Tag: ಗಣೇಶ್

  • ಕೇಸ್ ದಾಖಲಾಗುತ್ತಿದ್ದಂತೆ ನಾಪತ್ತೆ – ಬಂಧನದ ಭೀತಿಯಲ್ಲಿ ಕಂಪ್ಲಿ ಶಾಸಕ ಗಣೇಶ್

    ಕೇಸ್ ದಾಖಲಾಗುತ್ತಿದ್ದಂತೆ ನಾಪತ್ತೆ – ಬಂಧನದ ಭೀತಿಯಲ್ಲಿ ಕಂಪ್ಲಿ ಶಾಸಕ ಗಣೇಶ್

    ಬೆಂಗಳೂರು: ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಕಂಪ್ಲಿ ಶಾಸಕ ಗಣೇಶ್ ಅವರಿಗೆ ಬಂಧನದ ಭೀತಿ ಎದುರಾಗಿದೆ.

    ಬಿಡದಿಯ ಈಗಲ್‍ಟನ್ ರೆಸಾರ್ಟಿನಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆಗೈದ ಕಂಪ್ಲಿ ಶಾಸಕ ಗಣೇಶ್ ವಿರುದ್ಧ ಬಿಡದಿ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 323(ಹಲ್ಲೆ), 324(ದೊಣ್ಣೆಯಿಂದ ಹಲ್ಲೆ), 307(ಕೊಲೆ ಯತ್ನ), 504(ಉದ್ದೇಶ ಪೂರ್ವಕ ಶಾಂತಿ ಕದಡುವುದು) 506(ಜೀವ ಬೆದರಿಕೆ) ಅಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: `ಪಿಸ್ತೂಲ್ ಕೊಡಿ ಈತನನ್ನು ಇಲ್ಲೇ ಮುಗಿಸಿ, ಪ್ರಾಣ ತೆಗೆಯುತ್ತೇನೆ’ – ರೆಸಾರ್ಟ್ ಕಿತ್ತಾಟದ ಇಂಚಿಂಚು ಮಾಹಿತಿ ಕೊಟ್ಟ ಆನಂದ್ ಸಿಂಗ್

    ಕೇಸ್ ದಾಖಲಾಗುತ್ತಿದ್ದಂತೆ ಗಣೇಶ್ ನಾಪತ್ತೆಯಾಗಿದ್ದು, ಬಿಡದಿ ಪೊಲೀಸರು ಈಗ ಹುಡುಕಾಟ ನಡೆಸುತ್ತಿದ್ದಾರೆ. ರಾಮನಗರ ಡಿವೈಎಸ್ಪಿ ಪುರುಷೋತ್ತಮ್ ಹಾಗೂ ಬಿಡದಿ ಇನ್ಸ್ ಪೆಕ್ಟರ್ ಹರೀಶ್ ನೇತೃತ್ವದಲ್ಲಿ ಗಣೇಶ್ ಪತ್ತೆಗೆ ಮೂರು ತಂಡ ರಚನೆಯಾಗಿದೆ. ಇದನ್ನೂ ಓದಿ: ಆನಂದ್ ಸಿಂಗ್ ಮೇಲೆ ಹಲ್ಲೆ- ಕಾಂಗ್ರೆಸ್ಸಿನಿಂದ ಶಾಸಕ ಗಣೇಶ್ ಅಮಾನತು

    ಬಂಧನ ಭೀತಿಯಿಂದ ಪಾರಾಗಲು ಕೋರ್ಟ್ ಮೊರೆ ಹೋಗಿ ಜಾಮೀನು ಪಡೆಯಲು ಗಣೇಶ್ ಪ್ರಯತ್ನ ನಡೆಸುತ್ತಿದ್ದಾರೆ. ಕೊಲೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಗಣೇಶ್ ಬಂಧನವಾಗುವ ತನಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗದಿರಲು ಆನಂದ್ ಸಿಂಗ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

    ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಶಾಸಕ ಗಣೇಶ್ ಅವರನ್ನು ಅಮಾನತು ಮಾಡಲಾಗಿದೆ. ಕೆಪಿಸಿಸಿ ಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷದಿಂದ ಶಾಸಕ ಗಣೇಶ್ ಅವರನ್ನು ಅಮಾನತು ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ಸಮಿತಿ ರಚನೆ ಮಾಡಲಾಗಿದ್ದು, ಡಿಸಿಎಂ ಪರಮೇಶ್ವರ್, ಕೆ.ಜೆ ಜಾರ್ಜ್, ಕೃಷ್ಣಭೈರೇಗೌಡ ಅವರನ್ನೊಳಗೊಂಡ ಸಮಿತಿ ಆದಷ್ಟು ಶೀಘ್ರದಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ.

    ಆನಂದ್ ಸಿಂಗ್ ಅವರ ಜೊತೆ ಮಾತನಾಡಿ ಘಟನೆಯ ವಿವರವನ್ನು ಪಡೆಯಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಲಾಗಿದೆ ಎಂದು ಕೆಪಿಸಿಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ರೆಸಾರ್ಟಿನಲ್ಲಿ ಇಬ್ಬರು ಕಿತ್ತಾಡಿದ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫುಲ್ ಗರಂ ಆಗಿದ್ದು, ಶಿಸ್ತು ಕ್ರಮ ಕೈಗೊಳ್ಳಿ ಎಂದು ಹಿರಿಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದರು ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು. ಹೈಕಮಾಂಡ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ನಾಯಕರು ಸಭೆ ನಡೆಸಿ ಅಮಾನತು ನಿರ್ಧಾರವನ್ನು ಕೈಗೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಾಸಕರು ಹೊಡೆದಾಡಿಕೊಂಡಿದ್ದು ಯಾವ ಸೆಕ್ಷನ್ ನಲ್ಲಿ ಬರುತ್ತೆ- ಮಾಜಿ ಸಿಎಂ ಬಳಿ ಸ್ಪಷ್ಟೀಕರಣ ಕೇಳಿದ ಶ್ರೀರಾಮುಲು

    ಶಾಸಕರು ಹೊಡೆದಾಡಿಕೊಂಡಿದ್ದು ಯಾವ ಸೆಕ್ಷನ್ ನಲ್ಲಿ ಬರುತ್ತೆ- ಮಾಜಿ ಸಿಎಂ ಬಳಿ ಸ್ಪಷ್ಟೀಕರಣ ಕೇಳಿದ ಶ್ರೀರಾಮುಲು

    ಬಳ್ಳಾರಿ: ಲೋಕಸಭಾ ಚುನಾವಣೆಯ ಸಮಯದಲ್ಲಿ ಕಾನೂನು ಪಾಠ ಮಾಡಿದ್ದ ಸಿದ್ದರಾಮಯ್ಯನನವರಿಗೆ ಶ್ರೀರಾಮುಲು ಈಗ ಸೆಕ್ಷನ್ ಗಳ ಪ್ರಶ್ನೆ ಮಾಡಿ ಟಾಂಗ್ ಕೊಟ್ಟಿದ್ದಾರೆ. ಬಿಡದಿಯ ರೆಸಾರ್ಟಿನಲ್ಲಿನ ಆನಂದ್ ಸಿಂಗ್ ಪ್ರಕರಣವನ್ನು ಪ್ರಸ್ತಾಪ ಮಾಡಿ ಇದು ಯಾವ ಸೆಕ್ಷನ್ ನಲ್ಲಿ ಬರುತ್ತದೆ? ಸಿದ್ದರಾಮಯ್ಯನವರೇ ಸ್ಪಷ್ಟನೆ ನೀಡಿ ಎಂದು ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಹೇಳಿದ್ದಾರೆ

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಹಳಷ್ಟು ಬಾರಿ ಸತ್ಯಹರಿಶ್ಚಂದ್ರ ಆಗಿರುತ್ತಾರೆ. ಅಲ್ಲದೇ ನನಗೆ ಬಹಳಷ್ಟು ಸಾರಿ ವ್ಯಂಗ್ಯವಾಗಿ ಮಾತನಾಡುತ್ತಾ ಇರುತ್ತಾರೆ. ಶ್ರೀರಾಮುಲು ಅವರಿಗೆ ಹೈದರಾಬಾದ್ ಕರ್ನಾಟಕದಲ್ಲಿ 371 ಬಗ್ಗೆ ಗೊತ್ತೇ ಇಲ್ಲ. ಅವರಿಗೆ 420 ಸೆಕ್ಷನ್ ಗಳು ಮಾತ್ರ ಗೊತ್ತು ಎಂದು ಬಹಳಷ್ಟು ಬಾರಿ ಉಲ್ಲೇಖ ಮಾಡಿದ್ದಾರೆ. ಮಾತ್ರವಲ್ಲದೇ ವ್ಯಂಗ್ಯವಾಡಿದ್ದಾರೆ. ಅವರು ಪಾಪ ಹಿರಿಯ ವಕೀಲ. ಹೀಗಾಗಿ ನಾನು ಇದೀಗ ಸಿದ್ದರಾಮಯ್ಯ ಅವರಿಗೆ ಕೇಳುತ್ತೇನೆ. ಸ್ವಾಮಿ, ನನಗಂತೂ 371 ಸೆಕ್ಷನ್ ಬಗ್ಗೆ ಗೊತ್ತಿಲ್ಲ. 420 ಸೆಕ್ಷನ್ ಮಾತ್ರ ಗೊತ್ತು. ನಿಮ್ಮ ಶಾಸಕರು ರೆಸಾರ್ಟ್ ನಲ್ಲಿ ಗಲಾಟೆ ಮಾಡಿಕೊಂಡಿದ್ದಾರೋ, ಅದು ಯಾವ ಸೆಕ್ಷನ್ ನಲ್ಲಿ ಬರುತ್ತೆ ಅನ್ನೋದನ್ನು ಸ್ಪಷ್ಟಪಡಿಸಿ ಎಂದು ಕೇಳಿಕೊಂಡಿದ್ದಾರೆ.

     

    ಒಟ್ಟಿನಲ್ಲಿ ಕಾಂಗ್ರೆಸ್ ನಲ್ಲಿ ಇಂದು ಯಾವುದೂ ಕೂಡ ಸರಿಯಿಲ್ಲ ಎಂಬುದು ಇಡೀ ನಾಡಿನ ಜನತೆಗೆ ಗೊತ್ತಿದೆ. ಹೀಗಾಗಿ ಮುಂದೆ ಅವರ ಹಣೆಬರಹವನ್ನು ಅವರೇ ತೀರ್ಮಾನ ಮಾಡಿಕೊಳ್ಳುತ್ತಾರೆ ಎಂದು ಅವರು ಹೇಳಿದ್ರು. ಇದನ್ನೂ ಓದಿ: ಶಾಸಕ ಶ್ರೀರಾಮುಲುಗೆ ಕನ್ನಡ, ಕಾನೂನು ಪಾಠ ಮಾಡಿದ ಮಾಜಿ ಸಿಎಂ

    ಈಗಲ್ ಟನ್ ರೆಸಾರ್ಟ್ ನಲ್ಲಿ ಶಾಸಕರಾದ ಆನಂದ್ ಸಿಂಗ್ ಹಾಗೂ ಗಣೇಶ್ ಹೊಡೆದಾಡಿಕೊಂಡಿದ್ದಾರೆ ಎಂಬ ಸುದ್ದಿ ಗಮನಕ್ಕೆ ಬಂದಿದೆ. ಈ ಮೂಲಕ ಕಾಂಗ್ರೆಸ್ ಸಂಸ್ಕೃತಿ ಇಂದು ಯಾವ ರೀತಿ ಇದೆ ಎಂಬುದನ್ನು ಎಲ್ಲರು ವಿಚಾರ ಮಾಡಿಕೊಳ್ಳಬೇಕಾಗಿದೆ. ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ, ಅಧಿಕಾರದಲ್ಲಿರುವಂತಹ ಶಾಸಕರು ಇಂದು ಅವರೇ ರೆಸಾರ್ಟ್ ಸೇರಿಕೊಂಡು ಮೋಜು-ಮಸ್ತಿ ಮಾಡಿಕೊಳ್ಳುತ್ತಾ, ಕುಡಿದು ಬಾಟಲಿಗಳಲ್ಲಿ ಹೊಡೆದಾಡಿಕೊಂಡಿರುವುದು ಯಾವ ಸಂಸ್ಕೃತಿ ಎಂಬುದನ್ನು ಹೇಳಬೇಕು ಎಂದು ಅವರು ಹೇಳಿದ್ರು.

    ಲಕ್ಷಾಂತರ ಮಂದಿಯನ್ನು ಮನವೊಲಿಸಿರುವ ನಾವು ಶಾಸಕರಾದ ನಾಗೇಂದ್ರ ಹಾಗೂ ಆನಂದ್ ಸಿಂಗ್ ಅವರನ್ನು ಮನವೊಲಿಸಲು ಆಗಲ್ಲ ಎಂದಲ್ಲ. ಆನಂದ್ ಸಿಂಗ್ ಅವರು ಬೆಳೆಯಬೇಕು, ದೊಡ್ಡವರಾಗಬೇಕು ಎಂದು ಹೋದವರು. ಆನಂದ್ ಸಿಂಗ್ ಅವರಿಗೆ ನಮ್ಮ ಪಕ್ಷ ಗೌರವಯುತವಾಗಿ ಮಂತ್ರಿ ಸ್ಥಾನ ಕೊಟ್ಟಿತ್ತು. ಆದ್ರೆ ಇದೀಗ ದೊಡ್ಡವರಾಗಲು ಹೋಗಿ ಎಡವಿದ್ದಾರೆ. ಬೇರೆಯವರನ್ನು ಕರೆದುಕೊಳ್ಳುವ ಮೂಲಕ ರಾಜಕಾರಣ ಮಾಡಬೇಕು ಅನ್ನೋ ಆಸೆ ನನಗಿಲ್ಲ. ನಾನಿರುವ ಸಮಯದಲ್ಲಿ ಒಳ್ಳೆದಾಗಬೇಕು ಎಂದು ಬಯಸುತ್ತೇನೆ. ಆನಂದ್ ಸಿಂಗ್ ಕೂಡ ಆದಷ್ಟು ಬೇಗ ಗುಣಮುಖರಾಗಲಿ ಎಂದು ಅವರು ಆಶಿಸಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರೆಸಾರ್ಟಿನಲ್ಲಿ ಕೈ ಶಾಸಕರ ಬಡಿದಾಟಕ್ಕೆ ಖಾಕಿ ಎಂಟ್ರಿ?

    ರೆಸಾರ್ಟಿನಲ್ಲಿ ಕೈ ಶಾಸಕರ ಬಡಿದಾಟಕ್ಕೆ ಖಾಕಿ ಎಂಟ್ರಿ?

    ಬೆಂಗಳೂರು: ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಮತ್ತು ಕಂಪ್ಲಿ ಶಾಸಕ ಗಣೇಶ್ ಇಬ್ಬರ ನಡುವಿನ ಗಲಾಟೆಗೆ ಈಗ ಪೊಲೀಸರು ಎಂಟ್ರಿ ಕೊಟ್ಟಿದ್ದು, ತನಿಖೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

    ಈಗಲ್‍ಟನ್ ರೆಸಾರ್ಟಿನಲ್ಲಿ ಕಂಪ್ಲಿ ಶಾಸಕ ಗಣೇಶ್ ಅವರಿಂದ ಹಲ್ಲೆಗೆ ಒಳಗಾದ ಆನಂದ್ ಸಿಂಗ್ ಅವರಿಗೆ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪೋಲೋ ಆಸ್ಪತ್ರೆ ತನ್ನ ಮೆಡಿಕೋ ಲೀಗಲ್ ಕೇಸ್(ಎಂಎಲ್‍ಸಿ) ವರದಿಯಲ್ಲಿ ಹಲ್ಲೆಯಾಗಿದೆ ಎಂದು ಉಲ್ಲೇಖಿಸಿದೆ. ಅಷ್ಟೇ ಅಲ್ಲದೇ ಆಸ್ಪತ್ರೆ ಎಂಎಲ್‍ಸಿ ವರದಿಯನ್ನು ಸ್ಥಳೀಯ ಪೊಲೀಸರಿಗೆ ನೀಡಿದೆ.

    ಆಸ್ಪತ್ರೆ ನೀಡಿರುವ ಎಂಎಲ್‍ಸಿ ವರದಿ ಹಿನ್ನೆಲೆಯಲ್ಲಿ ಹಲ್ಲೆಗೊಳಗಾದ ಶಾಸಕ ಆನಂದ್ ಸಿಂಗ್ ಅವರಿಂದ ಘಟನೆಯ ಬಗ್ಗೆ ಮಾಹಿತಿ ಸಂಗ್ರಹ ದಾಖಲಿಸಲು ಪೊಲೀಸರು ಮುಂದಾಗಿದ್ದರು. ಆದರೆ ಗಾಯಗೊಂಡಿದ್ದ ಆನಂದ್ ಸಿಂಗ್ ಆರೋಗ್ಯದಲ್ಲಿ ಇನ್ನೂ ಚೇತರಿಕೆ ಕಂಡಿರಲಿಲ್ಲ. ಹೀಗಾಗಿ ಆಸ್ಪತ್ರೆ ವೈದ್ಯರು ಆನಂದ್ ಸಿಂಗ್ ವಿಚಾರಣೆಗೆ ಅವಕಾಶ ನೀಡಲಿಲ್ಲ ಎನ್ನುವ ವಿಚಾರ ತಿಳಿದುಬಂದಿದೆ.

    ಆನಂದ್ ಸಿಂಗ್ ಆರೋಗ್ಯದಲ್ಲಿ ಇನ್ನೂ ಚೇತರಿಕೆ ಕಾಣಬೇಕಿದೆ. ಆದ್ದರಿಂದ ಸದ್ಯಕ್ಕೆ ಅವರ ಬಳಿ ಯಾರನ್ನು ಬಿಡುವುದಿಲ್ಲ ಎಂದು ವೈದ್ಯರು ಪೊಲೀಸರಿಗೆ ಹೇಳಿದ್ದಾರೆ. ವೈದ್ಯರ ಸೂಚನೆಯಂತೆ ಪೊಲೀಸರು ಆನಂದ್ ಸಿಂಗ್ ಹೇಳಿಕೆ ದಾಖಲಿಸದೇ ವಾಪಸ್ಸಾಗಿದ್ದಾರೆ. ಇಂದು ಮಧ್ಯಾಹ್ನ ಮತ್ತೆ ಶಾಸಕ ಆನಂದ್ ಸಿಂಗ್ ಹೇಳಿಕೆಯನ್ನು ಪೊಲೀಸರು ಪಡೆಯವ ಸಾಧ್ಯತೆಯಿದೆ.

    ಒಂದು ವೇಳೆ ಈ ಘಟನೆ ಬಗ್ಗೆ ಆನಂದ್ ಸಿಂಗ್ ಹೇಳಿಕೆ ದಾಖಲಿಸಿದರೆ ಕಂಪ್ಲಿ ಶಾಸಕ ಗಣೇಶ್ ಗೆ ಹೊಸ ಸಂಕಷ್ಟ ಶುರುವಾಗಲಿದೆ. ಈಗಾಗಲೇ ಎಂಎಲ್‍ಸಿ ವರದಿಯಲ್ಲಿ ಗಂಭೀರವಾಗಿ ಹಲ್ಲೆಯಾಗಿದೆ ಎಂದು ನಮೂದಿಸಲಾಗಿದೆ. ಸದ್ಯಕ್ಕೆ ಆನಂದ್ ಸಿಂಗ್ ವಿಚಾರಣೆ ಬಳಿಕ ಪೊಲೀಸರು ದೂರು ಸ್ವೀಕರಿಸಿ ಪ್ರಕರಣ ದಾಖಲಿಸುತ್ತಾರೆ. ನಂತರ ಶಾಸಕ ಗಣೇಶ್ ವಿಚಾರಣೆ ನಡೆಸುವ ಸಾಧ್ಯತೆ ಇದೆ.

    ಕಾಂಗ್ರೆಸ್ ಸರ್ಕಸ್?
    ಗಣೇಶ್ ವಿರುದ್ಧ ಕ್ರಮ ಕೈಗೊಳ್ಳಿ ಅಥವಾ ದೂರಿಗೆ ಅವಕಾಶ ಕೊಡಿ ಎಂದು ಆನಂದ್ ಸಿಂಗ್ ಕುಟುಂಬಸ್ಥರ ಪಟ್ಟು ಹಿಡಿದಿದ್ದಾರೆ. ಕುಟುಂಬಸ್ಥರು ಪಟ್ಟು ಹಿಡಿಯುತ್ತಿದ್ದಂತೆ ಅವರ ಮನವೊಲಿಕೆಗೆ ಕೈ ನಾಯಕರು ರಾತ್ರಿಯಿಂದ ಸರ್ಕಸ್ ಆರಂಭಿಸಿದ್ದಾರೆ. ದೂರು, ತನಿಖೆ ಎಂದು ಹೋದರೆ ಎಲ್ಲರಿಗೂ ಮುಜುಗರ ಆಗುತ್ತದೆ ಎಂದು ಹೇಳಿ ಆನಂದ್ ಸಿಂಗ್ ಜೊತೆ ಕಾಂಗ್ರೆಸ್ ನಾಯಕರು ಚರ್ಚಿಸಿದ್ದಾರೆ. ಆದರೆ ಕುಟುಂಬದವರು ದೂರು ದಾಖಲಿಸಲೇಬೇಕು. ಗಣೇಶ್ ಮೇಲೆ ಕಾನೂನು ರೀತಿಯ ಕ್ರಮಕ್ಕೆ ಆಗ್ರಹಿಸಿದ್ದಾರೆ. ಹೀಗಾಗಿ ಕುಟುಂಬದವರ ಮನವೊಲಿಸಲು ಕೈ ನಾಯಕರು ಮುಂದಾಗಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ತಿಳಿದುಬಂದಿದೆ.

    https://www.youtube.com/watch?v=9xgPiNXdmxU

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಹುಲ್ ಗಾಂಧಿ ಫುಲ್ ಗರಂ: ಆನಂದ್ ಸಿಂಗ್ ಕುಟುಂಬಸ್ಥರ ಮನವೊಲಿಕೆಗೆ ಕೈ ನಾಯಕರಿಂದ ಸರ್ಕಸ್

    ರಾಹುಲ್ ಗಾಂಧಿ ಫುಲ್ ಗರಂ: ಆನಂದ್ ಸಿಂಗ್ ಕುಟುಂಬಸ್ಥರ ಮನವೊಲಿಕೆಗೆ ಕೈ ನಾಯಕರಿಂದ ಸರ್ಕಸ್

    ಬೆಂಗಳೂರು: ಆನಂದ್ ಸಿಂಗ್ ಮೇಲೆ ಮದ್ಯದ ಬಾಟಲಿಯಿಂದ ಹಲ್ಲೆ ನಡೆಸಿ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಮರ್ಯಾದೆ ಹರಾಜು ಹಾಕಿದ ಕಂಪ್ಲಿ ಶಾಸಕ ಗಣೇಶ್ ಪಕ್ಷದಿಂದಲೇ ಉಚ್ಚಾಟನೆಯಾಗುವ ಸಾಧ್ಯತೆಯಿದೆ.

