Tag: ಗಂಗಾ ನದಿ

  • ಗಂಗೆ ನಿಮ್ಮ ಪಾದವನ್ನು ಸ್ಪರ್ಶಿಸುತ್ತಿದ್ದಾಳೆ, ಇದು ನಿಮ್ಮನ್ನು ನೇರವಾಗಿ ಸ್ವರ್ಗಕ್ಕೆ ಕರೆದೊಯ್ಯುತ್ತೆ – ಯುಪಿ ಸಚಿವ ವಿವಾದಾತ್ಮಕ ಹೇಳಿಕೆ

    ಗಂಗೆ ನಿಮ್ಮ ಪಾದವನ್ನು ಸ್ಪರ್ಶಿಸುತ್ತಿದ್ದಾಳೆ, ಇದು ನಿಮ್ಮನ್ನು ನೇರವಾಗಿ ಸ್ವರ್ಗಕ್ಕೆ ಕರೆದೊಯ್ಯುತ್ತೆ – ಯುಪಿ ಸಚಿವ ವಿವಾದಾತ್ಮಕ ಹೇಳಿಕೆ

    -ನಮ್ಮ ಜೊತೆ ಇಲ್ಲೇ ಇದ್ದು ಗಂಗೆಯ ಆಶೀರ್ವಾದ ಪಡೆಯಿರಿ ಎಂದು ಸಚಿವರಿಗೆ ಹೇಳಿದ ವೃದ್ಧ ಮಹಿಳೆ

    ಲಕ್ನೋ: ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ, ವಿಶೇಷವಾಗಿ ಗಂಗಾ ನದಿಯುದ್ದಕ್ಕೂ ಪ್ರವಾಹ ಪರಿಸ್ಥಿತಿ ಉದ್ಭವಿಸಿದೆ. ಪ್ರವಾಹ ಪೀಡಿತ ಕಾನ್ಪುರದ ದೇಹತ್ ಪ್ರದೇಶಕ್ಕೆ ರಾಜ್ಯ ಕ್ಯಾಬಿನೆಟ್ ಸಚಿವ ಸಂಜಯ್ ನಿಶಾದ್ (Sanjay Nishad) ಅವರು ಪರಿಶೀಲನೆಗಾಗಿ ತೆರಳಿದ್ದರು. ಈ ವೇಳೆ ವಿವಾದಾತ್ಮಕ ಹೇಳಿಕೆಯೊಂದು ನೀಡಿ ಟೀಕೆಗೆ ಗುರಿಯಾಗಿದ್ದಾರೆ.

    ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನಡೆಯುವ ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ಜವಾಬ್ದಾರಿಯನ್ನು ನಿಶಾದ್ ಅವರಿಗೆ ವಹಿಸಲಾಗಿತ್ತು. ಈ ಹಿನ್ನೆಲೆ ಸಚಿವ ಸಂಜಯ್ ನಿಶಾದ್ ಅವರು ಕಾನ್ಪುರ ದೇಹತ್‌ನ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ತಮ್ಮ ಸಂಕಷ್ಟವನ್ನು ಸಚಿವರ ಮುಂದೆ ಹೇಳಿಕೊಂಡಿದ್ದಾರೆ.ಇದನ್ನೂ ಓದಿ: ಡಿಕೆಶಿ ಶ್ರಮ, ಹೋರಾಟಕ್ಕೆ ಪ್ರತಿಫಲ ಸಿಗಬೇಕು: ಇಕ್ಬಾಲ್ ಹುಸೇನ್

    ಈ ವೇಳೆ ಸಚಿವರು ಮಾತನಾಡಿ, ನೀವು ಗಂಗೆಯ ಮಕ್ಕಳು, ಗಂಗಾ ನದಿ ನಿಮ್ಮ ಪಾದಗಳನ್ನು ಸ್ವಚ್ಛಗೊಳಿಸಲು ನಿಮ್ಮ ಮನೆ ಬಾಗಿಲಿಗೆ ಬಂದಿದ್ದಾಳೆ. ಇದು ನಿಮ್ಮನ್ನು ನೇರವಾಗಿ ಸ್ವರ್ಗಕ್ಕೆ ಕರೆದೊಯ್ಯುತ್ತದೆ ಎಂದು ಪ್ರವಾಹ ಪೀಡಿತ ಗ್ರಾಮಸ್ಥರಿಗೆ ಹೇಳಿದ್ದಾರೆ. ಈ ಕುರಿತ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

    ಈ ವೇಳೆ ತಂಡದಲ್ಲಿದ್ದ ಓರ್ವ ಮಹಿಳೆ ಸಚಿವರ ಹೇಳಿಕೆಗಳನ್ನು ವೃದ್ಧ ಮಹಿಳೆಗೆ ವಿವರಿಸಲು ಪ್ರಯತ್ನಿಸಿದರು. ಈ ವೇಳೆ ಆ ವೃದ್ಧ ಮಹಿಳೆ, ನಮ್ಮ ಜೊತೆ ಇಲ್ಲೇ ಇದ್ದು ಗಂಗಾ ನದಿಯ ಆಶೀರ್ವಾದವನ್ನು ನೀವು ಕೂಡ ಪಡೆದುಕೊಳ್ಳಿ ಎಂದು ಪ್ರತ್ಯುತ್ತರ ನೀಡಿದ್ದಾರೆ. ಈ ಕುರಿತ ವೀಡಿಯೊ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.

    ಇದರ ಬೆನ್ನಲ್ಲೇ ಸಚಿವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಪ್ರವಾಹ ಒಂದು ನೈಸರ್ಗಿಕ ವಿಕೋಪ ಮತ್ತು ಸರ್ಕಾರ ಜನರಿಗೆ ತನ್ನಿಂದ ಸಾಧ್ಯವಿರುವ ಎಲ್ಲ ಸಹಾಯವನ್ನೂ ಮಾಡುತ್ತಿದೆ. ನಾವು ಅವರಿಗೆ ಆಹಾರ ಪೊಟ್ಟಣಗಳನ್ನು, ಬೇಯಿಸಿದ ಆಹಾರವನ್ನು ನೀಡುತ್ತಿದ್ದೇವೆ. ನಾವು ಅವರಿಗೆ ಧೈರ್ಯವನ್ನು ನೀಡಬೇಕು. ಅದಕ್ಕಾಗಿ ನಾನು ಅವರಿಗೆ ಆ ಮಾತುಗಳನ್ನು ಹೇಳಿದೆ. ನಾವು ನೀರನ್ನು ನಿಲ್ಲಿಸಲು ಸಾಧ್ಯವಿಲ್ಲ ಮತ್ತು ಇದು ಒಂದು ದಿನ ಅಥವಾ ಒಂದು ವರ್ಷದ ಸಮಸ್ಯೆಯಲ್ಲ. ನಾನು ಅವರಿಗೆ ಭಾವನಾತ್ಮಕ ಬೆಂಬಲವನ್ನು ನೀಡಲು ಪ್ರಯತ್ನಿಸಿದೆ ಎಂದು ಹೇಳಿಕೊಂಡಿದ್ದಾರೆ.ಇದನ್ನೂ ಓದಿ: ವಿಜಯಪುರ | ನಿರಂತರ ಮಳೆಗೆ ಸರ್ಕಾರಿ ಶಾಲೆ ಜಲಾವೃತ – ವಿದ್ಯಾರ್ಥಿಗಳ ಪರದಾಟ

  • ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ – ಹರಿದ್ವಾರದಲ್ಲಿ ಸಚಿವ ಚಲುವರಾಯಸ್ವಾಮಿ ನೇತೃತ್ವದ ನಿಯೋಗ

    ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ – ಹರಿದ್ವಾರದಲ್ಲಿ ಸಚಿವ ಚಲುವರಾಯಸ್ವಾಮಿ ನೇತೃತ್ವದ ನಿಯೋಗ

