Tag: ಗಣೇಶ್

  • ಏಳು ಜನ ಸ್ಟಾರ್ ಗಳ ಕಾಂಬಿನೇಷನ್ ನಲ್ಲಿ ಶಿವಣ್ಣ ಸಿನಿಮಾ: ಯಾರೆಲ್ಲ ಸ್ಟಾರ್?

    ಏಳು ಜನ ಸ್ಟಾರ್ ಗಳ ಕಾಂಬಿನೇಷನ್ ನಲ್ಲಿ ಶಿವಣ್ಣ ಸಿನಿಮಾ: ಯಾರೆಲ್ಲ ಸ್ಟಾರ್?

    ಭಾರತೀಯ ಸಿನಿಮಾ ರಂಗದಲ್ಲೇ ಅತೀ ಹೆಚ್ಚು ಸಿನಿಮಾಗಳಿಗೆ ಸಹಿ ಮಾಡಿದ ಹೆಗ್ಗಳಿಕೆ ಶಿವರಾಜ್ ಕುಮಾರ್ (Shivaraj Kumar) ಅವರಿಗೆ ಸಲ್ಲಬೇಕು. ಶಿವಣ್ಣ ಅವರ ಆಪ್ತರೇ ಹೇಳುವಂತೆ ಇನ್ನೂ ಹತ್ತು ವರ್ಷಕ್ಕೆ ಆಗುವಷ್ಟು ಸಿನಿಮಾಗಳು ಅವರ ಕೈಯಲ್ಲಿವೆಯಂತೆ. ತಮಿಳಿನಲ್ಲೇ ಶಿವರಾಜ್ ಕುಮಾರ್ ಇದೀಗ ಎರಡು ಚಿತ್ರಗಳನ್ನು ಮಾಡಿದ್ದಾರೆ. ತೆಲುಗು ಚಿತ್ರೋದ್ಯಮದಿಂದಲೂ ಅವರಿಗೆ ಬೇಡಿಕೆಯಿದೆ. ಈ ನಡುವೆ ಒಟ್ಟು ಏಳು ಮಲ್ಟಿಸ್ಟಾರ್ ಸಿನಿಮಾಗಳಲ್ಲಿ (Multistar Movie) ಶಿವಣ್ಣ ಅಭಿನಯಿಸಲಿದ್ದಾರೆ.

    ಅರ್ಜುನ್ ಜನ್ಯ ನಿರ್ದೇಶನದಲ್ಲಿ ಮೂಡಿ ಬರಲಿರುವ ಸಿನಿಮಾದಲ್ಲಿ ಉಪೇಂದ್ರ (Upendra) ಮತ್ತು ರಾಜ್ ಬಿ ಶೆಟ್ಟಿ ಜೊತೆ ಶಿವರಾಜ್ ಕುಮಾರ್ ನಟಿಸುತ್ತಿದ್ದಾರೆ. ಈಗಾಗಲೇ ಅದ್ಧೂರಿಯಾಗಿ ಈ ಸಿನಿಮಾದ ಟೈಟಲ್ ಮತ್ತು ಮುಹೂರ್ತ ಕಾರ್ಯಕ್ರಮ ನಡೆದಿದೆ. ಸದ್ಯದಲ್ಲೇ ಶೂಟಿಂಗ್ ಕೂಡ ಶುರುವಾಗಲಿದೆ. ಗಾಳಿಪಟ 2, ಪಡ್ಡೆಹುಲಿ ಸೇರಿದಂತೆ ಹಲವು ಚಿತ್ರಗಳನ್ನು ನಿರ್ಮಾಣ ಮಾಡಿರುವ ರಮೇಶ್ ರೆಡ್ಡಿ ಈ ಸಿನಿಮಾದ ನಿರ್ಮಾಪಕರು.

    ತಮಿಳಿನಲ್ಲಿ ಏಕಕಾಲಕ್ಕೆ ಎರಡು ಚಿತ್ರಗಳನ್ನು ಒಪ್ಪಿಕೊಂಡು ಅವುಗಳ ಶೂಟಿಂಗ್ ಕೂಡ ಮುಗಿಸಿದ್ದಾರೆ ಶಿವರಾಜ್ ಕುಮಾರ್. ಜೈಲರ್ ಹೆಸರಿನ ಚಿತ್ರದಲ್ಲಿ ರಜನಿಕಾಂತ್ (Rajinikanth) ನಾಯಕನಾದರೆ, ಮತ್ತೊಂದು ಚಿತ್ರದಲ್ಲಿ ಧನುಷ್ (Dhanush) ಹೀರೋ.  ಈ ಇಬ್ಬರೂ ಹೀರೋಗಳ ಜೊತೆ ಶಿವಣ್ಣ ಅಪರೂಪದ ಪಾತ್ರಗಳನ್ನು ಮಾಡಿದ್ದಾರೆ. ಈ ಎರಡೂ ಚಿತ್ರಗಳು ಈಗಾಗಲೇ ನಿರೀಕ್ಷೆ ಮೂಡಿಸಿವೆ. ಇದನ್ನೂ ಓದಿ:ಜುಲೈ 12ಕ್ಕೆ ಸೆಂಚುರಿ ಸ್ಟಾರ್ ಬರ್ತ್‌ಡೇಗೆ ಸಿದ್ಧತೆ ಹೇಗಿದೆ ಗೊತ್ತಾ?

    ಶಿವರಾಜ್ ಕುಮಾರ್ ಜೊತೆ ಇದೇ ಮೊದಲ ಬಾರಿಗೆ ಗೋಲ್ಡನ್ ಸ್ಟಾರ್ ಗಣೇಶ್ (Ganesh) ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಸಿನಿಮಾದ ಪೋಸ್ಟರ್ ಇಂದು ಬಿಡುಗಡೆಯಾಗಿದೆ. ಕೆ.ಎಸ್ ರವಿಕುಮಾರ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಚಿತ್ರಕ್ಕೆ ಇನ್ನೂ ಯಾವುದೇ ಶೀರ್ಷಿಕೆ ಇಟ್ಟಿಲ್ಲ. ಸೂರಪ್ಪ ಬಾಬು ಈ ಸಿನಿಮಾವನ್ನು ನಿರ್ಮಾಣ ಮಾಡಲಿದ್ದಾರೆ.

    ಖ್ಯಾತ ಡಾನ್ಸರ್, ನಿರ್ದೇಶಕ, ನಟ ಪ್ರಭುದೇವ (Prabhudev) ಜೊತೆ ಕೂಡ ಇದೇ ಮೊದಲ ಬಾರಿಗೆ ಶಿವರಾಜ್ ಕುಮಾರ್ ನಟಿಸುತ್ತಿದ್ದಾರೆ. ಈಗಾಗಲೇ ಬಹುತೇಕ ಶೂಟಿಂಗ್ ಕೂಡ ಮುಗಿಸಿದ್ದಾರೆ. ಯೋಗರಾಜ್ ಭಟ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ರಾಕ್ ಲೈನ್ ವೆಂಕಟೇಶ್ ಸಿನಿಮಾದ ನಿರ್ಮಾಪಕರು. ಶಿವಣ್ಣ ಹುಟ್ಟು ಹಬ್ಬದ ದಿನದಂದು ಚಿತ್ರದ ಹೆಸರು ಘೋಷಣೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ.

