Tag: ಖಾತೆ

  • ದೆಹಲಿಗೆ ಹೋಗಿ ಬರುವವರೆಗೆ ಸುಮ್ಮನಿರಿ: ಸಿಎಂ ಸೂಚನೆ

    ದೆಹಲಿಗೆ ಹೋಗಿ ಬರುವವರೆಗೆ ಸುಮ್ಮನಿರಿ: ಸಿಎಂ ಸೂಚನೆ

    ಬೆಂಗಳೂರು: ಸಚಿವ ಆನಂದ್ ಸಿಂಗ್ ಅವರು ಮತ್ತೆ ರಾಜೀನಾಮೆ ನೀಡುವುದಾಗಿ ಹೇಳುತ್ತಿದ್ದು, ಈ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಸಚಿವರ ಮನವೊಲಿಕೆಗೆ ಮತ್ತೆ ಪ್ರಯತ್ನಿಸುತ್ತಿದ್ದಾರೆ.

    ಇಂದು ಬೆಳಗ್ಗೆ ಗೃಹ ಕಚೇರಿ ಕೃಷ್ಣಾಗೆ ತಮ್ಮ ಆಪ್ತ ರಾಜೂಗೌಡ ಜೊತೆ ಕಾರಿನಲ್ಲಿ ಬಂದು ಸಿಎಂ ಭೇಟಿ ಮಾಡಿದ್ದಾರೆ. ಈ ವೇಳೆ ಸಿಎಂ ಮತ್ತೆ ಆನಂದ್ ಸಿಂಗ್ ಮನವೊಲಿಕೆ ಮಾಡುವ ಪ್ರಯತ್ನ ಮಾಡಿದ್ದಾರೆ. ಅಲ್ಲದೆ ದೆಹಲಿಗೆ ಹೋಗಿ ಬರುವ ತನಕ ಸೈಲೆಂಟ್ ಆಗಿರುವಂತೆ ಸಿಎಂ ಸೂಚನೆ ನೀಡಿದ್ದಾರೆ.

    ಬಸವರಾಜ್ ಬೊಮ್ಮಾಯಿ ಕ್ಯಾಬಿನೆಟ್ ನಲ್ಲಿ ಆನಂದ್ ಸಿಂಗ್ ಅವರಿಗೆ ಪ್ರವಾಸೋದ್ಯಮ, ಜೀವಶಾಸ್ತ್ರ ಹಾಗೂ ಪರಿಸರ ಖಾತೆಯನ್ನು ನೀಡಲಾಗಿದೆ. ಆದರೆ ಈ ಖಾತೆಯಿಂದ ಆನಂದ್ ಅಸಮಾಧಾನಗೊಂಡಿದ್ದು, ಈ ಹಿಂದೆಯೂ ರಾಜೀನಾಮೆಯ ಎಚ್ಚರಿಕೆ ನೀಡಿದ್ದರು. ಯಡಿಯೂರಪ್ಪ ಸರ್ಕಾರದ ವೇಳೆಯೂ ಎರಡು ದಿನದಲ್ಲಿ ಮೂರು ಖಾತೆ ಬದಲಾಯಿಸಿದ್ದರು. ಇದು ಅವಮಾನ ಅಲ್ಲ ಆದರೆ ನಿರಾಸೆ ಮಾಡಿರೋದಕ್ಕೆ ಸಾಕಷ್ಟು ಬೇಸರವಾಗಿದೆ. ಕೇಳಿದ ಖಾತೆ ಕೊಡದೇ ಇದ್ದರೆ ಶಾಸಕನಾಗಿ ಉಳಿಯುವುದು ಒಳಿತು ಎನ್ನುವದು ನನ್ನ ನಿಲುವು. ಮತ್ತೊಮ್ಮೆ ಸಿಎಂಗೆ ಮನವಿ ಮಾಡುತ್ತೇನೆ ಕೊಡದೆ ಇದ್ದರೆ ನನ್ನ ದಾರಿ ನಾನು ನೋಡಿಕೊಳ್ಳುತ್ತೇನೆ ಎಂದು ವಾರ್ನಿಂಗ್ ಕೊಟ್ಟಿದ್ದರು. ಇದನ್ನೂ ಓದಿ: ರಾಜೀನಾಮೆ ಸಂದೇಶ ರವಾನಿಸಿದ ಸಚಿವ ಆನಂದ್ ಸಿಂಗ್?

    ಆ ಬಳಿಕ ಮುಖ್ಯಮಂತ್ರಿಯವರು ಆನಂದ್ ಸಿಂಗ್ ಅವರಿಗೆ ಮನವೊಲಿಕೆ ಮಾಡಿದ್ದರು. ಹೀಗಾಗಿ ಪ್ರಬಲ ಖಾತೆಗೆ ಬಿಗಿಪಟ್ಟು ಹಿಡಿದಿದ್ದ ಆನಂದ್ ಸಿಂಗ್ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ್ದ ಆನಂದ್ ಸಿಂಗ್, ರಾಜೀನಾಮೆ ನೀಡುತ್ತೇನೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ಖಾತೆ ಬದಲಾವಣೆ ಆಗಬೇಕೆಂದು ಹೇಳಿದ್ದು ನಿಜ. ಸಿಎಂ ನನ್ನ ಮಾತುಗಳನ್ನ ಕೇಳಿದ್ದು, ಭರವಸೆ ನೀಡಿದ್ದಾರೆ ಎಂದು ಹೇಳಿದ್ದರು. ಇತ್ತ ಸಿಎಂ ಮಾತನಾಡಿ, ಖಾತೆಯ ಬದಲಾವಣೆಯ ತೀರ್ಮಾನವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಆನಂದ್ ಸಿಂಗ್ ಭಾವನೆಗಳಿಗೆ ನಾವು ಸ್ಪಂದಿಸಿದ್ದು, ಅವರ ಮನವಿಯನ್ನು ತಲುಪಿಸಬೇಕಾದವರಿಗೆ ತಲುಪಿಸುತ್ತೇನೆ ಎಂದು ಹೇಳಿದ್ದರು.

