Tag: ಕ್ಷಮೆ

  • ಶಾರ್ಟ್ ಹೇರ್ ಕಟ್ ಫೋಟೋ ಹಾಕಿ  ಕ್ಷಮೆ ಕೇಳಿದ ಖುಷ್ಬೂ

    ಶಾರ್ಟ್ ಹೇರ್ ಕಟ್ ಫೋಟೋ ಹಾಕಿ ಕ್ಷಮೆ ಕೇಳಿದ ಖುಷ್ಬೂ

    ಹೆಸರಾಂತ ನಟಿ, ರಾಜಕಾರಣಿ ಖುಷ್ಬೂ (Khushboo) ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದನ್ನು ಶೇರ್ ಮಾಡಿದ್ದರು. ಆ ಫೋಟೋದಲ್ಲಿ ಖುಷ್ಬೂ ಶಾರ್ಟ್ ಹೇರ್ ಕಟ್ (short hair) ಮಾಡಿಸಿಕೊಂಡಿದ್ದರು. ಈ ಫೋಟೋ (photo) ಬಗ್ಗೆ ಸಾಕಷ್ಟು ಚರ್ಚೆ ಕೂಡ ಮಾಡಲಾಗಿತ್ತು. ಉದ್ದನೆಯ ಜಡೆ ಹೊಂದಿದ್ದ ಖುಷ್ಭು ಯಾಕೆ ಹೀಗೆ ಮಾಡಿಕೊಂಡರು ಎಂದು ಕೇಳಲಾಗಿತ್ತು.

    ಜೊತೆಗೆ ಈ ರೀತಿಯ ಶಾರ್ಟ್ ಹೇರ್ ಕಟ್ ಈ ವಯಸ್ಸಿನಲ್ಲಿ ಯಾಕೆ ಎಂದು ತರ್ಲೆ ತಮಾಷೆಗಳನ್ನೂ ಮಾಡಲಾಗಿತ್ತು. ಅವರು ಶೇರ್ ಮಾಡಿದ್ದ ಫೋಟೋಗಳು ವೈರಲ್ ಕೂಡ ಆಗಿದ್ದು. ಅಭಿಮಾನಿಗಳು ಮುಗಿಬಿದ್ದು ಕಾಮೆಂಟ್ ಮಾಡಿದ್ದರು. ಆ ಕಾಮೆಂಟ್ ಓದಿರುವ ಖುಷ್ಬೂ ಕ್ಷಮೆ ಕೇಳಿದ್ದಾರೆ.

    ನಾನು ತಲೆಕೂದಲನ್ನು ಕಟ್ ಮಾಡಿಸಿಕೊಂಡಿಲ್ಲ. ಇದು ಹೊಸ ಸಿನಿಮಾವಾಗಿ ಮಾಡಿಸಿರುವ ಲುಕ್ ಟೆಸ್ಟ್. ಈ ಫೋಟೋ ನಿಮಗೆ ಮಿಸ್ ಗೈಡ್ ಮಾಡಿದ್ದರೆ ಕ್ಷಮೆ ಇರಲಿ ಎಂದು ಮತ್ತೊಂದು ಪೋಸ್ಟ್ ಮಾಡಿದ್ದಾರೆ. ಅಭಿಮಾನಿಗಳು ಮಾಡಿರುವ ಕಾಮೆಂಟ್ ನನಗೆ ಅಚ್ಚರಿ ಮೂಡಿಸಿವೆ ಎಂದಿದ್ದಾರೆ.

     

    ಎಂಬತ್ತರ ದಶಕದಿಂದ ಈವರೆಗೂ ಬಹುಬೇಡಿಕೆಯ ನಟಿಯಾಗಿದ್ದಾರೆ ಖುಷ್ಬೂ. ಕನ್ನಡದಲ್ಲೂ ಹಲವಾರು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಸಿನಿಮಾಗಳಲ್ಲಿ ನಟಿಸುವುದರ ಜೊತೆ ಜೊತೆಗೆ ರಾಜಕಾರಣಿಯಾಗಿಯೂ ಅವರು ಗುರುತಿಸಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಥಿಯೇಟರ್ ಮುಂದೆ ಯುವತಿಗೆ ನಿಂದನೆ: ಕ್ಷಮೆ ಕೇಳಿದ ರಾಜ್ ಬಿ ಶೆಟ್ಟಿ

    ಥಿಯೇಟರ್ ಮುಂದೆ ಯುವತಿಗೆ ನಿಂದನೆ: ಕ್ಷಮೆ ಕೇಳಿದ ರಾಜ್ ಬಿ ಶೆಟ್ಟಿ

    ಟೋಬಿ (Toby) ಸಿನಿಮಾ ಚೆನ್ನಾಗಿಲ್ಲ ಎಂದು ಯುವತಿಯೊಬ್ಬಳು ಥಿಯೇಟರ್ (Theatre) ಮುಂದೆ ಹೇಳಿದ ಕಾರಣಕ್ಕಾಗಿ ಯುವಕನೊಬ್ಬ ಆ ಹುಡುಗಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದ. ಆ ಹುಡುಗಿ ತನ್ನ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದಕ್ಕಾಗಿ ಥಿಯೇಟರ್ ನಿಂದ ಆಚೆ ಹೊರಡು ಎಂದು ಬೆದರಿಸಿದ್ದ, ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಈ ನಡೆಗೆ ಆಕ್ರೋಶ ಕೂಡ ವ್ಯಕ್ತವಾಗಿತ್ತು.

    ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಚಿತ್ರದ ಕಥೆ ಬರೆದ ಟಿ.ಕೆ. ದಯಾನಂದ್ ಕ್ಷಮೆ ಯಾಚಿಸಿದ್ದರು. ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದ ದಯಾನಂದ್, ಆ ಹುಡುಗ ತಮ್ಮ ತಂಡದವನು ಅಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದರು. ಆದರೂ ತಂಡದ ಪರವಾಗಿ ಕ್ಷಮೆ ಯಾಚಿಸುವುದಾಗಿ ಹೇಳಿದ್ದರು. ಇದೀಗ ರಾಜ್ ಬಿ ಶೆಟ್ಟಿ (Raj B Shetty) ಕೂಡ ಕ್ಷಮೆ ಕೇಳಿದ್ದಾರೆ. ಈ ಕುರಿತು ಅವರು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.  ಇದನ್ನೂ ಓದಿ:Breaking- ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ : ಅತ್ಯುತ್ತಮ ನಟ ಅಲ್ಲು ಅರ್ಜುನ್, ನಟಿ ಆಲಿಯಾ ಭಟ್ ಮತ್ತು ಕೀರ್ತಿ ಸನನ್

    ಸಿನಿಮಾ ಕೂಡ ವಿಮರ್ಶೆ ಮಾಡುವ ಮಾಧ್ಯಮ. ಸಾವಿರಾರು ಕೋಟಿ ರೂಪಾಯಿ ಗಳಿಸಿದ ಸಿನಿಮಾಗಳು ಕೂಡ ಕೆಲವರಿಗೆ ಇಷ್ಟವಾಗಿರುವುದಿಲ್ಲ. ಎಲ್ಲರಿಗೂ ತಮ್ಮ ಅಭಿಪ್ರಾಯವನ್ನು ವ್ಯಕ್ತ ಪಡಿಸುವ ಹಕ್ಕು ಇದೆ. ಯಾರನ್ನೂ ನಿಂದಿಸಬಾರದು. ಆ ಯುವತಿಗೆ ಬೈದ ಹುಡುಗ ನಮ್ಮ ತಂಡದವನು ಅಲ್ಲ. ಆದರೂ, ನಾನು ಮನಸಾರೆ ಆ ಹುಡುಗಿಗೆ ಕ್ಷಮೆ ಕೇಳುತ್ತೇನೆ ಎಂದು ಬರೆದುಕೊಂಡಿದ್ದಾರೆ.

     

    ಟೋಬಿ ರಾಜ್ಯಾದ್ಯಂತ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಹಲವರು ಹಲವು ರೀತಿಯಲ್ಲಿ ಸಿನಿಮಾ ಬಗ್ಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಈ ನಡುವೆ ಇಂಥದ್ದೊಂದು ಘಟನೆ ನಡೆದು, ಚಿತ್ರತಂಡವನ್ನು ಮುಜುಗರಕ್ಕೀಡು ಮಾಡಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯಶ್ ಅಭಿಮಾನಿಗಳಿಗೆ ಕ್ಷಮೆ ಕೇಳಿದ ತಮಿಳು ನಟ ಜೈ ಆಕಾಶ್

    ಯಶ್ ಅಭಿಮಾನಿಗಳಿಗೆ ಕ್ಷಮೆ ಕೇಳಿದ ತಮಿಳು ನಟ ಜೈ ಆಕಾಶ್

    ರಾಕಿಂಗ್ ಸ್ಟಾರ್ ಯಶ್ ವಿಚಾರವಾಗಿ ನಾಲಿಗೆ ಹರಿಬಿಟ್ಟಿದ್ದ ತಮಿಳು (Tamil) ನಟ ಜೈ ಆಕಾಶ್ ಕೊನೆಗೂ ಯಶ್ ಅಭಿಮಾನಿಗಳಿಗೆ ಕ್ಷಮೆ (Apologize) ಕೇಳಿದ್ದಾರೆ. ಯಶ್ ಸಿನಿಮಾ ರಂಗಕ್ಕೆ ಬಂದ ಹೊಸತರಲ್ಲಿ ಅವಕಾಶಕ್ಕಾಗಿ ನನ್ನ ಬಳಿ ಕಣ್ಣೀರಿಟ್ಟಿದ್ದರು. ಅವರಿಗೆ ನಾನು ಸಮಾಧಾನ ಹೇಳಿದ್ದೆ. ಊಟ ಕೂಡ ಹಾಕಿದ್ದೆ ಎಂದು ಸಂದರ್ಶನವೊಂದರಲ್ಲಿ ಜೈ ಆಕಾಶ್  ಹೇಳಿಕೊಂಡಿದ್ದರು. ಈ ಮಾತು ಯಶ್ ಅಭಿಮಾನಿಗಳನ್ನು ಕೆರಳಿಸಿತ್ತು.

    ಅಂದಹಾಗೆ ಈ ಜೈ ಆಕಾಶ್ ಕನ್ನಡದ ಜಂಭದ ಕೋಳಿ ಸಿನಿಮಾದಲ್ಲಿ ನಟಿಸಿದ್ದರು. ಆ ಸಿನಿಮಾಗೆ ಯಶ್ ನಾಯಕ. ಯಶ್ ನಟನೆಯ ಮೊದಲ ಸಿನಿಮಾ ಕೂಡ ಇದಾಗಿತ್ತು. ಪ್ರಿಯಾ ಹಾಸನ್ ಈ ಸಿನಿಮಾದ ನಾಯಕಿ. ಜೈ ಆಕಾಶ್ ಆ ವೇಳೆ ಜನಪ್ರಿಯ ನಟರಲ್ಲವಾದರೂ ಯಶ್ ಅದು ಹೇಗೆ ಕಣ್ಣೀರು ಇಟ್ಟಿದ್ದರು ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿತ್ತು.

    ಜೈ ಆಕಾಶ್ (Jai Akash) ಮಾತನಾಡಿದ ಮಾತು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅದು ನಿಜವೋ ಅಥವಾ ಸುಳ್ಳೋ ಗೊತ್ತಿಲ್ಲ. ಆದರೆ, ಯಶ್ (Yash) ತಮ್ಮ ಬಳಿ ಅವಕಾಶಕ್ಕಾಗಿ ಕಣ್ಣೀರು ಹಾಕಿದ್ದರು. ಅವರಿಗೆ ನಾನು ಹೊಟ್ಟೆ ತುಂಬಾ ಊಟ ಹಾಕಿದ್ದೆ. ಇದೀಗ ಯಶ್ ಗೆ ಜಗತ್ತಿನಾದ್ಯಂತ ಅಭಿಮಾನಿಗಳು ಇದ್ದಾರೆ ಎಂದು ಜೈ ಆಕಾಶ್ ಹೇಳಿದ್ದರ. ಆದರೆ, ಅದನ್ನು ಯಶ್ ಅಭಿಮಾನಿಗಳು ನಂಬಲು ತಯಾರಿರಲಿಲ್ಲ.

    ಜೈ ಆಕಾಶ್ ಅವರ ವಿಡಿಯೋ ವೈರಲ್ ಆಗಿದ್ದರೂ, ಈ ಕುರಿತಾಗಿ ಯಶ್ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಸಲಿಯಾಗಿ ತಮಿಳು ನಟನ ಬಳಿ ಯಶ್ ಯಾವ ಕಾರಣಕ್ಕಾಗಿ ಸಹಾಯ ಕೇಳಿದರು ಎನ್ನುವುದು ಗೊತ್ತಿಲ್ಲ. ಇದು ಯಾವ ಸಂದರ್ಭದಲ್ಲಿ ಆಗಿದ್ದು ಎಂದು ಆ ನಟನೂ ಹೇಳಿಕೊಂಡಿಲ್ಲ.

     

    ಕೆಜಿಎಫ್ ಸಿನಿಮಾದ ನಂತರ ಯಶ್ ಭಾರತದ ನಟನಾಗಿ ರೂಪುಗೊಂಡಿದ್ದಾರೆ. ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮೆರೆಯುತ್ತಿದ್ದಾರೆ. ಹಾಗಾಗಿ ಪ್ರಚಾರಕ್ಕಾಗಿ ಹಾಗೇನಾದರೂ ಜೈ ಆಕಾಶ್ ಮಾತನಾಡಿದ್ದಾರಾ ಗೊತ್ತಿಲ್ಲ. ಇಂತಹ ವಿಷಯಗಳು ಸುದ್ದಿಯಾದಾಗ ಎರಡೂ ಕಡೆಯಿಂದ ನಿಜಾಂಶ ತಿಳಿಬೇಕು ಎಂದು ಅಭಿಮಾನಿಗಳು ಬಯಸಿದ್ದರು. ಈ ವಿಷಯದಲ್ಲಿ ಕೊನೆಗೂ ಜೈ ಪ್ರಕಾಶ್ ಕ್ಷಮೆ ಕೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟೊಮ್ಯಾಟೋ ವಿಚಾರದಲ್ಲಿ ಕ್ಷಮೆ ಕೇಳಿದ ನಟ ಸುನೀಲ್ ಶೆಟ್ಟಿ

    ಟೊಮ್ಯಾಟೋ ವಿಚಾರದಲ್ಲಿ ಕ್ಷಮೆ ಕೇಳಿದ ನಟ ಸುನೀಲ್ ಶೆಟ್ಟಿ

    ಗನಕ್ಕೇರಿದ ಟೊಮ್ಯಾಟೋ ಬೆಲೆ ಕುರಿತಾಗಿ ಈ ಹಿಂದೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಹೇಳಿಕೆಯೊಂದನ್ನು ನೀಡಿದ್ದರು. ‘ಟೊಮ್ಯಾಟೋ ಬೆಲೆ ಕೇಳಿದ್ಮೇಲೆ ಊಟದಲ್ಲಿ ಟೊಮ್ಯಾಟೋ ತಿನ್ನುವುದನ್ನು ಕಡಿಮೆ ಮಾಡಿದ್ದೇನೆ’ ಎನ್ನುವ ಮಾತುಗಳನ್ನು ಆಡಿದ್ದರು. ಆ ನಂತರ ಅನೇಕರು ಇವರ ಮಾತಿಗೆ ವಿರೋಧಿಸಿದ್ದರು. ಟ್ರೋಲ್ ಕೂಡ ಮಾಡಿದ್ದರು.

    ಸುನೀಲ್ ಶೆಟ್ಟಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಟೊಮ್ಯಾಟೋ ಬೆಲೆಯಿಂದ ರೈತರಿಗೆ ಲಾಭವಾಗಿದೆ. ಇವರು ರೈತ ವಿರೋಧಿ. ರೈತರಿಗೆ ಕೊಂಚ ಸಹಾಯವಾಗುತ್ತದೆ ಎಂದರೆ, ಇವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಅನೇಕರು ಟೀಕಿಸಿದ್ದರು. ಈ ಕುರಿತು ಸುನೀಲ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಮಾತುಗಳನ್ನು ತಪ್ಪಾಗಿ ಅರ್ಥೈಸಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ.

    ನಾನು ಕೂಡ ರೈತ ಕುಟುಂಬದಿಂದ ಬಂದವನು. ರೈತನ ಕಷ್ಟ ನಷ್ಟಗಳು ನನಗೆ ಗೊತ್ತಿದೆ. ನಾನು ರೈತ ವಿರೋಧಿ ಮಾತುಗಳನ್ನು ಆಡಿಲ್ಲ. ನನಗೂ ರೈತನ ಬಗ್ಗೆ ಕಾಳಜಿ ಇದೆ. ನನ್ನ ಮಾತುಗಳಿಂದ ಬೇಸರವಾಗಿದ್ದರೆ ಕ್ಷಮೆ ಇರಲಿ ಎಂದು ಅವರು ಹೇಳಿಕೊಂಡಿದ್ದಾರೆ.  ತಮಗೂ ರೈತರ ಬಗ್ಗೆ ಕಾಳಜಿ ಇರುವ ಕುರಿತು ಮಾತನಾಡಿದ್ದಾರೆ.

    ಏನಿದು ವಿವಾದ?

    ದೇಶದಾದ್ಯಂತ ಟೊಮ್ಯಾಟೋ (Tomato) ಬೆಲೆ ಏರಿ ಕೂತಿದೆ. ಇದು ಮಧ್ಯಮ ಮತ್ತು ಕೆಳಮಧ್ಯಮ ವರ್ಗಕ್ಕೆ ಮಾತ್ರ ತಲೆಬಿಸಿ ತಂದಿಲ್ಲ, ಶ್ರೀಮಂತರು ಕೂಡ ಟೊಮ್ಯಾಟೋ ಬಗ್ಗೆ ಮಾತನಾಡುವಂತಾಗಿದೆ. ಖಾಸಗಿ ವಾಹಿನಿಯೊಂದರ ಜೊತೆ ಮಾತನಾಡಿರುವ ಬಾಲಿವುಡ್ (Bollywood) ನಟ ಸುನೀಲ್ ಶೆಟ್ಟಿ (Sunil Shetty) ಟೊಮ್ಯಾಟೋ ಬೆಲೆ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ:ಅಪಘಾತದಿಂದ ಚೇತರಿಸಿಕೊಂಡ್ರಾ ಸಾಯಿ ಧರಂ ತೇಜ್- ನಟ ಹೇಳೋದೇನು?

    ನನ್ನ ಮನೆಯಲ್ಲಿ ಯಾವಾಗಲೂ ನಾವು ತಾಜಾ ತರಕಾರಿಯನ್ನೇ ತಂದು ಬಳಸುತ್ತೇವೆ. ದಿನಕ್ಕೆ ಎರಡ್ಮೂರು ರೀತಿಯ ತರಕಾರಿಗಳನ್ನು ನನ್ನ ಪತ್ನಿ ಖರೀದಿಸುತ್ತಾರೆ. ಅದರಲ್ಲೂ ಇತ್ತೀಚೆಗೆ ಟೊಮ್ಯಾಟೋ ದರ ಗಗನಕ್ಕೇರಿದೆ. ಹಾಗಾಗಿ ನಾನು ಟೊಮ್ಯಾಟೋ ತಿನ್ನುವುದನ್ನು ಕಡಿಮೆ ಮಾಡಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.

     

    ಟೊಮ್ಯಾಟೋ ದರ ಏರಿಕೆಯಾಗುತ್ತಿದ್ದಂತೆಯೇ ಹಲವರು ಹಲವು ರೀತಿಯ ಪ್ರಯೋಗಗಳನ್ನು ಅಡುಗೆಯಲ್ಲಿ ಮಾಡುತ್ತಿದ್ದಾರೆ. ಅಲ್ಲದೇ, ತಮ್ಮ ಮನೆಯಲ್ಲೇ ಟೊಮ್ಯಾಟೋ ಬೆಳೆಯುವುದು ಹೇಗೆ ಎನ್ನುವುದನ್ನು ನಟಿ ರಾಖಿ ಸಾವಂತ್ ಹೇಳಿದ್ದರು. ಹದಿನೈದು ದಿನದ ಒಳಗೆ ಟೊಮ್ಯಾಟೋ ಬೆಳೆಯುವುದು ಹೇಗೆ ಎನ್ನುವುದನ್ನು ತೋರಿಸಿಕೊಟ್ಟಿದ್ದರು. ಆ ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕ್ಷಮೆ ಕೇಳಿದರೂ ಆದಿಪುರುಷ ರೈಟರ್ ವಿರುದ್ದ ಟ್ರೋಲ್: ಸಂಭಾವನೆ ದಾನ ಮಾಡುವಂತೆ ಆಗ್ರಹ

    ಕ್ಷಮೆ ಕೇಳಿದರೂ ಆದಿಪುರುಷ ರೈಟರ್ ವಿರುದ್ದ ಟ್ರೋಲ್: ಸಂಭಾವನೆ ದಾನ ಮಾಡುವಂತೆ ಆಗ್ರಹ

    ದಿಪುರುಷ ಸಿನಿಮಾದ ಬರವಣಿಗೆ ವಿಚಾರದಲ್ಲಿ ತಮ್ಮಿಂದ ತಪ್ಪಾಗಿದೆ. ದಯವಿಟ್ಟು ಕ್ಷಮಿಸಿ ಎಂದು ಕೈ ಜೋಡಿಸಿ ಬೇಡಿಕೊಂಡಿದ್ದರು ಚಿತ್ರದ ಸಂಭಾಷಣೆಕಾರ ಮನೋಜ್ ಮುಂತಾಶಿರ್ ಅವರು ಕ್ಷಮೆ ಕೇಳಿದರೂ, ಟ್ರೋಲಿಗರು ಮಾತ್ರ ಕ್ಷಮಿಸಿದಂತೆ ಕಾಣುತ್ತಿಲ್ಲ. ಕ್ಷಮೆಗೆ ಅರ್ಹರಲ್ಲ ನೀವು, ಒಂದು ವೇಳೆ ಕ್ಷಮಿಸಬೇಕು ಎಂದರೆ ಚಿತ್ರಕ್ಕಾಗಿ ಪಡೆದುಕೊಂಡಿರುವ ಸಂಭಾವನೆಯನ್ನು ದಾನ ಮಾಡಿ ಎಂದು ಆಗ್ರಹಿಸುತ್ತಿದ್ದಾರೆ.

    ಆದಿಪುರುಷ ಸಿನಿಮಾದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಹೋರಾಟ ಮಾಡಿದರೂ ಚಿತ್ರತಂಡವಾಗಲಿ ಅಥವಾ ಸಿನಿಮಾದ ಸಂಭಾಷಣೆಯನ್ನು ಬರೆದ ಮನೋಜ್ ಮುಂತಾಶಿರ್ (Manoj Muntashir) ಆಗಲಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಸಿನಿಮಾ ಬ್ಯಾನ್ ಮಾಡುವ ಮಟ್ಟಕ್ಕೆ ಬಂದರೂ ಮತ್ತೆ ತಮ್ಮ ಮೊಂಡುತನವನ್ನೇ ಮುಂದುವರೆಸಿಕೊಂಡು ಹೋಗಿತ್ತು ಚಿತ್ರತಂಡ. ಕೋರ್ಟ್ ಕಟಕಟೆ ಏರಿದ ನಂತರ ಇದೀಗ ತಣ್ಣಗಾಗಿದೆ.

    ಈ ಹಿಂದೆ ಅಲಹಾಬಾದ್ (Allahabad) ಹೈಕೋರ್ಟ್ ಚಿತ್ರತಂಡಕ್ಕೆ ಛೀಮಾರಿ ಹಾಕಿತ್ತು. ಧಾರ್ಮಿಕ ನಂಬಿಕೆಗಳನ್ನು ಘಾಸಿಗೊಳಿಸಿದ್ದರ ಬಗ್ಗೆ ತೀವ್ರ ರೀತಿಯಲ್ಲೇ ಅಸಮಾಧಾನ ಹೊರಹಾಕಿತ್ತು. ಕೋರ್ಟಿಗೆ ಖುದ್ದಾಗಿ ಹಾಜರಾಗಬೇಕು ಎಂದು ಮನೋಜ್ ಮುಂತಾಶಿರ್ ಸೇರಿದಂತೆ ನಿರ್ಮಾಪಕರಿಗೆ ಮತ್ತು ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿತ್ತು. ಕೋರ್ಟ್ ಬಿಸಿ ತಾಗುತ್ತಿದ್ದಂತೆಯೇ ಬರಹಗಾರ ಮನೋಜ್ ಟ್ವೀಟ್ ಮಾಡಿದ್ದಾರೆ.

    ತಮ್ಮಿಂದ ಚಿತ್ರದಲ್ಲಿ ತಪ್ಪಾಗಿದೆ ಎಂದು ಒಪ್ಪಿಕೊಂಡಿರುವ ಮನೋಜ್, ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕೆ ಜನರಲ್ಲಿ ಕ್ಷಮೆ ಕೇಳಿದ್ದಾರೆ. ಜನರಿಗೆ ನೋವು ಆಗಿದ್ದನ್ನು ಒಪ್ಪಿಕೊಳ್ಳುತ್ತೇನೆ. ನಾನು ಎರಡೂ ಕೈಗಳನ್ನು ಮುಗಿದು ಕ್ಷಮೆ ಕೇಳುತ್ತೇನೆ. ಪ್ರಭು ಬಜರಂಗ ಬಲಿ ನಮಗೆ ಮತ್ತಷ್ಟು ಶಕ್ತಿ ನೀಡಲಿ. ಪವಿತ್ರ ಸನಾತನ ಹಾಗೂ ನಮ್ಮ ರಾಷ್ಟ್ರ ಸೇವೆ ಮಾಡಲು ಮತ್ತಷ್ಟು ಶಕ್ತಿ ತುಂಬಲಿ ಎಂದು ಅವರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದರು.

    ಈ ಹಿಂದೆ ಆದಿಪುರುಷ (Adipurush) ಸಿನಿಮಾವನ್ನು ನೇಪಾಳ ಸರಕಾರ ಬ್ಯಾನ್ ಮಾಡಿತ್ತು. ಚಿತ್ರದಲ್ಲಿ ಸೀತೆ ಬಗ್ಗೆ ಹೇಳಲಾದ ಡೈಲಾಗ್ ಸರಿಯಾಗಿಲ್ಲ ಎಂದು ಕಠ್ಮಂಡು ಮೇಯರ್ ಕೋರ್ಟ್ ಮೆಟ್ಟಿಲು ಏರಿದ್ದರು. ಸಿನಿಮಾವನ್ನು ಬ್ಯಾನ್ ಮಾಡುವುದು ಸರಿಯಲ್ಲ ಎಂದು ಅಲ್ಲಿನ ಹೈಕೋರ್ಟ್ ಹೇಳಿದ್ದರೂ, ಇತಿಹಾಸಕ್ಕೆ ಅಪಚಾರ ಮಾಡಬಾರದು ಎನ್ನುವುದನ್ನು ಎತ್ತಿ ಹಿಡಿದಿತ್ತು. ನಂತರ ಅಲಹಾಬಾದ್ (Allahabad) ಹೈಕೋರ್ಟ್ ಮೊನ್ನೆಯಷ್ಟೇ ಚಿತ್ರದ ಬಗ್ಗೆ ಅಸಮಾಧಾನ ಹೊರಹಾಕಿದೆ.

    ಆದಿಪುರುಷ ಸಿನಿಮಾದ ಚಿತ್ರಕಥೆ ಮತ್ತು ಸಂಭಾಷಣೆ ಕುರಿತಂತೆ  ಸಲ್ಲಿಸಲಾದ ಅರ್ಜಿಯನ್ನು ಕೈಗೆತ್ತಿಕೊಂಡ ಅಲಹಾಬಾದ್ ಹೈಕೋರ್ಟಿನ (High Court) ಲಕ್ನೋ ಪೀಠವು ಚಿತ್ರತಂಡದ ಜೊತೆ ಸೆನ್ಸಾರ್ ಮಂಡಳಿಯನ್ನು ತೀವ್ರವಾಗಿ ಟೀಕಿಸಿತ್ತು. ‘ಭಾರತೀಯರು ಸಹಿಷ್ಟುಗಳು ಎನ್ನುವ ಕಾರಣಕ್ಕೆ ಸಹನೆ ಪರೀಕ್ಷೆ ಮಾಡಲಾಗುತ್ತಿದೆಯೇ?’ ಎಂದು ಪ್ರಶ್ನೆ ಮಾಡಿತ್ತು.

    ರಾಮಾಯಣವನ್ನು ಜನರು ಪವಿತ್ರ ಎಂದು ದಿನವೂ ಪಠಿಸುತ್ತಾರೆ. ರಾಮಚರಿತಮಾನಸವನ್ನು ಓದುತ್ತಾರೆ. ಇಂತಹ ರಾಮಾಯಣವನ್ನೇ ಸಿನಿಮಾ ಮಾಡಿ, ಆ ನಂತರ ಸಿನಿಮಾಗೂ ರಾಮಾಯಣಕ್ಕೂ ಸಂಬಂಧವಿಲ್ಲ ಎಂದರೆ ಮಾಡಿದ ತಪ್ಪು ಮುಚ್ಚಿದಂತೆ ಆಗುತ್ತದೆ? ಚಿತ್ರದಲ್ಲಿನ ಸಂಭಾಷಣೆಗಳು ಕೂಡ ಅಪಮಾನ ಮಾಡುವಂತಿವೆ. ಈ ಸಿನಿಮಾ ನೋಡಿದ ಮೇಲೂ ಜನರು ತಾಳ್ಮೆ ಕಳೆದುಕೊಂಡಿಲ್ಲ ಎನ್ನುವುದು ಅವರ ಸಹಿಷ್ಣುತೆಯನ್ನು ತೋರಿಸುತ್ತದೆ’ ಎಂದು ಅಭಿಪ್ರಾಯ ವ್ಯಕ್ತ ಪಡಿಸಿತ್ತು.

     

    ದೇವರು ಎಂದು ಪೂಜಿಸುವ ಭಗವಾನ್ ಹನುಮಾನ್ ಮತ್ತು ಸೀತೆಯನ್ನು ಸಿನಿಮಾದಲ್ಲಿ ಏನೂ ಅಲ್ಲ ಎನ್ನುವಂತೆ ತೋರಿಸಿದ್ದೀರಿ. ಕೆಲವು ದೃಶ್ಯಗಳು ವಯಸ್ಕ ವರ್ಗಕ್ಕೆ ಸೇರುವಂತಹವು ಆಗಿವೆ. ನೀವು ಏನನ್ನು ತೋರಿಸಲು ಹೊರಟಿದ್ದೀರಿ ಎಂದು ಪ್ರಶ್ನೆ ಮಾಡಿದ್ದಲ್ಲದೇ, ಸಂಭಾಷಣೆ ಬರೆದಿರುವ ಮನೋಜ್ (Manoj) ಅವರಿಗೂ ನೋಟಿಸ್ ನೀಡಿ, ಕಕ್ಷಿದಾರನನ್ನಾಗಿ ಮಾಡಿ ಎಂದು ನಿರ್ದೇಶನ ನೀಡಿತ್ತು. ಈ ನಿರ್ದೇಶನದ ಹಿನ್ನೆಲೆಯಲ್ಲಿ ಬರಹಗಾರ ಮನೋಜ್ ಕ್ಷಮೆ ಕೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಆದಿಪುರುಷ’ ಚಿತ್ರದಲ್ಲಿ ತಪ್ಪಾಗಿದೆ ಕ್ಷಮಿಸಿ: ಕೈ ಮುಗಿದು ಕ್ಷಮೆ ಕೇಳಿದ ರೈಟರ್

    ‘ಆದಿಪುರುಷ’ ಚಿತ್ರದಲ್ಲಿ ತಪ್ಪಾಗಿದೆ ಕ್ಷಮಿಸಿ: ಕೈ ಮುಗಿದು ಕ್ಷಮೆ ಕೇಳಿದ ರೈಟರ್

    ದಿಪುರುಷ ಸಿನಿಮಾದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಹೋರಾಟ ಮಾಡಿದರೂ ಚಿತ್ರತಂಡವಾಗಲಿ ಅಥವಾ ಸಿನಿಮಾದ ಸಂಭಾಷಣೆಯನ್ನು ಬರೆದ ಮನೋಜ್ ಮುಂತಾಶಿರ್ (Manoj Muntashir) ಆಗಲಿ ಯಾವುದೇ ಪ್ರತಿಕ್ರಿಯೆ ನೀಡಿರಲ್ಲ. ಸಿನಿಮಾ ಬ್ಯಾನ್ ಮಾಡುವ ಮಟ್ಟಕ್ಕೆ ಬಂದರೂ ಮತ್ತೆ ತಮ್ಮ ಮೊಂಡುತನವನ್ನೇ ಮುಂದುವರೆಸಿಕೊಂಡು ಹೋಗಿತ್ತು ಚಿತ್ರತಂಡ. ಕೋರ್ಟ್ ಕಟಕಟೆ ಏರಿದ ನಂತರ ಇದೀಗ ತಣ್ಣಗಾಗಿದೆ.

    ಈ ಹಿಂದೆ ಅಲಹಾಬಾದ್ (Allahabad) ಹೈಕೋರ್ಟ್ ಚಿತ್ರತಂಡಕ್ಕೆ ಛೀಮಾರಿ ಹಾಕಿತ್ತು. ಧಾರ್ಮಿಕ ನಂಬಿಕೆಗಳನ್ನು ಘಾಸಿಗೊಳಿಸಿದ್ದರ ಬಗ್ಗೆ ತೀವ್ರ ರೀತಿಯಲ್ಲೇ ಅಸಮಾಧಾನ ಹೊರಹಾಕಿತ್ತು. ಕೋರ್ಟಿಗೆ ಖುದ್ದಾಗಿ ಹಾಜರಾಗಬೇಕು ಎಂದು ಮನೋಜ್ ಮುಂತಾಶಿರ್ ಸೇರಿದಂತೆ ನಿರ್ಮಾಪಕರಿಗೆ ಮತ್ತು ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿತ್ತು. ಕೋರ್ಟ್ ಬಿಸಿ ತಾಗುತ್ತಿದ್ದಂತೆಯೇ ಬರಹಗಾರ ಮನೋಜ್ ಟ್ವೀಟ್ ಮಾಡಿದ್ದಾರೆ.

    ತಮ್ಮಿಂದ ಚಿತ್ರದಲ್ಲಿ ತಪ್ಪಾಗಿದೆ ಎಂದು ಒಪ್ಪಿಕೊಂಡಿರುವ ಮನೋಜ್, ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕೆ ಜನರಲ್ಲಿ ಕ್ಷಮೆ ಕೇಳಿದ್ದಾರೆ. ಜನರಿಗೆ ನೋವು ಆಗಿದ್ದನ್ನು ಒಪ್ಪಿಕೊಳ್ಳುತ್ತೇನೆ. ನಾನು ಎರಡೂ ಕೈಗಳನ್ನು ಮುಗಿದು ಕ್ಷಮೆ ಕೇಳುತ್ತೇನೆ. ಪ್ರಭು ಬಜರಂಗ ಬಲಿ ನಮಗೆ ಮತ್ತಷ್ಟು ಶಕ್ತಿ ನೀಡಲಿ. ಪವಿತ್ರ ಸನಾತನ ಹಾಗೂ ನಮ್ಮ ರಾಷ್ಟ್ರ ಸೇವೆ ಮಾಡಲು ಮತ್ತಷ್ಟು ಶಕ್ತಿ ತುಂಬಲಿ ಎಂದು ಅವರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಪ್ಯಾರಿಸ್‌ನ ರೊಮ್ಯಾಂಟಿಕ್‌ ಫೋಟೋ ಹಂಚಿಕೊಂಡ ಅದಿತಿ ಪ್ರಭುದೇವ

    ಈ ಹಿಂದೆ ಆದಿಪುರುಷ (Adipurush) ಸಿನಿಮಾವನ್ನು ನೇಪಾಳ ಸರಕಾರ ಬ್ಯಾನ್ ಮಾಡಿತ್ತು. ಚಿತ್ರದಲ್ಲಿ ಸೀತೆ ಬಗ್ಗೆ ಹೇಳಲಾದ ಡೈಲಾಗ್ ಸರಿಯಾಗಿಲ್ಲ ಎಂದು ಕಠ್ಮಂಡು ಮೇಯರ್ ಕೋರ್ಟ್ ಮೆಟ್ಟಿಲು ಏರಿದ್ದರು. ಸಿನಿಮಾವನ್ನು ಬ್ಯಾನ್ ಮಾಡುವುದು ಸರಿಯಲ್ಲ ಎಂದು ಅಲ್ಲಿನ ಹೈಕೋರ್ಟ್ ಹೇಳಿದ್ದರೂ, ಇತಿಹಾಸಕ್ಕೆ ಅಪಚಾರ ಮಾಡಬಾರದು ಎನ್ನುವುದನ್ನು ಎತ್ತಿ ಹಿಡಿದಿತ್ತು. ನಂತರ ಅಲಹಾಬಾದ್ (Allahabad) ಹೈಕೋರ್ಟ್ ಮೊನ್ನೆಯಷ್ಟೇ ಚಿತ್ರದ ಬಗ್ಗೆ ಅಸಮಾಧಾನ ಹೊರಹಾಕಿದೆ.

    ಆದಿಪುರುಷ ಸಿನಿಮಾದ ಚಿತ್ರಕಥೆ ಮತ್ತು ಸಂಭಾಷಣೆ ಕುರಿತಂತೆ  ಸಲ್ಲಿಸಲಾದ ಅರ್ಜಿಯನ್ನು ಕೈಗೆತ್ತಿಕೊಂಡ ಅಲಹಾಬಾದ್ ಹೈಕೋರ್ಟಿನ (High Court) ಲಕ್ನೋ ಪೀಠವು ಚಿತ್ರತಂಡದ ಜೊತೆ ಸೆನ್ಸಾರ್ ಮಂಡಳಿಯನ್ನು ತೀವ್ರವಾಗಿ ಟೀಕಿಸಿತ್ತು. ‘ಭಾರತೀಯರು ಸಹಿಷ್ಟುಗಳು ಎನ್ನುವ ಕಾರಣಕ್ಕೆ ಸಹನೆ ಪರೀಕ್ಷೆ ಮಾಡಲಾಗುತ್ತಿದೆಯೇ?’ ಎಂದು ಪ್ರಶ್ನೆ ಮಾಡಿತ್ತು.

    ರಾಮಾಯಣವನ್ನು ಜನರು ಪವಿತ್ರ ಎಂದು ದಿನವೂ ಪಠಿಸುತ್ತಾರೆ. ರಾಮಚರಿತಮಾನಸವನ್ನು ಓದುತ್ತಾರೆ. ಇಂತಹ ರಾಮಾಯಣವನ್ನೇ ಸಿನಿಮಾ ಮಾಡಿ, ಆ ನಂತರ ಸಿನಿಮಾಗೂ ರಾಮಾಯಣಕ್ಕೂ ಸಂಬಂಧವಿಲ್ಲ ಎಂದರೆ ಮಾಡಿದ ತಪ್ಪು ಮುಚ್ಚಿದಂತೆ ಆಗುತ್ತದೆ? ಚಿತ್ರದಲ್ಲಿನ ಸಂಭಾಷಣೆಗಳು ಕೂಡ ಅಪಮಾನ ಮಾಡುವಂತಿವೆ. ಈ ಸಿನಿಮಾ ನೋಡಿದ ಮೇಲೂ ಜನರು ತಾಳ್ಮೆ ಕಳೆದುಕೊಂಡಿಲ್ಲ ಎನ್ನುವುದು ಅವರ ಸಹಿಷ್ಣುತೆಯನ್ನು ತೋರಿಸುತ್ತದೆ’ ಎಂದು ಅಭಿಪ್ರಾಯ ವ್ಯಕ್ತ ಪಡಿಸಿತ್ತು.

     

    ದೇವರು ಎಂದು ಪೂಜಿಸುವ ಭಗವಾನ್ ಹನುಮಾನ್ ಮತ್ತು ಸೀತೆಯನ್ನು ಸಿನಿಮಾದಲ್ಲಿ ಏನೂ ಅಲ್ಲ ಎನ್ನುವಂತೆ ತೋರಿಸಿದ್ದೀರಿ. ಕೆಲವು ದೃಶ್ಯಗಳು ವಯಸ್ಕ ವರ್ಗಕ್ಕೆ ಸೇರುವಂತಹವು ಆಗಿವೆ. ನೀವು ಏನನ್ನು ತೋರಿಸಲು ಹೊರಟಿದ್ದೀರಿ ಎಂದು ಪ್ರಶ್ನೆ ಮಾಡಿದ್ದಲ್ಲದೇ, ಸಂಭಾಷಣೆ ಬರೆದಿರುವ ಮನೋಜ್ (Manoj) ಅವರಿಗೂ ನೋಟಿಸ್ ನೀಡಿ, ಕಕ್ಷಿದಾರನನ್ನಾಗಿ ಮಾಡಿ ಎಂದು ನಿರ್ದೇಶನ ನೀಡಿತ್ತು. ಈ ನಿರ್ದೇಶನದ ಹಿನ್ನೆಲೆಯಲ್ಲಿ ಬರಹಗಾರ ಮನೋಜ್ ಕ್ಷಮೆ ಕೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರೀ ಟೀಕೆಯ ಬಳಿಕ ಬಾಲಕನ ಬಳಿ ಕ್ಷಮೆ ಕೇಳಿದ ದಲೈ ಲಾಮಾ

    ಭಾರೀ ಟೀಕೆಯ ಬಳಿಕ ಬಾಲಕನ ಬಳಿ ಕ್ಷಮೆ ಕೇಳಿದ ದಲೈ ಲಾಮಾ

    ನವದೆಹಲಿ: ತನ್ನ ನಾಲಿಗೆಯನ್ನು ನೆಕ್ಕುವಂತೆ ಅಪ್ರಾಪ್ತ ಬಾಲಕನಿಗೆ (Boy) ಸೂಚಿಸಿ ಭಾರೀ ಟೀಕೆಗೆ ಒಳಗಾದ ಟಿಬೆಟಿಯನ್ ಆಧ್ಯಾತ್ಮ ನಾಯಕ ದಲೈ ಲಾಮಾ (Dalai Lama) ಇದೀಗ ಬಾಲಕ ಹಾಗೂ ಆತನ ಕುಟುಂಬದ ಬಳಿ ಕ್ಷಮೆ (Apology) ಕೇಳಿದ್ದಾರೆ.

    ದಲೈ ಲಾಮಾ ಅಪ್ರಾಪ್ತ ಬಾಲಕನೊಬ್ಬನಿಗೆ ತಮ್ಮ ನಾಲಿಗೆಗೆ ಮುತ್ತಿಟ್ಟು, ನೆಕ್ಕುವಂತೆ ಸೂಚಿಸಿದ್ದರು. ಇದರ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿ ಭಾರೀ ಟೀಗೆಗೆ ಒಳಗಾಗಿದ್ದರು. ಇದೀಗ ಬೌದ್ಧ ಧರ್ಮ ಗುರು ತನ್ನ ವರ್ತನೆ ಹಾಗೂ ಮಾತುಗಳಿಂದ ಬಾಲಕ ಹಾಗೂ ಆತನ ಕುಟುಂಬಕ್ಕೆ ನೋವಾಗಿರಬಹುದು ಎಂದು ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ.

    ವೀಡಿಯೋದಲ್ಲೇನಿದೆ?
    ಅಪ್ರಾಪ್ತ ಬಾಲಕನೊಬ್ಬ ದಲೈ ಲಾಮಾ ಅವರಿಗೆ ಗೌರವ ಸಲ್ಲಿಸಲು ತಲೆ ಬಾಗಿದ್ದಾನೆ. ಬಳಿಕ ದಲೈ ಲಾಮಾ ಬಾಲಕನಿಗೆ ತನ್ನ ಬಾಯಿಯನ್ನು ತೋರಿಸುತ್ತಾ ನಾಲಿಗೆಯನ್ನು ಹೊರ ಚಾಚಿದ್ದಾರೆ. ಈ ವೇಳೆ ಅವರು ನನ್ನ ನಾಲಿಗೆಯನ್ನು ನೆಕ್ಕುತ್ತೀಯಾ? ಎಂದು ಆತನ ಬಳಿ ಕೇಳಿರುವುದು ಕಂಡುಬಂದಿದೆ. ಬಳಿಕ ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿ ಭಾರೀ ಟೀಕೆಗೆ ದಲೈ ಲಾಮಾ ಗುರಿಯಾಗಿದ್ದಾರೆ. ಇದನ್ನೂ ಓದಿ: ಅಪ್ರಾಪ್ತ ಬಾಲಕನಿಗೆ ತನ್ನ ನಾಲಿಗೆ ನೆಕ್ಕುವಂತೆ ಸೂಚಿಸಿದ ದಲೈ ಲಾಮಾ – ಭಾರೀ ಟೀಕೆ

    ತನ್ನ ವಿವಾದಿತ ವರ್ತನೆ ಬಗ್ಗೆ ತಿಳಿಸಿದ ದಲೈ ಲಾಮಾ, ನಾನು ಭೇಟಿಯಾಗುವ ಜನ ಹಾಗೂ ಮಕ್ಕಳೊಂದಿಗೆ ಮುಗ್ಧ ರೀತಿಯಲ್ಲಿ ಮತ್ತು ತಮಾಷೆಗಾಗಿ ಈ ರೀತಿ ವರ್ತಿಸುತ್ತೇನೆ. ಆದರೆ ನನ್ನ ವರ್ತನೆಗೆ ಬಾಲಕ ಹಾಗೂ ಆತನ ಕುಟುಂಬಕ್ಕೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತದಂತೆ ನಾನು ರಷ್ಯಾದಿಂದ ಅಗ್ಗದ ಬೆಲೆಯಲ್ಲಿ ಕಚ್ಚಾ ತೈಲ ಖರೀದಿಗೆ ಮುಂದಾಗಿದ್ದೆ: ಇಮ್ರಾನ್ ಖಾನ್

  • ನ್ಯಾಯಾಂಗ ನಿಂದನೆ ಪ್ರಕರಣ: ಕ್ಷಮೆ ಕೇಳಿದ ಕಾಶ್ಮೀರ್ ಫೈಲ್ಸ್ ನಿರ್ದೇಶಕ

    ನ್ಯಾಯಾಂಗ ನಿಂದನೆ ಪ್ರಕರಣ: ಕ್ಷಮೆ ಕೇಳಿದ ಕಾಶ್ಮೀರ್ ಫೈಲ್ಸ್ ನಿರ್ದೇಶಕ

    ನ್ಯಾಯಾಂಗ ನಿಂದನೆ ಆರೋಪಕಕ್ಕೆ ಸಂಬಂಧಿಸಿದಂತೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ದೆಹಲಿ ಹೈಕೋರ್ಟಿಗೆ ಬೇಷರತ್ ಕ್ಷಮೆ ಯಾಚಿಸಿದ್ದಾರೆ. ಕ್ಷಮೆ ಕುರಿತಂತೆ ತಮ್ಮ ವಕೀಲರ ಮೂಲಕ ಅವರು ಅಫಿಡವಿಟ್ ಸಲ್ಲಿಸಿದ್ದಾರೆ. ಈ ಹಿಂದೆ ವಿವೇಕ್ ಟ್ವೀಟ್ ಒಂದನ್ನು ಮಾಡಿದ್ದರು. ಆ ಟ್ವೀಟ್‍ ನಲ್ಲಿ ನ್ಯಾಯಾಂಗ ನಿಂದನೆ ಮಾಡಿದ್ದರು.  ಈ ಸಂಬಂಧವಾಗಿ ನ್ಯಾಯಾಲಯವು ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿಕೊಂಡಿತ್ತು.

    2018ರಲ್ಲಿ ಭೀಮಾ ಕೋರೆಗಾಂವ್ ಪ್ರಕಣದಲ್ಲಿ ಸಾಮಾಜಿಕ ಕಾರ್ಯಕರ್ತ ಗೌತಮ್ ನವಲಖ ಅವರಿಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ, ನ್ಯಾಯಮೂರ್ತಿಗಳಾದ ಎಸ್.ಮುರುಳೀಧರ್ ಅವರ ಮೇಲೆ ಪಕ್ಷಪಾತದ ಆರೋಪ ಹೊರಿಸುವ ರೀತಿಯಲ್ಲಿ ವಿವೇಕ್ ಅಗ್ನಿಹೋತ್ರಿ ಟ್ವೀಟ್ ಮಾಡಿದ್ದರು. ಆ ಟ್ವೀಟ್ ಅನ್ನು ಸ್ವತಃ ಟ್ವಿಟರ್ ಸಂಸ್ಥೆಯೇ ಡಿಲೀಟ್ ಮಾಡಿತ್ತು. ಇದನ್ನೂ ಓದಿ: ಪ್ರೀ ವೆಡ್ಡಿಂಗ್ ಪಾರ್ಟಿಯಲ್ಲಿ ಮಿಂಚಿದ `ಬಿಂದಾಸ್’ ನಟಿ ಹನ್ಸಿಕಾ ಮೋಟ್ವಾನಿ

    kashmir

    ವಕೀಲರ ಮೂಲಕ ಈ ಹಿಂದಿನ ಟ್ವೀಟ್ ಅನ್ನು ತಗೆದುಹಾಕಿದ್ದೇವೆ ಎಂದು ವಿವೇಕ್ ಅಗ್ನಿಹೋತ್ರಿ ಹೇಳುವ ಪ್ರಯತ್ನ ಮಾಡಿದ್ದರು. ಆದರೆ, ಟ್ವಿಟರ್ ಸಂಸ್ಥೆಯೇ ಅದನ್ನು ತಗೆದುಹಾಕಿದ್ದು ಎಂದು ವಾದಿಸಲಾಗಿತ್ತು. ಅಲ್ಲದೇ, ಖುದ್ದಾಗಿ ವಿವೇಕ್ ಅಗ್ನಿಹೋತ್ರಿ ನ್ಯಾಯಾಲಯದ ಮುಂದೆ ಹಾಜರು ಕೂಡ ಆಗಿರಲಿಲ್ಲ. ಇದೆಲ್ಲವನ್ನೂ ಪರಿಗಣಿಸಿರುವ ನ್ಯಾಯಾಲಯವು 2023 ಮಾರ್ಚ್ 16ರಂದು ಕೋರ್ಟಿಗೆ ಖುದ್ದಾಗಿ ಹಾಜರಿರಬೇಕು ಎಂದು ಆದೇಶಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಹಿಂದೂಗಳಿಗೆ ಅವಹೇಳನ ಮಾಡಿದ ಬದ್ರುದ್ದೀನ್ ಅಜ್ಮಲ್ ಕ್ಷಮೆ

    ಹಿಂದೂಗಳಿಗೆ ಅವಹೇಳನ ಮಾಡಿದ ಬದ್ರುದ್ದೀನ್ ಅಜ್ಮಲ್ ಕ್ಷಮೆ

    ನವದೆಹಲಿ: ಹಿಂದೂ (Hindu) ಸಮುದಾಯವನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿಯಾಗಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ ಎಐಯುಡಿಎಫ್ ಮುಖ್ಯಸ್ಥ, ಅಸ್ಸಾಂನ ಲೋಕಸಭಾ ಸಂಸದ ಬದ್ರುದ್ದೀನ್ ಅಜ್ಮಲ್ (Badruddin Ajmal) ಅವರು ಶನಿವಾರ ಕ್ಷಮೆಯಾಚಿಸಿದ್ದಾರೆ (Apology).

    ನಾನು ನೀಡಿರುವ ವಿವಾದಿತ ಹೇಳಿಕೆಯಿಂದ ನನಗೆ ನಾಚಿಕೆಯಾಗಿದೆ. ಆದರೂ ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನಾನು ಯಾವುದೇ ಸಮುದಾಯವನ್ನು ಅಥವಾ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಈ ಹೇಳಿಕೆಯನ್ನು ನೀಡಿಲ್ಲ. ನನ್ನ ಉದ್ದೇಶ ಯಾವುದೇ ವ್ಯಕ್ತಿಯ ಹೃದಯಕ್ಕೆ ಘಾಸಿ ಮಾಡುವುದಾಗಿರಲಿಲ್ಲ ಎಂದು ತಿಳಿಸಿದ್ದಾರೆ.

    ನನ್ನ ಹೇಳಿಕೆ ವಿವಾದ ಹುಟ್ಟುಹಾಕಿದೆ, ಇದರಿಂದ ನನಗೆ ನಾಚಿಕೆಯಾಗಿದೆ. ನಾನು ಇದಕ್ಕಾಗಿ ಕ್ಷಮೆ ಯಾಚಿಸುತ್ತೇನೆ. ನನ್ನಂತಹ ಹಿರಿಯ ವ್ಯಕ್ತಿ ಇಂತಹ ಹೇಳಿಕೆಯನ್ನು ನೀಡಬಾರದಿತ್ತು. ಈ ಬಗ್ಗೆ ನನ್ನ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಹಿಂದೂ ನಾಯಕರು ಪ್ರತಿ ದಿನ ಮುಸ್ಲಿಮರ (Muslim) ವಿರುದ್ಧ ಮಾತನಾಡುತ್ತಾರೆ. ನಾವು ಅವರ ವಿರುದ್ಧ ಪ್ರಕರಣವನ್ನು ದಾಖಲಿಸಿಲ್ಲ ಎಂದು ಹೇಳಿದ್ದಾರೆ.

    ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅಜ್ಮಲ್, ಮುಸ್ಲಿಂ ಪುರುಷರು 20 ರಿಂದ 22ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ. ಮುಸ್ಲಿಂ ಮಹಿಳೆಯರು ಸಹ ಸರ್ಕಾರದ ಅನುಮತಿ ಮೇರೆಗೆ 18ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ. ಆದರೆ ಹಿಂದೂಗಳು ಮದುವೆಗೆ ಮುನ್ನ ಒಬ್ಬೊಬ್ಬರು 2 ಅಥವಾ 3 ಅಕ್ರಮ ಸಂಬಂಧಗಳನ್ನು ಇಟ್ಟುಕೊಳ್ಳುತ್ತಾರೆ. ಅವರು ಮಕ್ಕಳನ್ನು ಹೆರುವುದಿಲ್ಲ, ಜೀವನವನ್ನು ಆನಂದಿಸಿ ಹಣ ಉಳಿಸುತ್ತಾರೆ ಅಷ್ಟೇ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಗಳನ್ನು ಕೋಚಿಂಗ್ ಸೆಂಟರ್‌ಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ರಾಜಸ್ಥಾನದ ಗ್ಯಾಂಗ್‌ವಾರ್‌ಗೆ ಬಲಿ

    ಮುಸ್ಲಿಂ ಜನಸಂಖ್ಯೆ ಹೆಚ್ಚುತ್ತಿದೆ ಎಂಬ ಆರೋಪದ ಬಗ್ಗೆ ಮಾತನಾಡಿದ ಅಜ್ಮಲ್, 40 ವರ್ಷ ವಯಸ್ಸಿನ ನಂತರ ಹಿಂದೂಗಳು ಪೋಷಕರ ಒತ್ತಡದಲ್ಲಿ ಮದುವೆಯಾಗುತ್ತಾರೆ. ಹಾಗಾದರೆ ಅವರು 40ರ ನಂತರ ಮಕ್ಕಳನ್ನು ಹೆರುತ್ತಾರೆ ಎಂದು ನೀವು ಹೇಗೆ ನಿರೀಕ್ಷಿಸುತ್ತೀರಿ? ಫಲವತ್ತಾದ ಭೂಮಿಯಲ್ಲಿ ಬಿತ್ತನೆ ಮಾಡಿದರೆ ಮಾತ್ರ ಉತ್ತಮ ಬೆಳೆಗಳನ್ನು ಬೆಳೆಯಲು ಸಾಧ್ಯ. ಆದ್ದರಿಂದ ಹಿಂದೂಗಳು ಮುಸ್ಲಿಮರ ಸೂತ್ರವನ್ನು ಅನುಸರಿಸಬೇಕು. ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿ ಮದುವೆ ಮಾಡಬೇಕು ಎಂದಿದ್ದರು. ಇದನ್ನೂ ಓದಿ: ಬೆತ್ತನಗೆರೆ ಶಂಕರನ ರಾಜಕೀಯ ಎಂಟ್ರಿಗೆ ಖಾಕಿ ಬ್ರೇಕ್!

    Live Tv
    [brid partner=56869869 player=32851 video=960834 autoplay=true]

  • ಕನ್ನಡಪರ ಹೋರಾಟಗಾರರಿಗೆ ಕ್ಷಮೆ ಕೇಳಿ ಕಣ್ಣೀರು ಹಾಕಿದ ಪ್ರಶಾಂತ್ ಸಂಬರ್ಗಿ

    ಕನ್ನಡಪರ ಹೋರಾಟಗಾರರಿಗೆ ಕ್ಷಮೆ ಕೇಳಿ ಕಣ್ಣೀರು ಹಾಕಿದ ಪ್ರಶಾಂತ್ ಸಂಬರ್ಗಿ

    ಬಿಗ್ ಬಾಸ್ (Big Boss) ಮನೆಗೆ ಹೋದಾಗಿನಿಂದ ರೂಪೇಶ್ ರಾಜಣ್ಣ ಮತ್ತು ಪ್ರಶಾಂತ್ ಸಂಬರ್ಗಿ ನಡುವೆ ಮುಸುಕಿನ ಗುದ್ದಾಟ ನಡೆದೇ ಇತ್ತು. ಒಂದೊಂದು ಸಾರಿ ಈ ಗುದ್ದಾಟ ಅತಿರೇಕಕ್ಕೂ ಹೋಗಿದ್ದು ಇದೆ. ಇಬ್ಬರೂ ಒಬ್ಬರಿಗೊಬ್ಬರಿಗೆ ಬಾಯಿಗೆ ಬಂದಂತೆ ಮಾತನಾಡುವುದನ್ನು ರೂಢಿ ಮಾಡಿಕೊಂಡಿದ್ದರು. ಹಾಗಾಗಿ ಮನೆಯಲ್ಲಿ ವೈಯಕ್ತಿಕವಾಗಿ ಜಗಳ ಆಗುತ್ತಲೇ ಇತ್ತು. ಈ ಜಗಳವು ಕನ್ನಡಪರ (Kannada) ಸಂಘಟನೆಯ ಕಾರ್ಯಕರ್ತರನ್ನು ಕೆರಳಿಸುವಂತೆ ಮಾಡಿತ್ತು.

    ರೂಪೇಶ್ ರಾಜಣ್ಣ (Rupesh Rajanna) ಅವರ ಕನ್ನಡಪರ ಹೋರಾಟಗಳನ್ನು ಟೀಕಿಸುತ್ತಲೇ ಬಂದಿದ್ದ ಪ್ರಶಾಂತ್ ಸಂಬರ್ಗಿ (Prashant Sambargi), ಏಕಾಏಕಿ ಇತರ ಹೋರಾಟಗಾರರನ್ನು ನಿಂದಿಸಿದ್ದರು. ಯಾವ ಹೋರಾಟಗಾರರನ್ನು ಹೇಗೆ ಹತ್ತಿಕ್ಕಬೇಕು, ನೋಡಿಕೊಳ್ಳಬೇಕು ಎಂದು ನನಗೆ ಗೊತ್ತಿದೆ. ಎಷ್ಟೋ ಜನರನ್ನು ಮೂಲೆಗುಂಪು ಮಾಡಿದ್ದೇನೆ ಎನ್ನುವ ಅರ್ಥದಲ್ಲಿ ಮಾತನಾಡಿದ್ದರು. ಸಂಬರ್ಗಿ ಅವರ ಈ ಮಾತು ಕನ್ನಡಪರ ಹೋರಾಟಗಾರರನ್ನು ಕೆರಳಿಸಿತ್ತು. ಹೀಗಾಗಿಯೇ ಅನೇಕರು ವಾಹಿನಿಯ ಮುಂದೆ ಮತ್ತು ಬಿಗ್ ಬಾಸ್ ಶೂಟಿಂಗ್ ನಡೆಯುವ ಸ್ಥಳಕ್ಕೂ ಹೋಗಿ ಪ್ರತಿಭಟನೆ ಮಾಡಿದ್ದರು. ಇದನ್ನೂ ಓದಿ:ತಾಯ್ನಾಡಿಗೆ ಪ್ರಿಯಾಂಕಾ ಚೋಪ್ರಾ ಕಾಲಿಟ್ಟ ಬೆನ್ನಲ್ಲೇ ನಟಿಯ ವಿರುದ್ಧ ಗಂಭೀರ ಆರೋಪ

    ಹೋರಾಟಗಾರರ ಪ್ರತಿಭಟನೆ ತಾರಕಕ್ಕೇ ಏರುತ್ತಿದ್ದಂತೆಯೇ ವಾಹಿನಿ ಕೂಡ ಎಚ್ಚೆತ್ತುಕೊಂಡಿದೆ. ಬಿಗ್ ಬಾಸ್ ಮನೆಯಿಂದ ಸಂಬರ್ಗಿಯನ್ನು ಆಚೆ ಕರೆತರದಿದ್ದರೆ, ಅವರನ್ನು ಹೇಗೆ ಆಚೆ ಕರೆದುಕೊಂಡು ಬರಬೇಕು ಎನ್ನುವುದು ನಮಗೂ ಗೊತ್ತಿದೆ ಎಂದು ಹೋರಾಟಗಾರರು ಎಚ್ಚರಿಕೆಯನ್ನು ಕೊಟ್ಟಿದ್ದರು. ಈ ವಿಷಯವನ್ನು ಬಿಗ್ ಬಾಸ್ ಮನೆಯಲ್ಲಿರುವ ಸಂಬರ್ಗಿಗೆ ಮುಟ್ಟಿಸಲಾಗಿದೆ. ಹೀಗಾಗಿಯೇ ಸಂಬರ್ಗಿ ಕ್ಷಮೆ ಕೇಳಿದ್ದಾರೆ.

    ಬಿಗ್ ಬಾಸ್ ಕನ್ಪೆಷನ್ ರೂಂಗೆ ಸಂಬರ್ಗಿ ಕರೆಯಿಸಿಕೊಂಡು ಅಸಲಿ ವಿಚಾರವನ್ನು ಮುಂದಿಟ್ಟರು. ಅದನ್ನು ಕೇಳುತ್ತಿದ್ದಂತೆಯೇ ನಾನು ಆ ರೀತಿಯಲ್ಲಿ ಮಾತನಾಡಿಲ್ಲ, ಯಾರಿಗೂ ಅವಮಾನಿಸಿಲ್ಲ. ಹಾಗೆನಿಸಿದ್ದರೆ ಕ್ಷಮಿಸಿ ಎಂದು ಕಣ್ಣಿರಿಡುತ್ತಾ ಹೇಳಿದರು. ಆಡಿದ ಅಷ್ಟೂ ಮಾತುಗಳನ್ನು ನಾನು ಹಿಂಪಡೆಯುತ್ತೇನೆ. ಯಾವುದೇ ಕಾರಣಕ್ಕೂ ಯಾರನ್ನೂ ನೋಯಿಸುವ ಉದ್ದೇಶ ನನಗಿಲ್ಲ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]