     

    ಶಿವರಾಜ್ ಕುಮಾರ್ ಜೊತೆ ಅಜಯ್ ರಾವ್ (Ajay Rao) ಕೂಡ ಒಂದು ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಸಿನಿಮಾದ ಪೋಸ್ಟರ್ ಕೂಡ ಇಂದು ರಿಲೀಸ್ ಆಗಿದೆ. ಬಾಹುಬಲಿ ಎಸ್.ಕೆ ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ಕಿರಣ್ ಎನ್ನುವವರು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದ ಟೈಟಲ್ ಕೂಡ ಇನ್ನೂ ರಿವೀಲ್ ಆಗಿಲ್ಲ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘BAD’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ ಗಣೇಶ್

    ‘BAD’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ ಗಣೇಶ್

    ಪಿ.ಸಿ ಶೇಖರ್ ನಿರ್ದೇಶನದ ಹತ್ತನೇ ಚಿತ್ರ ಹಾಗೂ ನಕುಲ್ ಗೌಡ (ಪ್ರೀತಿಯ ರಾಯಭಾರಿ ಖ್ಯಾತಿ) ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ ‘BAD’ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಗೋಲ್ಡನ್ ಸ್ಟಾರ್ ಗಣೇಶ್  (Ganesh) ಫಸ್ಟ್ ಲುಕ್ (First Look) ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

    ಇದು ನಾಯಕ ಪ್ರಧಾನ ಚಿತ್ರವಲ್ಲ‌‌. ಏಳು ಮುಖ್ಯಪಾತ್ರಗಳಿವೆ.  ಮನುಷ್ಯನಲ್ಲಿ ಕಾಮ, ಕ್ರೋಧ, ಲೋಭ, ಮೋಹ, ಮದ, ಮಾತ್ಸರ್ಯವೆಂಬ  ಅರಿಷಡ್ವರ್ಗಗಳಿರುತ್ತದೆ. ಈ ಆರು ಅರಿಷಡ್ವರ್ಗಗಳನ್ನು ಚಿತ್ರದ ಆರು ಪಾತ್ರಗಳು ಪ್ರತಿನಿಧಿಸುತ್ತದೆ. ಆ ಪೈಕಿ ಕ್ರೋಧವನ್ನು ಪ್ರತಿನಿಧಿಸುತ್ತಿರುವ ನಕುಲ್ ಗೌಡ ಅವರ ಫಸ್ಟ್ ಲುಕ್ ಪೋಸ್ಟರ್ ಇಂದು ಬಿಡುಗಡೆಯಾಗಿದೆ.

    ಸಾಮಾನ್ಯವಾಗಿ ಕ್ರೋಧವನ್ನು ಕಿರಿಚುವುದು, ಅರಚುವುದು ಮುಂತಾದ ವಿಚಿತ್ರ ರೀತಿಗಳಿಂದ ತೋರಿಸುತ್ತಾರೆ. ನಾವು ಮುಖದ ಹಾವಭಾವದಲ್ಲಿ ಕ್ರೋಧವನ್ನು ತೋರಿಸುವ ಪ್ರಯತ್ನ ಮಾಡಿದ್ದೇವೆ. ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ ಎಂದು ನಿರ್ದೇಶಕ ಪಿ.ಸಿ.ಶೇಖರ್ ತಿಳಿಸಿದ್ದಾರೆ. ಇದನ್ನೂ ಓದಿ:‘ಕೆಡಿ’ ಸಿನಿಮಾದಲ್ಲಿ ಧ್ರುವ ಸರ್ಜಾ: ರೆಟ್ರೋ ಲುಕ್ ಫೋಟೋ ಲೀಕ್

    ಇದೊಂದು ವಿಭಿನ್ನ ಕಥೆಯ ಚಿತ್ರ ಎಂದು ತಿಳಿಸಿರುವ ಮುಖ್ಯ ಪಾತ್ರಧಾರಿ ನಕುಲ್, ನನ್ನದು ಈ ಚಿತ್ರದಲ್ಲಿ ಕ್ರೋಧವನ್ನು ಪ್ರತಿನಿಧಿಸುವ ಪಾತ್ರ. ಕ್ರೋಧವನ್ನು ಚಿತ್ರದಲ್ಲಿ ಭೀಕರವಾಗಿ ತೋರಿಸಿಲ್ಲ. ನಿರ್ದೇಶಕ ಪಿ‌.ಸಿ.ಶೇಖರ್ (PC Shekhar) ಉತ್ತಮವಾದ ಕಥೆ ಮಾಡಿದ್ದಾರೆ. ಚಿತ್ರಕಥೆ ಚಿತ್ರದ ಹೈಲೆಟ್ ಎಂದರೆ ತಪ್ಪಾಗಲಾರದು. ಬಹುತೇಕ ಭಾಗದ ಚಿತ್ರೀಕರಣ ಸೆಟ್ ನಲ್ಲೇ ನಡೆದಿರುವುದು ವಿಶೇಷ ಎನ್ನುತ್ತಾರೆ.

    ಎಸ್.ಆರ್.ವೆಂಕಟೇಶ್ ಗೌಡ ನಿರ್ಮಾಣದ BAD ಚಿತ್ರದಲ್ಲಿ   ರೋಷಮಾನ್ ಎಫೆಕ್ಟ್ ಎಂಬ ವಿಶೇಷ ವಿಧಾನವನ್ನು ಬಳಸಿಕೊಳ್ಳಲಾಗಿದೆ‌.  ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಪಿ.ಸಿ.ಶೇಖರ್ ಸಂಕಲನ ಹಾಗೂ ಶಕ್ತಿ ಶೇಖರ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ   ಸಚಿನ್ ಬಿ ಹೊಳಗುಂಡಿ  ಸಂಭಾಷಣೆ ಬರೆದಿದ್ದಾರೆ. ಜಿ.ರಾಜಶೇಖರ್ ಅವರ ಕಲಾ ನಿರ್ದೇಶನ ಚಿತ್ರಕ್ಕಿದೆ.