  • ಬಿಜೆಪಿಯಲ್ಲಿ ಖಾತೆ ಕ್ಯಾತೆ – ಭಿನ್ನಮತದ ರಿಪೋರ್ಟ್ ಪಡೆದ ಉಸ್ತುವಾರಿ ಅರುಣ್ ಸಿಂಗ್

    ಬಿಜೆಪಿಯಲ್ಲಿ ಖಾತೆ ಕ್ಯಾತೆ – ಭಿನ್ನಮತದ ರಿಪೋರ್ಟ್ ಪಡೆದ ಉಸ್ತುವಾರಿ ಅರುಣ್ ಸಿಂಗ್

    ನವದೆಹಲಿ/ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಪಕ್ಷದ ವಿದ್ಯಮಾನಗಳ ಬಗ್ಗೆ ಉಸ್ತುವಾರಿ ಅರುಣ್ ಸಿಂಗ್ ಮಾಹಿತಿ ಪಡೆದುಕೊಂಡಿದ್ದಾರೆ.

    ಆನಂದ್ ಸಿಂಗ್ ರಾಜೀನಾಮೆ ನಿರ್ಧಾರ ವಿಚಾರ, ಎಂಟಿಬಿ ಒತ್ತಡ, ರಾಮದಾಸ್ ಮುನಿಸು, ಶ್ರೀರಾಮುಲು ಬೇಸರ, ಅಪ್ಪಚ್ಚು ರಂಜನ್ ಬೆಂಬಲಿಗರ ಪ್ರತಿಭಟನೆ ಈ ಎಲ್ಲಾ ವಿದ್ಯಮಾನಗಳ ಮಾಹಿತಿಯನ್ನು ಅರುಣ್‍ಸಿಂಗ್ ಅವರು ಸಿಎಂ, ರಾಜ್ಯ ಬಿಜೆಪಿ ಘಟಕದಿಂದ ಪಡೆದಿದ್ದಾರೆ.

    ಈ ಹಿನ್ನೆಲೆಯಲ್ಲಿ ಸದ್ಯ ರಾಜ್ಯ ಬಿಜೆಪಿಯಲ್ಲೀಗ ವರಿಷ್ಠರಿಗೆ 3 ತಲೆನೋವು ಶುರುವಾಗಿದೆ. ಆನಂದ್ ಸಿಂಗ್, ಎಂಟಿಬಿ ನಾಗರಾಜ್, ಶ್ರೀರಾಮುಲು ಈ ಮೂವರು ಬಿಜೆಪಿಯಲ್ಲಿ ಹಲವು ಬೆಳವಣಿಗೆಗಳಿಗೆ ಕಾರಣರಾಗಿದ್ದಾರೆ. ಯಡಿಯೂರಪ್ಪ ರಾಜೀನಾಮೆ ಬಳಿಕ ಪಕ್ಷದಲ್ಲಿ ಹೇಳೋರಿಲ್ಲ ಕೇಳೋರಿಲ್ಲ ಅನ್ನೋವಂತಾಗಿದೆ. ರಾಜ್ಯ ಬಿಜೆಪಿ ಬಿಕ್ಕಟ್ಟಿನ ಬಗ್ಗೆ ವರಿಷ್ಠರೂ ಮೌನವಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಸವರಾಜ್ ಬೊಮ್ಮಾಯಿ ಅವರು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ.

    ಬಿಜೆಪಿ ಸರ್ಕಾರದಲ್ಲಿ ಖಾತೆ ಕ್ಯಾತೆ ಭುಗಿಲೆದ್ದಿದ್ದು, ಪ್ರಬಲ ಖಾತೆಗೆ ಸಚಿವ ಆನಂದ್ ಸಿಂಗ್ ಪಟ್ಟುಹಿಡಿದಿದ್ದಾರೆ. ತಾನು ಬಯಸಿದ ಖಾತೆ ಸಿಕ್ಕಿಲ್ಲವೆಂದು ಸಚಿವರು ಇದೀಗ ರಾಜೀನಾಮೆಗೆ ಮುಂದಾಗಿದ್ದಾರೆ. ಇದಕ್ಕೆ ಪೂರಕವಾಗಿ ಹೊಸಪೇಟೆಯಲ್ಲಿರುವ ಶಾಸಕರ ಕಚೇರಿ ಬೋರ್ಡ್ ತೆರವುಗೊಳಿಸಿದ್ದಾರೆ. ಕ್ರೇನ್ ಬಳಸಿ ಕಚೇರಿಯ ಬೋರ್ಡ್ ತೆಗೆಸಿದ ಆನಂದ್ ಸಿಂಗ್, ಸಂಪೂರ್ಣ ಕಚೇರಿ ಬಂದ್ ಮಾಡಲು ಮುಂದಾಗಿದ್ದಾರೆ. ಕಳೆದ 14 ವರ್ಷಗಳಿಂದ ಅಚಿವರು ಈ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇದನ್ನೂ ಓದಿ: ರಾಜೀನಾಮೆಗೆ ಮುಂದಾಗಿರೋ ಆನಂದ್ ಸಿಂಗ್ ಸಿಎಂ ಕರೆಗೂ ಡೋಂಟ್ ಕೇರ್!

    ಬೊಮ್ಮಾಯಿ ಕ್ಯಾಬಿನೆಟ್ ನಲ್ಲಿ ಆನಂದ್ ಸಿಂಗ್ ಅವರು ಇಂಧನ ಅಥವಾ ಲೋಕೋಪಯೋಗಿ ಅಥವಾ ಗಣಿ ಇಲಾಖೆ ಬಯಸಿದ್ದರು. ಆದರೆ ಅವರಿಗೆ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ನೀಡಲಾಗಿದ್ದು, ಇದೇ ವಿಚಾರಕ್ಕೆ ಆನಂದ್ ಸಿಂಗ್ ಅವರು ಸಿಟ್ಟಾಗಿದ್ದು, ರಾಜೀನಾಮೆ ನೀಡುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

  • ರಾಜೀನಾಮೆಗೆ ಮುಂದಾಗಿರೋ ಆನಂದ್ ಸಿಂಗ್ ಸಿಎಂ ಕರೆಗೂ ಡೋಂಟ್ ಕೇರ್!

    ರಾಜೀನಾಮೆಗೆ ಮುಂದಾಗಿರೋ ಆನಂದ್ ಸಿಂಗ್ ಸಿಎಂ ಕರೆಗೂ ಡೋಂಟ್ ಕೇರ್!

    ಬೆಂಗಳೂರು: ರಾಜೀನಾಮೆ ನೀಡಲು ಮುಂದಾಗಿರುವ ಸಚಿವ ಆನಂದ್ ಸಿಂಗ್ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕರೆಗೂ ಡೋಂಟ್ ಕೇರ್ ಅಂದಿದ್ದಾರೆ.

    ಹೌದು. ಖಾತೆ ಕ್ಯಾತೆ ಸಂಬಂಧ ಬೊಮ್ಮಾಯಿ ಕರೆ ಮಾಡಿದ್ರೂ ಆನಂದ್ ಸಿಂಗ್ ಮಾತ್ರ ಫೋನ್ ಸ್ವೀಕರಿಸುತ್ತಿಲ್ಲ. ಈ ಮೂಲಕ ಸಚಿವರು ಸಿಎಂ ಅವರ ಸಂಪರ್ಕಕ್ಕೆ ಸಿಗುತ್ತಿಲ್ಲ. ಖಾತೆ ಬದಲಾಯಿಸದ ಹಿನ್ನೆಲೆಯಲ್ಲಿ ಸಚಿವರು ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    ಸಿಎಂ ಬೊಮ್ಮಾಯಿ ಮೇಲೆ ಮುನಿಸಿಕೊಂಡಿರುವ ಆನಂದ್ ಸಿಂಗ್ ಅವರ ಕುಟುಂಬಸ್ಥರ ಮೊಬೈಲ್‍ಗೆ ಕರೆ ಮಾಡಿದ್ರೂ ಸ್ವೀಕರಿಸಿದೆ ತಮ್ಮ ಸಿಟ್ಟು ಹೊರಹಾಕುತ್ತಿದ್ದಾರೆ. ಇದನ್ನೂ ಓದಿ: ಕಚೇರಿಯ ಬೋರ್ಡ್ ತೆರವು – ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ ಆನಂದ್ ಸಿಂಗ್?

    ಒಟ್ಟಿನಲ್ಲಿ ಬಿಜೆಪಿ ಸರ್ಕಾರದಲ್ಲಿ ಖಾತೆ ಕ್ಯಾತೆ ಭುಗಿಲೆದ್ದಿದ್ದು, ಪ್ರಬಲ ಖಾತೆಗೆ ಸಚಿವ ಆನಂದ್ ಸಿಂಗ್ ಪಟ್ಟುಹಿಡಿದಿದ್ದಾರೆ. ತಾನು ಬಯಸಿದ ಖಾತೆ ಸಿಕ್ಕಿಲ್ಲವೆಂದು ಸಚಿವರು ಇದೀಗ ರಾಜೀನಾಮೆಗೆ ಮುಂದಾಗಿದ್ದಾರೆ. ಇದಕ್ಕೆ ಪೂರಕವಾಗಿ ಹೊಸಪೇಟೆಯಲ್ಲಿರುವ ಶಾಸಕರ ಕಚೇರಿ ಬೋರ್ಡ್ ತೆರವುಗೊಳಿಸಿದ್ದಾರೆ. ಕ್ರೇನ್ ಬಳಸಿ ಕಚೇರಿಯ ಬೋರ್ಡ್ ತೆಗೆಸಿದ ಆನಂದ್ ಸಿಂಗ್, ಸಂಪೂರ್ಣ ಕಚೇರಿ ಬಂದ್ ಮಾಡಲು ಮುಂದಾಗಿದ್ದಾರೆ. ಕಳೆದ 14 ವರ್ಷಗಳಿಂದ ಅಚಿವರು ಈ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

    ಬೊಮ್ಮಾಯಿ ಕ್ಯಾಬಿನೆಟ್ ನಲ್ಲಿ ಆನಂದ್ ಸಿಂಗ್ ಅವರು ಇಂಧನ ಅಥವಾ ಲೋಕೋಪಯೋಗಿ ಅಥವಾ ಗಣಿ ಇಲಾಖೆ ಬಯಸಿದ್ದರು. ಆದರೆ ಅವರಿಗೆ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ನೀಡಲಾಗಿದ್ದು, ಇದೇ ವಿಚಾರಕ್ಕೆ ಆನಂದ್ ಸಿಂಗ್ ಅವರು ಸಿಟ್ಟಾಗಿದ್ದು, ರಾಜೀನಾಮೆ ನೀಡುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

  • ಖಾತೆ ಹಂಚಿಕೆ ಸಿಎಂ ಪರಮಾಧಿಕಾರ, ವಸತಿ ಖಾತೆ ಮತ್ತೆ ನಿಭಾಯಿಸುತ್ತೇನೆ: ವಿ.ಸೋಮಣ್ಣ

    ಖಾತೆ ಹಂಚಿಕೆ ಸಿಎಂ ಪರಮಾಧಿಕಾರ, ವಸತಿ ಖಾತೆ ಮತ್ತೆ ನಿಭಾಯಿಸುತ್ತೇನೆ: ವಿ.ಸೋಮಣ್ಣ

    ರಾಯಚೂರು: ಖಾತೆ ಹಂಚಿಕೆ ಸಿಎಂ ಪರಮಾಧಿಕಾರ, ಕೊಟ್ಟ ಖಾತೆಯನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದು ವಸತಿ ಖಾತೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ರಾಯಚೂರಿನಲ್ಲಿ ಹೇಳಿದ್ದಾರೆ.

    ಜಿಲ್ಲೆಯ ಪ್ರವಾಹ ಪರಿಸ್ಥಿತಿ ಹಾಗೂ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಪರಿಶೀಲನೆಗೆ ರಾಯಚೂರಿಗೆ ಆಗಮಿಸಿರುವ ನೂತನ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಬಳಿಕ ಮಾತನಾಡಿ, ನನಗೆ ವಸತಿ ಖಾತೆ ಹೊಸದಲ್ಲ. ಕೊಟ್ಟ ಖಾತೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸಿಕೊಂಡು ಕೆಲಸ ಮಾಡಬೇಕು. ಯಾವುದೇ ಖಾತೆ ನೀಡಿದರು ಕೂಡ ಆ ಖಾತೆಗೆ ನಾವು ಶಕ್ತಿ ತುಂಬಬೇಕು ಎಂದರು. ಇದನ್ನೂ ಓದಿ: ಸಿಕ್ಕ ಖಾತೆಯಲ್ಲಿ ‘ಆನಂದ’ವಿಲ್ಲ – ಸಚಿವ ಆನಂದ್ ಸಿಂಗ್ ಅಸಮಾಧಾನ

    ನನಗೆ ಬಂಧಿಖಾನೆ ಖಾತೆ ಕೊಟ್ಟಾಗ ನಾನು ಕೆಲಸ ಮಾಡಿದ್ದೇನೆ. ಅದನ್ನು ಸಮರ್ಥವಾಗಿ ಎದುರಿಸಿ ಅಭಿವೃದ್ದಿ ಮಾಡಿದ್ದೇನೆ. ಖಾತೆಯನ್ನು ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು. ವಸತಿ ಖಾತೆಯನ್ನು ನಾನು ಮತ್ತೆ ನಿಭಾಯಿಸುತ್ತೇನೆ. ಖಾತೆ ಬಗ್ಗೆ ಸಚಿವ ಆನಂದ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿದ ಸೋಮಣ್ಣ, ಆನಂದ್ ಸಿಂಗ್ ನನ್ನ ಸಹೋದರ ಅವರ ಜೊತೆ ನಾನು ಮಾತನಾಡುತ್ತೇನೆ. ಯಾವುದೋ ಸಂದರ್ಭದಲ್ಲಿ ಮಾತನಾಡಿ ಅವರ ಭಾವನೆ ವ್ಯಕ್ತಪಡಿಸಿದ್ದಾರೆ. ನಮ್ಮ ಜೊತೆ ಅವರನ್ನೂ ಕರೆದುಕೊಂಡು ಹೋಗುತ್ತೇವೆ ಎಂದು ತಿಳಿಸಿದರು.

    ಕೋವಿಡ್ ಹಾಗೂ ಪ್ರವಾಹದ ಕುರಿತು ಪರಿಸ್ಥಿತಿ ಅವಲೋಕಿಸಿ ಸಭೆ ನಡೆಸಲು ಸಿಎಂ ಸೂಚಿಸಿದ್ದಾರೆ. ಜಿಲ್ಲೆಯಲ್ಲಿನ ಪರಿಸ್ಥಿತಿ ಅವಲೋಕಿಸಲು ಬಂದಿದ್ದೇನೆ. ಎರಡು ದಿನ ನಾನು ಜಿಲ್ಲೆಯಾದ್ಯಂತ ಪ್ರವಾಸ ಮಾಡುತ್ತೇನೆ. ಜಿಲ್ಲೆಯಲ್ಲಿನ ಸಮಸ್ಯೆಗಳ ಬಗ್ಗೆ ಪರಿಶೀಲಿಸಿ ಸಮಸ್ಯೆ ಬಗ್ಗೆ ಪರಾಮರ್ಶಿಸುತ್ತೇನೆ ಎಂದು ಸೋಮಣ್ಣ ಎಂದರು.

  • ನನಗೆ ಇಂತಹದ್ದೇ ಖಾತೆ ಬೇಕು ಅಂತ ಕೇಳುವುದು ನನ್ನ ಧರ್ಮ: ಆನಂದ್ ಸಿಂಗ್

    ನನಗೆ ಇಂತಹದ್ದೇ ಖಾತೆ ಬೇಕು ಅಂತ ಕೇಳುವುದು ನನ್ನ ಧರ್ಮ: ಆನಂದ್ ಸಿಂಗ್

    ಬಳ್ಳಾರಿ: ನನಗೆ ಇದೇ ಖಾತೆ ಬೇಕು ಅಂಥಾ ಕೇಳುವುದು ನನ್ನ ಧರ್ಮವಾಗಿದೆ. ಆದರೆ ಅದೇ ಖಾತೆ ಕೊಡುವುದು ಬಿಡುವುದು ಅವರಿಗೆ ಬಿಟ್ಟಿದ್ದು ಎಂದು ಸಚಿವ ಆನಂದ್ ಸಿಂಗ್ ಬಳ್ಳಾರಿಯಲ್ಲಿ ಹೇಳಿದ್ದಾರೆ.

    ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಬಳ್ಳಾರಿಗೆ ಆಗಮಿಸಿದ್ದರು. ಬಳ್ಳಾರಿಯ ಶಕ್ತಿ ದೇವತೆ ಕನಕದುರ್ಗಮ್ಮ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ನನಗೆ ಇದೇ ಖಾತೆ ಬೇಕು ಎಂದು ಮನವಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಮನವಿ ಮಾಡಿಕೊಂಡಿದ್ದೇನೆ. ಅವರು ನೀಡಿದರೆ ಸಮರ್ಥವಾಗಿ ನಿರ್ವಹಿಸುವೆ ಎಂದಿದ್ದಾರೆ.

    ಖಾತೆ ಕೊಡುವುದು ಬಿಡೋದು ಅವರಿಗೆ ಬಿಟ್ಟಿದ್ದು. ಅವರು ಯಾವ ಖಾತೆಯನ್ನಾದರೂ ನೀಡಲಿ ಸಮರ್ಥವಾಗಿ ನಿಭಾಯಿಸುವೆ. ನನಗಿಷ್ಟವಾದ ಖಾತೆಯನ್ನ ನೀಡಿದರೆ ಮತ್ತಷ್ಟು ಪ್ರಭಲವಾಗಿ ನಿಭಾಯಿಸುವೆ. ಸದ್ಯದ ಮಟ್ಟಿಗೆ ಆಯಾ ಜಿಲ್ಲೆಗಳ ಕೋವಿಡ್ ನಿರ್ವಹಣೆಗೋಸ್ಕರ ಕೆಲ ಸಚಿವರಿಗೆ ಈಗಾಗಲೇ ಜಿಲ್ಲಾ ಉಸ್ತುವಾರಿ ನೀಡಲಾಗಿದೆ. ನನಗೆ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಿಗೋದು ಬಹುತೇಕ ಖಚಿತವಾಗಿದೆ ಎಂದು ತಿಳಿಸಿದ್ದಾರೆ.

  • ಪುದುಚೇರಿ ಸಿಎಂ ಸಂಪುಟ ರಚನೆ- 13 ಖಾತೆಗಳನ್ನು ಇಟ್ಟುಕೊಂಡ ಎನ್.ರಂಗಸ್ವಾಮಿ

    ಪುದುಚೇರಿ ಸಿಎಂ ಸಂಪುಟ ರಚನೆ- 13 ಖಾತೆಗಳನ್ನು ಇಟ್ಟುಕೊಂಡ ಎನ್.ರಂಗಸ್ವಾಮಿ

    ಪುದುಚೆರಿ: ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಮುಖ್ಯಮಂತ್ರಿ ಎನ್.ರಂಗಸ್ವಾಮಿ ನೇತೃತ್ವದ ಸಂಪುಟ ರಚನೆಯಾಗಿದೆ. ರಂಗಸ್ವಾಮಿ ಆರೋಗ್ಯ, ಕಂದಾಯ ಇಲಾಖೆ ಸೇರಿದಂತೆ ಪ್ರಮುಖ 13 ಖಾತೆಗಳನ್ನು ತನ್ನ ಬಳಿಯೇ ಇಟ್ಟುಕೊಂಡಿದ್ದಾರೆ.

    ಕೇಂದ್ರಾಡಳಿತ ಪ್ರದೇಶ ಪುದುಚೇರಿಗೆ ಲೆಫ್ಟಿನೆಂಟ್ ಗವರ್ನರ್ ಡಾ.ತಮಿಳುಸಾಯಿ ಸುಂದರರಾಜನ್ ಅವರ ಅನುಮೋದನೆ ಬಳಿಕ ಸರ್ಕಾರದ ಸಂಪುಟ ರಚನೆಯಾಗಿದೆ. ಸಿಎಂ 13 ಖಾತೆಗಳನ್ನು ತನ್ನ ಬಳಿ ಇಟ್ಟುಕೊಂಡರೆ ಉಳಿದ ಎಲ್ಲಾ ಸಚಿವರಿಗೆ ತಲಾ ಆರು ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಇದನ್ನೂ ಓದಿ: ಪುದುಚೇರಿಯಲ್ಲಿ ಕಮಲ ಅರಳಿದ್ದು ಹೇಗೆ? ಕಾಂಗ್ರೆಸ್ ಎಡವಿದ್ದೆಲ್ಲಿ?

    ಎನ್. ರಂಗಸ್ವಾಮಿ ಅವರು ಆರೋಗ್ಯ, ಕಂದಾಯ, ಸ್ಥಳೀಯ ಆಡಳಿತ, ಬಂದರು, ವಿಜ್ಞಾನ ತಂತ್ರಜ್ಞಾನ ಮತ್ತು ಪರಿಸರ, ಮಾಹಿತಿ ಮತ್ತು ಪ್ರಚಾರ ಸೇರಿದಂತೆ ಪ್ರಮುಖ 13 ಖಾತೆಗಳನ್ನು ತಮ್ಮ ಬಳಿಯೇ ಉಳಿಸಿಕೊಂಡು ಉಳಿದ ಸಚಿವರಿಗೆ ತಲಾ 6 ಖಾತೆಯಂತೆ ಹಂಚಿಕೆ ಮಾಡಿದ್ದಾರೆ.

    ಫೆಬ್ರವರಿಯಲ್ಲಿ ವಿ. ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಕ್ಕೆ ಪ್ರಮುಖ ಕಾರಣರಾಗಿದ್ದ ಎನ್. ರಂಗಸ್ವಾಮಿ ಇದೀಗ ಕಾಂಗ್ರೆಸ್ ತೊರೆದು ಬಿಜೆಪಿಯೊಂದಿಗೆ ಸೇರಿ ಸರ್ಕಾರ ರಚಿಸಿದ್ದಾರೆ.

  • ದೊಡ್ಮನೆಯ ಉಪಮುಖ್ಯಮಂತ್ರಿಯಾದ ಅರವಿಂದ್

    ದೊಡ್ಮನೆಯ ಉಪಮುಖ್ಯಮಂತ್ರಿಯಾದ ಅರವಿಂದ್

    ರಾಜಕೀಯದಲ್ಲಿ ಖಾತೆ ಹಂಚಿಕೆ ಸರ್ವೇಸಾಮಾನ್ಯವಾಗಿ ನಡೆಯುತ್ತದೆ. ಆದ್ರೆ ಬಿಗ್‍ಬಾಸ್ ಮನೆಯಲ್ಲಿ ಚಕ್ರವರ್ತಿ ಚಂದ್ರಚೂಡ್‍ರವರು ಮನೆಯ ಸ್ಪರ್ಧಿಗಳಿಗೆ ಯಾವ ಖಾತೆ ಸೂಟ್ ಆಗುತ್ತದೆ ಎಂದು ತಿಳಿಸಿದ್ದಾರೆ.

    ಕಣ್ಮಣಿ ಬಿಗ್‍ಬಾಸ್ ಸಂಪುಟದಲ್ಲಿ ಯಾವ ಖಾತೆ ಯಾರಿಗೆ ಕೊಡಬಹುದು ಎಂದು ಚಕ್ರವರ್ತಿಯವರಿಗೆ ಪ್ರಶ್ನೆ ಮಾಡಿದ್ದಾಳೆ. ಈ ವೇಳೆ ಪ್ರಿಯಾಂಕರಿಂದ ಶುರು ಮಾಡಿದ ಚಕ್ರವರ್ತಿಯವರು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರಿಗೆ ನೀಡುತ್ತೇನೆ ಏಕೆಂದರೆ ಅವರು ತುಂಬಾ ಸಂಸ್ಕøತಿ ಬಗ್ಗೆ ತಲೆಕೆಡಿಸಿಕೊಳ್ಳುತ್ತಾರೆ. ವಸತಿ ಮತ್ತು ಆಹಾರ ಇಲಾಖೆಯನ್ನು ಶುಭಾಗೆ ನೀಡುತ್ತೇನೆ ಕಾರಣ ಇವರು ವಸತಿ ಕಡೆಗೂ ಜಾಸ್ತಿ ಹೋಗುವುದಿಲ್ಲ ಹಾಗೂ ಆಹಾರದ ಕಡೆಗೂ ಜಾಸ್ತಿ ಹೋಗುವುದಿಲ್ಲ. ರಾಜ್ಯ ಸರ್ಕಾರದಲ್ಲಿ ಅದು ಅತೀ ದೊಡ್ಡ ಖಾತೆಯಾಗಿರುವುದರಿಂದ ಅದು ಅವರಿಗಿರಲಿ ಎಂದು ಬಯಸುತ್ತೇನೆ.

