Tag: ಗಣೇಶ್ ರಾವ್

  • ದರ್ಶನ್ ಪರವಾಗಿ ಮಾತನಾಡಲು ರೇಣುಕಾಸ್ವಾಮಿ ಮನೆಗೆ ಹೋಗಿರಲಿಲ್ಲ: ಗಣೇಶ್ ರಾವ್ ಸ್ಪಷ್ಟನೆ

    ದರ್ಶನ್ ಪರವಾಗಿ ಮಾತನಾಡಲು ರೇಣುಕಾಸ್ವಾಮಿ ಮನೆಗೆ ಹೋಗಿರಲಿಲ್ಲ: ಗಣೇಶ್ ರಾವ್ ಸ್ಪಷ್ಟನೆ

    ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಕುಟುಂಬಕ್ಕೆ ವಿನೋದ್ ರಾಜ್ ಭೇಟಿ ನೀಡಿದ ಬೆನ್ನಲ್ಲೇ ನಟ ಗಣೇಶ್ ರಾವ್ ಕೂಡ ಭೇಟಿ ಕೊಟ್ಟಿದ್ದರು. ದರ್ಶನ್ ಪರವಾಗಿ ಮಾತನಾಡಲು ರೇಣುಕಾಸ್ವಾಮಿ ಮನೆಗೆ ಹೋಗಿದ್ರು ಎಂದು ಟೀಕೆಗಳು ವ್ಯಕ್ತವಾದ ಹಿನ್ನೆಲೆ ಗಣೇಶ್ ರಾವ್ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ. ದರ್ಶನ್‌ (Darshan) ಪರ ವಹಿಸಿ ಎಲ್ಲೂ ಮಾತನಾಡಿಲ್ಲ ಎಂದಿದ್ದಾರೆ. ಇದನ್ನೂ ಓದಿ:ಪರಿಸರ ಸ್ನೇಹಿ ಇನ್ವಿಟೇಷನ್ ಮೂಲಕ ಮಾದರಿಯಾದ ನಟಿ ಸೋನಲ್, ತರುಣ್ ಸುಧೀರ್

    ರೇಣುಕಾಸ್ವಾಮಿ ಕುಟುಂಬ ಹೀನಾಯ ಪರಿಸ್ಥಿತಿಯಲ್ಲಿದೆ. ಮಾನವೀಯತೆ ದೃಷ್ಟಿಯಿಂದ ಅವರ ಕುಟುಂಬಕ್ಕೆ ಸಾಂತ್ವನ ಹೇಳಿ ಬಂದೆವು. ಈಗ ಚರ್ಚಿಸಿ ದ್ವೇಷ ಸಾಧಿಸುವ ಶಕ್ತಿ ಅವರ ಕುಟುಂಬಕ್ಕೆ ಇಲ್ಲ. ಯಾವುದೇ ಮುಲಾಜಿಗೆ ಒಳಗಾಗದೇ ಕರ್ನಾಟಕ ಪೊಲೀಸ್ ನಿಷ್ಠೆ ವಹಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಲು ಹೇಳೋಕೆ ಭೇಟಿ ನೀಡಿದೆವು. ದರ್ಶನ್ ಪರ ವಹಿಸಿಕೊಂಡು ಮಾತನಾಡಿಲ್ಲ ಎಂದು ಟೀಕೆಗಳಿಗೆ ಗಣೇಶ್ ರಾವ್ (Ganesh Rao) ಕ್ಲ್ಯಾರಿಟಿ ನೀಡಿದ್ದಾರೆ.

    ದರ್ಶನ್ ವ್ಯಕ್ತಿತ್ವದ ಬಗ್ಗೆ ಮಾತನಾಡಿದೆ ಅಷ್ಟೇ. ಆ ಕೃತ್ಯ ದರ್ಶನ್ ಮಾಡಿರಲ್ಲ ಅಂತ ಹೇಳಿದೆ. ದರ್ಶನ್ ಮಾಡಿಯೇ ಇಲ್ಲ ಅಂತ ಎಲ್ಲೂ ಸಮರ್ಥಿಸಿಕೊಂಡಿಲ್ಲ. ರೇಣುಕಾಸ್ವಾಮಿ ಮೇಲಿನ ಕೃತ್ಯವನ್ನು ಬೆಂಬಲಿಸಿ ಮಾತನಾಡಲಿಲ್ಲ ಎಂದಿದ್ದಾರೆ. ಇದೆಲ್ಲಾ ಕೆಟ್ಟ ಸಮಯದಲ್ಲಿ ಆಗೋಗಿದೆ ಎಂದಿದ್ದಾರೆ. ಈ ಘಟನೆಯಿಂದ ಚಿತ್ರರಂಗದ ಮೇಲೆ ಕಪ್ಪು ಚುಕ್ಕೆ ಏನೋ ಗೊತ್ತಿಲ್ಲ. ಶೂಟಿಂಗ್ ನಡೆಯುತ್ತಲೇ ಇದೆ. ಅದು ಯಾವುದು ನಿಲ್ಲೋದಿಲ್ಲ. ಈ ಘಟನೆ ಸಮಾಜದ ಮೇಲೆಯೂ ತುಂಬಾ ಪರಿಣಾಮ ಬೀರುತ್ತದೆ ಎಂದು ಗಣೇಶ್ ರಾವ್ ಮಾತನಾಡಿದ್ದಾರೆ.

    ರೇಣುಕಾಸ್ವಾಮಿ ಕಡೆಯಿಂದ ಕೂಡ ಏನೋ ಹೆಚ್ಚು ಕಮ್ಮಿ ಆಗಿದೆ ಅಂತಾ ಕೇಳಿ ಬಂದಿದೆ. ಆದರೆ ದರ್ಶನ್ ಮತ್ತು ಅವರ ತಂಡ ಕಾನೂನನ್ನ ಕೈಗೆ ತೆಗೆದುಕೊಳ್ಳಬಾರದಿತ್ತು. ತಪ್ಪು ಮಾಡಿದ್ರೆ ಖಂಡಿತಾ ಶಿಕ್ಷೆ ಆಗಲಿ. ತಪ್ಪು ಮಾಡಿದವರು ಎಷ್ಟೇ ದೊಡ್ಡ ವ್ಯಕ್ತಿಗಳು ಆದ್ರೂ ಜೈಲಿಗೆ ಹೋಗಿ ಬಂದವರು ಇದ್ದಾರೆ. ಅದಕ್ಕಾಗಿ ನ್ಯಾಯಾಲಯ ಇದೆ. ಅವರು ತೀರ್ಮಾನ ಮಾಡುತ್ತಾರೆ. ಇನ್ನೂ ರೇಣುಕಾಸ್ವಾಮಿ ಫೋಟೋಗೆ ಹೂ ಹಾಕಿದ್ದೇ ತಪ್ಪು ಅನ್ನೋ ಹಾಗೆ ಕೆಲವರು ಕಾಮೆಂಟ್ ಮಾಡುತ್ತಿದ್ದಾರೆ. ಸಾವಿನ ಮನೇಲಿ ಕುಳಿತು ದರ್ಶನ್ ಪರ ಮಾತಾಡಿದರು ಎಂದು ಹೇಳಲು ಶುರು ಮಾಡಿದ್ರು ಎಂದು ಗಣೇಶ್ ರಾವ್ ಹೇಳಿದ್ದಾರೆ.

  • ನಾಯಕಿಗಾಗಿ ‘ಯಾವ ಸೀಮೆ ಅಂದದರಸಿ’ ಎಂದ ಗಾಯಕ ವಿಜಯ್ ಪ್ರಕಾಶ್

    ನಾಯಕಿಗಾಗಿ ‘ಯಾವ ಸೀಮೆ ಅಂದದರಸಿ’ ಎಂದ ಗಾಯಕ ವಿಜಯ್ ಪ್ರಕಾಶ್

    ರಾಜೀವ್‌ಚಂದ್ರಕಾಂತ್ ಈ ಹಿಂದೆ ನಾಗಾಭರಣ ಅವರಲ್ಲಿ ಕೆಲಸ ಕಲಿತುಕೊಂಡು, ನಂತರ 75ಕ್ಕೂ ಹೆಚ್ಚು ಚಿತ್ರಗಳಿಗೆ ಪೋಸ್ಟರ್ ಡಿಸೈನ್ ಮಾಡಿದ ಅನುಭವ ಇದೆ. ಇದರಿಂದಲೇ ಸಿನಿಮಾಕ್ಕೆ ರಚನೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಎಲ್ಲರೂ ನಾಯಕನಿಗೆ ಕಥೆ ಬರೆದರೆ, ಇವರು ಖಳನಾಯಕನ ಮೇಲೆ ಕಥೆಯನ್ನು ಬರೆದಿರುವುದು ವಿಶೇಷ. ’ಸಲಗ’ದಲ್ಲಿ ಸೂರಿಯಣ್ಣ ಪಾತ್ರ ನಿರ್ವಹಿಸಿ ಗುರುತಿಸಿಕೊಂಡಿದ್ದ ದಿನೇಶ್‌ಕುಮಾರ್.ಡಿ ಖತರ್‌ನಾಕ್ ಖಳನಾಯಕನಾಗಿ ಹುಲಿಯಾ ಹೆಸರಿನಲ್ಲಿ ಕಾಣಿಸಿಕೊಳ್ಳುವ ಜತೆಗೆ ಡಿಜೆ ಪ್ರಕಾಶ್ ಸಿನಿ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದಾರೆ.

    ನಾಯಕಿ ಕುರಿತಂತೆ ಹೇಳುವ ’ಯಾವ ಸೀಮೆ ಅಂದದರಸಿ ಕಂಡರೆಲ್ಲೊ ಇವಳೆ, ಎದೆ ಕದವ ತೆರೆದು ಎದುರೆ ಬಂದು ನಿಂತಳೇನು ಅವಳೆ’ ಸಾಲಿನ ಗೀತೆಗೆ ವಿಜಯಪ್ರಕಾಶ್ ಹಾಡುವ ಗೀತೆಯನ್ನು ನಾದಬ್ರಹ್ಮ ಹಂಸಲೇಖ ಸ್ಟುಡಿಯೋದಲ್ಲಿ ಧ್ವನಿಮುದ್ರಣ ಕಾರ್ಯ ನಡೆಸಲಾಯಿತು.  ಸಂಗೀತ ಕೆ.ಎಂ.ಇಂದ್ರ ಅವರದಾಗಿದೆ. ಇದನ್ನೂ ಓದಿ:ಅಫೇರ್ ಆರೋಪ ನಂತರ `ಅಣ್ಣ-ತಂಗಿ’ ಆಗಿಬಿಟ್ರಾ ನರೇಶ್-ಪವಿತ್ರಾ!

    ರಾಮಾಪುರ ಎಂಬ ಊರು, ಮಜ್ಜೇನಹಳ್ಳಿ ಎನ್ನುವ ಪಟ್ಟಣದಲ್ಲಿ 1990ರಂದು ನಡೆಯುವ ಕಾಲ್ಪನಿಕ ಘಟನೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಎಂಟು ಗಡ್ಡಧಾರಿಗಳ ಸುತ್ತ ಸಾಗುವ ಪಯಣದಲ್ಲಿ ಏರುಪೇರು ಉಂಟಾಗುತ್ತದೆ. ಅದು ಏನೆಂಬುದನ್ನು ಕುತೂಹಲದ ಮೂಲಕ ತೋರಿಸಲಾಗುವುದು. ತಾರಗಣದಲ್ಲಿ ಪ್ರವೀಣ್, ನಮ್ರತಾ, ಗಣೇಶ್‌ರಾವ್, ಅವಿನಾಶ್, ರಮೇಶ್‌ಭಟ್, ಬೆನಕನಂಜಪ್ಪ, ಪ್ರಶಾಂತ್‌ಸಿದ್ದಿ, ನಂಜುಂಡ ಮುಂತಾದವರು ನಟಿಸಿದ್ದಾರೆ. ಛಾಯಾಗ್ರಹಣ ವೀರೇಶ್, ಸಾಹಸ ಪಳನಿ-ಜಾಗ್ವಾರ್‌ ಸಣ್ಣಪ್ಪ ಅವರದಾಗಿದೆ. ಕೆ.ಜಿ.ಎಫ್, ಕೋಲಾರ ಕಡೆಗಳಲ್ಲಿ 45 ದಿನಗಳ ಕಾಲ ಒಂದೇ ಹಂತದಲ್ಲಿ ಚಿತ್ರೀಕರಣ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

  • ‘ಮಾರಿಗುಡ್ಡದ ಗಡ್ಡಧಾರಿಗಳಿ’ಗಾಗಿ ಹಾಡಿದ ಬಿ.ಜಯಶ್ರೀ

    ‘ಮಾರಿಗುಡ್ಡದ ಗಡ್ಡಧಾರಿಗಳಿ’ಗಾಗಿ ಹಾಡಿದ ಬಿ.ಜಯಶ್ರೀ

    ರಾಜೀವ್‌ ಚಂದ್ರಕಾಂತ್ ಈ ಹಿಂದೆ ನಾಗಾಭರಣ ಅವರಲ್ಲಿ ಕೆಲಸ ಕಲಿತುಕೊಂಡು, ನಂತರ 75ಕ್ಕೂ ಹೆಚ್ಚು ಚಿತ್ರಗಳಿಗೆ ಪೋಸ್ಟರ್ ಡಿಸೈನ್ ಮಾಡಿದ ಅನುಭವ ಇದೆ. ಇದರಿಂದಲೇ ಸಿನಿಮಾಕ್ಕೆ ರಚನೆ,ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಎಲ್ಲರೂ ನಾಯಕನಿಗೆ ಕಥೆ ಬರೆದರೆ, ಇವರು ಖಳನಾಯಕನ ಮೇಲೆ ಕಥೆಯನ್ನು ಬರೆದಿರುವುದು ವಿಶೇಷ. ’ಸಲಗ’ದಲ್ಲಿ ಸೂರಿಯಣ್ಣ ಪಾತ್ರ ನಿರ್ವಹಿಸಿ ಗುರುತಿಸಿಕೊಂಡಿದ್ದ ದಿನೇಶ್‌ಕುಮಾರ್.ಡಿ ಖತರ್‌ನಾಕ್ ಖಳನಾಯಕನಾಗಿ ಹುಲಿಯಾ ಹೆಸರಿನಲ್ಲಿ ಕಾಣಿಸಿಕೊಳ್ಳುವ ಜತೆಗೆ ಡಿಜೆ ಪ್ರಕಾಶ್ ಸಿನಿ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದಾರೆ.

    ಒಂದು ವಿಶೇಷ ಸನ್ನಿವೇಶದಲ್ಲಿ ಬರುವ ’ಸಂಜೇಲಿ ಹೊಯ್ದಾವೋ ಮಂಜಿನ ಚಿತ್ತಾರ, ಗಾಟಿಯ ಏರಿಳಿದು ಹೋಯ್ತಾವೋ ನೇಸಾರ’ ಸಾಲಿನ ಗೀತೆಗೆ ನಟಿ, ಪದ್ಮಶ್ರೀ ಬಿ.ಜಯಶ್ರೀ ಹಾಡುವ ಗೀತೆಯನ್ನು ನಾದಬ್ರಹ್ಮ ಹಂಸಲೇಖಾ ಸ್ಟುಡಿಯೋದಲ್ಲಿ ಧ್ವನಿಮುದ್ರಣ ಕಾರ್ಯ ನಡೆಸಲಾಯಿತು.  ಸಂಗೀತ ಕೆ.ಎಂ.ಇಂದ್ರ ಅವರದಾಗಿದೆ. ರಾಮಾಪುರ ಎಂಬ ಊರು, ಮಜ್ಜೇನಹಳ್ಳಿ ಎನ್ನುವ ಪಟ್ಟಣದಲ್ಲಿ 1990ರಂದು ನಡೆಯುವ ಕಾಲ್ಪನಿಕ ಘಟನೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಎಂಟು ಗಡ್ಡಧಾರಿಗಳ ಸುತ್ತ ಸಾಗುವ ಪಯಣದಲ್ಲಿ ಏರುಪೇರು ಉಂಟಾಗುತ್ತದೆ. ಅದು ಏನೆಂಬುದನ್ನು ಕುತೂಹಲದ ಮೂಲಕ ತೋರಿಸಲಾಗುವುದು. ಇದನ್ನೂ ಓದಿ:ಕಿಚ್ಚ ಸುದೀಪ್- ರಕ್ಷಿತ್ ಶೆಟ್ಟಿ ನಡುವೆ ಏನಿದು ಕೋಲ್ಡ್ ವಾರ್!

    ತಾರಗಣದಲ್ಲಿ ಪ್ರವೀಣ್, ನಮ್ರತಾ, ಗಣೇಶ್‌ರಾವ್, ಅವಿನಾಶ್, ರಮೇಶ್‌ಭಟ್, ಬೆನಕನಂಜಪ್ಪ, ಪ್ರಶಾಂತ್‌ಸಿದ್ದಿ,ನಂಜುಂಡ ಮುಂತಾದವರು ನಟಿಸಿದ್ದಾರೆ. ಛಾಯಾಗ್ರಹಣ ವೀರೇಶ್, ಸಾಹಸ ಪಳನಿ-ಜಾಗ್ವಾರ್‌ಸಣ್ಣಪ್ಪ ಅವರದಾಗಿದೆ. ಕೆ.ಜಿ.ಎಫ್, ಕೋಲಾರ ಕಡೆಗಳಲ್ಲಿ 45 ದಿನಗಳ ಕಾಲ ಒಂದೇ ಹಂತದಲ್ಲಿ ಚಿತ್ರೀಕರಣ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

  • ಅಣ್ಣಾವ್ರ ಕೈ ಸ್ಪರ್ಶಿಸಿದ್ದೇ ನನ್ನ ಭಾಗ್ಯ: ನಟ ಗಣೇಶ್ ರಾವ್ ಕೇಸರ್ಕರ್

    ಅಣ್ಣಾವ್ರ ಕೈ ಸ್ಪರ್ಶಿಸಿದ್ದೇ ನನ್ನ ಭಾಗ್ಯ: ನಟ ಗಣೇಶ್ ರಾವ್ ಕೇಸರ್ಕರ್

    ಟನೆಯ ವ್ಯಾಮೋಹಕ್ಕೆ ಸಿಲುಕಿ ಕೈಯಲ್ಲಿ ಸ್ವಂತ ಕೆಲಸವಿದ್ರೂ ಕಲಾ ಸರಸ್ವತಿಯ ಆರಾಧನೆಗೆ ಬಣ್ಣದ ಲೋಕಕ್ಕೆ ಕಾಲಿಟ್ಟು ಚಿಕ್ಕ ಚಿಕ್ಕ ಪಾತ್ರಗಳಲ್ಲೇ ಖುಷಿಪಡುತ್ತಾ ಇಂದು ಸಾಕಷ್ಟು ಹೆಸರು ಗಳಿಸಿರುವ ನಟ ಗಣೇಶ್ ರಾವ್ ಕೇಸರ್ಕರ್. ತಮ್ಮ 20 ವರ್ಷಗಳ ಕಿರುತೆರೆ, ಹಿರಿತೆರೆ ಜರ್ನಿಯ ಬಗ್ಗೆ ನಮ್ಮೊಂದಿಗೆ ಮಾತನಾಡಿದ್ದಾರೆ.

    * ನಿಮ್ಮ ಹಿನ್ನೆಲೆ ಬಗ್ಗೆ ಹೇಳಿ..
    ಮೂಲತಃ ಕೊಳ್ಳೆಗಾಲದವನು. ನಮ್ಮ ತಂದೆ ಮಿಲಿಟರಿ ಅಧಿಕಾರಿ. ನಾನು ಡಿಪ್ಲೋಮ ಇನ್ ಆಟೋಮೊಬೈಲ್ ಎಂಜಿನಿಯರಿಂಗ್ ಮುಗಿಸಿದ್ದೇನೆ. ಹೈಸ್ಕೂಲ್‍ನಲ್ಲಿದ್ದಾಗ ನಾಟಕವೊಂದಕ್ಕೆ ಬಣ್ಣ ಹಚ್ಚಿದ್ದೆ. ಅದರಲ್ಲಿ ನಾನು ಬಹುಮಾನ ಪಡೆದುಕೊಂಡಿದ್ದೆ. ಅಂದು ಆ ಸಂದರ್ಭ ನನಗೆ ಬಹಳ ಖುಷಿ ಕೊಡ್ತು. ನಾನು ಕಲಾವಿದನಾಗಬೇಕೆಂಬ ಆಸೆ ಮೊಳಕೆಯೊಡೆಯಿತು. ಆದರೆ ಮನೆಯಲ್ಲಿ ಮೊದಲಿನಿಂದಲೂ ಈ ಕ್ಷೇತ್ರದ ಬಗ್ಗೆ ಅಷ್ಟು ಆಸಕ್ತಿ ಇರಲಿಲ್ಲ. ಆದ್ದರಿಂದ ನಾನು ವಿದ್ಯಾಭ್ಯಾಸದ ನಂತರ ನಟನೆಯಲ್ಲಿ ತೊಡಗಿಕೊಳ್ಳೋಣ ಎಂದು ಓದಿನ ಕಡೆ ಗಮನ ಹರಿಸಿದೆ. ಇಂಜಿನಿಯರಿಂಗ್ ಮುಗಿದ ಬಳಿಕ ಕಲಾವಿದನಾಗಲು ನಿರ್ಧರಿಸಿದೆ.

    * ಕಿರುತೆರೆ ನಿಮ್ಮ ಕಲಾ ಬದುಕಿಗೆ ತಂದು ಕೊಟ್ಟ ಶ್ರೇಯಸ್ಸಿನ ಬಗ್ಗೆ ಹೇಳಿ..
    ವಿದ್ಯಾಭ್ಯಾಸದ ಬಳಿಕ ಸ್ವಂತ ಕೆಲಸದಲ್ಲಿ ತೊಡಗಿದ ನನಗೆ ಚಿತ್ರರಂಗದ ಪರಿಚಯಸ್ಥರೊಬ್ಬರ ಮೂಲಕ ಕಿರುತೆರೆಯಲ್ಲಿ ನಟಿಸಲು ಅವಕಾಶ ದೊರೆಯಿತು. ನಾನು ಆರಡಿ ಎತ್ತರ ಅಷ್ಟೇ ಪರ್ಸನಾಲಿಟಿ ಇದ್ದಿದ್ದರಿಂದ ‘ಮಂಜುಕರಗಿತು’ ಧಾರಾವಾಹಿಯಲ್ಲಿ ಪೊಲೀಸ್ ಅಧಿಕಾರಿಯ ಪಾತ್ರ ದೊರೆಯಿತು. ಆ ಪಾತ್ರ ಕ್ಲಿಕ್ ಆಗಿ ಕಿರುತೆರೆಯಲ್ಲಿ ‘ಭಾಗ್ಯಚಕ್ರ’, ‘ಮನ್ವಂತರ’, ‘ಗೋಧೂಳಿ’, ‘ಪುಣ್ಯಕೋಟಿ’ ಹೀಗೆ ಬ್ಯಾಕ್ ಟು ಬ್ಯಾಕ್ ಸೀರಿಯಲ್ ಗಳಲ್ಲಿ ಅಭಿನಯಿಸಿದೆ. ಇದರ ಜೊತೆಗೆ ಪೌರಾಣಿಕ ಧಾರಾವಾಹಿಗಳಲ್ಲಿ ಪಾತ್ರ ಮಾಡಿ ಸೈ ಎನಿಸಿಕೊಂಡೆ. ಕಲಾ ಸರಸ್ವತಿಯ ಆಶೀರ್ವಾದದಿಂದ ಇಂದು ಸುಮಾರು 4000ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ನಟಿಸಲು ಅವಕಾಶ ದೊರಕಿದೆ, ಈಗಲೂ ಅವಕಾಶ ಸಿಗುತ್ತಿದೆ. ಇದನ್ನೂ ಓದಿ: ಪರಿಶ್ರಮ ಪ್ರಯತ್ನದ ಜೊತೆ ತಾಳ್ಮೆ ಇರಲಿ: ನಟಿ ದೀಪಾ ಭಾಸ್ಕರ್

    * ಬೆಳ್ಳಿತೆರೆಯಲ್ಲಿ ನಿಮ್ಮ ಪಯಣ ಶುರುವಾಗಿದ್ದು ಹೇಗೆ?
    ಧಾರಾವಾಹಿಗಳಲ್ಲಿ ಒಂದಾದ ಮೇಲೆ ಒಂದರಂತೆ ನಟಿಸುತ್ತಾ ನನ್ನ ಪಾತ್ರಗಳ ಮೂಲಕ ಚಿತ್ರರಂಗದಿಂದಲೂ ಅವಕಾಶಗಳು ಬರಲು ಆರಂಭವಾಯಿತು. `ಚಾಮುಂಡಿ’ ಚಿತ್ರ ನಾನು ಮೊದಲು ನಟಿಸಿದ ಚಲನಚಿತ್ರ. ಅಲ್ಲಿಂದ ಚಿಕ್ಕ ಪುಟ್ಟ ಪಾತ್ರಗಳ ಮೂಲಕ ಸಿನಿಮಾದಲ್ಲಿ ನಟನೆ ಮಾಡುತ್ತಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡೆ. ಸುಮಾರು 200 ಸಿನಿಮಾಗಳಲ್ಲಿ ನಾನು ಪೋಷಕ ಪಾತ್ರಗಳಿಗೆ ಬಣ್ಣಹಚ್ಚಿದ್ದೇನೆ. ಈ ಮಧ್ಯೆ ನಾನು ನಮ್ಮವರು ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿದ್ದೇನೆ. `ಸಚ್ಚಿ’, `ಡಾನ್’, `ಶಾಸ್ತ್ರಿ’, `ತಂಗಿಗಾಗಿ’, `ನಂದ’, ‘ರಾಕ್ಷಸ’, `ಪಾರ್ಥ’ ಹೀಗೆ ಒಂದಾದ ಮೇಲೆ ಒಂದು ಸಿನಿಮಾಗಳಲ್ಲಿ ನಟಿಸುತ್ತಾ ಹೋದೆ. ಅಂಬರೀಶ್, ವಿಷ್ಣುವರ್ಧನ್, ರವಿಚಂದ್ರನ್, ಜಗ್ಗೇಶ್, ಶಿವಣ್ಣ ದರ್ಶನ್, ಸುದೀಪ್ ಸೇರಿದಂತೆ ಚಂದನವನದ ಎಲ್ಲಾ ಸ್ಟಾರ್ ನಟರು ಹಾಗೂ ಈಗಿನ ನವ ನಟರ ಜೊತೆಯೂ ನಟಿಸಿದ್ದೇನೆ. ಇದನ್ನೂ ಓದಿ: ನನ್ನ ಕಡೆ ಎಸೆದ ಕಲ್ಲುಗಳನ್ನು ಮೆಟ್ಟಿಲು ಮಾಡಿಕೊಂಡು ಬೆಳೆದೆ- ಪಾಪಾ ಪಾಂಡು ಖ್ಯಾತಿಯ ಚಿದಾನಂದ್

