Tag: ಗಂಗಾ ನದಿ

  • ಗಂಗಾ ನದಿಯಂತೆ ನೇಪಾಳದಲ್ಲೂ ಬೃಹತ್ ಸ್ವಚ್ಛತಾ ಅಭಿಯಾನ ಆರಂಭ

    ಗಂಗಾ ನದಿಯಂತೆ ನೇಪಾಳದಲ್ಲೂ ಬೃಹತ್ ಸ್ವಚ್ಛತಾ ಅಭಿಯಾನ ಆರಂಭ

    – ಪರಿಸರ ದಿನದಂದು ಘನ ತ್ಯಾಜ್ಯ ಪ್ರದರ್ಶನ

    ಕಠ್ಮಂಡು: ನಮ್ಮ ದೇಶದಲ್ಲಿ ಗಂಗಾ ನದಿ ಸ್ವಚ್ಛತಾ ಅಭಿಯಾನದಂತೆ ನೇಪಾಳದಲ್ಲೂ ಬೃಹತ್ ಸ್ವಚ್ಛತಾ ಅಭಿಯಾನವೊಂದು ಆರಂಭವಾಗಿದೆ.

    ಜಗತ್ತಿನ ಎತ್ತರದ ಮೌಂಟ್ ಎವರೆಸ್ಟ್ ಶಿಖರದ ಸ್ವಚ್ಛತಾ ಕಾರ್ಯ ಆರಂಭವಾಗಿದೆ. ನೇಪಾಳದಲ್ಲಿ ಹೊಸ ವರ್ಷದ ಆಚರಣೆಯ ಅಂಗವಾಗಿ ಮೌಂಟ್ ಎವರೆಸ್ಟ್ ಪರ್ವತ ಶ್ರೇಣಿಯಲ್ಲಿ ಸ್ವಚ್ಛತಾ ಕಾರ್ಯವನ್ನು ಅಲ್ಲಿನ ಪ್ರವಾಸೋದ್ಯಮ ಇಲಾಖೆ ಹಮ್ಮಿಕೊಂಡಿದೆ.

    ಏಪ್ರಿಲ್ 14 ರಿಂದ ಆರಂಭವಾಗಿರುವ ಮೌಂಟ್ ಎವರೆಸ್ಟ್ ಪರ್ವತ ಶ್ರೇಣಿಯ ಸ್ವಚ್ಛತಾ ಅಭಿಯಾನ ಮೇ 29ಕ್ಕೆ ಮುಗಿಯಲಿದೆ. ಈಗಾಗಲೇ ಸುಮಾರು 3,000 ಕೆಜಿ ಘನ ತ್ಯಾಜ್ಯವನ್ನು ಎವರೆಸ್ಟ್ ಪರ್ವತ ಶ್ರೇಣಿಯಿಂದ ಸಂಗ್ರಹಿಸಲಾಗಿದೆ. ಒಟ್ಟು ಸುಮಾರು 10,000 ಕೆಜಿಯಷ್ಟು ತ್ಯಾಜ್ಯ ಸಂಗ್ರಹ ಗುರಿ ಹೊಂದಲಾಗಿದೆ. ಎವರೆಸ್ಟ್ ಬೇಸ್ ಕ್ಯಾಂಪಿನಲ್ಲಿ 5,000 ಕೆಜಿಗೂ ಅಧಿಕ ತ್ಯಾಜ್ಯ ಸಂಗ್ರಹವಾಗುವ ನಿರೀಕ್ಷೆಯಿದೆ. ಕ್ಯಾಂಪ್ 2 ಹಾಗೂ 3 ಸೇರಿದಂತೆ 3000 ಕೆಜಿ ತ್ಯಾಜ್ಯ ಸಂಗ್ರಹ ಗುರಿಯಿದೆ.

    ತ್ಯಾಜ್ಯದ ಜೊತೆಗೆ ಟ್ರೆಕ್ಕಿಂಗ್ ಸಂದರ್ಭದಲ್ಲಿ ಮೃತಪಟ್ಟು ಅಲ್ಲೇ ಉಳಿದ ಶವಗಳಿದ್ದರೆ, ಅವುಗಳನ್ನು ಕೆಳಗಿಳಿಸಲಾಗುತ್ತದೆ. ಜೂನ್ 5ರ ಪರಿಸರ ದಿನದಂದು ಈ ಬೃಹತ್ ಘನ ತ್ಯಾಜ್ಯವನ್ನು ಪ್ರದರ್ಶನ ಮಾಡಿ ನಂತರ ಮರು ಬಳಕೆಗೆ ಸಂಸ್ಕರಣೆ ಮಾಡಲಾಗುತ್ತದೆ.

