Tag: ಕ್ವಾರ್ಟರ್ಸ್

  • ಕ್ವಾರ್ಟರ್ಸ್ ಗೆ ಮಹಿಳೆಯನ್ನ ಕರೆಸಿಕೊಂಡ ಅರಣ್ಯಾಧಿಕಾರಿ

    ಕ್ವಾರ್ಟರ್ಸ್ ಗೆ ಮಹಿಳೆಯನ್ನ ಕರೆಸಿಕೊಂಡ ಅರಣ್ಯಾಧಿಕಾರಿ

    – ಪತ್ನಿ, ಸ್ಥಳೀಯರಿಂದ ಮುತ್ತಿಗೆ

    ಚಿಕ್ಕಮಗಳೂರು: ಉಪವಲಯ ಅರಣ್ಯಾಧಿಕಾರಿ ವಸತಿ ನಿಲಯಕ್ಕೆ ಮಹಿಳೆಯನ್ನ ಕರೆಸಿಕೊಂಡು ಪತ್ನಿಗೆ ಸಿಕ್ಕಿಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬ್ಬಲ್ ನಲ್ಲಿ ನಡೆದಿದೆ.

     

    ಚಂದನ್ ಸಿಕ್ಕಿಬಿದ್ದ ಕೊಪ್ಪ ವಿಭಾಗದ ಉಪವಲಯ ಅರಣ್ಯಧಿಕಾರಿ. ಚಂದನ್ ಸರ್ಕಾರಿ ಕ್ವಾರ್ಟರ್ಸ್ ಗೆ ಮಹಿಳೆಯನ್ನ ಕರೆಸಿಕೊಂಡಿದ್ದರು. ಇನ್ನು ವಿಷಯ ತಿಳಿಯುತ್ತಿದ್ದಂತೆ ಚಂದನ್ ಪತ್ನಿ ಮತ್ತು ಗ್ರಾಮಸ್ಥರು ಕ್ವಾರ್ಟರ್ಸ್ ಗೆ ಮುತ್ತಿಗೆ ಹಾಕಿ ಅಧಿಕಾರಿಯನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

    ಸರ್ಕಾರಿ ಕ್ವಾರ್ಟರ್ಸ್ ಅನೈತಿಕ ಚಟುವಟಿಕೆಗಳ ತಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿ ಆಕ್ರೋಶ ಹೊರ ಹಾಕಿದ್ದಾರೆ. ಇನ್ನು ಅಧಿಕಾರಿಯನ್ನು ಅಮಾನತುಗೊಳಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಬಾಳೂರು ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

     

  • ಬೆಂಗ್ಳೂರಿನಲ್ಲಿ ಹಾಡಹಗಲೇ ಪೊಲೀಸರ ಮನೆಗೆ ಕನ್ನ

    ಬೆಂಗ್ಳೂರಿನಲ್ಲಿ ಹಾಡಹಗಲೇ ಪೊಲೀಸರ ಮನೆಗೆ ಕನ್ನ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪೊಲೀಸರ ಮನೆಗಳಿಗೂ ಭದ್ರತೆ ಇಲ್ಲದಂತಾಗಿದೆ. ಹಾಡಹಗಲೇ ಪೊಲೀಸ್ ಮುಖ್ಯ ಪೇದೆಯೊಬ್ಬರ ಮನೆಗೆ ಕನ್ನ ಹಾಕಿದ್ದಾರೆ.

    ಆನಂದ್ ರಾವ್ ಸರ್ಕಲ್ ಸಮೀಪದ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ಈ ಘಟನೆ ನಡೆದಿದ್ದು, ಹೆಬ್ಬಾಳ ಟ್ರಾಫಿಕ್ ಪೊಲೀಸ್ ಮುಖ್ಯಪೇದೆ ವೆಂಕಟೇಶ್ ಮನೆಯಲ್ಲಿ ಕಳ್ಳತನ ನಡೆದಿದೆ. ಬೀಗ ಒಡೆದ ಕಳ್ಳರು ಸಿಕ್ಕಿದ್ದೆಲ್ಲಾ ದೋಚಿ ಪರಾರಿಯಾಗಿದ್ದಾರೆ.

    ಶನಿವಾರ ಬೆಳಗ್ಗೆ ಮನೆಗೆ ಬೀಗ ಹಾಕಿ ವೆಂಕಟೇಶ್ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಮನೆ ಬೀಗ ಒಡೆದು ಮನೆಯೊಳಗಿದ್ದ 7 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು 40 ಸಾವಿರ ನಗದು ಹಣ ಕದ್ದು ಪರಾರಿಯಾಗಿದ್ದಾರೆ. ಸಂಜೆ ನೆರೆ ಮನೆಯವರು ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.

    ಪೊಲೀಸರ ಕ್ವಾರ್ಟರ್ಸ್ ನಲ್ಲೇ ರಕ್ಷಣೆ ಇಲ್ಲದಂತಾಗಿದೆ. ಅಷ್ಟೇ ಅಲ್ಲದೇ ಸರಿಯಾದ ಬೀದಿ ದೀಪ, ಬೀಟ್ ವ್ಯವಸ್ಥೆ ಮತ್ತು ಭದ್ರತೆ ಇಲ್ಲವೆಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಸಂಬಂಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv