟಾಪ್ ಸೆಲೆಬ್ರಿಟಿ ಪಟ್ಟಿಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ನಂ.1 ಸ್ಥಾನ ಪಡೆದಿದ್ದು, 2ನೇ ಸ್ಥಾನದಲ್ಲಿ ಕೊಹ್ಲಿ ಇದ್ದಾರೆ. 2018 ಸಾಲಿನಲ್ಲಿ ಸಲ್ಮಾನ್ ಖಾನ್ 253.25 ಕೋಟಿ ರೂ. ಆದಾಯ ಗಳಿಸಿದ್ದರೆ ಕೊಹ್ಲಿ 228.09 ಕೋಟಿ ರೂ. ಆದಾಯದೊಂದಿಗೆ 3ನೇ ಸ್ಥಾನದಿಂದ ಈ ಬಾರಿ ಎರಡನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. 2017ನೇ ಸಾಲಿನಲ್ಲಿ ಕೊಹ್ಲಿ 100.72 ಕೋಟಿ ರೂ. ಗಳಿಸಿದ್ದು, ಈ ಬಾರಿ ಶೇ. 116.53 ರಷ್ಟು ಆದಾಯ ಹೆಚ್ಚಾಗಿದೆ.

    ಉಳಿದಂತೆ ಪಟ್ಟಿಯಲ್ಲಿ ಎಂಎಸ್ ಧೋನಿ 101.77 ಕೋಟಿ ರೂ. ಆದಾಯದೊಂದಿಗೆ 5ನೇ ಸ್ಥಾನದಲ್ಲಿದ್ದು, 80 ಕೋಟಿ ರೂ. ಆದಾಯದೊಂದಿಗೆ ಸಚಿನ್ ತೆಂಡೂಲ್ಕರ್ 9ನೇ ಸ್ಥಾನದಲ್ಲಿದ್ದಾರೆ. 2018 ರ ಸಾಲಿನಲ್ಲಿ ದೇಶದ ಅತಿ ಶ್ರೀಮಂತ ಕ್ರೀಡಾಪಟುಗಳ ಪೈಕಿ ಹೆಚ್ಚಿನವರು ಕ್ರಿಕೆಟಿಗರಾಗಿದ್ದು, ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

    ಫೋರ್ಬ್ಸ್ 2018 ಕ್ರೀಡಾಪಟುಗಳು:
    ವಿರಾಟ್ ಕೊಹ್ಲಿ- 228.09 ಕೋಟಿ ರೂ.
    ಎಂಎಂಸ್ ಧೋನಿ- 101.77 ಕೋಟಿ ರೂ.
    ಸಚಿನ್ ತೆಂಡೂಲ್ಕರ್- 80 ಕೋಟಿ ರೂ.

    ಪಿವಿ ಸಿಂಧೂ- 36.5 ಕೋಟಿ ರೂ.
    ರೋಹಿತ್ ಶರ್ಮಾ – 31.49 ಕೋಟಿ ರೂ.
    ಹಾರ್ದಿಕ್ ಪಾಂಡ್ಯ- 28.46 ಕೋಟಿ ರೂ

    ಆರ್ ಅಶ್ವಿನ್- 18.9 ಕೋಟಿ ರೂ.
    ಭುವನೇಶ್ವರ್ ಕುಮಾರ್ – 17.3 ಕೋಟಿ ರೂ.
    ಸುರೇಶ್ ರೈನಾ – 17.0 ಕೋಟಿ ರೂ.

    ಟಾಪ್ ಸೆಲೆಬ್ರಿಟಿ:
    ಸಲ್ಮಾನ್ ಖಾನ್ – 253.25 ಕೋಟಿ ರೂ.
    ಅಕ್ಷಯ್ ಕುಮಾರ್ – 185 ಕೋಟಿ ರೂ.
    ದೀಪಿಕಾ ಪಡುಕೋಣೆ – 112.8 ಕೋಟಿ ರೂ.

    ಅಮೀರ್ ಖಾನ್ – 97.50 ಕೋಟಿ ರೂ.
    ಅಮಿತಾಭ್ ಬಚ್ಚನ್ – 96.17 ಕೋಟಿ ರೂ.
    ರಣವೀರ್ ಸಿಂಗ್ – 84.7 ಕೋಟಿ ರೂ.
    ಅಜಯ್ ದೇವಗನ್ – 74.50 ಕೋಟಿ ರೂ.

    ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಕಳೆದ ಬಾರಿ 107.50 ಕೋಟಿ ರೂ. ಆದಾಯದೊಂದಿಗೆ ಟಾಪ್ 2ನೇ ಸ್ಥಾನ ಪಡೆದಿದ್ದ ಶಾರುಖ್ ಖಾನ್ ಈ ಬಾರಿ 56 ಕೋಟಿ ರೂ. ಆದಾಯದೊಂದಿಗೆ 13ನೇ ಸ್ಥಾನ ಪಡೆದಿದ್ದು, ಟಾಪ್ 10 ಪಟ್ಟಿಯಿಂದಲೇ ಹೊರ ಬಿದ್ದಿದ್ದಾರೆ. ಕಳೆದ ವರ್ಷ ಶಾರುಖ್ ಖಾನ್ ಅವರ ಯಾವುದೇ ಹೊಸ ಚಿತ್ರ ಬಿಡುಗಡೆ ಆಗದಿರುವುದೇ ಆದಾಯ ಕಡಿಮೆ ಆಗಲು ಕಾರಣವಾಗಿದೆ.

    ವಿಶೇಷ ಎಂಬಂತೆ ನಟಿ ದೀಪಿಕಾ ಪಡುಕೋಣೆ 112.8 ಕೋಟಿ ರೂ. ಆದಾಯ ಗಳಿಸುವ ಮೂಲಕ ಟಾಪ್ 5 ಸ್ಥಾನಲ್ಲಿದ್ದಾರೆ. 45.83 ಕೋಟಿ ರೂ. ಆದಾಯದೊಂದಿಗೆ ಅನುಷ್ಕಾ ಶರ್ಮಾ 16ನೇ ಸ್ಥಾನವನ್ನು ಪಡೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಗೌತಮ್ ಗಂಭೀರ್

    ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಗೌತಮ್ ಗಂಭೀರ್

    ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಓಪನಿಂಗ್ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್ ಎಲ್ಲಾ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದಾರೆ.

    ಗೌತಮ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ‘ಭಾರವಾದ ಹೃದಯದಿಂದ ಅತ್ಯಂತ ಕಠಿಣವಾದ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದು, ಭಾರವಾದ ಹೃದಯದ ಮೂಲಕವೇ ನನ್ನ ನಿರ್ಧಾರವನ್ನು ಘೋಷಿಸುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

    ನಿವೃತ್ತಿ ಕುರಿತು ಆಂಗ್ಲ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಅವರು, ಸತತವಾಗಿ 15 ವರ್ಷ ಭಾರತ ದೇಶಕ್ಕಾಗಿ ನಾನು ಕ್ರಿಕೆಟ್ ಆಡಿದ್ದೇನೆ. ಈ ಸುಂದರವಾದ ಆಟದಿಂದ ಈಗ ನಿವೃತ್ತಿ ಬಯಸುತ್ತಿದ್ದೇನೆ. ನನ್ನ ಕೊನೆಯ ಪಂದ್ಯವನ್ನು ಡಿಸೆಂಬರ್ 6 ರಂದು ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆಯಲಿರುವ ಆಂಧ್ರ ವಿರುದ್ಧದ ರಣಜಿ ಪಂದ್ಯದಲ್ಲಿ ಆಡಲಿದ್ದೇನೆ. ಒಬ್ಬ ಬ್ಯಾಟ್ಸ್‌ಮನ್ ಆಗಿ ಸಮಯಕ್ಕೆ ತುಂಬಾ ಮಹತ್ವವನ್ನು ನೀಡಿದ್ದೇನೆ. ಈಗ ನನಗೆ ಸರಿಯಾದ ಸಮಯ ಬಂದಿದೆ ಎಂದು ಹೇಳಿದ್ದಾರೆ.

    37 ವರ್ಷದ ಗೌತಮ್ ಗಂಭೀರ್ 2003ರ ಏಪ್ರಿಲ್ 11ರಂದು ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತದ 149ನೇ ಆಟಗಾರನಾಗಿ ಅಂತರಾಷ್ಟ್ರೀಯ ಕ್ರಿಕೆಟ್ ಜಗತ್ತಿಗೆ ಪಾದಾರ್ಪಣೆ ಮಾಡಿದ್ದರು. ಬಳಿಕ 2004ರ ನವೆಂಬರ್ 3ರಂದು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತದ 249ನೇ ಆಟಗಾರನಾಗಿ ಆಡಿದ್ದರು. ಗೌತಮ್ ಇದುವರೆಗೂ ಒಟ್ಟು 147 ಏಕದಿನ ಪಂದ್ಯಗಳನ್ನಾಡಿದ್ದು, 39.68ರ ಸರಾಸರಿಯಲ್ಲಿ 5,238 ರನ್ ಗಳಿಸಿದ್ದಾರೆ. ಇದರಲ್ಲಿ 11 ಶತಕ ಹಾಗೂ 34 ಅರ್ಧ ಶತಕಗಳನ್ನು ಒಳಗೊಂಡಿದೆ. ಕೊನೆಯದಾಗಿ 2013ರ ಜನವರಿ 27ರಂದು ಇಂಗ್ಲೆಂಡ್ ವಿರುದ್ಧ ಏಕದಿನ ಪಂದ್ಯವನ್ನು ಆಡಿದ್ದರು.

    ಟೆಸ್ಟ್ ನಲ್ಲಿ 58 ಪಂದ್ಯಗಳನ್ನು ಆಡಿರುವ ಗಂಭೀರ್, 41.95 ಸರಾಸರಿಯಲ್ಲಿ 4,154 ರನ್ ಗಳಿಸಿದ್ದಾರೆ. ಇದರಲ್ಲಿ 9 ಶತಕ ಸೇರಿದಂತೆ 22 ಅರ್ಧ ಶತಕಗಳು ದಾಖಲಾಗಿವೆ. ಟೆಸ್ಟ್ ನಲ್ಲಿ ಗರಿಷ್ಠ 206 ಹೊಡೆದಿದ್ದಾರೆ. ಅಲ್ಲದೇ ಟಿ-20ಯಲ್ಲಿ 37 ಪಂದ್ಯಗಳನ್ನಾಡಿ 27.41ರ ಸರಾಸರಿಯಲ್ಲಿ 932 ರನ್ ಗಳಿಸಿದ್ದಾರೆ.

    ಇದಲ್ಲದೇ ಭಾರತದ ಚುಟುಕು ಕ್ರಿಕೆಟ್ ಎಂದೇ ಹೆಸರು ಪಡೆದಿರುವ ಐಪಿಲ್ ಪಂದ್ಯಾವಳಿಯಲ್ಲಿ ದೆಹಲಿ ಹಾಗೂ ಕೋಲ್ಕತ್ತಾ ತಂಡಗಳನ್ನು ಗೌತಮ್ ಗಂಭೀರ್ ಮುನ್ನಡೆಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಿಂಡೀಸ್ ವಿರುದ್ಧದ ಟಿ-20 ಪಂದ್ಯದಲ್ಲಿ ಭಾರತಕ್ಕೆ ಗೆಲುವು

    ವಿಂಡೀಸ್ ವಿರುದ್ಧದ ಟಿ-20 ಪಂದ್ಯದಲ್ಲಿ ಭಾರತಕ್ಕೆ ಗೆಲುವು

    ಕೋಲ್ಕತ್ತ: ವೆಸ್ಟ್ ಇಂಡೀಸ್ ವಿರುದ್ಧದ ಮೊದಲನೇ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್‍ಗಳಿಂದ ಗೆಲ್ಲುವ ಮೂಲಕ ಶುಭಾರಂಭ ಪಡೆದಿದೆ.