    -ದಸರಾ ವೇಳೆಗೆ ಕಾವೇರಿ ಆರತಿ ಶುರು ಮಾಡುವ ಪ್ರಯತ್ನ

    ಬೆಂಗಳೂರು: ಉತ್ತರ ಭಾರತದಲ್ಲಿ (North India) ನಡೆಯುವ ಗಂಗಾರತಿ (Gangarathi) ಮಾದರಿಯಲ್ಲಿಯೇ ರಾಜ್ಯದಲ್ಲಿ ಕಾವೇರಿ ಆರತಿ ನಡೆಸಲು ತಯಾರಿ ಆರಂಭವಾಗಿದೆ. ಸಂಬಂಧ ಅಧ್ಯಯನ ನಡೆಸಲು ಸಚಿವ ಚಲುವರಾಯಸ್ವಾಮಿ (Cheluvarayaswamy) ನೇತೃತ್ವದ ನಿಯೋಗ ಹರಿದ್ವಾರ ಮತ್ತು ವಾರಾಣಾಸಿಗೆ ತೆರೆಳಿದೆ. ನಿನ್ನೆ ಹರಿದ್ವಾರಕ್ಕೆ ತೆರಳಿರುವ ನಿಯೋಗ ವಿಶೇಷ ಗಂಗಾರತಿಯಲ್ಲಿ ಭಾಗಿಯಾಗಿ ಪೂಜೆ ನಡೆಸಿತು ಮತ್ತು ಆರತಿ ಮೇಲುಸ್ತುವಾರಿ ನೋಡಿಕೊಳ್ಳುವ ಹಿಂದೂ ಸಭಾ ಜೊತೆ ಸಭೆ ನಡೆಸಿದ್ದು, ಹಲವು ಅನುಮಾನಗಳಿಗೆ ಸ್ಪಷ್ಟನೆ ಪಡೆದುಕೊಂಡಿದೆ.

    ಗಂಗೆಯಷ್ಟೇ ಪವಿತ್ರ ನದಿ ಕಾವೇರಿ (Kaveri) ಎಂಬ ನಿಟ್ಟಿನಲ್ಲಿ ಕಾವೇರಿ ಆರತಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಹಾಗಾಗಿ ಸಚಿವ ಚಲುವರಾಯಸ್ವಾಮಿ ನೇತೃತ್ವದ ನಿಯೋಗ ಕಾವೇರಿ ಆರತಿಯ ರೂಪುರೇಷೆ ತಯಾರಿಸಲಿದೆ. ಇದಕ್ಕಾಗಿ ನಿಯೋಗ ಹರಿದ್ವಾರ ಹಾಗೂ ವಾರಣಾಸಿಯಲ್ಲಿ ಅಧ್ಯಯನ ನಡೆಸಿ ವರದಿ ತಯಾರಿಸಲಿದ್ದು, ಇದರ ಭಾಗವಾಗಿ ಮೊದಲು ಹರಿದ್ವಾರಕ್ಕೆ ಭೇಟಿ ನೀಡಿತು. ಹರ್ ಕೀ ಪೌಡಿ ಘಾಟ್‌ನಲ್ಲಿ ನಡೆಯುವ ಆರತಿ ಕಾರ್ಯಕ್ರಮದಲ್ಲಿ ನಿಯೋಗ ಭಾಗಿಯಾಯಿತು. ಸಚಿವ ಚಲುವರಾಯಸ್ವಾಮಿ ಆದಿಯಾಗಿ ಎಲ್ಲ ಸದಸ್ಯರು ವಿಶೇಷ ಆರತಿ ಮಾಡಿ, ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿದರು. ಬಳಿಕ ಆರತಿ ನಡೆಯುವ ರೀತಿ ರಿವಾಜುಗಳನ್ನು ಪರಿಶೀಲಿಸಿದರು.ಇದನ್ನೂ ಓದಿ: ‘ದಳಪತಿ 69’ ಅಸಲಿ ಸ್ಟೋರಿ ರಿವೀಲ್- ಕಮಲ್ ಹಾಸನ್‌ಗೆ ಹೇಳಿದ್ದ ಕಥೆಯಲ್ಲಿ ವಿಜಯ್?

    ಬಳಿಕ ಆರತಿ ಮೇಲುಸ್ತುವಾರಿ ನೋಡಿಕೊಳ್ಳುವ ಹಿಂದೂ ಸಭಾ ಆಡಳಿತ ಸಮಿತಿ ಜೊತೆಗೆ ಮಾತುಕತೆ ನಡೆಸಿದ ನಿಯೋಗ ಕರ್ನಾಟಕ ಸರ್ಕಾರದ ಪ್ರಸ್ತಾವನೆ ಬಗ್ಗೆ ತಿಳಿಸಿದರು. ಇದಕ್ಕೆ ಖುಷಿ ವ್ಯಕ್ತಪಡಿಸಿದ ಆಡಳಿತ ಸಮಿತಿ ಕಾರ್ಯದರ್ಶಿ ತನ್ಮಯ ವಶಿಷ್ಠ, ಗಂಗಾರತಿ ರೀತಿಯಲ್ಲಿ ಕಾವೇರಿ ಆರತಿ ಮಾಡುವುದು ಖುಷಿಯ ಸಂಗತಿ ಎಂದರು.

    ಗಂಗಾರತಿ ಬಳಿಕ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಗಂಗಾನದಿಯಂತೆ ಕಾವೇರಿ ನದಿ ಕೂಡಾ ಜೀವ ನದಿಯಾಗಿದೆ. ಅದಕ್ಕಾಗಿ ಇಲ್ಲಿಯೂ ಆರತಿ ಮಾಡಲು ನಿರ್ಧರಿಸಿದ್ದು, ಡಿಸಿಎಂ ಶಿ.ಕೆ ಶಿವಕುಮಾರ್ ನಿರ್ದೇಶನದ ಮೇರೆಗೆ ಈ ಬಗ್ಗೆ ನಮ್ಮ ಅಧಿಕಾರಿಗಳು ಜನಪ್ರತಿನಿಧಿಗಳೊಂದಿಗೆ ಅಧ್ಯಯನಕ್ಕೆ ಬಂದಿದ್ದೇವೆ. ಸಾಧ್ಯವಾದಷ್ಟು ಬೇಗ ಆರತಿ ಶುರು ಮಾಡಬೇಕು ಅಂದುಕೊಂಡಿದ್ದು, ದಸರಾದೊಳಗೆ ನಾವು ಶುರು ಮಾಡುವ ಪ್ರಯತ್ನ ಮಾಡಲಾಗುತ್ತಿದೆ. ಒಮ್ಮೆ ಆರತಿಯನ್ನು ಶುರು ಮಾಡಿದರೆ ನಿಲ್ಲಿಸುವ ಮಾತಿಲ್ಲ ಎಂದಿದ್ದಾರೆ.

    ಇನ್ನು ಸಮಿತಿಯೂ ಶನಿವಾರ ವಾರಣಾಸಿಗೆ ತೆರಳಲಿದ್ದು, ಅಲ್ಲೂ ಗಂಗಾರತಿಯನ್ನು ನೋಡಿಕೊಂಡು ಬೆಂಗಳೂರಿಗೆ (Bengaluru) ವಾಪಸ್ ಬರಲಿದ್ದಾರೆ. ಬಳಿಕ ಈ ಬಗ್ಗೆ ವಿಸ್ತೃತ ವರದಿಯನ್ನು ಸರ್ಕಾರಕ್ಕೆ ನೀಡಲಿದೆ.ಇದನ್ನೂ ಓದಿ: ಬೆಳ್ತಂಗಡಿ: ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

  • ಹಿಮಾಚಲ, ಉತ್ತರಾಖಂಡದಲ್ಲಿ ವರುಣನ ಆರ್ಭಟ – 54 ಮಂದಿ ಸಾವು

    ಹಿಮಾಚಲ, ಉತ್ತರಾಖಂಡದಲ್ಲಿ ವರುಣನ ಆರ್ಭಟ – 54 ಮಂದಿ ಸಾವು

    ನವದೆಹಲಿ: ಹಿಮಾಚಲ ಪ್ರದೇಶ (Himachal) ಮತ್ತು ಉತ್ತರಾಖಂಡ (Uttarakhand) ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು (Rain), ಈವರೆಗೂ 54 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹಿಮಾಚಲ ಪ್ರದೇಶ ಒಂದರಲ್ಲಿ 51 ಜನ ಸಾವನ್ನಪ್ಪಿದ್ದು, ಉತ್ತರಾಖಂಡದಲ್ಲಿ 3 ಜನ ಮೃತಪಟ್ಟಿದ್ದಾರೆ.

    ಶಿಮ್ಲಾದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಭೂ ಕುಸಿತದಲ್ಲಿ (Landslide) ಈವರೆಗೂ 14 ಶವಗಳನ್ನು ಹೊರತೆಗೆಯಲಾಗಿದೆ. ಸಮ್ಮರ್ ಹಿಲ್ ಪ್ರದೇಶದ ಶಿವ ದೇವಾಲಯದ ಅವಶೇಷಗಳ ಅಡಿಯಲ್ಲಿ ಇನ್ನೂ ಹೆಚ್ಚಿನ ಜನರು ಸಿಲುಕಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಕ್ಕಳಾಗಿಲ್ಲ ಅಂತ ದೇವರ ಮೊರೆ ಹೋಗಿದ್ದ 24ರ ವಿವಾಹಿತೆ 54ರ ಪೂಜಾರಿ ಜೊತೆಯೇ ಜೂಟ್!

    ಮಂಡಿ ಜಿಲ್ಲೆಯಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ 19 ಮಂದಿ ಸಾವನ್ನಪ್ಪಿದ್ದಾರೆ. ಸೋಲನ್ ಜಿಲ್ಲೆಯಲ್ಲಿ ಒಂದು ಕುಟುಂಬದ ಏಳು ಸದಸ್ಯರು ಸೇರಿದಂತೆ 11 ಜನರು ಸಾವನ್ನಪ್ಪಿದ್ದಾರೆ. ಕುಲು, ಕಿನ್ನೌರ್, ಲಾಹೌಲ್ ಮತ್ತು ಸ್ಪಿತಿ ಹೊರತುಪಡಿಸಿ ರಾಜ್ಯದ 12 ಜಿಲ್ಲೆಗಳ ಪೈಕಿ ಒಂಬತ್ತು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ಜಿಲ್ಲಾಧಿಕಾರಿ ಅರಿಂದಮ್ ಚೌಧರಿ ತಿಳಿಸಿದ್ದಾರೆ.

    ಯುನೆಸ್ಕೋ ವಿಶ್ವ ಪರಂಪರೆಯ ಶಿಮ್ಲಾ-ಕಲ್ಕಾ ರೈಲು ಮಾರ್ಗವು ಶಿಮ್ಲಾದ ಸಮ್ಮರ್ ಹಿಲ್ ಬಳಿ 50 ಮೀಟರ್ ಸೇತುವೆ, ಭೂಕುಸಿತದಿಂದ ಹಾನಿಗೊಳಗಾಗಿದೆ. ಟ್ರ್ಯಾಕ್‍ನ ಒಂದು ಭಾಗ ನೇತಾಡುತ್ತಿದೆ. ಈ ಭಾಗದಲ್ಲಿ ಸೇನೆ, ಎಸ್‍ಡಿಆರ್‍ಎಫ್, ಎನ್‍ಡಿಆರ್‍ಎಫ್, ಐಟಿಬಿಪಿ ಮತ್ತು ರಾಜ್ಯ ಪೊಲೀಸ್ ಸಿಬ್ಬಂದಿ ಪರಿಹಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಅಲ್ಲದೇ ಉತ್ತರಾಖಂಡದಲ್ಲಿ 10 ಮಂದಿ ನಾಪತ್ತೆಯಾಗಿದ್ದಾರೆ. ಭೂಕುಸಿತ ಸಹ ಸಂಭವಿಸಿದ್ದು ಬದರಿನಾಥ್, ಕೇದಾರನಾಥ ಮತ್ತು ಗಂಗೋತ್ರಿ ದೇಗುಲಗಳಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಗಳ ಸಂಪರ್ಕ ಕಡಿತವಾಗಿದೆ. ಇದರ ಬೆನ್ನಲ್ಲೇ ಚಾರ್ಧಾಮ್ ಯಾತ್ರೆಯನ್ನು ಎರಡು ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ.

    ಕೇದಾರನಾಥ ಟ್ರೆಕ್ ಮಾರ್ಗದಲ್ಲಿ ಲಿಂಚೋಲಿಯಲ್ಲಿ ಕ್ಯಾಂಪ್‍ಗೆ ಭೂಕುಸಿತ ಸಂಭವಿಸಿದ್ದು, ನಾಲ್ಕು ಅಂಗಡಿಗಳಿಗೆ ಹಾನಿಯಾಗಿದೆ. ಇದರಲ್ಲಿ ನೇಪಾಳದ ಒಬ್ಬ ಪ್ರಜೆ ಸಾವನ್ನಪ್ಪಿದ್ದಾರೆ. ಒಬ್ಬ ವ್ಯಾಪಾರಿ ನಾಪತ್ತೆಯಾಗಿದ್ದಾರೆ. ಋಷಿಕೇಶದ ಶಿವ ದೇವಾಲಯ ಮತ್ತು ಮೀರಾನಗರ ಪ್ರದೇಶಗಳ ಬಳಿ ಹೊಳೆಗಳಿಂದಲೂ ಎರಡು ಮೃತದೇಹಗಳನ್ನು ಮೇಲೆತ್ತಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಋಷಿಕೇಶ-ಕರ್ಣಪ್ರಯಾಗ ರೈಲು ಮಾರ್ಗ ಯೋಜನೆಯ `ಎಡಿಟ್ II’ ಎಂಬ ಹೆಸರಿನ ಸುರಂಗದಲ್ಲಿ ನೀರು ನುಗ್ಗಿ 114 ಕಾರ್ಮಿಕರು ಸಿಲುಕಿಕೊಂಡಿದ್ದರು. ಪೊಲೀಸರು ಸ್ಥಳಕ್ಕೆ ಧಾವಿಸಿ ಸುರಂಗದೊಳಗೆ ಸಂಗ್ರಹವಾದ ನೀರನ್ನು ಹೊರಹಾಕಿದ್ದಾರೆ. ಬಳಿಕ ಎಲ್ಲಾ 114 ಕಾರ್ಮಿಕರನ್ನು ಹಗ್ಗಗಳ ಸಹಾಯದಿಂದ ರಕ್ಷಿಸಲಾಗಿದೆ.

    ತೆಹ್ರಿ, ಹರಿದ್ವಾರ ಮತ್ತು ಋಷಿಕೇಶದಲ್ಲಿ ಗಂಗಾ (Ganga River) ಸೇರಿದಂತೆ ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಹರಿದ್ವಾರದಲ್ಲಿ ಗಂಗಾ ನದಿಯು 295.60 ಮೀಟರ್, ಅಪಾಯದ ಮಟ್ಟಕ್ಕಿಂತ 1.60 ಮೀಟರ್ ಎತ್ತರದಲ್ಲಿ ಹರಿಯುತ್ತಿರುವುದರಿಂದ ಪರಿಸ್ಥಿತಿ ಆತಂಕಕಾರಿಯಾಗಿದೆ. ಗಂಗಾ ನದಿಯಿಂದ ಹರಿದ್ವಾರದ ಬೈರಾಗಿ ಶಿಬಿರಕ್ಕೂ ನೀರು ನುಗ್ಗಿದೆ. ರುದ್ರಪ್ರಯಾಗ, ಶ್ರೀನಗರ, ದೇವಪ್ರಯಾಗದ ಅಲಕನಂದಾ, ಮಂದಾಕಿನಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ಎಂದು ಡೆಹ್ರಾಡೂನ್‍ನ ವಿಪತ್ತು ನಿಯಂತ್ರಣಾಲಯ ತಿಳಿಸಿದೆ. ಇದನ್ನೂ ಓದಿ: ತಾಯಿ, ಸಹೋದರಿಯರಿಗೆ ಅವಮಾನ – ದೇಶವೇ ಮಣಿಪುರದೊಂದಿಗೆ ನಿಂತಿದೆ: ಮೋದಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉದ್ದೇಶಪೂರ್ವಕವಾಗಿಯೇ ಕೆಡವಲಾಗಿದೆ: 1700 ಕೋಟಿಯ ಸೇತುವೆ ಕುಸಿತಕ್ಕೆ ಬಿಹಾರ ಡಿಸಿಎಂ ಸಮರ್ಥನೆ

    ಉದ್ದೇಶಪೂರ್ವಕವಾಗಿಯೇ ಕೆಡವಲಾಗಿದೆ: 1700 ಕೋಟಿಯ ಸೇತುವೆ ಕುಸಿತಕ್ಕೆ ಬಿಹಾರ ಡಿಸಿಎಂ ಸಮರ್ಥನೆ

    ಪಾಟ್ನಾ: ಗಂಗಾ ನದಿಗೆ (Ganga River) ನಿರ್ಮಿಸಲಾಗುತ್ತಿದ್ದ ಸೇತುವೆಯನ್ನು ಉದ್ದೇಶಪೂರ್ವಕವಾಗಿಯೇ ಕೆಡವಲಾಗಿದೆ ಎಂದು ಬಿಹಾರ ಡಿಸಿಎಂ ತೇಜಸ್ವಿ ಯಾದವ್ (Bihar DCM Tejashwi Yadav) ಹೇಳಿರುವುದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

    ತೇಜಸ್ವಿ ಯಾದವ್‌ ಪ್ರತಿಕ್ರಿಯಿಸಿ,  ಕಳೆದ ವರ್ಷದ ಏಪ್ರಿಲ್ 30ರಂದು ಈ ಸೇತುವೆಯ ಒಂದು ಭಾಗ ಕುಸಿದ ಬಳಿಕ ನಾವು ಐಐಟಿ-ರೂರ್ಕಿಯನ್ನು ಸಂಪರ್ಕಿಸಿದೆವು. ಇವರು ನಡೆಸಿದ ಅಂತಿಮ ವರದಿ ಇನ್ನೂ ಕೈಸೇರಬೇಕಿದೆ. ಆದರೆ ಸೇತುವೆಯ ರಚನೆಯನ್ನು ಅಧ್ಯಯನ ಮಾಡಿದ ತಜ್ಞರು ಗಂಭೀರ ದೋಷಗಳಿವೆ ಎಂದು ನಮಗೆ ತಿಳಿಸಿದ್ದರು ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ನಿಮಗೆ ಉಚಿತ ವಿದ್ಯುತ್‌ ಬೇಕೇ ?- ಷರತ್ತು ಓದಿ ನೋಂದಣಿ ಮಾಡಿ

    1,700 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದ ಈ ಸೇತುವೆಯನ್ನು ಉದ್ದೇಶಪೂರ್ವಕವಾಗಿಯೇ ಉರುಳಿಸಿದ್ದೇವೆ ಎಂಬ ಡಿಸಿಎಂ ಹೇಳಿಕೆ ವಿಪಕ್ಷಗಳಿಗೆ ಆಹಾರವಾಗಿದ್ದು ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ನಿರ್ಮಾಣದ ಹೊಣೆ ಹೊತ್ತಿರುವ ಎಸ್‍ಪಿ ಸಿಂಗ್ಲಾ ಕಂಪನಿ ವಿರುದ್ಧ ಸೂಕ್ತ ಕ್ರಮ ಜರುಗಿಸಿ ಎಂದು ಅಧಿಕಾರಿಗಳಿಗೆ ಸಿಎಂ ನಿತೀಶ್ ಕುಮಾರ್ ಆದೇಶ ನೀಡಿದ್ದಾರೆ.

    ಬಿಹಾರದ ಖಗರಿಯಾದಲ್ಲಿ ನಿರ್ಮಿಸಲಾಗುತ್ತಿದ್ದ ಅಗುವನಿ ಸುಲ್ತಾನ್‌ಗಂಜ್ ಗಂಗಾ (Bhagalpur’s Sultanganj) ಸೇತುವೆ ಭಾನುವಾರ ಕುಸಿದು ಬಿದ್ದಿತ್ತು. ಏಪ್ರಿಲ್‌ನಲ್ಲಿ ಸುರಿದಿದ್ದ ಬಿರುಗಾಳಿ ಸಹಿತ ಭಾರೀ ಮಳೆಯ ಪರಿಣಾಮ ಸೇತುವೆಗೆ ಹಾನಿಯಾಗಿತ್ತು. ಏಪ್ರಿಲ್‌ನಲ್ಲಿ ಸೇತುವೆಗೆ ಹಾನಿಯಾಗಿದ್ದಾಗ ಕಳಪೆ ಕಾಮಗಾರಿಯ ಆರೋಪಗಳು ಕೇಳಿಬಂದಿದ್ದವು. ಆದರೂ ಸೇತುವೆ ನಿರ್ಮಾಣಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಎಚ್ಚೆತ್ತುಕೊಂಡಿರಲಿಲ್ಲ. ಹೀಗಾಗಿ ನಿರ್ಮಾಣಹಂತದಲ್ಲಿದ್ದಾಗಲೇ ಸೇತುವೆ ಕುಸಿದಿದೆ.

    ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಕನಸಿನ ಯೋಜನೆ ಇದಾಗಿದ್ದು 2014ರ ಫೆಬ್ರವರಿ 23 ರಂದು ಖಗಾರಿಯಾ ಜಿಲ್ಲೆಯ ಪರ್ಬಟ್ಟಾದಲ್ಲಿ ಶಂಕುಸ್ಥಾಪನೆ ನಡೆದಿತ್ತು. ಈ ಕಾಮಗಾರಿ ಪೂರ್ಣಗೊಳಿಸಲು ಹಲವು ಬಾರಿ ಡೆಡ್‌ಲೈನ್‌ ನಿಗದಿ ಮಾಡಿದ್ದರೂ ಪೂರ್ಣಗೊಂಡಿಲ್ಲ. 3.16 ಕಿ.ಮೀ ಉದ್ದದ ಸೇತುವೆ ನಿರ್ಮಾಣದ ಕಾಮಗಾರಿಯ ಗುತ್ತಿಗೆಯನ್ನು ಹರ್ಯಾಣ ಮೂಲದ ಕಂಪನಿ ಗುತ್ತಿಗೆ ಪಡೆದುಕೊಂಡಿತ್ತು.

  • ಕುಸಿದೇ ಬಿಡ್ತು 1,700 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದ ಸೇತುವೆ

    ಕುಸಿದೇ ಬಿಡ್ತು 1,700 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದ ಸೇತುವೆ

    ಪಾಟ್ನಾ: ಬರೋಬ್ಬರಿ 1,700 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದ ಸೇತುವೆಯೊಂದು (Bridge) ಕುಸಿದು ಬಿದ್ದಿರುವ ಘಟನೆ ಬಿಹಾರದಲ್ಲಿ (Bihar) ನಡೆದಿದೆ.

    ಬಿಹಾರದ ಖಗರಿಯಾದಲ್ಲಿ ನಿರ್ಮಿಸಲಾಗುತ್ತಿದ್ದ ಅಗುವನಿ ಸುಲ್ತಾನ್‌ಗಂಜ್ ಗಂಗಾ ಸೇತುವೆ ಭಾನುವಾರ ಕುಸಿದು ನೀರುಪಾಲಾಗಿದೆ. ಘಟನೆಯಲ್ಲಿ ಸದ್ಯ ಯಾವುದೇ ಪ್ರಾಣಹಾನಿಯಾಗಿಲ್ಲ. ಸ್ಥಳೀಯರು ಸೇತುವೆ ಕುಸಿದು (Bridge Collapse) ಬೀಳುತ್ತಿರುವ ವೀಡಿಯೋಗಳನ್ನು ಸೆರೆಹಿಡಿದ್ದು, ಇವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

    ಸೇತುವೆಯನ್ನು ಖಗಾರಿಯಾ, ಆಗುವನಿ ಮತ್ತು ಸುಲ್ತಾನ್‌ಗಂಜ್ ನಡುವೆ ಗಂಗಾ ನದಿಯ ಮೇಲೆ ನಿರ್ಮಿಸಲಾಗುತ್ತಿತ್ತು. ಏಪ್ರಿಲ್‌ನಲ್ಲಿ ಸುರಿದಿದ್ದ ಬಿರುಗಾಳಿ ಸಹಿತ ಭಾರೀ ಮಳೆಯ ಪರಿಣಾಮ ಸೇತುವೆಗೆ ಹಾನಿಯಾಗಿತ್ತು. 2 ವರ್ಷಗಳ ಹಿಂದೆಯೂ ಸೇತುವೆಯ ಒಂದು ಭಾಗ ಕುಸಿದಿತ್ತು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಒಡಿಶಾ ರೈಲು ದುರಂತದ ತನಿಖೆ ಸಿಬಿಐ ಹೆಗಲಿಗೆ

    ಏಪ್ರಿಲ್‌ನಲ್ಲಿ ಸೇತುವೆಗೆ ಹಾನಿಯಾಗಿದ್ದಾಗ ಕಳಪೆ ಕಾಮಗಾರಿಯ ಆರೋಪಗಳು ಕೇಳಿಬಂದಿದ್ದವು. ಆದರೂ ಸೇತುವೆ ನಿರ್ಮಾಣಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಎಚ್ಚೆತ್ತುಕೊಂಡಿರಲಿಲ್ಲ. ಹೀಗಾಗಿ ನಿರ್ಮಾಣಹಂತದಲ್ಲಿದ್ದಾಗಲೇ ಸೇತುವೆ ಕುಸಿದಿದೆ. ಈ ಹಿನ್ನೆಲೆ ನಿತೀಶ್ ಕುಮಾರ್ ನೇತೃತ್ವದ ಬಿಹಾರದ ಸರ್ಕಾರವನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.

    ಇದಕ್ಕೂ ಮೊದಲು 2022 ರ ಡಿಸೆಂಬರ್‌ನಲ್ಲಿ ಬಿಹಾರದ ಬೇಗುಸರಾಯ್‌ನಲ್ಲಿ ಬುರ್ಹಿ ಗಂಡಕ್ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆಯ ಒಂದು ಭಾಗ ಕುಸಿದಿತ್ತು. ಸೇತುವೆ ಬಿರುಕು ಬಿಟ್ಟಿದ್ದು, ಅದರ 2-3 ಕಂಬಗಳು ಬಿದ್ದಿವೆ ಎಂದು ವರದಿಯಾಗಿತ್ತು. ಅದಕ್ಕೂ ಒಂದು ತಿಂಗಳ ಹಿಂದೆ ನವೆಂಬರ್‌ನಲ್ಲಿ ಸಿಎಂ ನಿತೀಶ್ ಕುಮಾರ್ ಅವರ ನಳಂದ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಬಿದ್ದಿತ್ತು. ಪರಿಣಾಮ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದು, ಇನ್ನೊಬ್ಬರು ಗಾಯಗೊಂಡಿದ್ದರು. ಕಿಶನ್‌ಗಂಜ್ ಮತ್ತು ಸಹರ್ಸಾ ಜಿಲ್ಲೆಗಳಲ್ಲಿಯೂ ಉದ್ಘಾಟನೆಗೆ ಮುನ್ನ ನಿರ್ಮಾಣ ಹಂತದಲ್ಲಿದ್ದ ಸೇತುವೆಗಳು ಕುಸಿದಿವೆ. ಇದನ್ನೂ ಓದಿ: ಒಡಿಶಾ ರೈಲ್ವೆ ದುರಂತ – ಅನಾಥರಾದ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಂಡ ಅದಾನಿ ಗ್ರೂಪ್

  • ಗಂಗಾ ನದಿಯಲ್ಲಿ ಪದಕ ವಿಸರ್ಜಿಸಲು ಮುಂದಾದ ಕುಸ್ತಿಪಟುಗಳನ್ನು ತಡೆದ ರೈತ ಹೋರಾಟಗಾರ

    ಗಂಗಾ ನದಿಯಲ್ಲಿ ಪದಕ ವಿಸರ್ಜಿಸಲು ಮುಂದಾದ ಕುಸ್ತಿಪಟುಗಳನ್ನು ತಡೆದ ರೈತ ಹೋರಾಟಗಾರ

    ನವದೆಹಲಿ: ಸರ್ಕಾರ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (WFI) ಮುಖ್ಯಸ್ಥ ಹಾಗೂ ಬಿಜೆಪಿ (BJP) ಸಂಸದ ಬ್ರಿಜ್ ಭೂಷಣ್ ಸಿಂಗ್ (Brij Bhushan Sharan Singh) ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಬೇಸತ್ತ ಕುಸ್ತಿಪಟುಗಳು (Wrestlers) ತಮ್ಮ ಪದಕಗಳನ್ನು (Medals) ಗಂಗಾ ನದಿಯಲ್ಲಿ (Ganga River) ವಿಸರ್ಜಿಸಲು ಮುಂದಾಗಿದ್ದರು. ಕುಸ್ತಿಪಟುಗಳ ಈ ನಡೆಯನ್ನು ಸದ್ಯ ತಡೆಯಲಾಗಿದ್ದು, ಸಿಂಗ್ ಬಂಧನಕ್ಕೆ 5 ದಿನಗಳ ಕಾಲಾವಕಾಶ ನೀಡಲು ಒಪ್ಪಿಕೊಂಡಿದ್ದಾರೆ.

    ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪವನ್ನು ಹೊರಿಸಿ ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ತಮ್ಮ ಪದಕಗಳನ್ನು ಸಂಜೆ 6 ಗಂಟೆಗೆ ಹರಿದ್ವಾರದ ಬಳಿ ಗಂಗಾ ನದಿಯಲ್ಲಿ ಎಸೆಯುವುದಾಗಿ ಪ್ರಕಟಿಸಿದ್ದರು. ಗಂಗೆಯಲ್ಲಿ ಪದಕಗಳನ್ನು ವಿಸರ್ಜಿಸಲು ಮುಂದಾದಾಗ ರೈತ ಹೋರಾಟಗಾರ ನರೇಶ್ ಟಿಕಾಯತ್ ಕುಸ್ತಿಪಟುಗಳ ಮೆಡಲ್‌ಗಳನ್ನು ಪಡೆದುಕೊಂಡಿದ್ದಾರೆ.

    ಬಳಿಕ ಕುಸ್ತಿಪಟುಗಳೊಂದಿಗೆ ಮಾತುಕತೆ ನಡೆಸಿದ ನರೇಶ್ ಟಿಕಾಯತ್ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರೆ. ಮುಂದಿನ 5 ದಿನಗಳೊಳಗೆ ಬ್ರಿಜ್ ಭೂಷಣ್ ಬಂಧನವಾಗದಿದ್ದರೆ ಮತ್ತೆ ಹರಿದ್ವಾರಕ್ಕೆ ಬಂದು ಪದಕಗಳನ್ನು ವಿಸರ್ಜಿಸುವುದಾಗಿ ಕುಸ್ತಿಪಟುಗಳು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ Vs ಡಿಎಂಕೆ – ಬಿಜೆಪಿ ಕಾರ್ಯಕರ್ತ ಜಡೇಜಾ ಆಟದಿಂದ ಚೆನ್ನೈಗೆ ಜಯ ಎಂದ ಅಣ್ಣಾಮಲೈ

    ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ ಹಲವು ದಿನಗಳಿಂದ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದರು. ನೂತನ ಸಂಸತ್ ಭವನದತ್ತವೂ ತೆರಳಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆದರೆ ಅವರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದ್ದರು. ಇದನ್ನೂ ಓದಿ: ಮನೆಗೆ ಅತ್ತೆಯೇ ಸಿನಿಯರ್, ಅತ್ತೆ ಒಪ್ಪಿದ್ರಷ್ಟೇ ಸೊಸೆಗೆ 2,000 – ಲಕ್ಷ್ಮಿ ಹೆಬ್ಬಾಳ್ಕರ್

  • ಮಠಕ್ಕೆ ಜಾಗ ನೀಡಿದ್ದು ಮುಸ್ಲಿಂ ರಾಜನಲ್ಲ, ದೊರೆ ರಾಮಭೋಜ ನೀಡಿದ್ದು- ಪೇಜಾವರ ಶ್ರೀ ಸ್ಪಷ್ಟನೆ

    ಮಠಕ್ಕೆ ಜಾಗ ನೀಡಿದ್ದು ಮುಸ್ಲಿಂ ರಾಜನಲ್ಲ, ದೊರೆ ರಾಮಭೋಜ ನೀಡಿದ್ದು- ಪೇಜಾವರ ಶ್ರೀ ಸ್ಪಷ್ಟನೆ

    ತುಮಕೂರು: ಉಡುಪಿ ಮಠಕ್ಕೆ ಯಾವ ಮುಸ್ಲಿಂ ದೊರೆಗಳು ಜಾಗ ಕೊಟ್ಟಿಲ್ಲ, ಜಾಗ ನೀಡಿದ್ದು ರಾಮ ಭೋಜ ಎಂಬ ಅರಸ ಎಂದು ಪೇಜಾವರ ಶ್ರೀಗಳು (Pejavara shree) ಸ್ಪಷ್ಟಪಡಿಸಿದ್ದಾರೆ.

    ಶ್ರೀ ಮಠಕ್ಕೆ ಮುಸ್ಲಿಂ ದೊರೆಗಳು ಜಾಗ ಕೊಟ್ಟಿದ್ದಾರೆ. ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ (Congress) ಮುಖಂಡ ಮಿಥುನ್ ರೈ ಮಾತಿಗೆ ತುಮಕೂರಿನಲ್ಲಿ (Tumakuru) ಪ್ರತಿಕ್ರಿಯಿಸಿದ ಅವರು, ರೈ ತಪ್ಪಾಗಿ ಅರ್ಥೈಸಿಕೊಂಡು ಹೇಳಿಕೆ ನೀಡಿದ್ದಾರೆ ಎಂದರು. ಇದನ್ನೂ ಓದಿ: ಬೇಹುಗಾರಿಕೆ ಭೀತಿ – 11 ಚೀನಾ ಬ್ರ್ಯಾಂಡ್ ಮೂಬೈಲ್ ಬಳಸದಂತೆ ಸೈನಿಕರಿಗೆ ಸಲಹೆ

    ಮಧ್ವಾಚಾರ್ಯರು ಬದರಿ ಯಾತ್ರೆಗೆ ಹೋಗುವ ಸಂದರ್ಭದಲ್ಲಿ ಗಂಗಾ ನದಿಯ (Ganga River) ದಡದಲ್ಲಿ ತುರುಕರ ರಾಜ ಎದುರಾದಾಗ ಅರ್ಧ ರಾಜ್ಯ ದಾನ ಮಾಡಿದ್ದರು. ಆದರೆ ಉಡುಪಿಯ (Udupi) ಮಠಕ್ಕೆ ಮುಸ್ಲಿಂ ದೊರೆ ಜಾಗ ನೀಡಿದ್ದಲ್ಲ. ಈ ರೀತಿ ಆಧಾರ ರಹಿತ ಹೇಳಿಕೆಯನ್ನು ಮುಂದುವರಿಸುವುದು ಸೂಕ್ತವಲ್ಲ ಎಂದು ಶ್ರೀಗಳು ಕಿವಿಮಾತು ಹೇಳಿದ್ದಾರೆ.

    ಮಧ್ವಾಚಾರ್ಯರು (Madhvacharya) ಬದರಿಗೆ ಹೋಗುವಾಗ ಗಂಗಾ ನದಿ ದಾಟಿ ಹೋಗುವ ಪ್ರಸಂಗ ಎದುರಾಗಿತ್ತು. ಅಲ್ಲಿನ ತುರಕರ ದೊರೆ ನದಿಯನ್ನು ದಾಟಿ ಬರದಂತೆ ಸೇನೆ ನಿಯೋಜಿಸಿದ್ದ. ಆದರೆ ಮಧ್ವಾಚಾರ್ಯರು ತಮ್ಮ ಶಿಷ್ಯರೊಂದಿಗೆ ನದಿಯನ್ನು ಈಜಿಕೊಂಡು ದಾಟುವಾಗ ಸೇನೆ ಇವರನ್ನು ತಡೆಯಲು ಬಂತು. ಈಜುತ್ತಲೇ ನಾವು ಬರುವವರೆಗೆ ಅಲ್ಲೇ ಇರಿ, ನಾವು ನಿಶಸ್ತ್ರಧಾರಿಗಳು ಎಂದು ಸೈನಿಕರಿಗೆ ತಿಳಿಸಿದರು. ನಂತರ ದಡ ತಲುಪಿ ನಿರ್ಭೀತರಾಗಿ ಸೈನಿಕರ ಕಡೆ ನಡೆದರು. ಆಚಾರ್ಯರ ತೇಜಸ್ಸು ತುಂಬಿದ ಮಮತೆಯ ಕಣ್ಣುಗಳಿಗೆ ತುರ್ಕರ ದೊರೆ ಕೂಡ ಪ್ರಭಾವಕ್ಕೆ ಒಳಗಾದ. ಮತ್ತು ಅರ್ಧ ರಾಜ್ಯವನ್ನು ದಾನ ಮಾಡಿದ ಎಂದು ಮದ್ವಾಚಾರ್ಯರ ಉಲ್ಲೇಖವನ್ನು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು: ಮಿಥುನ್ ರೈ ವಿವಾದ

  • ದೇವರ ತೀರ್ಥ ಕುಡಿಯಬಾರದು, ವಾಂತಿ ಬರುತ್ತದೆ: ಬಿ.ಟಿ. ಲಲಿತಾ ನಾಯಕ್‌

    ದೇವರ ತೀರ್ಥ ಕುಡಿಯಬಾರದು, ವಾಂತಿ ಬರುತ್ತದೆ: ಬಿ.ಟಿ. ಲಲಿತಾ ನಾಯಕ್‌

    ಗದಗ: ದೇವರ ತೀರ್ಥ ಕುಡಿಯಬಾರದು, ಅದರಲ್ಲಿ ಕಿಲುಬು ಇರುತ್ತದೆ, ವಾಂತಿ ಬರುತ್ತದೆ. ಅದು ಅವೈಜ್ಞಾನಿಕವಾದದ್ದು ಅಂತ ಜನತಾ ಪಕ್ಷದ ರಾಜ್ಯಾಧ್ಯಕ್ಷೆ ಬಿ.ಟಿ ಲಲಿತಾ ನಾಯಕ್ (B.T. Lalita Nayak) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ನಗರದ ಪತ್ರಿಕಾ ಭವನದಲ್ಲಿ (Patrika Bhavan) ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ಹಿಂದೂ ದೇವರ ಆರಾಧನೆ ಬಗ್ಗೆ ಅಪಸ್ವರ ಎತ್ತಿದ್ದಾರೆ. ಗಂಗಾ ಜಲ ಅಂತ ಕೃಷ್ಣಯ್ಯ ಶೆಟ್ಟಿ ಟ್ಯಾಂಕರ್ ಮೂಲಕ ನೀರು ತಂದು ಹಂಚಿದ್ದಾರೆ. ಅದನ್ನು ಅವರ ಮುಖಕ್ಕೆ ಬಿಸಾಕಿದ್ದೇನೆ. ಗಂಗಾ ನದಿಯಲ್ಲಿ (Ganga River) ಹೆಣಗಳು ತೇಲುತ್ತೇವೆ. ಮನಸ್ಸುಗಳನ್ನು ಶುದ್ಧವಾಗಿಟ್ಟುಕೊಳ್ಳಿ ಎಂದಿದ್ದಾರೆ. ಇದನ್ನೂ ಓದಿ: ಆಧಾರ್ ಇರುವ ಪ್ರತಿಯೊಬ್ಬರು ಟ್ವಿಟ್ಟರ್ ಬ್ಲೂಟಿಕ್ ಖಾತೆ ಪಡೆಯಬೇಕು – ಮಸ್ಕ್ ನಿರ್ಧಾರಕ್ಕೆ ಕಂಗನಾ ಬೆಂಬಲ

    ದೇವರ ಹೆಸರು ಹೇಳಿಕೊಂಡು ಕುಣಿತಾರೆ. ಅವರಿಗೆ ಸರ್ಕಾರ ಮಾಸಾಶನ ಹೆಸರಲ್ಲಿ 2 ಸಾವಿರ ರೂಪಾಯಿ ಹಣ ನೀಡುತ್ತದೆ. ಅದನ್ನು ಕೊಡಬಾರದು. ದೈವ ನರ್ತಕರು ಅಂತಾರೆ, ದೈವ ಎನ್ನುವುದು ಒಬ್ಬೊಬ್ಬರ ದೃಷ್ಟಿಯಲ್ಲಿ ಒಂದು ತರನಾಗಿರುತ್ತದೆ. ಕಾಂತಾರ (Kantara) ಚಿತ್ರ ನೋಡಿದರೆ ಗೊತ್ತಾಗುತ್ತದೆ. ಚುಚ್ಚಿ ಹಿಂಸೆ ಕೊಡುತ್ತಾರೆ, ಅದನ್ನು ಸಹಿಸಲಾರದೇ ಸಾಕಷ್ಟು ನೊಂದುಕೊಂಡು ಕೂಗುತ್ತಾರೆ. ಅದನ್ನು ಮುಗ್ಧ ಕಾಡು ಜನ ದೇವರು ಅಂತ ನಂಬುತ್ತಾರೆ. ಅವರು ದೇವರು ಎನ್ನುವುದನ್ನು ಉಳಿಸಿಕೊಳ್ಳಲು ಸಹಿಸಿಕೊಂಡು ಜೋರಾಗಿ ಕೂಗುತ್ತಾರೆ. ಅದನ್ನು ವಂಶದವರು ಮುಂದುವರೆಸಿಕೊಂಡು ಬರುತ್ತಿದ್ದಾರೆ. ಇಂತವರೆಲ್ಲಾ ಸುಳ್ಳು, ಬೋಗಸ್ಸನ್ನು ನಿಲ್ಲಿಸಬೇಕು. ಜನರ ಮುಂದೆ ಸತ್ಯ ತೆರೆದಿಡಬೇಕು. ದುಡಿದು ತಿನ್ನುವಂತಹ ವ್ಯವಸ್ಥೆ ಸರ್ಕಾರ ತರಬೇಕು ಎಂದು ಆಗ್ರಹಿಸಿದ್ದಾರೆ.

    2023ರ ಚುನಾವಣೆ ಕುರಿತು ಮಾತನಾಡಿದ ಅವರು, ಅಧಿಕಾರದಲ್ಲಿದ್ದಾಗ ನುಡಿದಂತೆ ನಡೆದ, ಜನಪರ ಆಡಳಿತ ನೀಡುವ ಮೂಲಕ ಇಂದಿಗೂ ಜನರ ಮನಸ್ಸಿನಲ್ಲಿ ಅಚ್ಚು ಒತ್ತಿರುವ ಜನತಾ ಪಕ್ಷವು 2023ರ ಚುನಾವಣೆಯಲ್ಲಿ ದಿಕ್ಸೂಚಿಯಾಗಲಿದೆ. ಜಯಪ್ರಕಾಶ್ ನಾರಾಯಣ, ಮೊರಾರ್ಜಿ ದೇಸಾಯಿ, ರಾಮಕೃಷ್ಣ ಹೆಗಡೆ ಅವರಂತಹವರು ಸ್ಥಾಪಿಸಿ ಜನಪರ, ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ ‘ನೇಗಿಲು ಹೊತ್ತ ರೈತ’ ಚಿಹ್ನೆಯ ಜನತಾ ಪಕ್ಷವನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಸಂಘಟಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

    ಇದೇ ವೇಳೆ ಜನತಾ ಪಕ್ಷದ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ನಾಗೇಶ್. ಎನ್ ಅವರು ಮಾತನಾಡಿ, 2023ರ ಚುನಾವಣೆಯಲ್ಲಿ ಪಕ್ಷವು 224 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಈಗಾಗಲೇ ಬಿಜೆಪಿ ಸೇರಿ ಕೆಲ ಹಾಲಿ ಶಾಸಕರು, ಮಾಜಿ ಸಚಿವರು ಕೂಡ ಪಕ್ಷದ ವರಿಷ್ಠರ ಜೊತೆ ಮಾತುಕತೆ ನಡೆಸುತ್ತಿದ್ದಾರೆ ಎಂದಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಜನತಾ ಪಕ್ಷದ ಗದಗ ಜಿಲ್ಲಾಧ್ಯಕ್ಷ ಈರಣ್ಣ ಬಾಳಿಕಾಯಿ, ಸಲಹಾ ಸಮಿತಿ ಅಧ್ಯಕ್ಷ ವಿನೋದ್ ಜಾಧವ್, ಮಾರುತಿ ಕಾರಂಡೆ, ರಾಜ್ಯ ಸಂಘಟನಾ ಕಾರ್ಯದರ್ಶಿ ನಳಿನಿಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ರಘುಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇದನ್ನೂ ಓದಿ: ಮಂತ್ರಾಲಯದಲ್ಲಿ ಕಾರ್ತಿಕ ಮಾಸಾಚರಣೆ – ವಿಶೇಷ ವನಭೋಜನ

    Live Tv
    [brid partner=56869869 player=32851 video=960834 autoplay=true]

  • ಪವಿತ್ರ ಗಂಗಾನದಿಯಲ್ಲಿ ಮೋಜು ಮಸ್ತಿ – ಹುಕ್ಕಾ ಸೇವಿಸಿ, ಚಿಕನ್‌ ಅಡುಗೆ ಮಾಡಿದ ಯುವಕರು

    ಪವಿತ್ರ ಗಂಗಾನದಿಯಲ್ಲಿ ಮೋಜು ಮಸ್ತಿ – ಹುಕ್ಕಾ ಸೇವಿಸಿ, ಚಿಕನ್‌ ಅಡುಗೆ ಮಾಡಿದ ಯುವಕರು

    ಲಕ್ನೋ: ಗಂಗಾ ನದಿಯ ಮಧ್ಯದಲ್ಲಿ ದೋಣಿ ಮೂಲಕ ಪ್ರಯಾಣಿಸುತ್ತಿದ್ದ ಕೆಲ ಯವಕರು ಹುಕ್ಕಾ ಪೈಪ್ ಉಪಯೋಗಿಸಿ ಧೂಮಪಾನ ಹಾಗೂ ಚಿಕನ್ ಮಾಡುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಈ ಘಟನೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನ ದಾರಗಂಜ್‌ನಲ್ಲಿರುವ ನಾಗವಾಸುಕಿ ಮಂದಿರದ ಸಮೀಪ ನಡೆದಿದೆ. ಹಿಂದೂಗಳ ಪ್ರಮುಖ ಯಾತ್ರಾ ಕೇಂದ್ರದಲ್ಲಿ ಈ ರೀತಿಯ ಘಟನೆ ಸಂಭವಿಸಿರುವುದಕ್ಕೆ ನೆಟ್ಟಿಗರು ಕಿಡಿಕಾರಿದ್ದಾರೆ.

    ಘಟನೆಗೆ ಸಂಬಂಧಿಸಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಬೋಟ್‌ನಲ್ಲಿ ಮೋಜು ಮಸ್ತಿ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಲಿನ ಎಸ್‌ಪಿ ತಿಳಿಸಿದ್ದಾರೆ. ಇದನ್ನೂ ಓದಿ: ರೈಲ್ವೆ ಅಂಡರ್ ಪಾಸ್‍ನಲ್ಲಿ ಸಿಲುಕಿದ ಕಾಲೇಜ್ ಬಸ್- ವಿದ್ಯಾರ್ಥಿಗಳ ರಕ್ಷಣೆ

    POLICE JEEP

    ಕಳೆದ ವಾರ ಗಂಗಾ ಮತ್ತು ಯಮುನಾ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾದಾಗ ಪ್ರಯಾಗರಾಜ್‌ನ ಹಲವಾರು ತಗ್ಗು ಪ್ರದೇಶಗಳು ಮುಳುಗಡೆಯಾಗಿದ್ದವು. ರಾಜಾಪುರ, ಬಘರಾ, ದಾರಗಂಜ್ ಮತ್ತು ಇತರ ಹಲವಾರು ಸ್ಥಳಗಳಲ್ಲಿ ತಗ್ಗು ಪ್ರದೇಶದ ಕಾಲೋನಿಗಳಲ್ಲಿ ನೀರು ಸಂಗ್ರಹವಾಗಿದೆ. ನಗರದಲ್ಲಿ ಪ್ರವಾಹದಂತಹ ಪರಿಸ್ಥಿತಿಯ ನಡುವೆ ಆಡಳಿತವು ದೋಣಿ ವಿಹಾರಕ್ಕೆ ನಿರ್ಬಂಧಗಳನ್ನು ವಿಧಿಸಿದೆ. ಇದನ್ನೂ ಓದಿ: ಸಿದ್ದು ವಿರುದ್ಧ ಶ್ರೀರಾಮುಲು ವಾಗ್ದಾಳಿ- ಕೆಲವೇ ನಿಮಿಷದಲ್ಲಿ ಟ್ವೀಟ್ ಡಿಲೀಟ್

    Live Tv
    [brid partner=56869869 player=32851 video=960834 autoplay=true]

  • ಗಂಗಾ ನದಿ ನೀರು ಸ್ನಾನಕ್ಕೆ ಯೋಗ್ಯವಾಗಿದೆ: ಕೇಂದ್ರ

    ಗಂಗಾ ನದಿ ನೀರು ಸ್ನಾನಕ್ಕೆ ಯೋಗ್ಯವಾಗಿದೆ: ಕೇಂದ್ರ

    ನವದೆಹಲಿ: ಗಂಗಾ ನದಿಯ ನೀರು ಸ್ನಾನ ಮಾಡಲು ಯೋಗ್ಯವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಗಂಗಾ ನದಿ ಸ್ನಾನದ ಮಾನದಂಡಗಳ ಸ್ವೀಕಾರಾರ್ಹ ಮಿತಿಗಳಲ್ಲಿದೆ ಎಂದಿದೆ.

    ಕೇಂದ್ರ ಜಲಶಕ್ತಿ ಹಾಗೂ ಬುಡಕಟ್ಟು ವ್ಯವಹಾರಗಳ ರಾಜ್ಯ ಸಚಿವ ಬಿಶ್ವೇಶ್ವರ ಟುಡು, ಜಲಶಕ್ತಿ ರಾಜ್ಯ ಸಚಿವ ಬಿಶ್ವೇಶ್ವರ ತುಡು ಮಾತನಾಡಿ, ಗಂಗಾ ಸ್ಟ್ರೆಚ್‌ಗಳು (Ganga stretches) ಆದ್ಯತೆಯ ವರ್ಗದಲ್ಲಿ 4 ವರೆಗೆ ಇಲ್ಲ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಪ್ರಕಾರ, ಗಂಗಾ ನದಿಯ ಎರಡು ಸ್ಟ್ರೆಚ್‌ಗಳು 3 ಮತ್ತು 6 ಮಿಲಿಗ್ರಾಂ ಲೀಟರ್‌ವರೆಗಿನ ಜೈವಿಕ ಆಮ್ಲಜನಕದೊಂದಿಗೆ (BOD) 4 ವರ್ಗದಲ್ಲಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾಳೆ ಬೆಳಗ್ಗೆ 10:30ಕ್ಕೆ ಹಿಜಬ್‌ ಹೈಕೋರ್ಟ್‌ ತೀರ್ಪು

    ವರ್ಗ 1 ಅನ್ನು ಹೆಚ್ಚಿನ ಪ್ರಮಾಣದ ಜೈವಿಕ ಆಮ್ಲಜನಕದಿಂದ ಹೆಚ್ಚು ಕಲುಷಿತಗೊಂಡಿದೆ ಎಂದು ಪರಿಗಣಿಸಲಾಗುತ್ತದೆ. ಆದರೆ 4 ವರ್ಗವನ್ನು ಕಡಿಮೆ ಮಾಲಿನ್ಯವೆಂದು ಪರಿಗಣಿಸಲಾಗುತ್ತದೆ.

    2021 ರ CPCB ದತ್ತಾಂಶದ ಪ್ರಕಾರ, ಗಂಗಾ ನದಿಯ ನೀರಿನ ಗುಣಮಟ್ಟವು ಕರಗಿದ ಆಮ್ಲಜನಕ (DO) ಅಧಿಸೂಚಿತವು ಸ್ನಾನದ ನೀರಿನ ಗುಣಮಟ್ಟದ ಮಾನದಂಡಗಳ ಸ್ವೀಕಾರಾರ್ಹ ಮಿತಿಯೊಳಗೆ ಕಂಡುಬಂದಿದೆ. ನದಿಯ ಪರಿಸರ ವ್ಯವಸ್ಥೆಯು ಒಪ್ಪಿಕೊಳ್ಳುವ ಸ್ಥಿತಿಯಲ್ಲಿದೆ ಎಂದು ಸೂಚಿಸುತ್ತದೆ. ಇದನ್ನೂ ಓದಿ: ಏರ್‌ ಇಂಡಿಯಾ ಅಧ್ಯಕ್ಷರಾಗಿ ಟಾಟಾ ಸನ್ಸ್‌ ಮುಖ್ಯಸ್ಥ ಎನ್.ಚಂದ್ರಶೇಖರನ್‌ ನೇಮಕ

    ನಮಾಮಿ ಗಂಗೆ ಕಾರ್ಯಕ್ರಮದಡಿ, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಐದು ರಾಜ್ಯಗಳ 97 ಸ್ಥಳಗಳಲ್ಲಿ ಆಯಾ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳ ಮೂಲಕ ಗಂಗಾ ನದಿಯ ನೀರಿನ ಗುಣಮಟ್ಟ ಮೌಲ್ಯಮಾಪನ ನಡೆಸುತ್ತಿದೆ. ಕಾರ್ಯಕ್ರಮದಡಿ 30,853 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಒಟ್ಟು 364 ಯೋಜನೆಗಳಿಗೆ ಮಂಜೂರಾತಿ ನೀಡಲಾಗಿದ್ದು, 183 ಯೋಜನೆಗಳನ್ನು ಪೂರ್ಣಗೊಳಿಸಿ ಕಾರ್ಯಾರಂಭ ಮಾಡಲಾಗಿದೆ.