Tag: ಖಾನಾಪುರ

  • ಗುಬ್ಬಿ ಮೇಲೆ ಬ್ರಹ್ಮಾಸ್ತ್ರ- ಖಾನಾಪುರ ಸಿಪಿಐ ಸಸ್ಪೆಂಡ್‌

    ಗುಬ್ಬಿ ಮೇಲೆ ಬ್ರಹ್ಮಾಸ್ತ್ರ- ಖಾನಾಪುರ ಸಿಪಿಐ ಸಸ್ಪೆಂಡ್‌

    – ಠಾಣೆಗೆ ಬಿಜೆಪಿ ನಾಯಕರ ಪ್ರವೇಶಕ್ಕೆ ಅನುಮತಿ ನೀಡಿದ್ದಕ್ಕೆ ಶಿಕ್ಷೆ

    ಬೆಳಗಾವಿ: ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಎಂಬಂತೆ ಸಿಟಿ ರವಿ ವರ್ಸಸ್‌ ಲಕ್ಷ್ಮಿ ಹೆಬ್ಬಾಳ್ಕರ್‌ ಪ್ರಕರಣದಲ್ಲಿ ಖಾನಾಪುರ (Khanapura) ಸಿಪಿಐ ಅವರನ್ನು ಸರ್ಕಾರ ಅಮಾನತು ಮಾಡಿದೆ.

    ಹೌದು. ಸಿಟಿ ರವಿ (CT Ravi) ಅವರನ್ನು ರಾತ್ರಿಯಿಡಿ ಪೊಲೀಸರು ಸುತ್ತಾಡಿಸಿದ್ದಕ್ಕೆ ಬಿಜೆಪಿ, ಜೆಡಿಎಸ್‌ (BJP, JDS) ಆಕ್ರೋಶ ವ್ಯಕ್ತಪಡಿಸಿತ್ತು. ಇಲಾಖೆಯ ಕಾರ್ಯವೈಖರಿ ಬಗ್ಗೆ ಟೀಕೆ ಹೆಚ್ಚಾಗುತ್ತಿದ್ದಂತೆ ಈಗ ಖಾನಾಪುರ ಇನ್ಸ್ ಪೆಕ್ಟರ್ ಮಂಜುನಾಥ ನಾಯಕ್‌ (Manjunath Nayak) ಅವರನ್ನು ಅಮಾನತು ಮಾಡಿದೆ.  ಇದನ್ನೂ ಓದಿ: 6 ಜನರನ್ನು ಮದುವೆಯಾಗಿ ಹಣ, ಚಿನ್ನ ಕಳ್ಳತನ – 7ನೇ ಮ್ಯಾರೇಜ್‌ಗೆ ರೆಡಿಯಾಗಿದ್ದ ಲೇಡಿ ಅರೆಸ್ಟ್‌!

    ಅಸಲಿಗೆ ಖಾನಾಪುರ ಇನ್ಸ್‌ಪೆಕ್ಟರ್‌ ಮತ್ತು ಸಿಟಿ ರವಿಗೂ ಸಂಬಂಧವೇ ಇಲ್ಲ. ರವಿ ಅವರನ್ನು ಕಮಿಷನರೇಟ್ ಪೊಲೀಸರು ಪೊಲೀಸ್ ಠಾಣೆಗೆ ಕರೆತಂದದ್ದರು. ಖುದ್ದು ಬೆಳಗಾವಿ ಕಮಿಷನರ್, ಡಿಸಿಪಿಯೊಂದಿಗೆ ಸಿ ಟಿ ರವಿ ಬಂದಿದ್ದರು. ಕಮಿಷನರ್ ತಂದ ಆರೋಪಿಗೆ ಖಾನಾಪುರ ಇನ್ಸ್‌ಪೆಕ್ಟರ್‌ ಆಶ್ರಯ ನೀಡಿದ್ದರು. ಆಶ್ರಯ ಕೊಟ್ಟ ತಪ್ಪಿಗೆ ಅಮಾನತು ಶಿಕ್ಷೆಯೇ? ಈ ಮೂಲಕ ಕಿರಿಯ ಅಧಿಕಾರಿಗಳ ಮೇಲೆ ಹಿರಿಯ ಅಧಿಕಾರಿಗಳ ಸವಾರಿ ಮಾಡಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.

     

    ಖಾನಾಪುರ ಠಾಣೆಯಲ್ಲಿ ಸಿಟಿ ರವಿ ಇರು ವಿಷಯವನ್ನು ತಿಳಿದು ಅಶೋಕ್‌ ಅವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಅಶೋಕ್‌ ಪ್ರವೇಶವನ್ನು ಪೊಲೀಸರು ತಡೆದಿದ್ದರು. ಆಗ ಪ್ರತಿಪಕ್ಷ ನಾಯಕರನ್ನು ಒಳಗೆ ಬಿಡದಿದ್ರೆ ಹೇಗೆ? ನಿಮ್ಮ ಮೇಲೆಯೇ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದರು. ಆಗ ಹಿರಿಯ ಅಧಿಕಾರಿಗಳ ಸೂಚನೆ ಕೊಟ್ಟ ಹಿನ್ನೆಲೆಯಲ್ಲಿ ಅಶೋಕ್‌ ಸೇರಿದಂತೆ ಬಿಜೆಪಿ ನಾಯಕರನ್ನು ಸಿಪಿಐ ಮಂಜುನಾಥ್ ನಾಯಕ್ ಒಳಗಡೆ ಬಿಟ್ಟಿದ್ದರು.

    ಖಾನಾಪುರ ಠಾಣೆಯಲ್ಲಿ ಹಿರಿಯ ಅಧಿಕಾರಿಗಳು ಇದ್ದರು. ನಮ್ಮನ್ನ ಒಳಗೆ ಬಿಟ್ಟು ಹೊರಗೆ ಹೋಗಿದ್ದರು. ಪೊಲೀಸ್‌ ಅಧಿಕಾರಿಗಳು ಅವರೊಳಗೆ ಮಾತನಾಡುತ್ತಿದ್ದರು. ನಾವು ಒಳಗೆ ಮಾತನಾಡುತ್ತಿದ್ದೆವು ಎಂದು ಸಿಟಿ ರವಿ ಹೇಳಿದ್ದರು.

