Tag: ಕ್ರೀಡೆ

  • ಯುವ ಕ್ರೀಡಾಪಟುಗಳು ಮೇಜರ್ ಧ್ಯಾನ್ ಚಂದ್ ಅವರ ಕೆಚ್ಚನ್ನು ಬೆಳೆಸಿಕೊಳ್ಳಬೇಕು: ಡಾ. ನಾರಾಯಣಗೌಡ

    ಯುವ ಕ್ರೀಡಾಪಟುಗಳು ಮೇಜರ್ ಧ್ಯಾನ್ ಚಂದ್ ಅವರ ಕೆಚ್ಚನ್ನು ಬೆಳೆಸಿಕೊಳ್ಳಬೇಕು: ಡಾ. ನಾರಾಯಣಗೌಡ

    ಬೆಂಗಳೂರು: ಮೇಜರ್ ಧ್ಯಾನ್ ಚಂದ್ ಅವರು ಕ್ರೀಡಾಪಟುಗಳಿಗೆ ಸ್ಪೂರ್ತಿ. ರಾತ್ರಿ ಚಂದ್ರನ ಬೆಳಕಿನಲ್ಲಿಯೂ ಕ್ರೀಡಾಭ್ಯಾಸ ಮಾಡುತ್ತಿದ್ದ ಕಾರಣ ಧ್ಯಾನ್ ಸಿಂಗ್ ಅವರು ಮುಂದೆ ಧ್ಯಾನ್ ಚಂದ್ ಎಂದೇ ಪ್ರಸಿದ್ಧಿಯಾದರು. ಅವರಂತೆ ಪ್ರತಿಯೊಬ್ಬ ಕ್ರೀಡಾಪಟುಗಳು ಶ್ರದ್ಧೆಯಿಂದ ಕ್ರೀಡಾಭ್ಯಾಸ ಮಾಡಬೇಕು ಎಂದು ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅಭಿಪ್ರಾಯಪಟ್ಟರು.

    ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಸತತ ಮೂರು ಒಲಿಂಪಿಕ್ಸ್ ನಲ್ಲಿ ಪದಕ ಗಳಿಸಿದ ಭಾರತದ ಹಾಕಿ ತಂಡದ ಭಾಗವಾಗಿದ್ದರು. ಅವರ ಹೆಸರಿನಲ್ಲಿ ಪ್ರತಿ ವರ್ಷ ಕ್ರೀಡಾ ದಿನವನ್ನು ಆಚರಿಸಲಾಗುತ್ತಿದೆ. ಖೇಲ್ ರತ್ನ ಪ್ರಶಸ್ತಿಯನ್ನು ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರುನಾಕರಣ ಮಾಡಿ ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನಿಂದ ಪ್ರಶಸ್ತಿ ನೀಡುವ ಮೂಲಕ ಧ್ಯಾನ್ ಚಂದ್ ಅವರ ಸಾಧನೆಗೆ ಹೆಚ್ಚಿನ ಗೌರವ ನೀಡಿದೆ ಎಂದರು. ಇದನ್ನೂ ಓದಿ: ರಾಜೀವ್ ಗಾಂಧಿ ಖೇಲ್ ರತ್ನ ಅಲ್ಲ ಇನ್ನು ಮುಂದೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಪ್ರಶಸ್ತಿ

    ಬೆಂಗಳೂರಿನ ಅಕ್ಕಿತಿಮ್ಮಯ್ಯ ಹಾಕಿ ಕ್ರೀಡಾಂಗಣದಲ್ಲಿ ಕ್ರೀಡಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಸಚಿವರು, ಕ್ರೀಡೆಗೆ ರಾಜ್ಯ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಖೇಲೋ ಇಂಡಿಯಾ ಕೇಂದ್ರ ಸ್ಥಾಪಿಸುತ್ತಿದ್ದೇವೆ. ಪ್ರತಿ ತಾಲೂಕಿನಲ್ಲೂ ಕ್ರೀಡಾಂಗಣ ನಿರ್ಮಿಸುತ್ತಿದ್ದೇವೆ. ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪಿಸುತ್ತಿದ್ದೇವೆ. ಆ ಮೂಲಕ ಕ್ರೀಡೆಗೆ, ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲ ಸೌಲಭ್ಯ ನೀಡುತ್ತಿದ್ದೇವೆ. ಮುಂದಿನ ಒಲಿಂಪಿಕ್ಸ್‌ಗೆ ರಾಜ್ಯದಿಂದ 75 ಕ್ರೀಡಾಪಟುಗಳನ್ನು ಕಳುಹಿಸುವ ಗುರಿ ಹೊಂದಿದ್ದೇವೆ. ಅದಕ್ಕಾಗಿ ಅಮೃತ ಕ್ರೀಡಾ ದತ್ತು ಯೋಜನೆ ಜಾರಿಗೆ ತಂದಿದ್ದೇವೆ. ಶಾಲೆಗಳಲ್ಲಿ ಕಡ್ಡಾಯವಾಗಿ ಪ್ರತಿ ದಿನ ಒಂದು ಗಂಟೆ ಕ್ರೀಡೆಗೆ ಮೀಸಲಿಡುವಂತೆ ಶಿಕ್ಷಣ ಸಚಿವರಿಗೆ ಪತ್ರ ಬರೆಯಲಾಗಿದೆ. ಕೇಂದ್ರ ಸರ್ಕಾರ ಸಹ ಹಿಂದೆಂದೂ ನೀಡದಂತಹ ಪ್ರೋತ್ಸಾಹವನ್ನು ಕ್ರೀಡೆಗೆ ನೀಡುತ್ತಿದೆ. ಕ್ರೀಡಾಪಟುಗಳು ಸತತ ಅಭ್ಯಾಸ ನಡೆಸಿ, ಪದಕ ಗಳಿಸುವತ್ತ ಗಮನ ಹರಿಸಲಿ. ಎಲ್ಲಾ ರೀತಿಯ ಪ್ರೋತ್ಸಾಹ ಸರ್ಕಾರ ನೀಡುತ್ತದೆ ಎಂದು ಮಾಹಿತಿ ಹಂಚಿಕೊಂಡರು.

    ಕಂಠೀರವ ಕ್ರೀಡಾಂಗಣದಲ್ಲಿ ಕ್ರೀಡಾ ಪ್ರಾಧಿಕಾರ ಹಾಗೂ ವಿವಿಧ ಕ್ರೀಡಾ ಸಂಸ್ಥೆಗಳು ಆಯೋಜಿಸಿದ ಕ್ರೀಡಾ ದಿನಾಚರಣೆಯಲ್ಲಿ ಸಚಿವರು ಪಾಲ್ಗೊಂಡರು. ವಿವಿಧ ವಯೋಮಾನದವರಿಗೆ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಸಚಿವರು ಪದಕ ಪ್ರದಾನ ಮಾಡಿದರು. ಕ್ರೀಡಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಹಾಕಿ ಪಂದ್ಯಾವಳಿಯನ್ನು ಸಚಿವರು ಉದ್ಘಾಟಿಸಿದರು. ಇದೇ ವೇಳೆ ಭಾರತೀಯ ಮಹಿಳಾ ಹಾಕಿ ತಂಡದ ತರಬೇತುದಾರರಾಗಿರುವ ಅಂಕಿತ ಅವರನ್ನು ಸನ್ಮಾನಿಸಲಾಯಿತು. ಇದನ್ನೂ ಓದಿ: ಹಾರ್ದಿಕ್ ಪಾಂಡ್ಯ ಧರಿಸಿದ ವಾಚ್ ಬೆಲೆ ಕೇಳಿ ದಂಗಾದ ಅಭಿಮಾನಿಗಳು

    ರಾಜ್ಯ ಒಲಿಂಪಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ಗೋವಿಂದರಾಜು, ಕ್ರೀಡಾ ಪ್ರಾಧಿಕಾರದ ಪ್ರಮುಖರು, ಕ್ರೀಡಾ ಇಲಾಖೆ ಆಯುಕ್ತ ವೆಂಕಟೇಶ್, ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ತೃಪ್ತಿ ಮುರುಗುಂದೆ ಮತ್ತಿತರ ಪ್ರಮುಖರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

  • ಐಪಿಎಲ್‍ಗೆ ವಿಶೇಷ ನಿಯಮ ಜಾರಿ ಮಾಡಿದ ಬಿಸಿಸಿಐ

    ಐಪಿಎಲ್‍ಗೆ ವಿಶೇಷ ನಿಯಮ ಜಾರಿ ಮಾಡಿದ ಬಿಸಿಸಿಐ

    ಮುಂಬೈ: ಯುಎಇಯಲ್ಲಿ ನಡೆಯಲಿರುವ ಐಪಿಎಲ್‍ನಲ್ಲಿ ಆಟಗಾರರ ಸುರಕ್ಷತೆಯ ಸಲುವಾಗಿ ಹೊಸ ನಿಯಮಗಳನ್ನು ಬಿಸಿಸಿಐ ಜಾರಿ ಮಾಡಿದೆ.

    ಚೆಂಡು ಸ್ಟ್ಯಾಂಡ್ ಅಥವಾ ಕ್ರೀಡಾಂಗಣದಿಂದ ಹೊರಗೆ ಹೋದರೆ ನಾಲ್ಕನೇ ಅಂಪೈರ್ ಅವರು ಲೈಬ್ರೆರಿಯಿಂದ ಬದಲಿ ಚೆಂಡು ನೀಡುತ್ತಾರೆ. ಆ ಚೆಂಡು ಮರಳಿದಾಗ ಆಲ್ಕೋಹಾಲ್ ಆಧಾರಿತ ಒರೆಸುವ ಬಟ್ಟೆ ಅಥವಾ ಅಥವಾ ಯುವಿ-ಸಿ(Ultraviolet germicidal irradiation -UVGI)  ಮೂಲಕ ನಾಲ್ಕನೇ ಅಂಪೈರ್ ಬಾಲನ್ನು ಸ್ವಚ್ಛಗೊಳಿಸಿ ಮತ್ತೆ ಲೈಬ್ರರಿಯಲ್ಲಿ ಇಡುತ್ತಾರೆ ಎಂದು ತನ್ನ ಸುತ್ತೋಲೆಯಲ್ಲಿ ಬಿಸಿಸಿಐ ತಿಳಿಸಿದೆ. ಇದನ್ನೂ ಓದಿ : ರೈತನ ಮಗ 23 ವರ್ಷದ ನೀರಜ್ ಚೋಪ್ರಾ ಚಿನ್ನದ ಸಾಧನೆ

    ಕ್ರಿಕೆಟ್ ಚೆಂಡುಗಳ ಮೂಲಕ ಕೊರೊನಾ ಹರಡುವ ಅಪಾಯವು ತುಂಬಾ ಕಡಿಮೆ ಇದೆ. ಆದರೂ ಆಟಗಾರರ ಆರೋಗ್ಯದ ದೃಷ್ಟಿಯಿಂದ ಮೇ ತಿಂಗಳಿನಲ್ಲಿ ಸ್ಥಗಿತಗೊಂಡ ಟೂರ್ನಿಯನ್ನು ಪೂರ್ಣಗೊಳಿಸಲು ಈ ನಿಯಮವನ್ನು ಜಾರಿ ಮಾಡಲಾಗಿದೆ ಎಂದು ವರದಿಯಾಗಿದೆ.

    ಈ ವೇಳೆ ಪ್ರೇಕ್ಷಕರಿಗೆ ಪಂದ್ಯ ನೋಡಲು ಅವಕಾಶ ನೀಡಲಾಗಿದ್ದರೂ ಕ್ರೀಡಾಂಗಣದ ಮೇಲಿನ ಭಾಗದಲ್ಲಿ ಮಾತ್ರ ಕುಳಿತುಕೊಳ್ಳಲು ಅವಕಾಶ ನೀಡಲಾಗಿದೆ.

    ವಾಶ್‍ರೂಂ ಹೊರತುಪಡಿಸಿ ಬೇರೆ ಯಾವುದೇ ಸ್ಥಳದಲ್ಲಿ ಆಟಗಾರರು ಉಗುಳುವುದುನ್ನು ನಿಷೇಧಿಸಲಾಗಿದೆ. ಆಟಗಾರರು ನಿಗದಿ ಪಡಿಸಿದ ಬಯೋ ಬಬಲ್ ಬಿಟ್ಟು ಬೇರೆ ಪ್ರದೇಶಗಳಾದ ರೆಸ್ಟೋರೆಂಟ್, ಕೆಫೆ, ಜಿಮ್‍ಗೆ ಹೋಗುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

    ಎಲ್ಲ ಆಟಗಾರರು ನೀರಿನ ಬಾಟಲಿಗಳನ್ನು ತೆಗೆದುಕೊಂಡು ಹೋಗಬೇಕು ಮತ್ತು ಅವರಿಗೆ ನೀಡಲಾದ ಬಾಟಲಿ ಹೊರತು ಪಡಿಸಿ ಬೇರೆಯವರು ಬಳಕೆ ಮಾಡುತ್ತಿರುವ ಬಾಟಲಿಯನ್ನು ಬಳಸುವಂತಿಲ್ಲ ಎಂದು ಸೂಚಿಸಲಾಗಿದೆ.

  • ಒಬ್ಬಳೇ ಮಹಿಳಾ ಅಥ್ಲೀಟ್, ಪುರುಷರೊಂದಿಗೆ ಕ್ರೀಡಾಕೂಟಕ್ಕೆ ಕಳಿಸಲ್ಲ

    ಒಬ್ಬಳೇ ಮಹಿಳಾ ಅಥ್ಲೀಟ್, ಪುರುಷರೊಂದಿಗೆ ಕ್ರೀಡಾಕೂಟಕ್ಕೆ ಕಳಿಸಲ್ಲ

    ಚೆನ್ನೈ: ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ಕಡೈಯಾಲುಮೂಡು ಪಟ್ಟಣದ ಪ್ರತಿಭಾನ್ವಿತ ಅಥ್ಲೀಟ್, 18 ವರ್ಷದ ಸಮೀಹಾ ಬಾರ್ವಿನ್ ಅವರನ್ನು ವಿಚಿತ್ರ ಕಾರಣಕ್ಕೆ ಭಾರತದ ಅಥ್ಲೆಟಿಕ್ಸ್ ತಂಡದಿಂದ ಕೈಬಿಡಲಾಗಿದೆ.

    ಆ.23ರಿಂದ ಪೋಲೆಂಡ್‍ನಲ್ಲಿ 4ನೇ ವಿಶ್ವ ಕಿವುಡರ ಅಥ್ಲೆಟಿಕ್ಸ್ ನಡೆಯಲಿದೆ. 4ನೇ ವಿಶ್ವ ಕಿವುಡರ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಭಾಗವಹಿಸಲಿರುವ ತಂಡದ ಏಕೈಕ ವನಿತಾ ಅಥ್ಲೀಟ್ ಎಂಬ ಕಾರಣಕ್ಕೆ ಅಥ್ಲೆಟಿಕ್ಸ್ ತಂಡದಿಂದ ಕೈಬಿಡಲು ಕಾರಣವಾಗಿದೆ. ತಂಡಕ್ಕೆ ಐದು ಮಂದಿ ಪುರುಷ ಅಥ್ಲೀಟ್‍ಗಳೂ ಆಯ್ಕೆಯಾಗಿದ್ದಾರೆ. ಆದರೆ ಇವರ ಜೊತೆಗೆ ಒಬ್ಬಳೆ ಮಹಿಳಾ ಕ್ರೀಡಾಪಟುವನ್ನು ಕಳುಹಿಸಲು ಸಾಧ್ಯವಿಲ್ಲ ಎಂದು ಭಾರತ ಕ್ರೀಡಾ ಪ್ರಾಧಿಕಾರದ ಅಧಿಕಾರಿಗಳು ಹೇಳಿದ್ದಾರೆ.

    ಅರ್ಹತಾ ಪರೀಕ್ಷೆಯಲ್ಲಿ ಯಶಸ್ವಿಯಾದ ಏಕೈಕ ಮಹಿಳಾ ಕ್ರೀಡಾಳಾಗಿರುವ ಸಮೀಹಾ, ಲಾಂಗ್ ಜಂಪ್ ಮತ್ತು 100 ಮೀ. ರೇಸ್‍ನಲ್ಲಿ ಪ್ರತಿನಿಧಿಸಬೇಕಿತ್ತು. 2017ರ ಜಾರ್ಖಂಡ್ನಲ್ಲಿ ನಡೆದ ರಾಷ್ಟ್ರಮಟ್ಟದ ಚಾಂಪಿಯನ್‍ಶಿಪ್, 2018 ಮತ್ತು 2019ರಲ್ಲಿ ನಡೆದ ಕ್ರೀಡಾಕೂಟದಲ್ಲಿ ಸಮೀಹಾ ಚಿನ್ನದ ಪದಕವನ್ನು ಪಡೆದುಕೊಂಡಿದ್ದರು. ಇದನ್ನೂ ಓದಿ: ಕೆಜಿಎಫ್ ನಟಿ ಮೌನಿ ರಾಯ್ ಹಾಟ್ ಲುಕ್‍ಗೆ ನೆಟ್ಟಿಗರು ಫಿದಾ

    ಸಮೀಹಾ ಬಾರ್ವಿನ್ ಜೊತೆಗೆ ಒಬ್ಬ ಸಹಾಯಕರನ್ನು ಕಳುಹಿಸಲು ಹಣದ ಕೊರತೆಯಿದೆ. ಸಣ್ಣ ಕಾಫಿ ಶಾಪ್ ನಡೆಸುತ್ತಿರುವ ಸಮೀಹಾ ಕುಟುಂಬ ತೀವ್ರ ಆರ್ಥಿಕ ಸಮಸ್ಯೆಯಲ್ಲಿದೆ. ಆಕೆಯ ಪ್ರವಾಸದ ಖರ್ಚನ್ನು ಕುಟುಂಬವೇ ಭರಿಸುವುದು ಕಷ್ಟ ಎಂದು ಕನ್ಯಾಕುಮಾರಿ ಸಂಸದ ವಿ. ವಿಜಯ್‍ಕುಮಾರ್ ಅವರು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರಿಗೆ ಜುಲೈ 26ರಂದು ಪತ್ರ ಬರೆದಿದ್ದರು. ಅವರಿಂದ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಭಾರತದ ತಂಡ ಆ. 14ರಂದು ಪೋಲೆಂಡ್‍ಗೆ ತೆರಳಲಿದೆ.

  • ಚಿನ್ನ ಗೆದ್ದ ಖುಷಿಗೆ ಅಂಗಿ ಹರಿದುಕೊಂಡು ಸಂಭ್ರಮ ಪಟ್ಟ ಕ್ರೀಡಾಪಟು

    ಚಿನ್ನ ಗೆದ್ದ ಖುಷಿಗೆ ಅಂಗಿ ಹರಿದುಕೊಂಡು ಸಂಭ್ರಮ ಪಟ್ಟ ಕ್ರೀಡಾಪಟು

    ಟೋಕಿಯೋ: ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಖುಷಿಗೆ ಕ್ರೀಡಾಪಟು ಓರ್ವ ತನ್ನ ಅಂಗಿಯನ್ನು ಹರಿದುಕೊಂಡು ಸಂಭ್ರಮ ಪಟ್ಟು ಇದೀಗ ವೈರಲ್ ಆಗುತ್ತಿದ್ದಾರೆ.

    ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವುದೆಂದರೆ ಸುಲಭದ ಮಾತಲ್ಲ. ಹಲವು ವರ್ಷಗಳ ಶ್ರಮ ಅಲ್ಲಿರುತ್ತದೆ. ಪುರುಷರ ವಿಭಾಗದ 400 ಮೀ. ಅಡೆತಡೆ ಓಟದಲ್ಲಿ ನಾರ್ವೇಯ ಕಾರ್ಸ್‍ಟೆನ್ ವಾರ್‍ಹೋಂ ಸ್ಪರ್ಧಿಸಿ ಕೇವಲ 45.94 ಗುರಿ ತಲುಪಿ ಚಿನ್ನದ ಪದಕದೊಂದಿಗೆ ಈ ಹಿಂದಿನ ವಿಶ್ವದಾಖಲೆಯನ್ನು ಮುರಿದರು. ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್​ನ ಚಿನ್ನದ ಮೀನು ಡ್ರೆಸ್ಸೆಲ್

    25 ವರ್ಷ ಪ್ರಾಯದ ಕಾರ್ಸ್‍ಟೆನ್ ವಾರ್‍ಹೋಂ ಒಲಿಂಪಿಕ್ಸ್‌ನಲ್ಲಿ ತನ್ನ ನೈಜ ಪ್ರದರ್ಶನ ತೋರಿ ಗುರಿಮುಟ್ಟುತಿದ್ದಂತೆ ತಾನು ಧರಿಸಿದ್ದ ಜೆರ್ಸಿಯನ್ನು ಹರಿದುಕೊಂಡು ಸಂಭ್ರಮ ಪಟ್ಟರು. ಈ ಸಂಭ್ರಮಾಚರಣೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ ತೊಡಗಿದೆ.

    400 ಮೀಟರ್ ಅಡೆತಡ ಓಟದಲ್ಲಿ ಅಮೆರಿಕದ ರೈ ಬೆಂಜಮಿನ್ 46.17 ಸೆಕೆಂಡುಗಳಲ್ಲಿ ಗುರಿಮುಟ್ಟಿ ಬೆಳ್ಳಿ ಪದಕ ಗೆದ್ದರೆ, ಬ್ರೆಜಿಲ್‍ನ ಅಲಿಸನ್ ಡಾಸ್ ಸ್ಯಾಂಟೋಸ್ 46.72 ಸೆಕೆಂಡುಗಳಲ್ಲಿ ಗುರಿ ಮುಟ್ಟಿ ಕಂಚಿನ ಪದಕ ಗೆದ್ದರು.

