Tag: ಗಡಿ ಜಿಲ್ಲೆ

  • ಸರ್ಕಾರಿ ಇಲಾಖೆಯ ಪತ್ರ ವ್ಯವಹಾರಗಳು ಕನ್ನಡದಲ್ಲೇ ಆಗಬೇಕು: ಟಿ.ಎಸ್.ನಾಗಾಭರಣ

    ಸರ್ಕಾರಿ ಇಲಾಖೆಯ ಪತ್ರ ವ್ಯವಹಾರಗಳು ಕನ್ನಡದಲ್ಲೇ ಆಗಬೇಕು: ಟಿ.ಎಸ್.ನಾಗಾಭರಣ

    ಬೆಳಗಾವಿ: ಜಿಲ್ಲೆಯ ಗಡಿ ಭಾಗದ ಗ್ರಾಮ ಪಂಚಾಯಿತಿಗಳಲ್ಲಿ ಸರ್ಕಾರಿ ಪತ್ರ ವ್ಯವಹಾರಗಳು ಕನ್ನಡ ಭಾಷೆಯಲ್ಲಿಯೇ ಆಗಬೇಕು. ಈ ಕುರಿತು ಜಿಲ್ಲಾ ಪಂಚಾಯಿತಿ ಸಿಇಒ ಜೊತೆ ಚರ್ಚೆ ನಡೆಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಟಿ.ಎಸ್.ನಾಗಾಭರಣ ಹೇಳಿದರು.

    ನಗರದ ಅತಿಥಿ ಗೃಹದಲ್ಲಿ ಜಿಲ್ಲಾ ಜಾಗೃತಿ ಸಮಿತಿ ಸದಸ್ಯರು ಹಾಗೂ ಕನ್ನಡಪರ ಸಂಘಟನೆಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮೂಲ ಉದ್ದೇಶ ರಾಜ್ಯದಲ್ಲಿ ಕನ್ನಡದಲ್ಲಿ ಆಡಳಿತ ವ್ಯವಹಾರ ನಡೆಯುವಂತೆ ನೋಡಿಕೊಳ್ಳುವುದಾಗಿದೆ. ಗಡಿ ಭಾಗದಲ್ಲಿ ಆಗುತ್ತಿರುವ ಭಾಷಾ ಸಮಸ್ಯೆಯನ್ನು ಪರಿಹರಿಸಲು, ಸರ್ಕಾರಿ ಇಲಾಖೆಯಲ್ಲಿ ಎಷ್ಟರ ಮಟ್ಟಿಗೆ ಕನ್ನಡ ಭಾಷೆಯಲ್ಲಿ ಪತ್ರ ವ್ಯವಹಾರಗಳು ಆಗುತ್ತಿವೆ ಎಂದು ಪರಿಶೀಲನೆ ಮಾಡುವುದಾಗಿ ಅವರು ಹೇಳಿದರು.

    ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದ 8ನೇ ತರಗತಿಯವರೆಗೆ ಪ್ರಾದೇಶಿಕ ಭಾಷೆ ಕನ್ನಡವನ್ನು ಪ್ರಥಮ ಭಾಷೆಯಾಗಿ ವಿದ್ಯಾಭ್ಯಾಸ ಮಾಡಿಸಬೇಕಿದೆ. ಬಳಿಕ ವಿದ್ಯಾರ್ಥಿಗಳ ಇಷ್ಟದ ಭಾಷೆಯಲ್ಲಿ ಶಿಕ್ಷಣ ಪಡೆಯುವಂತೆ ಆಯ್ಕೆ ನೀಡಬಹುದು. ಡಿಗ್ರಿ ವಿಭಾಗದಲ್ಲಿ ವಿದ್ಯಾರ್ಥಿಗಳು ತಮಗೆ ಬೇಕಾದ ಭಾಷೆಯಲ್ಲಿ ಶಿಕ್ಷಣ ಪಡೆಯಬಹುದು. ಆದರೆ ಯಾವುದೇ ಶಿಕ್ಷಣ ಸಂಸ್ಥೆಯವರು ಕನ್ನಡವನ್ನು ಬದಿಗೊತ್ತಿ ಬೇರೆ ಭಾಷೆಯನ್ನು ತೆಗೆದುಕೊಳ್ಳುವಂತೆ ಒತ್ತಾಯ ಮಾಡುವಂತಿಲ್ಲ ಎಂದರು. ಇದನ್ನೂ ಓದಿ: ಸೋಮವಾರ ದೇಶದ 15ನೇ ರಾಷ್ಟ್ರಪತಿ ಚುನಾವಣೆ – ಜೂನ್ 21ಕ್ಕೆ ಮತ ಎಣಿಕೆ

    ಗಡಿ ಭಾಗದಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಬೇರೆ ಭಾಷೆಯನ್ನು ತೆಗೆದುಕೊಳ್ಳಲು ಒತ್ತಾಯ ಮಾಡುತ್ತಿರುವ ವಿಚಾರಕ್ಕೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಶಿಕ್ಷಣದಲ್ಲಿ ಕನ್ನಡ ಭಾಷೆ ವಿಚಾರವನ್ನು ಶಿಕ್ಷಣ ಸಚಿವರ ಗಮನಕ್ಕೆ ತಂದು ಶಿಸ್ತಿನ ಕ್ರಮ ತೆಗೆದುಕೊಳ್ಳವಂತೆ ಮಾಡುವುದಾಗಿ ಹೇಳಿದರು.

    ಕನ್ನಡ ಬಾವುಟ ಹಾರಿಸುವ, ಕನ್ನಡ ನಾಮಫಲಕಗಳ ಬಳಕೆ ವಿಚಾರವಾಗಿ ಮಹಾನಗರ ಪಾಲಿಕೆಯ ಅಧಿಕಾರಿಗಳ ಜೊತೆ ಹಾಗೂ ಶಿಕ್ಷಣ ವಿಷಯಕ್ಕೆ ಸಂಬಂಧಿಸಿದಂತೆ ಸಾರಿಗೆ ಸೌಲಭ್ಯ ವಿಚಾರವಾಗಿ ಸಾರಿಗೆ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದರು. ಇದನ್ನೂ ಓದಿ: ಜಿಎಸ್‌ಟಿ ಶಾಕ್ – ಯಾವ ಯಾವ ವಸ್ತುಗಳ ಬೆಲೆ ಎಷ್ಟೆಷ್ಟು ಏರಿಕೆ?

    ಜಿಲ್ಲಾ ಜಾಗೃತಿ ಸಮಿತಿ ಸದಸ್ಯರು ಹಾಗೂ ಕನ್ನಡಪರ ಸಂಘಟನೆಗಳು ನೀಡಿದ ಕನ್ನಡ ಭಾಷೆ ಅನುಷ್ಠಾನ ಕುರಿತ ಸಮಸ್ಯೆಗಳನ್ನು ಸೋಮವಾರ(ಜು.18) ನಡೆಯುವ ಜಿಲ್ಲಾಮಟ್ಟದ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವ ಕಾರ್ಯ ಮಾಡಲಾಗುವುದು ಎಂದು ನಾಗಾಭರಣ ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಹಾಸನದಲ್ಲಿ ಕೊರೊನಾ ಪಾಸಿಟಿವ್, ಚಿಕ್ಕಮಗಳೂರಲ್ಲಿ ರಸ್ತೆ ಬಂದ್!

    ಹಾಸನದಲ್ಲಿ ಕೊರೊನಾ ಪಾಸಿಟಿವ್, ಚಿಕ್ಕಮಗಳೂರಲ್ಲಿ ರಸ್ತೆ ಬಂದ್!

    ಚಿಕ್ಕಮಗಳೂರು: ಜಗತ್ತಿಗೆ ಕಂಟಕವಾಗಿರೋ ಕೊರೊನಾ ದಿನದಿಂದ ದಿನಕ್ಕೆ ತನ್ನ ಕಬಂದಬಾಹುಗಳನ್ನು ಚಾಚಿಕೊಳ್ಳುತ್ತಿದೆ. ಗ್ರೀನ್‍ಝೋನ್ ಆಗಿದ್ದ ಶಿವಮೊಗ್ಗಕ್ಕೆ ಕಾಲಿಟ್ಟಿದ್ದ ಕೊರೊನಾ ಇಂದು ಹಾಸನಕ್ಕೂ ವ್ಯಾಪಿಸಿದೆ. ಈ ಹಿನ್ನೆಲೆಯಲ್ಲಿ ಹಾಸನ-ಶಿವಮೊಗ್ಗ ಗಡಿ ಜಿಲ್ಲೆಯಾದ ಕಾಫಿನಾಡು ಚಿಕ್ಕಮಗಳೂರಿಗರಲ್ಲಿ ಆತಂಕ ಹೆಚ್ಚಾಗಿದ್ದು, ಮತ್ತೆ ಮಲೆನಾಡಿನ ರಸ್ತೆಗಳನ್ನು ಬಂದ್ ಮಾಡಲು ಮುಂದಾಗಿದ್ದಾರೆ.

    ಹಾಸನದಲ್ಲಿ ಇಂದು ಐದು ಪಾಸಿಟಿವ್ ಕೇಸ್ ದೃಢವಾಗುತ್ತಿದಂತೆ ಮಲೆನಾಡು ಭಾಗದಲ್ಲಿ ಹಾಸನಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳನ್ನು ಮತ್ತೆ ಬಂದ್ ಮಾಡುತ್ತಿದ್ದಾರೆ. ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿಯ ಗ್ರಾಮೀಣ ಭಾಗದಿಂದ ಸಖಲೇಶಪುರ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ಮರಗುಂದ-ದೇವಾಲಕೆರೆಯ ಜಪಾವತಿ ಸೇತುವೆ ಮೇಲೆ ಬೃಹತ್ ಬಂಡೆಕಲ್ಲುಗಳನ್ನ ರಸ್ತೆಗೆ ಅಡ್ಡಲಾಗಿ ಹಾಕಿ ಸಂಚಾರವನ್ನ ಸಂಪೂರ್ಣ ಸ್ಥಗಿತಗೊಳಿಸಿದ್ದಾರೆ.

    ಈ ಮಾರ್ಗವಾಗಿ ಯಾರೂ ಹೋಗುವಂತಿಲ್ಲ, ಬರುವಂತಿಲ್ಲ. ಕಳೆದ ಒಂದೂವರೆ ತಿಂಗಳಿಂದ ಜಿಲ್ಲೆಯಲ್ಲಿ ಒಂದೇ ಒಂದು ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿಲ್ಲ. ಗ್ರೀನ್‍ಝೋನ್ ಜಿಲ್ಲೆಗಳ ಪಟ್ಟಿಯಲ್ಲೇ ಕಾಫಿನಾಡು ಉಳಿದುಕೊಳ್ಳಲಿ ಎಂದು ಹಳ್ಳಿಗರು ಈ ನಿರ್ಧಾಕ್ಕೆ ಮುಂದಾಗಿದ್ದಾರೆ. ಈಗಾಗಲೇ ಸರ್ಕಾರ ಕೂಡ ಲಾಕ್‍ಡೌನನ್ನು ಸಡಿಲಿಕೆ ಮಾಡಿರುವುದರಿಂದ ಹೊರಜಿಲ್ಲೆಗಳಿಗೆ ಹೋಗಿ ಬರುತ್ತಿರುವವರ ಸಂಖ್ಯೆ ಕೂಡ ಗಣನೀಯವಾಗಿ ಹೆಚ್ಚಾಗಿದೆ. ಪರಿಣಾಮ ಮಲೆನಾಡಿಗರೇ ಸ್ವಯಂ ಪ್ರೇರಿತರಾಗಿ ರಸ್ತೆಗಳನ್ನ ಬಂದ್ ಮಾಡಿ ಕಾಫಿನಾಡನ್ನು ಕೊರೊನಾ ಮುಕ್ತ ಜಿಲ್ಲೆಯನ್ನಾಗಿಸಲು ಮುಂದಾಗಿದ್ದಾರೆ. ಈ ಮಧ್ಯೆ ದಕ್ಷಿಣ ಕನ್ನಡದಿಂದ ಕೊಟ್ಟಿಗೆಹಾರ ಮೂಲಕ ಎಗ್ಗಿಲ್ಲದೆ ಬರುತ್ತಿರುವ ನೂರಾರು ಜನರಿಂದ ಈ ಮಹಾಮಾರಿ ಯಾವಾಗ ಕಾಫಿನಾಡಿಗೆ ಕಾಲಿಡುತ್ತೋ ಎಂಬ ಆತಂಕ ಹೆಚ್ಚಾಗಿದೆ.