Tag: ಕ್ರೈಂ

  • ಪಲ್ಲಂಗದಾಟಕ್ಕೆ ಅಡ್ಡಿಯಾಗುತ್ತಿದ್ದಾಳೆಂದು ಮಗಳ ಹತ್ಯೆ – ಮಲತಂದೆ ಅರೆಸ್ಟ್

    ಪಲ್ಲಂಗದಾಟಕ್ಕೆ ಅಡ್ಡಿಯಾಗುತ್ತಿದ್ದಾಳೆಂದು ಮಗಳ ಹತ್ಯೆ – ಮಲತಂದೆ ಅರೆಸ್ಟ್

    ಬೆಂಗಳೂರು: ಪಲ್ಲಂಗದಾಟಕ್ಕೆ ಅಡ್ಡಿಯಾಗುತ್ತಿದ್ದಾಳೆಂದು ಮಗಳನ್ನೇ ಕೊಲೆ ಮಾಡಿದ ಮಲತಂದೆಯನ್ನು ಪೊಲೀಸರು (Police) ಬಂಧಿಸಿದ್ದಾರೆ.

    ದರ್ಶನ್ ಕೊಲೆ ಮಾಡಿದ ಆರೋಪಿ. ಶುಕ್ರವಾರ (ಅ.24) ಸಂಜೆ ಕುಂಬಳಗೋಡಿನ ರಾಮಸಂದ್ರದಲ್ಲಿ ಈ ಘಟನೆ ನಡೆದಿತ್ತು. ಸದ್ಯ ಆರೋಪಿಯ ಜಾಡು ಹಿಡಿದು ಬಂಧಿಸಿರುವ ಪೊಲೀಸರಿಗೆ ಕೊಲೆಯ ಸ್ಫೋಟಕ ವಿಚಾರಗಳು ಗೊತ್ತಾಗಿದೆ. ಇದನ್ನೂ ಓದಿ: ದೆಹಲಿ ವಿವಿ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ಕೇಸ್‌ಗೆ ಟ್ವಿಸ್ಟ್ – ಸುಳ್ಳು ಕಥೆ ಕಟ್ಟಿದ ತಂದೆ ಅರೆಸ್ಟ್

    ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ಬಾಲಕಿ ಸಿರಿಯ ತಾಯಿ ಶಿಲ್ಪಾಳನ್ನ ದರ್ಶನ್ ಎರಡನೇ ಮದುವೆಯಾಗಿದ್ದ. ಬಳಿಕ ದರ್ಶನ್ ತನ್ನ ಪ್ರೈವಸಿಯ ಬಗ್ಗೆ ತಲೆಕೆಡಿಸಿಕೊಂಡಿದ್ದ. ಹೀಗಾಗಿ ಆರೋಪಿಯು ಬಾಲಕಿಯ ಅಜ್ಜಿ ಇರೋತನಕ ಯಾವುದೇ ಕಿರಿಕ್ ಮಾಡುತ್ತಿರಲಿಲ್ಲ. ಆದರೆ ಆಕೆಯ ಅಜ್ಜಿ ಇತ್ತೀಚೆಗೆ ಮೃತಪಟ್ಟಿದ್ದರು.

    ಬಳಿಕ ತನ್ನ ಬುದ್ಧಿ ತೋರಿಸಲು ಶುರು ಮಾಡಿದ ದರ್ಶನ್, ಬಾಲಕಿಗೆ ಹೊಡೆದು ಬಡಿದು ಚಿತ್ರಹಿಂಸೆ ಕೊಡ್ತಿದ್ದ. ನಾಲ್ಕು ದಿನಗಳ ಹಿಂದೆ ಮನೆಗೆ ಬಂದಾಗ ಆರೋಪಿ ಬಾಲಕಿಯನ್ನ ಕೊಲೆ ಮಾಡಿದ್ದ. ಬಾಲಕಿಯನ್ನ ಕೊಲೆ ಮಾಡಿದ್ದಲ್ಲದೆ ಸಾಕ್ಷ್ಯ ನಾಶಕ್ಕೂ ಯತ್ನಿಸಿದ್ದ. ಆದರೆ ಅದೇ ವೇಳೆ ಶಿಲ್ಪಾ ಮನೆಗೆ ಬಂದಿದ್ದರಿಂದ ಗಾಬರಿಯಾದ ದರ್ಶನ್, ಆಕೆಯನ್ನ ರೂಮಿನಲ್ಲಿ ಕೂಡಿ ಹಾಕಿ ಎಸ್ಕೇಪ್ ಆಗಿದ್ದ.

    ಪೊಲೀಸರು ಆತನ ಬೆನ್ನು ಬಿದ್ದು, ನೆಲಮಂಗಲ ಬಳಿ ಹೆಡೆಮುರಿ ಕಟ್ಟಿದ್ದಾರೆ. ಸದ್ಯ ಪ್ರೈವಸಿ ತೊಂದರೆಯಿಂದಲೇ ದರ್ಶನ್ ಬಾಲಕಿಯನ್ನು ಕೊಲೆ ಮಾಡಿರೋದು ಗೊತ್ತಾಗಿದೆ. ಪೊಲೀಸರು ಆತನನ್ನು ತೀವ್ರ ವಿಚಾರಣೆ ಒಳಪಡಿಸಿದ್ದು, ಮತ್ತಷ್ಟು ವಿಚಾರ ಬಯಲಾಗಲಿದೆ.

  • ದೆಹಲಿ ವಿವಿ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ಕೇಸ್‌ಗೆ ಟ್ವಿಸ್ಟ್ – ಸುಳ್ಳು ಕಥೆ ಕಟ್ಟಿದ ತಂದೆ ಅರೆಸ್ಟ್

    ದೆಹಲಿ ವಿವಿ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ಕೇಸ್‌ಗೆ ಟ್ವಿಸ್ಟ್ – ಸುಳ್ಳು ಕಥೆ ಕಟ್ಟಿದ ತಂದೆ ಅರೆಸ್ಟ್

    ನವದೆಹಲಿ: ದೆಹಲಿ (Delhi) ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬಳು ತನ್ನ ಮೇಲೆ ಆ್ಯಸಿಡ್ ದಾಳಿ ನಡೆಸಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಇದೀಗ ತನಿಖೆ ನಡೆಸಿದ ಪೊಲೀಸರು ಸುಳ್ಳು ಕಥೆ ಕಟ್ಟಿದ ಆರೋಪದಲ್ಲಿ ವಿದ್ಯಾರ್ಥಿನಿಯ ತಂದೆಯನ್ನೇ ಬಂಧಿಸಿದ್ದಾರೆ.

