Tag: ಖಲಿಸ್ತಾನಿ

  • ಬಂಧಿತ ಖಲಿಸ್ತಾನಿ ಉಗ್ರ ಮಹಾಕುಂಭ ಮೇಳದಲ್ಲಿ ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದ

    ಬಂಧಿತ ಖಲಿಸ್ತಾನಿ ಉಗ್ರ ಮಹಾಕುಂಭ ಮೇಳದಲ್ಲಿ ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದ

    – ಕೃತ್ಯ ಎಸಗಿ ಪೋರ್ಚುಗಲ್‌ಗೆ ಪರಾರಿಯಾಗಲು ಪ್ಲ್ಯಾನ್‌
    – ಗುಪ್ತಚರ ಇಲಾಖೆಯ ಖಚಿತ ಮಾಹಿತಿಯಿಂದ ಇಂದು ಅರೆಸ್ಟ್‌

    ಲಕ್ನೋ: ಪಾಕಿಸ್ತಾನದ (Pakistan) ಗುಪ್ತಚರ ಸಂಸ್ಥೆ ಐಎಸ್‌ಐ (ISI) ಜೊತೆ ಸಂಪರ್ಕ ಹೊಂದಿದ್ದ ಖಲಿಸ್ತಾನಿ ಉಗ್ರ ಮಹಾಕುಂಭ ಮೇಳದಲ್ಲಿ (Maha Kumbh Mela) ದುಷ್ಕೃತ್ಯ ಎಸಗಲು ಸಂಚು ರೂಪಿಸಿದ್ದ ಸ್ಫೋಟಕ ವಿಚಾರ ಈಗ ಬೆಳಕಿಗೆ ಬಂದಿದೆ.

    ಬಂಧನಕ್ಕೆ ಒಳಗಾಗಿರುವ ಉಗ್ರ ಮಸಿಹ್ ಕುಂಭ ಮೇಳದಲ್ಲಿ ಕೃತ್ಯ ಎಸಗಲು ಮುಂದಾಗಿದ್ದ. ಆದರೆ ತೀವ್ರ ಭದ್ರತಾ ತಪಾಸಣೆಯಿಂದಾಗಿ ಈತ ತನ್ನ ಯೋಜನೆಯನ್ನು ಕಾರ್ಯಗತಗೊಳಿಸಲು ಸಾಧ್ಯವಾಗಲಿಲ್ಲ ಎಂದು ಉತ್ತರ ಪ್ರದೇಶ (Uttar Pradesh) ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

     

    ಪ್ರಯಾಗ್‌ರಾಜ್ ಜಿಲ್ಲೆಯಲ್ಲಿ ಮಹಾಕುಂಭದ ಸಮಯದಲ್ಲಿ ದಾಳಿ ನಡೆಸಿದ ನಂತರ ಪೋರ್ಚುಗಲ್‌ಗೆ ಪಲಾಯನ ಮಾಡುವ ಉದ್ದೇಶ ಹೊಂದಿದ್ದ. ಆದರೆ ಪೊಲೀಸರ ಜಾಗರೂಕತೆಯಿಂದಾಗಿ ಆತನ ಯೋಜನೆಗಳು ವಿಫವಾಗಿತ್ತು. ಮಹಾಕುಂಭದ ಸಿದ್ಧತೆಗಳ ಸಮಯದಲ್ಲಿ ಮಸಿಹ್ ಲಕ್ನೋ ಮತ್ತು ಕಾನ್ಪುರಕ್ಕೆ ಭೇಟಿ ನೀಡಿದ್ದ ಎಂದು ಹೇಳಿದರು.

    ಮಹಾಕುಂಭ ಪ್ರಾರಂಭವಾಗುವ ಮೊದಲು ಶಾಂತಿಯನ್ನು ಭಂಗಗೊಳಿಸುವ ಪ್ರಯತ್ನಗಳ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಈ ಮಾಹಿತಿಯ ಮೇರೆಗೆ ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ ಮತ್ತು ಐಎಸ್‌ಐ ಜೊತೆ ಸಂಪರ್ಕ ಹೊಂದಿದ್ದ ಮಸಿಹ್‌ನನ್ನು ಇಂದು ಕೌಶಂಬಿಯಿಂದ ಬಂಧಿಸಲಾಯಿತು ಎಂದು ತಿಳಿಸಿದರು. ಇದನ್ನೂ ಓದಿ: ಪಾಕಿಸ್ತಾನದ ಐಎಸ್‌ಐ ಜೊತೆ ಸಂಪರ್ಕ ಹೊಂದಿದ್ದ ಖಲಿಸ್ತಾನಿ ಉಗ್ರ ಯುಪಿಯಲ್ಲಿ ಅರೆಸ್ಟ್

    ಭಯೋತ್ಪಾದಕ ಮಸಿಹ್ ಪಾಕಿಸ್ತಾನದ ಐಎಸ್‌ಐ ಜೊತೆ ನಿರಂತರ ಸಂಪರ್ಕದಲ್ಲಿದ್ದ. ಗಡಿಯಾಚೆಗಿನ ಹ್ಯಾಂಡ್ಲರ್‌ಗಳಿಂದ ಡ್ರೋನ್‌ಗಳ ಮೂಲಕ ಮದ್ದುಗುಂಡುಗಳು ಮತ್ತು ಶಸ್ತ್ರಾಸ್ತ್ರಗಳನ್ನು ಪಡೆಯುತ್ತಿದ್ದ. ಮಾಹಿತಿಯ ಪ್ರಕಾರ ಮಸಿಹ್‌ ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ (ಬಿಕೆಐ) ನ ಜರ್ಮನಿ ಮೂಲದ ಮಾಡ್ಯೂಲ್‌ನ ಮುಖ್ಯಸ್ಥ ಸ್ವರ್ಣ್ ಸಿಂಗ್ ಅಲಿಯಾಸ್ ಜೀವನ್ ಫೌಜಿಗಾಗಿ ಕೆಲಸ ಮಾಡುತ್ತಿದ್ದ.

    ಬಂಧನಕ್ಕೆ ಒಳಗಾದ ಉಗ್ರನಿಂದ 3 ಸಕ್ರಿಯ ಹ್ಯಾಂಡ್ ಗ್ರೆನೇಡ್‌ಗಳು, 2 ಸಕ್ರಿಯ ಡಿಟೋನೇಟರ್‌ಗಳು, 13 ಕಾರ್ಟ್ರಿಡ್ಜ್‌ಗಳು ಮತ್ತು 1 ವಿದೇಶಿ ನಿರ್ಮಿತ ಪಿಸ್ತೂಲ್ ಸೇರಿದಂತೆ ಅಕ್ರಮ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಉತ್ತರ ಪ್ರದೇಶ ಎಸ್‌ಟಿಎಫ್ ಮತ್ತು ಪಂಜಾಬ್ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಗುರುವಾರ ಮುಂಜಾನೆ ಕೌಶಂಬಿ (Kaushambi) ಜಿಲ್ಲೆಯಲ್ಲಿ ಉಗ್ರನನ್ನು ಬಂಧಿಸಿದ್ದರು.

  • ಪಂಜಾಬ್ ಮಾಜಿ ಡಿಸಿಎಂ ಮೇಲೆ ಗುಂಡಿನ ದಾಳಿ; ಆರೋಪಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಜನ

    ಪಂಜಾಬ್ ಮಾಜಿ ಡಿಸಿಎಂ ಮೇಲೆ ಗುಂಡಿನ ದಾಳಿ; ಆರೋಪಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಜನ

    – ಪಾತ್ರೆ, ಬೂಟು ಸ್ವಚ್ಛಗೊಳಿಸುವ, ಟಾಯ್ಲೆಟ್ ತೊಳೆಯುವ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಡಿಸಿಎಂ

    ಚಂಡೀಗಢ: ಅಮೃತಸರದಲ್ಲಿರುವ (Amritsar) ಗೋಲ್ಡನ್ ಟೆಂಪಲ್‌ನ (Golden Temple) ಕಾವಲುಗಾರನಾಗಿ ಸೇವೆ ಸಲ್ಲಿಸುತ್ತಿದ್ದ ಪಂಜಾಬ್ ಮಾಜಿ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ (Sukhbir Singh Badal) ಮೇಲೆ ಗುಂಡಿನ ದಾಳಿ ನಡೆದಿದೆ.