    ಪ್ರೀತಿಯ ರಾಯಭಾರಿ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ನಕುಲ್ ಗೌಡ (Nakul Gowda), ಮಾನ್ವಿತ ಹರೀಶ್ (Manvita Harish), ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಣೇಶ್ ಹುಟ್ಟು ಹಬ್ಬಕ್ಕೆ ಹೊಸ ಸಿನಿಮಾದ ಟೈಟಲ್ ಲಾಂಚ್

    ಗಣೇಶ್ ಹುಟ್ಟು ಹಬ್ಬಕ್ಕೆ ಹೊಸ ಸಿನಿಮಾದ ಟೈಟಲ್ ಲಾಂಚ್

    ನಾಳೆ ಗೋಲ್ಡನ್ ಸ್ಟಾರ್ ಗಣೇಶ್ (Ganesh) ಅವರು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಹುಟ್ಟು ಹಬ್ಬಕ್ಕೆ ಮುನ್ನಾ ದಿನ ಇಂದು ಅವರ ಹೊಸ ಸಿನಿಮಾದ ಟೈಟಲ್ (Title) ಲಾಂಚ್ ಆಗಿದೆ. ದಂಡುಪಾಳ್ಯ ಖ್ಯಾತಿಯ ಶ್ರೀನಿವಾಸ್ ರಾಜು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ (Krishnam Pranaya Sakhi) ಎಂದು ಹೆಸರಿಡಲಾಗಿದೆ.

    ಗಣೇಶ್ ನಾಯಕರಾಗಿ ನಟಿಸುತ್ತಿರುವ 41 ನೇ ಚಿತ್ರ ಇದಾಗಿದ್ದು, ಕನ್ನಡದ ಹಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು (Srinivas Raju) ಇದೇ ಮೊದಲ ಬಾರಿಗೆ ಗಣೇಶ್ ಜೊತೆ ಕೆಲಸ ಮಾಡುತ್ತಿದ್ದಾರೆ. ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಮೈಸೂರು, ರಾಜಸ್ಥಾನ ಹಾಗೂ ಯುರೋಪ್ ನಲ್ಲಿ ಚಿತ್ರೀಕರಣ ನಡೆಯಲಿದೆ. ಇದನ್ನೂ ಓದಿ:ಕಾರವಾರದಲ್ಲಿ ಬದುಕಿದ್ದ ವಿಲಕ್ಷಣ ವ್ಯಕ್ತಿಯ ಕಥೆಯೇ ‘ಟೋಬಿ’ : ಗುಟ್ಟು ರಟ್ಟು

    ಜುಲೈ 2ರಂದು ಗಣೇಶ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರವಿದು. ಅರ್ಜುನ್ ಜನ್ಯ ಈ ಚಿತ್ರದ ಸಂಗೀತ ನಿರ್ದೇಶಕರು.

    ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸುತ್ತಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಸುಧಾರಾಣಿ, ಶ್ರೀನಿವಾಸಮೂರ್ತಿ, ಶಿವಧ್ವಜ್ ಶೆಟ್ಟಿ, ಬೆನಕ ಗಿರಿ ಮುಂತಾದ ಕಲಾವಿದರು ಕೃಷ್ಣಂ ಪ್ರಣಯ ಸಖಿ ಚಿತ್ರದಲ್ಲಿ ನಟಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಣೇಶ್ ಅಡ್ಡಾದಲ್ಲಿ ಉಸ್ತಾದ್ ಹೋಟೆಲ್ ಬೆಡಗಿ ಮಾಳವಿಕಾ ನಾಯರ್

    ಗಣೇಶ್ ಅಡ್ಡಾದಲ್ಲಿ ಉಸ್ತಾದ್ ಹೋಟೆಲ್ ಬೆಡಗಿ ಮಾಳವಿಕಾ ನಾಯರ್

    ದಂಡುಪಾಳ್ಯ (Dandupalya) ಸಿನಿಮಾ ಖ್ಯಾತಿಯ ಶ್ರೀನಿವಾಸ್ ರಾಜು (Srinivas Raju) ಇದೀಗ ಮತ್ತೊಂದು ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಅವರು ಗೋಲ್ಡನ್ ಸ್ಟಾರ್ ಗಣೇಶ್ (Ganesh) ಗಾಗಿ ಚಿತ್ರವೊಂದನ್ನು ನಿರ್ದೇಶನ ಮಾಡುತ್ತಿದ್ದು, ಸದ್ದಿಲ್ಲದೇ ಶೂಟಿಂಗ್ ಕೂಡ ಶುರು ಮಾಡಿದ್ದಾರೆ. ಇದೊಂದು ಫ್ಯಾಮಿಲಿ ರೊಮ್ಯಾಂಟಿಕ್ ಕಾಮಿಡಿ ಸಿನಿಮಾವಾಗಿದ್ದು, ಮಲಯಾಳಂ ಚಿತ್ರ ಖ್ಯಾತಿಯ ಮಾಳವಿಕಾ ನಾಯರ್ ಅವರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ.

    ಉಸ್ತಾದ್ ಹೋಟೆಲ್ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಬೆಡಗಿ ಮಾಳವಿಕಾ ನಾಯರ್. ಮಲಯಾಳಂ (Malayalam) ಸಿನಿಮಾ ರಂಗದಲ್ಲಿ ಮಾತ್ರವಲ್ಲ, ತೆಲುಗು ಚಿತ್ರಗಳಲ್ಲೂ ಮಾಳವಿಕಾ ಅಭಿನಯಿಸಿದ್ದಾರೆ. 2012ರಲ್ಲಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟವರು ಅಲ್ಲಿಂದ ನಿರಂತರವಾಗಿ ಹನ್ನೊಂದು ವರ್ಷಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀರಾಗಿದ್ದಾರೆ. ಇದನ್ನೂ ಓದಿ:ಮತ್ತೆ ಸ್ಟೈಲೀಶ್‌ ಆಗಿ ಕಾಣಿಸಿಕೊಂಡ ‘ಬಿಗ್‌ ಬಾಸ್‌’ ಸಾನ್ಯ ಅಯ್ಯರ್

    ಕುಕ್ಕೂ, ಬ್ಲ್ಯಾಕ್ ಬಟರ್ ಫ್ಲೈ ರೀತಿಯ ಹಿಟ್ ಸಿನಿಮಾಗಳಲ್ಲಿ ನಟಿಸಿರುವ ಮಾಳವಿಕಾ ನಾಯರ್ (Malavika Nair), ಇದೇ ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಗಣೇಶ್ ನಟಿಸುತ್ತಿರುವ ಈ ಹೊಸ ಸಿನಿಮಾದಲ್ಲಿ ಇಬ್ಬರು ನಾಯಕಿಯರಿದ್ದು, ಒಂದು ಪಾತ್ರವನ್ನು ಮಾಳವಿಕ ನಾಯರ್ ನಿರ್ವಹಿಸಿದರೆ ಮತ್ತೊಂದು ಪಾತ್ರಕ್ಕೆ ನಾಯಕಿಯ ಆಯ್ಕೆ ನಡೆಯುತ್ತಿದೆಯಂತೆ.

    ಇದೊಂದು ಪಕ್ಕಾ ಎಂಟರ್ ಟೇನ್ಮೆಂಟ್ ಸಿನಿಮಾವಾಗಿದ್ದರಿಂದ ತಾರಾಗಣದಲ್ಲೂ ಅಂತಹ ಕಲಾವಿದರನ್ನೇ ಕಾಣಬಹುದಾಗಿದೆ. ಸಾಧು ಕೋಕಿಲಾ, ಗಿರಿ ಶಿವಣ್ಣ ಸೇರಿದಂತೆ ಹಲವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಶೂಟಿಂಗ್ ಶುರುವಾಗಿದ್ದು, ಮುಂದಿನ ಹಂತದ ಚಿತ್ರೀಕರಣದಲ್ಲಿ ಮಾಳವಿಕಾ ನಾಯರ್ ಭಾಗಿಯಾಗಲಿದ್ದಾರಂತೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಜೊತೆ ಜೊತೆಯಲಿ’ ನನ್ನ ಪಯಣ ಮುಗಿಯಿತು : ನಟಿ ಮೇಘಾ ಶೆಟ್ಟಿ ಭಾವುಕ

    ‘ಜೊತೆ ಜೊತೆಯಲಿ’ ನನ್ನ ಪಯಣ ಮುಗಿಯಿತು : ನಟಿ ಮೇಘಾ ಶೆಟ್ಟಿ ಭಾವುಕ

    ರೂರು ಜಗದೀಶ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ (Jothe Jotheyali) ಧಾರಾವಾಹಿ ಮುಗಿಯುತ್ತಿದೆಯಾ? ಅಥವಾ ಸೀರಿಯಲ್ (Serial) ನಾಯಕಿ ಮೇಘಾ ಶೆಟ್ಟಿ (Megha Shetty) ಪಾತ್ರ ಮುಕ್ತಾಯ ಆಗುತ್ತಿದೆಯೋ ಗೊತ್ತಿಲ್ಲ. ಆದರೆ, ತಮ್ಮ ಪಾತ್ರವು ಧಾರಾವಾಹಿಯ ಕಥೆಯಲ್ಲಿ ಮುಗಿಯುತ್ತಿರುವ ಕುರಿತು ನಟಿ ಮೇಘಾ ಶೆಟ್ಟಿ ಹಂಚಿಕೊಂಡಿದ್ದಾರೆ. ಒಂದೊಂದು ರೀತಿಯಲ್ಲಿ ಕುಟುಂಬವನ್ನು ತೊರೆದಂತೆ ನೋವು ಆಗುತ್ತಿದೆ ಎಂದು ಅವರು ಹೇಳಿದ್ದಾರೆ.

    ಜೊತೆ ಜೊತೆಯಲಿ ಧಾರಾವಾಹಿಯು ಅವರ ವೃತ್ತಿ ಜೀವನಕ್ಕೆ ದೊಡ್ಡ ಬ್ರೇಕ್ ನೀಡಿತ್ತು. ಸತತ ನಾಲ್ಕು ವರ್ಷಗಳ ಕಾಲ ಪ್ರೇಕ್ಷಕರನ್ನು ರಂಜಿಸಿರುವ ಧಾರಾವಾಹಿಯು ಅಪಾರ ಅಭಿಮಾನಿಗಳನ್ನು ಹೊಂದಿತ್ತು. ಅದರಲ್ಲೂ ಅನಿರುದ್ಧ ಜತ್ಕರ್ ಗೂ ಕೂಡ ದೊಡ್ಡ ಮಟ್ಟದ ಗೆಲುವನ್ನು ತಂದು ಕೊಟ್ಟಿತ್ತು. ಅಂತಹ ಧಾರಾವಾಹಿ ಈಗ ಅಂತಿಮ ದೃಶ್ಯಗಳನ್ನು ಚಿತ್ರೀಕರಿಸುತ್ತಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಮೇಘಾ ನಿರ್ವಹಿಸುತ್ತಿದ್ದ ಪಾತ್ರವೂ ಕೊನೆಗೊಂಡಿದೆ. ಇದನ್ನೂ ಓದಿ:ಶಾಹಿದ್ ಕಪೂರ್ ಜೊತೆ ಪೂಜಾ ಹೆಗ್ಡೆ ರೊಮ್ಯಾನ್ಸ್

    ಜೊತೆ ಜೊತೆಯಲಿ ಧಾರಾವಾಹಿ ಮುಗಿಯುತ್ತಿದ್ದಂತೆಯೇ ಮೇಘಾ ಶೆಟ್ಟಿ ಸಿನಿಮಾಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಈಗಾಗಲೇ ಅವರು ಗೋಲ್ಡನ್ ಸ್ಟಾರ್ ಗಣೇಶ್ (Ganesh) ನಟನೆಯ ಟ್ರಿಬಲ್ ರೈಡಿಂಗ್ (Triple Riding) ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಪ್ರವೇಶ ಮಾಡಿದ್ದಾರೆ. ಅಲ್ಲದೇ,   ಧನ್ವೀರ್ ನಟನೆಯ ಕೈವಾ ಸಿನಿಮಾದಲ್ಲೂ ನಾಯಕಿಯಾಗಿ ನಟಿಸಿದ್ದಾರೆ. ಆಪರೇಷನ್ ಲಂಡನ್ ಕೆಫೆ ಸಿನಿಮಾದ ಶೂಟಿಂಗ್ ನಲ್ಲೂ ಬ್ಯುಸಿಯಾಗಿದ್ದಾರೆ.

    ಕಿರುತೆರೆಯಿಂದ ಆಚೆ ಬರುತ್ತಿದ್ದಂತೆಯೇ ಹಲವಾರು ನಿರ್ದೇಶಕರು ಮೇಘಾರ ಜೊತೆ ಮಾತುಕತೆ ಮಾಡುತ್ತಿದ್ದಾರಂತೆ. ಹಲವು ಸ್ಕ್ರಿಪ್ಟ್ ಗಳನ್ನೂ ಅವರು ಕೇಳಿದ್ದಾರೆ. ಒಂದಷ್ಟು ಒಪ್ಪಿಕೊಂಡಿದ್ದಾರಂತೆ. ಮುಂದಿನ ದಿನಗಳಲ್ಲಿ ಈ ಸಿನಿಮಾಗಳ ಬಗ್ಗೆ ಮಾಹಿತಿ ಸಿಗಬಹುದು.