    ವೆಸ್ಟ್ ಇಂಡೀಸ್ ವಿರುದ್ಧದ ಮೂರು ಟಿ-20 ಪಂದ್ಯಗಳ ಪೈಕಿ, ಮೊದಲನೇ ಪಂದ್ಯ ಕೋಲ್ಕತ್ತದ ಈಡನ್‍ಗಾರ್ಡ್ ಮೈದಾನದಲ್ಲಿ ಇಂದು ನಡೆದಿತ್ತು. ಮೊದಲು ಬ್ಯಾಟ್ ಮಾಡಿ ವಿಂಡೀಸ್ 109 ರನ್‍ಗಳಿಸಿತ್ತು. 110 ರನ್ ಗಳ ಸುಲಭ ಸವಾಲನ್ನು ಸ್ವೀಕರಿಸಿದ ಭಾರತ 17.5 ಓವರ್ ಗಳಲ್ಲಿ 110 ರನ್ ಗಳಿಸುವ ಮೂಲಕ 5 ವಿಕೆಟ್‍ಗಳಿಂದ ಗೆಲುವು ಸಾಧಿಸಿತು.

    ಪ್ರಾರಂಭದಲ್ಲೇ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ 6 ರನ್ ಹಾಗೂ ಆರಂಭಿಕ ಆಟಗಾರ ಶಿಖರ್ ಧವನ್ 3 ರನ್ ಗಳಿಸಿ ಔಟಾದರು. ನಂತರ ಬಂದ ಕ್ರುನಾಲ್ ಪಾಂಡ್ಯಾ 21 ರನ್ ಹಾಗೂ  ದಿನೇಶ್ ಕಾರ್ತಿಕ್‍  31 ರನ್ ಗಳು ಭಾರತದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದವು.

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿ, ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 109 ರನ್ ಗಳಿಸಿತ್ತು. ವಿಂಡೀಸ್ ಪರ ಫ್ಯಾಬಿಯನ್ ಅಲೆನ್ 27 ರನ್, ಕೀಮೊ ಪೌಲ್ 15 ರನ್ ಹೊಡೆಯುವ ಮೂಲಕ ಅತಿ ಹೆಚ್ಚು ರನ್ ಗಳಿಸಿದ್ದರು. ಟೀಂ ಇಂಡಿಯಾದ ಕುಲ್‍ದೀಪ್ ಯಾದವ್ 4 ಓವರ್ ಗಳಲ್ಲಿ 13 ರನ್ ನೀಡಿ 3 ವಿಕೆಟ್ ಪಡೆದರೆ, ಉಮೇಶ್ ಯಾದವ್, ಜಸ್ಪ್ರಿತ್ ಬೂಮ್ರಾ, ಕೆ ಖಲೀಲ್ ಅಹಮದ್ ಹಾಗೂ ಕ್ರುನಾಲ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದುಕೊಂಡರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬ್ಯಾಟ್ ಹಿಡಿದು ಮೈದಾನಕ್ಕೆ ಇಳಿದ್ರೆ, ವಿರಾಟ್ ಮನುಷ್ಯನೇ ಅಲ್ಲ: ತಮೀಮ್ ಇಕ್ಬಾಲ್

    ಬ್ಯಾಟ್ ಹಿಡಿದು ಮೈದಾನಕ್ಕೆ ಇಳಿದ್ರೆ, ವಿರಾಟ್ ಮನುಷ್ಯನೇ ಅಲ್ಲ: ತಮೀಮ್ ಇಕ್ಬಾಲ್

    ದುಬೈ: ಭಾರತ ಕ್ರಿಕೆಟ್ ತಂಡದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಬ್ಯಾಟ್ ಹಿಡಿದು ಮೈದಾನಕ್ಕೆ ಇಳಿದರೇ, ಅವರನ್ನು ಮನುಷ್ಯನ ರೂಪದಲ್ಲಿ ಕಾಣಲು ಸಾಧ್ಯವೇ ಇಲ್ಲವೆಂದು ಬಾಂಗ್ಲಾ ಓಪನಿಂಗ್ ಬ್ಯಾಟ್ಸ್‌ಮನ್ ತಮೀಮ್ ಇಕ್ಬಾಲ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.

    ಹೌದು, ವಿರಾಟ್ ಕೊಹ್ಲಿ ಅವರ ಅಬ್ಬರದ ಬ್ಯಾಟಿಂಗ್ ಶೈಲಿಗೆ ಕ್ರಿಕೆಟ್ ದಿಗ್ಗಜರೇ ಮಾರುಹೋಗಿದ್ದಾರೆ. ತನ್ನ ಅಗ್ರೆಸ್ಸೀವ್ ಆಟದ ಮೂಲಕ ಎಲ್ಲರನ್ನೂ ತನ್ನತ್ತ ವಿರಾಟ್ ಸೆಳೆದುಕೊಂಡಿದ್ದಾರೆ.