    ಬಾದಲ್ ಅವರು ಶಿರೋಮಣಿ ಅಕಾಲಿ ದಳದ (Shiromani Akali Dal) ನಾಯಕ. ಪಂಜಾಬ್ ಮಾಜಿ ಉಪಮುಖ್ಯಮಂತ್ರಿಯಾಗಿ (Punjab Former DCM) ಕಾರ್ಯನಿರ್ವಹಿಸಿದ್ದರು. ಇದೀಗ ಧಾರ್ಮಿಕ ಶಿಕ್ಷೆಯ ಭಾಗವಾಗಿ ಗೋಲ್ಡನ್ ಟೆಂಪಲ್‌ನ ಪ್ರವೇಶದ್ವಾರದ ಕಾವಲುಗಾರನಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು (ಡಿ.04) ಬೆಳಿಗ್ಗೆ ತಪಸ್ಸಿಗೆ ಕುಳಿತಾಗ ಗುಂಡಿನ ದಾಳಿ ಮೂಲಕ ಕೊಲೆಗೆ ಯತ್ನಿಸಲಾಗಿದೆ.ಇದನ್ನೂ ಓದಿ: ತೆಲಂಗಾಣ ಗೋದಾವರಿ ನದಿ ಪಾತ್ರದ ಬಳಿ ಭೂಕಂಪನ

    ಆರೋಪಿಯನ್ನು ಅಮೃತಸರದಿಂದ ಸುಮಾರು 75 ಕಿ.ಮೀ ದೂರದಲ್ಲಿರುವ ಗುರುದಾಸ್‌ಪುರ ಜಿಲ್ಲೆಯ ದಾಲ್ ಖಾಲ್ಸಾದ ನರೇನ್ ಸಿಂಗ್ ಚೋರ್ಹಾ ಎಂದು ಗುರುತಿಸಲಾಗಿದ್ದು, ಗುಂಡು ಹಾರಿಸಿದಾಗ ಅಲ್ಲಿನ ಜನರು ಆತನ ಮೇಲೆ ಹಲ್ಲೆ ನಡೆಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

    ಬಾದಲ್ ಅವರು 2007 ರಿಂದ 2017 ರವರೆಗೆ ಪಂಜಾಬ್‌ನ ಉಪಮುಖ್ಯಮಂತ್ರಿಯಾಗಿದ್ದಾಗ ಪಕ್ಷದ ಪ್ರತಿಷ್ಠೆಗೆ ಧಕ್ಕೆ ತರುವಂತಹ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿದ್ದರು. ಆದ್ದರಿಂದ ಬಾದಲ್ ಅವರಿಗೆ ಹಾಗೂ ಅಕಾಲಿದಳದ ಇನ್ನಿತರ ನಾಯಕರಿಗೆ `ತಂಖಾ’ (ಧಾರ್ಮಿಕ ಶಿಕ್ಷೆ) ಘೋಷಿಸಲಾಗಿತ್ತು. `ಸೇವಾದರ್’ ಅಡಿಯಲ್ಲಿ ಪಾತ್ರೆ ತೊಳೆಯಲು, ಬೂಟು ಸ್ವಚ್ಛಗೊಳಿಸಲು ತಿಳಿಸಲಾಗಿತ್ತು. ನಿನ್ನೆ (ಡಿ.03) ಗೋಲ್ಡನ್ ಟೆಂಪಲ್‌ನಲ್ಲಿ ತಪಸ್ಸನ್ನು ಆರಂಭಿಸಿದ್ದರು.

    ಕಳೆದ ಎರಡು ದಿನಗಳಿಂದ ಬಾದಲ್ ಒಂದು ಕೈಯಲ್ಲಿ ಈಟಿ ಹಿಡಿದು, ನೀಲಿ `ಸೇವಾದರ್’ ಸಮವಸ್ತ್ರವನ್ನು ಧರಿಸಿ ಗೋಲ್ಡನ್ ಟೆಂಪಲ್‌ನ ಗೇಟ್ ಬಳಿ ವ್ಹೀಲ್ ಚೇರ್‌ನಲ್ಲಿ ಕುಳಿತಿದ್ದರು.

    ಸಿಸಿಟಿವಿ ದೃಶ್ಯಗಳಲ್ಲಿ ದಾಳಿಕೋರ ನಿಧಾನವಾಗಿ ಗೇಟ್ ಬಳಿ ಬಂದು ಬಂದೂಕನ್ನು ಹೊರತೆಗೆಯುತ್ತಾನೆ. ಬಳಿಕ ಗುಂಡಿನ ದಾಳಿ ನಡೆಸಿರುವುದು ಸೆರೆಯಾಗಿದೆ. ಸದ್ಯ ಆತನನ್ನು ಬಂಧಿಸಲಾಗಿದ್ದು, ದಾಳಿಯ ಹಿಂದಿನ ಉದ್ದೇಶವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ನರೇನ್ ಸಿಂಗ್ (Naren Singh) ಖಲಿಸ್ತಾನಿ ಭಯೋತ್ಪಾದಕರ ಗುಂಪು ಬಬ್ಬರ್ ಖಾಲ್ಸಾ ಜೊತೆ ಸಂಪರ್ಕ ಹೊಂದಿದ್ದಾನೆ. 2004ರಲ್ಲಿ 94 ಅಡಿ ಸುರಂಗವನ್ನು ಅಗೆದು ಜೈಲಿನಿಂದ ತಪ್ಪಿಸಿಕೊಂಡಿದ್ದ ಬುರೈಲ್ ಜೈಲ್ ಬ್ರೇಕ್ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದ ಬಬ್ಬರ್ ಖಾಲ್ಸಾ ಜೊತೆ ಸಂಬಂಧವಿದೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಒಂದೇ ದಿನದಲ್ಲಿ ಮಹಿಳೆಗೆ ಸಿಕ್ತು ನಿವೇಶನ; ಸಿಎಂ ಮುಂದೆ ಗೋಳಾಡಿದ್ದ ರಾಬಿಯಾ

  • ನ.19ರ ವರೆಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ: ಉಗ್ರ ಪನ್ನುನ್ ಬೆದರಿಕೆ

    ನ.19ರ ವರೆಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ: ಉಗ್ರ ಪನ್ನುನ್ ಬೆದರಿಕೆ

    ಒಟ್ಟಾವಾ: ಬಾಂಬ್ ಇಟ್ಟಿರುವುದಾಗಿ ಭಾರತದ ವಿವಿಧ ವಿಮಾನಗಳಿಗೆ ಬೆದರಿಕೆ ಕರೆ ಬರುತ್ತಿರುವ ಸಂದರ್ಭದಲ್ಲೇ ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನು (Gurpatwant Singh Pannun) ಹೊಸ ಬೆದರಿಕೆಯೊಂದನ್ನ ಹಾಕಿದ್ದಾರೆ. ನವೆಂಬರ್ 1ರಿಂದ 19ರ ವರೆಗೆ ಏರ್ ಇಂಡಿಯಾ ವಿಮಾನಗಳಲ್ಲಿ ಯಾರೂ ಪ್ರಯಾಣಿಸಬೇಡಿ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ಯೋಗೇಶ್ವರ್‌ ಗುಡ್‌ಬೈ – ಕಾಂಗ್ರೆಸ್‌ನಿಂದ ಕೊನೆ ಕ್ಷಣದ ಕಸರತ್ತು ಆರಂಭ

    ಸಿಖ್ ಹತ್ಯಾಕಾಂಡಕ್ಕೆ 40 ವರ್ಷ ಪೂರ್ಣಗೊಳ್ಳುವ ನಿರ್ದಿಷ್ಟ ದಿನಾಂಕದಂದು ಏರ್ ಇಂಡಿಯಾ ವಿಮಾನದ ಮೇಲೆ ದಾಳಿ ನಡೆಯಲಿದೆ ಎಂದು ಎಚ್ಚರಿಸಿದ್ದಾರೆ ಎಂಬುದಾಗಿ ವರದಿಯಾಗಿದೆ. ಕನಡಾ ಮತ್ತು ಅಮೆರಿಕದ ದ್ವೀಪೌರತ್ವ ಹೊಂದಿರುವ ಸಿಖ್ ಫಾರ್ ಜಸ್ಟೀಸ್ (SFJ) ಸಂಸ್ಥಾಪಕ ಪನ್ನು, ಕಳೆದ ವರ್ಷ ಸಹ ಇದೇ ಅವಧಿಯಲ್ಲಿ ಬೆದರಿಕೆ ಒಡ್ಡಿದರು.

