Tag: ಕ್ಷಮೆ

  • ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ- ಬಹಿರಂಗವಾಗಿ ಕ್ಷಮೆ ಕೇಳಿದ ಸಂಜನಾ: ವಿಡಿಯೋ ನೋಡಿ

    ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ- ಬಹಿರಂಗವಾಗಿ ಕ್ಷಮೆ ಕೇಳಿದ ಸಂಜನಾ: ವಿಡಿಯೋ ನೋಡಿ

    ಬೆಂಗಳೂರು: ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.

    ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕ್ಷಮೆ ಕೇಳಿದ್ದಾರೆ.

    ಸಂಜನಾ ಹೇಳಿದ್ದೇನು?
    ನಾನು ನನ್ನ ಅನುಭವ ಹಾಗೂ ಜೀವನದಲ್ಲಿ ನಡೆದ ಸತ್ಯವನ್ನೇ ಹೇಳಿಕೊಂಡಿದ್ದೇನೆ. ಅಲ್ಲದೇ ಗಂಡ-ಹೆಂಡತಿ ಚಿತ್ರದ ವೇಳ ಆದಂತಹ ಅನುಭವಗಳನ್ನು ಹೇಳಿಕೊಳ್ಳಲು ನನಗೆ ಆಗ ಸಾಧ್ಯವಾಗಿರಲಿಲ್ಲ. ಅಲ್ಲದೇ ನಾನು ಆಹ ಚಿಕ್ಕವಳಿದ್ದೆ. ಈ ಎಲ್ಲಾ ವಿಷಯವನ್ನು ಮೀಟೂ ಅಭಿಯಾನದ ಮೂಲಕ ಹಂಚಿಕೊಂಡಿದ್ದೆ. ಇದರಿಂದಾಗಿ ಚಿತ್ರದ ನಿರ್ದೇಶಕ ಹಾಗೂ ನಿರ್ದೇಶಕರ ಸಂಘದವರಿಗೆ ನೋವುಂಟಾಗಿದೆ.

    ನನ್ನ ಉದ್ದೇಶ ಯಾರ ಹೆಸರು ಹಾಗೂ ಜೀವನವನ್ನು ಹಾಳು ಮಾಡಬೇಕೆಂದು ಇರಲಿಲ್ಲ. ಹೀಗಾಗಿ ನಾನು ಕಲಾವಿದರ ಸಂಘದ ಹಿರಿಯರಾದ ನಟ ಅಂಬರೀಶ್, ದೊಡ್ಡಣ್ಣ ಹಾಗೂ ರಾಕ್‍ಲೈನ್ ವೆಂಕಟೇಶ್ ಅವರ ಮಾತಿಗೆ ಬೆಲೆಕೊಟ್ಟು, ಗಂಡ-ಹೆಂಡತಿ ನಿರ್ದೇಶಕರು ಹಾಗೂ ಚಿತ್ರತಂಡ ಮತ್ತು ನಿರ್ದೇಶಕರ ಸಂಘದ ಎಲ್ಲರಿಗೂ ಕ್ಷಮೆಯನ್ನು ಕೋರುತ್ತೇನೆ. ಈ ಘಟನೆಯನ್ನು ಮುಂದುವರಿಸಿಕೊಂಡು ಹೋಗಲು ಇಷ್ಟಪಡುವುದಿಲ್ಲ. ಹೀಗಾಗಿ ಎಲ್ಲರ ಬಳಿ ನಾನು ಕ್ಷಮೆ ಕೇಳುತ್ತೇನೆ.

    ಸಂಜನಾ ಆರೋಪವೇನು?
    ಅಕ್ಟೋಬರ್ 7ರಂದು ಮಾಧ್ಯಮಗಳೊಂದಿಗೆ ತಮ್ಮ ಸಿನಿ ಜರ್ನಿಯಲ್ಲಿ ನಡೆದ ಹಿಂಸೆಯ ಬಗ್ಗೆ ತೆರೆದಿಟ್ಟ ಸಂಜನಾ ಗರ್ಲಾನಿ, ನನಗೂ ಚಿತ್ರರಂಗದಲ್ಲಿ ತುಂಬಾ ಹೀನಾಯವಾಗಿ ನಡೆಸಿಕೊಂಡಿದ್ದಾರೆ. ನಿನ್ನ ವೃತ್ತಿ ಜೀವನ ಚೆನ್ನಾಗಿರಬೇಕು ಅಂದರೆ ಕಿಸ್ಸಿಂಗ್ ಸೀನ್ ಮಾಡು ಎಂದು ನಿರ್ದೇಶಕರು ಒತ್ತಾಯ ಮಾಡಿದ್ದರು. ಅಲ್ಲದೇ ಒಮ್ಮೆಲೇ 50ಕ್ಕೂ ಹೆಚ್ಚು ಕಿಸ್ಸಿಂಗ್ ಸೀನ್ ಮಾಡಿಸಿದ್ದರು. ಬ್ಯಾಕ್ ಲೆಸ್ ಸೀನ್ ಮಾಡುವಾಗಲು ಇಂತಹದ್ದೇ ಹಿಂಸೆಯಾಗಿತ್ತು. ಚಿತ್ರೀಕರಣದ ಸಮಯದಲ್ಲಿ ಭಯ ಹುಟ್ಟಿಸುವ ವಾತಾವರಣ ಇತ್ತು. ನನ್ನ ಮೇಲೆ ದಬ್ಬಾಳಿಕೆ ಮಾಡಿ ಕಿಸ್ಸಿಂಗ್ ಸೀನ್ ಗಳನ್ನು ಮಾಡಿಸಿಕೊಂಡರು. ಈ ವೇಳೆ ವಿದೇಶದಲ್ಲಿ ಶೂಟಿಂಗ್ ನಡೆಯುತ್ತಿತ್ತು. ಬ್ಯಾಕಾಂಕ್ ನಿಂದ ಬಂದ ನಂತರವೂ ಬೆಂಗಳೂರಿನಲ್ಲಿ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಚಿತ್ರನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಆರೋಪ ಮಾಡಿದ್ದರು.

    ಸಂಜನಾ ಗರ್ಲಾನಿ ಆರೋಪಕ್ಕೆ ನಿರ್ದೇಶಕ ರವಿ ಶ್ರೀವತ್ಸ ನಿರ್ದೇಶಕರ ಸಂಘದ ಮೊರೆ ಹೋಗಿದ್ದರು. ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ್ದ ವಿ.ನಾಗೇಂದ್ರ ಪ್ರಸಾದ್ ನಿರ್ದೇಶಕರಿಗೆ ಕ್ಷಮೆ ಕೋರುವಂತೆ ಸಂಜಾನಾಗೆ ಆಗ್ರಹಿಸಿದ್ದರು. ಅಲ್ಲದೇ ಈ ಬಗ್ಗೆ ಕಲಾವಿದರ ಸಂಘಕ್ಕೆ ದೂರನ್ನು ಸಹ ಕೊಟ್ಟಿದ್ದರು.

    https://www.youtube.com/watch?v=SiaVF8Wjf1c

    https://www.youtube.com/watch?v=ALJ_vOFTo5Y

    https://youtu.be/Fngx4OL8iUY

    https://youtu.be/2YYfQAOr3SM

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ನನ್ನ ಬಳಿ 3 ಸೈಟ್, 5 ಕಾರು ಇದೆ: ತನ್ನ ಆಸ್ತಿ ವಿವರ, ದಿನದ ಸಂಬಳ ತಿಳಿಸಿ ತಿರುಗೇಟು ಕೊಟ್ಟ ಸಂಜನಾ

    ನನ್ನ ಬಳಿ 3 ಸೈಟ್, 5 ಕಾರು ಇದೆ: ತನ್ನ ಆಸ್ತಿ ವಿವರ, ದಿನದ ಸಂಬಳ ತಿಳಿಸಿ ತಿರುಗೇಟು ಕೊಟ್ಟ ಸಂಜನಾ

    ಬೆಂಗಳೂರು: ನನ್ನನ್ನು ನೋಡಿದರೆ ರವಿ ಶ್ರೀವತ್ಸ ಅವರಿಗೆ ಹೊಟ್ಟೆ ಕಿಚ್ಚು. ಹಾಗಾಗಿ ಈ ರೀತಿಯ ಟೀಕೆ ಮಾಡುತ್ತಿದ್ದಾರೆ ಎಂದು ಸಂಜನಾ ತಿರುಗೇಟು ಕೊಟ್ಟಿದ್ದಾರೆ.

