Tag: ಕ್ರೀಡೆ

  • ಅಜರುದ್ದೀನ್ ವಿರುದ್ಧ 20.96 ಲಕ್ಷ ರೂ. ವಂಚನೆ ಆರೋಪ – ದೂರು ದಾಖಲು

    ಅಜರುದ್ದೀನ್ ವಿರುದ್ಧ 20.96 ಲಕ್ಷ ರೂ. ವಂಚನೆ ಆರೋಪ – ದೂರು ದಾಖಲು

    ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅಜರುದ್ದೀನ್ ಹಾಗೂ ಇನ್ನಿಬ್ಬರ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ.

    ಅಜರುದ್ದೀನ್ ಹಾಗೂ ಇನ್ನಿಬ್ಬರು ಬರೋಬ್ಬರಿ 20.96 ಲಕ್ಷ ವಂಚಿಸಿದ್ದಾರೆ ಎಂದು ಟ್ರಾವೆಲ್ ಏಜೆಂಟ್ ಮೊಹಮ್ಮದ್ ಶಹಾಬ್ ದೂರು ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅಜರುದ್ದೀನ್ ಈ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ಅಲ್ಲದೆ ಮೊಹಮ್ಮದ್ ಅವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.

    ಅಜರುದ್ದೀನ್ ಅವರ ಪಿಎ ಮುಜಿಬ್ ಖಾನ್ ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ಅಜರುದ್ದೀನ್ ಹಾಗೂ ಮತ್ತೆ ಕೆಲವರ ಹೆಸರಿನಲ್ಲಿ 20.96 ಲಕ್ಷ ಮೊತ್ತದ ಹಲವು ಇಂಟೆರ್ ನ್ಯಾಷನಲ್ ಟಿಕೆಟ್ ಬುಕ್ ಮಾಡಿದ್ದರು. ಟಿಕೆಟ್ ಬುಕ್ ಮಾಡಿದ ಬಳಿಕ ಆನ್‍ಲೈನ್‍ನಲ್ಲಿ ಪೇಮೆಂಟ್ ಮಾಡುವುದಾಗಿ ಹೇಳುತ್ತಿದ್ದರು. ಆದರೆ ಇದುವರೆಗೂ ಯಾವುದೇ ಹಣ ನನಗೆ ಸಿಕ್ಕಿಲ್ಲ ಎಂದು ಡ್ಯಾನೀಶ್ ಟೂರ್ಸ್ ಆ್ಯಂಡ್ ಟ್ರಾವೆಲ್ಸ್ ಏಜೆನ್ಸಿ ಮಾಲೀಕರಾಗಿರುವ ಮೊಹಮ್ಮದ್ ಶಾಹಬ್ ಆರೋಪಿಸಿದ್ದಾರೆ.

    ದೂರಿನಲ್ಲಿ ಶಹಾಬ್, ನಾನು ಪೇಮೆಂಟ್ ಬಗ್ಗೆ ಕೇಳುತ್ತಿದ್ದಾಗ ಮುಜಿಬ್ ಸಹದ್ಯೋಗಿ ಸುದೇಶ್ ಅವಕ್ಕಲ್ 10.6 ಲಕ್ಷ ರೂ. ವರ್ಗಾಯಿಸಿದ್ದೇನೆ ಎಂದು ಇಮೇಲ್ ಮಾಡಿದ್ದರು. ಆದರೆ ಇದುವರೆಗೂ ಯಾವುದೇ ಹಣ ಸಿಗಲಿಲ್ಲ. ನವೆಂಬರ್ 24ರಂದು ಸುದೇಶ್ ಚೆಕ್ ನೀಡುತ್ತಿರುವ ಫೋಟೋವನ್ನು ಶಹಾಬ್‍ಗೆ ಕಳುಹಿಸಿದ್ದರು. ಬಳಿಕ ನವೆಂಬರ್ 29ರಂದು ಮಜಿಬ್ ಕೂಡ ಇದೇ ರೀತಿ ಮಾಡಿದರು. ಶಹಾಬ್‍ಗೆ ಇದುವರೆಗೂ ಯಾವುದೇ ಚೆಕ್ ಸಿಗಲಿಲ್ಲ.

    ಶಹಾಬ್ ಬುಧವಾರ ಸಿಟಿ ಚೌಕ್ ಪೊಲೀಸ್ ಠಾಣೆಯಲ್ಲಿ ಅಜುರುದ್ದೀನ್, ಮುಜಿಬ್ ಖಾನ್ ಹಾಗೂ ಸುದೇಶ್ ಅವಕ್ಕಲ್ ವಿರುದ್ಧ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಮೂವರ ವಿರುದ್ಧ ಐಪಿಸಿ ಸೆಕ್ಷನ್ 420(ವಂಚನೆ), 406(ನಂಬಿಕೆ ದ್ರೋಹ) ಹಾಗೂ 34(ಒಂದೇ ಉದ್ದೇಶದಿಂದ ಅನೇಕ ವ್ಯಕ್ತಿಗಳಿಂದ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇತ್ತ ಈ ಆರೋಪಗಳನ್ನು ಅಜರುದ್ದೀನ್ ತಳ್ಳಿ ಹಾಕಿದ್ದಾರೆ.