  • ಟೋಕಿಯೋ ಒಲಿಂಪಿಕ್ಸ್‌ಗೆ ರೈಲ್ವೇ ಕಲೆಕ್ಟರ್ ಆಯ್ಕೆ

    ಟೋಕಿಯೋ ಒಲಿಂಪಿಕ್ಸ್‌ಗೆ ರೈಲ್ವೇ ಕಲೆಕ್ಟರ್ ಆಯ್ಕೆ

    ಚೆನ್ನೈ: ಟೋಕಿಯೋ ಒಲಿಂಪಿಕ್ಸ್‌ಗೆ ದಕ್ಷಿಣ ರೈಲ್ವೇ ಟಿಕೆಟ್ ಕಲೆಕ್ಟರ್ ರೇವತಿ ಆಯ್ಕೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಜುಲೈ 23ರಿಂದ ಆರಂಭವಾಗಲಿರುವ ಟೋಕಿಯೋ ಒಲಿಂಪಿಕ್ಸ್‌ಗೆ ತಮಿಳುನಾಡಿನ ಮಧುರೈ ಮೂಲದ ರೇವತಿ ವೀರಮಣೆ ಆಯ್ಕೆಯಾಗಿದ್ದಾರೆ. ಸದ್ಯ ರೇವತಿ ದಕ್ಷಿಣ ರೈಲ್ವೇ ಟಿಕೆಟ್ ಕಲೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಒಲಿಂಪಿಕ್ಸ್‌ ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಇದನ್ನೂ ಓದಿ:  ಅಂದು ಬೆಸ್ಟ್ ಫ್ರೆಂಡ್ ಹೆಂಡ್ತಿಯಾದ್ರು, ಇಂದು ಪತ್ನಿಯೇ ಬೆಸ್ಟ್ ಫ್ರೆಂಡ್: ರಮೇಶ್

    ಇದಕ್ಕೂ ಮೊದಲು 1988 ರಲ್ಲಿ ದಕ್ಷಿಣ ಕೊರಿಯಾದ ಸಿಯೋಲ್‍ನಲ್ಲಿ ನಡೆದ ಒಲಿಂಪಿಕ್ಸ್‍ನಲ್ಲಿ ಮಧುರೈ ಅಥ್ಲೀಟ್ ತಿರುಗ್ನಾನದುರೈ 4100 ಮೀಟರ್ ಪುರುಷರ ವಿಭಾಗದಲ್ಲಿ ಭಾಗವಹಿಸಿದ್ದರು. ರೇವತಿ ವೀರಮಣಿ ರಿಲೇಯಲ್ಲಿ ಭಾಗವಹಿಸಿದ್ದಾರೆ ಎಂದು ದಕ್ಷಿಣ ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

    ರೇವತಿಗೆ ಸುಮಾರು ಆರು ವರ್ಷ ವಯಸ್ಸಾಗಿದ್ದಾಗ, ಆಕೆಯ ತಂದೆ ಅನಾರೋಗ್ಯದಿಂದ ನಿಧನರಾದರು ಮತ್ತು ಅವರ ತಾಯಿ ಎಂಟು ತಿಂಗಳ ನಂತರ ನಿಧನರಾದರು. ನಂತರ ರೇವತಿ ಮತ್ತು ಆಕೆಯ ತಂದೆ ರೇಖಾ ಅಜ್ಜಿಯ ಜೊತೆಗೆ ಸಕ್ಕಿಮಂಗಲಂನಲ್ಲಿ ವಾಸವಾಗಿದ್ದಾರೆ.

    ರೇವತಿ ಶಾಲಾ ದಿನಗಳಲ್ಲಿ ಅಥ್ಲೆಟಿಕ್ಸ್ ಬಗ್ಗೆ ಆಸಕ್ತಿ ವಹಿಸಿದಳು ಮತ್ತು ತನ್ನ ಹಾಸ್ಟೆಲ್ ವಾರ್ಡನ್‍ಗಳ ಪ್ರೇರಣೆಯಿಂದ ರೇಸ್ ಕೋರ್ಸ್ ಕ್ರೀಡಾಂಗಣದಲ್ಲಿ ಅಭ್ಯಾಸ ಮಾಡಲು ಪ್ರಾರಂಭಿಸಿದಳು. 2015 ರಲ್ಲಿ ಪಿಯುಸಿಯಲ್ಲಿದ್ದಾಗ ರೇವತಿ ಪ್ರತಿಭೆಯನ್ನು ಗುರುತಿಸಿದೆ. ನಾನು ಒಬ್ಬ ಕ್ರೀಡಾಪಟುವನ್ನು ದೇಶವನ್ನು ಪ್ರತಿನಿಧಿಸಲು ಒಲಿಂಪಿಕ್ಸ್‌ಗೆ ಕಳುಹಿಸುವ ಗುರಿಯನ್ನು ಹೊಂದಿದ್ದೇನೆ ಎಂದು ರೇವತಿಯ ಕೋಚ್ ಕೆ ಕಣ್ಣನ್ ಅವರು ಹೇಳಿದ್ದಾರೆ.

    ರೇವತಿ ಅವರನ್ನು ದೂರವಾಣಿ ಮೂಲಕ ಅಭಿನಂದಿಸಿದ ವಾಣಿಜ್ಯ ತೆರಿಗೆ ಮತ್ತು ಮಧುರೈ ಪೂರ್ವ ಶಾಸಕ ಪಿ ಮೂರ್ತಿ ಅವರು ಆಕೆಗೆ ಅಗತ್ಯವಿರುವ ಎಲ್ಲ ಬೆಂಬಲವನ್ನು ನೀಡುವುದಾಗಿ ಹೇಳಿದರು. ಹಣಕಾಸು ಸಚಿವ ಮತ್ತು ಮಧುರೈ ಕೇಂದ್ರ ಶಾಸಕ ಪಿಟಿಆರ್ ಪಳನಿವೇಲ್ ತ್ಯಾಗರಾಜನ್ ಮತ್ತು ಮಧುರೈ ಸಂಸದ ಎಸ್.ವೆಂಕಟೇಶನ್ ಟ್ವೀಟ್ ಮಾಡಿ ಕ್ರೀಡಾಪಟುವಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಇದನ್ನೂ ಓದಿ:  ಜು.12 ರಂದು ಯಾರೂ ಮನೆಯ ಬಳಿ ಬರಬೇಡಿ: ಶಿವಣ್ಣ ಮನವಿ

    ಈ ನಡುವೆ ಮತ್ತೊಬ್ಬ ಸ್ಟಾರ್ ಆಟಗಾರ್ತಿ ಅಥ್ಲಿಟ್ ಹಿಮಾದಾಸ್ ಒಲಿಂಪಿಕ್ಸ್‌ ನಿಂದ ಹೊರಗುಳಿದಿದ್ದಾರೆ. ಕಳೆದ ತಿಂಗಳು ನಡೆದಿದ್ದ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ 100 ಮೀಟರ್ ಓಟದ ವೇಳೆ ಹಿಮಾ ದಾಸ್ ಮಂಡಿ ನೋವಿನಿಂದ ಬಳಲಿದ್ದರು. ಈಗ ಗಾಯದ ಸಮಸ್ಯೆಯಿಂದಲೇ ಅವರು ಒಲಿಂಪಿಕ್ಸ್ ಕ್ರೀಡಾಕೂಡದಿಂದ ಹೊರಗೆ ಉಳಿದಿದ್ದಾರೆ.

