Tag: ಖಲಿಸ್ತಾನ

  • ಭಾರತದ ಜೊತೆ ಚೇಷ್ಟೆ ಮಾಡುತ್ತಿದ್ದ ಕೆನಡಾ ಪ್ರಧಾನಿ ಟ್ರುಡೋ ಇಂದೇ ರಾಜೀನಾಮೆ?

    ಭಾರತದ ಜೊತೆ ಚೇಷ್ಟೆ ಮಾಡುತ್ತಿದ್ದ ಕೆನಡಾ ಪ್ರಧಾನಿ ಟ್ರುಡೋ ಇಂದೇ ರಾಜೀನಾಮೆ?

    ಒಟ್ಟಾವಾ: ಖಲಿಸ್ತಾನ (Khalistan) ಉಗ್ರ ಸಂಘಟನೆಯ ವಿಚಾರ ಹಿಡಿದುಕೊಂಡು ಭಾರತದೊಂದಿಗೆ ಚೇಷ್ಟೆ ಮಾಡಿದ್ದ ಕೆನಡಾದ (Canada) ಪ್ರಧಾನಿ ಜಸ್ಟಿನ್‌ ಟ್ರುಡೋ (Justin Trudeau) ಇಂದು ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಾಗಿದೆ.

    ಟ್ರುಡೋ ಪ್ರತಿನಿಧಿಸುತ್ತಿರುವ ಲಿಬರಲ್ ಪಕ್ಷದ ಸಂಸದರೇ ಈಗ ಪ್ರಧಾನಿ ವಿರುದ್ಧ ತಿರುಗಿ ಬಿದ್ದಿದ್ದು ರಾಜೀನಾಮೆಗೆ ಆಗ್ರಹಿಸಿದ್ದಾರೆ ಎಂದು ವರದಿಯಾಗಿದೆ. ಟ್ರುಡೋ  ಯಾವಾಗ ರಾಜೀನಾಮೆ ಘೋಷಿಸುತ್ತಾರೆ ಎಂಬುದು ಖಚಿತವಾಗಿ ತಿಳಿದಿಲ್ಲ. ಬುಧವಾರದ ಪಕ್ಷದ ರಾಷ್ಟ್ರೀಯ ಸಭೆ ನಡೆಯುವ ಮೊದಲೇ ಅವರು ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಟ್ರಂಪ್‌ ಪ್ರಮಾಣವಚನ ಸಮಾರಂಭ – 8.57 ಕೋಟಿ ದೇಣಿಗೆ ನೀಡಲಿದ್ದಾರೆ ಟಿಮ್‌ ಕುಕ್‌

    ಪಕ್ಷದ ಆಂತಂರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕಾಏಕಿ ರಾಜೀನಾಮೆ ಘೋಷಣೆ ಮಾಡುತ್ತಾರಾ ಅಥವಾ ಹೊಸ ನಾಯಕತ್ವ ಆಯ್ಕೆವರೆಗೂ ಪ್ರಧಾನಿಯಾಗಿ ಮುಂದುವರೆಯುತ್ತಾರೋ ಇನ್ನೂ ಸ್ಪಷ್ಟವಾಗಿಲ್ಲ . ಇದನ್ನೂ ಓದಿ: ಮಾರುತಿಯ 40 ವರ್ಷದ ಓಟಕ್ಕೆ ಟಾಟಾ ಬ್ರೇಕ್‌ – ಪಂಚ್‌ ದೇಶದ ನಂ.1 ಕಾರು!

    ಟ್ರುಡೋ ಅವರು 2013 ರಲ್ಲಿ ಲಿಬರಲ್ ನಾಯಕರಾಗಿ ಅಧಿಕಾರ ವಹಿಸಿಕೊಂಡರು. ಅಕ್ಟೋಬರ್ ಅಂತ್ಯದಲ್ಲಿ ಕೆನಡಾದಲ್ಲಿ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಲಿಬರಲ್‌ ಪಕ್ಷ ಹೀನಾಯವಾಗಿ ಸೋಲಲಿದೆ ಎಂದು ಸಮೀಕ್ಷೆಗಳು ಈಗಾಗಲೇ ಭವಿಷ್ಯ ನುಡಿದಿವೆ.

    ಇತ್ತೀಚಿನ ಚುನಾವಣೆಗಳಲ್ಲಿ ಲಿಬರಲ್‌ ಪಕ್ಷದ ಕಳಪೆ ಸಾಧನೆಗೆ ಟ್ರುಡೋ ಅವರ ನಾಯಕತ್ವವೇ ಕಾರಣ ಎಂದು ಸದಸ್ಯರು ಬಹಿರಂಗವಾಗಿಯೇ ಹೇಳಿದ್ದರು.

    ಖಲಿಸ್ತಾನ್ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಆರೋಪಿಸಿದ್ದರು. ಆದರೆ ಅಕ್ಟೋಬರ್‌ 16  ರಂದು ನಾವು ಯಾವುದೇ ಪುರಾವೆಯನ್ನು ಭಾರತಕ್ಕೆ ನೀಡಿಲ್ಲ ಎಂದು  ಜಸ್ಟಿನ್‌ ಟ್ರುಡೋ (Justin Trudeau) ಅಧಿಕೃತವಾಗಿ ಒಪ್ಪಿಕೊಳ್ಳುವ ಮೂಲಕ ಸೆಲ್ಫ್‌ ಗೋಲ್‌ ಹೊಡೆದಿದ್ದರು. ಇದರಿಂದಾಗಿ ಕೆನಡಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ ಅನುಭವಿಸುವಂತಾಗಿತ್ತು. ಖಲಿಸ್ತಾನಿ ಪರ ಟ್ರುಡೋ ಬ್ಯಾಟಿಂಗ್‌ ಮಾಡುತ್ತಿರುವುದಕ್ಕೆ ಸ್ವಪಕ್ಷೀಯರಿಂದಲೇ ಟೀಕೆ ವ್ಯಕ್ತವಾಗಿತ್ತು.

     

  • Canada| ಹಿಂದೂಗಳ ಮೇಲೆ ಖಲಿಸ್ತಾನಿ ಪ್ರತ್ಯೇಕವಾದಿಗಳಿಂದ ಹಲ್ಲೆ ಖಂಡಿಸಿ ಪ್ರತಿಭಟನೆ

    Canada| ಹಿಂದೂಗಳ ಮೇಲೆ ಖಲಿಸ್ತಾನಿ ಪ್ರತ್ಯೇಕವಾದಿಗಳಿಂದ ಹಲ್ಲೆ ಖಂಡಿಸಿ ಪ್ರತಿಭಟನೆ

    ಬ್ರಾಂಪ್ಟನ್: ಬ್ರಾಂಪ್ಟನ್‌ನಲ್ಲಿರುವ (Brompton) ಹಿಂದೂ ಸಭಾ ಮಂದಿರದ (Hindu Sabha Mandir) ಹೊರ ಭಾಗದಲ್ಲಿ ಖಲಿಸ್ತಾನಿ ಪರ ಬೆಂಬಲಿಗರಿಂದ (Khalistan Suppoters) ಹಿಂದೂಗಳ ಮೇಲೆ ನಡೆದ ದಾಳಿಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಹಿಂದೂಗಳ ಒಕ್ಕೂಟ (CoHNA) ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಸಾವಿರಾರು ಕೆನಡಾದ ಹಿಂದೂಗಳು ಒಗ್ಗಟ್ಟಿನಿಂದ ಮೆರವಣಿಗೆ ನಡೆಸಿದರು.

    ಪ್ರತಿಭಟನಾಕಾರರು ಕೆನಡಾ ಮತ್ತು ಭಾರತದ ಧ್ವಜಗಳನ್ನು ಹಿಡಿದು ಮೆರವಣಿಗೆ ನಡೆಸಿದರು. ಮೆರವಣಿಗೆ ಉದ್ದಕ್ಕೂ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದರು. ಇದೇ ವೇಳೆ ಖಲಿಸ್ತಾನ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಸುಮಾರು 20 ವರ್ಷಗಳಿಂದ ಕೆನಡಾದಲ್ಲಿ ಹಿಂದೂಗಳು ಸತತವಾಗಿ ತಾರತಮ್ಯಕ್ಕೆ ಒಳಗಾಗುತ್ತಿದ್ದಾರೆ ಎಂದು ಕೆಲವು ಪ್ರತಿಭಟನಾಕಾರರು ಆರೋಪಿಸಿದರು. ಇದನ್ನೂ ಓದಿ: ಮುಡಾ ಕೇಸ್ ಸಿದ್ದರಾಮಯ್ಯ ವಿರುದ್ಧ ನಡೆಯುತ್ತಿರೋ ಷಡ್ಯಂತ್ರ: ಮಹದೇವಪ್ಪ

    ಹಿಂದೂ ಕೆನಡಿಯನ್ನರು ಕೆನಡಾಕ್ಕೆ ತುಂಬಾ ನಿಷ್ಠರಾಗಿದ್ದಾರೆ. ಹಿಂದೂ ಕೆನಡಿಯನ್ನರ ವಿರುದ್ಧ ನಡೆಯುತ್ತಿರುವುದು ತಪ್ಪು. ಎಲ್ಲಾ ರಾಜಕಾರಣಿಗಳು ಪರಿಸ್ಥಿತಿ ಅರ್ಥ ಮಾಡಿಕೊಳ್ಳುವ ಸಮಯ ಬಂದಿದೆ. ಕೆನಡಾ ಇಲ್ಲಿರುವ ಹಿಂದೂಗಳನ್ನು ಚೆನ್ನಾಗಿ ನಡೆಸಿಕೊಳ್ಳಬೇಕೆಂದು ನಾವು ಬಯಸುತ್ತೇವೆ. ನಮಗೆ ಭಾರತ ಬೇಕು ಮತ್ತು ಕೆನಡಾ ಸಂಬಂಧಗಳನ್ನು ಬಲಪಡಿಸಬೇಕು ಎಂದು ಮತ್ತೋರ್ವ ಪ್ರತಿಭಟನಾಕಾರರು ಆಗ್ರಹಿಸಿದರು. ಇದನ್ನೂ ಓದಿ: ಬೆಂಗಳೂರಲ್ಲಿ ರಸ್ತೆ ದಾಟುವಾಗ ಬೆನ್ಜ್ ಕಾರು ಡಿಕ್ಕಿಯಾಗಿ ಟೆಕ್ಕಿ ಸಾವು

    ಹಿಂದೂ ಸಭಾ ದೇವಾಲಯದ ಆವರಣದಲ್ಲಿ ಭಕ್ತರ ಮೇಲೆ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ದಾಳಿ ಮಾಡಿದ್ದಾರೆ. ಈ ದೇವಾಲಯವು ಟೊರೊಂಟೊದಿಂದ ಸುಮಾರು 50 ಕಿ.ಮೀ ದೂರದಲ್ಲಿದೆ. ದಾಳಿಯ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಖಲಿಸ್ತಾನಿ ಧ್ವಜ ಹಿಡಿದಿರುವುದು, ಭಕ್ತರನ್ನು ನಿಂದಿಸುತ್ತಾ ಹಲ್ಲೆ ನಡೆಸುತ್ತಿರುವುದು ವೀಡಿಯೋದಲ್ಲಿದೆ. ಇದನ್ನೂ ಓದಿ: ಬೆಳಗಾವಿ| ತಹಶೀಲ್ದಾರ್‌ ಕಚೇರಿಯಲ್ಲೇ ಸಿಬ್ಬಂದಿ ಆತ್ಮಹತ್ಯೆ

    ಹಿಂದೂ ದೇವಾಲಯದಲ್ಲಿ ಹಿಂದೂಗಳ ಮೇಲಿನ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಖಂಡಿಸಿದ್ದರು. ಇದನ್ನು ಉದ್ದೇಶಪೂರ್ವಕ ಕೃತ್ಯ ಎಂದು ಕರೆದಿದ್ದು, ಭಾರತೀಯ ರಾಯಭಾರಿಗಳನ್ನು ಬೆದರಿಸುವ ಪ್ರಯತ್ನ ಎಂದು ಮೋದಿ ಟೀಕಿಸಿದ್ದರು. ಇದನ್ನೂ ಓದಿ: ದೇವಸ್ಥಾನದಲ್ಲಿ ಕ್ಷಮೆಯಾಚಿಸಿ ಇಲ್ಲವೇ 5 ಕೋಟಿ ಕೊಡಿ: ಸಲ್ಮಾನ್‌ ಖಾನ್‌ಗೆ ಮತ್ತೊಂದು ಬೆದರಿಕೆ

  • ಭಯೋತ್ಪಾದಕರಿಗೆ ಕೆನಡಾ ಸುರಕ್ಷಿತ ನೆಲೆ – ನೇರಾನೇರವಾಗಿ ದೂಷಿಸಿದ ಭಾರತ

    ಭಯೋತ್ಪಾದಕರಿಗೆ ಕೆನಡಾ ಸುರಕ್ಷಿತ ನೆಲೆ – ನೇರಾನೇರವಾಗಿ ದೂಷಿಸಿದ ಭಾರತ

    ನವದೆಹಲಿ: ಭಯೋತ್ಪಾದನೆಯ ವಿಚಾರ ಬಂದಾಗ ಪಾಕಿಸ್ತಾನದ (Pakistan) ವಿರುದ್ಧ ಭಾರತ (India) ಕಠಿಣ ಪದಗಳನ್ನು ಬಳಸಿ ಕಿಡಿಕಾರುವುದು ಸಾಮಾನ್ಯ. ಆದರೆ ಇದೇ ಮೊದಲ ಬಾರಿಗೆ ಕೆನಡಾ (Canada) ವಿರುದ್ಧ ಭಾರತ ಕಠಿಣ ಪದಗಳನ್ನು ಬಳಸಿ ದೂಷಿಸಿದೆ.

    ಭಯೋತ್ಪಾದಕರಿಗೆ (Terrorists) ಕೆನಡಾ ಸುರಕ್ಷಿತ ನೆಲೆ ಒದಗಿಸಿದೆ ಎಂದು ಭಾರತ ನೇರಾನೇರವಾಗಿ ದೂಷಿಸಿದೆ. ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜಾರ್ (Khalistani Terrorist Hardeep Singh Nijjar) ಹತ್ಯೆಗೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಸಂಬಂಧಗಳು ಹದಗೆಟ್ಟ ಬೆನ್ನಲ್ಲೇ ಭಾರತ ಕೆನಡಾವನ್ನು ಬಹಿರಂಗ ವೇದಿಕೆಯಲ್ಲಿ ಟೀಕಿಸಲು ಆರಂಭಿಸಿದೆ.

