Tag: ಗಣೇಶ್

  • ‘ಗಾಳಿಪಟ 2’ ಟ್ರೇಲರ್ ಮೂಲಕ ಮತ್ತೊಮ್ಮೆ ಗೆದ್ದ ಯೋಗರಾಜ್ ಭಟ್

    ‘ಗಾಳಿಪಟ 2’ ಟ್ರೇಲರ್ ಮೂಲಕ ಮತ್ತೊಮ್ಮೆ ಗೆದ್ದ ಯೋಗರಾಜ್ ಭಟ್

    ಯೋಗರಾಜ್ ಭಟ್ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್ ಹಾಗೂ ಪವನ್ ಕುಮಾರ್ ನಾಯಕರಾಗಿ ಅಭಿನಯಿಸಿರುವ, ರಮೇಶ್ ರೆಡ್ಡಿ ಅವರ ನಿರ್ಮಾಣದ “ಗಾಳಿಪಟ 2” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ರಮೇಶ್ ಅರವಿಂದ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ವಿತರಕರಾದ ವೆಂಕಟ್(ಕೆ.ವಿ.ಎನ್), ಸುಪ್ರೀತ್, ನಿರ್ಮಾಪಕರಾದ ಕೆ.ಮಂಜು, ಸಂಜಯ್ ಗೌಡ, ನಟ ಶ್ರೇಯಸ್ ಕೆ. ಮಂಜು ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭಕೋರಿದರು.

    “ಗಾಳಿಪಟ ೨” ಚಿತ್ರದ ಟ್ರೇಲರನ್ನು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಬಿಡುಗಡೆ ಮಾಡಿದರು. ಟ್ರೇಲರ್ ಸಖತಾಗಿದೆ. ಯೋಗರಾಜ್ ಭಟ್ ಹಾಗೂ ಗಣೇಶ್ ಕಾಂಬಿನೇಶನ್ ಮತ್ತೊಮ್ಮೆ ಮೋಡಿ ಮಾಡಲಿದೆ. ದಿಗಂತ್, ಪವನ್ ಹಾಗೂ ನಾಯಕಿಯರು ಎಲ್ಲರೂ ಚೆನ್ನಾಗಿ ನಟಿಸಿದ್ದಾರೆ. ಅದರಲ್ಲೂ ಪವನ್ ತುಂಬಾ ಕ್ಯೂಟಾಗಿ ಕಾಣುತ್ತಾರೆ. ಅರ್ಜುನ್ ಜನ್ಯ ಸಂಗೀತ ಸೊಗಸಾಗಿದೆ. ನನಗೆ ಅವರನ್ನು ನೋಡಿದಾಗ ಎ.ಆರ್.ರೆಹಮಾನ್ ನೆನಪಾಗುತ್ತಾರೆ.‌ ಮುಂದೆ ಅರ್ಜುನ್ ಜನ್ಯ ನಿರ್ದೇಶಿಸುತ್ತಿರುವ “45” ಚಿತ್ರದ ನಾಯಕನಾಗಿ ನಾನು ನಟಿಸುತ್ತಿದ್ದೇನೆ. ರಮೇಶ್ ರೆಡ್ಡಿ ಅವರೆ ಆ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. “ಗಾಳಿಪಟ ೨” ಭರ್ಜರಿ ಯಶಸ್ಸು ಕಾಣಲಿ ಎಂದು ಹಾರೈಸಿದರು ಶಿವರಾಜಕುಮಾರ್. ಇದನ್ನೂ ಓದಿ:ಅಫೇರ್ ಆರೋಪ ಬೆನ್ನಲ್ಲೇ ಧಿಡೀರ್ ಸಂಭಾವನೆ ಹೆಚ್ಚಿಸಿಕೊಂಡ ಪವಿತ್ರಾ ಲೋಕೇಶ್

    ಈ ಚಿತ್ರದ ಸಂಭಾಷಣೆಯೊಂದರಂತೆ ನೋಡುಗರಿಗೆ ಉತ್ತಮ ಮನೋರಂಜನೆ ನೀಡುವ ಚಿತ್ರ ಇದಾಗಲಿದೆ. ಯೋಗರಾಜ್ ಭಟ್ ಹಾಗೂ ಗಣೇಶ್ ಜೋಡಿಯ “ಗಾಳಿಪಟ” ಯಶಸ್ಸು ಕಂಡಿತ್ತು. “ಗಾಳಿಪಟ 2” ಸಹ ಹಾಡುಗಳ ಹಾಗೂ ಟ್ರೇಲರ್ ಮೂಲಕ ಈಗಾಗಲೇ ಗೆದ್ದಿದೆ. ಚಿತ್ರ ಕೂಡ ಭರ್ಜರಿ ಗೆಲವು ಕಾಣಲಿದೆ ಎಂದು ರಮೇಶ್ ಅರವಿಂದ್ ಹಾರೈಸಿದರು. ಎಲ್ಲರೂ ಮಾತನಾಡಿದ್ದಾರೆ. ನಾನು ಇನೇನು ಹೇಳುವುದಿದೆ. ಯೋಗರಾಜ್ ಭಟ್ಟರು ನಿರ್ದೇಶಕರಾಗಿ, ಗೀತರಚನೆಕಾರರಾಗಿ ಹಾಗೂ ಸಂಭಾಷಣೆಕಾರರಾಗೂ ಜನಪ್ರಿಯ. ಅದಕ್ಕೆ ಈ ಚಿತ್ರದ ಟ್ರೇಲರ್ ಸಾಕ್ಷಿ. ಒಳ್ಳೆಯ ನಿರ್ಮಾಪಕರು, ಕಲಾವಿದರು ಹಾಗೂ ತಂತ್ರಜ್ಞರ ಸಮಾಗಮದಲ್ಲಿ ಮೂಡಿಬಂದಿರುವ ಈ ಚಿತ್ರ ಪ್ರಚಂಡ ಯಶಸ್ಸು ಕಾಣಲಿ ಎಂದರು ರಿಯಲ್ ಸ್ಟಾರ್ ಉಪೇಂದ್ರ.

    ನನ್ನ ಹಾಗೂ ಭಟ್ಟರ ಕಾಂಬಿನೇಶನ್ ನಲ್ಲಿ ಸಾಕಷ್ಟು ಚಿತ್ರಗಳು ಬಂದಿದೆ. ಆದರೆ ನಾನು ಯಾವತ್ತು ಯಾವ ಚಿತ್ರದ ಕುರಿತು  ಅವರಿಗೆ ಫೋನ್ ಮಾಡಿರಲಿಲ್ಲ. ಆದರೆ ಈ ಚಿತ್ರದ ಡಬ್ಬಿಂಗ್ ಆದ ಮೇಲೆ ಫೋನ್ ಮಾಡಿ ಅದ್ಭುತ ಚಿತ್ರ ಮಾಡಿದ್ದೀರಾ ಅಂತ ಹೇಳಿ ಅಭಿನಂದನೆಗಳನ್ನು ತಿಳಿಸಿದೆ. ನಿಜಕ್ಕೂ “ಗಾಳಿಪಟ 2” ತುಂಬಾ ಚೆನ್ನಾಗಿದೆ. ನೀವೆಲ್ಲಾ ನೋಡಿ ಹಾರೈಸಿ ಎಂದರು ಗೋಲ್ಡನ್ ಸ್ಟಾರ್ ಗಣೇಶ್. ರೋಡಿನಲ್ಲಿ ಸಿಗುವ ಸಂಬಂಧ, ರಕ್ತ ಸಂಬಂಧಕ್ಕಿಂತ ಹೆಚ್ಚು ಎಂದು ನಂಬಿರುವವನು ನಾನು. ಆ ಸ್ನೇಹದಿಂದಲೇ ಹದಿನಾಲ್ಕು ವರ್ಷಗಳ ಹಿಂದೆ “ಗಾಳಿಪಟ” ಚಿತ್ರ ನಿರ್ಮಾಣವಾಯಿತು. ಈಗ “ಗಾಳಿಪಟ ೨’” ಸಹ ಅದೇ ಸ್ನೇಹದಿಂದ ನಿರ್ಮಾಣವಾಗಿದೆ. ಕರ್ನಾಟಕದ ಎಲ್ಲಾ ಸ್ನೇಹಿತರು ಆಗಸ್ಟ್‌ 12ರಂದು ಬಿಡುಗಡೆಯಾಗುತ್ತಿರುವ ನಮ್ಮ “ಗಾಳಿಪಟ ೨” ಚಿತ್ರವನ್ನು ನೋಡಿ ಗೆಲಿಸುತ್ತಾರೆ ಎಂಬ ನಂಬಿಕೆಯಿದೆ ಎಂದರು ನಿರ್ದೇಶಕ ಯೋಗರಾಜ್ ಭಟ್.

    ಯೋಗರಾಜ್ ಭಟ್ ಒಳ್ಳೆಯ ಚಿತ್ರ  ಮಾಡಿ ಕೊಟ್ಟಿದ್ದಾರೆ. ಈ ಚಿತ್ರ ಇಷ್ಟು ಚೆನ್ನಾಗಿ ಬರಲು ಚಿತ್ರತಂಡ ತುಂಬಾ ಶ್ರಮಪಟ್ಟಿದೆ. ಎಲ್ಲರಿಗೂ ನನ್ನ ಧನ್ಯವಾದ. ನಮ್ಮ ಸಮಾರಂಭಕ್ಕೆ ಶಿವಣ್ಣ, ಉಪೇಂದ್ರ ಹಾಗೂ ರಮೇಶ್ ಸರ್ ಬಂದಿರುವುದು ನನಗೆ ತುಂಬಾ ಸಂತೋಷವಾಗಿದೆ. ಇವರನೆಲ್ಲಾ ನೋಡಿ ನಾನು “ಗಾಳಿಪಟ ೨” ಚಿತ್ರವನ್ನು ಮರೆತು ಬಿಟ್ಟಿದೆ.  ‌ನಮ್ಮ ಚಿತ್ರಕ್ಕೆ ಹಾರೈಸಲು ಬಂದಿರುವ ಎಲ್ಲರಿಗೂ ತುಂಬು ಹೃದಯದ ಧನ್ಯವಾದ ಎಂದರು ನಿರ್ಮಾಪಕ ರಮೇಶ್ ರೆಡ್ಡಿ. ಚಿತ್ರದಲ್ಲಿ ಅಭಿನಯಿಸಿರುವ ಪವನ್ ಕುಮಾರ್, ಶರ್ಮಿಳಾ ಮಾಂಡ್ರೆ, ನಿಶ್ವಿಕಾ, ವೈಭವಿ, ರಂಗಾಯಣ ರಘು, ಸುಧಾ ಬೆಳವಾಡಿ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ‌ಅರ್ಜುನ್ ಜನ್ಯ ಸಂಗೀತದ ಬಗ್ಗೆ , ಸಂತೋಷ್ ರೈ ಪಾತಾಜೆ ಛಾಯಾಗ್ರಹಣದ ಕುರಿತು ಹಾಗೂ ಧನು ಮಾಸ್ಟರ್ ನೃತ್ಯ ನಿರ್ದೇಶನದ ವಿವರಣೆ ನೀಡಿದರು.

    Live Tv
    [brid partner=56869869 player=32851 video=960834 autoplay=true]

  • ಗಣೇಶ್ ನಟನೆಯ ‘ಗಾಳಿಪಟ 2’ ಸಿನಿಮಾದ ಮತ್ತೊಂದು ಹಾಡು ರಿಲೀಸ್

    ಗಣೇಶ್ ನಟನೆಯ ‘ಗಾಳಿಪಟ 2’ ಸಿನಿಮಾದ ಮತ್ತೊಂದು ಹಾಡು ರಿಲೀಸ್

    ಯೋಗರಾಜ್ ಭಟ್  ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಗಾಳಿಪಟ 2” ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಚಿತ್ರ ಬಿಡುಗಡೆಗೆ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿದೆ. ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ “ನೀನು ಬಗೆಹರಿಯದ ಹಾಡು” ಎಂಬ ಗೀತೆ ಇತ್ತೀಚೆಗೆ ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು ಖ್ಯಾತ ಗಾಯಕ ನಿಹಾಲ್ ತಾವ್ರೋ ಹಾಡಿದ್ದಾರೆ.

    ಪವನ್ ಕುಮಾರ್ ಹಾಗೂ ಶರ್ಮಿಳಾ ಮಾಂಡ್ರೆ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ಕುದುರೆಮುಖದ ಸುಂದರ ಪರಿಸರದಲ್ಲಿ ಈ ಹಾಡಿನ‌ ಚಿತ್ರೀಕರಣ ನಡೆದಿದೆ. ಧನು ನೃತ್ಯ ನಿರ್ದೇಶನ ಮಾಡಿದ್ದಾರೆ. ಸದ್ಯದಲ್ಲೇ ಟೀಸರ್, ಟ್ರೇಲರ್ ಹಾಗೂ ಇನ್ನೂ ಎರಡು ಹಾಡುಗಳ ಬಿಡುಗಡೆಯಾಗಲಿದೆ. ಆಗಸ್ಟ್ 12 ಕ್ಕೆ ಚಿತ್ರ ತೆರೆಗೆ ಬರಲಿದೆ. ಇದನ್ನೂ ಓದಿ: ಶಿವಣ್ಣನನ್ನೇ ಹಿಂದಿಕ್ಕಿದ ಶಿವಣ್ಣನ ಅಭಿಮಾನಿ ಕಾಫಿನಾಡು ಚಂದು!

    ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್, ವೈಭವಿ ಶಾಂಡಿಲ್ಯ, ಶರ್ಮಿಳಾ ಮಾಂಡ್ರೆ, ಅನಂತನಾಗ್, ಸುಧಾ ಬೆಳವಾಡಿ, ಬುಲೆಟ್ ಪ್ರಕಾಶ್, ಪದ್ಮಜಾರಾವ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಸಂತೋಷ್ ರೈ ಪಾತಾಜೆ ಈ ಚಿತ್ರದ ಛಾಯಾಗ್ರಹಕರು.

    Live Tv
    [brid partner=56869869 player=32851 video=960834 autoplay=true]

  • ವೈರಲ್ ಆದ ಗಾಳಿಪಟ 2 ಚಿತ್ರದ ‘ದೇವ್ಲೆ ದೇವ್ಲೆ’ ಹಾಡಿನ ರಹಸ್ಯ ಬಿಚ್ಚಿಟ್ಟ ಯೋಗರಾಜ್ ಭಟ್

    ವೈರಲ್ ಆದ ಗಾಳಿಪಟ 2 ಚಿತ್ರದ ‘ದೇವ್ಲೆ ದೇವ್ಲೆ’ ಹಾಡಿನ ರಹಸ್ಯ ಬಿಚ್ಚಿಟ್ಟ ಯೋಗರಾಜ್ ಭಟ್

    ಬಿಡುಗಡೆಗೂ ಮುನ್ನವೇ ಸಾಕಷ್ಟು ಕುತೂಹಲ ಹುಟ್ಟಿಸಿರುವ “ಗಾಳಿಪಟ 2” ಚಿತ್ರದ “ದೇವ್ಲೆ ದೇವ್ಲೆ” ಹಾಡು ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಬರೆದಿರುವ ಈ ಹಾಡನ್ನು ವಿಜಯ್ ಪ್ರಕಾಶ್ ಹಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಈ ಹಾಡು ಬಿಡುಗಡೆ ಸಮಾರಂಭದಲ್ಲಿ ಸಿನಿಮಾ ತಂಡ ಹಲವು ವಿಚಾರಗಳನ್ನು ಮಾತನಾಡಿದೆ.

    ಈ ಹಾಡು ಹುಟ್ಟಿದ್ದರ ಬಗ್ಗೆ ಯೋಗರಾಜ್ ಭಟ್ ಹೇಳುವುದು ಹೀಗೆ, ‘ಈ ಹಾಡನ್ನು ಬರೆದು ಅರ್ಜುನ್ ಜನ್ಯ ಅವರಿಗೆ ಕಳುಹಿಸಿದೆ. ಮೊದಲು ಈ ಹಾಡನ್ನು ದೇವ್ರೆ ದೇವ್ರೆ ಎಂದು ಬರೆದಿದ್ದು. ಆನಂತರ ಇದು ಮಾಮೂಲಿ ತರಹ ಇದೆ. ಸ್ವಲ್ಪ ಏನಾದರೂ ಬದಲಾವಣೆ ಮಾಡಿ ಎಂದರು ಅರ್ಜುನ್ ಜನ್ಯ. ಆಗ ರ ಕಾರ ತೆಗೆದು ಲ‌ ಕಾರ ಹಾಕಿ ಅಂದೆ. ಆಗ ಎಲ್ಲರಿಗೂ ಹಿಡಿಸಿತು. ವಿಜಯ್ ಪ್ರಕಾಶ್ ಸುಶ್ರಾವ್ಯವಾಗಿ ಹಾಡಿದ್ದಾರೆ. ನನ್ನ , ವಿಜಯ್ ಪ್ರಕಾಶ್ ಹಾಗೂ ಅರ್ಜುನ್ ಜನ್ಯರ ಕಾಂಬಿನೇಶನ್ ನಲ್ಲಿ ಸಾಕಷ್ಟು ಎಣ್ಣೆ ಹಾಡುಗಳು ಗೆದ್ದಿವೆ. ಇದು ಕೂಡ ಗೆಲುತ್ತದೆ ಎಂಬ ಭರವಸೆಯಿದೆ. ಕೊರೋನ ತನ್ನ ಅಟ್ಟಹಾಸ ಮೆರೆಯುತ್ತಿದ್ದ ಸಮಯದಲ್ಲಿ ಚಿತ್ರೀಕರಣವಾದ ಹಾಡು ಇದು. ಎಲ್ಲಾ ಕಡೆ ಲಾಕ್ ಡೌನ್. ಅಂತಹ ಸಮಯದಲ್ಲಿ ದೂರದ ಕಜಾಕಿಸ್ತಾನದಲ್ಲಿ ಚಿತ್ರೀಕರಣ ಮಾಡುವುದು ಅಂದರೆ ಕಷ್ಟ ಸಾಧ್ಯ. ಆದರೆ ಅದನ್ನು ಸಾಧ್ಯ ಮಾಡಿದವರು ನಮ್ಮ ನಿರ್ಮಾಪಕ ರಮೇಶ್ ರೆಡ್ಡಿ ಅವರು. ಈ ಹಾಡಿಗೆ ಸ್ನೋ ಬೇಕಾಗಿದ್ದರಿಂದ ಅಲ್ಲಿಗೆ ಹೋದೆವು. ಆದರೆ ಕೊನೆಗೆ ಏಕಾದರೂ ಬಂದೆವೊ? ಅನಿಸುವಷ್ಟು ಚಳಿ ಅಲ್ಲಿ. ಇಷ್ಟೆಲ್ಲಾ ಕಷ್ಟಗಳ ನಡುವೆ ಎಲ್ಲರಿಗೂ ಇಷ್ಟವಾಗುವ ಹಾಡನ್ನು ಚಿತ್ರಿಸಿಕೊಂಡು ಬಂದಿದ್ದೀವಿ’ ಎಂದರು. ಇದನ್ನೂ ಓದಿ : ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಡೇಟಿಂಗ್ ಮಾಡುತ್ತಿದ್ದರು : ಸಾರಾ ಅಲಿ ಖಾನ್

    ಕೋವಿಡ್ ಸಮಯದಲ್ಲಿ ಯಾರಿಗೂ ಏನೂ ಆಗದ ಹಾಗೆ ಕಜಾಕಿಸ್ತಾನಕ್ಕೆ ಹುಷಾರಾಗಿ ಕರೆದು ಕೊಂಡು ಹೋಗಿ ಬಂದ ನಿರ್ಮಾಪಕರಿಗೆ ಧನ್ಯವಾದ. ಇನ್ನು ಈ ಹಾಡಿನ ಬಗ್ಗೆ ಹೇಳಬೇಕೆಂದರೆ ಯೋಗರಾಜ್ ಸರ್ ಈ ಹಾಡನ್ನು ನನಗೆ ಕಳುಹಿಸಿದಾಗ, ಇದೇನ್ ಸರ್ ಹೀಗಿದೆ? ಈ ಹಾಡು ಕೇಳಿದವರು ನಿಮ್ಮ ಬಗ್ಗೆ ಏನಾದರೂ ಅಂದುಕೊಳ್ಳುತ್ತಾರೆ ಅಂದೆ. ಆನಂತರ ಇಲ್ಲ ಗಣಪ ಇನ್ನೊಂದು ಸಲ ಕೇಳು ಅಂದರು. ಕೇಳುತ್ತಾ, ಕೇಳುತ್ತಾ ನಾನೇ ಸದಾ ಗುನುಗುವಂತಾಯಿತು. ಅಂದು ಇದ್ದ  ಆತಂಕ ಈಗ ಇಲ್ಲ. ಜನ “ದೇವ್ಲೆ ದೇವ್ಲೆ” ಹಾಡನ್ನು ಒಪ್ಪಿಕೊಂಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ವಿಜಯ್ ಪ್ರಕಾಶ್ ಗಾಯನ, ಪಾತಾಜೆ ಅವರ ಛಾಯಾಗ್ರಹಣ,  ಧನು ಮಾಸ್ಟರ್  ನೃತ್ಯ ನಿರ್ದೇಶನ ಹಾಗೂ ಎಲ್ಲರ ಅಭಿನಯ ಈ ಹಾಡನ್ನು  ಶ್ರೀಮಂತಗೊಳಿಸಿದೆ ಎಂದರು ನಾಯಕ ಗೋಲ್ಡನ್ ಸ್ಟಾರ್ ಗಣೇಶ್.

    ಯೋಗರಾಜ್ ಭಟ್ ಹಾಗೂ ಗಣೇಶ್ ಅವರ ಮೂಲಕ ನನ್ನ ಗಾಯನದ ಜರ್ನಿ “ಗಾಳಿಪಟ” ಮೊದಲ ಭಾಗದಲ್ಲಿ ಆರಂಭವಾಯಿತು “ಕವಿತೆ ಕವಿತೆ” ಹಾಡಿನ ಮೂಲಕ. ಈಗ “ಗಾಳಿಪಟ 2” ಚಿತ್ರದಲ್ಲೂ ಹಾಡಿದ್ದೇನೆ. ಲ ಕಾರದಲ್ಲಿ ಈ ಹಾಡನ್ನು ಹಾಡುವುದು ಕಷ್ಟ ಅಂದುಕೊಂಡೆ. ಅಭ್ಯಾಸ ಮಾಡಿದ್ದೆ. ಅರ್ಧ ಗಂಟೆಯಲ್ಲಿ “ದೇವ್ಲೆ ದೇವ್ಲೆ” ಹಾಡು ಹಾಡಿದೆ. ಈ ಹಿಂದೆ ಕೂಡ ನನ್ನ ಹಾಗೂ ಭಟ್ಟರ ಕಾಂಬಿನೇಶನಲ್ಲಿ ಸಾಕಷ್ಟು ಗೀತೆಗಳು ಜನಪ್ರಿಯವಾಗಿದೆ ಎಂದರು ಗಾಯಕ ವಿಜಯ್ ಪ್ರಕಾಶ್.

    ಈ ಹಾಡು ಮಾಡಿದಾಗ ಲ ಕಾರ ಇರಲಿಲ್ಲ. ಮೊದಲು ರ ಕಾರ ಇತ್ತು. ರ ಕಾರದ ಹಾಡು ಅಷ್ಟು ಮಜಾ ಇಲ್ಲ ಅಂದೆ. ಆಗ ಯೋಗರಾಜ್ ಸರ್, ರ ಕಾರಗಳನ್ನು ತೆಗೆದು ಲ ಕಾರ ಮಾಡು ಅಂದರು. ಹಾಗೆ ಮಾಡಿದಾಗ ಈ ಹಾಡು ತುಂಬಾ ಹಿಡಿಸಿತು. ವಿಜಯ್ ಪ್ರಕಾಶ್ ಅವರು ಇಂಪಾಗಿ ಹಾಡಿದ್ದಾರೆ. ನಾನು ಪದೇಪದೇ ಕೇಳುವ ಹಾಡಗಳೆಂದರೆ ಅದು “ಗಾಳಿಪಟ ೨” ಚಿತ್ರದ ಹಾಡುಗಳು ಎಂದರು ಸಂಗೀತ ನಿರ್ದೇಶಕ ಅರ್ಜುನ್ ಜನ್ಯ.

    ಈ ಹಾಡಿನ‌ ಚಿತ್ರೀಕರಣ ನೋಡಲು ಕಜಾಕಿಸ್ತಾನಕ್ಕೆ ಹೋಗಿದ್ದೆ. ಅದೇ ಮೊದಲ ಬಾರಿಗೆ ನಾನು  ಅಂತರರಾಷ್ಟ್ರೀಯ ವಿಮಾನ ಹತ್ತಿದ್ದು, ಅಂತಹ ಚಳಿಯಲ್ಲಿ ಕೆಲಸ ಮಾಡಿದ್ದ ಚಿತ್ರ ತಂಡಕ್ಕೆ ಧನ್ಯವಾದ ಎಂದರು ನಿರ್ಮಾಪಕ ರಮೇಶ್ ರೆಡ್ಡಿ. ನಾಯಕರಾದ ದಿಗಂತ್, ಪವನ್ ಕುಮಾರ್, ನಾಯಕಿ ಶರ್ಮಿಳಾ ಮಾಂಡ್ರೆ, ನಟಿ ಸುಧಾ ಬೆಳವಾಡಿ, ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ, ನೃತ್ಯ ನಿರ್ದೇಶಕ ಧನು ಮಾಸ್ಟರ್ ಹಾಗೂ ಆನಂದ್ ಆಡಿಯೋ ಶ್ಯಾಮ್ “ದೇವ್ಲೆ ದೇವ್ಲೆ” ಹಾಡಿನ ಬಗ್ಗೆ ಹಾಗೂ ಚಿತ್ರದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು.

    Live Tv
    [brid partner=56869869 player=32851 video=960834 autoplay=true]

  • ಗಣೇಶ್ ನಡೆಸಿಕೊಡುವ ‘ಇಸ್ಮಾರ್ಟ್ ಶೋ’ ಸ್ಪೆಷಲ್ ಏನು? ಯಾರೆಲ್ಲ ಸೆಲೆಬ್ರಿಟಿ ಜೋಡಿ ಭಾಗಿಯಾಗ್ತಿದ್ದಾರೆ ಗೊತ್ತಾ?

    ಗಣೇಶ್ ನಡೆಸಿಕೊಡುವ ‘ಇಸ್ಮಾರ್ಟ್ ಶೋ’ ಸ್ಪೆಷಲ್ ಏನು? ಯಾರೆಲ್ಲ ಸೆಲೆಬ್ರಿಟಿ ಜೋಡಿ ಭಾಗಿಯಾಗ್ತಿದ್ದಾರೆ ಗೊತ್ತಾ?

    ವೀಕೆಂಡ್ ಮನೋರಂಜನೆಗೆ ಸ್ಟಾರ್ ಸುವರ್ಣ ವಾಹಿನಿ ಈಗ  “ಇಸ್ಮಾರ್ಟ್ ಜೋಡಿ”‌ ಎಂಬ ಸುಂದರ ಕಾರ್ಯಕ್ರಮ ಆರಂಭಿಸಲಿದೆ. ಖ್ಯಾತ ನಟ ಗೋಲ್ಡನ್ ಸ್ಟಾರ್ ಗಣೇಶ್ ನಡೆಸಿಕೊಡುವ ಈ ರಿಯಾಲಿಟಿ ಶೋ ಇದೇ ಜುಲೈ 16ರ ಶನಿವಾರದಿಂದ ಆರಂಭವಾಗಲಿದೆ. ಹತ್ತು ಸೆಲೆಬ್ರಿಟಿ ಜೋಡಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಖ್ಯಾತಿಯ ದಿವ್ಯಾ ಉರುಡುಗ-ಅರವಿಂದ ಪಾಲಿಗೆ ಈ ದಿನ ಯಾಕೆ ಸ್ಪೆಷಲ್ ಗೊತ್ತಾ?

    ಈ ಕುರಿತು ಗಣೇಶ್ ಮಾತನಾಡಿ, ಇದುವರೆಗೂ ಮನರಂಜನೆಯ ಮತ್ತು ಸ್ನೇಹದ ಕುರಿತಾದ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದೇನೆ. ಈಗ ಮೊದಲ ಬಾರಿಗೆ ಸೆಲೆಬ್ರಿಟಿ ಜೋಡಿಗಳ ಕುರಿತಾಗಿ ಒಂದು ಕಾರ್ಯಕ್ರಮ ನಡೆಸಿಕೊಡುತ್ತಿದ್ದೇನೆ. ಎರಡು ವರ್ಷ ಗ್ಯಾಪ್​ ಆಗಿತ್ತು. ಬೇರೇನೋ ಹೊಸದು ಮಾಡಬೇಕು,  ಫ್ಯಾಮಿಲಿ ಆಡಿಯನ್ಸ್​ ತಲುಪಬೇಕು ಎಂದು ಯೋಚಿಸುತ್ತಿದ್ದಾಗ ಸ್ಟಾರ್​ ಸುವರ್ಣದವರು ಈ ಕಾರ್ಯಕ್ರಮದ ಕುರಿತು ಹೇಳಿದರು. ಇದೊಂದು ಸೆಲೆಬ್ರಿಟಿ ಜೋಡಿಯ ಕುರಿತಾದ ಕಾರ್ಯಕ್ರಮ. ಇಲ್ಲಿ ಹೊಸದಾಗಿ ಮದುವೆಯಾದವರಿಂದ 40 ವರ್ಷ ದಾಂಪತ್ಯ ಜೀವನ ನಡೆಸಿದ ಹಿರಿಯರವರೆಗೂ ಇದ್ದಾರೆ. ಇವತ್ತಿನ ದಿನಗಳಲ್ಲಿ ದಂಪತಿಗಳು ಸಣ್ಣಸಣ್ಣ ವಿಷಯಕ್ಕೂ ಬಹಳ ಬೇಗ ದೂರ ಆಗುತ್ತಿದ್ದಾರೆ. ಜೀವನ ಎಂದರೆ ಅದಲ್ಲ, ಇಲ್ಲಿ ಏಳುಬೀಳು, ಸುಖ-ಸಂತೋಷ ಎಲ್ಲವೂ ಇರುತ್ತದೆ ಎಂಬುದನ್ನು ಹೇಳುವ ಪ್ರಯತ್ನ ಇದು. ಈ ಕಾರ್ಯಕ್ರಮವು ನಾಲ್ಕು ಜನರಿಗೆ ಮಾದರಿ ಆಗಬೇಕು, ನೀವೇ ಇದನ್ನು ನಡೆಸಿಕೊಡಬೇಕು ಎಂದರು. ಒಳ್ಳೆಯ ಕಾನ್ಸೆಪ್ಟ್​ ಆದ್ದರಿಂದ ಒಪ್ಪಿಕೊಂಡೆ. ಒಟ್ಟು 26 ಕಂತುಗಳು. ಪ್ರತಿ ಶನಿವಾರ ಮತ್ತು ಭಾನುವಾರ ರಾತಿ 9ಕ್ಕೆ ಪ್ರಸಾರವಾಗಲಿದೆ. ಈಗಾಗಲೇ ಆರಂಭಿಕ ಎರಡು ಕಂತುಗಳ ಚಿತ್ರೀಕರಣ ನಡೆದಿದೆ.  ಈಗ ಇನ್ನೆರೆಡು ಕಂತುಗಳ ಚಿತ್ರೀಕರಣ ಆಗುತ್ತಿದೆ. ಇಲ್ಲಿ ಒಬ್ಬೊಬ್ಬರ ಜರ್ನಿ ಒಂದೊಂದು ರೀತಿ. ಹಿರಿಯರ ಜೊತೆಗೆ ಮಾತನಾಡುವಾಗ ಅವರ ಜೀವನದ ಬಗ್ಗೆ ಕೇಳಿ ಬಹಳ ಖುಷಿಯಾಯಿತು. ನಾನು ಸಹ ಒಬ್ಬ ಪ್ರೇಕ್ಷಕನಾಗಿ ಬಹಳ ಕುತೂಹಲ ಎಂದನಿಸಿತು. ಒಟ್ಟಿನಲ್ಲಿ ಎಲ್ಲರೂ ಪ್ರೀತಿಯಿಂದ ಬದುಕಿ ಅಂತ ಸಂದೇಶ ಸಾರುವಂತಹ ಕಾರ್ಯಕ್ರಮ ಇದು. ಇಲ್ಲಿ ತೀರ್ಪುಗಾರರಿರುವುದಿಲ್ಲ. ನಾನು ನಿರೂಪಕನಾಗಿರುತ್ತೇನೆ. ಸ್ಪರ್ಧಿಗಳಿಗೆ ಹಲವು ಟಾಸ್ಕ್​ಗಳನ್ನು ನೀಡಲಾಗುತ್ತದೆ. ಗೆದ್ದವರಿಗೆ ಅಂಕಗಳನ್ನು ನೀಡಲಾಗುತ್ತದೆ. ಮೊದಲ ಐದು ಕಂತುಗಳಲ್ಲಿ ಯಾವುದೇ ಎಲಿಮಿನೇಷನ್​ ಇರುವುದಿಲ್ಲ. ಗೆದ್ದವರಿಗೆ 10 ಲಕ್ಷ ಬಹುಮಾನ ನೀಡಲಾಗುತ್ತದೆ. ಇಲ್ಲಿ ಚಿತ್ರರಂಗ, ಕಿರುತೆರೆ ಮತ್ತು ಸೋಷಿಯಲ್​ ಮೀಡಿಯಾದಲ್ಲಿ ಜನಪ್ರಿಯವಾಗಿರುವ ಜೋಡಿಗಳು ಭಾಗವಹಿಸುತ್ತಿವೆ. ಜತೆಗೆ ಸಿನಿಮಾ ಪ್ರಮೋಷನ್​ಗಳು ಸಹ ಇರುತ್ತವೆ. ಸೆಲೆಬ್ರಿಟಿಗಳು ಆಗಾಗ ಅತಿಥಿಯಾಗಿ ಬರುತ್ತಿರುತ್ತಾರೆ ಎಂದರು ಗಣೇಶ್.

