Tag: ಗಜ ಚಂಡಮಾರುತ

  • ತಬ್ಬಲಿ ಮೇಕೆ ಮರಿಗೆ ಹಾಲುಣಿಸಿದ ಶ್ವಾನ..!

    ತಬ್ಬಲಿ ಮೇಕೆ ಮರಿಗೆ ಹಾಲುಣಿಸಿದ ಶ್ವಾನ..!

    ಚೆನ್ನೈ: ಜಾತಿ-ಧರ್ಮ ಎಂದು ಹೊಡೆದಾಡುತ್ತಿರುವ ಮನುಷ್ಯ ಜನ್ಮ ಕೆಲವೊಮ್ಮೆ ಮೂಕ ಪ್ರಾಣಿಗಳ ಪ್ರೀತಿ-ಸಾಮರಸ್ಯವನ್ನು ನೋಡಿ ಕಲಿಯಬೇಕಾಗುತ್ತದೆ. ಮೇಕೆ ಮತ್ತು ಶ್ವಾನದ ಈ ಸಂಬಂಧ ನಿಜಕ್ಕೂ ಇದಕ್ಕೆ ಸ್ಪಷ್ಟ ನಿದರ್ಶನವಾಗಿದೆ.

    ಹೌದು. ಇತ್ತೀಚೆಗೆ ಚಂಡಮಾರುತದಿಂದ ಜಿಲ್ಲೆಯ ಹಲವೆಡೆ ಪ್ರಾಣ ಹಾನಿಗಳು ಸಂಭವಿಸಿವೆ. ಹಾನಿಗೊಳಗಾದ ಪ್ರದೇಶಗಳಿಗೆ ಪರಿಹಾರ ಸಾಮಾಗ್ರಿಗಳನ್ನು ವಿತರಿಸುವಾಗ ಜಾತಿ ತಾರತಮ್ಯವೂ ಎದುರಾಗಿದೆ. ಆದ್ರೆ ಮೂಕಪ್ರಾಣಿಗಳು ಯಾವುದೇ ರೀತಿಯ ತಾರತಮ್ಯವಿಲ್ಲದೇ ಮಾನವೀಯತೆ ಮೆರೆದಿರುವುದನ್ನು ನೋಡಿದಾಗ ನಿಜಕ್ಕೂ ಮನಕಲಕುತ್ತದೆ.

    ಚೆನ್ನೈನ ಪುದುಕೊಟ್ಟೈ ಗ್ರಾಮದಲ್ಲಿ ಅನಾಥ ಮೇಕೆ ಮರಿಗೆ ಶ್ವಾನವೊಂದು ತಾಯಿಯಾಗಿದೆ. ಕನ್ನ ಎಂಬ ಮೇಕೆ ಮರಿ ಕೆಲ ದಿನಗಳ ಹಿಂದೆ ನಡೆದ ಚಂಡಮಾರುತದಿಂದಾಗಿ ತನ್ನ ತಾಯಿಯನ್ನು ಕಳೆದುಕೊಂಡು ಅನಾಥವಾಗಿತ್ತು. ಸದ್ಯ ಶ್ವಾನವೇ ಮೇಕೆ ಮರಿಗೆ ಆಸರೆಯಾಗಿದೆ.

    ನವೆಂಬರ್ 16ರಂದು ಜಿಲ್ಲೆಗೆ ಗಜ ಚಂಡಮಾರುತ ಅಪ್ಪಳಿಸಿದ್ದು, ಸಾಕಷ್ಟು ಹಾನಿಯಾಗಿದೆ. ಈ ಮೊದಲು ಅಂದ್ರೆ ಅವಘಡಕ್ಕೂ ಮೂರು ದಿನ ಮುಂಚೆ ಕನ್ನ ಕುಮಾರಮಲೈ ಸಮೀಪದ ತಿರುವಳ್ಳುವರ್ ನಗರ್ ನಲ್ಲಿ ಜನಿಸಿತ್ತು. ಈ ಅವಘಡ ನಡೆದ ಕೆಲ ದಿನಗಳ ಬಳಿಕ ಕನ್ನ ತಾಯಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಮೃತಪಟ್ಟಿತ್ತು.

    ಮೇಕೆಯ ಮಾಲೀಕ ಆರ್ ದುರೈಸಮಿ ಮಾತನಾಡಿ, ಚಂಡಮಾರುತ ಬಂದ ಬಳಿಕ ಮೇಕೆ ಹುಲ್ಲು ಮೇಯುತ್ತಿರಲಿಲ್ಲ. ಹಸಿದ ಮೇಕೆ ಅದರ ಗೂಡಿನಲ್ಲಿರುವ ಬೌಲ್ ನಲ್ಲಿ ಇಟ್ಟ ಅನ್ನವನ್ನಷ್ಟೇ ತಿನ್ನುತ್ತಿತ್ತು. ಇದರಿಂದ ಗಾಬರಿಗೊಂಡ ನಾನು ವೈದ್ಯರನ್ನು ಕೆರೆಸಿ ಆಕೆಗೆ ಚಿಕಿತ್ಸೆಯನ್ನು ನೀಡಿದೆ. ಆದ್ರೆ ಆಕೆ ಬದುಕುಳಿಯಲೇ ಇಲ್ಲ. ತನ್ನ ಪುಟ್ಟ ಕಂದಮ್ಮನ ಒಟ್ಟಂಟಿಯಾಗಿ ಬಿಟ್ಟು ಜಗತ್ತಿನಿಂದಲೇ ದೂರವಾದಳು ಅಂತ ಕಣ್ಣೀರು ಹಾಕಿದ್ರು.

    ತಾಯಿ ಮೇಕೆ ತೀರಿಕೊಂಡ ಬಳಿಕ ಮಾಲೀಕನ ಮನೆಯವರು ಮೇಕೆ ಮರಿಗೆ ಬಾಟಲಿ ಮೂಲಕ ಹಾಲನ್ನು ನೀಡುತ್ತಿದ್ದರು. ಆದ್ರೆ ಮರಿ ಈ ರೀತಿ ಕೊಟ್ಟ ಹಾಲನ್ನು ಕುಡಿಯುತ್ತಿರಲಿಲ್ಲ. ಇದರಿಂದ ಚಿಂತಿತರಾಗಿದ್ದ ದುರೈಸಾಮಿ ಒಂದು ದಿನ ಅಚ್ಚರಿ ಕಂಡರು. ಅದೇನೆಂದರೆ ತಮ್ಮ ಮನೆಯ ಶ್ವಾನ ಪೊನ್ನಿ ತನ್ನ ಮರಿಗಳೊಂದಿಗೆ ಮೇಕೆ ಮರಿಗೂ ಹಾಲುಣಿಸುತ್ತಿದ್ದಳು. ಇದನ್ನು ಕಣ್ಣಾರೆ ಕಂಡ ಮನೆಯವರು ಸಂತಸ ವ್ಯಕ್ತಪಡಿಸಿದ್ರು.

    ಶ್ವಾನ ಮೇಕೆ ಮರಿ ಮೇಲೆ ದಾಳಿ ಮಾಡಬಹುದು ಎಂದು ನಾವು ನಂಬಿದ್ದೆವು. ಆದ್ರೆ ಆಕೆ ತನ್ನ ಮರಿಗಳೊಂದಿಗೆ ಮೇಕೆ ಮರಿಗೂ ಆಸರೆಯಾಗಿದ್ದಾಳೆ. ಪೊನ್ನಿ ಮೇಕೆ ಮರಿಗೂ ಹಾಲುಣಿಸುವ ಮೂಲಕ ತನ್ನ ಮರಿಗಳಂತೆಯೇ ಮುದ್ದಾಡುತ್ತಾಳೆ. ಹೀಗಾಗಿ ಪೊನ್ನಿಯ ಮರಿಗಳು ಕೂಡ ಮೇಕೆ ಮರಿ ಜೊತೆ ಕಳೆದ 1 ತಿಂಗಳಿನಿಂದ ಆಟವಾಡುತ್ತಾ ಖುಷಿ ಖುಷಿಯಾಗಿವೆ ಅಂತ ಮಾಲೀಕ ಹರ್ಷ ವ್ಯಕ್ತಪಡಿಸಿದ್ರು.

    ದುರೈಸಾಮಿ ಮಗ 5 ನೇ ತರಗತಿಯಲ್ಲಿ ಓದುತ್ತಿದ್ದು, ತನ್ನ ಸಹಪಾಠಿಗಳನ್ನು ಮನೆಗೆ ಕರೆದುಕೊಂಡು ಬಂದು ಪೊನ್ನಿಯು ಕನ್ನನನ್ನು ಅತ್ಯಂತ ಪ್ರೀತಿಯಿಂದ ಸಾಕುತ್ತಿದ್ದಾಳೆ ಅಂತ ಹೇಳಿ ಖುಷಿ ಹಂಚಿಕೊಳ್ಳುತ್ತಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಜ್ಯಾದ್ಯಂತ ಇಂದಿನಿಂದ ಎರಡು ದಿನ ಮಳೆಯಾಗುವ ಸಾಧ್ಯತೆ!

    ರಾಜ್ಯಾದ್ಯಂತ ಇಂದಿನಿಂದ ಎರಡು ದಿನ ಮಳೆಯಾಗುವ ಸಾಧ್ಯತೆ!

    ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ.

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡು, ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಪಬ್ಲಿಕ್ ಟಿವಿಗೆ ಹವಾಮಾನ ಇಲಾಖೆ ನಿರ್ದೇಶಕ ಎಸ್.ಆರ್ ಪಾಟೇಲ್ ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ ಕೂಡ ಬುಧವಾರ, ಗುರುವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಕಳೆದ ವಾರ ಗಜ ಚಂಡಮಾರುತ ಆರ್ಭಟ ಜೋರಾಗಿತ್ತು. ನವೆಂಬರ್ 19 ರಿಂದ 21 ರವರಗೂ ಚಂಡಮಾರುತದ ಎಫೆಕ್ಟ್ ಜೋರಾಗಿರಲಿದೆ ಎಂದು ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿತ್ತು. ಗಜ ಚಂಡಮಾರುತದ ಭೀಕರತೆಗೆ ತಮಿಳುನಾಡಿನಲ್ಲಿ ಇದುವರೆಗೂ 45 ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಕಣ್ಮರೆಯಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ರಾಜ್ಯಕ್ಕೆ ಕಾಲಿಡ್ತಿದೆ ಗಜ ಚಂಡಮಾರುತ – ಕರಾವಳಿ ಭಾಗದಲ್ಲಿ 2 ದಿನ ಹೈ ಅಲರ್ಟ್..!

    ರಾಜ್ಯಕ್ಕೆ ಕಾಲಿಡ್ತಿದೆ ಗಜ ಚಂಡಮಾರುತ – ಕರಾವಳಿ ಭಾಗದಲ್ಲಿ 2 ದಿನ ಹೈ ಅಲರ್ಟ್..!

    ಬೆಂಗಳೂರು: ಕಳೆದ ಕೆಲದಿನಗಳಿಂದ ತಮಿಳುನಾಡಿನಲ್ಲಿ ಅವಾಂತರ ಸೃಷ್ಟಿಸಿದ್ದ ಗಜ ಚಂಡಮಾರುತ ಇಂದು ರಾಜ್ಯಕ್ಕೆ ಕಾಲಿಡುವ ಸಾಧ್ಯತೆ ಇದ್ದು, ರಾಜ್ಯದ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

    ಕರಾವಳಿ ಭಾಗದಲ್ಲಿ ಚಂಡಮಾರುತದ ಪ್ರಭಾವ ಹೆಚ್ಚಾಗಿರುವ ಸಾಧ್ಯತೆ ಇದ್ದು, ಸಮುದ್ರ ತೀರದಲ್ಲಿ ರಕ್ಕಸಗಾತ್ರದ ಅಲೆಗಳು ಏಳುವ ಸಾಧ್ಯತೆಯಿಂದ ಮೀನುಗಾರರು ಸಮುದ್ರ ತೀರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಚಂಡಮಾರುತ ಮುಂಜಾಗೃತ ಕ್ರಮದ ಹಿನ್ನೆಲೆಯಲ್ಲಿ ರಕ್ಷಣಾ ಸಿದ್ಧತೆ ನಡೆಸಲು ಸೂಚಿಸಲಾಗಿದೆ.

    ಗಜ ಚಂಡಮಾರುತ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಶುರುವಾಗಿದ್ದು, ಈಗಾಗಲೇ ವಾಯುಭಾರ ಕುಸಿತವಾಗಿದೆ. ಈ ಚಂಡಮಾರುತದಿಂದ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 19 ರಿಂದ 21 ರವರಗೂ ಚಂಡಮಾರುತದ ಎಫೆಕ್ಟ್ ಜೋರಾಗಿರಲಿದೆ ಎಂದು ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ. ಚಂಡಮಾರುತದ ಪ್ರಭಾವದಿಂದ ಬೆಂಗಳೂರು ಸೇರಿದಂತೆ ದಕ್ಷಿಣ ಒಳಭಾಗ, ಕರಾವಳಿ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

    ಗಜ ಚಂಡಮಾರುತದ ಭೀಕರತೆಗೆ ತಮಿಳುನಾಡಿನಲ್ಲಿ ಇದುವರೆಗೂ 33 ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಕಣ್ಮರೆಯಾಗಿದ್ದಾರೆ. ಸದ್ಯ ಬಿರುಗಾಳಿ ಮಳೆ ನಿಂತಿದ್ದು, ಎಲ್ಲಿ ನೋಡಿದರು ಹಾನಿಗೊಳಗಾದ ಮನೆಗಳು, ಮರಗಳು, ಕರೆಂಟ್ ಕಂಬಗಳೇ ಕಾಣಸಿಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಗಂಟೆಗೆ 120 ಕಿಮೀ ವೇಗದಲ್ಲಿ ಬೀಸುತ್ತಿದೆ ಗಾಳಿ – `ಗಜ’ ರೌದ್ರನರ್ತನಕ್ಕೆ 20ಕ್ಕೂ ಹೆಚ್ಚು ಮಂದಿ ಬಲಿ

    ಗಂಟೆಗೆ 120 ಕಿಮೀ ವೇಗದಲ್ಲಿ ಬೀಸುತ್ತಿದೆ ಗಾಳಿ – `ಗಜ’ ರೌದ್ರನರ್ತನಕ್ಕೆ 20ಕ್ಕೂ ಹೆಚ್ಚು ಮಂದಿ ಬಲಿ

    ಚೆನ್ನೈ: ಗಂಟೆಗೆ 120 ಕಿಮೀ ವೇಗದಲ್ಲಿ ತೀರಕ್ಕೆ ಅಪ್ಪಳಿಸುತ್ತಿರುವ ಗಜ ಚಂಡಮಾರುತಕ್ಕೆ ತಮಿಳುನಾಡು ತತ್ತರಿಸಿದ್ದು, ಇದುವರೆಗೂ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

    ಗಜ ಚಂಡಮಾರುತದಿಂದ ತಮಿಳುನಾಡಿನ ಸಮುದ್ರ ತೀರ ಪ್ರದೇಶಗಳಲ್ಲದೇ ನಾಗಪಟ್ಟಣಂ, ಕರೈಕಲ್, ಕಡಲೂರು, ಪುದುಚ್ಚೇರಿ, ತಂಜಾವೂರು ಪ್ರದೇಶಗಳನ್ನು ತಲುಪಿದ್ದು, ಚಂಡಮಾರುತದ ದಾಳಿಗೆ ಜನರು ತತ್ತರಿಸಿ ಕಂಗಲಾಗಿದ್ದಾರೆ.

    2004ರ ಭೀಕರ ಸುನಾಮಿ ಸಂಭವಿಸಿದ ದಶಕದ ಬಳಿಕ ನಾಗಪಟ್ಟಣಂನಲ್ಲಿ ಮತ್ತೆ ಅಲ್ಲೋಲ ಕಲ್ಲೋಲ ವಾತಾವರಣ ನಿರ್ಮಾಣವಾಗಿದ್ದು, ತಮಿಳುನಾಡಿನ ಹಲವೆಡೆ ನೂರಾರು ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಅಲ್ಲದೇ ಸಾವಿರಾರು ಮನೆಗಳಿಗೆ ಹಾನಿ ಆಗಿದೆ.

    ಇದುವರೆಗೂ ತಮಿಳುನಾಡಿನ ಒಟ್ಟು 6 ಜಿಲ್ಲೆಗಳಲ್ಲಿ ಸುಮಾರು 80 ಸಾವಿರ ಮಂದಿಯನ್ನು ರಕ್ಷಿಸಲಾಗಿದ್ದು ಅವರಿಗಾಗಿ 300 ಆಶ್ರಯತಾಣಗಳನ್ನು ತೆರೆಯಲಾಗಿದೆ. ನಾಗಪಟ್ಟಣಂನಲ್ಲಿ ಇಂದೂ ಕೂಡಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜೊತೆಗೆ ಅಪಾಯದಲ್ಲಿ ಸಿಲುಕಿರುವವರ ಸಹಾಯಕ್ಕೆ ರಾಜ್ಯ ಮಟ್ಟದಲ್ಲಿ 1070 ಹಾಗೂ ಜಿಲ್ಲೆಗಳಲ್ಲಿ 1077 ಸಹಾಯವಾಣಿಯನ್ನು ನೀಡಲಾಗಿದೆ.

    ಗಜ ಚಂಡಮಾರುತದಿಂದ ತತ್ತರಿಸಿರುವ ತಮಿಳುನಾಡಿಗೆ ಕೇಂದ್ರ ಗೃಹ ಸಚಿವ ರಾಜ್‍ನಾಥ್ ಸಿಂಗ್ ರಕ್ಷಣಾ ಕ್ರಮಕೈಗೊಳ್ಳಲು ಮುಂದಾಗಿದ್ದು, ಗೃಹ ಇಲಾಖೆಯ ನಿರ್ದೇಶಕರಾಗಿರುವ ರಾಜೀವ್ ಅವರಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ತಮಿಳುನಾಡು ಸಿಎಂ ಪಳನಿಸ್ವಾಮಿ ಅವರಿಂದ ಮಾಹಿತಿ ಪಡೆದಿದ್ದು, ಸನ್ನಿವೇಶದ ಮೇಲ್ವಿಚಾರಣೆ ಹಾಗೂ ಸಹಕಾರ ನೀಡಲಾಗುತ್ತಿದೆ ಎಂದು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಇತ್ತ ಸಿಎಂ ಕೂಡ ರಾಜ್ಯದ ಜನರ ರಕ್ಷಣೆಗೆ ಮುಂದಾಗಿದ್ದು, ಅಪಾಯದಲ್ಲಿ ಸಿಲುಕಿರುವ ರಕ್ಷಣೆ ಹಾಗೂ ಸಂತ್ರಸ್ತರ ನೆರವಿಗೆ ಧಾವಿಸಿ ಎಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಗಜ ಚಂಡಮಾರುತ ಎಫೆಕ್ಟ್ – ಬೆಂಗ್ಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ

    ಗಜ ಚಂಡಮಾರುತ ಎಫೆಕ್ಟ್ – ಬೆಂಗ್ಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ

    ಬೆಂಗಳೂರು: ಗಜ ಚಂಡಮಾರುತದ ಪರಿಣಾಮ ಗುರುವಾರದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆಯ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

    ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಲಿದೆ. ಭಾರೀ ಪ್ರಮಾಣದಲ್ಲಿ ಮಳೆಯಾಗುವುದಿಲ್ಲ. ಚಂಡಮಾರುತ ಯಾವ ಪ್ರದೇಶದ ಕಡೆ ಹೋಗುತ್ತದೆ ಎನ್ನುವ ಆಧಾರದ ಮೇಲೆ ಈ ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಶ್ರೀನಿವಾಸ ರೆಡ್ಡಿ ತಿಳಿಸಿದರು.

    ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ  ನವೆಂಬರ್  15, 16 ರಂದು ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಅವರು ಮಾಹಿತಿ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews