Tag: ಖಾಸಗಿ ವಿಡಿಯೋ

  • 2,000 ರೂ.ಗೆ ಸೆಕ್ಸ್ ಲೈವ್‌ಸ್ಟ್ರೀಮ್ – ಹೆಣ್ಣು ಮಕ್ಕಳಿಬ್ಬರ ಕಾಲೇಜು ಫೀಸ್‌ ಕಟ್ಟಲಾಗದೇ ಕೃತ್ಯಕ್ಕಿಳಿದಿದ್ದ ದಂಪತಿ

    2,000 ರೂ.ಗೆ ಸೆಕ್ಸ್ ಲೈವ್‌ಸ್ಟ್ರೀಮ್ – ಹೆಣ್ಣು ಮಕ್ಕಳಿಬ್ಬರ ಕಾಲೇಜು ಫೀಸ್‌ ಕಟ್ಟಲಾಗದೇ ಕೃತ್ಯಕ್ಕಿಳಿದಿದ್ದ ದಂಪತಿ

    – ಇತ್ತ ಆಸ್ಪತ್ರೆ ಚಿಕಿತ್ಸೆಗೂ ಹಣವಿಲ್ಲದ ಸ್ಥಿತಿ

    ಹೈದರಾಬಾದ್: 2,000 ರೂ.ಗೆ ಸೆಕ್ಸ್ ಲೈವ್ ಸ್ಟ್ರೀಮ್ ಮಾಡ್ತಿದ್ದ ದಂಪತಿಯನ್ನು (Hyderabad Couple) ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಆದ್ರೆ ದಂಪತಿಯ ಬಗ್ಗೆ ಅಚ್ಚರಿ ಸಂಗತಿಯೊಂದು ಬೆಳಕಿಗೆ ಬಂದಿದೆ.

    ದಂಪತಿಗಳಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ (Two Daughters). ಪತಿ ವೃತ್ತಿಯಲ್ಲಿ ಕ್ಯಾಬ್‌ ಡ್ರೈವರ್‌ ಆಗಿದ್ದರೆ, ಪತ್ನಿ ಗೃಹಿಣಿಯಾಗಿದ್ದಳು. ಮನೆಯಲ್ಲಿ ಆರ್ಥಿಕ ಸಮಸ್ಯೆಯಿದ್ದ ಕಾರಣ ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಪತಿ-ಪತ್ನಿ ಇಬ್ಬರು ಕೃತ್ಯಕ್ಕೆ ಇಳಿದಿದ್ದರು ಎಂಬುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: 2,000 ರೂ.ಗೆ ಸೆಕ್ಸ್ ಲೈವ್‌ಸ್ಟ್ರೀಮ್‌ ಮಾಡಿದ ಹೈದರಾಬಾದ್ ಜೋಡಿ ಅರೆಸ್ಟ್!

    ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕೃತ್ಯದಲ್ಲಿ ಭಾಗಿ
    ಆರ್ಥಿಕ ಕೊರತೆಯಿಂದ ಮಕ್ಕಳಿಬ್ಬರ ಕಾಲೇಜು ಶುಲ್ಕ (college fees) ಪಾವತಿಸಿರಲಿಲ್ಲ. ಇಬ್ಬರೂ ಪ್ರತಿಭಾನ್ವಿತ ವಿದ್ಯಾರ್ಥಿಗಳೇ ಆಗಿದ್ದರು. ಒಬ್ಬ ಮಗಳು ಬಿ.ಟೆಕ್‌ ವ್ಯಾಸಂಗ ಮಾಡುತ್ತಿದ್ದರು, ಮತ್ತೊಬ್ಬಳು ಮಗಳು ಇತ್ತೀಚಿಗೆ ನಡೆದ intermediate ಪರೀಕ್ಷೆಯಲ್ಲಿ 470ಕ್ಕೆ 468 ಅಂಕ ಗಳಿಸಿ, ಕಾಲೇಜು ಪ್ರವೇಶಕ್ಕೆ ತಯಾರಿ ನಡೆಸಿದ್ದಳು. ಈ ನಡುವೆ ಆಟೋ ಚಾಲಕನಾಗಿದ್ದ ಪತಿ ಅನಾರೋಗ್ಯದಿಂದ ಬಳಲುತ್ತಿದ್ದ, ಚಿಕಿತ್ಸೆ ಪಡೆಯೋದಕ್ಕೂ ಹಣ ಇರಲಿಲ್ಲ. ಹೀಗಾಗಿ ಸುಲಭವಾಗಿ ಹಣಗಳಿಸಲು ತಮ್ಮ ಲೈಂಗಿಕ ಕೃತ್ಯವನ್ನು ಲೈವ್‌ಸ್ಟ್ರೀಮ್‌ ಮಾಡುವ ಕೆಲಸಕ್ಕೆ ಮುಂದಾದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಕೋಲ್ಕತ್ತಾದಲ್ಲಿ ಕಾನೂನು ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್‌; ಟಿಎಂಸಿ ನಾಯಕ ಸೇರಿ ಮೂವರ ಬಂಧನ

    ಹಣ ಗಳಿಸುತ್ತಿದ್ದದ್ದು ಹೇಗೆ?
    ಪರಸ್ಪರ ಒಪ್ಪಿಗೆಯೊಂದಿಗೆ ಕೃತ್ಯಕ್ಕೆ ಇಳಿದಿದ್ದ ದಂಪತಿ ಲೈವ್ ಸ್ಟ್ರೀಮ್‌ಗೆ 2,000 ರೂ. ಪಡೆಯುತ್ತಿದ್ದರು ಮತ್ತು ರೆಕಾರ್ಡ್ ಮಾಡಿದ ಕ್ಲಿಪ್‌ ಅನ್ನು 500 ರೂ.ಗೆ ಮಾರಾಟ ಮಾಡುತ್ತಿದ್ದರು. ಹೆಚ್ಚಾಗಿ ಯುವಕರಿಗೆ ಈ ವಿಡಿಯೋಗಳನ್ನು ಸೇಲ್‌ ಮಾಡ್ತಿದ್ದರು. ಇದನ್ನೂ ಓದಿ: ಹನಿಮೂನ್ ಮರ್ಡರ್‌ನಂತೆಯೇ ಆಂಧ್ರದಲ್ಲೂ ಮರ್ಡರ್ – ಮೇಘಾಲಯ ಹತ್ಯೆ ವಿಚಾರದ ಬಗ್ಗೆಯೂ ಮಾತಾಡಿದ್ರಂತೆ ಆರೋಪಿಗಳು

    ಸಾಂದರ್ಭಿಕ ಚಿತ್ರ

    ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಅಂಬರ್‌ಪೇಟೆಯ ಮಲ್ಲಿಕಾರ್ಜುನ ನಗರದಲ್ಲಿರುವ ತಮ್ಮ ಮನೆಯಲ್ಲಿ ದಂಪತಿಯನ್ನ ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ದಂಪತಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೇ ಮಕ್ಕಳಿಬ್ಬರಿಗೂ ಪೋಷಕರ ಈ ಕೃತ್ಯದ ಬಗ್ಗೆ ತಿಳಿದಿರಲಿಲ್ಲ. ಗುರುತು ಮರೆಮಾಚಲು ಮುಖಕ್ಕೆ ಮಾಸ್ಕ್ ಧರಿಸಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.  ಇದನ್ನೂ ಓದಿ: ಚೀನಾದೊಂದಿಗೆ ರಾಜತಾಂತ್ರಿಕ ಸಂಬಂಧ ಸುಧಾರಿಸಲು 4 ಹಂತದ ಯೋಜನೆ ಪ್ರಸ್ತಾಪಿಸಿದ ರಾಜನಾಥ್ ಸಿಂಗ್

    ದಂಪತಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 296 (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲತೆ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 67 (ಎ) ಅಡಿಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

  • 2,000 ರೂ.ಗೆ ಸೆಕ್ಸ್ ಲೈವ್‌ಸ್ಟ್ರೀಮ್‌ ಮಾಡಿದ ಹೈದರಾಬಾದ್ ಜೋಡಿ ಅರೆಸ್ಟ್!

    2,000 ರೂ.ಗೆ ಸೆಕ್ಸ್ ಲೈವ್‌ಸ್ಟ್ರೀಮ್‌ ಮಾಡಿದ ಹೈದರಾಬಾದ್ ಜೋಡಿ ಅರೆಸ್ಟ್!

