Tag: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು

  • ತೀರ್ಥಹಳ್ಳಿಯಲ್ಲಿ ಪ್ರತಿಮಾ ಅಂತ್ಯಕ್ರಿಯೆ – ಪುತ್ರನಿಂದ ತಾಯಿಯ ಚಿತೆಗೆ ಅಗ್ನಿಸ್ಪರ್ಶ

    ತೀರ್ಥಹಳ್ಳಿಯಲ್ಲಿ ಪ್ರತಿಮಾ ಅಂತ್ಯಕ್ರಿಯೆ – ಪುತ್ರನಿಂದ ತಾಯಿಯ ಚಿತೆಗೆ ಅಗ್ನಿಸ್ಪರ್ಶ

    ಶಿವಮೊಗ್ಗ: ಬೆಂಗಳೂರಿನಲ್ಲಿ ಹತ್ಯೆಯಾಗಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ (Department Of Mines And Geology) ಉಪ ನಿರ್ದೇಶಕಿ (Deputy Director) ಪ್ರತಿಮಾ (Prathima) ಅಂತ್ಯಕ್ರಿಯೆ (Funeral) ಇಂದು ಶಿವಮೊಗ್ಗ (Shivamogga) ಜಿಲ್ಲೆ ತೀರ್ಥಹಳ್ಳಿಯ (Thirthahalli) ಹಿಂದೂ ರುದ್ರಭೂಮಿಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಕುಟುಂಬಸ್ಥರು ನೆರವೇರಿಸಿದರು.

    ಪ್ರತಿಮಾ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ. ಮೂಲತಃ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯವರಾದ ಪ್ರತಿಮಾ ಉದ್ಯೋಗದ ನಿಮಿತ್ತ ಬೆಂಗಳೂರಿನ ಅಪಾರ್ಟ್ಮೆಂಟ್‌ವೊಂದರಲ್ಲಿ ಒಬ್ಬರೇ ವಾಸಿಸುತ್ತಿದ್ದರು. ಪತಿ ಸತ್ಯನಾರಾಯಣ ಕೃಷಿಕರಾಗಿದ್ದ ಕಾರಣ ಪತಿ ಹಾಗು ಪುತ್ರ ಪಾರ್ಥ ತೀರ್ಥಹಳ್ಳಿಯಲ್ಲಿ ವಾಸವಾಗಿದ್ದರು. ಪ್ರತಿಮಾ ರಜಾ ದಿನಗಳಲ್ಲಿ ಆಗಾಗ ತೀರ್ಥಹಳ್ಳಿಗೆ ಬಂದು ಹೋಗುತ್ತಿದ್ದರು. ಇದನ್ನೂ ಓದಿ:‌ 2013 ರಿಂದ ದಲಿತ ಸಿಎಂ ಓಡ್ತಿದೆ, ಪಿಕ್ಚರ್‌ ರಿಲೀಸ್ ಆಗ್ತಿಲ್ಲ: ಸತೀಶ್ ಜಾರಕಿಹೊಳಿ