     

    ಸರ್ಕಾರಕ್ಕೆ ಪಬ್ಲಿಕ್‌ ಪ್ರಶ್ನೆ
    1. ಠಾಣೆಯೊಳಗೆ ಸಿ ಟಿ ರವಿ ಜತೆ ಬಿಜೆಪಿ ನಾಯಕರ ಭೇಟಿಗೆ ಅವಕಾಶ ಕೊಟ್ಟಿದ್ದು ತಪ್ಪೇ?
    2. ಬಿಜೆಪಿ ನಾಯಕರನ್ನು ಒಳಗಡೆ ಬಿಟ್ಟು ಮಾತನಾಡಲು ಅವಕಾಶ ಕೊಟ್ಟಿದ್ದು ಯಾವ ಶ್ರೇಣಿಯ ಅಧಿಕಾರಿ?
    3. ಹಿರಿಯ ಪೊಲೀಸ್ ಅಧಿಕಾರಿಗಳದ್ದೂ ತಪ್ಪಿದ್ದರೂ ಅವರ ಮೇಲೆ ಯಾಕಿಲ್ಲ?
    4. ಹಿರಿಯ ಅಧಿಕಾರಿಗಳ ಆದೇಶ ಇಲ್ಲದೇ ಖಾನಾಪುರ ಸಿಪಿಐ ಹಾಗೆ ನಡೆದುಕೊಳ್ಳಲು ಸಾಧ್ಯವೇ?

  • ಪುರುಷತ್ವ ಹೆಚ್ಚಿಸುವ ಔಷಧಕ್ಕಾಗಿ ಚೀನಾಗೆ ಚಿಪ್ಪು ಹಂದಿ ಸಾಗಿಸುತ್ತಿದ್ದ ಗ್ಯಾಂಗ್ ಅರೆಸ್ಟ್

    ಪುರುಷತ್ವ ಹೆಚ್ಚಿಸುವ ಔಷಧಕ್ಕಾಗಿ ಚೀನಾಗೆ ಚಿಪ್ಪು ಹಂದಿ ಸಾಗಿಸುತ್ತಿದ್ದ ಗ್ಯಾಂಗ್ ಅರೆಸ್ಟ್

    ಬೆಳಗಾವಿ: ಅಕ್ರಮವಾಗಿ ಚೀನಾಗೆ (China) ಚಿಪ್ಪು ಹಂದಿ ಸಾಗಿಸುತ್ತಿದ್ದ ಗ್ಯಾಂಗ್ ಖೆಡ್ಡಾಗೆ ಬೀಳಿಸಿರುವ ಭರ್ಜರಿ ಕಾರ್ಯಾಚರಣೆ ಜಿಲ್ಲೆಯ ಖಾನಾಪುರ (Khanapur) ಅರಣ್ಯದಲ್ಲಿ ನಡೆದಿದೆ.

    ಭರ್ಜರಿ ಕಾರ್ಯಾಚರಣೆ ನಡೆಸಿದ ಅರಣ್ಯ ಅಧಿಕಾರಿಗಳು ಜೀವಂತ ಒಂದು ಚಿಪ್ಪು ಹಂದಿ, ಇಬ್ಬರು ಆರೋಪಿಗಳು ಅರೆಸ್ಟ್ ಮಾಡಿದ್ದಾರೆ.ಇದನ್ನೂ ಓದಿ: ಈ ಮೈಸೂರು ದಸರಾದ ಗಜಪಡೆ – ಅಭಿಮನ್ಯು & ಟೀಂ ಬಗ್ಗೆ ಇಲ್ಲಿದೆ ಫುಲ್‌ ಡಿಟೇಲ್ಸ್‌

    ನಾಲ್ಕು ಜನ ಆರೋಪಿಗಳು ರೈಲು ನಿಲ್ದಾಣದಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿರುವಾಗ ಕಂಡು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆರು ವರ್ಷದ ನಾಲ್ಕೂವರೆ ಕೆಜಿ ತೂಕದ ಜೀವಂತ ಚಿಪ್ಪು ಹಂದಿಯನ್ನು ಅಧಿಕಾರಗಳು ವಶಕ್ಕೆ ಪಡೆದಿದ್ದಾರೆ.

    ಖಾನಾಪುರ ಉಪ ವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನೀತಾ ನಿಂಬರಗಿ ಮಾತನಾಡಿ, ಚಿಪ್ಪು ಹಂದಿಯನ್ನು ಪುರುಷತ್ವ ಹೆಚ್ಚಿಸುವ ಔಷಧ ತಯಾರಿಕೆಗಾಗಿ ಬಳಸಲಾಗುತ್ತದೆ. ಇದಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಬಲು ಬೇಡಿಕೆ ಇದೆ. ಖಾನಾಪುರದಿಂದ ಚೀನಾವರೆಗೂ ಚಿಪ್ಪು ಹಂದಿಯನ್ನು ಸಾಗಾಟ ಮಾಡುತ್ತಿದ್ದು, ಸಾಗಾಟ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ ಎಂದರು.

    ಖಾನಾಪುರದಿಂದ ಕಾರವಾರಕ್ಕೆ (Karwar) ಕಳಿಸಿ ಅಲ್ಲಿಂದ ಬೋಟ್ ಮೂಲಕ ಕೋಲ್ಕತ್ತಾಗೆ (Kolkatta) ಸಾಗಿಸುತ್ತಾರೆ. ಬಳಿಕ ಹಡಗಿನಲ್ಲಿ ಚೀನಾಕ್ಕೆ ಸಾಗಾಟ ಮಾಡುತ್ತಿದ್ದರು. ಸದ್ಯ ಚಿಪ್ಪು ಹಂದಿ ಸಾಗಾಟ ತಂಡದ ಶೋಧಕ್ಕಾಗಿ ಅಧಿಕಾರಿಗಳು ಬೆನ್ನು ಬಿದ್ದಿದ್ದಾರೆ. ಒಂದು ಪ್ರತ್ಯೇಕ ತಂಡ ರಚಸಿ ಕಳ್ಳಸಾಕಾಣೆ ತಂಡದ ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ನವರಾತ್ರಿ ವಿಶೇಷ – 1 | ಕೋಲ್ಕತ್ತಾದ ಕುರ್ಮಾತುಲಿ ಪಾರ್ಕ್‌ ದುರ್ಗಾ ಪೆಂಡಾಲ್‌ ಮಹತ್ವದ ನಿಮಗೆ ಗೊತ್ತೆ?