    – ರೆಕಾರ್ಡ್‌ ವಿಡಿಯೋವನ್ನ 500 ರೂ.ಗೆ ಸೇಲ್‌ ಮಾಡ್ತಿದ್ದ ದಂಪತಿ

    ಹೈದರಾಬಾದ್‌: 2,000 ರೂ.ಗೆ ಸೆಕ್ಸ್‌ ಲೈವ್‌ ಸ್ಟ್ರೀಮ್‌ (Live Stream) ಮಾಡ್ತಿದ್ದ ಹೈದರಾಬಾದ್‌ ಜೋಡಿಯನ್ನು (Hyderabad couple) ಪೊಲೀಸರು ಬಂಧಿಸಿದ್ದಾರೆ.

    ಸೋಷಿಯಲ್‌ ಮೀಡಿಯಾ (Social Media) ಅಪ್ಲಿಕೇಶನ್‌ನಲ್ಲಿ‌ ಸೆಕ್ಸ್‌ (ಲೈಂಗಿಕ ಕ್ರಿಯೆ) ಕೃತ್ಯವನ್ನ ಲೈವ್‌ ಸ್ಟ್ರೀಮ್‌ ಮಾಡಿದ್ದಕ್ಕಾಗಿ ಹೈದರಾಬಾದ್‌ ಪೊಲೀಸರು 41 ವರ್ಷದ ಪತಿ, 37 ವರ್ಷದ ಪತ್ನಿಯನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಹಾಡಹಗಲೇ ಹಣ ಎಣಿಸುವಾಗ ಕುತ್ತಿಗೆಗೆ ಚಾಕು ಇಟ್ಟು 2 ಕೋಟಿ ರಾಬರಿ

    ಜೂನ್ 17 ರಂದು ಮಧ್ಯಾಹ್ನ ಅವರ ಮನೆಯ ಟೆರೇಸ್‌ ಮೇಲಿದ್ದಾಗ ಇಬ್ಬರನ್ನೂ ಬಂಧಿಸಲಾಗಿದ್ದು, ಹೈ ಡೆಫಿನಿಷನ್ ಕ್ಯಾಮೆರಾ ಸೇರಿ ಹಲವು ಡಿಜಿಟಲ್‌ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಂಗಳೂರು | ಲವ್, ಸೆಕ್ಸ್, ದೋಖಾ ಆರೋಪ – ಕೇಸ್ ದಾಖಲಾಗ್ತಿದ್ದಂತೆ ಆರೋಪಿ ಯುವಕ ಎಸ್ಕೇಪ್

    ಸುಲಭವಾಗಿ ಹಣಗಳಿಸುವ ಉದ್ದೇಶದಿಂದ ಕೃತ್ಯ
    ವೃತ್ತಿಯಲ್ಲಿ ಕ್ಯಾಬ್‌ ಚಾಲಕನಾಗಿದ್ದ (Cab Driver) ಪತಿ ಸುಲಭವಾಗಿ ಹಣ ಗಳಿಸುವ ಉದ್ದೇಶ ಹೊಂದಿದ್ದ. ಇದಕ್ಕಾಗಿ ಇಬ್ಬರೂ ಒಪ್ಪಿಕೊಂಡು ಕೃತ್ಯದಲ್ಲಿ ಪಾಲ್ಗೊಂಡಿದ್ದರು. ಅಲ್ಲದೇ ಲೈವ್‌ ಸ್ಟ್ರೀಮ್‌ಗೆ ಯುವಕರು, ವೃದ್ಧದಿಂದ 2,000 ರೂ. ಪಡೆಯುತ್ತಿದ್ದರು ಮತ್ತು ರೆಕಾರ್ಡ್‌ ಮಾಡಿದ‌ ಕ್ಲಿಪ್‌ ಅನ್ನು 500 ರೂ.ಗೆ ಮಾರಾಟ ಮಾಡುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: 3ನೇ ಪತ್ನಿಯ ಹತ್ಯೆಗೈದು ಗೋಣಿ ಚೀಲದಲ್ಲಿ ಪ್ಯಾಕ್ – ಲಗೇಜ್ ಎಂದು ಸರ್ಕಾರಿ ಬಸ್ಸಲ್ಲಿ ಕಳುಹಿಸಿದ್ದವ 24 ವರ್ಷಗಳ ಬಳಿಕ ಅರೆಸ್ಟ್

    ಸಾಂದರ್ಭಿಕ ಚಿತ್ರ

    ಪತ್ನಿ ಗೃಹಿಣಿಯಾಗಿದ್ದು, ದಂಪತಿಗೆ ಇಬ್ಬರು ಕಾಲೇಜಿಗೆ ಹೋಗುವ ಹೆಣ್ಣುಮಕ್ಕಳಿದ್ದಾರೆ. ಮಕ್ಕಳಿಬ್ಬರಿಗೂ ಪೋಷಕರ ಈ ಕೃತ್ಯ ತಿಳಿದಿರಲಿಲ್ಲ. ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದಲೇ ಈ ಕೃತ್ಯಕ್ಕಿಳಿದಿದ್ದ ದಂಪತಿ ಗುರುತು ಮರೆಮಾಚಲು ಮುಖಕ್ಕೆ ಮಾಸ್ಕ್‌ ಧರಿಸಿಕೊಳ್ಳುತ್ತಿದ್ದರು. ಇದನ್ನೂ ಓದಿ: ಚೀನಾದೊಂದಿಗೆ ರಾಜತಾಂತ್ರಿಕ ಸಂಬಂಧ ಸುಧಾರಿಸಲು 4 ಹಂತದ ಯೋಜನೆ ಪ್ರಸ್ತಾಪಿಸಿದ ರಾಜನಾಥ್ ಸಿಂಗ್

    ದಂಪತಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 296 (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲತೆ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 67 (ಎ) ಅಡಿಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

  • ಸುದೀ‍ಪ್ ಅವರಿಗೆ ಗನ್ ಮ್ಯಾನ್ ನೀಡುವಂತೆ ಜಾಕ್ ಮಂಜು ಮನವಿ

    ಸುದೀ‍ಪ್ ಅವರಿಗೆ ಗನ್ ಮ್ಯಾನ್ ನೀಡುವಂತೆ ಜಾಕ್ ಮಂಜು ಮನವಿ

    ಕನ್ನಡದ ಹೆಸರಾಂತ ನಟ ಕಿಚ್ಚ (Kiccha) ಸುದೀಪ್ (Sudeep) ಅವರಿಗೆ ಜೀವ ಬೆದರಿಕೆ ಇರುವ ಕಾರಣದಿಂದಾಗಿ ಗನ್ ಮ್ಯಾನ್ (Gunman) ನೀಡುವಂತೆ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲು ಜಾಕ್ ಮಂಜು (Jack Manju) ತೆರಳಿದ್ದರು ಎಂದು ಗೊತ್ತಾಗಿದೆ. ಪೊಲೀಸ್ ಅಧಿಕಾರಿಗಳು ಮೀಟಿಂಗ್ ನಲ್ಲಿ ಇರುವ ಕಾರಣದಿಂದಾಗಿ ಅವರು ವಾಪಸ್ಸಾಗಿದ್ದಾರಂತೆ. ಈ ನಡುವೆ ಖಾಸಗಿ ವಿಡಿಯೋ (private video) ಬೆದರಿಕೆಗೆ ಸಂಬಂಧಿಸಿದಂತೆ ಸುದ್ದಿ ಪ್ರಸಾರ ಮಾಡದಂತೆ ಕೋರ್ಟಿಗೆ ಮಂಜು ಮೊರೆ ಹೋಗಿರುವುದಾಗಿ ತಿಳಿದುಬಂದಿದೆ.

    ಸುದೀಪ್ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲ ಸೂಚಿಸುವ ದಿನವೇ ಖಾಸಗಿ ವಿಡಿಯೋಗೆ ಸಂಬಂಧಿಸಿದಂತೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ಮಂಜು ದೂರು ನೀಡಿದ್ದರು. ಸುದೀಪ್ ಅವರ ಹೆಸರಿನಲ್ಲಿ ಎರಡು ಪತ್ರಗಳು ಬಂದಿದ್ದು, ಮಾನಹಾನಿ ಮಾಡುವಂತಹ ಕೆಲಸಕ್ಕೆ ಪತ್ರ ಬರೆದವರು ಕೈ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖವಾಗಿತ್ತು. ಇದನ್ನೂ ಓದಿ:ರಾಖಿ ಸಾವಂತ್ ಲಿಪ್ ಕಿಸ್ ಪ್ರಕರಣ: ಕೋರ್ಟ್ ಮುಂದೆ ಅರ್ಜಿ

    ಪತ್ರಗಳ ಗಂಭೀರತೆಯನ್ನು ಅರಿತ ಪುಟ್ಟೇನಹಳ್ಳಿ ಪೊಲೀಸರು ಆ ದೂರನ್ನು ಸಿಸಿಬಿಗೆ ವರ್ಗಾಯಿಸಿದ್ದರು. ಸದ್ಯ ಸಿಸಿಬಿ ಪತ್ರಗಳ ಬರೆದವರ ಹಿಂದೆ ಬಿದ್ದಿದೆ. ಆ ಪತ್ರಗಳು ಎಲ್ಲಿಂದ ಬಂದಿವೆ, ಯಾರು ಬರೆದದ್ದು, ಯಾವ ಉದ್ದೇಶದಿಂದ ಬರೆಯಲಾಗಿದೆ ಎಂಬಿತ್ಯಾದಿ ವಿವರಗಳನ್ನು ಸಿಸಿಬಿ ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ಈ ಪತ್ರದ ಕುರಿತಂತೆ ಹಲವು ವಿವರಗಳು ಲಭ್ಯವಾಗಿವೆ ಎಂದು ಹೇಳಲಾಗುತ್ತಿದೆ.

    ಪತ್ರಗಳ ಕುರಿತಂತೆ ದೂರು ದಾಖಲಾದ ದಿನವೇ ಸುದೀಪ್ ಮಾಧ್ಯಮಗಳ ಜೊತೆ ಮಾತನಾಡಿ, ‘ಆ ಪತ್ರದ ಹಿಂದೆ ಯಾರಿದ್ದಾರೆ ಎಂದು ನನಗೆ ಗೊತ್ತಿದೆ. ಸಿನಿಮಾ ಇಂಡಸ್ಟ್ರಿಯವರೇ ಈ ಕೃತ್ಯದ ಹಿಂದೆ ಇದ್ದಾರೆ. ಅವರಿಗೆ ಕಾನೂನು ಮೂಲಕವೇ ಉತ್ತರಿಸುತ್ತೇನೆ’ ಎಂದು ತಿಳಿಸಿದ್ದರು.

  • ಸುದೀಪ್ ಖಾಸಗಿ ವಿಡಿಯೋ ಬೆದರಿಕೆ ಪತ್ರ : ಸಿಸಿಬಿ ಕಚೇರಿಯಲ್ಲಿ ಜಾಕ್ ಮಂಜು

    ಸುದೀಪ್ ಖಾಸಗಿ ವಿಡಿಯೋ ಬೆದರಿಕೆ ಪತ್ರ : ಸಿಸಿಬಿ ಕಚೇರಿಯಲ್ಲಿ ಜಾಕ್ ಮಂಜು

    ಖಾಸಗಿ ವಿಡಿಯೋ (Private Video) ಬೆದರಿಕೆ ಪತ್ರಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಕಂ ಸುದೀಪ್  (Sudeep)  ಆಪ್ತ ಜಾಕ್ ಮಂಜು (Jack Manju) ಸಿಸಿಬಿ ಕಚೇರಿಗೆ ಭೇಟಿ ನೀಡಿದ್ದಾರೆ. ಸಿಸಿಬಿ (CCB) ಅಧಿಕಾರಿಗಳು ವಿವರಣೆಗೆ ಕರೆದ ಹಿನ್ನೆಲೆಯಲ್ಲಿ ಮಂಜು ಭೇಟಿ ನೀಡಿದ್ದು,  ಸುದೀಪ್ ಅವರಿಗೆ ಬಂದಿದ್ದ ಎರಡು ಪತ್ರಗಳು ಕುರಿತಾಗಿ ವಿವರಣೆ ಪಡೆದಿದ್ದಾರೆ. ಅಲ್ಲದೇ, ಕೆಲವರ ಬಗ್ಗೆ ಅನುಮಾನವನ್ನೂ ವ್ಯಕ್ತ ಪಡಿಸಿದ್ದಾರೆ ಎನ್ನಲಾಗುತ್ತಿದೆ. ಈವರೆಗೂ ಸುದೀಪ್ ಮೇಲೆ ನಡೆದ ಕುತಂತ್ರಗಳ ಬಗ್ಗೆಯೂ ಮಂಜು ಅಧಿಕಾರಿಗಳಿಗೆ ವಿವರಿಸಿದ್ದಾರೆ ಎನ್ನಲಾಗುತ್ತಿದೆ.

    ಬೆದರಿಕೆ ಪತ್ರದ ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದು ನನಗೆ ಗೊತ್ತಿದೆ ಎಂದು ಮೊನ್ನೆಯಷ್ಟೇ ಸುದೀಪ್‍ ಹೇಳಿದ್ದರು. ಸಿನಿಮಾ ರಂಗದವರೇ ಈ ಪ್ರಕರಣದಲ್ಲಿ ಭಾಗಿಯಾಗಿದ್ದು, ಕಾನೂನು ಮೂಲಕವೇ ಅವರಿಗೆ ಉತ್ತರ ಕೊಡುತ್ತೇನೆ ಎಂದೂ ಹೇಳಿಕೊಂಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಸುಳಿವು ಸಿಕ್ಕಿದೆ. ಸುದೀಪ್ ಮನೆಗೆ ಬಂದಿದ್ದ ಆ ಎರಡೂ ಬೆದರಿಕೆ ಪತ್ರಗಳು ದೊಮ್ಮಲೂರಿನಿಂದ ಪೋಸ್ಟ್ ಆಗಿವೆ ಎಂದು ಹೇಳಲಾಗುತ್ತಿದೆ. ಆ ಬೆದರಿಕೆ ಪತ್ರಗಳ ಸಂಬಂಧ ಸಿಸಿಬಿಯಿಂದ ತನಿಖೆ ಶುರುವಾಗಿದ್ದು, ಶಂಕೀತ ಜಾಡು ಹಿಡಿದು ಹೊರಟಿದ್ದಾರಂತೆ ಸಿಸಿಬಿ ಅಧಿಕಾರಿಗಳು.

    ಮೊದಲ ಪತ್ರ ಬಂದಾಗ ಸುದೀಪ್ ಅವರೇ ನಿರ್ಲಕ್ಷ್ಯ ವಹಿಸಿದ್ದರಂತೆ. ದುಷ್ಟರು ಬರೆದ ಮೊದಲನೇ ಪತ್ರಕ್ಕೆ ಯಾವಾಗ ಸುದೀಪ್ ರಿಯಾಕ್ಟ್ ಆಗ್ಲಿಲ್ವೋ, ಈತ ಏನೂ ಮಾಡಲ್ಲ ಎಂಬ ಭಂಡ ಧೈರ್ಯದಿಂದ ಮತ್ತೊಂದು ಪತ್ರ ಕಳಿಸಿದ್ದಾನಂತೆ ಆ ಭೂಪ. ಯಾವಾಗ ಎರಡನೇ ಪತ್ರ ಕೈ ಸೇರಿತೋ ಇದರ ಗಂಭೀರತೆಯನ್ನು ಅರಿತು ಕಾನೂನು ಪ್ರಕ್ರಿಯೆಯೇ ಸೂಕ್ತ ಎಂದು ತಮ್ಮ ಆಪ್ತ ಜಾಕ್ ಮಂಜು ಮೂಲಕ ದೂರು ನೀಡಿದ್ದರು ಸುದೀಪ್. ಸದ್ಯ ಈ ಪತ್ರದ ಸುತ್ತ ಪೊಲೀಸರು ತನಿಖೆಗಿಳಿದಿದ್ದಾರೆ. ಇದನ್ನೂ ಓದಿ: ‘ವಿಷ್ಣುಪ್ರಿಯಾ’ಗಾಗಿ ಕೇರಳದಿಂದ ಹಾರಿಬಂದ ಕಣ್ಸನ್ನೆ ಬೆಡಗಿ ಪ್ರಿಯಾ

    ಮಾರ್ಚ್ 10ನೇ ತಾರೀಕು ಸುದೀಪ್ ಮನೆಗೆ ಮೊದಲ ಪತ್ರ ತಲುಪಿದೆ. ಆ ಪತ್ರದ ಬಗ್ಗೆ ಅಷ್ಟಾಗಿ ಸುದೀಪ್ ತಲೆ ಕೆಡಿಸಿಕೊಂಡಿರಲಿಲ್ಲ‌. ಆದರೂ ಇಂಟರ್ ನಲ್ ಎನ್ಕೈರಿಯಂತೆ ಮಾಹಿತಿಯನ್ನು ಕಲೆ ಹಾಕುವುದಕ್ಕೆ ಯತ್ನಿಸಿದ್ದರಂತೆ. ಅದರ ಬೆನ್ನಲ್ಲೆ ಮತ್ತೊಂದು ಪತ್ರ ಬಂದಿದ್ದರಿಂದ ಸಹಜವಾಗಿಯೇ ಇದು ಗಂಭೀರ ಪ್ರಕರಣ ಅನಿಸಿ ದೂರು ನೀಡಲಾಗಿತ್ತು. ಇನ್ನು ಆ ಪತ್ರದ ಮೂಲ ಹುಡುಕುತ್ತಾ ಹೋದಾಗ ಸಿಕ್ಕಿದ್ದು ದೊಮ್ಮಲೂರು ಪೋಸ್ಟ್ ಬಾಕ್ಸ್.  ಸುದೀಪ್ ಮನೆಗೆ ಬಂದ  ಎರಡೂ ಪತ್ರಗಳು ದೊಮ್ಮಲೂರಿನಿಂದ ಬಂದಿದ್ದವು. ಹೀಗಾಗಿ ಆ ಪತ್ರವನ್ನು ಯಾರು ಪೋಸ್ಟ್ ಮಾಡಿದ್ದು ಎಂಬುದರ ಬಗ್ಗೆ ಅಲ್ಲಿನ ಸಿಸಿಟಿವಿ ಪರಿಶೀಲನೆಗೆ ಸಿಸಿಬಿ ಮುಂದಾಗಿದೆ.

    ಈ ಹಿಂದೆ ಸುದೀಪ್ ಜೊತೆ ಇದ್ದ ಕಾರು ಚಾಲಕನ ಮೇಲೆ ಪೊಲೀಸರಿಗೆ ಬಲವಾದ ಶಂಕೆ ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೆ ದೂರು ದಾಖಲಿಸಿ ತನಿಖೆ ನಡೆಸಿದ್ದ ಪುಟ್ಟೇನಹಳ್ಳಿ ಪೊಲೀಸರು ಸುದೀಪ್ ಮನೆಯಲ್ಲಿ ಸ್ಪಾಟ್ ಇನ್ವೆಷ್ಟಿಗೇಷನ್ ಕೂಡ ನಡೆಸಿದ್ದಾರೆ. ಕೆಲವೊಂದು ಸಾಂಧರ್ಭಿಕ ಸಾಕ್ಷಿಗಳ ಅನ್ವಯ ಈ ಹಿಂದೆ ಇದ್ದ ಸುದೀಪ್ ಮನೆಯ ಕಾರು ಚಾಲಕನ ಮೇಲೆ ಅನುಮಾನ ಬಂದಿದೆ ಎಂದು ಹೇಳಲಾಗುತ್ತಿದೆ. ಇವೆಲ್ಲ ವರದಿಯನ್ನು ಪುಟ್ಟೇನಹಳ್ಳಿ ಪೊಲೀಸರು ಸಿಸಿಬಿಗೆ ನೀಡಿದ್ದಾರೆ. ಇನ್ನು ಈ ಕಾರು ಚಾಲಕನನ್ನು ಬಳಸಿಕೊಂಡು ಚಿತ್ರ ರಂಗದ ಆ ವ್ಯಕ್ತಿ ಕೃತ್ಯವನ್ನು ಎಸಗಿದ್ದನಾ ಎಂಬ ಶಂಕೆ ವ್ಯಕ್ತವಾಗಿದೆ.  ಇದೊಂದು ಪ್ರೀ ಪ್ಲಾನ್ ಕೃತ್ಯ ಎಂಬುದಕ್ಕೆ ಸಿಸ್ಟಂ ಟೈಪಿಂಗ್ ಪತ್ರವೇ ಸಾಕ್ಷಿಯಾಗಿದೆ.  ಕೈ ಬರಹ ಪತ್ರವನ್ನು ಕಳಿಸಿದರೆ ಸಾಕ್ಷಿ ಸಿಗುತ್ತೆ ಎಂಬ ಕಾರಣಕ್ಕೆ ಟೈಪ್ ಮಾಡಿ ಆ ಪತ್ರವನ್ನು ಪೋಸ್ಟ್ ಮಾಡಲಾಗಿದೆ. ಪೊಲೀಸರು ದೂರು ಪಡೆದುಕೊಳ್ಳುವಾಗಲೇ ಇದೊಂದು ಕ್ರಿಮಿನಲ್ ಕಾನ್ಸ್ ಪೆರೆಸಿ ಎಂದು ತಿಳಿದು ಸೆಕ್ಷನ್ 120b ಒಳಸಂಚು ಅಡಿಯಲ್ಲಿ ಕೇಸು ದಾಖಲಿಸಿದ್ದರು. ಸದ್ಯ ಅವರ ಅನುಮಾನ ಕೂಡ ನಿಜವಾಗ್ತಿದೆ ಎಂಬುದಕ್ಕೆ ಸಿಸಿಬಿಗೆ ಸಿಕ್ಕ ಬೇಸಿಕ್ ಇನ್ಪಾರ್ಮೇಷನ್ ಗಳೆ ಸಾಕ್ಷಿಯಾಗಿವೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯ ಸೈಬರ್ ವಿಂಗ್ ಕೂಡ ಕೆಲಸ ಮಾಡುತ್ತಿದ್ದು ಮುಂದಿನ ದಿನದಲ್ಲಿ ನಟ ಸುದೀಪ್ ಗೂ ನೊಟೀಸ್ ನೀಡಿ ಹೇಳಿಕೆಗಳನ್ನು ಪಡೆಯಲು ಸಿದ್ಧತೆಯನ್ನ ನಡೆಸುತ್ತಿದ್ದಾರೆ. ಸದ್ಯ ಆ ಕಾರು ಚಾಲಕ ಸಿಕ್ಕ ಬಳಿಕವಷ್ಟೆ ಅಸಲಿ ಸಂಗತಿ ಹೊರ ಬರಬೇಕಿದೆ.

  • ಸುದೀಪ್ ಖಾಸಗಿ ವಿಡಿಯೋ ಬೆದರಿಕೆ ಹಿಂದೆ ಕಾರು ಡ್ರೈವರ್ ಇರುವ  ಶಂಕೆ

    ಸುದೀಪ್ ಖಾಸಗಿ ವಿಡಿಯೋ ಬೆದರಿಕೆ ಹಿಂದೆ ಕಾರು ಡ್ರೈವರ್ ಇರುವ ಶಂಕೆ

    ಟ ಕಿಚ್ಚ ಸುದೀಪ್ (Sudeep) ಅವರ ಖಾಸಗಿ ವಿಡಿಯೋ (Private Video) ಬಹಿರಂಗ ಪಡಿಸುವುದಾಗಿ ಬರೆದ ಬೆದರಿಕೆ ಪತ್ರದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದು ನನಗೆ ಗೊತ್ತಿದೆ ಎಂದು ನಿನ್ನೆಯಷ್ಟೇ ಸುದೀಪ್‍ ಹೇಳಿದ್ದರು. ಸಿನಿಮಾ ರಂಗದವರೇ ಈ ಪ್ರಕರಣದಲ್ಲಿ ಭಾಗಿಯಾಗಿದ್ದು, ಕಾನೂನು ಮೂಲಕವೇ ಅವರಿಗೆ ಉತ್ತರ ಕೊಡುತ್ತೇನೆ ಎಂದೂ ಹೇಳಿಕೊಂಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಸುಳಿವು ಸಿಕ್ಕಿದೆ. ಸುದೀಪ್ ಮನೆಗೆ ಬಂದಿದ್ದ ಆ ಎರಡೂ ಬೆದರಿಕೆ ಪತ್ರಗಳು ದೊಮ್ಮಲೂರಿನಿಂದ ಪೋಸ್ಟ್ ಆಗಿವೆ ಎಂದು ಹೇಳಲಾಗುತ್ತಿದೆ. ಆ ಬೆದರಿಕೆ ಪತ್ರಗಳ ಸಂಬಂಧ ಸಿಸಿಬಿಯಿಂದ (CCB)ತನಿಖೆ ಶುರುವಾಗಿದ್ದು, ಶಂಕೀತ ಜಾಡು ಹಿಡಿದು ಹೊರಟಿದ್ದಾರಂತೆ ಸಿಸಿಬಿ ಅಧಿಕಾರಿಗಳು.

    ಮೊದಲ ಪತ್ರ ಬಂದಾಗ ಸುದೀಪ್ ಅವರೇ ನಿರ್ಲಕ್ಷ್ಯ ವಹಿಸಿದ್ದರಂತೆ. ದುಷ್ಟರು ಬರೆದ ಮೊದಲನೇ ಪತ್ರಕ್ಕೆ ಯಾವಾಗ ಸುದೀಪ್ ರಿಯಾಕ್ಟ್ ಆಗ್ಲಿಲ್ವೋ, ಈತ ಏನೂ ಮಾಡಲ್ಲ ಎಂಬ ಭಂಡ ಧೈರ್ಯದಿಂದ ಮತ್ತೊಂದು ಪತ್ರ ಕಳಿಸಿದ್ದಾನಂತೆ ಆ ಭೂಪ. ಯಾವಾಗ ಎರಡನೇ ಪತ್ರ ಕೈ ಸೇರಿತೋ ಇದರ ಗಂಭೀರತೆಯನ್ನು ಅರಿತು ಕಾನೂನು ಪ್ರಕ್ರಿಯೆಯೇ ಸೂಕ್ತ ಎಂದು ತಮ್ಮ ಆಪ್ತ ಜಾಕ್ ಮಂಜು ಮೂಲಕ ದೂರು ನೀಡಿದ್ದರು ಸುದೀಪ್. ಸದ್ಯ ಈ ಪತ್ರದ ಸುತ್ತ ಪೊಲೀಸರು ತನಿಖೆಗಿಳಿದಿದ್ದಾರೆ. ಇದನ್ನೂ ಓದಿ: ಯಶ್‌ ಜೊತೆ ದಿಲ್‌ ರಾಜು ಹೊಸ ಸಿನಿಮಾ- ಅಪ್‌ಡೇಟ್‌ ಹಂಚಿಕೊಂಡ ನಿರ್ಮಾಪಕ

    ಮಾರ್ಚ್ 10ನೇ ತಾರೀಕು ಸುದೀಪ್ ಮನೆಗೆ ಮೊದಲ ಪತ್ರ ತಲುಪಿದೆ. ಆ ಪತ್ರದ ಬಗ್ಗೆ ಅಷ್ಟಾಗಿ ಸುದೀಪ್ ತಲೆ ಕೆಡಿಸಿಕೊಂಡಿರಲಿಲ್ಲ‌. ಆದರೂ ಇಂಟರ್ ನಲ್ ಎನ್ಕೈರಿಯಂತೆ ಮಾಹಿತಿಯನ್ನು ಕಲೆ ಹಾಕುವುದಕ್ಕೆ ಯತ್ನಿಸಿದ್ದರಂತೆ. ಅದರ ಬೆನ್ನಲ್ಲೆ ಮತ್ತೊಂದು ಪತ್ರ ಬಂದಿದ್ದರಿಂದ ಸಹಜವಾಗಿಯೇ ಇದು ಗಂಭೀರ ಪ್ರಕರಣ ಅನಿಸಿ ದೂರು ನೀಡಲಾಗಿತ್ತು. ಇನ್ನು ಆ ಪತ್ರದ ಮೂಲ ಹುಡುಕುತ್ತಾ ಹೋದಾಗ ಸಿಕ್ಕಿದ್ದು ದೊಮ್ಮಲೂರು ಪೋಸ್ಟ್ ಬಾಕ್ಸ್.  ಸುದೀಪ್ ಮನೆಗೆ ಬಂದ  ಎರಡೂ ಪತ್ರಗಳು ದೊಮ್ಮಲೂರಿನಿಂದ ಬಂದಿದ್ದವು. ಹೀಗಾಗಿ ಆ ಪತ್ರವನ್ನು ಯಾರು ಪೋಸ್ಟ್ ಮಾಡಿದ್ದು ಎಂಬುದರ ಬಗ್ಗೆ ಅಲ್ಲಿನ ಸಿಸಿಟಿವಿ ಪರಿಶೀಲನೆಗೆ ಸಿಸಿಬಿ ಮುಂದಾಗಿದೆ.

    ಈ ಹಿಂದೆ ಸುದೀಪ್ ಜೊತೆ ಇದ್ದ ಕಾರು ಚಾಲಕನ (Car Driver) ಮೇಲೆ ಪೊಲೀಸರಿಗೆ ಬಲವಾದ ಶಂಕೆ ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೆ ದೂರು ದಾಖಲಿಸಿ ತನಿಖೆ ನಡೆಸಿದ್ದ ಪುಟ್ಟೇನಹಳ್ಳಿ ಪೊಲೀಸರು ಸುದೀಪ್ ಮನೆಯಲ್ಲಿ ಸ್ಪಾಟ್ ಇನ್ವೆಷ್ಟಿಗೇಷನ್ ಕೂಡ ನಡೆಸಿದ್ದಾರೆ. ಕೆಲವೊಂದು ಸಾಂರ್ಭಿಕ ಸಾಕ್ಷಿಗಳ ಅನ್ವಯ ಈ ಹಿಂದೆ ಇದ್ದ ಸುದೀಪ್ ಮನೆಯ ಕಾರು ಚಾಲಕನ ಮೇಲೆ ಅನುಮಾನ ಬಂದಿದೆ ಎಂದು ಹೇಳಲಾಗುತ್ತಿದೆ. ಇವೆಲ್ಲ ವರದಿಯನ್ನು ಪುಟ್ಟೇನಹಳ್ಳಿ ಪೊಲೀಸರು ಸಿಸಿಬಿಗೆ ನೀಡಿದ್ದಾರೆ. ಇನ್ನು ಈ ಕಾರು ಚಾಲಕನನ್ನು ಬಳಸಿಕೊಂಡು ಚಿತ್ರ ರಂಗದ ಆ ವ್ಯಕ್ತಿ ಕೃತ್ಯವನ್ನು ಎಸಗಿದ್ದನಾ ಎಂಬ ಶಂಕೆ ವ್ಯಕ್ತವಾಗಿದೆ.  ಇದೊಂದು ಪ್ರೀ ಪ್ಲಾನ್ ಕೃತ್ಯ ಎಂಬುದಕ್ಕೆ ಸಿಸ್ಟಂ ಟೈಪಿಂಗ್ ಪತ್ರವೇ ಸಾಕ್ಷಿಯಾಗಿದೆ.  ಕೈ ಬರಹ ಪತ್ರವನ್ನು ಕಳಿಸಿದರೆ ಸಾಕ್ಷಿ ಸಿಗುತ್ತೆ ಎಂಬ ಕಾರಣಕ್ಕೆ ಟೈಪ್ ಮಾಡಿ ಆ ಪತ್ರವನ್ನು ಪೋಸ್ಟ್ ಮಾಡಲಾಗಿದೆ. ಪೊಲೀಸರು ದೂರು ಪಡೆದುಕೊಳ್ಳುವಾಗಲೇ ಇದೊಂದು ಕ್ರಿಮಿನಲ್ ಕಾನ್ಸ್ ಪೆರೆಸಿ ಎಂದು ತಿಳಿದು ಸೆಕ್ಷನ್ 120b ಒಳಸಂಚು ಅಡಿಯಲ್ಲಿ ಕೇಸು ದಾಖಲಿಸಿದ್ದರು. ಸದ್ಯ ಅವರ ಅನುಮಾನ ಕೂಡ ನಿಜವಾಗ್ತಿದೆ ಎಂಬುದಕ್ಕೆ ಸಿಸಿಬಿಗೆ ಸಿಕ್ಕ ಬೇಸಿಕ್ ಇನ್ಪಾರ್ಮೇಷನ್ ಗಳೆ ಸಾಕ್ಷಿಯಾಗಿವೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯ ಸೈಬರ್ ವಿಂಗ್ ಕೂಡ ಕೆಲಸ ಮಾಡುತ್ತಿದ್ದು ಮುಂದಿನ ದಿನದಲ್ಲಿ ನಟ ಸುದೀಪ್ ಗೂ ನೊಟೀಸ್ ನೀಡಿ ಹೇಳಿಕೆಗಳನ್ನು ಪಡೆಯಲು ಸಿದ್ಧತೆಯನ್ನ ನಡೆಸುತ್ತಿದ್ದಾರೆ. ಸದ್ಯ ಆ ಕಾರು ಚಾಲಕ ಸಿಕ್ಕ ಬಳಿಕವಷ್ಟೇ ಅಸಲಿ ಸಂಗತಿ ಹೊರ ಬರಬೇಕಿದೆ.

  • ಚಂಡೀಗಢ ವಿವಿ ಬಳಿಕ ಐಐಟಿ ಬಾಂಬೆ- ಹಾಸ್ಟೆಲ್ ಸ್ನಾನಗೃಹದಲ್ಲಿ ಇಣುಕಿದ ಕ್ಯಾಂಟೀನ್ ಸಿಬ್ಬಂದಿ ಬಂಧನ

    ಚಂಡೀಗಢ ವಿವಿ ಬಳಿಕ ಐಐಟಿ ಬಾಂಬೆ- ಹಾಸ್ಟೆಲ್ ಸ್ನಾನಗೃಹದಲ್ಲಿ ಇಣುಕಿದ ಕ್ಯಾಂಟೀನ್ ಸಿಬ್ಬಂದಿ ಬಂಧನ

    ಮುಂಬೈ: ಚಂಡೀಗಢ ವಿಶ್ವವಿದ್ಯಾಲಯದ (Chandigarh University) ವಿದ್ಯಾರ್ಥಿನಿಯರ ಬಾತ್‌ರೂಮ್ ವೀಡಿಯೋ (Bathroom Video) ಲೀಕ್ ಪ್ರಕರಣ ಮಾಸುವುದಕ್ಕೂ ಮೊದಲೇ ಇಂತಹುದೇ ಮತ್ತೊಂದು ಆಘಾತಕಾರಿ ಘಟನೆ ಐಐಟಿ ಬಾಂಬೆಯಲ್ಲಿ (IIT Bombay) ನಡೆದಿದೆ. ವಿದ್ಯಾರ್ಥಿನಿಯರ ವಸತಿ ನಿಲಯದ (Hostel) ಸ್ನಾನಗೃಹದಲ್ಲಿ ಕ್ಯಾಂಟೀನ್ ಕೆಲಸಗಾರನೊಬ್ಬ (Canteen Staff) ಇಣುಕಿ ನೋಡಿರುವ ಆರೋಪದಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

    ವರದಿಗಳ ಪ್ರಕಾರ, ವಿದ್ಯಾರ್ಥಿನಿಯೊಬ್ಬಳು ಸ್ನಾನಗೃಹದಲ್ಲಿದ್ದಾಗ ಆರೋಪಿ ಕಿಟಕಿಯ ಸೀಳುಗಳ ಮೂಲಕ ಇಣುಕಿ ನೋಡಿದ್ದಾನೆ. ವಿದ್ಯಾರ್ಥಿನಿಗೆ ತನ್ನನ್ನು ಯಾರೋ ನೋಡುತ್ತಿದ್ದಾರೆ ಎಂದು ತಿಳಿಯುತ್ತಿದ್ದಂತೆ ಕಿರುಚಿಕೊಂಡಿದ್ದಾಳೆ. ಬಳಿಕ ಹಾಸ್ಟೆಲ್‌ನ ಕ್ಯಾಂಟೀನ್ ಉದ್ಯೋಗಿ ವಿದ್ಯಾರ್ಥಿನಿಯರ ಸ್ನಾನ ಗೃಹದಲ್ಲಿ ಇಣುಕಿ ನೋಡಲು ಪ್ರಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಬ್ಯಾಂಕ್‍ಗೆ ರೈಫಲ್ ಹಿಡಿದು ನುಗ್ಗಿದ ಸನ್ಯಾಸಿ – ಸಾಲ ನೀಡದ್ದಕ್ಕೆ ಲೂಟಿ ಮಾಡೋದಾಗಿ ಬೆದರಿಕೆ

    ಇದೀಗ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಸದ್ಯ ಆರೊಪಿ ತನ್ನ ಫೋನ್‌ನಿಂದ ವಿದ್ಯಾರ್ಥಿನಿಯರ ಯಾವುದೇ ಖಾಸಗಿ ದೃಶ್ಯಗಳನ್ನು ಸೆರೆಹಿಡಿದಿಲ್ಲ. ನಾವು ವಿದ್ಯಾರ್ಥಿಗಳ ಪರವಾಗಿದ್ದೇವೆ, ನಮ್ಮ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಾವು ನಮ್ಮಿಂದಾಗುವ ಎಲ್ಲಾ ಪ್ರಯತ್ನವನ್ನು ಮಾಡುತ್ತೇವೆ ಎಂದು ಐಐಟಿ ಬಾಂಬೆ ತಿಳಿಸಿದೆ. ಇದನ್ನೂ ಓದಿ: ನೀರು ಕೇಳಿ ಮನೆಗೆ ನುಗ್ಗಿ ಬಲವಂತವಾಗಿ ಚುಂಬಿಸಿದ – ಫುಡ್ ಡೆಲಿವರಿ ಏಜೆಂಟ್ ಅರೆಸ್ಟ್

    ಇದೀಗ ವಿದ್ಯಾರ್ಥಿನಿಲಯದ ಕ್ಯಾಂಟೀನ್ ಅನ್ನು ಮುಚ್ಚಲಾಗಿದ್ದು, ಮಹಿಳಾ ಸಿಬ್ಬಂದಿಯನ್ನು ಮಾತ್ರವೇ ನೇಮಿಸಿ. ಬಳಿಕ ಮತ್ತೆ ಕ್ಯಾಂಟೀನ್ ಅನ್ನು ತೆರೆಯುತ್ತೇವೆ ಎಂದು ಸಂಸ್ಥೆ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಆ ಹುಡುಗ ನನ್ನ ಖಾಸಗಿ ವಿಡಿಯೋ ಶೂಟ್ ಮಾಡಿದ್ದೆ ತಪ್ಪು: ಸೋನು ಶ್ರೀನಿವಾಸ್ ಗೌಡ

    ಆ ಹುಡುಗ ನನ್ನ ಖಾಸಗಿ ವಿಡಿಯೋ ಶೂಟ್ ಮಾಡಿದ್ದೆ ತಪ್ಪು: ಸೋನು ಶ್ರೀನಿವಾಸ್ ಗೌಡ

    ಬಿಗ್ ಬಾಸ್ ಓಟಿಟಿ (Bigg Boss OTT) ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅವರ ಖಾಸಗಿ ವಿಡಿಯೋ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಯಿತು. ಅವರು ಬಿಗ್ ಬಾಸ್ ಮನೆಗೆ ಹೋದಾಗ ಆ ಕುರಿತು ಬಹಿರಂಗವಾಗಿಯೇ ಹೇಳಿಕೊಂಡರು. ಅಲ್ಲದೇ, ಆ ಹುಡುಗನ ಬಳಿ ಮತ್ತೊಂದು ವಿಡಿಯೋ ಇರುವುದಾಗಿಯೂ ತಿಳಿಸಿದ್ದರು. ಈ ವಿಷಯ ಕೇಳಿದ ಬಿಗ್ ಬಾಸ್ ಮನೆಯೇ ಶಾಕ್ ಗೆ ಒಳಗಾಗಿತ್ತು. ಈ ಕುರಿತು ಸೋನು ಮತ್ತೆ ಮಾತನಾಡಿದ್ದಾರೆ.

    ಖಾಸಗಿ ಸಂಗತಿಗಳು ಅಂದರೆ, ಇಬ್ಬರಲ್ಲೇ ಇರಬೇಕಾದದ್ದು. ಆದರೆ, ಆ ಹುಡುಗ ನಂಬಿಕೆ ದ್ರೋಹ ಮಾಡಿದ್ದಾನೆ ಎನ್ನುತ್ತಾರೆ ಸೋನು. ‘ನಾನು ಆ ಹುಡುಗನನ್ನು ನಂಬಿದ್ದೆ. ತುಂಬಾ ಇಷ್ಟ ಪಡುತ್ತಿದ್ದೆ. ಆದರೆ, ಅವನು ಆ ರೀತಿ ನಡೆದುಕೊಳ್ಳುತ್ತಾನೆ ಅಂತ ಅಂದುಕೊಂಡಿರಲಿಲ್ಲ. ಮೊದಲು ಆ ವಿಡಿಯೋವನ್ನು ಮಾಡಿಕೊಂಡಿದ್ದು ತಪ್ಪು. ಎರಡನೆಯದ್ದು ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದು ತಪ್ಪು. ಅದರಿಂದಾಗಿ ನನ್ನ ಮರ್ಯಾದೆ ಹೋಯಿತು ಅನ್ನುತ್ತಾರೆ.

    ಆ ವಿಡಿಯೋವನ್ನು (Private Video) ಅವನು ಹಾಕಿದ್ದಾನೋ ಅಥವಾ ಬೇರೆ ಯಾರಾದರೂ ಹಾಕಿದ್ದಾರೋ ಅದು ಬೇರೆ ವಿಚಾರ. ಆದರೆ, ಆ ಹುಡುಗ ವಿಡಿಯೋವನ್ನು ಶೂಟ್ ಮಾಡಿದ ಮೇಲೆ ಅಲ್ಲವೆ ಅಷ್ಟೊಂದು ಆಗಿದ್ದು? ಈ ರೀತಿ ಯಾವ ಹುಡುಗಿಗೂ ಮೋಸ ಆಗಬಾರದು. ಆ ಕಾರಣಕ್ಕಾಗಿಯೇ ನಾನು ಬಹಿರಂಗವಾಗಿಯೇ ಅದನ್ನು ಹೇಳಿದೆ. ಇಂತಹ ತಪ್ಪು ನಡೆಯಬಾರದು ಎನ್ನುವ ಕಾರಣಕ್ಕಾಗಿಯೇ ಎರಡನೇ ವಿಡಿಯೋ ಬಗ್ಗೆಯೂ ನಾನು ಮಾತನಾಡಿದೆ. ಇದನ್ನೂ ಓದಿ:`ಗಿಚ್ಚಿ ಗಿಲಿಗಿಲಿ’ ವಿನ್ನರ್ ಆದ ವನ್ಷಿಕಾ, ರನ್ನರ್ ಅಪ್ ಆಗಿ ನಿವೇದಿತಾ ಗೌಡ

    ಬಿಗ್ ಬಾಸ್ ಮನೆಯಲ್ಲಿ ಸಿಂಪತಿಗಾಗಿ ಇದನ್ನೆಲ್ಲ ಹೇಳಲಿಲ್ಲ ಎನ್ನುವ ಸೋನು, ಇಂತಹ ವಿಚಾರವನ್ನು ಹೇಳಿಕೊಂಡರೆ ನಮಗೆ ತಾನೆ ಕಷ್ಟ ಆಗೋದು. ಆದರೂ, ನಾನು ಹೇಳಿದೆ. ಕಾರಣ, ಮೋಸ (Cheat) ಹೇಗೆ ನಡೆಯುತ್ತದೆ ಎಂದು ತಿಳಿಸಲು. ಆ ಹುಡುಗ ಅಂತಲ್ಲ, ಯಾರೂ ಈ ಕೆಲಸವನ್ನು ಮಾಡಬಾರದು. ಒಂದೇ ಒಂದು ಸಲ ತಮ್ಮ ಮನೆಯ ಹೆಣ್ಣು ಮಕ್ಕಳನ್ನೂ ನೆನಪಿಸಿಕೊಳ್ಳಬೇಕು ಎನ್ನುವುದು ಸೋನು ಮಾತು.

    Live Tv
    [brid partner=56869869 player=32851 video=960834 autoplay=true]

  • ಆ ಹುಡುಗಿಯ ಖಾಸಗಿ ವಿಡಿಯೋ ಹಂಚಬೇಡಿ ಎಂದು ಕೇಳಿಕೊಂಡ ನಟ ಸೋನು ಸೋದ್

    ಆ ಹುಡುಗಿಯ ಖಾಸಗಿ ವಿಡಿಯೋ ಹಂಚಬೇಡಿ ಎಂದು ಕೇಳಿಕೊಂಡ ನಟ ಸೋನು ಸೋದ್

    ಚಂಡೀಗಡ (Chandigarh) ವಿಶ್ವ ವಿದ್ಯಾಲಯದ ವಿದ್ಯಾರ್ಥಿನಿಲಯದಲ್ಲಿ ನಡೆದಿದೆ ಎನ್ನಲಾದ ತಲೆತಗ್ಗಿಸುವ ಕೆಲಸ, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ವಿಶ್ವ ವಿದ್ಯಾಲಯದ ಆವರಣದಲ್ಲಿ ಈ ಘಟನೆಯ ಕುರಿತು ಪ್ರತಿಭಟಿಸಲಾಗುತ್ತಿದ್ದು, ತಪ್ಪತಸ್ಥರನ್ನು ಕೂಡಲೇ ಬಂಧಿಸಿ, ಉಗ್ರ ಶಿಕ್ಷೆ ನೀಡುವಂತೆ ಮನವಿ ಮಾಡಿಕೊಳ್ಳಲಾಗುತ್ತಿದೆ. ಅಲ್ಲದೇ ಇನ್ನೂ 60 ಹುಡುಗಿಯರು ಈ ಸಂಕಷ್ಟಕ್ಕೆ ಸಿಲುಕೊಳ್ಳಲಿದ್ದಾರೆ ಎನ್ನುವುದು ಮತ್ತಷ್ಟು ಆತಂಕ್ಕೆ ಕಾರಣವಾಗಿದೆ.

    ಚಂಡೀಗಡ ವಿವಿಯ (University)  ಹಾಸ್ಟೇಲ್ ನಲ್ಲಿ ಹುಡುಗಿಯೊಬ್ಬಳು, ಬಾತ್ ರೂಮ್ ಗೆ ಹೋಗುವ ಹುಡುಗಿಯರ ಖಾಸಗಿ ವಿಡಿಯೋಗಳನ್ನು (Private Video) ಚಿತ್ರಿಸಿ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾಳೆ. ಅಲ್ಲದೇ, 60ಕ್ಕೂ ಹೆಚ್ಚು ಇಂತಹ ವಿಡಿಯೋಗಳು ಇನ್ನೂ ಇವೆ ಎಂದು ಹೇಳಿದ್ದಾಳೆ ಎನ್ನಲಾಗುತ್ತಿದೆ. ಹಾಗಾಗಿ, ಯಾರದೆಲ್ಲ ವಿಡಿಯೋ ಆಚೆ ಬಂದು, ಇನ್ನೇನು ಆವಾಂತರ ಸೃಷ್ಟಿ ಆಗತ್ತೋ ಅನ್ನುವ ಆತಂಕ ವಿವಿ ಆವರಣದಲ್ಲಿರುವ ಹುಡುಗಿಯರದ್ದು. ಇದನ್ನೂ ಓದಿ:ಟಿವಿ ಬಿಗ್ ಬಾಸ್‌ಗೆ ಈ ಕಿರುತೆರೆ ನಟಿ ಬರೋದು ಪಕ್ಕಾ

    ಈ ವಿಷಯ ತಿಳಿಯುತ್ತಿದ್ದಂತೆಯೇ ನಟ ಸೋನು ಸೋದ್ (Sonu Sodh), ನೊಂದವರ ಬೆನ್ನಿಗೆ ನಿಂತಿದ್ದಾರೆ. ಅಲ್ಲದೇ, ಇಂತಹ ಯಾವುದೇ ವಿಡಿಯೋಗಳನ್ನು ನೋಡಬೇಡಿ ಮತ್ತು ಇತರರಿಗೆ ಕಳುಹಿಸಬೇಡಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ, ಈ ಕೃತ್ಯವನ್ನು ಖಂಡಿಸಿದ್ದಾರೆ. ಹೀನ ಮನಸ್ಥಿತಿಯವರನ್ನು ಸುಮ್ಮನೆ ಬಿಡಬೇಡಿ ಎಂದು ಮನವಿ ಮಾಡಿರುವ ಅವರು, ಹೆಣ್ಣು ಮಕ್ಕಳಿಗೆ ಗೌರವವನ್ನು ಕೊಡಿ ಎಂದು ವಿಶೇಷವಾಗಿ ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕನ್ನಡದ ‘ಹೆಬ್ಬುಲಿ’ ಸಿನಿಮಾದ ನಟಿಯ ಖಾಸಗಿ ವಿಡಿಯೋ ಲೀಕ್ ಬೆದರಿಕೆ, ಬಾಯ್ ಫ್ರೆಂಡ್ ವಿರುದ್ಧವೇ ದೂರು

    ಕನ್ನಡದ ‘ಹೆಬ್ಬುಲಿ’ ಸಿನಿಮಾದ ನಟಿಯ ಖಾಸಗಿ ವಿಡಿಯೋ ಲೀಕ್ ಬೆದರಿಕೆ, ಬಾಯ್ ಫ್ರೆಂಡ್ ವಿರುದ್ಧವೇ ದೂರು

    ಸುದೀಪ್ ನಟನೆಯ ಹೆಬ್ಬುಲಿ ಸಿನಿಮಾದ ನಾಯಕಿ ಅಮಲಾ ಪೌಲ್ ಅವರ ಖಾಸಗಿ ವಿಡಿಯೋವನ್ನು ಲೀಕ್ ಮಾಡುವುದಾಗಿ ಆಕೆಯ ಮಾಜಿ ಬಾಯ್ ಫ್ರೆಂಡ್ ಭವಿಂದರ್ ಸಿಂಗ್ ಬೆದರಿಕೆ ಹಾಕಿದ್ದಾರೆ ಎನ್ನುವ ಕಾರಣಕ್ಕಾಗಿ ಅಮಲಾ ದೂರು ನೀಡಿದ್ದರು. ಅಲ್ಲದೇ, ತನ್ನ ಮಾಜಿ ಬಾಯ್ ಫ್ರೆಂಡ್ ನಿಂದ ತಮಗೆ ಲೈಂಗಿಕ ಕಿರುಕುಳ ಆಗುತ್ತಿದೆ ಎಂದು ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದರು. ಈ ದೂರನ್ನು ಆಧರಿಸಿದ ಮಾಜಿ ಬಾಯ್ ಫ್ರೆಂಡ್ ಭವಿಂದರ್ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ.

    ಅಮಲಾ ಪೌಲ್ ತಮಿಳಿನ ಖ್ಯಾತ ನಿರ್ದೇಶಕ ಎ.ಎಲ್.ವಿಜಯ್ ಅವರನ್ನು ಮದುವೆಯಾಗಿದ್ದಾರು. ಹೊಂದಾಣಿಕೆ ಕಾರಣದಿಂದಾಗಿ ಅವರಿಂದ ಡಿವೋರ್ಸ್ ಪಡೆದಿದ್ದರು. ಆನಂತರ ಭವಿಂದರ್ ಸಿಂಗ್ ಸಾಂಗತ್ಯ ಬಯಸಿದ್ದರು. ಇಬ್ಬರೂ ಒಟ್ಟಿಗೆ ಸಿನಿಮಾದಲ್ಲಿ ಬಂಡವಾಳ ಕೂಡ ಹೂಡಿದ್ದರು. ಆನಂತರ ವ್ಯವಹಾರದಲ್ಲಿ ವೈಮನಸ್ಸು ಉಂಟಾಗಿ ಒಬ್ಬರಿಗೊಬ್ಬರು ದೂರವಾಗಿದ್ದರು. ಆ ವೇಳೆಯಲ್ಲಿಯ ವಿಡಿಯೋ ಅದು ಎನ್ನಲಾಗುತ್ತಿದ್ದು, ವಿಡಿಯೋಗಾಗಿ ಪೊಲೀಸರು ತಲಾಷೆ ನಡೆಸಿದ್ದಾರೆ. ಇದನ್ನೂ ಓದಿ:ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ‘ಗಂಡುಮಗ’ ಎಂದು ಹಾಡಿ ಹೊಗಳಿದ ಜಗ್ಗೇಶ್

    ವಿಡಿಯೋ ಇದೆ ಎಂದು ಹಣದ ಬೇಡಿಕೆ ಇಟ್ಟಿದ್ದಾನೆ ಎಂದು ಅಮಲಾ ದೂರಿನಲ್ಲಿ ಬರೆದಿದ್ದು, ತಾನು ಹೇಳಿದಂತೆ ಕೇಳಬೇಕು ಎಂದು ಹಿಂಸೆ ನೀಡುತ್ತಿರುವುದಾಗಿ ತಮಿಳುನಾಡಿನ ವಿಲ್ಲುಪುರಂ ಪೊಲೀಸರಿಗೆ ನೀಡಿದ ದೂರಿನಲ್ಲಿ ಅಮಲಾ ದಾಖಲಿಸಿದ್ದಾರೆ. ಅಲ್ಲದೇ, ಬಾಯ್ ಫ್ರೆಂಡ್ ನ ಹನ್ನೆರಡು ಜನ ಗೆಳೆಯರ ಮೇಲೂ ಅವರು ದೂರಿದ್ದಾರೆ. ಅವರಿಂದಲೂ ತಮಗೆ ಲೈಂಗಿಕ ಕಿರುಕುಳ ಆಗುತ್ತಿದೆ ಎಂದಿದ್ದಾರೆ.

    ಮತ್ತೊಂದು ಮೂಲಗಳ ಪ್ರಕಾರ ಅಮಲಾ ಪೌಲ್ ಮತ್ತು ಭವಿಂದರ್ ಸಿಂಗ್ ಕೇವಲ ಡೇಟಿಂಗ್ ಮಾಡುತ್ತಿರಲಿಲ್ಲ. ಎರಡು ವರ್ಷಗಳ ಹಿಂದೆಯೇ ಅವರು ಮದುವೆಯಾಗಿದ್ದಾರೆ ಎನ್ನುವ ಸುದ್ದಿಯೂ ಇತ್ತು. ಮದುವೆಯ ಫೋಟೋಗಳು ಕೂಡ ಲೀಕ್ ಆಗಿದ್ದವು. ತಾವು ಎರಡನೇ ಮದುವೆ ಆಗಿಲ್ಲ ಎಂದು ಅಮಲಾ ಹೇಳಿಕೊಂಡಿದ್ದರೂ, ಫೋಟೋಗಳು ಮಾತ್ರ ಅನುಮಾನ ಮೂಡಿಸಿದ್ದವು.

    Live Tv
    [brid partner=56869869 player=32851 video=960834 autoplay=true]

  • ದಂಪತಿ ಖಾಸಗಿ ವಿಡಿಯೋ ಇಟ್ಕೊಂಡು 15 ಲಕ್ಷಕ್ಕೆ ಅನಾಮಿಕ ಬೇಡಿಕೆ!

    ದಂಪತಿ ಖಾಸಗಿ ವಿಡಿಯೋ ಇಟ್ಕೊಂಡು 15 ಲಕ್ಷಕ್ಕೆ ಅನಾಮಿಕ ಬೇಡಿಕೆ!

    ಬೆಂಗಳೂರು: ಅನಾಮಿಕ ವ್ಯಕ್ತಿಯೊಬ್ಬ ದಂಪತಿಯ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಕೆ ಹಾಕಿರುವ ಘಟನೆ ಬೆಂಗಳೂರಿನ ಬಂಡೆಪಾಳ್ಯದಲ್ಲಿ ನಡೆದಿದೆ. ಅನಾಮಿಕ ವ್ಯಕ್ತಿ ದಂಪತಿಗೆ ಪದೇ ಪದೇ ಕರೆ ಮಾಡಿ ಹಣವನ್ನು ಕೊಡಬೇಕೆಂದು ಬೆದರಿಕೆ ಹಾಕಿದ್ದಾನೆ.

    ನಿಮ್ಮ ಖಾಸಗಿ ವಿಡಿಯೋ ನನ್ನ ಬಳಿ ಇದೆ. ನೀವು ನನಗೆ 15 ಲಕ್ಷ ರೂ. ಹಣವನ್ನು ಕೊಡಬೇಕು. ಇಲ್ಲದೇ ಹೋದರೆ ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಆಪ್‍ಲೋಡ್ ಮಾಡುವುದಾಗಿ ಹೇಳಿದ್ದಾನೆ.

    ಪ್ರಕರಣದಲ್ಲಿ ಕರೆ ಮಾಡುತ್ತಿರುವ ಇರೋ ವ್ಯಕ್ತಿ ಯಾರು? ಆತನಿಗೆ ಆ ವಿಡಿಯೋ ಹೇಗೆ ಸಿಕ್ಕಿತು ಎಂಬ ಪ್ರಶ್ನೆ ಮೂಡಿದೆ. ಪದೇ ಪದೇ ಬೇರೆ ಬೇರೆ ನಂಬರ್ ಗಳಿಂದ ಕರೆ ಮಾಡುವ ಅನಾಮಿಕ ವ್ಯಕ್ತಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ. ಆದರೆ ವ್ಯಕ್ತಿ ತನ್ನ ಬಗ್ಗೆ ಮಾತ್ರ ಯಾವುದೇ ಮಾಹಿತಿ ಹಾಗೂ ಗುರುತು ಮಾತ್ರ ಬಿಟ್ಟುಕೊಟ್ಟಿಲ್ಲ .

    ಅನಾಮಿಕನ ಕರೆಗೆ ಬೆದರಿದ ದಂಪತಿ ಮೊದಲು ಹಣ ಕೊಡಲು ಮುಂದಾಗಿದ್ದರು. ಆದರೆ ಆದರೆ ಅನಾಮಿಕ ವ್ಯಕ್ತಿಯ ಬಗ್ಗೆ ಅನುಮಾನ ಇದ್ದಿದ್ದರಿಂದ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಬಂಡೆಪಾಳ್ಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಅನಾಮಿಕನಿಗಾಗಿ ಹುಡುಕಾಟ ನಡೆಸಿದ್ದಾರೆ.