    ಸಣ್ಣ ವಯಸ್ಸಿನಲ್ಲೇ ಉನ್ನತ ಹುದ್ದೆಯಲ್ಲಿದ್ದ ಪ್ರತಿಮಾ ಇಲಾಖೆಯಲ್ಲಿ ಉತ್ತಮ ಹೆಸರು ಗಳಿಸಿದ್ದರು. ಪ್ರಾಮಾಣಿಕ ಅಧಿಕಾರಿ ಎನಿಸಿಕೊಂಡಿದ್ದರು. ಆದರೆ ಇಂತಹ ಅಧಿಕಾರಿ ಪ್ರತಿಮಾ ಅವರನ್ನು ಶನಿವಾರ ರಾತ್ರಿ ಅವರ ಅಪಾರ್ಟ್ಮೆಂಟ್‌ನಲ್ಲೇ ಕೊಲೆ ಮಾಡಿದ್ದಾರೆ. ಕೊಲೆಯಾಗಿದ್ದ ಪ್ರತಿಮಾ ಅವರ ಮರಣೋತ್ತರ ಶವ ಪರೀಕ್ಷೆ ನಂತರ ಕುಟುಂಬಸ್ಥರು ಪ್ರತಿಮಾ ಮೃತದೇಹವನ್ನು ಭಾನುವಾರ ರಾತ್ರಿ ಬೆಂಗಳೂರಿನಿಂದ ತೀರ್ಥಹಳ್ಳಿಗೆ ಕರೆತಂದಿದ್ದರು. ತೀರ್ಥಹಳ್ಳಿಯ ಸತ್ಯನಾರಾಯಣ ಅವರ ಮೂಲ ಮನೆಯಲ್ಲಿ ರಾತ್ರಿಯಿಂದ ಮುಂಜಾನೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಕಳೆದ ವಾರವಷ್ಟೇ ಗೃಹ ಪ್ರವೇಶವಾಗಿದ್ದ ನೂತನ ಮನೆಗೆ ಮುಂಜಾನೆ 10 ಗಂಟೆಗೆ ಹಳೆ ಮನೆಯಿಂದ ಹೊಸ ಮನೆಗೆ ಮೃತದೇಹ ಕೊಂಡೊಯ್ಯಲಾಯಿತು. ಅಲ್ಲಿ 10 ನಿಮಿಷಗಳ ಕಾಲ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಕೊಡಗಿನ ಅಂಗನವಾಡಿಗಳಿಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ

    ನಂತರ ಪ್ರತಿಮಾ ಪಾರ್ಥಿವ ಶರೀರವನ್ನು ತುಂಗಾ ನದಿ ದಡದಲ್ಲಿರುವ ಹಿಂದೂ ರುದ್ರ ಭೂಮಿಗೆ ಕೊಂಡೊಯ್ಯಲಾಯಿತು. ಹಿಂದೂ ರುದ್ರಭೂಮಿಯಲ್ಲಿ ಪ್ರತಿಮಾ ಅವರಿಗೆ ಕುಟುಂಬಸ್ಥರು ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಿಸಿದರು. ತಾಯಿಯ ಚಿತೆಗೆ ಪುತ್ರ ಪಾರ್ಥ ಅಗ್ನಿ ಸ್ಪರ್ಶ ನೆರವೇರಿಸಿದ್ದಾನೆ. ಸದ್ಯದ ಪರಿಸ್ಥಿತಿಯಲ್ಲಿ ಪ್ರಾಮಾಣಿಕ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವುದು ಕಷ್ಟವಾಗಿದೆ. ಸರ್ಕಾರ ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ನೀಡಬೇಕು. ಇಂತಹ ಘಟನೆ ಮರುಕಳಿಸದಂತೆ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರತಿಮಾ ಕುಟುಂಬಸ್ಥರು ಹಾಗೂ ಸ್ಥಳೀಯರ ಆಗ್ರಹವಾಗಿದೆ. ಇದನ್ನೂ ಓದಿ: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಒಲವು ಕಂಡು ಮೋದಿಗೆ ನೋವಾಗಿದೆ: ಚಲುವರಾಯ ಸ್ವಾಮಿ

    ಒಟ್ಟಾರೆ ಬಾಳಿ ಬದುಕಬೇಕಾದ ವಯಸ್ಸಿನಲ್ಲಿ, ಇನ್ನು ಹಂತ ಹಂತವಾಗಿ ಉನ್ನತ ಹುದ್ದೆ ಅಲಂಕರಿಸುವ ಕನಸು ಕಂಡಿದ್ದ ಪ್ರತಿಮಾ ಕನಸು ಕಮರಿ ಹೋಗಿದೆ. ಇದನ್ನೂ ಓದಿ: ಉಚಿತ ಭಾಗ್ಯದಿಂದ ಪರಿಶಿಷ್ಟರ ಅಂತ್ಯಕ್ರಿಯೆಗೂ ಸರ್ಕಾರದ ಬಳಿ ದುಡ್ಡಿಲ್ಲ: ಬಿಎಸ್‌ವೈ

  • ಕ್ವಾರಿಯಲ್ಲಿ ಸ್ಫೋಟ ಪ್ರಕರಣ – ಮಾಲೀಕ ಸೇರಿ 7 ಜನ ಅರೆಸ್ಟ್

    ಕ್ವಾರಿಯಲ್ಲಿ ಸ್ಫೋಟ ಪ್ರಕರಣ – ಮಾಲೀಕ ಸೇರಿ 7 ಜನ ಅರೆಸ್ಟ್

    ಕೋಲಾರ: ಕೆ.ಬಿ ಹೊಸಹಳ್ಳಿಯ (KB Hosahalli) ಕಲ್ಲು ಕ್ವಾರಿಯಲ್ಲಿ ಬ್ಲಾಸ್ಟಿಂಗ್ ವೇಳೆ ಕಾರ್ಮಿಕ ಸಾವಿಗೀಡಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ವಾರಿ (Quarry) ಮಾಲೀಕ ಸೇರಿ ಏಳು ಜನರನ್ನು ವೇಮಗಲ್ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

    ಕ್ವಾರಿ ಮಾಲೀಕ ಅಬ್ದುಲ್ ರೆಹಮಾನ್, ಮ್ಯಾನೇಜರ್ ದೇವರಾಜ್ ಸೇರಿ ಒಟ್ಟು ಏಳು ಜನರನ್ನು ಬಂಧಿಸಲಾಗಿದೆ. ತಲೆ ಮರೆಸಿಕೊಂಡಿರುವ ಉಳಿದ ನಾಲ್ಕು ಜನರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಅಲ್ಲದೆ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ (Department of Mines and Earth Sciences) ಅಧಿಕಾರಿಗಳು ಹಾಗೂ ಕೋಲಾರ (Kolar) ಎಸ್‍ಪಿ ನಾರಾಯಣ್ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಶವ ಸಂಸ್ಕಾರದ ವೇಳೆ ಕುತ್ತಿಗೆಯಲ್ಲಿ ಹಗ್ಗದ ಗುರುತು ಪತ್ತೆ – ಈಗ ಕೊಲೆ ಕೇಸ್ ದಾಖಲು

    ಬುಧವಾರ ರಾತ್ರಿ ನಡೆದ ಸ್ಫೋಟದಲ್ಲಿ ಯಾದಗಿರಿ (Yadgir) ಮೂಲದ ಕಾರ್ಮಿಕ ಸೋಮು ಜಾದವ್ ಎಂಬ ಕಾರ್ಮಿಕ ಸಾವನ್ನಪ್ಪಿದ್ದ. ಘಟನೆಯಲ್ಲಿ ಗೋಪಿ ಎಂಬುವರಿಗೆ ಗಂಭೀರ ಗಾಯವಾಗಿತ್ತು. ಈ ಸಂಬಂಧ ಜಿಲೆಟಿನ್ ಸ್ಫೋಟದಲ್ಲಿ ನಿರ್ಲಕ್ಷ್ಯ ವಹಿಸಿದ್ದ ಕ್ವಾರಿ ಮಾಲೀಕ ಸೇರಿದಂತೆ ಎಂಜಿನಯರ್‍ಗಳು ಹಾಗೂ ಇನ್ನಿತರ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಐಪಿಎಲ್ ಬೆಟ್ಟಿಂಗ್ ಹಣಕ್ಕಾಗಿ ಯುವಕನ ಕೊಲೆ

  • ಅಕ್ರಮ ಮರಳು ಅಡ್ಡೆ ಮೇಲೆ ದಾಳಿ – ಅಧಿಕಾರಿಗಳ ಮೇಲೆ ಕಲ್ಲು ತೂರಾಟ

    ಅಕ್ರಮ ಮರಳು ಅಡ್ಡೆ ಮೇಲೆ ದಾಳಿ – ಅಧಿಕಾರಿಗಳ ಮೇಲೆ ಕಲ್ಲು ತೂರಾಟ

    – ವಾಹನದ ಗಾಜು ಪುಡಿ ಪುಡಿ

    ಚಿಕ್ಕೋಡಿ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ನಡೆಸುವಾಗ ಅಕ್ರಮ ದಂಧೆಕೋರರ ಗುಂಪು ಅಧಿಕಾರಿಗಳ ಮೇಲೆ ಕಲ್ಲು ತೂರಿದ್ದರಿಂದ ವಾಹನದ ಗಾಜು ಪುಡಿ ಪುಡಿಯಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಚಿಲಭಾಂವಿ ಗ್ರಾಮದಲ್ಲಿ ನಡೆದಿದೆ.

    ಹುಕ್ಕೇರಿ ತಾಲೂಕಿನ ಹಿನ್ನೀರು ಪ್ರದೇಶದಲ್ಲಿ ಸಂಗ್ರಹವಾಗುವ ಮರಳನ್ನು ಅಕ್ರಮವಾಗಿ ಸಂಗ್ರಹಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ಒಂದು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಸಮೀಪದ ಮತ್ತೊಂದು ಅಡ್ಡೆಗೆ ದಾಳಿ ವೇಳೆ ಮರಳು ಸಂಗ್ರಹಿಸುತ್ತಿದ್ದ 20 ಜನರ ಗುಂಪು ಅಧಿಕಾರಿಗಳ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದೆ. ಬಳಿಕ ಜೀವಭಯದಿಂದ ಅಧಿಕಾರಿಗಳು ಅಲ್ಲಿಂದ ಹಿಂದಿರುಗಿದ್ದಾರೆ. ಇದನ್ನೂ ಓದಿ:ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಮೇಲಿನ ಹೆಲ್ಮೆಟ್ ನುಂಗಿದ ಆನೆ- ವೀಡಿಯೋ ವೈರಲ್

    ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಜಾಮೀನು ರಹಿತ ಪ್ರಕರಣ ದಾಖಲಿಸಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಹುಕ್ಕೇರಿ ತಹಶೀಲ್ದಾರ್ ಡಾ.ಡಿ.ಎಚ್ ಹೂಗಾರ ತಿಳಿಸಿದ್ದಾರೆ. ಕರ್ತವ್ಯಕ್ಕೆ ಅಡ್ಡಿ ಹಾಗೂ ಸರ್ಕಾರಿ ಆಸ್ತಿ ಹಾನಿ ಮಾಡಿದ ಹಿನ್ನೆಲೆಯಲ್ಲಿ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕಲ್ಲು ಗಣಿಗಾರಿಕೆಗೆ ಜನ ತತ್ತರ – ನೂರಾರು ಮನೆಗಳು ಬಿರುಕು

    ಕಲ್ಲು ಗಣಿಗಾರಿಕೆಗೆ ಜನ ತತ್ತರ – ನೂರಾರು ಮನೆಗಳು ಬಿರುಕು

    ಬೆಂಗಳೂರು: ಐದು ಕ್ರಷರ್ ಗಳಿಂದ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದ ನೆಲಮಂಗಲ ತಾಲೂಕಿನ ಗ್ರಾಮದ ಜನ ತತ್ತರಿಸಿ ಹೋಗಿದ್ದಾರೆ. ಮಾಲೀಕರ ದುರಾಸೆಯಿಂದ ನಿರ್ಮಾಣವಾಗಿರುವ ಐದು ಕಲ್ಲುಗಾಣಿಗಾರಿಕೆ ತಾಣಗಳಿಂದ, ಕ್ರಷರ್‍ಗೆ ಹೊಂದಿಕೊಂಡಿರುವ ಗ್ರಾಮದ ಜನರ ಬದುಕು ಹೇಳತೀರದಾಗಿದೆ.

    ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಗಡಿಯಂಚಿನಲ್ಲಿರುವ ಮಾಕೇನಹಳ್ಳಿಯ ಗ್ರಾಮಸ್ಥರು, ಪ್ರತಿನಿತ್ಯ ಗಣಿಗಾರಿಕೆಯ ಸ್ಫೋಟದ ಭಯಾನಕ ಶಬ್ಧ ಹಾಗೂ ಧೂಳಿನಿಂದ ಭಯಭೀತರಾಗಿದ್ದಾರೆ. ಕಲ್ಲು ಗಣಿಗಾರಿಕೆಯಿಂದ ಗ್ರಾಮದಲ್ಲಿನ ನೂರಾರು ಮನೆಗಳು ಸಹ ವಿಪರೀತ ಬಿರುಕು ಬಿಟ್ಟಿವೆ. ಯಾವಾಗ ಮನೆ ಬೀಳುತ್ತದೆಯೋ ಎಂಬ ಆತಂಕದಲ್ಲೇ ಕಾಲ ಕಳೆಯುತ್ತಿದ್ದಾರೆ.

    ನಿತ್ಯ ನೂರಾರು ಲಾರಿಗಳಲ್ಲಿ ಕಲ್ಲಿನ ಉತ್ಪನ್ನಗಳಾದ ಜಲ್ಲಿ, ಎಂ.ಸ್ಯಾಂಡ್, ಇನ್ನಿತರ ಕಲ್ಲಿನ ಉತ್ಪನ್ನಗಳನ್ನು ಸಾಗಿಸಲು ಬೆಟ್ಟದಂತಿರುವ ಕಲ್ಲು ಬಂಡೆಯನ್ನು ಕರಗಿಸುತ್ತಿದ್ದಾರೆ. ಹರ್ಷ, ಸೂರ್ಯ, ವಿನಾಯಕ, ಎಸ್.ಎಲ್.ಎನ್, ಎಸ್.ಎಲ್.ಆರ್ ಎಂಬ ಕಂಪನಿಗಳ ಗಣಿಗಾರಿಕೆ ಜೋರಾಗಿದೆ. ಈ ಗಣಿಗಾರಿಕೆಯಿಂದ ಮಾಕೇನಹಳ್ಳಿ ಗ್ರಾಮದ ನೂರಾರು ಮನೆಗಳೆಲ್ಲ ಬಿರುಕು ಬಿಟ್ಟಿದ್ದು, ಮನೆ ಬೀಳುವ ಭಯದಲ್ಲೇ ಗ್ರಾಮಸ್ಥರು ಬದುಕು ಸಾಗಿಸುತ್ತಿದ್ದಾರೆ.

    ಮನೆಯ ಗೋಡೆಗಳು ಸಂಪೂರ್ಣ ಹಾಳಾಗುವ ಪರಿಸ್ಥಿತಿಗೆ ಬಂದು ತಲುಪಿದ್ದು, ಇನ್ನೊಂದೆಡೆ ಕಲ್ಲು ಗಣಿಗಾರಿಕೆಯ ವಿಪರೀತ ಶಬ್ದದಿಂದ ರಾತ್ರಿ ವೇಳೆ ಮಲಗಲು ಸಾಧ್ಯವಾಗದೇ, ಬಾಣಂತಿ, ಚಿಕ್ಕಮಕ್ಕಳು ನಿದ್ರೆಯಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ.

    ಗ್ರಾಮ ಪಂಚಾಯತಿಯಿಂದ ಹಿಡಿದು ಮೇಲ್ಮಟ್ಟದ ಆಡಳಿತ ವ್ಯವಸ್ಥೆಯವರೆಗೆ ಎಲ್ಲ ಜನಪ್ರತಿನಿಧಿಗಳು ಕ್ರಷರ್‍ಗಳಿಂದ ಲಂಚ ತೆಗೆದುಕೊಳ್ಳುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಹ ಜಾಣ ಕುರುಡನ್ನು ಪ್ರದರ್ಶಿಸುತ್ತಿದೆ. ರಾಶಿಗಟ್ಟಲೇ ಲಾರಿ ಲೋಡ್‍ಗಳಲ್ಲಿ ಸಾಗಿಸುವ ಜಲ್ಲಿ, ಎಂ.ಸ್ಯಾಂಡ್‍ಗಳಿಗೆ ರಾಜಕಾರಣಿಗಳೇ ಶ್ರೀ ರಕ್ಷೆಯಾಗಿದ್ದಾರೆ ಎಂದು ಮಾಕೇನಹಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ.

    ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ನೆಪ ಮಾತ್ರಕ್ಕೆ ಕಾಣದ ಮರದ ಕೆಳಗೆ ಕುಳಿತು ಜಾಣ ಮೌನದಲ್ಲಿ ತೊಡಗಿರುವುದು ಅನುಮಾನ ಮೂಡಿಸಿದೆ.