  • ನಿಮ್ಮನ್ನು ಅರೆಸ್ಟ್ ಮಾಡಿಸ್ತೀನಿ – ಬಸ್ ಬಿಡುವಂತೆ ಮನವಿ ಸಲ್ಲಿಸಲು ಬಂದಿದ್ದ ವಿದ್ಯಾರ್ಥಿಗಳಿಗೆ ತಹಶೀಲ್ದಾರ್ ಧಮ್ಕಿ!

    ನಿಮ್ಮನ್ನು ಅರೆಸ್ಟ್ ಮಾಡಿಸ್ತೀನಿ – ಬಸ್ ಬಿಡುವಂತೆ ಮನವಿ ಸಲ್ಲಿಸಲು ಬಂದಿದ್ದ ವಿದ್ಯಾರ್ಥಿಗಳಿಗೆ ತಹಶೀಲ್ದಾರ್ ಧಮ್ಕಿ!

    ಬೆಳಗಾವಿ: ಬಸ್ ಬಿಡುವಂತೆ ಮನವಿ ಸಲ್ಲಿಸಲು ತಹಶೀಲ್ದಾರರ ಕಚೇರಿಗೆ ಬಂದಿದ್ದ ಶಾಲಾ ವಿದ್ಯಾರ್ಥಿಗಳಿಗೆ (Students) ಖಾನಾಪುರ (Khanapur) ತಹಶೀಲ್ದಾರ್ (Tehsildar) ಧಮ್ಕಿ ಹಾಕಿರುವ ಘಟನೆ ನಡೆದಿದೆ.

    ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕರಂಜಾಳ, ಹಳಸಾಲ, ಬಾಲ್ಕಿ ಬಿಹೆಚ್ ಗ್ರಾಮದ ವಿದ್ಯಾರ್ಥಿಗಳು ಖಾನಾಪುರ ತಹಶೀಲ್ದಾರ್ ಪ್ರಕಾಶ್ ಗಾಯಕ್ವಾಡ್‌ಗೆ ಮನವಿ ಸಲ್ಲಿಸಲು ಹೋಗಿದ್ದರು. ಈ ವೇಳೆ ಪೊಲೀಸರನ್ನು ಕರೆಸಿ ನಿಮ್ಮನ್ನು ಅರೆಸ್ಟ್ ಮಾಡಿ ಒಳಗಡೆ ಹಾಕಿಸುತ್ತೇನೆ ಎಂದು ತಹಶೀಲ್ದಾರ್ ಮಕ್ಕಳ ಮೇಲೆ ದರ್ಪ ತೋರಿದ್ದಾರೆ.

    ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿಕೊಡುವಂತೆ ಮನವಿ ಸಲ್ಲಿಸಲು ತಹಶೀಲ್ದಾರರ ಕಚೇರಿಗೆ ವಿದ್ಯಾರ್ಥಿಗಳು ಬಂದಿದ್ದರು. ಶಾಲಾ ಮಕ್ಕಳ ಸಮಸ್ಯೆಗೆ ಧ್ವನಿಯಾಗಬೇಕಿದ್ದ ತಹಶೀಲ್ದಾರ್ ವರ್ತನೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಈ ವೇಳೆ ಆವಾಜ್ ಹಾಕಿದ ತಹಶೀಲ್ದಾರ್ ಪ್ರಕಾಶ್ ಗಾಯಕ್ವಾಡ್, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದೀರಿ ಎಂದು ಮಕ್ಕಳ ಮೇಲೆಯೇ ಆರೋಪಿಸಿದ್ದಾರೆ. ಇದನ್ನೂ ಓದಿ: ಕಳೆಗಟ್ಟಿದ ಹಾಸನಾಂಬೆ ದರ್ಶನೋತ್ಸವ ಸಂಭ್ರಮ – ಇಂದು ದೇವಿಯ ದರ್ಶನ ಪಡೆಯಲಿರುವ ಸಿಎಂ

    ಕಳೆದ ಹಲವಾರು ವರ್ಷಗಳಿಂದ ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳು ಮನವಿ ಕೊಟ್ಟಿದ್ದರು. ಆದರೆ ಈವರೆಗೆ ಬಸ್ ಸೌಕರ್ಯ ಇಲ್ಲದೇ ಮಕ್ಕಳು ಪರದಾಟ ನಡೆಸಿದ್ದರು. ನಿತ್ಯ ನಡೆದುಕೊಂಡು ಹೋಗಿ ರಾತ್ರಿ ಮನೆ ಸೇರುವ ಪರಿಸ್ಥಿತಿ ನಿರ್ಮಾಣ ಆಗಿತ್ತು.

    ಖಾನಾಪುರದ ಬಹುತೇಕ ಗ್ರಾಮಗಳು ಕಾಡಂಚಿನ ಪ್ರದೇಶದಲ್ಲಿ ಇದ್ದು, ಕಾಡು ಪ್ರಾಣಿಗಳ ಹಾವಳಿಯೂ ಹೆಚ್ಚಾಗಿದೆ. ಹೀಗಾಗಿ ಗ್ರಾಮಗಳಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಮನವಿ ಸಲ್ಲಿಸಲು ವಿದ್ಯಾರ್ಥಿಗಳು ಮುಂದಾಗಿದ್ದರು. ಇದನ್ನೂ ಓದಿ: ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ವೈದ್ಯ ಸಾವು

  • ಕಿರಿಯ ಮಗನ ಮದುವೆಗೆ ಅಡ್ಡಿಯಾಗುತ್ತೆ ಎಂದು ಮಾನಸಿಕ ಅಸ್ವಸ್ಥ ಮಗನನ್ನೇ ಕೊಂದ ತಂದೆ

    ಕಿರಿಯ ಮಗನ ಮದುವೆಗೆ ಅಡ್ಡಿಯಾಗುತ್ತೆ ಎಂದು ಮಾನಸಿಕ ಅಸ್ವಸ್ಥ ಮಗನನ್ನೇ ಕೊಂದ ತಂದೆ

    ಬೆಳಗಾವಿ: ಕಳೆದ ಮೇ 31ರಂದು ಪಟ್ಟಣದ ಹೊರವಲಯದ ಮಲಪ್ರಭಾ ನದಿತೀರದಲ್ಲಿ ಪತ್ತೆಯಾದ ಅಪರಿಚಿತ ಯುವಕನ ಅಸಹಜ ಸಾವಿನ ಪ್ರಕರಣವನ್ನು ಬೇಧಿಸಿರುವ ಖಾನಾಪುರ (Khanapura) ಠಾಣೆಯ ಪೊಲೀಸರು ಪ್ರಕರಣದ ಆರೋಪಿಯನ್ನು ಮಂಗಳವಾರ ಬಂಧಿಸಿದ್ದಾರೆ.

    ಮಾನಸಿಕವಾಗಿ ಅಸ್ವಸ್ಥನಾಗಿದ್ದ (Mentally Ill) ತನ್ನ ಹಿರಿಯ ಮಗ ಬದುಕಿರುವವರೆಗೆ ಕಿರಿಯ ಮಗನ ಮದುವೆಗೆ ಅಡಚಣೆಯಾಗುತ್ತದೆ ಎಂದು ಭಾವಿಸಿ ತಂದೆಯೇ ತನ್ನ ಹಿರಿಯ ಮಗನಿಗೆ ವಿಷವುಣಿಸಿ ಕೊಲೆಗೈದಿರುವುದಾಗಿ ಪೊಲೀಸರ ತನಿಖೆಯಲ್ಲಿ ಧೃಡಪಟ್ಟಿದೆ. ಬಂಧಿತ ತಂದೆಯನ್ನು ಪೊಲೀಸರು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

    ಏನಿದು ಘಟನೆ?
    ಖಾನಾಪುರ ಪಟ್ಟಣದ ಬಳಿ ಮಲಪ್ರಭಾ ನದಿತೀರದಲ್ಲಿ ಪತ್ತೆಯಾದ ಅಪರಿಚಿತ ಶವದ ಮರಣೋತ್ತರ ತನಿಖೆ ನಡೆಸಿದ್ದ ಪೊಲೀಸರಿಗೆ ಮೃತ ವ್ಯಕ್ತಿ ವಿಷ ಸೇವಿಸಿದ್ದು, ಜೊತೆಗೆ ಆತನ ತಲೆಗೆ ಬಲವಾಗಿ ಪೆಟ್ಟು ಬಿದ್ದಿರುವುದು ತಿಳಿದುಬಂದಿತ್ತು. ಹೀಗಾಗಿ ಪೊಲೀಸರು ಈ ಪ್ರಕರಣವನ್ನು ಅನುಮಾನಾಸ್ಪದ ಸಾವು ಎಂದು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

    ಪ್ರಕರಣ ದಾಖಲಾಗಿ ಕೆಲದಿನಗಳ ಬಳಿಕ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಆತ ಹುಕ್ಕೇರಿ ತಾಲೂಕಿನ ಬೋರಗಲ್ ಗ್ರಾಮದ ನಿವಾಸಿ ನಿಖಿಲ್ ರಾಜಕುಮಾರ ಮಗದುಮ್ಮ (24) ಎಂದು ಪೊಲೀಸರಿಗೆ ತಿಳಿದುಬಂದಿತ್ತು. ನಿಖಿಲ್ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು ಜುಲೈ 7ರಂದು ಆತನ ಚಿಕ್ಕಪ್ಪ ಸಂತೋಷ್ ಮಗದುಮ್ಮ ಅವರನ್ನು ಠಾಣೆಗೆ ಕರೆಸಿ ವಿಚಾರಿಸಿದಾಗ ಅವರು ತಮ್ಮ ಅಣ್ಣ ರಾಜಕುಮಾರ ಶಂಕರ ಮಗದುಮ್ಮ (45) ನಿಖಿಲ್ ಕೊಲೆ ಮಾಡಿರುವುದಾಗಿ ತಿಳಿಸಿ ರಾಜಕುಮಾರ ವಿರುದ್ಧ ದೂರು ನೀಡಿದ್ದರು. ಇದನ್ನೂ ಓದಿ: ಕಾರು ಹತ್ತಿಸಿ ಮೂವರು ಮಕ್ಕಳ ಕೊಲೆಗೆ ಯತ್ನ!

    ರಾಜಕುಮಾರ ಅವರನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದ ಪೊಲೀಸರು ಅವರನ್ನು ವಿಚಾರಣೆ ನಡೆಸಿದಾಗ ತಮ್ಮ ಹಿರಿಯ ಮಗ ನಿಖಿಲ್ ಮಾನಸಿಕ ಅಸ್ವಸ್ಥನಿದ್ದು, ಆತ ಬದುಕಿರುವವರೆಗೆ ಕಿರಿಯ ಮಗ ನಿತೀಶ್‌ನ ಮದುವೆ ಮಾಡಲು ತೊಂದರೆ ಆಗುತ್ತದೆ ಎಂದು ಭಾವಿಸಿ ಆತನನ್ನು ಮೇ 30ರಂದು ಬೋರಗಲ್ ಗ್ರಾಮದ ತಮ್ಮ ಮನೆಯಿಂದ ಪಟ್ಟಣದ ಮಲಪ್ರಭಾ ನದಿಯ ಬಳಿ ಕರೆದುಕೊಂಡು ಹೋಗಿ ವಿಷ ಕುಡಿಸಿ, ಗಿಡಕ್ಕೆ ಜೋರಾಗಿ ತಲೆ ಹಾಯಿಸಿ ಕೊಲೆ ಮಾಡಿರುವುದಾಗಿ ತಿಳಿಸಿದ್ದಾರೆ.

    ಬೆಳಗಾವಿ ಎಸ್‌ಪಿ ಸಂಜೀವ್ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ನಿಖಿಲ್ ಅವರ ಕೊಲೆ ಪ್ರಕರಣವನ್ನು ಬೇಧಿಸಿರುವ ಖಾನಾಪುರ ಠಾಣೆಯ ಪಿಐ ಮಂಜುನಾಥ್ ನಾಯ್ಕ್ ಹಾಗೂ ಸಿಬ್ಬಂದಿ ರಾಜಕುಮಾರ ಶಂಕರ್ ಮಗದುಮ್ಮ ಅವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರ ಆದೇಶದನ್ವಯ ರಾಜಕುಮಾರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಹಾವು ಕಚ್ಚಿಸಿ ಉದ್ಯಮಿಯ ಕೊಲೆ – ಸಹಜ ಸಾವೆಂದು ಬಿಂಬಿಸಿದ ಹಾವಾಡಿಗ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾತ್ರಿ ಮಲಗಲು ಜಾಗ ಸಿಗದೆ ಸ್ಮಶಾನದಲ್ಲೇ ಟೆಂಟ್ ಹಾಕಿದ ವಿದೇಶಿಗರು – ಹೌಹಾರಿದ ಜನ

    ರಾತ್ರಿ ಮಲಗಲು ಜಾಗ ಸಿಗದೆ ಸ್ಮಶಾನದಲ್ಲೇ ಟೆಂಟ್ ಹಾಕಿದ ವಿದೇಶಿಗರು – ಹೌಹಾರಿದ ಜನ

    ಬೆಳಗಾವಿ: ವಿದೇಶದಿಂದ ಬಂದು ದೇಶ ಸುತ್ತಿದ ವಿದೇಶಿಗರು (Foreigners) ಬೇರೆಲ್ಲೂ ಜಾಗ ಸಿಗದೆ ಸ್ಮಶಾನದಲ್ಲಿ (Cemetery) ರೆಸ್ಟ್ ಮಾಡಿರುವ ಘಟನೆ ಜಿಲ್ಲೆಯ ಖಾನಾಪುರ (Khanapur) ತಾಲೂಕಿನ ರುಮೇವಾಡಿ ಗ್ರಾಮದಲ್ಲಿ ನಡೆದಿದೆ.

    ಸ್ಮಶಾನ ಎಂದರೆ ದೂರ ಸರಿಯುವ ಜನರೇ ಹೆಚ್ಚು. ಇವರ ಮಧ್ಯೆ ಸ್ಮಶಾನದಲ್ಲಿಯೇ ವಿದೇಶಿಗರು ವಾಸ್ತವ್ಯ ಹೂಡಿದ್ದಾರೆ. ಬೆಳ್ಳಂಬೆಳಗ್ಗೆ ಸ್ಮಾಶಾನದಲ್ಲಿ ಗಾಢ ನಿದ್ದೆಗೆ ಜಾರಿದ್ದ ವಿದೇಶಿಗರನ್ನು ಕಂಡು ಖಾನಾಪುರದ ಜನರು ಹೌಹಾರಿದ್ದಾರೆ. ಇದನ್ನೂ ಓದಿ: ಸಚಿವ ಸತೀಶ್ ಜಾರಕಿಹೊಳಿ ತವರು ಜಿಲ್ಲೆಯ 20 ಗ್ರಾಮಗಳಲ್ಲಿ ಸುಸಜ್ಜಿತ ರಸ್ತೆಗಳೇ ಇಲ್ಲ!

    ಎರಡು ಬುಲೆಟ್ ಬೈಕ್ ಮೇಲೆ ರೈಡ್‌ಗೆ ಬಂದಿದ್ದ ವಿದೇಶಿಗರು ರಾತ್ರಿ ತಂಗಲು ಎಲ್ಲೂ ಜಾಗ ಸಿಗದ ಹಿನ್ನೆಲೆ ಸ್ಮಶಾನದಲ್ಲಿ ವಾಸ್ತವ್ಯ ಹೂಡಿದ್ದಾರೆ. ಜನ ಸೇರುತ್ತಿದ್ದಂತೆ ಎಚ್ಚರಗೊಂಡ ಅವರು ಯಾರೊಂದಿಗೂ ಮಾತನಾಡದೆ ಬೈಕ್ ಹತ್ತಿ ಹೊರಟು ಹೋಗಿದ್ದಾರೆ. ಇದನ್ನೂ ಓದಿ: ಫ್ರೀ ಬಸ್ ಘೋಷಣೆ ಬಳಿಕ ಮೊದಲ ವೀಕೆಂಡ್ – ಸರ್ಕಾರಿ ಬಸ್‌ಗಳು ಫುಲ್ ರಶ್

  • ಖಾನಾಪುರದಲ್ಲಿ ಪೊಲೀಸರ ದಾಳಿ- ದಾಖಲೆ ಇಲ್ಲದ 53 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ

    ಖಾನಾಪುರದಲ್ಲಿ ಪೊಲೀಸರ ದಾಳಿ- ದಾಖಲೆ ಇಲ್ಲದ 53 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ

    ಬೆಳಗಾವಿ: ಸೂಕ್ತ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ಚಿನ್ನ, ಬೆಳ್ಳಿ ಆಭರಣ ಕಾರಿನ ಮೇಲೆ ದಾಳಿ ನಡೆಸಿ 53 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

    ಬೆಳಗಾವಿ (Belagavi) ಜಿಲ್ಲೆಯ ನಂದಗಡ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದು ಚಿನ್ನ, ಬೆಳ್ಳಿ ಆಭರಣ ಸಾಗಿಸುತ್ತಿದ್ದ ಕಾರಿನ ಸಮೇತ 53.33 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ ಮಾಡಿದ್ದಾರೆ. 21,25,304 ರೂ. ಮೌಲ್ಯದ 395.7 ಗ್ರಾಂ ಚಿನ್ನ (Gold) ಹಾಗೂ 19,08,420 ರೂ ಮೌಲ್ಯದ 28.065 ಕೆ.ಜಿ ಬೆಳ್ಳಿ (Silver) ವಶಕ್ಕೆ ತೆಗೆದುಕೊಂಡಿದ್ದಾರೆ.

    ಹಳಿಯಾಳದಿಂದ ಕಕ್ಕೇರಿಗೆ ಯಾವುದೇ ಬಿಲ್ ಇಲ್ಲದೆ ಕಾರಿನಲ್ಲಿ ಆಭರಣಗಳ ಸಾಗಾಟ ಮಾಡುತ್ತಿದೆ ಆರೋಪದ ಮೇಲೆ ಕಾರನ್ನು ಅಡ್ಡಗಟ್ಟಿ ತಪಾಸಣೆ ಮಾಡಿದಾಗ ಕಾರಿನಲ್ಲಿ ಚಿನ್ನ, ಬೆಳ್ಳಿ ಆಭರಣ ಜೊತೆಗೆ 13 ಲಕ್ಷ ರೂ. ಮೌಲ್ಯದ ಕಾರು ಸೇರಿ 53,33,724 ರೂ. ಮೌಲ್ಯದ ವಸ್ತುಗಳು ವಶಕ್ಕೆ ಪಡೆದುಕೊಳ್ಳಲಾಗಿದೆ. ಇದನ್ನೂ ಓದಿ: ಹತ್ತು ವರ್ಷದಿಂದ ನಾಪತ್ತೆಯಾಗಿದ್ದ ನಟೋರಿಯಸ್ ರೌಡಿಶೀಟರ್‌ಗಳ ಬಂಧನ

    ಚುನಾವಣೆ ಹಿನ್ನೆಲೆಯಲ್ಲಿ ಖಾನಾಪುರ ಕ್ಷೇತ್ರ (Khanapura Constituency) ದಲ್ಲಿ ತಪಾಸಣೆ ವೇಳೆ ವಸ್ತುಗಳು ಪತ್ತೆಯಾಗಿದ್ದು, ಹಳಿಯಾಳ ಮೂಲದ ಧರ್ಮರಾಜ್ ಕುಟ್ರೆ ಎಂಬವರನ್ನ ನಂದಗಡ ಠಾಣೆ ಪೊಲೀಸರು ಬಂಧಿಸಿದ್ದಾರೆ. ಖಾನಾಪುರ ತಾಲೂಕಿನ ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಪತ್ನಿಯನ್ನು ಕೊಂದು ಬ್ಯಾರಲ್‍ಗೆ ತುಂಬಿದ್ದವ ಅರೆಸ್ಟ್

    ಪತ್ನಿಯನ್ನು ಕೊಂದು ಬ್ಯಾರಲ್‍ಗೆ ತುಂಬಿದ್ದವ ಅರೆಸ್ಟ್

    ಉತ್ತರ ಕನ್ನಡ: ಹೆಂಡತಿಯನ್ನು ಕೊಲೆ (Murder) ಮಾಡಿ ನೀರಿನ ಬ್ಯಾರಲ್‍ನಲ್ಲಿ ಮುಚ್ಚಿಟ್ಟಿದ್ದ ಆರೋಪಿಯನ್ನು ಹಳಿಯಾಳ (Haliyal) ಹಾಗೂ ರಾಮನಗರ (Ramnagar) ಠಾಣೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

    CRIME 2

    ಶಾಂತಕುಮಾರಿ ಮಡಿವಾಳ (38) ಕೊಲೆಯಾದ ಮಹಿಳೆ. ತುಕಾರಾಮ್ ಮಡಿವಾಳ ಕೊಲೆ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನಿನ್ ವೋಟ್ ಯಾವಾನಿಗ್ ಬೇಕು ಹೋಗು- ಬಿಜೆಪಿ ಕಾರ್ಯಕರ್ತನಿಗೆ ಚಿಂಚನಸೂರ್ ಕ್ಲಾಸ್

    ತುಕಾರಾಮ್ ತನಗಿಂತ ಹತ್ತು ವರ್ಷ ದೊಡ್ಡವಳಾದ ಶಾಂತಕುಮಾರಿಯನ್ನು ಮದುವೆಯಾಗಿದ್ದ. ಈ ವಿಚಾರವಾಗಿ ಅವರಿಬ್ಬರ ನಡುವೆ ಮನಸ್ತಾಪಗಳಿದ್ದವು ಎನ್ನಲಾಗಿದೆ. ಇದಲ್ಲದೆ ಆರೋಪಿ ಬೇರೆ ಹುಡುಗಿಯರೊಂದಿಗೆ ಮಾತನಾಡುತ್ತಾನೆ ಎಂದು ಶಾಂತಕುಮಾರಿ ಸಂಶಯ ವ್ಯಕ್ತಪಡಿಸಿ ಗಲಾಟೆ ಮಾಡಿದ್ದಾಳೆ. ಗಲಾಟೆಯ ಅಂತ್ಯ ಕೊಲೆಯಲ್ಲಿ ಮುಕ್ತಾಯವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಕೊಲೆಯನ್ನು ಮುಚ್ಚಿಹಾಕುವ ಉದ್ದೇಶದಿಂದ ಆರೋಪಿ, ಪತ್ನಿಯ ಮೃತದೇಹವನ್ನು ನೀರಿನ ಬ್ಯಾರಲ್‍ನಲ್ಲಿ ಹಾಕಿ ಮುಚ್ಚಿಟ್ಟಿದ್ದ. ಬಳಿಕ ಪಕ್ಕದ ಮನೆಯ ಖಾನಾಪುರ (Kanapur) ಮೂಲದ ರಿಜ್ವಾನ್ ಕುಂಬಾರಿ ಎಂಬವರ ವಾಹನವನ್ನು ಬಾಡಿಗೆ ಪಡೆದು, ಸ್ನೇಹಿತ ಸಮೀರ್ ಪಂತೋಜಿ ಹಾಗೂ ಚಾಲಕ ರಿಜ್ವಾನ್ ಜೊತೆ ಸೇರಿ ಮೃತದೇಹವನ್ನು ರಾಮನಗರ ಸಮೀಪದ ಕಾಡಿಗೆ ಎಸೆಯಲು ತೆರಳಿದ್ದಾಗ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಸಫಾರಿ ತೆರಳುತ್ತಿದ್ದ ವೇಳೆ ಘೇಂಡಾಮೃಗಗಳ ದಾಳಿ – 7 ಮಂದಿ ಪ್ರವಾಸಿಗರಿಗೆ ಗಾಯ

  • ಖಾನಾಪುರದಲ್ಲಿ ಹೆರಿಗೆ ಆಸ್ಪತ್ರೆ ಸ್ಲ್ಯಾಬ್ ನಿರ್ಮಾಣ – ಅಂಜಲಿ ನಿಂಬಾಳ್ಕರ್ ಚಾಲನೆ

    ಖಾನಾಪುರದಲ್ಲಿ ಹೆರಿಗೆ ಆಸ್ಪತ್ರೆ ಸ್ಲ್ಯಾಬ್ ನಿರ್ಮಾಣ – ಅಂಜಲಿ ನಿಂಬಾಳ್ಕರ್ ಚಾಲನೆ

    ಬೆಳಗಾವಿ: ಖಾನಾಪೂರ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ಬೃಹತ್ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸ್ಲ್ಯಾಬ್ ಕಾಮಗಾರಿಗೆ ಪೂಜೆ ಸಲ್ಲಿಸಿ ಕಾಂಕ್ರೀಟ್ ಹಾಕುವ ಮೂಲಕ ಶಾಸಕಿ ಅಂಜಲಿ ನಿಂಬಾಳ್ಕರ್ ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಖಾನಾಪೂರ ತಾಲೂಕಿಗೆ ಹೆಮ್ಮೆಯ ವಿಷಯವಾದ ಈ ಎಂಸಿಎಚ್ ಆಸ್ಪತ್ರೆಯ ಕೆಲಸ ಚಾಲನೆ ಇದೆ. 15 ಕೋಟಿ ರೂ. ವೆಚ್ಚದಲ್ಲಿ 60 ಬೆಡ್ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ. ಈ ಕೆಲಸದ ಸ್ಲ್ಯಾಬ್ ಹಾಕುವ ಕಾರ್ಯಕ್ರಮದ ಪೂಜೆ ನೇರವಿರಿಸಿದ್ದೇವೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ, ಆಶೀರ್ವಾದಬೇಕು. ಏಕೆಂದರೆ ಇದು ತಾಲೂಕಿಗೆ ಹೆಮ್ಮೆಯ ವಿಷಯ ದೊಡ್ಡ ಆಸ್ಪತ್ರೆ ನಾನು ಒಬ್ಬ ಸ್ತ್ರೀ ವೈದ್ಯೆಯಾಗಿರುವುದರಿಂದ ನನಗೂ ಹೆಮ್ಮೆಯ ವಿಷಯ ಎಂದಿದ್ದಾರೆ.  ಇದನ್ನೂ ಓದಿ: ನಾಳೆಯಿಂದ ಥಿಯೇಟರ್‌ ಹೌಸ್‌ ಫುಲ್‌- ಸರ್ಕಾರದಿಂದ ಅನುಮತಿ

    ಖಾನಾಪೂರ ತಾಲೂಕಿನಲ್ಲಿ ಬಡಜನರಿದ್ದಾರೆ. ಅವರಿಗೆ ಬೆಳಗಾವಿಗೆ ಹೋಗಿ ಹೆರಿಗೆ ಮಾಡಿಸಿಕೊಳ್ಳಲು ಕಷ್ಟವಾಗುತ್ತಿತ್ತು. ಇದನ್ನು ಗಮನಿಸಿ ಈ ಸುಸಜ್ಜಿತವಾದ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ವೈದ್ಯೆಯಾಗಿರುವ ನನಗೆ ಜನ ಶಾಸಕಿ ಮಾಡಿ ಆಶಿರ್ವಾದ ನೀಡಿದ್ದಾರೆ. ಅವರು ನೀಡಿದ ಆಶಿರ್ವಾದಕ್ಕೆ ಚಿರಋಣಿ. ಇನ್ನು ಸ್ವಲ್ಪ ತಿಂಗಳಿನಲ್ಲಿ ಇದನ್ನು ಲೋಕಾರ್ಪಣೆ ಮಾಡಿ ಸಾರ್ವಜನಿಕರಿಗೆ ಸಮರ್ಪಿಸಲಾಗುವುದು. ಈ ಮೂಲಕ ತಾಯಿ ಮತ್ತು ಮಕ್ಕಳ ಆರೈಕೆಗೆ ಹೆಚ್ಚಿನ ಒತ್ತು ನೀಡುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಕ್ಸಲ್ ನಿಗ್ರಹ ದಳ ಸಿಬ್ಬಂದಿಗೆ ವಿಶೇಷ ಆಹಾರ ಭತ್ಯೆ ಹೆಚ್ಚಿಸಿದ ಸರ್ಕಾರ

  • ಕೆಲಸದವನ ಜೊತೆ ಪ್ರಣಯದಾಟ – ಹೆಂಡ್ತಿ ಇನಿಯನಿಂದ ಕೊಲೆಯಾದ ಗಂಡ

    ಕೆಲಸದವನ ಜೊತೆ ಪ್ರಣಯದಾಟ – ಹೆಂಡ್ತಿ ಇನಿಯನಿಂದ ಕೊಲೆಯಾದ ಗಂಡ

    – ರುಂಡ ಕತ್ತರಿಸಿ ಬರ್ಬರವಾಗಿ ಕೊಲೆ

    ಬೆಳಗಾವಿ: ಡಿಸೆಂಬರ್ 25ರಂದು ನಡೆದಿದ್ದ ಫೋಟೋಗ್ರಾಫರ್ ಕೊಲೆ ಪ್ರಕರಣವನ್ನ ಬೆಳಗಾವಿ ಜಿಲ್ಲೆಯ ಖಾನಾಪುರ ಪೊಲೀಸರು ಬೇಧಿಸಿದ್ದು, ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಡಿ.25ರಂದು ಜಾಂಬೋಟಿಯಲ್ಲಿ ವಿಜಯ್ ಅವಲಕ್ಕಿ ಎಂಬವರ ಕೊಲೆಯಾಗಿತ್ತು. ಮೃತ ವಿಜಯ್ ಫೋಟೋ ಸ್ಟುಡಿಯೋದಲ್ಲಿ ಕೆಲಸ ಮಾಡುತ್ತಿದ್ದ ರಾಮಚಂದ್ರ ಸೇರಿ ಐವರನ್ನ ಪೊಲೀಸರು ಬಂಧಿಸಿದ್ದಾರೆ. ವಿಜಯ್ ನನ್ನು ಡಿ.25 ರಂದು ಬರ್ತ್ ಡೇ ಫೋಟೋ ತೆಗೆಯಬೇಕಿದೆ ಎಂದು ಆರೋಪಿ ರಾಮಚಂದ್ರ ಕರೆದುಕೊಂಡು ಹೋಗಿದ್ದನು. ಸಂಜೆ ಖಾನಾಪುರ ಅರಣ್ಯ ಪ್ರದೇಶದಲ್ಲಿ ರಾಮಚಂದ್ರ ತನ್ನ ಸಹಚರರ ಜೊತೆ ಸೇರಿ ವಿಜಯ್ ರುಂಡ ಕತ್ತರಿಸಿ ಕೊಲೆಗೈದಿದ್ದನು. ಕೊಲೆಯ ಬಳಿಕ ಆರೋಪಿಗಳೆಲ್ಲರೂ ಎಸ್ಕೇಪ್ ಆಗಿದ್ದರು.

    ಕೊಲೆ ಮಾಡಿದ್ಯಾಕೆ?: ಪ್ರಕರಣದ ಆರೋಪಿ ವಿಜಯ್ ಸ್ಟುಡಿಯೋದಲ್ಲಿ ಕೆಲಸ ಮಾಡಿಕೊಂಡಿದ್ದನು. ರಾಮಚಂದ್ರ ಮಾಲಕ ವಿಜಯ್ ಪತ್ನಿ ಜೊತೆ ಅಕ್ರಮ ಸಂಬಂಧ ಹೊಂದಿದ್ದನು. ಈ ವಿಷಯ ತಿಳಿದ ವಿಜಯ್ ಆರೋಪಿಯನ್ನ ಕೆಲಸದಿಂದ ತೆಗೆದಿದ್ದರು. ಕೆಲಸದಿಂದ ತೆಗೆದ ಕೋಪದಲ್ಲಿ ಕೊಲೆ ಮಾಡಿದ್ದಾನೆ ಎಂದು ಮಾಹಿತಿ ಲಭ್ಯವಾಗಿದೆ.

  • ಬೆಂಗ್ಳೂರಿನಿಂದ ತಿರುಪತಿಗೆ ಪಾದಯಾತ್ರೆ ಕೈಗೊಂಡ ಶಾಸಕಿ ಅಂಜಲಿ ನಿಂಬಾಳ್ಕರ್

    ಬೆಂಗ್ಳೂರಿನಿಂದ ತಿರುಪತಿಗೆ ಪಾದಯಾತ್ರೆ ಕೈಗೊಂಡ ಶಾಸಕಿ ಅಂಜಲಿ ನಿಂಬಾಳ್ಕರ್

    ಬೆಳಗಾವಿ: ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಖಾನಾಪುರ ಕ್ಷೇತ್ರದ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಬೆಂಗಳೂರಿನಿಂದ ತಿರುಪತಿವರೆಗೆ ಸದ್ಭಾವನಾ ಪಾದಯಾತ್ರೆಯನ್ನು ಶನಿವಾರ ಬೆಳಗ್ಗೆ ಆರಂಭಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಶಾಸಕಿ ನಿಂಬಾಳ್ಕರ್ ಅವರು, ಸಶಕ್ತ ವರ್ತಮಾನ, ಉಜ್ವಲ ಭವಿಷ್ಯಕ್ಕಾಗಿ ಪ್ರಾರ್ಥನೆ ನಡಿಗೆ. ನಮ್ಮ ಖಾನಾಪುರಕ್ಕಾಗಿ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಕೆಲವು ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ.

    ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಪತಿ, ಪೋಲಿಸ್ ಅಧಿಕಾರಿ ಐಜಿಪಿ ಹೇಮಂತ್ ನಿಂಬಾಳ್ಕರ್ ಸೇರಿದಂತೆ ತಮ್ಮ ಸಹೋದರರಾದ ಮಿಲಿಂದ್ ಮತ್ತು ಸುರೇಶ್ ಅವರೊಂದಿಗೆ ಬೆಂಗಳೂರಿನಿಂದ ತಿರುಪತಿವರೆಗೆ ಪಾದಯಾತ್ರೆ ಪ್ರಾರಂಭಿಸಿದ್ದಾರೆ. ಶನಿವಾರ ಬೆಳಗ್ಗೆ ಈ ಸದ್ಭಾವನಾ ಪಾದಯಾತ್ರೆ ಪ್ರಾರಂಭಿಸಿದ ಶಾಸಕಿ ಅಂಜಲಿ ಅವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲಿದ್ದಾರೆ. ಈ ಮೂಲಕ ತಮ್ಮ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ, ಜನತೆಯ ಸುಖ ಶಾಂತಿ, ನೆಮ್ಮದಿಯ ಬದುಕಿಗಾಗಿ ತಿಮ್ಮಪ್ಪನ ಮೊರೆ ಹೋಗಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಲ್ಲಿದ್ದಾರೆ.