    ಸುದ್ದಿಗೋಷ್ಠಿ ನಡೆಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ವಕ್ತಾರ ಅರಿಂದಮ್ ಬಾಗ್ಚಿ, ಭಯೋತ್ಪಾದನೆಗೆ ನಮ್ಮ ನೆರೆಯ ಪಾಕಿಸ್ತಾನ ಪಶ್ಚಿಮಾತ್ಯ ದೇಶಗಳಿಗೆ ಧನಸಹಾಯ ಮತ್ತು ಬೆಂಬಲ ನೀಡುತ್ತದೆ. ಉಗ್ರರಿಗೆ ಕೆನಡಾ ಸೇರಿದಂತೆ ವಿದೇಶಗಳು ಕಾರ್ಯನಿರ್ವಹಿಸಲು ಸ್ಥಳಗಳನ್ನು ನೀಡುತ್ತಿದೆ ಎಂದು ದೂರಿದರು.  ಇದನ್ನೂ ಓದಿ: ಕೆನಡಾದಲ್ಲಿ ಖಲಿಸ್ತಾನಿ ಉಗ್ರನ ಹತ್ಯೆ – ಹೊಣೆ ಹೊತ್ತುಕೊಂಡ ಬಿಷ್ಣೋಯ್‌ ಗ್ಯಾಂಗ್‌

    ಕೆನಡಾ ಸರ್ಕಾರವು ಭಯೋತ್ಪಾದಕರಿಗೆ ಸುರಕ್ಷಿತ ಆಶ್ರಯವನ್ನು ನೀಡಬಾರದು. ಭಯೋತ್ಪಾದನೆ ಆರೋಪಗಳನ್ನು ಎದುರಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಅಥವಾ ಆರೋಪಗಳನ್ನು ಎದುರಿಸಲು ಅವರನ್ನು ಭಾರತಕ್ಕೆ ಕಳುಹಿಸಬೇಕು ಎಂದು ನಾವು ಬಯಸುತ್ತೇವೆ ಎಂದು ಅವರು ಹೇಳಿದರು.

    ಭಾರತವು ವರ್ಷ ವರ್ಷ ಕನಿಷ್ಠ 20-25 ವ್ಯಕ್ತಿಗಳನ್ನು ಹಸ್ತಾಂತರಿಸುವಂತೆ ಕೋರಿದೆ. ಆದರೆ ಕೆನಡಾದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದರು.

     

    ಈ ವರ್ಷ ಜೂನ್ 18 ರಂದು ಇಬ್ಬರು ಅಪರಿಚಿತ ದುಷ್ಕರ್ಮಿಗಳಿಂದ ಗುರುದ್ವಾರದ ಹೊರಗೆ ಗುಂಡಿಕ್ಕಿ ಕೊಲ್ಲಲ್ಪಟ್ಟ ಖಲಿಸ್ತಾನ್ ಟೈಗರ್ ಫೋರ್ಸ್ (ಕೆಟಿಎಫ್) ಮುಖ್ಯಸ್ಥ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಬಗ್ಗೆ ಕೆನಡಾದಿಂದ ಭಾರತಕ್ಕೆ ಯಾವುದೇ ನಿರ್ದಿಷ್ಟ ಮಾಹಿತಿ ಬಂದಿಲ್ಲ ಎಂದು ಬಾಗ್ಚಿ ಹೇಳಿದ್ದಾರೆ.

    ಈ ಪ್ರಕರಣದಲ್ಲಿ ಕೆನಡಾ ಯಾವುದೇ ನಿರ್ದಿಷ್ಟ ಮಾಹಿತಿಯನ್ನು ಹಂಚಿಕೊಂಡಿಲ್ಲ. ನಾವು ಈ ಕುರಿತು ಯಾವುದೇ ನಿರ್ದಿಷ್ಟ ಮಾಹಿತಿಯನ್ನು ಪಡೆಯಲು ಸಿದ್ಧರಿದ್ದೇವೆ. ಆದರೆ ಇಲ್ಲಿಯವರೆಗೆ ನಮಗೆ ಕೆನಡಾದಿಂದ ಯಾವುದೇ ಮಾಹಿತಿ ಬಂದಿಲ್ಲ ಎಂದು ಬಾಗ್ಚಿ ಹೇಳಿದರು.

    ಭಾರತದ ಜೊತೆಗಿನ ವ್ಯಾಪಾರ ಒಪ್ಪಂದ ಮುಂದೂಡಿ, ಭಾರತದ ರಾಯಭಾರಿಯನ್ನು ಉಚ್ಛಾಟಿಸಿದ್ದ ಕೆನಡಾ ಸರ್ಕಾರಕ್ಕೆ ಭಾರತ ಮತ್ತೊಂದು ಪೆಟ್ಟು ನೀಡಿದೆ. ಭಾರತಕ್ಕೆ ಬರುವ ಕೆನಡಾ ಪ್ರಜೆಗಳಿಗೆ ವೀಸಾ ನೀಡಿಕೆಯನ್ನು ಕೇಂದ್ರ ಸರ್ಕಾರ ತಾತ್ಕಲಿಕವಾಗಿ ಸ್ಥಗಿತ ಮಾಡಿದೆ. ಮುಂದಿನ ಆದೇಶದವರೆಗೆ ಇದು ಜಾರಿಯಲ್ಲಿ ಇರಲಿದೆ.

    ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೋ ಜಿ-20 ಶೃಂಗಸಭೆಗೆ ಬರುವ ಮೊದಲು ಖಲಿಸ್ತಾನಿ ಉಗ್ರ ಪನ್ನೂ ಸೇರಿ ಹಲವರ ಜೊತೆ ಸಭೆ ಮಾಡಿದ್ದರು ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆನಡಾದಲ್ಲಿ ಭಾರತ ವಿರೋಧಿ ಚಟುವಟಿಕೆ ಕುರಿತು ಮೋದಿ-ಟ್ರುಡೋ ಚರ್ಚೆ

    ಕೆನಡಾದಲ್ಲಿ ಭಾರತ ವಿರೋಧಿ ಚಟುವಟಿಕೆ ಕುರಿತು ಮೋದಿ-ಟ್ರುಡೋ ಚರ್ಚೆ

    – ವಿಮಾನದಲ್ಲಿ ತಾಂತ್ರಿಕ ದೋಷ, ಭಾರತದಲ್ಲೇ ಮತ್ತೊಂದು ದಿನ ಕಳೆಯಲಿರುವ ಕೆನಡಾ ಪ್ರಧಾನಿ

    ನವದೆಹಲಿ: ಜಿ20 ಶೃಂಗಸಭೆಯ (G20 Summit) ಸಂದರ್ಭದಲ್ಲಿ ತಾವು ಮತ್ತು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೊಂದಿಗೆ ಖಲಿಸ್ತಾನಿಗಳ ಹಿಂಸಾಚಾರ ಹಾಗೂ ವಿದೇಶಿ ಹಸ್ತಕ್ಷೇಪದ ಕುರಿತು ಮಾತನಾಡಿರುವುದಾಗಿ ಕೆನಡಾದ (Canada) ಪ್ರಧಾನಿ ಜಸ್ಟಿನ್ ಟ್ರುಡೊ (Justin Trudeau) ಭಾನುವಾರ ಹೇಳಿದ್ದಾರೆ.

    ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರುಡೋ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾವು 2 ವಿಚಾರವಾಗಿ ಅನೇಕ ಚರ್ಚೆಗಳನ್ನು ನಡೆಸಿದ್ದೇವೆ ಎಂದು ಹೇಳಿದರು. ಖಲಿಸ್ತಾನಿ ಪ್ರತಿಭಟನೆಗಳ ಬಗ್ಗೆ ಮಾತನಾಡುತ್ತಾ, ಕೆನಡಾ ಯಾವಾಗಲೂ ಅಭಿವ್ಯಕ್ತಿ ಸ್ವಾತಂತ್ರ‍್ಯ, ಆತ್ಮಸಾಕ್ಷಿಯ ಸ್ವಾತಂತ್ರ‍್ಯ ಮತ್ತು ಶಾಂತಿಯುತ ಪ್ರತಿಭಟನೆಯ ಸ್ವಾತಂತ್ರ‍್ಯವನ್ನು ರಕ್ಷಿಸುತ್ತದೆ. ಮತ್ತು ಆ ದೇಶಕ್ಕೆ ಅವು ಅತ್ಯಂತ ಮಹತ್ವದ್ದಾಗಿವೆ. ಆದರೂ ಹಿಂಸೆಯನ್ನು ತಡೆಯಲು ಮತ್ತು ದ್ವೇಷದ ವಿರುದ್ಧ ಹಿಂದೆ ಸರಿಯಲು ನಾವು ಯಾವಾಗಲೂ ಸಿದ್ಧರಿರುತ್ತೇವೆ ಎಂದು ಹೇಳಿದರು.

    ಸಮುದಾಯದ ವಿಷಯದ ಬಗ್ಗೆ ಹೇಳುವುದಾದರೆ, ಕೆಲವರ ಕ್ರಮಗಳು ಇಡೀ ಸಮುದಾಯ ಅಥವಾ ಕೆನಡಾವನ್ನು ಪ್ರತಿನಿಧಿಸುವುದಿಲ್ಲ ಎಂಬುದನ್ನು ನೆನಪಿಟ್ಟುಕೊಳ್ಳುವುದು ಬಹಳ ಮುಖ್ಯ. ಅದರ ಇನ್ನೊಂದು ಬದಿ ನಾವು ಕಾನೂನಿನ ನಿಯಮವನ್ನು ಗೌರವಿಸುವ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದ್ದೇವೆ. ಮಾತ್ರವಲ್ಲದೇ ವಿದೇಶಿ ಹಸ್ತಕ್ಷೇಪದ ಬಗ್ಗೆ ಮಾತನಾಡಿ ನಾವು ಅದನ್ನು ಮಾಡಿದ್ದೇವೆ ಎಂದು ತಿಳಿಸಿರು. ಇದನ್ನೂ ಓದಿ: 2 ದಿನಗಳ ಜಿ-20 ಶೃಂಗಸಭೆ ಯಶಸ್ವಿ- ಗಾಂಧೀಜಿ ಸ್ಮಾರಕಕ್ಕೆ ವಿಶ್ವನಾಯಕರ ನಮನ

    ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ನಾನು ಮತ್ತು ಕೆನಡಾದ ಪ್ರಧಾನ ಮಂತ್ರಿ ವಿವಿಧ ವಲಯಗಳಲ್ಲಿ ಭಾರತ-ಕೆನಡಾ ಬಾಂಧವ್ಯಗಳ ಸಂಪೂರ್ಣ ಶ್ರೇಣಿಯನ್ನು ಚರ್ಚಿಸಿದ್ದೇವೆ ಎಂದು ಹೇಳಿದ್ದಾರೆ.

    ವಿಮಾನದಲ್ಲಿ ತಂತ್ರಿಕ ದೋಷ:
    ಜಿ20 ಶೃಂಗಸಭೆಯ ಬಳಿಕ ಕೆನಡಾಗೆ ಹೊರಟಿದ್ದ ಜಸ್ಟಿನ್ ಟ್ರುಡೋ ಅವರ ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾಗಿದ್ದು, ಈ ಹಿನ್ನೆಲೆ ಅವರು ಮತ್ತೊಂದು ದಿನ ಭಾರತದಲ್ಲೇ ಉಳಿಯಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: G20 Summit: ‘ಆರ್‌ಆರ್‌ಆರ್‌’ ಚಿತ್ರವನ್ನು ಹೊಗಳಿದ ಬ್ರೆಜಿಲ್‌ ಅಧ್ಯಕ್ಷ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಗಾ ಭಾಷಣದ ಮಧ್ಯೆ ಮೊಳಗಿತು ಖಲಿಸ್ತಾನ್ ಜಿಂದಾಬಾದ್ ಘೋಷಣೆ

    ರಾಗಾ ಭಾಷಣದ ಮಧ್ಯೆ ಮೊಳಗಿತು ಖಲಿಸ್ತಾನ್ ಜಿಂದಾಬಾದ್ ಘೋಷಣೆ

    ವಾಷಿಂಗ್ಟನ್: ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಯವರು (Rahul Gandhi) ಖಲಿಸ್ತಾನಿ (Khalistan) ಹೋರಾಟಗಾರರ ಆಕ್ರೋಶ ಎದುರಿಸಿದ ಘಟನೆ ಬುಧವಾರ ನಡೆದಿದೆ. ಅಲ್ಲದೆ ಅದರ ವೀಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಸ್ಯಾನ್‍ಫ್ರಾನ್ಸಿಸ್ಕೋದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಖಲಿಸ್ತಾನಿ ಸಂಘಟನೆಯ ಬೆಂಬಲಿಗರು ರಾಹುಲ್ ಗಾಂಧಿಯವರ ಭಾಷಣದ ನಡುವೆ “ಖಲಿಸ್ತಾನ್ ಜಿಂದಾಬಾದ್” ಎಂದು ಘೋಷಣೆ ಕೂಗಿದ್ದಾರೆ. ಅಲ್ಲದೆ ಖಲಿಸ್ತಾನದ ಧ್ವಜವನ್ನು ಪ್ರದರ್ಶಿಸಿದ್ದಾರೆ. ಇದಕ್ಕೆ ಮಂದಹಾಸದಲ್ಲೇ ಉತ್ತರ ಕೊಟ್ಟ ರಾಹುಲ್ ದ್ವೇಷದ ನಗರದಲ್ಲಿ ಪ್ರೀತಿಯ ಅಂಗಡಿ ತೆರೆಯಬೇಕು ಎಂದಿದ್ದಾರೆ. ಇದನ್ನೂ ಓದಿ: ಮೋದಿಯನ್ನು ದೇವರೊಂದಿಗೆ ಚರ್ಚೆಗೆ ಬಿಟ್ಟರೆ, ನಾನೇನು ಸೃಷ್ಟಿ ಮಾಡಿದೆ ಅಂತ ದೇವರಿಗೇ ಕನ್ಫ್ಯೂಸ್ ಆಗುತ್ತೆ – ರಾಗಾ

    ಇದಾದ ಬಳಿಕ ಅಮೆರಿಕದಲ್ಲಿ ನೆಲಸಿರುವ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನು ವಿಡಿಯೋ ಒಂದನ್ನು ಹರಿಬಿಟ್ಟಿದ್ದಾನೆ. ಅದರಲ್ಲಿ ರಾಹುಲ್ ಗಾಂಧಿ ಅಮೆರಿಕದಲ್ಲಿ ಎಲ್ಲೇ ಹೋದರೂ ಖಲಿಸ್ತಾನಿಗಳೇ ಸಿಗಲಿದ್ದಾರೆ ಎಂದು ವಿಡಿಯೋದಲ್ಲಿ ಹೇಳಿದ್ದಾನೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಜೂ. 22 ರಂದು ಅಮರಿಕಕ್ಕೆ ಬಂದಾಗಲೂ ಖಲಿಸ್ತಾನಿ ಪ್ರತಿಭಟನೆ ಎದುರಿಸಲಿದ್ದಾರೆ ಎಂದು ಎಚ್ಚರಿಸಿದ್ದಾನೆ. ಇದನ್ನೂ ಓದಿ: ನನ್ನ ವಿರುದ್ಧ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ : ಕುಸ್ತಿಪಟುಗಳಿಗೆ ಸಿಂಗ್‌ ಸವಾಲ್‌

  • ಭಾರತ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಖಲಿಸ್ತಾನಿ ಕಮಾಂಡೋ ಹತ್ಯೆ

    ಭಾರತ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಖಲಿಸ್ತಾನಿ ಕಮಾಂಡೋ ಹತ್ಯೆ

    ಇಸ್ಲಾಮಾಬಾದ್: ಖಲಿಸ್ತಾನ್ ಸಂಘಟನೆಯ ಕಮಾಂಡೋ ಫೋರ್ಸ್ (Khalistan Commando Force) ಮುಖ್ಯಸ್ಥ ಪರಮ್‍ಜಿತ್ ಸಿಂಗ್ ಪಂಜ್ವಾರ್ ಅಕಾ ಮಲಿಕ್ ಸರ್ದಾರ್ ಸಿಂಗ್‍ನನ್ನು ಶನಿವಾರ ಪಾಕಿಸ್ತಾನದ (Pakistan) ಲಾಹೋರ್‌ನ (Lahore) ಜೋಹರ್ ಟೌನ್‍ನಲ್ಲಿ ಇಬ್ಬರು ಅಪರಿಚಿತರು ಗುಂಡು ಹಾರಿಸಿ ಕೊಂದಿದ್ದಾರೆ.

    ಜೋಹರ್ ಟೌನ್‍ನಲ್ಲಿರುವ ಸೂರ್ಯಕಾಂತಿ ಸೊಸೈಟಿಯಲ್ಲಿರುವ ಅವರ ನಿವಾಸದ ಬಳಿ ಮುಂಜಾನೆ ಬೈಕಿನಲ್ಲಿ ಆಗಮಿಸಿದ ಇಬ್ಬರು ಅಪರಿಚಿತ ವ್ಯಕ್ತಿಗಳು ಸಿಂಗ್ ಹಾಗೂ ಅವರ ಅಂಗರಕ್ಷಕನ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಪರಮ್‍ಜಿತ್ ಗುಂಡೇಟಿನಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗಾಯಗೊಂಡಿರುವ ಅಂಗರಕ್ಷಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹಾಡಹಗಲೇ ಗುಂಡೇಟು – ಮಹಾನಗರ ಪಾಲಿಕೆಯ ಸದಸ್ಯೆಯ ಪತಿಯ ಬರ್ಬರ ಹತ್ಯೆ

    ಭಾರತದ ಪಂಜಾಬ್‍ಗೆ (Punjab) ಡ್ರೋನ್‍ಗಳನ್ನು ಬಳಸಿಕೊಂಡು ಮಾದಕವಸ್ತು ಮತ್ತು ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲಿ ತೊಡಗಿದ್ದ ಪರಮ್‍ಜಿತ್, ತರನ್ ಬಳಿಯ ಪಂಜ್ವಾರ್ ಕುಗ್ರಾಮದಲ್ಲಿ ಜನಿಸಿದ್ದ. 1986 ರಲ್ಲಿ ಅವನ ಸೋದರ ಸಂಬಂಧಿ ಲಾಭ್ ಸಿಂಗ್‍ನಿಂದ ತೀವ್ರಗಾಮಿಯಾದ, ನಂತರ ಕೆಸಿಎಫ್‍ಗೆ (KCF) ಸೇರಿದ್ದ. ಅದಕ್ಕೂ ಮೊದಲು ಸೋಹಾಲ್‍ನ ಕೇಂದ್ರ ಸಹಕಾರಿ ಬ್ಯಾಂಕ್‍ನಲ್ಲಿ ಕೆಲಸ ಮಾಡಿದ್ದ.

    1990ರ ದಶಕದಲ್ಲಿ ಭಾರತೀಯ ಭದ್ರತಾ ಪಡೆಗಳಿಂದ (Indian security forces) ಲಾಭ್ ಸಿಂಗ್ ಹತ್ಯೆಯ ನಂತರ, ಪಂಜ್ವಾರ್ ಕೆಸಿಎಫ್‍ನ ಕಮಾಂಡೋ ಸ್ಥಾನ ವಹಿಸಿಕೊಂಡಿದ್ದ. ನಂತರ ಪಾಕಿಸ್ತಾನಕ್ಕೆ ಪಲಾಯನ ಮಾಡಿ, ಪಾಕಿಸ್ತಾನದ ಮೋಸ್ಟ್ ವಾಂಟೆಡ್ ಭಯೋತ್ಪಾದಕರ (Wanted Terrorists) ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ. ಗಡಿಯಾಚೆಗಿನ ಶಸ್ತ್ರಾಸ್ತ್ರ ಕಳ್ಳಸಾಗಣೆ ಮತ್ತು ಹೆರಾಯಿನ್ ಕಳ್ಳಸಾಗಣೆ ಮೂಲಕ ಹಣಕಾಸು ಪಡೆಯುವ ಮೂಲಕ ಕೆಸಿಎಫ್‍ನನ್ನು ಅಸ್ತಿತ್ವದಲ್ಲಿ ಇಟ್ಟುಕೊಂಡಿದ್ದ.

    1999ರ ಜೂ. 30 ರಂದು ಚಂಡೀಗಢದ (Chandigarh) ಪಾಸ್‌ಪೋರ್ಟ್ ಕಚೇರಿ ಬಳಿ ನಡೆದ ಬಾಂಬ್ ಸ್ಫೋಟ ನಡೆಸಿದ್ದ. ಈ ಸ್ಫೋಟದಲ್ಲಿ 4 ಮಂದಿ ಗಾಯಗೊಂಡಿದ್ದು, ಹಲವು ವಾಹನಗಳಿಗೂ ಹಾನಿಯಾಗಿತ್ತು. ಇದನ್ನೂ ಓದಿ: ಕ್ರಿಕೆಟಿಗ ನಿತೀಶ್ ರಾಣಾ ಪತ್ನಿಗೆ ಕಿರುಕುಳ – ಓರ್ವ ಅರೆಸ್ಟ್

  • ಪಂಜಾಬ್‌ನಲ್ಲಿ ಅಮೃತ್‌ಪಾಲ್‌ ಸಿಂಗ್‌ ಅರೆಸ್ಟ್‌; ಆದ್ರೆ ಅಸ್ಸಾಂ ಜೈಲಿಗೆ ಶಿಫ್ಟ್‌ – ಯಾಕೆ ಗೊತ್ತಾ?

    ಪಂಜಾಬ್‌ನಲ್ಲಿ ಅಮೃತ್‌ಪಾಲ್‌ ಸಿಂಗ್‌ ಅರೆಸ್ಟ್‌; ಆದ್ರೆ ಅಸ್ಸಾಂ ಜೈಲಿಗೆ ಶಿಫ್ಟ್‌ – ಯಾಕೆ ಗೊತ್ತಾ?

    ನವದೆಹಲಿ: ಪ್ರತ್ಯೇಕ ಖಲಿಸ್ತಾನ (Khalistan) ಪ್ರತಿಪಾದಕ ಅಮೃತ್‌ಪಾಲ್‌ ಸಿಂಗ್‌ನನ್ನು (Amritpal Singh) ಪಂಜಾಬ್‌ (Punjab) ಪೊಲೀಸರು ಬಂಧಿಸಿದ್ದು, ಅಸ್ಸಾಂನ (Assam) ದಿಬ್ರುಗಢ ಕೇಂದ್ರ ಕಾರಾಗೃಹಕ್ಕೆ ರವಾನಿಸಿದ್ದಾರೆ. ಪಂಜಾಬ್‌ನಲ್ಲಿ ಬಂಧಿಸಿ ಅಸ್ಸಾಂ ಜೈಲಿಗೆ ಯಾಕೆ ಶಿಫ್ಟ್‌ ಮಾಡಿದರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಹುಟ್ಟುಕೊಂಡಿದೆ.

