Tag: ಖಾಸಗಿ ಅಂಗ

  • ವ್ಯಕ್ತಿಯ ಗುದದ್ವಾರಕ್ಕೆ ಸ್ಟೀಲ್ ಗ್ಲಾಸ್ ತುರುಕಿದ ಸ್ನೇಹಿತರು – ಮಲ ವಿಸರ್ಜನೆ ಮಾಡಲಾಗದೇ ಪರದಾಡಿದ

    ವ್ಯಕ್ತಿಯ ಗುದದ್ವಾರಕ್ಕೆ ಸ್ಟೀಲ್ ಗ್ಲಾಸ್ ತುರುಕಿದ ಸ್ನೇಹಿತರು – ಮಲ ವಿಸರ್ಜನೆ ಮಾಡಲಾಗದೇ ಪರದಾಡಿದ

    ಭುವನೇಶ್ವರ್: ಕುಡಿದ ಅಮಲಿನಲ್ಲಿ ವ್ಯಕ್ತಿಯ ಗುದದ್ವಾರಕ್ಕೆ ಸ್ಟೀಲ್ ಗ್ಲಾಸ್ ಅನ್ನು ಆತನ ಸ್ನೇಹಿತರೇ ತುರುಕಿರುವ ಘಟನೆ ಒಡಿಶಾದ ಬೆಹ್ರಾಂಪುರದಲ್ಲಿ ನಡೆದಿದೆ.

    ಭಾನುವಾರ ಬೆಹಾರ್ಂಪುರ ನಗರದ ಎಂಕೆಸಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯರು ವ್ಯಕ್ತಿಯ ಕರುಳಿನಿಂದ ಸ್ಟೀಲ್ ಗ್ಲಾಸ್ ಅನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದು ಹಾಕಿದ್ದಾರೆ. ಇದನ್ನೂ ಓದಿ: ಸಂಗೀತ ಕಾರ್ಯಕ್ರಮದಲ್ಲಿ ಬಿಯರ್ ಬಾಟಲಿ, ಕಲ್ಲು ತೂರಿ ಪೊಲೀಸರ ಮೇಲೆ ಹಲ್ಲೆ

    ಗುಜರಾತ್‍ನ ಸೂರತ್‍ನಲ್ಲಿ ಕೆಲಸ ಮಾಡುತ್ತಿರುವ 45 ವರ್ಷದ ಕೃಷ್ಣ ರೌತ್, 10 ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ಅವನ ಸ್ನೇಹಿತರು ಕುಡಿದ ಅಮಲಿನಲ್ಲಿ ಗುದದ್ವಾರದೊಳಗೆ ಸ್ಟೀಲ್ ಗ್ಲಾಸ್ ಅನ್ನು ತುರುಕಿದ್ದಾರೆ. ಮರುದಿನದಿಂದ ಕೃಷ್ಣ ರೌತ್ ಕರುಳಿನಲ್ಲಿ ನೋವಿ ಕಾಣಿಸಿಕೊಂಡು ಬಳಲುತ್ತಿದ್ದರೂ, ಈ ವಿಚಾರವನ್ನು ತನ್ನ ಕುಟುಂಬ ಸದಸ್ಯರೊಂದಿಗೆ ಹೇಳಿಕೊಂಡಿರಲಿಲ್ಲ. ಆದರೆ ನೋವು ತೀವ್ರವಾಗುತ್ತಿದ್ದಂತೆ ಸೂರತ್ ತೊರೆದು ಗಂಜಾಂನ ತಮ್ಮ ಹಳ್ಳಿಗೆ ತೆರಳಿದ್ದಾರೆ.

    ಕೃಷ್ಣ ರೌತ್ ಗ್ರಾಮಕ್ಕೆ ತಲುಪುತ್ತಿದ್ದಂತೆ, ಅವರ ಹೊಟ್ಟೆಯಲ್ಲಿ ಊತ ಹೆಚ್ಚಾಗಿದೆ ಮತ್ತು ಮಲವಿಸರ್ಜನೆ ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ನಂತರ ಅವರ ಕುಟುಂಬಸ್ಥರ ಸಲಹೆಯ ಮೇರೆಗೆ, ತಪಾಸಣೆಗಾಗಿ ಎಂಕೆಸಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿದರು. ಇದನ್ನೂ ಓದಿ: ಮೊಟ್ಟೆ ಎಸೆತ ರಾಷ್ಟ್ರೀಯ ಸಮಸ್ಯೆಯಂತಾಗಿದೆ, ಶಕ್ತಿ ಪ್ರದರ್ಶನ ಸರಿಯಲ್ಲ: ವಿಶ್ವನಾಥ್

    ಎಕ್ಸ್-ರೇ ನಡೆಸಿದ ವೈದ್ಯರಿಗೆ ಕರುಳಿನೊಳಗೆ ಕ್ಲಾಸ್ ಸೇರಿಕೊಂಡಿರುವುದು ತಿಳಿದುಬಂದಿದೆ. ನಂತರ ವೈದ್ಯರು ಮೊದಲು ಗುದನಾಳದ ಮೂಲಕ ಗ್ಲಾಸ್ ಅನ್ನು ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಆದರೆ ತಮ್ಮ ಪ್ರಯತ್ನ ವಿಫಲವಾದಾಗ ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಪ್ರೊ.ಚರಣ್ ಪಾಂಡಾ ಅವರ ಸಲಹೆ ಮೇರೆಗೆ ಸಹಾಯಕ ಪ್ರಾಧ್ಯಾಪಕ ಸಂಜಿತ್ ಕುಮಾರ್ ನಾಯಕ್, ಡಾ.ಸುಬ್ರತ್ ಬರಲ್, ಡಾ.ಸತ್ಯಸ್ವರೂಪ್, ಡಾ.ಪ್ರತಿಭಾ ಅವರನ್ನೊಳಗೊಂಡ ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಗ್ಲಾಸ್ ಹೊರತೆಗೆದಿದ್ದಾರೆ. ಇದೀಗ ವ್ಯಕ್ತಿ ಚೇತರಿಸಿಕೊಳ್ಳುತ್ತಿದ್ದು, ಆತನ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

    Live Tv
    [brid partner=56869869 player=32851 video=960834 autoplay=true]

  • ಮಹಿಳೆಯರ ಮುಂದೆ ನಗ್ನತೆ ಪ್ರದರ್ಶನ – ವ್ಯಕ್ತಿಯ ಖಾಸಗಿ ಅಂಗಕ್ಕೆ ಬೆಂಕಿ ಹಚ್ಚಿದ ಜನ

    ಮಹಿಳೆಯರ ಮುಂದೆ ನಗ್ನತೆ ಪ್ರದರ್ಶನ – ವ್ಯಕ್ತಿಯ ಖಾಸಗಿ ಅಂಗಕ್ಕೆ ಬೆಂಕಿ ಹಚ್ಚಿದ ಜನ

    ಭೋಪಾಲ್: ಮಹಿಳೆಯರು ಮತ್ತು ಯುವತಿಯರ ಮುಂದೆ ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯ ಖಾಸಗಿ ಅಂಗಕ್ಕೆ ಊರಿನ ಜನ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

    ಈ ಪ್ರಕರಣ ಸಂಬಂಧ ಪೆಟ್ರೋಲ್‌ ಹಚ್ಚಿದ ಇಬ್ಬರನ್ನು ಬಂಧಿಸಲಾಗಿದ್ದು, ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಕಜ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರತಿನಿತ್ಯ ಮಹಿಳೆಯರು ಮತ್ತು ಯುವತಿಯರ ಮುಂದೆ ವ್ಯಕ್ತಿಯೋರ್ವ ತನ್ನ ಖಾಸಗಿ ಅಂಗವನ್ನು ತೋರಿಸುವ ಮೂಲಕ ಅಶ್ಲೀಲವಾಗಿ ವರ್ತಿಸುತ್ತಿದ್ದನು. ಈ ಕುರಿತಂತೆ ಗ್ರಾಮಸ್ಥರು ಸಾಕಷ್ಟು ಬಾರೀ ಆತನಿಗೆ ಎಚ್ಚರಿಕೆ ನೀಡಿದ್ದಾರೆ.  ಇದನ್ನೂ ಓದಿ: ಗಣೇಶೋತ್ಸವ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಿರಿ: ಜಮೀರ್‌ಗೆ ಶ್ರೀರಾಮ ಸೇನೆ ಸವಾಲ್‌

    ಹೀಗಿದ್ದರೂ ಶನಿವಾರ ಗ್ರಾಮದ ಮಹಿಳೆಯರ ಮುಂದೆ ತನ್ನ ಚಾಳಿಯನ್ನು ಮುಂದುವರೆಸಿದ್ದಕ್ಕೆ ಆತನಿಗೆ ಇಬ್ಬರು ವ್ಯಕ್ತಿಗಳು ಹಿಗ್ಗಾಮುಗ್ಗ ಥಳಿಸಿದ್ದಾರೆ. ನಂತರ ಆತನ ಖಾಸಗಿ ಅಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡಿರುವ ಮಾನಸಿಕ ಅಸ್ವಸ್ಥನನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಇದೀಗ ಸಂತ್ರಸ್ತನ ಸ್ಥಿತಿ ಗಂಭೀರವಾಗಿದ್ದು, ಈತ ಮಾನಸಿಕ ರೋಗಿ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ಇಬ್ಬರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: 12 ಸಾವಿರಕ್ಕಿಂತ ಕಡಿಮೆ ಬೆಲೆಯ ಚೀನಿ ಫೋನ್‌ ಬ್ಯಾನ್‌? – ಭಾರತದಲ್ಲಿ ಯಾವ ಕಂಪನಿಯ ಪಾಲು ಎಷ್ಟಿದೆ?

    Live Tv
    [brid partner=56869869 player=32851 video=960834 autoplay=true]

  • ನೀರು ಕೊಡಲು ನಿರಾಕರಣೆ – ವಿಧವೆಯ ಗುಪ್ತಾಂಗಕ್ಕೆ ರಾಡ್ ತುರುಕಿದ್ರು!

    ನೀರು ಕೊಡಲು ನಿರಾಕರಣೆ – ವಿಧವೆಯ ಗುಪ್ತಾಂಗಕ್ಕೆ ರಾಡ್ ತುರುಕಿದ್ರು!

    – ಶಸ್ತ್ರ ಚಿಕಿತ್ಸೆಯ ಮೂಲಕ ರಾಡ್ ತೆಗೆದ ವೈದ್ಯರು
    – ಮಹಿಳೆಯ ಸ್ಥಿತಿ ಗಂಭೀರ

    ಭೋಪಾಲ್: ನೀರು ಕೊಡಲು ನಿರಾಕರಿಸಿದ ವಿಧವೆಯನ್ನು ಮನೆಯಿಂದ ಹೊರಗೆಳೆದು ಆಕೆಯ ಖಾಸಗಿ ಅಂಗಕ್ಕೆ ರಾಡ್ ತುರುಕಿ ವಿಕೃತಿ ಮೆರೆದ ವಿಲಕ್ಷಣ ಘಟನೆಯೊಂದು ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿದೆ.

    ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ಗಂಭೀರ ಗಾಯಗೊಂಡಿದ್ದು, ರೇವಾ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

    ಮಹಿಳೆ ತನ್ನ ಇಬ್ಬರು ಪುತ್ರರೊಂದಿಗೆ ಶಾಂತಿ ನಗರದಲ್ಲಿ ವಾಸವಾಗಿದ್ದಾರೆ. ಅಲ್ಲದೆ ಅಮಾಲಿಯಾ ಪ್ರದೇಶಲ್ಲಿ ಟೀ ಶಾಪ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ಶನಿವಾರ ರಾತ್ರಿ ಏಕಾಏಕಿ ಬಂದ ಮೂವರು ನೀರು ಕೊಡುವಂತೆ ಕೇಳಿದ್ದಾರೆ. ಈ ವೇಳೆ ಮಹಿಳೆ ನೀರು ಕೊಡಲು ನಿರಾಕರಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದ ಮೂವರು, ಮಹಿಳೆಯನ್ನು ಮನೆಯಿಂದ ಹೊರಗೆಳೆದು ಆಕೆಯ ಖಾಸಗಿ ಅಂಗಕ್ಕೆ ರಾಡ್ ತುರುಕಿ ವಿಕೃತಿ ಮೆರೆದಿದ್ದಾರೆ.

    ಘಟನೆಯಿಂದ ಗಂಭೀರ ಗಾಯಗೊಂಡ ಮಹಿಳೆಯನ್ನು ಕೂಡಲೇ ರೇವಾ ಜಿಲ್ಲೆಯಲ್ಲಿರುವ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶಸ್ತ್ರ ಚಿಕಿತ್ಸೆಯ ಮೂಲಕ ವೈದ್ಯರು ಮಹಿಳೆಯ ಖಾಸಗಿ ಅಂಗದಿಂದ ರಾಡ್ ತೆಗೆದಿದ್ದಾರೆ.

    ಪ್ರಕರಣ ಸಂಬಂಧ ಗೃಹ ಸಚಿವ ನರೋಟ್ಟಂ ಮಿಶ್ರಾ ಮಾತನಾಡಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

  • ಶ್ವಾನದ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಖಾಸಗಿ ಅಂಗಕ್ಕೆ ಕೋಲು ತುರುಕಿದ ಪಾಪಿಗಳು!

    ಶ್ವಾನದ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಖಾಸಗಿ ಅಂಗಕ್ಕೆ ಕೋಲು ತುರುಕಿದ ಪಾಪಿಗಳು!

    – 11 ಇಂಚಿನ ಕೋಲು ಹೊರತೆಗೆದ ವೈದ್ಯರು
    – ಸಾವು- ಬದುಯಕಿನ ಮಧ್ಯೆ ನೂರಿ ಹೋರಾಟ

    ಮುಂಬೈ: ಪ್ರಾಣಿ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ಮುಂಬೈನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

    ಹೌದು. 8 ವರ್ಷದ ನೂರಿ ಎಂಬ ಹೆಣ್ಣು ಶ್ವಾನದ ಮೇಲೆ ಪಾಪಿಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮುಂಬೈನ ಪೊವಾಯ್ ಶಾಪಿಂಗ್ ಕಾಂಪ್ಲೆಕ್ಸ್ ಒಳಗಡೆ ಈ ಆಘಾತಕಾರಿ ಘಟನೆ ನಡೆದಿದೆ.

    ಮಹಿಳೆಯೊಬ್ಬರು ಪ್ರಾಣಿಗಳಿಗೆ ಪ್ರತಿದಿನ ಆಹಾರ ಮತ್ತು ಔಷಧಿ ನೀಡುತ್ತಿದ್ದಾರೆ. ಹೀಗೆ ಅವರು ಗುರುವಾರ ಬಂದಾಗ ನಾಯಿಯ ಖಾಸಗಿ ಅಂಗದಲ್ಲಿ ರಕ್ತಸ್ರಾವವಾಗುತ್ತಿರುವುದನ್ನು ಗಮನಿಸಿದ್ದಾರೆ. ಕೂಡಲೇ ಅವರು ಸ್ಥಳೀಯ ಪಶು ವೈದ್ಯರ ಬಳಿ ಶ್ವಾನವನ್ನು ಕರೆದುಕೊಂಡು ಹೋಗಿದ್ದಾರೆ.

    ಪರೀಕ್ಷೆ ನಡೆಸಿದ ವೈದ್ಯರು ಯಾವುದೋ ಒಂದು ಬಲವಾದ ವಸ್ತು ಶ್ವಾನದ ದೇಹದೊಳಗೆ ಹೊಕ್ಕಿದೆ. ಪರಿಣಾಮ ಈ ರೀತಿ ರಕ್ತಸ್ರಾವವಾಗುತ್ತಿರಬಹುದು ಎಂದು ಶಂಕೆ ವ್ಯಕ್ತಪಡಿಸಿದರು. ಅಲ್ಲದೆ ಕಿಡಿಗೇಡಿಗಳು ಶ್ವಾನದ ಖಾಸಗಿ ಅಂಗದ ಮೂಲಕ 11 ಇಂಚಿನ ಕೋಲು ತುರುಕಿರುವುದು ಬೆಳಕಿಗೆ ಬಂದಿದ್ದು, ಅದನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರು.

    ನೂರಿಯನ್ನು ಆಸ್ಪತ್ರೆಗೆ ದಾಖಲಿಸಿದ್ದ ದೇವಿ ಶೆತ್ ಮಾಧ್ಯಮಗಳ ಜೊತೆ ಮಾತನಾಡಿ, ಆಕೆ(ಶ್ವಾನ) ರಕ್ತದ ಮಡುವಿನಲ್ಲಿ ಬಿದ್ದಿದ್ದಳು. ಕರೆದರೆ ಯಾವುದೇ ಪ್ರತಿಕ್ರಿಯೆ ನೀಡುತ್ತಿರಲಿಲ್ಲ. ಇದರಿಂದ ಆಕೆ ನೋವಿನಿಂದ ಬಳಲುತ್ತಿರುವುದು ಗಮನಕ್ಕೆ ಬಂತು. ನಾನು ಆಕೆಯ ಸ್ಥಿತಿಯನ್ನು ನೋಡಿದ ಸಂದರ್ಭದಲ್ಲಿ ಆಕೆಯ ಬಳಿಯಿಂದಲೇ ಹಲವಾರು ಮಂದಿ ಓಡಾಡುತ್ತಿದ್ದರು. ಬೀದಿ ನಾಯಿಗಳ ಮೇಲೂ ನಮಗೆ ಜವಾಬ್ದಾರಿ ಇದೆ. ಆದರೆ ಆಕೆ ರಕ್ತದ ಮಡುವಿನಲ್ಲಿ ಬಿದ್ದು ನರಳುತ್ತಿದ್ದರೂ, ಆಕೆಗೆ ಏನೂ ಆಗಿಲ್ಲ ಎಂಬಂತೆ ಜನ ವರ್ತಿಸಿದರು. ಈ ಮೂಲಕ ಅವುಗಳನ್ನು ಜನ ತಿರಸ್ಕರಿಸುತ್ತಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

    ಸದ್ಯ ನೂರಿಯ ಖಾಸಗಿ ಅಂಗದಿಂದ ಕೋಲನ್ನು ಹೊರತೆಗೆದಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಯಾಕೆಂದರೆ ಆಕೆಯ ಕರುಳಿಗೆ ಗಂಭೀರ ಗಾಯಗಳಾಗಿವೆ. ಅಲ್ಲದೆ ದೇಹದ ಇತರ ಅಂಗಗಳು ಕೂಡ ಹಾನಿಗೊಳಗಾಗಿವೆ. ಹೀಗಾಗಿ ಆಕೆ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ. ಇತ್ತ ಆಕೆಯ ಜೀವ ಉಳಿಸಲು ಎನ್‍ಜಿಓ ಒಂದು ಹಣ ಸಂಗ್ರಹಿಸಲು ಪ್ರಯತ್ನಿಸುತ್ತಿದೆ ಎಂದು ದೇವಿ ತಿಳಿಸಿದರು.

    ಘಟನೆ ಸಂಬಂಧ ಪೊವಾಯ್ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 377(ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಪತ್ನಿಯ ಖಾಸಗಿ ಅಂಗಕ್ಕೆ ಬಿಸಿ ಚಾಕು ಇಟ್ಟ ಕ್ರೂರ ಪತಿ!

    ಪತ್ನಿಯ ಖಾಸಗಿ ಅಂಗಕ್ಕೆ ಬಿಸಿ ಚಾಕು ಇಟ್ಟ ಕ್ರೂರ ಪತಿ!

    ಅಹಮದಾಬಾದ್: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಖಾಸಗಿ ಅಂಗವನ್ನು ಬಿಸಿ ಚಾಕುವಿನಿಂದ ಸುಟ್ಟು ವಿಕೃತಿ ಮೆರೆದಿರುವ ಘಟನೆ ಗುಜರಾತ್‍ನ ರಾಯಗಢ ಪ್ರದೇಶದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಶುಕ್ರವಾರದಂದು 40 ವರ್ಷದ ಮಹಿಳೆ ತನ್ನ ಸ್ನೇಹಿತನ ಜೊತೆ ಮೊಬೈಲ್‍ನಲ್ಲಿ ಮಾತನಾಡುತ್ತಿದ್ದಳು. ಈ ವೇಳೆ ಮನೆಗೆ ಬಂದ ಪತಿ, ಪತ್ನಿ ಫೋನ್‍ನಲ್ಲಿ ಮಾತನಾಡುತ್ತಿರುವುದನ್ನು ಕೇಳಿಸಿಕೊಂಡಿದ್ದಾನೆ. ಬಳಿಕ ಇಬ್ಬರ ನಡುವೆ ಅಕ್ರಮ ಸಂಬಂಧವಿದೆ ಎಂದು ಅನುಮಾನ ಪಟ್ಟು ಜಗಳವಾಡಿದ್ದಾನೆ. ಆಗ ತಾನು ಏನು ತಪ್ಪು ಮಾಡಿಲ್ಲ ಅಂತ ಪತ್ನಿ ಮಕ್ಕಳ ಮೇಲೆ ಪ್ರಮಾಣ ಮಾಡಿದಾಗ ಇನ್ನಷ್ಟು ಕೋಪಗೊಂಡ ಪತಿ ಆಕೆಗೆ ಬೆಲ್ಟ್‍ನಿಂದ ಹಿಗ್ಗಾಮುಗ್ಗಾ ಥಳಿಸಿ ಹಲ್ಲೆ ಮಾಡಿದ್ದಾನೆ.

    ಥಳಿತದಿಂದ ಪತ್ನಿ ಪ್ರಜ್ಞೆತಪ್ಪಿ ಬಿದ್ದಿದ್ದಾಳೆ. ಆಗ ಆಕೆಯ ಖಾಸಗಿ ಅಂಗಕ್ಕೆ ಚಾಕುವೊಂದನ್ನು ಬಿಸಿ ಮಾಡಿ ಇಟ್ಟು ಚಿತ್ರಹಿಂಸೆ ನೀಡಿದ್ದಾನೆ. ಅಷ್ಟಕ್ಕೆ ಸುಮ್ಮನಾಗದೆ ಮರುದಿನ ಮತ್ತೆ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾನೆ. ಇತ್ತ ಪತಿ ಮನೆಯಿಂದ ಹೊರ ಹೋಗ್ತಿದ್ದಂತೆ ಅಲ್ಲಿಂದ ತಪ್ಪಿಸಿಕೊಂಡ ಪತ್ನಿ, ಸಂಬಂಧಿಕರಿಗೆ ಕರೆ ಮಾಡಿ ವಿಷಯ ತಿಳಿಸಿ ಬಳಿಕ ಆಸ್ಪತ್ರೆ ಸೇರಿದ್ದಾಳೆ.

    ಈ ಘಟನೆಯಿಂದ ಆಕ್ರೋಶಗೊಂಡ ಸಂಬಂಧಿಕರು ವಿಕೃತಿ ಮೆರೆದ ಪತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ತಿಳಿಯುತ್ತಿದ್ದಂತೆ ಪಾಪಿ ಪತಿ ಪರಾರಿಯಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv