Tag: ಕ್ರೀಡೆ

  • ಚಿನ್ನ ಗೆದ್ದ ಸೈಕಿಯಾ ಈಗ ಅಸ್ಸಾಂನಲ್ಲಿ ಡಿಎಸ್‌ಪಿ ಆಫೀಸರ್‌

    ಚಿನ್ನ ಗೆದ್ದ ಸೈಕಿಯಾ ಈಗ ಅಸ್ಸಾಂನಲ್ಲಿ ಡಿಎಸ್‌ಪಿ ಆಫೀಸರ್‌

    ಗುವಾಹಟಿ: ಕಾಮನ್‌ವೇಲ್ತ್‌ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಕ್ರೀಡಾಪಟು ನಯನ್ಮೋನಿ ಸೈಕಿಯಾ ಅವರಿಗೆ ಅಸ್ಸಾಂ ಸರ್ಕಾರ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಹುದ್ದೆಯನ್ನು ನೀಡಿ ಪುರಸ್ಕರಿಸಿದೆ.

    ಲಾನ್‌ ಬಾಲ್ಸ್‌ನಲ್ಲಿ ಚಿನ್ನಗೆದ್ದ ಟೀಂ ಇಂಡಿಯಾ ಸದಸ್ಯೆ ಸೈಕಿಯಾ ಅವರಿಗೆ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಡಿಎಸ್‌ಪಿ ನೇಮಕಾತಿ ಪತ್ರ 50 ಲಕ್ಷರೂ. ಮೌಲ್ಯದ ಚೆಕ್‌ ನೀಡಿದರು. ಚಿನ್ನದ ಪದಕ ಗೆದ್ದ ಒಂದು ತಿಂಗಳ ಒಳಗಡೆ ಸರ್ಕಾರ ಸೈಕಿಯಾ ಅವರಿಗೆ ಸರ್ಕಾರಿ ಹುದ್ದೆಯನ್ನು ನೀಡಿದೆ.

    ಕ್ರೀಡಾಪಟುಗಳನ್ನು ಉತ್ತೇಜಿಸಲು ಅಸ್ಸಾಂ ಸರ್ಕಾರ 2021ರ ಕ್ಯಾಬಿನೆಟ್‌ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಒಲಿಂಪಿಕ್ಸ್‌, ಕಾಮನ್‌ವೆಲ್ತ್‌ ಗೇಮ್ಸ್‌, ಏಷ್ಯನ್‌ ಗೇಮ್ಸ್‌ ವಿಜೇತರಿಗೆ ವರ್ಗ-1, ಮಾನ್ಯತೆ ಪಡೆದ ವಿಶ್ವ ಚಾಂಪಿಯನ್‌ಶಿಪ್‌ನ ಪದಕ ವಿಜೇತರಿಗೆ ವರ್ಗ -2, ರಾಷ್ಟ್ರೀಯ ಕ್ರೀಡಾಕೂಟಗಳ ವಿಜೇತರಿಎ ವರ್ಗ 3 ರಲ್ಲಿ ಸರ್ಕಾರಿ ಉದ್ಯೋಗ ನೀಡುವುದಾಗಿ ಪ್ರಕಟಿಸಿತ್ತು. ಈ ನಿರ್ಧಾರದ ಭಾಗವಾಗಿ ನಯನ್ಮೋನಿ ಸೈಕಿಯಾಗೆ ಹುದ್ದೆ ಸಿಕ್ಕಿದೆ. ಇದನ್ನೂ ಓದಿ: ಅನ್ಯಧರ್ಮದ ಹುಡುಗಿಯೊಂದಿಗೆ ಪ್ರೇಮ – ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

    ಮಾಧ್ಯಮಗಳ ಜೊತೆ ಮಾತನಾಡಿದ ಸೈಕಿಯಾ, ನನಗೆ ಖುಷಿಯಾಗುತ್ತಿದೆ. ಅಸ್ಸಾಂ ಸರ್ಕಾರ ಉತ್ತಮ ಕ್ರೀಡಾ ನೀತಿಯನ್ನು ರೂಪಿಸಿದೆ. ಇದರಿಂದಾಗಿ ಹೊಸ ಪೀಳಿಗೆ ಕ್ರೀಡೆಯತ್ತ ಆಕರ್ಷಿತರಾಗಬಹದೆಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.

    ಆಗಸ್ಟ್ 2 ರಂದು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ನಯನ್ಮೋನಿ ಸೈಕಿಯಾ, ರೂಪಾ ರಾಣಿ ಟಿರ್ಕಿ, ಲವ್ಲಿ ಚೌಬೆ ಮತ್ತು ಪಿಂಕಿ ಸಿಂಗ್ ಅವರಿದ್ದ ಲಾನ್‌ ಬಾಲ್ಸ್‌ ತಂಡ 17-10 ಅಂತರದಿಂದ ದಕ್ಷಿಣ ಆಫ್ರಿಕಾವನ್ನು  ಸೋಲಿಸಿ ಇದೇ ಮೊದಲ ಬಾರಿಗೆ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ. 2 ಮೀಸಲಾತಿ: ಬೊಮ್ಮಾಯಿ

    ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ. 2 ಮೀಸಲಾತಿ: ಬೊಮ್ಮಾಯಿ

    ಬೆಂಗಳೂರು: ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ. 2ರ ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಗ್ರಾಮೀಣ ಕ್ರೀಡೋತ್ಸವ ಹಾಗೂ ಯೋಗಾಥಾನ್‍ಗೆ ಚಾಲನೆ ನೀಡಿ 2020ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ ಕರ್ನಾಟಕ ಕ್ರೀಡಾ ರತ್ನ ಹಾಗೂ 2021- 22ನೇ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

    ಮುಂದಿನ ಪ್ಯಾರೀಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು ರಾಜ್ಯದ ಆಯ್ದ 75 ಕ್ರೀಡಾಪಟುಗಳಿಗೆ ವಿಶ್ವಮಟ್ಟದ ತರಬೇತಿ ನೀಡಲಾಗುತ್ತಿದೆ. ಇವರಲ್ಲಿ ಹಲವರು ಒಲಿಂಪಿಕ್ಸ್‌ನಲ್ಲಿ ಪದಕಗಳನ್ನು ಗೆಲ್ಲಬೇಕೆಂಬುದು ಸರ್ಕಾರದ ಗುರಿಯಾಗಿದೆ. ಗ್ರಾಮೀಣ ಮಟ್ಟದಲ್ಲಿಯೂ ಕ್ರೀಡಾ ಸಾಧನೆಗಳಾಗಬೇಕು ಹಾಗೂ ಗ್ರಾಮೀಣ ಕ್ರೀಡೆಗಳನ್ನು ಸರ್ಕಾರದ ವತಿಯಿಂದ ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಗ್ರಾಮೀಣ ಕ್ರೀಡಾಕೂಟವನ್ನು ಪ್ರಾರಂಭಿಸಲಾಗಿದೆ. ಕಬ್ಬಡಿ, ಖೋಖೋ, ಕಂಬಳ, ಎತ್ತಿನಗಾಡಿ ಸ್ಪರ್ಧೆ, ಹೀಗೆ ಹಲವು ಕ್ರೀಡೆಗಳು ಗ್ರಾಮೀಣ ಪ್ರದೇಶದ ಸೊಗಡನ್ನು ಸೂಚಿಸುತ್ತದೆ. ಗ್ರಾಮಪಂಚಾಯತಿ, ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕ್ರೀಡೆಗಳು ನಡೆಯುತ್ತವೆ. ಗ್ರಾಮಮಟ್ಟದಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗುತ್ತಿದೆ ಎಂದರು.

    ಯುವಜನ ಸಬಲೀಕರಣಕ್ಕಾಗಿ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣ ಬಹಳ ಮುಖ್ಯ. ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಆಗಸ್ಟ್ 15ಕ್ಕೆ ಚಾಲನೆ ನೀಡಲಾಗಿದೆ. ಪ್ರತಿಗ್ರಾಮದಲ್ಲಿ 30 ಜನರ ಯುವಜನರ ಸಂಘವನ್ನು ಗುರುತಿಸಿ, 7.5 ಲಕ್ಷದಿಂದ 10 ಲಕ್ಷದವರೆಗೆ ಯೋಜನೆಗಳನ್ನು ನೀಡಿ, ಸಂಘಕ್ಕೆ 1.5 ಲಕ್ಷದ ಅನುದಾನವನ್ನು ಸರ್ಕಾರವೇ ಭರಿಸಿ, ಉತ್ಪನ್ನಗಳ ತಯಾರಿಕೆಗೆ ತರಬೇತಿ, ತಯಾರಿಕೆ ಹಾಗೂ ಮಾರುಕಟ್ಟೆ ಜೋಡಣೆಯನ್ನು ಕಲ್ಪಿಸುವ ಯೋಜನೆಯಾಗಿದೆ. ಸ್ವಯಂಉದ್ಯೋಗ ಮಾಡಿ ಇತರರಿಗೆ ಉದ್ಯೋಗ ನೀಡುವ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯಿಂದ ಒಂದು ವರ್ಷಕ್ಕೆ ಸುಮಾರು 5 ಲಕ್ಷ ಯುವಕರಿಗೆ ಉದ್ಯೋಗ ಸೃಷ್ಟಿಸಿದಂತಾಗುತ್ತದೆ. ಇದು ವಿನೂತನವಾದ ಯೋಜನೆ. ಆರ್ಥಿಕವಾಗಿ, ಸಾಮಾಜಿಕವಾಗಿ ಯುವಕರ ಸಾಮರ್ಥ್ಯವನ್ನು ಹೆಚ್ಚಿಸುವಂತಹ ಕೆಲಸವನ್ನು ಸರ್ಕಾರ ನಿರಂತರವಾಗಿ ಮಾಡುತ್ತದೆ ಎಂದರು.

    ಕರಾವಳಿಯ ಕಂಬಳ, ಉತ್ತರ ಕರ್ನಾಟಕದ ಚಕ್ಕಡಿ ಹೊಡೆಯುವ ಸ್ಪರ್ಧೆ, ಕುಸ್ತಿ, ಸೈಕಲ್, ಮೋಟರ್ ಸೈಕಲ್, ಕಾರ್ ರ‍್ಯಾಲಿಗಳು, ಗಾಲ್ಫ್, ವಾಲಿಬಾಲ್ ಕ್ರೀಡೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಕನ್ನಡದ ಯುವಕರು ಯಶಸ್ಸಿನ ಉತ್ತುಂಗಕ್ಕೆ ಏರಬೇಕು. ಸೀನಿಯರ್ ಒಲಂಪಿಕ್ಸ್ ಏರ್ಪಡಿಸಲು ರಾಜ್ಯ ಸರ್ಕಾರ 8 ಕೋಟಿ ರೂ.ಗಳನ್ನು ನೀಡಿದೆ. ಕರ್ನಾಟಕವನ್ನು ಕ್ರೀಡಾ ಕರ್ನಾಟಕವನ್ನಾಗಿ ಮಾಡುವ ಗುರಿ ರಾಜ್ಯ ಸರ್ಕಾರಕ್ಕಿದೆ. ಕ್ರೀಡೆಯ ತರಬೇತುದಾರರಿಗೆ ಎಲ್ಲ ಸಹಕಾರವನ್ನು ನೀಡಲಾಗುವುದು ಎಂದರು. ಇದನ್ನೂ ಓದಿ: ಸರ್ಕಾರ ಕೊಟ್ಟ ಮಾತಿಗೆ ತಪ್ಪಿ ಜನರ ನಂಬಿಕೆಗೆ ದ್ರೋಹ ಎಸಗಿದೆ, ಇದು ವಚನ ವಂಚನೆ: ಸಿದ್ದರಾಮಯ್ಯ

    ಧ್ಯಾನ್ ಚಂದ್ ಅವರು ಒಲಿಂಪಿಕ್ಸ್‌ನಲ್ಲಿ ಮೂರು ಬಾರಿ ಚಿನ್ನದ ಪದಕ ಗೆದ್ದು, ಭಾರತಕ್ಕೆ ಕೀರ್ತಿ ತಂದವರು. ಹಾಕಿಯ ಜಾದೂಗಾರರಾಗಿದ್ದ ಅವರು ಹಾಕಿಯನ್ನು ಅಗ್ರಮಾನ್ಯ ಸ್ಥಾನಕ್ಕೆ ತಂದವರು. ಧ್ಯಾನ್ ಚಂದ್ ಅವರ ಹೆಸರಿನಲ್ಲಿ ಖೇಲ್‍ರತ್ನ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕರ್ನಾಟಕದಲ್ಲಿ ನೀಡಲಾಗುವ ಏಕಲವ್ಯ ಪ್ರಶಸ್ತಿ, ಕ್ರೀಡಾರತ್ನ ಪ್ರಶಸ್ತಿ, ನಗದು ಪ್ರಶಸ್ತಿ ನೀಡಲಾಗುತ್ತಿದೆ. ಕ್ರೀಡಾಕ್ಷೇತ್ರದಲ್ಲಿನ ತಮ್ಮ ಶ್ರಮ, ಸಾಧನೆಯನ್ನು ಗುರುತಿಸಿ ರಾಜ್ಯ ಸರ್ಕಾರ ನಿಮ್ಮ ಬೆನ್ನುತಟ್ಟಿ ಪ್ರೋತ್ಸಾಹಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಭಾರತದಲ್ಲಿ ಶೇ. 46ರಷ್ಟು ಜನಸಂಖ್ಯೆ ಯುವಜನರಿದ್ದಾರೆ. ಮುಂದಿನ 25 ವರ್ಷಗಳು ಭಾರತದ ಭವಿಷ್ಯ ಈ ಯುವಜನತೆಯ ಮೇಲಿದೆ ಎಂದು ತಿಳಿಸಿದರು.

    ಯುವಕರಲ್ಲಿ ಶಿಸ್ತು, ವ್ಯಕ್ತಿತ್ವದಿಂದ ಯಶಸ್ಸು ಬರುತ್ತದೆ. ಕಠಿಣ ಪರಿಶ್ರಮಗಳಿಂದ ಹೆಚ್ಚಿನ ಗುರಿಗಳನ್ನು ಸಾಧಿಸುತ್ತಿರಬೇಕು. ಗೆಲ್ಲಬೇಕೆಂದು ಆಡಬೇಕೇ ಹೊರತು ಸೋಲಬಾರದು ಎಂದು ಆಟವಾಡಬಾರದು. ಗೆಲ್ಲಬೇಕೆಂಬ ಹುರುಪಿನಿಂದ ಸಕಾರಾತ್ಮಕವಾಗಿ ಆಡಬೇಕು ಆತ್ಮವಿಶ್ವಾಸದಿಂದ ನಿಮ್ಮ ಮೇಲೆ ನಂಬಿಕೆಯಿರಿಸಿ. ಯುವಕರು ಸಾಧನೆಗಳನ್ನು ಮಾಡಿದಾಗ ಹುರಿದುಂಬಿಸಿದರೆ, ಇನ್ನಷ್ಟು ಸಾಧನೆಗಳಿಗೆ ಪ್ರೋತ್ಸಾಹಿಸಿದಂತಾಗುತ್ತದೆ. ಜಗತ್ತಿನ ಅತಿ ಎತ್ತರದ ಶಿಖರ ಮೌಂಟ್ ಎವರೆಸ್ಟ್, ಹಿಮಾಲಯದ ತಪ್ಪಲಿನಲ್ಲಿ ಕುರಿ ಕಾಯುವವರ ಜನಾಂಗದಲ್ಲಿ ಕುರಿ ಕಾಯುತ್ತಿದ್ದ ಸಣ್ಣ ಹುಡುಗ ತೇನ್ ಸಿಂಗ್, ತನ್ನ 42ನೇ ವಯಸ್ಸಿನಲ್ಲಿ ಮೌಂಟ್ ಎವರೆಸ್ಟ್‍ನ್ನು ಹತ್ತಿ ಭಾರತದ ಧ್ವಜವನ್ನು ನೆಟ್ಟ ಕೀರ್ತಿ ಅವರದು. ಅತಿ ಚಿಕ್ಕ ವಯಸ್ಸಿನಲ್ಲಿ ಅವರು ಮಾಡಿದ ಸಂಕಲ್ಪವನ್ನು ಯಶಸ್ವಿಯಾಗಿ ಸಾಕಾರಗೊಳಿಸಿದ್ದರು. ಕ್ರೀಡಾ ಕ್ಷೇತ್ರದಲ್ಲಿ ಯಶ ಸಾಧಿಸಲು ಮೊದಲು ಧೃಡ ನಿಶ್ಚಯ, ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಮುಖ್ಯಮಂತ್ರಿಗಳು ಯುವಕರಿಗೆ ಕಿವಿಮಾತು ಹೇಳಿದರು. ಇದನ್ನೂ ಓದಿ: ಮುರುಘಾ ಶ್ರೀ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಲಿದೆ: ಸಿ.ಟಿ ರವಿ

    Live Tv
    [brid partner=56869869 player=32851 video=960834 autoplay=true]

  • ನಾವು ಭಾರತೀಯರಾಗಿರುವುದೇ ಹೆಮ್ಮೆ – ಅಮೃತಮಹೋತ್ಸವ ಸಂಭ್ರಮಿಸಿದ ಕ್ರೀಡಾ ತಾರೆಗಳು

    ನಾವು ಭಾರತೀಯರಾಗಿರುವುದೇ ಹೆಮ್ಮೆ – ಅಮೃತಮಹೋತ್ಸವ ಸಂಭ್ರಮಿಸಿದ ಕ್ರೀಡಾ ತಾರೆಗಳು

    ಮುಂಬೈ: 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದರು. ಈ ಮೂಲಕ ಹರ್ ಘರ್ ತಿರಂಗಾ ಅಭಿಯಾನವನ್ನು ಸಾರ್ಥಕಗೊಳಿಸಿದರು. ಬಳಿಕ ಪ್ರಧಾನಿ ಮೋದಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

    ಇಡೀ ದೇಶದ ಜನರು ಮನೆ-ಮನೆಯಲ್ಲೂ ಧ್ವಜ ಹಾರಿಸುವ ಮೂಲಕ ದೇಶ ಪ್ರೇಮ ಮೆರೆದಿದ್ದಾರೆ. ಇದಕ್ಕೆ ಭಾರತದ ಕ್ರೀಡಾ ತಾರೆಗಳೂ ಹೊರತಾಗಿಲ್ಲ. ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ, ಹರ್ಭಜನ್ ಸಿಂಗ್, ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಸೇರಿ ಹಲವರು ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮಿಸಿದ್ದಾರೆ.

    ತಮ್ಮ ತಮ್ಮ ಟ್ವಿಟ್ಟರ್ ಖಾತೆಗಳಲ್ಲಿ ರಾಷ್ಟ್ರಧ್ವಜ ಹಿಡಿದ ಫೋಟೋಗಳನ್ನು ಹಂಚಿಕೊಂಡಿದ್ದು, ಭಾರತದ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದ್ದಾರೆ. ಇದನ್ನೂ ಓದಿ: ಈ ಸಲ ವಿಶ್ವ ಚಾಂಪಿಯನ್‌ಶಿಪ್ ಟೂರ್ನಿಯಿಂದ ಪಿ.ವಿ.ಸಿಂಧು ಔಟ್ – ಕಾರಣ ಏನು?

    ಸ್ವಾತಂತ್ರ್ಯೋತ್ಸವಕ್ಕೆ ಶುಭಾಶಯ ಕೋರಿರುವ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ, `ನಾನು ಭಾರತೀಯನೆಂದು ಹೇಳಲು ಹೆಮ್ಮೆ ಪಡುತ್ತೇನೆ. ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು’ ಎಂದು ಹೇಳಿದ್ದಾರೆ.

    ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹರ್ಬಜನ್ ಸಿಂಗ್, ನಮ್ಮ ರಾಷ್ಟ್ರಧ್ವಜ ಹಿಂದಿನ ತ್ಯಾಗ ಬಲಿದಾನಗಳ ಸಂಕೇತ, ವರ್ತಮಾನದ ಸಮೃದ್ಧಿ ಹಾಗೂ ಭವಿಷ್ಯದ ಭರವಸೆಗಳ ಸಂಕೇತವಾಗಿದೆ ಎಲ್ಲರೂ ಅದಕ್ಕೆ ಸಲ್ಯೂಟ್ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: IPLನಲ್ಲಿ ಸೊನ್ನೆಗೆ ಔಟಾಗಿದ್ದಕ್ಕೆ ಮೂರ್ನಾಲ್ಕು ಬಾರಿ ಕಪಾಳಕ್ಕೆ ಬಾರಿಸಿದ್ರು – ರಾಸ್‌ ಟೇಲರ್‌ ರೋಚಕ ಅನುಭವ

    ಇದೇ ರೀತಿ ಟೀಂ ಇಂಡಿಯಾ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ, ಚೇತೇಶ್ವರ್ ಪೂಜಾರ, ಜಸ್ಪಿತ್ ಬುಮ್ರಾ, ಶಿಖರ್ ಧವನ್, ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್, ಮಾಜಿ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ, ಬಾಕ್ಸಿಂಗ್ ಮಾಜಿ ಕ್ರೀಡಾಪಟು ಮೇರಿ ಕೋಮ್, ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಮೊದಲಾದವರು ಸ್ವಾತಂತ್ರ್ಯ ದಿನಾಚರಣೆಯ ಶುಭ ಕೋರಿದ್ದಾರೆ.

    ವಿದೇಶಿ ಕ್ರೀಡಾ ತಾರೆಗಳಿಂದಲೂ ವಿಶ್: ಇನ್ನೂ ಭಾರತೀಯರು ಮಾತ್ರವಲ್ಲದೇ ವಿದೇಶಿ ಕ್ರಿಕೆಟಿಗರೂ ಶುಭ ಕೋರಿದ್ದಾರೆ. ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಹಾಗೂ ವೆಸ್ಟ್ ಇಂಡೀಸ್ ಮಾಜಿ ಕ್ರಿಕೆಟಿಗ ಡೇರೆನ್ ಸಾಮಿ ಶುಭ ಕೋರಿದ್ದಾರೆ. ಡೇವಿಡ್ ವಾರ್ನರ್ ನನ್ನೆಲ್ಲಾ ಭಾರತೀಯ ಕುಟುಂಬದ ಸ್ನೇಹಿತರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಎಂದು ಹೇಳಿದ್ದಾರೆ. ಇನ್ನೂ ಡೇರೆನ್ ಸಾಮಿ `ನನ್ನ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದು ಭಾರತದಲ್ಲೇ’ ಎಂದು ನೆನಪಿಸಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಈ ಸಲ ವಿಶ್ವ ಚಾಂಪಿಯನ್‌ಶಿಪ್ ಟೂರ್ನಿಯಿಂದ ಪಿ.ವಿ.ಸಿಂಧು ಔಟ್ – ಕಾರಣ ಏನು?

    ಈ ಸಲ ವಿಶ್ವ ಚಾಂಪಿಯನ್‌ಶಿಪ್ ಟೂರ್ನಿಯಿಂದ ಪಿ.ವಿ.ಸಿಂಧು ಔಟ್ – ಕಾರಣ ಏನು?

    ಮುಂಬೈ: ಕಾಮನ್‌ವೆಲ್ತ್ ಗೇಮ್ಸ್-2022ರಲ್ಲಿ ಚಿನ್ನ ಗೆದ್ದು ದಾಖಲೆ ನಿರ್ಮಿಸಿದ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಈ ವರ್ಷದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಿಂದ ಹೊರಗುಳಿಯಲಿದ್ದಾರೆ.

    ಪಿ.ವಿ ಸಿಂಧು ಅವರು ಸದ್ಯ ಕಾಲಿನ ಪಾದದ ಫ್ರ್ಯಾಕ್ಚರ್‌ ಸಮಸ್ಯೆಯಿಂದಾಗಿ ಬಳಲುತ್ತಿದ್ದು, ಟೂರ್ನಿಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ನಿಮ್ಮ ಸ್ಪೂರ್ತಿದಾಯಕ ಸಾಧನೆಯೊಂದಿಗೆ ದೇಶವು ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಕಾಲಿಡುತ್ತಿರುವುದು ವಿಶೇಷ: ಮೋದಿ

    ಕಾಮನ್‌ಲ್ತ್‌ನಲ್ಲಿ ಚಿನ್ನದ ಪದಕ ಗೆದ್ದ ಪಿ.ವಿ.ಸಿಂದು ಕಾಲು ನೋವಿನ ಹೊರತಾಗಿಯೂ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್‌ನಲ್ಲಿ ಫೈನಲ್ಸ್ ಪಂದ್ಯವನ್ನು ಆಡಿದ್ದರು.

    ಈ ಕುರಿತು ಟ್ವೀಟ್ ಮಾಡಿರುವ ಸಿಂಧು, `ದುರಾದೃಷ್ಟವಶಾತ್ ನಾನು ವಿಶ್ವ ಚಾಂಪಿಯನ್‌ಶಿಪ್ ಟೂರ್ನಿಯಿಂದ ಹೊರಗುಳಿಯಬೇಕಿದೆ. ಸದ್ಯ ನಾನು ಗಾಯದ ಸಮಸ್ಯೆಯಿಂದ ನೋವು ಅನುಭವಿಸುತ್ತಿದ್ದೇನೆ. ಕಾಮನ್‌ವೆಲ್ತ್ ಕ್ವಾಲಿಫೈಯರ್‌ನಲ್ಲಿಯೇ ಗಾಯದ ಭಯವಿತ್ತು. ಆದರೆ ನನ್ನ ತರಬೇತುದಾರರು ಹಾಗೂ ದೈಹಿಕ ತರಬೇತುದಾರರ ಸಹಾಯದಿಂದ ಪಂದ್ಯವನ್ನಾಡಿದೆ ಎಂದು ಸಿಂಧು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸ್ಫೋಟಕ ಆಟವಾಡಿದ ಟೆಸ್ಟ್ ಸ್ಪೆಷಲಿಷ್ಟ್‌ – ಒಂದೇ ಓವರ್‌ನಲ್ಲಿ 22 ರನ್ ಚಚ್ಚಿದ ಪೂಜಾರ

    ಬರ್ಮಿಂಗ್‌ಹ್ಯಾಮ್‌ನಿಂದ ಹೈದರಾಬಾದ್‌ಗೆ ಹಿಂದಿರುಗಿದ ನಂತರ ತಕ್ಷಣ ನಾನು ಎಂಆರ್‌ಐ ಸ್ಕ್ಯಾನ್‌ಗೆ ಧಾವಿಸಿದೆ. ವೈದ್ಯರು ನನ್ನ ಎಡಪಾದದಲ್ಲಿ ಗಂಭೀರ ಸಮಸ್ಯೆಯಾಗಿರುವುದನ್ನು ಗುರುತಿಸಿ ಕೆಲ ವಾರಗಳ ವರೆಗೆ ವಿಶ್ರಾಂತಿ ಪಡೆಯುವಂತೆ ಶಿಫಾರಸು ಮಾಡಿದ್ದಾರೆ. ಕೆಲವೇ ವಾರಗಳಲ್ಲಿ ನಾನು ತರಬೇತಿಗೆ ಹಿಂದಿರುಗಬೇಕು. ನಿಮ್ಮೆಲ್ಲರ ಪ್ರೀತಿ ಹಾಗೂ ಬೆಂಬಲಕ್ಕಾಗಿ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮತ್ತೊಮ್ಮೆ ಟೀಂ ಇಂಡಿಯಾದ ಚುಕ್ಕಾಣಿ ಹಿಡಿದ ದಾದಾ – ಭಾರತ ಮಹಾರಾಜರ ರಾಜನಾದ ಗಂಗೂಲಿ

    2020ರ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಇದಕ್ಕೂ ಮುನ್ನ 2016ರಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್ ಟೂರ್ನಿಯಲ್ಲಿ ಮಹಿಳೆಯರ ಸಿಂಗಲ್ಸ್‌ನಲ್ಲಿ ಬೆಳ್ಳಿ ಪದಕ, 2019ರ ಟೂರ್ನಿಯಲ್ಲಿ ಚಿನ್ನದ ಪದಕ ನಂತರ ಬೆಳ್ಳಿ ಹಾಗೂ ಕಂಚಿನ ಪದಕಗಳನ್ನು ಗೆದ್ದ ಸಾಧನೆ ಮಾಡಿದ್ದಾರೆ. ಕೊನೆಯದಾಗಿ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಗುಂಪು ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿ ಹಾಗೂ ಸಿಂಗಲ್ಸ್ನಲ್ಲಿ ಚಿನ್ನದ ಪದಕ ಗೆದ್ದು ದಾಖಲೆ ಬರೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕ್ರೀಡಾ ವಿದ್ಯಾರ್ಥಿನಿಯರಿಗೆ ಸಹಾಯ ಮಾಡೋ ನೆಪದಲ್ಲಿ ಲೈಂಗಿಕ ಸುಖಕ್ಕಾಗಿ ಬೇಡಿಕೆ ಇಟ್ಟ ಕಾಮುಕ ಶಿಕ್ಷಕ ಅಂದರ್‌

    ಕ್ರೀಡಾ ವಿದ್ಯಾರ್ಥಿನಿಯರಿಗೆ ಸಹಾಯ ಮಾಡೋ ನೆಪದಲ್ಲಿ ಲೈಂಗಿಕ ಸುಖಕ್ಕಾಗಿ ಬೇಡಿಕೆ ಇಟ್ಟ ಕಾಮುಕ ಶಿಕ್ಷಕ ಅಂದರ್‌

    ಛತ್ತೀಸಗಡ: ವಿವಿಧ ಕ್ರೀಡೆಗಳಲ್ಲಿ ಮಿಂಚಲು ಸಹಾಯ ಮಾಡಿದ್ದಕ್ಕಾಗಿ ವಿದ್ಯಾರ್ಥಿನಿಯರಿಂದ ಲೈಂಗಿಕ ಸುಖಕ್ಕಾಗಿ ಬೇಡಿಕೆಯಿಟ್ಟ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕ ಬಂಧನವಾಗಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

    ಛತ್ತೀಸ್‌ಗಢದ ಬಲೋದ್ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ವರದಿಯಾಗಿದ್ದು, ಆರೋಪಿ ಸಹಾಯಕ ಶಿಕ್ಷಕನನ್ನು 47 ವರ್ಷದ ದೀಪಕ್ ಕುಮಾರ್ ಸೋನಿ ಎಂದು ಗುರುತಿಸಲಾಗಿದೆ. ಶಾಲೆಯಲ್ಲಿ ಗಣಿತ ಶಿಕ್ಷಕನಾಗಿ ಕೆಲಸ ಮಾಡುತ್ತಿರುವ ಶಿಕ್ಷಕ ಅಂತರ ಶಾಲಾ ಆಟಗಳಲ್ಲಿ ಖೋ-ಖೋ ಮತ್ತು ಕಬಡ್ಡಿ ಪಂದ್ಯಾವಳಿಗಳಲ್ಲಿ ಹಲವಾರು ಪದಕಗಳನ್ನು ಗೆಲ್ಲುವಲ್ಲಿ ತನ್ನ ಶಾಲೆಯ ವಿದ್ಯಾರ್ಥಿನಿಯರಿಗೆ ಮಾರ್ಗದರ್ಶನ ನೀಡುತ್ತಿದ್ದ ಎನ್ನಲಾಗಿದೆ. ಇದನ್ನೂ ಓದಿ: ಗುಂಪು ಘರ್ಷಣೆಗೆ ಇಬ್ಬರು ಬಲಿ – 58 ಜನರ ವಿರುದ್ಧ ದೂರು ದಾಖಲು

    ವರದಿ ಪ್ರಕಾರ, ಶಿಕ್ಷಕ ಬಲೋಡ್ ಜಿಲ್ಲೆಯ ಜುಂಗೇರಾ ಪ್ರಾಥಮಿಕ ಶಾಲೆಯಲ್ಲಿ ಗಣಿತ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ಆರೋಪಿಯು ಮಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಖೋ-ಖೋ ಮತ್ತು ಕಬಡ್ಡಿ ತರಬೇತಿಯನ್ನೂ ನೀಡಿದ್ದಾನೆ. ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿನಿಯರಿಗೆ ದೀಪಕ್ ಕುಮಾರ್ ಸೋನಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ತಮ್ಮ ಶಿಕ್ಷಕರು ಅನುಚಿತವಾಗಿ ತಮ್ಮನ್ನು ಸ್ಪರ್ಶಿಸಿದ್ದಾರೆ ಎಂದು ಆರೋಪಿಸಿ ಐವರು ವಿದ್ಯಾರ್ಥಿನಿಯರು ಮತ್ತು ಅವರ ಪೋಷಕರು ದೂರು ದಾಖಲಿಸಿದ್ದಾರೆ.

    KILLING CRIME

    ಮುಂಬರುವ ಖೋ-ಖೋ ಸ್ಪರ್ಧೆಯ ಬಗ್ಗೆ ಕೇಳಲು 8 ನೇ ತರಗತಿಯ ವಿದ್ಯಾರ್ಥಿನಿ ಫೋನ್‌ನಲ್ಲಿ ಕರೆ ಮಾಡಿದಾಗ ಶಿಕ್ಷಕನ ಅಸಲಿಯತ್ತು ಬಯಲಾಗಿದೆ. ಫೋನಲ್ಲಿ ಮಾತಾಡುವ ವೇಳೆ ಹುಡುಗಿಯ ತಾಯಿ ತನ್ನ ಮಗಳ ಬಳಿ ನಿಂತಿದ್ದು ಫೋನನ್ನು ಸ್ಫೀಕರ್‌ನಲ್ಲಿ ಹಾಕುವಂತೆ ಹೇಳಿದ್ದರು. ಶಿಕ್ಷಕನ ಅಸಭ್ಯ ಮಾತು ಕೇಳಿ ಬಾಲಕಿಯ ತಾಯಿ ಬೆಚ್ಚಿಬಿದ್ದಿದ್ದರು. ಈ ಬಳಿಕ ಶಿಕ್ಷನ ಅಸಲಿ ಮುಖ ಬಹಿರಂಗಗೊಂಡಿದೆ. ನಂತರ ಅವರು ಪೊಲೀಸರ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ಮತ್ತೊಮ್ಮೆ ಟೀಂ ಇಂಡಿಯಾದ ಚುಕ್ಕಾಣಿ ಹಿಡಿದ ದಾದಾ – ಭಾರತ ಮಹಾರಾಜರ ರಾಜನಾದ ಗಂಗೂಲಿ

    ಹುಡುಗಿಯರು ಶಿಕ್ಷಕನ ವರ್ತನೆಯನ್ನು ವಿರೋಧಿಸಿದಾಗ, ಶಿಕ್ಷಕ ಆಟಗಳಲ್ಲಿ ಪದಕಗಳನ್ನು ಗೆಲ್ಲಲು ಸಹಾಯ ಮಾಡುವುದರಿಂದ ಆತನ ಬೇಡಿಕೆಯನ್ನು ಒಪ್ಪಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾನೆ ಎಂದು ಸಿಟಿ ಕೊತ್ವಾಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ನವೀನ್ ಬೋರ್ಕರ್ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • Commonwealth Games: ಹರ್ಜಿಂದರ್ ಹವಾ – ಭಾರತಕ್ಕೆ ಮತ್ತೊಂದು ಕಂಚು

    Commonwealth Games: ಹರ್ಜಿಂದರ್ ಹವಾ – ಭಾರತಕ್ಕೆ ಮತ್ತೊಂದು ಕಂಚು

    ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಬೇಟೆ ಮುಂದುವರಿದಿದೆ. ನಿನ್ನೆ ಒಂದೇ ದಿನ 3 ಪದಕಗಳು ಭಾರತದ ಪಾಲಾಗಿದ್ದು. ಒಟ್ಟು 9 ಪದಕಗಳನ್ನು ಗೆದ್ದಿದೆ. ನಿನ್ನೆ 48 ಕೆಜಿ ಮಹಿಳೆಯರ ವಿಭಾಗದಲ್ಲಿ ಸುಶೀಲ ದೇವಿ ಲಿಕ್ಮಾದಂ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟರು. 60 ಕೆಜಿ ಪುರುಷರ ಜುಡೋ ವಿಭಾಗದಲ್ಲಿ ವಿಜಯ್ ಕುಮಾರ್ ಯಾದವ್ ಕಂಚಿನ ಪದಕ ಪಡೆದುಕೊಂಡಿದ್ದರು.

    ಇಂದು ಮಹಿಳೆಯರ 71 ಕೆಜಿ ಮಹಿಳೆಯರ ವಿಭಾಗದಲ್ಲಿ ವೇಯ್ಟ್ಲಿಫ್ಟರ್ ಹರ್ಜಿಂದ್ರ ಕೌರ್ ಶಕ್ತಿ ಪ್ರದರ್ಶಿಸಿ ಕಂಚಿನ ಪದಕದ ಬೇಟೆಯಾಡಿದ್ದಾರೆ. ಭಾರತದ ಹರ್ಜಿಂದರ್ ಕೌರ್ 71 ಕೆಜಿ ಮಹಿಳೆಯರ ವಿಭಾಗದ ವೇಯ್ಟ್‌ಲಿಫ್ಟಿಂಗ್‌ನಲ್ಲಿ ಒಟ್ಟು 212 ಕೆಜಿ ಭಾರ ಎತ್ತುವ ಮೂಲಕ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಇದನ್ನೂ ಓದಿ: IND vs WI 2nd T20: ಎರಡು ಗಂಟೆ ತಡವಾಗಿ ಪಂದ್ಯ ಆರಂಭ – ಕಾರಣ ಮಾತ್ರ ಸಿಂಪಲ್

    ಕ್ಲೀನ್ ಮತ್ತು ಜರ್ಕ್ ಸುತ್ತಿನಲ್ಲಿ ಹರ್ಜಿಂದರ್ ಸಿಂಗ್ ತನ್ನ ಎಲ್ಲಾ ಪ್ರಯತ್ನಗಳಲ್ಲಿ ಯಶಸ್ವಿಯಾದರು. ತನ್ನ 3ನೇ ಪ್ರಯತ್ನದಲ್ಲಿ 119 ಕೆಜಿ (93 ಕೆಜಿ, 119 ಕೆಜಿ) ಎತ್ತುವ ಮೂಲಕ ತನ್ನ ಒಟ್ಟು ತೂಕ 212 ಕೆಜಿ ಎತ್ತುವಲ್ಲಿ ಯಶಸ್ವಿಯಾದರು.

    ಹರ್ಜಿಂದರ್ ಕೌರ್ ಸ್ನ್ಯಾಚ್‌ ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ 90 ಕೆಜಿ ಎತ್ತುವಲ್ಲಿ ವಿಫಲರಾದರು. 2ನೇ ಸುತ್ತಿನಲ್ಲಿ 90 ಕೆಜಿ ಹಾಗೂ 3ನೇ ಸುತ್ತಿನಲ್ಲಿ ಯಶಸ್ವಿಯಾಗಿ 93 ಕೆಜಿ ಭಾರವನ್ನು ಎತ್ತಿದರು. ನಂತರ ಕ್ಲೀನ್ ಮತ್ತು ಜರ್ಕ್ ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲೇ 113 ಕೆ.ಜಿ ಎತ್ತುವಲ್ಲಿ ಯಶಸ್ವಿಯಾದರು. 2ನೇ ಸುತ್ತಿನಲ್ಲಿ 116 ಕೆಜಿ ಹಾಗೂ 3ನೇ ಸುತ್ತಿನಲ್ಲಿ 119 ಕೆಜಿಯನ್ನು ಯಶಸ್ವಿಯಾಗಿ ಎತ್ತುವ ಮೂಲಕ ಶಕ್ತಿ ಪ್ರದರ್ಶಿಸಿ ಕಂಚಿನ ಪದಕಕ್ಕೆ ಕೊರಳೊಡ್ಡಿದರು.

    Live Tv
    [brid partner=56869869 player=32851 video=960834 autoplay=true]

  • ಕ್ರಿಸ್ಟಿಯಾನೊ ರೊನಾಲ್ಡೊ ಮಾಲೀಕತ್ವದ 13 ಕೋಟಿ ಮೌಲ್ಯದ ಕಾರು ಅಪಘಾತ

    ಕ್ರಿಸ್ಟಿಯಾನೊ ರೊನಾಲ್ಡೊ ಮಾಲೀಕತ್ವದ 13 ಕೋಟಿ ಮೌಲ್ಯದ ಕಾರು ಅಪಘಾತ

    ಸ್ಪೇನ್: ಖ್ಯಾತ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಅವರ ಮಾಲೀಕತ್ವದ 13.3 ಕೋಟಿ ಮೌಲ್ಯದ ಬುಗಾಟಿ ವೆರಾನ್ ಕಾರು ಅಪಘಾತಕ್ಕೀಡಾಗಿದೆ.

    ಸ್ಪ್ಯಾನಿಷ್ ನಗರದ ಮಜೋರ್ಕಾದಲ್ಲಿ ಮನೆಯೊಂದರ ಪ್ರವೇಶದ್ವಾರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಆದರೆ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ರೊನಾಲ್ಡೊ ಅವರ ಸಿಬ್ಬಂದಿಯೊಬ್ಬರು ಕಾರನ್ನು ಚಲಾಯಿಸುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ಕಳೆದುಕೊಂಡಿದ್ದರಿಂದ ಅಪಘಾತ ಸಂಭವಿಸಿದ್ದು, ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಚಿನ್ನದ ಹುಡುಗ ನೀರಜ್ ಚೋಪ್ರಾ ಕೊರಳಿಗೆ ಮತ್ತೊಂದು ಚಿನ್ನ

    ದುಬಾರಿ ಬೆಲೆಯ ಸ್ಪೋರ್ಟ್ಸ್ ಕಾರುಗಳನ್ನು ಹೊಂದಿರುವ ಆಟಗಾರರ ಪೈಕಿ ರೊನಾಲ್ಡೊ ಸಹ ಒಬ್ಬರಾಗಿದ್ದಾರೆ. ಪ್ರಸ್ತುತ ಅವರು ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ಫುಟ್‌ಬಾಲ್ ಆಟಗಾರರ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಫೋಕ್ಸ್ ವ್ಯಾಗನ್ ಕಂಪನಿಯ ಬುಗಾಟಿ ವೆರಾನ್ ಕಾರು ಪ್ರಪಂಚದಲ್ಲಿರುವ ದುಬಾರಿ ಕಾರುಗಳಲ್ಲಿ ಒಂದಾಗಿದೆ.

    Live Tv

  • ವಿಶ್ವದ ಎರಡನೇ ದುಬಾರಿ ಲೀಗ್‌ – ಐಪಿಎಲ್‌ನ ಪ್ರತಿ ಪಂದ್ಯದ ಮೌಲ್ಯ 100 ಕೋಟಿ ?

    ವಿಶ್ವದ ಎರಡನೇ ದುಬಾರಿ ಲೀಗ್‌ – ಐಪಿಎಲ್‌ನ ಪ್ರತಿ ಪಂದ್ಯದ ಮೌಲ್ಯ 100 ಕೋಟಿ ?

    ನವದೆಹಲಿ: ಬಿಸಿಸಿಐ ಲೆಕ್ಕಾಚಾರ ಯಶಸ್ವಿಯಾದರೆ ಐಪಿಎಲ್‌ನ ಪ್ರತಿ ಪಂದ್ಯದ ಮೌಲ್ಯ 100 ಕೋಟಿ ರೂ. ದಾಟುವ ನಿರೀಕ್ಷೆಯಿದೆ.

    ಹೌದು. 2023-2027ರ ಅವಧಿಗೆ ಐಪಿಎಲ್‌ ಮಾಧ್ಯಮ ಪ್ರಸಾರ ಹಕ್ಕು ಹರಾಜಿಗೆ ಕೆಲವೇ ದಿನಗಳು ಬಾಕಿಯಿದೆ. ಸದ್ಯದ ಲೆಕ್ಕಾಚಾರ ನೋಡಿದರೆ ಪ್ರತಿ ಪಂದ್ಯದ ಮೌಲ್ಯ 100 ಕೋಟಿ ರೂ. ದಾಟುವ ನಿರೀಕ್ಷೆಯಿದೆ ಎಂದು ಮಾರುಕಟ್ಟೆ ಪಂಡಿತರು ಅಂದಾಜಿಸಿದ್ದಾರೆ. ಒಂದು ವೇಳೆ ಭಾರೀ ಮೊತ್ತಕ್ಕೆ ಹಕ್ಕು ಮಾರಾಟವಾದರೆ ಐಪಿಎಲ್‌ ವಿಶ್ವದ ಎರಡನೇ ದುಬಾರಿ ಟೂರ್ನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

    2018-2022ರ ಅವಧಿಗೆ 16,348 ಕೋಟಿ ರೂ.ಗೆ ಪ್ರಸಾರ ಹಕ್ಕು ಖರೀದಿಸಿದ್ದ ಸ್ಟಾರ್‌ ಇಂಡಿಯಾ ಪ್ರತಿ ಪಂದ್ಯಕ್ಕೆ 54.5 ಕೋಟಿ ರೂ. ಪಾವತಿಸಿತ್ತು. ಈಗ ಮುಂದಿನ 5 ವರ್ಷಗಳಿಗೆ ಬಿಸಿಸಿಐ 32,890 ಕೋಟಿ ರೂ. ಮೂಲಬೆಲೆ ನಿಗದಿ ಮಾಡಿದೆ. ಈ ಪ್ರಕಾರ ಪ್ರತಿ ಪಂದ್ಯದ ಟಿವಿ ಹಕ್ಕು 49 ಕೋಟಿ ರೂ. ಮತ್ತು ಪ್ರತಿ ಪಂದ್ಯದ ಡಿಜಿಟಲ್‌ ಹಕ್ಕು 33 ಕೋಟಿ ರೂ. ಇದನ್ನೂ ಓದಿ: ಐಪಿಎಲ್‍ನಲ್ಲಿ ಕಳ್ಳಾಟ ನಡೆದಿದೆ, ಪಿಐಎಲ್‍ನ ಅಗತ್ಯ ಬರಬಹುದು: ಸುಬ್ರಮಣಿಯನ್ ಸ್ವಾಮಿ

    ಸಾಧಾರಣವಾಗಿ ಟೀವಿ ಹಕ್ಕು ಮೂಲ ಬೆಲೆಗಿಂತ ಕನಿಷ್ಠ ಶೇ.20ರಿಂದ 25ರಷ್ಟು ಹೆಚ್ಚಿನ ಮೊತ್ತಕ್ಕೆ ಹರಾಜಾಗುವ ನಿರೀಕ್ಷೆ ಇದ್ದು, ಡಿಜಿಟಲ್‌ ಹಕ್ಕು ಇನ್ನೂ ಹೆಚ್ಚಿನ ಮೊತ್ತಕ್ಕೆ ಮಾರಾಟವಾಗಬಹುದು ಎಂದು ಅಂದಾಜಿಸಲಾಗಿದೆ. ಎರಡನ್ನೂ ಸೇರಿಸಿದರೆ ಕನಿಷ್ಠ ಒಂದು ಪಂದ್ಯಕ್ಕೆ 115 ರಿಂದ 120 ಕೋಟಿ ರೂ. ಆಗುವ ಸಾಧ್ಯತೆಯಿದೆ.

    ಪ್ರಸ್ತುತ ವಿಶ್ವದ ಅತಿ ದುಬಾರಿ ಕ್ರೀಡಾ ಲೀಗ್‌ ಎನ್ನುವ ಹಿರಿಮೆ ಅಮೆರಿಕದ ನ್ಯಾಷನಲ್‌ ಫುಟ್ಬಾಲ್‌ ಲೀಗ್‌ (ಎನ್‌ಎಫ್‌ಎಲ್‌)ಗೆ ಇದೆ. ಪ್ರತಿ ಎನ್‌ಎಫ್‌ಎಲ್‌ ಪಂದ್ಯದ ಮೌಲ್ಯ 134 ಕೋಟಿ ರೂ. ಇದೆ. ಎರಡನೇ ಸ್ಥಾನದಲ್ಲಿ ಇಂಗ್ಲಿಷ್‌ ಪ್ರೀಮಿಯರ್‌ ಲೀಗ್‌ ಫುಟ್ಬಾಲ್‌(ಇಪಿಎಲ್‌) ಇದ್ದು, ಪ್ರತಿ ಪಂದ್ಯದ ಮೌಲ್ಯ 81 ಕೋಟಿ ರೂ. ಈಗ ಬಿಸಿಸಿಐ ನಿಗದಿಪಡಿಸಿರುವ ಮೂಲಬೆಲೆಯೇ ಇಪಿಎಲ್‌ ಮೌಲ್ಯವನ್ನು ಹಿಂದಿಕ್ಕಲಿದೆ. ಇದನ್ನೂ ಓದಿ: ಚಿನ್ನದ ಮೊಟ್ಟೆ ಇಟ್ಟ ಐಪಿಎಲ್‌ – 2008ರಲ್ಲಿ ಬಿಡ್‌ ಎಷ್ಟಿತ್ತು? ಈಗ ಎಷ್ಟು ಏರಿಕೆಯಾಗಿದೆ?

    ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್‌ ಪ್ರತಿಕ್ರಿಯಿಸಿ, ಐಪಿಎಲ್ ಮಾಧ್ಯಮ ಹಕ್ಕುಗಳು ಕ್ರೀಡಾ ಉದ್ಯಮಕ್ಕೆ ಹೊಸ ಬೆಂಚ್-ಮಾರ್ಕ್‌ ಆಗಲಿದೆ. ಯಾವುದೇ ಸಂಖ್ಯೆಯನ್ನು ಊಹಿಸಲು ಬಯಸುವುದಿಲ್ಲ. ಆದರೆ ಇದು ದಾಖಲೆ ಮುರಿಯುವ ಸಂಖ್ಯೆಯಾಗಲಿದೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.

    ಈ ಬಾರಿ ದುಬೈಯಲ್ಲಿ ನಡೆದ ಬಿಡ್ಡಿಂಗ್‌ನಲ್ಲಿ ಸಿವಿಸಿ ಕ್ಯಾಪಿಟಲ್‌ 5,600 ಕೋಟಿ ರೂ. ನೀಡಿ ಅಹಮದಾಬಾದ್‌ ತಂಡವನ್ನು ಖರೀದಿಸಿದರೆ ಆರ್‌ಪಿಎಸ್‌ಜಿ ಗ್ರೂಪ್‌ 7,090 ಕೋಟಿ ರೂ. ಬಿಡ್‌ ಮಾಡಿ ಲಕ್ನೋ ತಂಡವನ್ನು ಖರೀದಿಸಿದೆ. ಬಿಸಿಸಿಐ ಎರಡು ಫ್ರಾಂಚೈಸಿಗಳ ಮಾರಾಟದಿಂದ ಒಟ್ಟು 10 ಸಾವಿರ ಕೋಟಿ ರೂ. ಆದಾಯ ನಿರೀಕ್ಷಿಸಿತ್ತು. ಆದರೆ ಬಿಸಿಸಿಐ ನಿರೀಕ್ಷೆಗೂ ಮೀರಿ 2,690 ಕೋಟಿ ರೂ. ಹೆಚ್ಚುವರಿ ಆದಾಯವನ್ನು ಗಳಿಸಿದೆ.

  • ಥಾಮಸ್ ಕಪ್ ಚಾಂಪಿಯನ್ಸ್ ಟೀಂನಲ್ಲಿದ್ದ ಬೆಂಗಳೂರಿನ ಲಕ್ಷ್ಯ ಸೇನ್‌ಗೆ ರಾಜ್ಯ ಸರ್ಕಾರದ ಗೌರವ

    ಥಾಮಸ್ ಕಪ್ ಚಾಂಪಿಯನ್ಸ್ ಟೀಂನಲ್ಲಿದ್ದ ಬೆಂಗಳೂರಿನ ಲಕ್ಷ್ಯ ಸೇನ್‌ಗೆ ರಾಜ್ಯ ಸರ್ಕಾರದ ಗೌರವ

    ಬೆಂಗಳೂರು: ಇದೇ ಮೊದಲ ಬಾರಿಗೆ ಥಾಮಸ್ ಕಪ್ ಗೆದ್ದು ಇತಿಹಾಸ ನಿರ್ಮಿಸಿರುವ ಭಾರತ ತಂಡಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಸಿ.ನಾರಾಯಣಗೌಡ ಅಭಿನಂದನೆ ಸಲ್ಲಿಸಿದ್ದಾರೆ.

    KCN

    14 ಬಾರಿ ಚಾಂಪಿಯನ್ ಇಂಡೋನೇಷ್ಯಾ ತಂಡವನ್ನು ಮಣಿಸಿರುವ ಭಾರತ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ತಂಡದಲ್ಲಿ ಬೆಂಗಳೂರಿನ ಆಟಗಾರ ಇರುವುದು ಕರ್ನಾಟಕಕ್ಕೆ ಮತ್ತಷ್ಟು ಹೆಮ್ಮೆ ತರಿಸಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಸದ್ಯ ಬೆಂಗಳೂರಿನ ದ್ರಾವಿಡ್ ಪಡುಕೊಣೆ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ಲಕ್ಷ್ಯ ಸೇನ್ ತರಬೇತಿ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಥಾಮಸ್ ಕಪ್ ಗೆದ್ದ ಭಾರತ ತಂಡದೊಂದಿಗೆ ಇಡೀ ದೇಶವೇ ಸಂಭ್ರಮಿಸಿದೆ: ಮೋದಿ

    THOMAS (1)

    ಭಾರತದ ಕ್ರೀಡಾಪಟುಗಳ ಸಾಧನೆ ಶ್ಲಾಘನೀಯವಾಗಿದ್ದು, ಈ ಐತಿಹಾಸಿಕ ಗೆಲುವು ನಮ್ಮ ದೇಶದ ಯುವಜನತೆಗೆ ಸ್ಫೂರ್ತಿ ನೀಡಲಿದೆ. ಭಾರತದ ಗೆಲುವಿಗೆ ತಮ್ಮದೇ ಕೊಡುಗೆ ನೀಡಿರುವ ಬೆಂಗಳೂರಿನ ಲಕ್ಷ್ಯ ಸೇನ್ ಅವರಿಗೆ ರಾಜ್ಯ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಜೊತೆಗೆ ಲಕ್ಷ್ಯ ಸೇನ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಇಂದು ಕಂಠೀರವದಲ್ಲಿ ಖೇಲೋ ಇಂಡಿಯಾಗೆ ತೆರೆ – ಬೆಂಗಳೂರಿಗರೇ ಪರ್ಯಾಯ ಮಾರ್ಗ ಬಳಸಿ

    ಇಂದು ಕಂಠೀರವದಲ್ಲಿ ಖೇಲೋ ಇಂಡಿಯಾಗೆ ತೆರೆ – ಬೆಂಗಳೂರಿಗರೇ ಪರ್ಯಾಯ ಮಾರ್ಗ ಬಳಸಿ

    ಬೆಂಗಳೂರು: ಇಂದು ಸಂಜೆ ಖೇಲೋ ಇಂಡಿಯಾ ಸಮಾರೋಪ ‌ಸಮಾರಂಭ ನಡೆಯಲಿರುವ ಹಿನ್ನೆಲೆಯಲ್ಲಿ ಕಂಠೀರವ ಕ್ರೀಡಾಂಗಣ ಸುತ್ತಮುತ್ತ ಸಂಚಾರಕ್ಕೆ ಸಮಸ್ಯೆಯಾಗುವ ಸಾಧ್ಯತೆಯಿದೆ.

    ಒಳಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಲವು ಸಚಿವರು ಹಾಗೂ ವಿವಿಧ ರಾಜ್ಯದ ಗಣ್ಯರು ಭಾಗವಹಿಸುವ ಹಿನ್ನೆಲೆ ಕಂಠೀರವ ಸ್ಟೇಡಿಯಂ ‌ಸುತ್ತಮುತ್ತ ಇರುವ ರಸ್ತೆಯ ಬದಲು ಪರ್ಯಾಯ ರಸ್ತೆಯನ್ನು ಬಳಸುವಂತೆ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ನಿನ್ನಿಂದ್ಲೇ ಎಲ್ಲಾ ಆಗಿದ್ದು ನಿನ್ನಿಂದ ಅಪ್ಪ ಜೈಲಿಗೆ ಹೋಗಿದ್ದು – ದಿವ್ಯಾ ಹಾಗರಗಿಯನ್ನು ತರಾಟೆಗೆ ತೆಗೆದುಕೊಂಡ ಪುತ್ರ

    ವಾಹನ ನಿಲುಗಡೆ ನಿಷೇಧ:
    ಇಂದು ಬೆಳಗ್ಗೆ 6 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ಕೆಲ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕಸ್ತೂರ್ಬಾ ರಸ್ತೆ, ಹಡ್ಸನ್ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ, ಮಲ್ಯ ಆಸ್ಪತ್ರೆ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್. ಜಂಕ್ಷನ್‍ವರೆಗೆ, ಆರ್.ಆರ್.ಎಂ.ಆರ್. ರಸ್ತೆ, ಆರ್.ಆರ್.ಎಂ.ಆರ್. ಜಂಕ್ಷನ್ ನಿಂದ ಹಡ್ಸನ್ ವೃತ್ತದವರೆಗೆ, ಎನ್.ಆರ್. ರಸ್ತೆ, ಕೆ.ಜಿ.ರಸ್ತೆ, ನೃಪತುಂಗ ರಸ್ತೆ, ಹಳೇ ಅಂಚೆ ಕಛೇರಿ ರಸ್ತೆ, ಬಿ.ಆರ್.ಅಂಬೇಡ್ಕರ್ ರಸ್ತೆ, ರಾಜಭವನ ರಸ್ತೆ, ದೇವರಾಜ್ ಅರಸ್ ರಸ್ತೆ, ಪ್ಯಾಲೇಸ್ ರಸ್ತೆ, ರೇಸ್ ಕೋರ್ಸ್ ರಸ್ತೆ, ಟಿ.ಚೌಡಯ್ಯ ರಸ್ತೆ, ಟೆಂಪಲ್ ಸ್ಟ್ರೀಟ್ ರಸ್ತೆಯಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.