Tag: ಖರೀದಿ

  • 114 ಯುದ್ಧ ವಿಮಾನಗಳ ಖರೀದಿಗೆ ಸಿದ್ಧತೆ-ವಿಶ್ವದಲ್ಲೇ ಬೃಹತ್ ಡೀಲ್‍ಗೆ ಮುಂದಾದ ಭಾರತ

    114 ಯುದ್ಧ ವಿಮಾನಗಳ ಖರೀದಿಗೆ ಸಿದ್ಧತೆ-ವಿಶ್ವದಲ್ಲೇ ಬೃಹತ್ ಡೀಲ್‍ಗೆ ಮುಂದಾದ ಭಾರತ

    ನವದೆಹಲಿ: ಯುದ್ಧ ವಿಮಾನ ಖರೀದಿಸುವ ನಿಟ್ಟಿನಲ್ಲಿ ಭಾರತ ಮಹತ್ವದ ಹೆಜ್ಜೆಯನ್ನಿಟ್ಟಿದ್ದು, 114 ಯುದ್ಧ ವಿಮಾನಗಳ ಖರೀದಿಗೆ ಮುಂದಾಗಿದೆ. ಈ ಮೂಲಕ ವಿಶ್ವದಲ್ಲೇ ಅತಿ ದೊಡ್ಡ ಡೀಲ್‍ಗೆ ಭಾರತ ಮುಂದಾಗಿದೆ.

    114 ವಿಮಾನಗಳನ್ನು ಖರೀದಿಸುವ ಕುರಿತು ಈಗಾಗಲೇ ಬಿಡ್ಡಿಂಗ್ ಆಹ್ವಾನಿಸಲು ಸಿದ್ಧತೆ ಮಾಡಿಕೊಂಡಿದ್ದು, ಇದು ವಿಶ್ವದಲ್ಲೇ ಬೃಹತ್ ಡೀಲ್ ಆಗಿದೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಹಳೆಯ ಯುದ್ಧ ವಿಮಾನಗಳನ್ನು ಬದಲಿಸುವುದು ಹಾಗೂ ಹೊಸದಾಗಿ ಹೆಚ್ಚು ವಿಮಾನಗಳನ್ನು ಖರೀದಿಸುವ ಮೂಲಕ ದೇಶದ ಸಶಸ್ತ್ರ ಪಡೆಗಳ ಸಾಮಥ್ರ್ಯವನ್ನು ಹೆಚ್ಚಿಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

    ಈ ಬೃಹತ್ ಡೀಲ್‍ನ ಬೆಲೆ ಸುಮಾರು 15 ಬಿಲಿಯನ್ ಯುಎಸ್ ಡಾಲರ್‍ಗಿಂತ ಹೆಚ್ಚಾಗಿದೆ. ಇದಕ್ಕಾಗಿ ಅಧಿಕಾರಿಗಳು ವಿವಿಧ ತಯಾರಿಸಿ ನಡೆಸಿದ್ದಾರೆ. ಬೋಯಿಂಗ್ ಕಂ., ಲಾಕ್‍ಹೀಡ್ ಮಾರ್ಟೀನ್ ಕಾರ್ಪೋರೇಷನ್ ಹಾಗೂ ಸ್ವೀಡನ್‍ನ ಸಾಬ್ ಎಬಿ ಸೇರಿದಂತೆ ವಿವಿಧ ಪ್ರಮುಖ ಯುದ್ಧ ನೌಕೆಗಳ ಉತ್ಪಾದಕರನ್ನು ರಕ್ಷಣಾ ಅಧಿಕಾರಿಗಳು ಸೆಳೆಯುತ್ತಿದ್ದಾರೆ. ಇವುಗಳಲ್ಲಿ ಶೇ.85ರಷ್ಟು ಉತ್ಪಾದನೆ ಭಾರತದಲ್ಲೇ ಆಗಬೇಕು ಎಂದು ಕಳೆದ ವರ್ಷವೇ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

    ದೇಶದ ರಕ್ಷಣಾ ಪಡೆಗಳನ್ನು ಅಧುನಿಕರಣಗೊಳಿಸುವುದು ಪ್ರಧಾನಿ ಮೋದಿ ಅವರಿಗೆ ಸವಾಲಾಗಿ ಪರಿಣಮಿಸಿದ್ದು, ನೆರೆಯ ಚೀನಾ ಹಾಗೂ ಪಾಕಿಸ್ತಾನಗಳಿಂದ ಬೆದರಿಕೆ ಎದುರಾದರೂ ಮೊದಲ ಅವಧಿಯಲ್ಲಿ ಯಾವುದೇ ಹೊಸ ಪ್ರಮುಖ ಶಸ್ತ್ರಾಸ್ತ್ರ ಒಪ್ಪಂದಗಳಿಗೆ ಸಹಿ ಹಾಕಲಿಲ್ಲ. ಇತ್ತೀಚೆಗೆ ಸೋವಿಯತ್ ನಿರ್ಮಿತ ಭಾರತ ಹಳೆಯ ಮಿಗ್-21 ಯುದ್ಧ ವಿಮಾನ ಪಾಕಿಸ್ತಾನದ ಅಧುನಿಕ ಎಫ್-16 ಯುದ್ಧ ವಿಮಾನವನ್ನೇ ಹೊಡೆದುರುಳಿಸಿತ್ತು.

    ಖರೀಸುವ ಪ್ರಕ್ರಿಯೆ ಪ್ರಾರಂಭ
    ವಿವಿಧ ಯುದ್ಧ ವಿಮಾನಗಳ ಉತ್ಪಾದಕರಿಂದ ಬಿಡ್ಡಿಂಗ್ ಆಹ್ವಾನಿಸಲು ಈಗಾಗಲೇ ಭಾರತೀಯ ವಾಯು ಸೇನೆಯ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಕಿರಿಯ ರಕ್ಷಣಾ ಸಚಿವ ಶ್ರೀಪಾದ್ ನಾಯಕ್ ಅವರು ಸಂಸತ್‍ನಲ್ಲಿ ಪ್ರಸ್ತಾಪಿಸಿದ್ದು, ಟ್ಯಾಂಕ್‍ಗಳು, ಶಸ್ತ್ರಸಜ್ಜಿತ ವಾಹನಗಳನ್ನು ಖರೀದಿಸಲು ದಾಖಲೆಗಳನ್ನು ಸಿದ್ಧಪಡಿಸುತ್ತಿದ್ದು, ವಿದೇಶಿ ಹಡಗು ನಿರ್ಮಾಣ ಮಾಡುವವರಿಂದ ಭಾರತದಲ್ಲಿ ಜಲಾಂತರ್ಗಾಮಿ ನೌಕೆಗಳನ್ನು ತಯಾರಿಸಲು ಕೇಳಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

    ಹಿಂದೂ ಮಹಾಸಾಗರ ಪ್ರದೇಶದಲ್ಲಿ ಕಡಲ ಗಡಿಯ ಭದ್ರತೆ ಹೆಚ್ಚಿಸಿಕೊಳ್ಳುವ ದೃಷ್ಟಿಯಿಂದ ಭಾರತ ನೌಕಾಪಡೆ ಹಾಗೂ ಕರಾವಳಿ ಕಾವಲುಗಾರರಿಗೆ ಯುದ್ಧ ನೌಕೆಗಳು ಹಾಗೂ ಹಡಗುಗಳನ್ನು ಖರೀದಿಸಲು ಬಿಡ್ ಕರೆಯಲಾಗಿದೆ. 150(2.2ಬಿಲಿಯನ್ ಡಾಲರ್) ಬಿಲಿಯನ್ ಮೌಲ್ಯದ 6 ಕ್ಷಿಪಣಿ ಯುದ್ಧ ನೌಕೆಗಳು ಹಾಗೂ ಇತರ ಸಣ್ಣ ಹಡಗುಗಳ ನಿರ್ಮಾಣಕ್ಕೆ ಮುಂದಾಗಿದೆ. ಈ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಪ್ರಧಾನಿ ಮೋದಿ ಆಡಳಿತ ಸೋಮವಾರ 7 ಶಿಪ್‍ಯಾರ್ಡ್ ಗಳಿಗೆ ತಿಳಿಸಿದೆ ಎಂದು ನಾಯಕ್ ತಿಳಿದ್ದಾರೆ.

    ಭಾರತೀಯ ವಾಯು ಸೇನೆ ಹಾಗೂ ನೌಕಾಪಡೆಗೆ ಒಟ್ಟು 400 ಸಿಂಗಲ್ ಹಾಗೂ ಡಬಲ್ ಎಂಜಿನ್ ಯುದ್ಧ ವಿಮಾನಗಳ ಅಗತ್ಯವಿದೆ ಎಂದು ಸರ್ಕಾರ ತಿಳಿಸಿದೆ.

    ಬೋಯಿಂಗ್‍ಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಡೆಸುವ ಹಿಂದುಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್(ಎಚ್‍ಎಎಲ್) ಹಾಗೂ ಮಹೀಂದ್ರಾ ಡಿಫೆನ್ಸ್ ಸಿಸ್ಟಮ್ಸ್ ಲಿ., ಫೈಟರ್ ಜೆಟ್‍ಗಳ ಖರೀದಿಗೆ ಎಫ್/ಎ-18, ಲಾಕ್‍ಹೀಡ್ ತನ್ನ ಎಫ್-21 ಜೆಟ್‍ಗಳಿಗಾಗಿ ಟಾಟಾ ಗ್ರೂಪ್‍ನೊಂದಿಗೆ ಜಂಟಿಯಾಗಿ ಬಿಡ್ ಮಾಡಲಿದೆ. ಸಾಬ್ ತನ್ನ ಗ್ರಪೆನ್ ಜೆಟ್‍ಗಳನ್ನು ತಯಾರಿಸಲು ಗೌತಮ್ ಅದಾನಿಯೊಂದಿಗೆ ಕೈ ಜೋಡಿಸಲಿದೆ.

    2015ರಲ್ಲಿ 11 ಬಿಲಿಯನ್ ಯುಎಸ್ ಡಾಲರ್ ಮೌಲ್ಯದ 126 ರಫೇಲ್ ಯುದ್ಧ ವಿಮಾನಗಳನ್ನು ಡಸಾಲ್ಟ್ ಏವಿಯೇಷನ್‍ನೊಂದಿಗಿನ ಆದೇಶವನ್ನು ರದ್ದುಗೊಳಿಸಿದ ನಂತರ ಮತ್ತೆ ರಫೇಲ್ ಖರೀದಿಸಲು ಒಂದು ದಶಕವೇ ಬೇಕಾಯಿತು. ಕಳೆದ ಬಾರಿಯ ಮೋದಿ ಸರ್ಕಾರದ ಆಡಳಿತಾವಧಿಯಲ್ಲಿ 36 ಜೆಟ್‍ಗಳನ್ನು ಪ್ರತ್ಯೇಕವಾಗಿ ಖರೀದಿಸಲಾಯಿತು. ಆದರೆ, ಈ ಬಾರಿಯ ಟೆಂಡರ್‍ನಲ್ಲಿ ಆಯ್ಕೆಯಾದವರು ಒಪ್ಪಂದ ಮಾಡಿಕೊಂಡ ಮೂರು ವರ್ಷಗಳಲ್ಲಿ ಮೊದಲ ಜೆಟ್‍ನಲ್ಲಿ ಹಸ್ತಾಂತರಿಸಬೇಕು ಎಂಬ ನಿಯಮವನ್ನು ಜಾರಿಗೆ ತರಲಾಗಿದೆ.