    ಜಾಗ್ವಾರ್ ಕಾರ್, ಕೋಟಿ ರೂ. ಆಸ್ತಿ ಇರುವ ಸಂಜನಾ ಐಟಿ ರಿರ್ಟನ್ಸ್ ಸಲ್ಲಿಸಿದ್ದಾರಾ ಎಂಬ ನಿರ್ದೇಶಕ ರವಿ ಶ್ರೀವತ್ಸವ ಅವರ ಪ್ರಶ್ನೆಗೆ ಪಬ್ಲಿಕ್ ಟಿವಿಯಲ್ಲಿ ಸಂಜನಾ ದೀರ್ಘ ಉತ್ತರ ನೀಡಿದರು.

    ಸಂಜನಾ ಹೇಳಿದ್ದು ಹೀಗೆ:
    ನನ್ನ ಆಸ್ತಿ ಬಗ್ಗೆ ನಾನೇ ಸಂಪೂರ್ಣವಾಗಿ ಎಲ್ಲರಿಗೂ ಹೇಳುತ್ತೇನೆ. ನನ್ನ ಹುಟ್ಟುಹಬ್ಬಕ್ಕೆ ನಾನು ಜಾಗ್ವಾರ್ ಖರೀದಿಸಿದೆ. ನನ್ನ ಹತ್ತಿರ ಬಿಎಂಡಬ್ಲ್ಯೂ, ಹೋಂಡಾ ಸಿವಿಕ್, ವೆರ್ನಾ ಇದ್ದರೆ ತಂಗಿ ಬಳಿ ಆಡಿ ಕಾರಿದೆ. 100*100 ಮನೆ ಮಾತ್ರ ಇಲ್ಲ. ರಾಜನಕುಂಟೆಯಲ್ಲಿ ಸೈಟ್ ಇದೆ ಹಾಗೂ ಹೈದರಾಬಾದ್‍ನಲ್ಲಿ ಸೈಟ್ ಇದೆ. ನಾನು 45 ಸಿನಿಮಾಗಳಲ್ಲಿ ನಟಿಸಿದ್ದೇನೆ. ಪ್ರಭಾಸ್, ಪವನ್ ಕಲ್ಯಾಣ್, ಮೋಹನ್ ಲಾಲ್, ಮುಮ್ಮಟ್ಟಿ, ದರ್ಶನ್ ಅವರ ಜೊತೆಯಲ್ಲಿ ನಾನು ನಟಿಸಿದ್ದೇನೆ. ಅಲ್ಲದೇ 12 ವರ್ಷದಲ್ಲಿ 120 ಜಾಹೀರಾತು ಮಾಡಿದ್ದೇನೆ. ತೆಲುಗು ಕಾರ್ಯಕ್ರಮದಲ್ಲಿ ನಟಿಸುತ್ತಿದ್ದೇನೆ. ಆ ಕಾರ್ಯಕ್ರಮಕ್ಕೆ ಒಂದು ದಿನಕ್ಕೆ 1.5 ಲಕ್ಷ ರೂ. ಸಂಭಾವನೆ ಸಿಗುತ್ತದೆ. ಹೀಗಾಗಿ ನಾನು ಈ ಆಸ್ತಿಯನ್ನು ಸಂಪಾದಿಸಿದ್ದೇನೆ.

    ಗಂಡ- ಹೆಂಡತಿ ಸಿನಿಮಾ ಮಾಡುವಾಗ ನನಗೆ 16 ವರ್ಷ. ಅಕ್ಟೋಬರ್ 10, 1989 ರಂದು ಮಾತಾಸ್ ಆಸ್ಪತ್ರೆಯಲ್ಲಿ ಹುಟ್ಟಿದ್ದೇನೆ. ವೀಕಿಪಿಡಿಯಾದಲ್ಲಿ ಬರುವುದು ಸರಿಯಿರುವುದಿಲ್ಲ. ಅವರಿಗೆ ಅಷ್ಟು ಅನುಮಾನವಿದ್ದರೆ, ಅವರು ಮಾತಾಸ್ ಆಸ್ಪತ್ರೆಗೆ ಹೋಗಿ ಪರಿಶೀಲಿಸಲಿ ಆಸ್ಪತ್ರೆಯಲ್ಲಿ ನಿಮಗೆ ಈ ದಿನಾಂಕ ಸಿಗಲಿಲ್ಲ ಎಂದರೆ ನಾನು ಚಿತ್ರರಂಗ ಬಿಡುತ್ತೇನೆ. ನನಗೆ ಶ್ರೀವತ್ಸ ಮೇಲೆ ಯಾವುದೇ ದ್ವೇಷವಿಲ್ಲ. ನಾನು ಎಲ್ಲ ಮರೆತು ಆರಮವಾಗಿದ್ದೆ. ಈ ಮೀಟೂ ಬಂದಿದ್ದಕ್ಕೆ ನಾನು ನನ್ನ ಅನುಭವನ್ನು ಹಂಚಿಕೊಂಡೆ. ನನ್ನ ಹುಟ್ಟುಹಬ್ಬಕ್ಕೆ ನಾನು ಇವರನ್ನು ಹಾಗೂ ಚಿತ್ರರಂಗದ ಸದಸ್ಯರನ್ನು ಕರೆದಿದ್ದೆ. 45 ಸಿನಿಮಾದ ಪಯಣದಲ್ಲಿ ನಾನು ಒಂದು ಚಿತ್ರದ ಅನುಭವ ಮಾತ್ರ ಹೇಳಿಕೊಂಡಿದ್ದೇನೆ. ಏಕೆಂದರೆ ಇವರು ಒಂದು ಹೇಳಿ ಸಿನಿಮಾದಲ್ಲಿ ಬೇರೆ ಮಾಡಿಸಿದ್ದು, ಸರಿಯಿಲ್ಲ.

    ಶ್ರೀವತ್ಸ ನನ್ನ ತಂಗಿಯ ವಯಸ್ಸನ್ನು ಹಾಗೂ ನನ್ನ ತಂದೆ ಬಗ್ಗೆ ಮಾತನಾಡುತ್ತಿರುವುದು ಅವರಿಗೆ ನಾಚಿಕೆ ಆಗಬೇಕು. ಶೇಮ್ ಆನ್ ಯೂ ಶ್ರೀವತ್ಸ. ಮೀಟೂ ಅಭಿಯಾನದ ಬಗ್ಗೆ ಮಾತನಾಡುವಾಗ ನಿಮ್ಮ ಅನುಭವ ಹೇಳಿಕೊಳ್ಳಿ ಎಂದು ಕೇಳಿದ್ದಾಗ ನಾನು ನನ್ನ ಅನುಭವವನ್ನು ಹಂಚಿಕೊಂಡೆ. ಆದರೆ ಇವರು ಪ್ರೆಸ್‍ಮೀಟ್ ನಡೆಸಿ ಪಬ್ಲಿಸಿಟಿ ತೆಗೆದುಕೊಳ್ಳುತ್ತಿದ್ದಾರೆ. 12 ವರ್ಷದಿಂದ ನಾನು ಚಿತ್ರಗಳಲ್ಲಿ ದೊಡ್ಡ ನಟರ ಜೊತೆ ನಟಿಸಿದ್ದೇನೆ. ಹಾಗಾಂತ ನನಗೆ ಅವರಿಂದ ಪಬ್ಲಿಸಿಟಿ ಪಡೆಯುವ ಅವಶ್ಯಕತೆ ಇಲ್ಲ.

    ಗಂಡ-ಹೆಂಡತಿ ಸಿನಿಮಾದಲ್ಲಿ ನಟಿಸಿದ್ದು ಒಂದು ಶಾಪದಂತೆ ಆಗಿದೆ. ಇದರಿಂದಾಗಿ ನನಗೆ ರಕ್ಷಿತಾ, ರಮ್ಯಾ ಅವರಂತೆ ಸಿನಿಮಾದಲ್ಲಿ ನಟಿಸಲು ಸಾಧ್ಯವಿಲ್ಲ. ನಿರ್ದೇಶಕ ರವಿ ಶ್ರೀವತ್ಸ ಸಹ ಯೋಗರಾಜ್ ಭಟ್ ಹಾಗೂ ಸೂರಿಯಂತೆ ಬೆಳೆಯಲು ಆಗಲಿಲ್ಲ.