    ಅಮೃತ್‌ಪಾಲ್‌ ಸಿಂಗ್‌ ಅಷ್ಟೇ ಅಲ್ಲ, ಆತನ ಎಂಟು ಮಂದಿ ಆಪ್ತರು ಸಹ ಈಗಾಗಲೇ ಅತ್ಯಂತ ಸುರಕ್ಷಿತ ಜೈಲಿನಲ್ಲಿ ಬಂಧನಕ್ಕೊಳಗಾಗಿದ್ದಾರೆ. ಇದು ಈಶಾನ್ಯದಲ್ಲಿರುವ ಅತ್ಯಂತ ಹಳೆಯ ಮತ್ತು ಅತ್ಯಂತ ಸುರಕ್ಷಿತ ಜೈಲುಗಳಲ್ಲಿ ಒಂದಾಗಿದೆ. ಇದನ್ನೂ ಓದಿ:‌ ಪರಾರಿಯಾಗಿದ್ದ ಖಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್ ಸಿಂಗ್ ಸರೆಂಡರ್

    ಅಸ್ಸಾಂ ಜೈಲಿಗೆ ಶಿಫ್ಟ್‌ ಮಾಡಿದ್ದೇಕೆ?
    ಉತ್ತರ ಭಾರತ ಭಾಗದ ಜೈಲುಗಳಲ್ಲಿ ಅಮೃತ್‌ಪಾಲ್‌ ಸಿಂಗ್ ಅಥವಾ ಪ್ರತ್ಯೇಕತಾವಾದಿ ಚಳವಳಿಯೊಂದಿಗೆ ಸಂಬಂಧ ಹೊಂದಿರುವ ದರೋಡೆಕೋರು ಇರುವ ಸಾಧ್ಯತೆಯಿದೆ. ಈ ಸಂಪರ್ಕ ಕೊಂಡಿಯನ್ನು ಕಡಿತಗೊಳಿಸುವುದು ಮುಖ್ಯವಾಗಿದೆ.

    ಆರೋಪಿಗಳು ಇತರ ಕೈದಿಗಳು ಮತ್ತು ಜೈಲು ಸಿಬ್ಬಂದಿಗಳೊಂದಿಗೆ ಸಂಪರ್ಕ ಸಾಧಿಸುವುದನ್ನು ತಡೆಯುವಲ್ಲಿ ಭಾಷೆಯೂ ಮುಖ್ಯ ಪಾತ್ರ ವಹಿಸುತ್ತದೆ. ದಿಬ್ರುಗಢವು ಅತ್ಯಂತ ಸುರಕ್ಷಿತ ಜೈಲು. ಅಲ್ಲದೇ, ಸ್ಥಳೀಯ ಸಿಖ್ ಸಮುದಾಯವು ಖಲಿಸ್ತಾನ್ ಚಳವಳಿಯ ಬಗ್ಗೆ ಸಹಾನುಭೂತಿ ಹೊಂದಿಲ್ಲ ಎಂಬುದು ಪೊಲೀಸ್‌ ಅಧಿಕಾರಿಗಳ ಅಭಿಪ್ರಾಯ. ಇದನ್ನೂ ಓದಿ: ಲಂಡನ್‍ಗೆ ತೆರಳುತ್ತಿದ್ದ ಅಮೃತ್‌ಪಾಲ್ ಪತ್ನಿ ಪೊಲೀಸರ ವಶಕ್ಕೆ

    ದಿಬ್ರುಗಢ ಜೈಲು 170 ವರ್ಷಗಳ ಇತಿಹಾಸದಲ್ಲಿ ಇಂದಿಗೂ ಉತ್ತಮ ಸ್ಥಿತಿಯಲ್ಲಿದೆ. ಇದು ಅತ್ಯಂತ ಸುರಕ್ಷಿತ ಜೈಲು ಎಂಬ ಖ್ಯಾತಿ ಹೊಂದಿದೆ. ದಿಬ್ರುಗಢ ಪಟ್ಟಣದ ಮಧ್ಯಭಾಗದಲ್ಲಿರುವ ಜೈಲಿನ ಸ್ಥಳವು, ಬಂಧಿತರು ತಪ್ಪಿಸಿಕೊಳ್ಳುವ ಪ್ರಯತ್ನವನ್ನು ತಡೆಯಲು ಅಧಿಕಾರಿಗಳಿಗೆ ಅನುಕೂಲಕರವಾಗಿದೆ ಎನ್ನುತ್ತಾರೆ ಪೊಲೀಸರು.

    ಭದ್ರತೆ ಹೆಚ್ಚಳ
    ಅಮೃತ್‌ಪಾಲ್ ಸಿಂಗ್ ಸಹಾಯಕರನ್ನು ಹೊಂದಿರುವ ಸೆಲ್‌ಗಳ ಮುಂದೆ ಹೊಸ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಕ್ಯಾಮೆರಾಗಳನ್ನು ಸಹ ಸರಿಪಡಿಸಲಾಗಿದೆ. ಕೆಲವನ್ನು ಬದಲಾಯಿಸಲಾಗಿದೆ. ದಿನದ 24 ಗಂಟೆ ಅವಧಿಯಲ್ಲೂ ಪಾಳಿಯಲ್ಲಿ ಪೊಲೀಸರ ಸರ್ಪಗಾವಲು ವಿಧಿಸಲಾಗಿದೆ. ಇದನ್ನೂ ಓದಿ: ಪೊಲೀಸರ ಬಂಧನದಿಂದ ಎಸ್ಕೇಪ್ ಆಗಿದ್ದ ಅಮೃತ್‌ಪಾಲ್ ಸಿಂಗ್‌ನ ಆಪ್ತ ಸಹಾಯಕ ಅರೆಸ್ಟ್

    1860 ರಲ್ಲಿ ಬ್ರಿಟಿಷರು ನಿರ್ಮಿಸಿದ ಈ ಜೈಲಿನಲ್ಲಿ 680 ಕೈದಿಗಳಿದ್ದಾರೆ. ಅಸ್ಸಾಂ ಸರ್ಕಾರವು ಬಿಡುಗಡೆ ಮಾಡುವ ಪಾಕ್ಷಿಕ ಜೈಲು ಜನಸಂಖ್ಯೆಯ ದಾಖಲೆಗಳಲ್ಲಿ ಈ ಮಾಹಿತಿ ಇದೆ. ದಿಬ್ರುಗಢ ಜೈಲು ಪ್ರಸ್ತುತ ರಾಜ್ಯದ ಮೂರನೇ ಅತಿ ಹೆಚ್ಚು ಕೈದಿಗಳನ್ನು ಹೊಂದಿರುವ ಕೇಂದ್ರ ಕಾರಾಗೃಹವಾಗಿದೆ.

    ಪ್ರತ್ಯೇಕ ಖಲಿಸ್ತಾನ ಚಳವಳಿ, ಶಸ್ತ್ರಾಸ್ತ್ರಗಳ ಸಂಗ್ರಹ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಅನೇಕ ಗಣ್ಯರಿಗೆ ಬೆದರಿಕೆ ಹಾಕಿದ ಆರೋಪಗಳಡಿ ಅಮೃತ್‌ಪಾಲ್‌ ಸಿಂಗ್‌ ವಿರುದ್ಧ ಕಾರ್ಯಚರಣೆ ನಡೆಸಿ ಪಂಜಾಬ್‌ ಪೊಲೀಸರು ಬಂಧಿಸಿದ್ದಾರೆ. ಕಳೆದ ಮಾರ್ಚ್‌ ತಿಂಗಳಿಂದ ಸಿಂಗ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಇದನ್ನೂ ಓದಿ: ಟರ್ಬನ್ ಬಿಚ್ಚಿಟ್ಟು, ಸನ್‌ಗ್ಲಾಸ್, ಜಾಕೆಟ್ ತೊಟ್ಟು ದೆಹಲಿ ಬೀದಿಯಲ್ಲಿ ಕಂಡುಬಂದ ಅಮೃತ್‌ಪಾಲ್ ಸಿಂಗ್

  • ಪೊಲೀಸರ ಬಂಧನದಿಂದ ಎಸ್ಕೇಪ್ ಆಗಿದ್ದ ಅಮೃತ್‌ಪಾಲ್ ಸಿಂಗ್‌ನ ಆಪ್ತ ಸಹಾಯಕ ಅರೆಸ್ಟ್

    ಪೊಲೀಸರ ಬಂಧನದಿಂದ ಎಸ್ಕೇಪ್ ಆಗಿದ್ದ ಅಮೃತ್‌ಪಾಲ್ ಸಿಂಗ್‌ನ ಆಪ್ತ ಸಹಾಯಕ ಅರೆಸ್ಟ್

    ನವದೆಹಲಿ: ಪರಾರಿಯಾಗಿರುವ ಖಲಿಸ್ತಾನಿ ಬೆಂಬಲಿಗ ಅಮೃತಪಾಲ್ ಸಿಂಗ್‌ನ ಆಪ್ತ ಸಹಾಯಕ ಪಪ್ಪಲ್ಪ್ರೀತ್ ಸಿಂಗ್‌ನನ್ನು ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಸೋಮವಾರ ಬಂಧಿಸಲಾಗಿದೆ.

    ಕಳೆದ ತಿಂಗಳು ಜಲಂಧರ್‌ನಲ್ಲಿ ಪೋಲೀಸರ ಬಲೆಯಿಂದ ಅಮೃತ್‌ಪಾಲ್ ಸಿಂಗ್ ಹಾಗೂ ಪಪ್ಪಲ್ಪ್ರೀತ್ ಸಿಂಗ್ ನಾಟಕೀಯವಾಗಿ ತಪ್ಪಿಸಿಕೊಂಡಿದ್ದರು. ಬಳಿಕ ಇಬ್ಬರೂ ಒಟ್ಟಿಗೆ ತಲೆಮರೆಸಿಕೊಂಡಿದ್ದು, ಪೊಲೀಸರಿಂದ ತಪ್ಪಿಸಿಕೊಳ್ಳಲು ಬೇರೆ ಬೇರೆ ಮಾರ್ಗಗಳನ್ನು ಕಂಡುಹಿಡಿದು ಸ್ಥಳ ಬದಲಾವಣೆ ಮಾಡುತ್ತಿದ್ದರು. ಇದೀಗ ಪಂಜಾಬ್ ಪೊಲೀಸರ ಗುಪ್ತಚರ ಘಟಕ ಪಪ್ಪಲ್ಪ್ರೀತ್ ಸಿಂಗ್‌ನನ್ನು ಬಂಧಿಸಿದೆ.

    ಅಮೃತ್‌ಪಾಲ್ ಸಿಂಗ್ ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸಿ ತನ್ನ ಗುರುತು ಯಾರಿಗೂ ಸಿಗದಂತೆ ವೇಷಗಳನ್ನು ಬದಲಿಸಿಕೊಂಡು, ಪಂಜಾಬ್ ಮಾತ್ರವಲ್ಲದೇ ದೆಹಲಿಯಲ್ಲಿಯೂ ತಿರುಗಾಡಿರುವುದು ಕೆಲ ದಿನಗಳ ಹಿಂದೆ ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿತ್ತು. ಆತ ಪೊಲೀಸರ ಬಂಧನದಿಂದ ತಪ್ಪಿಸಿಕೊಂಡು 3 ವಾರ ಆಗಿದ್ದರೂ ಇಲ್ಲಿಯವರೆಗೆ ಅಧಿಕಾರಿಗಳಿಂದ ಆತನನ್ನು ಹಿಡಿಯಲು ಸಾಧ್ಯವಾಗಿಲ್ಲ. ಇದೀಗ ಅಮೃತ್‌ಪಾಲ್ ಸಿಂಗ್‌ನ ಪತ್ತೆಗಾಗಿ ಪಂಜಾಬ್ ಪೊಲೀಸರಿಗೆ ಏಪ್ರಿಲ್ 14 ರಂದು ಬೈಸಾಖಿ ಆಚರಣೆ ವರೆಗೆ ಎಲ್ಲಾ ರಜೆಗಳನ್ನು ರದ್ದುಗೊಳಿಸಲಾಗಿದೆ. ಇದನ್ನೂ ಓದಿ: ಮೋದಿ ಇಡೀ ವಿಶ್ವಕ್ಕೆ ಹುಲಿ: ಈಶ್ವರಪ್ಪ

    ಇದೀಗ ಪಪ್ಪಲ್ಪ್ರೀತ್ ಸಿಂಗ್‌ನ ಬಂಧನವಾಗಿದ್ದು, ಈಗಲಾದರೂ ಅಮೃತ್‌ಪಾಲ್ ಸಿಂಗ್ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಾನೆಯೇ ನೋಡಬೇಕಿದೆ. ಆತ ಈ ತಿಂಗಳ ಕೊನೆಯಲ್ಲಿ ಸಿಖ್ಖರ ಸಭೆಯನ್ನು ಕರೆದಿದ್ದಾನೆ. ಈ ಹಿನ್ನೆಲೆ ಆತ ಪಂಜಾಬ್‌ಗೆ ಆಗಮಿಸಿ ಪೊಲೀಸರಿಗೆ ಶರಣಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಇದನ್ನೂ ಓದಿ: ಮದುವೆ ಸಂಭ್ರಮದಲ್ಲಿ ಗುಂಡು ಹಾರಿಸಿದ ವಧುವಿಗೆ ಬಂತು ಕುತ್ತು- ಪೊಲೀಸರಿಂದ ಹುಡುಕಾಟ

  • ಲಂಡನ್‌ನ ಭಾರತೀಯ ಹೈಕಮಿಷನ್ ಮೇಲೆ ದಾಳಿ – ಪ್ರಕರಣ ದಾಖಲಿಸಿಕೊಂಡ ದೆಹಲಿ ಪೊಲೀಸರು

    ಲಂಡನ್‌ನ ಭಾರತೀಯ ಹೈಕಮಿಷನ್ ಮೇಲೆ ದಾಳಿ – ಪ್ರಕರಣ ದಾಖಲಿಸಿಕೊಂಡ ದೆಹಲಿ ಪೊಲೀಸರು

    ನವದೆಹಲಿ: ಮಾರ್ಚ್ 19 ರಂದು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ (Indian High Commission in London) ಎದುರು ಖಲಿಸ್ತಾನಿ (Khalistan) ಬೆಂಬಲಿಗರು ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು (Delhi Police) ಶುಕ್ರವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಐಪಿಸಿ, ಯುಎಪಿಎ ಮತ್ತು ಪಿಡಿಪಿಪಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ ಸಚಿವಾಲಯ ದೆಹಲಿ ಪೊಲೀಸರಿಗೆ ಸೂಚಿಸಿದ್ದು, ಈ ಹಿನ್ನೆಲೆ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

    ದೆಹಲಿ ಪೊಲೀಸರ ವಿಶೇಷ ತಂಡ ಈ ಪ್ರಕರಣದ ತನಿಖೆಯನ್ನು ಆರಂಭಿಸಿದೆ. ವಿದೇಶದಲ್ಲಿ ಭಾರತೀಯ ರಾಷ್ಟ್ರೀಯತೆಯನ್ನು ಹೊಂದಿರುವ ಕೆಲ ವ್ಯಕ್ತಿಗಳೇ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸಿರುವ ಕಾರಣ ವಿಶೇಷ ತಂಡ ತನಿಖೆಯನ್ನು ಪ್ರಾರಂಭಿಸಿದೆ.

    ಮಾರ್ಚ್ 19ರಂದು ಖಲಿಸ್ತಾನಿ ಬೆಂಬಲಿಗರ ಗುಂಪು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಬಳಿ ಪ್ರತ್ಯೇಕತಾವಾದಿ ನಾಯಕ ಅಮೃತ್‌ಪಾಲ್ ಸಿಂಗ್‌ನ ಪರ ಪೋಸ್ಟರ್ ಹಾಗೂ ಧ್ವಜಗಳನ್ನು ಹಿಡಿದು ಘೋಷಣೆ ಕೂಗಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿರುವ ವೀಡಿಯೋವೊಂದರಲ್ಲಿ ಕಿಡಿಗೇಡಿಗಳು ಹೈಕಮಿಷನ್‌ನ ಗೋಡೆಯನ್ನು ಹತ್ತಿ ಭಾರತದ ಧ್ವಜವನ್ನು ಉರುಳಿಸಿರುವುದು ಕಂಡುಬಂದಿದೆ. ಇದನ್ನೂ ಓದಿ: 12 ಗಂಟೆಗೊಮ್ಮೆ ಸ್ಥಳ ಬದಲಾವಣೆ – ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿರುವ ಅಮೃತ್‌ಪಾಲ್ ಸಿಂಗ್

    ಭಾರತಕ್ಕೆ ವಿರೋಧವಾಗಿ ನಡೆಸಲಾಗುತ್ತಿದ್ದ ಪ್ರತಿಭಟನೆಯನ್ನು ಹತೋಟಿಗೆ ತರಲು ಪೊಲೀಸರನ್ನು ಸ್ಥಳಕ್ಕೆ ಕರೆಸಲಾಗಿತ್ತು. ಆದರೂ ಖಲಿಸ್ತಾನಿ ಬೆಂಬಲಿಗರು ಖಲಿಸ್ತಾನ ಜಿಂದಾಬಾದ್, ಭಾರತ ಸರ್ಕಾರ ನಾಚಿಕೆಗೇಡು ಎಂದು ಘೋಷಣೆ ಕೂಗಿದ್ದಾರೆ.

    ಭಾರತೀಯ ಹೈಕಮಿಷನ್‌ನಲ್ಲಿ ನಡೆದ ವಿಧ್ವಂಸಕ ಕೃತ್ಯದ ಬಳಿಕ ಭಾರತದಲ್ಲಿನ ಬ್ರಿಟನ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಅವರು ಘಟನೆಗಳನ್ನು ಖಂಡಿಸಿದ್ದಾರೆ. ಭಾರತೀಯ ಹೈಕಮಿಷನ್‌ನ ಆವರಣದಲ್ಲಿ ಅವಮಾನಕರ ಕೃತ್ಯಗಳನ್ನು ಎಸಗಿರುವುದನ್ನು ನಾನು ಖಂಡಿಸುತ್ತೇನೆ. ಇದು ಸಂಪೂರ್ಣ ಸ್ವೀಕಾರಾರ್ಹವಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮೆಕ್ಸಿಕೋ ಭಾರತೀಯ ರಾಯಭಾರ ಕಚೇರಿಗೆ ಬೆಂಗಳೂರು ಕಾನ್ಸ್‌ಟೇಬಲ್ ಆಯ್ಕೆ

  • 80 ಸಾವಿರ ಪೊಲೀಸರು ಏನ್ ಮಾಡ್ತಿದ್ದಾರೆ – ಅಮೃತ್‌ಪಾಲ್ ಸಿಂಗ್ ಬಂಧಿಸದ ಸರ್ಕಾರದ ವಿರುದ್ಧ ಹೈಕೋರ್ಟ್ ಚಾಟಿ

    80 ಸಾವಿರ ಪೊಲೀಸರು ಏನ್ ಮಾಡ್ತಿದ್ದಾರೆ – ಅಮೃತ್‌ಪಾಲ್ ಸಿಂಗ್ ಬಂಧಿಸದ ಸರ್ಕಾರದ ವಿರುದ್ಧ ಹೈಕೋರ್ಟ್ ಚಾಟಿ

    ಚಂಡೀಗಢ: ಪಂಜಾಬ್‌ನಲ್ಲಿ (Punjab) ಗುಪ್ತಚರ ಇಲಾಖೆ ವಿಫಲವಾಗಿದ್ದು, 80 ಸಾವಿರ ಪೊಲೀಸರಿಂದ ಓರ್ವ ವ್ಯಕ್ತಿಯನ್ನು ಬಂಧಿಸಲು ಸಾಧ್ಯವಾಗಿಲ್ಲ. ಅವರೆಲ್ಲಾ ಏನು ಮಾಡುತ್ತಿದ್ದಾರೆ? ಎಂದು ಪಂಜಾಬ್ ಹರಿಯಾಣ ಹೈಕೋರ್ಟ್ (High Court) ಪಂಜಾಬ್ ಪೊಲೀಸ್ ಇಲಾಖೆಯನ್ನು ತರಾಟೆ ತೆಗೆದುಕೊಂಡಿದೆ.

    ಖಲಿಸ್ತಾನಿ (Khalistan) ಬೆಂಬಲಿಗ ಅಮೃತ್‌ಪಾಲ್ ಸಿಂಗ್ (Amritpal Singh) ನಾಪತ್ತೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್‌ಗೆ ಪೊಲೀಸ್ ಇಲಾಖೆಯ ಪರ ವಕೀಲರು ಮಾಹಿತಿ ನೀಡಿದ್ದಾರೆ. ಅಮೃತ್‌ಪಾಲ್ ಸಿಂಗ್ ಇನ್ನೂ ತಲೆಮರೆಸಿಕೊಂಡಿದ್ದಾನೆ. ಆತನ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

    ಈ ವಾದ ಆಲಿಸಿದ ಬಳಿಕ ಗರಂ ಆದ ಕೋರ್ಟ್, ಪಂಜಾಬ್ ಸರ್ಕಾರ ತನ್ನ ಜವಬ್ದಾರಿ ನಿಭಾಯಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿತು. ಅಮೃತ್ ಪಾಲ್ ಹೊರತುಪಡಿಸಿ ಎಲ್ಲರನ್ನೂ ಬಂಧಿಸಿದ್ದು ಹೇಗೆ? ನಾವು ಕಥೆಯನ್ನು ನಂಬಲು ಸಾಧ್ಯವಿಲ್ಲ ಎಂದು ತರಾಟೆಗೆ ತೆಗೆದುಕೊಂಡಿತು. ಇದನ್ನೂ ಓದಿ: ಮರಣದಂಡನೆಗೆ ಯಾವ ವಿಧಾನ ಸೂಕ್ತ?- ತಜ್ಞರ ವರದಿ ಕೇಳಿದ ಸುಪ್ರೀಂಕೋರ್ಟ್

    ಖಲಿಸ್ತಾನಿ ಬೆಂಬಲಿಗ ಅಮೃತ್ ಪಾಲ್ ಸಿಂಗ್ ಬಂಧನಕ್ಕಾಗಿ ಕಳೆದ 4 ದಿನಗಳಿಂದ ಬಹುದೊಡ್ಡ ಕಾರ್ಯಾಚರಣೆಯನ್ನು ಪಂಜಾಬ್ ಪೊಲೀಸರು ಆರಂಭಿಸಿದ್ದಾರೆ. ಸತತ ಹುಡುಕಾಟದ ಬಳಿಕ ಅಮೃತ್ ಪಾಲ್ ಸಿಂಗ್ ಬಂಧಿಸುವಲ್ಲಿ ವಿಫಲವಾದ ಇಲಾಖೆ ಆತನ ಆಪ್ತರನ್ನು ಬಂಧಿಸಿದೆ. ಅಮೃತ್‌ಪಾಲ್ ಸಿಂಗ್ ಬಂಧನಕ್ಕೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಹಿನ್ನೆಲೆ ರಾಜ್ಯದ ಹಲವು ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು : ಮೋದಿ ಬಳಿ ಅಫ್ರಿದಿ ಮನವಿ