Tag: ಖಜಕಿಸ್ತಾನ

  • ಕಜಕಿಸ್ತಾನದಿಂದ ಬೆದರಿಕೆ ಕರೆ – ಪೊಲೀಸರಿಗೆ ದೂರು ನೀಡಿದ ಈಶ್ವರಪ್ಪ

    ಕಜಕಿಸ್ತಾನದಿಂದ ಬೆದರಿಕೆ ಕರೆ – ಪೊಲೀಸರಿಗೆ ದೂರು ನೀಡಿದ ಈಶ್ವರಪ್ಪ

    ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa) ಅವರಿಗೆ ಮತ್ತೆ ಬೆದರಿಕೆ ಕರೆ ಬಂದ ಬೆನ್ನಲ್ಲೇ ಶಿವಮೊಗ್ಗ (Shivamogga) ಎಸ್‍ಪಿಗೆ ದೂರು ನೀಡಿದ್ದಾರೆ.

    ಹಿಂದುತ್ವವನ್ನು ಪ್ರತಿಪಾದನೆ ಮಾಡುತ್ತಾ ಬರುತ್ತಿರುವ ಕೆ.ಎಸ್. ಈಶ್ವರಪ್ಪ ಅವರಿಗೆ ಈ ಹಿಂದೆಯೂ ಹಲವಾರು ಬಾರಿ ಬೆದರಿಕೆ ಕರೆಗಳು ಬಂದಿದ್ದು, ಇದೀಗ ನಿನ್ನೆ ತಡರಾತ್ರಿ ಮತ್ತೊಮ್ಮೆ ದೂರದ ಕಜಕಿಸ್ತಾನದಿಂದ ಮಿಸ್ಡ್ ಕಾಲ್ ಬೆದರಿಕೆ ಕರೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ಎಸ್.ಪಿ.ಗೆ ದೂರು ನೀಡಿದ್ದಾರೆ. ದೂರಿನಲ್ಲಿ ತಮಗೆ ರಕ್ಷಣೆ ನೀಡುವ ಜೊತೆಗೆ ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೇ ತಾವು ಹಿಂದುತ್ವದ ಪ್ರತಿಪಾದಕರಾಗಿದ್ದು, ಇಂತಹ ಬೆದರಿಕೆಗಳಿಗೆಲ್ಲ ಬಗ್ಗಲ್ಲ ಅಂತಾ ಮತ್ತೊಮ್ಮೆ ಸಂದೇಶ ರವಾನಿಸಿದ್ದಾರೆ.

    ಹಿಂದುತ್ವದ ಪ್ರತಿಪಾದಕ, ಬಿಜೆಪಿಯ (BJP) ನಿಷ್ಠಾವಂತ ನಾಯಕ, ಬಿಜೆಪಿ ಸರ್ಕಾರವಿದ್ದಂತಹ ಸಂದರ್ಭದಲ್ಲಿ, ಹಿಂದೂ ಹರ್ಷನ ಕಗ್ಗೊಲೆ, ಗೋಹತ್ಯೆ ನಿಷೇಧ ಕಾಯ್ದೆ ಸೇರಿದಂತೆ, ಹಲವಾರು ವಿಚಾರಗಳ ಸಂದರ್ಭದಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ಈಗಲೂ ಕೂಡ ಹಿಂದುತ್ವದ ಅಜೆಂಡಾ ಹಿನ್ನೆಲೆ ಹೊಂದಿರುವ ಕೆ.ಎಸ್. ಈಶ್ವರಪ್ಪ ಅವರಿಗೆ ಮತ್ತೊಮ್ಮೆ ಬೆದರಿಕೆ ಕರೆ ಬಂದಿದೆ. ಅದು ಕೂಡ ದೂರದ ಖಜಕಿಸ್ತಾನ ದೇಶದಿಂದ ಬೆದರಿಕೆ ಕರೆ ಬಂದಿದೆ.

    ನಿನ್ನೆ ಭಾನುವಾರ ರಾತ್ರಿ ಸುಮಾರು 12.30 ಗಂಟೆಯ ಸುಮಾರಿಗೆ, ನನಗೆ ಕಜಕಿಸ್ತಾನ ದೇಶದಿಂದ ಬೆದರಿಕೆ ಕರೆ ಬಂದಿದೆ ಎಂದು ದೂರಿದ್ದಾರೆ. ನಾನು ಮಲಗಿದ್ದ ವೇಳೆ ಮೊಬೈಲ್ ಸೈಲೆಂಟ್ ಮಾಡಿಟ್ಟಿದ್ದೆ. ಈ ವೇಳೆ ನನ್ನ ವಾಟ್ಸಪ್‍ಗೆ ಮಿಸ್ಡ್ ಕಾಲ್ ಬಂದಿದ್ದು, ಬೆಳಿಗ್ಗೆ ಎದ್ದು ಈ ಕರೆ ನೋಡಿದಾಗ ಇದು ಕಜಾಕಿಸ್ತಾನದ್ದೆಂದು ತಿಳಿದುಬಂದಿದೆ. ಕಜಕಿಸ್ತಾನದಿಂದ ಬಂದಿರುವ ಕರೆ ಎಂದರೆ, ಅದು ನನಗೆ ಬೆದರಿಕೆ ಒಡ್ಡಲೆಂದೇ ಬಂದಿದ್ದು, ಈ ಸಂಬಂಧ ಶಿವಮೊಗ್ಗ ಜಿಲ್ಲಾ ಎಸ್.ಪಿ.ಗೆ ಈಶ್ವರಪ್ಪ ದೂರು ನೀಡಿದ್ದಾರೆ. ಇದನ್ನೂ ಓದಿ: ಇಲ್ಲದ ಕಾರ್ಖಾನೆಯಿಂದ ಮಾಲಿನ್ಯ ಆರೋಪ – ಅರ್ಜಿದಾರನಿಗೆ 25 ಸಾವಿರ ದಂಡ ವಿಧಿಸಿದ ಕೋರ್ಟ್

    ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಜಯೇಶ್ ಎಂಬ ಆರೋಪಿಯ ಡೈರಿಯಲ್ಲಿ ಈಶ್ವರಪ್ಪ ಅವರ ಹೆಸರು ಆತನ ಡೈರಿಯಲ್ಲಿ ಇದ್ದದ್ದು ಕಳೆದೊಂದು ತಿಂಗಳ ಹಿಂದೆ ಪತ್ತೆಯಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿಯವರಿಗೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ ಜಯೇಶ್‍ನನ್ನು ಬಂಧಿಸಿದ್ದ ವೇಳೆ ನನಗೂ ಕೂಡ ಆ ಆರೋಪಿಯಿಂದ ಬೆದರಿಕೆ ಇತ್ತೆಂದು ಎನ್.ಐ.ಎ. ಅಧಿಕಾರಿಗಳು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ತಡರಾತ್ರಿ ಬೆದರಿಕೆ ಕರೆ ಬಂದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಶಿವಮೊಗ್ಗ ಎಸ್.ಪಿ. ದೂರು ಸ್ವೀಕರಿಸಿದ್ದು, ಈ ಸಂಬಂಧ ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದು, ತನಿಖೆ ನಡೆಸುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಆಯತಪ್ಪಿ ಕೆರೆಗೆ ಬಿದ್ದು 4 ವರ್ಷದ ಬಾಲಕ ಸಾವು

  • ವಿಶ್ವ ಪವರ್ ಲಿಫ್ಟಿಂಗ್‍ನಲ್ಲಿ ಭಾರತಕ್ಕೆ ಪದಕ ತಂದು ಕೊಟ್ಟ ಉಡುಪಿಯ ಅಕ್ಷತಾ

    ವಿಶ್ವ ಪವರ್ ಲಿಫ್ಟಿಂಗ್‍ನಲ್ಲಿ ಭಾರತಕ್ಕೆ ಪದಕ ತಂದು ಕೊಟ್ಟ ಉಡುಪಿಯ ಅಕ್ಷತಾ

    ಉಡುಪಿ: ಕಜಕಿಸ್ತಾನದಲ್ಲಿ ನಡೆದ ವಿಶ್ವ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್‍ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಲಭಿಸಿದೆ. ದೇಶವನ್ನು ಪ್ರತಿನಿಧಿಸಿದ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಅಕ್ಷತಾ ಪೂಜಾರಿ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿ ದೇಶಕ್ಕೆ ಹೆಮ್ಮೆ ತಂದಿದ್ದಾರೆ.

    ಉಡುಪಿಯ ಅಕ್ಷತಾ ಪೂಜಾರಿ ಬೋಳ ಪವರ್ ಲಿಫ್ಟಿಂಗ್ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಈಗಾಗಲೇ ಹಲವು ಚಿನ್ನದ ಪದಕ ಗೆದ್ದಿದ್ದಾರೆ. ಕಳೆದ ಬಾರಿಯ ಏಕಲವ್ಯ ಪ್ರಶಸ್ತಿ ಸಹ ಪಡೆದುಕೊಂಡಿದ್ದಾರೆ. ಈ ವರ್ಷ ಕಜಕಿಸ್ತಾನದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ಶಿಪ್‍ನಲ್ಲಿ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಇದನ್ನೂ ಓದಿ: ಪತ್ನಿ ಜೊತೆ ಲಕ್ಕಿ ಕಾರಿನಲ್ಲಿ ಬಂದು ನಾಮಪತ್ರ ಸಲ್ಲಿಸಿದ ಹೊರಟ್ಟಿ

    ಅಕ್ಷತಾ ಅವರು ರಾಜ್ಯ ಮಟ್ಟದಲ್ಲಿ 10 ಚಿನ್ನ, 2 ಬೆಳ್ಳಿ ಪದಕಗಳೊಂದಿಗೆ 5 ಬಾರಿ ಸ್ಟ್ರಾಂಗ್ ವುಮನ್ ಪ್ರಶಸ್ತಿಗೆ ಭಾಜನರಾಗಿದ್ದರು. ರಾಷ್ಟ್ರಮಟ್ಟದಲ್ಲಿ 10 ಚಿನ್ನ, 2 ಬೆಳ್ಳಿ ಪದಕಗಳೊಂದಿಗೆ 4 ಬಾರಿ ಸ್ಟ್ರಾಂಗ್ ವುಮನ್ ಪ್ರಶಸ್ತಿ ಗೆದ್ದಿದ್ದಾರೆ. ಏಷ್ಯಾ ಮಟ್ಟದಲ್ಲೂ 4 ಬಾರಿ ಚಿನ್ನ, ಕಾಮನ್ ವೆಲ್ತ್ ಕೂಟದಲ್ಲಿ 8 ಚಿನ್ನ, ವಿಶ್ವ ಮಟ್ಟದಲ್ಲಿ 2 ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

    ಏಕಾಂಗಿಯಾಗಿ ಬಾವಿ ತೋಡಿದ್ದ ಅಕ್ಷತಾ
    ಮಹಾಮಾರಿ ಕೊರೊನಾ ಬಂದ ಸಂದರ್ಭದಲ್ಲಿ ಇಡೀ ದೇಶ ಸ್ತಬ್ಧವಾಗಿತ್ತು. ಈ ಸಂದರ್ಭ ಜನ ಮನೆಯಿಂದಲೇ ಹೊರಗೆ ಬರುತ್ತಿರಲಿಲ್ಲ. ಆಗ ಅಕ್ಷತಾ ಪೂಜಾರಿ ಏಕಾಂಗಿಯಾಗಿ ತನ್ನ ಮನೆಯಲ್ಲಿ ಬಾವಿಯನ್ನು ತೋಡಿ ಸಾಧನೆ ಮಾಡಿದ್ದರು. ಇದನ್ನೂ ಓದಿ: 75 ಲಕ್ಷ ಲಂಚ ಕೊಟ್ಟಿದ್ದೇನೆ, ಬ್ಲೂಟೂತ್‍ನಲ್ಲಿ ಪರೀಕ್ಷೆ ಬರೆದಿದ್ದೇನೆ – ತನಿಖೆಗೆ ಡಿಜಿಗೆ ಪತ್ರ ಬರೆದ ಅಭ್ಯರ್ಥಿ