Tag: ಗಣಿತ

  • ಮದರಸಾಗಳಲ್ಲಿ ಅತಿಥಿ ಶಿಕ್ಷಕರ ತಾತ್ಕಾಲಿಕ ಆಯ್ಕೆಗೆ ಅರ್ಜಿ ಆಹ್ವಾನ

    ಮದರಸಾಗಳಲ್ಲಿ ಅತಿಥಿ ಶಿಕ್ಷಕರ ತಾತ್ಕಾಲಿಕ ಆಯ್ಕೆಗೆ ಅರ್ಜಿ ಆಹ್ವಾನ

    ಬೆಂಗಳೂರು: ಅಲ್ವಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಬೆಂಗಳೂರು ನಗರ (Bengaluru City) ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಜೀಂ ಪ್ರೇಮ್ ಜೀ (Azim Premji) ಫೌಂಡೇಶನ್ ಆಯ್ಕೆ ಮಾಡಿರುವ ಮದರಾಸಗಳಲ್ಲಿ ಔಪಾಚಾರಿಕ ಶಿಕ್ಷಣ ವಿಷಯಗಳಾದ ಕನ್ನಡ, ಇಂಗ್ಲಿಷ್‌, ವಿಜ್ಞಾನ ಮತ್ತು ಗಣಿತ ವಿಷಯಗಳನ್ನು ಬೋಧಿಸಲು ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಆಸಕ್ತರು ಅರ್ಜಿ ಸಲ್ಲಿಸಲು ಅಕ್ಟೋಬರ್ 4 ಕೊನೆಯ ದಿನವಾಗಿರುತ್ತದೆ. ಅಕ್ಟೋಬರ್ 10 ರಂದು ಸಾಮಾನ್ಯ ಪ್ರವೇಶ ಪರೀಕ್ಷಾ ನಡೆಯಲಿದ್ದು, ಅಕ್ಟೋಬರ್ 13 ರಂದು ಫಲಿತಾಂಶ ಬಿಡುಗಡೆಯಾಗಿ ಅಕ್ಟೋಬರ್ 15 ರಂದು ಬೋಧನಾ ಪ್ರತಾಕ್ಷಿಕೆ ನಡೆಯಲಿದೆ. ಇದನ್ನೂ ಓದಿ:  ಮುಂಬೈ ಉಗ್ರರ ವಿರುದ್ಧ ಆಪರೇಷನ್‌ಗೆ ಯುಪಿಎ ಅಡ್ಡಿ – ಚಿದಂಬರಂ ಹೇಳಿಕೆ, ಸೋನಿಯ ವಿರುದ್ಧ ಬಿಜೆಪಿ ಕೆಂಡ

     

    ಅರ್ಹ ಅಭ್ಯರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಯಲದ ಅಧಿಕೃತ ಜಾಲತಾಣ www.dom.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಇದನ್ನೂ ಓದಿ:  ಚೆನ್ನೈನಲ್ಲಿ ಕಮಾನು ಕುಸಿದು 9 ಮಂದಿ ಸಾವು – 10ಕ್ಕೂ ಹೆಚ್ಚು ಮಂದಿಗೆ ಗಾಯ

    ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಪೋಡಿಯೋಂ ಬ್ಲಾಕ್, ವಿ.ವಿ. ಗೋಪುರ, ಡಾ. ಬಿ.ಆರ್.ಅಂಬೇಡ್ಕರ್ ವೀಧಿ, ಬೆಂಗಳೂರು-01 ಅಥವಾ ದೂರವಾಣಿ ಸಂಖ್ಯೆ 080-22866718 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ವಿದ್ಯಾರ್ಥಿಗಳಲ್ಲಿ ಗಣಿತ ಕಲಿಕೆ ಉತ್ತೇಜಿಸಲು ಬಹುಮಾನ ಘೋಷಿಸಿದ ಜೋಶಿ

    ವಿದ್ಯಾರ್ಥಿಗಳಲ್ಲಿ ಗಣಿತ ಕಲಿಕೆ ಉತ್ತೇಜಿಸಲು ಬಹುಮಾನ ಘೋಷಿಸಿದ ಜೋಶಿ

    ಧಾರವಾಡ: ಮಕ್ಕಳಲ್ಲಿ ಗಣಿತ(Mathematics) ಕುರಿತು ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಿರುವ ಗಣಿತ ಮೇಳ ವಿಭಿನ್ನ, ವಿಶಿಷ್ಠವಾದದ್ದು. ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಸ್ಪರ್ಧೆ ಕೂಡಾ ಆಯೋಜಿಸಬೇಕು. ಪ್ರಥಮ ಸ್ಥಾನ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂಪಾಯಿ, ದ್ವಿತೀಯ ಸ್ಥಾನ 15 ಸಾವಿರ ಮತ್ತು ತೃತೀಯ ಸ್ಥಾನ ಪಡೆಯುವ ವಿದ್ಯಾರ್ಥಿಗೆ ವೈಯಕ್ತಿಕವಾಗಿ ಬಹುಮಾನ ನೀಡುತ್ತೇನೆ ಎಂದು ಸಚಿವ ಪ್ರಹ್ಲಾದ್‌ ಜೋಶಿ(Pralhad Joshi) ಘೋಷಿಸಿದರು.

    ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ 72ನೇ ಜನ್ಮದಿನದ ಅಂಗವಾಗಿ ನಗರದ ಕರ್ಷ ಜ್ಞಾನ ಫೌಂಡೇಶನ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕೆ.ಇ. ಬೋರ್ಡ್ ಸಂಸ್ಥೆ ಜಂಟಿಯಾಗಿ ಇಲ್ಲಿನ ಕರ್ನಾಟಕ ಪ್ರೌಢಶಾಲೆಯಲ್ಲಿ ಆಯೋಜಿಸಿರುವ ಎರಡು ದಿನಗಳ ಮೋಜಿನೊಂದಿಗೆ ಗಣಿತ ಕಲಿಕೆ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು. ಇದನ್ನೂ ಓದಿ: ಮೋದಿ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ – 2,500 ಯೂನಿಟ್ ರಕ್ತ ಸಂಗ್ರಹ

    ನಿತ್ಯ ಬದುಕಿನ ಭಾಗವಾಗಿರುವ ಗಣಿತದ ಕುರಿತು ಆಸಕ್ತಿ ಮೂಡಿಸುವ ಅಗತ್ಯವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿಪ್ರಾಯಪಟ್ಟರು. ಭಾರತೀಯ ವೇದ, ಪುರಾಣಗಳಲ್ಲಿ ಗಣಿತದ ಉಲ್ಲೇಖವಿದ್ದು, ಗಣಿತ ಶಾಸ್ತ್ರಕ್ಕೆ ಮೂರು ಸಾವಿರ ವರ್ಷಗಳ ಇತಿಹಾಸವಿದೆ. ಜಗತ್ತಿಗೆ ಸೊನ್ನೆ ಪರಿಚಯಿಸಿದ ಕೀರ್ತಿ ಭಾರತೀಯರಿಗೆ ಸಲ್ಲುತ್ತದೆ. ಭಾಸ್ಕರಾಚಾರ್ಯರಿಂದ ಹಿಡಿದು ಇತ್ತೀಚಿಗಿನ ಶ್ರೀನಿವಾಸ ರಾಮಾನುಜನ್ ಸೇರಿದಂತೆ ಅನೇಕ ಗಣಿತ ಶಾಸ್ತ್ರಜ್ಞರು ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಆದರೆ ಬದಲಾದ ಸಂದರ್ಭದಲ್ಲಿ ಗಣಿತ ಕಬ್ಬಿಣದ ಕಡಲೆ ಎಂದು ವಿದ್ಯಾರ್ಥಿಗಳು ಭಾವಿಸುತ್ತಿದ್ದು, ಆ ಭಯ ತೊಡೆದು ಗಣಿತದಲ್ಲಿ ಆಸಕ್ತಿ ಮೂಡಿಸಲು ಈ ಮೇಳ ಆಯೋಜಿಸಿರುವುದು ಅಭಿನಂದನೀಯ ಕಾರ್ಯ ಎಂದರು.

    ರಾಜಕೀಯ ಎಂದರೆ ತಿರಸ್ಕೃತ ಎನ್ನುವ ಭಾವನೆ ಬಲವಾಗುತ್ತಿರುವ ಸಂದರ್ಭದಲ್ಲಿ, ಆ ವ್ಯವಸ್ಥೆಯಲ್ಲಿ ಪುನರಪಿ ವಿಶ್ವಾಸ ಮೂಡುವಂತೆ ಮಾಡಿದ, ಪ್ರತಿಯೊಂದರಲ್ಲೂ ಭಾರತೀಯ ಭಾವನೆಯನ್ನು ಉದ್ದೀಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಹಲವು ರೀತಿಯ ಸಾಮಾಜಿಕ ಕಾರ್ಯಗಳ ಮೂಲಕ ದೇಶಾದ್ಯಂತ ಆಚರಿಸಲಾಗುತ್ತಿದೆ. ಆದರೆ ಇಲ್ಲಿ ಗಣಿತವನ್ನು ಮಕ್ಕಳಿಗೆ ಸುಲಭವಾಗಿಸುವ ಮತ್ತು ಅರ್ಥೈಸುವ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಮೇಯರ್ ಈರೇಶ ಅಂಚಟಗೇರಿ, ಪಾಲಿಕೆ ಸದಸ್ಯ ಸುರೇಶ ಬೇದರೆ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ, ವಕೀಲ ಅರುಣ ಜೋಶಿ, ವಿನಾಯಕ ಜೋಶಿ, ಸಂಯೋಜಕಿ ಸುಮಂಗಲಾ ದಾಂಡೇವಾಲೆ, ಮಯೂರ ದಾಂಡೇವಾಲೆ ಸೇರಿದಂತೆ ಧಾರವಾಡ ಶಹರ ಮತ್ತು ಗ್ರಾಮೀಣ ಭಾಗದ ಸಾವಿರಾರು ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಭಾಗವಹಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಫೇಲಾದ ಗಣಿತದಲ್ಲಿಯೇ ಐಎಎಸ್ ಮಾಡಿದೆ- ವಿದ್ಯಾರ್ಥಿಗಳಿಗೆ ಸಿಇಓ ಪಾಠ

