ಚಿಕ್ಕಬಳ್ಳಾಪುರ: ಮೂರು ವರ್ಷದ ಮಗಳನ್ನು (Daughter) ಕತ್ತು ಹಿಸುಕಿ ಕೊಂದು ತಾಯಿಯೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕಾಸ್ಪದ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವಿರೂಪಸಂದ್ರ ಗ್ರಾಮದಲ್ಲಿ ನಡೆದಿದೆ.
ಕೌಟುಂಬಿಕ ಕಲಹದ (Family Feud) ಹಿನ್ನೆಲೆಯಲ್ಲಿ ಸುಧಾರಾಣಿ (32) ತನ್ನ ಮಗಳು ಸಾನ್ವಿಯ (3) ಕತ್ತು ಹಿಸುಕಿ ಕೊಲೆ ಮಾಡಿ ತಾನೂ ಬಾವಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಸುಧಾರಾಣಿ ಹಾಗೂ ರವಿ ದಂಪತಿ ಆಗಾಗ ಕೌಟುಂಬಿಕ ವಿಚಾರವಾಗಿ ಜಗಳ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಹೀಗಾಗಿ ಗಂಡನ (Husband) ಮೇಲಿನ ಕೋಪಕ್ಕೆ ಮಗುವನ್ನು ಸಾಯಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ತಗೋ ನಿನ್ನ ಲವ್ವರ್ ತಲೆ ತಂದಿದ್ದೇನೆ- ಪತ್ನಿ ಮನೆ ಮುಂದೆ ರುಂಡ ಎಸೆದ ಪತಿ!
ಗುರುವಾರದಂದು ಮನೆಯಿಂದ ಹೋಗಿರುವ ಗಂಡ ರವಿ ಮತ್ತೆ ಮನೆಗೆ ಬಂದಿಲ್ಲ ಎಂದು ತಿಳಿದುಬಂದಿದೆ. ರವಿ ನಾಪತ್ತೆ ಹಿಂದೆ ಸಣ್ಣ ಅನುಮಾನ ಇದ್ದು, ಹೆಂಡತಿ (Wife) ಮಗಳನ್ನು ಕೊಂದು ಪರಾರಿಯಾದನಾ ಎಂಬ ಸಣ್ಣ ಅನುಮಾನವೂ ಮೂಡಿದೆ. ಈ ನಡುವೆ ವರದಕ್ಷಿಣೆ ಕಿರುಕುಳದ ಪ್ರಕರಣವೂ ರವಿ ವಿರುದ್ಧ ದಾಖಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: 2 ವರ್ಷದ ಹೆಣ್ಣು ಮಗು ಅನುಮಾನಾಸ್ಪದ ಸಾವು – ತಾತನ ವಿರುದ್ಧವೇ ಕೊಲೆಯ ಶಂಕೆ
ಉಡುಪಿ: ಪತ್ನಿಯೊಬ್ಬಳು ಕುದಿಯುತ್ತಿರುವ ನೀರಿಗೆ ಖಾರದ ಪುಡಿ ಬೆರೆಸಿ ಪತಿ ಮೇಲೆ ಎರಚಿದ ಪ್ರಸಂಗವೊಂದು ಉಡುಪಿಯಲ್ಲಿ (Udupi) ನಡೆದಿದೆ.
ಈ ಘಟನೆ ಕಟಪಾಡಿಯ ಶಂಕರಪುರ (Shankarapura Katapadi) ಎಂಬಲ್ಲಿ ನಡೆದಿದೆ. ಪತಿ ಮೊಹಮ್ಮದ್ ಅಶ್ರಫ್ ಹಾಗೂ ಪತ್ನಿ ಅಫ್ರೀನ್ ನಡುವೆ ಹಲವು ಸಮಯದಿಂದ ವೈಮನಸ್ಸು ಎದ್ದಿತ್ತು. ಗಂಡನ ಅಕ್ರಮ ಸಂಬಂಧದ ಬಗ್ಗೆ ಹೆಂಡತಿಗೆ ಅನುಮಾನ ಇತ್ತು.
ಅಕ್ಟೋಬರ್ ತಿಂಗಳಲ್ಲಿ ಅಫ್ರೀನ್ ಹಾಗೂ ಮೊಹಮ್ಮದ್ ಮದುವೆಯಾಗಿತ್ತು. ಮದುವೆಯಾದ ಬಳಿಕ ಅಫ್ರೀನ್ ಮನೆಯಲ್ಲೇ ಗಂಡ-ಹೆಂಡತಿ ಇದ್ದರು. ಅಫ್ರೀನ್ಳಿಗೆ ಮೊಹಮ್ಮದ್ ಆಸೀಫ್ ಬೇರೆ ಹುಡುಗಿಯೊಂದಿಗೆ ಸಂಬಂಧ ಹೊಂದಿರುವುದಾಗಿ ಅನುಮಾನ ವ್ಯಕ್ತವಾಗಿತ್ತು. ಇದನ್ನೂ ಓದಿ: ಮಾತುಬಾರದ ತಾಯಿ ನಾಪತ್ತೆ – ಸುಳಿವುಕೊಟ್ಟವರಿಗೆ 50 ಸಾವಿರ ರೂ. ಘೋಷಿಸಿದ ಮಗಳು
ಇದೇ ವಿಚಾರಕ್ಕೆ ಮನೆಯಲ್ಲಿ ಇಬ್ಬರ ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು. ಜಗಳ ನಡೆದು ಪತಿ ಬಾತ್ ರೂಮ್ನಿಂದ ಹೊರ ಬರುವಾಗ ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರನ್ನು ಪತ್ನಿ ಎರಚಿದ್ದಾಳೆ. ಬಳಿಕ ಗಾಯಗೊಂಡ ಪತಿಯನ್ನು ರೂಮಿನಲ್ಲಿಯೇ ಕೂಡಿ ಹಾಕಿದಾಳೆ. ಅಲ್ಲದೆ ಬೇರೆಯವರಿಗೆ ತಿಳಿಸಿದ್ರೆ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದಾಳೆ.
ಈ ಬಗ್ಗೆ ಪತಿ ಮೊಹಮ್ಮದ್ ಆಸೀಫ್ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ತುಮಕೂರು: ಹೆಂಡತಿ ಕಾಟದಿಂದ ಬೇಸತ್ತು ಎಂಜಿನಿಯರ್ ಒಬ್ಬರು ಅಣ್ಣನಿಗೆ ಆಡಿಯೋ ಮೆಸೇಜ್ ಕಳುಹಿಸಿ ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ.
ಮೃತನನ್ನು ಮಂಜುನಾಥ್ ಎಂದು ಗುರುತಿಸಲಾಗಿದ್ದು, ಇವರು ಬೆಂಗಳೂರು ಮೆಟ್ರೊದಲ್ಲಿ ಎಂಜಿನಿಯರ್ (Metro Engineer) ಆಗಿ ಕಾರ್ಯನಿರ್ವಹಿಸಿದ್ದರು. ಕಳೆದ 9 ವರ್ಷಗಳ ಹಿಂದೆ ಮಂಜುನಾಥ್ ತುರುವೆಕೆರೆ ಮೂಲದ ಪ್ರಿಯಾಂಕಾ ಯಾನೆ ಪವಿತ್ರಾಳನ್ನ ಮದುವೆಯಾಗಿದ್ದರು. ಮದುವೆ ನಂತರ ಮಂಜುನಾಥ್ಗೆ ಪತ್ನಿ ಪವಿತ್ರಾ ಮಾನಸಿಕ ಕಿರುಕುಳ ನೀಡಿದ್ದಳು. ಇದರಿಂದ ಮನನೊಂದು ಮಂಜುನಾಥ್ ಕೆಬಿ ಕ್ರಾಸ್ ನ ಕುದ್ರುಪಾಳ್ಯದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಾಯೋ ಮುನ್ನ ಮುಂಜುನಾಥ್ ತನ್ನ ಅಣ್ಣನಿಗೆ ಆಡಿಯೋ ಮೆಸೇಜ್ ಮಾಡಿದ್ದಾರೆ. ಅದರಲ್ಲಿ ನನಗೆ ಅವಳ ಜೊತೆ ಜಿವನ ಮಾಡೋಕೆ ಆಗ್ತಾ ಇಲ್ಲ. ಆ ಮನೆಹಾಳಿಯಿಂದ ನಾನು ಸಾಯ್ತಾ ಇದ್ದೀನಿ. ನನ್ನ ಮಗಳನ್ನ ಚೆನ್ನಾಗಿ ನೋಡಿಕೊಳ್ಳೋಕೆ ಹೇಳು. ಯಾರು ಬೇಜಾರ್ ಮಾಡ್ಕೊಬೇಡಿ ಕಣ್ರೋ ಪ್ಲೀಸ್. ನಾವು ಕೂಲಿ ಮಾಡ್ಕೊಂಡ್ ಜೀವನ ಮಾಡುವವರಂತೆ. ಹಳ್ಳಿಗೆ ಬರಲ್ಲ ಅಂದೊಳನ್ನ ಯಾಕಪ್ಪ ನನಗೆ ಮದುವೆ ಮಾಡಿದ್ರು. ಮೈಸೂರಲ್ಲಿ ಯಾರನ್ನೋ ನೋಡಿದ್ಲಂತೆ, ಅವ್ರನ್ನೇ ಆಗ್ಬೆಕಿತ್ತಂತೆ. ಪೊಲೀಸ್ ಗೆ ಹೇಳ್ಬೇಡಿ,ಪೋಸ್ಟ್ ಮಾರ್ಟಮ್ ಮಾಡ್ಬಿಡ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಿನ್ ಹೆಂಡ್ತಿ ನಂಬರ್ ಕೊಡು ಎಂದವನ ಮೇಲೆ ರೌಡಿಯಿಂದ ಹಲ್ಲೆ – ಒದೆ ತಿಂದವನ ಕಡೆಯವರಿಂದ ಮನೆ ಮುರಿದು ದಾಂಧಲೆ
ಸದ್ಯ ಪತ್ನಿ ಮತ್ತು ತಮ್ಮ ರಾಕೇಶ್ ಸೇರಿ ಇಡೀ ಕುಟುಂಬದ ಮೇಲೆ ತಿಪಟೂರು ಕಿಬ್ಬಾನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ವಯಸ್ಕರ ಸಿನಿಮಾದಲ್ಲಿ ನಟಿಸುವ ಮೂಲಕ ಸಖತ್ ಫೇಮಸ್ ಆಗಿದ್ದ ನಟಿ ಶ್ರೀ ರಾಪಕಾ (Shree Rapaka), ಆಗಾಗ್ಗೆ ವಿವಾದಿತ (Controversial) ಮಾತುಗಳನ್ನು ಆಡದೇ ಇದ್ದರೆ ನಿದ್ದೆ ಬರುವುದಿಲ್ಲ ಅನಿಸುತ್ತದೆ. ಆಗಾಗ್ಗೆ ಅವರು ಅಂತಹ ಮಾತುಗಳನ್ನು ಆಡುವ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ.
ಇದೀಗ ವಾಹಿನಿಯೊಂದರ ಸಂದರ್ಶನದಲ್ಲಿ ನಾಲಿಗೆ ಹರಿಬಿಟ್ಟಿರುವ ಶ್ರೀ ರಾಪಕಾ, ತಮ್ಮ ಗೆಳತಿಯ ಜೀವನದಲ್ಲಿ ನಡೆದಿರುವ ಘಟನೆಯನ್ನು ತೆಗೆದುಕೊಂಡು ಸಾರ್ವಜನಿಕವಾಗಿ ಹೇಳಿಕೆಯೊಂದನ್ನು ನೀಡಿದ್ದಾರೆ. ಅದು ಪರ ಮತ್ತು ವಿರೋಧದ ಚರ್ಚೆಗೆ ಕಾರಣವಾಗಿದೆ. ರಾಪಕಾ ಬಗ್ಗೆ ನೆಗೆಟಿವ್ ಕಾಮೆಂಟ್ ಗಳನ್ನು ಹಾಕಲಾಗುತ್ತಿದೆ.
ಮದುವೆಯ ಮುನ್ನ ಸೆಕ್ಸ್ ಮಾಡುವುದು ತಪ್ಪು ಅಲ್ಲ ಎಂದಿರುವ ನಟಿ, ತಮ್ಮ ಭಾವಿ ಪತಿಯ ಜೊತೆ ದಯವಿಟ್ಟು ಸೆಕ್ಸ್ ಮಾಡಿ, ಅವನು ಗಂಡು ಹೌದೋ ಅಥವಾ ಅಲ್ಲವೋ ಎನ್ನುವುದನ್ನು ಟೆಸ್ಟ್ ಮಾಡಿ ಎಂದಿದ್ದಾರೆ. ಈ ಮಾತುಗಳು ಸಖತ್ ವೈರಲ್ ಕೂಡ ಆಗಿವೆ. ನಟಿ ಯಾಕೆ ಹಾಗೆ ಹೇಳಿದರು ಎನ್ನುವುದಕ್ಕೂ ಕಾರಣವೂ ಇದೆ.
ತನ್ನ ಸ್ನೇಹಿತೆಯೊಬ್ಬರು ವೈದ್ಯರೊಬ್ಬರನ್ನು ಮದುವೆಯಾಗಿದ್ದರು. ತುಂಬಾ ಕನಸು ಕಟ್ಟಿಕೊಂಡು ಹೊಸ ಜೀವನಕ್ಕೆ ಕಾಲಿಟ್ಟಿದ್ದರಂತೆ. ಆದರೆ, ಫಸ್ಟ್ ನೈಟ್ ದಿನ ಅವನು ಸಲಿಂಗಿ ಎಂದು ಗೊತ್ತಾಗಿ, ಅವಳ ಕನಸಿನ ಸೌಧವೇ ಮುರಿದು ಬಿದ್ದಿತ್ತು ಎಂದು ಹೇಳಿಕೊಂಡಿದ್ದಾರೆ. ಹಾಗಾಗಿ ಮದುವೆಯ ಮುನ್ನ ಸೆಕ್ಸ್ ಮಾಡಿ ಗಂಡನ್ನ ಟೆಸ್ಟ್ ಮಾಡಿ ಎಂದಿದ್ದಾರೆ ನಟಿ.
ರಾಪಕಾ ಆಡಿದ ಮಾತುಗಳು ಅನೇಕರ ಕಣ್ಣು ಕೆಂಪಾಗಿಸಿವೆ. ಗೆಳತಿಯ ಬದುಕಿನಲ್ಲಿ ನಡೆದದ್ದು, ಎಲ್ಲರಿಗೂ ಅನ್ವಯಿಸಲ್ಲ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಒಬ್ಬ ನಟಿಯಾಗಿ ಜವಾಬ್ದಾರಿಯುತ ಮಾತುಗಳನ್ನು ಆಡಿ ಎಂದೂ ಸಲಹೆ ನೀಡಿದ್ದಾರೆ.
ಬೆಳಗಾವಿ: ಅಮವಾಸ್ಯೆ ಹಿನ್ನೆಲೆ ಗಂಡನೊಂದಿಗೆ ದೇವಸ್ಥಾನಕ್ಕೆ ಬಂದಿದ್ದ ಪತ್ನಿ (Wife) ಎದುರೇ ಗಂಡನ (Husband) ಕೊಲೆ ಮಾಡಿದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಐನಾತಿ ಹೆಂಡತಿ ಪ್ರಿಯಾಂಕಾ ಜಗಮತ್ತಿಯನ್ನ ಮೂಡಲಗಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಸೋಮವಾರ ಭೀಮನ ಅಮವಾಸ್ಯೆಯಾಗಿದ್ದರಿಂದ ಶಂಕರ್ ಜಗಮತ್ತಿ ಮತ್ತು ಪ್ರಿಯಾಂಕಾ ಜಗಮತ್ತಿ ದಂಪತಿ ಮೂಡಲಗಿ (Mudalagi) ತಾಲೂಕಿನ ವಡೇರಹಟ್ಟಿ ಗ್ರಾಮದ ಬನಸಿದ್ದೇಶ್ವರ ದೇವಸ್ಥಾನಕ್ಕೆ (Banasiddeshwara Temple) ಬಂದಿದ್ದರು. ಈ ವೇಳೆ ಪತ್ನಿಯ ಕಣ್ಣೆದುರೇ ದುಷ್ಕರ್ಮಿಗಳು ಪತಿಯ ಹತ್ಯೆ ಮಾಡಿದ್ದು, ಸ್ಥಳದಲ್ಲೇ ಶಂಕರ್ ಜಗಮತ್ತಿ ಸಾವನ್ನಪ್ಪಿದ್ದರು. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್ಕೌಂಟರ್; 4 ಉಗ್ರರ ಹತ್ಯೆ
ಕೊಲೆ ಪ್ರಕರಣದಲ್ಲಿ ಆರೋಪಿಗಳಾದ ಪ್ರಿಯಾಂಕಾಳ ಪ್ರಿಯಕರ ಶ್ರೀಧರ್ ತಳವಾರ(21), ಶಂಕರ್ ಪತ್ನಿ ಪ್ರಿಯಾಂಕ ಜಗಮತ್ತಿಯನ್ನು (21) ಬಂಧಿಸಲಾಗಿದೆ. ಮೊದಲೇ ಪಕ್ಕಾ ಪ್ಲಾನ್ ಮಾಡಿಕೊಂಡಿದ್ದ ಪ್ರಿಯಾಂಕಾ ಮನೆ ಬಿಡುವ ವೇಳೆ ಪ್ರಿಯಕರ ಶ್ರೀಧರ್ಗೆ ಕರೆ ಮಾಡಿ ದೇವಸ್ಥಾನಕ್ಕೆ ಬಂದಿದ್ದಳು. ದೇವರ ದರ್ಶನ ಮುಗಿಸಿಕೊಂಡು ವಾಪಾಸ್ ಬರುತ್ತಿದ್ದಂತೆ ಆರೋಪಿ ಶ್ರೀಧರ್ ಪ್ರಿಯಾಂಕಾ ಪತಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದ. ಇದನ್ನೂ ಓದಿ: ಕೋಳಿ ರಕ್ತ ಗುಪ್ತಾಂಗಕ್ಕೆ ಹಚ್ಚಿಕೊಂಡು ಉದ್ಯಮಿ ವಿರುದ್ಧ ಸುಳ್ಳು ರೇಪ್ ಕೇಸ್ – ಕಿಲಾಡಿ ಲೇಡಿ ಗ್ಯಾಂಗ್ ಅರೆಸ್ಟ್
ಇತ್ತ ಏನು ಗೊತ್ತಿಲ್ಲದಂತೆ ನಾಟಕ ಆಡಿದ್ದ ಪ್ರಿಯಾಂಕಾ ಬೈಕ್ ತನ್ನಿ ಎಂದು ದೂರದಲ್ಲಿ ನಿಂತಿದ್ದಳು. ಕೊಲೆ ಬಳಿಕ ಏನೂ ಗೊತ್ತಿಲ್ಲದಂತೆ ಸುಪನಾತಿ ಹೆಂಡತಿ ಭರ್ಜರಿ ನಾಟಕ ಆಡಿದ್ದಳು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮೂಡಲಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಪ್ರಾಥಮಿಕ ತನಿಖೆಯಲ್ಲಿ ಶ್ರೀಧರ್ ಮತ್ತು ಪ್ರಿಯಾಂಕಾ ನಡುವೆ ಸಂಬಂಧ (Relationship) ಇರುವುದು ಬೆಳಕಿಗೆ ಬಂದಿದೆ. ಈ ವೇಳೆ ಕಾಲ್ ರೆಕಾರ್ಡ್, ಕಾಲ್ ಡಿಟೈಲ್ಸ್ ಹೀಗೆ ಟೆಕ್ನಿಕಲ್ ಎವಿಡೆನ್ಸ್ ಆಧಾರದ ಮೇಲೆ ಪ್ರಿಯಾಂಕಾಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮಗನ ಮೇಲೆಯೇ ಪೆಟ್ರೋಲ್ ಎರಚಿ ಸುಟ್ಟು ಹಾಕಿದ ತಾಯಿ!
ಚಿಕ್ಕಬಳ್ಳಾಪುರ: ಗಂಡ-ಹೆಂಡತಿ ಜಗಳ ಉಂಡು ಮಲಗೋ ತನಕ ಅಂತಾರೆ. ಆದರೆ ಅವರಿಬ್ಬರ ಮಧ್ಯೆ ಉಂಡು ಮಲಗಿದ ಮೇಲೂ ಜಗಳ ಮುಂದುವರಿದಿತ್ತು. ಮಧ್ಯರಾತ್ರಿ ಹೆಂಡತಿ ಹಾಗೂ ಗಂಡನ ನಡುವೆ ನಡೆದ ಜಗಳದಲ್ಲಿ ಗಂಡನೋರ್ವ ಹೆಂಡತಿ ಸೇರಿ ಇಬ್ಬರು ಮಕ್ಕಳನ್ನ ಮಚ್ಚಿನಿಂದ ಕೊಚ್ಚಿ ಕೊಂದು ತಾನು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಈ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಯಣ್ಣೂರು ಗ್ರಾಮದಲ್ಲಿ ನಡೆದಿದೆ. ಗಂಡ-ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು ಅನ್ನೋ ಹಾಗೆ ಏನೂ ಅರಿಯದ ಇಬ್ಬರು ಹೆಣ್ಣುಮಕ್ಕಳು ತಾಯಿಯ ಜೊತೆಯಲ್ಲಿ ಸಾವಿನ ಮನೆ ಸೇರಿದ್ದು, ಗಂಡ ವಿಷ ಸೇವಿಸಿ ಆಸ್ಪತ್ರೆ ಸೇರಿದ್ದಾನೆ.
ಅಂದಹಾಗೆ ಗ್ರಾಮದ ಸೊಣ್ಣಪ್ಪ ಹಾಗೂ ಕೋಲಾರ ತಾಲೂಕು ನಾಚಹಳ್ಳಿಯ ನೇತ್ರಾವತಿಗೆ ವಿವಾಹವಾಗಿ 12 ವರ್ಷಗಳೇ ಕಳೆದಿದ್ದು ವರ್ಷಿತಾ ಹಾಗೂ ಸ್ನೇಹ ಇಬ್ಬರು ಹೆಣ್ಣು ಮಕ್ಕಳಿದ್ರು. ಆದರೆ ಮೊದ ಮೊದಲು ಎಲ್ಲವೂ ಚೆನ್ನಾಗಿದ್ದ ಸಂಸಾರದಲ್ಲಿ ಕಳೆದ 5-6 ವರ್ಷಗಳಿಂದ ಬಿರುಕು ಮೂಡಿದೆ. ನೇತ್ರಾವತಿ ಅದ್ಯಾರೋ ಅದೇ ಊರಿನವನೊಂದಿಗೆ ಅಕ್ರಮ ಸಂಬಂಧ (Illicit Relationship) ಹೊಂದಿದ ಆರೋಪ ಕೇಳಿಬಂದಿದ್ದು, ಈ ವಿಚಾರದಲ್ಲಿ ಗಂಡ-ಹೆಂಡತಿ ದಾಂಪತ್ಯ ಜೀವನ ಹಳಿತಪ್ಪಿದೆ. ಈ ವಿಚಾರವಾಗಿ ಹೆಂಡತಿ ಗಂಡನ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸಿ ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲು ಸಹ ಏರಿದ್ದಳಂತೆ.
ಇಷ್ಟೆಲ್ಲಾ ಮನಸ್ತಾಪ ಇದ್ರೂ ಗಂಡ-ಹೆಂಡತಿ ಒಂದೇ ಮನೆಯಲ್ಲಿ ವಾಸವಾಗಿದ್ರೂ ಗಂಡ-ಹೆಂಡತಿ ಸಂಬಂಧ ಅಷ್ಟಕ್ಕಷ್ಟೇ ಇತ್ತಂತೆ. ಇದೇ ವಿಚಾರದಲ್ಲಿ ಹಲವು ಬಾರಿ ಹಿರಿಕರ ಸಮ್ಮುಖದಲ್ಲಿ ಪೊಲೀಸ್ ಠಾಣೆಯಲ್ಲಿ ರಾಜೀ ಪಂಚಾಯ್ತಿಗಳನ್ನ ಸಹ ನಡೆಸಲಾಗಿತ್ತು. ಆದರೂ ಇದೇ ರೀತಿ ಕಳೆದ ರಾತ್ರಿ ಸಹ ಗಂಡ-ಹೆಂಡತಿ ನಡುವೆ ಜಗಳ ನಡೆದಿದ್ದು, ಜಗಳ ಕೊಲೆಯಲ್ಲಿ ಅಂತ್ಯವಾಗಿರಬಹುದು ಅಂತ ಅಂದಾಜಿಸಲಾಗಿದೆ.
ಕಳೆದ ರಾತ್ರಿ ನಡೆದ ಜಗಳದಲ್ಲಿ ಗಂಡ ಸೊಣ್ಣಪ್ಪ ಹೆಂಡತಿ ನೇತ್ರಾವತಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದು, ಮೃತ ನೇತ್ರಾವತಿ ತಲೆ ಕುತ್ತಿಗೆ ಭಾಗದಲ್ಲಿ ಗಾಯದ ಗುರುತುಗಳಿವೆ. ಹಿರಿಯ ಮಗಳು ವರ್ಷಿತಾ ತಲೆಗೆ ಗಂಭೀರ ಗಾಯವಾಗಿದ್ದು, ಆಕೆಗೂ ಮಚ್ಚಿನಿಂದ ಹಲ್ಲೆ ಮಾಡಿರುವ ಸಾಧ್ಯತೆ ಇದೆ. ಪಾಪ ಕಿರಿಯ ಮಗಳು ವರ್ಷಿತಾ ಮೈಮೇಲೆ ಯಾವುದೇ ಗಾಯದ ಗುರುತುಗಳಿಲ್ಲವಾದರೂ ಆಕೆಯನ್ನ ಕತ್ತು ಹಿಸುಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ದೆಹಲಿ ಪಾಲಿಕೆ ಚುಕ್ಕಾಣಿ ಹಿಡಿದ ಆಮ್ ಆದ್ಮಿ – ಶೆಲ್ಲಿ ಒಬೆರಾಯ್ ಮೇಯರ್ ಆಗಿ ಆಯ್ಕೆ
ಮೇಲ್ನೋಟಕ್ಕೆ ಮೂವರನ್ನ ಕೊಲೆ ಮಾಡಿ ತದನಂತರ ಪೆಟ್ರೋಲ್ (Petrol) ಸುರಿದು ಬೆಂಕಿ ಹಚ್ಚಿರುವ ಬಲವಾದ ಶಂಕೆ ವ್ಯಕ್ತವಾಗಿದೆ. ಘಟನೆ ನಂತರ ಸೊಣ್ಣಪ್ಪ ಸಹ ತಾನು ಸಹ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬೆಳಗ್ಗೆ ಮನೆಯಿಂದ ಹೊಗೆ ಬರೋದನ್ನ ನೋಡಿದ ಅಕ್ಕಪಕ್ಕದ ಮನೆಯವರು ಮನೆ ಬಳಿ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮಧ್ಯರಾತ್ರಿಯಲ್ಲಿ ಘಟನೆ ನಡೆದಿದ್ದು, ನಾಲ್ವರು ಸಹ ಮನೆಯ ಮುಂಭಾಗ ಒಬ್ಬರ ಪಕ್ಕ ಒಬ್ಬರು ಮಲಗಿದ ಹಾಗೆ ಕಂಡು ಬಂದಿದ್ದಾರೆ. ಕೂಡಲೇ ಉಸಿರಾಡುತ್ತಿದ್ದ ಸೊಣ್ಣಪ್ಪ ನನ್ನ ಶಿಡ್ಲಘಟ್ಟ ಆಸ್ಪತ್ರೆಗೆ ರವಾನಿಸಿ ಹೆಚ್ಚಿನ ಚಿಕಿತ್ಸೆಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಸೊಣ್ಣಪ್ಪ ಪ್ರಾಣಾಪಾಯದಿಂದ ಪಾರಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಇನ್ನೂ ಶಿಡ್ಲಘಟ್ಟ ಗ್ರಾಮಾಂತರ ಮೃತಳ ಸಂಬಂಧಿಕರ ಬಳಿ ಪ್ರಕರಣ ಪಡೆದುಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತಿದಾರೆ. ಆದರೆ ಹೆಂಡತಿಯ ಅಕ್ರಮ ಸಂಬಂಧದಿಂದ ಬೇಸತ್ತ ಗಂಡ ಮಾಡಬಾರದ ಕೆಲಸ ಮಾಡಿಯಾಗಿದೆ. ಗಂಡ -ಹೆಂಡತಿ ಜಗಳದಲ್ಲಿ ಪಾಪ ಏನೂ ಅರಿಯದ ಅಮಾಯಕ ಇಬ್ಬರು ಹೆಣ್ಣು ಮಕ್ಕಳು ಬಲಿಯಾಗಿಬಿಟ್ರಲ್ಲಾ ಅನ್ನೋದೇ ನೋವಿನ ಸಂಗತಿ.
LIVE TV
[brid partner=56869869 player=32851 video=960834 autoplay=true]
ಬೆಳಗಾವಿ: ಆತ ಸರ್ಕಾರಿ ನೌಕರಿಯಲ್ಲಿದ್ರೂ ಕೆಲವೇ ವರ್ಷಗಳಲ್ಲಿ ನಿವೃತ್ತಿ ಹಂತಕ್ಕೂ ಬಂದಿದ್ದ. ಹಾಗೆ 23 ವರ್ಷಗಳ ಹಿಂದೆ ಮದುವೆಯಾಗಿರುವ ಆತನಿಗೆ ಮದುವೆಗೆ ಬಂದ ಮೂವರು ಮಕ್ಕಳಿದ್ದಾರೆ. ಆದರೆ ಮದುವೆಯಾದ ದಿನದಿಂದಲೂ ಈತನ ಕಿರುಕುಳ (Husband Torture) ಸಹಿಸಿಕೊಂಡಿದ್ದ ಪತ್ನಿ ಕೊನೆಗೂ ಕಾಟ ತಾಳಲಾರದೇ ಮಹಿಳಾ ಸಂಘಟನೆಗೆ ಹೋಗಿ ನ್ಯಾಯ ಕೇಳಿದ್ದಳು. ಗಂಡನಿಗೆ ವಾರ್ನ್ ಮಾಡುವಂತೆ ಮನವಿ ಮಾಡಿಕೊಂಡಿದ್ದಳು. ನ್ಯಾಯ ಬಗೆಹರಿಸುವುದಾಗಿ ಹೇಳಿದ್ದ ಮಹಿಳೆಯೇ ಇದೀಗ ದೊಡ್ಡ ಶಾಕ್ ನೀಡಿ ದೋಖಾ ಮಾಡಿದ್ದಾಳೆ.
ಬೆಳಗಾವಿ (Belagavi) ಯ ಹನುಮಾನ್ ನಗರದ ನಿವಾಸಿ ತಬ್ಸುಮ್, ಕಳೆದ 23 ವರ್ಷದ ಹಿಂದೆ ಕೇಂದ್ರಿಯ ಅಬಕಾರಿ ಮತ್ತು ಕಸ್ಟಮ್ಸ್ ಆಯುಕ್ತರ ಕಚೇರಿಯಲ್ಲಿ ಇನ್ಸ್ ಪೆಕ್ಟರ್ ಆಗಿರುವ ಬೆಳಗಾವಿಯ ಮೊಹಮ್ಮದ್ ಆಸೀಫ್ ಇನಾಮದಾರ ಎಂಬಾತನನ್ನ ಮದುವೆ ಆಗಿದ್ದರು. ಈ ದಂಪತಿಗೆ 21, 19, 17 ವರ್ಷದ ಮೂವರು ಗಂಡು ಮಕ್ಕಳಿದ್ದಾರೆ. ಆದರೆ ಮಕ್ಕಳು ಮದುವೆ ವಯಸ್ಸಿಗೆ ಬಂದ್ರೂ ಹೆಂಡತಿ ಜೊತೆಗೆ ಜಗಳ ಮಾಡುವುದನ್ನ ಆಸೀಫ್ ಬಿಟ್ಟಿರಲಿಲ್ಲ. ಪತ್ನಿಗೆ ನಿರಂತರವಾಗಿ ಕಿರುಕುಳ ಕೊಡ್ತಾನೆ ಇದ್ದ. ಇದನ್ನೂ ಓದಿ: ಗೆಳತಿ ಹತ್ಯೆಗೈದು ಫ್ರಿಡ್ಜ್ನಲ್ಲಿಟ್ಟ – ಕೆಲವೇ ಗಂಟೆಯಲ್ಲೇ ಬೇರೊಬ್ಬಳನ್ನು ಮದುವೆಯಾದ
ಪತಿ ಕಿರುಕುಳ ತಾಳಲಾರದೇ ತಬ್ಸುಮ್ ಮಹಿಳಾ ಸಂಘಟನೆಯ ನಾಯಕಿ ಸೀಮಾ ಇನಾಮದಾರ್ ಬಳಿ ತನ್ನ ಕಷ್ಟ ಹೇಳಿಕೊಂಡಿದ್ದಾಳೆ. ಹೀಗಾಗಿ ಆಸೀಫ್ ನಂಬರ್ ಪಡೆದ ಸೀಮಾ ಮೊದಲು ಆತನಿಗೆ ಬೆದರಿಕೆ ಹಾಕಿದ್ದು, ಬಳಿಕ ಆತನೊಂದಿಗೆ ಸಲುಗೆಯಿಂದ ಮಾತಾಡಿ ತನ್ನ ಬುಟ್ಟಿಗೆ ಬೀಳಿಸಿಕೊಂಡಿದ್ದಾಳೆ. ಸಾಲದ್ದು ಅಂತ ಒಂದು ವಾರದ ಹಿಂದಷ್ಟೇ ಹೆಂಡತಿ ತಬ್ಸುಮ್ಗೆ ಗೊತ್ತಿಲ್ಲದಂತೆ ಆಸೀಫ್ನನ್ನ ಮದುವೆಯಾಗುವ ಮೂಲಕ ನಂಬಿದವರ ಕುತ್ತಿಗೆ ಕುಯ್ದಿದ್ದಾಳೆ. ಇದಾದ ನಾಲ್ಕು ದಿನದ ನಂತರ ಆಸೀಫ್ ತನ್ನ ಮಗನಿಗೆ ನಾನು ಮದುವೆಯಾಗಿದ್ದೇನೆ ಅಂತಾ ಫೋಟೋ ಕಳಿಸಿದ್ದಾನೆ. ಈ ವಿಚಾರ ತಬ್ಸುಮ್ಗೆ ಗೊತ್ತಾಗಿ ಗಂಡನಿಗೆ ಫೋನ್ ಮಾಡಿ ಬೈಯ್ದಿದ್ದಾಳೆ. ಬಳಿಕ ಮನೆಗೆ ಬಂದ ಆಸೀಫ್ ಹೆಂಡತಿ ತಬ್ಸುಮ್ ಮೇಲೆ ಹಲ್ಲೆ ಮಾಡಿ ಬ್ಲೇಡ್ನಿಂದ ಗಾಯ ಮಾಡಿ ಹೋಗಿದ್ದಾನೆ.
ಸದ್ಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಬ್ಸುಮ್ ತನ್ನ ಪರಿಸ್ಥಿತಿ ನೆನೆದು ಕಣ್ಣೀರಿಡುತ್ತಿದ್ದಾಳೆ. ನ್ಯಾಯಕೊಡಿಸ್ತೀನಿ ಅಂತ ಹೇಳಿ ಅನ್ಯಾಯ ಮಾಡಿದ ಸೀಮಾ ವಿರುದ್ಧ ಆಕ್ರೋಶ ಹೊರ ಹಾಕ್ತಾ ಇಬ್ಬರಿಗೂ ತಕ್ಕ ಶಾಸ್ತಿ ಆಗಬೇಕು ಅಂತಾ ಒತ್ತಾಯಿಸಿದ್ದಾಳೆ. ಮಹಿಳಾ ಠಾಣೆಯಲ್ಲಿ ಕೇಸ್ ದಾಖಲಿಸಿಕೊಂಡ ಪೊಲೀಸರು ಲಾಡ್ಜ್ನಲ್ಲಿದ್ದ ಆಸೀಫ್ ಹಾಗೂ ಸೀಮಾರನ್ನು ವಶಕ್ಕೆ ಪಡೆದಿದ್ದಾರೆ. ಒಟ್ಟಾರೆ ಗಂಡನನ್ನು ಸರಿ ದಾರಿಗೆ ತರಲು ಮಹಿಳಾ ಸಂಘಟನೆ ಬಳಿ ಹೋದ ಮಹಿಳೆಗೆ ದಾರಿಯೇ ಸಂಪೂರ್ಣ ಕತ್ತಲಾಗಿದೆ.
Live Tv
[brid partner=56869869 player=32851 video=960834 autoplay=true]
ತುಮಕೂರು: ಮೂಢನಂಬಿಕೆಗೆ ಒಳಗಾಗಿ ಬೇರೆಯಾಗಿದ್ದ ಜೋಡಿಯನ್ನು (Couple) ನ್ಯಾಯಾಧೀಶರು ಒಂದು ಮಾಡಿದ ಘಟನೆ ತುಮಕೂರು (Tumakuru) ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.
ದಸೂಡಿ ಸಮೀಪದ ಮರೆನಾಡು ಗ್ರಾಮದ ಪಾರ್ವತಮ್ಮ, ಹಂದನಕೆರೆ ಹೋಬಳಿಯ ಮಂಜುನಾಥ್ ದಂಪತಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ವೆಂಕಟೇಶಪ್ಪನವರ ಮುಂದೆ ತಮ್ಮ ವಿಚ್ಛೇದನಾ (Divorce) ಅರ್ಜಿಯ ವಿಚಾರಣೆಗೆ ಹಾಜರಾಗಿದ್ದರು. ಮೂಢನಂಬಿಕೆಗೆ ಒಳಗಾಗಿ ಹೆಂಡತಿಯನ್ನು ಬಿಡುವಂತೆ ದೇವರು ಹೇಳಿದ್ದಾರೆ ಎಂದು ಮಂಜುನಾಥ್ ಪತ್ನಿ ಪಾರ್ವತಮ್ಮಗೆ ವಿಚ್ಛೇದನ ನೀಡಲು ಮುಂದಾದ ಬಗ್ಗೆ ನ್ಯಾಯಾಧೀಶರ ಬಳಿ ಹೇಳಿಕೊಂಡಿದ್ದಾರೆ. ಬಳಿಕ ಈ ಬಗ್ಗೆ ದಂಪತಿಗೆ ಚಿಕ್ಕನಾಯಕನಹಳ್ಳಿ ನ್ಯಾಯಾಲಯದ ನ್ಯಾಯಾಧೀಶರು ತಿಳುವಳಿಕೆ ಹೇಳಿದರು. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಹೆಂಡತಿ, ಮಕ್ಕಳ ಮೇಲೆ ರಾಕ್ಷಸ ಕೃತ್ಯ – 6ರ ಬಾಲಕ ಬಲಿ
ಈ ವೇಳೆ ದಂಪತಿ ನ್ಯಾಯಾಧೀಶರು ಹೇಳಿದ ಬುದ್ಧಿ ಮಾತು ಕೇಳಿ ಒಂದಾಗಿದ್ದಾರೆ. ಮನಸ್ತಾಪವನ್ನು ಮರೆತು ನ್ಯಾಯಾಧೀಶರ ಮಾತಿಗೆ ಬೆಲೆಕೊಟ್ಟು ಮತ್ತೆ ಒಂದಾದ ಜೋಡಿಗೆ ನ್ಯಾಯಾಲಯದಲ್ಲಿ ಹಾರ ಬದಲಾಯಿಸಿ ಶುಭ ಹಾರೈಸಲಾಯಿತು. ಇದನ್ನೂ ಓದಿ: ಬೆಂಗಳೂರಿನ ಗೋವಿಂದರಾಜು ಮೃತದೇಹ ಚಾರ್ಮಾಡಿ ಘಾಟಿಯಲ್ಲಿ ಪತ್ತೆ
Live Tv
[brid partner=56869869 player=32851 video=960834 autoplay=true]
ಗದಗ: ಪತ್ನಿಯ ಶೀಲಶಂಕಿಸಿ ಪತಿಯೇ ಆಕೆ ಹಾಗೂ 6 ವರ್ಷದ ಮಗುವಿಗೆ ಮನಬಂದಂತೆ ಚಾಕು ಇರಿದು ಕೊಲೆಗೆ ಯತ್ನಿಸಿದ ಘಟನೆ ಜಿಲ್ಲೆಯ ಮುಂಡರಗಿ (Mundaragi) ತಾಲೂಕಿನ ಡೋಣಿತಾಂಡ ದಲ್ಲಿ ನಡೆದಿದೆ.
ಕಳೆದ 10 ವರ್ಷದ ಹಿಂದೆ ಕಬಲಾಯತಕಟ್ಟಿ ನಿವಾಸಿ ಮುರಳಿ ಪೂಜಾರ ಹಾಗೂ ಡೋಣಿತಾಂಡ ಸಕ್ಕುಬಾಯಿಗೆ ಮದುವೆಯಾಗಿತ್ತು. ದಂಪತಿ ಗೋವಾದಲ್ಲಿ (Goa) ಕೂಲಿಕೆಲಸ ಮಾಡುತ್ತಿದ್ದರು. ಇವರಿಗೆ ಮೂವರು ಮುದ್ದಾದ ಮಕ್ಕಳಿದ್ದಾರೆ. ಆದರೆ ಇತ್ತೀಚಿಗೆ ಪತ್ನಿ ಸಕ್ಕುಬಾಯಿ ಶೀಲ ಶಂಕಿಸಿ ಪತಿ ಮುರಳಿ ಪೂಜಾರ ಕಿರುಕುಳ ನೀಡುತ್ತಿದ್ದ. ಕೆಲಸಕ್ಕೆ ಹೋದರೆ ಹಿಂಬಾಲಿಸುವುದು, ಅನುಮಾನ ಪಡುವುದು, ಸ್ವಲ್ಪ ತಡವಾಗಿ ಬಂದರೆ ಮನಬಂದಂತೆ ಹಲ್ಲೆ ಮಾಡುತ್ತಿದ್ದ. ಅಷ್ಟೇ ಅಲ್ಲದೇ, ಸ್ನಾನ ಮಾಡುವ ನೀರಲ್ಲಿ ಆ್ಯಸಿಡ್ ಬೆರೆಸಿದ್ದನಂತೆ. ಸ್ನಾನ ಮಾಡುವಾಗ ಸಕ್ಕುಬಾಯಿಗೆ ಮೈಯಲ್ಲಾ ಊರಿ, ಊರಿ ಕಾಣಿಸಿಕೊಂಡಿತಂತೆ. ಹೀಗೆ ಗಂಡನ ಅನೇಕ ಚಿತ್ರಹಿಂಸೆಗೆ ಬೇಸತ್ತು, 3 ದಿನದ ಹಿಂದೆ ತವರು ಮನೆ ಡೋಣಿ ತಾಂಡಾಗೆ ಸಕ್ಕುಬಾಯಿ ಬಂದಿದ್ದಳು. ಮುರಳಿ ಕೂಡ ಗುರುವಾರ ರಾತ್ರಿ ಮಾವನ ಮನೆಗೆ ಬಂದಿದ್ದನು. ಕುಟುಂಬಸ್ಥರು, ಸಮಾಜ ಮುಖಂಡರು ಸೇರಿ ಬೆಳಗ್ಗೆ ರಾಜಿಸಂಧಾನ ಮಾಡುವುದಾಗಿ ಹೇಳಿದ್ದರಂತೆ. ಆದರೆ ಅಷ್ಟೋತ್ತಿಗೆ ಬೆಳಗಿನ ಜಾವ ಮನೆಗೆ ನುಗ್ಗಿ ಚಾಕುವಿನಿಂದ ಸಕ್ಕುಬಾಯಿ ಹಾಗೂ 6 ವರ್ಷದ ಗಂಡು ಮಗು ಶಿವಂ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ.
ಹೆಂಡತಿ ಮೇಲೆ ಅನುಮಾನಗೊಂಡು ಇಂತಹ ಕೃತ್ಯಕ್ಕೆ ಮುಂದಾಗಿದ್ದಾನೆ. ಮನೆಯಲ್ಲಿ ಎಲ್ಲಂದರಲ್ಲಿ ರಕ್ತಮಡುಗಟ್ಟಿದೆ. ಬಿಡಿಸಲು ಹೋದ ತಂದೆ ಬಟ್ಟೆಗಳು ರಕ್ತವಾಗಿವೆ. ತಂದೆ, ತಾಯಿ, ಇಬ್ಬರು ಮೊಮ್ಮಕ್ಕಳು ಹಾಗೂ ಓರ್ವ ಮಗ ಇನ್ನೊಂದು ರೂಮ್ನಲ್ಲಿ ಹಾಗೂ ಹೊರಗಡೆ ಮಲಗಿದ್ದೇವು. ಗಲಾಟೆ, ಅಳುವ ಶಬ್ಧ ಕೇಳಿ ಹೊರಗಿಂದ ಬಂದು ಬಿಡಿಸಿಕೊಳ್ಳಲು ಮುಂದಾದೆವು. ಸ್ವಲ್ಪ ತಡವಾಗಿದ್ದರೆ ಮಗಳು ಹಾಗೂ ಮೊಮ್ಮಗುವಿನ ಹೆಣ ಉರುಳುತ್ತಿತ್ತು ಸಕ್ಕುಬಾಯಿ ಪೋಷಕರು ತಿಳಿಸಿದ್ದಾರೆ. ಇದನ್ನೂ ಓದಿ: ಭಯೋತ್ಪಾದನೆಯನ್ನು ಯಾವುದೇ ಧರ್ಮಕ್ಕೆ ಹೋಲಿಸೋದು ಬೇಡ – ಅಮಿತ್ ಶಾ
ಚಾಕು ಇರಿತದಿಂದ ಸಕ್ಕುಬಾಯಿ ಕಣ್ಣು, ಕೈ, ಎದೆ ಹಾಗೂ ಬೆಣ್ಣು ಭಾಗಕ್ಕೆ ಗಂಭೀರವಾದ ಗಾಯಗಳಾಗಿವೆ. ಈ ವೇಳೆ 6 ವರ್ಷ ಗಂಡು ಮಗು ಶಿವಂ ಗೂ ಸಹ ಕೈ, ಕಾಲಗೆ ಚಾಕುವಿನಿಂದ ಚುಚ್ಚಿದ್ದಾನೆ. ಅಷ್ಟರಲ್ಲಿ ಚಿರಾಟ, ನರಳಾಟ ಕೇಳಿ ಕುಟುಂಬಸ್ಥರು ಹಾಗೂ ಸ್ಥಳಿಗೆ ಆಗಮಿಸಿ ಆರೋಪಿ ಮುರಳಿ ಹಿಡದಿದ್ದಾರೆ. ಎಸ್ಕೇಪ್ ಆಗುತ್ತಿದ್ದ ಕಿರಾತಕನನ್ನು ಹಿಡಿದು ಸ್ಥಳೀಯರೇ ಧರ್ಮದೇಟು ನೀಡಿ ಕಟ್ಟಿಹಾಕಿದ್ದಾರೆ. ನಂತರ ಆರೋಪಿಯನ್ನು ಮುಂಡರಗಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಗಾಯಾಳು ತಾಯಿ ಹಾಗೂ ಮಗು ಗದಗ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.
ಜಿಲ್ಲೆಯಲ್ಲಿ ಚಾಕು ಇರಿತ ಹಾಗೂ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇವುಗಳಿಗೆ ಕಡಿವಾಣ ಹಾಕಬೇಕು. ಇವನು ಮಾಡಿರುವ ಕೆಟ್ಟ ಕೃತ್ಯಕ್ಕೆ ಇಲ್ಲೆ ಸುಟ್ಟು ಹಾಕಬೇಕು ಎಂದುಕೊಂಡಿದ್ದೆವು. ಕಾನೂನಿಗೆ ಗೌರವಿಸಿ ಪೊಲೀಸರಿಗೆ ಒಪ್ಪಿಸಿದ್ದೇವೆ. ಆರೋಪಿಗೆ ತಕ್ಕ ಶಿಕ್ಷೆ ನೀಡಬೇಕು ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ನಾಯಕರೇ ಅಲ್ಲ – ರಾಜ್ಯಕ್ಕೆ ಒಬ್ಬರೇ ಮಾಸ್ ಲೀಡರ್ ಅದು BSY: ವರ್ತೂರು ಪ್ರಕಾಶ್ ವಾಗ್ದಾಳಿ
Live Tv
[brid partner=56869869 player=32851 video=960834 autoplay=true]
ಚಿತ್ರದುರ್ಗ: ಎಲ್ಲೆಡೆ ಧರ್ಮಸಂಘರ್ಷ ತಾರಕಕ್ಕೇರಿದೆ. ಇಂತಹ ವೇಳೆ ಪ್ರೀತಿಸಿ ಮದುವೆಯಾಗಿದ್ದ ಹೆಂಡತಿ ಮತಾಂತರವಾಗಲಿಲ್ಲ ಎಂಬ ಕಾರಣಕ್ಕೆ ಗಂಡನೇ ಕೊಲೆ ಮಾಡಲು ಯತ್ನಿಸಿರುವ ಹೃದಯವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ (Chitradurga) ಬೆಳಕಿಗೆ ಬಂದಿದೆ.
ಆರೋಪಿ ಖಾದರ್ ಶಿವಮೊಗ್ಗ (Shivamogga) ಮೂಲದ ಉಮಾರನ್ನು ಮೊದಲೇ ವಿವಾಹವಾಗಿದ್ದ. ಚಿತ್ರದುರ್ಗದ (Chitradurga) ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಉಮಾ ಅವರಿಗೆ ಖಾದರ್ ಪರಿಚಯವಾಗಿದೆ. ಆ ಪರಿಚಯ ಪ್ರೀತಿಯಾಗಿ ವಿವಾಹವಾಗಿದ್ದರು. ವಿವಾಹದ ಬಳಿಕ ಆತನ ವರಸೆ ಬದಲಾಗಿದ್ದು, ಹೆಂಡತಿಯನ್ನು ಮತಾಂತರವಾಗುವಂತೆ ಒತ್ತಾಯಿಸಿದ್ದನು. ಆಗ ಈ ಒತ್ತಡಕ್ಕೊಳಗಾದ ಉಮಾಳ ಆರೋಗ್ಯ ಹದಗೆಟ್ಟಿದ್ದು, ಎರಡು ಕಾಲುಗಳು ನಿಷ್ಕ್ರಿಯಗೊಂಡಿದ್ದವು. ಈ ವೇಳೆ ತನ್ನ ಪತ್ನಿಯ ಬಗ್ಗೆ ಕಾಳಜಿವಹಿಸಬೇಕಾದ ಖಾದರ್, ಉಮಾಗೆ ಚಿತ್ರಹಿಂಸೆ ನೀಡಿ, ಆಕೆಯ ಖಾಸಗಿ ಅಂಗಾಂಗಾಗಳ ಹಲ್ಲೆ ನಡೆಸಿ, ಕ್ರೌರ್ಯ ಮೆರೆದಿದ್ದಾನೆ. ಅಲ್ಲದೇ ಇಸ್ಲಾಂ ಧರ್ಮಕ್ಕೆ ಮತಾಂತರವಾಗದಿದ್ದರೆ ಕೊಲ್ಲುವುದಾಗಿ ಬೆದರಿಕೆಯೊಡ್ಡಿದ್ದಾನೆ. ಯಾರು ಇಲ್ಲದ ವೇಳೆ ಉಮಾಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಲು ಖಾದರ್ ಯತ್ನಿಸಿದ್ದಾನೆ ಎಂದು ಉಮಾ ಆರೋಪಿಸಿದ್ದಾರೆ.
ಸದ್ಯ ಖಾದರ್ ಮೋಸದ ಬಲೆಗೆ ಸಿಲುಕಿಕೊಂಡಿರುವ ಉಮಾ ಕಟ್ಟುಕೊಂಡ ಗಂಡನನ್ನು ಬಿಟ್ಟು ಬಂದು, ಮತಾಂತರದ ಕೂಪಕ್ಕೆ ಸಿಲುಕಿದ್ದಾರೆ. ಅತ್ತ ಸಂಸಾರವೂ ಇಲ್ಲ, ಇತ್ತ ಆರೋಗ್ಯವು ಹದಗೆಟ್ಟಿದೆ. ಹೀಗಾಗಿ ಕಂಗಾಲಾಗಿರುವ ಉಮಾ, ಅವರ ಸಂಬಂಧಿಯಾದ ವಿಶ್ವನಾಥ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತಿದ್ದಾರೆ. ಇನ್ನೂ ತಮಗಾದ ಅನ್ಯಾಯಕ್ಕೆ ನ್ಯಾಯ ಒದಗಿಸಿಕೊಡುವಂತೆ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ – ದಲಿತ ಚಿಂತಕ ಆನಂದ್ ತೇಲ್ತುಂಬ್ಡೆಗೆ ಬಾಂಬೆ ಹೈಕೋರ್ಟ್ ಜಾಮೀನು