    ನಕಲಿ ಆ್ಯಸಿಡ್ ದಾಳಿಯ ಸೂತ್ರಧಾರ ಅಕೀದ್ ಖಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ 20 ವರ್ಷದ ಮಗಳ ಕೈಗಳ ಮೇಲೆ ತಾನೇ ಟಾಯ್ಲೆಟ್ ಕ್ಲೀನರ್ ಸುರಿದು ಸುಳ್ಳು ಕಥೆ ಕಟ್ಟಿರುವುದಾಗಿ ಆರೋಪಿಯು ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ – 30 ಲಕ್ಷ ಮೌಲ್ಯದ ಐಫೋನ್ ದೋಚಿದ್ದ ಗ್ಯಾಂಗ್ ಅರೆಸ್ಟ್

    ಏನಿದು ಪ್ರಕರಣ?
    ಭಾನುವಾರ (ಅ.26) ದೆಹಲಿಯ ಲಕ್ಷ್ಮಿಬಾಯಿ ಕಾಲೇಜಿನ ಹೊರಗೆ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ (Acid Attack)  ಮಾಡಲಾಗಿದೆ ಎಂದು ಸುದ್ದಿಯಾಗಿತ್ತು. ಬೈಕ್‌ನಲ್ಲಿ ಬಂದ ಮೂವರು ಆ್ಯಸಿಡ್ ಎಸೆದು ಪರಾರಿಯಾಗಿದ್ದಾರೆ. ಮುಖವನ್ನು ರಕ್ಷಿಸುವ ಭರದಲ್ಲಿ ತನ್ನ ಕೈಗಳಿಗೆ ಸುಟ್ಟ ಗಾಯಗಳಾಗಿವೆ. ಆರೋಪಿಗಳಲ್ಲಿ ಓರ್ವ ಮುಕುಂದ್‌ಪುರದ ನಿವಾಸಿ ಜಿತೇಂದ್ರ ಮತ್ತು ಆತನ ಮತ್ತಿಬ್ಬರು ಸ್ನೇಹಿತರಾದ ಇಶಾನ್ ಮತ್ತು ಅರ್ಮಾನ್ ಎಂದು ಆರೋಪಿಸಿದ್ದಳು. ಇದನ್ನೂ ಓದಿ: ಬ್ರೆಜಿಲ್ ಮೂಲದ ಮಾಡೆಲ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಡೆಲಿವರಿ ಬಾಯ್ ಅರೆಸ್ಟ್

    ತನಿಖೆಯ ವೇಳೆ ವಿದ್ಯಾರ್ಥಿನಿಯ ಹೇಳಿಕೆಯಲ್ಲಿ ಗೊಂದಲವಿರುವುದನ್ನು ಪೊಲೀಸರು ಗಮನಿಸಿದ್ದರು. ಕೂಡಲೇ ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ, ಆರೋಪಿ ಜಿತೇಂದ್ರ ಹಾಗೂ ಆತನ ಬೈಕ್ ಕೃತ್ಯ ನಡೆದಿದೆ ಎಂದು ಹೇಳಿದ ಸಮಯದಲ್ಲಿ ಬೇರೆ ಕಡೆ ಇರುವುದು ಕಂಡು ಬಂದಿತ್ತು. ಕರೆಗಳ ವಿವರ, ಸಿಸಿಟಿವಿ ದೃಶ್ಯಗಳು, ಸಾಕ್ಷಿಗಳ ಹೇಳಿಕೆಗಳಿಂದ ಇದು ದೃಢಪಟ್ಟಿದೆ ಎಂದು ವಿಶೇಷ ಪೊಲೀಸ್ ಆಯುಕ್ತ ರವೀಂದರ್ ಯಾದವ್ ತಿಳಿಸಿದ್ದಾರೆ.

    ಈ ಕುರಿತು ಹೆಚ್ಚಿನ ತನಿಖೆ ನಡೆಸಿದ ವೇಳೆ ಘಟನೆಯ 2 ದಿನದ ಹಿಂದೆ ವಿದ್ಯಾರ್ಥಿನಿಯ ತಂದೆಯ ಮೇಲೆ ಜಿತೇಂದ್ರ ಪತ್ನಿ ಲೈಂಗಿಕ ದೌರ್ಜನ್ಯ ಮತ್ತು ಬ್ಲ್ಯಾಕ್‌ಮೇಲ್ ದೂರು ನೀಡಿದ್ದರು. ಈ ವಿಚಾರವಾಗಿ ಇಬ್ಬರ ನಡುವೆಯೂ ವಾಗ್ವಾದ ನಡೆದಿತ್ತು. ಇದೇ ಕಾರಣಕ್ಕಾಗಿ ವಿದ್ಯಾರ್ಥಿನಿಯ ತಂದೆಯು ಜಿತೇಂದ್ರ ವಿರುದ್ಧ ಸಂಚು ರೂಪಿಸಿ, ಆ್ಯಸಿಡ್ ದಾಳಿಯ ಸುಳ್ಳು ಕಥೆ ಕಟ್ಟಿದ್ದ ಎಂದು ತನಿಖೆ ವೇಳೆ ಬಯಲಾಗಿದೆ.

  • ಯುವತಿ ವಿಚಾರಕ್ಕೆ ಗಲಾಟೆ ಶಂಕೆ – ಮಚ್ಚಿನಿಂದ ಕೊಚ್ಚಿ ಯುವಕನ ಹತ್ಯೆ

    ಯುವತಿ ವಿಚಾರಕ್ಕೆ ಗಲಾಟೆ ಶಂಕೆ – ಮಚ್ಚಿನಿಂದ ಕೊಚ್ಚಿ ಯುವಕನ ಹತ್ಯೆ

    ಹಾಸನ: ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನದ (Hassan) ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆದಿದೆ.

    ಚನ್ನಕೇಶವಗೌಡ್ರು ಬೀದಿಯ ನಿವಾಸಿ ಗಿರೀಶ್ (28) ಕೊಲೆಯಾದ ಯುವಕ. ಸುರಪುರ ಗ್ರಾಮದ ಶ್ರೀನಿವಾಸ್ ಅಲಿಯಾಸ್ ಸೀನ ಕೊಲೆಗೈದ ಆರೋಪಿ. ಸೀನ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಇದನ್ನೂ ಓದಿ: ಶಿವಮೊಗ್ಗ | ಕಾರ್ಮಿಕ ಇಲಾಖೆಯ ಕಟ್ಟಡ ಕುಸಿದು ಓರ್ವ ಸಾವು – ಮತ್ತೋರ್ವನಿಗೆ ಗಂಭೀರ ಗಾಯ

    ಭಾನುವಾರ ರಾತ್ರಿ ಯುವತಿ ವಿಚಾರಕ್ಕೆ ಗಿರೀಶ್ ಹಾಗೂ ಸೀನನ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಇದರಿಂದ ಗಿರೀಶ್ ಮೇಲೆ ಸೀನ ಕೋಪಗೊಂಡಿದ್ದ. ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಗಿರೀಶ್ ಇಂದು ಬೆಳಿಗ್ಗೆ 11 ಗಂಟೆ ಸುಮಾರಿನಲ್ಲಿ ಸಾರಿಗೆ ಬಸ್ ನಿಲ್ದಾಣದಲ್ಲಿರುವ ಶೌಚಾಲಯಕ್ಕೆ ಹೋಗಿ ಹೊರಗೆ ಬಂದಿದ್ದ.

    ಈ ವೇಳೆ ಕಾದು ನಿಂತಿದ್ದ ಸೀನ ಮಚ್ಚು ಹಿಡಿದು ಗಿರೀಶ್ ಮೇಲೆ ಅಟ್ಯಾಕ್ ಮಾಡಿ ಮನಬಂದಂತೆ ಕೊಚ್ಚಿ ಎಸ್ಕೇಪ್ ಆಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಿರೀಶ್‌ನನ್ನು ಅಂಬ್ಯುಲೆನ್ಸ್‌ನಲ್ಲಿ ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.

    ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಬ್ರಿಟನ್‌ನಲ್ಲಿ ಭಾರತೀಯ ಮೂಲದ 20ರ ಯುವತಿ ಮೇಲೆ ಅತ್ಯಾಚಾರ

    ಬ್ರಿಟನ್‌ನಲ್ಲಿ ಭಾರತೀಯ ಮೂಲದ 20ರ ಯುವತಿ ಮೇಲೆ ಅತ್ಯಾಚಾರ

    ಲಂಡನ್‌: ಬ್ರಿಟನ್‌ನಲ್ಲಿ ಭಾರತೀಯ ಮೂಲದ 20 ವರ್ಷದ ಯುವತಿ (Indian Origin Woman) ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಪ್ರಕರಣವನ್ನ ಪೊಲೀಸರು ಜನಾಂಗೀಯ ಪ್ರೇರಿತ ಎಂದು ಹೇಳಿದ್ದಾರೆ.

    ಬ್ರಿಟನ್‌ನ ವೆಸ್ಟ್‌ ಮಿಡ್‌ಲ್ಯಾಂಡ್ಸ್‌ನಲ್ಲಿ (West Midlands) ಘಟನೆ ನಡೆದಿದ್ದು, ಆಕೆಯ ಜನಾಂಗೀನ ಗುರುತಿನ ಕಾರಣದಿಂದ ಕೃತ್ಯ ನಡೆದಿದೆ ಎಂದು ಶಂಕಿಸಿದ್ದಾರೆ. ಇದು ಯುವತಿ ಮೇಲೆ ನಡೆದ ಅತ್ಯಂತ ಭಯಾನಕ ದಾಳಿಯಾಗಿದೆ. ಕೃತ್ಯ ಎಸಗಿದ ಕಾಮುಕನಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ. ತನಿಖೆಗೆ ತಂಡಗಳನ್ನು ರಚಿಸಿದ್ದು, ಶೀಘ್ರವೇ ಬಂಧಿಸಲಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ರೋನನ್ ಟೈರರ್ ತಿಳಿಸಿದ್ದಾರೆ. ಇದನ್ನೂ ಓದಿ: ಅರ್ಧಗಂಟೆ ಅಂತರದಲ್ಲಿ 2 ದುರಂತ – ಅಮೆರಿಕ ನೌಕಾಪಡೆಯ ಹೆಲಿಕಾಪ್ಟರ್, ಫೈಟರ್ ಜೆಟ್ ಪತನ

    ಅಲ್ಲದೇ ಈಗಾಗಲೇ ಸಿಸಿಟಿವಿ ದೃಶ್ಯಗಳ ಪರಿಶೀಲನೆ ನಡೆಸಲಾಗಿದ್ದು, ಆರೋಪಿಯ ಫೋಟೋವನ್ನೂ ರಿಲೀಸ್‌ ಮಾಡಲಾಗಿದೆ. ಆರೋಪಿ ಹುಡುಕಾಟಕ್ಕೆ ತಮ್ಮೊಂದಿಗೆ ಸಹಕರಿಸುವಂತೆ ಸ್ಥಳೀಯ ನಿವಾಸಿಗಳಿಗೆ ಪೊಲೀಸರು ಮನವಿ ಮಾಡಿದ್ದಾರೆ.

    ಘಟನೆ ಬೆಳಕಿಗೆ ಬಂದಿದ್ದು ಹೇಗೆ?
    ಮಹಿಳೆಯೊಬ್ಬರು ದೌರ್ಜನ್ಯಕ್ಕೆ ಒಳಗಾಗಿ ರಸ್ತೆ ಮಧ್ಯೆ ಅಳುತ್ತಾ ಕುಳಿತಿದ್ದಾಳೆ ಅನ್ನೋ ವಿಷಯ ಪೊಲೀಸರಿಗೆ ಗೊತ್ತಾಯ್ತು. ಸುದ್ದಿ ತಿಳಿದ ಪೊಲೀಸರು ವಾಲ್ಸಾಲ್‌ನ ಪಾರ್ಕ್ ಹಾಲ್ ಪ್ರದೇಶಕ್ಕೆ ಹೋದಾಗ ಸಂತ್ರಸ್ತೆಯನ್ನ ಗುರುತಿಸಿದ್ದಾರೆ.  ಇದನ್ನೂ ಓದಿ: ನೆಲಮಂಗಲ | ತಣ್ಣಗಾಗಿದ್ದ ಏರಿಯಾದಲ್ಲಿ ಮತ್ತೆ ರೌಡಿಸಂ – ಪಂಚಾಯಿತಿ ಸದಸ್ಯನ ಮೇಲೆ ಗುಂಡಿನ ದಾಳಿ

  • ಬೆಂಗಳೂರು | ಮನೆಗೆ ನುಗ್ಗಿ ಗ್ಯಾಂಗ್‌ ರೇಪ್‌ ಮಾಡಿದ್ದ ಕಾಮುಕರ ಬಂಧನ

    ಬೆಂಗಳೂರು | ಮನೆಗೆ ನುಗ್ಗಿ ಗ್ಯಾಂಗ್‌ ರೇಪ್‌ ಮಾಡಿದ್ದ ಕಾಮುಕರ ಬಂಧನ

    ಬೆಂಗಳೂರು: ಗಂಗಗೊಂಡನಹಳ್ಳಿಯಲ್ಲಿರುವ ಮನೆಗೆ ನುಗ್ಗಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಕಾಮುಕರನ್ನ ಮಾದಕನಾಯಕನ ಹಳ್ಳಿ ಪೊಲೀಸರು (Madanayakahalli Police) ಬಂಧಿಸಿದ್ದಾರೆ.

    ಘಟನೆ ನಡೆದ 24 ಗಂಟೆಯ ಒಳಗಾಗಿ ಮೂವರು ಕಾಮುಕರನ್ನ ಬಂಧಿಸಲಾಗಿದೆ. ಕಾರ್ತಿಕ್‌, ಗ್ಲೇನ್, ಸಯೋಗ ಬಂಧಿತ ಕಾಮುಕರು. ಸದ್ಯ ಬಂಧವಾಗಿರುವ ಆರೋಪಿ (Accused) ಕೃತ್ಯ ನಡೆದ ಅಕ್ಕಪಕ್ಕದ ಏರಿಯಾದವರೇ ಆಗಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ತಿಗಣೆ ಔಷಧಿ ವಾಸನೆಗೆ ಬಿಟೆಕ್ ವಿದ್ಯಾರ್ಥಿ ಬಲಿ

    ಪ್ಲ್ಯಾನ್‌ ಮಾಡಿಕೊಂಡೇ ಕೃತ್ಯ
    ಇನ್ನು ಕಾಮುಕರು ಪ್ಲ್ಯಾನ್‌ ಮಾಡಿಕೊಂಡೇ ಕೃತ್ಯ ಎಸಗಿರೋದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿಗಳು ಮೊದಲು ಮನೆಯಲ್ಲಿದ್ದ ಇಬ್ಬರು ಪುರಷರ ಮೇಲೆ ಹಲ್ಲೆ ಮಾಡಿ ಕಟ್ಟಿಹಾಕಿದ್ದಾರೆ. ಆ ಬಳಿಕ ಇದ್ದ ಐವರಲ್ಲಿ ಮೂವರು ಮನೆ ಒಳಗಡೆ ಹೋಗಿ ಮಹಿಳೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಬಳಿಕ ಆಕೆಯ ಬಳಿ ಇದ್ದ ಮೊಬೈಲ್ ಹಾಗೂ 50 ಸಾವಿರ ರೂ. ನಗದನ್ನು ದೋಚಿ ಪರಾರಿಯಾಗಿದ್ದಾರೆ.

    ಘಟನೆ ಸಂಬಂಧ ಅತ್ಯಾಚಾರ ಹಾಗೂ ರಾಬರಿ ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದರು. ಕಾಮುಕರ ಹುಡುಕಾಟಕ್ಕೆ ಮೂರು ತಂಡಗಳನ್ನ ರಚಿಸಲಾಗಿತ್ತು. ಸದ್ಯ ಮೂವರನ್ನ ಬಂಧನ ಮಾಡಿದ್ದು ಉಳಿದು ಇಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಖಾಸಗಿ ಭಾಗ ಮುಟ್ಟಿ, ರೂಮ್ ಬುಕ್ ಮಾಡಿದ್ದೇನೆ ಸಹಕರಿಸು ಅಂತಿದ್ದ – ಚಿಕಿತ್ಸೆಗೆ ಬಂದಿದ್ದ ಯುವತಿಗೆ  ಕಿರುಕುಳ, ವೈದ್ಯ ಅರೆಸ್ಟ್

    ಇನ್ನು ಕೀಚಕರ ಅಟ್ಟಹಾಸದಿಂದ ನಲುಗಿರೋ ಸಂತ್ರಸ್ತೆಗೆ ಚಿಕಿತ್ಸೆ ಕೊಡಿಸಲಾಗಿದ್ದು ಚೇತರಿಸಿಕೊಂಡಿದ್ದಾರೆ. ಸಂತ್ರಸ್ತೆ ಮನೆಯಲ್ಲಿದ್ದ ಇಬ್ಬರು ಪುರುಷರಿಗೆ ಬ್ಯಾಟ್‌ನಿಂದ ಗಂಭೀರವಾಗಿ ಹಲ್ಲೆ ಮಾಡಿದ್ದರಿಂದ ಇಬ್ಬರನ್ನೂ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಕರಣದ ಗಂಭೀರತೆ ಅರಿತ ಅಧಿಕಾರಿಗಳು ನೆಲಮಂಗಲ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ಮಾಡಿಸಲು ಆದೇಶಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ.‌ಬಾಬಾ ಸ್ಪಷ್ಟಪಡಿಸಿದ್ದಾರೆ.

  • ತುಮಕೂರು | ಕೆರೆಗೆ ಬಿದ್ದು ತಂದೆ, ಮಗಳು ಸೇರಿ ಮೂವರು ಸಾವು

    ತುಮಕೂರು | ಕೆರೆಗೆ ಬಿದ್ದು ತಂದೆ, ಮಗಳು ಸೇರಿ ಮೂವರು ಸಾವು

    ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪದ ಯರೇಕಟ್ಟೆ ಗ್ರಾಮದ ಕೆರೆಗೆ ಬಿದ್ದು ತಂದೆ, ಮಗಳು ಸೇರಿ ಮೂವರು ಇಂದು ಸಂಜೆ ಸಾವನ್ನಪ್ಪಿದ್ದಾರೆ.

    ಯರೇಕಟ್ಟೆ ಗ್ರಾಮದ ವೆಂಕಟೇಶ್ (47), ಮಗಳು ಶ್ರಾವ್ಯ (12) ಹಾಗೂ ವೆಂಕಟೇಶ್ ಅಣ್ಣನ ಮಗನ ಮಗಳು ಪುಣ್ಯ (11) ಮೃತ ದುರ್ದೈವಿಗಳು. ಇದನ್ನೂ ಓದಿ: ದೀಪಾವಳಿ ಸಂಭ್ರಮದಲ್ಲಿ ಅವಘಡ – ಬೆಂಗ್ಳೂರಲ್ಲಿ 68 ಮಂದಿ ಕಣ್ಣಿಗೆ ಗಾಯ

    ಸಂಜೆ 6 ಗಂಟೆಗೆ ಗ್ರಾಮದ ಬಳಿಯ ಕೆರೆ ಕಡೆ ಮೂವರು ಹೋಗಿದ್ದಾರೆ. ಕೆರೆಯಲ್ಲಿ ನೀರು ಮುಟ್ಟಲು ಹೋಗಿ ಶ್ರಾವ್ಯ ಹಾಗೂ ಪುಣ್ಯ ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ಮತ್ತೊಬ್ಬಳು ಬುದ್ಧಿಮಾಂದ್ಯಳಾಗಿದ್ದು ಮನೆಗೆ ಬಂದು ಕೆರೆಗೆ ಬಿದ್ದಿರುವ ವಿಷಯ ತಿಳಿಸಿದ್ದಾರೆ. ಕೂಡಲೇ ವೆಂಕಟೇಶ್ ಹಾಗೂ ಮಂಜುನಾಥ್ ರಕ್ಷಣೆಗೆ ತೆರಳಿದ್ದಾರೆ. ಈ ವೇಳೆ ವೆಂಕಟೇಶ್ ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ವೆಂಕಟೇಶ್ ಹಾಗೂ ಶ್ರಾವ್ಯ ಮೃತಪಟ್ಟಿದ್ದರೆ, ಪುಣ್ಯ ಹುಳಿಯಾರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

    ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಭಾರತೀಯ ಸೇನೆಗೆ ಬ್ರಹ್ಮೋಸ್ ಕ್ಷಿಪಣಿ ಬ್ರಹ್ಮಾಸ್ತ್ರ – ಶೀಘ್ರದಲ್ಲೇ ಮಿಸೈಲ್ ಸಾಮರ್ಥ್ಯ 800 ಕಿಮೀಗೆ ಹೆಚ್ಚಳ

  • ದುರ್ಗಾಪುರ ಗ್ಯಾಂಗ್‌ ರೇಪ್‌ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್‌ – ಜೊತೆಗಿದ್ದ ಸ್ನೇಹಿತನೇ 6ನೇ ಆರೋಪಿ

    ದುರ್ಗಾಪುರ ಗ್ಯಾಂಗ್‌ ರೇಪ್‌ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್‌ – ಜೊತೆಗಿದ್ದ ಸ್ನೇಹಿತನೇ 6ನೇ ಆರೋಪಿ

    – ಮ್ಯಾಜಿಸ್ಟ್ರೇಟ್‌ ಮುಂದೆ ಸಂತ್ರಸ್ತೆ ಹೇಳಿಕೆ ಬಳಿಕ ಅರೆಸ್ಟ್‌

    ಕೋಲ್ಕತ್ತಾ: ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ (Odisha) ಜಲೇಶ್ವರ ಮೂಲದ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಈಗ ಸ್ಫೋಟಕ ತಿರುವು ಸಿಕ್ಕಿದೆ. ಸಂತ್ರಸ್ತೆ ಮ್ಯಾಜಿಸ್ಟ್ರೇಟ್‌ ಎದುರು ನೀಡಿದ ಹೇಳಿಕೆಯನ್ನಧಾರಿಸಿ ಆಕೆ ಜೊತೆಗೆ ಊಟಕ್ಕೆ ಬಂದಿದ್ದ ಸ್ನೇಹಿತನನ್ನ ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ 6ಕ್ಕೆ ತಲುಪಿದೆ.

    West Bengal Police

    ನನ್ನ ಮೇಲೆ ಬಲವಂತವಾಗಿ ಹಲ್ಲೆಗೆ ಯತ್ನ
    ವರದಿಗಳ ಪ್ರಕಾರ, ಸಂತ್ರಸ್ತೆ ಮ್ಯಾಜಿಸ್ಟ್ರೇಟ್‌ ಮುಂದೆ ನೀಡಿದ ಹೇಳಿಕೆಯಲ್ಲಿ, ಜೊತೆಗಿದ್ದ ಸಹಪಾಠಿ ತನ್ನ ಮೇಲೆ ಬಲವಂತವಾಗಿ ಹಲ್ಲೆಗೆ ಯತ್ನಿಸಿದ್ದಾನೆ ಎಂದು ಹೇಳಿದ್ದಾರೆ. ಈ ಹೇಳಿಕೆಯನ್ನಾಧರಿಸಿ ಊಟದ ಸಮಯದಲ್ಲಿ ಜೊತೆಗಿದ್ದ ಸಹಪಾಠಿಯನ್ನ 6ನೇ ಆರೋಪಿಯಾಗಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಅರೆಸ್ಟ್‌

    Stop Rape Crime 2

    ಕಳೆದ ಶುಕ್ರವಾರ ಜಲೇಶ್ವರದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಆಕೆ ತನ್ನ ಸ್ನೇಹಿತನೊಂದಿಗೆ ತೆರಳಿದ್ದಾಗ ಕೆಲವರು ಅವರನ್ನು ತಡೆದು ಅವರನ್ನು 1 ಕಿ.ಮೀ ದೂರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಬಳಿಕ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು.

    ಘಟನೆ ಬಳಿಕ ಆಕೆಯ ಸ್ನೇಹಿತ ಕೂಡ ಈ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿತ್ತು. ಯುವತಿಗೆ ಸುಳ್ಳು ಹೇಳಿ ಆಕೆಯನ್ನು ದಾರಿ ತಪ್ಪಿಸಿ ನಿರ್ಜನ ಸ್ಥಳಕ್ಕೆ ಕರೆದೊಯ್ದಿದ್ದಾನೆ. ಅಲ್ಲದೇ ಆಕೆಯ ಫೋನ್ ಕಸಿದುಕೊಂಡು 5,000 ರೂ. ಹಣ ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಇದನ್ನೂ ಓದಿ: ರಾತ್ರಿ ವೇಳೆ ಹೆಣ್ಣುಮಕ್ಕಳನ್ನ ಹೊರಗೆ ಬಿಡಬಾರದು – ಗ್ಯಾಂಗ್‌ರೇಪ್‌ ಕೇಸ್‌ ಬಗ್ಗೆ ದೀದಿ ಶಾಕಿಂಗ್‌ ಹೇಳಿಕೆ

  • ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ ರೇಪ್‌; ಬಂಗಾಳದಲ್ಲಿ ಮತ್ತೊಂದು ಕ್ರೂರ ಘಟನೆ

    ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ ರೇಪ್‌; ಬಂಗಾಳದಲ್ಲಿ ಮತ್ತೊಂದು ಕ್ರೂರ ಘಟನೆ

    ಕೋಲ್ಕತ್ತಾ: ಆರ್‌ಜಿಕರ್ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ (Medical College Student) ಮೇಲೆ ನಡೆದ ಅತ್ಯಚಾರ ಪ್ರಕರಣ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು, ಇದರ ಬೆನ್ನಲೆ ಪಶ್ಚಿಮ ಬಂಗಾಳದಲ್ಲಿ (West Bengal) ಮತ್ತೊಂದು ಘೋರ ಘಟನೆ ನಡೆದಿದೆ. ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

    ಒಡಿಶಾದ ಜಲೇಶ್ವರ ನಿವಾಸಿಯಾಗಿರುವ ಯುವತಿ, ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ (Private Medical College) ದ್ವೀತಿಯ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು. ಶುಕ್ರವಾರ ರಾತ್ರಿ ಸ್ನೇಹಿತನೊಂದಿಗೆ ಊಟಕ್ಕೆ ಹೋಗಿ ಮರಳುವ ವೇಳೆ ಘಟನೆ ನಡೆದಿದೆ. ಇದನ್ನೂ ಓದಿ: ಹನಿಟ್ರ್ಯಾಪ್‌ಗೆ ಸಿಲುಕಿ ಪಾಕ್ ಪರ ಬೇಹುಗಾರಿಕೆ – ರಾಜಸ್ಥಾನದಲ್ಲಿ ಆರೋಪಿ ಅರೆಸ್ಟ್‌

    ಸಂತ್ರಸ್ಥ ಯುವತಿ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬ ಸದಸ್ಯರು ಸಲ್ಲಿಸಿದ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಲಾಗಿದೆ. ಇಲ್ಲಿಯವರೆಗೆ ಈ ಸಂಪೂರ್ಣ ಪ್ರಕರಣದಲ್ಲಿ ಯಾರನ್ನೂ ಬಂಧಿಸಲಾಗಿಲ್ಲ.

    ಸುದ್ದಿಗಾರರೊಂದಿಗೆ ಮಾತನಾಡಿದ ವಿದ್ಯಾರ್ಥಿನಿಯ ಪೋಷಕರು, ತಮ್ಮ ಮಗಳ ಸ್ನೇಹಿತರಿಂದ ಕರೆ ಬಂದ ನಂತರ ಇಂದು ಬೆಳಗ್ಗೆ ದುರ್ಗಾಪುರ ತಲುಪಿದ್ದೇವೆ ಎಂದು ಹೇಳಿದರು. ವಿದ್ಯಾರ್ಥಿನಿಯ ತಂದೆ ಮಾತನಾಡಿ, ನಮಗೆ ಅವಳ ಸ್ನೇಹಿತರಿಂದ ಕರೆ ಬಂತು ಮತ್ತು ಅವರು ಘಟನೆಯ ಬಗ್ಗೆ ಮಾಹಿತಿ ನೀಡಿದರು. ಇದನ್ನೂ ಓದಿ: ಪಾಕ್ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಆತ್ಮಾಹುತಿ ದಾಳಿ – 7 ಪೊಲೀಸರು, 6 ಉಗ್ರರು ಸಾವು

    ನಾವು ಇಂದು ಬೆಳಗ್ಗೆ ಇಲ್ಲಿಗೆ ಬಂದು ಪೊಲೀಸ್ ದೂರು ದಾಖಲಿಸಿದ್ದೇವೆ. ಪ್ರಸ್ತುತ, ಪೊಲೀಸರು ಎಲ್ಲಾ ಸಂಭಾವ್ಯ ಕೋನಗಳಿಂದಲೂ ತನಿಖೆ ನಡೆಸುತ್ತಿದ್ದಾರೆ. ತನಿಖಾ ಅಧಿಕಾರಿಗಳು ಎಲ್ಲಾ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ. ಇದನ್ನೂ ಓದಿ: ಮೈಸೂರು | ಬಾಲಕಿಯ ರೇಪ್‌ ಬಳಿಕ ಎದೆ, ಹೊಟ್ಟೆ, ಮರ್ಮಾಂಗಕ್ಕೆ 19 ಬಾರಿ ಚಾಕು ಇರಿದು ಕೊಂದಿದ್ದ ಕಾಮುಕ 

  • ವಿಮೆ ಹಣದ ಮೇಲೆ ಕಣ್ಣು – ಅಳಿಯನನ್ನೇ ಕೊಲೆ ಮಾಡಿದ ಮಾವ & ಗ್ಯಾಂಗ್

    ವಿಮೆ ಹಣದ ಮೇಲೆ ಕಣ್ಣು – ಅಳಿಯನನ್ನೇ ಕೊಲೆ ಮಾಡಿದ ಮಾವ & ಗ್ಯಾಂಗ್

    ಹಾವೇರಿ: ಅಳಿಯನ ವಿಮೆ (Insurance) ಹಣದ ಆಸೆಗಾಗಿ ಕೊಲೆ ಮಾಡಿ, ಅಪಘಾತವೆಂದು ಬಿಂಬಿಸಿರುವ ಮಾವ ಹಾಗೂ ಆತನ ಗ್ಯಾಂಗ್ ಅಂದರ್ ಆಗಿರುವ ಘಟನೆ ಹಾವೇರಿಯಲ್ಲಿ (Haveri) ನಡೆದಿದೆ.

    ಜಿಲ್ಲೆ ರಟ್ಟಿಹಳ್ಳಿ (Rattihalli) ಪಟ್ಟಣದ ಬಸವರಾಜ್ ಪುಟ್ಟಪ್ಪನವರ್ (38) ಕೊಲೆಯಾದ ಅಳಿಯ. ಮಾವ ಸಿದ್ದನಗೌಡ, ರಾಘವೇಂದ್ರ ಮಾಳಗೊಂಡರ, ಪ್ರವೀಣ ಹಾಗೂ ಲೋಕೇಶ ಹಲಗೇರಿ ಕೊಲೆ ಮಾಡಿದ ಆರೋಪಿಗಳು. ಇದನ್ನೂ ಓದಿ: ಮೈಸೂರಲ್ಲಿ ಬಲೂನ್ ಮಾರೋ ಹುಡ್ಗಿ ರೇಪ್ & ಮರ್ಡರ್ – ಕೊಳ್ಳೇಗಾಲದಲ್ಲಿ ಆರೋಪಿ ಅರೆಸ್ಟ್‌


    ಬಸವರಾಜ್‌ನ ತಂದೆ, ತಾಯಿ ಹಾಗೂ ಸಹೋದರರು ಈ ಹಿಂದೆಯೇ ನಿಧನ ಹೊಂದಿದ್ದರಿಂದ ಒಬ್ಬಂಟಿಯಾಗಿ ಜೀವನ ಮಾಡುತ್ತಿದ್ದ. ಮದ್ಯ ವ್ಯಸನಿಯಾಗಿದ್ದ ಬಸವರಾಜ್, ಹೆಸರಿನಲ್ಲಿ ಕೋಟ್ಯಂತರ ರೂ. ಮೌಲ್ಯದ ಮನೆ, ಆಸ್ತಿ ಸಹ ಇತ್ತು.

    ಬಸವರಾಜ್ ಮದ್ಯ ವ್ಯಸನಿಯಾಗಿದ್ದನ್ನೇ ಬಂಡವಾಳ ಮಾಡಿಕೊಂಡಿದ್ದ ಮಾವ ಸಿದ್ದನಗೌಡ, ಆತನ 8 ಎಕ್ರೆ ಜಮೀನು ಹಾಗೂ ಮನೆ ಮೇಲೆ ಕಣ್ಣುಹಾಕಿದ್ದ. ಬಸವರಾಜ್‌ನ ಸಹೋದರ ಸಂಬಂಧಿಕರು ಆತನ ಯಾವುದೇ ಆಸ್ತಿ ಮಾರಾಟ ಮಾಡದಂತೆ ಕೋರ್ಟ್ನಿಂದ ಸ್ಟೇ ತಂದಿದ್ದರು. ಇದನ್ನೂ ಓದಿ: ಯಲಹಂಕ ಅಗ್ನಿ ದುರಂತ | ತಾನು ಸುರಿದುಕೊಂಡು ಯುವತಿಗೂ ಪೆಟ್ರೋಲ್ ಹಾಕಲು ಮುಂದಾಗಿದ್ದ ಯುವಕ

    ಈ ವಿಚಾರ ತಿಳಿದ ಸಿದ್ದನಗೌಡ, ರಾಘವೇಂದ್ರ ಎಂಬುವವನಿಗೆ 50,000 ರೂ. ಹಣ ನೀಡಿ ಅಪಘಾತ ವಿಮೆ ಮಾಡಲು ಹೇಳಿದ್ದ. ಆಸ್ತಿ ಸಿಗಲ್ಲ ಎಂದು ತಿಳಿದ ಗ್ಯಾಂಗ್ ಇನ್ಶೂರೆನ್ಸ್ ಹಣದ ಆಸೆಗಾಗಿ ಪ್ಲ್ಯಾನ್ ಮಾಡಿ, ಸೆ.27 ರಂದು ಬಸವರಾಜ್‌ನನ್ನು ಮನೆಯಿಂದ ಕರೆದುಕೊಂಡು ಹೋಗಿದ್ದರು. ಬಳಿಕ ಆತನಿಗೆ ಕಂಠಪೂರ್ತಿ ಕುಡಿಸಿ, ಬೈಕ್‌ನಲ್ಲಿ ಊರಿಗೆ ಕಳುಹಿಸಿದ್ದರು. ಬಳಿಕ ಬಸವರಾಜ್ ಹಿಂದೆಯೇ ಕಾರು ತೆಗೆದುಕೊಂಡು ಹೋಗಿ ಡಿಕ್ಕಿ ಹೊಡೆದು, ರಟ್ಟಿಹಳ್ಳಿ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ ಕೊಲೆ ಮಾಡಿ, ಆರೋಪಿಗಳು ಅಪಘಾತ ಎಂದು ಬಿಂಬಿಸಿದ್ದರು.

    ಅಪಘಾತದ ಸ್ಥಳಕ್ಕಾಗಮಿಸಿದ್ದ ಬಸವರಾಜ್ ಕುಟುಂಬಸ್ಥರು, ಇದು ಕೊಲೆ ಅನ್ನೋ ಅನುಮಾನ ವ್ಯಕ್ತಪಡಿಸಿದ್ದರು. ಬಳಿಕ ಪೊಲೀಸರ ತನಿಖೆ ವೇಳೆ ಆಸ್ತಿ, ಮನೆ ಹಾಗೂ ಇನ್ಶೂರೆನ್ಸ್ ಹಣದ ಆಸೆಗಾಗಿ ಆರೋಪಿಗಳು ಕೊಲೆ ಮಾಡಿರುವುದಾಗಿ ಬಯಲಾಗಿದೆ. ಸದ್ಯ ಪೊಲೀಸರು ನಾಲ್ವರು ಆರೋಪಿಗಳನ್ನ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

  • ಮೈಸೂರಲ್ಲಿ 10 ವರ್ಷದ ಬಾಲಕಿ ಮೇಲೆ ರೇಪ್ & ಮರ್ಡರ್; ಆರೋಪಿ ಗುರುತು ಪತ್ತೆ

    ಮೈಸೂರಲ್ಲಿ 10 ವರ್ಷದ ಬಾಲಕಿ ಮೇಲೆ ರೇಪ್ & ಮರ್ಡರ್; ಆರೋಪಿ ಗುರುತು ಪತ್ತೆ

    ಮೈಸೂರು: ನಗರದಲ್ಲಿ 10 ವರ್ಷದ ಬಾಲಕಿ ಮೇಲೆ ರೇಪ್ ಅಂಡ್ ಮರ್ಡರ್ (Rape And Murder) ಆಗಿದೆ. ವಿರೂಪಗೊಂಡ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಬಿದ್ದಿದ್ದ ಹಿನ್ನೆಲೆ ಇದು ರೇಪ್ ಅಂಡ್ ಮರ್ಡರ್ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

    ದಸರಾ (Dasara) ವೇಳೆ ಬಲೂನ್ ವ್ಯಾಪಾರಕ್ಕಾಗಿ ಕಲಬುರಗಿ ಕಡೆಯಿಂದ ಮೈಸೂರಿಗೆ ಹಕ್ಕಿಪಿಕ್ಕಿ ಜನಾಂಗದ 50ಕ್ಕೂ ಹೆಚ್ಚು ಕುಟುಂಬಗಳು ಬಂದಿವೆ. ಬುಧವಾರ ತಡರಾತ್ರಿ ಸುಮಾರು 2 ಗಂಟೆ ವೇಳೆಯಲ್ಲಿ ಅಪ್ರಾಪ್ತೆಯ ಹತ್ಯೆಯಾಗಿದೆ. ಇದನ್ನೂ ಓದಿ: ವಿಜಯಪುರ | SBI ಬ್ಯಾಂಕ್‌ ದರೋಡೆ ಪ್ರಕರಣದ ಆರೋಪಿಗಳು ಅರೆಸ್ಟ್‌

    ಕೇವಲ ಎರಡೇ ದಿನಗಳ ಅಂತರದಲ್ಲಿ ಒಂದೇ ಜಾಗದಲ್ಲಿ ಎರಡು ಮರ್ಡರ್ ಆದಂತಾಗಿದೆ. ಎರಡು ದಿನಗಳ ಹಿಂದೆ ಇದೇ ಜಾಗದಲ್ಲಿ ರೌಡಿ ಶೀಟರ್‌ನ ಸಹರ್ವತಿಯ ಬರ್ಬರ ಹತ್ಯೆ ಆಗಿತ್ತು. ಅದೇ ಜಾಗದಲ್ಲಿ ನೆನ್ನೆ ರಾತ್ರಿ ಅಪ್ರಾಪ್ತ ಬಾಲಕಿ ಮರ್ಡರ್ ಆಗಿದೆ. ಸದ್ಯ ವಿಚಾರಣೆಗಾಗಿ ವ್ಯಾಪಾರಕ್ಕೆ ಆಗಮಿಸಿದ್ದ 50 ಹಕ್ಕಿಪಿಕ್ಕಿ ಕುಟುಂಬಸ್ಥರನ್ನ ಪೊಲೀಸರು ಕರೆದೊಯ್ದಿದ್ದಾರೆ. ನಜರಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ಕೊಲೆ ಆರೋಪಿ ಗುರುತು ಪತ್ತೆ
    ಘಟನೆ ತಿಳಿಯುತ್ತಿದ್ದಂತೆ ಪ್ರಕರಣ ದಾಖಲಿಸಿಕೊಂಡ ನಜರಬಾದ್‌ ಠಾಣಾ ಪೊಲೀಸರು ಆರೋಪಿಯ ಗುರುತು ಪತ್ತೆಹಚ್ಚಿದ್ದಾರೆ. ರೆಡ್‌ ಶರ್ಟ್‌, ಜೀನ್ಸ್‌ ಪ್ಯಾಂಡ್‌ ಧರಸಿದ್ದ ಕೊಲೆ ಆರೋಪಿಯ ಫೋಟೋ ಸಿಸಿಟಿವಿಯಲ್ಲಿ ಲಭ್ಯವಾಗಿದೆ. ಕೃತ್ಯ ಎಸಗುವ ವೇಳೆ ಆರೋಪಿ ಕಾಲಿಗೆ ಚಪ್ಪಲಿ ಕೂಡ ಧರಿಸಿರಲಿಲ್ಲ ಎಂಬುದೂ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಗೊತ್ತಾಗಿದೆ. ಇದನ್ನೂ ಓದಿ: ದಾವಣಗೆರೆ | ರಾಮಜ್ಯೋತಿ ರಥಯಾತ್ರೆ ದುರಂತಕ್ಕೆ 35 ವರ್ಷ – ಫೈರಿಂಗ್‌ನಲ್ಲಿ ಮೃತಪಟ್ಟವರ ಬ್ಯಾನರ್‌ ತೆರವಿಗೆ ಭಾರೀ ವಿರೋಧ

    ಫೋಟೋ ಲಭ್ಯವಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯ ಹಿನ್ನೆಲೆಯನ್ನು ಪತ್ತೆಹಚ್ಚಿದ್ದಾರೆ. ಆರೋಪಿಯನ್ನ ಸಿದ್ದಲಿಂಗಪುರ ನಿವಾಸಿ ಕಾರ್ತಿಕ್ (31) ಎಂದು ಗುರುತಿಸಲಾಗಿದೆ. 2 ವರ್ಷ ಜೈಲು ವಾಸ ಅನುಭವಿಸಿದ್ದ ಕಾರ್ತಿಕ್‌ 4 ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಊರು ಸೇರದೇ ಎಲ್ಲೆಂದರಲ್ಲಿ ಕುಡಿದು ಅಲೆಯುತ್ತಿದ್ದ ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ.