Tag: ಗಣರಾಜ್ಯೋತ್ಸವ

  • 74th Republic Day: ದೆಹಲಿಯ ಕರ್ತವ್ಯ ಪಥ್‌ನಲ್ಲಿ‌ ಹಲವು ಪ್ರಥಮಗಳಿಗೆ ಸಾಕ್ಷಿಯಾದ ಪರೇಡ್‌

    74th Republic Day: ದೆಹಲಿಯ ಕರ್ತವ್ಯ ಪಥ್‌ನಲ್ಲಿ‌ ಹಲವು ಪ್ರಥಮಗಳಿಗೆ ಸಾಕ್ಷಿಯಾದ ಪರೇಡ್‌

    – ಗಮನ ಸೆಳೆದ ಸಿಆರ್‌ಪಿಎಫ್‌ ಮಹಿಳಾ ತುಕಡಿ, ಅಗ್ನಿವೀರರು
    – ಈಜಿಪ್ಟ್‌ ಸೇನಾ ತುಕಡಿ ಭಾಗಿ
    – ಆಕಾಶದಲ್ಲಿ ಚಮತ್ಕಾರ ಮಾಡಿ ಯುದ್ಧ ವಿಮಾನ, ಹೆಲಿಕಾಪ್ಟರ್‌ಗಳು

    ನವದೆಹಲಿ: ದೇಶಾದ್ಯಂತ 74ನೇ ಗಣರಾಜ್ಯೋತ್ಸವ (74th Republic Day) ಆಚರಣೆ ಮಾಡಲಾಗುತ್ತಿದೆ. ದೆಹಲಿಯ (New Delhi) ಬ್ರಿಟಿಷರ ಕಾಲದ ರಾಜಪಥ್‌ ಹೆಸರು ಕರ್ತವ್ಯ ಪಥ್ (Kartavya Path) ಎಂದು ಬದಲಾದ ನಂತರ ಈ ಬಾರಿ ಗಣರಾಜ್ಯೋತ್ಸವ ಹೊಸತನ ಹಾಗೂ ಹಲವು ಪ್ರಥಮಗಳಿಗೆ ಸಾಕ್ಷಿಯಾಯಿತು. ದೆಹಲಿಯ ಕರ್ತವ್ಯ ಪಥದಲ್ಲಿ ಹಲವು ವಿಶೇಷತೆಗಳೊಂದಿಗೆ ಅದ್ದೂರಿ ಪರೇಡ್ ನಡೆಯಿತು. ಕಣ್ಮಮನ ಸೆಳೆಯುವ ಟ್ಯಾಬ್ಲೊಗಳು, ಅತ್ಯಾಕರ್ಷಕ ಪಥ ಸಂಚಲನ ಎಲ್ಲರ ಗಮನ ಸೆಳೆಯಿತು.

     

    ರಾಷ್ಟ್ರಪತಿ ದ್ರೌಪದಿ ಮುರ್ಮು, ಈಜಿಪ್ಟ್‌ನಿಂದ ಬಂದಿದ್ದ ಅತಿಥಿ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಪ್ರಧಾನಿ, ನರೇಂದ್ರ ಮೋದಿ ಸಮ್ಮುಖದಲ್ಲಿ ರಾಷ್ಟ್ರ ಧ್ವಜ ಹಾರಿಸುವ ಮೂಲಕ ಪರೇಡ್‌ಗೆ ಚಾಲನೆ ನೀಡಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಪರೇಡ್‌ ವೀಕ್ಷಿಸಿದರು.

    ಹಲವು ಪ್ರಥಮಗಳ ವಿಶೇಷತೆ
    ಪರೇಡ್ ಹಲವು ಹೊಸತನಕ ಸಾಕ್ಷಿಯಾಗಿತ್ತು‌. ಅಗ್ನಿವೀರರು ಪಥ್ ಸಂಕಲನದಲ್ಲಿ ಭಾಗಿಯಾಗದರೆ, ಇದೇ ಮೊದಲ ಬಾರಿಗೆ ಈಜಿಪ್ಟ್ ಸೇನಾ ತುಕಡಿ ಕೂಡಾ ಭಾಗಿಯಾಗಿತ್ತು. ಗುಲಾಮಿ ಮಾನಸಿಕತೆಯಿಂದ ಹೊರ ಬರುವ ಭಾಗವಾಗಿ 25 ಪೌಂಡರ್ ಗನ್‌ಗಳ ಬದಲು ಭಾರತದಲ್ಲಿ ನಿರ್ಮಿತವಾದ 105 ಎಂಎಂ ಇಂಡಿಯನ್ ಫಿಲ್ಡ್ ಗನ್‌ಗಳಿಂದ 21 ಗನ್ ಸೆಲ್ಯೂಟ್ ನೀಡಲಾಯಿತು. ಒಟ್ನಲ್ಲಿ ಈ ಬಾರಿಯ ಪರೇಡ್ ಭಾರತದ ನಾರಿ ಶಕ್ತಿ ಮತ್ತು ಆತ್ಮ ನಿರ್ಭರ್ ಭಾರತ್ ಶಕ್ತಿ ಸಂದೇಶ ಸಾರಿದರೆ, ವಿವಿಧತೆಯಲ್ಲಿ ಏಕತೆಗೊಂಡಿರುವ ಭಾರತದ ಸಂಸ್ಕೃತಿಯನ್ನು ಅನಾವರಣಗೊಳಿಸಿತು.

    ಪರೇಡ್ ಗೆ ಚಾಲನೆ ನೀಡುತ್ತಿದ್ದಂತೆ ಪರೇಡ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇತೃತ್ವದಲ್ಲಿ ಭವ್ಯ ಪರೇಡ್ ಆರಂಭವಾಯಿತು. 75 ಶಸ್ತ್ರಸಜ್ಜಿತ ರೆಜಿಮೆಂಟ್‌ನ ಮುಖ್ಯ ಯುದ್ಧ ಟ್ಯಾಂಕ್ ಅರ್ಜುನ್‌ನ ತುಕಡಿಯು ಪರೇಡ್ ಹಾದಿಯಲ್ಲಿ ಸಾಗಿ ಬಂತು. ಇದಾದ ಬಳಿಕ 61 ಅಶ್ವಸೈನ್ಯದ ಸಮವಸ್ತ್ರದಲ್ಲಿ ಮೊದಲ ತಂಡವನ್ನು ಕ್ಯಾಪ್ಟನ್ ರೈಜಾದಾ ಶೌರ್ಯ ಬಾಲಿ ಮುನ್ನಡೆಸಿದರು.

    ಬಳಿಕ 17 ಯಾಂತ್ರೀಕೃತ ಪದಾತಿ ದಳದ NAG ಕ್ಷಿಪಣಿ ವ್ಯವಸ್ಥೆಯನ್ನು ಮುನ್ನಡೆಸಿದ ಲೆಫ್ಟಿನೆಂಟ್ ಸಿದ್ಧಾರ್ಥ ತ್ಯಾಗಿ ಅವರಿಂದ ರಾಷ್ಟ್ರಪತಿ ಮುರ್ಮು ಗೌರವ ವಂದನೆ ಸ್ವೀಕರಿಸಿದರು. ಇದಾದ ಬಳಿಕ ಹಂತ ಹಂತವಾಗಿ ಬೇರೆ ಬೇರೆ ಸೇನಾ ತುಕಡಿಗಳು ಪಥ ಸಂಚಲನ ಮಾಡಿದವು. ಲಡಾಖ್ ಸ್ಕೌಟ್ಸ್ ರೆಜಿಮೆಂಟ್‌ನ ಕ್ಯಾಪ್ಟನ್ ನವೀನ್ ಧತ್ತೇರ್ವಾಲ್ ನೇತೃತ್ವದಲ್ಲಿ ಕ್ವಿಕ್ ರಿಯಾಕ್ಷನ್ ಫೈಟಿಂಗ್ ವೆಹಿಕಲ್‌ನ ತುಕಡಿ, ಲೆಫ್ಟಿನೆಂಟ್ ಪ್ರಜ್ವಲ್ ಕಲಾ ನೇತೃತ್ವದ 861 ಮಿಸೈಲ್ ರೆಜಿಮೆಂಟ್‌ನ ಬ್ರಹ್ಮೋಸ್‌ನ ತುಕಡಿ, 27 ಏರ್ ಡಿಫೆನ್ಸ್ ಮಿಸೈಲ್ ರೆಜಿಮೆಂಟ್‌ನ ಆಕಾಶ್ ವೆಪನ್ ಸಿಸ್ಟಮ್, ಕ್ಯಾಪ್ಟನ್ ಸುನಿಲ್ ದಶರಥೆ ನೇತೃತ್ವದ ‘ಅಮೃತಸರ ಏರ್‌ಫೀಲ್ಡ್’ ಮತ್ತು 512 ಲೈಟ್ ಎಡಿ ಮಿಸೈಲ್ ರೆಜಿಮೆಂಟ್, ಭಾರತೀಯ ನೌಕಾಪಡೆಯ 80 ಸಂಗೀತಗಾರರನ್ನು ಒಳಗೊಂಡಿರುವ ಭಾರತೀಯ ನೌಕಾಪಡೆಯ ಬ್ರಾಸ್ ಬ್ಯಾಂಡ್ ಕರ್ತವ್ಯ ಪಥ್ ನಲ್ಲಿ ಪರೇಡ್‌ ನಡೆಸಿದವು.

    ಕಣ್ಮಮನ ಸೆಳೆದ ಟ್ಯಾಬ್ಲೊಗಳು
    ಈ ಬಾರಿಯ ಪರೇಡ್‌ನಲ್ಲಿ 17 ರಾಜ್ಯದ ಹಾಗೂ ಕೇಂದ್ರ ಸರ್ಕಾರದ ವಿವಿಧ ಇಲಾಖೆ ಮತ್ತು ಸಚಿವಾಲಯದ ಆರು ಟ್ಯಾಬ್ಲೊಗಳು ಸೇರಿ ಒಟ್ಟು 23 ಟ್ಯಾಬ್ಲೊಗಳು ಭಾಗಿಯಾಗಿದ್ದವು. ಜಾರ್ಖಂಡ್‌ನ ಟ್ಯಾಬ್ಲೊ ದಿಯೋಘರ್‌ನಲ್ಲಿರುವ ಪ್ರಸಿದ್ಧ ಬೈದ್ಯನಾಥ ದೇವಾಲಯ, ಗುಜರಾತ್ ʼಸ್ವಚ್ಛ-ಹಸಿರು ಶಕ್ತಿ ಸಮರ್ಥ’ ಎಂಬ ಸಂದೇಶ ಮೇಲೆ ನವೀಕರಿಸಬಹುದಾದ ಇಂಧನದ ಬಗ್ಗೆ, ಕೇರಳವು ‘ನಾರಿ ಶಕ್ತಿ’ ಮತ್ತು ಮಹಿಳಾ ಸಬಲೀಕರಣದ ಜಾನಪದ ಸಂಪ್ರದಾಯಗಳ ಟ್ಯಾಬ್ಲೊವನ್ನು ಪ್ರದರ್ಶಿಸಿದವು.

    ಪಶ್ಚಿಮ ಬಂಗಾಳದ ದುರ್ಗಾ ಪೂಜಾ, ಮಹಾರಾಷ್ಟ್ರದ ಶಕ್ತಿ ಪೀಠಗಳ ಮತ್ತು ತಮಿಳುನಾಡಿನ ಟ್ಯಾಬ್ಲೋ ಜನ ಮೆಚ್ಚುಗೆ ಪಾತ್ರವಾದರೆ, ಅಯೋಧ್ಯೆಯಲ್ಲಿ ಆಚರಿಸಲಾದ ಮೂರು ದಿನಗಳ ದೀಪೋತ್ಸವವನ್ನು ಉತ್ತರ ಪ್ರದೇಶ ಸರ್ಕಾರ ಈ ಬಾರಿ ಪ್ರದರ್ಶಿಸಿತು‌.

    ಕರ್ತವ್ಯ ಪಥ್‌ನಲ್ಲಿ ಕರ್ನಾಟಕದ ನಾರಿಶಕ್ತಿ
    ಟ್ಯಾಬ್ಲೊಗಳ ಸರಣಿಯಲ್ಲಿ ಕರ್ನಾಟಕವೂ ಈ ಬಾರಿ ತನ್ನ ಟ್ಯಾಬ್ಲೊವನ್ನು ಪ್ರದರ್ಶಿಸಿತು. ಈ ಬಾರಿ ಕರ್ನಾಟಕ ನಾರಿ ಶಕ್ತಿ ಪರಿಕಲ್ಪನೆಯಲ್ಲಿ ಟ್ಯಾಬ್ಲೊ ಪ್ರದರ್ಶಿಸಿದ್ದು, ಟ್ಯಾಬ್ಲೊದಲ್ಲಿ 2,000 ಅಧಿಕ ಹೆರಿಗೆ ಮಾಡಿಸಿದ್ದ ಸೂಲಗಿತ್ತಿ ನರಸಮ್ಮ, 30,000ಕ್ಕೂ ಅಧಿಕ ಸಸಿಗಳನ್ನು ನೆಟ್ಟ ಹಾಲಕ್ಕಿ ತುಳಸಿ ಗೌಡ ಮತ್ತು 8,000 ಮರಗಳನ್ನು ಪೋಷಿಸಿದ ಸಾಲುಮರದ ತಿಮ್ಮಕ್ಕ ಅವರ ಸಾಧನೆಯನ್ನು ಒಳಗೊಂಡಿತ್ತು. ರಾಜ್ಯದ ಟ್ಯಾಬ್ಲೊ ಜೊತೆಗೆ ಉತ್ತರ ಕನ್ನಡದ ಹಾಲಕ್ಕಿ ಸುಗ್ಗಿ ಕುಣಿತ ಕಲಾವಿದರು ಹೆಜ್ಜೆ ಹಾಕಿದರು.

    ಟ್ಯಾಬ್ಲೊಗಳ ಪ್ರದರ್ಶನದ ಬಳಿಕ ಆಕಾಶದಲ್ಲಿ ಯುದ್ದ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳು ಭಾರತದ ಶಕ್ತಿಯನ್ನು ವಿಶ್ವಕ್ಕೆ ತೋರಿದವು. ರಫೇಲ್ ಕಸರತ್ತು ಎಲ್ಲರ ಆಕರ್ಷಣೆಯ ಕೇಂದ್ರವಾಗಿತ್ತು. ಮೇಡ್ ಇನ್ ಇಂಡಿಯಾದ ಲಘು ಯುದ್ದ ವಿಮಾನ ಮತ್ತು ಹೆಲಿಕಾಪ್ಟರ್‌ಗಳು ಪ್ರದರ್ಶನ ನೀಡಿದವು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕರ್ನಾಟಕದ ಸ್ತಬ್ಧಚಿತ್ರ ಅತ್ಯದ್ಭುತ

    ಕರ್ನಾಟಕದ ಸ್ತಬ್ಧಚಿತ್ರ ಅತ್ಯದ್ಭುತ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 74th Republic Day: ಗಣರಾಜ್ಯೋತ್ಸವಕ್ಕೆ ಬಾಂಬ್‌ ಬೆದರಿಕೆ – ಅಹಮದಾಬಾದ್‌ನಲ್ಲಿ ನಾಲ್ವರು ಅರೆಸ್ಟ್‌

    74th Republic Day: ಗಣರಾಜ್ಯೋತ್ಸವಕ್ಕೆ ಬಾಂಬ್‌ ಬೆದರಿಕೆ – ಅಹಮದಾಬಾದ್‌ನಲ್ಲಿ ನಾಲ್ವರು ಅರೆಸ್ಟ್‌

    ಅಹಮದಾಬಾದ್: ಗಣರಾಜ್ಯೋತ್ಸವದಂದು (74th Republic Day) ಬಾಂಬ್‌ ಸ್ಫೋಟಿಸುವುದಾಗಿ ಬೆದರಿಕೆಯ ಪತ್ರ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಅಹಮದಾಬಾದ್ ಪೊಲೀಸರು (Ahmedabad Police) ಬಂಧಿಸಿದ್ದಾರೆ.

    ನಾಲ್ವರು ಆರೋಪಿಗಳ ಪೈಕಿ ಇಬ್ಬರು ಅಹಮದಾಬಾದ್‌ ಮತ್ತು ಮತ್ತಿಬ್ಬರು ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಎಂಪಿ ಟಿಕೆಟ್ ಏಕೆ ನಿರೀಕ್ಷಿಸಬಾರದು- ಕಮಲ್ ಹಾಸನ್ ಪ್ರಶ್ನೆ

    ಗೀತಾ ಮಂದಿರ ಬಸ್ ನಿಲ್ದಾಣ ಮತ್ತು ಅಹಮದಾಬಾದ್ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಬೆದರಿಕೆ ಪತ್ರ ಬಂದ ತಕ್ಷಣ ಅಹಮದಾಬಾದ್ ಕ್ರೈಂ ಬ್ರಾಂಚ್ ಕಾರ್ಯಾಚರಣೆಗೆ ಇಳಿದಿತ್ತು.

    ಬೆದರಿಕೆ ಪತ್ರವನ್ನು ಅಹಮದಾಬಾದ್ ಪೊಲೀಸ್ ಕಮಿಷನರ್ ಕಚೇರಿಗೆ ತಲುಪಿಸಲಾಗಿತ್ತು. ಪತ್ರದಲ್ಲಿ ಕೆಲವು ಸಂಖ್ಯೆಗಳನ್ನು ಸಹ ಉಲ್ಲೇಖಿಸಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: 74ನೇ ಗಣರಾಜ್ಯೋತ್ಸವಕ್ಕೆ ಕರ್ತವ್ಯಪಥ ಸಜ್ಜು- ಪರೇಡ್‍ನಲ್ಲಿ ಮಿಂಚಲಿದೆ ಕರ್ನಾಟಕ ಟ್ಯಾಬ್ಲೋ

    ಅಹಮದಾಬಾದ್ ರೈಲು ನಿಲ್ದಾಣ ಮತ್ತು ಗೀತಾ ಮಂದಿರ ಬಸ್ ನಿಲ್ದಾಣ ಹೊರತುಪಡಿಸಿ ಇತರ ಎರಡು ಸ್ಥಳಗಳನ್ನು ಬೆದರಿಕೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ಅಪರಾಧ ವಿಭಾಗದ ಡಿಸಿಪಿ ಚೈತನ್ಯ ಮಾಂಡ್ಲಿಕ್ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪ್ರಪ್ರಥಮ ಬಾರಿಗೆ ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ

    ಪ್ರಪ್ರಥಮ ಬಾರಿಗೆ ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ

    ಬೆಂಗಳೂರು: ಪ್ರಪ್ರಥಮ ಬಾರಿಗೆ ಚಾಮರಾಜಪೇಟೆ (Chamarajapete) ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ನಡೆಯಿತು. ಸಮಯಕ್ಕೆ ಸರಿಯಾಗಿ ಬೆಳಿಗ್ಗೆ 8ಕ್ಕೆ ಧ್ವಜಾರೋಹಣ ನೆರವೇರಿಸಲಾಯಿತು. ಕಂದಾಯ ಇಲಾಖೆಯಿಂದಲೇ ಸ್ವಾತಂತ್ರ್ಯ ದಿನಾಚರಣೆಯ ರೀತಿಯಲ್ಲಿ ಕಾರ್ಯಕ್ರಮ ನಡೆಯಿತು.

    ಧ್ವಜರೋಹಣವನ್ನು ಬೆಂಗಳೂರು ಉತ್ತರ ಅಸಿಸ್ಟೆಂಟ್ ಕಮೀಷನರ್ ಡಾ.ಶಿವಣ್ಣ ನೆರವೇರಿಸಿದರು. ಬೆಂಗಳೂರು ಕೇಂದ್ರ ಸಂಸದ ಪಿಸಿ ಮೋಹನ್ (PC Mohan), ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ (Zameer Ahmed) ಉಪಸ್ಥಿತರಿದ್ದರು. 100ಕ್ಕೂ ಅಧಿಕ ಶಾಲ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬ್ಯಾಂಡ್ ಸೆಟ್, ಕಂಸಾಳೆ ಸೇರಿದಂತೆ ಹಲವು ವಿಶೇಷತೆಗಳು ನೋಡುಗರ ಕಣ್ಮನ ಸೆಳೆಯಿತು. ಸಂತ ತೆರೆಸ ಬಾಲಕಿಯರ ಶಾಲೆ, ಚಾಮರಾಜಪೇಟೆ ಬಾಲಕಿಯರ ಶಾಲೆ, ಸರ್ಕಾರಿ ಕನ್ನಡ, ಆಂಗ್ಲ ಪ್ರಾಥಮಿಕ ಶಾಲೆ ಸೇರಿದಂತೆ 5 ಶಾಲೆಗಳಿಂದ ಮಕ್ಕಳು ಭಾಗಿಯಾಗಿದ್ದರು.ಇದನ್ನೂ ಓದಿ: 74ನೇ ಗಣರಾಜ್ಯೋತ್ಸವಕ್ಕೆ ಕರ್ತವ್ಯಪಥ ಸಜ್ಜು- ಪರೇಡ್‍ನಲ್ಲಿ ಮಿಂಚಲಿದೆ ಕರ್ನಾಟಕ ಟ್ಯಾಬ್ಲೋ

    ಚಾಮರಾಜಪೇಟೆ ನಾಗರೀಕರಿಂದ ಜೈಕಾರ: ಸನಾತನ ಹಿಂದೂಧರ್ಮಕ್ಕೆ ಜೈ ಮತ್ತು ಭಾರತಮಾತೆಗೆ ಜೈಕಾರವನ್ನು ಕಾರ್ಯಕ್ರಮದ ವೇಳೆ ಚಾಮರಾಜಪೇಟೆ ನಾಗರೀಕರು ಕೂಗಿದರು.

    ಸಿಸಿಟಿವಿ ಮಾನಿಟರಿಂಗ್: ಕಾರ್ಯಕ್ರಮ ಮುಗಿದ ನಂತರ ಮೈದಾನದಿಂದ ನಿರ್ಗಮಿಸಲು ಸೂಚನೆ ನೀಡಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರೂ ಸಜ್ಜಾಗಿದ್ದರು. ಸಿಸಿಟಿವಿ ಅಳವಡಿಸಿ ಮಾನಿಟರಿಂಗ್ ಮಾಡುವುದಕ್ಕೆ ಕೊಠಡಿ ಸಜ್ಜು ಮಾಡಲಾಗಿತ್ತು. ಒಟ್ಟಿನಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

    ಸರ್ಕಾರಕ್ಕೆ ಮತ್ತೆ ಈದ್ಗಾ ವಿವಾದ ಟೆನ್ಷನ್- ಜ. 21ರೊಳಗೆ ನಿಲುವು ಪ್ರಕಟಿಸಲು ಡೆಡ್‍ಲೈನ್

    ಚಾಮರಾಜಪೇಟೆ ನಾಗರೀಕರ ಒಕ್ಕೂಟಕ್ಕೆ ಸಿಕ್ಕ ಜಯ: ಇದು ಚಾಮರಾಜಪೇಟೆ ನಾಗರೀಕರ ಒಕ್ಕೂಟ ಹಾಗೂ ಹಿಂದೂ ಸಂಘಟನೆಗಳ ಹೋರಾಟಕ್ಕೆ ದಕ್ಕಿದ ಪ್ರತಿಫಲವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಗುತ್ತಿದ್ದು, ಧ್ವಜಾರೋಹಣ ಮಾತ್ರವಲ್ಲದೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಅವಕಾಶಕ್ಕೆ ಒಕ್ಕೂಟ ಒತ್ತಾಯ ಮಾಡಿದ್ದರು. ನಮ್ಮ ದೇಶದ ಹಬ್ಬವನ್ನು ಆಚರಿಸಲು ಯಾಕೆ ಹಿಂದೇಟು ಹಾಕಬೇಕು ಎಂದು ಪ್ರಶ್ನೆ ಕೇಳಿದ್ದರು. ಸೂಕ್ಷ್ಮ ಪ್ರದೇಶವಾಗಿರುವುದರಿಂದ ಇತರ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂದು ಈ ಮೊದಲು ಎನ್ನಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 74ನೇ ಗಣರಾಜ್ಯೋತ್ಸವಕ್ಕೆ ಕರ್ತವ್ಯಪಥ ಸಜ್ಜು- ಪರೇಡ್‍ನಲ್ಲಿ ಮಿಂಚಲಿದೆ ಕರ್ನಾಟಕ ಟ್ಯಾಬ್ಲೋ

    74ನೇ ಗಣರಾಜ್ಯೋತ್ಸವಕ್ಕೆ ಕರ್ತವ್ಯಪಥ ಸಜ್ಜು- ಪರೇಡ್‍ನಲ್ಲಿ ಮಿಂಚಲಿದೆ ಕರ್ನಾಟಕ ಟ್ಯಾಬ್ಲೋ

    ನವದೆಹಲಿ: ಈ ಬಾರಿಯ ಗಣರಾಜೋತ್ಸವ (74th Republic Day) ಪರೇಡ್‍ಗೆ ದೆಹಲಿಯ ಕರ್ತವ್ಯ ಪಥ್ ಸಿದ್ಧವಾಗಿದೆ. ಈಜಿಪ್ಟ್ ಅಧ್ಯಕ್ಷರು ವಿಶೇಷ ಅತಿಥಿಯಾಗಿ ಭಾಗಿಯಾಗುತ್ತಿದ್ದಾರೆ. ವಿಶೇಷವಾಗಿ ನಾರಿ ಶಕ್ತಿ ಪರಿಕಲ್ಪನೆಯಡಿಯಲ್ಲಿ ಕರ್ನಾಟಕ ತನ್ನ ಸ್ತಬ್ಧ ಚಿತ್ರ ಪ್ರದರ್ಶನ ಮಾಡಲಿದೆ.

    ಇಂದು ಗಣರಾಜೋತ್ಸವಕ್ಕೆ ಇಡೀ ದೇಶ ಸಜ್ಜಾಗಿದೆ. ದೆಹಲಿಯ ಕರ್ತವ್ಯಪಥ (Delhi Kartavya Path) ದಲ್ಲಿ ಆತ್ಮನಿರ್ಭರ್ ಭಾರತ ಪರೇಡ್‍ಗೆ ಸಿದ್ಧತೆಗಳು ಪೂರ್ಣಗೊಂಡಿವೆ. ಇಂದು ಬೆಳಗ್ಗೆ 9:30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, 10:30ಕ್ಕೆ ಪರೇಡ್‍ಗೆ ಚಾಲನೆ ಸಿಗಲಿದೆ. ಮೇಕ್ ಇನ್ ಇಂಡಿಯಾ (Make in India) ಪರಿಕಲ್ಪನೆಯಡಿ ದೇಶಿಯ ಸೇನಾ ಆಯುಧಗಳನ್ನು ಪರೇಡ್‍ನಲ್ಲಿ ಪ್ರದರ್ಶನ ಮಾಡಲಾಗುತ್ತದೆ. ಈ ಬಾರಿಯ ಗಣರಾಜೋತ್ಸವದ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಭಾಗಿಯಾಗುತ್ತಿದ್ದಾರೆ.

    ಕರ್ನಾಟಕ ಸೇರಿ 17 ರಾಜ್ಯಗಳ ಸ್ತಬ್ಧಚಿತ್ರಗಳು ಪರೇಡ್‍ನಲ್ಲಿ ಪ್ರದರ್ಶನಗೊಳ್ಳಲಿದೆ. ನಾರಿ ಶಕ್ತಿ ಪರಿಕಲ್ಪನೆಯಡಿಯಲ್ಲಿ ಕರ್ನಾಟಕ ತನ್ನ ಸ್ತಬ್ಧ ಚಿತ್ರಪ್ರದರ್ಶಿಸಲಿದೆ. ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ, ಹಾಲಕ್ಕಿ ತುಳಸಿಗೌಡ ಮತ್ತು ಸೂಲಗಿತ್ತಿ ನರಸಮ್ಮ ಸಾಧನೆಯನ್ನು ಟ್ಯಾಬ್ಲೋ ಮೂಲಕ ಇಡೀ ದೇಶಕ್ಕೆ ಪರಿಚಯಿಸುವ ಕೆಲಸ ಮಾಡಲಾಗುತ್ತಿದೆ. ಟ್ಯಾಬ್ಲೊ (Tableau) ಜೊತೆಗೆ ಉತ್ತರ ಕನ್ನಡ ಜಿಲ್ಲೆಯ ಹಾಲಕ್ಕಿ ಸುಗ್ಗಿ, ಕೊಪ್ಪಳದ ಕುಕನೂರು ಮೂಲದ ನಂದಿ ಧ್ವಜ ಸೇರಿದಂತೆ ಭರತನಾಟ್ಯ ಕಲಾವಿದರು ಪರೇಡ್‍ನಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಮುಲಾಯಂಸಿಂಗ್ ಯಾದವ್, ಕೀರವಾಣಿ, ವಾಣಿ ಜಯರಾಂ ಸೇರಿ 106 ಮಂದಿಗೆ ಪದ್ಮ ಪ್ರಶಸ್ತಿ – ಯಾರಿಗೆ ಯಾವ ಪ್ರಶಸ್ತಿ?

    ಗಣರಾಜ್ಯೋತ್ಸವ ವಿಶೇಷತೆ: ಮೇಕ್ ಇನ್ ಇಂಡಿಯಾ, ನಾರಿಶಕ್ತಿಗೆ ಆದ್ಯತೆ ನೀಡಲಾಗಿದೆ. ಮೊದಲ ಬಾರಿ ಗನ್ ಸೆಲ್ಯೂಟ್‍ಗಾಗಿ ಸ್ವದೇಶಿ 105 ಎಂಎಂ ಗನ್ ಬಳಸಲಾಗಿದೆ. 9 ರಫೇಲ್ ಯುದ್ಧ ವಿಮಾನಗಳಿಂದ ವೈಮಾನಿಕ ಪ್ರದರ್ಶನ (ಒಟ್ಟು 44 ವಿಮಾನ) ಹಾಗೂ ಮೊದಲ ಬಾರಿ ನೌಕಾಪಡೆಯ ಐಎಲ್-38 ಸಮರ ವಿಮಾನ ಹಾರಾಟ (ಸಮುದ್ರ ವಿಚಕ್ಷಣ ವಿಮಾನ) ಮಾಡಿಸಲಾಗುತ್ತಿದೆ.

    3500 ದೇಶಿ ಡ್ರೋನ್‍ಗಳ ಶೋ, 3ಡಿ ಅನಾಮೋರ್ಫಿಕ್ ಪ್ರೊಜೆಕ್ಷನ್, ಮೊದಲ ಬಾರಿ ಮಿಲಿಟರಿ ಟ್ಯಾಟೂ ಎಂಬ ಸಶಸ್ತ್ರ ಪಡೆಯಿಂದ ನೃತ್ಯ ಆಯೋಜಿಸಲಾಗಿದೆ. ಮಹಿಳಾ ಅಧಿಕಾರಿ ನೇತೃತ್ವದಲ್ಲಿ ಡೇರ್ ಡೆವಿಲ್ಸ್ ಮೋಟಾರ್ ಸೈಕಲ್ ಕಸರತ್ತು ಇದೆ. ನೌಕಾ ಪಡೆಯ ಮಹಿಳಾ ತುಕಡಿಗೆ ಮಂಗಳೂರಿನ ದಿಶಾ ಅಮೃತ್ ನೇತೃತ್ವ ವಹಿಸಲಿದ್ದು, ಪರೇಡ್‍ನಲ್ಲಿ ಈಜಿಪ್ಟ್ ದೇಶದ ಸೇನಾ ತುಕಡಿ ಭಾಗವಹಿಸಲಿದೆ.

    ರಾಜಪಥ್‍ನಿಂದ ಕರ್ತವ್ಯ ಪಥ್ ಆಗಿ ಬದಲಾದ ಬಳಿಕ ಮೊದಲ ಗಣರಾಜೋತ್ಸವ ಇದಾಗಿದ್ದು, ವಿಶೇಷತೆಗಳಿಂದ ಕೂಡಿದೆ. ಭದ್ರತೆ ದೃಷ್ಟಿಯಿಂದ 6-7 ಸಾವಿರ ದೆಹಲಿ ಪೊಲೀಸ್ ಸೇರಿದಂತೆ ಕೇಂದ್ರದ ಮೀಸಲು ಪಡೆ ನಿಯೋಜಿಸಲಾಗಿದೆ. ಕರ್ತವ್ಯ ಪಥ್ ಸುತ್ತ 150ಕ್ಕೂ ಅಧಿಕ ಸಿಸಿಟಿವಿಗಳನ್ನು ಅಳವಡಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಜ್ಯದ 20 ಪೊಲೀಸರಿಗೆ ರಾಷ್ಟ್ರಪತಿ ಪದಕ – ಯಾರಿಗೆ ಯಾವ ಪದಕ ಸಿಕ್ಕಿದೆ?

    ರಾಜ್ಯದ 20 ಪೊಲೀಸರಿಗೆ ರಾಷ್ಟ್ರಪತಿ ಪದಕ – ಯಾರಿಗೆ ಯಾವ ಪದಕ ಸಿಕ್ಕಿದೆ?

    ಬೆಂಗಳೂರು: ಗಣರಾಜ್ಯೋತ್ಸದ (Republic Day) ಹಿನ್ನೆಲೆ ಪ್ರತಿ ವರ್ಷದಂತೆ ನೀಡುವ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ (President’s Police Medal)ಹಾಗೂ ಪೊಲೀಸ್ ಶ್ಲಾಘನೀಯ ಸೇವಾ ಪದಕ ವಿಜೇತರ ಪಟ್ಟಿ ಪ್ರಕಟವಾಗಿದೆ.

    ಈ ಬಾರಿ ರಾಜ್ಯದ 20 ಜನ ಪೊಲೀಸ್ (Police) ಅಧಿಕಾರಿ ಮತ್ತು ಸಿಬ್ಬಂದಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಿಐಡಿ ಎಡಿಜಿಪಿ ಕೆ.ವಿ ಶರತ್ ಚಂದ್ರ (KV Sharath Chandra) ರಾಷ್ಟ್ರಪತಿಯವರ ಸೇವಾ ಪದಕ ಪ್ರಶಸ್ತಿಗೆ ಆಯ್ಕೆಯಾಗಿದ್ದರೆ, ರಾಜ್ಯ ಗುಪ್ತವಾರ್ತೆಯ ಹೆಚ್ಚುವರಿ ನಿರ್ದೇಶಕ ಲಾಭುರಾಮ್ (Labhu Ram) ಅವರಿಗೆ ಪೊಲೀಸ್ ಶ್ಲಾಘನೀಯ ಸೇವಾ ಪದಕ ಸಿಕ್ಕಿದೆ. ಇದನ್ನೂ ಓದಿ: ಮತದಾನ ಅಧಿಕಾರ ಮಾತ್ರವಲ್ಲ, ಕರ್ತವ್ಯವೂ ಹೌದು: ಗೆಹ್ಲೋಟ್

    ಪೊಲೀಸ್ ಶ್ಲಾಘನೀಯ ಸೇವಾ ಪದಕ
    ಪೊಲೀಸ್ ಪ್ರಧಾನ ಕಚೇರಿಯ ಡಿವೈಎಸ್ಪಿ ಎಸ್.ನಾಗರಾಜು, ಕರ್ನಾಟಕ ಕಾನೂನು ಪ್ರಾಧಿಕಾರದ ಡಿವೈಎಸ್ಪಿಗಳಾದ ಪಿ ವೀರೆಂದ್ರ ಕುಮಾರ್ ಹಾಗೂ ಪಿ.ಪ್ರಮೋದ್ ಕುಮಾರ್, ಕರ್ನಾಟಕ ಲೋಕಾಯುಕ್ತದ ಡಿವೈಎಸ್ಪಿ ಸಿದ್ದಲಿಂಗಪ್ಪ ಗೌಡ ಆರ್ ಪಾಟೀಲ್, ಎಸ್.ಟಿ‌.ಎಫ್ ಎನ್‌ಕ್ರೋಚ್ಮೆಂಟ್ ಡಿವೈಎಸ್ಪಿ ದೀಪಕ್, ನಗರ ವಿಶೇಷ ವಿಭಾಗದ ಡಿವೈಎಸ್ಪಿ ವಿಜಯ್.ಎಚ್, ಮಾದನಾಯಕನಹಳ್ಳಿ ಪೊಲೀಸ್ ಠಾಣಾ ಇನ್ಸ್‌ಪೆಕ್ಟರ್‌ ಬಿ.ಎಸ್.ಮಂಜುನಾಥ್, ಅಶೋಕನಗರ ಸಂಚಾರಿ‌ ಠಾಣಾ ಇನ್ಸ್‌ಪೆಕ್ಟರ್‌ ರಾವ್ ಗಣೇಶ್ ಜನಾರ್ಧನ್, ದಾವಣಗೆರೆ ಸಂಚಾರ ವಿಭಾಗದ ಸರ್ಕಲ್ ಇನ್ಸ್‌ಪೆಕ್ಟರ್‌ ಆರ್.ಪಿ.ಅನಿಲ್, ಬೆಂಗಳೂರು ನಗರ ಸಂಚಾರ ಮತ್ತು ಯೋಜನಾ ವಿಭಾಗದ ಇನ್ಸ್‌ಪೆಕ್ಟರ್‌ ಮನೋಜ್ ಹೋವಳೆ, ಬೆಂಗಳೂರು ಕೆಎಸ್ಆರ್‌ಪಿ ಇನ್ಸ್‌ಪೆಕ್ಟರ್‌ ಬಿ.ಟಿ.ವರದರಾಜು,

    ಬೆಂಗಳೂರು ಕೆಎಸ್ಆರ್‌ಪಿ ಎಆರ್‌ಎಸ್‌ಗಳಾದ ಟಿ.ಎ.ನಾರಾಯಣ್ ರಾವ್, ಎಸ್.ಎಸ್.ವೆಂಕಟರಮಣ ಗೌಡ, ಎಸ್.ಎಂ.ಪಾಟೀಲ್, ಸಿಐಡಿಯ ಹೆಡ್ ಕಾನ್ಸ್‌ಟೇಬಲ್ ಪ್ರಸನ್ನ ಕುಮಾರ್, ತುಮಕೂರು ಸಂಚಾರ ಪಶ್ಚಿಮ ಪೊಲೀಸ್ ಠಾಣಾ ಹೆಡ್ ಕಾನ್ಸ್‌ಟೇಬಲ್ ಪ್ರಭಾಕರ್ ಎಚ್, ಬೆಂಗಳೂರು ಎಸ್.ಸಿ.ಆರ್.ಬಿಯ ಮಹಿಳಾ ಹೆಡ್ ಕಾನ್ಸ್‌ಟೇಬಲ್ ಡಿ.ಸುಧಾ, ಸಿಟಿ ಕಂಟ್ರೋಲ್ ರೂಮ್ ಹೆಡ್ ಕಾನ್ಸ್‌ಟೇಬಲ್ ಟಿ.ಆರ್.ರವಿ ಕುಮಾರ್‌ ಪೊಲೀಸ್ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 74 ವರ್ಷಗಳ ಸಂಪ್ರದಾಯಕ್ಕೆ ಬ್ರೇಕ್‌ – ಸ್ವದೇಶಿ ಗನ್‌ಗಳಿಂದ ಸೆಲ್ಯೂಟ್‌

    74 ವರ್ಷಗಳ ಸಂಪ್ರದಾಯಕ್ಕೆ ಬ್ರೇಕ್‌ – ಸ್ವದೇಶಿ ಗನ್‌ಗಳಿಂದ ಸೆಲ್ಯೂಟ್‌

    ನವದೆಹಲಿ: ಈ ಬಾರಿಯ ಗಣರಾಜ್ಯೋತ್ಸವ (Republic Day) ಸಂಪೂರ್ಣವಾಗಿ ಮೇಡ್ ಇನ್ ಇಂಡಿಯಾ (Made In India) ಆಗಿರಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರಿಗೆ ಇದೇ ಮೊದಲ ಬಾರಿಗೆ ದೇಶಿಯ ಕುಶಾಲುತೋಪಿನ ಗೌರವ ಸಿಗಲಿದೆ.

    ಇಷ್ಟು ವರ್ಷಗಳ ಕಾಲ ಗನ್ ಸೆಲ್ಯೂಟ್‍ಗೆ ಬ್ರಿಟೀಷರ ಕಾಲದ 25 ಪೌಂಡರ್ ಗನ್‍ಗಳನ್ನು ಭಾರತೀಯ ಸೇನೆ ಬಳಸುತ್ತಿತ್ತು. ಆದರೆ ಈ ಸಂಪ್ರದಾಯಕ್ಕೆ ಈಗ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ. ಭಾರತದಲ್ಲೇ ದೇಶಿಯವಾಗಿ ತಯಾರಿಸಲಾದ ಫೀಲ್ಡ್ ಗನ್‍ಗಳಾದ 105 ಎಂಎಂ ಗನ್‍ಗಳನ್ನು ಬಳಸಿ ರಾಷ್ಟ್ರಪತಿಗೆ ಗನ್ ಸೆಲ್ಯೂಟ್ ಸಲ್ಲಿಸಲಾಗುತ್ತದೆ. ಇದನ್ನೂ ಓದಿ: ಕುರ್ಚಿ ತರಲು ವಿಳಂಬ – ಕಾರ್ಯಕರ್ತರಿಗೆ ಕಲ್ಲು ಎಸೆದ ತಮಿಳುನಾಡಿನ ಸಚಿವ

    ಈ ಬಗ್ಗೆ ಸೇನೆಯ ದೆಹಲಿ ವಿಭಾಗದ ಸಿಬ್ಬಂದಿ ಮುಖ್ಯಸ್ಥ ಮೇಜರ್ ಜನರಲ್ ಭವಾನಿ ಕುಮಾರ್ ಮಾಹಿತಿ ನೀಡಿದ್ದಾರೆ. ನಮ್ಮೆಲ್ಲ ಆಯುಧಗಳು ಸಂಪೂರ್ಣ ಸ್ವದೇಶಿ ನಿರ್ಮಿತ ಆಗುವ ದಿನಗಳು ದೂರವಿಲ್ಲ ಎಂದಿದ್ದಾರೆ.

    ಅಷ್ಟೇ ಅಲ್ಲದೇ ಪರೇಡ್‍ನಲ್ಲಿ ಕೇವಲ ಮೇಡ್ ಇನ್ ಇಂಡಿಯಾ ಶಸ್ತ್ರಾಸ್ತ್ರಗಳನ್ನು ಮಾತ್ರ ಪ್ರದರ್ಶಿಸಲಾಗುತ್ತದೆ. ನೌಕಾ ಪಡೆಯ ಪದಾತಿ ದಳವನ್ನು ಮಹಿಳಾ ಸೇನಾಧಿಕಾರಿ, ಕರ್ನಾಟಕ ಮೂಲದ ಲೆಫ್ಟಿನೆಂಟ್ ಕಮಾಂಡರ್ ದಿಶಾ ಅಮೃತ್ ಮುನ್ನಡೆಸಲಿದ್ದಾರೆ. ಅಗ್ನಿವೀರರು ಪರೇಡ್‍ನಲ್ಲಿ ಮೊದಲ ಬಾರಿಗೆ ಭಾಗವಹಿಸಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಗಣರಾಜ್ಯೋತ್ಸವಕ್ಕೆ ಒಂದೇ ವಾರದಲ್ಲಿ ಕರ್ನಾಟಕದ ಟ್ಯಾಬ್ಲೋ ರೆಡಿ

    ಗಣರಾಜ್ಯೋತ್ಸವಕ್ಕೆ ಒಂದೇ ವಾರದಲ್ಲಿ ಕರ್ನಾಟಕದ ಟ್ಯಾಬ್ಲೋ ರೆಡಿ

    ನವದೆಹಲಿ: ಕರ್ತವ್ಯಪಥದಲ್ಲಿ ನಡೆಯಲಿರುವ ಗಣರಾಜೋತ್ಸವದ (Republic Day) ಪರೇಡ್‍ನಲ್ಲಿ ಭಾಗಿಯಾಗಲು ರಾಜ್ಯದ (Karnataka) ಸ್ತಬ್ಧಚಿತ್ರ (Tableau) ಒಂದೇ ವಾರದಲ್ಲಿ ಸಿದ್ಧವಾಗುತ್ತಿದೆ.

    ನಾರಿ ಶಕ್ತಿ ಪರಿಕಲ್ಪನೆಯ ಟ್ಯಾಬ್ಲೊವನ್ನು (Naari Shakti) ಕೇವಲ ಎಂಟು ದಿನಗಳಲ್ಲಿ ನಿರ್ಮಿಸಲಾಗಿದ್ದು, ಇದೀಗ ಅಂತಿಮ ಹಂತದ ಕೆಲಸಗಳು ನಡೆಯುತ್ತಿದೆ. ಪರೇಡ್‍ನಲ್ಲಿ ಕರ್ನಾಟಕದ ಕಲಾ ತಂಡ ಕೂಡ ಭಾಗಿಯಾಗುತ್ತಿದೆ. ಕೊಪ್ಪಳ ಚಿತ್ರದುರ್ಗ, ಬೆಂಗಳೂರಿನ 18 ಮಂದಿ ನಂದಿ ಧ್ವಜ ಕುಣಿತದ ಕಲಾವಿದರು ಈ ಬಾರಿಯ ಪರೇಡ್‍ನಲ್ಲಿ ಭಾಗಿಯಾಗುತ್ತಿದ್ದಾರೆ. ಈ ಮಧ್ಯೆ, ಟ್ಯಾಬ್ಲೋ ವಿಚಾರದಲ್ಲಿ ಅನಪೇಕ್ಷಿತ ರಾಜಕೀಯ ಕೂಡ ನಡೆದಿದೆ.

    ಕೊನೆ ಹಂತದಲ್ಲಿ ರಾಜ್ಯದ ಟ್ಯಾಬ್ಲೋಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದನ್ನು ನಾಟಕ. ಚುನಾವಣೆ ಗಿಮಿಕ್ ಎಂದು ಡಿಕೆಶಿವಕುಮಾರ್ ಇತ್ತೀಚಿಗೆ ಟೀಕಿಸಿದರು. ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಕರ್ನಾಟಕದ ವಿಚಾರ ಬಂದಾಗ ಎಲ್ಲರೂ ಒಂದಾಗಬೇಕು. ಸಣ್ಣತನ ಬಿಟ್ಟು ಒಂದಾಗಬೇಕು. ಈಗ್ಲಾದ್ರೂ ಕಾಂಗ್ರೆಸ್‍ನವರು ಪಾಠ ಕಲಿಯಲಿ ಎಂದು ಸಿಎಂ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಟೆಂಡರ್‌ ಶ್ಯೂರ್‌ ಕಾಮಗಾರಿಯಲ್ಲಿ ಭಾರೀ ಅಕ್ರಮ – ಸಿದ್ದು ವಿರುದ್ಧ ಸಾಕ್ಷ್ಯಗಳೊಂದಿಗೆ ಲೋಕಾಗೆ ಬಿಜೆಪಿ ದೂರು

    ಸತತ 13 ಬಾರಿ ಪರೇಡ್‍ನಲ್ಲಿ ಕರ್ನಾಟಕದ ಟ್ಯಾಬ್ಲೋ ಇತ್ತು. ಈ ವರ್ಷ ಬೇಡ ಎಂದು ಕೇಂದ್ರ ಹೇಳಿತ್ತು. ಆದರೆ ಸಿಎಂ ಬೊಮ್ಮಾಯಿ, ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಶಿ ಪ್ರಯತ್ನದ ಕಾರಣ ಕೊನೆ ಕ್ಷಣದಲ್ಲಿ ರಾಜ್ಯದ ಟ್ಯಾಬ್ಲೋಗೆ ಕೇಂದ್ರ ಅನುಮತಿಸಿತ್ತು. ಅಂದ ಹಾಗೆಯೇ, ದೆಹಲಿಯ ಕರ್ತವ್ಯಪಥದಲ್ಲಿ ಇಂದು ತ್ರಿವಿಧ ದಳಗಳು ಫುಲ್ ಡ್ರೆಸ್ ರಿಹರ್ಸಲ್ ನಡೆಸಿದವು. ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಇದನ್ನೂ ಓದಿ: ಕೋಲಾರದಲ್ಲಿ ಸ್ಪರ್ಧೆ- ಸಿದ್ದರಾಮಯ್ಯಗೆ ಸಿದ್ಧಗೊಂಡಿರುವ ಮನೆಯ ವಿಶೇಷತೆ ಏನು?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಚಾಮರಾಜಪೇಟೆ ಆಟದ ಮೈದಾನದಲ್ಲಿ ಗಣರಾಜೋತ್ಸವಕ್ಕೆ ಗ್ರೀನ್‌ ಸಿಗ್ನಲ್: ಲಹರಿ ವೇಲು ಸಂತಸ

    ಚಾಮರಾಜಪೇಟೆ ಆಟದ ಮೈದಾನದಲ್ಲಿ ಗಣರಾಜೋತ್ಸವಕ್ಕೆ ಗ್ರೀನ್‌ ಸಿಗ್ನಲ್: ಲಹರಿ ವೇಲು ಸಂತಸ

    ಬೆಂಗಳೂರು: ಚಾಮರಾಜಪೇಟೆ ಆಟದ ಮೈದಾನದಲ್ಲಿ (Chamarajapet Maidan) ಕಂದಾಯ ಇಲಾಖೆ ವತಿಯಿಂದ ಗಣರಾಜೋತ್ಸವ (Republic Day) ಆಚರಣೆಗೆ ಗ್ರೀನ್ ಸಿಗ್ನಲ್ ಬೆನ್ನಲ್ಲೆ ಲಹರಿ ಸಂಸ್ಥೆ ಮುಖ್ಯಸ್ಥ ಲಹರಿ ವೇಲು (Lahari Velu) ಸಂತಸ ವ್ಯಕ್ತಪಡಿಸಿದ್ದಾರೆ.

    ‘ಪಬ್ಲಿಕ್ ಟಿವಿ’ (Public TV) ಜೊತೆ ಮಾತಾನಾಡಿದ ಲಹರಿ ವೇಲು, ಚಾಮರಾಜಪೇಟೆ ಆಟದ ಮೈದಾನದಲ್ಲಿ 75 ವರ್ಷಗಳ ಬಳಿಕ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಿದ್ದೆವು. ಅದರ ಬಳಿಕ ಗಣೇಶೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಆಚರಣೆಗೆ ಸಾಧ್ಯ ಆಗಿರಲಿಲ್ಲ. ಸದ್ಯ ಸರ್ಕಾರ ಈ ಬಾರಿ ಗಣರಾಜೋತ್ಸವ ಆಚರಣೆಗೆ ಮುಂದಾಗಿರೋದು ಸಂತಸದ ವಿಚಾರ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಮೊದಲು ಕ್ಷೇತ್ರ ಹುಡುಕಿಕೊಳ್ಳಲಿ, ಆಮೇಲೆ JDS ಬಗ್ಗೆ ಮಾತಾಡಲಿ – ಸಿ.ಎಂ ಇಬ್ರಾಹಿಂ

    ಚಾಮರಾಜಪೇಟೆ ಸ್ಥಳೀಯ ನಿವಾಸಿಯಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಕಂದಾಯ ಸಚಿವರಿಗೆ ಮತ್ತು ಸ್ಥಳೀಯ ಸಂಸದರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇದು ಇನ್ಮುಂದೆ ಕೂಡ ಮುಂದುವರೆಯಬೇಕು. ಚಾಮರಾಜಪೇಟೆ ಜನ ಶಾಂತಿಯುತವಾಗಿ ಯಾವುದೇ ಕಾರ್ಯಕ್ರಮಗಳಾದ್ರು ಸಹಕಾರ ನೀಡುತ್ತಾರೆ ಎಂದು ಹೇಳಿದ್ದಾರೆ.

    ಮುಂಬರುವ ದಿನಗಳಲ್ಲಿ ರಾಮನವಮಿ ಸೇರಿದಂತೆ ಇನ್ನೂ ಹಲವು ಕಾರ್ಯಕ್ರಮಗಳನ್ನ ಮಾಡಲಿದ್ದೇವೆ. ಗಣರಾಜೋತ್ಸವ ವಿಚಾರವಾಗಿ ಕಂದಾಯ ಇಲಾಖೆ ಯಾವುದೇ ಸಲಹೆ, ಸಹಕಾರ ಕೇಳಿದ್ರೂ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜ.23ರಂದು ಬೆಂಗ್ಳೂರಿನ 300 ಕಡೆ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ – ಗಣರಾಜೋತ್ಸವದ ಪರೇಡ್‌ನಲ್ಲಿ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಸಮಿತಿಯ ಅನುಮತಿ

    ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ – ಗಣರಾಜೋತ್ಸವದ ಪರೇಡ್‌ನಲ್ಲಿ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಸಮಿತಿಯ ಅನುಮತಿ

    ನವದೆಹಲಿ: ಈ ಬಾರಿಯ ಗಣರಾಜ್ಯೋತ್ಸವ (Republic Day) ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ (Karnataka Tableau) ಪ್ರದರ್ಶನಗೊಳ್ಳಲಿದೆ. ಈ ಹಿಂದೆ ಅನುಮತಿ ನಿರಾಕರಿಸಿದ್ದ ಸಮಿತಿ ಕೊನೆ ಕ್ಷಣದಲ್ಲಿ ರಾಜ್ಯದ ಟ್ಯಾಬ್ಲೊಗೆ ಅವಕಾಶ ನೀಡಿದ್ದು, ಕನ್ನಡಿಗರ ಆಕ್ರೋಶಕ್ಕೆ ಕೇಂದ್ರ ಸರ್ಕಾರ ಮಣಿದಂತಾಗಿದೆ.

    13ವರ್ಷಗಳಿಂದ ಕರ್ನಾಟಕ ಗಣರಾಜೋತ್ಸವ ಪರೇಡ್‌ನಲ್ಲಿ ಸ್ತಬ್ಧ ಚಿತ್ರ ಪ್ರದರ್ಶಿಸಿತ್ತು. ಈ ಬಾರಿ ಬೇರೆ ರಾಜ್ಯಗಳಿಗೆ ಅವಕಾಶ ನೀಡುವ ದೃಷ್ಟಿಯಿಂದ ಕರ್ನಾಟಕಕ್ಕೆ ಅನುಮತಿ ಇಲ್ಲ ಎಂದು ಟ್ಯಾಬ್ಲೋ ಆಯ್ಕೆ ಸಮಿತಿ ಹೇಳಿತ್ತು. ಸಮಿತಿಯ ನಿರ್ಧಾರಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

    ಕರ್ನಾಟಕಕ್ಕೆ (Karnataka) ಆದ ಅನ್ಯಾಯವನ್ನು ಪ್ರಶ್ನಿಸಿ ಪಬ್ಲಿಕ್ ಟಿವಿ (PublicTv ಕೂಡಾ ನಿರಂತರ ವರದಿ ಪ್ರಸಾರ ಮಾಡಿತ್ತು. ವರದಿ ಬಳಿಕ ರಾಜಕೀಯ ಚರ್ಚೆಗೆ ಕಾರಣವಾಗಿತ್ತು. ಜನರು ಸೋಶಿಯಲ್ ಮೀಡಿಯಾಗಳಲ್ಲಿ ಕೂಡ ಮತ್ತು ರಾಜ್ಯ ಬಿಜೆಪಿ (BJP) ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಇದನ್ನೆಲ್ಲ ಗಮನಿಸಿದ ರಾಜ್ಯ ಸರ್ಕಾರ ಕೇಂದ್ರದ ಮಟ್ಟದಲ್ಲಿ ಒತ್ತಡ ತರುವ ಪ್ರಯತ್ನ ಮಾಡಿತ್ತು. ಇದನ್ನೂ ಓದಿ: ಪರೀಕ್ಷಾ ಪೆ ಚರ್ಚಾ ಸಂವಾದ- ಪೂರಕ ವಿಚಾರ, ಒಳನೋಟಗಳನ್ನು ಆಹ್ವಾನಿಸಿದ ಪ್ರಧಾನಿ

    ಚುನಾವಣಾ ವರ್ಷದಲ್ಲಿ ವಿವಾದಗಳನ್ನು ಸೃಷ್ಟಿಸಲು ಹಿಂಜರಿದಿರುವ ಕೇಂದ್ರ ಸರ್ಕಾರ ಕರ್ನಾಟಕದ ಟ್ಯಾಬ್ಲೋ ಪ್ರದರ್ಶನಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲೇ ಆಯ್ಕೆ ಸಮಿತಿ ಕರ್ನಾಟಕದ ನಾರಿ ಶಕ್ತಿ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಅನುಮತಿ ನೀಡಿದ್ದು, 14 ಬಾರಿ ಕರ್ತವ್ಯ ಪಥ್‌ನಲ್ಲಿ ರಾಜ್ಯದ ಟ್ಯಾಬ್ಲೋ ಪ್ರದರ್ಶನಗೊಳ್ಳಲಿದೆ. ಇದನ್ನೂ ಓದಿ: ಹೆಂಡತಿಯನ್ನೇ ಹತ್ಯೆ ಮಾಡಿದ್ನಾ ಸ್ಯಾಂಟ್ರೋ ರವಿ? – ಹಣದ ವಿಚಾರಕ್ಕೆ ಕೊಂದು, ನಾಪತ್ತೆ ಅಂತಾ ಕಥೆ ಕಟ್ಟಿದ್ದ!

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k