    ವಿರಾಟ್ ಬ್ಯಾಟಿಂಗ್ ಕುರಿತು ಪ್ರತಿಕ್ರಿಯಿಸಿರುವ ಇಕ್ಬಾಲ್, ನಾನು ಹಲವು ಬಾರಿ ವಿರಾಟ್ ಅವರ ಆಟವನ್ನು ನೋಡಿದ್ದೇನೆ. ಕೆಲವೊಮ್ಮೆ ವಿರಾಟ್ ಮನುಷ್ಯ ಅಂತ ನಮಗೆ ಅನ್ನಿಸುವುದೇ ಇಲ್ಲ. ಬ್ಯಾಟ್ ಹಿಡಿದು ಕ್ರಿಸ್‍ಗೆ ಬಂದರೆ, ನಿಜಕ್ಕೂ ಆತ ಮನುಷ್ಯನೇ ಆಗಿರುವುದಿಲ್ಲ. ಪ್ರತಿ ಬಾರಿಯೂ ಶತಕ ದಾಖಲಿಸುತ್ತಲೇ ಹೋಗುತ್ತಾರೆ ಎಂದು ಹೊಗಳಿದ್ದಾರೆ.

    ಕೊಹ್ಲಿಯವರ ಪ್ರದರ್ಶನ ಅತ್ಯಂತ ರೋಚಕವೆನಿಸುತ್ತದೆ. ಎಲ್ಲಾ ದರ್ಜೆಯ ಕ್ರಿಕೆಟ್‍ಗಳಲ್ಲೂ ಅವರೇ ನಂ.1. ಅವರಿಂದ ನಾವು ಕಲಿಯುವುದು ಸಾಕಷ್ಟು ಇದೆ. ಆತನೋರ್ವ ಅದ್ಭುತ ಆಟಗಾರ. ನಾನು ನನ್ನ 12 ವರ್ಷಗಳ ಕ್ರಿಕೆಟ್ ಬದುಕಿನಲ್ಲಿ ಸಾಕಷ್ಟು ಆಟಗಾರರೊಂದಿಗೆ ಆಡಿದ್ದೇನೆ. ಅವರೆಲ್ಲರಿಗೂ ಅವರದ್ದೇ ಆದ ಬಲವಾದ ಅಂಶಗಳನ್ನು ಹೊಂದಿದ್ದರು. ಆದರೆ ಕೊಹ್ಲಿಯವರ ರೀತಿಯಲ್ಲಿ ಯಾರನ್ನು ನೋಡಿಲ್ಲ. ಅವರ ಆಟವು ಪ್ರತಿ ಪಂದ್ಯದಲ್ಲೂ ವಿಭಿನ್ನವಾಗಿರುತ್ತದೆ. ಕೊಹ್ಲಿಯ ಎಲ್ಲಾ ಆಟಗಾರರನು ಮೀರಿಸುತ್ತಾರೆ ಎಂದು ಹೇಳಿದ್ದಾರೆ.

    ವಿರಾಟ್ ತಮ್ಮ 10,000 ರನ್ ಪೂರೈಸಲು ಕೇವಲ 81 ರನ್‍ಗಳು ಮಾತ್ರ ಬಾಕಿ ಇವೆ. ಈ ಮೊದಲು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ 259 ಇನ್ನಿಂಗ್ಸ್ ಗಳಲ್ಲಿ 10,000ರನ್ ಪೂರೈಸಿದ್ದರೇ, ವಿರಾಟ್ ಕೇವಲ 204 ಇನ್ನಿಂಗ್ಸ್ ಗಳಲ್ಲಿ 10 ಸಾವಿರ ರನ್‍ಗಳ ಗಡಿಗೆ ಸಮೀಪದಲ್ಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಕ್ಷಯ್ ಕುಮಾರ್, ಮೋಹನ್‍ಲಾಲ್ ಸೇರಿದಂತೆ ಹಲವು ಸೆಲೆಬ್ರೆಟಿಗಳಿಗೆ ಬಿಜೆಪಿ ಟಿಕೆಟ್?

    ಅಕ್ಷಯ್ ಕುಮಾರ್, ಮೋಹನ್‍ಲಾಲ್ ಸೇರಿದಂತೆ ಹಲವು ಸೆಲೆಬ್ರೆಟಿಗಳಿಗೆ ಬಿಜೆಪಿ ಟಿಕೆಟ್?

    ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಸಿನಿಮಾ, ಕ್ರೀಡೆ, ಕಲೆ ಮತ್ತು ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿರುವ ಪ್ರಮುಖರನ್ನು ಅಖಾಡಕ್ಕೆ ಇಳಿಸಲು ಚಿಂತನೆ ನಡೆಸಿದೆ.

    ಈಗಾಗಲೇ ಪ್ರಮುಖ ಸಿನಿಮಾ ನಟರಾದ ಅಕ್ಷಯ್ ಕುಮಾರ್, ಸನ್ನಿ ಡಿಯೋಲ್, ಮೋಹನ್ ಲಾಲ್, ಮಾಧುರಿ ದೀಕ್ಷಿತ್ ಹಾಗೂ ಕ್ರೀಡಾ ವಿಭಾಗದಿಂದ ಕ್ರಿಕೆಟ್ ಆಟಗಾರ ವಿರೇಂದ್ರ ಸೆಹ್ವಾಗ್‍ರವರನ್ನು 2019ರ ಲೋಕಸಭಾ ಚುನಾವಣೆಯಲ್ಲಿ ಅಖಾಡಕ್ಕೆ ಇಳಿಸುವ ಕುರಿತು ಬಿಜೆಪಿ ಚಿಂತನೆ ನಡೆಸಿದೆ ಎಂದು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

    ಇವರಲ್ಲದೇ ಬಿಜೆಪಿಯು ಸಿನಿಮಾ, ಕಲೆ, ಸಂಸ್ಕೃತಿ, ಕ್ರೀಡೆ, ಮಾಧ್ಯಮ, ಆರೋಗ್ಯ ಸೇವೆ ಸೇರಿದಂತೆ ಇತೆರೆ ಕ್ಷೇತ್ರಗಳಲ್ಲಿ ಹೆಸರುಗಳಿಸಿರುವ ಪ್ರಮುಖ ವೃತ್ತಿಪರರನ್ನು ತನ್ನತ್ತ ಸೆಳೆಯಲು ಮುಂದಾಗಿದೆ. ಈ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರು ಸ್ವತಂತ್ರವಾಗಿ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇವರನ್ನು ರಾಜಕೀಯದಲ್ಲಿ ಬೆಳೆಸಿದರೆ, ಪಕ್ಷಕ್ಕೆ ಹೆಚ್ಚಿನ ಲಾಭವಾಗುವ ನಿರೀಕ್ಷೆಯನ್ನು ಇಟ್ಟುಕೊಂಡಿದೆ.

    ಈಗಾಗಲೇ ಅಕ್ಷಯ್ ಕುಮಾರ್‌ರವರನ್ನು ದೆಹಲಿಯಿಂದ, ಸನ್ನಿ ಡಿಯೋಲ್‍ರನ್ನು ಗುರುದಾಸ್ ಪುರದಿಂದ, ಮಾಧುರಿ ದೀಕ್ಷಿತ್‍ರನ್ನು ಮುಂಬೈನಿಂದ ಹಾಗೂ ಮೋಹನ್‍ಲಾಲ್ ಅವರನ್ನು ತಿರುವನಂತಪುರಂ ಕ್ಷೇತ್ರದಿಂದ ಕಣಕ್ಕಿಳಿಸುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ತಮ್ಮ ಸೇವಾ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ಪ್ರಮುಖರನ್ನು ರಾಜಕೀಯಕ್ಕೆ ತರಬೇಕೆಂಬುದು ಪ್ರಧಾನಿ ನರೇಂದ್ರ ಮೋದಿಯವರ ಅಭಿಲಾಷೆಯಾಗಿದೆ. ಅಲ್ಲದೇ ಆಡಳಿತ ವಿರೋಧಿ ಅಲೆ ಇರುವ ಕಡೆ ಇಂತಹವರಿಗೆ ಅವಕಾಶ ಕೊಟ್ಟರೆ ಪಕ್ಷಕ್ಕೆ ಲಾಭವಾಗಲಿದೆ ಎನ್ನುವ ದೂರದೃಷ್ಟಿಯನ್ನು ಬಿಜೆಪಿ ಹಾಕಿಕೊಂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಾನಿಯಾ ಮಿರ್ಜಾಗೆ ಕಿರುಕುಳ: ಅಂತರಾಷ್ಟ್ರೀಯ ಪಂದ್ಯದಿಂದ ನಿಷೇಧಕ್ಕೊಳಗಾದ ಬಾಂಗ್ಲಾ ಕ್ರಿಕೆಟಿಗ!

    ಸಾನಿಯಾ ಮಿರ್ಜಾಗೆ ಕಿರುಕುಳ: ಅಂತರಾಷ್ಟ್ರೀಯ ಪಂದ್ಯದಿಂದ ನಿಷೇಧಕ್ಕೊಳಗಾದ ಬಾಂಗ್ಲಾ ಕ್ರಿಕೆಟಿಗ!

    ಢಾಕಾ: ಭಾರತದ ಖ್ಯಾತ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾರವರಿಗೆ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಬಾಂಗ್ಲಾ ಕ್ರಿಕೆಟಿಗ ಶಬ್ಬೀರ್ ರೆಹಮಾನ್‍ಗೆ ಬಾಂಗ್ಲಾ ಕ್ರಿಕೆಟ್ ಮಂಡಳಿ 6 ತಿಂಗಳ ಕಾಲ ಅಂತರಾಷ್ಟ್ರೀಯ ಪಂದ್ಯಗಳಿಂದ ನಿಷೇಧ ಹೇರಿದೆ.

    2014 ರಲ್ಲಿ ಪಾಕಿಸ್ತಾನ ಕ್ರಿಕೆಟಿಗ ಶೋಯಬ್ ಮಲ್ಲಿಕ್ ಹಾಗೂ ಪತ್ನಿ ಸಾನಿಯಾ ಮಿರ್ಜಾ ಬಾಂಗ್ಲಾ ದೇಶಕ್ಕೆ ಪಂದ್ಯವೊಂದಕ್ಕೆ ಆಗಮಿಸಿದ್ದರು. ಈ ವೇಳೆ ಮೈದಾನವನ್ನು ಪ್ರವೇಶಿಸುತ್ತಿರುವಾಗ ಶಬ್ಬೀರ್ ರೆಹಮಾನ್ ಸಾನಿಯಾರವನ್ನು ಚುಡಾಯಿಸಿದ್ದರು. ಇದರಿಂದ ಕೋಪಗೊಂಡ ಶೋಯಬ್ ಮಲ್ಲಿಕ್ ಬಾಂಗ್ಲಾ ಕ್ರಿಕೆಟ್ ಮಂಡಳಿ ಹಾಗೂ ಢಾಕಾ ಮೆಟ್ರೋ ಪೊಲೀಸ್ ಮುಖ್ಯಸ್ಥರಿಗೆ ದೂರು ನೀಡಿದ್ದರ ಬಗ್ಗೆ ಬಾಂಗ್ಲಾ ಮಾಧ್ಯಮಗಳು ವರದಿ ಪ್ರಕಟಿಸಿದ್ದವು.

    ಮೈದಾನದ ಒಳಗೂ ಹಾಗೂ ಹೊರಗಡೆ ವಿವಾದಗಳಿಂದಲೇ ಸುದ್ದಿಯಾಗುತ್ತಿರುವ ಶಬ್ಬೀರ್ ರೆಹಮಾನ್‍ರಿಂದಾಗಿ ಬಾಂಗ್ಲಾ ಕ್ರಿಕೆಟ್ ಮಂಡಳಿ ತೀವ್ರ ಮುಜುಗರಕ್ಕೀಡಾಗಿತ್ತು. ಹೀಗಾಗಿ ಪ್ರಕರಣಗಳ ತನಿಖೆ ನಡೆಸಲು ಶಿಸ್ತು ಪಾಲನಾ ಸಮಿತಿಯನ್ನು ಬಾಂಗ್ಲಾ ಕ್ರಿಕೆಟ್ ಮಂಡಳಿ ನೇಮಕ ಮಾಡಿತ್ತು. ಈ ಕುರಿತು ಸುದೀರ್ಘ ವಿಚಾರಣೆ ನಡೆಸಿದ ಬಾಂಗ್ಲಾ ಕ್ರಿಕೆಟ್ ಮಂಡಳಿ, ಶಬ್ಬೀರ್ ರೆಹಮಾನ್‍ಗೆ 6 ತಿಂಗಳ ಕಾಲ ಎಲ್ಲಾ ಅಂತರಾಷ್ಟ್ರೀಯ ಪಂದ್ಯಗಳಿಂದ ನಿಷೇಧ ಹೇರಿದೆ.

    ಈ ಮೊದಲು ಸಹ ಶಬ್ಬೀರ್ ಖಾಸಗಿ ಹೋಟೆಲ್‍ಗೆ ಅನುಮತಿ ಇಲ್ಲದೆ ಮಹಿಳೆಯನ್ನು ಕರೆದುಕೊಂಡು ಬಂದು ಕೊಠಡಿಯಲ್ಲಿರಿಸಿಕೊಂಡಿದ್ದಕ್ಕೆ 6 ತಿಂಗಳು ನಿಷೇಧಕ್ಕೆ ಒಳಗಾಗಿದ್ದರು. ಇನ್ನು ಶಿಕ್ಷೆಯ ಪ್ರಮಾಣ ಮುಗಿಯದೇ ಇರುವಾಗಲೇ ಮತ್ತೊಂದು ಶಿಕ್ಷೆಗೆ ಗುರಿಯಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 400 ಮೀಟರ್ ರೇಸ್: ಹಿಮಾದಾಸ್, ಅನಾಸ್‍ಗೆ ಬೆಳ್ಳಿ

    400 ಮೀಟರ್ ರೇಸ್: ಹಿಮಾದಾಸ್, ಅನಾಸ್‍ಗೆ ಬೆಳ್ಳಿ

    ಜಕರ್ತಾ: ಏಷ್ಯನ್ ಗೇಮ್ಸ್ ಅಥ್ಲೆಟಿಕ್ಸ್ 400 ಮೀಟರ್ ಓಟದಲ್ಲಿ ಭಾರತದ ಹಿಮದಾಸ್ ಮತ್ತು ಮೊಹಮ್ಮದ್ ಅನಾಸ್ ಬೆಳ್ಳಿ ಪದಕ ಪಡೆದು ಮಿಂಚಿದ್ದಾರೆ.

    ಫಿನ್ ಲ್ಯಾಂಡ್ ನಲ್ಲಿ ನಡೆದ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದ ಹಿಮಾ ದಾಸ್ ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದರು.

    ಹಿಮಾ ದಾಸ್ 50.79 ಸೆಕೆಂಡ್ ನಲ್ಲಿ ಗುರಿ ಮುಟ್ಟಿದರೆ, ಮೊಹಮ್ಮದ್ ಅನಾಸ್ 45.69 ಸೆಕೆಂಡ್ ನಲ್ಲಿ ಗುರಿ ಮುಟ್ಟಿ ಬೆಳ್ಳಿ ಪದಕ ಗೆದ್ದಿದ್ದಾರೆ.

    ಶನಿವಾರ ನಡೆದ ಅರ್ಹತಾ ಸುತ್ತಿನ 400 ಮೀ ಓಟದ ಸ್ಪರ್ಧೆಯ ಹಿಮಾ ದಾಸ್ ರವರು 51.00 ಸೆಕೆಂಡುಗಳಲ್ಲಿ ಗುರಿ ತಲುಪಿ ಭಾರತದ ಪರ ದಾಖಲೆ ಬರೆದಿದ್ದರು. ಫೈನಲ್ ನಲ್ಲಿ ತಮ್ಮದೇ ದಾಖಲೆಯನ್ನು ಮುರಿದು 50.79 ಸೆಕೆಂಡಿನಲ್ಲಿ ಗುರಿ ಮುಟ್ಟಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://twitter.com/col_banshtu/status/1033692823118213121