  • ದುಬಾರಿ ಬೆಲೆಯ ಡ್ರೀಮ್ ಬೈಕ್ ಖರೀದಿಸಿದ ಕ್ರೇಜಿಸ್ಟಾರ್ ಪುತ್ರ

    ದುಬಾರಿ ಬೆಲೆಯ ಡ್ರೀಮ್ ಬೈಕ್ ಖರೀದಿಸಿದ ಕ್ರೇಜಿಸ್ಟಾರ್ ಪುತ್ರ

    ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಇತ್ತೀಚೆಗಷ್ಟೆ ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡಿದ್ದು, ಮನೆಗೆ ಹೊಸ ಅತಿಥಿಯಾಗಿ ಅಳಿಯನನ್ನು ಆಗಮಿಸಿಕೊಂಡಿದ್ದಾರೆ. ಇದೀಗ ರವಿಚಂದ್ರನ್ ಮನೆಗೆ ಮತ್ತೊಬ್ಬ ಅತಿಥಿಯನ್ನು ಬರ ಮಾಡಿಕೊಂಡಿದ್ದಾರೆ.

    ರವಿಚಂದ್ರನ್ ಅವರ ಮಗ ಮನೋರಂಜನ್ ಅವರು ತಾವು ಕನಸು ಕಂಡಿದ್ದ ದುಬಾರಿ ಡುಕಾಟಿ 969 ಬೈಕನ್ನು ಮಂಗಳವಾರ ಖರೀದಿಸಿದ್ದಾರೆ. ಬೈಕ್ ಖರೀಸಿದ ಸಂತಸವನ್ನು ಮನೋರಂಜನ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಜೊತೆ ತಮ್ಮ ಬೈಕ್ ವಿಡಿಯೋವೊಂದನ್ನು ಅಪ್ಲೋಡ್ ಮಾಡಿದ್ದಾರೆ.

    “ನಾನು ಶಾಲಾ ದಿನಗಳಿಂದ ಒಂದು ಸೂಪರ್ ಬೈಕ್ ಅಥವಾ ಬಿಗ್ ಬೈಕನ್ನು ರೈಡ್ ಮಾಡಬೇಕು ಮತ್ತು ಖರೀದಿಸಬೇಕೆಂಬ ಆಸೆಯಾಗಿತ್ತು. ಆದರೆ ಆಗಿನ ಕಾಲದಲ್ಲಿ ಅದನ್ನು ಕಾಣುವುದೇ ಅಪರೂಪವಾಗಿತ್ತು. ಇದೀಗ ನಮ್ಮ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಅದುವೇ ನನ್ನ ಕನಸಿನ ಬೈಕ್ ಡುಕಾಟಿ 969 ಪನಿಗಾಲೆ ಕಾರ್ಸ್ ” ಎಂದು ಮನೋರಂಜನ್ ಬರೆದುಕೊಂಡಿದ್ದಾರೆ.

    ಬೈಕ್ ವಿಶೇಷ:
    ಡುಕಾಟಿ 969 ಎರಡು ಮಾದರಿಯಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿದೆ. ಬೆಂಗಳೂರಿನ ಶೋರೋಂನಲ್ಲಿ ಪನಿಗಾಲೆ ಕಾರ್ಸ್ ಬೈಕಿಗೆ 15.30 ಲಕ್ಷ ರೂ. ದರ ಇದ್ದರೆ, ಪನಿಗಾಲೆ ಸ್ಟ್ಯಾಂಡರ್ಡ್ ಬೈಕಿಗೆ 14.21 ಲಕ್ಷ ರೂ. ದರವಿದೆ. 955 ಸಿಸಿ ಇರುವ ಬೈಕ್ ಡ್ಯುಯಲ್ ಚಾನೆಲ್ ಎಬಿಎಸ್ ಹೊಂದಿದ್ದು, ಪ್ರತಿ ಲೀಟರ್ ಪೆಟ್ರೋಲಿಗೆ 14 ಕಿಮೀ ಮೈಲೇಜ್ ನೀಡುತ್ತದೆ. ಆರ್‌ಟಿಒ, ವಿಮೆ ಎಲ್ಲ ಸೇರಿದಾಗ ಒಟ್ಟು ಪನಿಗಾಲೆ ಕಾರ್ಸ್ ಆನ್ ರೋಡ್ ದರ 18.44 ಲಕ್ಷ ರೂ. ಆಗುತ್ತದೆ ಎಂದು ಆಟೊಮೊಬೈಲ್ ಸೈಟ್‍ಗಳು ಮಾಹಿತಿ ನೀಡಿವೆ.

    ಸದ್ಯಕ್ಕೆ ಮನೋರಂಜನ್ ‘ಪ್ರಾರಂಭ’ ಹಾಗೂ ‘ಚಿಲ್ಲಂ’ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ.

    https://www.facebook.com/TheManoranjanRavichandran/videos/2539439772951491/

  • OLX ನಲ್ಲಿ ವಾಹನ ಖರೀದಿಸುವಾಗ ಎಚ್ಚರ..!

    OLX ನಲ್ಲಿ ವಾಹನ ಖರೀದಿಸುವಾಗ ಎಚ್ಚರ..!

    ಬೆಂಗಳೂರು: OLXನಲ್ಲಿ ವಾಹನ ಖರೀದಿಸುವಾಗ ಎಚ್ಚರವಾಗಿರಿ. ಯಾಕೆಂದರೆ ಇಲ್ಲೊಬ್ಬ ಭೂಪ ಸೈನಿಕನಂತೆ ವೇಷ ಹಾಕಿ ಜನರನ್ನು ಮೋಸ ಮಾಡುತ್ತಿದ್ದಾನೆ.

    ಸೈನಿಕ ಅಂತ ಹೇಳಿಕೊಂಡಿರುವ ವಿಕಾಸ್ ಪಟೇಲ್ ಎಂಬಾತ OLXನಲ್ಲಿ ಜನರಿಗೆ ಮೋಸ ಮಾಡಿದ್ದಾನೆ. ಬೆಂಗಳೂರಿನ ಆರ್ ಟಿಓ ಕಚೇರಿಯಲ್ಲಿ ರಿಜಿಸ್ಟರ್ ಆಗಿರುವ ಗಾಡಿಯನ್ನು OLXನಲ್ಲಿ ಸೇಲ್ ಮಾಡಿದ್ದು, ಈಗಾಗಲೇ ಸಾಕಷ್ಟು ವಾಹನಗಳನ್ನು OLXನಲ್ಲಿ ಸೇಲ್‍ಗಿಟ್ಟು ಜನರಿಗೆ ಟೋಪಿ ಹಾಕಿದ್ದಾನೆ.

    ಮೋಸ ಹೇಗೆ ಮಾಡುತ್ತಿದ್ದ;
    ಮೊದಲಿಗೆ ವಾಹನವನ್ನು OLX ನಲ್ಲಿ ಸೇಲ್‍ಗಿಡುತ್ತಾನೆ. ಇದನ್ನು ನೋಡಿದ ಗ್ರಾಹಕರು ಖರೀದಿ ಮಾಡಲು ಮುಂದಾಗುತ್ತಾರೆ. ಬಳಿಕ ನೀವು ಪೇಟಿಯಂ ಮೂಲಕ ಹಣ ಕಳುಹಿಸಿ, ನಾನು ಸೈನಿಕನಾಗಿರುವುದರಿಂದ ತುರ್ತು ಕೆಲಸದಲ್ಲಿದ್ದೇನೆ. ಟ್ರಾನ್ಸ್ ಪೋರ್ಟ್ ಮೂಲಕ ನಿಮಗೆ ವಾಹನ ಕಳಿಸುವೆ ಅಂತ ಹೇಳುತ್ತಾನೆ. ಅಷ್ಟೇ ಅಲ್ಲದೇ ಜನರನ್ನು ನಂಬಿಸಲು ತನ್ನ ನಕಲಿ ಆರ್ಮಿಕಾರ್ಡ್, ಫೋಟೋ, ಪಾನ್ ಕಾರ್ಡ್ ಜೊತೆಗೆ ಸೇನೆಯಲ್ಲಿರುವ ಫೋಟೋವನ್ನು ಕಳಿಸುತ್ತಾನೆ. ಯೋಧ ಯಾವತ್ತು ಮೋಸ ಮಾಡಲಾರ ಅಂತ ಅಂದುಕೊಂಡ ಜನ ಈತನಿಗೆ ಪೇಟಿಯಂ ಮೂಲಕ ಹಣ ಕಳಿಸುತ್ತಾರೆ. ಆದರೆ ಇತ್ತ ತನ್ನ ಖಾತೆಗೆ ಹಣ ಬರುತ್ತಿದ್ದಂತೆ ತನ್ನ ನಂಬರನ್ನು ಬದಲಾಯಿಸುತ್ತಿದ್ದನು.

    ಬೆಂಗಳೂರು ಮೂಲದವ ಅಂತ ಹೇಳಿಕೊಂಡಿರುವ ವಿಕಾಸ್, ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಕೆಲಸ ಮಾಡೋದಾಗಿ ಹೇಳಿ ಜನರಿಗೆ ಮೋಸ ಮಾಡಿದ್ದಾನೆ. ಈತ ಸೇಲ್‍ಗಿಟ್ಟಿರುವ ವಾಹನ ಬೆಂಗಳೂರು ಆರ್ ಟಿಓದಲ್ಲಿ ನೋಂದಾಣಿಯಾಗಿರುವಂತದ್ದು. ಈಗಾಗಲೇ ಗುರುಮೂರ್ತಿ ಹಾಗೂ ಫೈಜಲ್ ಸೇರಿದಂತೆ ಅನೇಕರು ಈತನನ್ನು ನಂಬಿ ಲಕ್ಷಾಂತರ ದುಡ್ಡು ಕಳೆದುಕೊಂಡಿದ್ದಾರೆ. ಸದ್ಯ ನಕಲಿ ಸೈನಿಕನ ವಿರುದ್ಧ ಸಾರಿಗೆ ಇಲಾಖೆಯಲ್ಲಿ ದೂರು ದಾಖಲಿಸಲು ನಿರ್ಧರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದರಾಮಯ್ಯಗೆ ಕಾರ್ ಗಿಫ್ಟ್ ಕೊಟ್ಟ ‘ಶಿಷ್ಯ’ ಭೈರತಿ ಸುರೇಶ್ – ಸಿದ್ದು ಉತ್ತರಾಧಿಕಾರಿ ಆಗ್ತಾರಾ?

    ಸಿದ್ದರಾಮಯ್ಯಗೆ ಕಾರ್ ಗಿಫ್ಟ್ ಕೊಟ್ಟ ‘ಶಿಷ್ಯ’ ಭೈರತಿ ಸುರೇಶ್ – ಸಿದ್ದು ಉತ್ತರಾಧಿಕಾರಿ ಆಗ್ತಾರಾ?

    ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಕೆಜೆ ಜಾರ್ಜ್ ಅವರಿಂದ ಭರ್ಜರಿ ಗಿಫ್ಟ್ ಲಭಿಸಿತ್ತು. ಆದಾದ ಬಳಿಕ ಸದ್ಯ ಸಿದ್ದರಾಮಯ್ಯ ಅವರ ರಾಜಕೀಯ ಶಿಷ್ಯರೆಂದೇ ಗುರುತಿಸಿಕೊಂಡಿರುವ ಹೆಬ್ಬಾಳ ಶಾಸಕ ಭೈರತಿ ಸುರೇಶ್ ಅವರು ಕೋಟಿ ರೂ. ಮೌಲ್ಯದ ಕಾರು ಉಡುಗೊರೆಯಾಗಿ ನೀಡಿದ್ದಾರೆ.

    ರಾಜಕೀಯದಲ್ಲಿ ತಮ್ಮ ಮಗನನ್ನು ಬೆಳೆಸುವ ಬದಲು ತಮ್ಮ ಶಿಷ್ಯಂದಿರಗೆ ಉತ್ತಮ ರಾಜಕೀಯ ಜೀವನ ರೂಪಿಸಲು ಸಿದ್ದರಾಮಯ್ಯ ಮುಂದಾಗಿದ್ದರು ಎಂಬ ಸುದ್ದಿ ಈ ಹಿಂದೆಯೇ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಅವರ ಶಿಷ್ಯರ ಪಟ್ಟಿಯಲ್ಲಿ ಗುರುತಿಸಿಕೊಂಡಿರುವ ಭೈರತಿ ಸುರೇಶ್ ಅವರು ಹೊಸ ಕಾರು ನೀಡಿದ್ದಾರೆ.

    ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಭೈರತಿ ಸುರೇಶ್ ಅವರು ವಿಧಾನ ಪರಿಷತ್ ಅಭ್ಯರ್ಥಿಯಾಗಿ ಸ್ವತಂತ್ರ್ಯವಾಗಿ ಸ್ಪಧಿಸಿದ್ರು. ಬಳಿಕ ಹೆಬ್ಬಾಳ ಕ್ಷೇತ್ರದಲ್ಲಿ ಗೆದ್ದು ಶಾಸಕ ಸ್ಥಾನ ಪಡೆದಿದ್ದರು. ಇದನ್ನೂ ಓದಿ: ಮಾಜಿ ಸಿಎಂ ಮನೆಗೆ ಬಂತು ಕೋಟಿ ಮೌಲ್ಯದ ಬೆಂಜ್ ಕಾರ್! –  ವಿಶೇಷತೆ ಏನು?

    ಮಾಜಿ ಸಿಎಂ ಸಿದ್ದರಾಮಯ್ಯ ನಂತರ ಕಾಂಗ್ರೆಸ್ ನಲ್ಲಿ ಅವರ ಉತ್ತರಾಧಿಕಾರಿ ಯಾರು ಎನ್ನುವ ಪ್ರಶ್ನೆಗೆ ಸಿದ್ದರಾಮಯ್ಯ ಅವರು ಈ ಹಿಂದೆಯೇ ಸಂದೇಶ ನೀಡಿದ್ದರು. ಸಾಮಾನ್ಯವಾಗಿ ತಂದೆ ಸಕ್ರಿಯ ರಾಜಕಾರಣದಲ್ಲಿದ್ದರೆ ಅವರ ಮಗ ಉತ್ತರಾಧಿಕಾರಿ ಎನ್ನುವ ಮಾತು ಪ್ರಚಲಿತದಲ್ಲಿದೆ. ಆದರೆ ಸಿಎಂ ತಮ್ಮ ಮಗನ ಬಗ್ಗೆ ಹೆಚ್ಚು ಒಲವು ತೋರಿಸದೇ ತಮ್ಮದೇ ಸಮುದಾಯ ಶಾಸಕರದ ಭೈರತಿ ಸುರೇಶ್ ಅವರನ್ನು ಸದ್ದಿಲ್ಲದೇ ಪ್ರಚಾರಕ್ಕೆ ತರಲು ಮುಂದಾಗಿದ್ದರು. ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಿದ್ದರಾಮಯ್ಯ ತಮ್ಮ ಮಗನಿಗೆ ಮಂತ್ರಿಗಿರಿ ಕೊಡಿಸುವಂತೆ ಒತ್ತಡ ಹೇರದೆ ಭೈರತಿ ಸುರೇಶ್ ಅವರ ಪರವಾಗಿ ಸಿದ್ದರಾಮಯ್ಯ ಹೆಚ್ಚಿನ ಒಲವು ತೋರಿದ್ದರು.

    ಪಕ್ಷದ ಕಷ್ಟಕಾಲದಲ್ಲಿ ಸಹಾಯಕ್ಕೆ ಬಂದ ಭೈರತಿ ಸುರೇಶ್ ರನ್ನು ಸಚಿವರನ್ನಾಗಿ ಮಾಡಲು ಸಿದ್ದರಾಮಯ್ಯ ಆಸಕ್ತಿ ಹೊಂದಿದ್ದರು. ಆದ್ದರಿಂದ ಅವರನ್ನೇ ಸಿದ್ದರಾಮಯ್ಯ ನಂತರದ ಉತ್ತರಾಧಿಕಾರಿ ಎಂದು ಹೇಳಲಾಗುತ್ತಿದೆ. ಇದು ಕಾಂಗ್ರೆಸ್ ಪಕ್ಷದಲ್ಲಿ ಇನ್ನುಳಿದ ಕುರುಬ ಸಮುದಾಯದ ನಾಯಕ ಅಸಮಾಧಾನಕ್ಕೂ ಕಾರಣವಾಗಿತ್ತು. ಪ್ರಮುಖವಾಗಿ ಹೆಚ್.ಎಂ.ರೇವಣ್ಣ, ಶಾಸಕರಾದ ಶಿವಳ್ಳಿ, ಎಂ.ಟಿ.ಬಿ.ನಾಗರಾಜ್ ಪಕ್ಷದಲ್ಲಿ ತಮ್ಮ ಅಸ್ತಿತ್ವದ ಬಗ್ಗೆ ಭಯ ಪಡುವಂತಾಗಿತ್ತು. ಈ ಕಾರಣಕ್ಕೆ ಸಿದ್ದರಾಮಯ್ಯನವರೇ ನಮ್ಮ ಪಾಲಿಗೆ ವಿಲನ್ ಆಗಿದ್ದು, ಮಂತ್ರಿ ಸ್ಥಾನಕ್ಕೆ ಸಿಎಂ ತಮ್ಮ ಪರವಾಗಿ ಮಾತನಾಡುತ್ತಿಲ್ಲ ಎಂದು ಕುರುಬ ಸಮಾಜದ ಶಾಸಕರು ತಮ್ಮ ಆಪ್ತರ ಜೊತೆ ಮಾತನಾಡಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭಿಸಿತ್ತು. ಇದನ್ನೂ ಓದಿ: ಸಿದ್ದರಾಮಯ್ಯಗೆ ಮತ್ತೆ ಸುತ್ತಿಕೊಂಡ `ವಾಚ್’ ಕಂಟಕ!

    ಯಾಕೆ ನೀವು ಭೈರತಿ ಬಗ್ಗೆ ಹೆಚ್ಚಿನ ಒಲವು ತೋರಿಸುತ್ತಿದ್ದೀರಿ ಎಂದು ಸಿದ್ದರಾಮಯ್ಯನವರನ್ನು ಕೇಳಿದ್ದಕ್ಕೆ ತಮ್ಮ ಆಪ್ತರ ಬಳಿ, ಭೈರತಿ ಸುರೇಶ್ ತಮ್ಮ ಸಾಮಥ್ರ್ಯದಿಂದಲೇ ಪರಿಷತ್ ಸದಸ್ಯರಾಗಿದ್ದಾರೆ. ಹೆಬ್ಬಾಳ ಉಪ ಚುನಾವಣೆಯಲ್ಲಿ ಟಿಕೆಟ್ ತಪ್ಪಿದರೂ ನಿಷ್ಟೆಯಿಂದಲೇ ಪಕ್ಷಕ್ಕಾಗಿ ದುಡಿದಿದ್ದಾರೆ. ಯಾವುದೇ ಅಪಸ್ವರ ಎತ್ತದೇ ಶಿಸ್ತಿನಿಂದ ಪಕ್ಷ ಕಟ್ಟಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಸಂಕಷ್ಟಕ್ಕೆ ಸಿಕ್ಕಾಗ ಅವರಿಗೆ ಎಲ್ಲಾ ರೀತಿಯ ನೆರವು ನೀಡಿದ್ದಾರೆ. ಸಮುದಾಯದ ಉಳಿದ ಶಾಸಕರುಗಳು ಅವರವರ ಗೆಲುವಿಗಷ್ಟೆ ಸೀಮಿತರಾದರು. ಕಷ್ಟದಲ್ಲಿದ್ದಾಗ ಯಾರೂ ನೆರವಿಗೂ ಬರಲಿಲ್ಲ ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ ಎನ್ನುವ ವಿಚಾರ ತಿಳಿದುಬಂದಿತ್ತು.

    ಇದೇ ಕಾರಣಕ್ಕೆ ಭೈರತಿ ಸುರೇಶ್ ಗೆ ಮಂತ್ರಿ ಸ್ಥಾನ ನೀಡಬೇಕು ಅಂತಾ ಸ್ವತಃ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಕೂಡಾ ಮಾಡಿದ್ದರು ಎನ್ನಲಾಗಿತ್ತು. ತಮ್ಮ ಪುತ್ರನಿಗಿಂತ ಹೆಚ್ಚು ಪ್ರೀತಿ ತೋರಿಸಿ ಭವಿಷ್ಯದ ಸಮುದಾಯದ ನಾಯಕನನ್ನಾಗಿಸುವ ಯತ್ನದಲ್ಲಿದ್ದಾರೆ ಎನ್ನುವ ಮಾತುಗಳು ಸಿದ್ದರಾಮಯ್ಯ ಆಪ್ತ ವಲಯದಲ್ಲೇ ಈಗ ಕೇಳಿ ಬಂದಿತ್ತು. ಸದ್ಯ ಬೈರತಿ ಸುರೇಶ್ ಅವರು ತಮ್ಮ ರಾಜಕೀಯ ಬೆಳವಣಿಗೆಗೆ ಕಾರಣರಾದ ಸಿದ್ದರಾಮಯ್ಯ ಅವರಿಗೆ ದುಬಾರಿ ಬೆಲೆಯ ಕಾರು ಗಿಫ್ಟ್ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾಜಿ ಸಿಎಂ ಮನೆಗೆ ಬಂತು ಕೋಟಿ ಮೌಲ್ಯದ ಬೆಂಜ್ ಕಾರ್!

    ಮಾಜಿ ಸಿಎಂ ಮನೆಗೆ ಬಂತು ಕೋಟಿ ಮೌಲ್ಯದ ಬೆಂಜ್ ಕಾರ್!

    ಬೆಂಗಳೂರು: ದೋಸ್ತಿ ಸರ್ಕಾರ ಸಂಕಷ್ಟದಲ್ಲಿರುವಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದುಬಾರಿ ಬೆಂಜ್ ಕಾರನ್ನು ಖರೀದಿಸಿದ್ದಾರೆ.

    ಸಿದ್ದರಾಮಯ್ಯ ಅವರು ಬರೋಬ್ಬರಿ 1.5 ಕೋಟಿ ಮೌಲ್ಯದ ಬೆಂಜ್ ಜಿಎಲ್ 350 ಕಾರನ್ನು ಖರೀದಿಸಿದ್ದಾರೆ. ಈ ಕಾರು ಶುಕ್ರವಾರವೇ ಅವರ ಮನೆಗೆ ಬಂದಿದ್ದು, ಈ ಕಾರನ್ನು ಸಿದ್ದರಾಮಯ್ಯ ಅವರೇ ತೆಗೆದುಕೊಂಡಿದ್ದಾರಾ ಅಥವಾ ಬೇರೆಯವರು ಗಿಫ್ಟ್ ಕೊಟ್ಟಿದ್ದಾರ ಎಂಬುದು ತಿಳಿದು ಬಂದಿಲ್ಲ. ಆದರೆ ಈ ಐಷಾರಾಮಿ ಕಾರನ್ನು ಸಿದ್ದರಾಮಯ್ಯ ಅವರು ಓಡಾಡಲು ಖರೀದಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯಗೆ ಮತ್ತೆ ಸುತ್ತಿಕೊಂಡ `ವಾಚ್’ ಕಂಟಕ!

    ಕಾರಿನ ವಿಶೇಷತೆ ಏನು?
    ಈ ಕಾರ್ ಐಷಾರಾಮಿಯಾಗಿದ್ದು, ವಿಮಾನದಲ್ಲಿ ಪ್ರಯಾಣ ಮಾಡುವಂತೆ ಹಾಯಾಗಿ ಕುಳಿತು ಸಂಚರಿಸಬಹುದು. ರಾತ್ರಿ ವೇಳೆ ಹೆಡ್‍ಲೈಟ್ ಆನ್ ಮಾಡಬೇಕಾಗಿಲ್ಲ. ಕತ್ತಲಾದ ತಕ್ಷಣವೇ ಸೆನ್ಸರ್ ತಂತ್ರಜ್ಞಾನದಿಂದಾಗಿ ಆಟೋಮ್ಯಾಟಿಕ್ ಆಗಿ ಹೆಡ್‍ಲೈಟ್ ಆನ್ ಆಗುತ್ತದೆ.

    ವಾಚ್, ಕನ್ನಡಕ ವಿವಾದ:
    ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಕುಮಾರಸ್ವಾಮಿ ಅವರು, ನಿಮ್ಮ ಸಿಎಂ ಸಮಾಜವಾದಿಯಲ್ಲ ಅವರು ಮಜಾವಾದಿ. ದುಬಾರಿ ಬೆಲೆಯ ವಾಚು, ಗ್ಲಾಸ್ ಗಳನ್ನು ಧರಿಸುತ್ತಾರೆ. 70 ಲಕ್ಷ ರೂ. ಮೌಲ್ಯದ ವಾಚ್, 10 ಲಕ್ಷ ರೂ. ಮೌಲ್ಯದ ಗ್ಲಾಸ್ ಧರಿಸುತ್ತಾರೆ ಎಂದು ಆರೋಪಿಸಿದ್ದರು. ವಾಚ್ ಪ್ರಕರಣ ರಾಜಕೀಯ ವಲಯದಲ್ಲಿ ತೀವ್ರ ವಿವಾದಕ್ಕೆ ಒಳಗಾಗುತ್ತಿದ್ದಂತೆ ಸಿದ್ದರಾಮಯ್ಯ ವಾಚ್ ಅನ್ನು ಸರ್ಕಾರದ ವಶಕ್ಕೆ ನೀಡುವ ಮೂಲಕ ಎಲ್ಲಾ ಗೊಂದಲಗಳಿಗೆ ಅಂತ್ಯ ಹಾಡಿದ್ದರು. ವಿವಾದ ಅಂತ್ಯವಾಗಿದ್ದರೂ ಈ ವಾಚ್ ಪ್ರಕರಣ ಸಿದ್ದರಾಮಯ್ಯ ಅವರ ಇಮೇಜ್‍ಗೆ ಸ್ವಲ್ಪ ಹೊಡೆತ ನೀಡಿತ್ತು. ವಿಧಾನಸಭಾ ಚುನಾವಣೆಯಲ್ಲಿ ಎಚ್‍ಡಿಕೆ, ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರು ಈ ವಿಚಾರವನ್ನು ಪ್ರಸ್ತಾಪ ಮಾಡುತ್ತಲೇ ಟೀಕೆ ಮಾಡುತ್ತಿದ್ದರು.

    ಜಾರ್ಜ್ ಕಾರಲ್ಲಿ ಸಂಚಾರ:
    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯುತ್ತಿದ್ದಂತೆ ಇನ್ನೋವಾ ಕಾರಿನಲ್ಲಿ ಓಡಾಟ ಮಾಡುತ್ತಿದ್ದರು. ಇವರ ಸ್ಥಿತಿಯನ್ನು ನೋಡಿ ಕುಚುಕು ಗೆಳೆಯ ಮಾಜಿ ಬೆಂಗಳೂರು ನಗರಾಭಿವೃದ್ಧಿ ಸಚಿವ, ಹಾಲಿ ಐಟಿ ಬಿಟಿ ಸಚಿವ ಕೆಜೆ ಜಾರ್ಜ್ ದುಬಾರಿ ಲ್ಯಾಂಡ್ ಕ್ರೂಸರ್ ಪ್ರಾಡೋ ಕಾರನ್ನು ಗಿಫ್ಟ್ ನೀಡಿದ್ದರು. ಲ್ಯಾಂಡ್ ಕ್ರೂಸರ್ ಪ್ರಾಡೋ ಕಾರಿಗೆ ಒಂದು ಕೋಟಿ ರೂ. ಬೆಲೆಯಿದೆ. ಕಾರು ಅಲ್ಲದೇ ಒಂದು ವರ್ಷಕ್ಕೆ ಸಾಕಾಗುವಷ್ಟು ಡೀಸೆಲ್ ಕೂಪನ್ ಕೂಡ ಜಾರ್ಜ್ ನೀಡಿದ್ದಾರೆ.

    ಸಿದ್ದರಾಮಯ್ಯನವರನ್ನು ಮನೆಗೆ ಕರೆದು ಉಪಚಾರ ಮಾಡಿದ ಜಾರ್ಜ್, ಇನ್ನು ಮುಂದೆ ನೀವು ಈ ಇನ್ನೋವಾ ಕಾರಲ್ಲಿ ಓಡಾಡಬೇಡಿ. ನಿಮಗಾಗಿ ಒಂದು ಹೊಸ ಕಾರು ಖರೀದಿಸಿದ್ದೇನೆ. ಇದನ್ನು ತೆಗೆದುಕೊಳ್ಳಿ. ಈ ಹೊಸ ಕಾರಲ್ಲಿ ನೀವು ಓಡಾಡಿ ಎಂದು ಹೇಳಿ ಪ್ರಾಡೋ ಕಾರಿನ ಕೀ ಕೊಟ್ಟಿದ್ದರು. ಈ ವೇಳೆ ಸಿದ್ದರಾಮಯ್ಯ ಒಲ್ಲದ ಮನಸ್ಸಿನಿಂದಲೇ ಕೋಟಿ ರೂ. ಮೌಲ್ಯದ ಹೊಸ ಕಾರನ್ನು ಪಡೆದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗೂಗಲ್ ತೆಕ್ಕೆಗೆ ಬೆಂಗಳೂರಿನ ‘ವೇರ್ ಈಸ್ ಮೈ ಟ್ರೈನ್’ ಆ್ಯಪ್ ಕಂಪನಿ

    ಗೂಗಲ್ ತೆಕ್ಕೆಗೆ ಬೆಂಗಳೂರಿನ ‘ವೇರ್ ಈಸ್ ಮೈ ಟ್ರೈನ್’ ಆ್ಯಪ್ ಕಂಪನಿ

    ಬೆಂಗಳೂರು: ಭಾರತೀಯ ರೈಲುಗಳು ಈಗ ಎಲ್ಲಿ ಸಂಚರಿಸುತ್ತಿದೆ ಎನ್ನುವ ನಿಖರ ಮಾಹಿತಿಯನ್ನು ತಿಳಿಸುವ ‘ವೇರ್ ಈಸ್ ಮೈ ಟ್ರೈನ್’ ಅಪ್ಲಿಕೇಶನ್‍ನನ್ನು ಗೂಗಲ್ ಖರೀದಿಸಿದೆ.

    ಟೆಕ್ ವಿಶ್ಲೇಷಕರ ಪ್ರಕಾರ, ಗೂಗಲ್ ಭಾರತದಲ್ಲಿ ಜನಪ್ರಿಯ ಹೊಂದುತ್ತಿರುವ ‘ವೇರ್ ಈಸ್ ಮೈ ಟ್ರೈನ್’ ಆ್ಯಪನ್ನು ಅಭಿವೃದ್ಧಿ ಪಡಿಸಿದ ಸಿಗ್ಮಯಿಡ್ ಕಂಪನಿಯನ್ನು ಅಂದಾಜು 40 ಮಿಲಿಯನ್ ಡಾಲರ್ (288 ಕೋಟಿ ರೂಪಾಯಿ) ಖರೀದಿಸುವ ಸಂಬಂಧ ಮಾತುಕತೆ ನಡೆಸಿತ್ತು. ಈಗ ಈ ಕಂಪನಿಯನ್ನು ಎಷ್ಟು ಕೋಟಿ ರೂ. ನೀಡಿ ಖರೀದಿಸಿದೆ ಎನ್ನುವ ಮಾಹಿತಿ ಬಹಿರಂಗವಾಗಿಲ್ಲ.

    ಗೂಗಲ್ ಸಂಸ್ಥೆ ಖರೀದಿಸಿದ ಎರಡನೇ ಖರೀದಿ ಇದಾಗಿದ್ದು, ಇದಕ್ಕೂ ಮೊದಲು ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಕಂಪನಿ ‘ಹಳ್ಳಿ ಲ್ಯಾಬ್ಸ್’ ಖರೀದಿಸಿತ್ತು.

    ಏನಿದು `ವೇರ್ ಈಸ್ ಮೈ ಟ್ರೈನ್’ ಆ್ಯಪ್?
    ಭಾರತೀಯ ರೈಲುಗಳ ಮಾಹಿತಿಯನ್ನು ಒಳಗೊಂಡಿರುವ ಈ ಆ್ಯಪ್, ಪ್ರಯಾಣಿಕರ ರೈಲು ಯಾವ ನಿಲ್ದಾಣದ ಬಳಿ ಇದೆ ಎಂದು ನಿಖರವಾಗಿ ಹೇಳುತ್ತದೆ. ಇಂಟರ್‍ನೆಟ್ ಸೌಲಭ್ಯವಿಲ್ಲದಿದ್ದರೂ, ಗ್ರಾಹಕರು ರೈಲಿನ ಸಂಪೂರ್ಣ ಮಾಹಿತಿಯನ್ನು ರೈಲಿನ ಒಳಗಡೆ ಕುಳಿತು ಪಡೆದುಕೊಳ್ಳಬಹುದು. ಈ ಆ್ಯಪ್ ಆಫ್‍ಲೈನ್ ಜಿಪಿಎಸ್ ಮೂಲಕ ಕಾರ್ಯನಿರ್ವಹಿಸುತ್ತಿದ್ದ ಕಾರಣ ರೈಲು ಪ್ರಯಾಣಿಕರ ಮೆಚ್ಚುಗೆಗೆ ಪಾತ್ರವಾಗಿತ್ತು.

    ಈ ಆ್ಯಪ್ ಭಾರತೀಯ ರೈಲ್ವೇ ಇಲಾಖೆಗೆ ಸಂಬಂಧಪಟ್ಟ ಎಲ್ಲಾ ರೈಲುಗಳ ಮಾಹಿತಿಯನ್ನು ಒಳಗೊಂಡಿದೆ. ಪ್ರಯಾಣಿಕರು ಆ್ಯಪ್ ನಲ್ಲಿ ಕೇವಲ ತಮ್ಮ ರೈಲು ಸಂಖ್ಯೆಯನ್ನು ನಮೂದಿಸಿದರೆ, ರೈಲು ಯಾವ ಸ್ಟೇಷನ್ ನಲ್ಲಿದೆ? ಮುಂದಿನ ನಿಲ್ದಾಣ ಯಾವುದು? ಎಷ್ಟು ಸಮಯಕ್ಕೆ ಬರುತ್ತದೆ? ಎನ್ನುವ ಸಂಪೂರ್ಣ ಮಾಹಿತಿಯನ್ನು ನೀಡುತ್ತದೆ.

    ‘ವೇರ್ ಈಸ್ ಮೈ ಟ್ರೇನ್’ ಆ್ಯಪ್ ಇಂಗ್ಲೀಷ್, ಹಿಂದಿ, ಮರಾಠಿ, ಬಂಗಾಳಿ, ತಮಿಳು, ತೆಲುಗು, ಕನ್ನಡ ಮತ್ತು ಮಲೆಯಾಳಂ ಭಾಷೆಗಳಲ್ಲಿ ಲಭ್ಯವಿದ್ದು, ಇತ್ತೀಚೆಗೆ ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಳ್ಳುತ್ತಿದೆ

    ಗೂಗಲ್ ಪ್ಲೇ ಸ್ಟೋರ್ ನಿಂದ 2018ರಲ್ಲಿ ಅತಿ ಹೆಚ್ಚು ಡೌನ್‍ಲೋಡ್ ಆಗಿರುವ ಆ್ಯಪ್ ಗಳ ಪೈಕಿ ವೇರ್ ಈಸ್ ಮೈ ಟ್ರೈನ್ ಸ್ಥಾನ ಪಡೆದುಕೊಂಡಿದ್ದು, ಇದೂವರೆಗೂ 50 ಲಕ್ಷಕ್ಕೂ ಅಧಿಕ ಮಂದಿ ಈ ಆ್ಯಪ್ ಡೌನ್‍ಲೋಡ್ ಮಾಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಅಮೆರಿಕ ಜೊತೆ 13,500 ಕೋಟಿ ರೂ. ಮೊತ್ತದ ಹೆಲಿಕಾಪ್ಟರ್ ಖರೀದಿಗೆ ಮುಂದಾದ ಭಾರತ

    ಅಮೆರಿಕ ಜೊತೆ 13,500 ಕೋಟಿ ರೂ. ಮೊತ್ತದ ಹೆಲಿಕಾಪ್ಟರ್ ಖರೀದಿಗೆ ಮುಂದಾದ ಭಾರತ

    ನವದೆಹಲಿ: ಸೇನಾ ಬಲವನ್ನು ಹೆಚ್ಚಿಸಿಕೊಳ್ಳಲು ಹಾಗೂ ಆಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಲು ಮುಂದಾಗುತ್ತಿರುವ ಕೇಂದ್ರ ಸರ್ಕಾರ ಅಮೆರಿಕ ಜೊತೆ 13,500 ಕೋಟಿ ರೂಪಾಯಿ ಮೌಲ್ಯದ ರಕ್ಷಣಾ ಹಾಗೂ ಶಸ್ತ್ರಸಜ್ಜಿತ ಹೆಲಿಕಾಪ್ಟರ್ ಖರೀದಿಗೆ ಒಪ್ಪಂದ ನಡೆಸಲು ಮುಂದಾಗಿದೆ.

    ದೇಶದ ನೌಕಾಪಡೆಯ ಬಲವನ್ನು ಹೆಚ್ಚಿಸಿಕೊಳ್ಳಲು ಎನ್‍ಡಿಎ ಸರ್ಕಾರ 13,500 ಕೋಟಿ ರೂಪಾಯಿ ವೆಚ್ಚದ 24 ಎಂಎಚ್-60 ರೋಮಿಯೋ ಹೆಲಿಕಾಪ್ಟರ್ ಗಳನ್ನು ಪೂರೈಸುವಂತೆ ಅಮೆರಿಕಕ್ಕೆ ಪತ್ರ ಬರೆದಿದೆ. ಅಲ್ಲದೇ ಈ ಹೆಲಿಕಾಪ್ಟರ್ ಗಳನ್ನು 2020-2024 ರೊಳಗಾಗಿ ಪೂರೈಸುವಂತೆ ಪತ್ರದಲ್ಲಿ ಉಲ್ಲೇಖಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಅಮೆರಿಕದ ‘ಸಿಕೋಸ್ಕಿ ಲಾಕ್‍ಹೀಡ್ ಮಾರ್ಟಿನ್’ ನಿರ್ಮಾಣದ ಬಹು ಉಪಯೋಗಿ ‘ಎಂಎಚ್-60 ರೋಮಿಯೋ’ ಹೆಲಿಕಾಪ್ಟರ್, ಟಾರ್ಪೆಡೋ ಮತ್ತು ಕ್ಷಿಪಣಿ ವ್ಯವಸ್ಥೆಯನ್ನು ಹೊಂದಿದೆ. ಅಲ್ಲದೇ ಸಬ್‍ಮರಿನ್ ಮೇಲಿನ ದಾಳಿಗಳನ್ನು ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯ ಹೊಂದಿರುವ ಕಾರಣ ಭಾರತ ಖರೀದಿಸಲು ಉತ್ಸಾಹ ತೋರಿಸಿದೆ.

    ಎಂಎಚ್-60 ರೋಮಿಯೋ ಹೆಲಿಕಾಪ್ಟರ್ ಖರೀದಿ ಏಕೆ?
    ಚೀನಾದ ಸಬ್‍ಮರಿನ್‍ಗಳು ನಿರಂತರವಾಗಿ ಭಾರತದ ಮೇಲೆ ಕಣ್ಣಿಟ್ಟಿದ್ದು ದೇಶದ ಸಮುದ್ರಗಡಿಯನ್ನು ದಾಟಲು ಯತ್ನ ನಡೆಸುತ್ತಿವೆ. ಹೀಗಾಗಿ ಚೀನಾದ ಕಳ್ಳಾಟಕ್ಕೆ ಮಿತಿ ಹಾಕಲು ಹಾಗೂ ದೇಶದ ಸಮುದ್ರಗಡಿಯನ್ನು ರಕ್ಷಣೆ ಮಾಡಲು ಈ ಹೆಲಿಕಾಪ್ಟರ್ ಗಳು ಬಹುಮುಖ್ಯ ಪಾತ್ರ ವಹಿಸುತ್ತವೆ. ಅಲ್ಲದೇ ಎಂಎಚ್-60 ಹೆಲಿಕಾಪ್ಟರ್ ಗಳು ಸಾಗರದಾಳದಲ್ಲಿರುವ ಸಬ್‍ಮರಿನ್‍ಗಳನ್ನು ಪತ್ತೆಹಚ್ಚುವ ತಂತ್ರಜ್ಞಾನವನ್ನು ಸಹ ಹೊಂದಿವೆ.

    ನೌಕಾಪಡೆಯ ಬಲವರ್ಧನೆಗೆ ಎಂಎಚ್-60 ಹೆಲಿಕಾಪ್ಟರ್ ಗಳು ಅತ್ಯವಶ್ಯಕವಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಅಮೆರಿಕದೊಂದಿಗೆ ಈ ಒಪ್ಪಂದವನ್ನು ಶೀಘ್ರವೇ ಅಂತಿಮಗೊಳಿಸಲಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಏನಿದು ಎಸ್-400 ಟ್ರಯಂಫ್? ಹೇಗೆ ಕೆಲಸ ಮಾಡುತ್ತೆ? ಅಮೆರಿಕ, ಚೀನಾ, ಪಾಕಿಸ್ತಾನಕ್ಕೆ ಆತಂಕ ಯಾಕೆ?

    ಇತ್ತೀಚೆಗಷ್ಟೇ ರಷ್ಯಾ ಜೊತೆ ಎಸ್-400 ಟ್ರಯಂಫ್ ಕ್ಷಿಪಣಿ ಖರೀದಿಯಿಂದಾಗಿ, ಅಮೆರಿಕ ಭಾರತದೊಂದಿಗೆ ಮುನಿಸಿಕೊಂಡಿತ್ತು. ಈ ಮುನಿಸನ್ನು ಶಮನಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಅಮೆರಿಕ ಅಧ್ಯಕ್ಷ ಟ್ರಂಪ್ ಸರ್ಕಾರದ ಜೊತೆ ಎಂಎಚ್-60 ಹೆಲಿಕಾಪ್ಟರ್ ಖರೀದಿಯ ಮೂಲಕ ಮತ್ತೊಂದು ರಕ್ಷಣಾ ಒಪ್ಪಂದಕ್ಕೆ ಮುಂದಾಗಿದೆ ಎನ್ನುವ ಮಾಹಿತಿ ಲಭಿಸಿದೆ.

    ಭಾರತಕ್ಕೆ ನಿರ್ಬಂಧ ಇಲ್ಲ:
    2015ರಲ್ಲಿ ಇರಾನ್ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸಿದ್ದ ಅಮೆರಿಕ, ಈಗ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ ಎಂದು ಆರೋಪಿಸಿ ಈ ವರ್ಷದ ಆರಂಭದಲ್ಲಿ ಮತ್ತೆ ನಿರ್ಬಂಧ ವಿಧಿಸಿತ್ತು. ನವೆಂಬರ್ 4ರಿಂದ ಪೂರ್ಣ ಪ್ರಮಾಣದಲ್ಲಿ ನಿರ್ಬಂಧ ಜಾರಿಯಾಗಿದೆ. ಇರಾನ್‍ನಿಂದ ತೈಲ ಆಮದನ್ನು ಅಮೆರಿಕ ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. ಅಲ್ಲದೇ ತನ್ನ ಮಿತ್ರ ರಾಷ್ಟ್ರಗಳು ಸಹ ಇರಾನ್ ನೊಂದಿಗೆ ಖರೀದಿಯನ್ನು ಸ್ಥಗಿತಗೊಳಿಸಲಿವೆ ಎನ್ನುವ ನಿರೀಕ್ಷೆಹೊಂದಿದ್ದೇವೆ. ಇರಾನ್ ಜೊತೆ ಯಾವುದೇ ರೀತಿಯ ವ್ಯವಹಾರವನ್ನು ಮುಂದುವರಿಸುವ ಯಾವುದೇ ದೇಶದೊಂದಿಗೆ ಅಮೆರಿಕಾದ ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಸ್ಥೆಯೊಳಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗುತ್ತದೆ ಎಂದು ಹೇಳಿತ್ತು.

    ಅಮೆರಿಕ ನಿರ್ಬಂಧ ಹೇರಿದರೂ ಭಾರತ ಸೇರಿದಂತೆ ಒಟ್ಟು 8 ರಾಷ್ಟ್ರಗಳು ಇರಾನ್ ನಿಂದ ತೈಲ ಆಮದು ಮಾಡಿಕೊಳ್ಳಲು ಅಮೆರಿಕ ಒಪ್ಪಿಗೆ ನೀಡಿತ್ತು. ನಿರ್ಬಂಧದ ನಂತರವೂ ಇರಾನ್ ನಿಂದ ತೈಲ ಆಮದು ಮಾಡಿಕೊಳ್ಳಲು ಅವಕಾಶ ನೀಡಬೇಕು ಎಂದು ಭಾರತ ಮನವಿ ಮಾಡಿಕೊಂಡಿತ್ತು. ಈ ಮನವಿಯನ್ನು ಅಮೆರಿಕ ಪುರಸ್ಕರಿಸಿತ್ತು. ಒಂದು ವೇಳೆ ನಿರ್ಬಂಧ ವಿಧಿಸಿದರೆ ಭಾರತ ಬಹುಕೋಟಿ ರೂ. ರಕ್ಷಣಾ ಖರೀದಿಯಿಂದ ಹಿಂದೆ ಸರಿಯುವ ಸಾಧ್ಯತೆಯಿದೆ ಎಂದು ವಿಶ್ಲೇಷಣೆ ಕೇಳಿ ಬಂದಿತ್ತು.

    ಏನಿದು ಕಾಟ್ಸಾ?
    ರಕ್ಷಣಾ ಹಾಗೂ ಆರ್ಥಿಕ ಒಪ್ಪಂದಗಳನ್ನು ಭದ್ರಪಡಿಸಲು ಅಮೆರಿಕ ಕಾಟ್ಸಾ(ಕೌಂಟರಿಂಗ್ ಅಮೆರಿಕಾಸ್ ಅಡ್ವರ್ಸರೀಸ್ ಥ್ರೂ ಸ್ಯಾಂಕ್ಷನ್ಸ್ ಆಕ್ಟ್) ಕಾಯ್ದೆಯನ್ನು ತಂದಿದೆ. ವಿಶ್ವದ ದೊಡ್ಡಣ್ಣನಾಗಿರುವ ಅಮೆರಿಕ ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಜೊತೆ ಉತ್ತಮ ಬಾಂಧವ್ಯಕ್ಕಾಗಿ ದ್ವಿಪಕ್ಷೀಯ ಮಾತುಕತೆ ನಡೆಸುತ್ತದೆ. ದ್ವಿಪಕ್ಷೀಯ ಸಂಬಂಧ ಹೊಂದಿರುವ ದೇಶಗಳು ಅಮೆರಿಕ ನಿರ್ಬಂಧ ಹೇರಿದ ದೇಶಗಳೊಂದಿಗೆ ರಕ್ಷಣಾ ವ್ಯವಹಾರ ನಡೆಸಿದರೆ ಆ ದೇಶಗಳ ಮೇಲೆ ನಿರ್ಬಂಧ ಹೇರುವ ಅಧಿಕಾರ ಈ ಕಾಯ್ದೆಯಲ್ಲಿದೆ.

    https://www.youtube.com/watch?v=vgSCtOFIjWk

    https://www.youtube.com/watch?v=N6qmLtuOW5Q

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • Exclusive: ಸಾರಿಗೆ ಇಲಾಖೆಯ ಎಲೆಕ್ಟ್ರಿಕ್ ಬಸ್ ಖರೀದಿಗೆ ಬಿಗ್ ಫೈಟ್

    Exclusive: ಸಾರಿಗೆ ಇಲಾಖೆಯ ಎಲೆಕ್ಟ್ರಿಕ್ ಬಸ್ ಖರೀದಿಗೆ ಬಿಗ್ ಫೈಟ್

    ಬೆಂಗಳೂರು: ಕರ್ನಾಟಕ ಸಾರಿಗೆ ಸಂಸ್ಥೆಗೆ ಖರೀದಿ ಮಾಡಲು ಇಚ್ಛಿಸಿರುವ ಎಲೆಕ್ಟ್ರಿಟ್ ಬಸ್ ಸಂಸ್ಥೆಗೆ ಹೆಚ್ಚಿನ ನಷ್ಟ ಉಂಟಾಗುತ್ತದೆ ಎಂಬ ವರದಿಯ ಬಳಿಕವೂ ಸಾರಿಗೆ ಸಚಿವ ಡಿಸಿ ತಮ್ಮಣ್ಣ ಅವರು ಬಸ್ಸುಗಳ ಖರೀದಿಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರಿಗೆ ಸಚಿವರು ಹಾಗೂ ಎಂಡಿ ನಡುವೆ ಬಿಗ್ ಫೈಟ್‍ಗೆ ಕಾರಣವಾಗಿದೆ.

    ಸಾರಿಗೆ ಇಲಾಖೆ ಎಂಡಿ ಪೊನ್ನುರಾಜ್ ಎಲೆಕ್ಟ್ರಿಕ್ ಬಸ್ ಖರೀದಿ ಮಾಡುವುದರಿಂದ ಸಂಸ್ಥೆಗೆ ಉಂಟಾಗಬಹುದಾದ ನಷ್ಟದ ಕುರಿತು ಸಂಪೂರ್ಣ ವರದಿ ನೀಡಿದ್ದಾರೆ. ಇದರ ನಡುವೆಯೂ ಸದ್ಯ ಸಚಿವರು ಒಟ್ಟು 80 ಎಲೆಕ್ಟ್ರಿಕ್ ಬಸ್ ಖರೀದಿಗೆ ಮುಂದಾಗಿದ್ದಾರೆ. ಸಿಎಂ ಕುಮಾರಸ್ವಾಮಿ ಸಂಪುಟ ಸಚಿವರ ಈ ನಡೆ ಹಲವು ಅನುಮಾನಕ್ಕೆ ಕಾರಣವಾಗಿದ್ದು, ಬಸ್ ಖರೀದಿ ಹಿಂದೆ ಸಚಿವರ ಸ್ವ-ಹಿತಾಸಕ್ತಿ ಇದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದೆ. ಸರ್ಕಾರ ಸದ್ಯ 126 ಕೋಟಿ ರೂ. ವೆಚ್ಚದಲ್ಲಿ 80 ಬಸ್‍ಗಳನ್ನ ಖರೀದಿಸಲು ಮುಂದಾಗಿದೆ ಎನ್ನಲಾಗಿದ್ದು, ಇದರಲ್ಲಿ 60 ಎಸಿ ಎಲೆಕ್ಟ್ರಿಕ್ ಬಸ್ ಹಾಗೂ ಉಳಿದಂತೆ 20 ನಾನ್ ಎಸಿ ಎಲೆಕ್ಟ್ರಿಕ್ ಬಸ್ ಖರೀದಿ ಸಿದ್ಧತೆ ನಡೆದಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ.

    ಸಾರಿಗೆ ಇಲಾಖೆ ನೇರ ಬಸ್ ಖರೀದಿ ಮಾಡುವುರಿಂದ ಸಂಸ್ಥೆಗೆ ಉಂಟಾಗಬಹುದಾದ ನಷ್ಟ ಕಾರಣಗಳನ್ನು ಎಂಡಿ ಪೊನ್ನುರಾಜ್ ಅವರು ವರದಿ ನೀಡಿದ್ದಾರೆ. ಸಾರಿಗೆ ಸಂಸ್ಥೆಗೆ ಎಲೆಕ್ಟ್ರಿಕ್ ಬಸ್ ಖರೀದಿ ಮಾಡುವುದಕ್ಕಿಂತ ಅವುಗಳನ್ನು ಲೀಸ್‍ಗೆ ಪಡೆದು ಮೊದಲು ಪ್ರಯೋಗ ನಡೆಸಲು ಎಂಡಿ ಸಲಹೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಫೇಮ್ ಇಂಡಿಯಾ ಸ್ಕೀಮ್ ಅಡಿ ಮೆ|| ಗೋಲ್ಡ್ ಸ್ಟೋನ್ ಇನ್‍ಫ್ರಾಟೆಂಕ್ ಕಂಪೆನಿಯಿಂದ ಬಸ್ ಖರೀದಿಗೆ ಪ್ರಯತ್ನ ಮಾಡಲಾಗುತ್ತಿದೆ ಎನ್ನಲಾಗಿದೆ.

    ಎಲೆಕ್ಟ್ರಿಕ್ ಬಸ್ ಯಾಕೆ ಬೇಡ?
    ಒಂದು ಎಲೆಕ್ಟ್ರಿಕ್ ಬಸ್‍ನ ಒಟ್ಟಾರೆ ವೆಚ್ಚದ ಶೇ. 60 ರಷ್ಟು ಮೌಲ್ಯ ಬ್ಯಾಟರಿ ಒಂದೇ ಹೊಂದಿರುತ್ತದೆ. ಈ ಬಸ್ಸುಗಳಲ್ಲಿ ಆಳವಡಿಸಿರುವ ಬ್ಯಾಟರಿಗಳನ್ನು ಐದು ವರ್ಷಕ್ಕೆ ಒಮ್ಮೆ ಬದಲಾವಣೆ ಮಾಡಬೇಕು. ಇದರಿಂದ ಬಸ್ಸುಗಳ ನಿರ್ವಹಣೆ ಅಧಿಕ ಆಗಲಿದೆ. ಅಲ್ಲದೇ ಒಂದೊಮ್ಮೆ ಎಲೆಕ್ಟ್ರಿಕ್ ಬಸ್‍ನ ಬ್ಯಾಟರಿ ಹಾಳಾದರೆ ಇಡೀ ಬಸ್ ಹಾಳಾಗುತ್ತದೆ. ಇದರಿಂದ ಒಂದು ಬಸ್ ಮೇಲೆ ಹೂಡಿಕೆ ಮಾಡಿರುವ ಮೊತ್ತ ಸಂಪೂರ್ಣ ನಷ್ಟವಾಗಲಿದೆ. ಬಸ್ಸಿನಲ್ಲಿ ಬಳಸುವ ಬ್ಯಾಟರಿಯನ್ನು ಲೀಥಿಯಂ ಎಂಬ ಮೆಟಲ್ ನಿಂದ ತಯಾರು ಮಾಡುತ್ತಾರೆ. ಈ ಲೀಥಿಯಂ ನಿಕ್ಷೇಪ ಭಾರತದಲ್ಲಿ ಕಡಿಮೆ ಇರುವುದರಿಂದ ಅದರ ಬೆಲೆಯೂ ಅಧಿಕವಾಗಿದೆ. ಆದರೆ ಚೀನಾದಲ್ಲಿ ಈ ಎಲೆಕ್ಟ್ರಿಕ್ ಬಸ್ ಸೇವೆ ಯಶಸ್ವಿಯಾಗಿದ್ದು, ಆದರೆ ಅಲ್ಲಿ ಲೀಥಿಯಂ ನಿಕ್ಷೇಪ ಹೆಚ್ಚಾಗಿರುವುದರಿಂದ ಅವರಿಗೆ ಅನುಕೂಲ ಆಗಿದೆ ಎಂಬ ಅಂಶ ಮುಂದಿಟ್ಟಿದ್ದಾರೆ.

    ಕಳೆದ ಕೆಲ ದಿನಗಳ ಹಿಂದೆಯಷ್ಟೇ ಡೀಸೆಲ್ ಬೆಲೆ ಹೆಚ್ಚಾಗಿದೆ ಎಂಬ ಅಂಶದ ಮೇಲೆ ಟಿಕೆಟ್ ದರ ಹೆಚ್ಚಳ ಮಾಡಲು ಸಾರಿಗೆ ಇಲಾಖೆ ಮುಂದಾಗಿತ್ತು. ಸದ್ಯ ಸುಮಾರು 126 ಕೋಟಿ ರೂಪಾಯಿ ಖರ್ಚು ಮಾಡಿ ಎಲೆಕ್ಟ್ರಿಕ್ ಬಸ್ ಖರೀದಿ ಮಾಡಲಿ ಚಿಂತನೆ ನಡೆಸಿದೆ. ಆದರೆ ಈ ಹಿಂದೆ ಸಾರಿಗೆ ಸಚಿವರಾಗಿದ್ದ ರಾಮಲಿಂಗಾ ರೆಡ್ಡಿ ಅವರು ಎಲೆಕ್ಟ್ರಿಕ್ ಬಸ್ ಖರೀದಿ ಮಾಡಲು ನಿರಾಕರಿಸಿದ್ದರು. ಅಲ್ಲದೇ ಬಸ್ಸುಗಳ ನಿರ್ವಹಣೆ ಅಧಿಕ ವೆಚ್ಚವಾಗುತ್ತದೆ ಎಂಬ ಕಾರಣ ಮುಂದಿಟ್ಟಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=amPQtHkZIq0

  • ಬೆಂಗ್ಳೂರಲ್ಲಿ ಮನೆ ಖರೀದಿ ಮಾಡ್ತೀರಾ? ಯಾವ ಪ್ರದೇಶದಲ್ಲಿ ಡಬಲ್ ಬೆಡ್ ರೂಂಗೆ ಎಷ್ಟು ಲಕ್ಷ? ಇಲ್ಲಿದೆ ಮಾಹಿತಿ

    ಬೆಂಗ್ಳೂರಲ್ಲಿ ಮನೆ ಖರೀದಿ ಮಾಡ್ತೀರಾ? ಯಾವ ಪ್ರದೇಶದಲ್ಲಿ ಡಬಲ್ ಬೆಡ್ ರೂಂಗೆ ಎಷ್ಟು ಲಕ್ಷ? ಇಲ್ಲಿದೆ ಮಾಹಿತಿ

    ಬೆಂಗಳೂರು: ರಾಜಧಾನಿಯಲ್ಲಿ ಮನೆ ಖರೀದಿಸುವುದೇ ದೊಡ್ಡ ಕಷ್ಟ. ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿಯ ದರ ನಿಗದಿಯಾಗಿದೆ. ಹೀಗಾಗಿ ಯಾವ ಪ್ರದೇಶದಲ್ಲಿ ಎಷ್ಟು ರೂ. ದರ ಇದೆ ಎನ್ನುವ ಮಾಹಿತಿಯನ್ನು ಮನೆ ಖರೀದಿಸುವ ಜನ ಹುಡುಕುತ್ತಿರುತ್ತಾರೆ.

    ದೇಶದ ರಿಯಲ್ ಎಸ್ಟೇಟ್ ವ್ಯವಹಾರದ ಬಗ್ಗೆ ಮಾಹಿತಿ datalabs.proptiger.ಯಾವ ಪ್ರದೇಶದಲ್ಲಿ ಎಷ್ಟು ದರ ಇದೆ ಎನ್ನುವುದನ್ನು ಅಂದಾಜಿಸಿದೆ. ಇದರಲ್ಲಿ ಸಿಂಗಲ್ ಬೆಡ್ ರೂಂ, ಡಬ್ಬಲ್ ಬೆಡ್ ರೂಂ ಹಾಗೂ ತ್ರಿಬ್ಬಲ್ ಬೆಡ್ ರೂಂ ಮನೆಗಳ ದರವನ್ನು ಪ್ರಕಟಿಸಿದೆ.

    50 ಲಕ್ಷ ರೂಪಾಯಿ, 50 ರಿಂದ 75 ಲಕ್ಷ ರೂಪಾಯಿಯೊಳಗಿನ ಮನೆಗಳು ಹಾಗೂ 75 ಲಕ್ಷ ರೂಪಾಯಿಗಿಂತ ಹೆಚ್ಚಿರುವ ಮನೆಗಳು ಎಂದು ವಿಂಗಡಿಸಿ ಈ ಮಾಹಿತಿಯನ್ನು ಪ್ರಕಟಿಸಿದೆ.

    ಯಾವ ಪ್ರದೇಶದಲ್ಲಿ ಎಷ್ಟು?
    ಚಂದಾಪುರ ಏರಿಯಾದ 1 ಬೆಡ್ ರೂಂನ 970 ಚದರ ಅಡಿಯಲ್ಲಿನ ಮನೆಯ ಪ್ರತಿ ಅಡಿಗೆ 2,550 ರೂಪಾಯಿಯಂತೆ ಅಂದಾಜು 24.76 ಲಕ್ಷ ರೂಪಾಯಿ ಇದ್ದರೆ, ಎಲೆಕ್ಟ್ರಾನಿಕ್ ಸಿಟಿ ಪೇಸ್ 1 ರಲ್ಲಿ 1 ಬೆಡ್ ರೂಂನ 990 ಚದರ ಅಡಿ ಮನೆಯ ಪ್ರತಿ ಅಡಿಗೆ 3,400 ರೂಪಾಯಿಯಂತೆ ಅಂದಾಜು 33.66 ಲಕ್ಷ ರೂಪಾಯಿ ನಿಗದಿಯಾಗಿದೆ.

    ಎಲೆಕ್ಟ್ರಾನಿಕ್ ಸಿಟಿ ಪೇಸ್ 2 ರಲ್ಲಿ 1 ಬೆಡ್ ರೂಂನ 1,030 ಚದರ ಅಡಿ ಮನೆಯ ಪ್ರತಿ ಅಡಿಗೆ 3,600 ರೂಪಾಯಿಯಂತೆ, ಅಂದಾಜು 37.08 ಲಕ್ಷ ರೂಪಾಯಿ ಆಗಲಿದೆ. ಗೊಟ್ಟಿಗೆರೆಯಲ್ಲಿ 2 ಬೆಡ್ ರೂಂನ 1,140 ಚದರ ಅಡಿ ಮನೆಯ ಪ್ರತಿ ಅಡಿಗೆ 3,450 ರೂಪಾಯಿಯಂತೆ ಅಂದಾಜು 39.33 ಲಕ್ಷ ರೂಪಾಯಿ ಆಗಲಿದೆ.

    ಜಕ್ಕೂರು ಪ್ರದೇಶದಲ್ಲಿ 2 ಬೆಡ್ ರೂಂನ 1,110 ಚದರ ಅಡಿ ಮನೆಯ ಪ್ರತಿ ಅಡಿಗೆ 3,900 ರೂಪಾಯಿಯಂತೆ ಅಂದಾಜು 43.29 ಲಕ್ಷ ರೂಪಾಯಿ ಆಗಲಿದೆ. ನಾಗರಭಾವಿ ಪ್ರದೇಶದಲ್ಲಿ 1 ಬೆಡ್ ರೂಂನ 930 ಚದರ ಅಡಿ ಮನೆಯ ಪ್ರತಿ ಅಡಿಗೆ 4,450 ರೂಪಾಯಿಯಂತೆ ಅಂದಾಜು 41.38 ಲಕ್ಷ ರೂಪಾಯಿ ನಿಗದಿಯಾಗಿದೆ

    ಸರ್ಜಾಪುರ ಪ್ರದೇಶದಲ್ಲಿ 1 ಬೆಡ್ ರೂಂನ 1,050 ಚದರ ಅಡಿ ಮನೆಯ ಪ್ರತಿ ಅಡಿಗೆ 3,050 ರೂಪಾಯಿಯಂತೆ ಅಂದಾಜು 32.02 ಲಕ್ಷ ರೂಪಾಯಿ ಆಗಲಿದ್ದು, ಥಣಿಸಂದ್ರ ಪ್ರದೇಶದಲ್ಲಿ 1 ಬೆಡ್ ರೂಂನ 1,020 ಚದರ ಅಡಿ ಮನೆಯ ಪ್ರತಿ ಅಡಿಗೆ 4,300 ರೂಪಾಯಿಯಂತೆ ಅಂದಾಜು 43.86 ಲಕ್ಷ ರೂಪಾಯಿ ಆಗಲಿದೆ.

    ವರ್ತೂರು ಪ್ರದೇಶದಲ್ಲಿ 1 ಬೆಡ್ ರೂಂನ 1,040 ಚದರ ಅಡಿ ಮನೆಯ ಪ್ರತಿ ಅಡಿಗೆ 3,900 ರೂಪಾಯಿಯಂತೆ ಅಂದಾಜು 40.56 ಲಕ್ಷ ರೂಪಾಯಿ ಆಗಲಿದ್ದು, ಯಲಹಂಕ ಪ್ರದೇಶದಲ್ಲಿ 1 ಬೆಡ್ ರೂಂನ 970 ಚದರ ಅಡಿ ಮನೆಯ ಪ್ರತಿ ಅಡಿಗೆ 4,250 ರೂಪಾಯಿಯಂತೆ ಅಂದಾಜು 41.22 ಲಕ್ಷ ರೂಪಾಯಿ ನಿಗದಿಯಾಗಿದೆ.

    50 ರಿಂದ 75 ಲಕ್ಷ ರೂ.:
    ಥಣಿಸಂದ್ರ ಮುಖ್ಯ ರಸ್ತೆ ಕಣ್ಣೂರಿನ ಪ್ರದೇಶದಲ್ಲಿ 2 ಬೆಡ್ ರೂಂನ 1,350 ಚದರ ಅಡಿ ಮನೆಯ ಪ್ರತಿ ಅಡಿಗೆ 4,550 ರೂಪಾಯಿಯಂತೆ ಅಂದಾಜು 61.42 ಲಕ್ಷ ರೂಪಾಯಿ ಆದರೆ, ಕೆಂಗೇರಿ ಪ್ರದೇಶದಲ್ಲಿ 2 ಬೆಡ್ ರೂಂನ 1,440 ಚದರ ಅಡಿ ಮನೆಯ ಪ್ರತಿ ಅಡಿಗೆ 4,050 ರೂಪಾಯಿಯಂತೆ ಅಂದಾಜು 58.32 ಲಕ್ಷ ರೂಪಾಯಿ ನಿಗದಿಯಾಗಿದೆ.

    ಕೆ.ಆರ್.ಪುರಂ ಪ್ರದೇಶದಲ್ಲಿ 2 ಬೆಡ್ ರೂಂನ 1,320 ಚದರ ಅಡಿ ಮನೆಯ ಪ್ರತಿ ಅಡಿಗೆ 4,550 ರೂಪಾಯಿಯಂತೆ ಅಂದಾಜು 60.06 ಲಕ್ಷ ರೂಪಾಯಿ ನಿಗದಿಯಾಗಿದ್ದರೆ, ಸುಬ್ರಹ್ಮಣ್ಯಪುರ ಪ್ರದೇಶದಲ್ಲಿ 2 ಬೆಡ್ ರೂಂನ 1,260 ಚದರ ಅಡಿ ಮನೆಯ ಪ್ರತಿ ಅಡಿಗೆ 5,100 ರೂಪಾಯಿಯಂತೆ ಅಂದಾಜು 64.26 ಲಕ್ಷ ರೂಪಾಯಿ ಆಗಲಿದೆ.

    ವೈಟ್‍ಫೀಲ್ಡ್‍ನ ಹೋಪ್ ಫಾರ್ಮ್ ಜಂಕ್ಷನ್ ಪ್ರದೇಶದಲ್ಲಿ 2 ಬೆಡ್ ರೂಂನ 1,350 ಚದರ ಅಡಿ ಮನೆಯ ಪ್ರತಿ ಅಡಿಗೆ 4,450 ರೂಪಾಯಿಯಂತೆ ಅಂದಾಜು 60.07 ಲಕ್ಷ ರೂಪಾಯಿ ಆಗಲಿದೆ.

    75 ಲಕ್ಷ ರೂ. ಮೇಲ್ಪಟ್ಟು ಎಲ್ಲಿ ಮನೆ ಸಿಗುತ್ತೆ?
    ಹೆಣ್ಣೂರು ಮುಖ್ಯ ರಸ್ತೆಯ ಅಂಗಾಲಾಪುರ ಪ್ರದೇಶದಲ್ಲಿ 3 ಬೆಡ್ ರೂಂನ 2,020 ಚದರ ಅಡಿ ಮನೆಯ ಪ್ರತಿ ಅಡಿಗೆ 6,400 ರೂಪಾಯಿಯಂತೆ ಅಂದಾಜು 129.28 ಲಕ್ಷ ರೂಪಾಯಿ ಆಗಲಿದೆ. ಹೊಸ ರೋಡ್ ಪ್ರದೇಶದಲ್ಲಿ 2 ಬೆಡ್ ರೂಂನ 1,770 ಚದರ ಅಡಿ ಮನೆಯ ಪ್ರತಿ ಅಡಿಗೆ 5,500 ರೂಪಾಯಿಯಂತೆ ಅಂದಾಜು 93.35 ಲಕ್ಷ ರೂಪಾಯಿ ಆಗಲಿದೆ.

    ಕಲ್ಯಾಣ ನಗರ ಪ್ರದೇಶದಲ್ಲಿ 2 ಬೆಡ್ ರೂಂನ 1,870 ಚದರ ಅಡಿ ಮನೆಯ ಪ್ರತಿ ಅಡಿಗೆ 6,400 ರೂಪಾಯಿಯಂತೆ ಅಂದಾಜು 119.68 ಲಕ್ಷ ರೂಪಾಯಿ ಆಗಲಿದೆ. ಕುಮಾರಸ್ವಾಮಿ ಲೇಔಟ್ ಪ್ರದೇಶದಲ್ಲಿ 2 ಬೆಡ್ ರೂಂನ 1,990 ಚದರ ಅಡಿ ಮನೆಯ ಪ್ರತಿ ಅಡಿಗೆ 6,650 ರೂಪಾಯಿಯಂತೆ ಅಂದಾಜು 132.33 ಲಕ್ಷ ರೂಪಾಯಿ ಆಗಲಿದೆ.

    ಮಾರತಹಳ್ಳಿ ಪ್ರದೇಶದಲ್ಲಿ 3 ಬೆಡ್ ರೂಂನ 2,440 ಚದರ ಅಡಿ ಮನೆಯ ಪ್ರತಿ ಅಡಿಗೆ 7,350 ರೂಪಾಯಿಯಂತೆ ಅಂದಾಜು 179.34 ಲಕ್ಷ ರೂಪಾಯಿ ಆಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಇನ್ಫಿಯಿಂದ ಫಿನ್‍ಲ್ಯಾಂಡ್ ಕಂಪೆನಿ ಖರೀದಿ- ಖರೀದಿಸಿದ್ದು ಯಾಕೆ? ಎಷ್ಟು ಕೋಟಿ ಡೀಲ್?

    ಇನ್ಫಿಯಿಂದ ಫಿನ್‍ಲ್ಯಾಂಡ್ ಕಂಪೆನಿ ಖರೀದಿ- ಖರೀದಿಸಿದ್ದು ಯಾಕೆ? ಎಷ್ಟು ಕೋಟಿ ಡೀಲ್?

    ಬೆಂಗಳೂರು: ಭಾರತದ ಎರಡನೇ ಅತೀ ದೊಡ್ಡ ಐಟಿ ಸಂಸ್ಥೆಯಾಗಿರುವ ಇನ್ಫೋಸಿಸ್ ಶುಕ್ರವಾರ ಫಿನ್‍ಲ್ಯಾಂಡ್ ಮೂಲದ ಫ್ಲುಯಿಡೋ ಸಂಸ್ಥೆಯನ್ನು ಖರೀದಿಸಿದೆ.

    ಫ್ಲುಯಿಡೋ ಸಂಸ್ಥೆಯನ್ನು ಖರೀದಿಸಿರುವುದಾಗಿ ಇನ್ಫಿ ಅಧಿಕೃತ ಮಾಹಿತಿ ನೀಡಿದ್ದು, 65 ಮಿಲಿಯನ್ ಯುರೋ (ಸುಮಾರು 544 ಕೋಟಿ ರೂ.)ಗೆ ಒಪ್ಪಂದ ನಡೆದಿರುವುದಾಗಿ ತಿಳಿಸಿದೆ. ಈ ಖರೀದಿ ಒಪ್ಪಂದ 2019ರ ಮೂರನೇ ತ್ರೈಮಾಸಿಕದಲ್ಲಿ ಅಂತ್ಯಗೊಳ್ಳಲಿದೆ.

    2010 ರಲ್ಲಿ ಸ್ಥಾಪನೆಯಾಗಿದ್ದ ಫ್ಲುಯಿಡೋ ಅಮೆರಿಕದ ಕ್ಲೌಡ್ ಕಂಪ್ಯೂಟಿಂಗ್ ಸೇಲ್ಸ್ ಫೋರ್ಸ್ ಕಂಪೆನಿಗೆ ಸಲಹೆ ನೀಡುತಿತ್ತು. ಇನ್ಫೋಸಿಸ್ ಅಧ್ಯಕ್ಷ ರವಿ ಕುಮಾರ್ ಹೇಳಿಕೆ ಬಿಡುಗಡೆಗೊಳಿಸಿ, ಮುಂಚೂಣಿ ಸಾಫ್ಟ್ ವೇರ್ ಸಂಸ್ಥೆಯಾಗಿ ಗುರುತಿಸಿಕೊಂಡಿದ್ದ ಫ್ಲುಯಿಡೋ ಡೆನ್ಮಾರ್ಕ್, ಸ್ವೀಡನ್, ನಾರ್ವೆ, ಸ್ಲೋವಾಕಿಯಾ ನಗರದಲ್ಲಿ ಈ ಸಂಸ್ಥೆಯೂ ತನ್ನ ಸೇವೆಗಳನ್ನು ನೀಡುತ್ತಿತ್ತು. ಇನ್ಫಿ ಸಂಸ್ಥೆಗೆ ಫ್ಲುಯಿಡೋ ಸೇರ್ಪಡೆಯಾಗಿದ್ದು, ಗ್ರಾಹಕರ ಡಿಜಿಟಲ್ ಆದ್ಯತೆಗಳನ್ನು ಪೂರೈಸಲು ನೆರವಾಗಲಿದೆ ಅಲ್ಲದೇ ಮಾರಾಟ ಸಂಸ್ಥೆಯ ಪೂರೈಕೆಯಲ್ಲಿ ಇನ್ಫಿ ಸ್ಥಾನ ಬಲಪಡಿಸಲು ಸಹಾಯವಾಗಲಿದೆ ಎಂದು ತಿಳಿಸಿದ್ದಾರೆ.

    ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿರುವ ಫ್ಲುಯಿಡೋ ಸಂಸ್ಥೆಯ ಸಂಸ್ಥಾಪಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೈ ಮಕಲಾ, ಇನ್ಫೋಸಿಸ್ ಸಂಸ್ಥೆಯೊಂದಿಗೆ ಸೇರುವುದರಿಂದ ಗ್ರಾಹರಿಗೆ ಜಾಗತಿಕ ಮಟ್ಟದ ಡಿಜಿಟಲ್ ಸೇವೆ ಒದಗಿಸಲು ಸಹಾಯಕವಾಗಲಿದೆ. ಅಲ್ಲದೇ ಹಲವು ಪ್ರದೇಶಗಳಲ್ಲಿನ ನಮ್ಮ ಗ್ರಾಹಕರನ್ನು ಇನ್ಫಿಯೊಂದಿಗೆ ಸಂಪರ್ಕ ಕಲ್ಪಿಸಲು ಯತ್ನಿಸುತ್ತೇವೆ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv