– ‘ಪ್ರಸಾದ್’ ಯೋಜನೆಯಡಿ ದ.ಕನ್ನಡದ ಪ್ರಮುಖ ದೇವಾಲಯಗಳ ಅಭಿವೃದ್ದಿಗೆ ಮನವಿ
ನವದೆಹಲಿ: ಪುತ್ತೂರು ಶ್ರೀ ಮಹಾಲಿಂಗೇಶ್ವರ, ಶಿಶಿಲದ ಶ್ರೀ ಶಿಶಿಲೇಶ್ವರ ದೇವಸ್ಥಾನ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪ್ರಮುಖ ದೇವಾಲಯಗಳನ್ನು ಕೇಂದ್ರ ಸರ್ಕಾರ ‘ಪ್ರಸಾದ್’ ಯೋಜನೆಯಡಿಯಲ್ಲಿ ಅಭಿವೃದ್ದಿಪಡಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಜೊತೆ ನವದೆಹಲಿಯಲ್ಲಿ ಇಂದು ಸಚಿವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ ಸಂಸದರು, ಬೆಳ್ತಂಗಡಿ ತಾಲೂಕಿನ ಶ್ರೀ ನಂದಿಕೇಶ್ವರ ದೇವಸ್ಥಾನ (ನಂದಿಬೆಟ್ಟ ಗರ್ಡಾಡಿ), ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ (ಕೊಲ್ಲಿ), ಶ್ರೀ ಶಿಶಿಲೇಶ್ವರ ದೇವಸ್ಥಾನ(ಶಿಶಿಲ), ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ (ಉಪ್ಪಿನಂಗಡಿ) ಮತ್ತು ಸುಳ್ಯ ತಾಲೂಕಿನ ಶ್ರೀ ತೋಡಿಕಾನ ಮಲ್ಲಿಕಾರ್ಜುನ ದೇವಸ್ಥಾನಗಳನ್ನು ‘ಪ್ರಸಾದ್’ ಯೋಜನೆಯಡಿ ಅಭಿವೃದ್ಧಿಪಡಿಸಬೇಕು. ಆ ಮೂಲಕ ಈ ದೇವಸ್ಥಾನಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಾರ್ಥಿಗಳು-ಪ್ರವಾಸಿಗರನ್ನು ಆಕರ್ಷಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯು ಧಾರ್ಮಿಕ ಕ್ಷೇತ್ರಗಳ ನೆಲೆಬೀಡಾಗಿದ್ದು, ಇಲ್ಲಿನ ಹಲವಾರು ದೇವಸ್ಥಾನಗಳಿಗೆ ಕರ್ನಾಟಕ ಮಾತ್ರವಲ್ಲ ದೇಶ-ವಿದೇಶಗಳಿಂದಲೂ ಯಾತ್ರಾರ್ಥಿಗಳು ದರ್ಶನಕ್ಕೆಂದು ಬಂದು ಹೋಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಪ್ರಸಾದಂ ಯೋಜನೆ ಪಟ್ಟಿಯಲ್ಲಿ ಅಭಿವೃದ್ಧಿಪಡಿಸುವುದಕ್ಕೆ ಜಿಲ್ಲೆಯ ಅನೇಕ ದೇವಸ್ಥಾನಗಳು ಅರ್ಹತೆ ಹಾಗೂ ವಿಪುಲ ಅವಕಾಶಗಳನ್ನು ಪಡೆದುಕೊಂಡಿವೆ. ಹೀಗಿರುವಾಗ, ಆದ್ಯತೆ ಮೇರೆಗೆ, ಶ್ರೀ ಸಹಸ್ರಲಿಂಗೇಶ್ವರ ಸೇರಿದಂತೆ ಈ ಐದು ದೇವಸ್ಥಾನಗಳನ್ನು ಮತ್ತಷ್ಟು ಜನಾಕರ್ಷಣೆ ಮಾಡುವುದಕ್ಕೆ ಪ್ರವಾಸೋದ್ಯಮ ಸಚಿವಾಲಯದಿಂದ ಅಗತ್ಯ ಅನುದಾನವನ್ನು ನೀಡಬೇಕೆಂದು ಕ್ಯಾ. ಚೌಟ ಅವರು ಇದೇ ಸಂದರ್ಭದಲ್ಲಿ ಸಚಿವ ಶೆಖಾವತ್ ಅವರಲ್ಲಿ ವಿನಂತಿಸಿದ್ದಾರೆ.
ನವದೆಹಲಿ: ಇದು ಮೋದಿಯವರ ಭಾರತ, ಬಾಂಗ್ಲಾದೇಶದಂತಹ ಪರಿಸ್ಥಿತಿ ಬರೋದಕ್ಕೆ ಸಾಧ್ಯವಿಲ್ಲ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ (Gajendra Singh Shekhawat) ಪ್ರಧಾನಿಗಳ ಪರ ಬ್ಯಾಟ್ ಬೀಸಿದ್ದಾರೆ.
ಜೋಧ್ಪುರ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಂಗ್ಲಾದೇಶದಲ್ಲಿ (Bangladesh) ನಡೆದಂತೆ ಭಾರತದಲ್ಲೂ (India) ಮುಂದೊಂದು ದಿನ ಪ್ರಧಾನಿ ನರೇಂದ್ರ ಮೋದಿ (Narendra Modi) ನಿವಾಸಕ್ಕೆ ಜನರು ನುಗ್ಗುತ್ತಾರೆ ಎಂಬ ಮಧ್ಯಪ್ರದೇಶ ಕಾಂಗ್ರೆಸ್ನ ಹಿರಿಯ ನಾಯಕ ಸಜ್ಜನ್ ಸಿಂಗ್ ವರ್ಮಾ (Madhya Pradesh Congress leader Sajjan Verma) ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: Tungabhadra Dam | 3 ಲಕ್ಷ ಕ್ಯುಸೆಕ್ ನೀರು ಹೊರಕ್ಕೆ ಹರಿಸಿದ್ರೆ 4 ಜಿಲ್ಲೆಗಳಿಗೆ ಅಪಾಯ!
ಭಾರತದಲ್ಲಿ ಬಾಂಗ್ಲಾದೇಶದಂತಹ ಪರಿಸ್ಥಿತಿ ಉದ್ಭವಿಸುತ್ತದೆ ಎಂದು ಕೆಲವರು ಕಾಮೆಂಟ್ ಮಾಡಿರುವುದು ದುರದೃಷ್ಟಕರ. ಅಂತಹ ಪರಿಸ್ಥಿತಿ ಇಲ್ಲಿ ಬರಲು ಸಾಧ್ಯವಿಲ್ಲ, ಏಕೆಂದರೆ ಇದು ಮೋದಿ ಅವರ ಭಾರತ. ಬಾಂಗ್ಲಾದೇಶದಲ್ಲಿ ನಡೆದಿರುವುದು ಅನಿರೀಕ್ಷಿತವಲ್ಲ. ಅಲ್ಲಿನ ಪರಿಸ್ಥಿಯ ಬಗ್ಗೆ ಭಾರತ ಕಣ್ಣಿಟ್ಟಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ಯಾರಿಸ್ ಒಲಿಂಪಿಕ್ಸ್ ಹಬ್ಬಕ್ಕಿಂದು ಅದ್ಧೂರಿ ತೆರೆ – ಭಾರತದ ಧ್ವಜಧಾರಿಯಾಗಲಿದ್ದಾರೆ ಮನು ಭಾಕರ್
ಪ್ರವಾಸೋದ್ಯಮಕ್ಕೆ ಉತ್ತೇಜನ:
ಇದೇ ವೇಳೆ ಸ್ವದೇಶ್ ದರ್ಶನ್ ಯೋಜನೆಯಡಿ ರಾಜಸ್ಥಾನಕ್ಕೆ 4 ಸರ್ಕ್ಯೂಟ್ ನೀಡುತ್ತಿರುವ ಕುರಿತು ಮಾತನಾಡಿದ ಅವರು, ಪ್ರವಾಸೋದ್ಯಮವು ಆಯಾ ರಾಜ್ಯ ಸರ್ಕಾರಗಳಿಗೆ ಸಂಬಂಧಿಸಿದ ವಿಷಯವಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯಗಳ ಸಹಯೋಗದೊಂದಿಗೆ ಇಡೀ ದೇಶದಲ್ಲಿ ಪ್ರವಾಸೋದ್ಯಮ ಹೆಚ್ಚಿಸಲು ಕೆಲಸ ಮಾಡುತ್ತೇವೆ. ರಾಜ್ಯ ಸರ್ಕಾರದಿಂದ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆಗಳು ಬಂದರೆ ಅವುಗಳನ್ನು ಗಂಭೀರವಾಗಿ ಪರಿಗಣಿಸಿ ಮುಂದೆ ಕೊಂಡೊಯ್ಯುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಬೆಂಗಳೂರು: ಅಭಿವೃದ್ಧಿ ಮತ್ತು ಅನುದಾನದ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳ ನಡುವೆ ಕದನ ಶುರುವಾಗಿದೆ. ಕೇಂದ್ರ ಸರ್ಕಾರ (Union Government) ಕರ್ನಾಟಕದ ವಿಚಾರದಲ್ಲಿ ಮಲತಾಯಿ ಧೋರಣೆ ತಳೆದಿದೆ ಎಂದು ಆರೋಪಿಸಿ ಕಳೆದ ಮೂರು ದಿನಗಳಿಂದ ಸಿಎಂ ಸಿದ್ದರಾಮಯ್ಯ (CM Siddaramaiah) ಇಲಾಖಾವಾರು ಅಂಕಿ ಅಂಶ ಪ್ರಕಟಿಸುತ್ತಾ ಸಂಘರ್ಷಕ್ಕೆ ಮುನ್ನುಡಿ ಬರೆದಿದ್ದಾರೆ.
ಲೋಕಸಭೆ ಚುನಾವಣೆ ಸನಿಹದಲ್ಲಿರುವ ಈ ಸಂದರ್ಭದಲ್ಲಿ, ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ (Karnataka) ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಉತ್ತರ ಕೊಡಿ ಮೋದಿ ಎಂದು ಪ್ರಶ್ನಿಸುತ್ತಾ ಪೋಸ್ಟರ್ ಅಭಿಯಾನ ಮಾಡತೊಡಗಿದ್ದಾರೆ. ಇದು ಸಹಜವಾಗಿಯೇ ಬಿಜೆಪಿಗರಿಗೆ (BJP) ಮುಜುಗರ ತಂದಿಟ್ಟಿತ್ತು. ಮೂರು ದಿನಗಳ ನಂತರ ಎಚ್ಚೆತ್ತ ಬಿಜೆಪಿ ಹೈಕಮಾಂಡ್ ಈಗ ಆಯಾ ಇಲಾಖೆಗಳ ಸಚಿವರ ಮೂಲಕವೇ ಉತ್ತರ ಕೊಡಿಸಲು ಹೊರಟಂತಿದೆ.
ಇದರ ಮೊದಲ ಭಾಗವಾಗಿ ಕೇಂದ್ರ ಜಲಶಕ್ತಿ ಮಂತ್ರಿ ಗಜೇಂದ್ರ ಸಿಂಗ್ ಶೇಖಾವತ್ (Gajendra Singh Shekhawat) ಟ್ವೀಟ್ ಮೂಲಕ ಸಿಎಂಗೆ ತಿರುಗೇಟು ನೀಡಿದ್ದಾರೆ. ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ. ಮೇಕೆದಾಟು ಯೋಜನೆಯ ಸ್ಥಿತಿ-ಗತಿ ಹಾಗೂ ವಾಸ್ತವಾಂಶ ಏನೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ನಿಮಗೆ ಬ್ರೀಫೀಂಗ್ ತಂಡ ನೀಡಿದ ಅರ್ಧಂಬರ್ಧ ಮಾಹಿತಿ ಆಧರಿಸಿ ನೀವು ತಪ್ಪು ಮಾಹಿತಿಗಳ ಸರಣಿಯನ್ನೇ ಹರಿಬಿಟ್ಟಂತೆ ತೋರುತ್ತದೆ ಎಂದು ಉತ್ತರ ನೀಡಿದ್ದಾರೆ. ಇದನ್ನೂ ಓದಿ: ನೀವು ಕರ್ನಾಟಕದ ಚೀಫ್ ಲೈಯರ್ ಆಗಿದ್ದೀರಿ: ಸಿದ್ದರಾಮಯ್ಯ ವಿರುದ್ಧ ತೇಜಸ್ವಿ ಸೂರ್ಯ ಕಿಡಿ
ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ @siddaramaiah ನವರೇ, ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ.