  • ಅನುದಾನ ಸದ್ಬಳಕೆಯಲ್ಲಿ ತುಮಕೂರು ರಾಜ್ಯದಲ್ಲಿಯೇ ಪ್ರಥಮ – ನಾರಾಯಣಗೌಡ

    ಅನುದಾನ ಸದ್ಬಳಕೆಯಲ್ಲಿ ತುಮಕೂರು ರಾಜ್ಯದಲ್ಲಿಯೇ ಪ್ರಥಮ – ನಾರಾಯಣಗೌಡ

    ತುಮಕೂರು: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಬಳಕೆಯಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಾ.ನಾರಾಯಣಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.

    ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಅನುದಾನ ಬಳಕೆ ವಿಚಾರದಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ. ಕೋವಿಡ್ ನಿಂದ ಲಾಕ್ ಡೌನ್ ಆಗಿದ್ದರೂ ಕೆಲಸ ವೇಗವಾಗಿ ನಡೆದಿದೆ. ಬಹುತೇಕ ಜಿಲ್ಲೆಗಳಲ್ಲಿ ಅನುದಾನ ಬಳಕೆಯೇ ಆಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರುಗಳು ಆಸಕ್ತಿಯಿಂದ ಕೆಲಸ ಮಾಡಿದ್ದಾರೆ ಎಂದು ಪ್ರಶಂಸಿಸಿದರು.

    ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮಹತ್ವ ಏನು ಎನ್ನುವುದನ್ನು ರಾಜ್ಯಕ್ಕೆ ತೋರಿಸಿಕೊಡುತ್ತೇನೆ. ಹಿಂದೆಂದೂ ಆಗಿರದಂತಹ ಅಭಿವೃದ್ಧಿ ಕಾರ್ಯ ಮಾಡುತ್ತೇನೆ. ಪ್ರತಿ ತಾಲೂಕು, ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡುತ್ತೇನೆ. ಅದಕ್ಕಾಗಿಯೆ ಎಲ್ಲ ಜಿಲ್ಲೆಗಳಿಗೆ ತೆರಳಿ ಪರಿಶೀಲನೆ ಮಾಡುತ್ತಿದ್ದೇನೆ. ತುಮಕೂರಿನಲ್ಲಿ ಭವ್ಯವಾದ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಹೈಟೆಕ್ ಆಗಲಿದೆ. ಅಲ್ಲಿ ಕಾಮಗಾರಿ ಆರಂಭವಾದಾಗ ತುಮಕೂರಿನ ಕ್ರೀಡಾಂಗಣವನ್ನು ರಾಜ್ಯಮಟ್ಟದ ಕ್ರೀಡಾ ಚಟುವಟಿಕೆಗೆ ಬಳಸಬೇಕು. ಅಷ್ಟು ವ್ಯವಸ್ಥಿತ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ ಎಂದು ಹೇಳಿದರು. ಕ್ರೀಡಾ ಇಲಾಖೆ ಅಡಿ ಬಾಕಿ ಇರುವ ಕಾಮಗಾರಿಗಳು ಶೀಘ್ರ ಮುಗಿಯಬೇಕು ಎಂದರು.

    ಜಿಲ್ಲೆಯಲ್ಲಿ ಹೊಸ ಬೆಳೆ ಬೆಳೆಯುತ್ತಿರುವ ಮೂಸಂಬಿ, ಡ್ರಾಗನ್ ಫ್ರೂಟ್ ಬಗ್ಗೆ ಮಾಹಿತಿ ಪಡೆದ ಸಚಿವರು, ಬೆಳೆ ವಿಮೆಗೆ ಒತ್ತು ಕೊಡುವಂತೆಯೂ ತಿಳಿಸಿದರು. ಅಡಿಕೆ ಬೆಳೆಯ ಹನಿ ನೀರಾವರಿಗೆ ಸಬ್ಸಿಡಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಮನವಿ ಮಾಡಿದಾಗ, ಈ ಬಗ್ಗೆ ಗಮನ ಹರಿಸಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಹಾಲ್‍ನಲ್ಲಿ ಫುಲ್ ಗ್ಯಾಂಗ್‍ಸ್ಟರ್ಸ್ ಇದ್ದಾಗ ಮಾತ್ರ ಮಾನ್‍ಸ್ಟರ್ ಎಂಟ್ರಿ

    ತುಮಕೂರು ಜಿಲ್ಲೆ ಒಂದು ಕಾಲದಲ್ಲಿ ಕಬಡ್ಡಿ, ಕೊಕ್ಕೋ ಕ್ರೀಡೆಗೆ ಬಹಳ ಹೆಸರುವಾಸಿಯಾಗಿತ್ತು. ಅದರೆ ಜಿಲ್ಲೆಯಲ್ಲಿ ಕ್ರೀಡಾ ಚಟುವಟಿಕೆಯೇ ಇಲ್ಲದಂತಾಗಿದೆ. ಹಾಗಾಗಿ ಕ್ರೀಡಾ ಚಟುವಟಿಕೆಗೆ ಒತ್ತು ಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಅಧಿಕಾರಿಗಳಿಗೆ ನಿರ್ದೇಶಿಸಿದರು. ಅಲ್ಲದೆ ರೈತರು ಮತ್ತು ವರ್ತಕರ ನಡುವೆ ನೇರ ಮಾರುಕಟ್ಟೆ ಒದಗಿಸಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಆನ್ ಲೈನ್ ಆ್ಯಪ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಇದರಿಂದ ರೈತರಿಗೆ ಬಹಳ ಅನುಕೂಲವಾಗಲಿದೆ ಎಂದು ತಿಳಿಸಿದರು.

    ಸಭೆಯಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ವೀರಭದ್ರಯ್ಯ, ಚಿದಾನಂದ ಗೌಡ, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ ಸೇರಿದಂತೆ ಇತರರಿದ್ದರು.

  • ಜಾರಕಿಹೊಳಿ ಶೀಘ್ರ ಆರೋಪ ಮುಕ್ತರಾಗುತ್ತಾರೆ : ನಾರಾಯಣಗೌಡ

    ಜಾರಕಿಹೊಳಿ ಶೀಘ್ರ ಆರೋಪ ಮುಕ್ತರಾಗುತ್ತಾರೆ : ನಾರಾಯಣಗೌಡ

    ಮಡಿಕೇರಿ: ಶಾಸಕ ರಮೇಶ್ ಜಾರಕಿಹೊಳಿ ಅವರ ಮೇಲಿರುವ ಆರೋಪಗಳೆಲ್ಲಾ ಆದಷ್ಟು ಬೇಗ ಆರೋಪ ಮುಕ್ತವಾಗಿ ಅವರು ಸದ್ಯದಲ್ಲೇ ಸಚಿವರಾಗುತ್ತಾರೆ ಎಂದು ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಮಡಿಕೇರಿಯಲ್ಲಿ ಹೇಳಿಕೆ ನೀಡಿದ್ದಾರೆ.

    ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ್ದ ಸಂದರ್ಭ ಮಧ್ಯಮಗಳೊಂದಿಗೆ ಮಾತನಾಡಿದ ನಾರಾಯಣಗೌಡ, ನನ್ನನ್ನು ರಾಜಕೀಯವಾಗಿ ಮುಗಿಸುವುದಕ್ಕಾಗಿ ಕಾಂಗ್ರೆಸ್ ಪಕ್ಷದವರೊಂದಿಗೆ ನಮ್ಮದೇ ಪಕ್ಷದ ಕೆಲವರು ಸೇರಿ ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಅಂತಹ ಯಾವುದೇ ಅಂಶಗಳು ನನ್ನ ಗಮನಕ್ಕೆ ಬಂದಿಲ್ಲ ಎಂದರು.