    ನಿಜ್ಜರ್ ಹತ್ಯೆ ಸೇರಿದಂತೆ ಕೆನಡಾದಲ್ಲಿರುವ ಖಲಿಸ್ತಾನ ಹೋರಾಟಗಾರರನ್ನು ಭಾರತ ಗುರಿಯಾಗಿಸಿಕೊಂಡಿದೆ ಎಂದು ಕೆನಡಾ ಆರೋಪಿಸುತ್ತಿದ್ದು, ಇದರ ಬೆನ್ನಲ್ಲೇ ಉಭಯ ರಾಷ್ಟ್ರಗಳ ನಡುವೆ ರಾಜತಾಂತ್ರಿಕ ಸಂಘರ್ಷ ನಡೆಯುತ್ತಿದೆ. 2023ರ ನವೆಂಬರ್‌ನಲ್ಲೂ ಇದೇ ರೀತಿಯ ಬೆದರಿಕೆ ಒಡ್ಡಿದ್ದ ಪನ್ನು, ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನನಿಲ್ದಾಣದ ಹೆಸರು ಬದಲಿಸಲಾಗುವುದು. ನವೆಂಬರ್ 19ರಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸದಂತೆ ಎಚ್ಚರಿಕೆ ನೀಡಿದ್ದರು. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಈತನ ವಿರುದ್ಧ ಯುಎಪಿಎ ಕಾಯ್ದೆ ಅಡಿ ಪ್ರಕರಣ ದಾಖಲಿಸಿದೆ. ಡಿಸೆಂಬರ್ 13ರಂದು ಅಥವಾ ಅದಕ್ಕೂ ಮುನ್ನ ಸಂಸತ್ ಭವನವನ್ನು ಸ್ಫೋಟಿಸುವುದಾಗಿ ಕಳೆದ ವರ್ಷ ಬೆದರಿಕೆ ಹಾಕಿದ್ದರು.ಇದನ್ನೂ ಓದಿ: ವಿಪತ್ತು ತಡೆಯಲು ವಯನಾಡಿನಲ್ಲಿ X ಬ್ಯಾಂಡ್‌ ರೇಡಾರ್‌ ಅಳವಡಿಕೆ – ರೇಡಾರ್‌ ವಿಶೇಷತೆಯೇನು?

  • ಪ್ರತೀಕಾರಕ್ಕೆ ಕೃತ್ಯ ಎಂದು ಪೋಸ್ಟ್‌ – ದೆಹಲಿ ಸ್ಫೋಟಕ್ಕೆ ಖಲಿಸ್ತಾನಿ ನಂಟು, ತನಿಖೆ ಆರಂಭ

    ಪ್ರತೀಕಾರಕ್ಕೆ ಕೃತ್ಯ ಎಂದು ಪೋಸ್ಟ್‌ – ದೆಹಲಿ ಸ್ಫೋಟಕ್ಕೆ ಖಲಿಸ್ತಾನಿ ನಂಟು, ತನಿಖೆ ಆರಂಭ

    ನವದೆಹಲಿ: ರೋಹಿಣಿಯ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿನ ಸಿಆರ್‌ಪಿಎಫ್ ಶಾಲೆಯ (CRPF) ಬಳಿ ನಡೆದ ಸ್ಫೋಟಕ್ಕೆ (Blast) ಖಲಿಸ್ತಾನಿ ನಂಟಿದ್ಯಾ ಎಂಬ ಶಂಕೆ ಈಗ ಎದ್ದಿದೆ.

    ಭಾರತೀಯ ಏಜೆಂಟರು ಖಲಿಸ್ತಾನ್ (Khalistani) ಪರ ಪ್ರತ್ಯೇಕತಾವಾದಿಗಳನ್ನು ಗುರಿಯಾಗಿಸಿಕೊಂಡಿದ್ದಕ್ಕೆ ಪ್ರತೀಕಾರವಾಗಿ ಸ್ಫೋಟ ನಡೆಸಿದ್ದೇವೆ ಎಂದು ಪಾಕಿಸ್ತಾನದ ಟೆಲಿಗ್ರಾಂ ಚಾನೆಲ್‌ನಲ್ಲಿ ಖಲಿಸ್ತಾನಿ ಗುಂಪು ಹೇಳಿಕೊಂಡಿದೆ.

    ಭಾನುವಾರ ನಡೆದ ಸ್ಫೋಟದ (Blast) ತೀವ್ರತೆಗೆ ಹತ್ತಿರದಲ್ಲಿದ್ದ ಕಟ್ಟಡಗಳು ಅದುರಿವೆ. ಸ್ಫೋಟದ ಶಬ್ಧ ಸುಮಾರು 2 ಕಿ.ಮೀ ದೂರದವರೆಗೆ ಕೇಳಿದೆ. ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ನಡೆಸುತ್ತಿದೆ.

    ಕಡಿಮೆ ತೀವ್ರತೆಯ ಸುಧಾರಿತ ಸ್ಫೋಟಕ ಸಾಧನ (IED) ಬಳಸಿ ಈ ಕೃತ್ಯ ಎಸಗಲಾಗಿದೆ. ಬಾಲ್‌ ಬೇರಿಂಗ್‌ ಇರಲಿಲ್ಲ. ಟೈಮರ್ ಅಥವಾ ರಿಮೋಟ್‌ನಿಂದ ಇದನ್ನು ನಿಯಂತ್ರಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇದನ್ನೂ ಓದಿ: ಖಲಿಸ್ತಾನಿ ಉಗ್ರರು ಕೆನಡಾ ಗುಪ್ತಚರ ಸಂಸ್ಥೆಯ ಆಸ್ತಿ: ಭಾರತೀಯ ಹೈಕಮಿಷನರ್ ಸಂಜಯ್ ಕುಮಾರ್ ವರ್ಮಾ ಕಿಡಿ

    ಪೋಸ್ಟ್‌ನಲ್ಲಿ ಏನಿದೆ?
    ಭಾರತೀಯ ಹೇಡಿ ಸಂಸ್ಥೆ ಮತ್ತು ಮಾಸ್ತರ್‌ ನಮ್ಮ ಸದಸ್ಯರನ್ನು ಗುರಿಯಾಗಿಸಿ ಗುಂಡಾಗಳನ್ನು ನೇಮಿಸಿ ನಮ್ಮ ಧ್ವನಿಯನ್ನು ಹತ್ತಿಕ್ಕುತ್ತಿದ್ದಾರೆ ಎಂದರೆ ಅದು ಮುರ್ಖತನವಾದಿತು. ನಾವು ಎಷ್ಟು ಹತ್ತಿರದಲ್ಲಿದ್ದೇವೆ ಮತ್ತು ನಾವು ಯಾವಾಗ ಬೇಕಾದರೂ ದಾಳಿ ನಡೆಸಲು ಸಮರ್ಥರಿದ್ದೇವೆ ಎಂದು ಜಸ್ಟೀಸ್‌ ಲೀಗ್‌ ಇಂಡಿಯಾ ಹೇಳಿಕೊಂಡಿದೆ. ಈ ಪೋಸ್ಟ್‌ನೊಂದಿಗೆ ಸ್ಫೋಟಗೊಳ್ಳುತ್ತಿರುವ ದೃಶ್ಯದ ವಿಡಿಯೋವನ್ನು ಅಪ್ಲೋಡ್‌ ಮಾಡಿ ಖಲಿಸ್ತಾನ ಜಿಂದಾಬಾದ್‌ ಎಂದು ಹೇಳಿದೆ.

