Tag: ಗಗನಸಖಿ

  • Ahmedabad Plane Crash- ಆಕಾಶದಲ್ಲಿ ಹಾರಾಡುವ ಕನಸು ಕಂಡಿದ್ದ ಗಗನಸಖಿಯ ದುರಂತ ಅಂತ್ಯ

    Ahmedabad Plane Crash- ಆಕಾಶದಲ್ಲಿ ಹಾರಾಡುವ ಕನಸು ಕಂಡಿದ್ದ ಗಗನಸಖಿಯ ದುರಂತ ಅಂತ್ಯ

    ಗಾಂಧೀನಗರ: ಆಕಾಶದಲ್ಲೇ ಹಾರಾಡುವ ಕನಸೊತ್ತು ಗಗನಸಖಿಯಾಗಿದ್ದ ಯುವತಿಯೊಬ್ಬಳು ಅಹಮದಾಬಾದ್ (Ahmedabad) ಏರ್ ಇಂಡಿಯಾ (Air India) ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದಾರೆ.

    ಮೃತ ಯುವತಿಯನ್ನು ಮಹಾರಾಷ್ಟ್ರದ (Maharashtra) ಡೊಂಬಿವ್ಲಿಯ ಮೂಲದ ರೋಷನಿ ಸೊಂಘರೆ (28) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಬೋಯಿಂಗ್‌ ನಿರ್ಮಿತ ವಾಯುಸೇನೆಯ ಅಪಾಚೆ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

    ಕಳೆದು ಎರಡು ವರ್ಷಗಳಿಂದ ರೋಷನಿ ತಂದೆ, ತಾಯಿ ಹಾಗೂ ಸಹೋದರನೊಂದಿಗೆ ಮುಂಬೈನ ಡೊಂಬಿವ್ಲಿಯಲ್ಲಿ ವಾಸವಾಗಿದ್ದರು. ಮುಂಬೈನಲ್ಲಿಯೇ ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಿದ್ದರು. ಕುಟುಂಬದಲ್ಲಿದ್ದ ಆರ್ಥಿಕ ಸಮಸ್ಯೆಗಳನ್ನು ಎದುರಿಸಿ, ಗಗನಸಖಿಯಾಗುವ ಕನಸನ್ನು ನನಸಾಗಿಸಿಕೊಂಡಿದ್ದರು. ತಮ್ಮ ಕರ್ತವ್ಯಕ್ಕಾಗಿ ಅಹಮದಾಬಾದ್‌ಗೆ ತೆರಳಲು ಒಂದು ದಿನ ಮುಂಚೆಯೇ ಮನೆಯಿಂದ ಹೊರಟಿದ್ದರು. ಆಕಾಶದಲ್ಲೇ ಹಾರಾಡುವ ಕನಸಿನೊಂದಿಗೆ ರೋಷನಿ ಗುರುವಾರ (ಜೂ.12) ಅಹಮದಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್‌ಇಂಡಿಯಾ ಎಐ171 ವಿಮಾನ ಹತ್ತಿದ್ದರು.

    ದುರಂತವೆಂದರೆ ಆಕಾಶದಲ್ಲಿ ಹಾರಾಡುವ ಕನಸು ಆಕಾಶದಲ್ಲೇ ನುಚ್ಚನೂರಾಗಿ ಹೋಯಿತು. ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದ 241 ಜನರಲ್ಲಿ ಗಗನಸಖಿ ರೋಷನಿ ಕೂಡ ಸಾವನ್ನಪ್ಪಿದ್ದರು.

    ಏನಿದು ಘಟನೆ?
    ಅಹಮದಾಬಾದ್ ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟ ಏರ್‌ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತು. ಪರಿಣಾಮ ಅಹಮದಾಬಾದ್ ಸಮೀಪದ ಮೇಘನಿ ನಗರದ ಬಿಜೆ ಎಂಬಿಬಿಎಸ್ ಕಾಲೇಜು ಹಾಸ್ಟೆಲ್‌ಗೆ ಡಿಕ್ಕಿ ಹೊಡೆದಿತ್ತು. ವಿಮಾನದಲ್ಲಿ ಪೈಲೆಟ್, ಸಿಬ್ಬಂದಿ ಸೇರಿ ಒಟ್ಟು 242 ಪ್ರಯಾಣಿಕರಿದ್ದರು. ಈ ಪೈಕಿ 241 ಜನ ಸಾವನ್ನಪ್ಪಿದ್ದು, ಓರ್ವ ಪ್ರಯಾಣಿಕ ಪವಾಡ ಸದೃಶ್ಯ ಪಾರಾಗಿದ್ದಾರೆ.ಇದನ್ನೂ ಓದಿ: ವಿಮಾನ ದುರಂತ ಬೆನ್ನಲ್ಲೇ ಥೈಲ್ಯಾಂಡಲ್ಲಿ ಏರ್‌ ಇಂಡಿಯಾ ತುರ್ತು ಭೂಸ್ಪರ್ಶ

  • ಐಸಿಯುನಲ್ಲಿ ವೆಂಟಿಲೇಟರ್‌ನಲ್ಲಿದ್ದಾಗ ಗಗನಸಖಿ ಮೇಲೆ ಲೈಂಗಿಕ ದೌರ್ಜನ್ಯ!

    ಐಸಿಯುನಲ್ಲಿ ವೆಂಟಿಲೇಟರ್‌ನಲ್ಲಿದ್ದಾಗ ಗಗನಸಖಿ ಮೇಲೆ ಲೈಂಗಿಕ ದೌರ್ಜನ್ಯ!

    ಲಕ್ನೋ: ಗುರುಗ್ರಾಮ್‌ನ (Gurugram) ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ವೆಂಟಿಲೇಟರ್‌ನಲ್ಲಿದ್ದಾಗಲೇ ಗಗನಸಖಿ (Air Hostess) ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ. ಈ ಸಂಬಂಧ ಖುದ್ದು ಮಹಿಳೆ ದೂರು ನೀಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಇದೇ ತಿಂಗಳ ಏಪ್ರಿಲ್‌ 13ರಂದು 43 ವರ್ಷದ ಗಗನಸಖಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ಬಳಿಕ ತನ್ನ ಪತಿಗೆ ವಿಷಯ ತಿಳಿಸಿದ್ದಾಳೆ. ಬಳಿಕ ಆಕೆ ನೀಡಿದ ದೂರಿನ ಆಧಾರದ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

    ಏನಿದು ಪ್ರಕರಣ?
    ಮಹಿಳೆ ದೂರು ನೀಡಿದ ಪ್ರಕಾರ, ಆಕೆ ಸಂಬಂಧಪಟ್ಟ ಕಂಪನಿಯ ಪರವಾಗಿ ತರಬೇತಿಗಾಗಿ ಗುರುಗ್ರಾಮ್‌ಗೆ ಬಂದಿದ್ದಳು, ಈ ವೇಳೆ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದಳು. ಈ ಸಂದರ್ಭದಲ್ಲಿ ಆಕೆ ನೀರಿನಲ್ಲಿ ಮುಳುಗಿ ಆರೋಗ್ಯ ತೀರಾ ಹದಗೆಟ್ಟಿತ್ತು. ಬಳಿಕ ಆಕೆಯನ್ನ ಖಾಸಗಿ ಆಸ್ಪತ್ರೆಗೆ (Private Hospital) ದಾಖಲಿಸಲಾಗಿತ್ತು. ಇದೇ ತಿಂಗಳ ಏಪ್ರಿಲ್ 5 ರಂದು ಪತಿ ಆಕೆಯನ್ನ ಹೆಚ್ಚುವರಿ ಚಿಕಿತ್ಸೆಗಾಗಿ ಗುರುಗ್ರಾಮ್‌ನ ಬೇರೋಂದು ಆಸ್ಪತ್ರೆಗೆ ದಾಖಲಿಸಿದರು. ಆಕೆಯನ್ನು ಏಪ್ರಿಲ್ 13 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು.

    ಆದ್ರೆ ಏಪ್ರಿಲ್‌ 6ರಂದು ಐಸಿಯುನಲ್ಲಿ ವೆಂಟಿಲೇಟರ್‌ನಲ್ಲಿದ್ದಾಗ ಆಸ್ಪತ್ರೆಯ ಕೆಲವು ಸಿಬ್ಬಂದಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ವೆಂಟಿಲೇಟರ್‌ನಲ್ಲಿದ್ದ ಕಾರಣ ನನಗೆ ಆಗ ಮಾತನಾಡಲೂ ಸಾಧ್ಯವಾಗಲಿಲ್ಲ, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದೆ. ದೌರ್ಜನ್ಯ ನಡೆಯುವಾಗ ನನ್ನ ಅಕ್ಕಪಕ್ಕ ಇಬ್ಬರು ನರ್ಸ್‌ಗಳೂ ಇದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

    ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಗುರುಗ್ರಾಮ್‌ನ ಸದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ತಂಡವು ಆಸ್ಪತ್ರೆಗೆ ಧಾವಿಸಿ ಡ್ಯೂಟಿ ಚಾರ್ಟ್ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂಉದ ಗುರುಗ್ರಾಮ್ ಪೊಲೀಸ್ ಇನ್ಸ್‌ಪೆಕ್ಟರ್‌ ಸಂದೀಪ್ ಕುಮಾರ್ ತಿಳಿಸಿದ್ದಾರೆ.

  • ಆಪರೇಷನ್ ಅಜಯ್ ತಂಡದಲ್ಲಿ ಕಾರವಾರದ ಮಹಿಮಾ

    ಆಪರೇಷನ್ ಅಜಯ್ ತಂಡದಲ್ಲಿ ಕಾರವಾರದ ಮಹಿಮಾ

    ಕಾರವಾರ: ಇಸ್ರೇಲ್‌ನಿಂದ (Israel) ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರ್ಕಾರ ಇತ್ತೀಚೆಗೆ ನಡೆಸಿದ ‘ಆಪರೇಷನ್ ಅಜಯ್’ (Operation Ajay) ತಂಡದಲ್ಲಿ ಕಾರವಾರ (Karwar) ತಾಲೂಕಿನ ಬಿಣಗಾದ ಮಹಿಮಾ ಶೆಟ್ಟಿಯವರು (Mahima Shetty) ಭಾಗವಹಿಸಿ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಶ್ರಮವಹಿಸುವ ಮೂಲಕ ಜಿಲ್ಲೆಯ ಹಿರಿಮೆ ಹೆಚ್ಚಿಸಿದ್ದಾರೆ.

    ಸದ್ಯ ಗೋವಾದ ಪರ್ವೊರಿಮ್‌ನಲ್ಲಿ ನೆಲೆಸಿರುವ ದುರ್ಗಪ್ಪ ಶೆಟ್ಟಿ ಮತ್ತು ನಯನಾ ದಂಪತಿಯ ಪುತ್ರಿ ಮಹಿಮಾ ಶೆಟ್ಟಿ ಆಪರೇಷನ್ ಅಜಯ್ ತಂಡದಲ್ಲಿ ಭಾಗಿಯಾಗಿದ್ದರು. ಏರ್ ಇಂಡಿಯಾದಲ್ಲಿ (Air India) ಗಗನಸಖಿ (Air Hostess) ಆಗಿರುವ ಅವರು ಇಸ್ರೇಲ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ಕರೆತರುವ ಆರು ಮಂದಿಯ ತಂಡದಲ್ಲಿ ಇವರು ಸಹ ಭಾಗಿಯಾಗಿದ್ದರು. ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ – ತುಟ್ಟಿ ಭತ್ಯೆ ಶೇ. 3.75 ಹೆಚ್ಚಳ

    ಮಹಿಮಾರವರು ಇಸ್ರೇಲ್‌ಗೆ ತೆರಳಿದ್ದಾಗ ಕ್ಷಿಪಣಿ ದಾಳಿ ನಡೆಯುತ್ತಿದ್ದುದರಿಂದ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಆದರೂ ಯಾವುದೇ ಹಿಂಜರಿಕೆಯಿಲ್ಲದೇ 236 ಮಂದಿ ಭಾರತೀಯರನ್ನು ಕರೆತಂದಿದ್ದಾಗಿ ಮಹಿಮಾರವರು ಮಾಹಿತಿ ನೀಡಿದ್ದು, ಈ ಕೆಲಸಕ್ಕೆ ಅವಕಾಶ ಸಿಕ್ಕಿದ್ದು ನಮ್ಮ ಪುಣ್ಯ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ನಕಲಿ ವೋಟರ್ ಐಡಿ ಪ್ರಕರಣ; ಸಚಿವ ಭೈರತಿ ಸುರೇಶ್ ರಾಜೀನಾಮೆ ಕೊಡಬೇಕು: ರವಿಕುಮಾರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕತ್ತು ಸೀಳಿ ಗಗನಸಖಿ ಹತ್ಯೆಗೈದಿದ್ದ ಆರೋಪಿ – ಲಾಕಪ್‌ನಲ್ಲೇ ಪ್ಯಾಂಟ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಕತ್ತು ಸೀಳಿ ಗಗನಸಖಿ ಹತ್ಯೆಗೈದಿದ್ದ ಆರೋಪಿ – ಲಾಕಪ್‌ನಲ್ಲೇ ಪ್ಯಾಂಟ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಮುಂಬೈ: ತರಬೇತಿ ನಿರತ ಏರ್ ಇಂಡಿಯಾ ಗಗನಸಖಿ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ (Mumbai Murder Accused) ಅಂಧೇರಿ ಠಾಣೆಯ (Andheri Police Station) ಲಾಕಪ್‌ನಲ್ಲೇ ಪ್ಯಾಂಟ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮುಂಬೈನ ಮರೋಲ್ ಪ್ರದೇಶದಲ್ಲಿರುವ ಫ್ಲಾಟ್‌ನಲ್ಲಿ 23 ವರ್ಷದ ಗಗನಸಖಿಯ (Air Hostess) ಕತ್ತು ಸೀಳಿ ಕೊಂದಿದ್ದ ಆರೋಪಿ ವಿಕ್ರಮ್ ಅತ್ವಾಲ್ (40) ನನ್ನ ಬಂಧಿಸಲಾಗಿತ್ತು. ಇದನ್ನೂ ಓದಿ: G20 ಸಭೆ ದೆಹಲಿಯಲ್ಲಿ ಹೈ ಅಲರ್ಟ್ – ಆನ್‌ಲೈನ್ ಫುಡ್, ಅಮೆಜಾನ್, ಪ್ಲಿಪ್‌ಕಾರ್ಟ್ ಹೋಂ ಡೆಲಿವರಿ ಬಂದ್

    ಛತ್ತೀಸ್‌ಗಢ ಮೂಲದ ರೂಪಲ್ ಓಗ್ರೆ (Rupal Ogrey), ಏರ್ ಇಂಡಿಯಾದಲ್ಲಿ ತರಬೇತಿಗೆ ಆಯ್ಕೆಯಾಗಿದ್ದರು. ಈ ವರ್ಷದ ಏಪ್ರಿಲ್‌ನಲ್ಲಿ ಮುಂಬೈಗೆ ಸ್ಥಳಾಂತರಗೊಂಡಿದ್ದರು. ಕೆಲವು ದಿನಗಳ ಹಿಂದೆ ತವರು ಮನೆಗೆ ಹೋಗಿದ್ದ ತನ್ನ ಸಹೋದರಿ ಮತ್ತು ತನ್ನ ಗೆಳೆಯನೊಂದಿಗೆ ಅಂಧೇರಿಯ ಪ್ಲಶ್ ಹೌಸಿಂಗ್ ಸೊಸೈಟಿಯಲ್ಲಿ ತನ್ನ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು. ಗಗನಸಖಿ ಸಾವಿಗೆ ಸಂಬಂಧಿಸಿದಂತೆ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದ ವಿಕ್ರಮ್ ಅತ್ವಾಲ್‌ನನ್ನ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದರು. ಇದನ್ನೂ ಓದಿ: Chandrayaan-3: ಚಂದ್ರನ ಮೇಲೆ ಮತ್ತೊಮ್ಮೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ ವಿಕ್ರಮ್ – ಇಸ್ರೋದಿಂದ ವೀಡಿಯೋ ರಿಲೀಸ್‌

    ಮುಂಬೈನಲ್ಲಿರುವ ತನ್ನ ಫ್ಲಾಟ್‌ನಲ್ಲಿ ಗಗನಸಖಿ ಭಾನುವಾರ ರಾತ್ರಿ ಶವವಾಗಿ ಪತ್ತೆಯಾಗಿದ್ದಳು. ಕುಟುಂಬ ಸದಸ್ಯರ ಫೋನ್ ಕರೆಯನ್ನ ಆಕೆ ಸ್ವೀಕರಿಸದಿದ್ದಾಗ ಮುಂಬೈನಲ್ಲಿರುವ ಆಕೆಯ ಸ್ನೇಹಿತರಿಗೆ ಫೋನ್ ಮಾಡಿದ್ದಾರೆ. ಅವರು ಫ್ಲಾಟ್ ಗೆ ಬಂದು ನೋಡಿದಾಗ ಒಳಗಿನಿಂದ ಬೀಗ ಹಾಕಿರುವುದು ಕಂಡುಬಂದಿದೆ. ನಂತರ, ಅವರು ಪೊವೈ ಪೊಲೀಸರನ್ನ  (Powai Police) ಸಂಪರ್ಕಿಸಿದ್ದು, ಅವರ ಸಹಾಯದಿಂದ ನಕಲಿ ಕೀ ಬಳಸಿ ಫ್ಲಾಟ್ ಬಾಗಿಲು ತೆರೆದಾಗ ಮಹಿಳೆ ಕುತ್ತಿಗೆ ಸೀಳಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಆಕೆಯನ್ನು ರಾಜವಾಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದ್ರೆ ಅಲ್ಲಿ ದಾಖಲಿಸುವ ಮುನ್ನವೇ ಆಕೆ ಮೃತಪಟ್ಟಿದ್ದಳು ಎಂದು ಅವರು ತಿಳಿಸಿದ್ದಾರೆ.

    ಈ ಸಂಬಂಧ ಪೋವಾಯಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಒಬ್ಬ ವ್ಯಕ್ತಿಯನ್ನ ಬಂಧಿಸಿ ತನಿಖೆ ನಡೆಸುತ್ತಿದ್ದರು. ಪ್ರಕರಣದ ಆರೋಪಿ ವಿಕ್ರಮ್ ಅತ್ವಾಲ್‌ನ ಪತ್ನಿಯನ್ನೂ ವಿಚಾರಣೆ ನಡೆಸಲಾಗುತ್ತಿತ್ತು. ತನಿಖೆಯ ಸಮಯದಲ್ಲಿ ಮಹಿಳೆ ತನ್ನ ಸಹೋದರಿ, ತದನಂತರ ಗೆಳೆಯನೊಂದಿಗೆ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದದ್ದು ತಿಳಿದುಬಂದಿದೆ. ಆದರೆ ಇಬ್ಬರೂ ಎಂಟು ದಿನಗಳ ಹಿಂದೆ ತಮ್ಮ ಸ್ವಂತ ಸ್ಥಳಕ್ಕೆ ತೆರಳಿದ್ದರು. ಆದರೆ, ಇದೀಗ ಈ ಘಟನೆ ನಡೆದಿರುವುದಾಗಿ ಪೊಲೀಸರು ಹೇಳಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮುಂಬೈ ಫ್ಲಾಟ್‌ನಲ್ಲಿ ಗಗನಸಖಿ ಮೃತದೇಹ ಪತ್ತೆ – ಸ್ವೀಪರ್‌ ಬಂಧನ

    ಮುಂಬೈ ಫ್ಲಾಟ್‌ನಲ್ಲಿ ಗಗನಸಖಿ ಮೃತದೇಹ ಪತ್ತೆ – ಸ್ವೀಪರ್‌ ಬಂಧನ

    ಮುಂಬೈ: ತರಬೇತಿ ನಿರತ ಗಗನಸಖಿಯೊಬ್ಬರು (Air Hostess) ನಿನ್ನೆ ಸಂಜೆ ಮುಂಬೈ (Mumbai) ಉಪನಗರದಲ್ಲಿರುವ ಅವರ ಫ್ಲಾಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಛತ್ತೀಸ್‌ಗಢದಿಂದ ಬಂದಿದ್ದ ರೂಪಲ್ ಓಗ್ರೆ, ಏರ್ ಇಂಡಿಯಾದಿಂದ ಆಯ್ಕೆಯಾಗಿದ್ದರು. ಈ ವರ್ಷದ ಏಪ್ರಿಲ್‌ನಲ್ಲಿ ಮುಂಬೈಗೆ ಸ್ಥಳಾಂತರಗೊಂಡಿದ್ದರು. ಕೆಲವು ದಿನಗಳ ಹಿಂದೆ ತವರು ಮನೆಗೆ ಹೋಗಿದ್ದ ತನ್ನ ಸಹೋದರಿ ಮತ್ತು ತನ್ನ ಗೆಳೆಯನೊಂದಿಗೆ ಅಂಧೇರಿಯ ಪ್ಲಶ್ ಹೌಸಿಂಗ್ ಸೊಸೈಟಿಯಲ್ಲಿ ತನ್ನ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು. ಇದನ್ನೂ ಓದಿ: ಮದುವೆಯ ಆಸೆ ಈಡೇರಿಸಲಿಲ್ಲವೆಂದು ಶಿವಲಿಂಗವನ್ನೇ ಕದ್ದ ಯುವಕ!

    ಗಗನಸಖಿ ಸಾವಿಗೆ ಸಂಬಂಧಿಸಿದಂತೆ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದ 40 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಆತನನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಪ್ರಮುಖ ಆರೋಪಿ ವಿಕ್ರಮ್ ಅತ್ವಾಲ್‌ನನ್ನು ಬಂಧಿಸಲಾಗಿದೆ. ಹೌಸಿಂಗ್ ಸೊಸೈಟಿಯಲ್ಲಿನ ಭದ್ರತಾ ಕ್ಯಾಮೆರಾಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

    ಆರೋಪಿಗಳ ಪತ್ತೆಗೆ 12 ತಂಡಗಳನ್ನು ರಚಿಸಲಾಗಿದೆ. ಸ್ವೀಪರ್‌ ವಿಕ್ರಮ್ ಅತ್ವಾಲ್ ಪತ್ನಿಯನ್ನೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಗಗನಸಖಿ ರೂಪಾಲ್‌ಗೆ ಆಕೆಯ ಮನೆಯವರು ಫೋನ್‌ ಕರೆ ಮಾಡಿದ್ದರು. ಆದರೆ ಆಕೆ ಕಾಲ್‌ ಪಿಕ್‌ ಮಾಡಲಿಲ್ಲ. ಅನುಮಾನಗೊಂಡು ಮುಂಬೈನಲ್ಲಿದ್ದ ಆಕೆಯ ಸ್ನೇಹಿತರಿಗೆ ಪರೀಕ್ಷಿಸುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: G 20ಯಲ್ಲಿ ಚೀನಾ ಅಧ್ಯಕ್ಷ ಭಾಗವಹಿಸದಿರುವುದು ಬೇಸರ ತಂದಿದೆ: ಜೋ ಬೈಡೆನ್

    ಆಕೆಯ ಸ್ನೇಹಿತರು ಅಲ್ಲಿಗೆ ಹೋಗಿ ನೋಡಿದಾಗ ಫ್ಲಾಟ್ ಒಳಗಿನಿಂದ ಬೀಗ ಹಾಕಿರುವುದು ಕಂಡು ಬಂದಿದೆ. ನಂತರ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಫ್ಲಾಟ್‌ಗೆ ಬಂದು ನೋಡಿದ್ದಾರೆ. ಗಗನಸಖಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಕೆ ಮೃತಪಟ್ಟಿದ್ದಾಳೆ ಎಂದು ನಂತರ ವೈದ್ಯರು ಸ್ಪಷ್ಟಪಡಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಧೋನಿ ವಿಮಾನದಲ್ಲಿ ಮಲಗಿದ್ದಾಗ ಕದ್ದು ಫೋಟೋ ಕ್ಲಿಕ್ – ಗಗನಸಖಿ ನಿರ್ಧಾರ ಸರಿಯೇ?

    ಧೋನಿ ವಿಮಾನದಲ್ಲಿ ಮಲಗಿದ್ದಾಗ ಕದ್ದು ಫೋಟೋ ಕ್ಲಿಕ್ – ಗಗನಸಖಿ ನಿರ್ಧಾರ ಸರಿಯೇ?

    ಮುಂಬೈ: ಟೀಂ ಇಂಡಿಯಾದ (Team India) ಮಾಜಿ ನಾಯಕ ಎಂ.ಎಸ್ ಧೋನಿ (MS Dhoni) ಕೋಟ್ಯಂತರ ಅಭಿಮಾನಿ ಬಳಗವನ್ನ ಹೊಂದಿದ್ದಾರೆ. ಅಭಿಮಾನಿಗಳು ಒಮ್ಮೆಯಾದ್ರೂ ಮಹಿಯನ್ನ ಹತ್ತಿರದಿಂದ ನೋಡ್ಬೇಕು ಅಂತಾ ಆಸೆ ಪಡ್ತಾರೆ. ಅಂತಹ ಒಂದು ಕ್ಷಣ ಸಿಕ್ಕರೂ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿಕೊಳ್ಳಲಾರದೇ ಇರೋದಿಲ್ಲ. 2023 IPL ಟೂರ್ನಿಯಲ್ಲಿ ಮಹಿ ನೋಡಲೆಂದೇ ಸಾವಿರಾರು ಕಿಲೋ ಮೀಟರ್‌ಗಳಿಂದ ಅಭಿಮಾನಿಗಳು ಬಂದಿದ್ರು. ಇದೀಗ ಗಗನಸಖಿಯೊಬ್ಬಳು ಅಂತಹದ್ದೇ ಕ್ಷಣವನ್ನ ಫೋಟೋದಲ್ಲಿ ಸೆರೆಹಿಡಿಯಲು ಹೋಗಿ ಸುದ್ದಿಯಾಗಿದ್ದಾಳೆ.

    ಇತ್ತೀಚೆಗೆ ವಿಮಾನ ಪ್ರಯಾಣ ಸಮಯದಲ್ಲಿ MSD ಪಕ್ಕದಲ್ಲಿ ನಿಂತು ಗಗನ ಸಖಿಯೊಬ್ಬಳು (Air Hostess) ಫೋಟೋ ತೆಗೆದುಕೊಂಡಿದ್ದಾಳೆ. ಆದ್ರೆ ಈ ಫೋಟೋ ತೆಗೆದುಕೊಳ್ಳುವಾಗ ಧೋನಿ ಸಣ್ಣ ನಿದ್ರೆಗೆ ಜಾರಿದ್ದರು. ಹಾಗಾಗಿ ಇದು ಅವರಿಗೆ ಗೊತ್ತೇ ಇರಲಿಲ್ಲ. ಈ ಫೋಟೋ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಗಗನಸಖಿ ವಿರುದ್ಧ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಒಂದೇ ಓವರ್‌ನಲ್ಲಿ 48 ರನ್‌ ಚಚ್ಚಿದ ಆಫ್ಘನ್‌ ಬ್ಯಾಟರ್‌ – ಮೈದಾನದಲ್ಲೇ ಕಣ್ಣೀರಿಟ್ಟ ಬೌಲರ್‌

    ಒಬ್ಬ ಅಭಿಮಾನಿಯಾಗಿ ನಾನು ಸಹ ಅವರನ್ನ ನೋಡಲು ಬಯಸುತ್ತೇನೆ. ಆದ್ರೆ ಅವರ ಅನುಮತಿಯಿಲ್ಲದೇ ಅವರ ಪರ್ಸನಲ್ ಸ್ಪೇಸ್‌ಗೆ ಅಡ್ಡಿಪಡಿಸಲು ಬಯಸುವುದಿಲ್ಲ. ಇನ್ಮುಂದೆ ಹೀಗೆ ಮಾಡ್ಬೇಡಿ ಅಂತಾ ಅಭಿಮಾನಿಯೊಬ್ಬರು ಕೇಳಿಕೊಂಡಿದ್ದಾರೆ. ಮತ್ತೊಬ್ಬರು, ಯಾರಾದರೂ ಗಗನಸಖಿಯರಿಗೆ ಹೆಚ್ಚು ವೃತ್ತಿಪರರಾಗಿರಲು ಮತ್ತು ಅವರ ಗೌಪ್ಯತೆಗೆ ಅನುಗುಣವಾಗಿ ನಡೆದುಕೊಳ್ಳುವಂತೆ ಸೂಚಿಸಬಹುದೇ ಅಂತಾ ಪ್ರಶ್ನೆ ಮಾಡಿದ್ದಾರೆ. ಇನ್ನು ಕೆಲವರು ಧೋನಿ ಜಾಗದಲ್ಲಿ ಯುವತಿ, ಗಗನಸಖಿ ಜಾಗದಲ್ಲಿ ಧೋನಿ ಇದ್ದರೆ ಇಷ್ಟು ಹೊತ್ತಿಗೆ ಮಹಿಳಾ ಹೋರಾಟಗಾರರು ಕಟು ಪದಗಳಲ್ಲಿ ಟೀಕೆ ಮಾಡುತ್ತಿದ್ದರು ಎಂದು ಪ್ರತಿಕ್ರಿಯಿಸಿದ್ದಾರೆ.

    ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ 5 ಬಾರಿ ಚಾಂಪಿಯನ್ ಟ್ರೋಫಿ ಎತ್ತಿ ಹಿಡಿದಿರುವ ಮಹಿ ಮುಂದಿನ ಋತುವಿನಲ್ಲೂ ಕಾಣಿಸಿಕೊಳ್ಳುವುದಾಗಿ ಹೇಳಿದ್ದಾರೆ. ಇದರಿಂದ ಅಭಿಮಾನಿಗಳು ಸಂತಗೊಂಡಿದ್ದಾರೆ. ಇತ್ತೀಚೆಗೆ ತಮ್ಮದೇ ನಿರ್ಮಾಣ ಧೋನಿ ಎಂಟರ್ಟೈನ್ಮೆಂಟ್‌ ಪ್ರೈವೇಟ್ ಸಂಸ್ಥೆ ಪ್ರಾರಂಭಿಸುವ ಮೂಲಕ ಮನರಂಜನಾ ಜಗತ್ತಿನಲ್ಲಿ ತೊಡಗಿಸಿಕೊಂಡಿದ್ದಾರೆ. ಇದನ್ನೂ ಓದಿ: ವಿಂಡೀಸ್‌ ವಿರುದ್ಧ ಭಾರತಕ್ಕೆ ಹೀನಾಯ ಸೋಲು – ನಾಯಕತ್ವದ ಹೊಣೆ ಹೊತ್ತ ಪಾಂಡ್ಯ ರಿಯಾಕ್ಷನ್‌ ಏನು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆದರಿಕೆ ಹಾಕಿದ್ದಕ್ಕೆ ಬಾಲ್ಕನಿಯಿಂದ ತಳ್ಳಿ ಕೊಲೆಗೈದೆ- ತಪ್ಪೊಪ್ಪಿಕೊಂಡ ಅರ್ಚನಾ ಬಾಯ್‍ಫ್ರೆಂಡ್

    ಬೆದರಿಕೆ ಹಾಕಿದ್ದಕ್ಕೆ ಬಾಲ್ಕನಿಯಿಂದ ತಳ್ಳಿ ಕೊಲೆಗೈದೆ- ತಪ್ಪೊಪ್ಪಿಕೊಂಡ ಅರ್ಚನಾ ಬಾಯ್‍ಫ್ರೆಂಡ್

    ಬೆಂಗಳೂರು: ದುಬೈನಿಂದ ಬಂದು ಬೆಂಗಳೂರಿನಲ್ಲಿ ಮೃತಪಟ್ಟ ಗಗನಸಖಿ (Air Hostess) ಅರ್ಚನಾ ಕೊಲೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಪ್ರಕರಣ ಸಂಬಂಧ ಪೊಲೀಸರು ಆಕೆಯ ಬಾಯ್‍ಫ್ರೆಂಡ್ ಆದೇಶ್‍ (Adesh) ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆತ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.

    ಕೊಲೆಗೈದಿದ್ದು ಯಾಕೆ?: ಮದುವೆ ಆಗಲು ಒಪ್ಪದಿದ್ದರೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರಗಿಸುತ್ತೇನೆ ಎಂದು ಅರ್ಚನಾ ಈ ಹಿಂದೆ ಬೆದರಿಕೆ ಹಾಕಿದ್ದಳು. ಆ ಬಳಿಕ ಮೃತಪಟ್ಟ ದಿನವೂ ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ವಾಗ್ವಾದ ನಡೆದವು. ಇದರಿಂದ ಸಿಟ್ಟಿಗೆದ್ದ ನಾನು ಆಕೆಯನ್ನು ಬಾಲ್ಕನಿಯಿಂದ ತಳ್ಳಿ ಹತ್ಯೆ ಮಾಡಿದೆ ಎಂದು ಆದೇಶ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಬಾಯ್‍ಫ್ರೆಂಡ್ ನೋಡಲು ದುಬೈನಿಂದ ಬಂದಿದ್ದ ಗಗನಸಖಿ ಸೂಸೈಡ್

    ಹಿಮಾಚಲಪ್ರದೇಶ ಮೂಲದ ಗಗನಸಖಿ ಅರ್ಚನಾ ಧೀಮನ್ (28) ಕೋರಮಂಗಲ (Koramangala) ದ 8ನೇ ಬ್ಲಾಕ್‍ನ ರೇಣುಕಾ ರೆಸಿಡೆನ್ಸಿ ಅಪಾರ್ಟ್ ಮೆಂಟ್‍ನ ಬಾಲ್ಕನಿಯಿಂದ ಬಿದ್ದು ಮೃತಪಟ್ಟಿದ್ದರು. ಆರಂಭದಲ್ಲಿ ಇದೊಂದು ಆತ್ಮಹತ್ಯೆ ಎಂದು ಶಂಕಿಸಲಾಗಿತ್ತು. ಆದರೆ ಅರ್ಚನಾ ಮೃತಪಟ್ಟ ಬಳಿಕ ಆಕೆಯ ಬಾಯ್‍ಫ್ರೆಂಡ್ ಮೇಲೆ ಅನುಮಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ತಿರುವು ದೊರೆಯಿತು. ಇದನ್ನೂ ಓದಿ: ಗಗನಸಖಿ ಗೆಳತಿಯನ್ನು ಅಪಾರ್ಟ್‌ಮೆಂಟ್‌ನಿಂದ ತಳ್ಳಿ ಆತ್ಮಹತ್ಯೆ ನಾಟಕವಾಡಿದ್ದ ಟೆಕ್ಕಿ ಅರೆಸ್ಟ್‌

  • ಕುಡಿದ ಮತ್ತಿನಲ್ಲಿ ಗಗನಸಖಿ ಮೇಲೆ ಒಂದು ತಿಂಗಳಿಂದ ಅತ್ಯಾಚಾರ

    ಕುಡಿದ ಮತ್ತಿನಲ್ಲಿ ಗಗನಸಖಿ ಮೇಲೆ ಒಂದು ತಿಂಗಳಿಂದ ಅತ್ಯಾಚಾರ

    ನವದೆಹಲಿ: ಪರಿಚಿತನೊಬ್ಬ ಪ್ರತಿನಿತ್ಯ ಕುಡಿದು ಬಂದು ಗಗನಸಖಿ (AirHostess) ಮೇಲೆ ಆಕೆಯ ಮನೆಯಲ್ಲಿ ಅತ್ಯಾಚಾರವೆಸಗಿದ ಘಟನೆ ದಕ್ಷಿಣ ದೆಹಲಿಯ (South Delhi) ಮೆಹ್ರೌಲಿ ಪ್ರದೇಶದಲ್ಲಿ ನಡೆದಿದೆ.

    ದೆಹಲಿಯಲ್ಲಿ 30 ವರ್ಷದ ಮಹಿಳೆಯ ಮೇಲೆ ಹರ್ಜಿತ್ ಯಾದವ್ ಖಾನ್‍ಪುರ್ ಎಂಬಾತ ಕಳೆದ ಒಂದೂವರೆ ತಿಂಗಳಿಂದ ಕುಡಿದ ಸ್ಥಿತಿಯಲ್ಲಿ ಆಕೆಯ ಮನೆಗೆ ಬಂದು ಅತ್ಯಾಚಾರ ಎಸಗುತ್ತಿದ್ದನು. ಈತ ರಾಜಕೀಯ ಪಕ್ಷದ ಬ್ಲಾಕ್ ಅಧ್ಯಕ್ಷನಾಗಿದ್ದಾನೆ. ಇದನ್ನೂ ಓದಿ: ರಾಜ್ಯಾದ್ಯಂತ PFI, SDPI ಕಾರ್ಯಕರ್ತರಿಗೆ ಪೊಲೀಸ್ ಶಾಕ್‌ – 40ಕ್ಕೂ ಹೆಚ್ಚು ಮಂದಿ ವಶಕ್ಕೆ

    ಘಟನೆಗೆ ಸಂಬಂಧಿಸಿ ಗಗನ ಸಖಿಯು ಹರ್ಜೀತ್ ಯಾದವ್‍ನನ್ನು ಕೊಣೆಯಲ್ಲಿ ಕೂಡಿ ಹಾಕಿ, ನಂತರ ಪೊಲೀಸರಿಗೆ ಕರೆ ಮಾಡಿದ್ದಾಳೆ. ಈ ಹಿನ್ನೆಲೆಯಲ್ಲಿ ಮೆಹ್ರೌಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಗಗನ ಸಖಿಯನ್ನು ರಕ್ಷಿಸಿ, ಹರ್ಜೀತ್‍ನನ್ನು ಬಂಧಿಸಿದ್ದಾರೆ (Arrest). ಇದನ್ನೂ ಓದಿ: ದಸರಾ ವೇಳೆ RSS, BJP ನಾಯಕರ ಮೇಲೆ ದಾಳಿಗೆ PFI ಸಂಚು

    Live Tv
    [brid partner=56869869 player=32851 video=960834 autoplay=true]

  • ಎಣ್ಣೆ ಏಟಲ್ಲಿ ರೆಸ್ಟೋರೆಂಟ್‍ನಲ್ಲಿ ರಂಪಾಟ – ಗಗನಸಖಿ ಸೇರಿ ಮೂವರು ಅರೆಸ್ಟ್

    ಎಣ್ಣೆ ಏಟಲ್ಲಿ ರೆಸ್ಟೋರೆಂಟ್‍ನಲ್ಲಿ ರಂಪಾಟ – ಗಗನಸಖಿ ಸೇರಿ ಮೂವರು ಅರೆಸ್ಟ್

    ಜೈಪುರ: ಮದ್ಯದ ಅಮಲಿನಲ್ಲಿ ಜೈಪುರದ ರೆಸ್ಟೋರೆಂಟ್‍ನಲ್ಲಿ ರಂಪಾಟ ನಡೆಸಿದ ಗಗನಸಖಿ ಹಾಗೂ ಆಕೆಯ ಮೂವರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ.

    ಬುಧವಾರ ಪ್ರಾಚಿ ಸಿಂಗ್ ಮತ್ತು ಆಕೆಯ ಸ್ನೇಹಿತರು ರೆಸ್ಟೋರೆಂಟ್‍ನಲ್ಲಿ ಕುಟುಂಬಸ್ಥರೊಂದಿಗೆ ಜಗಳವಾಡಿದ್ದಾರೆ. ನಂತರ ರೆಸ್ಟೋರೆಂಟ್‍ನಿಂದ ಹೊರಬಂದು, ಬಿಯರ್ ಬಾಟಲಿಯಿಂದ ಕುಟುಂಬಸ್ಥರ ಕಾರಿನ ಗಾಜನ್ನು ಒಡೆದು ಹಾಕಿದ್ದಾರೆ. ಇದನ್ನೂ ಓದಿ: ದೇಶಕ್ಕೆ ಸ್ವಾತಂತ್ರ್ಯ ಸಿಗಲು ಬಿಜೆಪಿ, ಆರ್‌ಎಸ್‍ಎಸ್‍ನ ಯಾವುದೇ ಪಾತ್ರವಿಲ್ಲ: ಸತೀಶ್ ಜಾರಕಿಹೊಳಿ

    ಈ ಬಗ್ಗೆ ಕುಟುಂಬಸ್ಥರು ದೂರು ನೀಡಿದ್ದು, ಇದೀಗ ಪ್ರಾಚಿ ಸಿಂಗ್ ಮತ್ತು ಅವರ ಪತಿ ಕಾರ್ತಿಕ್ ಚೌಧರಿ, ವಿಕಾಸ್ ಖಂಡೇಲ್ವಾಲ್ ಮತ್ತು ನೇಹಾ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ನಾಲ್ವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆದರೆ ಆರೋಪಿಗಳು ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಶಾಂತಿ ಭಂಗದ ಆರೋಪದಡಿ ಎದುರಿನ ಗುಂಪಿನ ವಿಶಾಲ್ ದುಬೆ ಮತ್ತು ಆರ್ಯ ಎಂಬವರನ್ನು ಕೂಡ ಪೊಲೀಸರು ಬಂಧಿಸಿದ್ದರು. ಆದರೆ ಅವರು ಸಹ ಜಾಮೀನಿನ ಆಧಾರದ ಮೇಲೆ ಹೊರಗಿದ್ದಾರೆ. ಇದನ್ನೂ ಓದಿ: ‘ಬಿಗ್ ಬಾಸ್’ ಮನೆಯಲ್ಲಿ ಜಯಶ್ರೀ ಕಡೆಯಿಂದ ಮೇಕಪ್ ಮಾಡಿಸಿಕೊಂಡ ಆರ್ಯವರ್ಧನ್ ಗುರೂಜಿ

    Live Tv
    [brid partner=56869869 player=32851 video=960834 autoplay=true]

  • ಇಂಡಿಗೋ ಏರ್‌ಲೈನ್ಸ್‌ನ ಗಗನಸಖಿಯೊಂದಿಗೆ ಅಸಭ್ಯ ವರ್ತನೆ- ಪ್ರಯಾಣಿಕನ ಬಂಧನ

    ಇಂಡಿಗೋ ಏರ್‌ಲೈನ್ಸ್‌ನ ಗಗನಸಖಿಯೊಂದಿಗೆ ಅಸಭ್ಯ ವರ್ತನೆ- ಪ್ರಯಾಣಿಕನ ಬಂಧನ

    ಚಂಡೀಗಢ: ಇಂಡಿಗೋ ಏರ್‌ಲೈನ್ಸ್‌ ವಿಮಾನದಲ್ಲಿ ಗಗನಸಖಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಪ್ರಯಾಣಿಕನನ್ನು ಬಂಧಿಸಲಾಗಿದೆ.

    ಮೊಹಮ್ಮದ್ ಡ್ಯಾನಿಶ್ ಬಂಧಿತ ವ್ಯಕ್ತಿ. ಶ್ರೀನಗರದಿಂದ ಲಕ್ನೋಕ್ಕೆ ಅಮೃತಸರ ಮಾರ್ಗವಾಗಿ ಹೋಗುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ. ಉತ್ತರ ಪ್ರದೇಶದ ಲಕ್ನೋ ನಿವಾಸಿಯಾದ ಮೊಹಮ್ಮದ್ ಎಂಬಾತ ಗಗನಸಖಿಯೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾನೆ. ಅಷ್ಟೇ ಅಲ್ಲದೇ ಅಸಭ್ಯವಾಗಿ ವರ್ತಿಸಿದ್ದಾನೆ. ಇದನ್ನೂ ಓದಿ: ಕುಡಿತ ಅಮಲಿನಲ್ಲಿ ವ್ಯಕ್ತಿಗೆ ಹಿಗ್ಗಾಮುಗ್ಗ ಥಳಿಸಿದ ಯುವತಿಯರು – ವೀಡಿಯೋ ವೈರಲ್

    ಘಟನೆಗೆ ಸಂಬಂಧಿಸಿದಂತೆ ಗಗನಸಖಿಯು ಕ್ಯಾಪ್ಟನ್‍ಗೆ ತಿಳಿಸಿದ್ದಾರೆ. ಅವರು ಅಮೃತಸರ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿಮಾನವು ಅಮೃತಸರದಲ್ಲಿ ಭೂಸ್ಪರ್ಶ ಮಾಡಿದ ತಕ್ಷಣ ಆರೋಪಿಯನ್ನು ಬಂಧಿಸಿದ್ದಾರೆ. ನಂತರ ಈತನನ್ನು ಜಾಮೀನನ ಮೇರೆಗೆ ಬಿಡುಗಡೆಗೊಳಿಸಿದ್ದಾರೆ. ಇದನ್ನೂ ಓದಿ: ಮೂರಂತಸ್ತಿನ ಕಟ್ಟಡದಲ್ಲಿ ನೇತಾಡುತ್ತಿದ್ದ ಮಕ್ಕಳ ಮುದ್ದಿನ ಬೆಕ್ಕು – ಯಶಸ್ವಿ ಕಾರ್ಯಾಚರಣೆ

    Live Tv
    [brid partner=56869869 player=32851 video=960834 autoplay=true]