Tag: ಖಾದರ್

  • RSS ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಖಾದರ್‌ಗೆ ಎಚ್ಚರಿಕೆ

    RSS ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಖಾದರ್‌ಗೆ ಎಚ್ಚರಿಕೆ

    ತಿರುವನಂತರಪುರಂ: ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಆರ್‌ಎಸ್‍ಎಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿ ಭಾಷಣ ಮಾಡಿದ್ದ ಐಯುಎಂಎಲ್ ಹಿರಿಯ ಮುಖಂಡರಾದ ಮಾಜಿ ಶಾಸಕ ಕೆ.ಎನ್.ಎ. ಖಾದರ್ ಅವರಿಗೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಎಚ್ಚರಿಕೆ ನೀಡಿದೆ.

    ದಾರ್ಶನಿಕ ಮತ್ತು ಖ್ಯಾತ ವಾಗ್ಮಿಯಾದ ಖಾದರ್ ಅವರನ್ನು ಕೆಲವು ದಿನಗಳ ಹಿಂದೆ ಕೋಝಿಕ್ಕೋಡ್‍ನ ಕೇಸರಿ ಭವನದಲ್ಲಿ ಸ್ನೇಹಬೋಧಿ ಸಾಂಸ್ಕೃತಿಕ ಸಭೆಯಲ್ಲಿ ಗೌರವಿಸಲಾಗಿತ್ತು. ಇದು ಆರ್‌ಎಸ್‍ಎಸ್ ಪ್ರಾಯೋಜಿತ ಕಾರ್ಯಕ್ರಮವಾಗಿ. ಅಲ್ಲಿ ಮಾತನಾಡಿದ್ದ ಖಾದರ್ ಅವರು, ಗುರುವಾಯೂರು ಶ್ರೀಕೃಷ್ಣ ದೇವಸ್ಥಾನವನ್ನು ಪ್ರವೇಶಿಸುವ ಬಯಕೆಯನ್ನು ವ್ಯಕ್ತಪಡಿಸಿದ್ದರು.

    ಉತ್ತರ ಭಾರತದ ಹಲವು ದೇವಾಲಯಗಳಿಗೆ ಭೇಟಿ ನೀಡಿದ್ದೇನೆ. ಆದರೆ ಗುರುವಾಯೂರ್‌ನಲ್ಲಿರುವ ಶ್ರೀಕೃಷ್ಣ ದೇವಾಲಯವನ್ನು ಪ್ರವೇಶಿಸಲು ಸಾಧ್ಯವಾಗಲಿಲ್ಲ ಎಂದು ಅವರು ಆರ್‌ಎಸ್‍ಎಸ್ ಕಾರ್ಯಕ್ರಮದಲ್ಲಿ ತಿಳಿಸಿದ್ದರು. ಇದನ್ನೂ ಓದಿ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಸೀರೆ, ಚಪ್ಪಲಿ ಹರಾಜು?

    ಹೀಗಾಗಿ ಪಕ್ಷದ ನಾಯಕತ್ವವು ಖಾದರ್ ಅವರಿಂದ ವಿವರಣೆ ಕೇಳಿತ್ತು. ಖಾದರ್ ನೀಡಿದ ವಿವರಣೆಯ ಬಗ್ಗೆ ಚರ್ಚಿಸಿದ ಪಕ್ಷದ ಹೈಪವರ್ ಕಮಿಟಿಯು ಪಕ್ಷದ ಸಂಪ್ರದಾಯವನ್ನು ಕಡೆಗಣಿಸಿರುವ ಬಗ್ಗೆ ಎಚ್ಚರಿಕೆ ನೀಡಲು ನಿರ್ಧರಿಸಿದೆ ಎಂದು ಲೀಗ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಕಬ್ಬಿನ ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಶಾಲಾ ಬಾಲಕಿ ಸಾವು

    ಖಾದರ್ ಅವರು ಹೆಚ್ಚು ಜಾಗರೂಕರಾಗಿರಬೇಕು. ಅವರು ಮಾಡುವ ಭಾಷಣಗಳು ಮತ್ತು ಸಾರ್ವಜನಿಕ ಹೇಳಿಕೆಗಳು ಪಕ್ಷದ ನೀತಿಗಳು ಮತ್ತು ಆಚರಣೆಗಳಿಗೆ ಅನುಗುಣವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದು ಪಕ್ಷವು ಅವರಿಗೆ ಎಚ್ಚರಿಕೆ ನೀಡಿದೆ. ವೆಂಗಾರ ಮಾಜಿ ಶಾಸಕ ಖಾದರ್ 2021ರ ವಿಧಾನಸಭೆ ಚುನಾವಣೆಯಲ್ಲಿ ಗುರುವಾಯೂರಿನಿಂದ ಸೋತಿದ್ದರು.

    Live Tv

  • ಶಿರೂರು ಶ್ರೀಗಳ ಜೊತೆ ಆತ್ಮೀಯ ಸಂಪರ್ಕವಿತ್ತು- ಯು.ಟಿ.ಖಾದರ್

    ಶಿರೂರು ಶ್ರೀಗಳ ಜೊತೆ ಆತ್ಮೀಯ ಸಂಪರ್ಕವಿತ್ತು- ಯು.ಟಿ.ಖಾದರ್

    ಉಡುಪಿ: ಶಿರೂರು ಶ್ರೀಗಳ ಜೊತೆ ನನಗೆ ಆತ್ಮೀಯ ಸಂಪರ್ಕವಿತ್ತು. ಗುರುವಾರ ಬೆಂಗಳೂರಲ್ಲಿ ಇದ್ದ ಕಾರಣ ಅಂತ್ಯಕ್ರಿಯೆಗೆ ಬರಲು ಸಾಧ್ಯವಾಗಲಿಲ್ಲ. ಹಾಗಾಗಿ ಇಂದು ಶ್ರೀಗಳ ಸಮಾಧಿಗೆ ತೆರಳಿ ಆರ್ಶೀವಾದ ಪಡೆದಿದ್ದೇನೆ ಎಂದು ಸಚಿವ ಯು.ಟಿ.ಖಾದರ್ ತಿಳಿಸಿದರು.

    ಶ್ರೀಗಳ ಸಾವಿನ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ. ಈ ಬಗ್ಗೆ ಕುರಿತು ಯಾವುದೇ ವಿಚಾರಗಳು ನನ್ನ ಗಮನಕ್ಕೆ ಬಂದಿಲ್ಲ. ಇದರ ಬಗ್ಗೆ ಮಾತನಾಡಲು ನನಗೆ ಇಷ್ಟವಿಲ್ಲ. ಈ ಹಿಂದೆ ಶ್ರೀಗಳನ್ನು ಭೇಟಿ ಮಾಡಿದ್ದೆ, ಅವರೊಂದಿಗೆ ಆತ್ಮೀಯತೆಯಿಂದ ಇದ್ದೇವು. ಹಾಗಾಗಿ ಆ ಆತ್ಮೀಯತೆಗಾಗಿ ಬಂದ್ದಿದ್ದೇನೆ ಹೊರತು ಒಬ್ಬ ಸರ್ಕಾರಿ ಅಧಿಕಾರಿಯಾಗಿ ಬಂದಿಲ್ಲ ಎಂದರು.

    ಶ್ರೀಗಳ ಸಾವಿನ ಬಗ್ಗೆ ಕುರಿತು ತನಿಖೆ ನಡೆಸುವುದು ಜಿಲ್ಲಾಡಳಿತ ಮತ್ತು ಪೊಲೀಸ್ ಸಿಬ್ಬಂದಿ ವರ್ಗಕ್ಕೆ ಸಂಬಂಧಿಸಿದ್ದು, ನಾನು ಇದರಲ್ಲಿ ಭಾಗಿಯಾಗುವುದಿಲ್ಲ. ನಾನು ನನ್ನ ಬಗ್ಗೆ ಮಾತ್ರ ಮಾತನಾಡುತ್ತೇನೆ ಬೇರೆಯವರ ಬಗ್ಗೆ ಮಾತನಾಡುವುದಿಲ್ಲ ಎಂದರು.

    ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಮತ್ತು ಅಭಯ ಚಂದ್ರ ಜೈನ್ ಆಗಮಿಸಿ ಶ್ರೀಗಳ ಸಮಾಧಿಗೆ ನಮನ ಸಲ್ಲಿಸಿದರು.

  • ರಾಜ್ಯ ಕಾಂಗ್ರೆಸ್ಸಿನಲ್ಲಿ ನಿಲ್ಲದ ಮುಸ್ಲಿಮ್ ನಾಯಕರ ಕಿತ್ತಾಟ

    ರಾಜ್ಯ ಕಾಂಗ್ರೆಸ್ಸಿನಲ್ಲಿ ನಿಲ್ಲದ ಮುಸ್ಲಿಮ್ ನಾಯಕರ ಕಿತ್ತಾಟ

    ಬೆಂಗಳೂರು: ಕಾಂಗ್ರೆಸ್ ನಲ್ಲಿ ಮುಸ್ಲಿಮ್ ನಾಯಕರ ಕಿತ್ತಾಟ ನಿಲ್ಲುವ ಸಾಧ್ಯತೆಗಳು ಕಂಡು ಬರುತ್ತಿಲ್ಲ.

    ಸಚಿವ ಜಮೀರ್ ವಿರುದ್ಧ ರೋಷನ್ ಬೇಗ್, ತನ್ವೀರ್ ಸೇಠ್ ಅಸಮಾಧಾನ ಹೊರ ಹಾಕುತ್ತಿದ್ದು, ಹಜ್ ಖಾತೆ ಜಮೀರ್ ಬಳಿ ಇರೋದು ಬೇಡವೇ ಬೇಡ ಎಂದು ರೋಷನ್ ಬೇಗ್ ಪಟ್ಟು ಹಿಡಿದಿದ್ದಾರೆ. ಅಷ್ಟೇ ಅಲ್ಲದೇ ಹಜ್ ಖಾತೆಯನ್ನು ಖಾದರ್ ಗೆ ನೀಡುವಂತೆ ರೋಷನ್ ಬೇಗ್ ಹೊಸ ರಾಗ ತೆಗೆದಿದ್ದಾರೆ ಎಂದು ತಿಳಿದು ಬಂದಿದೆ.

    ಹಜ್ ಖಾತೆ ಅನ್ನುವುದು ಯಾತ್ರಿಕರನ್ನು ಕಳುಹಿಸಿ ಕೊಡುವುದು. ಕೆಲವು ಮುಸ್ಲಿಮ್ ಸಮುದಾಯದ ದುರ್ಬಲ ವರ್ಗದವರಿಗೆ ನೆರವಾಗುತ್ತದೆ. ಈ ಖಾತೆಯ ಮೂಲಕ ಜಮೀರ್ ಸಮುದಾಯ ಲಾಭ ಪಡೆದುಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಜಮೀರ್ ಬಳಿ ಈ ಖಾತೆ ಇರುವುದು ಬೇಡ ಎಂದು ರೋಷನ್ ಬೇಗ್ ಪಟ್ಟು ಹಿಡಿದ್ದಾರೆ ಎನ್ನಲಾಗಿದೆ.

    ಸೋಮವಾರ ರಾತ್ರಿ ಸಚಿವ ಯುಟಿ ಖಾದರ್ ಜೊತೆ ರೋಷನ್ ಬೇಗ್ ಮಾತನಾಡಿದ್ದಾರೆ. ಅಷ್ಟೇ ಅಲ್ಲದೇ ಜಿ.ಪರಮೇಶ್ವರ್ ಮತ್ತು ವೇಣುಗೋಪಾಲ್ ಬಳಿ ಈ ಬಗ್ಗೆ ಚರ್ಚೆ ನಡೆಸಿದ್ದು, ಈ ಖಾತೆಯನ್ನು ಜಮೀರ್ ಬಳಿ ಇರುವುದು ಬೇಡ. ಯಾರಿಗಾದರೂ ಕೊಡಿ ಅಥವಾ ಖಾದರ್ ಗೆ ಕೊಡಿ ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.

    ಒಟ್ಟಿನಲ್ಲಿ ಜಮೀರ್ ವಿರುದ್ಧದ ರೋಷನ್ ಬೇಗ್ ರಣತಂತ್ರ ಯಶಸ್ವಿಯಾಗುತ್ತಾ? ಈ ಪ್ರತಿಷ್ಠೆಯ ಫೈಟ್‍ ನಲ್ಲಿ ಜಮೀರ್ ಗೆಲ್ತಾರಾ? ರೋಷನ್ ಬೇಗ್ ಗೆಲ್ತಾರಾ.? ಅನ್ನೋದನ್ನು ಕಾದು ನೋಡಬೇಕಿದೆ.

    https://www.youtube.com/watch?v=1XyltNonwdU

  • ಬಿಜೆಪಿ ಕಾರ್ಯಕರ್ತನ ಸಾವಿನ ಮಧ್ಯೆ ರಾಜಕೀಯ- ಸಂತೋಷ್ ಮನೆ ಸಮೀಪದಲ್ಲೇ ಸಿಎಂ ಬಿರಿಯಾನಿ ಪಾರ್ಟಿ

    ಬಿಜೆಪಿ ಕಾರ್ಯಕರ್ತನ ಸಾವಿನ ಮಧ್ಯೆ ರಾಜಕೀಯ- ಸಂತೋಷ್ ಮನೆ ಸಮೀಪದಲ್ಲೇ ಸಿಎಂ ಬಿರಿಯಾನಿ ಪಾರ್ಟಿ

    ಬೆಂಗಳೂರು: ನಗರದಲ್ಲಿ ಬಿಜೆಪಿ ಕಾರ್ಯಕರ್ತ ನಡುರಸ್ತೆಯಲ್ಲೇ ಕೊಲೆಯಾಗಿದ್ರೆ, ಗುರುವಾರ ತಡರಾತ್ರಿ ಅದೇ ಏರಿಯಾದಲ್ಲಿ ಸಿಎಂ ಸಿದ್ದರಾಮಯ್ಯ ಫುಲ್ ರಜಾಕ್ ಸಾಹೇಬರ ಬಿರಿಯಾನಿ ತಿಂದು ಪಾರ್ಟಿಯಲ್ಲಿ ಮುಳುಗಿದ್ರು.

    ಹೌದು, ನಿನ್ನೆ ತಡರಾತ್ರಿ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಯುಟಿ ಖಾದರ್ ಮನೆಯಲ್ಲಿ ಭೋಜನ ಕೂಟ ಆಯೋಜಿಸಲಾಗಿತ್ತು. ಈ ಭೋಜನ ಕೂಟದಲ್ಲಿ ಸಿಎಂ ಸಿದ್ದರಾಮಯ್ಯ, ಶಾಸಜ ಜಮೀರ್ ಅಹಮ್ಮದ್ ಹಾಗೂ ಮುಸ್ಲಿಂ ಮುಖಂಡರು ಪಾಲ್ಗೊಂಡಿದ್ದರು. ಶಾಸಕ ಜಮೀರ್ ಅಹಮ್ಮದ್ ಇತ್ತೀಚೆಗೆ ಕಾಂಗ್ರೆಸ್ ಸೇರಲು ಸಕಲ ತಯಾರಿಗಳನ್ನ ಮಾಡ್ಕೊಂಡಿರೋ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಕೆಲ ನಾಯಕರಿಗೆ ಅಸಮಾಧಾನ ಮೂಡಿತ್ತು.

    ಅದೇ ರೀತಿ ಈ ಹಿಂದೆ ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲ್ಪಟ್ಟಿದ್ದ ನಾಯಕರುಗಳು ಜಮೀರ್ ರ ಪಕ್ಷಾಂತರಕ್ಕೆ ತೀವೃ ವಿರೋಧ ವ್ಯಕ್ತಪಡಿಸಿದ್ದರು. ಆದ್ರೆ, ಅದ್ಯಾವುದಕ್ಕೂ ಡೋಂಟ್ ಕ್ಯಾರ್ ಅಂದಿರೋ ಸಿಎಂ ಬಿಜೆಪಿ ಕಾರ್ಯಕರ್ತನ ಸಾವಿನ ಬೆನ್ನಲ್ಲೇ ಓಟ್ ಬ್ಯಾಂಕ್ ರಾಜಕೀಯಕ್ಕಾಗಿ ಇದೀಗ ಭೋಜನ ಕೂಟಕ್ಕೆ ಸೈ ಎಂದಿದ್ದಾರೆ. ಇದೆಲ್ಲವನ್ನ ನೋಡಿದ್ರೆ ಮುಂದಿನ ದಿನಗಳಲ್ಲಿ ನೂರಕ್ಕೆ ನೂರರಷ್ಟು ಜಮೀರ್ ಕಾಂಗ್ರೆಸ್ ಪ್ರವೇಶ ಶತಸಿದ್ಧ ಎನ್ನುವುದರಲ್ಲಿ ಎರಡು ಮಾತಿಲ್ಲ.

    ಜೆ.ಸಿ. ನಗರದ ನಿವಾಸಿಯಾಗಿರೋ 28 ವರ್ಷದ ಸಂತೋಷ್ ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದು, ಬಿಜೆಪಿ ಪರ ಓಡಾಡಿಕೊಂಡಿದ್ದರು. ಬುಧವಾರ ರಾತ್ರಿ ಸುಮಾರು 7:30 ರಲ್ಲಿ ಹೊತ್ತಿಗೆ ಸಂತೋಷ್ ತಮ್ಮ ಮನೆ ಬಳಿ ಇದ್ದ ಬೇಕರಿಯಲ್ಲಿ ಟೀ ಕುಡಿಯುತ್ತಾ ನಿಂತಿದ್ದರು. ಈ ವೇಳೆ ಅದೇ ಏರಿಯಾದ ವಾಸೀಮ್, ಉಮರ್, ಫಿಲಿಪ್ಸ್ ಮತ್ತು ಇರ್ಫಾನ್ ಎಂಬವರು ಕೂಡ ಅಲ್ಲೇ ಟೀ ಕುಡಿಯುತ್ತಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಜಗಳ ನಡೆದು ವಾಸೀಮ್ ಎಂಬಾತ ತನ್ನ ಬಳಿ ಇದ್ದ ಚಾಕುವಿನಿಂದ ಸಂತೋಷ್ ತೊಡೆಗೆ ಇರಿದಿದ್ದಾನೆ. ಪರಿಣಾಮ ತೀವ್ರ ರಕ್ತ ಸ್ರಾವದಿಂದ ಸಂತೋಷ್ ಕೊನೆಯುಸಿರೆಳೆದಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಸದ್ಯ ಪ್ರಕರಣ ಸಂಬಂಧ ವಸೀಂ, ಫಿಲಿಪ್ಸ್ ಎಂಬ ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಘಟನೆ ನಡೆದ ಬಗ್ಗೆ ಮಾಹಿತಿ ಸಿಕ್ಕಿದ ತಕ್ಷಣ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಠಾಣೆಯೆದುರು ಪ್ರತಿಭಟನೆ ಸಹ ನಡೆಸಿದ್ದರು. ಸಂತೋಷ್ ಹತ್ಯೆ ರಾಜಕೀಯ ಪ್ರೇರಿತ ಕೊಲೆ ಅಂತ ಆರೋಪಿಸಿದ್ದು, ವಸೀಂ ಸ್ಥಳೀಯ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತರ ಮಗ, ಅವನಿಗೂ ಬಿಜೆಪಿಗೂ ಆಗುತ್ತಿರಲಿಲ್ಲ. ಹಾಗಾಗಿ ಬಿಜೆಪಿಯ ಪರ ಓಡಾಡುತ್ತಿದ್ದ ಸಂತೋಷ್‍ನನ್ನ ಕೊಲೆಗೈಯ್ಯಲಾಗಿದೆ ಎಂದು ಆರೋಪಿಸಿದ್ದರು.

  • `ಟಾರ್ಗೆಟ್’ ಇಲಿಯಾಸ್ ಕೊಲೆ ಬಗ್ಗೆ ಸಚಿವ ಖಾದರ್ ಹೀಗಂದ್ರು

    `ಟಾರ್ಗೆಟ್’ ಇಲಿಯಾಸ್ ಕೊಲೆ ಬಗ್ಗೆ ಸಚಿವ ಖಾದರ್ ಹೀಗಂದ್ರು

    ಧಾರವಾಡ: ಯಾವುದೇ ಹತ್ಯೆಯಾದಾಗ ನಾವು ಆ ವ್ಯಕ್ತಿಯ ಹಿನ್ನೆಲೆಗಳನ್ನು ಅರಿಯಬೇಕು. ಇಲಿಯಾಸ್ ಕಾಂಗ್ರೆಸ್ ಕಾರ್ಯಕರ್ತ ಆಗಿದ್ದ. ನಮಗೆ ಎಲ್ಲರೂ ಕೂಡ ಸಹಚರರೇ. ಆದ್ರೆ ಯಾರೇ ತಪ್ಪು ಮಾಡಿದ್ರು ನಾವು ಸಹಿಸೊಲ್ಲ ಅಂತ ಸಚಿವ ಯುಟಿ ಖಾದರ್ ಹೇಳಿದ್ದಾರೆ.

    ಮಂಗಳೂರಿನಲ್ಲಿ ಟಾರ್ಗೆಟ್ ಗ್ರೂಪ್ ರೂವಾರಿ, ಕಾಂಗ್ರೆಸ್ ಕಾರ್ಯಕರ್ತ ಇಲಿಯಾಸ್ ಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಾರ್ಗೆಟ್ ಗ್ರೂಪ್ ಏನು ಮಾಡ್ತಾ ಇತ್ತು ಅನ್ನೋದರ ಬಗ್ಗೆ ತನಿಖೆಯಾಗಬೇಕಿದೆ. ಯಾರೆಲ್ಲ ಕೊಲೆಯಲ್ಲಿ ಭಾಗಿಯಾಗ್ತಾರೆ? ಅಶಾಂತಿ ಸೃಷ್ಟಿಸ್ತಾರೆ? ಅವೆಲ್ಲ ಸಂಘಟನೆಗಳನ್ನು ಬ್ಯಾನ್ ಮಾಡುತ್ತೇವೆ. ಅಂತಹ ಸಂಘಟನೆಗಳು ಕೇಂದ್ರ ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಾ ಇರುತ್ತವೆ. ಹೀಗಾಗಿ ಕೇಂದ್ರ ಸರ್ಕಾರವೇ ಅಂತಹ ಸಂಘಟನೆಗಳನ್ನು ಬ್ಯಾನ್ ಮಾಡಬೇಕು ಅಂತ ಹೇಳಿದ್ರು. ಇದನ್ನೂ ಓದಿ: ಸಚಿವ ಖಾದರ್ ಜೊತೆ ಕಾಣಿಸಿಕೊಂಡಿದ್ದ ಇಲಿಯಾಸ್ ನ ಬರ್ಬರ ಹತ್ಯೆ

    ಕೆಲ ಸಂಘಟನೆಗಳನ್ನು ಬ್ಯಾನ್ ಮಾಡಿ ಎಂದು ಕೇಳುವ ಬಿಜೆಪಿಯವರು ತಮ್ಮದೇ ಕೇಂದ್ರ ಸರ್ಕಾರದ ಮೂಲಕ ಬ್ಯಾನ್ ಮಾಡಿಸಲಿ. ರಾಜ್ಯ ಸರ್ಕಾರ ನಮ್ಮ ರಾಜ್ಯದಲ್ಲಿ ಬ್ಯಾನ್ ಮಾಡಿದ್ರೆ ಅವರು ಬೇರೆ ಬೇರೆ ರಾಜ್ಯದಲ್ಲಿ ಕುಳಿತು ಕಾರ್ಯನಿರ್ವಹಿಸಬಹುದು. ಹಾಗಾಗಿ ಅಂತಹ ಸಂಘಟನೆಗಳನ್ನು ಕೇಂದ್ರ ಸರ್ಕಾರವೇ ಗುರುತಿಸಬೇಕು. ಮಂಗಳೂರಿನಲ್ಲಿ ಕೆಲ ಹತ್ಯೆಗಳಾದಾಗ ಅದನ್ನು ಇನ್ನಷ್ಟು ಗೊಂದಲ ಮಾಡಿ ದಂಗೆ ಎಬ್ಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಪೊಲೀಸರಿಗೆ ತನಿಖೆ ಮಾಡಲು ಬಿಡದಂತೆ ಗಲಾಟೆಗಳನ್ನು ಸೃಷ್ಟಿಸುತ್ತಾ ಇದ್ದಾರೆ ಅಂದ್ರು. ಇದನ್ನೂ ಓದಿ: ಯುಟಿ ಖಾದರ್ ಜೊತೆ ದೀಪಕ್ ಹತ್ಯೆಯ ಆರೋಪಿ ಕುಳಿತಿರುವ ಫೋಟೋ ವೈರಲ್

    ಮಂಗಳೂರಿನಲ್ಲಿ ಕೆಲವರು ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ್ರೂ ಮಂಗಳೂರು ಜನ ಸಹಬಾಳ್ವೆ ಬಿಡಲಿಲ್ಲ. ದೀಪಕ್ ಹತ್ಯೆ ಮಾಡಿದವರು ಸುಪಾರಿ ಕಿಲ್ಲರ್ ಅಂತ ಮೇಲ್ನೋಟಕ್ಕೆ ತಿಳಿದುಬಂದಿದೆ. ಈ ಕುರಿತು ಪೊಲೀಸರೇ ಹೆಚ್ಚಿನ ತನಿಖೆ ಮಾಡಬೇಕು. ಬಿಜೆಪಿಯವರು ಒಬ್ಬೊಬ್ಬರೂ ಒಂದೊಂದು ಕಡೆ ಬೆಂಕಿ ಹಾಕುತ್ತೀವಿ ಅಂತ ಹೇಳಿಕೊಳ್ತಾ ಹೋಗುತ್ತಿದ್ದಾರೆ. ಒಬ್ಬರು ಮೈಸೂರು, ಇನ್ನೊಬ್ಬರು ಮಂಗಳೂರು, ಮತ್ತೊಬ್ಬರು ಇನ್ನೆಲ್ಲೋ ಬೆಂಕಿ ಹಾಕುತ್ತೇವೆ ಅಂದ್ರೆ ರಾಜ್ಯಾಧ್ಯಕ್ಷರು ಇಡೀ ರಾಜ್ಯಕ್ಕೆ ಬೆಂಕಿ ಹಾಕ್ತೇನೆ ಅಂತ ಹೊರಟಿದ್ದಾರೆ ಅಂದ್ರು.

  • ದಕ್ಷಿಣ ಕನ್ನಡ ಜಿಲ್ಲೆಯದ್ದು ಒಬ್ಬರಿಗೊಬ್ಬರು ಜೀವ ಕೊಡೋ ಸಂಸ್ಕೃತಿ: ಖಾದರ್

    ದಕ್ಷಿಣ ಕನ್ನಡ ಜಿಲ್ಲೆಯದ್ದು ಒಬ್ಬರಿಗೊಬ್ಬರು ಜೀವ ಕೊಡೋ ಸಂಸ್ಕೃತಿ: ಖಾದರ್

    ರಾಯಚೂರು: ದಕ್ಷಿಣ ಕನ್ನಡದ ಜಿಲ್ಲೆಯ ಸಂಸ್ಕೃತಿ ನಿಜವಾದ ಸಂಸ್ಕೃತಿ. ಕೊಲೆಮಾಡುವ ಸಂಸ್ಕೃತಿ ನಮ್ಮದಲ್ಲ, ಒಬ್ಬರಿಗೊಬ್ಬರು ಜೀವ ಕೊಡುವ ಸಂಸ್ಕೃತಿ ನಮ್ಮದು ಅಂತ ಸಚಿವ ಯುಟಿ ಖಾದರ್ ಹೇಳಿದ್ದಾರೆ.

    ರಾಯಚೂರಿನ ಸಿಂಧನೂರಿನಲ್ಲಿ ಮಾತನಾಡಿದ ಸಚಿವ ಖಾದರ್ ಕೇವಲ ಶೇ.10 ರಷ್ಟು ಜನ ಮಾತ್ರ ಕೋಮುವಾದ ಸಂಬಂಧ ಹಲ್ಲೆ ಮಾಡುತ್ತಿದ್ದಾರೆ. ಅವರು ಯಾರೇ ಇದ್ದರೂ ಅವರ ವಿರುದ್ದ ಕಠಿಣ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಶರತ್ ಕೊಲೆ ಆರೋಪಿಗಳನ್ನ ಶೀಘ್ರದಲ್ಲಿ ಪತ್ತೆ ಹಚ್ಚಲು ಪೊಲೀಸರಿಗೆ ಸೂಚಿಸಿದ್ದೇವೆ ಅಂತ ತಿಳಿಸಿದರು.

    ಗುಜರಾತ್ ನ ಶಾಸಕರಿಗೆ ಬೆದರಿಕೆ ಹಾಗೂ ಆಮಿಷ ಒಡ್ಡಿದ್ದರಿಂದ ರಾಜ್ಯದಲ್ಲಿ ರಕ್ಷಣೆ ನೀಡಲಾಗಿತ್ತು. ಸೇಡಿನ ರಾಜಕಾರಣ ಮಾಡಿರುವ ಬಿಜೆಪಿ ಡಿಕೆಶಿ ಮೇಲೆ ಐಟಿ ದಾಳಿ ಮಾಡಿಸಿದೆ ಅಂತ ಆರೋಪಿಸಿದರು.

     

     

     

     

  • ಐಎಎಸ್ ಅಧಿಕಾರಿ ನಿಗೂಢ ಸಾವಿನ ಬಗ್ಗೆ ರಾಜ್ಯದ ಮಂತ್ರಿಗಳು ಪ್ರತಿಕ್ರಿಯಿಸಿದ್ದು ಹೀಗೆ

    ಐಎಎಸ್ ಅಧಿಕಾರಿ ನಿಗೂಢ ಸಾವಿನ ಬಗ್ಗೆ ರಾಜ್ಯದ ಮಂತ್ರಿಗಳು ಪ್ರತಿಕ್ರಿಯಿಸಿದ್ದು ಹೀಗೆ

    ಬೆಂಗಳೂರು: ಕರ್ನಾಟಕದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ನಿಗೂಢ ಸಾವಿನ ಕುರಿತು ಹಲವು ಅನುಮಾನಗಳು ಎದ್ದಿದ್ದು, ಕಾಂಗ್ರೆಸ್ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವ ಉದ್ದೇಶದಿಂದ ಅವರನ್ನು ಕೊಲೆ ಮಾಡಲಾಗಿದೆ ಎಂಬ ಆರೋಪವೊಂದು ಕೇಳಿಬಂದಿದೆ.

    ಕಾಂಗ್ರೆಸ್ ಹಗರಣದ ಆರೋಪ ವ್ಯಕ್ತವಾಗುತ್ತಿದ್ದಂತೆಯೇ ಇತ್ತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ. ಸುಮಾರು 40 ನಿಮಿಷ ಇಬ್ಬರು ಪ್ರತ್ಯೇಕ ಚರ್ಚೆ ನಡೆಸಿ, ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಿಎಂಗೆ ಪರಮೇಶ್ವರ್ ನೀಡಿದ್ದಾರೆ. ಸಿಬಿಐ ತನಿಖೆಗೆ ಒತ್ತಾಯಗಳು ಕೇಳಿ ಬರುತ್ತಿರುವುದರ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

    ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿರುವುದರಿಂದ ಯಾವ ರೀತಿಯ ತನಿಖೆ ನಡೆಸಿದ್ರೆ ಒಳಿತು ಅನ್ನುವ ಬಗ್ಗೆ ಚರ್ಚೆ ನಡೆದಿದೆ. ಅಲ್ಲದೇ ವಿಪಕ್ಷಗಳ ಆರೋಪಕ್ಕೆ ತಿರುಗುಬಾಣ ರೂಪಿಸುವ ಬಗ್ಗೆಯೂ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಬೆಳಗ್ಗೆ ಮಾತುಕತೆ ನಡೆಸಿದ್ದಾರೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕರಣ ಏನು ಅಂತಾ ಗೊತ್ತಿಲ್ಲ. ಆದ್ರೆ ಮರಣೋತ್ತರ ಪರೀಕ್ಷೆಯಲ್ಲಿ ತಿವಾರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಅಂತಾ ವರದಿ ಬಂದಿದೆ. ನಾವು ಯಾವುದೇ ತನಿಖೆಗೆ ಸಹಕಾರ ಕೊಡಲು ಸಿದ್ಧ. ಹೀಗಾಗಿ ಕೇಂದ್ರ ಸರ್ಕಾರ ಯಾವ ತನಿಖೆ ಬೇಕಾದ್ರು ನಡೆಸಲಿ. ಹಗರಣ ಆಗಿದೆ ಅಂತಾ ಯಾರೋ ಹೇಳಿದ್ದನ್ನ ನಂಬೋದಕ್ಕೆ ಆಗಲ್ಲ ಅಂತಾ ಹೇಳಿದರು.

    ಪರಮೇಶ್ವರ್ ಮಾತನಾಡಿ, ಉತ್ತರ ಪ್ರದೇಶ ವಿಧಾನಸಭೆಯಲ್ಲಿ ನಮ್ಮ ಸರ್ಕಾರದ ಮೇಲೆ ಆರೋಪ ಮಾಡಬಾರದಿತ್ತು, ಇದು ಸರಿಯಲ್ಲ. ರಾಜಕೀಯ ಕಾರಣಗಳಿದ್ರೆ ಹೊರಗೆ ಪ್ರಸ್ತಾಪ ಮಾಡಲಿ. ಒಬ್ಬ ಜವಾಬ್ದಾರಿಯುತ ಸಚಿವರಾಗಿ ನಮ್ಮ ಸರ್ಕಾರದ ಮೇಲೆ ಆರೋಪ ಮಾಡಬಾರದಿತ್ತು ಎಂದು ಹೇಳಿದರು.

    ದಲಿತರ ಮನೆಯಲ್ಲಿ ಬಿಜೆಪಿ ಊಟ ಮಾಡ್ತೀವಿ ಅಂತ ಹೇಳಿ ತುಮಕೂರು ಹೋಟೆಲ್ ನಿಂದ ಆಹಾರ ತಂದು ತಿಂದ ಬಿಜೆಪಿ ನಾಯಕರ ಬಣ್ಣ ಬಯಲಾಗಿದೆ. ನೀವೇ ಬಯಲು ಮಾಡಿದ್ದೀರಾ, ಅದ್ಕೆ ಏನು ಕಾಮೆಂಟ್ ಮಾಡೋದು..? ಅಂತಾ ಸುದ್ದಿಗಾರರ ಜೊತೆ ಮಾತನಾಡುತ್ತಾ ಬಿಜೆಪಿ ವಿರುದ್ಧ ಅವರು ವ್ಯಂಗ್ಯವಾಡಿದ್ದಾರೆ.

    ತನಿಖೆಗೆ ಸಹಕಾರ: ತಿವಾರಿ ನಿಗೂಢ ಸಾವಿನ ವಿಚಾರವಾಗಿ ಮಂಗಳೂರಿನಲ್ಲಿ ಆಹಾರ ಇಲಾಖೆ ಸಚಿವ ಯು.ಟಿ.ಖಾದರ್ ಮಾಧ್ಯಮದವರ ಜೊತೆ ಮಾತನಾಡಿ, ತಿವಾರಿ ಕಳೆದ ಜನವರಿ ನಾಲ್ಕರಂದು ಇಲಾಖೆಗೆ ಸೇರಿದ್ದರು. ಒಟ್ಟು 132 ದಿನ ಇಲಾಖೆಯಲ್ಲಿದ್ದರೂ 37 ದಿನಗಳಷ್ಟೆ ಕೆಲಸ ಮಾಡಿದ್ದರು. ಜನವರಿ 18ರಂದು ಪಂಜಾಬ್ ಚುನಾವಣೆಗೆ ಹೋಗಿದ್ದರು. ಮೇ 5ರಂದು ಐಎಎಸ್ ತರಬೇತಿಗೆಂದು ರಜೆಯಲ್ಲಿ ತೆರಳಿದ್ದರು. ಇದೀಗ ಅಧಿಕಾರಿ ಯುಪಿಯಲ್ಲಿ ಸಾವನ್ನಪ್ಪಿದ್ದಾರೆ, ಅಲ್ಲಿ ಏನಾಗಿದೆಯೋ ಗೊತ್ತಿಲ್ಲ. ಇಲಾಖೆಯಲ್ಲಿ ಹಗರಣ ನಡೆದಿರುವ ಬಗ್ಗೆ ಒಮ್ಮೆಯೂ ಹೇಳಿರಲಿಲ್ಲ. ಲಿಖಿತವಾಗಿ ಅಥವಾ ಮೌಖಿಕವಾಗಿಯೂ ಪ್ರಸ್ತಾವ ಮಾಡಿರಲಿಲ್ಲ. ಯುಪಿ ಸರಕಾರದ ತನಿಖೆಗೆ ಸಂಪೂರ್ಣ ಸಹಕಾರ ನೀಡಲಾಗುವುದು. ಪ್ರತಿಪಕ್ಷಗಳು ಈ ವಿಚಾರದಲ್ಲಿ ರಾಜಕೀಯ ನಡೆಸುವುದು ದುರದೃಷ್ಟಕರ. ಸಿಬಿಐ ತನಿಖೆ ನಡೆಸುವುದಿದ್ದರೆ ಯುಪಿ ಸರಕಾರ ಕೊಡಲಿ. ನಮ್ಮ ಸರಕಾರ ಯಾವುದೇ ತನಿಖೆಗೂ ಸಿದ್ಧವಿದೆ ಅಂತಾ ಸ್ಪಷ್ಟಪಡಿಸಿದ್ದಾರೆ.

  • ಕೆಂಪು ದೀಪದ ಕಾರು ಬಿಟ್ಟು ಬೇರೊಂದು ಕಾರಿನಲ್ಲಿ ಖಾದರ್ ಓಡಾಟ!

    ಕೆಂಪು ದೀಪದ ಕಾರು ಬಿಟ್ಟು ಬೇರೊಂದು ಕಾರಿನಲ್ಲಿ ಖಾದರ್ ಓಡಾಟ!

    ಬೆಂಗಳೂರು: ರಾಜ್ಯ ಸರ್ಕಾರದ ಆದೇಶವಿಲ್ಲದೇ ಕೆಂಪು ದೀಪ ತೆಗೆಯಲ್ಲ ಅಂತಾ ಹೇಳಿದ್ದ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಯು ಟಿ ಖಾದರ್ ಇಂದು ಆ ಕೆಂಪು ದೀಪ ಇರೋ ಕಾರು ಬಳಸೋದನ್ನೇ ನಿಲ್ಲಿಸಿದ್ದಾರೆ.

    ಈ ಬಗ್ಗೆ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಬೇಕು ಕೆಂಪು ದೀಪ ಬೇಕು ಅಂತೇನಿಲ್ಲ. ಈ ಬಗ್ಗೆ ಸಾಕಷ್ಟು ಗೊಂದಲಗಳಿವೆ. ಗೊಂದಲಗಳು ಬಗೆಹರಿಯುವ ತನಕ ನಾನು ಸಚಿವರಿಗೆ ಕೊಟ್ಟಿರುವ ಸರ್ಕಾರಿ ಕಾರನ್ನ ಬಳಸುವುದಿಲ್ಲ. ಕೆಂಪು ದೀಪ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಮಾಡುವ ತನಕ ಆ ಕಾರನ್ನ ಬಳಸುವುದಿಲ್ಲ. ನಾವು ಕೂಡ ನೆಮ್ಮದಿಯಿಂದ ಇರಬೇಕಲ್ಲ. ಹಾಗಾಗಿ ಸಚಿವರ ಕಾರನ್ನ ಬಳಸ್ತಿಲ್ಲ ಅಂತಾ ಹೇಳಿದ್ದಾರೆ.

    ಸೋಮವಾರ ಮಂಗಳೂರಿನಲ್ಲಿ ಮಾತನಾಡಿದ ಅವರು, ತಾನೇ ರಾಜ್ಯ ಸರ್ಕಾರದ ಆದೇಶವಿಲ್ಲದೇ ನಾನು ಕೆಂಪು ಗೂಟ ತೆಗೆಯಲ್ಲ. ಅಷ್ಟಕ್ಕೂ ಕೆಂಪು ಗೂಟವನ್ನು ನನ್ನ ತಲೆ ಮೇಲೆ ಇಟ್ಕೊಂಡು ಓಡಾಡ್ತಿಲ್ಲ. ಅದು ನನಗೆ ಸರ್ಕಾರ ಕೊಟ್ಟಿರೋ ಕಾರಿನ ಮೇಲೆ ಇದೆ ಅಂತಾ ಕೇಂದ್ರ ಸರ್ಕಾರದ ವಿರುದ್ಧ ಸಿಡಿಮಿಡಿಗೊಂಡಿದ್ದರು.

    ಇದನ್ನೂ ಓದಿ: ರೆಡ್‍ಲೈಟನ್ನು ನನ್ನ ತಲೆ ಮೇಲೆ ಇಟ್ಕೊಂಡು ಸುತ್ತಾಡ್ತಿಲ್ಲ: ಖಾದರ್

    ಇಂದು ಸಚಿವರಿಗೆ ಅಧಿಕೃತವಾಗಿ ನೀಡಿರುವ ಕಾರಿನಲ್ಲೇ ಓಡಾಡೋದನ್ನೆ ನಿಲ್ಲಿಸಿ ಸರ್ಕಾರ ನೀಡಿದ ಕೆಂಪು ಗೂಟವಿಲ್ಲದ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಓಡಾಟ ಆರಂಭಿಸಿದ್ದಾರೆ.

    ಇದನ್ನೂ ಓದಿ: ಮೋದಿಯವರಿಗೆ ಕೆಂಪು ದೀಪ ನಿಷೇಧ ಮಾಡಲು 16 ವರ್ಷ ಬೇಕಾಯ್ತಾ: ಖರ್ಗೆ ಪ್ರಶ್ನೆ

    ಸೋಮವರ ಪಬ್ಲಿಕ್ ಟಿವಿಯ ಬಿಗ್ ಬುಲೆಟಿನ್ ಕಾರ್ಯಕ್ರಮದಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದ ಖಾದರ್ ಸರ್ಕಾರ ಆದೇಶ ಬಂದಿಲ್ಲ ಎಂದು ತಿಳಿಸಿದ್ದರು. ಅಷ್ಟೇ ಅಲ್ಲದೇ ಆದೇಶದ ಬಂದ ಬಳಿಕ ತೆಗೆಯುತ್ತೇನೆ ಎಂದು ಹೇಳಿದ್ದರು.

    https://www.youtube.com/watch?v=FihlioyUvKg

  • ಮಹದೇವ ಪ್ರಸಾದ್ ಅವ್ರ ಕೆಲ್ಸಕ್ಕೆ ಜನ ನೀಡಿದ ಕಾಣಿಕೆಯಿದು: ಖಾದರ್

    ಮಹದೇವ ಪ್ರಸಾದ್ ಅವ್ರ ಕೆಲ್ಸಕ್ಕೆ ಜನ ನೀಡಿದ ಕಾಣಿಕೆಯಿದು: ಖಾದರ್

    ಗುಂಡ್ಲುಪೇಟೆ: ಪಕ್ಷದ ಪ್ರಾಮಾಣಿಕ ಕೆಲಸದಿಂದ ಜನ ಇಂದು ಕಾಂಗ್ರೆಸ್‍ಗೆ ಮತ ಹಾಕಿ ಗೆಲ್ಲಿಸಿದ್ದಾರೆ ಅಂತಾ ಆಹಾರ ಮತ್ತು ನಾಗರಿಕ ಪೊರೈಕೆ ಸರಬರಾಜು ಸಚಿವ ಯು ಟಿ ಖಾದರ್ ಹೇಳಿದ್ದಾರೆ.

    ಎರಡೂ ಕ್ಷೇತ್ರಗಳ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್, ಜನಪರ ಯೋಜನೆಗಳು, ಸಚಿವ, ಅಧ್ಯಕ್ಷರ ವಿಶೇಷವಾದ ಸಹಕಾರ ಹಾಗೂ ಡಿಕೆ ಶಿವಕುಮಾರ್, ದಿನೇಶ್ ಗುಂಡೂರಾವ್, ಸಚಿವರು, ಶಾಸಕ ಮಿತ್ರರು, ಜಿಲ್ಲಾ ಪಂಚಾಯತ್ ಸದಸ್ಯರ ಪ್ರಾಮಾಣಿಕ ಕೆಲಸದಿಂದ ಇಂದು ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದರು.

    ಸ್ಥಳೀಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರು, ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರು, ಗ್ರಾಮ, ನಗರಸಭೆ ಸದಸ್ಯರು ಎಲ್ಲರೂ ಒಗ್ಗಟಾಗಿ ಒಂದೇ ಕುಟುಂಬದಂತೆ ಕೆಲಸ ಮಾಡಿದರ ಫಲಿತಾಂಶ ಇದಾಗಿದೆ. ಡಾ. ಮಹದೇವ ಪ್ರಸಾದ್ ಅವರು ಮಾಡಿದ ಕೆಲಸಕ್ಕೆ ಈ ಕ್ಷೇತ್ರದ ಜನರು ಕೊಟ್ಟಂತಹ ವಿಶೇಷ ಕಾಣಿಕೆ ಇದಾಗಿದೆ ಅಂತಾ ಹೇಳಿದ್ರು.

    ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಡಾ. ಗೀತಾ ಮಹದೇವಪ್ರಸಾದ್ ಈ ಕ್ಷೇತ್ರದ ಗೌರವನ್ನು ಇನ್ನಷ್ಟು ಹೆಚ್ಚು ಮಾಡಲು ಮುಖ್ಯಮಂತ್ರಿಗಳು ಹಾಗೂ ಅಧ್ಯಕ್ಷರು ಎಲ್ಲರೂ ಅವರಿಗೆ ಸಹಕಾರ ಕೊಡ್ತಾರೆ. ಮಾನ್ಯ ಸಿದ್ದರಾಮಯ್ಯ ಅವರು ಯಾವೆಲ್ಲಾ ಯೋಜನೆಗಳನ್ನು ಜಾರಿಗೆ ತಂದದ್ದಾರೋ, ಅವುಗಳ ಅಭಿವೃದ್ಧಿಗೆ ಈ ಜನತೆ ತೀರ್ಮಾನ ಕೊಟ್ಟಿದ್ದಾರೆ. ಒಟ್ಟಿನಲ್ಲಿ ಗುಂಡ್ಲುಪೇಟೆಯ ಸರ್ವರಿಗೂ, ಸರ್ವ ಮತದಾರರಿಗೂ ಹಾಗೂ ಕಾರ್ಯಕರ್ತರಿಗೂ ಅಭಿನಂದನೆ ತಿಳಿಸಿದ್ರು.

    ಗುಂಡ್ಲುಪೇಟೆಯಲ್ಲಿ ಅಂತಿಮ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಡಾ. ಗೀತಾ ಮಹದೇವ ಪ್ರಸಾದ್ ಭರ್ಜರಿ ಜಯ ಗಳಿಸಿದ್ದಾರೆ. ಇದೀಗ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿದೆ.

  • ಅನ್ನಭಾಗ್ಯ ಯೋಜನೆಯಡಿಯಲ್ಲಿ ಇನ್ಮುಂದೆ 5 ಅಲ್ಲ, 7ಕೆ.ಜಿ ಅಕ್ಕಿ: ಖಾದರ್

    ಅನ್ನಭಾಗ್ಯ ಯೋಜನೆಯಡಿಯಲ್ಲಿ ಇನ್ಮುಂದೆ 5 ಅಲ್ಲ, 7ಕೆ.ಜಿ ಅಕ್ಕಿ: ಖಾದರ್

    ಬೆಂಗಳೂರು: ಅನ್ನಭಾಗ್ಯ ಯೋಜನೆ ಅಡಿಯಲ್ಲಿ 5 ಕೆ.ಜಿ ವಿತರಣೆ ಮಾಡುತ್ತಿದ್ದ ಅಕ್ಕಿಯನ್ನು 7ಕೆ.ಜಿಗೆ ಹೆಚ್ಚಳ ಮಾಡಿದ್ದೇವೆ. ಈ ವ್ಯವಸ್ಥೆ ಏಪ್ರಿಲ್ 1ರಿಂದ ರಾಜ್ಯಾದ್ಯಂತ ಜಾರಿಯಾಗಲಿದೆ ಅಂತಾ ಆಹಾರ ಸಚಿವ ಯುಟಿ ಖಾದರ್ ತಿಳಿಸಿದ್ದಾರೆ.

    ಇಂದು ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಡಿತರ ವಿತರಣೆ ಪ್ರತಿ ತಿಂಗಳು 1 ರಿಂದ 15ರೊಳಗೆ ಮಾಡಬೇಕು. ಈ ಹಿಂದೆ ಪಡಿತರವನ್ನು ಪಡೆಯಲು 30 ತಾರೀಕಿನವರೆಗೆ ಅವಕಾಶ ನೀಡಲಾಗಿತ್ತು. ಇದ್ರಿಂದ ಅಂಗಡಿಯವರು ಕ್ಲೋಸಿಂಗ್ ಬ್ಯಾಲೆನ್ಸ್ ಕೊಡುತ್ತಿರಲಿಲ್ಲ. ಹೀಗಾಗಿ ಇನ್ಮುಂದೆ ಜನರು ಪ್ರತಿ ತಿಂಗಳು 15ನೇ ತಾರೀಕಿನೊಳಗೆ ಪಡಿತರ ಪಡೆಯಬೇಕು ಅಂತಾ ಖಾದರ್ ಹೇಳಿದ್ದಾರೆ.

    ಇಂದಿರಾ ಕ್ಯಾಂಟಿನ್ ಈ ವಿಚಾರಕ್ಕೆ ಸಂಬಂಧಿಸಿದಂತೆ ಇಸ್ಕಾನ್ ಜೊತೆ ಇನ್ನೂ ಒಪ್ಪಂದ ಆಗಿಲ್ಲ. ವಾರ್ಷಿಕವಾಗಿ ಅಂದಾಜು ನೂರು ಕೋಟಿ ಸರ್ಕಾರಕ್ಕೆ ಹೊರೆಯಾಗುತ್ತದೆ. ಪ್ರಥಮ ಹಂತದಲ್ಲಿ ಒಂದು ಕ್ಯಾಂಟೀನ್ ನಲ್ಲಿ 250 ಜನರಿಗೆ ಮಾತ್ರ ಊಟ, ತಿಂಡಿ ಲಭ್ಯವಾಗುವುದು ಅಂತಾ ಅಂದ್ರು.

    ಇಸ್ಕಾನ್ ಜೊತೆ ಒಪ್ಪಂದ ಇಲ್ಲ: ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಇಸ್ಕಾನ್‍ಗೆ ಗುತ್ತಿಗೆ ನೀಡಲು ಶಾಸಕರು ವಿರೋಧಿಸಿದ್ದಾರೆ. ಇಸ್ಕಾನ್ ನವರು ಈರುಳ್ಳಿ, ಬೆಳ್ಳುಳ್ಳಿ ಬಳಸಲ್ಲ. ಆದ್ರೆ ಸರ್ಕಾರ ಮಾತ್ರ ಈರುಳ್ಳಿ, ಬೆಳ್ಳುಳ್ಳಿ ಬಳಸಬೇಕೆಂದು ಪಟ್ಟು ಹಿಡಿದಿದೆ. 3 ಗಂಟೆ ಮೊದಲು ಆಹಾರ ತಯಾರಿಸಲಾಗುತ್ತದೆ ಅಂತಾ ಇಸ್ಕಾನ್ ನವರು ಹೇಳಿದ್ದಾರೆ. ಹೀಗಾಗಿ ಒಂದು ಕೇಂದ್ರೀಕೃತ ಅಡುಗೆ ಮನೆಗೆ ಬದಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ ಅಡುಗೆ ಮನೆ ನಿರ್ಮಾಣಕ್ಕೆ ಟೆಂಡರ್ ಕರೆಯಲು ಉದ್ದೇಶಿಸಿದ್ದೇವೆ. ಇನ್ನು ಈ ಬಗ್ಗೆ ಹೋಟೆಲ್ ಉದ್ಯಮಿಗಳ ಜತೆ ಮಾತುಕತೆ ನಡೆಸಿದ್ದೇವೆ ಅಂತಾ ನುಡಿದ್ರು.

    ರಾಂಗ್ ಹೇಳಿಕೆ: ಗುಂಡ್ಲುಪೇಟೆ ಹಾಗೂ ನಂಜನಗೂಡು ಉಪಚುನಾವಣೆಯಲ್ಲಿ ಒಂದು ಮತಕ್ಕೆ ಕಾಂಗ್ರೆಸ್ ಅವರು ನಾಲ್ಕು ಸಾವಿರ ಕೊಡುತ್ತಿದ್ದಾರಂತೆ. ಅವರ ಹತ್ತಿರ ದುಡ್ಡನ್ನು ಇಸ್ಕೊಳ್ಳಿ. ಆದ್ರೆ ಮತ ಮಾತ್ರ ಬಿಜೆಪಿಗೆ ಹಾಕಿ. ಅವರ ಅಪ್ಪನ ಮನೆಯಿಂದ ಕೂಲಿ ಮಾಡಿ ಹಣ ತಂದಿಲ್ಲ ಅವರು ಅಂತಾ ಈಶ್ವರಪ್ಪ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಖಾದರ್, ಇದೊಂದು ರಾಂಗ್ ಸ್ಟೇಟ್ ಮೆಂಟ್. ಇದಕ್ಕೆ ನಗಬೇಕಾ, ರಿಯಾಕ್ಟ್ ಮಾಡಬೇಕೋ ಗೊತ್ತಾಗ್ತಿಲ್ಲ. ನಮ್ಮಲ್ಲಿ ಆ ರೀತಿ ಏನೂ ಇಲ್ಲ. ಯಡಿಯೂರಪ್ಪ ಸಿಎಂ ಆಗಿದ್ದಾಗ ಚಾಮರಾಜನಗರ ಜಿಲ್ಲೆಗೆ ಭೇಟಿ ಕೊಟ್ಟಿಲ್ಲ. ಇದೀಗ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಚಾಮರಾಜನಗರಕ್ಕೆ ತೆರಳಿ ಜನರನ್ನು ಮತ ಹಾಕುವಂತೆ ಬೇಡುತ್ತಿದ್ದಾರೆ ಅಂತಾ ಗರಂ ಆದ್ರು.