    ನಾನು 2 ವರ್ಷಗಳ ಹಿಂದೆ ‘ಜಿಸ್ಮ್’ ಸಿನಿಮಾ ಮಾಡೋಣ ಎಂದು ಹೇಳಿದೆ. ರವಿ ಇಂದು ಬೆಳಗ್ಗೆ ಪತ್ರಿಕಾಗೋಷ್ಠಿ ನಡೆಸುವ ಮೊದಲು ನನಗೆ ಅವರ ಮೇಲೆ ಯಾವ ಕೋಪ ಇರಲಿಲ್ಲ. ಇಂದು ಪತ್ರಿಕಾಗೋಷ್ಠಿಯಲ್ಲಿ ಅವರು ನನ್ನ ತಂಗಿ ಹಾಗೂ ಅಪ್ಪನ ಬಗ್ಗೆ ಮಾತನಾಡಿದ್ದು ನನಗೆ ಇಷ್ಟವಾಗಲಿಲ್ಲ. ಗಂಡ-ಹೆಂಡತಿ ಚಿತ್ರೀಕರಣದ ಸಮಯದಲ್ಲಿ ನಾನು ಅವರು ನನ್ನನ್ನು ಪ್ರಾಣಿಗಳ ರೀತಿ ನಡೆಸಿಕೊಂಡಿದ್ದರು. ಆ ಸಮಯದಲ್ಲಿ ಅವರು ಲೂಸ್, ಸೈಕೋ ತರಹ ಆಡುತ್ತಿದ್ದರು. ಹಾಗಾಗಿ ಅವರು ಈಗಲೂ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ.

    ನಾನು ಹಲವಾರು ದೊಡ್ಡ ನಿರ್ದೇಶಕರ ಜೊತೆ ಕೆಲಸ ಮಾಡಿದ್ದೇನೆ. ಯಾರೂ ಕೂಡ ನಿಮ್ಮಂತೆ ನನಗೆ ಟಾರ್ಚರ್ ನೀಡಿಲ್ಲ. ನೀವು ನನಗೆ ಸತ್ತು ಹೋಗು. ಸತ್ತು ಹೋಗು ಎಂದು ಕಿರುಚುತ್ತಾ ಟಾರ್ಚರ್ ನೀಡಿದ್ದೀರಿ. ಹಿಂದಿಯ ಮರ್ಡರ್ ಸಿನಿಮಾ 100 ರಷ್ಟು ಇದ್ದರೆ, ಇವರು 400 ರಷ್ಟು ಸಿನಿಮಾ ಮಾಡಿದ್ದಾರೆ. ಗಂಡ-ಹೆಂಡತಿ ಭಾಗ-2 ಸಿನಿಮಾ ತೆಗೆಯೋವಷ್ಟು ಶೂಟಿಂಗ್ ಮಾಡಿದ್ದಾರೆ. ವೆಬ್ ಸೀರಿಸ್ ಚಿತ್ರಗಳನ್ನು ತೆಗೆಯೋಣ ಎಂದು ಹೇಳಿದೆ. ಅವರು ಈಗ ಬದಲಾಗಿದ್ದಾರೆ ಎನ್ನಿಸಿತ್ತು. ಅಲ್ಲದೇ ನಾನು ಅವರನ್ನು ಕ್ಷಮಿಸಿದ್ದೇನೆ. ನನ್ನ ಮನಸ್ಸು ದೊಡ್ಡದು. ಹಾಗಾಗಿ ನಾನು ನಿಮ್ಮನ್ನು ನನ್ನ ಹುಟ್ಟುಹಬ್ಬಕ್ಕೆ ಕರಿದಿದ್ದೆ.

    ಗಂಡ-ಹೆಂಡತಿ ಸಿನಿಮಾ ಶೂಟಿಂಗ್ ವೇಳೆ ಅವರು ನನ್ನನ್ನು ಬೈದಿದ್ದರು. ಅದನ್ನು ನಾನು ಮೀಟೂ ಅಭಿಯಾನದಲ್ಲಿ ಹೇಳಿಕೊಂಡೆ. ನಾನು ನಿರ್ದೇಶಕರ ಸಂಘಕ್ಕೆ ಹಾಗೂ ನಿರ್ಮಾಪಕರ ಸಂಘದಲ್ಲಿ ಕ್ಷಮೆ ಕೇಳುತ್ತೇನೆ. ಆದರೆ ರವಿ ಶ್ರೀವತ್ಸ ಅವರಲ್ಲಿ ನಾನು ಕ್ಷಮೆ ಕೇಳುವುದಿಲ್ಲ. ರವಿ ಶ್ರೀವತ್ಸ ಅವರೇ ನನ್ನನ್ನು ಕ್ಷಮೆ ಕೇಳಬೇಕು. ಅವರು ನನ್ನ ತಂಗಿ ಹಾಗೂ ನನ್ನ ತಂದೆ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಹಾಗಾಗಿ ಅವರು ನನ್ನ ಬಳಿ ಕ್ಷಮೆ ಕೇಳಬೇಕು. ನವೆಂಬರ್ 6 ರಂದು ನಾನು ಕಲಾವಿದರ ಸಂಘಕ್ಕೆ ಬಂದು ಕ್ಷಮೆ ಕೇಳುತ್ತೇನೆ.

    ಸಾಲ ಕೇಳಿದ್ರು: ಇಡೀ ಚಿತ್ರರಂಗ ನಿಮ್ಮನ್ನು ಪ್ಲಾಪ್ ನಟಿ ಎಂದು ಕರೆಯುತ್ತದೆ. ಆದರೆ ನನ್ನನ್ನು ಯಾರೂ ಪ್ಲಾಪ್ ನಿರ್ದೇಶಕರೆಂದು ಕರೆಯುವುದಿಲ್ಲ. ಸಂಜನಾ ಎಲ್ಲಾದರೂ ವಿವಾದ ಮಾಡಿಸಿಕೊಂಡರೆ ಆ ವಿವಾದನನ್ನು ನಿಲ್ಲಿಸುವುದ್ದಕ್ಕೆ ಅವರಿಗೆ ಮೊಬೈಲ್ ಫೋನ್ ಗಿಫ್ಟ್ ನೀಡುತ್ತಾರೆ ಎಂದು ರವಿ ಆರೋಪಿಸಿದರು. ಇದಕ್ಕೆ ಸಂಜನಾ, ರವಿ 1 ಲಕ್ಷ ರೂ. ಸಾಲ ಬೇಕೆಂದು ಕೇಳಿದ್ದರು. ಆಗ ನಾನು ನೀವು ನನ್ನ ವೆಬ್ ಸೀರಿಸ್ ಸಿನಿಮಾ ಮಾಡಿದರೆ ಸಂಬಳವಾಗಿ ನಿಮಗೆ 1 ಲಕ್ಷ ನೀಡುತ್ತೇನೆ ಎಂದು ತಿಳಿಸಿದ್ದೆ ಎಂಬುದಾಗಿ ಸಂಜನಾ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    https://www.youtube.com/watch?v=Fngx4OL8iUY

    https://www.youtube.com/watch?v=2YYfQAOr3SM

    https://www.youtube.com/watch?v=EhTC1JWIn1I

    https://www.youtube.com/watch?v=mst7VaRbRP4

    https://www.youtube.com/watch?v=EYjWyRuUtGY

    https://www.youtube.com/watch?v=bI0PW29YLrU

  • ವಿಡಿಯೋ ಮೂಲಕ ಕ್ಷಮೆಯಾಚಿಸಿದ ನಟ ಕಿಚ್ಚ ಸುದೀಪ್

    ವಿಡಿಯೋ ಮೂಲಕ ಕ್ಷಮೆಯಾಚಿಸಿದ ನಟ ಕಿಚ್ಚ ಸುದೀಪ್

    ದಾವಣಗೆರೆ: ಇಂದು ನಟ ಕಿಚ್ಚ ಸುದೀಪ್ ಜಿಲ್ಲೆಗೆ ಆಗಮಿಸಬೇಕಿತ್ತು. ಆದರೆ ಕಾರಣಾಂತರದಿಂದ ಸುದೀಪ್ ಬರಲು ಸಾಧ್ಯವಾಗದೇ ವಿಡಿಯೋ ಮೂಲಕ ಸಂದೇಶ ರವಾನಿಸಿ ಕ್ಷಮೆ ಕೇಳಿದ್ದಾರೆ.

    ಇಂದು ದಾವಣಗೆರೆಯ ಬಿಐಟಿ ಕಾಲೇಜ್ ರೋಡಿನಲ್ಲಿರುವ ಕಿಚ್ಚ ಸುದೀಪ್, ದೊನ್ನೆ ಬಿರಿಯಾನಿ ಹೋಟೆಲ್ ಪ್ರಾರಂಭೋತ್ಸವಕ್ಕೆ ಸುದೀಪ್ ಅವರು ಆಗಮಿಸಬೇಕಿತ್ತು. ನಿರ್ದೇಶಕ ನಂದ ಕಿಶೋರ್ ಒಡೆತನದ ದೊನ್ನೆ ಬಿರಿಯಾನಿ ಹೋಟೆಲ್ ಇದಾಗಿದೆ. ಈ ಹೋಟೆಲ್ ಉದ್ಘಾಟನೆಗೆ ಸುದೀಪ್ ಬರಬೇಕಿತ್ತು. ಆದ್ದರಿಂದ ಇಂದು ಬರಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಪ್ರಾರಂಭೋತ್ಸವವನ್ನು ನಂದ ಕಿಶೋರ್ ಮುಂದಕ್ಕೆ ಹಾಕಿದ್ದಾರೆ.