    ಸ್ಫೋಟದ ನಂತರ, ರಾಷ್ಟ್ರೀಯ ತನಿಖಾ ದಳ, ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ), ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ದೆಹಲಿ ಪೊಲೀಸರ ತಂಡಗಳು ಪ್ರದೇಶವನ್ನು ಸುತ್ತುವರೆದಿವೆ. ವಿಧಿವಿಜ್ಞಾನ ತಜ್ಞರು ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಫೋಟ ಸೆರೆಯಾಗಿದೆ. ಸ್ಫೋಟದ ತೀವ್ರತೆಗೆ ಹತ್ತಿರದ ಅಂಗಡಿಗಳ ಕಿಟಕಿ ಗಾಜುಗಳನ್ನು ನಾಶಪಡಿಸಿದೆ ಮತ್ತು ಹತ್ತಿರದಲ್ಲಿ ನಿಲ್ಲಿಸಿದ್ದ ಕೆಲವು ಕಾರುಗಳನ್ನು ಹಾನಿಗೊಯಾಗಿದೆ.

    ಭಾನುವಾರ ಬೆಳಗ್ಗೆ 7:35ರಿಂದ 7:40ರ ನಡುವೆ ಬಾಂಬ್ ಸ್ಫೋಟಗೊಂಡಿದೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದರಿಂದ ತಡರಾತ್ರಿ ಬಾಂಬ್ ಇರಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

     

  • ಉಗ್ರ ಪನ್ನು ಹತ್ಯೆಗೆ ಸಂಚು – ಭಾರತದ ಮಾಜಿ ʻರಾʼ ಅಧಿಕಾರಿ ಮೋಸ್ಟ್‌ ವಾಂಟೆಡ್‌ ಎಂದು ಘೋಷಿಸಿದ FBI

    ಉಗ್ರ ಪನ್ನು ಹತ್ಯೆಗೆ ಸಂಚು – ಭಾರತದ ಮಾಜಿ ʻರಾʼ ಅಧಿಕಾರಿ ಮೋಸ್ಟ್‌ ವಾಂಟೆಡ್‌ ಎಂದು ಘೋಷಿಸಿದ FBI

    ವಾಷಿಂಗ್ಟನ್‌: ಪ್ರತ್ಯೇಕತಾವಾದಿ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನು (Gurpatwant Singh Pannun) ಹತ್ಯೆಗೆ ‌ಸಂಚು ರೂಪಿಸಿದ ಪ್ರಕರಣ ಸಂಬಂಧ ಭಾರತದ ನಿವೃತ್ತ ಗುಪ್ತಚರ ಅಧಿಕಾರಿಯೊಬ್ಬರನ್ನ (RAW Officer) ಮೋಸ್ಟ್‌ ವಾಂಟೆಡ್‌ ಎಂದು ಅಮೆರಿಕದ ಎಫ್‌ಬಿಐ (FBI) ಆಪಾದಿಸಿದೆ.

    ಈ ಪ್ರಕರಣದಲ್ಲಿ ಭಾರತದ ನಿವೃತ್ತ ʻರಾʼ ಅಧಿಕಾರಿ ವಿಕಾಸ್‌ ಯಾದವ್‌ನನ್ನ (39) ಮೋಸ್ಟ್‌ ವಾಂಟೆಡ್‌ (Most Wanted) ಎಂದು ಹೆಸರಿಸಿದೆ. ಅಲ್ಲದೇ ವಿಕಾಸ್‌ ಯಾದವ್‌ನ ಮೂರು ಚಿತ್ರಗಳನ್ನ ಮೋಸ್ಟ್‌ ವಾಂಟೆಡ್‌ ಎನ್ನುವ ಪೋಸ್ಟರ್‌ ಸಹ ಬಿಡುಗಡೆ ಮಾಡಿದ್ದು, ಇದೇ ತಿಂಗಳ ಅಕ್ಟೋಬರ್‌ 10 ರಂದು ಬಂಧನದ ವಾರಂಟ್‌ ಜಾರಿಗೊಳಿಸಿದೆ.

    ಅಮೆರಿಕ (USA) ಹಾಗೂ ಕೆನಡಾದ ದ್ವಿಪೌರತ್ವ ಹೊಂದಿರುವ ಗುರುಪತ್ವಂತ್ ಸಿಂಗ್ ಪನ್ನು ಹತ್ಯೆ ಮಾಡಲು ಈ ನಿವೃತ್ತ ಅಧಿಕಾರಿ ಹಣ ನೀಡಿ ಹಂತಕರನ್ನು ನಿಯೋಜಿಸಿದ್ದರು ಎಂದು ಎಫ್‌ಬಿಐ ಆಪಾದಿಸಿದೆ. ಜೊತೆಗೆ ವಿಕಾಸ್‌ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನೂ ದಾಖಲು ಮಾಡಿದೆ. ಈ ಕುರಿತು ಯುಎಸ್ ಡಿಪಾರ್ಟ್ಮೆಂಟ್ ಆಫ್ ಜಸ್ಟೀಸ್ (DOJ) ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಕ್ರಿಮಿನಲ್ ಆರೋಪಗಳನ್ನು ಪ್ರಕಟಿಸಿದೆ.

    ಈ ಬಗ್ಗೆ ಮಾಹಿತಿ ನೀಡಿರುವ ಎಫ್‌ಬಿಐ ನಿರ್ದೇಶಕ ಕ್ರಿಸ್ಟೋಫರ್ ವ್ರೇ (Christopher Wray) ಅವರು, ಅಮೆರಿಕ ನೆಲದಲ್ಲಿ ಈ ರೀತಿಯ ಕೃತ್ಯ ಎಸಗುವ ಪ್ರಯತ್ನವನ್ನ ಎಫ್‌ಬಿಐ ಸಹಿಸೋದಿಲ್ಲ ಎಂದಿದ್ದಾರೆ. ನಮ್ಮ ಪ್ರಜೆಗಳಿಗೆ ಸಂವಿಧಾನ ನೀಡಿರುವ ಹಕ್ಕುಗಳನ್ನು ರಕ್ಷಿಸಲು ನಾವು ಸರ್ವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದಾರೆ.

    ಅಲ್ಲದೇ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಸಹವರ್ತಿ ನಿಖಿಲ್ ಗುಪ್ತಾ ಎಂಬಾತನನ್ನ ಜೆಕ್ ರಿಪಬ್ಲಿಕ್‌ನಲ್ಲಿ ಬಂಧಿಸಲಾಗಿದೆ ಎಂದು ಸಹ ಕ್ರಿಸ್ಟೋಫರ್‌ ತಿಳಿಸಿದ್ದಾರೆ. ಇದನ್ನೂ ಓದಿ: ಇಸ್ರೇಲ್‌, ಜಗತ್ತಿಗೆ ಇದು ಒಳ್ಳೆಯ ದಿನ: ಹಮಾಸ್‌ ಮುಖ್ಯಸ್ಥನ ಹತ್ಯೆಗೆ ಅಮೆರಿಕ ಸಂತಸ

    ಅಮೆರಿಕ ಎಫ್‌ಬಿಐ ಆಪಾದನೆಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌ ಪ್ರತಿಕ್ರಿಯೆ ನೀಡಿದ್ದು, ವಿಕಾಸ್‌ ಯಾದವ್‌ ಎಂಬವರು ಭಾರತ ಸರ್ಕಾರದ ಉದ್ಯೋಗಿಯಲ್ಲ ಎಂದು ಖಚಿತಪಡಿಸಿದ್ದಾರೆ. ಇದನ್ನೂ ಓದಿ: ಹಮಾಸ್ ಮುಖ್ಯಸ್ಥನ ಕೊನೆ ಕ್ಷಣಗಳ ಡ್ರೋನ್ ದೃಶ್ಯ ಬಿಡುಗಡೆ ಮಾಡಿದ ಇಸ್ರೇಲ್

    ಏನಿದು ಪ್ರಕರಣ?
    ಅಮೆರಿಕದ ನ್ಯೂಯಾರ್ಕ್‌ ನಗರದಲ್ಲಿ ನೆಲೆಸಿರುವ ಗುರುಪತ್ವಂತ್ ಸಿಂಗ್ ಪನ್ನು ಹತ್ಯೆಗೆ ಕಳೆದ ವರ್ಷ ಯತ್ನ ನಡೆದಿತ್ತು. ಈ ಪ್ರಕರಣದಲ್ಲಿ ಭಾರತ ಸರ್ಕಾರದ ನಿವೃತ್ತ ರಾ ಉದ್ಯೋಗಿಯನ್ನು ವಿಕಾಸ್‌ನನ್ನ ಸಿಸಿ-1 (ಸಹ ಸಂಚುಕೋರ) ಆರೋಪಿ ಎಂದು ಹೆಸರಿಸಲಾಗಿದೆ.

    18 ಪುಟಗಳ ದೋಷಾರೋಪ ಪಟ್ಟಿಯಲ್ಲಿ ಹಲವು ಸಾಕ್ಷ್ಯಗಳನ್ನು ಉಲ್ಲೇಖಿಸಲಾಗಿದೆ. ನ್ಯೂಯಾರ್ಕ್‌ನಲ್ಲಿ ಕಾರಿನಲ್ಲಿ ಇಬ್ಬರು ವ್ಯಕ್ತಿಗಳು ಡಾಲರ್‌ಗಳನ್ನು ವಿನಿಮಯ ಮಾಡಿಕೊಳ್ಳುತ್ತಿರುವ ಚಿತ್ರವನ್ನೂ ಸಹ ನಮೂದಿಸಲಾಗಿದೆ. ಇದು ಆರೋಪಿ ನಿಖಿಲ್ ಗುಪ್ತಾ ಮತ್ತು ವಿಕಾಸ್ ಯಾದವ್ ಅವರ ಪರವಾಗಿ ಕೊಲೆಗಾರನಿಗೆ ಹತ್ಯೆ ಮಾಡಲು ವ್ಯಕ್ತಿಯೊಬ್ಬರು ಪಾವತಿಸುತ್ತಿದ್ದಾರೆ ಎಂದು ಫೆಡರಲ್ ಪ್ರಾಸಿಕ್ಯೂಟರ್‌ಗಳು ಹೇಳಿದ್ದಾರೆ. ಇದನ್ನೂ ಓದಿ: ಹಮಾಸ್‌ ಈ ಕೆಲಸ ಮಾಡಿದ್ರೆ ನಾಳೆಯೇ ಯುದ್ಧ ಕೊನೆಗೊಳ್ಳುತ್ತದೆ – ಇಸ್ರೇಲ್‌ ಪ್ರಧಾನಿ ಎಚ್ಚರಿಕೆ

  • Canada | ಅಲ್ಪ ಮತಕ್ಕೆ ಕುಸಿದ ಜಸ್ಟಿನ್‌ ಟ್ರುಡೊ ಸರ್ಕಾರ

    Canada | ಅಲ್ಪ ಮತಕ್ಕೆ ಕುಸಿದ ಜಸ್ಟಿನ್‌ ಟ್ರುಡೊ ಸರ್ಕಾರ

    ಒಟ್ಟಾವಾ: ಭಾರತ (India) ವಿರೋಧ ನೀತಿ ಅನುಸರಿಸಿಕೊಂಡು ಖಲಿಸ್ತಾನಿ ಹೋರಾಟಗಳಿಗೆ (Khalistan Movement) ಪರೋಕ್ಷ ಬೆಂಬಲ ವ್ಯಕ್ತಪಡಿಸುತ್ತಿದ್ದ ಕೆನಡಾದ ಜಸ್ಟಿನ್ ಟ್ರುಡೊ (Justin Trudeau) ಸರ್ಕಾರ ಈಗ ಸಂಕಷ್ಟಕ್ಕೆ ಸಿಲುಕಿದೆ.

    ನ್ಯೂ ಡೆಮಾಕ್ರಟಿಕ್‌ ಪಕ್ಷದ ನಾಯಕ ಜಗ್‌ಮಿತ್‌ ಸಿಂಗ್‌ (Jagmeet Singh) ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂದಕ್ಕೆ ಪಡೆದಿದ್ದು ಟ್ರುಡೋ ಸರ್ಕಾರ ಈಗ ಅಲ್ಪ ಮತಕ್ಕೆ ಕುಸಿದಿದೆ.

    ಸರ್ಕಾರ ಉಳಿಸಿಕೊಳ್ಳಬೇಕಾದರೆ ಟ್ರುಡೋ ಈಗ ಉಳಿದ ಸಣ್ಣ ಪಕ್ಷಗಳ ಬೆಂಬಲವನ್ನು ಪಡೆಯಬೇಕು. ಬೆಂಬಲ ಸಿಗದೇ ಇದ್ದರೆ ಸರ್ಕಾರ ಪತನವಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ದರ ಏರಿಕೆ ನಿಯಂತ್ರಿಸಲು ಕಡಿಮೆ ಬೆಲೆಗೆ ಈರುಳ್ಳಿ ಮಾರಾಟಕ್ಕೆ ಮುಂದಾದ ಕೇಂದ್ರ ಸರ್ಕಾರ

     

    ಜಸ್ಟಿನ್‌ ಟ್ರುಡೋ 2015ರಲ್ಲಿ ಅಧಿಕಾರ ಸ್ವೀಕರಿಸಿದ್ದರು. ಹಣದುಬ್ಬರ ನಿಯಂತ್ರಿಸಲು ಸರ್ಕಾರ ವಿಫಲವಾಗಿದ್ದರಿಂದ ವಸ್ತುಗಳ ಬೆಲೆ ಏರಿಕೆಯಾಗಿದೆ. ಈ ಕಾರಣಕ್ಕೆ ಟ್ರುಡೋ ಸರ್ಕಾರದ ವಿರುದ್ಧ ಈಗ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಸರ್ಕಾರಕ್ಕೆ ಬೆಂಬಲ ನೀಡಿದರೆ ಮುಂದಿನ ಚುನಾವಣೆಯಲ್ಲಿ ನಮಗೂ ಹಿನ್ನಡೆಯಾಗಬಹುದು ಎಂಬ ಕಾರಣಕ್ಕೆ ಜಗ್‌ಮಿತ್‌ ಸಿಂಗ್‌ ಬೆಂಬಲ ವಾಪಸ್‌ ಪಡೆದಿದ್ದಾರೆ ಎಂದು ವರದಿಯಾಗಿದೆ.

    ಸದ್ಯ ಈಗ ಚುನಾವಣೆ ನಡೆದರೆ ಟ್ರುಡೋ ಅವರಿಗೆ ಹೀನಾಯ ಸೋಲಾಗಬಹುದು ಎಂದು ಕೆನಾಡದ ಸಮೀಕ್ಷೆಗಳು ತಿಳಿಸಿವೆ. ಕೆನಡಾ ಸಂಸತ್ತಿನ ಅವಧಿ 2025ಕ್ಕೆ ಅಂತ್ಯವಾಗಲಿದ್ದು 2025ರ ಕೊನೆಯಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.

     

  • ಮೆಟ್ರೋ ನಿಲ್ದಾಣದ ಪಿಲ್ಲರ್‌ಗಳಲ್ಲಿ ಖಲಿಸ್ತಾನಿ ಪರ, ಮೋದಿ ವಿರುದ್ಧ ಬರಹ

    ಮೆಟ್ರೋ ನಿಲ್ದಾಣದ ಪಿಲ್ಲರ್‌ಗಳಲ್ಲಿ ಖಲಿಸ್ತಾನಿ ಪರ, ಮೋದಿ ವಿರುದ್ಧ ಬರಹ

    ನವದೆಹಲಿ: ದೆಹಲಿಯ ಮೆಟ್ರೋ ನಿಲ್ದಾಣಗಳ (Delhi Metro Station) ಪಿಲ್ಲರ್‌ಗಳಲ್ಲಿ ಖಲಿಸ್ತಾನ್ ಪರ ಮತ್ತು ಪ್ರಧಾನಿ ನರೇಂದ್ರ ಮೋದಿ (Naredra Modi) ಅವರನ್ನು ಗುರಿಯಾಗಿಸಿಕೊಂಡು ಘೋಷಣೆಗಳನ್ನು ಬರೆದಿರುವುದು ಭಾನುವಾರ ಪತ್ತೆಯಾಗಿದೆ.

    ಕರೋಲ್ ಬಾಗ್ ಮತ್ತು ಝಾಂಡೇವಾಲನ್ ಮೆಟ್ರೋ ನಿಲ್ದಾಣಗಳಲ್ಲಿ ಈ ಘೋಷಣೆಗಳನ್ನು ಬರೆದಿರುವುದು ಕಂಡುಬಂದಿವೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ವರದಿಯ ಪ್ರಕಾರ, ಯುನೈಟೆಡ್ ಸ್ಟೇಟ್ಸ್ ಮೂಲದ ನಿಷೇಧಿತ ಸಿಖ್ ಪ್ರತ್ಯೇಕತಾವಾದಿ ಗುಂಪು ಸಿಖ್ಸ್ ಫಾರ್ ಜಸ್ಟಿಸ್ (SFJ) ಬೆಂಬಲಿಗರು ಈ ಘೋಷಣೆಗಳನ್ನು ಬರೆದಿದ್ದಾರೆ.

    ತನಿಖೆ ಆರಂಭ: ಬರಹ ಸಂಬಂಧ ದೆಹಲಿ ಪೊಲೀಸರು ಈಗಾಗಲೇ ದೆಹಲಿ ಮೆಟ್ರೋ ಅಧಿಕಾರಿಗಳಿಂದ ಸಿಸಿಟಿವಿ ದೃಶ್ಯಗಳನ್ನು ಪಡೆದುಕೊಂಡಿದ್ದು, ಎಫ್‌ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ಹೆಚ್.ಡಿ ರೇವಣ್ಣಗೆ ಇಂದು ಸಿಗುತ್ತಾ ರಿಲೀಫ್?

    ಈ ಸಂಬಂಧ ತನಿಖೆ ನಡೆಸಲು ಈಗಾಗಲೇ ತಂಡಗಳನ್ನು ರಚಿಸಿದ್ದೇವೆ. ಆರೋಪಿಗಳ ಪತ್ತೆಗೆ ಮೆಟ್ರೋ ನಿಲ್ದಾಣಗಳಲ್ಲಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಗೀಚುಬರಹ ಮತ್ತು ಘೋಷಣೆಗಳನ್ನು ಅಳಿಸಲಾಗಿದೆ. ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ಕೂಡ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಭದ್ರತಾ ಸಿಬ್ಬಂದಿಯೊಬ್ಬರು ಭಾನುವಾರ ಬೆಳಗ್ಗೆ ಕರ್ತವ್ಯಕ್ಕೆ ಬಂದಾಗ ಮೆಟ್ರೊ ನಿಲ್ದಾಣದ ಪಿಲ್ಲರ್‌ಗಳ ಮೇಲೆ ಕಪ್ಪು ಬಣ್ಣದಲ್ಲಿ ಬರೆದಿರುವ ಘೋಷಣೆಗಳನ್ನು ಗಮನಿಸಿದ್ದಾರೆ. ಹೀಗಾಗಿ ಅವರು ಪ್ರತಿಕ್ರಿಯಿಸಿ, ನಾನು ಬೆಳಗ್ಗೆ 8 ಗಂಟೆಗೆ ಡ್ಯೂಟಿಗೆ ಬಂದಿದ್ದೇನೆ. ಈ ವೇಳೆ ಮೆಟ್ರೋ ನಿಲ್ದಾಣದ ಪಿಲ್ಲರ್‌ಗಳ ಮೇಲೆ ಕಪ್ಪು ಬಣ್ಣದಲ್ಲಿ ಏನೋ ಬರೆದಿರುವುದನ್ನು ಗಮನಿಸಿದ್ದೇನೆ. ಈ ವೇಳೆ ಅಲ್ಲಿ ಸಾಕಷ್ಟು ಜನ ಸೇರಿದ್ದು, ಗೋಡೆ ಬರಹಗಳನ್ನು ಓದುತ್ತಿದ್ದರು ಎಂದು ತಿಳಿಸಿದರು.

    ರಾತ್ರಿ ಹೊತ್ತು ಈ ಘೋಷಣೆಗಳನ್ನು ಬರೆಯಲಾಗಿದೆ. ಯಾಕೆಂದರೆ ಆ ಸಮಯದಲ್ಲಿ ಯಾರೂ ಇರುವುದಿಲ್ಲ. ಈ ಘೋಷಣೆಗಳನ್ನು ಯಾರು ಬರೆದಿದ್ದಾರೆ ಎಂಬುದು ತಿಳಿದಿಲ್ಲ ಎಂದು ಅವರು ಹೇಳಿದರು.

  • ಅಮೆರಿಕಾದಲ್ಲಿ ಹಿಂದೂ ದೇಗುಲದ ಗೋಡೆ ಮೇಲೆ ಖಲಿಸ್ತಾನಿ ಪರ ಬರಹ- ಭಾರೀ ಖಂಡನೆ

    ಅಮೆರಿಕಾದಲ್ಲಿ ಹಿಂದೂ ದೇಗುಲದ ಗೋಡೆ ಮೇಲೆ ಖಲಿಸ್ತಾನಿ ಪರ ಬರಹ- ಭಾರೀ ಖಂಡನೆ

    ನ್ಯೂಯಾರ್ಕ್: ಅಮೆರಿಕಾದ ಕ್ಯಾಲಿಫೋರ್ನಿಯಾದ (California) ನೆವಾರ್ಕ್ ಸಿಟಿಯಲ್ಲಿ (Newark City) ಹಿಂದೂ ದೇವಾಲಯದ ಗೋಡೆಯಲ್ಲಿ ಖಲಿಸ್ತಾನಿ ಪರ ಘೋಷಣೆಗಳನ್ನು ಬರೆಯಲಾಗಿದೆ. ಈ ಕುರಿತು ಇದೀಗ ಭಾರೀ ಖಂಡನೆ ವ್ಯಕ್ತವಾಗುತ್ತಿದೆ.

    ಹಿಂದೂ ಅಮೇರಿಕನ್ ಫೌಂಡೇಶನ್ ತನ್ನ ಎಕ್ಸ್ ಖಾತೆಯಲ್ಲಿ, ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯ (Swaminarayan Mandir Vasana Sanstha) ಗೋಡೆಗಳ ಮೇಲೆ ಘೋಷಣೆಗಳನ್ನು (Pro-Khalistani Slogans) ಬರೆದಿರುವ ಫೋಟೋಗಳನ್ನು ಹಂಚಿಕೊಂಡಿದೆ. ಫೋಟೋದಲ್ಲಿ, ದೇಗುಲದ ಗೋಡೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಭಾರತದ (India) ವಿರುದ್ಧ ದ್ವೇಷಪೂರಿತ ಬರಹಗಳನ್ನು ಬರೆಯಲಾಗಿದೆ.