    ಧರ್ಮದತ್ತಿ ಅಂದರೆ ಧಾರ್ಮಿಕ ಇಲಾಖೆಯನ್ನೇ ವೈಷ್ಣವಿಗೆ ನೀಡುತ್ತೇನೆ. ಜೀವನ ಶೂನ್ಯ, ದೇವಸ್ಥಾನ ಮುಜರಾಯಿ ಇಲಾಖೆಯನ್ನು ನೀಡಬೇಕಾಗುತ್ತದೆ. ಕಂದಾಯ ಇಲಾಖೆಯನ್ನು ನಿಧಿಗೆ ನೀಡುತ್ತೇನೆ. ಅವರ ಮೈಂಡ್ ಯಾವಾಗಲೂ ರೆವೆನ್ಯೂ, ಲೆಕ್ಕಾಚಾರನ್ನೇಲ್ಲಾ ಬಹಳ ಚೆನ್ನಾಗಿ ಮಾಡುತ್ತಾರೆ. ಇನ್ನೂ ಶಮಂತ್‍ಗೆ ಖಾತೆ ಕೊಡದೇ ಸದ್ಯಕ್ಕೆ ಬೀಜ ನಿಗಮ ನಿಯಮಿತ ನೀಡುತ್ತೇನೆ. ಇವನು ಕೃಷಿ, ಬೀಜ ಹೇಗೆ ಹಾಕಬೇಕು, ಹೇಗೆ ಬೆಳೆಸಬೇಕು ಏನು ಎಂಬುದರ ಬಗ್ಗೆ ತಿಳಿದುಕೊಳ್ಳಬೇಕು ಎನ್ನುತ್ತಾರೆ.

    ರಘುಗೆ ಶೇ. 100 ಅಬಕಾರಿಯನ್ನು ನೀಡುತ್ತೇನೆ. ಬೇರೆ ಚೇಂಜ್ ಮಾಡುವುದಕ್ಕೆ ಹೋಗುವುದಿಲ್ಲ. ಅವರ ಮಾತು, ನಡೆ, ನುಡಿ ಕಣ್ಣೋಟ ಇಲ್ಲದರಲ್ಲಿಯೂ ನಶೆ ತುಂಬಿರುತ್ತದೆ. ಮಂಜುಗೆ ಮನೆಯನ್ನೆಲ್ಲಾ ಸಂಬಾಳಿಸಿ ಯಾವುದಾದರೂ ತಪ್ಪು ನಡೆದರೂ ಸರಿ ಮಾಡಿಕೊಂಡು, ವಾಕಿಂಗ್ ಸ್ಟಿಕ್‍ನಲ್ಲಿ ಏನು ಮಾಡಬೇಕು, ಹಾಲ್‍ನಲ್ಲಿ ಏನು ಮಾಡಬೇಕು, ಎಲ್ಲಿ ಏನು ಮಾಡಬೇಕು ಎಂಬುವುದನ್ನೆಲ್ಲಾ ಬಹಳ ಚೆನ್ನಾಗಿ ನಿಭಾಯಿಸುತ್ತಾರೆ ಹೀಗಾಗಿ ಅವರಿಗೆ ಗೃಹ ಇಲಾಖೆ ಖಾತೆ ನೀಡುತ್ತೇನೆ.

    ದಿವ್ಯಾ ಸುರೇಶ್‍ರವರಿಗೆ ಪ್ರವಾಸೋದ್ಯಮ ನೀಡುತ್ತೇನೆ. ಅವರದ್ದು ಪೂರ್ತಿ ಪ್ರವಾಸವಿರುತ್ತದೆ. ಹುಡುಕಿದರೂ ಕಾಣುವುದಿಲ್ಲ. ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಚಿಗರಿ ಮರಿ ತರ ನಡೆಯುತ್ತಿರುತ್ತದೆ. ನಮ್ಮ ಪ್ರಶಾಂತ್‍ಗೆ ಕಾನೂನು ಮತ್ತು ಸಂಸದೀಯ ಮಂಡಳಿ. ಬೇರೆ ಖಾತೆಗಳನ್ನು ನೀಡುವುದಕ್ಕೆ ಸಾಧ್ಯವಿಲ್ಲ. ಹಾಗಾಗಿ ಅವರಿಗೆ ಕಾನೂನು ಹಾಗೂ ಸಂಸದೀಯ ಮಂಡಳಿ. ಅರವಿಂದ್ ಕೆಪಿಗೆ ಐದರೂ ಖಾತೆ ನೀಡಿ ಉಪಮುಖ್ಯಮಂತ್ರಿ ಮಾಡುತ್ತೇನೆ. ಯಾವಾಗ ಯಾವ ಖಾತೆಗೆ ಬೇಕಾದರೂ ಜಂಪ್ ಆಗಬಹುದು.

    ಕೊನೆಯದಾಗಿ ನನಗೆ ಮಹಿಳಾ ಮತ್ತು ಮಕ್ಕಳಾ ಇಲಾಖೆಯನ್ನು ಕೊಟ್ಟುಕೊಳ್ಳುತ್ತೇನೆ. ನಾನು ಅದರಲ್ಲಿ ಬಹಳ ಎಕ್ಸ್‍ಪರ್ಟ್ ಆಗಿದ್ದೇನೆ. ಮುಖ್ಯಮಂತ್ರಿ ಸ್ಥಾನವನ್ನು ಬಿಗ್‍ಬಾಸ್‍ಗೆ ಬಿಟ್ಟಿದ್ದೇನೆ. ಅವರೊಟ್ಟಿಗೆ ನನಗೆ ಫೈಟ್ ಮಾಡಲು ಆಗುವುದಿಲ್ಲ ಎಂದಿದ್ದಾರೆ.

  • ಯಾವುದೇ ಬೇಸರ ಮಾಡಬೇಡ, ಸಂಜೆ ಸುದೀರ್ಘವಾಗಿ ಮಾತನಾಡೋಣ – ರಾಮುಲುಗೆ ಸಿಎಂ ಅಭಯ

    ಯಾವುದೇ ಬೇಸರ ಮಾಡಬೇಡ, ಸಂಜೆ ಸುದೀರ್ಘವಾಗಿ ಮಾತನಾಡೋಣ – ರಾಮುಲುಗೆ ಸಿಎಂ ಅಭಯ

    ಬೆಂಗಳೂರು: ಸಚಿವ ಶ್ರೀರಾಮುಲು ಅವರು ಸಿಎಂ ಯಡಿಯೂರಪ್ಪನವರ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

    ಖಾತೆ ಬದಲಾವಣೆಯಾದ ಬಳಿಕ ಶ್ರೀರಾಮುಲು ಅವರು ಯಡಿಯೂರಪ್ಪನವರನ್ನು ಭೇಟಿ ಮಾಡಲು ಮಧ್ಯಾಹ್ನ 1:10 ವೇಳೆಗೆ ಆಗಮಿಸಿದ್ದರು. ಸುಮಾರು 1 ಗಂಟೆ ಕಾದರೂ ಸಿಎಂ ಭೇಟಿಗೆ ಅವಕಾಶ ನೀಡಿರಲಿಲ್ಲ.

    ಸುಮಾರು 1 ಗಂಟೆ ಕಾದ ಬಳಿಕ ಯಡಿಯೂರಪ್ಪ ಶ್ರೀರಾಮುಲು ಅವರಿಗೆ ಅವಕಾಶ ನೀಡಿದರು. 5 ನಿಮಿಷ ಸಿಎಂ ಜೊತೆ ಮಾತನಾಡಿದ ಬಳಿಕ ಶ್ರೀರಾಮಲು ಕಾವೇರಿ ನಿವಾಸದಿಂದ ತೆರಳಿದರು. ಇದನ್ನೂ ಓದಿ:ಡಿಸಿಎಂ ನಿರೀಕ್ಷೆಯಲ್ಲಿದ್ದ ಶ್ರೀರಾಮುಲುಗೆ ಒಂದೇ ದಿನ ಡಬಲ್‌ ಶಾಕ್‌

    ಭೇಟಿ ವೇಳೆ, ನನ್ನ ಗಮನಕ್ಕೆ ತರದೇ ಆರೋಗ್ಯ ಖಾತೆ ಬದಲಾವಣೆ ಮಾಡಿದ್ದು ಸರಿಯೇ ಎಂದು ಬಿಎಸ್‍ವೈಯನ್ನು ಶ್ರೀರಾಮುಲು ಪ್ರಶ್ನಿಸಿದ್ದಾರೆ. ಇದಕ್ಕೆ ಸಿಎಂ, ಕೊರೊನಾ ಸಮಯದಲ್ಲಿ ಆರೋಗ್ಯ ಇಲಾಖೆಯಲ್ಲಿ ಯಾವುದೇ ಸಮಸ್ಯೆ ಆಗುವುದು ಬೇಡ. ಸಮಾಜ ಕಲ್ಯಾಣ ಇಲಾಖೆಯನ್ನು ನೀನು ಮೊದಲೇ ಕೇಳಿದ್ದಿ. ಹೀಗಾಗಿ ಸಮಾಜ ಕಲ್ಯಾಣ ಕೊಟ್ಟಿದ್ದೇನೆ. ಯಾವುದೇ ಕಾರಣಕ್ಕೆ ಬೇಸರ ಮಾಡಬೇಡ. ಸಂಜೆ ಬಾ ಸುದೀರ್ಘವಾಗಿ ಮಾತನಾಡೋಣ ಎಂದು ಸಿಎಂ ಹೇಳಿ ಕಳುಹಿಸಿದರು.

    ಸಿಎಂ ನಿವಾಸದಿಂದ ಹೊರಟ ಶ್ರೀರಾಮಲು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದರು. ಸರ್ಕಾರಿ ನಿವಾಸಕ್ಕೆ ಬಾರದ ಶ್ರೀರಾಮುಲು ದೇವನಹಳ್ಳಿ ಬಳಿ ಇರುವ ನಿವಾಸಕ್ಕೆ ಹೋಗಿದ್ದಾರೆ. ಸಿಎಂ ಭೇಟಿಯ ವೇಳೆ ಸರ್ಕಾರಿ ವಾಹನ ಬಿಟ್ಟು ಖಾಸಗಿ ವಾಹನದಲ್ಲಿ ಆಗಮಿಸಿದ್ದು ಅಚ್ಚರಿಗೆ ಕಾರಣವಾಗಿದೆ.