Tag: ಕ್ರೂಸರ್ ವಾಹನ

  • ಸೇತುವೆ ದಾಟಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಕ್ರೂಸರ್ ವಾಹನ

    ಸೇತುವೆ ದಾಟಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಕ್ರೂಸರ್ ವಾಹನ

    ಬೀದರ್: ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಜಮಖಂಡಿ ಬಳಿ ಕ್ರೂಸರ್ ವಾಹನ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.

    ಮಹಾರಾಷ್ಟ್ರದ – ಲಾತೂರ್ – ಬೀದರ್ ಸಂಪರ್ಕ ಕಡಿತಗೊಂಡಿದ್ದು, ಭಾಲ್ಕಿ ತಾಲೂಕಿನ ಜಮಖಂಡಿ ಬಳಿ ಸೇತುವೆ ದಾಟಲು ಯತ್ನಿಸಿದ್ದ ವೇಳೆ ಕ್ರೂಸರ್ ವಾಹನ ಕೊಚ್ಚಿಕೊಂಡು ಹೋಗಿದೆ.

    ಸೇತುವೆ ಮೇಲೆ ನೀರು ರಭಸದಿಂದ ಹರಿಯುತ್ತಿದ್ದರೂ ಚಾಲಕ ಧೈರ್ಯಮಾಡಿ ಕ್ರೂಸರ್ ವಾಹನವನ್ನು ಚಲಾಯಿಸಿದ್ದಾನೆ. ಅರ್ಧ ಸಾಗುತ್ತಿದ್ದಂತೆ ನೀರಿನ ರಭಸಕ್ಕೆ ನಿಯಂತ್ರಣಕ್ಕೆ ಸಿಗದೇ ಕ್ರೂಸರ್ ಹಳ್ಳಕ್ಕೆ ಬಿದ್ದಿದೆ. ಬಿದ್ದ ಕೂಡಲೇ ಅದರಲ್ಲಿದ್ದ ಪ್ರಯಾಣಿಕರು ಡೋರು ತೆಗೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಹಳ್ಳದಲ್ಲಿ ಕೋಚ್ಚಿ ಹೋದ ವಾಹನ ಹೊರಗಡೆ ತೆಗೆಯಲು ಸಾರ್ವಜನಿಕರು ಹರಸಾಹಸ ಪಟ್ಟಿದ್ದಾರೆ. ಭಾರೀ ಮಳೆ ಅವಾಂತರಕ್ಕೆ ನೆರೆ ರಾಜ್ಯಕ್ಕೆ ಹೋಗುವ ಪ್ರಯಾಣಿಕರು ಮತ್ತು ವಾಹನ ಸವಾರರು ಪರದಾಡುತ್ತಿದ್ದಾರೆ. ಮುಂಗಾರು ಮಳೆಗೆ ಭಾನುವಾರದಿಂದ ಜಿಲ್ಲೆಯ ಹಲವು ಸೇತುವೆಗಳ ಸಂಪರ್ಕ ಕಡಿತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

  • ಕ್ರೂಸರ್ ವಾಹನಗಳು ಡಿಕ್ಕಿ- `ವಿಕಾಸ ಪರ್ವ’ಕ್ಕೆ ಹೊರಟಿದ್ದ ಜೆಡಿಎಸ್ ಕಾರ್ಯಕರ್ತರಿಗೆ ಗಾಯ

    ಕ್ರೂಸರ್ ವಾಹನಗಳು ಡಿಕ್ಕಿ- `ವಿಕಾಸ ಪರ್ವ’ಕ್ಕೆ ಹೊರಟಿದ್ದ ಜೆಡಿಎಸ್ ಕಾರ್ಯಕರ್ತರಿಗೆ ಗಾಯ

    ರಾಯಚೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿಯ ವಿಕಾಸ ಪರ್ವ ಕಾರ್ಯಕ್ರಮಕ್ಕೆ ಹೊರಟಿದ್ದ ಕಾರ್ಯಕರ್ತರ ವಾಹನಗಳ ಮಧ್ಯೆ ಡಿಕ್ಕಿಯಾದ ಘಟನೆ ರಾಯಚೂರಿನಲ್ಲಿ ನಡೆದಿದೆ.

    ರಾಯಚೂರಿನಿಂದ ಬೆಂಗಳೂರಿಗೆ ಹೊರಟಿದ್ದ ಎರಡು ಕ್ರೂಸರ್ ವಾಹನಗಳು ಇಂದು ಬೆಳಗ್ಗಿನ ಜಾವ ದೊಡ್ಡಬಳ್ಳಾಪುರದ ಹೊರವಲಯದಲ್ಲಿ ಪರಸ್ಪರ ಡಿಕ್ಕಿಯಾಗಿವೆ. ಪರಿಣಾಮ ವಾಹನಗಳಲ್ಲಿದ್ದ ಕಾರ್ಯಕರ್ತರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

    ಬೆಂಗಳೂರಿಗೆ ಬೇಗ ತಲುಪಲು ವಾಹನಗಳು ಅತೀ ವೇಗದಲ್ಲಿದ್ದು, ಚಾಲಕನ ನಿಯಂತ್ರಣ ತಪ್ಪಿ ಹಿಂದಿನ ಗಾಡಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಯಲಹಂಕದ ನಿಟ್ಟೆ ಮೀನಾಕ್ಷಿ ಕಾಲೇಜು ಆವರಣದಲ್ಲಿ ಆಯೋಜಿಸಿರುವ ವಿಕಾಸ ಪರ್ವ ಕಾರ್ಯಕ್ರಮಕ್ಕೆ ರಾಯಚೂರಿನಿಂದ ಸಾಕಷ್ಟು ಸಂಖ್ಯೆಯಲ್ಲಿ ಕಾರ್ಯಕರ್ತರು ತೆರಳಿದ್ದು, ಈ ವೇಳೆ ಅವಘಡ ಸಂಭವಿಸಿದೆ.