    ಘಟನೆಯ ಕುರಿತು ಸಂಪೂರ್ಣ ತನಿಖೆಯಾಗಬೇಕು ಎಂದು ಪ್ರತಿಷ್ಠಾನ ಒತ್ತಾಯಿಸಿದೆ. ಅಲ್ಲದೆ ಈ ಕುರಿತು ನೆವಾರ್ಕ್ ಪೊಲೀಸ್ ಇಲಾಖೆ ಹಾಗೂ ನ್ಯಾಯಾಂಗ ನಾಗರಿಕ ಹಕ್ಕುಗಳ ವಿಭಾಗಕ್ಕೆ ದೂರು ನೀಡಿದೆ. ಇದನ್ನೂ ಓದಿ: JDU ಮುಖ್ಯಸ್ಥರನ್ನು ಕಿತ್ತೆಸೆದು ತಾವೇ ಹುದ್ದೆ ಅಲಂಕರಿಸುತ್ತಾರಾ ಬಿಹಾರ ಸಿಎಂ?

    ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯ ಗೋಡೆಯ ಮೇಲೆ ಬರೆದಿರುವ ದ್ಷೇಷದ ಬರಹಗಳನ್ನು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ಕಾನ್ಸುಲೇಟ್ ಖಂಡಿಸಿದೆ. ಇದನ್ನು ಬರೆದಿರುವ ಕಿಡಿಗೇಡಿಗಳ ವಿರುದ್ಧ ತ್ವರಿತ ತನಿಖೆ ಮತ್ತು ಕಠಿಣ ಕ್ರಮಕ್ಕಾಗಿ ಯುಎಸ್ ಅಧಿಕಾರಿಗಳಿಗೆ ಒತ್ತಡ ಹೇರಿದೆ.

    ಕ್ಯಾಲಿಫೋರ್ನಿಯಾದ ನೆವಾರ್ಕ್‍ನಲ್ಲಿರುವ ಎಸ್‍ಎಂವಿಎಸ್ ಶ್ರೀ ಸ್ವಾಮಿನಾರಾಯಣ ಮಂದಿರದ ಗೋಡೆಯಲ್ಲಿ ಭಾರತ ವಿರೋಧಿ ಬರಹದ ಮೂಲಕ ವಿರೂಪಗೊಳಿಸಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಈ ಘಟನೆಯು ಭಾರತೀಯ ಸಮುದಾಯದ ಜನರ ಭಾವನೆಗಳಿಗೆ ಧಕ್ಕೆ ತಂದಿದೆ. ಈ ಕುರಿತು ಶೀಘ್ರವೇ ತನಿಖೆ ನಡೆಸಿ ಹಾಗೂ ಈ ಕೃತ್ಯ ಎಸಗಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂಬುದಾಗಿ ನಾವು ಒತ್ತಾಯಿಸಿದ್ದೇವೆ ಎಂದು ಸ್ಯಾನ್ ಫ್ರಾನ್ಸಿಸ್ಕೋದ ಭಾರತೀಯ ಕಾನ್ಸುಲೇಟ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಅಮೇರಿಕಾದಲ್ಲಿ ಹಿಂದೂ ದೇವಾಲಯವನ್ನು ವಿರೂಪಗೊಳಿಸಿದ್ದು ಇದೇ ಮೊದಲಲ್ಲ. ಈ ಹಿಂದೆಯೂ ಇಂತಹ ಘಟನೆಗಳು ದೇಶ ಹಾಗೂ ನೆರೆಯ ಕೆನಡಾದಲ್ಲಿಯೂ ನಡೆದಿವೆ.

  • ಖಲಿಸ್ತಾನಿಗಳಿಂದ ಹಿಂದೂ ದೇವಾಲಯಗಳ ಟಾರ್ಗೆಟ್: ಕ್ರಮಕ್ಕೆ ಕೆನಡಾ ಸಂಸದ ಒತ್ತಾಯ

    ಖಲಿಸ್ತಾನಿಗಳಿಂದ ಹಿಂದೂ ದೇವಾಲಯಗಳ ಟಾರ್ಗೆಟ್: ಕ್ರಮಕ್ಕೆ ಕೆನಡಾ ಸಂಸದ ಒತ್ತಾಯ

    ಒಟ್ಟೋವಾ: ಖಲಿಸ್ತಾನಿ (Khalistani) ಪರ ಬೆಂಬಲಿಗರು ಹಿಂದೂ ದೇವಾಲಯಗಳನ್ನ ಟಾರ್ಗೆಟ್‌ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಭಾರತ ಮೂಲದ ಕೆನಡಾದ (Canada) ಸಂಸದ ಚಂದ್ರ ಆರ್ಯ (Chandra Arya) ಒತ್ತಾಯಿಸಿದ್ದಾರೆ.

    ಖಲಿಸ್ತಾನಿಗಳು ಲಕ್ಷ್ಮಿ ನಾರಾಯಣ ಮಂದಿರದಲ್ಲಿ ತೊಂದರೆ ಸೃಷ್ಟಿಸಲು ಮುಂದಾಗಿದ್ದಾರೆ. ಇವರ ವಿರುದ್ಧ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಕ್ರಿ.ಪೂ. ಸರ್ರೆಯಲ್ಲಿರುವ ಸಿಖ್ ಗುರುದ್ವಾರದ ಹೊರಗೆ ಖಲಿಸ್ತಾನ್ ಬೆಂಬಲಿಗರು ಸಿಖ್ ಕುಟುಂಬವನ್ನು ಮೌಖಿಕವಾಗಿ ನಿಂದಿಸಿದ್ದಾರೆ. ಈಗ ಅದೇ ಖಲಿಸ್ತಾನ್ ಗುಂಪು ಸರ್ರೆಯ ಹಿಂದೂ ಲಕ್ಷ್ಮೀ ನಾರಾಯಣ ಮಂದಿರದಲ್ಲಿ ತೊಂದರೆಯನ್ನು ಸೃಷ್ಟಿಸಲು ಬಯಸಿದೆ ಎಂದು ಚಂದ್ರ ಆರ್ಯ ಅವರು ಎಕ್ಸ್‌ ಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ: ಗಾಜಾದ ಆಸ್ಪತ್ರೆಯನ್ನೇ ಉಗ್ರ ಚಟುವಟಿಕೆಗಳ ತಾಣವಾಗಿಸಿದ ಹಮಾಸ್- ಇಸ್ರೇಲ್ ವೀಡಿಯೋ ಸಾಕ್ಷಿ

    ಇವೆಲ್ಲವನ್ನೂ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಮಾಡಲಾಗುತ್ತಿದೆ. ಕೆನಡಾದ ಅಧಿಕಾರಿಗಳು ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳುವಂತೆ ನಾನು ಮತ್ತೊಮ್ಮೆ ಕೇಳುತ್ತಿದ್ದೇನೆ ಎಂದು ಪೋಸ್ಟ್‌ನಲ್ಲಿ ಒತ್ತಾಯಿಸಿದ್ದಾರೆ.