    ರೆಸಾರ್ಟಿನಲ್ಲಿ ಇಬ್ಬರು ಕಿತ್ತಾಡಿದ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫುಲ್ ಗರಂ ಆಗಿದ್ದು, ಶಿಸ್ತು ಕ್ರಮ ಕೈಗೊಳ್ಳಿ ಎಂದು ಹಿರಿಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಕಾಂಗ್ರೆಸ್ ಪಕ್ಷದದಿಂದ ಹಲ್ಲೆಕೋರ ಶಾಸಕ ಗಣೇಶ್ ಉಚ್ಛಾಟನೆಯಾಗುವ ಸಾಧ್ಯತೆಯಿದ್ದು, ಇಂದು ಅಥವಾ ನಾಳೆ ಕಾಂಗ್ರೆಸ್ ಪಕ್ಷದಿಂದ ಅಧಿಕೃತ ನಿರ್ಧಾರ ಪ್ರಕಟವಾಗಲಿದೆ. ಆಪರೇಷನ್ ಕಮಲದ ಮಧ್ಯೆ ಶಾಸಕರ ಕೊರತೆ ಇರುವಾಗ ಉಚ್ಚಾಟನೆಯ ನಿರ್ಧಾರ ಕೈಗೊಳ್ಳುತ್ತಾ ಎನ್ನುವ ಪ್ರಶ್ನೆ ಎದುರಾಗಿದ್ದು ಯಾವ ಶಿಸ್ತು ಕ್ರಮ ಕೈಗೊಳ್ಳುತ್ತದೆ ಎನ್ನುವ ಕುತೂಹಲ ಹೆಚ್ಚಾಗಿದೆ.

    ಇತ್ತ ಗಣೇಶ್ ವಿರುದ್ಧ ಕ್ರಮ ಕೈಗೊಳ್ಳಿ ಅಥವಾ ದೂರಿಗೆ ಅವಕಾಶ ಕೊಡಿ ಎಂದು ಆನಂದ್ ಸಿಂಗ್ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ. ಕುಟುಂಬಸ್ಥರು ಪಟ್ಟು ಹಿಡಿಯುತ್ತಿದ್ದಂತೆ ಅವರ ಮನವೊಲಿಕೆಗೆ ಕೈ ನಾಯಕರು ಭಾನುವಾರ  ರಾತ್ರಿಯಿಂದ ಸರ್ಕಸ್ ಆರಂಭಿಸಿದ್ದಾರೆ.

    ದೂರು, ತನಿಖೆ ಎಂದು ಹೋದರೆ ಎಲ್ಲರಿಗೂ ಮುಜುಗರ ಆಗುತ್ತದೆ ಎಂದು ಹೇಳಿ ಅನಂದ್ ಸಿಂಗ್ ಜೊತೆ ಕಾಂಗ್ರೆಸ್ ನಾಯಕರು ಚರ್ಚಿಸಿದ್ದಾರೆ. ಆದರೆ ಅದರೆ ಕುಟುಂಬದವರು ದೂರು ದಾಖಲಿಸಲೇಬೇಕು. ಗಣೇಶ್ ಮೇಲೆ ಕಾನೂನು ರೀತಿಯ ಕ್ರಮಕ್ಕೆ ಆಗ್ರಹಿಸಿದ್ದಾರೆ. ಹೀಗಾಗಿ ಕುಟುಂಬದವರ ಮನವೊಲಿಸಲು ಕೈ ನಾಯಕರು ಮುಂದಾಗಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ತಿಳಿದುಬಂದಿದೆ.


    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆನಂದ್ ಸಿಂಗ್-ಗಣೇಶ್ ನಡುವಿನ ‘ಬಾಟಲ್’ ಬ್ಯಾಟಲ್ – ರಾತ್ರಿ ನಿಜವಾಗಿ ಏನಾಯ್ತು? ಇಲ್ಲಿದೆ ಇನ್‍ಸೈಡ್ ಸ್ಟೋರಿ

    ಆನಂದ್ ಸಿಂಗ್-ಗಣೇಶ್ ನಡುವಿನ ‘ಬಾಟಲ್’ ಬ್ಯಾಟಲ್ – ರಾತ್ರಿ ನಿಜವಾಗಿ ಏನಾಯ್ತು? ಇಲ್ಲಿದೆ ಇನ್‍ಸೈಡ್ ಸ್ಟೋರಿ

    ಬೆಂಗಳೂರು: ಕಾಂಗ್ರೆಸ್ ಶಾಸಕರು ತಂಗಿದ್ದ ರೆಸಾರ್ಟಿನಲ್ಲಿ ಆನಂದ್ ಸಿಂಗ್ ಹಾಗೂ ಗಣೇಶ್ ನಡುವೆ ನಡೆದಿರುವ ಬಾಟಲ್ ಗಲಾಟೆಗೆ ಕಾಂಗ್ರೆಸ್ ಶಾಸಕರು ಬೆಚ್ಚಿಬಿದ್ದಿದ್ದಾರೆ. ರಾತ್ರಿ ಪಾರ್ಟಿ ಆರಂಭಗೊಂಡಾಗ ಎಲ್ಲರೊಂದಿಗೆ ಸರಿಯಾಗಿದ್ದ ಶಾಸಕರು ಮದ್ಯದ ಅಮಲು ಏರುತ್ತಿದಂತೆ ಪರಸ್ಪರ ಕಿತ್ತಾಟ ನಡೆಸಿದ್ದಾರೆ.

    ಗಲಾಟೆಯಲ್ಲಿ ಶಾಸಕ ಆನಂದ್‍ಸಿಂಗ್ ಕಣ್ಣು, ಎದೆ, ತಲೆಗೆ ಪೆಟ್ಟು ಬಿದ್ದಿದ್ದು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದಾರೆ. ಇತ್ತ ಆನಂದ್ ಅಣ್ಣನಿಗೆ ಏನಾದ್ರೂ ಆದರೆ ಸುಮ್ಮನೆ ಇರುವುದಿಲ್ಲ, ಬಳ್ಳಾರಿಯಲ್ಲಿ ರೌದ್ರಾವಾತರ ನೋಡುತ್ತೀರಿ ಎಂದು ಶಾಸಕ ಆನಂದ್ ಸಿಂಗ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಕೆ ನೀಡಿದ್ದಾರೆ.

    ಮದ್ಯದ ಅಮಲಿನಲ್ಲಿದ್ದಾಗ ಆನಂದ್ ಸಿಂಗ್ ಮತ್ತು ಗಣೇಶ್ ನಡುವೆ ಹೊಡೆದಾಟ ಆರಂಭವಾಗಿ ಬಳಿಕ ಏನಾಯ್ತು ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಸಿಕ್ಕಿದ್ದು ಅದನ್ನು ಇಲ್ಲಿ ನೀಡಲಾಗಿದೆ.

    ರಾತ್ರಿ ನಡೆದಿದ್ದೇನು?
    ಪಕ್ಷದ ಸಭೆಯ ಬಳಿಕ ರೆಸಾರ್ಟಿನಲ್ಲಿಯೇ ತಂಗಿದ್ದ ಶಾಸಕರು ಮಧ್ಯರಾತ್ರಿ 2 ಗಂಟೆಯವರೆಗೂ ಗಾರ್ಡನ್ ನಲ್ಲಿ ಪಾರ್ಟಿ ಮಾಡುತ್ತ ಕುಳಿತಿದ್ದರು. ಈ ವೇಳೆ ಶಾಸಕ ಆನಂದ್‍ಸಿಂಗ್ ಹಾಗೂ ಗಣೇಶ ಒಟ್ಟಿಗೆ ಕುಳಿತ್ತಿದ್ದರು. ಇತ್ತ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್ ಕೂಡ ಅಲ್ಲಿಗೆ ಎಂಟ್ರಿ ಕೊಟ್ಟಿದ್ದಾರೆ. ಭೀಮಾನಾಯ್ಕ್ ಬರುತ್ತಿದಂತೆ ಆನಂದ್ ಸಿಂಗ್, “ಈ ಬಾರಿ ನಿನ್ನನ್ನು ಸೋಲಿಸುತ್ತೇನೆ” ಎಂದಾಗ “ಆಯ್ತು ಬಿಡು ಅಣ್ಣ” ಎಂದು ಭೀಮಾ ನಾಯ್ಕ್ ಉತ್ತರಿಸಿದ್ದಾರೆ.

    ಈ ವೇಳೆ ಮಧ್ಯಪ್ರವೇಶಿಸಿದ ಗಣೇಶ್,”ಆನಂದ್ ಅಣ್ಣಾ, ನೀವೂ ಭೀಮಾನಾಯ್ಕ್ ಅವರನ್ನು ಸೋಲಿಸುತ್ತೇನೆ ಎಂದು ಹೇಳ್ತೀರಿ, ಸಂದೀಪ್ ಸಿಂಗ್ ಕಂಪ್ಲಿಯಲ್ಲಿ ನನ್ನ ಸೋಲಿಸುತ್ತೇನೆ ಎನ್ನುತ್ತಾನೆ” ಎಂದು ಹೇಳಿದ್ದಾರೆ. ಇದಕ್ಕೆ,”ಹೌದು, ನಾನು ನಿಮ್ಮ ಇಬ್ಬರನ್ನು ಸೋಲಿಸುತ್ತೇನೆ” ಎಂದು ಆನಂದ್ ಸಿಂಗ್ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.

    ಇದನ್ನು ಕೇಳುತ್ತಿದಂತೆ ಶಾಸಕ ಗಣೇಶ್,”ಅಣ್ಣಾ ನೀನು ನನ್ನನ್ನು ಸೋಲಿಸು ನಾನು ಬೇಡ ಎನ್ನುವುದಿಲ್ಲ. ಆದರೆ ಸಂದೀಪ್ ಸಿಂಗ್ ನನ್ನ ಕ್ಷೇತ್ರಕ್ಕೆ ಬಂದರೆ ನಾನು ನಿಮ್ಮನ್ನ ಹೊಸಪೇಟೆಯಲ್ಲಿ ಸೋಲಿಸುತ್ತೇನೆ” ಎಂದು ಕೌಂಟರ್ ಕೊಟ್ಟಿದ್ದಾರೆ. ಈ ಕೌಂಟರ್ ಗೆ ಕೋಪಗೊಂಡ ಆನಂದ್ ಸಿಂಗ್,”ನನ್ನನ್ನೇ ಸೋಲಿಸುತ್ತೇನೆ ಎನ್ನುತ್ತಿಯಾ” ಎಂದು ಹೇಳಿ ಗಣೇಶ್ ಮೇಲೆ ಮುಗಿಬಿದ್ದಾಗ ಇಬ್ಬರೂ ಪರಸ್ಪರ ಕಿತ್ತಾಡಿದ್ದಾರೆ. ಇಬ್ಬರ ಗುದ್ದಾಟ ಕಂಡ ಉಳಿದ ಶಾಸಕರು ಏನು ಮಾಡಲಾಗದೇ ನೋಡುತ್ತಾ ನಿಂತಿದ್ದರು ಎಂದು ಮೂಲಗಳು ತಿಳಿಸಿವೆ.

    ಇಬ್ಬರ ಗುದ್ದಾಟದ ಮಧ್ಯೆ ಬಾಟಲ್ ಕೈಗೆ ತೆಗೆದುಕೊಂಡ ಗಣೇಶ್ ಎಣ್ಣೆ ಮತ್ತಿನಲ್ಲಿ ಅಕ್ಷರಶಃ ಮೃಗದಂತೆ ವರ್ತಿಸುತ್ತಿದ್ದರು. ಗಲಾಟೆ ಜೋರಾಗುತ್ತಿದ್ದಂತೆ ಆನಂದ್ ಸಿಂಗ್ ಗ್ಯಾಲರಿಯಿಂದ ಕೆಳಕ್ಕೆ ಬಿದ್ದಿದ್ದಾರೆ. ಈ ವೇಳೆಗೆ ಆನಂದ್ ಸಿಂಗ್ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಆನಂದ್ ಸಿಂಗ್ ಕುಸಿದು ಬೀಳುತ್ತಿದ್ದಂತೆ ಎಡಭಾಗದ ಎದೆಯ ಮೇಲೆ ಹತ್ತಿ ನಿಂತು ಗಣೇಶ್ ತುಳಿದಿದ್ದಾರೆ. ಪರಿಸ್ಥಿತಿ ಮಿತಿಮಿರುತ್ತಿದಂತೆ ಮಧ್ಯಪ್ರವೇಶಿಸಿದ ಭೀಮಾನಾಯ್ಕ್, ಗಣೇಶ್ ಅವರನ್ನು ಕೊಠಡಿಗೆ ಕಳುಹಿಸಿದರೆ, ಹೋಟೆಲ್ ಸಿಬ್ಬಂದಿ ಆನಂದ್ ಸಿಂಗ್ ಅವರನ್ನು ಆಸ್ಪತ್ರೆಗೆ ಕಳುಹಿಸಿದ್ದಾರೆ. ಇತ್ತ ಕೊಠಡಿಗೆ ತೆರಳಿದರೂ ಸುಮ್ಮನಾಗದ ಗಣೇಶ್ ಮತ್ತೆ ಚೀರಾಟ ನಡೆಸಿ ಗದ್ದಲ ಮುಂದುವರಿಸಿದ್ದರು ಎನ್ನಲಾಗಿದೆ.

    ಇಬ್ಬರ ನಡುವಿನ ಗಲಾಟೆಯಲ್ಲಿ ಆನಂದ್ ಸಿಂಗ್ ಅವರ ಬಲಬಾಗದ ಹಣೆ, ಕಣ್ಣಿನ ಭಾಗಕ್ಕೆ ಹೊಡೆತ ಬಿದ್ದಿದೆ. ಬಲವಾದ ಏಟಿಗೆ ಪ್ರಜ್ಞೆ ತಪ್ಪಿ ಬಿದ್ದ ಆನಂದ್ ಸಿಂಗ್ ಕುಸಿದು ಬೀಳುತ್ತಿದ್ದಂತೆ ಎಡಭಾಗದ ಎದೆಯ ಮೇಲೆ ಹತ್ತಿ ನಿಂತು ಗಣೇಶ್ ತುಳಿದ ಪರಿಣಾಮ ಎಡ ಭಾಗದ ಪಕ್ಕೆಲುಬಿಗೆ ಏಟಾಗಿದೆ. ಆನಂದ್ ಸಿಂಗ್ ಬಲ ಕಣ್ಣು ಊದಿ ಕೊಂಡಿದ್ದು ಕಣ್ಣಿನ ಭಾಗಕ್ಕೆ ಗಂಭೀರ ಗಾಯವಾಗಿದೆ ಎನ್ನುವ ವಿಚಾರವನ್ನು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

    https://www.youtube.com/watch?v=9xgPiNXdmxU

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗುರು ಆನಂದ್ ಸಿಂಗ್ ಮೇಲೆ ಶಿಷ್ಯ ಗಣೇಶ್ ಅಟ್ಯಾಕ್?-ಇದು ಇನ್‍ಸೈಡ್ ಸ್ಟೋರಿ

    ಗುರು ಆನಂದ್ ಸಿಂಗ್ ಮೇಲೆ ಶಿಷ್ಯ ಗಣೇಶ್ ಅಟ್ಯಾಕ್?-ಇದು ಇನ್‍ಸೈಡ್ ಸ್ಟೋರಿ

    ಬೆಂಗಳೂರು: ಕಾಂಗ್ರೆಸ್ ಪಕ್ಷದ ಯುವ ಶಾಸಕ ಕಂಪ್ಲಿ ಕ್ಷೇತ್ರದ ಗಣೇಶ್ ಅವರು ಆನಂದ್ ಸಿಂಗ್ ಬಗ್ಗೆ ಅಭಿಮಾನ ಹೊಂದಿದ್ದರು. ಆದರೆ ಇತ್ತೀಚೆಗೆ ಕ್ಷೇತ್ರದಲ್ಲಿ ನಡೆಯುತ್ತಿದ್ದ ಹಸ್ತಕ್ಷೇಪದ ಬಗ್ಗೆ ಗಣೇಶ್ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

