Tag: ಗಂಗಾ ವಾರಿಯರ್ಸ್

  • KCC 3- ಕಿಚ್ಚನಿಗೆ ಧನ್ಯವಾದ ಹೇಳಿದ ಕ್ರಿಕೆಟಿಗ ಸುರೇಶ್ ರೈನಾ

    KCC 3- ಕಿಚ್ಚನಿಗೆ ಧನ್ಯವಾದ ಹೇಳಿದ ಕ್ರಿಕೆಟಿಗ ಸುರೇಶ್ ರೈನಾ

    ನಿನ್ನೆಯಷ್ಟೇ ಕೆಸಿಸಿ ಸೀಸನ್ 3 ಮುಕ್ತಾಯವಾಗಿದೆ. ವಿಜಯನಗರ ಪ್ಯಾಟ್ರಿಯಾಟ್ಸ್ ಮತ್ತು ಗಂಗಾ ವಾರಿಯರ್ಸ್ (Ganga Warriors) ನಡುವೆ ನಡೆದ ಪಂದ್ಯದಲ್ಲಿ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದವರು ಕ್ರಿಕೆಟಿಗ ಸುರೇಶ್ ರೈನಾ (Suresh Raina). 29 ಎಸೆತಗಳಲ್ಲಿ ಅಜೇಯ 54 ರನ್ ಬಾರಿಸುವ ಮೂಲಕ ತಂಡವನ್ನು ಗೆಲ್ಲುವಂತೆ ಮಾಡಿದರು. ಅಲ್ಲದೇ, ಬೌಲಿಂಗ್ ನಲ್ಲೂ ಅವರು ಹಿಂದೆ ಬೀಳಲಿಲ್ಲ. 2 ವಿಕೆಟ್ ಪಡೆಯುವ ಮೂಲಕ ಪಂದ್ಯ ಪುರುಷೋತ್ತಮ ಪ್ರಶಸ್ತಿಗೂ ಕಾರಣವಾದರು.

    ಅಂತಾರಾಷ್ಟ್ರೀಯ ಪಂದ್ಯದಂತೆಯೇ ಆಯೋಜನೆ ಮಾಡಿದ್ದ ಆಯೋಜಕರಿಗೆ ಸುರೇಶ್ ರೈನಾ ಧನ್ಯವಾದಗಳನ್ನು ತಿಳಿಸಿದ್ದಾರೆ. ಅದರಲ್ಲೂ ಈ ಪಂದ್ಯಾವಳಿಯಲ್ಲಿ ಆಡುವುದಕ್ಕೆ ಅವಕಾಶ ಮಾಡಿಕೊಟ್ಟ ಕಿಚ್ಚ ಸುದೀಪ್ (Kiccha Sudeep) ಅವರಿಗೆ ವಿಶೇಷ ಧನ್ಯವಾದ ತಿಳಿಸಿದ್ದಾರೆ. ಇಂತಹ ಪಂದ್ಯವನ್ನು ನಾನು ಯಾವತ್ತೂ ನೋಡಿಲ್ಲ. ನನಗೆ ಇದು ಮರೆಯಲಾರದ ಕ್ಷಣವಾಗಿತ್ತು ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ನಟ ಉಪೇಂದ್ರ ಪಕ್ಷಕ್ಕೆ ಅಧಿಕೃತ ಚಿಹ್ನೆ ನೀಡಿದ ಚುನಾವಣಾ ಆಯೋಗ

    ಈ ಬಾರಿ ಆರು ತಂಡಗಳ ನಡುವೆ ಪಂದ್ಯಾವಳಿ ಆಯೋಜನೆ ಆಗಿತ್ತು. ದಿನಕ್ಕೆ ಮೂರು ಪಂದ್ಯಗಳಂತೆ ಒಟ್ಟು ಆರು ತಂಡಗಳು ಕಪ್ ಗಾಗಿ ಸೆಣೆಸಿದವು. ನುರಿತ ಕ್ರಿಕೆಟ್ ಆಟಗಾರರಂತೆಯೇ ಸಿನಿಮಾ ರಂಗದ ಕಲಾವಿದರು ಪಂದ್ಯಾವಳಿಯಲ್ಲಿ ಭಾಗಿಯಾಗಿದ್ದರು. ಕಿಚ್ಚ ಸುದೀಪ್, ಗಣೇಶ್, ಧನಂಜಯ್, ಶಿವರಾಜ್ ಕುಮಾರ್, ಡಾರ್ಲಿಂಗ್ ಕೃಷ್ಣ ಸೇರಿದಂತೆ ಇತರರು ಒಂದೊಂದು ತಂಡದ ನೇತೃತ್ವವಹಿಸಿದ್ದರು.

  • KCC-2023: ಪಂದ್ಯ ಗೆದ್ದು ಅಪ್ಪುಗೆ ಕೆಸಿಸಿ ಕಪ್ ಅರ್ಪಿಸಿದ ಧನಂಜಯ್ ಟೀಮ್

    KCC-2023: ಪಂದ್ಯ ಗೆದ್ದು ಅಪ್ಪುಗೆ ಕೆಸಿಸಿ ಕಪ್ ಅರ್ಪಿಸಿದ ಧನಂಜಯ್ ಟೀಮ್

    ನ್ನಡ ಚಲನಚಿತ್ರ ಕಪ್ ಗೆ ತೆರೆಬಿದ್ದಿದೆ. ಎರಡು ದಿನಗಳ ಕಾಲ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಧನಂಜಯ್ ನೇತೃತ್ವದ  ಗಂಗಾ ವಾರಿಯಸ್ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಗಂಗಾ ವಾರಿಯರ್ಸ್ ಮತ್ತು ರಾಷ್ಟ್ರಕೂಟ ಪ್ಯಾಂಥರ್ಸ್ ನಡುವೆ ನಡೆದ ಫೈನಲ್ ಪಂದ್ಯದಲ್ಲಿ ಗಂಗಾ ವಾರಿಯರ್ಸ್ ಚಾಂಪಿಯನ್ ಆಗಿ ಕಪ್ ಅನ್ನು ಪಡೆದುಕೊಂಡಿದೆ.

    ಎರಡು ದಿನಗಳ ಕಾಲ ನಡೆದ ಪಂದ್ಯಗಳಲ್ಲಿ ಆರು ತಂಡಗಳು ಭಾಗಿಯಾಗಿದ್ದವು. ತಲಾ ಎರಡು ಪಂದ್ಯಗಳನ್ನು ಆಡಿದವು. ಧನಂಜಯ್, ಗಣೇಶ್, ಶಿವರಾಜ್ ಕುಮಾರ್, ಸುದೀಪ್, ಉಪೇಂದ್ರ ಮತ್ತು ಧ್ರುವ ಸರ್ಜಾ ತಲಾ ಒಂದೊಂದು ತಂಡದ ನೇತೃತ್ವವಹಿಸಿದ್ದರು. ಸಿನಿಮಾ ನಟರು ಮತ್ತು ತಂತ್ರಜ್ಞರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರರು ಕೂಡ ಕನ್ನಡ ಚಲನಚಿತ್ರ ಕಪ್ ಪಂದ್ಯದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಹೊಂಬಾಳೆ ಫಿಲ್ಮ್ ಯುವ ಚಿತ್ರಕ್ಕೆ ರುಕ್ಮಿಣಿ ವಸಂತ್ ನಾಯಕಿನಾ? ಸ್ಪಷ್ಟನೆ ನೀಡಿದ ನಟಿ

    ಈ ಸಲದ ಪಂದ್ಯಾವಳಿ ಹಲವು ವಿಶೇಷಗಳಿಂದ ಕೂಡಿತ್ತು. ಆಡಿದ ಎರಡು ಪಂದ್ಯಗಳನ್ನು ಧನಂಜಯ ಅಂಡ್ ಟೀಮ್ ಗೆದ್ದರೆ, ಶಿವರಾಜ್ ಕುಮಾರ್ ನೇತೃತ್ವದ ತಂಡ ಒಂದೇ ಒಂದು ಪಂದ್ಯವನ್ನೂ ಗೆಲ್ಲಲಾಗಲಿಲ್ಲ. ಉಳಿದ ಎಲ್ಲ ತಂಡಗಳು ಒಂದೊಂದು ಪಂದ್ಯವನ್ನು ಗೆಲ್ಲುವ ಮೂಲಕ ಟೋರ್ನಿಯನ್ನು ಮುಂದಕ್ಕೆ ಸಾಗುವಂತೆ ಮಾಡಿದವು. ಉಪೇಂದ್ರ ನಾಯಕತ್ವದ ತಂಡ ಅತೀ ಹೆಚ್ಚು ನೆಟ್ ರನ್ ರೇಟ್ ಹೊಂದಿತ್ತು.

    ಫೈನಲ್ ತಲುಪಿದ್ದ ಗಂಗಾ ವಾರಿಯರ್ಸ್ ಮತ್ತು ವಿಜಯನಗರ ಪೇಟ್ರಿಯಾಟ್ಸ್ ಅತ್ಯುತ್ತಮವಾಗಿ ಆಡಿದವು. ಕೊನೆಗೂ ಧನಂಜಯ್ ನಾಯಕನಾಗಿದ್ದ ಗಂಗಾ ವಾರಿಯರ್ಸ್ ಚಾಂಪಿಯನ್ ಪಟ್ಟ ಪಡೆದುಕೊಂಡಿತು. ಈ ಗೆಲುವನ್ನು ತಂಡ ಪುನೀತ್ ರಾಜ್ ಕುಮಾರ್ ಅವರಿಗೆ ಅರ್ಪಿಸಿತು. ಅಲ್ಲದೇ, ಈ ಬಾರಿ ಇಡೀ ಕ್ರಿಕೆಟ್ ಪಂದ್ಯಾವಳಿಯನ್ನು ಅಪ್ಪುಗೆ ಅರ್ಪಿಸಿದ್ದು ವಿಶೇಷವಾಗಿತ್ತು.