    ಕಳೆದ ವರ್ಷಗಳಲ್ಲಿ ಹಿಂದೂ ದೇವಾಲಯಗಳು ದಾಳಿಗೆ ಗುರಿಯಾಗಿವೆ. ಎರಡು ವರ್ಷಗಳ ಅವಧಿಯಲ್ಲಿ ಹಿಂದೂ ದೇವಾಲಯಗಳ ಮೇಲೆ ಹಲವು ಬಾರಿ ದಾಳಿ ನಡೆಸಲಾಗಿದೆ. ಹಿಂದೂ-ಕೆನಡಿಯನ್ನರ ವಿರುದ್ಧ ದ್ವೇಷದ ಅಪರಾಧಗಳು ನಡೆಯುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 22 ಕೋಟಿ ರೂ.ಗೆ ಮಾರಾಟವಾಯ್ತು 60 ವರ್ಷ ಹಳೆಯ ಒಂದು ಬಾಟಲಿ ವಿಸ್ಕಿ

    ಇಂತಹ ಕೃತ್ಯಗಳನ್ನು ಬಹಿರಂಗವಾಗಿ ಮತ್ತು ಸಾರ್ವಜನಿಕವಾಗಿ ಮಾಡಲು ಅವಕಾಶ ನೀಡುವುದು ಸ್ವೀಕಾರಾರ್ಹವಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಆಗಸ್ಟ್‌ನಲ್ಲಿ ಖಲಿಸ್ತಾನ್ ಜನಾಭಿಪ್ರಾಯ ಸಂಗ್ರಹಣೆಯ ಪೋಸ್ಟರ್‌ಗಳೊಂದಿಗೆ ಉಗ್ರಗಾಮಿಗಳು ಕೆನಡಾದಲ್ಲಿ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ್ದರು.

  • ಯಾವುದೇ ಕಾರಣಕ್ಕೂ ಭಾರತವನ್ನ ಪ್ರಚೋದಿಸುವುದಿಲ್ಲ; ತಣ್ಣಗಾದ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ

    ಯಾವುದೇ ಕಾರಣಕ್ಕೂ ಭಾರತವನ್ನ ಪ್ರಚೋದಿಸುವುದಿಲ್ಲ; ತಣ್ಣಗಾದ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ

    ಒಟ್ಟಾವಾ: ಭಾರತ ಹಾಗೂ ಕೆನಡಾ (India And Canada) ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಭಾರತದ ವಿರುದ್ಧ ಆರೋಪ ಮಾಡಿದ್ದ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ (Justin Trudeau) ಈಗ ಭಾರತದ ಪರ ಮೃದುವಾಗಿ ಮಾತನಾಡಿದ್ದಾರೆ.

    ಮಾಧ್ಯಮವೊಂದಕ್ಕೆ ನೀಡಿದ ಹೇಳಿಕೆಯಲ್ಲಿ ಭಾರತವು ಅಭಿವೃದ್ಧಿ ಪ್ರಧಾನ ದೇಶವಾಗಿದೆ, ನಾವು ಯಾವುದೇ ಕಾರಣಕ್ಕೂ ಭಾರತವನ್ನು ಪ್ರಚೋದಿಸುವ ಪ್ರಯತ್ನ ಮಾಡುವುದಿಲ್ಲ ಎಂದು ಜಸ್ಟಿನ್‌ ಟ್ರುಡೋ ತಿಳಿಸಿದ್ದಾರೆ. ಇದನ್ನೂ ಓದಿ: ಕೆನಡಾದಲ್ಲಿ ಗ್ಯಾಂಗ್‌ವಾರ್‌ – ಖಲಿಸ್ತಾನಿ ಭಯೋತ್ಪಾದಕ ಹತ್ಯೆ

    ಮುಂದುವರಿದು, ಭಾರತ ಅಭಿವೃದ್ಧಿ ಪ್ರಧಾನ ದೇಶ ಎಂಬುದರಲ್ಲಿ ಎರಡು ಮಾತಿಲ್ಲ. ಅಂತಹ ದೇಶದೊಂದಿಗೆ ನಾವು ಜೊತೆಗೂಡಿ ಪ್ರಾದೇಶಿಕ ಹಾಗೂ ಜಾಗತಿಕ ಏಳಿಗೆ ದಿಸೆಯಲ್ಲಿ ಕೆಲಸ ಮಾಡುವ ಅಗತ್ಯವಿದೆ. ಹಾಗಾಗಿ, ನಾವು ಪ್ರಚೋದನೆ ನೀಡುವ ಹಾಗೂ ಯಾವುದೇ ಸಮಸ್ಯೆ ಸೃಷ್ಟಿಸುವ ಪ್ರಯತ್ನ ಮಾಡುವುದಿಲ್ಲ. ಕೆನಡಿಯನ್ನರು (Canadians) ಮತ್ತು ನಮ್ಮ ಮೌಲ್ಯಗಳನ್ನು ರಕ್ಷಿಸುವುದಕ್ಕೆ ನಾವು ಪ್ರಾಮುಖ್ಯತೆ ನೀಡುತ್ತೇವೆ ಎಂದು ಮೃದುವಾಗಿ ಮಾತನಾಡಿದ್ದಾರೆ.

    ಹತ್ಯೆಗೀಡಾದ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ನನ್ನು ಕೆನಡಾದ ನಾಗರಿಕ ಎಂದು ಪರಿಗಣಿಸಿ ಜಸ್ಟಿನ್‌ ಟ್ರುಡೋ ಭಾರತದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆತನ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಕೆನಡಾ ನಾಗರಿಕರ ಹಕ್ಕುಗಳನ್ನು ಹಾಗೂ ದೇಶದ ಮೌಲ್ಯಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯ, ಯಾವುದೇ ಕಾರಣಕ್ಕೆ ಭಾರತಕ್ಕೆ ಪ್ರಚೋದನೆ ನೀಡುವುದಿಲ್ಲ ಎಂದು ನಯವಾಗಿ ಹೇಳುತ್ತಲೇ ಈ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಅಜರ್‌ಬೈಜಾನ್, ಅರ್ಮೇನಿಯನ್ ಪ್ರತ್ಯೇಕತಾವಾದಿಗಳ ನಡುವಿನ ಯುದ್ಧ ಅಂತ್ಯ

    ಕೆನಡಾದಲ್ಲಿರುವ ಭಾರತದ ರಾಯಭಾರಿಯನ್ನ ಉಚ್ಚಾಟನೆಗೊಳಿಸಿದ ಬಳಿಕ ಭಾರತವೂ ಹಲವು ಕ್ರಮಗಳ ಮೂಲಕ ತಿರುಗೇಟು ನೀಡಿದೆ. ಭಾರತದಲ್ಲಿರುವ ಕೆನಡಾ ರಾಯಭಾರಿಯನ್ನ ಉಚ್ಚಾಟನೆ ಮಾಡುವ ಜೊತೆಗೆ ಕೆನಡಾ ನಾಗರಿಕರಿಗೆ ವೀಸಾ ನೀಡುವುದನ್ನೂ ಸ್ಥಗಿತಗೊಳಿಸಿದೆ. ಇನ್ನು ಹರ್ದೀಪ್ ಸಿಂಗ್‌ ನಿಜ್ಜರ್‌ ಹತ್ಯೆಯ ವಿಚಾರಕ್ಕೆ ಸಂಬಂಧಿಸಿದಂತೆ ಅಮೆರಿಕ ಮಧ್ಯಪ್ರವೇಶಿಸಿದ್ದು, ತನಿಖೆಗೆ ಭಾರತ ಸಹಕರಿಸಲಿ ಎಂದಿದೆ. ಮತ್ತೊಂದೆಡೆ, ಕೆನಡಾ ಆರೋಪ ಮಾಡುವ ಬದಲು ಸಾಕ್ಷ್ಯ ಒದಗಿಸಲಿ ಎಂದು ಭಾರತ ಪ್ರತ್ಯುತ್ತರ ಕೊಟ್ಟಿದೆ.

    ಇತ್ತೀಚೆಗಷ್ಟೇ ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಖಲಿಸ್ತಾನಿಗಳ ಅಟ್ಟಹಾಸನ್ನೆ ಬ್ರೇಕ್‌ ಹಾಕುವ ಬಗ್ಗೆ ಕೆನಡಾ ಪ್ರಧಾನಿಯವರೊಂದಿಗೆ ನೇರ ಮಾತುಕತೆ ನಡೆದಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]