Tag: ಕ್ಷಮೆ

  • ಆಸ್ಟ್ರೇಲಿಯಾ ಪರ ಮತ್ತೆ ಕ್ರಿಕೆಟ್ ಆಡಲ್ಲ: ಕ್ಷಮೆಯಾಚಿಸಿ ಕಣ್ಣೀರಿಟ್ಟ ವಾರ್ನರ್

    ಆಸ್ಟ್ರೇಲಿಯಾ ಪರ ಮತ್ತೆ ಕ್ರಿಕೆಟ್ ಆಡಲ್ಲ: ಕ್ಷಮೆಯಾಚಿಸಿ ಕಣ್ಣೀರಿಟ್ಟ ವಾರ್ನರ್

    ಸಿಡ್ನಿ: ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿ ಒಂದು ವರ್ಷ ನಿಷೇಧಕ್ಕೆ ಒಳಗಾಗಿದ್ದ ಆಸೀಸ್ ಉಪನಾಯಕ ಡೇವಿಡ್ ವಾರ್ನರ್ ಕ್ಷಮೆಯಾಚಿಸಿದ್ದಾರೆ.

    ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ವಾರ್ನರ್ ಅವರ ಮೇಲೆ ಒಂದು ವರ್ಷ ನಿಷೇಧ ವಿಧಿಸಿದ ಬಳಿಕ ಮೊದಲ ಬಾರಿಗೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ವಾರ್ನರ್, ತಮ್ಮ ಕೃತ್ಯಕ್ಕೆ ಕ್ಷಮೆ ಕೋರಿದರು. ಅಲ್ಲದೇ ಮತ್ತೆ ಆಸ್ಟ್ರೇಲಿಯಾ ಪರ ಆಡುವುದಿಲ್ಲ ಎಂದು ಹೇಳಿದರು.

    ಈ ವೇಳೆ ಕಣ್ಣೀರಿಟ್ಟ ಅವರು ಮತ್ತೆ ನಾನು ಆಸೀಸ್ ಪರ ಕ್ರಿಕೆಟ್ ಆಡಲು ಸಾಧ್ಯವಿಲ್ಲ. ಮುಂಬರುವ ದಿನಗಳಲ್ಲಿ ನನ್ನ ವೃತ್ತಿ ಜೀವನದಲ್ಲಿ ಈ ಘಟನೆ ಹೇಗೆ ನಡೆಯಿತು ಎಂಬುದನ್ನು ಅರಿತುಕೊಳ್ಳುತ್ತೇನೆ ಎಂದು ಹೇಳಿ ಆಸ್ಟ್ರೇಲಿಯಾ ಆಟಗಾರರು ಹಾಗೂ ಸಿಬ್ಬಂದಿಯ ಕ್ಷಮೆ ಕೋರಿದರು.

    ವಿಶೇಷವಾಗಿ ಚೆಂಡು ವಿರೂಪಗೊಳಿಸಿದ ಪ್ರಕರಣಲ್ಲಿ ವಾರ್ನರ್ ಪ್ರಮುಖ ಸೂತ್ರಧಾರಿ ಎಂದು ತಿಳಿದು ಬಂದಿದ್ದು, ವಾರ್ನರ್ ಚೆಂಡು ವಿರೂಪಗೊಳಿಸುವ ಕುರಿತು ಸ್ಮಿತ್ ಹಾಗೂ ಬ್ಯಾನ್ ಕ್ರಿಫ್ಟ್ ರ ಮನವೊಲಿಸಿದ್ದರು ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಆಸೀಸ್ ನಾಯಕ ಸ್ಮಿತ್ ಕೂಡ ಗುರುವಾರ ಸುದ್ದಿಗೋಷ್ಠಿ ನಡೆಸಿ ಕ್ಷಮೆಯಾಚಿಸಿದ್ದರು. ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಸ್ಮಿತ್ ಹಾಗೂ ವಾರ್ನರ್ ಗೆ ಒಂದು ವರ್ಷ ನಿಷೇಧ ವಿಧಿಸಿದ್ದು, ಬ್ಯಾನ್ ಕ್ರಾಫ್ಟ್ ಗೆ 9 ತಿಂಗಳು ನಿಷೇಧ ವಿಧಿಸಿದೆ.  ಇದನ್ನೂ ಓದಿ: 6 ಪದಗಳಿಂದಾಗಿ ಬಚಾವ್ ಆದ್ರು ಆಸೀಸ್ ಕೋಚ್ ಡ್ಯಾರೆನ್ ಲೆಹ್ಮನ್!

    ಚೆಂಡು ವಿರೂಪಗೊಳಿಸದ ಪ್ರಕರಣದ ನಂತರ ಆಸೀಸ್ ಕ್ರಿಕೆಟ್ ಮಂಡಳಿ ಭಾರೀ ಮೊತ್ತದ ಪ್ರಯೋಜಕತ್ವವನ್ನು ಕಳೆದು ಕೊಂಡಿತ್ತು. ಅಲ್ಲದೇ ವಯಕ್ತಿಕವಾಗಿ ವಾರ್ನರ್, ಸ್ಮಿತ್ ಹಾಗೂ ಬ್ಯಾನ್ ಕ್ರಿಫ್ಟ್ ಅವರೊಂದಿಗೆ ಖಾಸಗಿ ಸಂಸ್ಥೆಗಳು ಮಾಡಿಕೊಂಡಿದ್ದ ಒಪ್ಪಂದಗಳನ್ನು ರದ್ದುಗೊಳಿಸಿದ್ದವು. ಇದರಿಂದ ಆಸೀಸ್ ಮಂಡಳಿ ಹಾಗೂ ಆಟಗಾರರು ದೊಡ್ಡ ಮೊತ್ತದ ಹಣವನ್ನು ಕಳೆದುಕೊಂಡಿದ್ದರು.  ಇದನ್ನೂ ಓದಿ: ನಾಯಕತ್ವದ ವಿಫಲತೆಯನ್ನು ಒಪ್ಪಿ, ಕ್ಷಮೆ ಕೇಳಿ ಕಣ್ಣೀರಿಟ್ಟ ಸ್ವೀವ್ ಸ್ಮಿತ್

  • ನಾಯಕತ್ವದ ವಿಫಲತೆಯನ್ನು ಒಪ್ಪಿ, ಕ್ಷಮೆ ಕೇಳಿ ಕಣ್ಣೀರಿಟ್ಟ ಸ್ವೀವ್ ಸ್ಮಿತ್

    ನಾಯಕತ್ವದ ವಿಫಲತೆಯನ್ನು ಒಪ್ಪಿ, ಕ್ಷಮೆ ಕೇಳಿ ಕಣ್ಣೀರಿಟ್ಟ ಸ್ವೀವ್ ಸ್ಮಿತ್

    ಸಿಡ್ನಿ: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಚೆಂಡನ್ನು ವಿರೂಪಗೊಳಿಸಿದ ಪ್ರಕರಣದ ಸಂಪೂರ್ಣ ಹೊಣೆ ಹೊತ್ತಿರುವ ಆಸೀಸ್ ತಂಡದ ಮಾಜಿ ನಾಯಕ ಸ್ಟೀವ್ ಸ್ಮಿತ್, ಘಟನೆಗೆ ಸಂಬಂಧಿಸಿದಂತೆ ಕ್ರಿಕೆಟ್ ಅಭಿಮಾನಿಗಳು ಹಾಗೂ ತಮ್ಮ ಕುಟುಂಬಸ್ಥರಲ್ಲಿ ಕ್ಷಮೆ ಕೇಳಿದ್ದಾರೆ.

    ದಕ್ಷಿಣ ಆಫ್ರಿಕಾದಿಂದ ಹಿಂದುರಿಗಿದ ಬಳಿಕ ಮಾತನಾಡಿದ ಸ್ಮಿತ್, ನನ್ನಿಂದಾಗಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತು ನನ್ನ ಪೋಷಕರಿಗೆ ತುಂಬಾ ನೋವಾಗಿದೆ. ಇದಕ್ಕಾಗಿ ನಾನು ಪ್ರಾಮಾಣಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ಕಣ್ಣೀರಿಟಿದ್ದಾರೆ.

    ಕ್ರಿಕೆಟ್ ಆಟವನ್ನು ನಾನು ತುಂಬಾ ಪ್ರೀತಿಸುತ್ತೇನೆ ಮತ್ತು ಕ್ರಿಕೆಟ್ ಆಡುವ ಮಕ್ಕಳ್ಳನ್ನು ಪ್ರೀತಿಸುತ್ತೇನೆ. ಆದರೆ ನೀವು ನನ್ನನ್ನು ಪ್ರಶ್ನಿಸುವಂತಹ ಸಮಯ ಬಂದಿರುವುದು ದುರದೃಷ್ಟಕರ. ಮೊದಲು ನಾನು ಪ್ರಾಮಾಣಿಕವಾಗಿ ಕ್ಷಮೆ ಕೇಳುತ್ತೇನೆ ಎಂದರು.

    ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸದಂತೆ ಸ್ಮಿತ್ ಮತ್ತು ಬ್ಯಾನ್ ಕ್ರಾಫ್ಟ್ ಪಂದ್ಯದ ನಂತರ ಮಾತನಾಡಿ ಪ್ರಕರಣದಲ್ಲಿ ತಪ್ಪೊಪ್ಪಿಕೊಂಡಿದ್ದರು.

    ಮೌನ ಮುರಿದ ವಾರ್ನರ್: ಸ್ಮಿತ್ ಹೇಳಿಕೆಗೂ ಮುನ್ನವೇ ವಾರ್ನರ್ ಸಾಮಾಜಿಕ ಜಾಲದಲ್ಲಿ ಕ್ಷಮೆ ಕೇಳಿದ್ದು, ಪ್ರಕರಣದ ಪೂರ್ಣ ಜವಾಬ್ದಾರಿಯನ್ನು ಹೊರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: 6 ಪದಗಳಿಂದಾಗಿ ಬಚಾವ್ ಆದ್ರು ಆಸೀಸ್ ಕೋಚ್ ಡ್ಯಾರೆನ್ ಲೆಹ್ಮನ್!

    https://www.instagram.com/p/Bg5NwaFn2ZK/?utm_source=ig_embed

    ಈ ಕುರಿತು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಬರೆದು ಕೊಂಡಿರುವ ಅವರು, ಕ್ರಿಕೆಟ್ ಅಭಿಮಾನಿಗಳಲ್ಲಿ ಕ್ಷಮೆ ಕೇಳುತ್ತೇನೆ. ಈ ಕೃತ್ಯದಿಂದ ಕ್ರೀಡಾ ಅಭಿಮಾನಿಗಗಳಿಗೆ ಮತ್ತು ಕ್ರೀಡಾ ಮೌಲ್ಯಗಳಿಗೆ ದಕ್ಕೆ ಉಂಟಾಗಿದೆ. ಅಭಿಮಾನಿಗಳಿಗೆ ಉಂಟಾದ ನೋವನ್ನು ಅರ್ಥ ಮಾಡಿಕೊಂಡಿದ್ದೇನೆ. ಆದರೆ ನನ್ನ ಬಾಲ್ಯದಿಂದಲೂ ಕ್ರಿಕೆಟ್ ಎಂದರೆ ಪ್ರೀತಿ. ಸದ್ಯ ತಾನು ನನ್ನ ಕುಟುಂಬ, ಸ್ನೇಹಿತರು ಮತ್ತು ವಿಶ್ವಾಸಾರ್ಹ ಸಲಹೆಗಾರರೊಂದಿಗೆ ಸಮಯ ಕಳೆಯಬೇಕಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:  ಚೆಂಡು ವಿರೂಪಗೊಳಿಸಿದ ಆಸೀಸ್ ಕಳ್ಳಾಟ ಸೆರೆಹಿಡಿದ ಕ್ಯಾಮೆರಾಮೆನ್ ಈಗ ಹೀರೋ!

    ಆಸೀಸ್ ಕ್ರಿಕೆಟ್ ಮಂಡಳಿ ಬುಧವಾರ ಚೆಂಡು ವಿರೂಪಗೊಳಿಸಿದ ಪ್ರಮುಖ ಆಟಗಾರರಾದ ಸ್ಮಿತ್ ಹಾಗೂ ವಾರ್ನರ್ ಮೇಲೆ ಒಂದು ವರ್ಷದ ಕಾಲ ನಿಷೇಧ ವಿಧಿಸಿ ಕಠಿಣ ಸಂದೇಶ ರವಾನಿಸಿತ್ತು. ಆದರೆ ದೇಶಿಯ ಕ್ರಿಕೆಟಿನಲ್ಲಿ ಭಾಗವಹಿಸಲು ಅವಕಾಶ ನೀಡಿತ್ತು. ಬಿಸಿಸಿಐ ಕೂಡ ಐಪಿಎಲ್ ನಲ್ಲಿ ಒಂದು ವರ್ಷ ಭಾಗವಹಿಸಿಲು ನಿಷೇಧ ವಿಧಿಸಿದೆ. ಇನ್ನು ಚೆಂಡು ವಿರೂಪಗೊಳಿಸಿದ್ದ ಬ್ಯಾನ್ ಕ್ರಾಫ್ಟ್ 9 ತಿಂಗಳು ನಿಷೇಧ ಒಳಗಾಗಿದ್ದಾರೆ. ಸದ್ಯ ಮೂವರನ್ನು ವಿಚಾರಣೆಗೊಳಪಟ್ಟ ಬಳಿಕ ಆಸ್ಟ್ರೇಲಿಯಾಗೆ ಹಿಂದಿರುಗಿದ್ದಾರೆ. ಇದನ್ನೂ ಓದಿ: ಆಟಗಾರರ ಕಳ್ಳಾಟಕ್ಕೆ ಭಾರೀ ಮೊತ್ತದ ಪ್ರಾಯೋಜಕತ್ವವನ್ನು ಕಳೆದುಕೊಂಡಿತು ಆಸ್ಟ್ರೇಲಿಯಾ!

     

  • ದರ್ಶನ್ ಎದುರಲ್ಲೇ ಸಿಕ್ಕಿದ್ದರೂ ಮಾತನಾಡಿಸದೆ ಹೊರಟ ಈ ಸ್ಯಾಂಡಲ್‍ವುಡ್ ನಟಿ!

    ದರ್ಶನ್ ಎದುರಲ್ಲೇ ಸಿಕ್ಕಿದ್ದರೂ ಮಾತನಾಡಿಸದೆ ಹೊರಟ ಈ ಸ್ಯಾಂಡಲ್‍ವುಡ್ ನಟಿ!

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಎದುರಲ್ಲೇ ಸಿಕ್ಕಿದ್ದರೂ ನಟಿಯೊಬ್ಬರು ಮಾತನಾಡಿಸದೆ ಹೊರಟುಹೋಗಿದ್ದಾರೆ. ಆಕೆ ಬೇರೆ ಯಾರೂ ಅಲ್ಲ ಸ್ಯಾಂಡಲ್‍ವುಡ್ ಕೆಂಡಸಂಪಿಗೆ ಮಾನ್ವಿತಾ ಹರೀಶ್.

    ಮಾನ್ವಿತಾ ಈಗ ನಟಿಯಾಗಿದ್ದು, ಚೌಕ ಚಿತ್ರದಲ್ಲಿ ಅಭಿನಯಿಸಿದ್ದರು ದರ್ಶನ್ ಜೊತೆ ತೆರೆಹಂಚಿಕೊಂಡಿರಲಿಲ್ಲ. ಆದರೆ ಮೈಸೂರಿನಲ್ಲೊಮ್ಮೆ ದರ್ಶನ್‍ರನ್ನು ಮಾನ್ವಿತಾ ನೋಡಿಯೂ ನೋಡದೆ, ಮಾತನಾಡಿಸದೆ ಹೋಗಿದ್ದಾರೆ.

    ಮಾನ್ವಿತಾಗೆ ಅಚಾನಕ್ ಆಗಿ ದರ್ಶನ್‍ರನ್ನು ಖಾಸಗಿಯಾಗಿ ಮೀಟ್ ಮಾಡುವ ಅವಕಾಶ ಸಿಕ್ಕಿತ್ತು. ಆದರೂ ಮಾನ್ವಿತಾ ದರ್ಶನ್‍ರನ್ನ ಗುರುತಿಸೋದರಲ್ಲಿ ವಿಫಲರಾಗಿದ್ದಾರೆ.

    ಕಳೆದ ಬಾರಿಯ ದಸರಾ ಹಬ್ಬದ ಯುವ ದಸರಾಕ್ಕಾಗಿ ತಾರೆಗಳೆಲ್ಲಾ ಮೈಸೂರಿನ ಸಂದೇಶ್ ಪ್ರಿನ್ಸ್ ಹೊಟೇಲ್‍ನಲ್ಲಿ ವಾಸ್ತವ್ಯ ಹೂಡಿದ್ದರು. ದರ್ಶನ್ ಅದೇ ಹೊಟೇಲ್‍ನಲ್ಲಿ ತಂಗಿರೋದು ಮಾನ್ವಿತಾಗೆ ಗೊತ್ತಿರಲಿಲ್ಲ. ಕಾರ್ಯಕ್ರಮಕ್ಕೆ ಹೋಗುವಾಗ ಹೊಟೇಲ್ ಹೊರಗಡೆಯ ಮೆಟ್ಟಿಲಿನಲ್ಲಿ ದರ್ಶನ್ ತಮ್ಮ ಒಂದಿಷ್ಟು ಸ್ನೇಹಿತರ ಜೊತೆ ಕುಳಿತಿದ್ದರು. ಆಗ ಮಾನ್ವಿತಾ ಯಾರೋ ಕುಳಿತಿರಬಹುದು ಎಂದು ಅಲ್ಲಿ ಗಮನಿಸದೆ ಕಾರ್ ಹತ್ತಿದ್ದಾರೆ.

    ನಂತರ ಅಲ್ಲಿಯೇ ಒಬ್ಬರು ಮಾನ್ವಿತಾಗೆ ದರ್ಶನ್ ಇರುವ ವಿಚಾರ ಹೇಳಿದ್ದರು. ಆ ಕೂಡಲೇ ಮಾನ್ವಿತಾ ತಬ್ಬಿಬ್ಬಾಗಿ ಸುತ್ತಲೂ ನೋಡಿದ್ದು, ಕೊನೆಗೆ ಮಾನ್ವಿತಾ, ದರ್ಶನ್‍ರನ್ನು ಹುಡುಕೋದರಲ್ಲಿ ವಿಫಲರಾದಾಗ ಮತ್ತೊಬ್ಬರು ಬಂದು ದರ್ಶನ್ ಮೆಟ್ಟಿಲ ಮೇಲೆ ಕುಳಿತಿದ್ದಾರೆ ಎಂದು ಹೇಳಿದ್ದರು.

    ಒಬ್ಬ ಬಿಗ್ ಸ್ಟಾರ್ ನೆಲದ ಮೇಲೆ ಸರಳತೆಯಿಂದ ಕುಳಿತಿದ್ದನ್ನು ನೋಡಿ ಮಾನ್ವಿತಾಗೆ ಆಶ್ಚರ್ಯವಾಗಿತ್ತು. ದರ್ಶನ್ ಬಳಿ ಬಂದು ಒಬ್ಬ ಬಿಗ್ ಸ್ಟಾರ್ ಮೆಟ್ಟಿಲ ಮೇಲೆ ಹೀಗೆ ಕುಳಿತುಕೊಂಡರೆ, ಯಾರ್ ಗುರುತು ಹಿಡೀತಾರೆ. ಯಾಕೆ ಹೀಗೆ ಕುಳಿತ್ತಿದೀರಿ ಎಂದು ಕೇಳಿದ್ದಾರೆ. ಅದಕ್ಕೆ ದರ್ಶನ್, ನಾನು ಹೀಗೇ ಇರೋದು ಎಂದು ಹೇಳಿದ್ದಾರೆ. ನಂತರ ಮಾನ್ವಿತಾ ಮಾತನಾಡಿಸದೇ ಹೋಗಿದ್ದಕ್ಕೆ ಕ್ಷಮೆ ಕೇಳಿ ಅಲ್ಲಿಂದ ಹೊರಟರು. ಈ ವಿಚಾರವನ್ನ ಮಾನ್ವಿತಾ ಇತ್ತೀಚೆಗಷ್ಟೇ ಫೇಸ್‍ಬುಕ್ ಲೈವ್‍ನಲ್ಲಿ ಹಂಚಿಕೊಂಡಿದ್ದಾರೆ.

    https://www.youtube.com/watch?v=1au1H9SA_2I

  • ಅಭಿಮಾನಿಗಳ ಜೊತೆ ಕ್ಷಮೆ ಕೇಳಿದ ಸೆಹ್ವಾಗ್

    ಅಭಿಮಾನಿಗಳ ಜೊತೆ ಕ್ಷಮೆ ಕೇಳಿದ ಸೆಹ್ವಾಗ್

    ನವದೆಹಲಿ: ಟ್ಟಿಟ್ಟರ್ ನಲ್ಲಿ ಸದಾ ಸಕ್ರಿಯರಾಗಿರುವ ವೀರೇಂದ್ರ ಸೆಹ್ವಾಗ್ ಕೇರಳದ ವ್ಯಕ್ತಿಯನ್ನು ಕಟ್ಟಿ ಹಾಕಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿ ಈಗ ಕ್ಷಮೆ ಕೇಳಿದ್ದಾರೆ.

    ಫೆ.24 ರ ಮಧ್ಯಾಹ್ನ 1.18ಕ್ಕೆ ಸೆಹ್ವಾಗ್, ಬುಡಕಟ್ಟು ಜನಾಂಗದ ಮಧು 1 ಕೆಜಿ ಅಕ್ಕಿಯನ್ನು ಕಳ್ಳತನ ಮಾಡಿದ್ದಕ್ಕೆ ಉಬೈದ್, ಹುಸೈನ್, ಅಬ್ದುಲ್ ಕರೀಂ ಥಳಿಸಿ ಹತ್ಯೆ ಮಾಡಿದ್ದಾರೆ. ನಾಗರಿಕ ಸಮಾಜದಲ್ಲಿ ಈ ರೀತಿ ನಡೆದಿದ್ದು ಇದೊಂದು ತಲೆ ತಗ್ಗಿಸುವ ಪ್ರಕರಣ ಎಂದು ಟ್ವೀಟ್ ಮಾಡಿದ್ದರು.

    ಈ ಟ್ವೀಟ್ ಬಳಿಕ ಸೆಹ್ವಾಗ್ ಈ ಮೂವರ ಹೆಸರನ್ನು ಬರೆದು ಆರೋಪಿಗಳನ್ನು ಧರ್ಮದ ಆಧಾರದಲ್ಲಿ ಈ ಪ್ರಕರಣದಲ್ಲಿ ನೋಡಿದ್ದು ತಪ್ಪು ಎನ್ನುವ ಟೀಕೆಗಳು ಸಾಮಾಜಿಕ ಜಾಲತಾಣದಲ್ಲಿ ಬರತೊಡಗಿತು. ಈ ಪ್ರಕರಣ ದೇಶವ್ಯಾಪಿ ಚರ್ಚೆಗೆ ಗ್ರಾಸವಾಗುತ್ತಲೇ ಕೇರಳ ಪೊಲೀಸರು ಕೃತ್ಯಕ್ಕೆ ಸಾಥ್ ನೀಡಿದ್ದ ಆರೋಪದ ಅಡಿಯಲ್ಲಿ 16 ಮಂದಿಯನ್ನು ಬಂಧಿಸಿದ್ದರು.

    https://twitter.com/virendersehwag/status/967305291359555584

    ಫೆ.24 ರಾತ್ರಿ 9 ಗಂಟೆಯ ವೇಳೆಗೆ ಸೆಹ್ವಾಗ್ ಟ್ವೀಟ್ ಮಾಡಿ, ಈ ಪ್ರಕರಣದಲ್ಲಿ ಭಾಗಿಯಾದ ವ್ಯಕ್ತಿಗಳ ಹೆಸರನ್ನು ಬರೆಯುವಾಗ ಒಂದು ಹೆಸರನ್ನು ಬಿಟ್ಟಿದ್ದೇನೆ. ಸರಿಯಾದ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ್ದಕ್ಕೆ ನಾನು ಕ್ಷಮೆ ಕೋರುತ್ತೇವೆ. ಆ ಟ್ವೀಟ್ ಯಾವುದೇ ಧರ್ಮಕ್ಕೆ ಸಂಬಂಧಿಸಿದ್ದಲ್ಲ. ಕಿಲ್ಲರ್ ಗಳು ಧರ್ಮದ ಆಧಾರದಲ್ಲಿ ಬೇರೆ ಬೇರೆಯಾಗಿದ್ದರೂ ಹಿಂಸಾತ್ಮಕ ಮನಸ್ಥಿತಿಯಲ್ಲಿ ಒಂದಾಗಿದ್ದಾರೆ ಎಂದು ಬರೆದು ಆಕ್ರೋಶವನ್ನು ಹೊರ ಹಾಕಿದ್ದಾರೆ. ಇದನ್ನೂ ಓದಿ: ಕೇರಳ ಶಾಕಿಂಗ್ – ಸಾಯೋವರೆಗೂ ಕಳ್ಳನಿಗೆ ಥಳಿಸಿ ಸೆಲ್ಫಿ ಕ್ಲಿಕ್ಕಿಸಿದ ಸಾರ್ವಜನಿಕರು!

    https://twitter.com/virendersehwag/status/967428117324320768

  • ನೀಚ ಸಿಎಂ ಬೆಳೆಸಿ ನಾನು ಮಹಾ ಅಪರಾಧ ಮಾಡಿದೆ: ಕನ್ನಡಿಗರಲ್ಲಿ ಕ್ಷಮೆ ಕೇಳಿದ ಎಚ್‍ಡಿಡಿ

    ನೀಚ ಸಿಎಂ ಬೆಳೆಸಿ ನಾನು ಮಹಾ ಅಪರಾಧ ಮಾಡಿದೆ: ಕನ್ನಡಿಗರಲ್ಲಿ ಕ್ಷಮೆ ಕೇಳಿದ ಎಚ್‍ಡಿಡಿ

    ಬೆಂಗಳೂರು: ಸಿದ್ದರಾಮಯ್ಯ ನಂತಹ ನೀಚ ಮುಖ್ಯಮಂತ್ರಿಯನ್ನು ಬೆಳೆಸಿ ನಾನು ಜೀವನದಲ್ಲಿ ಮಹಾ ಅಪರಾಧವನ್ನು ಮಾಡಿದೆ. ಸಿದ್ದರಾಮಯ್ಯನವರನ್ನು ಬೆಳೆಸಿದ್ದಕ್ಕೆ ನಾನು ಅಂದಿನ 5 ಕೋಟಿ ಜನರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಹೇಳಿದ್ದಾರೆ.

    ಕೆಂಗೇರಿಯಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಿಮ್ಮ ಅಧಿಕಾರ ಎಷ್ಟು ದಿವಸ ಇರುತ್ತೆ ಅಂತ ನಾನು ನೋಡ್ತೀನಿ. ನೀವು ಏನೇನು ಮಾಡಿದ್ದೀರಾ ಎಂಬುವುದನ್ನು ಅಂಕಿ ಅಂಶ ಸಮೇತ ಕೊಟ್ಟು ಮಾತನಾಡುತ್ತೇನೆ. ಖಜಾನೆಯನ್ನು ಲೂಟಿ ಮಾಡ್ತಾ ಇದ್ದೀರಿ. ಇನ್ನೇನು ನಿಮ್ಮ ಟೈಂ ಮುಗೀತಾ ಬಂತು. ನಿಮಗೆ ಕೇವಲ 120 ದಿನಗಳು ಮಾತ್ರ ಉಳಿದಿದೆ ಎಂದು ಸಿದ್ದರಾಮಯ್ಯನವರಿಗೆ ಎಚ್ಚರಿಕೆ ನೀಡಿದರು.

    ಈ ರಾಜ್ಯದಲ್ಲಿ ಏನೂ ನೀವು ಒಬ್ಬರೇ ದೊಡ್ಡ ಸತ್ಯವಂತರ ಸಿದ್ದರಾಮಯ್ಯನವರೇ? ಏನ್ ಇವರ ಮನೆ ಪಕ್ಕನೇ ಸತ್ಯ ಹರಿಶ್ಚಂದ್ರ ಹಾದು ಹೋಗುತ್ತಿದ್ದಾರೆ ವರ್ತಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯನವರನ್ನು ಮಾಜಿ ಪ್ರಧಾನಿ ಗೇಲಿ ಮಾಡಿದರು.

    ಬೆಂಗಳೂರಿನ ಅಭಿವೃದ್ಧಿಗೆ ನಾನು ಸಹ ದುಡಿದಿದ್ದೇನೆ. ಮುಖ್ಯ ಮಂತ್ರಿಯಾಗಿ ಮತ್ತು ಪ್ರಧಾನ ಮಂತ್ರಿಯಾಗಿ ಮಾಡಿರುವ ಕೆಲಸಗಳ ಪಟ್ಟಿಯನ್ನು ಬಿಡಿ ಬಿಡಿಯಾಗಿ ವಿವರಿಸಿದ ದೇವೇಗೌಡರು, ಕಾವೇರಿ ನೀರು ತರಲು 1400 ಕೋಟಿ ರೂ. ಮತ್ತು ಕೃಷ್ಣ ನದಿಗೆ 1000 ಕೋಟಿ ರೂ. ಕೊಟ್ಟಿದ್ದೇನೆ. ವೀರಪ್ಪ ಮೊಯಿಲಿ ಅವರು ಬಿಟ್ಟು ಹೋಗಿದ್ದ 120 ಕೋಟಿ ರೂ. ಸಾಲವನ್ನು ತೀರಿಸಿದ್ದೇನೆ. ಬೆಂಗಳೂರಿನಲ್ಲಿ ಹೊರ ವರ್ತುಲ ರಸ್ತೆಗಳು, ಮೇಲ್ಸೇತುವೆಗಳು, ಐಟಿ-ಬಿಟಿಗೆ ನೆರವುಗಳನ್ನು ಕೊಟ್ಟಿದೇನೆ ಎಂದು ಹೇಳಿದರು.

    ಈ ರಾಜ್ಯದಲ್ಲಿ ಮತ್ತು ದೇಶದಲ್ಲಿ ಯಾರಾದರೂ ಒಬ್ಬ ಸಾಮಾಜಿಕ ನ್ಯಾಯ ಒದಗಿಸಿದ್ದರೇ ಅದು ನಿಮ್ಮ ದೇವೇಗೌಡ ಮಾತ್ರ. ಎಲ್ಲರಿಗೂ ನ್ಯಾಯ ಒದಗಿಸಬೇಕೆಂದು ಹಗಲಿರುಳು ದುಡಿದೆ. ದಯಮಾಡಿ ನಿಮ್ಮಲ್ಲಿ ಒಂದು ಮನವಿ ಮಾಡುತ್ತೇನೆ, ಈ ಬಾರಿ ನಿಮ್ಮ ಮನೆ ಮಗ ಜವರೇ ಗೌಡನನ್ನು ಗೆಲ್ಲಿಸಿ ಕೊಡಿ ಮತ್ತು ಕುಮಾರಣ್ಣನಿಗೆ ಶಕ್ತಿ ತುಂಬಿ ಎಂದು ಸಮಾವೇಶದಲ್ಲಿ ನೆರೆದವರ ಮುಂದೆ ಕೈ ಮುಗಿದು ಮನವಿ ಮಾಡಿಕೊಂಡರು.

    ಸಿದ್ದರಾಮಯ್ಯ ನಂತವರ ಕೀಳು ಮಟ್ಟದ ರಾಜಕಾರಣಿಯನ್ನು ಎಲ್ಲೂ ನೋಡಿಲ್ಲ. ಈ ಹಿಂದೆ ರಾಜ್ಯದ ಜನರ ಮನ ಗೆಲ್ಲುವ ಸಂದರ್ಭದಲ್ಲಿ ನಿಮಗೆ ಈ ದೇವೇಗೌಡ ಬೇಕಾಗಿದ್ದ. ಈಗ ಮುಖ್ಯಮಂತ್ರಿಯಾದ ಬಳಿಕ ಶ್ರವಣಬೆಳಗೊಳದ ಕಾರ್ಯಕ್ರಮದಲ್ಲಿ ನನಗೇ ಮಾತನಾಡುವುದಕ್ಕೆ ಅವಕಾಶವೇ ಕೊಡಲಿಲ್ಲ ಎಂದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು.

    ಕಾಂಗ್ರೆಸ್ ನಲ್ಲಿ ಈಗ ಸೋನಿಯಾ ಗಾಂಧಿಯವರ ಬಲ ಕುಗ್ಗಿ ಹೋಗಿದೆ. ಇದನ್ನೇ ನೆಪ ಮಾಡಿಕೊಂಡು ಇವತ್ತು ಕಾಂಗ್ರೆಸ್‍ನಲ್ಲಿ ಸಿಎಂ ಸರ್ವಾಧಿಕಾರಿಯಂತೆ ಮೆರೆಯುತ್ತಿದ್ದಾರೆ. ಯಾವ ಶಕ್ತಿ ನಿಮ್ಮನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕುಳ್ಳಿಸಿತ್ತೋ.  ಅದೇ ಶಕ್ತಿ ಇಂದು ನಿಮ್ಮನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತು ಎಸೆಯಲು ಪ್ರಯತ್ನಿಸುತ್ತಿದೆ. ನಿಮ್ಮನ್ನು ಅಧಿಕಾರದಿಂದ ಕೆಳಗೆ ಇಳಿಸಿಯೇ ತೀರೋದು ಎಂದು ಶಪಥ ಮಾಡಿದರು.

    ಇದುವರೆಗೆ ಯಾರೂ ನನ್ನ ಮೇಲೆ ಭ್ರಷ್ಟಾಚಾರದ ಆರೋಪವನ್ನು ಮಾಡಿಲ್ಲ ಅಂತಾ ಬೀಗುವ ನಿಮಗೆ ಅರ್ಕಾವತಿ ಕೆಂಪಣ್ಣ ಆಯೋಗ ಏನಾಯಿತು? ಇತರಹ ಸುಳ್ಳು ಹೇಳುವುದಕ್ಕೆ ನಾಚಿಕೆ ಆಗಲ್ವಾ ನಿಮಗೆ ಎಂದು ಪ್ರಶ್ನಿಸಿ ದೇವೇಗೌಡರು ಸಿದ್ದರಾಮಯ್ಯನವರನ್ನು ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ಎಚ್‍ಡಿಡಿಗೆ ವಿಭಿನ್ನವಾಗಿ ಜೈಕಾರ ಕೂಗಿದ ಅಭಿಮಾನಿ- ಮಾಜಿ ಪ್ರಧಾನಿ ಫುಲ್ ಖುಷ್

     

  • ವಿಡಿಯೋ: ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಕಾಲಿಗೆ ಬಿದ್ದು ಕ್ಷಮೆ ಕೇಳುವಂತೆ ಮಾಡಿದ ಇಂಡಿಗೋ ಸಿಬ್ಬಂದಿ

    ವಿಡಿಯೋ: ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಕಾಲಿಗೆ ಬಿದ್ದು ಕ್ಷಮೆ ಕೇಳುವಂತೆ ಮಾಡಿದ ಇಂಡಿಗೋ ಸಿಬ್ಬಂದಿ

     

    ಹೈದರಾಬಾದ್: ಅಸಭ್ಯವಾಗಿ ವರ್ತಿಸಿದ್ದಕ್ಕೆ ಯುವಕನನ್ನ ಇಂಡಿಗೋ ಏರ್ ಲೈನ್ಸ್ ಸಿಬ್ಬಂದಿಯೊಬ್ಬರು ತನ್ನ ಕಾಲಿಗೆ ಬಿದ್ದು ಕ್ಷಮೆ ಕೇಳುವಂತೆ ಮಾಡಿದ ಘಟನೆ ಹೈದರಾಬಾದ್‍ನಲ್ಲಿ ನಡೆದಿದ್ದು, ಇದರ ವಿಡಿಯ ಈಗ ವೈರಲ್ ಆಗಿದೆ.

    ಶನಿವಾರದಂದು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮಹಿಳಾ ಸಿಬ್ಬಂದಿಯ ಕಾಲಿಗೆ ಬಿದ್ದ ಯುವಕ ಮದ್ಯಪಾನ ಮಾಡಿದ್ದ ಎಂದು  ಏರ್ ಲೈನ್ಸ್ ಆರೋಪಿಸಿದೆ. ಮಹಿಳೆ ಆತನಿಗೆ “ನನ್ನ ಕಾಲಿಗೆ ಬೀಳು” ಎಂದು ತೆಲುಗಿನಲ್ಲಿ ಹೇಳೋದನ್ನ ವಿಡಿಯೋದಲ್ಲಿ ಕಾಣಬಹುದು.

    ನಡೆದಿದ್ದೇನು: ಮಹಿಳೆ ತನ್ನ ಬೆಳಗ್ಗಿನ ಶಿಫ್ಟ್ ಕೆಲಸಕ್ಕೆ ರಿಪೋರ್ಟ್ ಮಾಡಿಕೊಳ್ಳಲು ಪಾರ್ಕಿಂಕ್‍ನಿಂದ ವಿಮಾನ ನಿಲ್ದಾಣದ ಒಳಗೆ ಹೋಗುತ್ತಿದ್ರು. ಈ ವೇಳೆ ಯುವಕ ಮತ್ತು ಆತನ ಗೆಳೆಯ ಆಕೆಯನ್ನು ಹಿಂಬಾಲಿಸಿದ್ದಾರೆ. ನಂತರ ಮಹಿಳೆ ಟ್ರಾಫಿಕ್ ಪೊಲೀಸ್‍ಗೆ ಈ ಬಗ್ಗೆ ದೂರು ನೀಡಿದ್ದಾರೆ. ಆಗ ಟ್ರಾಫಿಕ್ ಪೊಲೀಸ್ ಇಬ್ಬರನ್ನೂ ವಿಮಾನ ನಿಲ್ದಾಣದ ಪೊಲೀಸ್ ಪೋಸ್ಟ್ ಗೆ ಎಳೆದೊಯ್ದಿದ್ದಾರೆ. ಈ ವೇಳೆ ಒಬ್ಬಾತ, ನಿಮ್ಮ ಕಾಲಿಗೆ ಬೇಕದ್ರೂ ಬೀಳ್ತೀನಿ, ಬಿಟ್ಟುಬಿಡಿ ಎಂದು ಮಹಿಳೆಯ ಬಳಿ ಮನವಿ ಮಾಡಿಕೊಂಡಿದ್ದಾನೆ.

    ಇಬ್ಬರೂ ವಿದ್ಯಾರ್ಥಿಗಳು ಎಂದು ಗೊತ್ತಾದ ಬಳಿಕ ಮಹಿಳೆ ಯಾವುದೇ ದೂರು ದಾಖಲಿಸಲಿಲ್ಲ. ಆದರೆ ಸಾರ್ವನಿಕ ಸ್ಥಳದಲ್ಲಿ ಈ ರೀತಿ ಮಾಡಿದ್ದರಿಂದ ಅವರನ್ನ ಕೆಲವು ಗಂಟೆಗಳ ಕಾಲ ವಶದಲ್ಲಿರಿಸಿಕೊಂಡು ನಂತರ ಬಿಟ್ಟು ಕಳಿಸಲಾಯ್ತು ಎಂದು ಪೊಲೀಸ್ ಅಧಿಕಾರಿ ರಮೇಶ್ ನಾಯ್ಕ್ ಹೇಳಿದ್ದಾರೆ.

    ಮಹಿಳಾ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದ್ದರಿಂದ ಇಬ್ಬರನ್ನೂ ಪೊಲೀಸರಿಗೆ ಒಪ್ಪಿಸಲಾಯ್ತು ಎಂದು ಇಂಡಿಗೋ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

    https://www.youtube.com/watch?v=-d9rlBdRhpA

  • ದೈವಕ್ಕೆ ಬೈಯ್ದಿದ್ದಕ್ಕೆ ಇಡೀ ಕುಟುಂಬಕ್ಕೆ ಅನಾರೋಗ್ಯ – ಕೊರಗಜ್ಜನಲ್ಲಿ ಯುವಕನಿಂದ ಕ್ಷಮೆಯಾಚನೆ

    ದೈವಕ್ಕೆ ಬೈಯ್ದಿದ್ದಕ್ಕೆ ಇಡೀ ಕುಟುಂಬಕ್ಕೆ ಅನಾರೋಗ್ಯ – ಕೊರಗಜ್ಜನಲ್ಲಿ ಯುವಕನಿಂದ ಕ್ಷಮೆಯಾಚನೆ

    ಮಂಗಳೂರು: ಅದು ತುಳುನಾಡಿನ ಕಾರಣಿಕದ ಪ್ರಭಾವಿ ದೈವ. ಬೇಡಿದ ಇಷ್ಟಾರ್ಥಗಳನ್ನು ಪೂರೈಸುವ ದೇವರು ಎಂದೇ ಹೆಸರುವಾಸಿ. ಇಂಥಾ ಶಕ್ತಿ ಭೂತ ದೇವರಿಗೆ ಆ ಯುವಕ ಫೇಸ್ ಬುಕ್ ನಲ್ಲಿ ಬಾಯಿಗೆ ಬಂದಂತೆ ನಿಂದಿಸಿದ್ದ. ಈಗ ನೋಡಿದರೆ ನಿಂದಿಸಿದವನೇ ಬಂದು ದೇವರಲ್ಲಿ ಕ್ಷಮೆ ಕೋರಿದ್ದಾನೆ.

    ಹೀಗೆ ಉದ್ದಂಡ ನಮಸ್ಕಾರ ಹಾಕ್ತಿರೋ ಈತ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿ ಮನೋಜ್ ಪಂಡಿತ್. ಮಂಗಳೂರಿನ ಪದವಿನಂಗಡಿಯ ಬಂಗೇರ ಎಂಬವರು ಆರಾಧಿಸೋ ಕೊರಗಜ್ಜನ ಗುಡಿಯ ಮುಂದೆ ಹೀಗೆ ತಪ್ಪೊಪ್ಪಿಕೊಂಡು ಕ್ಷಮೆ ಯಾಚಿಸುತ್ತಿರುವುದಕ್ಕೆ ಕಾರಣ ಆತ ಮಾಡಿದ್ದ ಪ್ರಮಾದ. ಎರಡು ತಿಂಗಳ ಹಿಂದೆ ಫೇಸ್ ಬುಕ್ ನಲ್ಲಿ ಈತ ತುಳುನಾಡಿನ ಕೊರಗಜ್ಜನ ಬಗ್ಗೆ ಅವಮಾನಕರವಾಗಿ ಟೀಕಿಸಿದ್ದ. ಯಾವಾಗ ಈತನ ತಾಯಿಗೆ ಮತ್ತು ಇವನಿಗೂ ಅನಾರೋಗ್ಯ ಶುರುವಾಯಿತೋ ದೇವರಿಗೆ ಬಂದು ನಮಸ್ಕಾರ ಹಾಕಿ ತಪ್ಪಿಗೆ ಕ್ಷಮೆ ಯಾಚಿಸಿದ್ದಾನೆ.

    ತುಳುನಾಡಿನ ಕೊರಗಜ್ಜನ ಬಗ್ಗೆ, ದೈವಾರಾಧನೆಯ ಬಗ್ಗೆಯೇ ತುಚ್ಛವಾಗಿ ನಿಂದನೆ ಮಾಡಿದ್ದ. ಈ ಬಗ್ಗೆ ಫೇಸ್ ಬುಕ್ ನಲ್ಲಿ ಕೆಲವರು ಖಾರವಾಗಿಯೇ ಪ್ರತಿಕ್ರಿಯಿಸಿದ್ದರು. ಮಂಗಳೂರಿನ ಹಿಂದು ಹಿತರಕ್ಷಣಾ ಸಮಿತಿ ಎನ್ನುವ ಸಂಘಟನೆ ಮನೋಜ್ ವಿರುದ್ಧ ಬಂದರು ಠಾಣೆಯಲ್ಲಿ ದೂರು ಕೂಡ ದಾಖಲಿಸಿತ್ತು. ಆದ್ರೆ ಆತ ಯಾವುದಕ್ಕೂ ಕ್ಯಾರೇ ಎನ್ನದೇ ಸುಮ್ಮನಿದ್ದ. ಯಾವಾಗ ಮನೆಯವರೆಲ್ಲಾ ಅನಾರೋಗ್ಯಕ್ಕೆ ತುತ್ತಾದರೋ ಆಗ ಮನೋಜ್ ಪಂಡಿತ್ ಮನಸ್ಸು ಬದಲಾಯಿಸಿ ಹಿಂದು ಸಂಘಟನೆಯವರನ್ನು ಸಂಪರ್ಕಿಸಿದ್ದಾನೆ. ಬೇರೆ ಯಾರಿಗೂ ತಿಳಿಯದಂತೆ ಮಂಗಳೂರಿಗೆ ಆಗಮಿಸಿ ಕೊರಗಜ್ಜನಿಗೆ ಅಡ್ಡ ಬಿದ್ದು ತಪ್ಪೊಪ್ಪಿಕೊಂಡಿದ್ದಾನೆ.

  • ರೈಲು 20 ಸೆಕೆಂಡ್ ಬೇಗ ಹೊರಟಿದ್ದಕ್ಕೆ ಕ್ಷಮೆಯಾಚಿಸಿದ ಜಪಾನ್ ರೈಲ್ವೇ

    ರೈಲು 20 ಸೆಕೆಂಡ್ ಬೇಗ ಹೊರಟಿದ್ದಕ್ಕೆ ಕ್ಷಮೆಯಾಚಿಸಿದ ಜಪಾನ್ ರೈಲ್ವೇ

    ಟೋಕಿಯೋ: ಭಾರತದಲ್ಲಿ ರೈಲುಗಳು ಎಷ್ಟು ಸಮಯ ತಡವಾಗಿ ಬಂದರೂ, ಬೇಗ ಹೋದರೂ ಯಾರು ಆಶ್ಚರ್ಯಪಡುವುದಿಲ್ಲ. ಯಾರೊಬ್ಬರು ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ ಜಪಾನ್ ನಲ್ಲಿ ಸಮಯಪಾಲನೆ ಮತ್ತು ನಿಷ್ಠೆಗೆ ಸಾಕಷ್ಟು ಮಹತ್ವ ನೀಡುತ್ತದೆ ಎನ್ನುವ ಮಾತಿಗೆ ಪೂರಕ ಎಂಬಂತೆ ರೈಲೊಂದು ನಿಗದಿ ಪಡಿಸಿದ ಸಮಯಕ್ಕಿಂತ ಕೇವಲ 20 ಸೆಕೆಂಡ್ ಬೇಗ ಹೋಗಿದ್ದಕ್ಕೆ ಪ್ರಯಾಣಿಕರಲ್ಲಿ ಕ್ಷಮೆಯನ್ನು ಯಾಚಿಸಿದೆ.

    ಟೋಕಿಯೋ ಮತ್ತು ರಾಜಧಾನಿ ಉತ್ತರ ಉಪನಗರಗಳನ್ನು ಸಂಪರ್ಕಿಸುವ ಟ್ಸುಕುಬಾ ಎಕ್ಸ್ ಪ್ರೆಸ್ ರೈಲು ಮಿನಾಮಿ ನಾಗರೆಯಾಮಾ ನಿಲ್ದಾಣಕ್ಕೆ 9:44:40 ಸೆಕೆಂಡ್‍ಗೆ ಹೋಗಬೇಕಿತ್ತು. ಆದರೆ ಬದಲಿಗೆ 9:44:20 ಸೆಕೆಂಡ್‍ ಬೇಗ  ಹೋಗಿದೆ. ಇದರಿಂದ ಪ್ರಯಾಣಿಕರಿಗೆ ಉಂಟಾದ ತೊಂದರೆಗೆ ವಿಷಾದಿಸುತ್ತೇವೆ ಎಂದು ಟ್ಸುಕುಬಾ ಎಕ್ಸ್ ಪ್ರೆಸ್ ಕಂಪೆನಿ ಕ್ಷಮೆಯನ್ನು ಕೇಳಿದೆ.

    ರೈಲು ಬೇಗ ಹೋಗಿದ್ದಕ್ಕೆ ಪ್ರಯಾಣಿಕರಿಂದ ಯಾವುದೇ ರೀತಿಯ ದೂರು ದಾಖಲಾಗಿಲ್ಲ. ಅಷ್ಟೇ ಅಲ್ಲದೇ ರೈಲು ಬೇಗ ಹೋಗಿದ್ದರಿಂದ ಯಾರೊಬ್ಬ ಪ್ರಯಾಣಿಕರಿಗೂ ತೊಂದರೆಯಾಗಿಲ್ಲ. ಯಾರೂ ರೈಲನ್ನು ಮಿಸ್ ಮಾಡಿಕೊಂಡಿಲ್ಲ ಎಂದು ಸಂಸ್ಥೆ ಖಚಿತಪಡಿಸಿದೆ.

    ಶಿಂಕನ್ಸೇನ್ ಬುಲೆಟ್ ರೈಲು ಸೇರಿದಂತೆ ಜಪಾನ್ ರೈಲ್ವೆ ಸೇವೆಗಳು ಸಮಯ ಪಾಲನೆಯಿಂದ ವಿಶ್ವದಾದ್ಯಂತ ಮಾದರಿಯಾಗಿದೆ. ಇದರಿಂದಲೇ ಕೆಲವು ಸೆಕೆಂಡ್‍ಗಳು ಬೇಗ ಹೋದರೂ ರೈಲ್ವೇ ಸಂಸ್ಥೆ ಪ್ರಯಾಣಿಕರಲ್ಲಿ ಕ್ಷಮೆಯನ್ನು ಕೋರುತ್ತದೆ ಎಂದು ಸಂಸ್ಥೆ ತಿಳಿಸಿತ್ತು.

    ಈ ಮಾರ್ಗದಲ್ಲಿ ಅಧಿಕ ಸಂಖ್ಯೆಯ ಪ್ರಯಾಣಿಕರನ್ನು ಹೊಂದಿರುವುದರಿಂದ ಆ ಮಾರ್ಗದಲ್ಲಿ ಕೆಲವು ನಿಮಿಷಗಳಿಗೊಮ್ಮೆ ರೈಲುಗಳು ಚಲಿಸುತ್ತವೆ. ಒಂದು ವೇಳೆ ತುಂಬಾ ವಿಳಂಬ ಮಾಡಿದರೆ ಜನಸಂದಣಿಯನ್ನು ನಿಯಂತ್ರಿಸಲು ಕಷ್ಟಕರವಾಗುತ್ತದೆ.

    ಜಪಾನ್ ರೈಲು ಪ್ರಯಾಣಿಕರ ಸೇವೆಗೆ ಹೆಸರುವಾಸಿಯಾಗಿದೆ. ಆದರೂ ರೈಲ್ವೇ ಸಂಸ್ಥೆ ಬೇಗ ಹೋಗಿದ್ದಕ್ಕೆ ಕ್ಷಮೆಯಾಚಿಸಿದರೂ ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧ ಚರ್ಚೆಗಳು ನಡೆಯುತ್ತಿದ್ದು, ಕೆಲವರು ವ್ಯಂಗ್ಯವಾಗಿ ಟೀಕಿಸಿ ಕಮೆಂಟ್ ಮಾಡುತ್ತಿದ್ದಾರೆ.

    https://twitter.com/Lamdba/status/931303634733846530

    https://twitter.com/sambitlnt/status/931400964858245120


  • ಆಸೀಸ್ ಆಟಗಾರರ ಮೇಲೆ ಕಲ್ಲುತೂರಾಟ: ಕ್ಷಮೆಯಾಚಿಸಿದ ಗುವಾಹಟಿ ಅಭಿಮಾನಿಗಳು

    ಆಸೀಸ್ ಆಟಗಾರರ ಮೇಲೆ ಕಲ್ಲುತೂರಾಟ: ಕ್ಷಮೆಯಾಚಿಸಿದ ಗುವಾಹಟಿ ಅಭಿಮಾನಿಗಳು

    ಗುವಾಹಟಿ: ಭಾರತ- ಆಸ್ಟ್ರೇಲಿಯಾ ನಡುವಿನ ಎರಡನೇ ಟಿ-20 ಕ್ರಿಕೆಟ್ ಪಂದ್ಯದ ಮುಕ್ತಾಯದ ನಂತರ ಆಸ್ಟ್ರೇಲಿಯಾ ಆಟಗಾರರು ತೆರಳುತ್ತಿದ್ದ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಗುವಾಹಟಿಯ ಅಭಿಮಾನಿಗಳು ಬೋರ್ಡ್ ಗಳನ್ನು ಹಿಡಿದು ಕೊಂಡು ಕ್ಷಮೆಯಾಚಿಸಿದ್ದಾರೆ.

    ಎರಡನೇ ಟಿ20 ಪಂದ್ಯದಲ್ಲಿ ಭಾರತದ ವಿರುದ್ಧದ ಗೆಲುವು ಸಾಧಿಸಿದ ಸಂಭ್ರಮದಲ್ಲಿ ಹೋಟೆಲ್‍ಗೆ ತೆರಳುತ್ತಿದ್ದ ಆಸ್ಟ್ರೇಲಿಯಾ ಕ್ರಿಕೆಟಿಗರ ಬಸ್ ಮೇಲೆ ಮಂಗಳವಾರ ರಾತ್ರಿ ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದರು. ಇದರ ಪರಿಣಾಮ ಬಸ್‍ನ ಕಿಟಕಿ ಗ್ಲಾಸುಗಳು ಪುಡಿಪುಡಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಆಟಗಾರನಿಗೂ ಯಾವುದೇ ರೀತಿಯ ಅಪಾಯವಾಗಿಲಿಲ್ಲ.

    ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಆಸ್ಟ್ರೇಲಿಯಾ ಆಟಗಾರರು ತಂಗಿದ್ದ ಹೋಟೆಲ್ ಬಳಿ ಕ್ಷಮೆಯಾಚಿಸುವ ಬ್ರೋರ್ಡ್‍ಗಳನನ್ನು ಹಿಡಿದು ನಿಂತಿರುವುದು ಕಂಡು ಬಂತು. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

    ಕಲ್ಲು ತೂರಾಟದಿಂದ ನಮಗೇ ಬಹಳ ಅಘಾತ ಮತ್ತು ನಿರಾಸೆ ಉಂಟಾಗಿದೆ ಎಂದು ಆಸ್ಟ್ರೇಲಿಯಾ ಲೆಗ್ ಸ್ಪಿನ್ನರ್ ಆಡಮ್ ಜಂಪಾ ಮತ್ತು ಫಿಂಚ್ ಟ್ವೀಟ್ ಮಾಡಿದ್ದರು.

    ಕಳೆದ ಬಾರಿ ಆಸ್ಟ್ರೇಲಿಯಾ ತಂಡ ಬಾಂಗ್ಲಾದೇಶ ಪ್ರವಾಸ ಕೈಗೊಂಡಿದ್ದ ವೇಳೆ ಇದೇ ಮಾದರಿ ದಾಳಿಗೆ ತುತ್ತಾಗಿತ್ತು. ಬಾಂಗ್ಲಾದೇಶ ವಿರುದ್ಧ ಚಿತ್ತಗಾಂಗ್‍ನಲ್ಲಿ ನಡೆದ ಟೆಸ್ಟ್ ಪಂದ್ಯ ಮುಗಿಸಿ ಹೋಟೆಲ್‍ಗೆ ತೆರಳುತ್ತಿದ್ದ ಆಸಿಸ್ ತಂಡದ ವಾಹನದ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು.

    https://twitter.com/Atheist_mrigen/status/918113967062450176?