    ಈ ಬಗ್ಗೆ ಸುದೀಪ್ ಅವರು ವಿಡಿಯೋ ಮೂಲಕ ಸಂದೇಶ್ ರವಾನಿಸಿದ್ದಾರೆ. “ಎಲ್ಲರಿಗೂ ಕಿಚ್ಚನ ನಮಸ್ಕಾರ, ಇಂದು ನಾನು ದಾವಣಗೆರೆಯಲ್ಲಿರುವ ಒಂದು ಹೋಟೆಲ್ ಓಪನಿಂಗ್ ಗೆ ಬರಬೇಕಿತ್ತು. ಕಾರಣಾಂತರದಿಂದ ಬರಲು ಸಾಧ್ಯವಾಗುತ್ತಿಲ್ಲ. ಕ್ಷಮೆ ಇರಲಿ, ಇದನ್ನು ಮುಂದಕ್ಕೆ ಹಾಕಿ ನಾನು ಅಕ್ಟೋಬರ್ 19 ರಂದು ನಾನು ಬರುತ್ತಿದ್ದೇನೆ. ಶಾಸಕ ಎಸ್ ವಿ ರಾಮಚಂದ್ರಪ್ಪ, ಹಾಗೂ ವಾಲ್ಮೀಕಿ ಶ್ರೀ ಸೇರಿದಂತೆ ನನ್ನನ್ನು ಕರೆದಿದ್ದರೋ ಅವರಿಗೆಲ್ಲ ನಂದಕಿಶೋರ್ ಪರ ಕ್ಷಮೆ ಕೇಳುತ್ತಿದ್ದೇನೆ. ಕಾರಣಾಂತರದಿಂದ ನಾನು ಹೈದರಾಬಾದಿನಲ್ಲಿ ಉಳಿದುಕೊಂಡಿದ್ದೇನೆ. 19ಕ್ಕೆ ಖಂಡಿತ ನಾನು ಬರುತ್ತೇನೆ” ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ ಅಭಿನಯ ಚಕ್ರವರ್ತಿ!

    ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ ಅಭಿನಯ ಚಕ್ರವರ್ತಿ!

    ಬೆಂಗಳೂರು: ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘುಲಾಠಿ ಚಾರ್ಚ್ ಮಾಡಿ, ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ಇದರಿಂದಾಗಿ ಯಾರಿಗಾರದೂ ಬೇಸರವಾಗಿದ್ದಲ್ಲಿ ಕ್ಷಮೇ ಇರಲಿ ಎಂದು ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳಲ್ಲಿ ವಿನಂತಿಸಿಕೊಂಡಿದ್ದಾರೆ.

    ಕಿಚ್ಚ ಸುದೀಪ್‍ರವರು ಇಂದು ತಮ್ಮ 45 ನೇ ಹುಟ್ಟುಹಬ್ಬವನ್ನು ಸರಳವಾಗಿ ಅಭಿಮಾನಿಗಳೊಂದಿಗೆ ಆಚರಿಸಿಕೊಂಡಿದ್ದಾರೆ. ಅಲ್ಲದೇ ಶನಿವಾರ ತಡರಾತ್ರಿ ಜೆಪಿ ನಗರದ ನಿವಾಸದ ಬಳಿ ಸಾವಿರಾರು ಅಭಿಮಾನಿಗಳು ಸುದೀಪ್ ಅವರನ್ನು ಕಾಣಲು ಆಗಮಿಸಿದ್ದರು. ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು ಸುಬ್ರಮಣ್ಯಪುರಂ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಅಭಿಮಾನಿಗಳನ್ನ ಚದುರಿಸಿದ್ದರು.

    ಈ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಯಾವುದೇ ಹುಟ್ಟುಹಬ್ಬದ ದಿನಾಚರಣೆಯನ್ನು ಆಚರಿಸಿಕೊಳ್ಳಲು ಇಷ್ಟಪಟ್ಟಿರಲಿಲ್ಲ, ವರ್ಷಕ್ಕೆ ಒಮ್ಮೆಯಾದರೂ ನಮಗೆ ಸಿಗಬೇಕೆಂದು ಅಭಿಮಾನಿಗಳು ಕೇಳಿಕೊಂಡಿದ್ದರು. ನಾನು ಬೆಳೆದಿದ್ದು ಅಭಿಮಾನಿಗಳಿಂದ. ಹೀಗಾಗಿ ಹುಟ್ಟುಹಬ್ಬದ ದಿನವನ್ನು ಅಭಿಮಾನಿಗಳಿಗೆ ಮೀಸಲಿಡಬೇಕೆಂದು ನಿರ್ಧರಿಸಿದ್ದೆ. ಕಳೆದ ಬಾರಿ ಅಭಿಮಾನಿಗಳನ್ನು ಭೇಟಿ ಆಗದೆ ಇರುವುದಕ್ಕೆ ಬೇಸರವಾಗಿದೆ ಎಂದು ತಿಳಿಸಿದರು.

    ಶನಿವಾರ ತಡರಾತ್ರಿ ಬಂದು ಸ್ವಲ್ಪ ಸಮಯ ಅಭಿಮಾನಿಗಳೊಂದಿಗೆ ಮಾತನಾಡಿ ಹಾಗೇ ಮನೆಯೊಳಗೆ ಹೋದೆ. ಆದಾದ ನಂತರ ಏನಾಯಿತು ಎಂಬುದು ಗೊತ್ತಿಲ್ಲ. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದು, ಈ ವೇಳೆ ಒಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂತು. ಆದರೆ ನಾನು ಅಭಿಮಾನಿಗಳನ್ನು ನೋಡಬಾರದೆಂದು ಹಾಗೆ ಮಾಡಿರಲಿಲ್ಲ. ಕಳೆದ 20 ದಿನಗಳ ಬಳಿಕ ಮನೆಗೆ ವಾಪಾಸ್ಸಾಗಿದ್ದರಿಂದ ಮನೆಯವರಿಗೆ ಆದ್ಯತೆ ನೀಡುವ ಸಲುವಾಗಿ ಹಾಗೆ ಮಾಡಿದೆ. ಪೊಲೀಸರು ತಮ್ಮ ಕರ್ತವ್ಯವನ್ನು ನಿರ್ವಹಿಸಿದ್ದಾರೆ. ಇದರಿಂದಾಗಿ ಯಾರಿಗಾದರೂ ಬೇಸರವಾಗಿದ್ದಲ್ಲಿ ನಾನು ಕ್ಷಮೆ ಕೋರುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಕಿಚ್ಚ ಸುದೀಪ್‍ಗೆ 45ನೇ ಹುಟ್ಟಹಬ್ಬದ ಸಂಭ್ರಮ – ನಿವಾಸದಲ್ಲಿ ಅಭಿಮಾನದ ಸಾಗರ

    ಕೇಕ್ ಹಾಗೂ ಹಾರಕ್ಕೆ ಖರ್ಚು ಮಾಡೋದು ಇಷ್ಟವಿಲ್ಲವೆಂದು ನಾನು ಅಭಿಮಾನಿಗಳಲ್ಲಿ ಮನವಿಮಾಡಿಕೊಂಡಿದ್ದೆ. ನನ್ನ ಮನವಿಗೆ ಅಭಿಮಾನಿಗಳು ಕೂಡ ಸ್ಪಂದಿಸಿದ್ದಾರೆ. ದಿನಪೂರ್ತಿ ಅಭಿಮಾನಿಗಳೊಂದಿಗೆ ಕಾಲ ಕಳೆಯುತ್ತೇನೆ. ಅಭಿಮಾನಿಗಳು ನನ್ನ ಮನವಿಯನ್ನು ಸ್ವೀಕರಿಸಿದ್ದಕ್ಕೆ ತುಂಬಾ ಖುಷಿಯಾಗಿದೆ ಎಂದು ತಮ್ಮ ಹರ್ಷ ವ್ಯಕ್ತಪಡಿಸಿದರು.

