Tag: ಖಾನಾಪುರ

  • ರೆಸಾರ್ಟ್‌ಗೆ ಬರಲಿಲ್ಲ ಅಂಜಲಿ ನಿಂಬಾಳ್ಕರ್- ಕುತೂಹಲ ಮೂಡಿಸಿದೆ ಶಾಸಕಿ ನಡೆ

    ರೆಸಾರ್ಟ್‌ಗೆ ಬರಲಿಲ್ಲ ಅಂಜಲಿ ನಿಂಬಾಳ್ಕರ್- ಕುತೂಹಲ ಮೂಡಿಸಿದೆ ಶಾಸಕಿ ನಡೆ

    ಬೆಂಗಳೂರು: ದೋಸ್ತಿ ಸರ್ಕಾರದ ವಿಕೆಟ್ ಇನ್ನೂ ಪತನವಾಗುತ್ತಾ ಎಂಬ ಅನುಮಾನವೊಂದು ಇದೀಗ ಮೂಡಿದೆ. ಯಾಕಂದ್ರೆ ಮೂರು ಪಕ್ಷಗಳ ಶಾಸಕರು ರೆಸಾರ್ಟ್ ವಾಸ್ತವ್ಯದ ಮೊರೆ ಹೋಗಿದ್ದಾರೆ. ಈ ಮಧ್ಯೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರ ನಡೆ ತೀವ್ರ ಕುತೂಹಲ ಹುಟ್ಟಿಸಿದೆ.

    ಹೌದು. ರಾಜ್ಯ ರಾಜಕಾರಣ ರೆಸಾರ್ಟ್ ಗೆ ಶಿಫ್ಟ್ ಆಗಿದೆ. ಸತತ 8ನೇ ದಿನಗಳಿಂದ ಆಡಳಿತಯಂತ್ರ ಸಂಪೂರ್ಣ ಕುಸಿದುಬಿದ್ದಿದೆ. ತಮ್ಮ ನೂರಕ್ಕೂ ಹೆಚ್ಚು ಶಾಸಕರನ್ನು ಒಂದೇ ಕಡೆ ಇರಿಸಿಕೊಳ್ಳಲು ಬಿಜೆಪಿಯವರಿಗೆ ಸರಿಯಾದ ಜಾಗ ಸಿಕ್ಕಿಲ್ಲ. ದೇವನಹಳ್ಳಿ ಸಮೀಪದ ರಮಾಡಾ ರೆಸಾರ್ಟ್ ನಲ್ಲಿ 80 ಶಾಸಕರನ್ನು, ಸಾಯಿ ಲೀಲಾ ರೆಸಾರ್ಟ್ ನಲ್ಲಿ 22 ಶಾಸಕರನ್ನು ಬಿಜೆಪಿ ನಾಯಕರು ಬಿಗಿ ಭದ್ರತೆ ನಡುವೆ ಇರಿಸಿದ್ದಾರೆ.

    ಕಾಂಗ್ರೆಸ್ ನಾಯಕರಿಗೆ ರೆಸಾರ್ಟ್ ಸಿಕ್ಕಿಲ್ಲ. ಹೀಗಾಗಿ ಗೊರಗುಂಟೆಪಾಳ್ಯದ ತಾಜ್ ವಿವಾಂತ ಹೋಟೆಲ್‍ನಲ್ಲಿ ತನ್ನ ಶಾಸಕರನ್ನು ಕಾಂಗ್ರೆಸ್ ಇರಿಸಿದೆ. ಆದರೆ ಶುಕ್ರವಾರ ರಾತ್ರಿ ತಾಜ್ ವಿವಾಂತದಿಂದ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ನಿರ್ಗಮಿಸಿದ್ದು, ಅವರ ಈ ನಡೆ ಕುತೂಹಲ ಕೆರಳಿಸಿದೆ.

    ಜೆಡಿಎಸ್ ಶಾಸಕರು ಕಳೆದ ನಾಲ್ಕು ದಿನಗಳಿಂದ ದೇವನಹಳ್ಳಿ ಸಮೀಪದ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್ ನಲ್ಲಿ ಬೀಡುಬಿಟ್ಟಿದ್ದಾರೆ. ಸೋಮವಾರ ಸದನ ಆರಂಭವಾಗುವವರೆಗೆ ಎಲ್ಲರನ್ನು ರೆಸಾರ್ಟ್ ಗಳಲ್ಲಿ ಇರಿಸಿಕೊಳ್ಳಲಾಗುತ್ತದೆ. ಅಲ್ಲದೆ ಎಲ್ಲಾ ಕಡೆ ಟೈಟ್ ಸೆಕ್ಯೂರಿಟಿ ಕೈಗೊಳ್ಳಲಾಗಿದೆ.