    ಫೇಲಾದ ಗಣಿತದಲ್ಲಿಯೇ ಐಎಎಸ್ ಮಾಡಿದೆ- ವಿದ್ಯಾರ್ಥಿಗಳಿಗೆ ಸಿಇಓ ಪಾಠ

    – ಎಸ್‍ಎಲ್‍ಎಲ್‍ಸಿ ಫಲಿತಾಂಶದಲ್ಲಿ ಬಳ್ಳಾರಿ ಅಗ್ರಸ್ಥಾನಕ್ಕೇರಲು ಶ್ರಮಿಸಿ

    ಬಳ್ಳಾರಿ: ಜಿಲ್ಲೆಯಲ್ಲಿ ಈ ಬಾರಿ ಎಸ್‍ಎಲ್‍ಎಲ್‍ಸಿ ಫಲಿತಾಂಶ ವೃದ್ಧಿಸುವ ನಿಟ್ಟಿನಲ್ಲಿ ನಾನಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈ ಬಾರಿ ಜಿಲ್ಲೆ ಅಗ್ರಸ್ಥಾನಕ್ಕೇರಿಸಲು ಎಲ್ಲ ಶಿಕ್ಷಕ ಸಮುದಾಯ ಶ್ರಮಿಸಬೇಕು. ಎಲ್ಲ ಮಕ್ಕಳನ್ನು ಪಾಸ್ ಮಾಡುವ ಸಾಮರ್ಥ್ಯ ಹಾಗೂ ಅಸಾಧ್ಯವನ್ನು ಸಾಧ್ಯವಾಗಿಸುವ ಸಾಮರ್ಥ್ಯ ತಮ್ಮಲ್ಲಿದೆ ಎಂದು ಜಿ.ಪಂ ಸಿಇಒ ಕೆ.ನಿತೀಶ್ ಹೇಳಿದ್ದಾರೆ.

    ಜಿಲ್ಲಾಡಳಿತ, ಜಿ.ಪಂ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಬಿಡಿಎಎ ಫುಟ್ಬಾಲ್ ಸಭಾಂಗಣದಲ್ಲಿ ಎಸ್‍ಎಲ್‍ಎಲ್‍ಸಿ ಫಲಿತಾಂಶ ಉತ್ತಮಗೊಳಿಸುವ ಕುರಿತು ಜಿಲ್ಲೆಯ ಎಲ್ಲಾ ಪ್ರೌಢಶಾಲೆ ಮುಖ್ಯಗುರುಗಳು, ಇಂಗ್ಲಿಷ್, ವಿಜ್ಞಾನ ಮತ್ತು ಗಣಿತ ವಿಷಯ ಶಿಕ್ಷಕರಿಗೆ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಬದುಕು ರೂಪಿಸುವ ನಿಟ್ಟಿನಲ್ಲಿ ಎಸ್‍ಎಲ್‍ಎಲ್‍ಸಿ ಮುಖ್ಯ ಘಟ್ಟ. ತಾವು ವಿದ್ಯಾರ್ಥಿಗಳನ್ನು ಯಾವ ರೀತಿ ಪರಿಣಾಮಕಾರಿಯಾದ ಬೋಧನೆಯ ಮೂಲಕ ಅಣಿಗೊಳಿಸುತ್ತೀರೋ ಅವರು ಉತ್ತಮ ಫಲಿತಾಂಶ ಪಡೆಯಲು ಸಜ್ಜಾಗುತ್ತಾರೆ ಎಂದರು.

    ತಮ್ಮ ಸ್ವಂತ ಮಕ್ಕಳಿಗಿಂತ ಹೆಚ್ಚಾಗಿ ಅವರನ್ನು ಪರಿಗಣಿಸಿ ಮತ್ತು ಬೋಧಿಸಿ. ಶಿಕ್ಷಕರು ಸರಿಯಾಗಿ ಪಾಠ ಮಾಡಿದರೇ ವಿದ್ಯಾರ್ಥಿಗಳು ಭವಿಷ್ಯ ಕಟ್ಟಿಕೊಂಡ ಬಳಿಕ ನಿಮ್ಮನ್ನು ಸ್ಮರಿಸಲಿದ್ದಾರೆ. ಶಿಕ್ಷಕರಿಗೆ ಪ್ರತಿ ವರ್ಷ 10ನೇ ಕ್ಲಾಸ್ ಬರುತ್ತೆ. ಆದರೆ ವಿದ್ಯಾರ್ಥಿಗಳಿಗೆ ಒಂದೆ ಸಾರಿ ಬರುವುದು. ಇದೊಂದು ನಿಮಗೆ ಸದಾವಕಾಶ, ಅದನ್ನು ಬಳಸಿಕೊಳ್ಳಿ ಎಂದು ಕರೆ ನೀಡಿದರು.

    ತಾವು ಖುಷಿಯಿಂದ ಮಕ್ಕಳಿಗೆ ಪಾಠ ಹೇಳಿಕೊಟ್ಟರೇ ಅದು ಅವರ ತಲೆಗೆ ಹೋಗುತ್ತದೆ. ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ತಮಗೆ ಯಾವ ಸಹಾಯ-ಸಹಕಾರ ಬೇಕು ಅದನ್ನು ನೀಡಲಾಗುವುದು ಎಂದು ಅವರು ಭರವಸೆ ನೀಡಿದರು. ಚಿತ್ರದುರ್ಗದಲ್ಲಿ ನವೋದಯ ಶಾಲೆಯಲ್ಲಿ ನಾನು 8ನೇ ತರಗತಿಯಲ್ಲಿ ಓದುತ್ತಿದ್ದ ಸಂದರ್ಭದಲ್ಲಿ ಗಣಿತ ವಿಷಯದಲ್ಲಿ ಫೇಲಾಗಿದ್ದೆ. ಆದರೆ ನಂತರ ಅದೇ ಗಣಿತ ಶಿಕ್ಷಕರು ಅತ್ಯಂತ ಇಷ್ಟವಾಗಿ ಅವರ ಪಾಠವನ್ನು ಪ್ರೀತಿಯಿಂದ ಕಲಿತು ಎಸ್‍ಎಲ್‍ಎಲ್‍ಸಿಯಲ್ಲಿ 99 ಹಾಗೂ ಪಿಯುಸಿಯಲ್ಲಿ 100ಕ್ಕೆ 100 ಅಂಕಗಳನ್ನು ಪಡೆದುಕೊಂಡೆ ಎಂದು ಕೆ.ನಿತೀಶ್ ಹೇಳಿದ್ದಾರೆ.

    ನಂತರದ ದಿನಗಳಲ್ಲಿ ಗಣಿತ ಇಷ್ಟದ ವಿಷಯವಾಯ್ತು. ಇಂಜನಿಯರಿಂಗ್‍ನಲ್ಲಿ ಉತ್ತಮ ಪ್ರದರ್ಶನ ತೋರಿದೆ. ಐಎಎಸ್ ಪರೀಕ್ಷೆಯನ್ನು ಗಣಿತದಲ್ಲಿಯೇ ಎದುರಿಸಿ ಇಡೀ ದೇಶಕ್ಕೆ 8ನೇ ರ‌್ಯಾಂಕ್ ಗಳಿಸಿದೆ. ಇದಕ್ಕೆ ಕಾರಣ ನನಗೆ ಕಲಿಸಿದ ಗಣಿತ ಶಿಕ್ಷಕರು ಎಂದು ಅವರು ಸ್ಮರಿಸಿದರು. ತಾವು ತಮ್ಮ ಮಕ್ಕಳನ್ನು ಅತ್ಯಂತ ಇಷ್ಟದಿಂದ ಕಲಿಸಿ. ಅವರು ಉನ್ನತ ಸ್ಥಾನಕ್ಕೇರಿದಾಗ ತಮ್ಮನ್ನು ಸದಾ ಸ್ಮರಿಸುತ್ತಾರೆ. ಅಂದು ಫೇಲಾಗಿದ್ದ ನನ್ನನ್ನೇ ಐಎಎಸ್ ಅಧಿಕಾರಿಯನ್ನಾಗಿ ಮಾಡಿದ ಕೀರ್ತಿ ಶಿಕ್ಷಕ ಸಮೂಹಕ್ಕೆ ಸೇರುತ್ತದೆ ಎಂದು ತಮ್ಮ ಬಾಲ್ಯವನ್ನು ನೆನೆದರು.

  • ಗಣಿತ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ – ಮರು ಪರೀಕ್ಷೆ ಇಲ್ಲ

    ಗಣಿತ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ – ಮರು ಪರೀಕ್ಷೆ ಇಲ್ಲ

    ಬೆಂಗಳೂರು: ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಗಣಿತ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ. ಶಿಕ್ಷಕರೊಬ್ಬರು ಪ್ರಶ್ನೆ ಪತ್ರಿಕೆ ಫೋಟೋ ವಾಟ್ಸಪ್ ನಲ್ಲಿ ಹಾಕಿಕೊಂಡಿದ್ದರಿಂದ ಗೊಂದಲ ಸೃಷ್ಟಿಯಾಗಿದೆ ಎಂದು ಶಿಕ್ಷಣ ಇಲಾಖೆ ಆಯುಕ್ತ ಜಾಫರ್ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ.

    ಪರೀಕ್ಷೆ ಆರಂಭವಾದ ಒಂದು ಗಂಟೆಯ ಬಳಿಕ ಶಿಕ್ಷಕ ಪತ್ರಿಕೆ ಫೋಟೋಗಳನ್ನು ವಾಟ್ಸಪ್ ನಲ್ಲಿ ಹಾಕಿಕೊಂಡಿದ್ದಾರೆ. ತಪ್ಪಿತಸ್ಥ ಶಿಕ್ಷಕನ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಈ ಸಂಬಂಧ ಡಿಡಿಪಿಐ ಪ್ರಸನ್ನ ಸಹ ಸಿಂಧಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಳ್ಳಲಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ, ಮರು ಪರೀಕ್ಷೆಯನ್ನು ನಡೆಸಲ್ಲ, ಹಾಗಾಗಿ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗೋದು ಬೇಡ ಎಂದು ಜಾಫರ್ ತಿಳಿಸಿದ್ದಾರೆ.

    ಮೊರಟಗಿ ಕಲ್ಪವೃಕ್ಷ ಶಿಕ್ಷಣ ಸಂಸ್ಥೆಯಲ್ಲಿ ಗಣಿತ ಪತ್ರಿಕೆ ಸೋರಿಕೆಯಾದ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಡಿಡಿಪಿಐ ಪ್ರಸನ್ನ ಪರಿಶೀಲನೆ ನಡೆಸಿದ್ದರು. ತಮ್ಮ ಬಳಿಯ ಪ್ರತಿ ಮತ್ತು ವಾಟ್ಸಪ್ ಪ್ರತಿಯೊಂದಿಗೆ ತುಲನೆ ಮಾಡಿದಾಗ ಪ್ರಶ್ನೆ ಪತ್ರಿಕೆ ಹೋಲಿಕೆ ಆಗಿತ್ತು. ಮೊರಟಗಿ ಪರೀಕ್ಷಾ ಕೇಂದ್ರಕ್ಕೆ ಬಿಇಓ ಆಗಮಿಸಿ ಸಿಬ್ಬಂದಿಯಿಂದ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ.

  • SSLC ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆ

    SSLC ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆ

    ವಿಜಯಪುರ: ಜಿಲ್ಲೆಯ ಸಿಂಧಗಿ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಎಸ್‍ಎಸ್‍ಎಲ್ ಸಿ ಯ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ದನ್ನು ಡಿಡಿಪಿಐ ಪ್ರಸನ್ನ ಖಚಿತ ಪಡಿಸಿದ್ದಾರೆ.

    ವಾಟ್ಸಪ್ ಗಳಲ್ಲಿ ಇಂದು ಗಣಿತ ಪ್ರಶ್ನೆ ಪತ್ರಿಕೆ ಹರಿದಾಡುತ್ತಿತ್ತು. ಮೊರಟಗಿ ಕಲ್ಪವೃಕ್ಷ ಶಿಕ್ಷಣ ಸಂಸ್ಥೆಯಲ್ಲಿ ಗಣಿತ ಪತ್ರಿಕೆ ಸೋರಿಕೆಯಾದ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಡಿಡಿಪಿಐ ಪ್ರಸನ್ನ ಪರಿಶೀಲನೆ ನಡೆಸಿದರು. ತಮ್ಮ ಬಳಿಯ ಪ್ರತಿ ಮತ್ತು ವಾಟ್ಸಪ್ ಪ್ರತಿಯೊಂದಿಗೆ ತುಲನೆ ಮಾಡಿದಾಗ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂಬುದನ್ನು ಪ್ರಸನ್ನ ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಯಿಂದ ಹೊರ ಬಂದಾಗ ಪ್ರಶ್ನೆ ಪತ್ರಿಕೆ ಸೋರಿಕೆಯ ವಿಷಯ ಗೊತ್ತಾಗಿದೆ.

    ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯ ತಿಳಿಯುತ್ತಲೇ ಮೊರಟಗಿ ಪರೀಕ್ಷಾ ಕೇಂದ್ರಕ್ಕೆ ಬಿಇಓ ಆಗಮಿಸಿ ಸಿಬ್ಬಂದಿಯಿಂದ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಈ ಸಂಬಂಧ ಸಿಂಧಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಪ್ರಸನ್ನ ಮುಂದಾಗಿದ್ದಾರೆ. ಇದನ್ನೂ ಓದಿ: ಗಣಿತ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ – ಮರು ಪರೀಕ್ಷೆ ಇಲ್ಲ

  • ಗಣಿತವನ್ನು ಸುಲಲಿತವಾಗಿ ಅರೆದು ಕುಡಿದ ಯುವಕ- 6,000 ಮಗ್ಗಿವರೆಗೆ ಸುಲಭವಾಗಿ ಹೇಳಬಲ್ಲ

    ಗಣಿತವನ್ನು ಸುಲಲಿತವಾಗಿ ಅರೆದು ಕುಡಿದ ಯುವಕ- 6,000 ಮಗ್ಗಿವರೆಗೆ ಸುಲಭವಾಗಿ ಹೇಳಬಲ್ಲ

    ಚಿತ್ರದುರ್ಗ: ಬಹುತೇಕ ವಿದ್ಯಾರ್ಥಿಗಳ ಪಾಲಿಗೆ ಗಣಿತ ಕಬ್ಬಿಣದ ಕಡಲೆಯೇ ಆಗಿರುತ್ತದೆ. ಅದರಲ್ಲೂ ಮಗ್ಗಿಯಂತೂ ಕಷ್ಟದಾಯಕವಾಗಿರುತ್ತದೆ. ಆದರೆ ಕೋಟೆನಾಡಿನಲ್ಲಿ ವಿದ್ಯಾರ್ಥಿ ಮಾತ್ರ 6,000 ಮಗ್ಗಿವರೆಗೆ ಸುಲಭವಾಗಿ ಹೇಳಬಲ್ಲ ವಿಧಾನವನ್ನು ಕಂಡುಕೊಂಡಿದ್ದಾರೆ.

    ಚಿತ್ರದುರ್ಗ ನಗರದ ಬ್ಯಾಂಕ್ ಕಾಲೋನಿಯಲ್ಲಿನ ಹ್ಯಾಪಿ ಹೋಮ್ ಸ್ಕೂಲ್ ಮುಖ್ಯಸ್ಥರು ಹಾಗೂ ಶಿಕ್ಷಕಿಯಾಗಿರೋ ಮಾಲಾ ಅವರ ಪುತ್ರ ಸಿದ್ಧಾರ್ಥರಿಗೆ ಚಿಕ್ಕವಯಸ್ಸಿನಿಂದಲೂ ಗಣಿತದ ಬಗ್ಗೆ ಬಾರಿ ಆಸಕ್ತಿ. 6 ವರ್ಷದವನಿದ್ದಾಗಲೇ ಅಬ್ಯಾಕಸ್ ನಲ್ಲಿ ತುಂಬಾ ಫಾಸ್ಟ್ ಆಗಿದ್ದನು. ಆಗ ಓರ್ವ ವಿದ್ಯಾರ್ಥಿ 100ರ ಮಗ್ಗಿ ಹೇಳುವುದು ನೋಡಿ ಆಕರ್ಷಿತನಾಗಿದ್ದ ಈ ಯುವಕ ಕೇವಲ 1 ವಾರದ ನಂತರ 500 ವರೆಗೆ ಮಗ್ಗಿ ಹೇಳಲು ಶುರು ಮಾಡಿದ್ದಾರಂತೆ.

    ಇದೀಗ 6000 ರವರೆಗೆ ಏನೇ ಕೇಳಿದರೂ ಕ್ಷಣಾರ್ಧದಲ್ಲಿ ಫಟಾಫಟ್ ಅಂತ ಮಗ್ಗಿ ಹೇಳುತ್ತಾರೆ. ತಾನೇ ಖುದ್ದಾಗಿ 2ರಿಂದ 6,000ದವರೆಗೆ ಮಗ್ಗಿಯನ್ನು ಸುಲಭವಾಗಿ ಬರೆಯಬಲ್ಲ ವಿಧಾನವನ್ನು ಸಹ ಕಂಡು ಹಿಡಿದಿದ್ದಾರೆ. ಅದಕ್ಕೆ ಟಿಕ್ ಟ್ಯಾಕ್ ಟೂ ಅಂತ ಹೆಸರಿಟ್ಟಿದ್ದಾರೆ. ಎರಡು ಟೇಬಲ್ ಹಾಕಿ ಮಗ್ಗಿಯನ್ನು ವಿಸುವಲೇಸೇಷನ್ ನಲ್ಲಿ ಸುಲಭವಾಗಿ ಕಲಿಯುವ ವಿಧಾನವನ್ನು ಕಂಡುಕೊಂಡಿದ್ದಾರೆ. ಆ ಮೂಲಕ ಯಾವುದೇ ಮಗ್ಗಿ ಕೇಳಿದರೂ ಕ್ಷಣಾರ್ಧದಲ್ಲಿ ಹೇಳುವಂತ ಅಭ್ಯಾಸ ರೂಡಿಸಿಕೊಂಡಿದ್ದಾರೆ. ಅಂತೆಯೇ ಅದೇ ವಿಧಾನವನ್ನು ಅಮ್ಮ ಕಟ್ಟಿದ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಹೇಳಿ ಕೊಡುತ್ತಾರೆ.

    ಇದೀಗ ಬಿಬಿಎಂ ಓದುತ್ತಿರುವ ಈ ವಿದ್ಯಾರ್ಥಿಯ ಪ್ರತಿಭೆ ಕಂಡು ಖುದ್ದು ಶಿಕ್ಷಕಿ ಆಗಿರುವ ತಾಯಿಯೇ ಬೆರಗಾಗಿದ್ದಾರೆ. ಅಲ್ಲದೆ ಮಗನ ಸೂತ್ರವನ್ನೇ ಅನುಸರಿಸಿ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡುತ್ತಿದ್ದಾರೆ. ಆ ಮೂಲಕ ಕಬ್ಬಿಣದ ಕಡಲೆ ಆಗಿದ್ದ ಮಗ್ಗಿಯನ್ನು ಸರಳಸೂತ್ರದಲ್ಲಿ ಮಕ್ಕಳಿಗೆ ಹೇಳಿ ಕೊಡುತ್ತಿದ್ದಾರೆ. ಇತರೆ ಶಿಕ್ಷಕರು ಸಹ ವಿದ್ಯಾರ್ಥಿಯ ಪ್ರತಿಭೆಗೆ ಶಹಬ್ಬಾಶ್ ಗಿರಿ ನೀಡಿದ್ದು, ಈ ಕ್ಷೇತ್ರದಲ್ಲಿ ಅಗಾಧವಾಗಿ ಸಾಧಿಸಿ ಐಎಎಸ್ ಅಧಿಕಾರಿ ಆಗಬೇಕು ಎಂಬ ಕನಸಿದೆ ಎಂದು ಸಿದ್ಧಾರ್ಥ್ ತಾಯಿ ಹೇಳಿದ್ದಾರೆ.

    ಒಟ್ಟಾರೆಯಾಗಿ ಕೋಟೆನಾಡಿನ ಈ ವಿದ್ಯಾರ್ಥಿಯ ಸರಳಸೂತ್ರ ಈಗ ಜನಸಾಮಾನ್ಯರ ಮೆಚ್ಚುಗೆಗೆ ಪಾತ್ರವಾಗಿದೆ. ಅಪರೂಪದ ಪ್ರತಿಭೆಗೆ ವಿವಿಧ ಮಠ ಮಾನ್ಯಗಳು ಗೌರವಿಸಿ ಅಭಿನಂದಿಸುವ ಮೂಲಕ ಬೆನ್ನು ತಟ್ಟಿವೆ. ಪ್ರತಿಭಾವಂತ ಯುವಕನ ಕನಸು ಕೂಡ ನನಸಾಗಲಿ ಎಂಬುದು ದುರ್ಗದ ಜನರ ಆಶಯ.

  • ಗಣಿತ ಸಮಸ್ಯೆ ಬಿಡಿಸಲಿಲ್ಲವೆಂದು 8 ವರ್ಷದ ಬಾಲಕನ ಗಂಟಲಿಗೆ ಕೋಲಿನಿಂದ ಚುಚ್ಚಿದ ಶಿಕ್ಷಕಿ

    ಗಣಿತ ಸಮಸ್ಯೆ ಬಿಡಿಸಲಿಲ್ಲವೆಂದು 8 ವರ್ಷದ ಬಾಲಕನ ಗಂಟಲಿಗೆ ಕೋಲಿನಿಂದ ಚುಚ್ಚಿದ ಶಿಕ್ಷಕಿ

    ಅಹ್ಮದ್‍ನಗರ: ಗಣಿತ ಸಮಸ್ಯೆ ಬಿಡಿಸಲಿಲ್ಲ ಎಂದು ಕೋಪಗೊಂಡ ಶಿಕ್ಷಕಿಯೋರ್ವಳು 8 ವರ್ಷದ ಬಾಲಕನ ಗಂಟಲಿಗೆ ಮರದ ಕೋಲಿನಿಂದ ಚುಚ್ಚಿದ ಆಘಾತಕಾರಿ ಘಟನೆಯೊಂದು ನಡೆದಿರುವ ಬಗ್ಗೆ ವರದಿಯಾಗಿದೆ.

    ಮಹಾರಾಷ್ಟ್ರದ ಪಿಂಪಲ್ಗಾಂವ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘೋರ ಕೃತ್ಯ ನಡೆದಿದ್ದು, ಬಾಲಕ ರೋಹನ್ ಡಿ ಜಂಜೀರ್ ಹಲ್ಲೆಗೊಳಗಾದ ಬಾಲಕ. ಘಟನೆಯಿಂದ ರೋಹನ್ ನ ಅನ್ನನಾಳ ಮತ್ತು ವಾಯುನಾಳಗಳಿಗೆ ತೀವ್ರ ಏಟಾಗಿದ್ದು, ಸದ್ಯ ಮಾತನಾಡಲು ಸಾಧ್ಯವಾಗುತ್ತಿಲ್ಲ.

    ಶಿಕ್ಷಕಿ ಹಲ್ಲೆ ನಡೆಸಿದ ತಕ್ಷಣ ರೋಹನ್ ಗಂಟಲಿನಿಂದ ರಕ್ತಸ್ರಾವವಾಗಿದೆ. ಘಟನೆಯನ್ನು ಕಣ್ಣಾರೆ ಕಂಡ ಇತರೆ ವಿದ್ಯಾರ್ಥಿಗಳು ಕಿರುಚಿಕೊಂಡಿದ್ದಾರೆ. ಕೂಗು ಕೇಳಿ ಸಿಬ್ಬಂದಿಗಳು ಶಾಲಾ ಕೊಠಡಿಗೆ ದೌಡಾಯಿಸಿದ್ದಾರೆ. ಬಳಿಕ ರೋಹನ್ ನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

    ಹೆಚ್ಚಿನ ಚಿಕಿತ್ಸೆಗಾಗಿ ಬಾಲಕನನ್ನು ಪುಣೆ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದಾರೆ. ಸದ್ಯಕ್ಕೆ ರೋಹನ್ ಪುಣೆ ಆಸ್ಪತ್ರೆಯ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

    ಬಾಲಕನ ಮೇಲೆ ದರ್ಪ ತೋರಿದ ಶಿಕ್ಷಕಿ ಮೇಲೆ ಹಲ್ಲೆ ಪ್ರಕರಣ ದಾಖಲಾಗಿದೆ. ಆದ್ರೆ ಇದೂವರೆಗೂ ಆಕೆಯ ಬಂಧನವಾಗಿಲ್ಲ. ಬಾಲಕನ ಆರೋಗ್ಯ ಸ್ವಲ್ಪ ಮಟ್ಟಿಗೆ ಸುಧಾರಣೆಯಾದ ಬಳಿಕ ಆತನ ಬಳಿಯಿಂದ ಹೇಳಿಕೆ ಪಡೆದುಕೊಳ್ಳುತ್ತೇವೆ. ಬೇಕಿದ್ದಲ್ಲಿ ದೂರಿನ ಪ್ರಮಾಣವನ್ನು ಹೆಚ್ಚಿಸುತ್ತೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ಸಿಬಿಎಸ್‍ಸಿ ಪ್ರಶ್ನೆಪತ್ರಿಕೆ ಸೋರಿಕೆ- ಇಬ್ಬರು ಶಿಕ್ಷಕರು, ಕೋಚಿಂಗ್ ಸೆಂಟರ್ ಮಾಲೀಕನ ಬಂಧನ

    ಸಿಬಿಎಸ್‍ಸಿ ಪ್ರಶ್ನೆಪತ್ರಿಕೆ ಸೋರಿಕೆ- ಇಬ್ಬರು ಶಿಕ್ಷಕರು, ಕೋಚಿಂಗ್ ಸೆಂಟರ್ ಮಾಲೀಕನ ಬಂಧನ

    ನವದೆಹಲಿ: ಸಿಬಿಎಸ್‍ಸಿ ದ್ವಿತೀಯ ಪಿಯುಸಿ ಅರ್ಥಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

    ರಿಶಬ್ (ಭೌತ ಶಾಸ್ತ್ರ) ಮತ್ತು ರೋಹಿತ್ (ಗಣಿತ) ಬಂಧಿತ ಶಿಕ್ಷಕರು. ಕೋಚಿಂಗ್ ಸೆಂಟರ್ ಮಾಲೀಕನನ್ನು ತಖ್ವೀರ್ ಎಂದು ಗುರುತಿಸಲಾಗಿದೆ. ಇಬ್ಬರು ಶಿಕ್ಷಕರು ಬೆಳಗ್ಗೆ 9:15 ಸಮಯಕ್ಕೆ ಪ್ರಶ್ನೆ ಪತ್ರಿಕೆಯ ಫೋಟೋಗಳನ್ನು ತೆಗೆದು ಕೋಚಿಂಗ್ ಸೆಂಟರ್ ಮಾಲೀಕನಿಗೆ ಕಳುಹಿಸಿದ್ದಾರೆ. ಮಾಲೀಕನು ವಿದ್ಯಾರ್ಥಿಗಳಿಗೆ ಕಳಿಸಿದ್ದಾನೆ ಎಂಬ ಮಾಹಿತಿಗಳು ಲಭ್ಯವಾಗಿವೆ.

    ಎರಡು ರೂಪದಲ್ಲಿ ಸೋರಿಕೆ: ಪ್ರಶ್ನೆಪತ್ರಿಕೆ ಎರಡು ರೂಪದಲ್ಲಿ ಸೋರಿಕೆಯಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಒಂದು ಮುದ್ರಿತ ಪ್ರಶ್ನೆ ಪತ್ರಿಕೆ ವಾಟ್ಸಪ್ ಮೂಲಕ ಹಾಗೂ ಕೈ ಬರಹದ ಪ್ರಶ್ನೆಪತ್ರಿಕೆ ಕೂಡ ಹರಿದಾಡಿದೆ. ದೆಹಲಿಯ ಬವನಾದಲ್ಲಿ ಕೋಚಿಂಗ್ ಸೆಂಟರ್ ಅನ್ನು ನಡೆಸುತ್ತಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ ಸಿಬಿಎಸ್‍ಸಿ ಮತ್ತು ಕೇಂದ್ರ ಸರ್ಕಾರ ದ್ವಿತೀಯ ಪಿಯುಸಿ ಅರ್ಥಶಾಸ್ತ್ರದ ಮರು ಪರೀಕ್ಷೆಗೆ ಆದೇಶಿಸಿದೆ.

    ದೇಶಾದ್ಯಂತ ಏಪ್ರಿಲ್ 25 ರಂದು ದ್ವಿತೀಯ ಪಿಯುಸಿ ಅರ್ಥಶಾಸ್ತ್ರದ ಮರುಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿ ದೊರೆಯುವರೆಗೂ 10ನೇ ತರಗತಿ ಗಣಿತಶಾಸ್ತ್ರದ ಮರು ಪರೀಕ್ಷೆ ನಿರ್ಧಾರವನ್ನು ಮುಂದೂಡಿದ್ದೇವೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಸೋರಿಕೆಯ ಹೆಚ್ಚಿನ ಮಾಹಿತಿ ದೊರೆತ ನಂತರ 10ನೇ ತರಗತಿ ಗಣಿತಶಾಸ್ತ್ರದ ಮರು ಪರೀಕ್ಷೆ ದೆಹಲಿ, ಹರಿಯಾಣ ವಲಯದಲ್ಲಿ ಮಾತ್ರ ನಡೆಯಲಿದೆ. ಮರುಪರೀಕ್ಷೆ ಜುಲೈನಲ್ಲಿ ನಡೆಯುವ ಸಾಧ್ಯತೆಗಳಿವೆ ಎಂದು ಸಚಿವರು ತಿಳಿಸಿದ್ದಾರೆ.

    ಸಿಬಿಎಸ್‍ಸಿ 10ನೇ ತರಗತಿ ಗಣಿತ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ಜಾರ್ಖಂಡ್ ಪೊಲೀಸರು ಚಾತ್ರ ಜಿಲ್ಲೆಯಲ್ಲಿ 12 ಜನ ವಿದ್ಯಾರ್ಥಿಗಳು ಹಾಗೂ ಕೋಚಿಂಗ್ ಸೆಂಟರ್ ಸಿಬ್ಬಂಧಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.