  • ತಂದೆಯ ಹುಟ್ಟುಹಬ್ಬದಂದೇ ಹೆಮ್ಮೆಪಡಿಸಿದ ದ್ರಾವಿಡ್ ಪುತ್ರ

    ತಂದೆಯ ಹುಟ್ಟುಹಬ್ಬದಂದೇ ಹೆಮ್ಮೆಪಡಿಸಿದ ದ್ರಾವಿಡ್ ಪುತ್ರ

    ಬೆಂಗಳೂರು: ಕ್ರಿಕೆಟ್‍ನ ‘ದಿ-ವಾಲ್’ ಭಾರತ ತಂಡದ ಮಾಜಿ ನಾಯಕ, ದಿಗ್ಗಜ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರ ಹುಟ್ಟುಹಬ್ಬದಂದೇ ಅವರ ಮಗ ಸಮಿತ್ ತಮ್ಮ ತಂದೆಯನ್ನು ಹೆಮ್ಮೆಪಡಿಸಿದ್ದಾರೆ. ಸಮಿತ್ ಕರ್ನಾಟಕ ತಂಡಕ್ಕೆ ಎಂಟ್ರಿ ಆಗುವ ಮೂಲಕ ತಮ್ಮ ತಂದೆಯ ಹುಟ್ಟುಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ನೀಡಿದ್ದಾರೆ.

    ಇಂದು ರಾಹುಲ್ ದ್ರಾವಿಡ್ ಅವರು ತಮ್ಮ 47ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದಾರೆ. ಇದೇ ವೇಳೆ ಸಮಿತ್ ಕರ್ನಾಟಕದ ಅಂಡರ್ 14 ತಂಡಕ್ಕೆ ಆಯ್ಕೆಯಾಗಿದ್ದು, ತಂದೆಯ ಹಾದಿಯಲ್ಲಿ ಕ್ರಿಕೆಟ್ ಜೀವನ ಆರಂಭ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ದಕ್ಷಿಣ ವಲಯದ ಅಂಡರ್ 14 ಟೂರ್ನಮೆಂಟ್‍ಗೆ ಸಮಿತ್ ಆಯ್ಕೆಯಾಗಿದ್ದಾರೆ. ತಂದೆಯಂತೆ ಬಲಗೈ ಬ್ಯಾಟ್ಸ್ ಮನ್ ಆಗಿರುವ ಸಮಿತ್ ಅತ್ಯುತ್ತಮ ಆಟಗಾರ.

    ತಂಡದ ಆಯ್ಕೆಗೆ ಕೆಎಸ್‍ಸಿಎ ನಡೆಸಿದ ಪಂದ್ಯದಲ್ಲಿ ಸಮಿತ್ ಅತ್ಯುತ್ತಮ ಪ್ರದರ್ಶನ ತೋರಿದ್ದರು. ಟೂರ್ನಿಯೊಂದರಲ್ಲಿ ದ್ವಿಶತಕ ಮತ್ತು 94 ರನ್ ಗಳಿಸಿ ಎಲ್ಲರ ಗಮನ ಸೆಳೆದಿದ್ದರು. ಸಮಿತ್ ಪ್ರತಿಭೆಗೆ ಈಗ ಕರ್ನಾಟಕ ತಂಡದಲ್ಲಿ ಸ್ಥಾನ ಸಿಕ್ಕಿದ್ದು, ಜನವರಿ 16 ರಿಂದ 18ವರೆಗೆ ಬೆಂಗಳೂರು ದಕ್ಷಿಣ ವಲಯ ಟೂರ್ನಮೆಂಟ್ ನಡೆಯಲಿದ್ದು, ತಮ್ಮ ಪ್ರತಿಭೆ ಪ್ರದರ್ಶನ ಮಾಡಲಿದ್ದಾರೆ.

    ಮನೆಯೇ ಮೊದಲ ಪಾಠ ಶಾಲೆ ಎಂಬಂತೆ ಸಮಿತ್‍ಗೆ ತಂದೆ ರಾಹುಲ್ ದ್ರಾವಿಡ್ ಮೊದಲ ಗುರು. ಕ್ರಿಕೆಟ್‍ನಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ದ್ರಾವಿಡ್ ಮಗನನ್ನು ಕ್ರಿಕೆಟ್ ಆಟಗಾರರನ್ನಾಗಿ ಮಾಡಿದ್ದಾರೆ. ಸದ್ಯ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಗೆ(NCA) ಮುಖ್ಯಸ್ಥರಾಗಿರುವ ದ್ರಾವಿಡ್ ಆಟಗಾರರು ಫಿಟ್ ಇರುವಂತೆ ನೋಡಿಕೊಳ್ಳುತ್ತಿದ್ದಾರೆ.

  • ಐಸಿಸಿ ರ‍್ಯಾಂಕಿಂಗ್‌ನಲ್ಲೂ ಕಿಂಗ್ ಆದ ವಿರಾಟ್ ಕೊಹ್ಲಿ

    ಐಸಿಸಿ ರ‍್ಯಾಂಕಿಂಗ್‌ನಲ್ಲೂ ಕಿಂಗ್ ಆದ ವಿರಾಟ್ ಕೊಹ್ಲಿ

    ದುಬೈ: ವಾರ್ಷಂತ್ಯದಲ್ಲಿ ಐಸಿಸಿ ರ‍್ಯಾಂಕಿಂಗ್‌ ಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದೆ.

    ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಬ್ಯಾಟಿಂಗ್‍ನಲ್ಲಿ ನಂಬರ್ 1 ಪಟ್ಟದಲ್ಲಿ ಮುಂದುವರಿದಿದ್ದಾರೆ. ಸೋಮವಾರ ಪ್ರಕಟವಾದ ಬ್ಯಾಟ್ಸ್ ಮನ್‍ಗಳ ರ‍್ಯಾಂಕಿಂಗ್‌ನಲ್ಲಿ ಒಂದು ಸ್ಥಾನ ಕೆಳಗಿಳಿದಿರುವ ಚೇತೇಶ್ವರ ಪೂಜಾರ ಐದನೇ ಸ್ಥಾನಕ್ಕೆ ತಲುಪಿದ್ದಾರೆ.

    ವಿರಾಟ್ ಕೊಹ್ಲಿ 928 ಅಂಕಗಳಿಂದ ಅಗ್ರಸ್ಥಾನದಲ್ಲಿದ್ದಾರೆ, 911 ಅಂಕ ಹೊಂದಿರುವ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 2ನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್‍ನ ಕೇನ್ ವಿಲಿಯಮ್ಸನ್ (822) ಹಾಗೂ ಆಸ್ಟ್ರೇಲಿಯಾದ ಮಾರ್ನಸ್ ಲಾಬುಶೇನ್(805) ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದ್ದಾರೆ.

    ಒನ್ ಡೇ ಕ್ರಿಕೆಟಿನಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಮೊದಲ ಎರಡು ಸ್ಥಾನದಲ್ಲಿ ಭದ್ರವಾಗಿದ್ದಾರೆ. ಕೊಹ್ಲಿ 887 ಅಂಕದಿಂದ ಮೊದಲ ಸ್ಥಾನದಲ್ಲಿದ್ದರೆ, ಹಿಟ್ ಮ್ಯಾನ್ ರೋಹಿತ್ ಶರ್ಮ 884 ಅಂಕದಿಂದ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

    ಟೆಸ್ಟ್ ಬೌಲಿಂಗ್ ವಿಭಾಗದಲ್ಲಿ ಭಾರತದ ಪ್ರಮುಖ ವೇಗಿ ಜಸ್‍ಪ್ರೀತ್ ಬೂಮ್ರಾ 794 ಅಂಕ ಪಡೆದು ಆರನೇ ಸ್ಥಾನದಲ್ಲಿ ಸ್ಥಿರವಾಗಿದ್ದಾರೆ. ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹಾಗೂ ಮೊಹಮ್ಮದ್ ಶಮಿ ಕ್ರಮವಾಗಿ 9ನೇ ಮತ್ತು 10ನೇ ಕ್ರಮಾಂಕದಲ್ಲಿದರೆ, ಏಕದಿನ ಪಂದ್ಯದ ಪಟ್ಟಿಯಲ್ಲಿ ಬೂಮ್ರಾ ಮೊದಲ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

    ಟೀಂ ಇಂಡಿಯ ಟೆಸ್ಟ್ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದರೆ, ಏಕದಿನ ಪಟ್ಟಿಯಲ್ಲಿ ಎರಡನೇ ರ‌್ಯಾಂಕ್‌ನಲ್ಲಿದ್ದು, ಇಂಗ್ಲೆಂಡ್ ಮೊದಲ ಸ್ಥಾನದಲ್ಲಿದೆ.

  • ಸೀಕ್ರೆಟ್ ಸಾಂತಾ ಆಗಿ ಮಕ್ಕಳ ಜೊತೆ ವಿರಾಟ್ ಕ್ರಿಸ್ಮಸ್ ಆಚರಣೆ: ವಿಡಿಯೋ

    ಸೀಕ್ರೆಟ್ ಸಾಂತಾ ಆಗಿ ಮಕ್ಕಳ ಜೊತೆ ವಿರಾಟ್ ಕ್ರಿಸ್ಮಸ್ ಆಚರಣೆ: ವಿಡಿಯೋ

    ಕೋಲ್ಕತ್ತಾ: ಭಾರತ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ‘ಸೀಕ್ರೆಟ್ ಸಾಂತಾ’ ಆಗಿ ಪಶ್ಚಿಮ ಬಂಗಳಾದ ಕೋಲ್ಕತ್ತಾದಲ್ಲಿರುವ ದೀನದಲಿತರ ಮಕ್ಕಳ ಜೊತೆ ಕ್ರಿಸ್ಮಸ್ ಹಬ್ಬವನ್ನು ಆಚರಿಸಿದ್ದಾರೆ.

    ಖಾಸಗಿ ವಾಹಿನಿಯೊಂದು ಈ ವಿಡಿಯೋವನ್ನು ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಕೋಲ್ಕತ್ತಾದ ಆಶ್ರಮದಲ್ಲಿರುವ ಮಕ್ಕಳು ತಮ್ಮ ನೆಚ್ಚಿನ ಕ್ರೀಡಾಪಟುಗಳಾದ ಸಚಿನ್ ತೆಂಡೂಲ್ಕರ್, ಎಂ.ಎಸ್ ಧೋನಿ, ಕ್ರಿಸ್ಟಿಯಾನೊ ರೊನಾಲ್ಡೊ, ಪಿ.ವಿ ಸಿಂಧು ಹಾಗೂ ಕ್ರಿಸ್ಮೆಸ್ ಸಮಯದಲ್ಲಿ ಇಷ್ಟವಾಗುವ ವಸ್ತುಗಳನ್ನು ನೀಡಬೇಕೆಂದು ಹೇಳಿದ್ದಾರೆ. ಮಕ್ಕಳು ಮಾತನಾಡಿದ ಈ ವಿಡಿಯೋವನ್ನು ವಿರಾಟ್ ಅವರು ನೋಡಿದ್ದಾರೆ. ಇದನ್ನೂ ಓದಿ: ಸಂತಾಕ್ಲಾಸ್ ಡ್ರೆಸ್ ಧರಿಸಿದ ಸಚಿನ್ – ಅನಾಥ ಮಕ್ಕಳೊಂದಿಗೆ ಕ್ರಿಸ್ಮಸ್ ಆಚರಣೆ

    ಮಕ್ಕಳ ವಿಡಿಯೋ ನೋಡಿದ ನಂತರ ವಿರಾಟ್ ಸಾಂತಾ ಕ್ಲಾಸ್‍ನಂತಯೆ ಉಡುಪು ಧರಿಸಿ, ಮಕ್ಕಳಿಗೆ ಉಡುಗೊರೆಯನ್ನು ಹಂಚಿದ್ದಾರೆ. ಉಡುಗೊರೆ ಎಲ್ಲ ಹಂಚಿದ ಬಳಿಕ ವಿರಾಟ್ ತಾವು ಹಾಕಿದ ನಕಲಿ ಗಡ್ಡವನ್ನು ತೆಗೆದಿದ್ದಾರೆ. ವಿರಾಟ್‍ರನ್ನು ನೋಡುತ್ತಿದ್ದಂತೆ ಮಕ್ಕಳು ಮೊದಲು ಶಾಕ್ ಆಗಿ ನಂತರ ಖುಷಿಪಟ್ಟಿದ್ದಾರೆ. ಅಲ್ಲದೆ ವಿರಾಟ್‍ರನ್ನು ತಬ್ಬಿಕೊಳ್ಳುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