  • ಶಿವಣ್ಣ-ಗಣೇಶ್ ನಟನೆಯ ಚಿತ್ರಕ್ಕೆ ಸ್ಟಾರ್ ನಿರ್ದೇಶಕನ ಎಂಟ್ರಿ

    ಶಿವಣ್ಣ-ಗಣೇಶ್ ನಟನೆಯ ಚಿತ್ರಕ್ಕೆ ಸ್ಟಾರ್ ನಿರ್ದೇಶಕನ ಎಂಟ್ರಿ

    ನ್ನಡದಲ್ಲಿ ಮತ್ತೊಂದು ಮಲ್ಟಿಸ್ಟಾರ್ ಸಿನಿಮಾ ಸದ್ದಿಲ್ಲದೇ ರೂಪುಗೊಳ್ಳುತ್ತಿದೆ. ಮೊನ್ನೆಯಷ್ಟೇ ಶಿವರಾಜ್ ಕುಮಾರ್ (Shivaraj Kumar) ಮತ್ತು ಗಣೇಶ್ (Ganesh) ಕಾಂಬಿನೇಷನ್ ಸಿನಿಮಾ ಬಗ್ಗೆ ಪಬ್ಲಿಕ್ ಟಿವಿ ಡಿಜಿಟಲ್ ಎಕ್ಸ್ ಕ್ಲೂಸಿವ್ ಸುದ್ದಿ ನೀಡಿತ್ತು. ಇದೀಗ ಆ ಚಿತ್ರಕ್ಕೆ ಸ್ಟಾರ್ ನಿರ್ದೇಶಕರೊಬ್ಬರ ಎಂಟ್ರಿಯಾಗಿದೆ. ಈಗಾಗಲೇ ಆ ನಿರ್ದೇಶಕರು ಇಬ್ಬರೂ ನಟರನ್ನು ಭೇಟಿ ಮಾಡಿ ಮಾತುಕತೆ ಕೂಡ ನಡೆಸಿದ್ದಾರೆ ಎನ್ನುವುದಕ್ಕೆ ಫೋಟೋವೊಂದು ಸಾಕ್ಷಿಯಾಗಿದೆ.

    ಶಿವರಾಜ್ ಕುಮಾರ್ ಜೊತೆ ಈಗಾಗಲೇ ಹಲವು ಸ್ಟಾರ್ ಗಳು ನಟಿಸಿದ್ದಾರೆ. ಉಪೇಂದ್ರ, ಸುದೀಪ್, ರವಿಚಂದ್ರನ್ ಸೇರಿದಂತೆ ಹಲವು ಕಲಾವಿದರು ತೆರೆ ಹಂಚಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಶಿವಣ್ಣ ಜೊತೆ ಗಣೇಶ್ ಸೇರಿಕೊಂಡಿದ್ದಾರೆ. ಹೀಗಾಗಿ ಈ ಚಿತ್ರಕ್ಕೆ ಮಹತ್ವ ಬಂದಿದೆ. ಅಲ್ಲದೇ ಈ ಸಿನಿಮಾಗೆ ನಿರ್ದೇಶಕರು ಯಾರಿರಬಹುದು ಎನ್ನುವ ಕುತೂಹಲ ಕೂಡ ಮೂಡಿದೆ. ಇದೀಗ ಕುತೂಹಲಕ್ಕೆ ತೆರೆ ಬಿದ್ದಿದೆ. ಇದನ್ನೂ ಓದಿ: ಪಾಕಿಸ್ತಾನದ ಡಿಸೈನರ್ ವಿನ್ಯಾಸ ಮಾಡಿದ ಲೆಹೆಂಗಾದಲ್ಲಿ ಕಂಗೊಳಿಸಿದ ಸ್ವರಾ ಭಾಸ್ಕರ್

    ತಮಿಳಿನಲ್ಲಿ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ಕೊಟ್ಟಿರುವ ಮತ್ತು ರಜನಿಕಾಂತ್ ಜೊತೆ ಹಲವಾರು ಸಿನಿಮಾಗಳನ್ನು ಮಾಡಿರುವ ಕೆ.ಎಸ್.ರವಿಕುಮಾರ್ (KS Ravikumar) ಮತ್ತೆ ಕನ್ನಡ ಸಿನಿಮಾ ರಂಗಕ್ಕೆ ಬರುತ್ತಿದ್ದಾರೆ. ಈ ಹಿಂದೆ ಅವರು ಸುದೀಪ್ ನಟನೆಯ ಕೋಟಿಗೊಬ್ಬ 2 ಸಿನಿಮಾಗೆ ನಿರ್ದೇಶನವನ್ನು ಮಾಡಿದ್ದರು. ಇದೀಗ ಶಿವಣ್ಣ ಮತ್ತು ಗಣೇಶ್ ಕಾಂಬಿನೇಷನ್ ಚಿತ್ರಕ್ಕೆ ಇವರೇ ನಿರ್ದೇಶಕರು ಎಂದು ಹೇಳಲಾಗುತ್ತಿದೆ.

    ನಿರ್ಮಾಪಕ ಸೂರಪ್ಪ ಬಾಬು (Surappa Babu) ಜೊತೆ ಶಿವರಾಜ್ ಕುಮಾರ್, ಗಣೇಶ್ ಮತ್ತು ರವಿಕುಮಾರ್ ಕಾಣಿಸಿಕೊಂಡ ಫೋಟೋ ವೈರಲ್ ಆಗಿದ್ದು, ಇವರೇ ಈ ಸಿನಿಮಾದ ನಿರ್ದೇಶಕರು ಎಂದು ಹೇಳಲಾಗುತ್ತಿದೆ. ಚಿತ್ರತಂಡ ಅಧಿಕೃತವಾಗಿ ಯಾವುದೇ ಮಾಹಿತಿ ನೀಡದೇ ಇದ್ದರು, ವೈರಲ್ ಆಗಿರುವ ಫೋಟೋ ಎಲ್ಲವನ್ನೂ ಹೇಳುವಂತಿದೆ.

  • ಕೇರಳ ಸ್ಟ್ರೈಕರ್ಸ್‌ ಮೇಲೆ ಕರ್ನಾಟಕ ಬುಲ್ಡೋಜರ್ಸ್‌ ಸವಾರಿ – ಕಿಚ್ಚನ ಸೈನ್ಯಕ್ಕೆ 8 ವಿಕೆಟ್‌ಗಳ ಭರ್ಜರಿ ಜಯ

    ಕೇರಳ ಸ್ಟ್ರೈಕರ್ಸ್‌ ಮೇಲೆ ಕರ್ನಾಟಕ ಬುಲ್ಡೋಜರ್ಸ್‌ ಸವಾರಿ – ಕಿಚ್ಚನ ಸೈನ್ಯಕ್ಕೆ 8 ವಿಕೆಟ್‌ಗಳ ಭರ್ಜರಿ ಜಯ

    ತಿರುನಂತಪುರಂ: ಭರ್ಜರಿ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್‌ ದಾಳಿ ನೆರವಿನಿಂದ ಕಿಚ್ಚ ಸುದೀಪ್‌ (Kiccha Sudeep) ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್‌ (Karnataka Bulldozers) ತಂಡವು ಕೇರಳ ಸ್ಟ್ರೈಕರ್ಸ್‌ (Kerala Strikers) ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

    ಜೈಪುರದ ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡ ಕೇರಳ ಸ್ಟ್ರೈಕರ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಮೂಲಕ ಆಡಿದ ಎರಡೂ ಪಂದ್ಯಗಳನ್ನು ಗೆದ್ದ ಕರ್ನಾಟಕ ಬುಲ್ಡೋಜರ್ಸ್ ಪಾಯಿಂಟ್ ಪಟ್ಟಿಯಲ್ಲಿ ಏರಿಕೆ ಕಂಡಿದೆ. ಇದನ್ನೂ ಓದಿ: KCC 2023: ನಿನ್ನೆ ಪಂದ್ಯದಲ್ಲಿ ಸೋತವರು ಯಾರು? ಗೆದ್ದವರು ಯಾರು?

    ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕೇರಳ ಸ್ಟ್ರೈಕರ್ಸ್ ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಕಳೆದುಕೊಂಡು 101 ರನ್ ಗಳಿಸಿತು. ವಿಕೆಟ್ ಕೀಪರ್ ಬ್ಯಾಟರ್ ರಾಜೀವ್ ಪಿಳ್ಳೈ 32 ಎಸೆತಗಳಲ್ಲಿ 54 ರನ್ (4 ಬೌಂಡರಿ 3 ಸಿಕ್ಸರ್) ಸಿಡಿಸಿದರೆ, ನಾಯಕ ಉನ್ನಿ ಮುಕುಂದನ್ 10 ಎಸೆತಗಳಲ್ಲಿ 19 ರನ್ ಗಳಿಸಿ ತಂಡಕ್ಕೆ ನೆರವಾದರು.

    ಈ ಇನ್ನಿಂಗ್ಸ್‌ನಲ್ಲಿ ಕರ್ನಾಟಕ ಪರ ಕರಣ್ ಆರ್ಯಾನ್ 2 ಓವರ್ ಗಳಲ್ಲಿ 20 ರನ್ ನೀಡಿ 2 ವಿಕೆಟ್ ಪಡೆದರೇ, ಜಯರಾಮ್ ಕಾರ್ತಿಕ್, ಪ್ರದೀಪ್ ಬೋಗಾದಿ ಮತ್ತು ಗೋಲ್ಡನ್ ಸ್ಟಾರ್ ಗಣೇಶ್ ತಲಾ ಒಂದೊಂದು ವಿಕೆಟ್ ಕಿತ್ತರು. ಇದನ್ನೂ ಓದಿ: KCC-2023: ಪಂದ್ಯ ಗೆದ್ದು ಅಪ್ಪುಗೆ ಕೆಸಿಸಿ ಕಪ್ ಅರ್ಪಿಸಿದ ಧನಂಜಯ್ ಟೀಮ್

    2ನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ ಮಾಡಿದ ಕರ್ನಾಟಕ 5 ವಿಕೆಟ್ ಕಳೆದುಕೊಂಡು 124 ರನ್ ಗಳಿಸುವ ಮೂಲಕ 23 ರನ್‌ಗಳ ಮುನ್ನಡೆ ಕಾಯ್ದುಕೊಂಡಿತ್ತು. ಈ ವೇಳೆ ಪ್ರದೀಪ್ ಬೋಗಾದಿ ಮತ್ತು ಡಾರ್ಲಿಂಗ್ ಕೃಷ್ಣ ಉತ್ತಮ ಶುಭಾರಂಭ ನೀಡಿದ್ದರು. ಕೃಷ್ಣ 13 ಎಸೆತಗಳಲ್ಲಿ 20 ರನ್ ಗಳಿಸಿದರೆ, ಪ್ರದೀಪ್ 29 ಎಸೆತಗಳಲ್ಲಿ 59 ರನ್ (7 ಬೌಂಡರಿ 2 ಸಿಕ್ಸರ್) ಚಚ್ಚಿ ಮಿಂಚಿದರು. ರಾಜೀವ್ ಹನು, ಕರಣ್ ಆರ್ಯಾನ್ ತಲಾ 13 ರನ್ ಗಳಿಸಿದರು.

    3ನೇ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ಕೇರಳ ಸ್ಟ್ರೈಕರ್ಸ್ ತಂಡ 5 ವಿಕೆಟ್ ಕಳೆದುಕೊಂಡು 105 ರನ್ ಗಳಿಸಿತು. ರಾಜೀವ್ ಪಿಳ್ಳೈ 18 ಎಸೆತಗಳಲ್ಲಿ 43 ರನ್ (3 ಬೌಂಡರಿ 3 ಸಿಕ್ಸರ್) ಚಚ್ಚಿ ಕೇರಳ ತಂಡಕ್ಕೆ ನೆರವಾದರು. ಆದರೆ 23 ರನ್‌ಗಳ ಮುನ್ನಡೆ ಕಾಯ್ದುಕೊಂಡಿದ್ದ ಕರ್ನಾಟಕ ತಂಡಕ್ಕೆ ಗೆಲುವಿಗಾಗಿ 83 ರನ್‌ಗಳ ಅವಶ್ಯಕತೆಯಿತ್ತು.

    ಈ ವೇಳೆ ಆರಂಭಿಕರಾಗಿ ಕಣಕ್ಕಿಳಿದ ರಾಜೀವ್ ಹನು ಮತ್ತು ಜಯರಾಮ್ ಕಾರ್ತಿಕ್ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ರಾಜೀವ್ ಹನು 14 ಎಸೆತಗಳಲ್ಲಿ 34 ರನ್ (3 ಬೌಂಡರಿ 2 ಸಿಕ್ಸರ್) ಗಳಿಸಿದರೇ, ಜಯರಾಮ್ ಕಾರ್ತಿಕ್ 13 ಎಸೆತಗಳಲ್ಲಿ 31 ರನ್ (5 ಬೌಂಡರಿ 1 ಸಿಕ್ಸರ್) ಗಳಿಸಿದರು. ಒಟ್ಟು 6.4 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 86 ರನ್ ಗಳಿಸಿದ ಕರ್ನಾಟಕ ಬುಲ್ಡೋಜರ್ಸ್ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

    ಸಿಸಿಎಲ್ 20 ಪಂದ್ಯಾವಳಿಯಲ್ಲಿ 4 ಇನ್ನಿಂಗ್ಸ್‌ಗಳಲ್ಲಿ ಆಡಲಾಗುತ್ತದೆ. ಪ್ರತಿ 10 ಓವರ್ ಗಳಿಗೆ ಒಂದು ಇನ್ನಿಂಗ್ಸ್ ಎಂದು ಪರಿಗಣಿಸಲಾಗುತ್ತದೆ.

  • KCC 2023: ನಿನ್ನೆ ಪಂದ್ಯದಲ್ಲಿ ಸೋತವರು ಯಾರು? ಗೆದ್ದವರು ಯಾರು?

    KCC 2023: ನಿನ್ನೆ ಪಂದ್ಯದಲ್ಲಿ ಸೋತವರು ಯಾರು? ಗೆದ್ದವರು ಯಾರು?

    ನಿನ್ನೆಯಿಂದ ಬೆಂಗಳೂರಿನಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (Celebrity Cricket League) ಪಂದ್ಯ ಪ್ರಾರಂಭವಾಗಿದ್ದು, ಮೊದಲ ದಿನ ಮೂರು ಪಂದ್ಯಗಳನ್ನು ಆಯೋಜಿಸಲಾಗಿತ್ತು. ಸಿಎಂ ಬಸವರಾಜ ಬೊಮ್ಮಾಯಿ ಕ್ರಿಕೆಟ್ ಲೀಗ್ ಅನ್ನು ಉದ್ಘಾಟಿಸಿದ ನಂತರ ಮೊದಲ ದಿನದ ಪಂದ್ಯಗಳು ಆರಂಭವಾದವು. ಒಟ್ಟು ಮೂರು ಪಂದ್ಯಗಳನ್ನು ಮೊದಲ ದಿನಕ್ಕಾಗಿ ಆಯೋಜನೆ ಮಾಡಲಾಗಿತ್ತು. ಇವುಗಳಲ್ಲಿ ಮೊದಲ ಪಂದ್ಯವಾಗಿ ನಟ ಧನಂಜಯ (Dhananjay) ಅವರ ಗಂಗಾ ವಾರಿಯರ್ಸ್ ಹಾಗೂ ಸುದೀಪ್ (Sudeep) ನೇತೃತ್ವದ ಹೊಯ್ಸಳ ಈಗಲ್ಸ್ ಮುಖಾಮುಖಿಯಾದವು.

    ಮೊದಲ ಪಂದ್ಯದಲ್ಲಿ ಗಂಗಾ ವಾರಿಯಸ್ ವಿರುದ್ಧ ಗೆಲ್ಲುವಲ್ಲಿ ಹೊಯ್ಸಳ ಈಗಲ್ಸ್ ವಿಫಲವಾಯಿತು. ಗಂಗಾ ವಾರಿಯರ್ಸ್ ನ ಕರಣ್ ಆರ್ಯನ್ 54 ರನ್ ಗಳನ್ನು ಬಾರಿಸಿ ವಿಜಯಕ್ಕೆ ಕಾರಣರಾದರು. ಹತ್ತು ಓವರ್ ಗಳಲ್ಲಿ ಗಂಗಾ ವಾರಿಯರ್ಸ್ 4 ವಿಕೆಟ್ ನಷ್ಟಕ್ಕೆ 114 ರನ್ ಗಳನ್ನು ಕಲೆಹಾಕಿತ್ತು. ಆದರೆ, ಹೊಯ್ಸಳ ಈಗಲ್ಸ್ ಗುರಿ ತಲುಪುವಲ್ಲಿ ವಿಫಲವಾಗಿ ಸೋಲು ಒಪ್ಪಿಕೊಳ್ಳಬೇಕಾಯಿತು. ಇದನ್ನೂ ಓದಿ: ಹೊಂಬಾಳೆ ಫಿಲ್ಮ್ ಯುವ ಚಿತ್ರಕ್ಕೆ ರುಕ್ಮಿಣಿ ವಸಂತ್ ನಾಯಕಿನಾ? ಸ್ಪಷ್ಟನೆ ನೀಡಿದ ನಟಿ

    ಎರಡನೇ ಪಂದ್ಯವಾಗಿ ಶಿವರಾಜ್ ಕುಮಾರ್ ನೇತೃತ್ವದ ಒಡೆಯರ್ ಚಾರ್ಜಸ್ ಹಾಗೂ ಸುದೀಪ್ ಅವರ ಹೊಯ್ಸಳ್ ಈಗಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದದ್ದು ಒಡೆಯರ್ ಚಾರ್ಜಸ್. ಹತ್ತು ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 105 ರನ್ ಗಳನ್ನು ಕಲೆಹಾಕಿ, ಹೊಯ್ಸಳ ಈಗಲ್ಸ್ ತಂಡಕ್ಕೆ 106 ರನ್ ಗಳ ಗುರಿ ನೀಡಿತು. ಹೊಯ್ಸಳ ಈಗಲ್ಸ್ ತಂಡದ ಕ್ರಿಸ್ ಗೇಲ್ 23 ಎಸೆತಗಳಲ್ಲಿ 59 ರನ್ ಗಳನ್ನು ಕಲೆ ಹಾಕುವ ಮೂಲಕ ಗೆಲುವಿಗೆ ಸುಲಭ ಹಾದಿ ಹಾಕಿಕೊಟ್ಟರು. ಪರಿಣಾಮ ಶಿವಣ್ಣ ತಂಡವು ಸೋಲನುಭವಿಸಬೇಕಾಯಿತು.

    ಅಂತಿಮ ಪಂದ್ಯವು ಧ್ರುವ ಸರ್ಜಾ ನೇತೃತ್ವದ ರಾಷ್ಟ್ರಕೂಟ ಫ್ಯಾಂಥರ್ಸ್ ಹಾಗೂ ಗಣೇಶ್ ನಾಯಕತ್ವದ ಕದಂಬ ಲಯನ್ಸ್ ನಡುವೆ ನಡೆಯಿತು. ಕದಂಬ ಲಯನ್ಸ್ ತಂಡ 10 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಕಲೆ ಹಾಕಿದ್ದು 111 ರನ್ ಗಳನ್ನು. ಎದುರಾಳಿ ರಾಷ್ಟ್ರಕೂಟ ಫ್ಯಾಂಥರ್ಸ್ ಈ ಗುರಿಯನ್ನು ಮುಟ್ಟಲು ಸಾಧ್ಯವಾಗದೇ ಇರುವ ಕಾರಣದಿಂದಾಗಿ ಕದಂಬ ಲಯನ್ಸ್ ಸುಲಭವಾಗಿ ಗೆಲುವು ಸಾಧಿಸಿತು. ಇಂದು ಎರಡನೇ ದಿನ ಪಂದ್ಯಗಳು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿವೆ.

  • ಕಪಿಲ್ ಶರ್ಮಾ ಶೋನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್

    ಕಪಿಲ್ ಶರ್ಮಾ ಶೋನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್

    ಹಿಂದಿಯ ಪ್ರತಿಷ್ಠಿತ ಟಾಕ್ ಶೋ ‘ಕಪಿಲ್ ಶರ್ಮಾ ಶೋ’ ನಲ್ಲಿ ಕನ್ನಡದ ಹೆಸರಾಂತ ನಟ ಗೋಲ್ಡನ್ ಸ್ಟಾರ್ ಗಣೇಶ್ ಭಾಗಿಯಾಗಿದ್ದಾರೆ. ಕಪಿಲ್ ಜೊತೆಗಿನ ಫೋಟೋವನ್ನು ಹಾಗೂ ಆ ಕಾರ್ಯಕ್ರಮಕ್ಕೆ ತಯಾರಿಯಾಗಿ ಕಾರು ಏರಿದ ವಿಡಿಯೋವನ್ನು ಗಣೇಶ್ ಹಂಚಿಕೊಂಡಿದ್ದಾರೆ. ಕಾಮಿಡಿ ಕಾರ್ಯಕ್ರಮದ ಮೂಲಕವೇ ಫೇಮಸ್ ಆಗಿರುವ ಗಣೇಶ್, ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದು ಮನರಂಜನೆಗೆ ಯಾವುದೇ ಕೊರತೆ ಆಗದು ಎನ್ನುತ್ತಿದ್ದಾರೆ ಅಭಿಮಾನಿಗಳು.

    ಕಪಿಲ್ ಜೊತೆಗಿನ ಶೋನಲ್ಲಿ ಈಗಾಗಲೇ ಕನ್ನಡದ ಹೆಸರಾಂತ ನಟ ಸುದೀಪ್ ಎರಡು ಬಾರಿ ಕಾಣಿಸಿಕೊಂಡಿದ್ದರು. ಈ ಶೋನಲ್ಲಿ ಎರಡು ಬಾರಿ ಕಾಣಿಸಿಕೊಂಡ ಮೊದಲ ಕನ್ನಡದ ನಟ ಎನ್ನುವ ಹೆಗ್ಗಳಿಕೆ ಸುದೀಪ್ ಅವರಿಗಿದೆ. ಸಲ್ಮಾನ್ ಖಾನ್ ಜೊತೆ ಒಂದು ಬಾರಿ ಸುದೀಪ್ ಕಾಣಿಸಿಕೊಂಡಿದ್ದರೆ, ಮತ್ತೊಂದು ಬಾರಿ ಸುನೀಲ್ ಶೆಟ್ಟಿ ಜೊತೆಯೂ ಅವರು ಕಪಿಲ್ ಶೋನಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಆಸ್ಕರ್ ವೇದಿಕೆಯಲ್ಲಿ `ನಾಟು ನಾಟು’ ಸಾಂಗ್ ಹಾಡಲಿದ್ದಾರೆ ಎಂ.ಎಂ ಕ್ಷೀರವಾಣಿ

    ಇದೀಗ ಗಣೇಶ್ ಕೂಡ ಆ ಶೋನಲ್ಲಿ ಪಾಲ್ಗೊಂಡಿದ್ದು, ಹೆಚ್ಚಿನ ವಿವರಗಳನ್ನು ಸದ್ಯದಲ್ಲೇ ನೀಡುವುದಾಗಿ ಅವರು ತಿಳಿಸಿದ್ದಾರೆ. ಗಣೇಶ್ ನಟನೆಯ ‘ಬಾನದಾರಿಯಲ್ಲಿ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾದ ಪ್ರಮೋಷನ್ ನಲ್ಲಿ ಅವರು ಭಾಗಿಯಾಗಲಿದ್ದಾರಾ ಅಥವಾ ಬೇರೆ ಯಾವುದಾದರೂ ಕಾರ್ಯಕ್ರಮದ ಸಲುವಾಗಿ ಅವರು ಅತಿಥಿಯಾಗಿ ಹೋಗಿದ್ದಾರಾ ಎನ್ನುವುದು ಗೊತ್ತಾಗಿಲ್ಲ. ಈ ವಿಷಯವನ್ನು ಅವರೇ ಸದ್ಯದಲ್ಲೇ ತಿಳಿಸುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಜೂಮ್ ಕಾಲ್’ ಸಿನಿಮಾದಲ್ಲಿ ರೇಣುಕಾ ಟೀಚರ್

    ‘ಜೂಮ್ ಕಾಲ್’ ಸಿನಿಮಾದಲ್ಲಿ ರೇಣುಕಾ ಟೀಚರ್

    ಹೊಸಬರು ಸೇರಿಕೊಂಡು ಮಾಡುತ್ತಿರುವ “ಜೂಮ್ ಕಾಲ್” (Zoom call) ಚಿತ್ರದಲ್ಲಿ ಆನ್ ಲೈನ್ ಶಿಕ್ಷಕಿಯಾಗಿ ರೇಣುಕಾ (Renuka) ಅಭಿನಯಿಸಿದ್ದಾರೆ. ವಿಷ್ಣುವರ್ಧನ್, ಗಣೇಶ್ (Ganesh), ರಿಷಬ್ ಶೆಟ್ಟಿ (Rishabh Shetty) ಸೇರಿದಂತೆ ಅನೇಕ ಖ್ಯಾತ ನಟರ ಚಿತ್ರಗಳಲ್ಲಿ ನಟಿಸಿರುವ ರೇಣುಕಾ ಈಗ ಹೊಸಬರ ಈ ಚಿತ್ರದಲ್ಲಿ ನಟಿಸಿದ್ದಾರೆ.

    ಪ್ರತಿ ಸಿನಿಮಾದಲ್ಲಿ ಸಹನಟರ ಜೊತೆ ನಟಿಸುತ್ತಿದೆ. ಆದರೆ ಈ ಚಿತ್ರದಲ್ಲಿ ಒಬ್ಬಳೆ ನಟಿಸಿದ್ದೇನೆ. ಈ ಅನುಭವ ಹೊಸದಾಗಿತ್ತು ಮತ್ತು ವಿಶೇಷವಾಗಿತ್ತು. “ಜೂಮ್ ಕಾಲ್” ಪ್ರಯೋಗಾತ್ಮಕ ಚಿತ್ರವಾಗಿದ್ದು, ಮೇಕಿಂಗ್ ವಿಭಿನ್ನವಾಗಿದೆ. ಈ ಸಿನಿಮಾದಲ್ಲಿ ನಟಿಸಿದ್ದು ನನಗೆ ಖುಷಿಯಾಗಿದೆ ಎಂದು ರೇಣುಕಾ ತಿಳಿಸಿದ್ದಾರೆ. ಇದನ್ನೂ ಓದಿ: ಸತತ ಸೋಲಿನಿಂದ ಬೇಸತ್ತ ಪೂಜಾಗೆ ನಿರ್ದೇಶಕ ತ್ರಿವಿಕ್ರಮ್ ಸಲಹೆ

    ಮಹೇಶ್ ಹೆಚ್ ಎಂ (Mahesh. H. M) ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ  ಚಿತ್ರ ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿಯಾಗಿದೆ. ಚಿತ್ರೀಕರಣ ಮುಕ್ತಾಯವಾಗಿದೆ.  ಶ್ರೀವಾರಿ ಪಿಕ್ಚರ್ಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಮಂಜು ಕೊಪ್ಪಳ್ ಛಾಯಾಗ್ರಹಣ ಹಾಗೂ ಸಂಕಲನ, ವಿಜಯ್ ರಾಜ್ ಅವರ ಸಂಗೀತ ನಿರ್ದೇಶನವಿದೆ.  ರೇಣುಕಾ, ಲಕ್ಷ್ಮೀ ಅರಸ್, ರೂಪ ಮನಕೂರ್, ಅರ್ಜುನ್, ಮಹೇಂದ್ರ, ಪರಮ್ ಮುಂತಾದವರು “ಜೂಮ್ ಕಾಲ್” ನಲ್ಲಿ ಅಭಿನಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k