    ಕೆಳ ದಿನಗಳಲ್ಲಿ ಮತ್ತೆ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಸಿಗಲಿದೆ. ಅವರೊಂದಿಗೆ ಶಾಸಕ ಮುನಿರತ್ನ ಅವರಿಗೂ ಸಚಿವ ಸ್ಥಾನ ಸಿಗಲಿದೆ ಎಂದು ಭರವಸೆ ನೀಡಿದರು. ಬಳಿಕ ಯಡಿಯೂರಪ್ಪ ಅವರು ವಿವಿಧ ಕಾಮಗಾರಿಗಳಲ್ಲಿ 12.5 ಕೋಟಿ ಲಂಚ ಸ್ವೀಕರಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಅಬ್ರಹಾಂ ಅವರು ಎಸಿಬಿ ತನಿಖೆಗೆ ಅವಕಾಶ ನೀಡುವಂತೆ ಕೋರ್ಟಿಗೆ ಹೋಗಿರುವ ವಿಷಯಕ್ಕೆ ಪ್ರತಿಕ್ರಿಯಿಸಿ, ಯಡಿಯೂರಪ್ಪನವರು ಈಗಲ್ಲ, ಹಿಂದಿನಿಂದಲೂ ನನಗೆ ಚೆನ್ನಾಗಿ ಗೊತ್ತು. ಅವರು ನಾವು ಒಂದೇ ಊರಿನವರು. ಅವರು ಅಂತಹ ಕೆಲಸ ಮಾಡಿರುವುದಿಲ್ಲ, ಮಾಡುವುದೂ ಇಲ್ಲ. ಕೋರ್ಟ್‍ಗೆ ಹೋದವರಿಗೆ ಅದು ಗೊತ್ತಾಗುತ್ತದೆ ಎಂದು ನುಡಿದರು.

  • ಒಲಿಂಪಿಕ್ಸ್‌ ಆಯ್ಕೆಯಾಗುವ ಕರ್ನಾಟಕದ ಕ್ರೀಡಾಪಟುಗಳಿಗೆ ತಲಾ ರೂ. 10 ಲಕ್ಷ ಪ್ರೋತ್ಸಾಹಧನ: ಡಾ. ನಾರಾಯಣಗೌಡ

    ಒಲಿಂಪಿಕ್ಸ್‌ ಆಯ್ಕೆಯಾಗುವ ಕರ್ನಾಟಕದ ಕ್ರೀಡಾಪಟುಗಳಿಗೆ ತಲಾ ರೂ. 10 ಲಕ್ಷ ಪ್ರೋತ್ಸಾಹಧನ: ಡಾ. ನಾರಾಯಣಗೌಡ

    ಬೆಂಗಳೂರು: ಟೋಕಿಯೋ ಒಲಿಂಪಿಕ್ಸ್‌ಗೆ ರಾಜ್ಯದ ಐವರು ಕ್ರೀಡಾಪಟುಗಳು ಸಂಭವನೀಯ ಪಟ್ಟಿಯಲ್ಲಿ ಸ್ಥಾನಪಡೆದಿದ್ದು, ಆಯ್ಕೆಯಾಗುವ ಕ್ರೀಡಾಪಟುಗಳಿಗೆ ತಲಾ 10ಲಕ್ಷ ರೂಪಾಯಿ ಪ್ರೋತ್ಸಾಹ ಧನ ಘೋಷಿಸಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಹೇಳಿದ್ದಾರೆ. ಇದನ್ನೂ ಓದಿ:  67ನೇ ವಯಸ್ಸಿನಲ್ಲಿ ಪಿಹೆಚ್‍ಡಿ ಪಡೆದ ವೃದ್ಧೆ

    2020 ರ ಒಲಿಂಪಿಕ್ಸ್ ಕ್ರೀಡಾಕೂಟವು ಜಪಾನ್ ಟೋಕಿಯೋದಲ್ಲಿ ಜುಲೈ 23 ರಿಂದ ಸೆಪ್ಟಂಬರ್ 5ರ ವರೆಗೆ ನಡೆಯಲಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣ ಗೌಡ ಈ ಸಂಬಂಧ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಕ್ರೀಡಾಪಟುಗಳಿಗೆ ಅಗತ್ಯ ನೆರವು ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಮೂಲಭೂತ ಸೌಕರ್ಯದ ಜೊತೆಗೆ ಆರ್ಥಿಕ ಸಹಾಯ ನೀಡುವುದು ಅತ್ಯಗತ್ಯ. ಭಾರತ ಸರ್ಕಾರ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿರುವ ನಮ್ಮ ದೇಶದ ಅರ್ಹ ಕ್ರೀಡಾಪಟುಗಳ ಸಂಭವನೀಯ ಪಟ್ಟಿಯನ್ನು ಸಿದ್ಧಪಡಿಸಿದೆ ಎಂದಿದ್ದಾರೆ.

    ರಾಜ್ಯದ ಈಕ್ವೆಸ್ಟ್ರಿಯನ್ ಕ್ರೀಡಾಪಟು ಒಲಿಂಪಿಕ್ಸ್‌ಗೆ ಆಯ್ಕೆಯಾಗಿದ್ದಾರೆ. ರಾಜ್ಯದ ಇನ್ನೂ ನಾಲ್ವರು ಕ್ರೀಡಾಪಟುಗಳು ಸಂಭವನೀಯ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಹೀಗಾಗಿ ಅವರಿಗೆ ಪ್ರೋತ್ಸಾಹ ಧನ ನೀಡಿ ಬೆಂಬಲಿಸಬೇಕಾಗಿದೆ. ಐವರೂ ಕ್ರೀಡಾಪಟುಗಳು ರಾಜ್ಯದ, ರಾಷ್ಟ್ರದ ಕೀರ್ತಿಪತಾಕೆಯನ್ನು ಜಪಾನ್‍ನ ಟೋಕಿಯೋದಲ್ಲಿ ಹಾರಿಸಲಿ. ಮತ್ತಷ್ಟು ಕಠಿಣ ಶ್ರಮವಹಿಸಿ ಒಲಿಂಪಿಕ್ಸ್ ನಲ್ಲಿ ಪಾಲ್ಗೊಳ್ಳಬೇಕು. ಆದ್ದರಿಂದ ತಲಾ ರೂ. 10 ಲಕ್ಷ ನೀಡಿ ಪ್ರೋತ್ಸಾಹಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಂತೆಯೆ ರಾಜ್ಯ ಸರ್ಕಾರ ಕರ್ನಾಟಕದಕ್ರೀಡಾ ಪ್ರೋತ್ಸಾಹ ಧನ ಘೋಷಿಸಿ ಆದೇಶಿಸಿ ಶುಭಹಾರೈಸಿದ್ದಾರೆ.

    ಸಂಭವನೀಯ ಪಟ್ಟಿಯಲ್ಲಿರುವ ಕ್ರೀಡಾಪಟುಗಳು:
    ಪೌವಾದ್ ಮಿರ್ಜಾ – ಈಕ್ವೆಸ್ಟ್ರಿಯನ್ – ಆಯ್ಕೆಯಾಗಿದ್ದಾರೆ.
    ಎಸ್.ವಿ. ಸುನೀಲ್ – ಹಾಕಿ – ಸಂಭವನೀಯ
    ರೋಹನ್ ಬೋಪಣ್ಣ – ಟೆನ್ನಿಸ್ – ಸಂಭವನೀಯ
    ಶ್ರೀಹರಿ ನಟರಾಜ್ – ಈಜು – ಸಂಭವನೀಯ
    ಕುಮಾರಿ ಅದಿತಿ ಅಶೋಕ್ – ಗಾಲ್ಫ್ -ಸಂಭವನೀಯ

    ಪ್ರತಿಷ್ಕೃತ ಕ್ರೀಡಾಕೂಟದಲ್ಲಿ ಭಾರತ ತಂಡದ ಪರವಾಗಿ ಭಾಗವಹಿಸುವ ಕ್ರೀಡಾಪಟುಗಳಿಗೆ ಪೂರ್ವ ತಯಾರಿ ಮತ್ತು ಬೆಂಬಲದ ದ್ಯೋತಕವಾಗಿ ತಮಿಳುನಾಡು ಮತ್ತು ಮಧ್ಯಪ್ರದೇಶ ರಾಜ್ಯಗಳು ತಲಾ ರೂ.10.00 ಲಕ್ಷ ಪ್ರೋತ್ಸಾಹ ಧನ ನೀಡಿವೆ. ಅದೇ ರೀತಿ ಕರ್ನಾಟಕ ಸಹ ಕ್ರೀಡಾಪಟುಗಳಿಗೆ ನಗದು ನೀಡಲಾಗುತ್ತಿದೆ. ಇದನ್ನೂ ಓದಿ:  ಸಿಎಂಗೆ ರೆಬೆಲ್ ಶಾಸಕ ಯತ್ನಾಳ್ ಮತ್ತೆ ಟಾಂಗ್

    ಪ್ರೋತ್ಸಾಹಧನ ನೀಡುವ ಸಂಬಂಧ ಇತ್ತೀಚೆಗೆ ನಡೆದ ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆಯುಕ್ತ ಡಾ. ಗೋಪಾಲಕೃಷ್ಣ ಹಾಗೂ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

  • ವಿಶ್ವನಾಥ್ ಆನಂದ್‍ಗೆ ಟಫ್ ಫೈಟ್ ಕೊಟ್ಟ ಕಿಚ್ಚ- 6.65 ಲಕ್ಷ ದೇಣಿಗೆ ಸಂಗ್ರಹ

    ವಿಶ್ವನಾಥ್ ಆನಂದ್‍ಗೆ ಟಫ್ ಫೈಟ್ ಕೊಟ್ಟ ಕಿಚ್ಚ- 6.65 ಲಕ್ಷ ದೇಣಿಗೆ ಸಂಗ್ರಹ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್ ಅವರು ಐದು ಬಾರಿ ವಿಶ್ವ ಚೆಸ್ ಚಾಂಪಿಯನ್ ಆಗಿರುವ ವಿಶ್ವನಾಥನ್ ಆನಂದ್ ಅವರಿಗೆ ಚೆಸ್ ಸ್ಪರ್ಧೆಯಲ್ಲಿ ಕಠಿಣ ಸ್ಪರ್ಧೆಯನ್ನೇ ನೀಡಿದ್ದಾರೆ.

    ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್ ನಟನೆಯಲ್ಲಿ ತಮ್ಮದೇ ಅಗಿರುವ ಚಾಪನ್ನು ಮೂಡಿಸಿದ್ದಾರೆ. ಕ್ರಿಕೆಟ್‍ನಲ್ಲೂ ಸೈ ಎನಿಸಿಕೊಂಡಿದ್ದಾರೆ. ಇದೀಗ ಚೆಸ್‍ನಲ್ಲೂ ಘಟಾನುಘಟಿಗೆ ಪೈಪೋಟಿ ನೀಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

    ಕೋವಿಡ್ ಪರಿಹಾರ ನಿಧಿ ಸಂಗ್ರಹಕ್ಕಾಗಿ ಅಕ್ಷಯಪಾತ್ರ ಪ್ರತಿಷ್ಠಾನದ ಸಹಯೋಗದಲ್ಲಿ ಚೆಸ್.ಕಾಮ್ ಭಾನುವಾರ ಆಯೋಜಿಸಿದ್ದ ಚೆಕ್‍ಮೇಟ್ ಕೋವಿಡ್ ಸೆಲೆಬ್ರಿಟಿ ಆವೃತ್ತಿಯಲ್ಲಿ, ನಟ ಸುದೀಪ್, ರಿತೇಷ್ ದೇಶ್‍ಮುಖ್, ಕ್ರಿಕೆಟಿಗ ಯಜುವೇಂದ್ರ ಚಾಹಲ್ ಸೇರಿದಂತೆ ಕೆಲ ಗಣ್ಯರೊಂದಿಗೆ 30 ನಿಮಿಷಗಳ ಟೈಂಔಟ್‍ನಲ್ಲಿ ಏಕಕಾಲದಲ್ಲಿ ವಿಶ್ವನಾಥನ್ ಆನಂದ್ ಚೆಸ್ ಅಡಿದ್ದಾರೆ. ಇದನ್ನೂ ಓದಿ: ವರ್ಲ್ಡ್​ ಚೆಸ್ ಚಾಂಪಿಯನ್ ಜೊತೆಗೆ ಕಿಚ್ಚನ ಆಟ

    ಟೈಂಔಟ್‍ನಲ್ಲಿ ಸುದೀಪ್ ಅವರು ವಿಶ್ವನಾಥನ್ ಆನಂದ್ ಅವರೆದುರು ಸೋತರು. ವಿಶ್ವನಾಥನ್ ಆನಂದ್ ಅವರ ಟೈಮರ್‍ನಲ್ಲಿ 46 ಸೆಕೆಂಡ್‍ಗಳಷ್ಟೇ ಉಳಿದಿತ್ತು. ಆಟದ ಬಳಿಕ ಸ್ಪರ್ಧಿಗಳ ಜೊತೆ ವಿಶ್ವನಾಥನ್ ಆನಂದ್ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಸುದೀಪ್, ನನ್ನ ಹಂತದ ಸ್ಪರ್ಧಿಗಳೊಂದಿಗೆ ಚೆನ್ನಾಗಿ ಆಡುತ್ತೇನೆ. ಇಂತಹ ದಿಗ್ಗಜರ ಜೊತೆ ಆಡುವುದೇ ನಮಗೆ ಸಿಕ್ಕ ದೊಡ್ಡ ಅವಕಾಶ. ಇಲ್ಲಿ ಯಾರು ಗೆಲ್ಲುತ್ತಾರೆ ಸೋಲುತ್ತಾರೆ ಎನ್ನುವುದು ಮುಖ್ಯವಲ್ಲ ಎಂದಿದ್ದಾರೆ.

    ಯಾರು ಹೆಚ್ಚು ಹೊತ್ತು ವಿಶ್ವನಾಥನ್ ಅವರ ವಿರುದ್ಧ ಕಣದಲ್ಲಿ ಇರುತ್ತಾರೆ ಎನ್ನುವುದು ಮುಖ್ಯ. ಆನ್‍ಲೈನ್ ಚೆಸ್ ಬಗ್ಗೆ ನನಗೇ ಯಾವುದೇ ಮಾಹಿತಿ ಇರಲಿಲ್ಲ. ನಮಗೆ ಸೋಲುವ ಭಯವಿರಲಿಲ್ಲ, ಏಕೆಂದರೆ ನಾವು ಆಡುತ್ತಿರುವುದು ವಿಶ್ವನಾಥನ್ ಆನಂದ್ ಅವರ ವಿರುದ್ಧ. ಈ ಅನುಭವ ಜೀವನಪೂರ್ತಿ ಇರಲಿದೆ. ಈ ಆಟ ಕೇವಲ ಮನರಂಜನೆಗಾಗಿ ಆಗಿರಲಿಲ್ಲ. ಒಂದು ಉದ್ದೇಶ ಇದರ ಹಿಂದೆ ಇತ್ತು ಎಂದು ಸುದೀಪ್ ಹೇಳಿದ್ದಾರೆ.

    ಎರಡನೇ ಹಂತದಲ್ಲಿ ವಿಶ್ವನಾಥನ್ ಆನಂದ್ ಬಾಲಿವುಡ್ ನಟ ಅಮೀರ್ ಖಾನ್ ವಿರುದ್ಧವೂ ಆಡಿದರು. ವಿಶ್ವನಾಥನ್ ಆನಂದ್ ಅವರ ಜೀವನದ ಬಗ್ಗೆ ಸಿನಿಮಾ ಆದರೆ ಅದರಲ್ಲಿ ನಟಿಸುತ್ತೀರಾ? ಎನ್ನುವ ಜನರ ಪ್ರಶ್ನೆಗೆ ಉತ್ತರಿಸಿದ ಅಮೀರ್ ಖಾನ್, ಖಂಡಿತವಾಗಿಯೂ..ಇದಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದರು. ಆನ್‍ಲೈನ್‍ನಲ್ಲಿ ನಡೆದ ಈ ಸ್ಪರ್ಧೆಯನ್ನು 20 ಸಾವಿರಕ್ಕೂ ಅಧಿಕ ಜನರು ವೀಕ್ಷಿಸಿದ್ದು, 6.65 ಲಕ್ಷ ದೇಣಿಗೆ ಸಂಗ್ರಹವಾಗಿದೆ.

    ಅಭಿನಯ ಚಕ್ರವರ್ತಿ ಸುದೀಪ್ ಮತ್ತು ಚೆಸ್ ಗ್ರ್ಯಾಂಡ್‍ಮಾಸ್ಟರ್ ವಿಶ್ವನಾಥನ್ ಅವರ ನಡುವೆ ನಡೆದಿರುವ ರೋಚಕ ಆಟವನ್ನು ನೋಡಿ ಅಭಿಮಾನಿಗಳು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ. ಪರದೆ ಮೇಲೆ, ಮೈದಾನದಲ್ಲಿ ಕಿಚ್ಚನ ಖದರ್ ನೋಡಿದ ಅಭಿಮಾನಿಗಳು ಚಿಸ್‍ನಲ್ಲಿ ಕಿಚ್ಚನ ಆಟವನ್ನು ನೋಡಿ ಫಿದಾ ಆಗಿರುವುದು ಖಂಡಿತಾ ಹೌದು.

  • ಪ್ಯಾರಾ ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ ಆಹಾರ ಕಿಟ್ ವಿತರಣೆ

    ಪ್ಯಾರಾ ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ ಆಹಾರ ಕಿಟ್ ವಿತರಣೆ

    ಬೆಂಗಳೂರು: ರಾಜ್ಯ ಮತ್ತು ರಾಷ್ಟ್ರವನ್ನು ಪ್ಯಾರಾ ಒಲಿಂಪಿಕ್ಸ್ ಕ್ರೀಡೆಯಲ್ಲಿ ಪ್ರತಿನಿಧಿಸೋ ವಿಕಲಚೇತನ ಕ್ರೀಡಾಪಟುಗಳಿಗೆ ಲಾಕ್‍ಡೌನ್ ನಿಂದ ಮನೆಯಲ್ಲೇ ಕೂರುವ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಅವರಿಗೆ ಸಂಸ್ಥೆಯೊಂದು ಫುಡ್ ಕಿಟ್ ವಿತರಣೆ ಮಾಡಿ ಮಾನವೀಯತೆ ಮೆರೆದಿದೆ.

    ರಾಜ್ಯ ಸರ್ಕಾರ ನೀಡಬೇಕಾಗಿದ್ದ ಪಿಂಚಿಣಿ ಹಣವನ್ನು ನೀಡಿಲ್ಲ. ರಾಜ್ಯದ ಹೆಸರನ್ನ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಗೊಳಿಸಿರೋ ಇವರಿಗೆ ಪ್ರೋತ್ಸಾಹ ಹಣ ಸಿಕ್ಕಿಲ್ಲ. ಹಣವಿಲ್ಲದೇ ಜೀವನ ನಡೆಸುವುದೇ ದುಸ್ತರವಾಗಿದೆ. ಇತಂಹ ಸಮಯಲ್ಲಿ ವಿಜಯನಗರದ ಮ್ಯಾಟ್ರಿಕ್ಸ್ ಫಿಟ್ನೇಸ್ ಮಾಲೀಕರಾದ ನವೀನ್ ಮತ್ತು ಎನರ್ಜಿಟಿಕ್ ಗ್ರೀನ್ ಸಂಸ್ಥೆಯ ಅನೂಪ ರೆಡ್ಡಿ ಅವ್ರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ಯಾರಾ ಕ್ರೀಡಾಪಟುಗಳಿಗೆ ಆಹಾರ ಕಿಟ್ ವಿತರಣೆ ಮಾಡಿದ್ದಾರೆ. ಇದನ್ನೂ ಓದಿ:  ಚಾರ್ಮಾಡಿ ಘಾಟಿಯಲ್ಲಿ ಮಂಗಗಳಿಗೆ ಬಾಳೆ ಹಣ್ಣು ನೀಡಿದ ಕಟೀಲ್

    ಲಾಕ್‍ಡೌನ್ ಸಮಯದಲ್ಲಿ ಮ್ಯಾಟ್ರಿಕ್ಸ್ ಫಿಟ್ನೇಸ್, ಎನರ್ಜಿಟಿಕ್ ಗ್ರೀನ್ ಸಂಸ್ಥೆಯ ಮಾಲೀಕರು ಸೇರಿಕೊಂಡು ಸಮಾಜದ ಕಡುವಬಡವರಿಗೆ ಇಲ್ಲಿವರೆಗೆ 1000ಕ್ಕೂ ಹೆಚ್ಚು ಆಹಾರದ ಕಿಟ್ಗಳನ್ನ ವಿತರಣೆ ಮಾಡಿದ್ದಾರೆ.  ಪ್ಯಾರಾ ಒಲಿಂಪಿಕ್ಸ್ ಕ್ರೀಡಾಪಟುಗಳಿಗೂ ಆಹಾರ ಕಿಟ್ ವಿತರಣೆ ಮಾಡಿದ್ದಾರೆ.

    ರಾಜ್ಯ ಸರ್ಕಾರ ಇತರ ವರ್ಗದವರಿಗೆ ನೀಡಿದಂತೆ ವಿಶೇಪ ಪ್ಯಾಕೇಜ್ ಅನ್ನ ವಿಕಲಾಂಗಚೇತನರಿಗೂ ವಿಶೇಷ ಪ್ಯಾಕೇಜ್ ನೀಡಿಬೇಕು ಅಂತಾ ವಿಕಲಚೇತನ ಕ್ರೀಡಾಪಟುಗಳು ಒತ್ತಾಯ ಮಾಡಿದ್ದಾರೆ. ಜೊತೆಗೆ ಇತಂಹ ಸಮಯದಲ್ಲಿ ನಿಮ್ಮ ನಿಮ್ಮ ಕೈಲಾದ ಸಹಾಯವನ್ನ ಮಾಡಿ ಎಂದು ನವೀನ್ ಹಾಗೂ ಅನೂಪ ರೆಡ್ಡಿ ಹೇಳಿದ್ದಾರೆ.