    * ನಿಮಗೆ ಖ್ಯಾತಿ ತಂದು ಕೊಟ್ಟ ಪಾತ್ರ ಯಾವುದು?
    ಪೊಲೀಸ್ ಇನ್ಸ್ ಪೆಕ್ಟರ್ ಪಾತ್ರಗಳು ನನಗೆ ಹೆಚ್ಚು ಖ್ಯಾತಿಯನ್ನು ತಂದುಕೊಟ್ಟಿದೆ. ನಾನು 200 ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದೇನೆ. ಅದರಲ್ಲಿ ಬಹುತೇಕ ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದೇ ಹೆಚ್ಚು. ಖಳನಟನಾಗಿ, ಪೊಲೀಸ್ ಅಧಿಕಾರಿಯಾಗಿ ನಟಿಸಿದ ಪಾತ್ರಗಳು ಸಿನಿಮಾದಲ್ಲಿ ನನಗೆ ಖ್ಯಾತಿಯನ್ನು ತಂದು ಕೊಟ್ಟಿದೆ. ಹೆಚ್ಚಾಗಿ ನನ್ನನ್ನು ಪೊಲೀಸ್ ರೋಲ್ ಮಾಡಲೆಂದೇ ಈಗಲೂ ಕರೆಯುತ್ತಾರೆ ಇದು ನನಗೆ ಒಂದು ರೀತಿಯ ಹೆಮ್ಮೆಯ ವಿಚಾರ ಎನ್ನಿಸುತ್ತೆ.  ಇದನ್ನೂ ಓದಿ: ಹಂಡ್ರೆಡ್ ಪರ್ಸೆಂಟ್ ಹ್ಯಾಪಿ ನಾನು- ಖ್ಯಾತ ಕಿರುತೆರೆ ನಟ, ನಿರ್ದೇಶಕ ರವಿಕಿರಣ್

    * ನೀವು ಎಂದೂ ಮರೆಯದ ಘಟನೆ ಯಾವುದು?
    ಅಣ್ಣಾವ್ರು ಕಾಡಿನಿಂದ ಬಂದ ನಂತರ ಅವರ ನೇತೃತ್ವದಲ್ಲಿ ಚಿತ್ರರಂಗದಲ್ಲಿ ಹೋರಾಟ ನಡೆಯಿತು. ರಾಜ್ಯದಲ್ಲಿ ಕನ್ನಡ ಸಿನಿಮಾ ಬಿಡುಗಡೆಯಾದ ಆರು ವಾರದ ನಂತರ ಪರಭಾಷೆ ಸಿನಿಮಾ ಬಿಡುಗಡೆಯಾಗಬೇಕೆಂಬುದು ಆ ಹೋರಾಟದ ಉದ್ದೇಶ. ಈ ಸಮಯಯದಲ್ಲಿ ಡಾ.ರಾಜ್‍ಕುಮಾರ್ ಅವರ ಆರೋಗ್ಯ ಅಷ್ಟು ಚೆನ್ನಾಗಿರಲಿಲ್ಲ. ಅವರ ಕೈ ನಡುಗುತ್ತಿತ್ತು. ಆಗ ಅವರ ಪಕ್ಕದಲ್ಲಿ ನಾನಿದ್ದೆ. ಅಣ್ಣಾವ್ರು ನನ್ನ ಕೈ ಮೇಲೆ ಕೈಯಿಟ್ಟು ಸ್ವಲ್ಪ ಹಿಡಿದುಕೋ ಎಂದು ಹೇಳಿದ್ರು. ಅವರ ಕೈ ಸ್ಪರ್ಶ ನನಗೊಂದು ರೋಮಾಂಚನದ ಅನುಭವ ನೀಡಿತು. ಅವರ ಭಾಷಣ ಮುಗಿಯುವವರೆಗೂ ಕೈಹಿಡಿದುಕೊಂಡೇ ಇದ್ದೆ. ಈಗಲೂ ಆ ಕ್ಷಣ ನನಗೆ ತುಂಬಾ ಖುಷಿ ಕೊಡುತ್ತೆ. ಅವರ ಜೊತೆ ನಟಿಸಲು ಆಗದಿದ್ದರೂ ಅವರ ಕೈ ಹಿಡಿದುಕೊಳ್ಳುವ ಭಾಗ್ಯ ನನ್ನದಾಗಿತಲ್ಲ ಎಂಬ ಧನ್ಯತಾ ಭಾವ ನನ್ನಲ್ಲಿದೆ. ಇದನ್ನೂ ಓದಿ:ಸೋಲು-ಗೆಲುವನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸಿದ್ದೇನೆ, ಯಾವುದೇ ರಿಗ್ರೆಟ್ ಇಲ್ಲ- ನಟ ದಿಲೀಪ್ ರಾಜ್ 

    * ಚಿತ್ರರಂಗದಲ್ಲಿ ಎದುರಿಸಿದ ನೋವಿನ ಸಂಗತಿ
    ನಾನು ತುಂಬಾ ಇಷ್ಟಪಟ್ಟು ಈ ಕ್ಷೇತ್ರಕ್ಕೆ ಬಂದಿದ್ದೇನೆ. ಏನೇ ಆದರೂ ಕಲಾವಿದನಾಗೇ ಉಳಿಯಬೇಕು ಎಂದುಕೊಂಡಿದ್ದೇನೆ. ಆದ್ದರಿಂದ ಏನೇ ನೋವಾದರೂ ಸಹಿಸಿಕೊಳ್ಳಲೇಬೇಕು. ಅವಮಾನ, ಅಪಮಾನ ಆದಾಗ ಸಾಕಪ್ಪ ಬಿಟ್ಟು ಹೋಗೋಣ ಅನ್ನಿಸಿದ್ದು ಇದೆ. ಆದರೆ ನಾನು ನಟನೆಯಲ್ಲೇ ಸಾರ್ಥಕತೆ ಕಂಡುಕೊಂಡಿರೋದ್ರಿಂದ ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೇ ಮುಂದೆ ಸಾಗುತ್ತಿದ್ದೇನೆ.

    * ರಾಜಕೀಯ ರಂಗದಲ್ಲೂ ನೀವು ಗುರುತಿಸಿಕೊಂಡಿದ್ದೀರಿ?
    ನನಗೆ ಸಾಮಾಜಿಕ, ಸಮಾಜಮುಖಿ ಕೆಲಸದಲ್ಲಿ ಮೊದಲಿನಿಂದಲೂ ಆಸಕ್ತಿ. ಸಮಾಜದಲ್ಲಿ ಒಂದೊಳ್ಳೆ ಸ್ಥಾನದಲ್ಲಿ ಗುರುತಿಸಿಕೊಳ್ಳಬೇಕೆಂಬ ಬಯಕೆ ಇದೆ. ಆ ಮೂಲಕ ಜನರ ಸೇವೆ ಮಾಡಬೇಕು ಎಂದುಕೊಂಡಿದ್ದೇನೆ ಇದೇ ನಿಟ್ಟಿನಲ್ಲಿ ರಾಜಕೀಯ ರಂಗದಲ್ಲಿಯೂ ಸಕ್ರಿಯವಾಗಿದ್ದೇನೆ. ಇದನ್ನೂ ಓದಿ: ನಮ್ಮ ಅನುಭವಕ್ಕೆ ಈಗ ಬೆಲೆಯಿಲ್ಲ: ಹಿರಿಯ ನಟ, ರಂಗಭೂಮಿ ಕಲಾವಿದ ಶಂಕರ್ ಭಟ್

    * ಚಿತ್ರರಂಗದಲ್ಲಿ ನಿಮ್ಮ ಮುಂದಿನ ನಡೆ?
    ಒಳ್ಳೊಳ್ಳೆ ಪಾತ್ರಗಳಲ್ಲಿ ನಟಿಸುತ್ತಾ ಹೋಗಬೇಕು ಅನ್ನೋದೊಂದೇ ನನ್ನ ಮುಂದಿರುವ ಗುರಿ. ಸಿನಿಮಾ ನಿರ್ದೇಶನ ಮಾಡುವ ಪ್ಲಾನ್ ಕೂಡ ಇದೆ. ಕಥೆ ಕೂಡ ರೆಡಿ ಮಾಡುತ್ತಿದ್ದೇನೆ. ಇದರ ಬೆನ್ನಲ್ಲೇ ಕಂಠೀರವ ಸ್ಟುಡಿಯೋ ಅಧ್ಯಕ್ಷ ಸ್ಥಾನದ ಚುನಾವಣೆಗೆ ಬೇಡಿಕೆ ಇಟ್ಟಿದ್ದೇನೆ. ಸ್ಟುಡಿಯೋ ಅಭಿವೃದ್ಧಿಗೆ ನನ್ನದೇ ಆದ ಕೊಡುಗೆ ನೀಡಬೇಕು ಎಂಬ ಬಹುದೊಡ್ಡ ಕನಸಿದೆ.

    * ಪ್ರಸ್ತುತ ನಟಿಸುತ್ತಿರುವ ಸೀರಿಯಲ್ ಮತ್ತು ಸಿನಿಮಾಗಳು ಯಾವ್ಯಾವು.?
    ರವಿಬೋಪಣ್ಣ, ಕಿರಿಕ್ ಶಂಕ್ರ, ಯಾರ್ ಮಗ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದೇನೆ. ಕೆಲವು ಚಿತ್ರಗಳು ಬಿಡುಗಡೆಯಾಗಬೇಕಿದೆ. ಇದರ ಜೊತೆ ಚೈತನ್ಯ ನಿರ್ದೇಶನದ ಆಕೃತಿ ಧಾರಾವಾಹಿಯಲ್ಲಿಯೂ ನಟಿಸುತ್ತಿದ್ದೇನೆ.