    ವಿಡಿಯೋ ಕೊನೆಯಲ್ಲಿ ವಿರಾಟ್, ಈ ಮಕ್ಕಳು ವರ್ಷವಿಡೀ ನಮಗೆ ಬೆಂಬಲಿಸುತ್ತಾರೆ. ಮಕ್ಕಳ ಜೊತೆ ಸಮಯ ಕಳೆದಿದ್ದು ಹಾಗೂ ಅವರನ್ನು ಸಂತೋಷ ತಂದ ಕ್ಷಣ ಅದ್ಭುತವಾಗಿತ್ತು. ನಾನು ಎಲ್ಲರಿಗೂ ಕ್ರಿಸ್ಮಸ್ ಹಬ್ಬದ ಹಾಗೂ ಹೊಸ ವರ್ಷದ ಶುಭಾಶಯಗಳನ್ನು ಹೇಳಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ. ವಿರಾಟ್ ಅವರ ಈ ಕೆಲಸಕ್ಕೆ ನೆಟ್ಟಿಗರು ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

    https://twitter.com/StarSportsIndia/status/1207927652079812608?ref_src=twsrc%5Etfw%7Ctwcamp%5Etweetembed%7Ctwterm%5E1207927652079812608&ref_url=https%3A%2F%2Fwww.timesnownews.com%2Fsports%2Fcricket%2Farticle%2Fvideo-virat-kohli-turns-secret-santa-for-underprivileged-kids-ahead-of-christmas%2F529935

  • ಇಂದು ಭಾರತ – ವಿಂಡೀಸ್ ಎರಡನೇ ಏಕದಿನ ಪಂದ್ಯ

    ಇಂದು ಭಾರತ – ವಿಂಡೀಸ್ ಎರಡನೇ ಏಕದಿನ ಪಂದ್ಯ

    ವಿಶಾಖಪಟ್ಟಣ: ಭಾರತಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಈಗಾಗಲೇ ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಆತಿಥೇಯರ ವಿರುದ್ಧ ಭರ್ಜರಿ ಜಯಗಳಿಸಿ ಈ ಮ್ಯಾಚ್ ಅನ್ನು ಗೆಲ್ಲುವ ತಯಾರಿಯಲ್ಲಿದ್ದಾರೆ.

    ಇಂದು ವಿಶಾಖಪಟ್ಟಣದ ವೈ.ಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ಎರಡನೇ ಪಂದ್ಯ ನಡೆಯಲಿದೆ. ಭಾರತ ಮೊದಲ ಪಂದ್ಯದ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ.


    ವಿಶಾಖಪಟ್ಟಣದ ಪಿಚ್ ಬ್ಯಾಟ್ಸ್ ಮನ್‍ಗಳಿಗೆ ಹೆಚ್ಚು ನೆರವು ನೀಡುವ ನಿರೀಕ್ಷೆ ಇದೆ. ಬ್ಯಾಟಿಂಗ್‍ನಲ್ಲೂ ಆತಿಥೇಯರು ಪರಿಣಾಮಕಾರಿ ಸಾಮರ್ಥ್ಯ ತೋರಬೇಕಿದೆ. ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಕೆ.ಎಲ್ ರಾಹುಲ್ ಮೊದಲ ಪಂದ್ಯದಲ್ಲಿ ತಂಡಕ್ಕೆ ಭದ್ರ ಅಡಿಪಾಯ ಹಾಕಿಕೊಡಲು ವಿಫಲರಾಗಿದ್ದರು. ಕೊಹ್ಲಿ ಕೂಡ ಹೆಚ್ಚು ಸಮಯ ಕ್ರೀಸ್ ನಲ್ಲಿ ಇರಲಿಲ್ಲ. ಮೊದಲ ಪಂದ್ಯದಲ್ಲಾದ ತಪ್ಪುಗಳನ್ನು ತಿದ್ದಿಕೊಂಡು ವಿಂಡೀಸ್ ಗೆ ತಕ್ಕ ಉತ್ತರ ಕೊಡಲು ಭಾರತ ಸಜ್ಜಾಗಿದೆ.

    ಮೊದಲ ಪಂದ್ಯದಲ್ಲಿ ಭಾರತ ನೀಡಿದ್ದ 288 ರನ್‍ಗಳ ಗುರಿಯನ್ನು ಕೇವಲ ಎರಡು ವಿಕೆಟ್ ಕಳೆದುಕೊಂಡು ಮುಟ್ಟಿದ್ದ ಕೀರನ್ ಪೊಲಾರ್ಡ್ ನಾಯಕತ್ವದ ವಿಂಡೀಸ್ ತಂಡ ಈಗ ವಿಶ್ವಾಸದಲ್ಲಿದೆ.

    ಇಂದಿನ ಪಂದ್ಯದಲ್ಲಿ ಭಾರತ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ತನ್ನ ಸಾಮಥ್ರ್ಯವನ್ನು ಪ್ರದರ್ಶಿಸಿದರೆ ಮಾತ್ರ ಗೆಲ್ಲುವ ಅವಕಾಶಗಳು ಸಿಗಲಿದೆ. ಎರಡು ತಂಡದಲ್ಲಿ ಉತ್ತಮ ಬ್ಯಾಟ್ಸ್ ಮನ್‍ಗಳಿದ್ದು, ಹೊಡಿಬಡಿ ದಾಂಡಿಗರು ಇರುವುದರಿಂದ ಹೈ ಸ್ಕೋರಿಂಗ್ ಮ್ಯಾಚ್ ಇದಾಗಲಿದೆ.

  • ಮನೀಶ್ ಪಾಂಡೆ ಮದುವೆಯಲ್ಲಿ ಎಲ್ಲರ ಗಮನ ಸೆಳೆದ ಯುವರಾಜ್: ವಿಡಿಯೋ

    ಮನೀಶ್ ಪಾಂಡೆ ಮದುವೆಯಲ್ಲಿ ಎಲ್ಲರ ಗಮನ ಸೆಳೆದ ಯುವರಾಜ್: ವಿಡಿಯೋ

    ಮುಂಬೈ: ಭಾರತ ಕ್ರಿಕೆಟ್ ತಂಡದ ಸ್ಟೈಲಿಶ್ ಆಟಗಾರ ಮನೀಶ್ ಪಾಂಡೆ ಆರತಕ್ಷತೆಯಲ್ಲಿ ಮಾಜಿ ಆಟಗಾರ ಯುವರಾಜ್ ಸಿಂಗ್ ಪಂಜಾಬಿ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಅಲ್ಲದೆ ಅವರು ಡ್ಯಾನ್ಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

    ಸೋಮವಾರ ಮನೀಶ್ ನಟಿ ಆಶ್ರಿತಾ ಶೆಟ್ಟಿ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮದುವೆಯ ಆಚರಣೆ ಎರಡು ದಿನಗಳ ಕಾಲ ನಡೆದಿದೆ. ಮನೀಶ್ ಅವರ ಆರತಕ್ಷತೆಯಲ್ಲಿ ಮಾಜಿ ಕ್ರಿಕೆಟ್ ಆಟಗಾರ ಯುವರಾಜ್ ಸಿಂಗ್ ಭಾಗವಹಿಸಿದ್ದರು. ಈ ವೇಳೆ ಅವರು ಡೋಲು ಸದ್ದಿಗೆ ಬಾಂಗ್ರಾ ನೃತ್ಯ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಇದನ್ನೂ ಓದಿ: ತುಳು ನಟಿಯನ್ನು ವರಿಸಲಿದ್ದಾರೆ ಕ್ರಿಕೆಟಿಗ ಮನೀಶ್ ಪಾಂಡೆ

    ಯುವರಾಜ್ ಅವರು ಒಬ್ಬರೇ ನೃತ್ಯ ಮಾಡುತ್ತಿರುವುದನ್ನು ನೋಡಿ ಮನೀಶ್ ಕೂಡ ಅವರ ಜೊತೆ ಸೇರಿ ಡ್ಯಾನ್ಸ್ ಮಾಡಿದ್ದಾರೆ. ಈ ವೇಳೆ ಡೋಲು ಬಾರಿಸುತ್ತಿದ್ದವರು ಯುವರಾಜ್ ಹಾಗೂ ಮನೀಶ್ ಡ್ಯಾನ್ಸ್ ನೋಡಿ ಖುಷಿಪಟ್ಟಿದ್ದಾರೆ. ಇದನ್ನೂ ಓದಿ: ರಾತ್ರಿ ಟ್ರೋಫಿ ಗೆದ್ದು ಮರುದಿನ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮನೀಶ್ ಪಾಂಡೆ

    ಯುವರಾಜ್ ಸಿಂಗ್ ತಮ್ಮ ಇನ್‍ಸ್ಟಾದಲ್ಲಿ ಮನೀಶ್ ಹಾಗೂ ಆಶ್ರಿತಾ ಜೊತೆಗಿರುವ ಫೋಟೋ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ, “ಪ್ರೀತಿಯ ಮನೀಶ್ ಹಾಗೂ ಆಶ್ರಿತಾ ನೀವು ಜೀವನದಲ್ಲಿ ಯಾವಾಗಲೂ ಸಂತೋಷವಾಗಿರಿ ಎಂದು ನಾನು ಹಾರೈಸುತ್ತೇನೆ. ಉಳಿದರು ನಮ್ಮ ಹಿಂದೆ ನಿಂತಿರುವ ಡೋಲು ಬಾರಿಸುವವನನ್ನು ನೋಡಿ” ಎಂದು ಬರೆದುಕೊಂಡಿದ್ದರು.

    ಸೋಮವಾರ ಮನೀಶ್, ನಟಿ ಆಶ್ರಿತಾ ಶೆಟ್ಟಿ ಅವರ ಜೊತೆ ವಿವಾಹವಾಗಿದ್ದರು. ಹಿಂದಿನ ದಿನ ಎಂದರೆ ಭಾನುವಾರ ನಡೆದ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮನೀಶ್ ಅವರ ನಾಯಕತ್ವದಲ್ಲಿ ತಮಿಳುನಾಡಿನ ತಂಡದ ವಿರುದ್ಧ ಕರ್ನಾಟಕ ತಂಡ ಜಯಗಳಿಸಿತ್ತು. ಈ ಪಂದ್ಯದಲ್ಲಿ ಮನೀಶ್ 60 ರನ್‍ಗಳನ್ನು ಗಳಿಸಿದ್ದರು.

     

    View this post on Instagram

     

    Nice dance #yuvrajsingh and #manishpandey #ashritashetty with my team #dholibros Rocking ???????????? performance

    A post shared by Vijay Bhatt (@vijaybhatt888) on

  • ತುಳು ನಟಿಯನ್ನು ವರಿಸಲಿದ್ದಾರೆ ಕ್ರಿಕೆಟಿಗ ಮನೀಶ್ ಪಾಂಡೆ

    ತುಳು ನಟಿಯನ್ನು ವರಿಸಲಿದ್ದಾರೆ ಕ್ರಿಕೆಟಿಗ ಮನೀಶ್ ಪಾಂಡೆ

    ಮುಂಬೈ: ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

    ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಡಿಸೆಂಬರ್ 2ರಂದು 30 ವರ್ಷದ ಮನೀಶ್, 26 ವರ್ಷದ ಆಶ್ರಿತಾ ಜೊತೆ ಮುಂಬೈನಲ್ಲಿ ಮದುವೆ ಆಗಲಿದ್ದಾರೆ.

    2012ರಲ್ಲಿ ‘ತೆಲಿಕೆದ ಬೊಳ್ಳಿ’ ತುಳು ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಆಶ್ರಿತಾ ‘ಇಂದ್ರಜಿತ್’, ‘ಒರು ಕಣ್ಣಿಯುನ್ ಮೂನು ಕಲಾವಾನಿಕಲಂ’, ‘ಉದಯಂ ಎನ್.ಎಚ್4’ ಸೇರಿದಂತೆ ಹಲವು ಚಿತಗಳಲ್ಲಿ ನಟಿಸಿದ್ದಾರೆ. ಬ್ಯೂಟಿ ಕಾಂಪಿಟೇಶನ್ ಭಾಗವಹಿಸಿದ ಆಶ್ರಿತಾ ಜಾಹೀರಾತುಗಳಲ್ಲಿಯೂ ಅಭಿನಯಿಸಿದ್ದಾರೆ.

    ಮನೀಶ್ ಕರ್ನಾಟಕದ ಪರ ಉತ್ತಮ ಪ್ರದರ್ಶನ ನೀಡುವ ಮೂಲಕ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಏಕದಿನ ಪಂದ್ಯದಲ್ಲಿ ಮನೀಶ್ ಮಿಡಿಲ್ ಆರ್ಡರ್ ನಲ್ಲಿ ಆಡುತ್ತಾರೆ. ಜೊತೆಗೆ ಮನೀಶ್ ಐಪಿಎಲ್ ಪಂದ್ಯಗಳಲ್ಲೂ ಮಿಂಚಿದ್ದಾರೆ. ಮನೀಶ್ ಈಗ ಕರ್ನಾಟಕ ಕ್ರಿಕೆಟ್ ತಂಡದ ನಾಯಕನಾಗಿದ್ದು, ವಿಜಯ್ ಹಜಾರೆ ಟ್ರೋಫಿಯಲ್ಲೂ ಆಡುತ್ತಿದ್ದಾರೆ.

    ಮನೀಶ್ ಹಾಗೂ ಆಶ್ರಿತಾ ಮದುವೆಯಲ್ಲಿ ಕೇವಲ ಆತ್ಮೀಯ ಸ್ನೇಹಿತರು ಹಾಗೂ ಸಂಬಂಧಿಕರು ಭಾಗಿಯಾಗಲಿದ್ದು, ಎರಡು ದಿನಗಳ ಕಾಲ ಈ ಮದುವೆ ನಡೆಯಲಿದೆ. ಮನೀಶ್ ಮದುವೆಯಲ್ಲಿ ಭಾರತ ಕ್ರಿಕೆಟ್ ತಂಡದ ಆಟಗಾರರು ಭಾಗವಹಿಸುವ ಸಾಧ್ಯತೆಯಿದೆ.

  • ಮತ್ತೆ ಪ್ರೀತಿಯಲ್ಲಿ ಬಿದ್ದ ವಿರಾಟ್

    ಮತ್ತೆ ಪ್ರೀತಿಯಲ್ಲಿ ಬಿದ್ದ ವಿರಾಟ್

    ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಬಾಲ್ಯದ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿದ ಭಾರತೀಯ ಕ್ರಿಕೆಟ್ ತಂಡದ ನಾಯಕ, ಅನುಷ್ಕಾ ಅವರ ಪತಿ ವಿರಾಟ್ ಕೊಹ್ಲಿ ಮತ್ತೆ ಪ್ರೀತಿಯಲ್ಲಿ ಬಿದ್ದಿದ್ದಾರೆ.

    ಅನುಷ್ಕಾ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಬ್ಯಾಕ್ ಟು ಬ್ಯಾಕ್ ಬಾಲ್ಯದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಒಂದು ಫೋಟೋದಲ್ಲಿ ಅವರು ಮಂಚದ ಮೇಲೆ ಕುಳಿತು ಏನೋ ತಿನ್ನುತ್ತಿದ್ದಾರೆ. ಮತ್ತೊಂದು ಫೋಟೋದಲ್ಲಿ ಅನುಷ್ಕಾ ನಗುತ್ತಿರುವುದು ಕಂಡು ಬಂದಿದೆ. ಮೂರನೇ ಫೋಟೋದಲ್ಲಿ ಅನುಷ್ಕಾ ಸುಮ್ಮನೆ ಕುಳಿತು ಯಾವುದೋ ವಸ್ತುವನ್ನು ನೋಡುತ್ತಿದ್ದಾರೆ. ಈ ಮೂರು ಫೋಟೋಗಳಲ್ಲಿ ಅನುಷ್ಕಾ ತುಂಬಾ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

     

    View this post on Instagram

     

    लिटिल मी

    A post shared by AnushkaSharma1588 (@anushkasharma) on

    ಇನ್‍ಸ್ಟಾಗ್ರಾಂನಲ್ಲಿ ಅನುಷ್ಕಾ ಪೋಸ್ಟ್ ಮಾಡಿದ ಬಾಲ್ಯದ ಫೋಟೋಗೆ ಹೃದಯದ ಎಮೋಜಿ ನೀಡುವ ಮೂಲಕ ಕಮೆಂಟ್ ಮಾಡಿದ್ದಾರೆ. ವಿರಾಟ್ ಅಲ್ಲದೆ ಬಾಲಿವುಡ್ ನಟಿ ದಿಯಾ ಮಿರ್ಜಾ ಅವರು ಕೂಡ ಅನುಷ್ಕಾ ಅವರ ಪೋಸ್ಟ್‍ಗೆ “ಸೋ ಸ್ವೀಟ್” ಎಂದು ಕಮೆಂಟ್ ಮಾಡುವ ಮೂಲಕ ಹೃದಯ ಎಮೋಜಿ ಹಾಕಿದ್ದಾರೆ. ಸದ್ಯ ಅನುಷ್ಕಾ ಅವರ ಬಾಲ್ಯದ ಫೋಟೋ ನೋಡಿ ಅಭಿಮಾನಿಗಳು ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ.

     

    View this post on Instagram

     

    लिटिल मी

    A post shared by AnushkaSharma1588 (@anushkasharma) on

    ಇತ್ತೀಚೆಗೆ ವಿರಾಟ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅನುಷ್ಕಾ ಜೊತೆಗಿರುವ ಫೋಟೋವನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಅನುಷ್ಕಾ ಕಪ್ಪು ಬಣ್ಣದ ಸನ್ ಗ್ಲಾಸ್ ಮತ್ತು ಬಿಕಿನಿ ಧರಿಸಿದ್ದರೆ, ವಿರಾಟ್ ಶರ್ಟ್ ಲೆಸ್ ಆಗಿ ಪತ್ನಿಯ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದರು. ವಿರಾಟ್ ಈ ಫೋಟೋವನ್ನು ಟ್ವೀಟ್ ಮಾಡಿ ಹಾರ್ಟ್ ಎಮೋಜಿ ಹಾಕಿದ್ದಾರೆ. ಇದುವರೆಗೂ ಫೋಟೋಗೆ 44 ಸಾವಿರಕ್ಕೂ ಅಧಿಕ ಲೈಕ್ಸ್ ಬಂದಿದೆ.

  • ಮೈದಾನದ ಸಿಬ್ಬಂದಿಗೆ ಒಂದೂವರೆ ಲಕ್ಷ ರೂ. ದಾನ ಮಾಡಿದ ಸಂಜು

    ಮೈದಾನದ ಸಿಬ್ಬಂದಿಗೆ ಒಂದೂವರೆ ಲಕ್ಷ ರೂ. ದಾನ ಮಾಡಿದ ಸಂಜು

    ತಿರುವಂನಂತಪುರಂ: ಭಾರತದ ಕ್ರಿಕೆಟ್ ತಂಡದ ಆಟಗಾರ ಸಂಜು ಸ್ಯಾಮ್‍ಸನ್ ಅವರು ತಮ್ಮ ಎರಡು ಪಂದ್ಯದ ಫೀಸ್ ಅಂದರೆ ಒಂದೂವರೆ ಲಕ್ಷ ರೂ. ಮೈದಾನದ ಸಿಬ್ಬಂದಿಗೆ ದಾನ ಮಾಡಿದ್ದಾರೆ.

    ಶುಕ್ರವಾರ ತಿರುವನಂತಪುರಂನ ಗ್ರೀನ್‍ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಆಫ್ರಿಕಾ ಎ ವಿರುದ್ಧದ ಐದನೇ ಏಕದಿನ ಪಂದ್ಯದಲ್ಲಿ ವಿಕೆಟ್‍ಕೀಪರ್, ಬ್ಯಾಟ್ಸ್ ಮೆನ್ ಸಂಜು ಸ್ಯಾಮ್‍ಸನ್ ಭಾರತ ಎ ಪರ ಅದ್ಭುತವಾಗಿ ಆಡಿದ್ದಾರೆ. ಸಂಜು 48 ಎಸೆತಗಳಲ್ಲಿ 91 ರನ್ ಗಳಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಭಾರತ ಎ ತಂಡ 4-1 ಸರಣಿಯಿಂದ ಗೆದ್ದಿದೆ.

    ಸಂಜು ಸ್ಯಾಮ್‍ಸನ್ ಅವರ ಅತ್ಯುತ್ತಮ ಆಟವಾಗಿದ್ದಕ್ಕೆ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಇದಾದ ಬಳಿಕ ಅವರು ತಮ್ಮ ಎರಡೂ ಪಂದ್ಯದ ಫೀಸ್ ಅಂದರೆ ಒಂದೂವರೆ ಲಕ್ಷ ರೂ. ವನ್ನು ತಿರುವನಂತಪುರಂ ಕ್ರೀಡಾಂಗಣದ ಸಿಬ್ಬಂದಿಗೆ ದಾನ ಮಾಡಿದ್ದಾರೆ. ಸಂಜು ಅವರು ಮೈದಾನದ ಸಿಬ್ಬಂದಿಯ ಕೆಲಸದಿಂದ ಪ್ರಭಾವಿತರಾಗಿದ್ದಾರೆ. ಮಳೆ ಅಡ್ಡಿಪಡಿಸಿದ ಪಂದ್ಯವನ್ನು ಪೂರ್ಣಗೊಳಿಸಲು ಅವರು ಶ್ರಮಿಸಿದ್ದರು.

    ಪಂದ್ಯ ಮುಗಿದ ನಂತರ ಮಾತನಾಡಿದ ಸಂಜು ಸ್ಯಾಮ್‍ಸನ್, ಈ ಪಂದ್ಯವನ್ನು ಪೂರ್ಣಗೊಳಿಸಿದ ಶ್ರೇಯಸ್ಸು ಸಂಪೂರ್ಣವಾಗಿ ಕ್ರೀಡಾಂಗಣದ ಸಿಬ್ಬಂದಿಗೆ ಸಲ್ಲುತ್ತದೆ. ಏಕೆಂದರೆ ಅವರಿಂದಾಗಿ ನಾವು ಈ ಪಂದ್ಯವನ್ನು ಆಡಲು ಸಾಧ್ಯವಾಯಿತು. ಕ್ರೀಡಾಂಗಣ ಪಂದ್ಯ ಆಡಲು ಅಂಪೈರ್ ಅನುಮತಿ ನೀಡುತ್ತಿರಲಿಲ್ಲ. ಸಿಬ್ಬಂದಿಯ ಕಠಿಣ ಪರಿಶ್ರಮದಿಂದಾಗಿ ಈ ಪಂದ್ಯ ಆಡಲು ಸಾಧ್ಯವಾಯಿತು ಎಂದು ಹೇಳಿದ್ದಾರೆ.

  • ಬರಿಗಾಲಿನಲ್ಲಿಯೇ 11 ಸೆಕೆಂಡ್‍ನಲ್ಲಿ 100 ಮೀಟರ್- ಗ್ರಾಮೀಣ ಪ್ರತಿಭೆಯ ಮಿಂಚಿನ ಓಟ

    ಬರಿಗಾಲಿನಲ್ಲಿಯೇ 11 ಸೆಕೆಂಡ್‍ನಲ್ಲಿ 100 ಮೀಟರ್- ಗ್ರಾಮೀಣ ಪ್ರತಿಭೆಯ ಮಿಂಚಿನ ಓಟ

    -ಕೇಂದ್ರದಿಂದ ಸಿಕ್ತು ಅವಕಾಶ

    ನವದೆಹಲಿ: ನಮ್ಮ ದೇಶದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಪ್ರತಿಭೆಗಳು ಬೇಕಾದ್ರೆ ಗ್ರಾಮಗಳಿಗೆ ಭೇಟಿ ನೀಡಬೇಕೆಂಬ ಮಾತಿದೆ. ಅದೆಷ್ಟೋ ಕ್ರೀಡಾ ಆಸಕ್ತರಿಗೆ ಸೂಕ್ತ ವೇದಿಕೆ ಸಿಗದ ಹಿನ್ನೆಲೆಯಲ್ಲಿ ತೆರೆಮರೆಯಲ್ಲಿಯೇ ಉಳಿಯುತ್ತಾರೆ. ಇದೀಗ ಅಂತಹವುದೇ ಗ್ರಾಮೀಣ ಪ್ರತಿಭೆ ಸಾಧನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದಿಂದ ಗ್ರಾಮೀಣ ಪ್ರತಿಭೆಗೆ ಕೇಂದ್ರ ವೇದಿಕೆ ಕಲ್ಪಿಸಲು ಮುಂದಾಗಿದೆ.

    ಮಧ್ಯ ಪ್ರದೇಶದ ಶಿವಪುರಿ ನಿವಾಸಿಯಾದ 19 ವರ್ಷದ ರಾಮೇಶ್ವರ್ ಗುರ್ಜಾರ್ ಎಂಬ ಯುವಕನ ಓಟದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿತ್ತು. ರಾಮೇಶ್ವರ್ 100 ಮೀಟರ್ ಅಂತರವನ್ನು ಕೇವಲ 11 ಸೆಕೆಂಡ್ ನಲ್ಲಿ ಪೂರ್ಣಗೊಳಿಸಿದ್ದಾನೆ. ಬರಿಗಾಲಿನಲ್ಲಿಯೇ ರಾಮೇಶ್ವರ್ ಓಡಿದ್ದು, ಸ್ಥಳೀಯರು ಆತನನ್ನು ‘ಉಸೇನ್ ಬೋಲ್ಟ್’ ಜೊತೆ ಹೋಲಿಕೆ ಮಾಡಲಾರಂಭಿಸಿದ್ದಾರೆ.

    ಈ ವಿಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಯುವಕನಿಗೆ ಸೂಕ್ತ ವೇದಿಕೆ ನೀಡಬೇಕೆಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜೂ ಅವರಲ್ಲಿ ಮನವಿ ಮಾಡಿಕೊಂಡಿದ್ದರು.

    ಭಾರತ ಇಂತಹ ಕ್ರೀಡಾಸಕ್ತರನ್ನು ಹೊಂದಿರುವ ದೊಡ್ಡ ಆಗರವಾಗಿದೆ. ಇಂತಹ ಗ್ರಾಮೀಣ ಪ್ರತಿಭೆಗೆ ಸೂಕ್ತ ತರಬೇತಿ ಮತ್ತು ವೇದಿಕೆ ದೊರೆತಲ್ಲಿ ಆತ ಇತಿಹಾಸ ರಚಿಸುವ ಸಾಮಥ್ರ್ಯ ಹೊಂದಿದ್ದಾನೆ. ಹಾಗಾಗಿ ಕ್ರೀಡಾ ಸಚಿವರಾದ ಕಿರಣ್ ರಿಜಿಜು ಮತ್ತು ಭಾರತದ ಕ್ರೀಡಾ ಇಲಾಖೆ ಯುವ ಓಟಗಾರನನ್ನು ಪ್ರೋತ್ಸಾಹಿಸಬೇಕೆಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದರು.

    ಶಿವರಾಜ್ ಸಿಂಗ್ ಚೌಹಾಣ್ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಕಿರಣ್ ರಿಜಿಜು, ಅಥ್ಲೀಟ್ ರಾಮೇಶ್ವರನನ್ನು ನನ್ನ ಬಳಿ ಕರೆದುಕೊಂಡು ಬನ್ನಿ. ಆತನನ್ನು ಅಥ್ಲೀಟ್ ಅಕಾಡೆಮಿಯಲ್ಲಿ ತರಬೇತಿ ಮತ್ತು ಉಳಿದುಕೊಳ್ಳುವ ವ್ಯವಸ್ಥೆಯನ್ನು ಕಲ್ಪಿಸಕೊಡಲಾಗುತ್ತದೆ ಎಂದಿದ್ದಾರೆ.