    ಈ ಬಾರಿ ಹುಟ್ಟುಹಬ್ಬಕ್ಕೆ ವಿಶೇಷವಾಗಿ ಪೈಲ್ವಾನ್, ಅಂಬಿ ನಿಂಗ್ ವಯಸ್ಸಾಯ್ತೋ, ಕೋಟಿಗೊಬ್ಬ 3 ಹಾಗೂ ಸೈರಾ ಚಿತ್ರದಲ್ಲಿನ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಅಭಿಮಾನಿಗಳು ಸಾಕಷ್ಟು ಇಷ್ಟಪಟ್ಟಿದ್ದಾರೆ. ಅಭಿಮಾನಿಗಳ ಸಂತೋಷವೇ ನಮ್ಮ ಸಂತೋಷ. ನನ್ನನ್ನು ಅವರು ಸ್ವೀಕರಿಸಿದ್ದಾರೆ. ನನ್ನ ಹುಟ್ಟು ಹಬ್ಬದಂದೇ ಟೀಸರ್ ಗಳನ್ನು ಬಿಡುಗಡೆಗೊಳಿಸಲು ನಿರ್ಮಾಪಕರು ಸಾಕಷ್ಟು ಕಷ್ಟ ಪಟ್ಟಿದ್ದಾರೆ. ಅವರಿಗೆಲ್ಲ ನನ್ನ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.

    ಕಳೆದ 20 ವರ್ಷದ ಹುಟ್ಟುಹಬ್ಬಕ್ಕೂ ಇಂದಿನ ಹುಟ್ಟುಹಬ್ಬಕ್ಕೂ ತುಂಬಾ ವ್ಯತ್ಯಾಸ ಇದೆ. ಅಭಿಮಾನಿಗಳು ಹೆಚ್ಚಾಗಿದ್ದಾರೆ. ಪ್ರೀತ್ಸೋರು, ಆರಾಧಿಸುವವರ ಸಂಖ್ಯೆ ಹೆಚ್ಚಾಗಿದೆ. ನಮ್ಮ ಒಲವು ಅಭಿಮಾನಿಗಳನ್ನ ಹೆಚ್ಚಿಗೆ ಮಾಡಿಕೊಳ್ಳಬೇಕು. ಅದ್ಧೂರಿ ಅಚರಣೆ ಮಾಡಿಕೊಳ್ಳುವ ಕಡೆ ಇರಬಾರದು. ಸಿನಿಮಾಗೋಸ್ಕರ ಮನಸ್ಸು ಹಾತೊರೆಯುವಾಗ ಒಳ್ಳೊಳ್ಳೆ ಸಿನಿಮಾ ಕೊಡಬೇಕು ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸದನದಲ್ಲಿ ಕಾಂಗ್ರೆಸ್ ಸಂಸದರ ಕ್ಷಮೆ ಕೋರಿದ ನಿತಿನ್ ಗಡ್ಕರಿ

    ಸದನದಲ್ಲಿ ಕಾಂಗ್ರೆಸ್ ಸಂಸದರ ಕ್ಷಮೆ ಕೋರಿದ ನಿತಿನ್ ಗಡ್ಕರಿ

    ನವದೆಹಲಿ: ಕೇಂದ್ರ ಸಚಿವ ಸಚಿವ ನಿತಿನ್ ಗಡ್ಕರಿ ಲೋಕಸಭಾ ಸದನದ ವೇಳೆ ಕಾಂಗ್ರೆಸ್ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಅವರಲ್ಲಿ ಕ್ಷಮೆ ಕೇಳಿದ್ದಾರೆ.

    ಮಧ್ಯಪ್ರದೇಶದ ಗುನಾ ಕ್ಷೇತ್ರದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಮುದ್ರಣ ಮಾಡಿಲ್ಲ ಹಾಗೂ ಕಾರ್ಯಕ್ರಮಕ್ಕೆ ತಮಗೇ ಆಹ್ವಾನ ನೀಡಿಲ್ಲ. ಯಾವುದೇ ಯೋಜನೆಯ ಉದ್ಘಾಟನೆಗೆ ಆ ಕ್ಷೇತ್ರದ ಜನಪ್ರತಿನಿಧಿಯನ್ನು ಆಹ್ವಾನಿಸುವುದು ಶಿಷ್ಟಾಚಾರ. ಆದರೆ ರಾಜ್ಯ ಸರ್ಕಾರ ತಮಗೇ ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘಿಸಿದೆ. ಅದ್ದರಿಂದ ಹಕ್ಕುಚ್ಯುತಿ ಮಂಡನೆ ಮಾಡುವುದಾಗಿ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಸದನದಲ್ಲಿ ಹೇಳಿದರು.

    ಸಿಂಧಿಯಾ ಆರೋಪದ ಬಳಿಕ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಹಾಗೂ ಜಲ ಸಂಪ್ಮೂಲ ಸಚಿವ ನಿತಿನ್ ಗಡ್ಕರಿ ಮಾತನಾಡಿ, ಈ ತಪ್ಪಿನ ಕುರಿತು ನನಗೆ ಅರಿವಾಗಿದೆ. ಮುಂದೇ ಇಂತಹ ತಪ್ಪುಗಳು ನಡೆಯದಂತೆ ಎಚ್ಚರವಹಿಸಲಾಗುವುದು. ಕಾರ್ಯಕ್ರಮದಲ್ಲಿ ನಾನು ಭಾಗವಹಿಸಿದ್ದೆ. ಅದ್ದರಿಂದ ತಾನು ಈ ತಪ್ಪಿನ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ. ಸಂಸದರ ಹೆಸರು ಕಡ್ಡಾಯವಾಗಿ ಆಹ್ವಾನ ಪತ್ರಿಕೆಯಲ್ಲಿ ಮುದ್ರಣವಾಗಬೇಕಿತ್ತು. ಅಲ್ಲದೇ ಅವರಿಗೆ ಆಹ್ವಾನ ನೀಡಬೇಕಿತ್ತು. ಅದ್ದರಿಂದ ಸದನದಲ್ಲಿ ನಾನು ಕ್ಷಮೆ ಕೇಳುವುದಾಗಿ ಹೇಳಿದರು.

    ಗಡ್ಕರಿ ಅವರ ಮಾತಿಗೆ ಸಮಾಧಾನಗೊಳ್ಳದ ಸಿಂಧಿಯಾ, ಘಟನೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಸ್ಪೀಕರ್ ಸುಮಿತ್ರಾ ಮಹಾಜನ್ ಗಡ್ಕರಿ ಅವರು ಈಗಾಗಲೇ ಸಭೆಯಲ್ಲಿ ಕ್ಷಮೆ ಕೇಳಿದ್ದರೆ ಎಂದರು. ಲೋಕಸಭಾ ಸದನ ವಿರೋಧಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ ಸಂಸದರನ್ನು ಈ ರೀತಿ ನಡೆಸಿಕೊಳ್ಳುವುದು ಸೂಕ್ತವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಈ ವೇಳೆ ಮಧ್ಯಪ್ರವೇಶ ಮಾಡಿದ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್, ಈ ವಿಷಯದಲ್ಲಿ ರಾಜಕೀಯ ಮಾಡುವುದು ಬೇಡ. ಸದನದಲ್ಲಿ ಈಗಾಗಲೇ ಹಿರಿಯ ಸಚಿವರು ಕ್ಷಮೆ ಕೇಳಿದ್ದಾರೆ. ಯುಪಿಎ ಅವಧಿಯಲ್ಲೂ ಬಿಜೆಪಿ ಸಂಸದರಿಗೆ ಆಹ್ವಾನ ನೀಡದೆ ಹಲವು ಕಾರ್ಯಕ್ರಮ ನಡೆಸಲಾಗಿದೆ ಎಂದು ಹೇಳಿ ಈ ಚರ್ಚೆಗೆ ಪೂರ್ಣವಿರಾಮ ಹಾಕಿದರು.

  • ಲೈವ್ ಟೆಲಿಕಾಸ್ಟ್ ಮಾಡ್ತಿರುವಾಗ್ಲೇ ರಿಪೋರ್ಟರ್ ಗೆ ಕಿಸ್!- ವಿಡಿಯೋ ವೈರಲ್

    ಲೈವ್ ಟೆಲಿಕಾಸ್ಟ್ ಮಾಡ್ತಿರುವಾಗ್ಲೇ ರಿಪೋರ್ಟರ್ ಗೆ ಕಿಸ್!- ವಿಡಿಯೋ ವೈರಲ್

    ಮಾಸ್ಕೋ: ಲೈವ್ ಟೆಲಿಕಾಸ್ಟ್ ಮಾಡುವಾಗಲೇ ಮಹಿಳಾ ರಿಪೋರ್ಟರ್ ಗೆ ವ್ಯಕ್ತಿಯೊಬ್ಬ ಕಿಸ್ ಕೊಡಲು ಮುಂದಾಗಿದ್ದ ಘಟನೆ ರಷ್ಯಾದಲ್ಲಿ ನಡೆದಿದೆ.

    ಕಿಸ್ ಕೊಡಲು ಮುಂದಾಗಿದ್ದ ವ್ಯಕ್ತಿಯನ್ನು ರಷ್ಯಾ ಫುಟ್‍ ಬಾಲ್ ಅಭಿಮಾನಿ ಎಂದು ಗುರುತಿಸಲಾಗಿದೆ. ಆತ ಕೊಲಂಬಿಯಾದ ಪತ್ರಕರ್ತೆಗೆ ಮುತ್ತು ಕೊಡಲು ಮುಂದಾಗಿದ್ದನು. ಕೆಲವು ದಿನಗಳ ನಂತರ ಆತ ತನ್ನ ವರ್ತನೆಯ ಬಗ್ಗೆ ಅರಿತುಕೊಂಡು ಪತ್ರಕರ್ತೆ ಬಳಿ ಕ್ಷಮೆಯಾಚಿಸಿದ್ದಾನೆ.

    ನಡೆದಿದ್ದೇನು?:
    ಭಾನುವಾರ ಬ್ರೆಜಿಲಿಯನ್ ಪತ್ರಕರ್ತೆ ಜುಲಿಯಾ ಗಿಮಾರಾಸ್ ಅವರು ಮತ್ತೊಬ್ಬ ಮಹಿಳಾ ವರದಿಗಾರರೊಂದಿಗೆ ರಷ್ಯಾದ ಯೆಕಟೇನ್ಬರ್ಗ್ ಅರೆನಾದ ಹೊರಗೆ ನೇರ ಪ್ರಸಾರ ಮಾಡುತ್ತಿದ್ದರು.

    ಈ ವೇಳೆ ಒಬ್ಬ ವ್ಯಕ್ತಿ ಬಂದು ಜುಲಿಯಾ ಅವರಿಗೆ ಕಿಸ್ ಮಾಡಲು ಪ್ರಯತ್ನಿಸಿದ್ದಾನೆ. ಆಗ ಜುಲಿಯಾ ಆತನನ್ನು ತಳ್ಳಿ ಬೈಯುತ್ತಾರೆ. “ಇದನ್ನು ಮಾಡಬೇಡಿ!. ಇದಕ್ಕೆ ನಾನು ಅನುಮತಿಸುವುದಿಲ್ಲ, ಎಂದಿಗೂ ಇಂತಹ ಘಟನೆ ಸರಿ ಇಲ್ಲ. ನನಗೆ ಈ ರೀತಿಯ ವರ್ತನೆ ಇಷ್ಟ ಆಗಲ್ಲ” ಎಂದು ಹೇಳಿದ್ದಾರೆ. ಈ ವೇಳೆ ಆತ ತಕ್ಷಣ ಕ್ಷಮಿಸಿ ಎಂದು ರಿಪೋರ್ಟರ್ ಬಳಿ ಕ್ಷಮೆಯಾಚಿಸಿದ್ದಾನೆ.

    ಇದೊಂದು ಅವಮಾನಕರವಾದ ಘಟನೆ. ಅದೃಷ್ಟವಶಾತ್ ಇದು ಬ್ರೆಜಿಲ್ ನಲ್ಲಿ ಎಂದಿಗೂ ನಡೆದಿರಲಿಲ್ಲ. ರಷ್ಯಾದಲ್ಲಿ ಈ ತರಹದ ಘಟನೆ ಎರಡು ಬಾರಿ ಸಂಭವಿಸಿದೆ. ಇದು ಅವಮಾನಕರ ಎಂದು ರಿಪೋರ್ಟರ್ ಜುಲಿಯಾ ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಹಿಂದೆ ಕೊಲಂಬಿಯಾದ ಪತ್ರಕರ್ತೆ ಜೂಲಿಯೆತ್ ಗೊನ್ಜಾಲೆಜ್ ಥೇರನ್ ಅವರು ನೇರ ಪ್ರಸಾರ ಮಾಡುತ್ತಿದ್ದಾಗ ಫುಟ್ಬಾಲ್ ಅಭಿಮಾನಿಯೋರ್ವ ಕಿಸ್ ಮಾಡಿದ್ದನು. ಅಂದು ಆ ಘಟನೆಯನ್ನು ಅನೇಕ ಜನರು ಲೈಂಗಿಕ ಕಿರುಕುಳ ಎಂದು ಆಪಾದನೆ ಮಾಡಿದ್ದರು.

  • ಅಭಿಮಾನಿಗಳಲ್ಲಿ ಕ್ಷಮೆ ಕೋರಿದ ಶಾರುಖ್ ಖಾನ್

    ಅಭಿಮಾನಿಗಳಲ್ಲಿ ಕ್ಷಮೆ ಕೋರಿದ ಶಾರುಖ್ ಖಾನ್

    ಕೋಲ್ಕತ್ತಾ: ಬಾಲಿವುಡ್ ಸೂಪರ್ ಸ್ಟಾರ್ ಹಾಗೂ ಕೆಕೆಆರ್ ತಂಡದ ಮಾಲೀಕರಾಗಿರುವ ಶಾರುಖ್ ಖಾನ್ ಕೆಕೆಆರ್ ತಂಡದ ಅಭಿಮಾನಿಗಳಲ್ಲಿ ಕ್ಷಮೆ ಕೋರಿದ್ದಾರೆ.

    ಕೋಲ್ಕತ್ತಾ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಮುಂಬೈ ವಿರುದ್ಧ ಪಂದ್ಯದಲ್ಲಿ ಕೆಕೆಆರ್ ತಂಡ 102 ರನ್ ಗಳ ಭಾರೀ ಅಂತರದಲ್ಲಿ ಸೋಲುಂಡಿತ್ತು. ಈ ಕುರಿತು ಟ್ವೀಟ್ ಮಾಡಿರುವ ಶಾರುಖ್, ಕ್ರೀಡೆ ಎಂಬುವುದು ಸ್ಫೂರ್ತಿಯಾಗಿದ್ದು, ಇಲ್ಲಿ ಸೋಲು ಅಥವಾ ಗೆಲುವು ಸಾಮಾನ್ಯ. ಆದರೆ ತಂಡದಲ್ಲಿ ಇಂದು ಗೆಲುವಿನ ಸ್ಫೂರ್ತಿ ಕ್ಷೀಣಿಸಿದ್ದರಿಂದ ಮಾಲೀಕನಾಗಿ ತಾನು ಅಭಿಮಾನಿಗಳಲ್ಲಿ ಕ್ಷಮೆ ಕೇಳಬೇಕಿದೆ ಎಂದು ಬರೆದುಕೊಂಡಿದ್ದಾರೆ.

    ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಮುಂಬೈ ನಾಲ್ಕನೇ ಸ್ಥಾನಕ್ಕೆ ಏರಿದೆ. ಕೊಲ್ಕತ್ತಾ ವಿರುದ್ಧ ಪಂದ್ಯದಲ್ಲಿ ಗೆಲುವು ಪಡೆಯುವ ಮೂಲಕ ಮುಂಬೈ ಉತ್ತಮ ರನ್ ರೆಟ್ ನೊಂದಿಗೆ ಅಂಕಪಟ್ಟಿಯಲ್ಲಿ 10 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಪಡೆದಿದೆ.

    ಕೋಲ್ಕತ್ತಾ ತಂಡ ಕಳೆದ ಮೂರು ದಿನಗಳಲ್ಲಿ ಮುಂಬೈ ವಿರುದ್ಧ ಮುಖಾಮುಖಿ ಆದ ಎರಡು ಪಂದ್ಯಗಳಲ್ಲೂ ಸೋಲುಂಡಿದೆ. ಅಲ್ಲದೇ ಇದುವರೆಗೂ ಐಪಿಎಲ್ ನಲ್ಲಿ ಆಡಿರುವ 23 ಪಂದ್ಯಗಳಲ್ಲಿ 18 ರಲ್ಲಿ ಪಂದ್ಯದಲ್ಲಿ ಸೋತಿದೆ. ಇದರಲ್ಲಿ 8 ಪಂದ್ಯಗಳನ್ನು ಸತತವಾಗಿ ಸೋತಿರುವುದು ವಿಶೇಷವಾಗಿದೆ.

    ಮುಂಬೈ ಪರ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಯುವ ಆಟಗಾರ ಈಶಾನ್ ಕಿಶಾನ್ ಕೇವಲ 21 ಎಸೆತಗಳಲ್ಲಿ 62 ರನ್(7 ಬೌಂಡರಿ, 6 ಸಿಕ್ಸರ್) ಸಿಡಿಸಿ ಮಿಂಚಿದ್ದರು. ಪಂದ್ಯದ ಬಳಿಕ ಮಾತನಾಡಿದ ಈಶಾನ್, ಯುವ ಆಟಗಾರರಿಗೆ ಟಾಪ್ ಆರ್ಡರ್ ನಲ್ಲಿ ಬ್ಯಾಟಿಂಗ್ ನಡೆಸಲು ಅವಕಾಶ ನೀಡಿದರೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗುತ್ತದೆ. ತಂಡದ ನಾಯಕ ಹಾಗೂ ಮಾಲೀಕರ ಪ್ರೋತ್ಸಾಹ ಉತ್ತಮವಾಗಿದ್ದು, ತಾನು ಯಾವುದೇ ಆರ್ಡರ್ ನಲ್ಲಿ ಆಡಲು ಸಿದ್ಧವಿರುವುದಾಗಿ ತಿಳಿಸಿದ್ದಾರೆ.

  • ಕನ್ನಡದ ಕಂದ ಸಿದ್ದರಾಮಯ್ಯ ಮರಾಠಿ ಜಪ – ಬೆಳಗಾವಿಯಲ್ಲಿ ಭಾಷೆ ಬರಲ್ಲ ಎಂದು ಕ್ಷಮೆಯಾಚನೆ

    ಕನ್ನಡದ ಕಂದ ಸಿದ್ದರಾಮಯ್ಯ ಮರಾಠಿ ಜಪ – ಬೆಳಗಾವಿಯಲ್ಲಿ ಭಾಷೆ ಬರಲ್ಲ ಎಂದು ಕ್ಷಮೆಯಾಚನೆ

    ಬೆಳಗಾವಿ: ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರು ತನಗೆ ಮರಾಠಿ ಮಾತನಾಡಲು ಬರಲ್ಲ ಅದ್ದರಿಂದ ಕ್ಷಮಿಸಿ ಎಂದು ಹೇಳಿದ್ದಾರೆ.

    ಬೆಳಗಾವಿಯ ಚಿಕ್ಕೋಡಿ ಹಾಗೂ ನಿಪ್ಪಾಣಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ್ದರು, ಈ ವೇಳೆ ಕಾರ್ಯಕ್ರಮಕ್ಕೆ 3 ಗಂಟೆ ತಡವಾಗಿ ಬಂದ ಅವರು ವೇದಿಕೆಗೆ ಆಗಮಿಸಿ ಕ್ಷಮೆ ಕೋರಿದರು. ಆದರೆ ಮಹಾರಾಷ್ಟ್ರ ಗಡಿ ಪ್ರದೇಶವಾದ ಕಾರಣ ಅವರು ಮತ್ತೆ ತನಗೆ ಮರಾಠಿ ಭಾಷೆ ಬರಲ್ಲ ಎಂದು ಕ್ಷಮೆ ಕೇಳಿದರು.

    ಈ ಹಿಂದೆ ಬಿಜೆಪಿ ಕೇಂದ್ರ ನಾಯಕರ ವಿರುದ್ಧ ಕನ್ನಡ ಭಾಷೆಯ ಅಸ್ತ್ರ ಪ್ರಯೋಗಿಸಿ ತನಗೆ ಹಿಂದಿ ಭಾಷೆ ಬರಲ್ಲ ಎಂದು ಕಾಳೆಲೆದಿದ್ದರು. ಆದರೆ ಇಂದು ನಿಪ್ಪಾಣಿ ಕ್ಷೇತ್ರದಲ್ಲಿ ಮರಾಠಿ ಭಾಷಿಕರ ಮನವೊಲಿಸಲು ಕ್ಷಮೆ ಕೇಳಿದ್ದಾರೆ.

    ಬಳಿಕ ಸಮಾವೇಶದಲ್ಲಿ ಮಾತನಾಡಿದ ಅವರು ವಿರೋಧಿ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ರೈತರ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ, ಜೆಡಿಎಸ್ ಅವರಪ್ಪನ ಆಣೆ ಅಧಿಕಾರಕ್ಕೆ ಬರುವುದಿಲ್ಲ ಎಂದರು. ಇದೇ ವೇಳೆ ತಾವು ಅಧಿಕಾರಕ್ಕೆ ಬಂದರೆ ಕುರಿಗಾಹಿಗಳ ಎಲ್ಲ ಸಾಲ ಮನ್ನಾ ಮಾಡಲು ತೀರ್ಮಾನಿಸಿದ್ದೇವೆ ಎಂದು ಘೋಷಿಸಿದರು.

    https://www.youtube.com/watch?v=mOOgdKVxZZg

  • ಪತ್ರಕರ್ತೆಯ ಕೆನ್ನೆ ಸವರಿ ಕ್ಷಮೆ ಕೇಳಿದ ತಮಿಳುನಾಡು ರಾಜ್ಯಪಾಲ

    ಪತ್ರಕರ್ತೆಯ ಕೆನ್ನೆ ಸವರಿ ಕ್ಷಮೆ ಕೇಳಿದ ತಮಿಳುನಾಡು ರಾಜ್ಯಪಾಲ

    ಚೆನ್ನೈ: ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಪತ್ರಕರ್ತೆಯ ಕೆನ್ನೆ ಸವರಿ ವಿವಾದಕ್ಕೆ ಒಳಗಾಗಿದ್ದ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಘಟನೆಯ ಕುರಿತು ಕ್ಷಮೆ ಕೇಳಿದ್ದಾರೆ.

    ಈ ಕುರಿತು ಸ್ಪಷ್ಟೀಕರಣ ನೀಡಿರುವ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ (78), ಸಂವಾದ ಕಾರ್ಯಕ್ರಮದಲ್ಲಿ ಪತ್ರಕರ್ತೆ ಉತ್ತಮ ಪ್ರಶ್ನೆಗಳನ್ನು ಮುಂದಿಟ್ಟಿದ್ದರು. ಈ ವೇಳೆ ಅವರನ್ನು ಪ್ರಶಂಸಿಸುವ ಮನೋಭಾವದಿಂದ ಅಭಿನಂದನೆ ಸಲ್ಲಿಸಿದ್ದೇನೆ. ಆಕೆ ನನ್ನ ಮೊಮ್ಮಗಳ ಸಮಾನ ಎಂದು ತಿಳಿಸಿದ್ದಾರೆ.

    ಈ ಹಿಂದೆ 40 ವರ್ಷಗಳ ಕಾಲ ನಾನು ಸಹ ಪತ್ರಕರ್ತನಾಗಿ ಸೇವೆ ಸಲ್ಲಿಸಿದ್ದೇನೆ. ಪತ್ರಕರ್ತರ ಕಾರ್ಯಶೈಲಿ ಉತ್ತಮವಾಗಿತ್ತು. ಅದ್ದರಿಂದ ಅವರಿಗೆ ತಮ್ಮ ಅಭಿನಂದನೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

    ತಮಿಳುನಾಡಿನ ಖಾಸಗಿ ಮಾಧ್ಯಮದ ಪತ್ರಕರ್ತೆಯಾಗಿರುವ ಲಕ್ಷ್ಮಿ ಸುಬ್ರಮಣ್ಯಂ ಅವರು ರಾಜ್ಯಪಾಲರ ಕ್ಷಮಾಪಣೆಯನ್ನು ಸ್ವೀಕರಿಸುವುದಾಗಿ ತಿಳಿಸಿದ್ದಾರೆ. ಆದರೆ ಅಭಿನಂದನೆ ಸಲ್ಲಿಸಲು ಈ ರೀತಿ ನಡೆದುಕೊಂಡಿರುವ ಕುರಿತು ತಮಗೇ ಪೂರ್ಣ ಪ್ರಮಾಣದಲ್ಲಿ ಮನವರಿಕೆಯಾಗಿಲ್ಲ ಎಂದು ಹೇಳಿದ್ದಾರೆ.

    ಚೆನ್ನೈನ ರಾಜಭವನದಲ್ಲಿ ಮಂಗಳವಾರ ಸಂಜೆ ಸಂವಾದ ಕಾರ್ಯಕ್ರಮ ನಡೆದಿತ್ತು. ಸಂವಾದ ಮುಗಿದ ನಂತರ ಪತ್ರಕರ್ತೆ ಲಕ್ಷ್ಮಿ ಸುಬ್ರಮಣ್ಯಂ ಅವರು ಕೇಳಿದ ಪ್ರಶ್ನೆಗೆ ರಾಜ್ಯಪಾಲ ಬನ್ವಾರಿಯಾ ಲಾಲ್ ಉತ್ತರ ನೀಡದೇ ಅವರ ಕೆನ್ನೆ ಸವರಿದ್ದರು. ಘಟನೆ ಸಂಬಂಧ ಅಸಮಾಧಾನ ವ್ಯಕ್ತಪಡಿಸಿದ್ದ ಲಕ್ಷ್ಮಿ ಅವರು, ಈ ಕುರಿತ ಫೋಟೋವನ್ನು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಫೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು.

    ತಮ್ಮ ಟ್ವೀಟ್ ನಲ್ಲಿ ಘಟನೆ ಬಗ್ಗೆ ವಿವರಿಸಿರುವ ಅವರು, ಸಂವಾದ ಮುಗಿದ ಬಳಿಕ ಅವರು ಹೋಗುತ್ತಿದ್ದ ಸಮಯದಲ್ಲಿ ನಾನು ರಾಜ್ಯಪಾಲರನ್ನು ಒಂದು ಪ್ರಶ್ನೆ ಕೇಳಿದೆ. ಅದಕ್ಕೆ ಅವರು ಉತ್ತರಿಸದೆ ನನ್ನ ಅನುಮತಿ ಇಲ್ಲದೆ ಕೆನ್ನೆ ಮುಟ್ಟಿದರು. ಯಾವುದೇ ವ್ಯಕ್ತಿ ಅನುಮತಿ ಇಲ್ಲದೆ ಅವರನ್ನು ಸ್ಪರ್ಶಿಸುವುದು ಸರಿಯಲ್ಲ. ಅದರಲ್ಲೂ ಒಬ್ಬ ಮಹಿಳೆಯ ಬಳಿ ಸಾರ್ವಜನಿಕವಾಗಿ ಈ ರೀತಿ ನಡೆದುಕೊಂಡಿದ್ದು ಸರಿ ಅಲ್ಲ ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು.

    ರಾಜ್ಯಪಾಲರ ಈ ನಡೆಗೆ ದೇಶಾದ್ಯಂತ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ ತಮಿಳುನಾಡಿನ ಹಲವು ರಾಜಕೀಯ ನಾಯಕರು ಸಹ ಈ ಕುರಿತು ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತ ಪಡಿಸಿದ್ದರು.

  • ಫಿಲ್ಮ್ ಚೇಂಬರ್ ಗೆ  ತೆರಳಿ ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ಆರ್‌ಜೆ ರಶ್ಮಿ

    ಫಿಲ್ಮ್ ಚೇಂಬರ್ ಗೆ  ತೆರಳಿ ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ಆರ್‌ಜೆ ರಶ್ಮಿ

    ಬೆಂಗಳೂರು: ರಾಜರಥ ತಂಡ ಸಂದರ್ಶನದ ವೇಳೆ ಮಾತನಾಡಿದ ಪದಗಳಿಂದ ಕನ್ನಡಿಗರಿಗೆ ಆಗಿರುವ ನೋವಿಗೆ ಆರ್‌ಜೆ ರಶ್ಮಿ ಕನ್ನಡಿಗರ ಕ್ಷಮೆ ಕೇಳಿದ್ದಾರೆ.

    ಚಿತ್ರ ತಂಡ ಬಳಸಿದ ಪದಗಳು ಸಾಕಷ್ಟು ವಿವಾದಗಳನ್ನು ಸೃಷ್ಟಿ ಮಾಡಿದೆ. ಪ್ರತಿ ದಿನ ಒಂದೊಂದು ತಿರುವು ಪಡೆದುಕೊಂಡು ಕನ್ನಡಿಗರಿಗೆ ಬೇಸರ ಉಂಟು ಮಾಡಿದೆ. ಹಾಗಾಗಿ ಇವತ್ತು ನಾನೆ ಖುದ್ದು ಸಾರಾ ಗೋವಿಂದ್ ಅವರನ್ನು ಹುಡುಕಿ ಕೊಂಡು ಚಲನ ಚಿತ್ರ ವಾಣಿಜ್ಯ ಮಂಡಳಿಗೆ ಬಂದಿದ್ದೇನೆ. ಭೇಟಿಗೆ ಅವಕಾಶ ಮಾಡಿಕೊಟ್ಟ ಸಾರಾ ಗೋವಿಂದ್ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

    ನಮ್ಮ ಕಾಯಕ್ರಮದಿಂದ ಕನ್ನಡಿಗರಿಗೆ ನೋವಾಗಿದೆ ನಮ್ಮ ಕಡೆಯಿಂದ ಕ್ಷಮೆ ಇರಲಿ. ಮುಂದಿನ ದಿನಗಳಲ್ಲಿ ನಮ್ಮ ಕಾರ್ಯಕ್ರಮದಲ್ಲಿ ಈ ರೀತಿ ಘಟನೆಗಳಿಗೆ ಅವಕಾಶ ಮಾಡಿಕೊಡವುದಿಲ್ಲ ಎಂದು ಭರವಸೆ ನೀಡಿದ್ದಾರೆ.

    ನನ್ನ ಪ್ರಶ್ನೆಗೆ ಆ ರೀತಿ ಉತ್ತರ ಕೊಟ್ಟರು ಯಾಕೆ ಪ್ರತಿಕ್ರಿಯಿಸಿಲ್ಲ ಅಂತ ನನ್ನನ್ನು ಜನ ಪ್ರಶ್ನೆ ಮಾಡುತ್ತಿದ್ದಾರೆ. ಆ ಕ್ಷಣದಲ್ಲಿ ಹೊಳೆದಿಲ್ಲ ಕ್ಷಮಿಸಿ ಮುಂದಿನ ದಿನಗಳಲ್ಲಿ ಹೀಗಾಗದಂತೆ ನೋಡಿಕೊಳ್ಳುತ್ತೇನೆ. ಹೀಗಾದಲ್ಲಿ ತಕ್ಷಣವೇ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು.

    ಕನ್ನಡಿಗರ ಮನಸ್ಸಿಗೆ ನೊವಾಗುವಂತಹ ವಿಚಾರ ಬಂದಾಗ ಎಚ್ಚರದಿಂದ ಇರುತ್ತೇನೆ. ಇಷ್ಟು ವರ್ಷಗಳ ಕಾಲ ಆರ್‍ಜೆ ಆಗಿದ್ದೇನೆ. ಕನ್ನಡ ಚಿತ್ರಗಳಿಗೆ ಪ್ರೋತ್ಸಾಹ ಕೊಡುವಂತಹ ಕಾರ್ಯಕ್ರಮಗಳನ್ನು ಹುಟ್ಟು ಹಾಕಿದ್ದೇನೆ. ಕಳೆದ ಒಂದು ವರ್ಷದಲ್ಲಿ ನಮ್ಮ ಕಾರ್ಯಕ್ರಮಕ್ಕೆ ನಹಳಷ್ಟು ಚಿತ್ರ ತಂಡದವರು ಬಂದಿದ್ದಾರೆ. ಇನ್ನಮುಂದೆ ಕೂಡ ನಿಮ್ಮ ಸಹಕಾರ ಹೀಗೆ ಇರಲಿ. ನಮ್ಮ ಕಾರ್ಯಕ್ರಮದ ಉದ್ದೇಶ ಚಿತ್ರದ ಪ್ರಚಾರಕ್ಕಷ್ಟೇ ಸೀಮಿತ ವಾಗಿರುತ್ತದೆ ಎಂದು ಮತ್ತೊಮ್ಮೆ ಹೇಳಿ ಕನ್ನಡಿಗರಲ್ಲಿ ರಶ್ಮಿ ಅವರು ಕ್ಷಮಾಪಣೆ ಕೇಳಿದ್ದಾರೆ. ಇದನ್ನೂ ಓದಿ: ರಾಜರಥ ಸಿನಿಮಾ ತಂಡದ ವಿರುದ್ಧ ಮತ್ತೊಂದು ದೂರು ದಾಖಲು

    ಸಾರಾ ಗೋವಿಂದ್ ಮಾತನಾಡಿ ಒಂದು ಹೆಣ್ಣು ಮಗಳು ಖುದ್ದು ಬಂದು ಮೊದಲ ಬಾರಿ ಆಗಿರುವ ತಪ್ಪಿಗೆ ಕ್ಷಮಾಪಣೆ ಕೇಳುತ್ತಿದ್ದಾರೆ. ಕನ್ನಡಿಗರು ಔದಾರ್ಯದಿಂದ ಕ್ಷಮಿಸಬೇಕೆಂದು ತಿಳಿಸಿದರು. ಇದನ್ನೂ ಓದಿ: ದಯವಿಟ್ಟು ಕ್ಷಮಿಸಿ, ಇನ್ನು ಮುಂದೆ ಹೀಗೆ ಆಗಲ್ಲ: ಅನೂಪ್ ಭಂಡಾರಿ