Tag: ಕ್ರೀಡೆ

  • ಅಂಪೈರ್‌ ವಿರುದ್ಧ ಕೋರ್ಟ್‌ನಲ್ಲೇ ಆಕ್ರೋಶ – ಅನ್ಯಾಯದಿಂದ ಸೋತೆ ಎಂದ ಸಿಂಧು

    ಅಂಪೈರ್‌ ವಿರುದ್ಧ ಕೋರ್ಟ್‌ನಲ್ಲೇ ಆಕ್ರೋಶ – ಅನ್ಯಾಯದಿಂದ ಸೋತೆ ಎಂದ ಸಿಂಧು

    ಮನಿಲಾ: ಎರಡು ಬಾರಿ ಒಲಿಂಪಿಕ್ಸ್‌ ಪದಕ ವಿಜೇತೆ ಪಿವಿ ಸಿಂಧು ಅಂಪೈರ್‌ ವಿರುದ್ಧ ಬ್ಯಾಡ್ಮಿಂಟನ್‌ ಕೋರ್ಟ್‌ನಲ್ಲೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಫಿಲಿಪ್ಪೀನ್ಸ್‌ನಲ್ಲಿ ನಡೆದ ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಶಿಪ್‌ನ ಮಹಿಳಾ ಸಿಂಗಲ್ಸ್‌ನ ಸೆಮಿಫೈನಲ್‌ ಪಂದ್ಯದಲ್ಲಿ ಸಿಂಧು ಜಪಾನಿನ ಯಮಗುಚಿ ವಿರುದ್ಧ 21-13, 19-21, 16-21 ಸೆಟ್‌ನಿಂದ ಸೋತು ಕಂಚಿನ ಪದಕಕ್ಕೆ ತೃಪ್ತಿ ಪಡೆದಿದ್ದಾರೆ.

    ಎರಡನೇ ಗೇಮ್‌ ವೇಳೆ ಸಿಂಧು 14-12 ರಲ್ಲಿ ಮುಂದಿದ್ದಾಗ ಸರ್ವ್‌ ಮಾಡಲು ಬಹಳ ಸಮಯ ತೆಗೆಯುತ್ತಿದ್ದಾರೆಂದು ಎದುರಾಳಿ ಆಟಗಾರ್ತಿಗೆ ಅಂಪೈರ್‌ 1 ಪೆನಾಲ್ಟಿ ಅಂಕವನ್ನು ನೀಡಿದ್ದರು. ಈ ವೇಳೆ ಸಿಂಧು ಈ ರೀತಿ ಅಂಕ ನೀಡುವುದು ಎಷ್ಟು ಸರಿ ಎಂದು ಮೈದಾನದಲ್ಲೇ ಪ್ರಶ್ನೆ ಮಾಡಿ ಸಿಟ್ಟು ಹೊರ ಹಾಕಿದ್ದರು.

    ಪಂದ್ಯದ ಬಳಿಕ ಮಾತನಾಡಿದ ಸಿಂಧು, ಸರ್ವ್‌ ಮಾಡಲು ತಡ ಮಾಡುತ್ತಿದ್ದೇನೆ ಎಂದು ಹೇಳಿ ಅಂಪೈರ್‌ ಎದುರಾಳಿ ಆಟಗಾರ್ತಿಗೆ ಪೆನಾಲ್ಟಿ ಅಂಕ ನೀಡಿದರು. ಆದರೆ ನಾನು ಸರ್ವ್‌ ಮಾಡುವ ಸಮಯದಲ್ಲಿ ಆಟಗಾರ್ತಿ ಸಿದ್ಧವಾಗಿರಲಿಲ್ಲ. ಆದರೆ ಅಂಪೈರ್‌ ದಿಢೀರ್‌ ಅಂಕವನ್ನು ನೀಡಿದ್ದು ಸರಿಯಲ್ಲ. ಇದರಿಂದಾಗಿ ನನ್ನ ಆತ್ಮವಿಶ್ವಾಸ ಕುಗ್ಗಿತು. ಅಂಪೈರ್‌ ನಿರ್ಧಾರದಿಂದ ನಾನು ಸೋತಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜಡೇಜಾ CSK ನಾಯಕತ್ವ ತ್ಯಜಿಸಲು ಪ್ರಮುಖ ಕಾರಣವಿದು!

    ಅಂಪೈರ್‌ ಪನಾಲ್ಟಿ ನೀಡುವ ಸಮಯದಲ್ಲಿ ನಾನು ಮುಂದಿದ್ದೆ. ಈ ರೀತಿ ಅಂಕ ನೀಡಿದ್ದು ಅನ್ಯಾಯ. ಪಂದ್ಯದ ರೆಫ್ರಿ ಜೊತೆ ನಾನು ಮಾತನಾಡಿದೆ. ಆದರೆ ರೆಫ್ರಿ ಈಗಾಗಲೇ ಅಂಕ ನೀಡಲಾಗಿದೆ ಏನು ಮಾಡಲು ಆಗುವುದಿಲ್ಲ ಎಂದು ತಿಳಿಸಿದರು. ರಿಪ್ಲೈ ನೋಡುವಾಗ ಅವರಿಗೆ ಈ ತಪ್ಪು ಅರ್ಥವಾಗಬಹುದು. ಅಂಪೈರ್‌ ಈ ರೀತಿ ಅಂಕ ನೀಡದೇ ಇದ್ದಲ್ಲಿ ನಾನು ಪಂದ್ಯವನ್ನು ಗೆದ್ದು ಫೈನಲ್‌ ತಲುಪುತ್ತಿದ್ದೆ ಎಂದು ತಿಳಿಸಿದರು.

    ಸಿಂಧು ತಂದೆ ರಮಣ ಮಾತನಾಡಿ, ಈ ಟೂರ್ನಿಯಲ್ಲಿ ಸಿಂಧು ಚಿನ್ನ ಗೆಲ್ಲುವ ವಿಶ್ವಾಸದಲ್ಲಿದ್ದಳು. ಆಂಪೈರ್‌ ಯಾವುದೇ ಎಚ್ಚರಿಕೆ ನೀಡದೇ ಪೆನಾಲ್ಟಿ ನೀಡಿದ್ದು ತಪ್ಪು. ಮಗಳ ಜೊತೆ ಮಾತನಾಡುವಾಗ ಆಕೆ ಕಣ್ಣೀರಿಟ್ಟಳು ಎಂದು ಹೇಳಿದರು.

    ಅಂಪೈರ್‌ ವಿರುದ್ಧ ಸಿಟ್ಟು ಹೊರ ಹಾಕಿದ್ದ ಸಿಂಧು ಪಂದ್ಯದ ಬಳಿಕ ನಡೆದ ಪದಕ ವಿತರಣೆ ಕಾರ್ಯಕ್ರಮಕ್ಕೂ ಗೈರಾಗಿದ್ದರು.

  • ಈ ಹಿಂದೆ ಕ್ರೀಡಾಪಟುಗಳ ಆಯ್ಕೆಯಲ್ಲಿ ಪಾರದರ್ಶಕತೆ ಇರಲಿಲ್ಲ: ಮೋದಿ

    ಈ ಹಿಂದೆ ಕ್ರೀಡಾಪಟುಗಳ ಆಯ್ಕೆಯಲ್ಲಿ ಪಾರದರ್ಶಕತೆ ಇರಲಿಲ್ಲ: ಮೋದಿ

    ಗಾಂಧಿನಗರ: ಈ ಹಿಂದೆ ಸ್ಪರ್ಧೆಗಳಿಗೆ ಕ್ರೀಡಾಪಟುಗಳ ಆಯ್ಕೆಯಲ್ಲಿ ಪಾರದರ್ಶಕತೆಯ ಕೊರತೆ ಇತ್ತು. ಇದರಿಂದಾಗಿ ಕ್ರೀಡಾಪಟುಗಳ ಪ್ರತಿಭೆ ವ್ಯರ್ಥವಾಗುತ್ತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿದರು.

    ಗುಜರಾತ್ ಸರ್ಕಾರವು ಅಹಮದಾಬಾದ್‍ನಲ್ಲಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾ ಸ್ಪರ್ಧೆ ‘ಖೇಲ್ ಮಹಾಕುಂಭ’ದ 11ನೇ ಆವೃತ್ತಿಯನ್ನು ಮೋದಿ ಅವರು ಉದ್ಘಾಟಿಸಿದರು. ಈ ವೇಳೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ, ಸ್ಪರ್ಧೆಗಳಿಗೆ ಕ್ರೀಡಾಪಟುಗಳ ಆಯ್ಕೆಯಲ್ಲಿ ಪಾರದರ್ಶಕತೆಯ ಕೊರತೆ ಇತ್ತು. ಇದರಿಂದಾಗಿ ನಮ್ಮ ಕ್ರೀಡಾಪಟುಗಳ ಪ್ರತಿಭೆ ವ್ಯರ್ಥವಾಯಿತು. ಆದರೆ ಮುಂದೆ ಈ ರೀತಿ ಇರುವುದಿಲ್ಲ ಎಂದು ಭರವಸೆ ಕೊಟ್ಟರು. ಇದನ್ನೂ ಓದಿ: ತಪ್ಪಿಸಿಕೊಂಡು ಹೋದ ಪೆಂಗ್ವಿನ್ – ಕೊನೆಗೂ ಅಧಿಕಾರಿಗಳ ಕೈಗೆ

    ಈ ಹಿಂದೆ ಕ್ರೀಡಾಪಟುಗಳು ಸಾಧನೆ ಮಾಡಬೇಕಾದರೆ ತುಂಬಾ ಕಷ್ಟಪಡಬೇಕಾಗಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಕ್ರೀಡಾಪಟುಗಳು ಯಶಸ್ಸನ್ನು ಸಾಧಿಸುತ್ತಿದ್ದಾರೆ. ಚಿನ್ನ ಮತ್ತು ಬೆಳ್ಳಿ ಪದಕಗಳ ಹೊಳಪು ನಮ್ಮ ಯುವಕರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತಿದೆ ಎಂದು ಉತ್ಸುಕರಾಗಿ ಹೇಳಿದರು.

    ಟೋಕಿಯೊ ಒಲಿಂಪಿಕ್ಸ್‍ನಲ್ಲಿ ಭಾರತ ಏಳು ಪದಕಗಳನ್ನು ಮತ್ತು ಪ್ಯಾರಾಲಿಂಪಿಕ್ಸ್ ನಲ್ಲಿ 19 ಪದಕಗಳನ್ನು ಗೆದ್ದಿದೆ. ಇದು ಆರಂಭವಾಗಿದೆ. ಭಾರತವನ್ನು ಹಿಮ್ಮೆಟ್ಟಿಸಲು ಯಾರಿಂದಲ್ಲೂ ಆಗುವುದಿಲ್ಲ, ಭಾರತವು ದಣಿದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಅಪ್ಪು ಬೇಡವೆಂದ ಸಾಂಗ್ ಮತ್ತೆ ಪ್ರೇಕ್ಷಕರ ಮುಂದೆ – ಯಾವುದು ಈ ಸಾಂಗ್?

    ಉಕ್ರೇನ್‍ನಿಂದ ಹಿಂದಿರುಗಿದ ಯುವಕರು ಈಗ ಉದಯೋನ್ಮುಖ ಭಾರತದ ಪ್ರಭಾವವನ್ನು ಅರ್ಥಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

  • ಒಲಿಂಪಿಕ್ಸ್‌ಗೆ ಸಿದ್ಧತೆ – 75 ಕ್ರೀಡಾಪಟುಗಳಿಗೆ ತಲಾ 10 ಲಕ್ಷ

    ಒಲಿಂಪಿಕ್ಸ್‌ಗೆ ಸಿದ್ಧತೆ – 75 ಕ್ರೀಡಾಪಟುಗಳಿಗೆ ತಲಾ 10 ಲಕ್ಷ

    ಬೆಂಗಳೂರು: 2024ರ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್‌ಗೆ ರಾಜ್ಯದಿಂದ ಕನಿಷ್ಟ 75 ಕ್ರೀಡಾಪಟುಗಳನ್ನು ಸಿದ್ಧಪಡಿಸಲು ‘ಅಮೃತ ಕ್ರೀಡಾ ದತ್ತು ಯೋಜನೆ’ಯಡಿ ತಲಾ 10 ಲಕ್ಷ ರೂ. ಗಳವರೆಗೆ ಪ್ರತಿ ವರ್ಷ ಶ್ರೇಷ್ಠ ಮಟ್ಟದ ತರಬೇತಿ ಪಡೆಯಲು ವಿನಿಯೋಗಿಸಲು ಬಜೆಟ್‍ನಲ್ಲಿ ಸರ್ಕಾರ ಯೋಜನೆ ರೂಪಿಸಿದೆ.

    ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್-2021ನ್ನು ಪ್ರಸಕ್ತ ಸಾಲಿನಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಾಗುವುದು. ಈ ಕ್ರೀಡಾಕೂಟದಲ್ಲಿ 8,000ಕ್ಕೂ ಅಧಿಕ ಕ್ರೀಡಾಪಟುಗಳು ಹಾಗೂ 20 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳನ್ನು ಸಂಘಟಿಸಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ. ಇದನ್ನೂ ಓದಿ: ಜಿಎಸ್‍ಟಿ ಪರಿಹಾರ 3 ವರ್ಷ ವಿಸ್ತರಿಸಿ: ರಾಜ್ಯದ ಹಣಕಾಸು ಪರಿಸ್ಥಿತಿಯ ಬಗ್ಗೆ ಸಿಎಂ ಹೇಳಿದ್ದೇನು?

    ಕೇಂದ್ರದ ಪ್ರಾಯೋಜಕತ್ವದ ಎನ್.ಎಸ್.ಡಿ.ಎಫ್. ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಹೊಸದಾಗಿ ಕ್ರೀಡಾ ಅಕಾಡೆಮಿ ಸ್ಥಾಪಿಸಲು ಉದ್ದೇಶಿಸಿದ್ದು, ಇದಕ್ಕಾಗಿ 20 ಕೋಟಿ ರೂ.ಗಳ ಅನುದಾನವನ್ನು ಒದಗಿಸಲು ಮುಂದಾಗಿದೆ. 50 ವರ್ಷ ಮೇಲ್ಪಟ್ಟ ಕಷ್ಟ ಪರಿಸ್ಥಿತಿಯಲ್ಲಿರುವ ಕುಸ್ತಿ ಕ್ರೀಡಾಪಟುಗಳಿಗೆ ನೀಡುತ್ತಿರುವ ಮಾಸಾಶನವನ್ನು 1,000 ರೂ.ನಂತೆ ಹೆಚ್ಚಿಸಲು ಸರ್ಕಾರ ತೀರ್ಮಾನಿಸಿದೆ. ಇದನ್ನೂ ಓದಿ: ಎಕರೆಗೆ 250 ರೂ. ಗಳಂತೆ ಡೀಸೆಲ್ ಸಹಾಯಧನ – ರೈತರಿಗೆ ಬಜೆಟ್‍ನಲ್ಲಿ ಸಿಕ್ಕಿದ್ದೇನು?

  • ಆರ್​ಸಿಬಿ, ಬೆಂಗಳೂರು ಬುಲ್ಸ್ ಜೊತೆಗಿತ್ತು ಅಪ್ಪು ಒಡನಾಟ

    ಆರ್​ಸಿಬಿ, ಬೆಂಗಳೂರು ಬುಲ್ಸ್ ಜೊತೆಗಿತ್ತು ಅಪ್ಪು ಒಡನಾಟ

    ಬೆಂಗಳೂರು: ಚಂದನವನದ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಸಿನಿಮಾ ಕ್ಷೇತ್ರದಂತೆ, ಕ್ರೀಡಾ ಕ್ಷೇತ್ರದಲ್ಲೂ ಕೂಡ ತಮ್ಮನ್ನು ತಾವು ತೋಡಗಿಸಿಕೊಂಡಿದ್ದರು. ಐಪಿಎಲ್‍ನಲ್ಲಿ ಕರ್ನಾಟಕ ತಂಡವಾಗಿದ್ದ ಆರ್​ಸಿಬಿ, ಪ್ರೋ ಕಬಡ್ಡಿ ಲೀಗ್‍ನಲ್ಲಿ ಬೆಂಗಳೂರು ಬುಲ್ಸ್ ತಂಡದ ರಾಯಭಾರಿಯಾಗಿ ಕ್ರೀಡಾಂಗಣಕ್ಕೆ ಬಂದು ಪಂದ್ಯ ವೀಕ್ಷಿಸಿ ಹುರಿದುಂಬಿಸುತ್ತಿದ್ದ ಅಪ್ಪು ಅಗಲಿಕೆಯ ನೋವು ಕ್ರೀಡಾ ಕ್ಷೇತ್ರಕ್ಕೂ ತಟ್ಟಿದೆ.

    ಪುನೀತ್ ರಾಜ್‍ಕುಮಾರ್(46) ಹೃದಯಾಘಾತದಿಂದ ಅಕ್ಟೋಬರ್ 29ರಂದು ಕೊನೆಯುಸಿರೆಳೆದಿದ್ದಾರೆ. ಕನ್ನಡಿಗರ ಪಾಲಿನ ನೆಚ್ಚಿನ ಅಪ್ಪು, ಕ್ರೀಡಾಪಟುಗಳಂತೆ ತಮ್ಮ ದೇಹವನ್ನು ಅಚ್ಚುಕಟ್ಟಾಗಿ ಫಿಟ್ ಆಗಿ ಬೆಳೆಸಿದ್ದರು. ಜೊತೆಗೆ ಕ್ರಿಕೆಟ್, ಕಬಡ್ಡಿ, ಫುಟ್‍ಬಾಲ್ ಕ್ರೀಡೆಗಳಲ್ಲಿ ಕರ್ನಾಟಕ ರಾಜ್ಯ ತಂಡಗಳಿಗೆ ಯಾವತ್ತು ಬೆಂಬಲವಾಗಿದ್ದರು. ಇದನ್ನೂ ಓದಿ: ಮಂಡಿಯೂರಲು ಒಪ್ಪಿದ ಡಿ ಕಾಕ್ ಶ್ರೀಲಂಕಾ ವಿರುದ್ಧ ಪಂದ್ಯಕ್ಕೆ ಹಾಜರ್

    PUNEET

    ಪುನೀತ್ ಕ್ರೀಡೆಯೊಂದಿಗೆ ಅಪಾರ ನಂಟು ಹೊಂದಿದ್ದು, ಜನಪ್ರಿಯ ಕ್ರಿಕೆಟ್ ಲೀಗ್ ಐಪಿಎಲ್‍ನಲ್ಲಿ ಬೆಂಗಳೂರಿನ ತಂಡವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) ಮತ್ತು ಪ್ರೊ ಕಬಡ್ಡಿಯ ಲೀಗ್‍ನಲ್ಲಿ ಬೆಂಗಳೂರು ಬುಲ್ಸ್ ತಂಡದ ರಾಯಭಾರಿಯಾಗಿ ತಂಡಕ್ಕೆ ಪವರ್ ಹೆಚ್ಚಿಸಿದ್ದರು. ಕ್ರೀಡೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದ ಪುನೀತ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಐಪಿಎಲ್ ಪಂದ್ಯಗಳನ್ನು ಸ್ಟೇಡಿಯಂನಲ್ಲಿ ಕೂತು ವೀಕ್ಷಿಸಿ ಅಭಿಮಾನಿಗಳೊಂದಿಗೆ ಸಂಭ್ರಮಿಸುತ್ತಿದ್ದರು.

    ಪ್ರೀಮಿಯರ್ ಫುಟ್‍ಬಾಲ್ ಲೀಗ್ ಆರಂಭಗೊಂಡಾಗ ಪುನೀತ್ ರಾಜ್‍ಕುಮಾರ್ ಬೆಂಗಳೂರು ಎಫ್‍ಸಿ ತಂಡದೊಂದಿಗೂ ಕೈ ಜೋಡಿಸಿದ್ದರು. ಜೊತೆಗೆ ಪಂದ್ಯಗಳ ವೀಕ್ಷಣೆಗಳಿಗಾಗಿ ಅಂಕಣಕ್ಕೆ ಬಂದು ನಗು ಮೊಗದಿಂದ ಆಟಗಾರರಿಗೆ ಹುರಿದುಂಬಿಸುತ್ತಿದ್ದ ಅಪ್ಪು ಇನ್ನೂ ನೆನಪು ಮಾತ್ರ. ಇದನ್ನೂ ಓದಿ: T20 ವಿಶ್ವಕಪ್ – ಟೀಂ ಇಂಡಿಯಾದ 6ನೇ ಬೌಲರ್ ಬೌಲಿಂಗ್‍ಗೆ ಎಂಟ್ರಿ

    ಅಪ್ಪು ಅಗಲಿಕೆಗೆ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ, ಕೆ.ಎಲ್ ರಾಹುಲ್, ರಾಬಿನ್ ಉತ್ತಪ್ಪ, ವೀರೇಂದ್ರ ಸೆಹ್ವಾಗ್, ಸಹಿತ ಕ್ರೀಡಾಕ್ಷೇತ್ರದ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

  • ಚಿನ್ನದ ಮೊಟ್ಟೆ ಇಟ್ಟ ಐಪಿಎಲ್‌ – 2008ರಲ್ಲಿ ಬಿಡ್‌ ಎಷ್ಟಿತ್ತು? ಈಗ ಎಷ್ಟು ಏರಿಕೆಯಾಗಿದೆ?

    ಚಿನ್ನದ ಮೊಟ್ಟೆ ಇಟ್ಟ ಐಪಿಎಲ್‌ – 2008ರಲ್ಲಿ ಬಿಡ್‌ ಎಷ್ಟಿತ್ತು? ಈಗ ಎಷ್ಟು ಏರಿಕೆಯಾಗಿದೆ?

    ದುಬೈ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಮತ್ತು ಫ್ರಾಂಚೈಸಿಗಳು ಚಿನ್ನದ ಮೊಟ್ಟೆ ಇಡುತ್ತಿರುವ ಕೋಳಿ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಈ ಚಿನ್ನದ ಮೊಟ್ಟೆಯ ಮೌಲ್ಯ ಹಿಂದೆ ಎಷ್ಟಿತ್ತು? ಈಗ ಎಷ್ಟು ಏರಿಕೆಯಾಗಿದೆ? ಮುಂದೆ ಎಷ್ಟು ಏರಿಕೆಯಾಗಬಹುದು ಎಂಬ ಪ್ರಶ್ನೆಗಳಿಗೆ ಸೋಮವಾರ ನಡೆದ ಬಿಡ್ಡಿಂಗ್‌ ಉತ್ತರ ನೀಡಿದೆ.

    ಹೌದು. ದುಬೈಯಲ್ಲಿ ನಡೆದ ಬಿಡ್ಡಿಂಗ್‌ನಲ್ಲಿ ಸಿವಿಸಿ ಕ್ಯಾಪಿಟಲ್‌ 5,600 ಕೋಟಿ ರೂ. ನೀಡಿ ಅಹಮದಾಬಾದ್‌ ತಂಡವನ್ನು ಖರೀದಿಸಿದರೆ ಆರ್‌ಪಿಎಸ್‌ಜಿ ಗ್ರೂಪ್‌ 7,090 ಕೋಟಿ ರೂ. ಬಿಡ್‌ ಮಾಡಿ ಲಕ್ನೋ ತಂಡವನ್ನು ಖರೀದಿಸಿದೆ.

    ಬಿಸಿಸಿಐ ಎರಡು ಫ್ರಾಂಚೈಸಿಗಳ ಮಾರಾಟದಿಂದ ಒಟ್ಟು 10 ಸಾವಿರ ಕೋಟಿ ರೂ. ಆದಾಯ ನಿರೀಕ್ಷಿಸಿತ್ತು. ಆದರೆ ಬಿಸಿಸಿಐ ನಿರೀಕ್ಷೆಗೂ ಮೀರಿ 2,690 ಕೋಟಿ ರೂ. ಹೆಚ್ಚುವರಿ ಆದಾಯವನ್ನು ಗಳಿಸಿದೆ.

    ಬಿಡ್‌ ಎಷ್ಟಿತ್ತು?
    ಅದಾನಿ ಗ್ರೂಪ್‌ ಅಹಮದಾಬಾದ್‌, ಲಕ್ನೋಗೆ 5,100 ಕೋಟಿ ರೂ. ಬಿಡ್‌ ಮಾಡಿತ್ತು. ಕೋಟಕ್‌ ಅಹಮದಾಬಾದ್‌ಗೆ 4,513 ಕೋಟಿ ರೂ., ಲಕ್ನೋಗೆ 4,512 ಕೋಟಿ ರೂ. ಬಿಡ್‌ ಮಾಡಿದ್ದರೆ ಆಲ್‌ ಕಾರ್ಗೋ ಲಾಜಿಸ್ಟಿಕ್ಸ್‌ ಅಹಮದಾಬಾದ್‌ಗೆ 4,140 ಕೋಟಿ ರೂ., ಲಕ್ನೋಗೆ 4,304 ಕೋಟಿ ರೂ. ನೀಡುವುದಾಗಿ ತಿಳಿಸಿತ್ತು.

    ಅವರಾಂ ಗ್ಲೇಜರ್‌ ಅಹಮಾದಾಬಾದ್‌ಗೆ 4,128.65 ಕೋಟಿ ರೂ., ಲಕ್ನೋಗೆ 4,023.99 ಕೋಟಿ ರೂ.ನೀಡಲು ಸಿದ್ಧವಿತ್ತು. ಹಿಂದೂಸ್ತಾನ್‌ ಟೈಮ್ಸ್‌ ಮೀಡಿಯಾ ಅಹಮದಾಬಾದ್‌ಗೆ 4,275 ಕೋಟಿ ರೂ., ಲಕ್ನೋಗೆ 4,510 ಕೋಟಿ ರೂ. ಬಿಡ್‌ ಮಾಡಿತ್ತು.

    ಕ್ಯಾಪ್ರಿ ಗ್ಲೋಬಲ್‌ ಅಹಮದಾಬಾದ್‌ ಮತ್ತು ಲಕ್ನೋಗೆ 4,204 ಕೋಟಿ ರೂ. ಬಿಡ್‌ ಮಾಡಿದ್ದರೆ ಅಹಮದಾಬಾದ್‌ಗೆ ಸಿವಿಸಿ 5,625 ಕೋಟಿ ರೂ., ಲಕ್ನೋಗೆ 5,166 ಕೋಟಿ ರೂ. ಬಿಡ್‌ ಮಾಡಿತ್ತು.

    ಆರ್‌ಪಿಎಸ್‌ಜಿ ಅಹಮದಾಬಾದ್‌ ಮತ್ತು ಲಕ್ನೋಗೆ 7,090 ಕೋಟಿ ರೂ. ಬಿಡ್‌ ಮಾಡಿತ್ತು. ಟೊರೆಂಟ್‌ ಸ್ಪೋರ್ಟ್ಸ್‌ ಅಹಮದಾಬಾದ್‌ಗೆ 4,653 ಕೋಟಿ ರೂ., ಲಕ್ನೋಗೆ 4,356 ಕೋಟಿ ರೂ. ಬಿಡ್‌ ಮಾಡಿತ್ತು. ಇದನ್ನೂ ಓದಿ: ರೋಹಿತ್ ಡ್ರಾಪ್ ಮಾಡ್ತೀರಾ – ಪ್ರಶ್ನೆಗೆ ತಲೆ ಕೆಳಗಡೆ ಹಾಕಿ Unbelievable ಎಂದ ಕೊಹ್ಲಿ

    8 ತಂಡಗಳ ಬಿಡ್‌ ಎಷ್ಟಿತ್ತು?
    2008ರಲ್ಲಿ ಐಪಿಎಲ್‌ ಆರಂಭಗೊಂಡಗೊಂಡಾಗ ಮುಂಬೈ ತಂಡವನ್ನು ಮುಕೇಶ್‌ ಅಂಬಾನಿ ನೇತೃತ್ವದ ರಿಲಯನ್ಸ್‌ ಇಂಡಸ್ಟ್ರೀಸ್‌ 447.6 ಕೋಟಿಗೆ ಬಿಡ್‌ ಮಾಡಿದ್ದೆ ದೊಡ್ಡ ಮೊತ್ತವಾಗಿತ್ತು.

    ಮುಂಬೈ ಇಂಡಿಯನ್ಸ್‌ 447.6 ಕೋಟಿ ರೂ., ರಾಯಲ್‌ ಚಾಲೆಂಜರ್ಸ್‌ 446 ಕೋಟಿ ರೂ., ಚೆನ್ನೈ ಸೂಪರ್‌ ಕಿಂಗ್ಸ್‌ 364 ಕೋಟಿ ರೂ., ಪಂಜಾಬ್‌ ಕಿಂಗ್ಸ್‌ 304 ಕೋಟಿ ರೂ., ಕೋಲ್ಕತ್ತಾ ನೈಟ್‌ ರೈಡರ್ಸ್‌ 300 ಕೋಟಿ ರೂ., ರಾಯಸ್ಥಾನ್‌ ರಾಯಲ್ಸ್‌ 268 ಕೋಟಿ ರೂ., ಕೊಚ್ಚಿ ಟಸ್ಕರ್ಸ್‌ 1,533 ಕೋಟಿ ರೂ., ಸಹರಾ ವಾರಿಯರ್ಸ್‌ ಪುಣೆ ತಂಡವನ್ನು 1,702 ಕೋಟಿ ರೂ. ಬಿಡ್‌ ಮಾಡಿ ಖರೀದಿಸಿತ್ತು.

    ಮುಂದೆ ಎಷ್ಟಾಗಬಹುದು?
    2008ರಲ್ಲಿ ಮುಂಬೈ ತಂಡವನ್ನು 447.6 ಕೋಟಿ ರೂ. ನೀಡಿ ರಿಲಯನ್ಸ್‌ ಖರೀದಿಸಿತ್ತು. ಈ ಮೊತ್ತಕ್ಕೆ ಹೋಲಿಸಿದಾಗ ಈಗ ಲಕ್ನೋ ತಂಡದ ಬಿಡ್‌ ಮೊತ್ತ 15 ಪಟ್ಟು ಹೆಚ್ಚಾಗಿದೆ. ಇದು ಕೇವಲ 13 ವರ್ಷದಲ್ಲಿ ನಡೆದ ಬೆಳವಣಿಗೆ. ಐಪಿಎಲ್‌ ಅನ್ನು ಇಂಗ್ಲೀಷ್‌ ಪ್ರೀಮಿಯರ್‌ ಫುಟ್‌ಬಾಲ್‌ನಂತೆ ಜನಪ್ರಿಯತೆಗೊಳಿಸಬೇಕೆಂಬ ಉದ್ದೇಶವನ್ನು ಬಿಸಿಸಿಐ ಹೊದಿದೆ. ಈ ಫುಟ್‌ಬಾಲ್‌ ಲೀಗ್‌ನಲ್ಲಿ 20 ತಂಡಗಳು ಭಾಗವಹಿಸುತ್ತವೆ.

    ಸದ್ಯ ಈಗ ಶನಿವಾರ, ಭಾನುವಾರ ಎರಡು ಐಪಿಎಲ್‌ ಪಂದ್ಯಗಳು ನಡೆಯುತ್ತಿವೆ. ಮುಂದೆ ಮತ್ತಷ್ಟು ತಂಡಗಳು ಸೇರ್ಪಡೆಯಾದರೆ ವಾರದ ಇತರೇ ದಿನಗಳಲ್ಲೂ ಪಂದ್ಯ ನಡೆಯುವುದರಲ್ಲಿ ಅನುಮಾನವಿಲ್ಲ. ಹೊಸ ತಂಡಗಳಿಂದಾಗಿ ಆಟಗಾರರಿಗೂ ಅವಕಾಶ ಸಿಕ್ಕಿದಂತಾಗುತ್ತದೆ. ಇದರಿಂದಾಗಿ ಬಿಸಿಸಿಐ ಜೊತೆ ಸರ್ಕಾರಕ್ಕೂ ತೆರಿಗೆ ರೂಪದಲ್ಲಿ ಆದಾಯ ಹೆಚ್ಚು ಬರಲಿದೆ.

  • ಯತಿರಾಜ್‌ಗೆ ಕರ್ನಾಟಕ ಸರ್ಕಾರದಿಂದ ಸನ್ಮಾನ

    ಯತಿರಾಜ್‌ಗೆ ಕರ್ನಾಟಕ ಸರ್ಕಾರದಿಂದ ಸನ್ಮಾನ

    ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ರಾಜಭವನದಲ್ಲಿ ಆಯೋಜಿಸಿದ್ದ ಟೋಕಿಯೋ ಒಲಂಪಿಕ್ಸ್ ಮತ್ತು ಪ್ಯಾರಾಲಂಪಿಕ್ಸ್‌ನಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳು ಮತ್ತು ತರಬೇತುದಾರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಲಾ ಒಂದು ಲಕ್ಷ ರೂ. ನೀಡಿ ಸನ್ಮಾನಿಸಿದರು.

    Rajabhavana

    ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾದ ಡಾ. ಕೆಸಿ ನಾರಾಯಣ ಗೌಡ ಅವರು, ಕರ್ನಾಟಕ ಒಲಂಪಿಕ್ಸ್‌  ಸಂಸ್ಥೆ ಅಧ್ಯಕ್ಷರು, ಪರಿಷತ್ ಸದಸ್ಯರಾದ ಗೋವಿಂದರಾಜು ಸೇರಿದಂತೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಇದನ್ನೂ ಓದಿ: ಪಕ್ಷದ ವರಿಷ್ಠರು ಒಪ್ಪಿದರೆ ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುತ್ತೇನೆ: ಬಿ.ವೈ ರಾಘವೇಂದ್ರ

  • ಕೊಟ್ಟ ಮಾತಿನಂತೆ ಪವಿತ್ರಾಗೆ ಸೈಕಲ್ ಉಡುಗೊರೆ ನೀಡಿದ ಸಿಎಂ ಬೊಮ್ಮಾಯಿ

    ಕೊಟ್ಟ ಮಾತಿನಂತೆ ಪವಿತ್ರಾಗೆ ಸೈಕಲ್ ಉಡುಗೊರೆ ನೀಡಿದ ಸಿಎಂ ಬೊಮ್ಮಾಯಿ

    -5 ಲಕ್ಷ ಬೆಲೆಯ ಸೈಕಲ್

    ಬೆಂಗಳೂರು: ರಾಷ್ಟ್ರ ಮಟ್ಟದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಮಿಂಚಿದ್ದ ಪ್ರತಿಭೆಯ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೊಟ್ಟ ಮಾತಿನಂತೆ ಸೈಕಲ್ ಉಡುಗೊರೆಯಾಗಿ ನೀಡಿದ್ದಾರೆ.

    ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದ ಅಶೋಕ್ ಮತ್ತು ರೇಣುಕಾ ದಂಪತಿ ಮಗಳಾದ ಪವಿತ್ರಾ ಕುರ್ತಕೋಟಿ, 5 ನೇ ತರಗತಿಯಲ್ಲಿರುವಾಗ ಸೈಕ್ಲಿಂಗ್ ಕ್ರೀಡೆಯತ್ತಾ ಪ್ರವೇಶ ಪಡೆದು ಬಳಿಕ ಹಲವಾರು ರಾಜ್ಯ, ರಾಷ್ಟ್ರ ಮಟ್ಟದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಪ್ರಶಸ್ತಿ ಜಯಿಸಿದ್ದಾರೆ. ಪ್ರಸ್ತುತ ಪ್ರಥಮ ಪಿಯುಸಿ ವಿಡಿಎಫ್‍ಟಿ ಬಾಲಕಿಯರ ಕಾಲೇಜಿನಲ್ಲಿ ಓದುತ್ತಿದ್ದಾರೆ. ತಂದೆ ರೈತ ಕಾರ್ಮಿಕರಾಗಿದ್ದು, ತಾಯಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿ ಊಟದ ಅಡುಗೆ ಸಹಾಯಕರಾಗಿದ್ದಾರೆ. ಅತ್ಯಂತ ಬಡತನದಲ್ಲಿ ಜೀವನ ಸಾಗಿಸುತ್ತಿರುವ ಪವಿತ್ರ ಅವರಿಗೆ ಮೊದಲಿನಿಂದಲೂ ಸೈಕ್ಲಿಂಗ್‍ನಲ್ಲಿ ಆಸಕ್ತಿ. ಆದರೆ ಗುಣಮಟ್ಟದ ಸೈಕಲ್ ಖರೀದಿಸುವ ಶಕ್ತಿ ಇಲ್ಲ. ಈ ಮೊದಲು ದಾನಿಗಳ ಸಹಾಯದಿಂದ ಪವಿತ್ರ ಅವರು ಸೈಕಲ್ ಖರೀದಿಸಿ ವಿವಿಧ ಸ್ಪರ್ಧೆಯಲ್ಲಿ ಪಾಲ್ಗೊಂಡು ಬಹುಮಾನ ಗೆದ್ದಿದ್ದರು. ಇದನ್ನೂ ಓದಿ: ಟಿ20 ವಿಶ್ವಕಪ್ ಆಯ್ಕೆಗೆ ಇನ್ನೊಂದು ಚಾನ್ಸ್ ಕಲ್ಪಿಸಿಕೊಡಬಹುದು ಐಪಿಎಲ್?

    ಸಿಎಂ ಖಾಸಗಿ ಸುದ್ದಿವಾಹಿನಿಯಲ್ಲಿ ಸಂದರ್ಶನದಲ್ಲಿದ್ದಾಗ ಪವಿತ್ರ ಅವರು ದೂರವಾಣಿಯಲ್ಲಿ ಮಾತನಾಡಿ, ಗುಣಮಟ್ಟದ ಸೈಕಲ್ ಕೊಡಿಸುವಂತೆ ಮನವಿ ಮಾಡಿದ್ದರು. ಉತ್ತಮ ಗುಣಮಟ್ಟದ ಸೈಕಲ್ ಕೊಡಿಸುವುದಾಗಿ ಬೊಮ್ಮಾಯಿ ಅವರು ಭರವಸೆ ನೀಡಿದ್ದರು. ಅದರಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಕ್ರೀಡಾ ಇಲಾಖೆ ಹಾಗೂ ಎಂಬೈಸಿ ಗ್ರೂಪ್, ಬ್ಲಾಸಂ ಆಸ್ಪತ್ರೆ ಮತ್ತು ಮಧುಸೂದನ್ ಅವರ ಸಹಕಾರದೊಂದಿಗೆ Argon-18 E-119 ಸೈಕಲ್ ಅನ್ನು ಖರೀದಿಸಿ ಪವಿತ್ರ ಅವರಿಗೆ, ಮುಖ್ಯಮಂತ್ರಿ ಹಸ್ತಾಂತರಿಸಿದ್ದಾರೆ. ಈ ಮೂಲಕ ಪವಿತ್ರ ಅವರ ಕನಸು ನನಸುಗೊಳಿಸಿ ಅಂತರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಪ್ರಯತ್ನಕ್ಕೆ ಸಹಕಾರ ನೀಡಿದ್ದಾರೆ. ಕೆನಡಾದಿಂದ ತರಿಸಿರುವ ಈ ಸೈಕಲ್ ಸುಮಾರು 5 ಲಕ್ಷ ಬೆಲೆಯದ್ದಾಗಿದೆ.

    ಪವಿತ್ರಾ ಅವರ ಸಾಧನೆ:
    2018ರಲ್ಲಿ ಕುರುಕ್ಷೇತ್ರದಲ್ಲಿ ನಡೆದ ರೋಡ್ ಸೈಕ್ಲಿಂಗ್ 15 ಕಿ.ಮೀ ಸ್ಪರ್ಧೆಯಲ್ಲಿ 5ನೇ ಸ್ಥಾನ. 2019ರಲ್ಲಿ ಪುಣೆಯಲ್ಲಿ ನಡೆದ ರಾಷ್ಟ್ರಮಟ್ಟದ ಎಂ.ಟಿ.ಬಿ. ಸೈಕಲ್ ಸ್ಪರ್ಧೆಯಲ್ಲಿ 9ನೇ ಸ್ಥಾನ. 2021ರಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಎಂ.ಟಿ.ಬಿ. ಮೌಂಟೇನ್ ಬೈಕ್ ಸ್ಪರ್ಧೆಯಲ್ಲಿ 3ನೇ ಸ್ಥಾನ. 2021ರಲ್ಲಿ ಗದಗದಲ್ಲಿ ನಡೆದ ರಾಷ್ಟ್ರೀಯ ಎಂ.ಟಿ.ಬಿ. ಮೌಂಟೇನ್ ಬೈಕ್ ಸ್ಪರ್ಧೆಯಲ್ಲಿ 3ನೇ ಸ್ಥಾನ ಪಡೆದಿದ್ದಾರೆ. ಈಗ ನ್ಯಾಶನಲ್ ಲೆವೆಲ್ ಗೇಮ್ಸ್ ಚಾಂಪಿಯನ್‍ಶಿಪ್ ಪಂಜಾಬ್‍ನ ಪಟಿಯಾಲದಲ್ಲಿ ನಡೆಯಲಿರುವ ಖೇಲೋ ಇಂಡಿಯಾ ಟೀಂಗೆ ಆಯ್ಕೆಯಾಗಿದ್ದು, ಈ ಕ್ಯಾಂಪಿನಲ್ಲಿ ಪಾಲ್ಗೊಳ್ಳಲು ಅಂತರಾಷ್ಟ್ರೀಯ ಮಟ್ಟದ ಸೈಕಲ್ ಅವಶ್ಯಕತೆ ಇತ್ತು, ಅದನ್ನು ಈಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನೀಡಲಾಗಿದೆ. ಇದನ್ನೂ ಓದಿ: ಇಂತಹ ಕೆಟ್ಟ ಸರ್ಕಾರವನ್ನು ರಾಜಕೀಯ ಜೀವನದಲ್ಲಿ ನೋಡಿಲ್ಲ: ಸಿದ್ದರಾಮಯ್ಯ

    ಸೈಕಲ್ ಹಸ್ತಾಂತರ ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಆರ್​ಸಿಬಿ ಕ್ಯಾಪ್ಟನ್ ರೇಸ್‍ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್ 

  • ಸ್ಟೇಡಿಯಂನಲ್ಲಿ ಮಹಿಳಾ ಪ್ರೇಕ್ಷಕರು ಇದ್ದಾರೆ, ಪ್ರಸಾರ ಮಾಡಬೇಡಿ – ಅಫ್ಘಾನಿಸ್ಥಾನದಲ್ಲಿ ಐಪಿಎಲ್ ಬ್ಯಾನ್

    ಸ್ಟೇಡಿಯಂನಲ್ಲಿ ಮಹಿಳಾ ಪ್ರೇಕ್ಷಕರು ಇದ್ದಾರೆ, ಪ್ರಸಾರ ಮಾಡಬೇಡಿ – ಅಫ್ಘಾನಿಸ್ಥಾನದಲ್ಲಿ ಐಪಿಎಲ್ ಬ್ಯಾನ್

    ಕಾಬೂಲ್: ತನ್ನ ವಿಚಿತ್ರ ನಿರ್ಧಾರಗಳಿಂದಲೇ ವಿಶ್ವದ ಕೆಂಗಣ್ಣಿಗೆ ಗುರಿಯಾಗಿರುವ ತಾಲಿಬಾನ್ ಆಡಳಿತ ಈಗ ಅಫ್ಘಾನಿಸ್ಥಾನದಲ್ಲಿ ಮತ್ತೊಂದು ಹಾಸ್ಯಾಸ್ಪದ ನಿರ್ಧಾರವನ್ನು ಕೈಗೊಂಡಿದೆ. ಕ್ರಿಕೆಟ್ ಸ್ಟೇಡಿಯಂನಲ್ಲಿ ಮಹಿಳಾ ಪ್ರೇಕ್ಷಕರು ಇದ್ದಾರೆ ಎಂಬ ಕಾರಣಕ್ಕೆ ಐಪಿಎಲ್ ಪ್ರಸಾರವನ್ನೇ ದೇಶದಲ್ಲಿ ನಿಷೇಧಿಸಿದೆ.

    ಅಫ್ಘಾನಿಸ್ಥಾನದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ತಾಲಿಬಾನ್ ಸರ್ಕಾರ ತನ್ನ ದೇಶದಲ್ಲಿ ಈ ಪ್ರತಿಷ್ಠಿತ ಕ್ರಿಕೆಟ್ ಟೂರ್ನಿಯ ಪ್ರಸಾರಕ್ಕೆ ನಿಷೇಧ ಹೇರಿದೆ. ಎಲ್ಲಾ ಮಾಧ್ಯಮಗಳಿಗೂ ಎಚ್ಚರಿಕೆ ರವಾನಿಸಿರುವ ತಾಲಿಬಾನ್ ಐಪಿಎಲ್‍ನ ಯುಎಇನಲ್ಲಿ ನಡೆಯುವ ಪಂದ್ಯಗಳನ್ನು ಪ್ರಸಾರ ಮಾಡದಂತೆ ಸೂಚಿಸಿದೆ. ಸ್ಟೇಡಿಯಂನಲ್ಲಿ ಮಹಿಳಾ ಪ್ರೇಕ್ಷಕರು ಇರುತ್ತಾರೆ ಎನ್ನುವ ಕಾರಣದಿಂದಾಗಿ ಈ ನಿರ್ಧಾರವನ್ನು ತಾಲಿಬಾನ್ ಸರ್ಕಾರ ತೆಗೆದುಕೊಂಡಿದೆ. ಇದನ್ನೂ ಓದಿ: ನನ್ನ ಹೆತ್ತ ತಾಯಿಯನ್ನ ಮತಾಂತರ ಮಾಡಿದ್ದಾರೆ: ಗೂಳಿಹಟ್ಟಿ ಶೇಖರ್

    ಹಾಸ್ಯಾಸ್ಪದ, ಅಫ್ಘಾನಿಸ್ಥಾನದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‍ನ ಪ್ರಸಾರವನ್ನು ತಾಲಿಬಾನ್ ನಿಷೇಧಿಸಿದೆ. ಕ್ರೀಡಾಂಗಣಗಳಲ್ಲಿ ಮಹಿಳಾ ಪ್ರೇಕ್ಷಕರ ಉಪಸ್ಥಿತಿ ಹಾಗೂ ಯುವತಿಯರು ನೃತ್ಯಗಳನ್ನು ಮಾಡುವ ಕಾರಣದಿಂದಾಗಿ ಅಫ್ಘಾನ್ ಮಾಧ್ಯಮಗಳು ಐಪಿಎಲ್ ಲೀಗ್‍ನ ಪ್ರಸಾರವನ್ನು ಮಾಡಬಾರದು ಎಂದು ತಾಲಿಬಾನ್ ಎಚ್ಚರಿಸಿದೆ ಎಂದು ಅಫ್ಘಾನಿಸ್ತಾನದ ಪತ್ರಕರ್ತ ಫಾವದ್ ಅಮನ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗ ಅಂತ್ಯ – ಶೀಘ್ರದಲ್ಲಿ ಡಿಸಿಜಿಐಗೆ ವರದಿ ಸಲ್ಲಿಕೆ

    ಇಸ್ಲಾಂನ ಚೌಕಟ್ಟಿನೊಳಗೆ ಮಹಿಳಾ ಹಕ್ಕುಗಳನ್ನು ಗೌರವಿಸಲಾಗುವುದು ಎಂದು ಭಯೋತ್ಪಾದಕ ಗುಂಪು ಹೇಳುತ್ತಿದೆ. ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಿದ್ದು, ಮಾತ್ರವಲ್ಲದೇ ಮಹಿಳೆಯರನ್ನು ಕ್ರೀಡೆಗಳಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

     

    400 ಕ್ರೀಡೆಗಳಿಗೆ ಅವಕಾಶ ನೀಡುವುದಾಗಿ ತಾಲಿಬಾನ್ ಹೇಳಿತ್ತು. ಆದರೆ ಮಹಿಳೆಯರು ಆಡಬಹುದೇ ಎಂಬ ಪ್ರಶ್ನೆಗೆ ಖಚಿತ ಉತ್ತರ ನೀಡಲು ನಿರಾಕರಿಸಿದ್ದರು. ದಯವಿಟ್ಟು ಮಹಿಳೆಯರ ಬಗ್ಗೆ ಹೆಚ್ಚಿನ ಪ್ರಶ್ನೆಗಳನ್ನು ಕೇಳಬೇಡಿ ಎಂದು ಅಫ್ಘಾನಿಸ್ಥಾನದ ಹೊಸ ಕ್ರೀಡಾ ಮುಖ್ಯಸ್ಥ ಬಶೀರ್ ಅಹ್ಮದ್ ರುಸ್ತಮಜಾ ಕಳೆದ ವಾರವಷ್ಟೇ ಹೇಳಿದ್ದರು.

  • ಈಗಲ್‍ಟನ್ ರೆಸಾರ್ಟ್ ಒತ್ತುವರಿ ಮಾಡಿದ ಜಾಗ ಕ್ರೀಡಾ ಸಮುಚ್ಚಯ ನಿರ್ಮಾಣಕ್ಕೆ ನೀಡಿ: ಡಾ.ನಾರಾಯಣಗೌಡ

    ಈಗಲ್‍ಟನ್ ರೆಸಾರ್ಟ್ ಒತ್ತುವರಿ ಮಾಡಿದ ಜಾಗ ಕ್ರೀಡಾ ಸಮುಚ್ಚಯ ನಿರ್ಮಾಣಕ್ಕೆ ನೀಡಿ: ಡಾ.ನಾರಾಯಣಗೌಡ

    -ಸಿಎಂ ಹಾಗೂ ಕಂದಾಯ ಸಚಿವರಿಗೆ ಪತ್ರ

    ಬೆಂಗಳೂರು: ರಾಮನಗರ ಜಿಲ್ಲಾಡಳಿತ ಮಾಡಿದ ಕಾರ್ಯ ಶ್ಲಾಘನೀಯ. ಬಿಡದಿಯಲ್ಲಿರುವ ಈಗಲ್‍ಟನ್ ರೆಸಾರ್ಟ್ ಒತ್ತುವರಿ ಮಾಡಿಕೊಂಡಿದ್ದ 77 ಎಕರೆ 18 ಗುಂಟೆ ಜಾಗವನ್ನು ಕೋರ್ಟ್ ಆದೇಶದಂತೆ ತೆರವು ಮಾಡಿ ಸರ್ಕಾರದ ವಶಕ್ಕೆ ಪಡೆದುಕೊಳ್ಳಲಾಗಿದೆ. ವಿಶಾಲವಾಗಿರುವ ಈ ನಿವೇಶನ ಕ್ರೀಡಾ ಚಟುವಟಿಕೆಗೆ ಯೋಗ್ಯವಾಗಿದೆ. ಆದ್ದರಿಂದ ಈ ಸ್ಥಳವನ್ನು ಕ್ರೀಡಾ ಸಮುಚ್ಚಯ ನಿರ್ಮಾಣಕ್ಕಾಗಿ ನೀಡಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

    ನಮ್ಮ ರಾಜ್ಯದ ಕ್ರೀಡಾಪಟುಗಳಿಗೆ ಒಲಂಪಿಕ್ಸ್ ಕ್ರೀಡಾಕೂಟ, ಏಷಿಯಾ ಗೇಮ್ಸ್ ಸೇರಿದಂತೆ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ತರಬೇತಿ ನೀಡಲು ವಿಶಾಲ ಪ್ರದೇಶದಲ್ಲಿ ಬೃಹತ್ತಾದ ಕ್ರೀಡಾ ಸಮುಚ್ಚಯ ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ಕ್ರೀಡಾ ಇಲಾಖೆ ಇದಕ್ಕಾಗಿ ವಿಶಾಲ ನಿವೇಶನವನ್ನೂ ಹುಡುಕುತ್ತಿದೆ. ಪ್ರಸ್ತುತ ರಾಮನಗರದ ಬಿಡದಿಯಲ್ಲಿ ಈಗಲ್‍ಟನ್ ರೆಸಾರ್ಟ್ ಒತ್ತುವರಿ ಮಾಡಿಕೊಂಡಿದ್ದ ಸರ್ಕಾರಿ ಗೋಮಾಳ ಒತ್ತುವರಿ ತೆರವು ಮಾಡಿ ಜಿಲ್ಲಾಡಳಿತ ವಶಕ್ಕೆ ಪಡೆದುಕೊಂಡಿದೆ. ಗಾಲ್ಫ್ ಕೋರ್ಟ್ ಕೂಡ ಈ ಸ್ಥಳದಲ್ಲಿದೆ. ಸಮತಟ್ಟಾಗಿರುವ ಈ ವಿಶಾಲ ಪ್ರದೇಶ ಕ್ರೀಡಾ ಸಮುಚ್ಚಯ ನಿರ್ಮಾಣಕ್ಕೆ ಯೋಗ್ಯವಾಗಿದೆ. ಬೆಂಗಳೂರಿಗೂ ಈ ಪ್ರದೇಶ ಸಮೀಪದಲ್ಲಿದೆ. ಆದ್ದರಿಂದ 77 ಎಕರೆ 18 ಗುಂಟೆ ಈ ಪ್ರದೇಶವನ್ನು ಕ್ರೀಡಾ ಇಲಾಖೆಗೆ ಹಸ್ತಾಂತರಿಸಿ ಎಂದು ನಾರಾಯಣಗೌಡ ಅವರು ಬಸವರಾಜ ಬೊಮ್ಮಾಯಿ ಹಾಗೂ ಆರ್.ಅಶೋಕ್ ಅವರಿಗೆ ಪತ್ರದ ಮೂಲಕ ಬೇಡಿಕೆ ಇಟ್ಟಿದ್ದಾರೆ. ಇದನ್ನೂ ಓದಿ: ಬಾಳೆಎಲೆಯಲ್ಲಿ ಮೂಡಿದ ಮೋದಿ ಚಿತ್ರ

    ಪ್ರಸ್ತುತ ಬೆಂಗಳೂರಿನ ಕಂಠೀರವ ಕ್ರೀಡಾಂಗಣವನ್ನು ಆಧುನೀಕರಣ ಮಾಡಲಾಗುತ್ತಿದೆ. ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಕ್ರೀಡಾಂಗಣ ಉನ್ನತೀಕರಿಸಲಾಗುತ್ತಿದೆ. ಆದರೆ ಬೆಂಗಳೂರಿಗೆ ಅತ್ಯಂತ ಸಮೀಪವಿರುವ ಇಷ್ಟೊಂದು ವಿಶಾಲ ಪ್ರದೇಶದಲ್ಲಿ ಬೃಹತ್ತಾದ ಕ್ರೀಡಾ ಸಮುಚ್ಚಯ ನಿರ್ಮಿಸಿದರೆ ಕ್ರೀಡಾಪಟುಗಳಿಗೆ ಹೆಚ್ಚು ಅನುಕೂಲವಾಗಲಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣವೂ ಸಮೀಪದಲ್ಲೇ ಇದೆ. ಬೆಂಗಳೂರು ಮೈಸೂರು ನಡುವೆ ವಿಶಾಲ ರಸ್ತೆಯೂ ನಿರ್ಮಾಣವಾಗುತ್ತಿದೆ. ಇದರಿಂದಾಗಿ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟ ಆಯೋಜಿಸಲು ಈ ಸ್ಥಳ ಪ್ರಶಸ್ತವಾಗಲಿದೆ. ಆದ್ದರಿಂದ ರಾಮನಗರದ ಬಿಡದಿಯಲ್ಲಿ ಈಗಲ್‍ಟನ್ ರೆಸಾರ್ಟ್ ನಿಂದ ಒತ್ತುವರಿ ತೆರವು ಮಾಡಿರುವ ಸರ್ಕಾರಿ ಗೋಮಾಳವನ್ನು ಕ್ರೀಡಾ ಇಲಾಖೆಗೆ ಹಸ್ತಾಂತರಿಸಿ ಕ್ರೀಡೆಗೆ ಪ್ರೋತ್ಸಾಹಿಸಿ ಎಂದು ನಾರಾಯಣಗೌಡ ಅವರು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ವಿಜಯೇಂದ್ರ ಯಾವುದೇ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ: ಬಿಎಸ್‍ವೈ

  • ಬೆಳ್ಳಿ ಹುಡುಗ ಸುಹಾಸ್‍ಗೆ ಕುಟುಂಬಸ್ಥರ ಅಭಿನಂದನೆ

    ಬೆಳ್ಳಿ ಹುಡುಗ ಸುಹಾಸ್‍ಗೆ ಕುಟುಂಬಸ್ಥರ ಅಭಿನಂದನೆ

    ಬೆಂಗಳೂರು: ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ತಂದು ಕೊಟ್ಟ ಐಎಎಸ್ ಅಧಿಕಾರಿಯ ಸಾಧನೆಗೆ ಕುಟುಂಬದವರು ಅಭಿನಂದಿಸಿ ಭಾವುಕರಾಗಿದ್ದಾರೆ.

    ಟೋಕಿಯೋದಲ್ಲಿ ನಡೆಯುತ್ತಿರೋ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಇಂದು ಮತ್ತೊಂದು ಬೆಳ್ಳಿ ಪದಕ ಸಿಕ್ಕಿದೆ. ಈ ಬೆಳ್ಳಿ ಪದಕವನ್ನು ನಮ್ಮ ಕರ್ನಾಟಕದ ಹಾಸನ ಮೂಲದ ಸುಹಾಸ್ ಯತಿರಾಜ್ ತಂದುಕೊಟ್ಟಿದ್ದು, ಕನ್ನಡಿಗರಿಗೆ ಹೆಮ್ಮೆಯ ವಿಚಾರವಾಗಿದೆ. ಇದನ್ನೂ ಓದಿ: ದೂಡಾದಲ್ಲಿ ಅರ್ಜಿ ಹಾಕೋಕೆ 4ರಿಂದ 5 ಸಾವಿರ ಕೊಡ್ಬೇಕಂತೆ..!

    ಐಎಎಸ್ ಅಧಿಕಾರಿ!:ಸುಹಾಸ್ ಯತಿರಾಜ್ ಅವರು ಐಎಎಸ್ ಅಧಿಕಾರಿ ಕೂಡ ಆಗಿದ್ದಾರೆ. ನೋಯ್ಡಾದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಡಳಿತಾಧಿಕಾರಿಯಾಗಿ ಸುಹಾಸ್ ಕಾರ್ಯ ನಿರ್ವಹಿಸುತ್ತಿದ್ದಾರೆ.

    ಸುಹಾಸ್ ಪ್ಯಾರಾಲಿಂಪಿಕ್ಸ್ ಗೇಮ್ಸ್‍ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ವಿಶೇಷ ಸಾಧನೆ ಮಾಡಿದ್ದು, ಪ್ಯಾರಾಲಿಂಪಿಕ್ ಪದಕ ಗೆದ್ದ ಮೊದಲ ಐಎಎಸ್ ಅಧಿಕಾರಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದನ್ನೂ ಓದಿ:ಮಾಜಿ ಸೈನಿಕನಿಗೆ ಅಪಮಾನ – ರಾಷ್ಟ್ರಧ್ವಜ ಹಿಡಿದು ಮಾಜಿ ಸೈನಿಕರಿಂದ ಟೋಲ್ ಗೆ ಮುತ್ತಿಗೆ

    ಪುರುಷರ ಸಿಂಗಲ್ಸ್ ಎಸ್‍ಎಲ್ 4 ನಲ್ಲಿ 21-15, 21-15-21 ರಲ್ಲಿ ಅಗ್ರ ಶ್ರೇಯಾಂಕಿತ ಮತ್ತು ವಿಶ್ವ ಚಾಂಪಿಯನ್ ಫ್ರಾನ್ಸ್‍ನ ಲ್ಯೂಕಾಸ್ ಮಜೂರ್ ವಿರುದ್ಧ ಸೋತು ಬೆಳ್ಳಿ ಪದಕ ಪಡೆದಿದ್ದಾರೆ.

    ಸುಹಾಸ್ ಬೆಳ್ಳಿ ಪದಕ ಪಡೆಯುತ್ತಿದ್ದಂತೆ ಅವರ ಕುಟುಂಬದವರಲ್ಲಿ ಸಂಭ್ರಮ ಮನೆ ಮಾಡಿತ್ತು. ಅಣ್ಣನ ಸಾಧನೆ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ತಮ್ಮ ಶರತ್ ಯತಿರಾಜ್ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಜೊತೆಗೆ ಸುಹಾಸ್ ಯತಿರಾಜ್ ನಾದಿನಿ ಸಂಜನಾ ಕೂಡ ತಮ್ಮ ಭಾವನ ಸಾಧನೆಯನ್ನು ಹೊಗಳಿ ನಾವೆಲ್ಲರೂ ಹೆಮ್ಮೆ ಪಡುವಂತೆ ಮಾಡಿದ್ದಾರೆ ಎಂದರು. ಇದನ್ನೂ ಓದಿ:ಆತ್ಮಹತ್ಯೆಗೆ ಮುಂದಾಗಿದ್ದ ವೃದ್ಧೆಯನ್ನು ರಕ್ಷಿಸಿದ ಯುವಕರು