    ಶಾಸಕ ಗಣೇಶ್ ಅವರು ಸಕ್ರಿಯ ರಾಜಕಾರಣಕ್ಕೆ ಬಂದ ವೇಳೆ ಶಾಸಕ ಆನಂದ್ ಸಿಂಗ್ ಅವರ ಬೆಂಬಲವಾಗಿ ಅಭಿಮಾನ ಹೊಂದಿದ್ದರು. ಆದರೆ ಕಂಪ್ಲಿ ಕ್ಷೇತ್ರದಲ್ಲಿ ಶಾಸಕರಾಗಿ ಗಣೇಶ್ ಆಯ್ಕೆ ಆಗಿದ್ದರೂ ಆನಂದ್ ಸಿಂಗ್ ಅವರ ಅಳಿಯ ಸಂದೀಪ್ ಸಿಂಗ್ ಕ್ಷೇತ್ರದ ಕಾರ್ಯಗಳಲ್ಲಿ ಹಸ್ತಕ್ಷೇಪ ನಡೆಸುತ್ತಿದ್ದರು. ಇದರಿಂದ ಗಣೇಶ್ ಅವರು ಅಸಮಾಧಾನಗೊಂಡಿದ್ದರು ಎನ್ನಲಾಗಿದೆ. ಅಲ್ಲದೇ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನಗೊಂಡಿದ್ದ ಗಣೇಶ್ ಅವರು ಬಿಜೆಪಿ ನಾಯಕರ ಸಂಪರ್ಕದಲ್ಲಿ ಇದ್ದರು ಎಂಬ ಮಾಹಿತಿಯೂ ಲಭಿಸಿದ್ದು, ಈ ಕುರಿತು ಶಾಸಕ ಆನಂದ್ ಸಿಂಗ್ ಕಾಂಗ್ರೆಸ್ ಮುಖಂಡರಿಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ.

    ಬಿಜೆಪಿ ಆಪರೇಷನ್ ಕಮಲ ಬಗ್ಗೆ ಮಾಹಿತಿ ಪಡೆದ ಕಾಂಗ್ರೆಸ್ ಮುಖಂಡರು ವಿಧಾನಸೌಧದಲ್ಲಿ ನಡೆದ ಸಿಎಲ್‍ಪಿ ಸಭೆಯ ಬಳಿಕ ಶಾಸಕರನ್ನು ನೇರ ರೆಸಾರ್ಟಿಗೆ ಶಿಫ್ಟ್ ಮಾಡಿದ್ದರು. ಆದರೆ ಶಾಸಕಾಂಗ ಸಭೆಗೆ ಹಾಜರಾಗಿ ಬಳಿಕ ಗಣೇಶ್ ಅವರು ಸೀದಾ ಅತೃಪ್ತ ಶಾಸಕರ ಕೂಟ ಸೇರಲು ಮುಂದಾಗಿದ್ದರು ಎನ್ನಲಾಗಿತ್ತು. ಇದರಿಂದ ಗಣೇಶ್ ಅಸಮಾಧಾನಗೊಂಡಿದ್ದರು ಎಂಬ ಮಾಹಿತಿ ಪಕ್ಷದ ವಲಯದಿಂದಲೇ ಕೇಳಿ ಬಂದಿದೆ.

    ಸದ್ಯ ಆನಂದ್ ಸಿಂಗ್ ಅವರು ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದ್ದು, ಶಾಸಕ ಗಣೇಶ್ ಅವರು ರೆಸಾರ್ಟಿನಲ್ಲೇ ತಂಗಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಆನಂದ್ ಸಿಂಗ್ ಅಥವಾ ಗಣೇಶ್ ಯಾವುದೇ ಸ್ಪಷ್ಟನೆ ನೀಡಿಲ್ಲ. ಆದರೆ ಶಾಸಕ ಮಾರಾಮಾರಿ ವರದಿಯನ್ನು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಅಲ್ಲಗೆಳೆದಿದ್ದು, ಶಾಸಕರು ಒಗ್ಗಟ್ಟಿನಿಂದ ಇದ್ದಾರೆ. ಯಾವುದೇ ಅಸಮಾಧಾನ ಇಲ್ಲ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರೆಸಾರ್ಟ್​ನಲ್ಲಿ ಬಡಿದಾಡಿಕೊಂಡ ಇಬ್ಬರು ಕಾಂಗ್ರೆಸ್ ಶಾಸಕರು?

    ರೆಸಾರ್ಟ್​ನಲ್ಲಿ ಬಡಿದಾಡಿಕೊಂಡ ಇಬ್ಬರು ಕಾಂಗ್ರೆಸ್ ಶಾಸಕರು?

    ಬೆಂಗಳೂರು: ಒಗ್ಗಟ್ಟಿನ ಪ್ರದರ್ಶನಕ್ಕೆ ರೆಸಾರ್ಟ್ ಗೆ ಹೋಗಿದ್ದ ಕಾಂಗ್ರೆಸ್ ಶಾಸಕರ ನಡುವೆ ಮಾರಾಮಾರಿ ನಡೆದಿದ್ದು, ಪರಸ್ಪರ ಇಬ್ಬರು ಬಡಿದಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

    ಹೊಸಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಹಾಗೂ ಕಂಪ್ಲಿ ಕ್ಷೇತ್ರದ ಶಾಸಕ ಗಣೇಶ್ ನಡುವೆ ಮಾರಾಮಾರಿ ನಡೆದಿದ್ದು, ಬೆಳಗಿನ ಜಾವ ಸುಮಾರು ಮೂರು ಗಂಟೆ ಈ ಗಲಾಟೆ ನಡೆದಿದೆ. ಕಾಂಗ್ರೆಸ್ ಶಾಸಕರು ಬಿಡದಿಯಲ್ಲಿರುವ ಈಗಲ್ ಟನ್ ರೆಸಾರ್ಟ್ ನಲ್ಲಿ ಉಳಿದಿದ್ದರು. ಶನಿವಾರ ರಾತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಲ್‍ಪಿ ಸಭೆ ಮುಗಿದ ನಂತರ ಕೈ ಶಾಸಕರು ಪಾರ್ಟಿ ಮಾಡಿದ್ದಾರೆ.

    ಇಂದು ಬೆಳಗಿನ ಜಾವದವರೆಗೂ ಪಾರ್ಟಿ ನಡೆದಿದೆ. ಅಷ್ಟೇ ಅಲ್ಲದೇ ಇಂದು ವೇಣುಗೋಪಾಲ್ ಜೊತೆ ಪ್ರತ್ಯೇಕ ಸಭೆ ಹಿನ್ನೆಲೆಯಲ್ಲಿ ರೆಸಾರ್ಟ್ ನಲ್ಲಿ ತಂಗಿದ್ದರು. ಆದರೆ ಪಾರ್ಟಿ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗಿದ್ದು, ಗಲಾಟೆಯಲ್ಲಿ ಶಾಸಕ ಗಣೇಶ್ ಕೋಪಗೊಂಡು ಬಾಟಲ್ ನಿಂದ ಆನಂದ್ ಸಿಂಗ್ ತಲೆಗೆ ಹೊಡೆದಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ.

    ಗಲಾಟೆಗೆ ಕಾರಣ?
    ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ತೆಕ್ಕೆಗೆ ಸೇರಲು ಮುಂದಾಗಿದ್ದ ಗಣೇಶ್ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಮತ್ತು ಕಾಂಗ್ರೆಸ್ ಹೈಕಮಾಂಡ್‍ಗೆ ಆನಂದ್ ಸಿಂಗ್ ಮಾಹಿತಿ ನೀಡಿದ್ದರು. ಆನಂದ್ ಸಿಂಗ್ ನೀಡುತ್ತಿದ್ದ ಮಾಹಿತಿ ಆಧಾರದ ಮೇಲೆಯೇ ಗಣೇಶ್ ರನ್ನ ಕಾಂಗ್ರೆಸ್ ನಾಯಕರುಗಳು ಬೆನ್ನುಹತ್ತಿದ್ದರು. ಈಗ ಸಿಎಲ್‍ಪಿ ಸಭೆಯಲ್ಲಿ ಭಾಗವಹಿಸಿ ವಾಪಾಸ್ ಹೋಗಲು ಗಣೇಶ್ ಬಂದಿದ್ದರು. ಆದರೆ ಅನಿವಾರ್ಯವಾಗಿ ರೆಸಾರ್ಟ್ ನಲ್ಲಿ ಇರಬೇಕಾಯಿತು ಎಂದು ತಿಳಿದು ಬಂದಿದೆ.

    ಇದಕ್ಕೂ ಮುನ್ನ ತಮ್ಮ ಕಾರ್ಯತಂತ್ರದ ಬಗ್ಗೆ, ಆಪರೇಷನ್ ಕಮಲದ ಬಗ್ಗೆ ಆನಂದ್ ಸಿಂಗ್ ಬಳಿ ಗಣೇಶ್ ಹೇಳಿಕೊಂಡಿದ್ದರು. ಗಣೇಶ್ ನೀಡಿದ್ದ ಮಾಹಿತಿಯನ್ನ ಯಥಾವತ್ತಾಗಿ ಕಾಂಗ್ರೆಸ್ ನಾಯಕರಿಗೆ ಆನಂದ್ ಸಿಂಗ್ ತಲುಪಿಸಿದ್ದರು. ಆನಂದ್ ಸಿಂಗ್‍ರಿಂದಾಗಿ ಅನಿವಾರ್ಯವಾಗಿ ಇಲ್ಲೇ ಉಳಿಯಬೇಕಾಯಿತು ಎಂದು ಗಣೇಶ್ ಕೋಪಗೊಂಡಿದ್ದರು. ಇದೇ ವಿಚಾರವಾಗಿ ನಾಲ್ಕು ದಿನದ ಹಿಂದೆ ಫೋನ್ ನಲ್ಲಿ ಶಾಸಕರುಗಳು ಬೈದಾಡಿಕೊಂಡಿದ್ದರು ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.

    ಕಳೆದ ರಾತ್ರಿ ಪಾರ್ಟಿ ಮಾಡುತ್ತ ಬಳ್ಳಾರಿ ಶಾಸಕರುಗಳು ಕುಳಿತ್ತಿದ್ದರು. ಇದೇ ವಿಚಾರವಾಗಿ ಎಣ್ಣೆ ಏಟಿನಲ್ಲಿ ಶಾಸಕ ಗಣೇಶ್ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎಲ್ಲರನ್ನೂ ಸಂತೃಪ್ತಗೊಳಿಸೋ ಫ್ರೆಶ್ ಆರೆಂಜ್!

    ಎಲ್ಲರನ್ನೂ ಸಂತೃಪ್ತಗೊಳಿಸೋ ಫ್ರೆಶ್ ಆರೆಂಜ್!

    ಬೆಂಗಳೂರು: ನಿರ್ದೇಶಕ ಪ್ರಶಾಂತ್ ರಾಜ್ ಚಿತ್ರದಿಂದ ಚಿತ್ರಕ್ಕೆ ಭಿನ್ನ ಆಲೋಚನೆಗಳಿಂದಲೇ ಪ್ರೇಕ್ಷಕರಿಗೆ ಹತ್ತಿರಾಗಿರುವವರು. ಆ ಕಾರಣದಿಂದಲೇ ಅವರು ನಿರ್ದೇಶಿಸಿ ಗಣೇಶ್ ನಟಿಸಿದ್ದ ಝೂಮ್ ಪ್ರೇಕ್ಷಕರನ್ನು ಮುದಗೊಳಿಸಿತ್ತು. ಅದೇ ಜೋಡಿ ಇದೀಗ ಆರೆಂಜ್ ಚಿತ್ರದ ಮೂಲಕ ಮತ್ತೊಮ್ಮೆ ಪ್ರೇಕ್ಷಕರನ್ನು ಮುದಗೊಳಿಸಿದೆ.

    ಪ್ರಶಾಂತ್ ರಾಜ್ ಫ್ಯಾಮಿಲಿ ಸಮೇತ ಕೂತು ನೋಡುವಂಥಾ ಫ್ರೆಶ್ ಆರೆಂಜನ್ನು ಸಿದ್ಧಗೊಳಿಸಿ ಪ್ರೇಕ್ಷಕರ ಮುಂದೆ ತಂದಿದ್ದಾರೆ. ಗಣೇಶ್ ಅವರದ್ದಿಲ್ಲಿ ಸಂತೋಷ್ ಎಂಬ ಕಳ್ಳತನವನ್ನೇ ಬಂಡವಾಳ ಮಾಡಿಕೊಂಡ ಹುಡುಗನ ಪಾತ್ರ.

    ಕಳ್ಳತನವೊಂದರಲ್ಲಿ ಜೈಲುಪಾಲಾಗಿದ್ದ ನಾಯಕ ಬಿಡುಗಡೆಯಾಗಿ ಟ್ರೈನಿನಲ್ಲಿ ಹೋಗುತ್ತಿರುವಾಗಲೇ ಆರೆಂಜು ಬಣ್ಣದ ಸೀರೆಯುಟ್ಟ ನಾಯಕಿ ಎದುರಾಗ್ತಾಳೆ. ಆಕೆ ಆರೆಂಜ್ ಕೊಡೋ ಮೂಲಕ ಸಂತೋಷ್ ಗೆ ಪರಿಚಿತಳಾಗುತ್ತಾಳೆ. ಇದೆಲ್ಲ ಆಗೋ ಹೊತ್ತಿಗೆ ಟ್ವಿಸ್ಟು ಸಂಭವಿಸಿ ಟ್ರೈನ್ ಮಿಸ್ ಆಗಿ ನಾಯಕಿಯ ವಸ್ತುವೊಂದು ನಾಯಕನ ಬಳಿಯೇ ಉಳಿದು ಬಿಡುತ್ತೆ. ಅದನ್ನು ತಲುಪಿಸಲೆಂದು ನಾಯಕಿಯ ಮನೆಗೆ ಹೋದಾಗ ಅಲ್ಲೊಂದು ಸುಂದರ ಸಂಸಾರ ತೆರೆದುಕೊಳ್ಳುತ್ತೆ. ನಾಯಕನೂ ಕೂಡಾ ಆ ಸುಂದರ ಕುಟುಂಬದಲ್ಲಿ ಒಬ್ಬನಾಗಿ ಸೇರಿಕೊಳ್ಳುತ್ತಾನೆ.

    ಆದರೆ ನಾಯಕಿಯ ಕುಟುಂಬಕ್ಕೆ ಈತನ ಕಳ್ಳತನದ ಹಿಸ್ಟರಿ ಗೊತ್ತಾಗದಿರುತ್ತಾ? ಮುಂದೇನಾಗುತ್ತೆ ಎಂಬುದರ ಸುತ್ತಾ ಮಜವಾಗಿ ಕಥೆಯನ್ನು ಕೊಂಡೊಯ್ಯಲಾಗಿದೆ. ದೊಡ್ಡ ಕ್ಯಾನ್ವಾಸಿನ ತುಂಬಾ ಸಾಕಷ್ಟು ಪಾತ್ರಗಳು ಹರಡಿಕೊಂಡಿದ್ದರೂ ಕೂಡಾ ಅದೆಲ್ಲವನ್ನು ಮ್ಯಾನೇಜು ಮಾಡುವಲ್ಲಿ ನಿರ್ದೇಶಕರು ಗೆದ್ದಿದ್ದಾರೆ. ಗಣೇಶ್ ಅವರೂ ಚೆಂದಗೆ ನಟಿಸಿದ್ದಾರೆ. ಪ್ರಿಯಾ ಆನಂದ್ ನಟನೆಯೂ ಮನ ಸೆಳೆಯುವಂತಿದೆ. ಸಂತೋಷ್ ಪಾತಾಜೆ ಛಾಯಾಗ್ರಹಣ ಆರೆಂಜಿಗೆ ಹೊಸಾ ಸ್ವಾದವನ್ನೇ ತುಂಬಿದೆ. ಸಂಗೀತವೂ ಒಟ್ಟಾರೆ ಕಥೆಗೆ ಸಾಥ್ ಕೊಟ್ಟಿದೆ. ಒಟ್ಟಾರೆಯಾಗಿ ಈ ಆರೆಂಜ್ ಫ್ರೆಶ್ ಆದ ಸ್ವಾದದಿಂದಲೇ ಎಲ್ಲರನ್ನೂ ತೃಪ್ತವಾಗಿಸುತ್ತೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗಣೇಶ್ ದಂಪತಿಯಿಂದ ಸಂತಾಪ

    ಗಣೇಶ್ ದಂಪತಿಯಿಂದ ಸಂತಾಪ

    ಬೆಂಗಳೂರು: ಕೇಂದ್ರ ಸಚಿವ ಅನಂತ ಕುಮಾರ್ ಸಾವಿಗೆ ನಟ ಗಣೇಶ್ ಮತ್ತು ಅವರ ಪತ್ನಿ ಶಿಲ್ಪಾ ಗಣೇಶ್ ಇಬ್ಬರು ಸಂತಾಪ ಸೂಚಿಸಿದ್ದಾರೆ.

    ಶಿಲ್ಪಾ ಗಣೇಶ್ ರಾಜ್ಯ ಬಿಜೆಪಿ ಮಹಿಳಾ ಮೋರ್ಚ ಉಪಾಧ್ಯಕ್ಷೆಯಾಗಿದ್ದು, ಟ್ವೀಟ್ ಮಾಡುವ ಮೂಲಕ ಅನಂತಕುಮಾರ್ ಅವರ ನಿಧನಕ್ಕೆ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ಗಣೇಶ್ ಕೂಡ ಟ್ವೀಟ್ ಮಾಡಿದ್ದಾರೆ.

    “ಅನಂತಕುಮಾರ್ ಅವರು, ಬಿಜಿಪಿ ಪಕ್ಷವನ್ನು ಬಲಪಡಿಸಲು ಹಾಗೂ ದೇಶ ಸೇವೆ ಮಾಡಲು ತಮ್ಮ ಜೀವನವನ್ನೇ ಅವರು ಮುಡಿಪಾಗಿಟ್ಟಿದ್ದರು. ಅವರ ನಿಧನದಿಂದ ತುಂಬಾ ದುಃಖವಾಗಿದೆ. ಅವರ ಕುಟುಂದವರಿಗೆ ಸಂತಾಪ ಸೂಚಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

    ನಟ ಗಣೇಶ್ ಕೂಡ ಅನಂತ್ ಕುಮಾರ್ ಅವರ ಬಗ್ಗೆ ಟ್ವೀಟ್ ಮಾಡಿದ್ದು, “ಅನಂತ್ ಕುಮಾರ್ ಒಬ್ಬ ವಿಭಿನ್ನ ವ್ಯಕ್ತಿತ್ವ ಹೊಂದಿರುವ ನಾಯಕರಾಗಿದ್ದರು. ಅವರ ಇಡೀ ಕುಟುಂಬ ಸದಸ್ಯರಿಗೆ ಸಂತಾಪ ಸೂಚಿಸುತ್ತೇನೆ.” ಎಂದು ಬರೆದು ಅನಂತಕುಮಾರ್ ಫೋಟೋ ಹಾಕಿ ಬೇಸರ ವ್ಯಕ್ತಪಡಿಸಿದ್ದಾರೆ.

    ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ನಸುಕಿನ ಜಾವ ಕೇಂದ್ರ ಸಚಿವ ಅನಂತಕುಮಾರ್ ಕೊನೆಯುಸಿರೆಳೆದಿದ್ದಾರೆ. ರಾಜಕೀಯ ನಾಯಕರು, ಮುಖಂಡರು ಅವರ ಅಂತಿಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ನಾಳೆ ಚಾಮರಾಜಪೇಟೆಯಲ್ಲಿರುವ ರುದ್ರಭೂಮಿಯಲ್ಲಿ ಅನಂತಕುಮಾರ್ ಅಂತ್ಯಕ್ರಿಯೆ ನಡೆಯಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಗೋಲ್ಡನ್ ಸ್ಟಾರ್ ಮನೆಯಲ್ಲಿ ದೀಪಾವಳಿ ಆಚರಿಸಿದ ಸ್ಯಾಂಡಲ್‍ವುಡ್ ಸ್ಟಾರ್ಸ್: ಫೋಟೋಗಳಲ್ಲಿ ನೋಡಿ

    ಗೋಲ್ಡನ್ ಸ್ಟಾರ್ ಮನೆಯಲ್ಲಿ ದೀಪಾವಳಿ ಆಚರಿಸಿದ ಸ್ಯಾಂಡಲ್‍ವುಡ್ ಸ್ಟಾರ್ಸ್: ಫೋಟೋಗಳಲ್ಲಿ ನೋಡಿ

    ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರ ಮನೆಯಲ್ಲಿ ಸ್ಯಾಂಡಲ್‍ವುಡ್ ಕಲಾವಿದರು ದೀಪಾವಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

    ನಟ ಗಣೇಶ್ ಶೂಟಿಂಗ್ ನಿಂದ ಸ್ವಲ್ಪ ಬಿಡುವು ಮಾಡಿಕೊಂಡು ಸ್ಯಾಂಡಲ್‍ವುಡ್ ಕಲಾವಿದರ ಜೊತೆ ತಮ್ಮ ಮನೆಯಲ್ಲೇ ದೀಪಾವಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಗಣೇಶ್ ಅವರ ಮನೆಯಲ್ಲಿ ನಟ ರವಿಶಂಕರ್ ಗೌಡ, ಗೋಲ್ಡನ್ ಕ್ವೀನ್ ಅಮೂಲ್ಯ ಹಾಗೂ ಹಲವು ಕಲಾವಿದರು ಭಾಗಿಯಾಗಿದ್ದರು.

    ದೀಪಾವಳಿ ಹಬ್ಬಕ್ಕೆ ಗಣೇಶ್ ಕುರ್ತಾ ಹಾಕಿದ್ದರೆ, ಅವರ ಪತ್ನಿ ಶಿಲ್ಪಾ ಗಣೇಶ್ ಸಾಂಸ್ಕೃತಿಕ ಉಡುಗೆ ತೊಟ್ಟು ಮಿಂಚಿದ್ದಾರೆ. ಗಣೇಶ್ ಮಕ್ಕಳಾದ ಚಾರಿತ್ರ್ಯ ಹಾಗೂ ವಿಹಾನ್ ಕೂಡ ಹೊಸ ಬಟ್ಟೆ ಧರಿಸಿ ದೀಪಾವಳಿ ಸಂಭ್ರದಲ್ಲಿ ಭಾಗಿಯಾಗಿದ್ದರು.

    ಸದ್ಯ ಗಣೇಶ್ ಅವರ ಮನೆಯಲ್ಲಿ ದೀಪಾವಳಿ ಹಬ್ಬದ ದಿನ ಕ್ಲಿಕಿಸಿದ ಫೋಟೋವನ್ನು ಶಿಲ್ಪಾ ಗಣೇಶ್ ಹಾಗೂ ನಟಿ ಅಮೂಲ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವುದರ ಮೂಲಕ ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.

    ಇತ್ತ ನಟ ಹಾಗೂ ನಿರ್ದೇಶಕ ರಮೇಶ್ ಅರವಿಂದ್ ಅವರು ತಮ್ಮ ಕುಟುಂಬದ ಜೊತೆ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ. ರಮೇಶ್ ನರಕ ಚತುರ್ದಶಿಯಂದು ತಮ್ಮ ಮಕ್ಕಳ ಜೊತೆ ಪಟಾಕಿ ಸಿಡಿಸಿದ್ದಾರೆ. ತಮ್ಮ ಮಕ್ಕಳ ಜೊತೆ ಪಟಾಕಿ ಹೊಡೆದ ಫೋಟೋವನ್ನು ರಮೇಶ್ ಟ್ವೀಟ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv