Tag: ಗಜಪಡೆ

  • ಮರದ ಅಂಬಾರಿ ಹೊತ್ತು ಕ್ಯಾಪ್ಟನ್ ಅರ್ಜುನ ತಾಲೀಮು

    ಮರದ ಅಂಬಾರಿ ಹೊತ್ತು ಕ್ಯಾಪ್ಟನ್ ಅರ್ಜುನ ತಾಲೀಮು

    ಮೈಸೂರು: ದಸರಾ ಮಹೋತ್ಸವ 2019 ಹಿನ್ನೆಲೆ ಗಜಪಡೆಗೆ ಮರದ ಅಂಬಾರಿ ಹೊರುವ ತಾಲೀಮು ಆರಂಭಿಸಲಾಗಿದೆ. ಹೀಗಾಗಿ ಸುಮಾರು 650 ಕೆಜಿ ತೂಕ ಹೊತ್ತು ಗಜಪಡೆ ನಾಯಕ ಅರ್ಜುನ ತಾಲೀಮು ಆರಂಭಿಸಿದ್ದಾನೆ.

    ನಮ್ದ, ಗಾಧಿ, ಛಾಪು, ಮರಳುಮೂಟೆ, ಮರದ ಅಂಬಾರಿ ಸೇರಿ ಸುಮಾರು 650 ಕೆ.ಜಿ ತೂಕವನ್ನು ಅರ್ಜುನ ಹೊತ್ತು ತಾಲೀಮು ನಡೆಸುತ್ತಿದ್ದಾನೆ. ಅರಣ್ಯಾಧಿಕಾರಿಗಳು ದಸರಾ ಗಜಪಡೆಗೆ ಕೊನೆಯ ಹಂತದ ತಾಲೀಮು ನೀಡುತ್ತಿದ್ದು, ಅರಮನೆ ಆವರಣದಲ್ಲಿ ಗಜಪಡೆಗೆ ಪೂಜೆ ಸಲ್ಲಿಸಿದ ನಂತರ ಮರದ ಅಂಬಾರಿ ಕಟ್ಟುವ ಕಾರ್ಯ ಮಾಡಲಾಯಿತು. ಅರಮನೆ ಆವರಣದಲ್ಲಿ ಕ್ರೇನ್ ಮೂಲಕ ಆನೆ ಬೆನ್ನಿಗೆ ಮಾವುತರು ಮರದ ಅಂಬಾರಿ ಕಟ್ಟಿದರು.

    ಈ ಮೂಲಕ ವಿಶ್ವ ವಿಖ್ಯಾತ ಮೈಸೂರು ದಸರಾ ಗಜಪಡೆಗೆ ಅಂತಿಮ ಹಂತದ ತಾಲೀಮು ಆರಂಭಗೊಂಡಿದೆ. ಮರದ ಅಂಬಾರಿ ಹೊತ್ತು ಕ್ಯಾಪ್ಟನ್ ಅರ್ಜುನ ಸಾಗಿದ್ದಾನೆ. ಮರದ ಅಂಬಾರಿ ಸುಮಾರು 350 ಕೆಜಿ ತೂಕವಿದ್ದು, ಅದರ ಜೊತೆ 300 ಕೆಜಿ ತೂಕದಷ್ಟು ಮರಳು ಮೂಟೆ ಸೇರಿದಂತೆ ಒಟ್ಟು 650 ಕೆಜಿ ತೂಕವನ್ನು ಅರ್ಜುನ ಹೊತ್ತು ಸಾಗಿದ್ದಾನೆ. ದಸರಾ ದಿನದಂದು ಗಜಪಡೆ ಹೊತ್ತು ಸಾಗುವ ಚಿನ್ನದ ಅಂಬಾರಿ 750 ಕೆಜಿ ಇದೆ.

    https://www.youtube.com/watch?v=ghh6dSjQhQU

  • ಜಂಬೂಸವಾರಿ ಮೊದಲೇ ಗಜಪಡೆಯ ಈಶ್ವರ ಆನೆ ಅರಣ್ಯಕ್ಕೆ ವಾಪಸ್

    ಜಂಬೂಸವಾರಿ ಮೊದಲೇ ಗಜಪಡೆಯ ಈಶ್ವರ ಆನೆ ಅರಣ್ಯಕ್ಕೆ ವಾಪಸ್

    ಮೈಸೂರು: ನಗರದ ವಾತಾವರಣಕ್ಕೆ ಹೊಂದಿಕೊಳ್ಳದ ಹಿನ್ನೆಲೆಯಲ್ಲಿ ಗಜಪಡೆಯ ಮೊದಲ ತಂಡದ ಸದಸ್ಯ ಈಶ್ವರ ಆನೆಯನ್ನು ಕಾಡಿಗೆ ಹಿಂದಕ್ಕೆ ಕಳುಹಿಸಲು ನಿರ್ಧರಿಸಿಲಾಗಿದೆ.

    ಇಂದು ನಡೆದ ದಸರಾ ಸಿದ್ಧತಾ ಸಭೆಯಲ್ಲಿ ಈಶ್ವರ ಆನೆ ಬಗ್ಗೆ ಸಚಿವ ಸೋಮಣ್ಣ ಆತಂಕ ವ್ಯಕ್ತಪಡಿಸಿದರು. ನಗರದ ವಾತಾವರಣಕ್ಕೆ ಈಶ್ವರ ಆನೆ ಹೊಂದಿಕೊಳ್ಳುತ್ತಿಲ್ಲ ಎಂದು ಹೇಳಿದ್ದರು. ಈ ಹಿನ್ನೆಲೆ ಅರಣ್ಯಾಧಿಕಾರಿಗಳ ಆನೆಯನ್ನು ವಾಪಸ್ ಕಾಡಿಗೆ ಬಿಡಲು ತೀರ್ಮಾನಿಸಿದ್ದಾರೆ. ಈಶ್ವರ ಆನೆ ಬದಲು ಗಜಪಡೆಗೆ ಪರ್ಯಾಯವಾಗಿ ಬೇರೆ ಆನೆ ತರಲು ಅರಣ್ಯಾಧಿಕಾರಿಗಳು ಚಿಂತನೆ ನಡೆಸಿದ್ದಾರೆ.

    ಈಶ್ವರ ಆನೆ ವಿಚಾರವಾಗಿ ಸಾರ್ವಜನಿಕರಿಂದ ದೂರು ಬರುತ್ತಿರುವುದರಿಂದ ಈ ಬಗ್ಗೆ ಸೋಮಣ್ಣ ಅವರು ಸಭೆಯಲ್ಲಿ ಪ್ರಸ್ತಾಪಿಸಿದ್ದರು. ಇಂತಹ ದೂರುಗಳು ಬಂದಾಗ ನಾವು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಆನೆಯನ್ನು ಬದಲಾಯಿಸಲೇ ಬೇಕಾಗುತ್ತದೆ ಎಂದು ಡಿಸಿಎಫ್(ಅರಣ್ಯ ಉಪ ಸಂರಕ್ಷಣಾಧಿಕಾರಿ) ಅಲೆಕ್ಸಾಂಡರ್ ಅವರು ತಿಳಿಸಿದ್ದಾರೆ. ಭದ್ರತೆ ದೃಷ್ಟಿಯಿಂದ ಈ ನಿರ್ಧಾರ ಅನಿವಾರ್ಯ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಇದೇ ಮೊದಲ ಬಾರಿಗೆ ಈಶ್ವರ ಆನೆಯನ್ನು ದಸರಾ ಗಜಪಡೆಗೆ ಸೇರಿಸಿಕೊಳ್ಳಲಾಗಿತ್ತು. ಆದರೆ ನಗರ ಪ್ರದೇಶದಲ್ಲಿ ಗಜಪಡೆ ತಾಲೀಮು ಆರಂಭಿಸಿದ ದಿನದಿಂದಲೂ ಈಶ್ವರ ಆನೆ ಗಾಬರಿಗೊಳ್ಳುತಿತ್ತು. ಆಗ ವೈದ್ಯರು ಹಾಗೂ ಅಧಿಕಾರಿಗಳು ದಿನ ಕಳೆಯುತ್ತಿದ್ದಂತೆ ಆನೆ ಈ ವಾತಾವರಣಕ್ಕೆ ಹೊಂದಿಕೊಳ್ಳುತ್ತದೆ ಎಂಬ ವಿಶ್ವಾಸದಲ್ಲಿದ್ದರು. ಆದರೆ ಪ್ರತಿದಿನ ತಾಲೀಮು ಮಾಡುತ್ತಿರುವಾಗಲೂ ಈಶ್ವರ ಆನೆ ನಗರದ ವಾತಾವರಣಕ್ಕೆ ಬೆಚ್ಚಿಬೀಳುತ್ತಿತ್ತು. ಹೊಸ ವಾತಾವರಣಕ್ಕೆ ಅದು ಹೊಂದಿಕೊಳ್ಳಲು ಸಾಧ್ಯವಾಗದ ಹಿನ್ನೆಲೆ ಈಶ್ವರ ಆನೆಯನ್ನು ವಾಪಸ್ ಅರಣ್ಯಕ್ಕೆ ಕಳುಹಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.

    https://www.youtube.com/watch?v=ZSV-6_HpYQk

  • ಬೆಳ್ಳಂಬೆಳಗ್ಗೆ ಗಜಪಡೆ ಜೊತೆ ಸಚಿವ ವಿ.ಸೋಮಣ್ಣ ವಾಕಿಂಗ್

    ಬೆಳ್ಳಂಬೆಳಗ್ಗೆ ಗಜಪಡೆ ಜೊತೆ ಸಚಿವ ವಿ.ಸೋಮಣ್ಣ ವಾಕಿಂಗ್

    ಮೈಸೂರು: ದಸರಾ ಗಜಪಡೆಯ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ವಾಕಿಂಗ್ ಮಾಡಿದ್ದಾರೆ.

    ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ರಾಜಮಾರ್ಗದಲ್ಲಿ ಗಜಪಡೆಗಳ ಪಾದಯಾತ್ರೆ ನಡೆಸಲಾಗುತ್ತಿದೆ. ಸೋಮಣ್ಣ ಅವರು ಬೆಳ್ಳಂಬೆಳಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಪಾದಯಾತ್ರೆ ಮಾಡಿದರು. ಈ ವೇಳೆ ಜಂಬೂಸವಾರಿ ತೆರಳುವ ಮಾರ್ಗದಲ್ಲಿ ಕಾಮಗಾರಿ ಹಾಗೂ ಸ್ಥಳ ಪರಿಶೀಲನೆ ಮಾಡಿದರು.

    ಅಲ್ಲದೆ ಜಂಬೂ ಸವಾರಿ ಮಾರ್ಗದ ಅಸುಪಾಸಿನಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ಮಾಹಿತಿ ಕಲೆ ಹಾಕಿದರು. ನಗರದ ಕೋಟೆ ಆಂಜನೇಯ ದೇವಸ್ಥಾನದಿಂದ ಬನ್ನಿಮಂಟಪದವರೆಗೂ ಸೋಮಣ್ಣ ವಾಕಿಂಗ್ ಮಾಡಿದರು. ಈ ವೇಳೆ ವಿ. ಸೋಮಣ್ಣಗೆ ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್. ನಾಗೇಂದ್ರ, ಮೇಯರ್ ಜಗನ್ನಾಥ್ ಸಾಥ್ ನೀಡಿದರು.

    ಸಮಸ್ಯೆಗಳ ಬಗ್ಗೆ ಗಮನಹರಿಸಿ ಸ್ಥಳದಲ್ಲೇ ವಿ. ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದಸರಾಗೆ ಕಪ್ಪು ಚುಕ್ಕೆ ಬಾರದಂತೆ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ.

  • ಕ್ಯಾಪ್ಟನ್ ಅರ್ಜುನನ ನೇತೃತ್ವದಲ್ಲಿ ಗಜಪಡೆಯಿಂದ ತಾಲೀಮು ಆರಂಭ

    ಕ್ಯಾಪ್ಟನ್ ಅರ್ಜುನನ ನೇತೃತ್ವದಲ್ಲಿ ಗಜಪಡೆಯಿಂದ ತಾಲೀಮು ಆರಂಭ

    ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವ 2019ಕ್ಕೆ ಭರ್ಜರಿ ತಯಾರಿ ನಡೆಸಲಾಗುತ್ತದೆ. ಇಂದು ಬೆಳ್ಳಂಬೆಳಗ್ಗೆಯೇ ಕ್ಯಾಪ್ಟನ್ ಅರ್ಜುನ ನೇತೃತ್ವದಲ್ಲಿ ಗಜಪಡೆ ತಾಲೀಮು ಆರಂಭಿಸಿದೆ.

    ಕ್ಯಾಪ್ಟನ್ ಅರ್ಜುನ ನೇತೃತ್ವದಲ್ಲಿ ಅಭಿಮನ್ಯು, ಧನಂಜಯ, ಈಶ್ವರ, ವಿಜಯಾ, ವರಲಕ್ಷ್ಮಿ ಸೇರಿ ಎಲ್ಲ ಆರು ಆನೆಗಳೂ ತಾಲೀಮಿನಲ್ಲಿ ಭಾಗಿಯಾಗಿವೆ. ಸದ್ಯ ಆನೆಗಳು ಬರಿ ಮೈ ನಡಿಗೆ ತಾಲೀಮು ಆರಂಭಿಸಿದ್ದು, ಜಂಬೂ ಸವಾರಿಗಾಗಿ ಗಜಪಡೆಗೆ ತರಬೇತಿ ನೀಡಲಾಗುತ್ತಿದೆ. ಮೈಸೂರು ಅರಮನೆಯಿಂದ ಗಜಪಡೆ ತಾಲೀಮು ಆರಂಭಿಸಿದ್ದು, ಆಲ್ಬರ್ಟ್ ವಿಕ್ಟರ್ ರಸ್ತೆ, ನ್ಯೂ ಸಯ್ಯಾಜಿರಾವ್ ರಸ್ತೆಗಳಲ್ಲಿ ಸಾಗಿ ಬಳಿಕ ಅರಮನೆ ಸೇರಲಿದೆ.

    ಮಂಗಳವಾರ ನಗರದ ದೇವರಾಜ ಮೊಹಲ್ಲಾದ ಸಾಯಿರಾಮ್ & ಕೊ ಎಲೆಕ್ಟ್ರಾನಿಕ್ ತೂಕ ಮಾಪನ ಕೇಂದ್ರದಲ್ಲಿ ಗಜಪಡೆಯ ತೂಕ ಪರಿಶೀಲನೆ ನಡೆದಿದೆ. ಗಜಪಡೆಯ ಕ್ಯಾಪ್ಟನ್ ಅರ್ಜುನ- 5,800 ಕೆ.ಜಿ ಇದ್ದರೆ, ವರಲಕ್ಷ್ಮಿ- 3,510 ಕೆ.ಜಿ, ಈಶ್ವರ- 3,995 ಕೆ.ಜಿ, ಧನಂಜಯ- 4,460 ಕೆ.ಜಿ, ವಿಜಯ- 2,825 ಕೆ.ಜಿ ಹಾಗೂ ಅಭಿಮನ್ಯು- 5,145 ಕೆ.ಜಿ ಇದೆ.

    ಸೋಮವಾರ ಮೈಸೂರು ಅರಮನೆಗೆ ಮೊದಲ ತಂಡದ ಆರು ಆನೆಗಳು ಆಗಮಿಸಿದ್ದವು. ಜಿಲ್ಲಾಡಳಿತ ಸಾಂಪ್ರದಾಯಿಕವಾಗಿ ಆನೆಗಳನ್ನು ಬರ ಮಾಡಿಕೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ಗಜಪಡೆಗೆ ಪೂಜೆ ನಡೆದಿತ್ತು. ಇನ್ನೂ ಒಂದೂವರೆ ತಿಂಗಳ ಕಾಲ ಆನೆಗಳು ಅರಮನೆಯಲ್ಲೇ ಉಳಿಯಲಿದೆ.

  • ಇಂದು ಮೈಸೂರು ಅರಮನೆಗೆ ದಸರಾ ಗಜಪಡೆ ಎಂಟ್ರಿ

    ಇಂದು ಮೈಸೂರು ಅರಮನೆಗೆ ದಸರಾ ಗಜಪಡೆ ಎಂಟ್ರಿ

    ಮೈಸೂರು: ಇಂದು ಮೈಸೂರು ಅರಮನೆಗೆ ದಸರಾ ಗಜಪಡೆ ಹೆಜ್ಜೆ ಇಡಲಿದೆ.

    ಇಂದು ಮೊದಲ ತಂಡದ ಆರು ಆನೆಗಳು ಅರಮನೆಗೆ ಆಗಮಿಸುತ್ತಿದ್ದು, ಜಿಲ್ಲಾಡಳಿತ ಸಾಂಪ್ರದಾಯಿಕವಾಗಿ ಆನೆಗಳನ್ನು ಬರ ಮಾಡಿಕೊಳ್ಳಲಿದೆ. ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ಗಜಪಡೆಗೆ ಪೂಜೆ ನಡೆಯಲಿದೆ.

    ಅರ್ಜುನನ ನೇತೃತ್ವದ ಆನೆಗಳ ತಂಡಕ್ಕೆ ಸಾಂಪ್ರದಾಯಿಕ ಪೂಜೆ ನಡೆಯಲಿದ್ದು, ಇಂದಿನಿಂದ ಒಂದೂವರೆ ತಿಂಗಳ ಕಾಲ ಆನೆಗಳು ಅರಮನೆಯಲ್ಲೇ ಉಳಿಯಲಿದೆ. ಇಂದು ಮಧ್ಯಾಹ್ನ 12ಕ್ಕೆ ಅಭಿಜಿನ್ ಲಗ್ನದಲ್ಲಿ ಗಜಪಡೆಗೆ ಸ್ವಾಗತ ಮಾಡಲಾಗುತ್ತದೆ.

    ಕಳೆದ ಗುರುವಾರ ವಿಶ್ವವಿಖ್ಯಾತ ಮೈಸೂರು ದಸರಾ 2019ರ ಗಜಪಯಣಕ್ಕೆ ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಬಳಿ ಅನೆಗಳಿಗೆ ಪೂಜೆ ಮಾಡಿ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಗಿತ್ತು. ಈ ಗಜ ಪಡೆಯ ಸ್ವಾಗತಕ್ಕೆ ಡೊಳ್ಳು, ಕಂಸಾಳೆ ವಿವಿಧ ಜನಪದ ಕಲಾ ತಂಡಗಳ ಮೆರುಗು ತುಂಬಿತ್ತು. ಇದರ ಜೊತೆಗೆ ಕಲಶ ಹೊತ್ತು ಮಹಿಳೆಯರಿಂದ ಪೂರ್ಣಕುಂಭ ಸ್ವಾಗತದೊಂದಿಗೆ ಅರ್ಜುನ, ವಿಜಯ, ಅಭಿಮನ್ಯು, ವರಲಕ್ಷ್ಮಿ, ಧನಂಜಯ ಮತ್ತು ಈಶ್ವರ ಆನೆಗಳು ಮೈಸೂರಿಗೆ ಪ್ರಯಾಣ ಮಾಡಿತ್ತು.

    ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೊದಲ ದಸರಾ ಸಭೆ ನಡೆದಿತ್ತು ಈ ವೇಳೆ ಅವರು ದಸರಾ ಕಾರ್ಯಕಾರಿ ಸಮಿತಿ ಸಭೆ ನಂತರ ದಸರಾ ಮುಹೂರ್ತವನ್ನು ಘೋಷಣೆ ಮಾಡಿದ್ದರು. ಸೆಪ್ಟೆಂಬರ್ 29ರಂದು ಬೆಳಗ್ಗೆ ಸುಮಾರು 9.30ರ ವೃಶ್ಚಿಕ ಲಗ್ನದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಕೆ ಮಾಡಲಾಗುತ್ತದೆ. ಚಾಮುಂಡಿಬೆಟ್ಟದ ದೇವಾಲಯದ ಆವರಣದಲ್ಲಿ ಚಾಮುಂಡೇಶ್ವರಿ ಪೂಜೆ ಸಲ್ಲಿಸಿ ದಸರಾ ಉದ್ಘಾಟನೆ ಮಾಡಲಾಗುತ್ತದೆ.

  • ಗಜಪಯಣ ಮುಗಿಸಿ ಅರಮನೆ ನಗರಿಗೆ ಎಂಟ್ರಿ ಕೊಟ್ಟ ಗಜಪಡೆ

    ಗಜಪಯಣ ಮುಗಿಸಿ ಅರಮನೆ ನಗರಿಗೆ ಎಂಟ್ರಿ ಕೊಟ್ಟ ಗಜಪಡೆ

    ಮೈಸೂರು: ದಸರಾ ಮಹೋತ್ಸವ 2019ರ ಗಜಪಯಣಕ್ಕೆ ಗುರುವಾರ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಚಾಲನೆ ನೀಡಲಾಗಿದ್ದು, ಈಗ ಗಜಪಯಣ ಮುಗಿಸಿ ಗಜಪಡೆ ಅರಮನೆ ನಗರಿಗೆ ಎಂಟ್ರಿ ಕೊಟ್ಟಿದೆ.

    ವಿಶ್ವವಿಖ್ಯಾತ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಆಗಮಿಸಿದ ಅರ್ಜುನ ಪಡೆ, ಜಿಲ್ಲೆಯ ಅರಣ್ಯ ಭವನದಲ್ಲಿ ಬೀಡು ಬಿಟ್ಟಿದೆ. ಮೈಸೂರಿಗೆ ಲಾರಿಗಳಲ್ಲಿ ಅರ್ಜುನ, ಅಭಿಮನ್ಯು, ಧನಂಜಯ, ಈಶ್ವರ, ವಿಜಯ ಹಾಗೂ ವರಲಕ್ಷ್ಮಿ ಆನೆಗಳನ್ನು ಕರೆತರೆಲಾಯಿತು. ಒಟ್ಟು 6 ಆನೆಗಳು ಗಜಪಯಣ ಮುಗಿಸಿ ಅರಣ್ಯ ಭವನದಲ್ಲಿ ವಿಶ್ರಾಂತಿ ಪಡೆಯುತ್ತಿವೆ.

    ಆಗಸ್ಟ್ 26ರಂದು ಅರಮನೆ ಗಜಪಡೆ ಪ್ರವೇಶಿಸಲಿದೆ. ಅಲ್ಲದೆ ಇದೇ ಮೊದಲ ಬಾರಿಗೆ ದಸರಾ ಮಹೋತ್ಸವದಲ್ಲಿ ಈಶ್ವರ ಆನೆ ಭಾಗವಹಿಸುತ್ತಿದೆ. ದುಬಾರೆ ಕ್ಯಾಂಪ್‍ನಿಂದ ಈಶ್ವರ ಆನೆಯನ್ನು ಕರೆತರಲಾಗಿದೆ. ವಿಶೇಷವೆಂದರೆ ಈ ಬಾರಿ ಕೂಡ ಗಜಪಡೆ ನಾಯಕ ಅರ್ಜುನ ಅಂಬಾರಿ ಹೊತ್ತು ಎಲ್ಲರ ಗಮನ ಸೆಳೆಯಲಿದ್ದು, ಸತತ 8ನೇ ಬಾರಿಗೆ ಅಂಬಾರಿಯನ್ನ ಹೊತ್ತ ಕೀರ್ತಿಗೆ ಅರ್ಜುನ ಪಾತ್ರವಾಗಲಿದ್ದಾನೆ.

    ಸಾಂಪ್ರದಾಯಿಕವಾಗಿ ಪ್ರತಿ ವರ್ಷ ಜಿಲ್ಲಾ ಉಸ್ತುವಾರಿ ಸಚಿವರು ಪೂಜೆ ಸಲ್ಲಿಸಿ, ಗಜಪಯಣಕ್ಕೆ ಚಾಲನೆ ನೀಡುತ್ತಿದ್ದರು. ಆದರೆ ಈ ಬಾರಿ ದಸರಾ ಗಜಪಯಣಕ್ಕೆ ಚಾಲನೆ ನೀಡುವ ವಿಚಾರಕ್ಕೆ ಗೊಂದಲ ಶುರುವಾಗಿತ್ತು. ಯಾಕೆಂದರೆ ಈ ಬಾರಿ ಜಿಲ್ಲೆಯಿಂದ ಯಾವ ನಾಯಕರು ಸಚಿವರಾಗಿಲ್ಲ. ಅಲ್ಲದೆ ಸ್ಥಳೀಯ ಶಾಸಕರ ಬಳಿ ಚಾಲನೆ ಕೊಡಿಸೋಣ ಎಂದರೆ ಶಾಸಕರು ಕೂಡ ಅನರ್ಹರಾಗಿದ್ದಾರೆ. ಹೀಗಾಗಿ ಗಜಪಯಣಕ್ಕೆ ಚಾಲನೆ ನೀಡುವವರು ಯಾರು ಎಂಬ ಗೊಂದಲ ಎದುರಾಗಿತ್ತು. ಆದರೆ ಶಾಸಕ ರಾಮದಾಸ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದ್ದರು.

  • ಸಚಿವರ ಆಗಮನಕ್ಕೆ ಮುನ್ನವೇ ಗಜ ಪಯಣಕ್ಕೆ ಪುಷ್ಪಾರ್ಚನೆ

    ಸಚಿವರ ಆಗಮನಕ್ಕೆ ಮುನ್ನವೇ ಗಜ ಪಯಣಕ್ಕೆ ಪುಷ್ಪಾರ್ಚನೆ

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2019ರ ಗಜಪಯಣಕ್ಕೆ ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಬಳಿ ಅನೆಗಳಿಗೆ ಪೂಜೆ ಮಾಡಿ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಗಿದೆ.

    ಇಂದು ಈ ಗಜ ಪಡೆಯ ಸ್ವಾಗತಕ್ಕೆ ಡೊಳ್ಳು, ಕಂಸಾಳೆ ವಿವಿಧ ಜನಪದ ಕಲಾ ತಂಡಗಳ ಮೆರುಗು ತುಂಬಿದವು. ಇದರ ಜೊತೆಗೆ ಕಲಶ ಹೊತ್ತು ಮಹಿಳೆಯರಿಂದ ಪೂರ್ಣಕುಂಭ ಸ್ವಾಗತದೊಂದಿಗೆ ಅರ್ಜುನ, ವಿಜಯ, ಅಭಿಮನ್ಯು, ವರಲಕ್ಷ್ಮಿ, ಧನಂಜಯ ಮತ್ತು ಈಶ್ವರ ಆನೆಗಳು ಮೈಸೂರಿಗೆ ಪ್ರಯಣ ಮಾಡಿದವು.

    ಮೊದಲ ತಂಡವಾಗಿ ಐದು ಅನೆಗಳು ಮೈಸೂರಿಗೆ ಪ್ರಯಾಣ ಮಾಡಿದ್ದು, ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಮೈಸೂರಿನ ಕೆ.ಆರ್ ಕ್ಷೇತ್ರದ ಶಾಸಕ ರಾಮದಾಸ್ ಕೂಡ ಭಾಗಿಯಾಗಿದ್ದರು. ಈ ವೇಳೆ ಕಾರ್ಯಕ್ರಮಕ್ಕೆ ಬರಬೇಕಾದ ನೂತನ ಸಚಿವರಾದ ಆರ್. ಅಶೋಕ್ ಮತ್ತು ವಿ. ಸೋಮಣ್ಣ ಬರುವುದನ್ನು ಒಂದು ನಿಮಿಷವೂ ಕಾಯದೇ ಪುಷ್ಪಾರ್ಚನೆ ಮಾಡಿದ ಶಾಸಕ ಎಸ್.ಎ ರಾಮದಾಸ್, ಯಾರನ್ನು ಕಾಯುವ ಅವಶ್ಯಕತೆ ಇಲ್ಲ ಎಂದು ಅಧಿಕಾರಿಗಳಿಗೆ ಹೇಳಿ ಪುಷ್ಪಾರ್ಚನೆ ಮಾಡಿದರು.

    ಎಲ್ಲ ಕಾರ್ಯಕ್ರಮಗಳು ಮುಗಿದ ಮೇಲೆ ತಡವಾಗಿ ಬಂದ ಸಚಿವಾರದ ಆರ್. ಅಶೋಕ್ ಮತ್ತು ವಿ. ಸೋಮಣ್ಣ ಅವರು ಮತ್ತೊಮ್ಮೆ ಗಜಪಡೆಗೆ ಪುಷ್ಪಾರ್ಚನೆ ಮಾಡಿದರು.

    ಸಾಂಪ್ರದಾಯಿಕವಾಗಿ ಪ್ರತಿ ವರ್ಷ ಜಿಲ್ಲಾ ಉಸ್ತುವಾರಿ ಸಚಿವರು ಪೂಜೆ ಸಲ್ಲಿಸಿ, ಗಜಪಯಣಕ್ಕೆ ಚಾಲನೆ ನೀಡುತ್ತಿದ್ದರು. ಆದರೆ ಈ ಬಾರಿ ದಸರಾ ಗಜಪಯಣಕ್ಕೆ ಚಾಲನೆ ನೀಡುವ ವಿಚಾರಕ್ಕೆ ಗೊಂದಲ ಶುರುವಾಗಿತ್ತು. ಯಾಕೆಂದರೆ ಪ್ರತಿ ಬಾರಿ ದಸರಾ ಗಜಪಯಣಕ್ಕೆ ಉಸ್ತವಾರಿ ಸಚಿವರು ಚಾಲನೆ ನೀಡುತ್ತಿದ್ದರು. ಆದರೆ ಈ ಬಾರಿ ಜಿಲ್ಲೆಯಿಂದ ಯಾವ ನಾಯಕರು ಸಚಿವರಾಗಿಲ್ಲ. ಅಲ್ಲದೆ ಸ್ಥಳೀಯ ಶಾಸಕರ ಬಳಿ ಚಾಲನೆ ಕೊಡಿಸೋಣ ಎಂದರೆ ಶಾಸಕರು ಕೂಡ ಅನರ್ಹರಾಗಿದ್ದಾರೆ. ಹೀಗಾಗಿ ಗಜಪಯಣಕ್ಕೆ ಚಾಲನೆ ನೀಡುವವರು ಯಾರು ಎಂಬ ಗೊಂದಲ ಎದುರಾಗಿತ್ತು. ಆದರೆ ಶಾಸಕ ರಾಮದಾಸ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

  • ದರ್ಗಾದಲ್ಲಿ ಗಜಪಡೆಗೆ ವಿಶೇಷ ಪೂಜೆ- 460 ಕೆ.ಜಿ ತೂಕ ಹೆಚ್ಚಿಸಿಕೊಂಡ ಅರ್ಜುನ

    ದರ್ಗಾದಲ್ಲಿ ಗಜಪಡೆಗೆ ವಿಶೇಷ ಪೂಜೆ- 460 ಕೆ.ಜಿ ತೂಕ ಹೆಚ್ಚಿಸಿಕೊಂಡ ಅರ್ಜುನ

    ಮೈಸೂರು: 2018 ನೇ ಸಾಲಿನ ವಿಶ್ವವಿಖ್ಯಾತ ಮೈಸೂರು ದಸರಾದ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಜಂಬೂಸವಾರಿಯ ಹಿಂದಿನ ದಿನವಾದ ಗುರುವಾರ ರಾತ್ರಿ ದರ್ಗಾದಲ್ಲಿ ಗಜಪಡೆಗೆ ಪೂಜೆ ನಡೆಯಿತು. ಇದನ್ನೂ ಓದಿ: ರಾಜಬೀದಿಯಲ್ಲಿ ತಾಲೀಮು ಆರಂಭ: ದಸರಾ ಆನೆಗಳ ತೂಕ 1 ವರ್ಷದ ಹಿಂದೆ ಎಷ್ಟಿತ್ತು? ಈಗ ಎಷ್ಟಾಗಿದೆ?

    ಕೆವಿ ರಸ್ತೆಯಲ್ಲಿರುವ ಹಿಮಾಂಶ ವಾಲಿ ದರ್ಗಾದಲ್ಲಿ ಅರ್ಜುನ ಸೇರಿದಂತೆ 12 ಆನೆಗಳು ಪೂಜೆಯಲ್ಲಿ ಭಾಗಿಯಾಗಿದ್ದವು. ದುಷ್ಟ ಶಕ್ತಿಯ ನಿವಾರಣೆಗಾಗಿ ಪೂಜೆ ಮಾಡಲಾಗಿದ್ದು, ಜಂಬೂಸವಾರಿಗೆ ಸಜ್ಜಾದ ಗಜಪಡೆಗಳಿಗೆ ಧರ್ಮ ಗುರು ನಕೀಬ್ ಅವರು ಆಶೀರ್ವಾದ ಮಾಡಿದ್ರು. ಅಲ್ಲದೇ ದಸರಾ ಗಜಪಡೆಗೆ ಎರಡನೇ ಬಾರಿ ತೂಕ ಪರೀಕ್ಷೆ ಮಾಡಲಾಯ್ತು. ಇದನ್ನೂ ಓದಿ: ಸೌಹಾರ್ದದ ಮೈಸೂರು ಜಂಬೂಸವಾರಿ – ಆನೆಗೆ ಅಂಬಾರಿ ಕಟ್ತಾರೆ ಮುಸ್ಲಿಮರು!

    45 ದಿನಗಳಲ್ಲಿ ಹೊಸ ಆನೆ ಧನಂಜಯ ಬರೋಬ್ಬರಿ 530 ಕೆಜಿ ತೂಕ ಏರಿಸಿಕೊಂಡಿದ್ದು, ಇದೇ ಮೊದಲ ಬಾರಿಗೆ ಧನಂಜಯ ಆನೆ ದಸರಾದಲ್ಲಿ ಭಾಗಿಯಾಗಲಿದ್ದಾನೆ. ಇನ್ನು ತೂಕ ಹೆಚ್ಚಿಸಿಕೊಂಡ ಆನೆಗಳ ಪೈಕಿ 2ನೇ ಸ್ಥಾನದಲ್ಲಿ 480 ಕೆಜಿ ತೂಕ ಹೆಚ್ಚಿಸಿಕೊಂಡಿರುವ ಬಲರಾಮ ಆನೆ ಇದ್ದು, ಕೇವಲ 460 ಕೆಜಿ ತೂಕ ಹೆಚ್ಚಿಸಿಕೊಂಡ ಕ್ಯಾಪ್ಟನ್ ಅರ್ಜುನ ಆನೆ ಮೂರನೇ ಸ್ಥಾನದಲ್ಲಿದೆ.ಇದನ್ನೂ ಓದಿ: ಚಿನ್ನದ ಅಂಬಾರಿ ಮೈಸೂರಿಗೆ ಬಂದಿದ್ದು ಹೇಗೆ? `ಮೈಸೂರು ದಸರಾ’ವಾಗಿ ವಿಶ್ವವಿಖ್ಯಾತಿ ಪಡೆದ ಕಥೆ ಓದಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    ಇದನ್ನೂ ಓದಿ: ಗಜಪಡೆಯ ತಾಲೀಮು ಹಾದಿಯಲ್ಲಿ ಮ್ಯಾಗ್ನೆಟಿಕ್ ರೋಲರ್ ಬಳಕೆ- ಯಾಕೆ?

  • ಮಹಾಲಯ ಅಮವಾಸ್ಯೆ ಎಫೆಕ್ಟ್ – ದಸರಾ ಗಜಪಡೆ ತಾಲೀಮು ರದ್ದು

    ಮಹಾಲಯ ಅಮವಾಸ್ಯೆ ಎಫೆಕ್ಟ್ – ದಸರಾ ಗಜಪಡೆ ತಾಲೀಮು ರದ್ದು

    ಮೈಸೂರು: ದಸರಾ ಪ್ರಯುಕ್ತ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಆನೆಗಳಿಗೆ ತಾಲೀಮು ನಡೆಯುತ್ತಿತ್ತು. ಆದರೆ ಇಂದು ಮಹಾಲಯ ಅಮವಾಸ್ಯೆಯ ಹಿನ್ನೆಲೆಯಲ್ಲಿ ಗಜಪಡೆಯ ತಾಲೀಮು ರದ್ದಾಗಿದೆ.

    ಅರಮನೆ ಆವರಣದ ಒಳಗೆಯೇ ಆನೆಗಳು ವಿಶ್ರಾಂತಿ ಪಡೆಯುತ್ತಿವೆ. ಅರಮನೆ ಆವರಣದ ಒಳಗೆ ಒಂದೆರಡು ಸುತ್ತು ವಾಕಿಂಗ್ ಮಾಡಿದ ಗಜಪಡೆ ನಂತರ ವಿಶ್ರಾಂತಿಗೆ ಜಾರಿವೆ. ಅಮವಾಸ್ಯೆ ಆಗಿರುವ ಕಾರಣ ಅರಮನೆ ಆವರಣದಿಂದ ಆನೆಗಳನ್ನು ಹೊರಕ್ಕೆ ಕರೆದೊಯ್ದರೆ ಏನಾದರೂ ಅನಾಹುತ ಆಗಬಹುದೆಂಬ ಭಯ ಆನೆಯ ಮಾವುತರು ಮತ್ತು ಕಾವಾಡಿಗಳದ್ದು. ಈ ಹಿನ್ನೆಲೆಯಲ್ಲಿ ಅರಮನೆಯ ಆವರಣದಲ್ಲೇ ಗಜಪಡೆಗೆ ತಾಲೀಮು ನೀಡಲಾಯಿತು. ಕಳೆದ ಅಮಾವಾಸ್ಯೆಯಂದು ಕೂಡ ದಸರಾ ಗಜಪಡೆಯ ತಾಲೀಮನ್ನು ಅರಮನೆ ಆವರಣಕ್ಕೆ ಸೀಮಿತಗೊಳಿಸಲಾಗಿತ್ತು.

    ಪ್ರತಿದಿನ ಅರಮನೆಯಿಂದ ಕೆ.ಆರ್ ವೃತ್ತ ಸಯ್ಯಾಜಿರಾವ್ ರಸ್ತೆ ತಿಲಕ್‍ನಗರ ಬಂಬೂಬಜಾರ್, ಹೈವೇ ವೃತ್ತದ ಮೂಲಕ ಬನ್ನಿಮಂಟಪ ತಲುಪುತ್ತಿದ್ದವು. ಬಳಿಕ ಅದೇ ಮಾರ್ಗವಾಗಿ ಆನೆಗಳು ಮೈಸೂರು ಅರಮನೆಗೆ ವಾಪಸ್ಸಾಗುತ್ತಿದ್ದವು. ಆದರೆ ಇಂದು ಅಮಾವಾಸ್ಯೆಯಾಗಿದ್ದರಿಂದ ತಾಲೀಮು ನಡೆಯುತ್ತಿಲ್ಲ. ಪ್ರತಿ ಅಮಾವಾಸ್ಯೆಯ ಸಮಯದಲ್ಲಿ ಆನೆಗಳಿಗೆ ತಾಲೀಮು ನಡೆಸುವುದಿಲ್ಲ.

    ತಾಲೀಮು ಏಕೆ?
    ಆನೆಗಳಿಗೆ ಜನರ ಗದ್ದಲ, ವಾಹನಗಳ ಧ್ವನಿ ಮತ್ತು ರಸ್ತೆಯ ಪರಿಚಯ ಮಾಡುವ ಉದ್ದೇಶದಿಂದ ಈ ತಾಲೀಮು ಮಾಡಿಸಲಾಗುತ್ತದೆ. ಅಲ್ಲದೆ ಕಾಡಿನಲ್ಲಿ ಓಡಾಡುವ ಆನೆಗಳು ಸಿಮೆಂಟ್ ಹಾಗೂ ಕಾಂಕ್ರಿಟ್ ರಸ್ತೆ ಮೇಲೆ ನಡೆಯುವುದನ್ನು ಅಭ್ಯಾಸ ಮಾಡಿಸುವುದು ಈ ತಾಲೀಮಿನ ಉದ್ದೇಶವಾಗಿದೆ. ತಾಲೀಮು ಮುಗಿದ ನಂತರ ಆನೆಗಳಿಗೆ ಪೌಷ್ಠಿಕ ಆಹಾರ ನೀಡಿ ಅವು ಸದೃಢವಾಗಿರುವಂತೆ ನೋಡಿಕೊಳ್ಳಲಾಗುತ್ತದೆ. ಯಾವುದೇ ಹಂತದಲ್ಲೂ ಆನೆಗಳು ಸಿಮೆಂಟ್ ಹಾಗೂ ಕಾಂಕ್ರಿಟ್ ರಸ್ತೆ ಮೇಲೆ ಸಾಗಿ ಸುಸ್ತಾಗದಂತೆ ನೋಡಿಕೊಳ್ಳುವುದು ಅತಿ ಮುಖ್ಯವಾಗಿದೆ ಎಂದು ಆನೆ ವೈದ್ಯರಾದ ಡಾ. ನಾಗರಾಜ್ ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಜಪಥದಲ್ಲಿ ಗಜಪಡೆ ನಡಿಗೆ

    ರಾಜಪಥದಲ್ಲಿ ಗಜಪಡೆ ನಡಿಗೆ

    ಮೈಸೂರು: ನಾಡಹಬ್ಬ ದಸರಾಗೆ ದಿನಗಣನೆ ಶುರುವಾಗಿದೆ. ಹೀಗಾಗಿ ದಸರಾ ಗಜಪಡೆಯ ತಾಲೀಮು ಕೂಡ ಮೈಸೂರಿನಲ್ಲಿ ಆರಂಭವಾಗಿದೆ. ಮೈಸೂರಿನ ರಾಜಪಥದಲ್ಲಿ ಇಂದು ಗಜಪಡೆ ತಾಲೀಮು ಆರಂಭಿಸಿದೆ.

    ಮೈಸೂರಿನಲ್ಲಿ 40 ದಿನ ಗಜಪಡೆಯೂ ವಾಕಿಂಗ್ ಮಾಡುತ್ತದೆ. ದಸರಾ ತಾಲೀಮು ರೂಪದ ವಾಕಿಂಗ್ ಅನ್ನು ಗಜಪಡೆಯೂ ಬೆಳಗ್ಗೆ ಮತ್ತು ಸಂಜೆ ಮಾಡಲಿವೆ. ಕ್ಯಾಪ್ಟನ್ ಅರ್ಜುನ ನೇತೃತ್ವದ ಗಜಪಡೆಯ ವಾಕಿಂಗ್ ಪ್ರತಿದಿನ ಅರಮನೆಯ ಆವರಣದಿಂದ ಆರಂಭವಾಗುತ್ತಿತ್ತು. ಈ ಬಾರಿ ದಸರಾದಲ್ಲಿ ಎಲ್ಲ 13 ಆನೆಗಳೂ ತಾಲೀಮಿನಲ್ಲಿ ಭಾಗಿಯಾಗಲಿದ್ದು, ಇದುವರೆಗೆ ಆರು ಆನೆಗಳು ನಡಿಗೆ ತಾಲೀಮು ನಡೆಸುತ್ತಿದೆ. ಶುಕ್ರವಾರ ಸಂಜೆಯಷ್ಟೇ ಮೈಸೂರಿಗೆ ಆಗಮಿಸಿದ್ದ ಎರಡನೇ ತಂಡದ ಆರು ಆನೆಗಳು ಮೊದಲನೇ ದಿನ ತಾಲೀಮು ನಡೆಸುತ್ತಿವೆ. ಇದನ್ನು ಓದಿ: ಮೈಸೂರೊಳಗೆ ದಸರಾ ಆನೆ ಟೀಂ ವಾಕಿಂಗ್- ವಿಡಿಯೋ ನೋಡಿ

    ಧನಂಜಯ ಆನೆಗೆ ಭಾರ ಹೊರುವ ತಾಲೀಮು ನೀಡಲಾಗಿದ್ದು, ಇಂದು ಧನಂಜಯನ ಬೆನ್ನಿಗೆ ಸುಮಾರು 300 ಕೆ.ಜಿ. ತೂಕದ ಭಾರವನ್ನು ಹೊರಿಸಲಾಗುತ್ತಿದೆ. ಅರ್ಜುನ ಶುಕ್ರವಾರ ಮರಳು ಮೂಟೆ ಹೊತ್ತಿದ್ದಾನೆ. ಇನ್ನೂ ಅರಣ್ಯ ಇಲಾಖೆ ಅಂಬಾರಿ ಹೊರಲು ಅರ್ಜುನ, ಧನಂಜಯ, ಬಲರಾಮನಿಗೆ ಪ್ರಾಕ್ಟೀಸ್ ಮಾಡಿಸುತ್ತಿದ್ದಾರೆ.

    ತಾಲೀಮು ಏಕೆ?
    ಆನೆಗಳಿಗೆ ಜನರ ಗದ್ದಲ, ವಾಹನಗಳ ಧ್ವನಿ ಮತ್ತು ರಸ್ತೆಯ ಪರಿಚಯ ಮಾಡುವ ಉದ್ದೇಶದಿಂದ ಈ ತಾಲೀಮು ಮಾಡಿಸಲಾಗುತ್ತದೆ. ಅಲ್ಲದೆ ಕಾಡಿನಲ್ಲಿ ಓಡಾಡುವ ಆನೆಗಳು ಸಿಮೆಂಟ್ ಹಾಗೂ ಕಾಂಕ್ರಿಟ್ ರಸ್ತೆ ಮೇಲೆ ನಡೆಯುವುದನ್ನು ಅಭ್ಯಾಸ ಮಾಡಿಸುವುದು ಈ ತಾಲೀಮಿನ ಉದ್ದೇಶವಾಗಿದೆ. ತಾಲೀಮು ಮುಗಿದ ನಂತರ ಆನೆಗಳಿಗೆ ಪೌಷ್ಠಿಕ ಆಹಾರ ನೀಡಿ ಅವು ಸದೃಢವಾಗಿರುವಂತೆ ನೋಡಿಕೊಳ್ಳಲಾಗುತ್ತದೆ. ಯಾವುದೇ ಹಂತದಲ್ಲೂ ಆನೆಗಳು ಸಿಮೆಂಟ್ ಹಾಗೂ ಕಾಂಕ್ರಿಟ್ ರಸ್ತೆ ಮೇಲೆ ಸಾಗಿ ಸುಸ್ತಾಗದಂತೆ ನೋಡಿಕೊಳ್ಳುವುದು ಅತಿ ಮುಖ್ಯವಾಗಿದೆ ಎಂದು ಆನೆ ವೈದ್ಯರಾದ ಡಾ. ನಾಗರಾಜ್ ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=cziWRBz4mkg