ಸಿದ್ದರಾಮಯ್ಯ Vs ಗಜೇಂದ್ರ ಸಿಂಗ್ ಶೇಖಾವತ್ ಸಿದ್ದು ಆರೋಪ – ಕೇಂದ್ರ ಅನುಮತಿ ನೀಡದ ಕಾರಣ ಮೇಕೆದಾಟು ಯೋಜನೆ ನೆನೆಗುದಿಗೆ ಜಲಮಂತ್ರಿ ಪ್ರತ್ಯುತ್ತರ – ಈ ಕಾರ್ಯಸೂಚಿ ಬಗ್ಗೆ ನೆರೆಯ ರಾಜ್ಯಗಳಲ್ಲಿ ಒಮ್ಮತ ಮೂಡಿಲ್ಲ. ಹೀಗಾಗಿ ಚರ್ಚೆ ಸಾಧ್ಯವಾಗಿಲ್ಲ. ಇದು ಕೇಂದ್ರ ಸರ್ಕಾರದ ತಪ್ಪಲ್ಲ
ಸಿದ್ದು ಆರೋಪ – ಕೇಂದ್ರದ ನಿರ್ಲ್ಯಕ್ಷದ ಕಾರಣ ಮಹದಾಯಿ ಯೋಜನೆ ನೆನೆಗುದಿಗೆ ಬಿದ್ದಿದೆ. ಕುಡಿಯುವ ನೀರಿನ ವಿಚಾರದಲ್ಲೂ ಕೀಳು ರಾಜಕೀಯ ಮಾಡುತ್ತಿದೆ ಜಲಮಂತ್ರಿ ಪ್ರತ್ಯುತ್ತರ – ಕಳಸಾ ಬಂಡೂರಿ ಯೋಜನೆ ಡಿಪಿಆರ್ಗೆ ಕೆಲ ಷರತ್ತುಗಳೊಂದಿಗೆ ಕೇಂದ್ರ ಜಲ ಆಯೋಗ ಅನುಮೋದಿಸಿದೆ. ನೀವು ಈ ಮಾಹಿತಿ ಮುಚ್ಚಿಟ್ಟಿದ್ದೀರಿ?
ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದೇನು?
ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ.
ಮೇಕೆದಾಟು ಯೋಜನೆಯ ಸ್ಥಿತಿ-ಗತಿ ಹಾಗೂ ವಾಸ್ತವಾಂಶ ಏನೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ನಿಮಗೆ ಬ್ರೀಫೀಂಗ್ ತಂಡ ನೀಡಿದ ಅರ್ಧಂಬರ್ಧ ಮಾಹಿತಿ ಆಧರಿಸಿ ನೀವು ತಪ್ಪು ಮಾಹಿತಿಗಳ ಸರಣಿಯನ್ನೇ ಹರಿಬಿಟ್ಟಂತೆ ತೋರುತ್ತದೆ. ಹೀಗಾಗಿ ವಾಸ್ತವ ಏನೆಂಬುದನ್ನು ನಾವೇ ಹೇಳಬೇಕಾಗಿದೆ.
ಮೊದಲನೆಯದಾಗಿ CWMA ಯ ಹಲವು ಸಭೆಗಳಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ಕುರಿತು ಚರ್ಚೆಯನ್ನು ಅಜೆಂಡಾ ವಿಷಯವಾಗಿ ಸೇರಿಸಲಾಗಿತ್ತು. ಆದರೆ ಈ ಕಾರ್ಯಸೂಚಿಯ ಬಗ್ಗೆ ನೆರೆಯ ರಾಜ್ಯಗಳ ನಡುವೆ ಒಮ್ಮತ ಮೂಡದೇ ಇರುವುದರಿಂದ ಈ ಬಗ್ಗೆ ಚರ್ಚೆ ನಡೆಸಲು ಸಾಧ್ಯವಾಗಿಲ್ಲ. ಇದು ಕೇಂದ್ರದ ತಪ್ಪಲ್ಲ.
ಕಳಸಾ ಮತ್ತು ಬಂಡೂರ ನಾಲೆ ಯೋಜನೆ ಸಮಗ್ರ ಯೋಜನಾ ವರದಿ(DPR) ಈಗಾಗಲೇ ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ) ಕೆಲವು ಷರತ್ತುಗಳೊಂದಿಗೆ ಅನುಮೋದಿಸಿದೆ ಮತ್ತು ಅದನ್ನು ಕರ್ನಾಟಕ ಸರ್ಕಾರಕ್ಕೆ ಈಗಾಗಲೇ ತಿಳಿಸಲಾಗಿದೆ. ಈ ಮಾಹಿತಿಯನ್ನು ನೀವು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದೀರಲ್ಲವೇ ?
2017-17ರಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY) ತ್ವರಿತ ನೀರಾವರಿ ಕಾರ್ಯಕ್ರಮದ ಅಡಿಯಲ್ಲಿ ಆದ್ಯತೆ ನೀಡಲಾದ ಕರ್ನಾಟಕದ 5 ಯೋಜನೆಗಳಲ್ಲಿ, ಮೂರು ಪೂರ್ಣಗೊಂಡಿದೆ. ಎರಡು ಕಾಮಗಾರಿ ಚಾಲನೆಯಲ್ಲಿದೆ. ಈ ಯೋಜನೆಗಾಗಿ ಕೇಂದ್ರದ ಪಾಲಿನ 1238.30 ಕೋಟಿ ರೂ.ಗಳ ಪೈಕಿ 1190.05 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದೆ. ಇದು ರಾಜ್ಯದ ಹಣಕಾಸು ಸಚಿವಾಲಯವನ್ನೂ ನಿಭಾಯಿಸುತ್ತಿರುವ ನಿಮ್ಮ ಗಮನಕ್ಕೆ ಬಾರದಿರುವುದು ಚೋದ್ಯವಲ್ಲವೇ ?
ಅಟಲ್ ಭೂ ಜಲ ಯೋಜನೆ ಅಡಿಯಲ್ಲಿ, ಕರ್ನಾಟಕಕ್ಕೆ ಕೇಂದ್ರದಿಂದ ಈಗಾಗಲೇ 629.54 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆದರೆ 2023ರ ಅಕ್ಟೋಬರ್ 10ರವರೆಗೆ ಕೇವಲ 274.05 ಕೋಟಿ ರೂ. ಮಾತ್ರ ಬಳಕೆ ಮಾಡಿಕೊಂಡಿದ್ದೀರಿ.
ಸತ್ಯದ ಘೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡುವಾಗ ಕನಿಷ್ಠ ಆತ್ಮಸಾಕ್ಷಿಯನ್ನಾದರೂ ಪ್ರಶ್ನಿಸಿಕೊಳ್ಳಿ. ಇಲ್ಲವಾದರೆ ಸುಳ್ಳಿನ ಉಪಾಸನೆಯೇ ನಿಮ್ಮ ನಿತ್ಯಕರ್ಮವೆಂದು ಕರ್ನಾಟಕದ ಜನ ನಿಮ್ಮ ಬಗ್ಗೆ ಕನಿಕರ ಹಾಗೂ ತಿರಸ್ಕಾರವನ್ನು ತೋರಬಹುದು.
ನವದೆಹಲಿ: ಬರಗಾಲದ ಸಂಕಷ್ಟದಲ್ಲಿರುವ ರೈತರಿಗೆ, ಜನಸಾಮಾನ್ಯರಿಗೆ ನೀರು ಉಳಿಸದೆ, ಕಾವೇರಿ ನೀರು ತಮಿಳುನಾಡಿಗೆ ಹರಿಸಿ ರಾಜ್ಯದ ರೈತರಿಗೆ ಕುಡಿಯುವ ನೀರಿಗೆ ಸಂಕಷ್ಟ ತಂದಿರುವ ನೀತಿಯನ್ನು ಸರಿಪಡಿಸುವಂತೆ ಹಾಗೂ ಕಾವೇರಿ ನೀರು ನಿರ್ವಹಣಾ ಮಂಡಳಿ (Cauvery Water Management Board) ಅವೈಜ್ಞಾನಿಕ ಆದೇಶಕ್ಕೆ ತಡೆ ನೀಡುವಂತೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಪರವಾಗಿ ರೈತ ನಾಯಕ ಕುರುಬೂರು ಶಾಂತಕುಮಾರ್ (Kuruburu Shanthakumar) ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ (Gajendra Singh Shekhawat) ಅವರಿಗೆ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ (New Delhi) ಶೇಖಾವತ್ ನಿವಾಸದಲ್ಲಿ ಭೇಟಿಯಾದ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನಿಯೋಗ, ಕಾವೇರಿ ನೀರು ಹರಿಸಲು ಪ್ರಾಧಿಕಾರ ನೀಡಿರುವ ಆದೇಶಕ್ಕೆ ತಡೆ ನೀಡುವಂತೆ ಮನವಿ ಮಾಡಿತು. ಸುಮಾರು 20 ನಿಮಿಷಗಳ ಚರ್ಚೆಯಲ್ಲಿ ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಿದರು. ಇದನ್ನೂ ಓದಿ: ಪಂಚ ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟ – ನ.7 ಕ್ಕೆ ಮೊದಲ, ನ.30 ರಂದು ಕೊನೆ ಚುನಾವಣೆ
ಕರ್ನಾಟಕ ರಾಜ್ಯದಲ್ಲಿ ಮಳೆ ಕಡಿಮೆಯಾಗಿದೆ. ಬರಗಾಲಕ್ಕೆ 195 ತಾಲೂಕುಗಳು ತುತ್ತಾಗಿ 250ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾವೇರಿ ಜಲನಯನ ಭಾಗದ 38 ತಾಲೂಕುಗಳು ಬರಗಾಲಕ್ಕೆ ತುತ್ತಾಗಿ ರೈತರು ಯಾವುದೇ ಬೆಳೆ ಬೆಳೆದಿಲ್ಲ. ಕಾವೇರಿ ವ್ಯಾಪ್ತಿಗೆ ಬರುವ ಬೆಂಗಳೂರಿನಲ್ಲಿ 1.30 ಕೋಟಿ ಜನರಿಗೆ ಕುಡಿಯುವ ನೀರಿನ ಸಂಕಷ್ಟ ಬಂದಿದೆ. ಇಂಥ ಸಂದಿಗ್ಧ ಸಮಯದಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿ ಪ್ರತಿನಿತ್ಯ 5,000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸಬೇಕೆಂಬ ಅವೈಜ್ಞಾನಿಕ ಆದೇಶವನ್ನು ಹೊರಡಿಸಿತ್ತು. ಇದನ್ನೂ ಓದಿ: ಇಸ್ರೇಲ್-ಹಮಾಸ್ ಯುದ್ಧ; ಚಿನ್ನ, ಬೆಳ್ಳಿ ದರದ ಮೇಲೆ ಎಫೆಕ್ಟ್
ರಾಜ್ಯದಲ್ಲಿ ಹೋರಾಟದ ನಂತರವೂ ಮಂಡಳಿ 3,000 ಕ್ಯೂಸೆಕ್ ನೀರು ಬಿಡಬೇಕೆಂಬ ಆದೇಶ ನೀಡಿರುವುದನ್ನು ಒಪ್ಪಿ, ರಾಜ್ಯ ಸರ್ಕಾರ ಮತ್ತೆ ನೀರು ಹರಿಸುತ್ತಿರುವುದನ್ನು ತಕ್ಷಣ ನಿಲ್ಲಿಸುವಂತೆ, ಕುಡಿಯುವ ನೀರು ಉಳಿಸುವಂತೆ ಶೇಖಾವತ್ ಅವರಿಗೆ ಮನವಿ ಮಾಡಲಾಯಿತು. ಇದೇ ವೇಳೆ ಮೇಕೆದಾಟು ಯೋಜನೆ ಬಗ್ಗೆ ಚರ್ಚಿಸಿ ಅಣೆಕಟ್ಟು ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕು. ಇದರಿಂದ ನೀರಿನ ಬವಣೆ ಕಡಿಮೆಯಾಗಲಿದೆ ಎಂದು ಮನವಿ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಇಸ್ರೇಲ್ನಲ್ಲಿ ಸಿಲುಕಿದ್ದ 18,000 ಭಾರತೀಯರು ಸೇಫ್
ಸಭೆಯ ಬಳಿಕ ಮಾತನಾಡಿದ ಕಬ್ಬು ಬೆಳೆಗಾರರ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಕಾವೇರಿ ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಮಾತುಕತೆ ನಡೆಸಿದೆ. ಮುಂದಿನ ಸಭೆಯಲ್ಲಿ ನೀರು ಹರಿಸದಂತೆ ಮನವಿ ಮಾಡಿದೆ. ಮೇಕೆದಾಟು ಬಗ್ಗೆ ಗಂಭೀರವಾಗಿ ಪರಿಶೀಲಿಸಲು ಕೋರಿದ್ದೇವೆ. ಜಲಶಕ್ತಿ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ಇದನ್ನೂ ಓದಿ: 5 ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಇಂದು ಪ್ರಕಟ
ನವದೆಹಲಿ: ಸದ್ಯ ದೇಶಾದ್ಯಂತ ಸನಾತನ ಧರ್ಮದ (Sanatana Dharma) ವಿಚಾರದ್ದೇ ಚರ್ಚೆಯಾಗುತ್ತಿದೆ. ಈ ಬೆನ್ನಲ್ಲೇ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ (Gajendra Singh Shekhawat) ಅವರು, ಸನಾತನ ಧರ್ಮದ ವಿರುದ್ಧ ಮಾತನಾಡುವವರ ನಾಲಿಗೆ ಹಾಗೂ ಕಣ್ಣುಗಳನ್ನು ಕಿತ್ತು ಹಾಕಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಮುಂದೆ ನಾವು ಯಾರನ್ನೂ ಸಹಿಸುವುದಿಲ್ಲ. ಸನಾತನ ಧರ್ಮದ ವಿರುದ್ಧ ಮಾತನಾಡಿದವರ ನಾಲಿಗೆ ಹಾಗೂ ಕಣ್ಣನ್ನು ಕಿತ್ತು ಹಾಕುತ್ತೇವೆ ಎಂದು ಸಚಿವರು ಎಚ್ಚರಿಕೆ ನೀಡಿದರು. ಅಲ್ಲದೆ ಯಾರೇ ಆಗಲಿ ಸನಾತನ ಧರ್ಮದ ವಿರುದ್ಧ ಮಾತನಾಡಿ ದೇಶದಲ್ಲಿ ತಮ್ಮ ರಾಜಕೀಯ ಶಕ್ತಿ ಮತ್ತು ಸ್ಥಾನಮಾನವನ್ನು ಸ್ಥಾಪಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.
ಈ ಹಿಂದೆ ಸಚಿವರು ರಾಜಸ್ಥಾನದ ಸಚಿವ ಶಾಂತಿ ಧರಿವಾಲ್ (Shanti Dhariwal) ವಿರುದ್ಧ ವಾಗ್ದಾಳಿ ನಡೆಸಿದ್ದರು. 2022ರ ಮಾರ್ಚ್ ನಲ್ಲಿ ರಾಜ್ಯ ವಿಧಾನಸಭೆಯಲ್ಲಿ ಅತ್ಯಾಚಾರ ಪ್ರಕರಣವನ್ನು ಸಮರ್ಥಿಸಿಕೊಳ್ಳಲು ರಾಜಸ್ಥಾನ ಪುರುಷರ ಪ್ರದೇಶ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಚಿವರು, ಧರಿವಾಲ್ ಅವರನ್ನು ಅರಬ್ಬೀ ಸಮುದ್ರಕ್ಕೆ ಎಸೆಯಬೇಕು ಎಂದು ಕಿಡಿಕಾರಿದ್ದರು.
ರಾಜಸ್ಥಾನವು ನಿಜವಾಗಿಯೂ ಪುರುಷರ ರಾಜ್ಯವಾಗಿದೆ. ಇಲ್ಲಿರುವ ಪುರುಷತ್ವದ ಕಾರಣಕ್ಕಾಗಿಯೇ ಹಿಂದುತ್ವ, ಸನಾತನ ಧರ್ಮವು ಇಂದು ಭಾರತದಲ್ಲಿ ಜೀವಂತವಾಗಿದೆ ಎಂದು ತಿಳಿಸಿದ್ದರು.
ನವದೆಹಲಿ: ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ (Gajendra Singh Shekhawat) ಅವರನ್ನು ಭೇಟಿ ಮಾಡಿ ರಾಜ್ಯದ ಹಲವು ಜಲ ಯೋಜನೆಗಳ ಬಗ್ಗೆ ಚರ್ಚಿಸಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (D.K.Shivakumar) ಹೇಳಿದ್ದಾರೆ. ಕರ್ನಾಟಕ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ ಬಗ್ಗೆ ಮಾಹಿತಿ ನೀಡಿದರು.
ಪೆನ್ನಾರ್ ನದಿ ನ್ಯಾಯಾಧಿಕರಣ ಮಾಡುವುದಕ್ಕೆ ತಮಿಳುನಾಡು (Tamil Nadu) ತಕರಾರು ತೆಗೆದಿದೆ. ಸುಪ್ರೀಂ ಕೋರ್ಟ್ (Supreme Court) ಜುಲೈ 5 ರೊಳಗೆ ಟ್ರಿಬುನಲ್ ಮಾಡಲು ಹೇಳಿದೆ. ಕರ್ನಾಟಕದ ಮಾರ್ಕಂಡೇಯ ಆಣೆಕಟ್ಟು ಕುಡಿಯುವ ನೀರಿನ ಡ್ಯಾಂ ಪ್ರಾಜೆಕ್ಟ್, ಟ್ರಿಬುನಲ್ ರಚನೆಯಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಹೀಗಾಗಿ ಟ್ರಿಬ್ಯುನಲ್ ರಚನೆ ಬೇಡ ಎಂದು ಮನವಿ ಮಾಡಿದೆ. ಇದನ್ನೂ ಓದಿ: 4 ತಿಂಗಳಲ್ಲಿ ಮೂರನೇ ಬಾರಿಗೆ ಸಂಪುಟಕ್ಕೆ ಸರ್ಜರಿ- ಕೇಜ್ರಿವಾಲ್ ಬಳಿಕ ಅತಿಶಿ ಪ್ರಭಾವಿ ಸಚಿವೆ
ಬೆಂಗಳೂರು ವೇಸ್ಟ್ ವಾಟರ್ ಟ್ರೀಟ್ ಮಾಡಿ ಕೋಲಾರಕ್ಕೆ ಕಳುಹಿಸುತ್ತಿದ್ದೇವೆ. ಕೇಂದ್ರ ಸರ್ಕಾರವೇ ಈ ಯೋಜನೆಗೆ ಪ್ರಶಂಸೆ ವ್ಯಕ್ತಪಡಿಸಿತ್ತು. ಆದರೆ ತಮಿಳುನಾಡು ಸರ್ಕಾರ ತಕರಾರು ಎತ್ತಿದೆ. ಇದರಿಂದ ನಮ್ಮ ಹಲವು ಯೋಜನೆಗಳಿಗೆ ತೊಂದರೆಯಾಗುತ್ತಿದೆ. ವಾಸ್ತವಾಂಶ ಅರ್ಥ ಮಾಡಿಕೊಂಡು ಮಾತುಕತೆ ಮೂಲಕ ಬಗೆಹರಿಸಬೇಕು ಎಂದು ಮನವಿ ಮಾಡಿದೆ ಎಂದರು.
ಕೃಷ್ಣ ನದಿ ನೀರು ಹಂಚಿಕೆ ಅಧಿಸೂಚನೆ ಹೊರಡಿಸುವ ಬಗ್ಗೆ ಸಚಿವರ ಗಮನಕ್ಕೆ ತಂದಿದೆ. ಮಹದಾಯಿ ಯೋಜನೆಗೆ ಪರಿಸರ ಅನುಮತಿ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಅರಣ್ಯ ಸಚಿವರನ್ನು ಭೇಟಿ ಮಾಡುತ್ತೇನೆ. ಮೇಕೆದಾಟು ವಿಚಾರವಾಗಿ ಕಾನೂನು ತಜ್ಞರ ಜೊತೆ ಮಾತನಾಡಬೇಕು. ಯೋಜನೆ ತಡವಾದಂತೆ ವೆಚ್ಚ ಹೆಚ್ಚಾಗುತ್ತಿದೆ ರಾಜಕಾರಣದ ಪ್ರತಿಷ್ಠೆ ಹೆಚ್ಚಾಗುತ್ತಿದೆ. ಬೆಂಗಳೂರಿಗರಿಗೆ ಕುಡಿಯುವುದಕ್ಕೆ ನೀರಿಲ್ಲ. ಸದ್ಯ ಯಾವು ಸಮಸ್ಯೆ ಇಲ್ಲ. ಮಳೆಯ ಪ್ರಮಾಣ ಆಧರಿಸಿ ಮುಂದಿನ ದಿನಗಳಲ್ಲಿ ಲೆಕ್ಕಚಾರ ಮಾಡಲಾಗುವುದು. ಮುಂದಿನ ತಿಂಗಳು ಎಲ್ಲ ರಾಜ್ಯಗಳಿಂದ ವಿಶೇಷ ತಂಡಗಳು ಬರ್ತಿವೆ. ಇದೇ ವೇಳೆ ಕೇಂದ್ರ, ತಮಿಳುನಾಡು ಟೀಂಗಳು ಆಗಮಿಸಲಿದ್ದು ಕೆಆರ್ಎಸ್ ವಾಸ್ತವ ಪರಿಸ್ಥಿತಿ ತೋರಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಪ್ರತಿ ಆರ್ಡರ್ನಲ್ಲೂ ಚಾಕ್ಲೇಟ್ ಇಟ್ಟು ಹುಟ್ಟುಹಬ್ಬ ಆಚರಿಸಿದ ಝೋಮ್ಯಾಟೋ ಸಿಬ್ಬಂದಿ!
ಕೃಷ್ಣ ಮೇಲ್ದಂಡೆ ಯೋಜನೆಗೆ ಐದು ಸಾವಿರ ಕೋಟಿ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ, ಎಐಬಿಪಿಯಿಂದ ಅನುದಾನ ಪಡೆಯಲು ಕೇಂದ್ರ ಸರ್ಕಾರ ಹೇಳಿದೆ. ಆದರೆ ಇದು ರಾಷ್ಟ್ರೀಯ ಯೋಜನೆ ಎಐಬಿಪಿಯಲ್ಲಿ 60:40 ಹಣ ನೀಡಲಾಗುತ್ತೆ. ಹೀಗಾಗಿ ಹಣಕಾಸು ಇಲಾಖೆ ಜೊತೆಗೆ ಚರ್ಚಿಸಲು ನಿರ್ಧರಿಸಿದೆ. ಇನ್ನು ಕೆಲವು ಬೇರೆ ಬೇರೆ ಯೋಜನೆಗಳಿಗೆ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿದೆ ಎಂದು ತಿಳಿಸಿದರು.
ಕುಮಾರಸ್ವಾಮಿ ವರ್ಗಾವಣೆ ದಂಧೆ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ಕೆಲವು ಕೆಲಸದ ಒತ್ತಡದಲ್ಲಿ ಸಿಎಂ ಕಚೇರಿಯಿಂದ ಆದೇಶಗಳಾಗಿರುತ್ತವೆ. ಹಲವಾರು ಜನರು ಮನವಿ ಮಾಡಿರುತ್ತಾರೆ. ಮನವಿ ಮೇರೆಗೆ ಪತ್ರ ನೀಡಿರುತ್ತಾರೆ. ಅವು ಡಬಲ್ ಆಗಿರುವ ಸಾಧ್ಯತೆ ಇರುತ್ತೆ. ಕೆಲವೊಮ್ಮೆ ನನ್ನ ಕಚೇರಿಯಲ್ಲಿ ಆಗಿರುತ್ತೆ, ನಾನು ಈವರೆಗೂ ಒಂದು ವರ್ಗಾವಣೆ ಮಾಡಿಲ್ಲ. ಯಾರ್ಯಾರಿಗೆ ಪತ್ರ ಹೋಗಿದೆ ಪರಿಶೀಲನೆ ಮಾಡಲು ಹೇಳಿದ್ದೇನೆ. ಪತ್ರದ ಸಂಖ್ಯೆ ಪರಿಶೀಲಿಸಲು ಹೇಳಿದೆ ಎಂದರು.
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಮಧ್ಯಾಹ್ನ ದೆಹಲಿಗೆ ಪ್ರಯಾಣಿಸಲಿದ್ದಾರೆ. ಮೇಕೆದಾಟು ಯೋಜನೆಗೆ ಅನುಮತಿ ಕೇಳುವುದು, ಸಂಪುಟ ಸರ್ಜರಿ ಫೈನಲ್ ಮಾಡಿಕೊಂಡು ಬರುವುದು ಸಿಎಂ ದೆಹಲಿ ಭೇಟಿಯ ಉದ್ದೇಶವಾಗಿದೆ.
ನಾಳೆ ಮಧ್ಯಾಹ್ನ 1.55ರ ವಿಮಾನದಲ್ಲಿ ದೆಹಲಿ ಪ್ರಯಾಣ ಬೆಳೆಸುತ್ತಿದ್ದಾರೆ. ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸಹ ಸಿಎಂ ಬೊಮ್ಮಾಯಿ ಜೊತೆ ದೆಹಲಿಗೆ ತೆರಳುತ್ತಿದ್ದಾರೆ. ನಾಳೆ ಸಂಜೆ 7ಕ್ಕೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ರ ಭೇಟಿಗೆ ಸಮಯ ನಿಗದಿಯಾಗಿದೆ. ಶೆಖಾವತ್ ಭೇಟಿ ಮಾಡಲಿರುವ ಸಿಎಂ ಮತ್ತು ಕಾರಜೋಳ, ಮೇಕೆದಾಟು ಯೋಜನೆಗೆ ಅಗತ್ಯ ಅನುಮತಿಗಳಿಗೆ ಮನವಿ ಮಾಡಲಿದ್ದಾರೆ. ಉಭಯ ನಾಯಕರೂ ನಾಳೆ ರಾತ್ರಿ ಕರ್ನಾಟಕ ಭವನದಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಮರುದಿನ ಮತ್ತೆ ವಿವಿಧ ಗಣ್ಯರ ಭೇಟಿ ಮಾಡಲಿದ್ದಾರೆ. ಕೇಂದ್ರ ಸರ್ಕಾರದ ವಿವಿಧ ಸಚಿವರ ಜೊತೆ ಮಾತುಕತೆಗೂ ಸಮಯ ಕೇಳಲಾಗಿದೆ. ಇದೇ ವೇಳೆ ಸಂಪುಟ ಸರ್ಜರಿ ಬಗ್ಗೆ ಚರ್ಚಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಭೇಟಿಗೂ ಸಿಎಂ ಬೊಮ್ಮಾಯಿ ಸಮಯ ಕೇಳಿದ್ದಾರೆ. ಭೇಟಿಗೆ ಅವಕಾಶ ಸಿಕ್ಕಿದರೆ, ಸಂಪುಟ ಪುನಾರಚನೆ ಬಗ್ಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ. ಇಬ್ಬರೂ ಬುಧವಾರ ರಾತ್ರಿ ಅಥವಾ ಗುರುವಾರ ಬೆಳಗಿನ ಜಾವ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಇದನ್ನೂ ಓದಿ: 2023ಕ್ಕೆ ಕೆಟಿಆರ್, ಡಿಕೆಶಿ ಇಬ್ಬರು ಪ್ಯಾಕ್ ಅಪ್: ಬಿಜೆಪಿ ಟ್ವೀಟ್ ತಿವಿತ
ಸಿಎಂ ದೆಹಲಿ ಪ್ರವಾಸ ಹಿನ್ನೆಲೆ, ಸಹಜವಾಗಿ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಮತ್ತೆ ನಿರೀಕ್ಷೆ ಗರಿಗೆದರಿದೆ. ಖಾಲಿ ಇರುವ 4 ಸ್ಥಾನಗಳನ್ನು ಭರ್ತಿ ಮಾಡಿಕೊಳ್ಳುವುದರ ಜೊತೆಗೆ ಕೆಲ ಹಿರಿಯ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಆದ್ಯತೆ ನೀಡುವ ಬಗ್ಗೆ ವರಿಷ್ಠರ ಜತೆ ಸಿಎಂ ಚರ್ಚೆ ನಡೆಸುವ ಸಾಧ್ಯತೆ ಇದೆ. ಮುಂಬರುವ ಚುನಾವಣೆಯ ದೃಷ್ಟಿಯಿಂದ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಒಪ್ಪಿಗೆ ಕೊಡುವಂತೆ ಹೈಕಮಾಂಡ್ ಸಿಎಂ ಒಪ್ಪಿಗೆ ಕೇಳುವ ಸಾಧ್ಯತೆಯಿದೆ. ಇಲಾಖಾವಾರು ಯೋಜನೆಗಳ ಜಾರಿಯಲ್ಲಿ ಅಲಕ್ಷ್ಯ ವಹಿಸಿರುವ ಸಚಿವರನ್ನು ಕೈಬಿಡಬೇಕೆಂಬ ಆಗ್ರಹ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕೆಲ ಹಿರಿಯರನ್ನು ಹಾಗೂ ಸಕ್ರಿಯರಲ್ಲದವರನ್ನು ಸಂಪುಟದಿಂದ ತೆಗೆಯುವ ಬಗ್ಗೆ ಹೈಕಮಾಂಡ್ ಜೊತೆ ಬೊಮ್ಮಾಯಿ ಚರ್ಚಿಸಲಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭೇಟಿ – ಸಿಎಂ ಪತ್ನಿಯಿಂದ ಸಾಂಪ್ರದಾಯಿಕ ಸ್ವಾಗತ
ಮುಖ್ಯವಾಗಿ ಮೇಕೆದಾಟು ಯೋಜನೆಗೆ ಕೇಂದ್ರದ ಪರಿಸರ ಇಲಾಖೆಯ ಅನುಮತಿ ಬೇಕಾಗಿದೆ. ಈ ಸಂಬಂಧ ಗಜೇಂದ್ರ ಸಿಂಗ್ ಶೇಖಾವತ್ ಜೊತೆಗೆ ಬೊಮ್ಮಾಯಿ ಹಾಗೂ ಗೋವಿಂದ ಕಾರಜೋಳ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಇತ್ತೀಚಿಗೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಪ್ರಧಾನಿ ಭೇಟಿ ಮಾಡಿ ಮೇಕೆದಾಟು ಯೋಜನೆ ಜಾರಿಗೆ ಅನುಮತಿ ನೀಡದಂತೆ ಮನವಿ ಮಾಡಿದ್ದರು. ಅದಕ್ಕೂ ಮುನ್ನ ರಾಜ್ಯ ಸರ್ಕಾರ ವಿಧಾನ ಮಂಡಲದಲ್ಲಿ ತಮಿಳುನಾಡು ಸರ್ಕಾರದ ವಿಧಾನ ಸಭೆ ಅಂಗೀಕರಿಸಿದ ನಿರ್ಣಯ ಖಂಡಿಸಿ ನಿರ್ಣಯ ಅನುಮೋದಿಸಿತ್ತು. ಕೇಂದ್ರ ಸಚಿವರ ಭೇಟಿ ಬಳಿಕ ಸರ್ವ ಪಕ್ಷ ನಾಯಕರನ್ನು ಕರೆದೊಯ್ಯಲು ಕಾಂಗ್ರೆಸ್ ಜೆಡಿಎಸ್ ಆಗ್ರಹಿಸಿತ್ತು. ಹೀಗಾಗಿ ಸದ್ಯಕ್ಕೆ ಈಗ ಮೊದಲು ಬೊಮ್ಮಾಯಿ ಹಾಗೂ ಗೋವಿಂದ ಕಾರಜೋಳ ಕೇಂದ್ರ ಜಲಶಕ್ತಿ ಸಚಿವರ ಭೇಟಿ ಮಾಡಿ ಮನವಿ ಸಲ್ಲಿಕೆ ಮಾಡಲಿದ್ದಾರೆ. ನಂತರ ಅಗತ್ಯ ಬಿದ್ದರೆ ಸರ್ವ ಪಕ್ಷ ನಿಯೋಗಕೊಂಡೊಯ್ದು ಪ್ರಧಾನಿ ಮತ್ತು ಜಲಶಕ್ತಿ ಸಚಿವರ ಭೇಟಿಗೂ ಪ್ರಯತ್ನಿಸಲಾಗುತ್ತದೆ ಎಂಬ ಮಾತು ಕೇಳಿಬರುತ್ತಿದೆ.
ನವದೆಹಲಿ: ಮೇಕೆದಾಟು ಯೋಜನೆಗೆ ತಡೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ತಮಿಳುನಾಡು ಸರ್ವ ಪಕ್ಷಗಳ ನಿಯೋಗ ಒತ್ತಾಯಿಸಿದೆ. ಇಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ ಮಾಡಿದ ಸದಸ್ಯರು ಆಣೆಕಟ್ಟು ನಿರ್ಮಾಣ ಮಾಡುವ ಕರ್ನಾಟಕದ ನಡೆ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ತಮಿಳುನಾಡು ಜಲ ಸಂಪನ್ಮೂಲ ಖಾತೆ ಸಚಿವ ದೊರೆ ಮುರುಗನ್ ನೇತೃತ್ವದಲ್ಲಿ ದೆಹಲಿಗೆ ತೆರಳಿದ್ದ 13 ಪಕ್ಷಗಳ ಸದಸ್ಯರು ಶ್ರಮಶಕ್ತಿ ಭವನದಲ್ಲಿ ಕೇಂದ್ರ ಸಚಿವರನ್ನು ಭೇಟಿಯಾಗಿ ಒಂದು ಗಂಟೆಗೂ ಅಧಿಕ ಸಮಯದ ಚರ್ಚೆ ಬಳಿಕ ಮನವಿ ಸಲ್ಲಿಸಿದರು. ಕರ್ನಾಟಕದಲ್ಲಿ ಮೇಕೆದಾಟು ಆಣೆಕಟ್ಟು ನಿರ್ಮಾಣದಿಂದ ತಮಿಳುನಾಡಿಗೆ ತೊಂದರೆಯಾಗಲಿದೆ. ಸುಪ್ರೀಂಕೋರ್ಟ್ ಆದೇಶದಂತೆ ಕರ್ನಾಟಕ ನೀರು ನೀಡಲು ಸಾಧ್ಯವಾಗುವುದಿಲ್ಲ, ಇದರಿಂದ ತಮಿಳುನಾಡಿಗೆ ಕುಡಿಯುವ ನೀರಿನ ತೊಂದರೆಯಾಗಲಿದೆ ಮತ್ತು ಕೃಷಿ ಮೇಲೆ ಪರಿಣಾಮ ಬೀರಲಿದ್ದು ರೈತರಿಗೆ ಕಷ್ಟವಾಗಲಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಮೇಕೆದಾಟು ಯೋಜನೆ – ಮೂರು ಮಹತ್ವದ ನಿರ್ಣಯಗಳಿಗೆ ತಮಿಳುನಾಡು ಅಂಗೀಕಾರ
ಈ ನಡುವೆ ಕರ್ನಾಟಕ ಸಿಎಂ ಬಿ.ಎಸ್ ಯಡಿಯೂರಪ್ಪ ಆಣೆಕಟ್ಟು ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಯೋಜನೆಗೆ ಕೇಂದ್ರ ಸರ್ಕಾರದ ಅನುಮತಿಯನ್ನು ಕೋರಿದ್ದಾರೆ. ತಮಿಳುನಾಡಿನ ಹಿತಾಸಕ್ತಿ ದೃಷ್ಟಿಯಿಂದ ಮೇಕೆದಾಟು ಆಣೆಕಟ್ಟು ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂದು ಸರ್ವಪಕ್ಷ ಸದಸ್ಯರ ಕೋರಿದ್ದಾರೆ. ಮನವಿ ಪಡೆದುಕೊಂಡಿರುವ ಗಜೇಂದ್ರ ಸಿಂಗ್ ಶೇಖಾವತ್ ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ನವದೆಹಲಿ: ಎತ್ತಿನಹೊಳೆ ಯೋಜನೆಗೆ ರಾಷ್ಟ್ರೀಯ ಸ್ಥಾನಮಾನ ನೀಡುವಂತೆ ಆರೋಗ್ಯ ಸಚಿವ ಕೆ. ಸುಧಾಕರ್ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಇಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಚಿವ ಡಾ. ಕೆ ಸುಧಾಕರ್ ಅವರು ಭೇಟಿಯಾಗಿದ್ದಾರೆ. ರಾಜ್ಯದ ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಗಳ ಕುರಿತಂತೆ ಮನವಿ ಸಲ್ಲಿಸಿದರು. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಗೆ ರಾಷ್ಟ್ರೀಯ ಯೋಜನೆ ಸ್ಥಾನಮಾನ ನೀಡುಬೇಕೆಂದು ಮನವಿ ಮಾಡಿದ್ದಾರೆ.
ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೆರೆಗಳಲ್ಲಿ ಹೂಳೆತ್ತಲು ವಿಶೇಷ ಯೋಜನೆ ರೂಪಿಸಬೇಕು. ಕೃಷ್ಣಾ ನದಿ ನೀರನ್ನು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಿಂದ ಕರ್ನಾಟಕದ ಗಡಿ ಜಿಲ್ಲೆಗಳಿಗೆ ವಿಸ್ತರಿಸಲು ಸಹಕರಿಸುವಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಬಳಿ ಚರ್ಚಿಸಿದ್ದಾರೆ.
Had a fruitful meeting with Dr.V.K.Paul, Member (Health), @NITIAayog at New Delhi. Discussed various matters pertaining to public health policies, Covid-19 management and accelerating vaccination drive. Requested Dr.Paul to increase allocation of vaccines to Karnataka.@BSYBJPpic.twitter.com/NJ0nDKGHX1
ಜೈಪುರ: ರಾಜಸ್ಥಾನವು ಸುಮಾರು 11.5 ಲಕ್ಷ ಡೋಸ್ ಕೊರೊನಾ ಲಸಿಕೆಯನ್ನು ವ್ಯರ್ಥ ಮಾಡಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಗಂಭೀರ ಆರೋಪ ಮಾಡಿದ್ದಾರೆ.
ಲಸಿಕೆಯ ಶೀಷೆಯನ್ನು ಕಸದ ರಾಶಿಗೆ ಎಸೆಯಲಾಗುತ್ತಿದೆ ಎಂಬ ವರದಿಗೆ ಸುದ್ದಿಗೋಷ್ಠಿ ನಡೆಸಿದ ಅವರು, ರಾಜಸ್ಥಾನವು ಕೇರಳವನ್ನು ನೋಡಿ ಕಲಿಯಬೇಕು. ಕೇರಳದಲ್ಲಿ ಕೆಲವೇ ಪ್ರಮಾಣದ ಶೀಷೆಗಳು ವ್ಯರ್ಥವಾಗುತ್ತಿದೆ ಎಂದು ಹೇಳಿದ್ದಾರೆ.
18 ವರ್ಷ ಮೇಲ್ಟಟ್ಟವರಿಗೆ ಲಸಿಕೆ ನೀಡಲು ತಾನಾಗಿಯೇ ಅನುಮತಿ ಕೋರಿದ್ದ ರಾಜಸ್ಥಾನ ಸರ್ಕಾರ ಜಾಗತಿಕ ಟೆಂಡರ್ ಕರೆಯಲು ಮುಂದಾಗಿತ್ತು. ಈ ಪ್ರಯತ್ನ ಯಶಸ್ವಿಯಾಗದೇ ಇದ್ದಾಗ ಕೇಂದ್ರದ ವಿರುದ್ಧ ಆರೋಪ ಮಾಡತೊಡಗಿತು ಎಂದು ಗಜೇಂದ್ರ ಸಿಂಗ್ ಶೇಖಾವತ್ ದೂರಿದ್ದಾರೆ.