  • ಪೇಜಾವರ ಶ್ರೀಗಳು ಗಂಗಾನದಿ ಬಳಿ ಹೋಗಿಲ್ಲ, ನಾನು ಕರ್ಕೊಂಡು ಹೋಗ್ತಿನಿ: ಕೆ.ಎಸ್.ಈಶ್ವರಪ್ಪ

    ಪೇಜಾವರ ಶ್ರೀಗಳು ಗಂಗಾನದಿ ಬಳಿ ಹೋಗಿಲ್ಲ, ನಾನು ಕರ್ಕೊಂಡು ಹೋಗ್ತಿನಿ: ಕೆ.ಎಸ್.ಈಶ್ವರಪ್ಪ

    ಚಿಕ್ಕಮಗಳೂರು: ಪೇಜಾವರ ಶ್ರೀಗಳು ಇತ್ತೀಚೆಗೆ ಗಂಗಾನದಿ ಬಳಿ ಹೋಗಿಲ್ಲ ಅನ್ಸುತ್ತೆ, ಅವಕಾಶ ಸಿಕ್ಕರೆ ನಾನೇ ಅವರನ್ನ ಕರೆದುಕೊಂಡು ಹೋಗುತ್ತೇನೆ ಅಂತಾ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

    ಕೆಲವು ದಿನಗಳ ಹಿಂದೆ ಪೇಜಾವರ ಶ್ರೀಗಳು ಕೇಂದ್ರ ಸರ್ಕಾರದ ಕೆಲಸದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ರು. ಶ್ರೀಗಳ ಹೇಳಿಕೆ ಪ್ರತಿಕ್ರಿಯಿಸಿರುವ ಈಶ್ವರಪ್ಪ, ಕಪ್ಪು ಹಣ ಹಾಗೂ ಗಂಗಾ ನದಿ ಮಾಲಿನ್ಯದ ಬಗ್ಗೆ ಶ್ರೀಗಳು ಬೇಸರ ವ್ಯಕ್ತಪಡಿಸಿದ್ದಾರೆ. ಆದರೆ ಈಗ ಗಂಗಾ ನದಿ ಸಾಕಷ್ಟು ಅಭಿವೃದ್ಧಿಯಾಗಿದೆ ಅಂತಾ ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿಯವರ ಅಚ್ಛೇ ದಿನ್ ಇನ್ನೂ ಪರಿಣಾಮಕಾರಿ ಆಗಬೇಕಿದೆ, ಗಂಗಾ ನದಿಯನ್ನು ಶುದ್ಧೀಕರಿಸಲಾಗುವುದು ಭರವಸೆ ನೀಡಿದರು. ಆದರೆ ಅದು ಸಹ ಸಂಪೂರ್ಣವಾಗಿ ಈಡೇರಿಲ್ಲ. :ಪೇಜಾವರ ಶ್ರೀ

    ಕಾಂಗ್ರೆಸ್ ಜೆಡಿಎಸ್ ಮೈತ್ರಿ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್‍ನವರು ಅಧಿಕಾರದಾಹಿಗಳು. ಕರ್ನಾಟಕದಲ್ಲೀಗ ಅವಕಾಶವಾದಿ ರಾಜಕಾರಣ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿಯನ್ನ ಸೋಲಿಸಲು ಎಲ್ಲರೂ ಒಂದಾಗಿದ್ದಾರೆ. ಇದನ್ನ ದೇಶದ ಜನ ಒಪ್ಪುವುದಿಲ್ಲ, ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದರೆ ಸೋನಿಯಾ-ರಾಹುಲ್ ಕಾರಣ, ಸೋತರೆ ಎಸ್.ಆರ್.ಪಾಟೀಲ್ ಕಾರಣವಾ, ಇದು ಅವಕಾಶವಾದಿ ರಾಜಕಾರಣವಲ್ಲವೇ ಎಂದು ಕಿಡಿಕಾರಿದ್ರು.

  • ಮೋದಿಯವರ ಅಚ್ಛೇ ದಿನ್ ಇನ್ನೂ ಪರಿಣಾಮಕಾರಿ ಆಗಬೇಕಿದೆ: ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ

    ಮೋದಿಯವರ ಅಚ್ಛೇ ದಿನ್ ಇನ್ನೂ ಪರಿಣಾಮಕಾರಿ ಆಗಬೇಕಿದೆ: ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ

    ರಾಯಚೂರು: ನರೇಂದ್ರ ಮೋದಿಯವರ ಸರ್ಕಾರ ಬಂದು ನಾಲ್ಕು ವರ್ಷವಾದರು, ಚುನಾವಣೆ ಪೂರ್ವದಲ್ಲಿ ವಿದೇಶದಲ್ಲಿರುವ ಕಪ್ಪು ಹಣವನ್ನು ತರುವುದಾಗಿ ಭರವಸೆ ನೀಡಿ ಈಡೇರಿಸಿಲ್ಲ ಎಂದು ಮಂತ್ರಾಲಯದಲ್ಲಿ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಮೋದಿಯವರು ತಮ್ಮ ಅಧಿಕಾರ ಅವಧಿಯಲ್ಲಿ ಆರ್ಥಿಕತೆ ಸುಧಾರಣೆಯನ್ನು ಹೆಚ್ಚು ಮಾಡುವುದಕ್ಕಾಗಿ ಸಾಕಷ್ಟು ಯೋಜನೆಗಳನ್ನು ಮಾಡಿದ್ದಾರೆ. ಅಲ್ಲದೇ ಶ್ರೀಮಂತರಿಗೂ ಭ್ರಷ್ಟಾಚಾರ ಮಾಡಲಾಗದಂತಹ ಸನ್ನಿವೇಶವನ್ನು ನಿರ್ಮಿಸಿದ್ದಾರೆ. ಆದರೆ ಅಚ್ಚೆದಿನ್ ಇನ್ನೂ ಪರಿಣಾಮಕಾರಿಯಾಗಿ ಜಾರಿಯಾಗಬೇಕಿದೆ. ಈ ಕಾರ್ಯವನ್ನು ಬೇಗ ಮಾಡಲಿ ಎಂಬ ಉದ್ದೇಶದಿಂದ ಹೇಳಿದ್ದಾಗಿ ತಿಳಿಸಿದರು.

    ಜಿಲ್ಲೆಯಲ್ಲಿ ನಡೆದ ಚಂದ್ರಿಕಾ ತಾತ್ಪರ್ಯ ಮಂಗಳೋತ್ಸವದಲ್ಲಿ ಭಾಗಿಯಾಗಿ ಮಾತನಾಡಿದ ಶ್ರೀಗಳು, ಗಂಗಾ ನದಿಯು ಎಷ್ಟೋ ಜನರ ಜೀವ ನದಿಯಾಗಿದೆ. ಆದ್ರೆ ಪವಿತ್ರ ನದಿ ಕಲುಷಿತಗೊಂಡಿದೆ. ಚುನಾವಣಾ ಪೂರ್ವದಲ್ಲಿ ಗಂಗಾ ನದಿಯನ್ನು ಶುದ್ಧೀಕರಿಸಲಾಗುವುದು ಮೋದಿ ಭರವಸೆ ನೀಡಿದರು. ಆದರೆ ಅದು ಸಹ ಸಂಪೂರ್ಣವಾಗಿ ಈಡೇರಿಲ್ಲ. ಇನ್ನು ಉಳಿದಿರೋದು ಒಂದು ವರ್ಷ ಮಾತ್ರ ನೀಡಿರುವ ಭರವಸೆಗಳನ್ನು ಅನುಷ್ಠಾನಕ್ಕೆ ತರುವ ಪ್ರಯತ್ನ ಮಾಡಲಿ ಎಂಬ ಹೇಳಿದರು.

    ಆದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಗೆಲ್ಲುವುದಿಲ್ಲ ಎನ್ನಲಾಗದು, ಆದರೆ ಮೋದಿಯವರು ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಿರುವುದನ್ನು ಜನರು ತಿಳಿದಿದ್ದಾರೆ. ಜನ ತಮ್ಮ ಮತಗಳು ಯಾವ ಪಕ್ಷಕ್ಕೆಂದು ಮತದಾರರ ಮನಸ್ಸಿನ ಮೇಲಿದೆ ಎಂದರು.

    ಇದೇ ವೇಳೆ ಇಫ್ತೀಯಾರ್ ಕೂಟದ ಬಗ್ಗೆ ಮಾಹಿತಿ ನೀಡಿದ ಅವರು, ಜೂ.13ಕ್ಕೆ ಉಡುಪಿ ಮಠದಲ್ಲಿ ಇಫ್ತೀಯಾರ್ ಕೂಟ ಆಯೋಜನೆಯ ಬಗ್ಗೆ ಚಿಂತನೆ ಮಾಡಲಾಗುತ್ತಿದೆ. ಈ ಯೋಜನೆಯ ಬಗ್ಗೆ ಯಾವುದೇ ರೀತಿಯ ಮಠದ ವಿರೋಧವಿಲ್ಲ ಆದರೆ ಮುಸ್ಲಿಂರಲ್ಲಿಯೇ ಸಂಕೋಚವಿದೆ. ಆದರೆ ಮುಸ್ಲಿಮರು ಒಪ್ಪಿಗೆ ನೀಡಿದರೆ ಈ ವರ್ಷವು ಈ ಕಾರ್ಯ ಮಾಡುತ್ತೇನೆ. ಒಳ್ಳೆ ಕಾರ್ಯ ಮಾಡಲು ವಿರೋಧ ವಿದ್ದರು ಮಾಡಬಹುದು ಎಂದು ತಿಳಿಸಿದರು. ಇದನ್ನು ಓದಿ: ಮುಸ್ಲಿಮರು ಒಪ್ಪಿದ್ರೆ ಈ ಬಾರಿಯೂ ಇಫ್ತಾರ್ ಕೂಟ- ವಿಶ್ವೇಶತೀರ್ಥ ಸ್ವಾಮೀಜಿ

  • ಕೇಂದ್ರ, ರಾಜ್ಯ ಸರ್ಕಾರಗಳಿಗೆ ಗಂಗಾ ನದಿ ಸ್ಪಚ್ಛತೆಯ ವರದಿ ಕೇಳಿದ ಎನ್‍ಜಿಟಿ

    ಕೇಂದ್ರ, ರಾಜ್ಯ ಸರ್ಕಾರಗಳಿಗೆ ಗಂಗಾ ನದಿ ಸ್ಪಚ್ಛತೆಯ ವರದಿ ಕೇಳಿದ ಎನ್‍ಜಿಟಿ

    ನವದೆಹಲಿ: ಮೋದಿ ನೇತೃತ್ವದ ಕೇಂದ್ರ ಹಾಗೂ ಉತ್ತರ ಪ್ರದೇಶ ಯೋಗಿ ಸರ್ಕಾರವನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಪೀಠವು ಗಂಗಾ ನದಿ ಸ್ಪಚ್ಛತೆಯನ್ನು ಮಾಡಲು ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿಯನ್ನು ಕೇಳಿದೆ.

    ಈ ಹಿಂದೆ ಎನ್‍ಜಿಟಿ ಕೇಂದ್ರಕ್ಕೆ ಗಂಗಾ ನದಿಯ ಗೋಮುಖ ದಿಂದ ಉನ್ನೋ ಪ್ರದೇಶದ ಸ್ಪಚ್ಛತ ಕಾರ್ಯವನ್ನು ಕೈಗೊಳ್ಳಲು ಸೂಚನೆಯನ್ನು ನೀಡಿತ್ತು. ಗಂಗಾ ನದಿಯ ಹರಿಯುವ ಪ್ರದೇಶದ ಸುತ್ತಲಿನ 100 ಮೀ ಅಂತರವನ್ನು ಹಸಿರು ಪೀಠವು `ನೋ ಡೆವಲಪ್‍ಮೆಂಟ್ ಜೋನ್’ ಎಂದು ಘೋಷಣೆ ಮಾಡಿತ್ತು. ಅಲ್ಲದೇ ನದಿಯ ದಡಗಳಲ್ಲಿ 500 ಮೀ ಒಳಗೆ ಯಾವುದೇ ರೀತಿಯ ಕಸವನ್ನು ಎಸೆದಂತೆ ಸೂಚನೆಯನ್ನು ನೀಡಿತ್ತು.

    ಎನ್‍ಜಿಟಿಯ ನ್ಯಾಯಪೀಠದ ಅಧ್ಯಕ್ಷ ನ್ಯಾ. ಸ್ವತಂತರ್ ಕುಮಾರ್ ಗಂಗಾ ನದಿಯ ಉತ್ತರ ಪ್ರದೇಶದಿಂದ ಕಾನ್ಪುರ ವರೆಗಿನ ಫೇಸ್-2 ಸ್ಪಚ್ಛತಾ ಯೋಜನೆ ಆರಂಭಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿಯನ್ನು ನೀಡಿವಂತೆ ತಿಳಿಸಿದ್ದಾರೆ.

    ಗಂಗಾ ನದಿ ಸ್ಪಚ್ಛತೆಯ ಕುರಿತು ನ್ಯಾಯಧೀಕರಣ ನೀಡಿರುವ ಸೂಚನೆಗಳ ಮೇಲೆ ಆರಂಭಿಸಲಾಗಿರುವ ಯೋಜನೆಗಳು ಪೂರ್ಣಗೊಂಡಿಲ್ಲ. ಈ ಕುರಿತ ವರದಿಗಳನ್ನು ಉತ್ತರಾಖಂಡ ಹಾಗೂ ಉತ್ತರ ಪ್ರದೇಶ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ನೀಡಬೇಕು ಎಂದು ನ್ಯಾಯ ಪೀಠ ಸೂಚಿಸಿದೆ.

    ಅಲ್ಲದೇ ನ್ಯಾಯಧಿಕರಣದ ನೀಡಿರುವ ನಿರ್ದೇಶಗಳ ಪ್ರತಿಯನ್ನು ಕೇಂದ್ರದ ಗಂಗಾ ನದಿಯ ಸ್ಪಚ್ಛತಾ ಸಮಿತಿಯ ಕಾರ್ಯದರ್ಶಿ ಹಾಗೂ ರಾಜ್ಯ ಸರ್ಕಾರದ ಜಲ ಸಂಪನ್ಮೂಲ ಸಚಿವಾಲಯ ಹಾಗೂ ಪರಿಸರ ಸಚಿವಾಲಯ, ಅರಣ್ಯ ಮತ್ತು ಹವಾಮಾನ ಇಲಾಖೆಗೆ ಈ ನಿರ್ದೇಶನಗಳನ್ನು ಕಳುಹಿಸಿಕೊಡಬೇಕು ಎಂದು ಪೀಠವು ಆದೇಶಿಸಿದೆ.

    ಅಕ್ಟೋಬರ್ 24 ರಂದು ಗಂಗಾ ನದಿ ಸ್ಪಚ್ಛತೆಯ ಕುರಿತು ನಡೆಯುವ ಮುಂದಿನ ವಿಚಾರಣೆಯ ಒಳಗೆ ಮಾಹಿತಿಯನ್ನು ನೀಡಬೇಕು ಎಂದು ಸೂಚಿಸಿದೆ.

    ನ್ಯಾಯ ಪೀಠವು ಈ ಹಿಂದೆ ನಡೆಸಿದ ವಿಚಾರಣೆ ಸಂದರ್ಭದಲ್ಲಿ ಸರ್ಕಾರವು ಸುಮಾರು 7 ಸಾವಿರ ಕೋಟಿ ರೂ.ಗಳನ್ನು ಎರಡು ವರ್ಷಗಲ್ಲಿ ಗಂಗಾ ನದಿಯ ಸ್ಪಚ್ಚತೆಗೆ ಖರ್ಚು ಮಾಡಿದ್ದಾಗಿ ಮಾಹಿತಿಯನ್ನು ನೀಡಿತ್ತು. ಆದರೆ ಇಂದಿಗೂ ಗಂಗಾ ನದಿಯ ದಡಗಳಲ್ಲಿ ಸ್ವಚ್ಛತೆ ಕಾಣುತ್ತಿಲ್ಲ.

    ನ್ಯಾಯ ಪೀಠವು ನೀಡುವ 543 ಪುಟಗಳ ಆದೇಶ ಪ್ರತಿಯಲ್ಲಿ ಉತ್ತರ ಪ್ರದೇಶದ ಹರಿದ್ವಾರ ದಿಂದ ಉನ್ನೋ ಪ್ರದೇಶದ ನದಿ ದಡಗಳ 100 ಮೀ ಪ್ರದೇಶದಲ್ಲಿ ಯಾವುದೇ ವಾಣಿಜ್ಯ ಹಾಗೂ ವಸತಿ ಕಟ್ಟಡಗಳನ್ನು ನಿರ್ಮಿಸದಂತೆ ನಿರ್ಬಂಧವನ್ನು ವಿಧಿಸಿದೆ. ಅಲ್ಲದೆ ನದಿಗೆ ಯಾವುದೇ ರೀತಿಯ ಕಟ್ಟಡ ತ್ಯಾಜ್ಯ, ಇ-ತ್ಯಾಜ್ಯ ಅಥವಾ ಜೈವಿಕ ವೈದ್ಯಕೀಯ ತ್ಯಾಜ್ಯಗಳನ್ನು ತಂದು ಸುರಿಯದಂತೆ ಸೂಚನೆಯನ್ನು ನೀಡಿದೆ.

    ಗಂಗಾ ನದಿಯಲ್ಲಿ ಯಂತ್ರಗಳ ಸಹಾಯ ಮಾಡುವ ಗಣಿಗಾರಿಕೆಯನ್ನು ನಿಷೇಧಿಸಿ ಆದೇಶವನ್ನು ನೀಡಿತ್ತು.

  • ಗಂಗಾ ನದಿಯಲ್ಲಿ ತ್ಯಾಜ್ಯ ಹಾಕಿದ್ರೆ 50 ಸಾವಿರ ದಂಡ

    ಗಂಗಾ ನದಿಯಲ್ಲಿ ತ್ಯಾಜ್ಯ ಹಾಕಿದ್ರೆ 50 ಸಾವಿರ ದಂಡ

    ನವದೆಹಲಿ: ಗಂಗಾ ನದಿ ದಂಡೆಯಿಂದ 500 ಮೀಟರ್ ದೂರದಲ್ಲಿ ಕಸ-ಕಡ್ಡಿ ಇನ್ನಿತರ ತ್ಯಾಜ್ಯ ವಸ್ತುಗಳನ್ನ ಸುರಿಯುವುದನ್ನು ನಿಷೇಧಿಸಿರುವ ರಾಷ್ಟ್ರೀಯ ಹಸಿರು ನ್ಯಾಯಧಿಕರಣ(ಎನ್‍ಜಿಟಿ) ಉಲ್ಲಂಘಿಸಿದವರಿಗೆ 50 ಸಾವಿರ ದಂಡ ವಿಧಿಸಲು ಗುರುವಾರ ಮಹತ್ವದ ಸೂಚನೆ ಸೂಚಿಸಿದೆ.

    ಗಂಗಾ ನದಿ ತಟದ ಉನ್ನಾವ್ ಮತ್ತು ಹರಿದ್ವಾರಗಳಲ್ಲಿ ನದಿಯ ದಡದಲ್ಲಿ ಕಸ ಹಾಕುವುದನ್ನು ತಡೆಯಬೇಕೆಂದು ಹಸಿರು ನ್ಯಾಯಪೀಠ ಅಲ್ಲಿನ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ಹೊರಡಿಸಿದೆ.

    ಗಂಗಾ ನದಿ ಸಮೀಪದಲ್ಲಿರುವ ಚರ್ಮ ಸಂಸ್ಕರಣಾ ಘಟಕಗಳನ್ನು ಆರು ವಾರದ ಒಳಗಡೆ ಸ್ಥಳಾಂತರಿಸುವಂತೆ ನ್ಯಾಯಪೀಠವು ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ. ಅಲ್ಲದೆ, ಗಂಗಾ ನದಿ ದಂಡೆ ಅಸುಪಾಸು 100 ಮೀಟರ್ ಅಂತರ ಯಾವುದೇ ಅಭಿವೃದ್ಧಿ ಕೆಲಸ ಮಾಡುವಂತಿಲ್ಲ ಎಂದು ನ್ಯಾಯಪೀಠ ಸೂಚಿಸಿದೆ.

    ಈ ಗಂಗಾ ನದಿ ತೀರದಲ್ಲಿರುವ ಘಾಟ್ ಮತ್ತು ಪವಿತ್ರ ಸ್ಥಳಗಳಲ್ಲಿ ನದಿಗೆ ಯಾವುದೇ ರೀತಿ ಹಾನಿಯಾಗದಂತೆ ಧಾರ್ಮಿಕ ಆಚರಣೆಗಳನ್ನು ನಡೆಸಲು ಹಸಿರು ನ್ಯಾಯಾಧಿಕರಣವು ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯ ಸರ್ಕಾರಗಳಿಗೆ ಆದೇಶ ಹೊರಡಿಸಿದೆ.