  • ಸುಳ್ಳು ಅಫಿಡವಿಟ್ ಸಲ್ಲಿಸಿ ಸಿಕ್ಕಿ ಹಾಕಿಕೊಂಡ ಶಾಸಕ ಅರವಿಂದ್ ಪಾಟೀಲ್

    ಸುಳ್ಳು ಅಫಿಡವಿಟ್ ಸಲ್ಲಿಸಿ ಸಿಕ್ಕಿ ಹಾಕಿಕೊಂಡ ಶಾಸಕ ಅರವಿಂದ್ ಪಾಟೀಲ್

    ಬೆಳಗಾವಿ: ನಗರದಲ್ಲಿ ಮರಾಠಿಗರ ಪರ ಹೋರಾಟ ಮಾಡಿ ಪಕ್ಷೇತರರ ಅಭ್ಯರ್ಥಿಯಾಗಿ ಖಾನಾಪುರ ಕ್ಷೇತ್ರದಿಂದ ನಿಂತು ಗೆದ್ದಿದ್ದ ಶಾಸಕ ಅರವಿಂದ್ ಪಾಟೀಲ್‍ ಅವರಿಗೆ  ಈಗ ತನಿಖೆಯ ಬಿಸಿ ಕಾಣತೊಡಗಿದೆ.

    ಮರಾಠ ಪರ ಹೋರಾಟಗಾರ ಅಂತ ಹೇಳಿಕೊಂಡು ಬೆಳಗಾವಿಯನ್ನು ಮಹರಾಷ್ಟ್ರಕ್ಕೆ ಸೇರಿಸಬೇಕು ಅಂತ ಹೋರಾಟ ಮಾಡಿ ಈ ಬಾರಿ ಎಂಇಎಸ್‍ನಿಂದ ಖಾನಾಪುರ ಕ್ಷೇತ್ರಕ್ಕೆ ಮತ್ತೆ ಸ್ಪರ್ದೆ ಮಾಡಲು ಮುಂದಾಗಿದ್ದ ಅರವಿಂದ್ ಪಾಟೀಲ್‍ಗೆ 2013 ಚುನಾವಣೆಯ ಸಂದರ್ಬದಲ್ಲಿ ಸಲ್ಲಿಸಿರೋ ಅಫಿಡವಿಟ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

    ತನ್ನ ಪತ್ನಿ ಸುಜಾತ ಯಾವುದೇ ನೌಕರಿಯಲ್ಲಿ ಇಲ್ಲ ಮತ್ತು ಯಾವುದೇ ರೀತಿಯ ಆದಾಯ ತೆರಿಗೆ ಕಟ್ಟುತ್ತಿಲ್ಲ ಅಂತ ಘೋಷಣೆ ಮಾಡಿದ್ರು. ಆದ್ರೆ ಅರವಿಂದ್ ಪಾಟೀಲ್ ಪತ್ನಿ ರಾಜ್ಯ ಸರ್ಕಾರಿ ನೌಕರರಾಗಿದ್ದು ಹುಕ್ಕೇರಿ ತಾಲೂಕಿನ ಹಿಟ್ನಾ ಗ್ರಾಮದಲ್ಲಿರೋ ಮರಾಠಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ಆರ್‍ಟಿಐ ಕಾರ್ಯಕರ್ತರು ದೂರನ್ನು ನೀಡಿದ್ದು ಇದನ್ನು ಗಂಬೀರವಾಗಿ ಪರಿಗಣಿಸಿರೋ ಚುನವಣಾ ಆಯೋಗ ಬೆಳಗಾವಿ ಚುನಾವಣಾ ಅಧಿಕಾರಿಗೆ ಅರವಿಂದ್ ಪಾಟೀಲ್ ವಿರುದ್ದ ಸೂಕ್ತ ಕ್ರಮ ಕೈಗೋಳ್ಳುವಂತೆ ನಿರ್ದೇಶನ ನೀಡಿದೆ.

    2007ರಿಂದ ಸುಜಾತ ಅವರು ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ಮರಾಠಿಗರ ಪರವಾಗಿ ಹೋರಾಟ ಮಾಡಿಕೊಂಡು ಬಂದಿದ್ದ ಶಾಸಕ ಅರವಿಂದ್ ಪಾಟೀಲ್ ಪತ್ನಿ ರಾಜ್ಯ ಸರ್ಕಾರಿ ಮರಾಠಿ ಶಾಲೆಯಲ್ಲಿ ಟೀಚರ್ ಆಗಿ ಕೆಲಸ ಮಾಡುತ್ತಿದ್ದನ್ನು ಮರೆಮಾಚಿದ್ದರು. ಪತ್ನಿ ಕರ್ನಾಟಕ ರಾಜ್ಯದಲ್ಲಿ ಶಿಕ್ಷಕಿ ಆಗಿರೋದು ಗೊತ್ತಾದ್ರೆ ತಾಲೂಕಿನ ಜನ ಮತ ಹಾಕೋದಿಲ್ಲ ಅನ್ನೋ ಆತಂಕದಿಂದ ಈ ರೀತಿ ಮಾಡಿದ್ದಾರೆ ಎನ್ನಲಾಗಿದೆ.