    ವಿನಯ್​ ಗೌಡ ಮತ್ತು ಅಕ್ಷತಾ ಗೌಡ, ಸುಮನ್​ ನಗರ್​ಕರ್​ ಮತ್ತು ಗುರುದೇವ್​ ನಾಗರಾಜ, ದಿಶಾ ಮದನ್​ ಮತ್ತು ಶಶಾಂಕ್​ ವಾಸುಕಿ ಗೋಪಾಲ್​, ಪ್ರತಿಕ್​ ಪ್ರೊ ಮತ್ತು ಮೌಲ್ಯಶ್ರೀ ಎಂ,ಶ್ರೀರಾಮ ಸುಳ್ಯ ಮತ್ತು ಪುನೀತ ಆಚಾರ್ಯ, ರಘು ವೈನ್​ ಸ್ಟೋರ್​ ಮತ್ತು ವಿದ್ಯಾಶ್ರೀ, ಇಂಪನಾ ಜಯರಾಜ್​ ಮತ್ತು ಅಜಿತ್​  ಜಯರಾಜ್​, ಸಪ್ನ ದೀಕ್ಷಿತ್​ ಮತ್ತು ಅಶ್ವಿನ್​ ದೀಕ್ಷಿತ್​, ಜೈಜಗದೀಶ್​ ಮತ್ತು ವಿಜಯಲಕ್ಷ್ಮಿ ಸಿಂಗ್​, ರಿಚರ್ಡ್​ ಲೂಯಿಸ್​ ಮತ್ತು ಹ್ಯಾರಿಯೆಟ್​ ಲೂಯಿಸ್​.

    ರಾಕ್​ಲೈನ್​ ಸ್ಟುಡಿಯೋದಲ್ಲಿ ನಿರ್ಮಿಸಲಾಗಿರುವ ಅದ್ದೂರಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಅದ್ಭುತ  ಸೆಟ್​ನಲ್ಲಿ ಚಿತ್ರೀಕರಣ ನಡೆಯುತ್ತಿದೆ.  ಶೀರ್ಷಿಕೆ ಹಾಡಿಗೆ ALL OK ಸಂಗೀತ ಸಂಯೋಜನೆ ಮಾಡಿ ಅವರೆ ಹಾಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಪ್ರೋಮೊದಲ್ಲಿ ಈ ಹಾಡು ಜನರ ಮನ ಗೆದ್ದಿದೆ. ನಿರ್ದೇಶಕ ಪ್ರಶಾಂತ್​, ವರ್ಷ, ಉಷಾ ಗೌಡ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಮತ್ತೆ ‘ಎಣ್ಣೆ ಹಾಡಿನ’ ಹಿಂದೆ ಬಿದ್ದ ಯೋಗರಾಜ್ ಭಟ್: ಜುಲೈ 14ರಂದು ಗಾಳಿಪಟ 2 ಚಿತ್ರದ ಎಣ್ಣೆ ಹಾಡು ರಿಲೀಸ್

    ಮತ್ತೆ ‘ಎಣ್ಣೆ ಹಾಡಿನ’ ಹಿಂದೆ ಬಿದ್ದ ಯೋಗರಾಜ್ ಭಟ್: ಜುಲೈ 14ರಂದು ಗಾಳಿಪಟ 2 ಚಿತ್ರದ ಎಣ್ಣೆ ಹಾಡು ರಿಲೀಸ್

    ಗಾಗಲೇ ಅನೇಕ ಎಣ್ಣೆ ಹಾಡುಗಳು ಮೂಲಕ ಫೇಮಸ್ ಆಗಿರುವ ನಿರ್ದೇಶಕ ಯೋಗರಾಜ್ ಭಟ್ ಗಾಳಿಪಟ 2 ಸಿನಿಮಾಗಾಗಿ ಮತ್ತೊಂದು ಎಣ್ಣೆ ಹಾಡು ರೆಡಿ ಮಾಡಿದ್ದಾರೆ. ನಿರ್ದೇಶಕರಾಗಿ ಜನಪ್ರಿಯರಾಗಿರುವ ಯೋಗರಾಜ್ ಭಟ್, ಗೀತರಚನೆಕಾರರಗಿಯೂ ಎಲ್ಲರಿಗೂ ಅಚ್ಚುಮೆಚ್ಚು. ಈ ಹಿಂದೆ ಇವರ ರಚನೆಯ ಎಣ್ಣೆ ಹಾಡುಗಳು ಇಂದಿಗೂ ಗುನಗುವಂತಿದೆ. ಭಟ್ಟರು ಬರೆದಿರುವ ಎಣ್ಣೆ ಹಾಡುಗಳನ್ನು ಹೆಚ್ಚಾಗಿ ಹಾಡಿರುವವರು ವಿಜಯ್ ಪ್ರಕಾಶ್ ಹಾಗೂ ಸಂಗೀತ ನೀಡಿರುವವರು ಅರ್ಜುನ್ ಜನ್ಯ.

    ಈ ಮೂವರ ಕಾಂಬಿನೇಶನ್ ನಲ್ಲಿ “ಗಾಳಿಪಟ 2” ಚಿತ್ರದ ಮತ್ತೊಂದು ಎಣ್ಣೆ ಸಾಂಗ್ ಜುಲೈ 14 ರಂದು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಲಿದೆ. ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ ಈ ಚಿತ್ರದ ಎರಡು ಹಾಡುಗಳು ಈಗಾಗಲೇ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಮುಂದೆ ಬಿಡುಗಡೆಯಾಗಲಿರುವ ಹಾಡಿನ ಬಗ್ಗೆ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಇದನ್ನೂ ಓದಿ:ಶಿವರಾಜ್ ಕುಮಾರ್ ಬರ್ತಡೇ : ಏನೆಲ್ಲ ಸ್ಪೆಷಲ್ ಗೊತ್ತಾ?

    ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮೇಶ್ ರೆಡ್ಡಿ ಅವರು “ಗಾಳಿಪಟ 2” ಚಿತ್ರವನ್ನು ನಿರ್ಮಿಸಿದ್ದಾರೆ. ಯೋಗರಾಜ್ ಭಟ್ ನಿರ್ದೇಶಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಮಾಡಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್, ಶರ್ಮಿಳಾ ಮಾಂಡ್ರೆ, ವೈಭವಿ ಶಾಂಡಿಲ್ಯ, ಸಂಯುಕ್ತ ಮೆನನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ

    Live Tv
    [brid partner=56869869 player=32851 video=960834 autoplay=true]

  • ಇಸ್ಮಾರ್ಟ್ ಜೋಡಿಗೆ ಜೊತೆಯಾಗಲಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್

    ಇಸ್ಮಾರ್ಟ್ ಜೋಡಿಗೆ ಜೊತೆಯಾಗಲಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್

    ನ್ನಡದ ಸ್ಟಾರ್ ಸುವರ್ಣ ವಾಹಿನಿಯು ಹೊಸ ರಿಯಾಲಿಟಿ ಶೋ ಶುರು ಮಾಡುತ್ತಿದ್ದು, ಈ ಕಾರ್ಯಕ್ರಮಕ್ಕೆ ಇಸ್ಮಾರ್ಟ್ ಜೋಡಿ ಎಂದು ಹೆಸರಿಡಲಾಗಿದೆ. ಈ ಶೋ ವಿಶೇಷ ಅಂದರೆ, ಗೋಲ್ಡನ್ ಸ್ಟಾರ್ ಗಣೇಶ್ ಅವರು ನಡೆಸಿಕೊಡುತ್ತಿದ್ದಾರೆ. ತಮ್ಮ ಲವಲವಿಕೆಯ ಮಾತಿನ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ನೂತನ ಕಾನ್ಸೆಪ್ಟ್ ಜೊತೆ ಸಿದ್ಧವಾಗಿರುವ ಇಸ್ಮಾರ್ಟ್ ಜೋಡಿ ಶೋ ಇದೇ ಜುಲೈ 16 ರಿಂದ ವಾರಾಂತ್ಯದಲ್ಲಿ ಶನಿವಾರ ಮತ್ತು ಭಾನುವಾರ ರಾತ್ರಿ 9ಕ್ಕೆ ಪ್ರಸಾರವಾಗಲಿದೆ.

    ಈಗಾಗಲೇ ಸಿನಿಮಾಗಳ ಜೊತೆ ಕಿರುತೆರೆಯಲ್ಲೂ ಮಿಂಚುತ್ತಿರುವ ಗಣೇಶ್, ಈ ಶೋಗಾಗಿ ಬೇರೆ ರೀತಿಯಲ್ಲೇ ಸಿದ್ಧತೆ ಮಾಡಿಕೊಂಡಿದ್ದಾರಂತೆ. ಹಾಗಾಗಿ ಇಸ್ಮಾರ್ಟ್ ಜೋಡಿಯ ಶಕ್ತಿಯೇ ಗಣೇಶ್ ಎಂದಿದೆ ಸ್ಟಾರ್ ಸುವರ್ಣ ವಾಹಿನಿ. ಈ ಶೋಗಾಗಿ ಅದ್ಧೂರಿ ಸೆಟ್ ಕೂಡ ಹಾಕಲಾಗಿದ್ದು, ಆಲ್ ಓಕೆ ಅಲೋಕ್ ಸಂಯೋಜಿಸಿದ ಹಾಡು ಕೂಡ ಕಾರ್ಯಕ್ರಮಕ್ಕೆ ಸಾಥ್ ನೀಡಲಿದೆ. ಇದೊಂದು ರೊಮ್ಯಾಂಟಿಕ್ ಶೋ ಆಗಿದ್ದು, ವರ್ಣರಂಜಿತ ಸೆಟ್ ನಲ್ಲೇ ಬಹುತೇಕ ಶೂಟಿಂಗ್ ನಡೆಯಲಿದೆ. ಇದನ್ನೂ ಓದಿ:`ಮಣಿರತ್ನಂ’ ನಿರ್ದೇಶನದ ಚಿತ್ರದ ಮೂಲಕ ಕನ್ನಡಕ್ಕೆ ಬಂದ ಐಶ್ವರ್ಯ ರೈ

    ಶೋನಲ್ಲಿ ಭಾಗಿಯಾಗಲು ಈಗಾಗಲೇ ಜನಪ್ರಿಯ ಜೋಡಿಗಳು ಸಜ್ಜಾಗಿದ್ದು, ಆ ಜೋಡಿಗಳು ಯಾವವು? ಯಾರೆಲ್ಲ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ ಎನ್ನುವುದನ್ನು ಜುಲೈ 16 ರಂದೇ ತೆರೆಯ ಮೇಲೆ ನೋಡಿ ಎಂದಿದೆ ಸ್ಟಾರ್ ಸುವರ್ಣ ವಾಹಿನಿ. ಈ ಜೋಡಿಗಳನ್ನು ಪರಿಚಯಿಸುವುದಕ್ಕಾಗಿಯೇ ಅಂದು ಗ್ರ್ಯಾಂಡ್ ಲಾಂಚ್ ಎಪಿಸೋಡ್ ಸಿದ್ಧ ಮಾಡಿಕೊಳ್ಳಲಾಗಿದೆ. ಈ ಜೋಡಿಯು ಪ್ರೇಕ್ಷಕರನ್ನು ರಮಿಸಿ, ಕುಣಿಸಿ, ನಗಿಸಿ, ಆಡಿಸಿ, ಬೀಳಿಸಿ ಒಟ್ಟಾರೆಯಾಗಿ ವೀಕೆಂಡ್ ಅನ್ನು ಭರಪೂರ ಮನರಂಜನೆ ನೀಡುವ ಕೆಲಸ ಮಾಡಲಿದೆಯಂತೆ.

    Live Tv
    [brid partner=56869869 player=32851 video=960834 autoplay=true]

  • ‘ಬಾನದಾರಿಯಲ್ಲಿ’ ಗೋಲ್ಡನ್ ಸ್ಟಾರ್ ಗಣೇಶ್ ಕ್ರಿಕೆಟ್ ಆಟಗಾರ

    ‘ಬಾನದಾರಿಯಲ್ಲಿ’ ಗೋಲ್ಡನ್ ಸ್ಟಾರ್ ಗಣೇಶ್ ಕ್ರಿಕೆಟ್ ಆಟಗಾರ

    ಪ್ರೀತಮ್ ಗುಬ್ಬಿ ಮತ್ತು ಗಣೇಶ್ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ ಮೂಡಿ ಬರುತ್ತಿದ್ದು, ಈ ಸಿನಿಮಾಗೆ ಬಾನದಾರಿಯಲ್ಲಿ ಎಂದು ಹೆಸರಿಡಲಾಗಿದೆ. ಈಗಾಗಲೇ ಎರಡು ಹಂತದ ಚಿತ್ರೀಕರಣವನ್ನೂ ಮುಗಿಸಿದೆ ಚಿತ್ರತಂಡ. ಮೊನ್ನೆಯಷ್ಟೇ ಎರಡನೇ ಹಂತದ ಶೂಟಿಂಗ್ ಮುಗಿಸಿರುವ ಚಿತ್ರತಂಡ, ಗಣೇಶ್ ಅವರ ಹುಟ್ಟು ಹಬ್ಬದಂದು ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದೆ. ಆ ಪೋಸ್ಟರ್ ನಲ್ಲಿ ಗಣೇಶ್ ಕ್ರಿಕೆಟ್ ಆಟಗಾರನಾಗಿ ಕಂಡಿದ್ದಾರೆ.

    ಎರಡು ದಿನಗಳ ಹಿಂದೆಯಷ್ಟೇ ಗಣೇಶ್ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಹುಟ್ಟು ಹಬ್ಬಕ್ಕಾಗಿಯೇ ಮೂರು ಸಿನಿಮಾಗಳ ಪೋಸ್ಟರ್ ರಿಲೀಸ್ ಆಗಿದ್ದವು. ಅವುಗಳಲ್ಲಿ ಬಾನದಾರಿಯಲ್ಲಿ ಪೋಸ್ಟರ್ ಆಕರ್ಷಕವಾಗಿತ್ತು. ಕಾರಣ, ಗಣೇಶ್ ಕ್ರಿಕೆಟ್ ಆಟಗಾರನ ವೇಷದಲ್ಲಿದ್ದರು. ಈ ಫೋಟೋ ನಾನಾ ಕಾರಣಗಳಿಂದಾಗಿ ಅಭಿಮಾನಿಗಳಿಗೆ ಇಷ್ಟವಾಗಿತ್ತು. ಇದನ್ನೂ ಓದಿ:ಸಾಯಿ ಪಲ್ಲವಿ ನಟನೆಯ ‘ಗಾರ್ಗಿ’ಗೆ ಕರ್ನಾಟಕದಲ್ಲಿ ಧರ್ಮ ಸಂಕಟ

    ಕ್ರಿಕೆಟ್ ಆಟಗಾರನ ಪೋಸ್ ಕೊಟ್ಟಿರುವ ಗಣೇಶ್ ಅವರ ಪೋಸ್ಟರ್ ರಿಲೀಸ್ ಆಗಿದೆ. ಆದರೆ, ಈ ಸಿನಿಮಾದಲ್ಲಿ ಅವರು ಪೂರ್ಣ ಪ್ರಮಾಣದ ಕ್ರಿಕೆಟ್ ಆಟಗಾರರಾ? ಅಥವಾ ಯಾವುದಾದರೂ ಒಂದು ದೃಶ್ಯದಲ್ಲಿ ಹೀಗೆ ಬಂದು ಹೋಗುತ್ತಾರೆ ಎನ್ನುವುದು ಸದ್ಯಕ್ಕೆ ಸಸ್ಪೆನ್ಸ್. ಅದನ್ನು ಸಿನಿಮಾದಲ್ಲಿಯೇ ನೋಡಿ ಎನ್ನುತ್ತಾರೆ ನಿರ್ದೇಶಕರು. ಗಣೇಶ್ ಮತ್ತು ಪ್ರೀತಮ್ ಈವರೆಗೂ ಮೆಚ್ಚುವಂತಹ ಸಿನಿಮಾಗಳನ್ನೇ ಕೊಟ್ಟಿರುವುದರಿಂದ, ಈ ಸಿನಿಮಾ ಕೂಡ ಎಲ್ಲರಿಗೂ ಇಷ್ಟವಾಗಲಿದೆ ಎನ್ನುತ್ತಿದೆ ಚಿತ್ರತಂಡ.

    Live Tv
    [brid partner=56869869 player=32851 video=960834 autoplay=true]

  • ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ ಸಿಕ್ಕ ಉಡುಗೊರೆ ಏನು?

    ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ ಸಿಕ್ಕ ಉಡುಗೊರೆ ಏನು?

    ನ್ನಡದ ಹೆಸರಾಂತ ನಟ, ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 42ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ನಾನಾ ಕಾರಣಗಳಿಂದಾಗಿ ಈ ಬಾರಿ ಅಭಿಮಾನಿಗಳ ಜೊತೆ ತಾವು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ಈಗಾಗಲೇ ಹೇಳಿಕೊಂಡಿದ್ದಾರೆ. ಆದರೆ, ಅವರು ಅಭಿನಯಿಸುತ್ತಿರುವ ಚಿತ್ರಗಳು ಮಾತ್ರ ತಮ್ಮದೇ ಆದ ರೀತಿಯಲ್ಲಿ ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಆಚರಿಸಲಾಗುತ್ತಿದೆ.

    ಸದ್ಯ ಗಣೇಶ್ ಅವರ ಗಾಳಿಪಟ 2 ಸಿನಿಮಾದ ಸಂಪೂರ್ಣ ಶೂಟಿಂಗ್ ಮುಗಿಸಿದ್ದಾರೆ. ಮೊನ್ನೆಯಷ್ಟೇ ಇವರ ಹುಟ್ಟು ಹಬ್ಬಕ್ಕಾಗಿಯೇ ಹಾಡೊಂದನ್ನು ಬಿಡುಗಡೆ ಮಾಡಿದೆ ಚಿತ್ರತಂಡ. ಅಲ್ಲದೇ, ಬಾನದಾರಿಯಲ್ಲಿ ಸಿನಿಮಾದ ಪೋಸ್ಟರ್ ಕೂಡ ಇಂದು ರಿಲೀಸ್ ಆಗಿದೆ. ಜೊತೆಗೆ ಡಬ್ಬಲ್ ಡೆಕ್ಕರ್ ಪೋಸ್ಟರ್ ಕೂಡ ಬಿಡುಗಡೆ ಮಾಡಿ ಶುಭ ಹಾರೈಸಿವೆ ಚಿತ್ರತಂಡಗಳು. ಈಗಾಗಲೇ ಬಾನದಾರಿಯಲ್ಲಿ ಸಿನಿಮಾದ ಎರಡು ಹಂತದ ಶೂಟಿಂಗ್ ಕೂಡ ಮುಗಿಸಿದ್ದಾರೆ ಗಣೇಶ್. ಇದನ್ನೂ ಓದಿ:`ರಾ ರಾ ರಕ್ಕಮ್ಮ’ ನಂತರ ನಾಳೆ ಮತ್ತೊಂದು ಸಾಂಗ್ ರಿಲೀಸ್: ವಿಕ್ರಾಂತ್ ರೋಣ

    ಈ ಹುಟ್ಟು ಹಬ್ಬಕ್ಕಾಗಿಯೇ ನಿರ್ದೇಶಕ ಸುನಿ ಸರ್ ಪ್ರೈಸ್ ವೊಂದನ್ನು ನೀಡಲಿದ್ದಾರಂತೆ. ಈ ಕುರಿತು ಅವರು ಟ್ವಿಟ್ ಮಾಡಿದ್ದಾರೆ. ಇದು ರಾಯಗಡ್ ಸಿನಿಮಾದ ಅಪ್ ಡೇಟ್ ನೀಡುವುದಾಗಿ ತಿಳಿಸಿದ್ದಾರೆ. ಅಲ್ಲದೇ, ಸೋನು ನಿಗಂ ಕೂಡ ಗಣೇಶ್ ಅವರಿಗಾಗಿ ಹಾಡೊಂದನ್ನು ಹೇಳಿ ಕಳುಹಿಸಿದ್ದಾರೆ. ಈ ಬಾರಿ ಇಷ್ಟೊಂದು ಸಂಭ್ರಮವನ್ನು ಗಣೇಶ್ ನಟನೆಯ ಚಿತ್ರತಂಡಗಳು ಮಾಡಿವೆ.

    Live Tv

  • ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ ‘ಗಾಳಿಪಟ 2’ ತಂಡದಿಂದ ಹಾಡಿನ ಉಡುಗೊರೆ

    ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ ‘ಗಾಳಿಪಟ 2’ ತಂಡದಿಂದ ಹಾಡಿನ ಉಡುಗೊರೆ

    ಜುಲೈ 2 ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬ. ಇದರ ಸವಿನೆನಪಿಗಾಗಿ “ಗಾಳಿಪಟ ೨” ಚಿತ್ರತಂಡ ಹಾಡೊಂದನ್ನು ಬಿಡುಗಡೆ ಮಾಡುವ ಮೂಲಕ ಹುಟ್ಟುಹಬ್ಬದ ಉಡುಗೊರೆ ನೀಡಿದೆ. ಜಯಂತ ಕಾಯ್ಕಿಣಿ ಅವರು ಬರೆದಿರುವ “ನಾನಾಡದ ಮಾತೆಲ್ಲವ ಕದ್ದಾಲಿಸು” ಎಂಬ ಹಾಡನ್ನು ಸೋನು ನಿಗಮ್ ಸುಶ್ರಾವ್ಯವಾಗಿ ಹಾಡಿದ್ದಾರೆ . “ಗಾಳಿಪಟ” ಮೊದಲ ಭಾಗದ “ಮಿಂಚಾಗಿ ನೀನು ಬರಲು” ಹಾಡು ಕೂಡ ಜಯಂತ ಕಾಯ್ಕಿಣಿ, ಸೋನು ನಿಗಮ್, ಗಣೇಶ್ ಹಾಗೂ ಯೋಗರಾಜ್ ಭಟ್ ಅವರ ಕಾಂಬಿನೇಶನ್ ನಲ್ಲಿ ಬಂದು ಭರ್ಜರಿ ಯಶಸ್ಸು ಕಂಡಿತ್ತು. ಈಗ “ಗಾಳಿಪಟ ೨” ಚಿತ್ರದ ಈ ಹಾಡು ಕೂಡ ಅದೇ‌ ರೀತಿ ಯಶಸ್ಸು ಕಾಣಲಿದೆ.

    ನಮ್ಮ ಚಿತ್ರದ ನಾಯಕ ಗಣೇಶ್ ಅವರ ಹುಟ್ಟುಹಬ್ಬದ ಸಂದರ್ಭ. ಈ ಸುಂದರ ಕ್ಷಣಕ್ಕೆ ನಮ್ಮ ಹಾಡಿನ ಉಡುಗೊರೆ. ಜುಲೈ 2 ಗಣೇಶ್  ಹುಟ್ಟುಹಬ್ಬ. ಅಂದು ಅವರು ಊರಿನಲ್ಲಿರದ ಕಾರಣ ಈಗ ಮಾಧ್ಯಮ ಮಿತ್ರರ ಮುಂದೆ ಈ ಹಾಡು ಬಿಡುಗಡೆ ಮಾಡಿದ್ದೇವೆ. ಜುಲೈ 2 ರಂದು ಆನಂದ್ ಆಡಿಯೋ ಮೂಲಕ ಈ ಹಾಡು ಎಲ್ಲರಿಗೂ ತಲುಪಲಿದೆ ಎಂದು ನಿರ್ದೇಶಕ ಯೋಗರಾಜ್ ಭಟ್ ತಿಳಿಸಿದರು ಹಾಗೂ ಹಾಡಿನ  ಪದಪದದ ಅರ್ಥ ವಿವರಿಸಿ, ಹಾಡು ಬರೆದಿರುವ  ಜಯಂತ ಕಾಯ್ಕಿಣಿ ಕಾಯ್ಕಿಣಿ, ಹಾಡಿರುವ ಸೋನು ನಿಗಂ ಹಾಗೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಧನ್ಯವಾದ ಹೇಳಿದರು. ಇದನ್ನೂ ಓದಿ:ಮದುವೆಯ ವದಂತಿಗೆ ಸ್ಪಷ್ಟನೆ ನೀಡಿದ ರಾಮ್ ಪೋತಿನೇನಿ

    ಮತ್ತೆ ಕೋವಿಡ್ ಹೆಚ್ಚುತ್ತಿರುವ ಕಾರಣ, ನಾನು ಈ ಬಾರಿ ನನ್ನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸುತ್ತಿಲ್ಲ. ನಾನು ಅಂದು ಬೆಂಗಳೂರಿನಲ್ಲಿ ಇರುವುದಿಲ್ಲ. ಈ ಹಾಡನ್ನು ಕೇಳಿ ಮತ್ತೆ ಹದಿನೈದು ವರ್ಷಗಳ ಹಿಂದೆ ಹೋದೆ. ಅದೇ ಕಾಂಬಿನೇಷನ್ ನಲ್ಲಿ ಮತ್ತೆ ಇಂಪಾದ ಹಾಡು ಬಂದಿದೆ. ಅಷ್ಟೇ ಜನಪ್ರಿಯವಾಗಲಿದೆ ಎಂಬ ಭರವಸೆಯಿದೆ. ನನ್ನ ಹುಟ್ಟುಹಬ್ಬಕ್ಕೆ ಇದೊಂದು ವಿಶೇಷ ಉಡುಗೊರೆ. ನಿರ್ಮಾಪಕ ರಮೇಶ್ ರೆಡ್ಡಿ ಅವರು ಯಾವುದಕ್ಕೂ ಕೊರತೆ ಇಲ್ಲದೆ ಚಿತ್ರ ನಿರ್ಮಾಣ ಮಾಡಿದ್ದಾರೆ. ಕುದುರೆಮುಖದಲ್ಲಿ ಸುಮಾರು 200 ಜನರ ತಂಡ ಇದ್ದೆವು. ಕಲಾ ನಿರ್ದೇಶಕ‌ ಪಂಡಿತ್ ಅವರಂತೂ ಅದ್ಭುತ ಸೆಟ್ ಹಾಕಿದ್ದರು. ಯೋಗರಾಜ್ ಸರ್ ಬಗ್ಗೆ ಎಷ್ಟು ಹೇಳಿದರು ಕಡಿಮೆ. ನೀರಿನಲ್ಲಿ ಐರನ್ ಬಾಕ್ಸ್ ಇಟ್ಟು ಹೊಗೆ ಬರೆಸಿದ್ದಾರೆ ಅವರು.  ಇದರ ಬಗ್ಗೆ ಕೇಳಿದಾಗ ಹುಡುಗ ಹೀಟ್ ಆಗಿರುತ್ತಾನೆ. ಇದು ಅದರ ಸಂಕೇತವೆಂದರು. ಧನು ಮಾಸ್ಟರ್ ಸುಂದರವಾಗಿ ನೃತ್ಯ ಸಂಯೋಜನೆ ಮಾಡಿದ್ದಾರೆ ಎಂದರು ನಾಯಕ ಗಣೇಶ್.

    ಹಾಡು ಚೆನ್ನಾಗಿದೆ. ಈ ಹಾಡಿಗೆ ಬಳಿಸಿದ ವಸ್ತುಗಳನ್ನು ನೆನಪಿಗಾಗಿ ನಮ್ಮ ಮನೆಯ ಬಳಿ ತರಿಸಿಟ್ಟುಕೊಂಡಿದ್ದೀನಿ. ಈ ಹಾಡನ್ನು ನನ್ನ ಮಗಳು ದಿನ ಕೇಳುತ್ತಿರುತ್ತಾಳೆ. ಬಿಡುಗಡೆ ಮುಂಚೆಯೇ ಈ ಹಾಡು ಗೆದ್ದಿದೆ ಎನ್ನಬಹುದು. ನಮ್ಮ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ ಎಂದರು ನಿರ್ಮಾಪಕ ರಮೇಶ್ ರೆಡ್ಡಿ.

    Live Tv

  • ಇಸ್ಮಾರ್ಟ್ ಜೋಡಿಗೆ ಗೋಲ್ಡನ್ ಸ್ಟಾರ್ ಗಣೇಶ್ ನಿರೂಪಕ

    ಇಸ್ಮಾರ್ಟ್ ಜೋಡಿಗೆ ಗೋಲ್ಡನ್ ಸ್ಟಾರ್ ಗಣೇಶ್ ನಿರೂಪಕ

    ಕಿರುತೆರೆ ಜಗತ್ತಿನಿಂದಲೇ ಸಿನಿಮಾ ರಂಗಕ್ಕೆ ಪ್ರವೇಶಿಸಿರುವ ಗೋಲ್ಡನ್ ಸ್ಟಾರ್ ಗಣೇಶ್, ಇದೀಗ ಮತ್ತೆ ಕಿರುತೆರೆಯಲ್ಲೂ ಬ್ಯುಸಿಯಾಗಿದ್ದಾರೆ. ಸಿನಿಮಾಗಳ ಜೊತೆ ಜೊತೆಗೆ ಹಲವು ಜನಪ್ರಿಯ ಶೋಗಳನ್ನು ಅವರು ನಡೆಸಲು ಒಪ್ಪಿಕೊಳ್ಳುತ್ತಿದ್ದಾರೆ. ಮೊನ್ನೆಯಷ್ಟೇ ಜೀ ಕನ್ನಡ ವಾಹಿನಿಯಲ್ಲಿ ಗೋಲ್ಡನ್ ಗ್ಯಾಂಗ್ ಶೋ ನಡೆಸಿಕೊಟ್ಟಿರುವ ಅವರು ಇದೀಗ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಮೂಡಿ ಬರಲಿರುವ ‘ಇಸ್ಮಾರ್ಟ್ ಜೋಡಿ’ ಕಾರ್ಯಕ್ರಮವನ್ನೂ ನಡೆಸಿಕೊಡಲಿದ್ದಾರೆ.

    ಜನಪ್ರಿಯ ನಟ ಗಣೇಶ್ ಅವರು ಇಸ್ಮಾರ್ಟ್ ಜೋಡಿ ನಡೆಸಿಕೊಡುವ ಕುರಿತಾಗಿ ಸ್ವತಃ ವಾಹಿನಿಯೇ ಪ್ರೋಮೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಾಕಿದೆ. ಈ ಪ್ರೊಮೋಗೆ ಅನೇಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಇದು ಯಾವ ಬಗೆಯ ಕಾರ್ಯಕ್ರಮ? ಎಂದು ಹಲವರು ಪ್ರಶ್ನಿಸಿದ್ದಾರೆ. ಜೋಡಿ ಎನ್ನುವ ಹೆಸರು ಇರುವುದರಿಂದ ಇದೊಂದು ಫ್ಯಾಮಿಲಿ ಕಾರ್ಯಕ್ರಮನಾ ಎಂದೂ ಹಲವರು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ:ಪಿಂಕ್ ಕಲರ್ ಸೀರೆಯಲ್ಲಿ ಹಾಟ್ ಆಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ

    ಸೊಗಸಾದ ಪ್ರೋಮೋ ಮಾಡಿರುವ ಸ್ಟಾರ್ ಸುವರ್ಣ ವಾಹಿನಿಯು ‘ಮೊದಲು ನಿಮ್ಮ ಗಣಪಂಗೆ ಪ್ರೀತಿ ಸಿಕ್ಕಿದ್ದು ಟಿವಿಲಿ ನಮಸ್ಕಾರ ಅಂದಾಗ, ಆಮೇಲೆ ಪ್ರೀತಿ ಮಾಡ್ದಾಗ, ಪ್ರೀತಿ ಕೈ ಕೊಟ್ಟಾಗ, ಪ್ರೀತಿ ಸಿಕ್ಕಾಗ ಶಿಳ್ಳೆ ಚಪ್ಪಾಲೆ ಹೊಡೆದು ಮೆರೆಸಿ ಗೋಲ್ಡನ್ ಸ್ಟಾರ್ ಗಣೇಶ್ ಮಾಡಿದೀರಾ. ಅಂತಹ ಪ್ರೀತಿನ ಮತ್ತೆ ಸೆಲೆಬ್ರೇಟ್ ಮಾಡೋಕೆ ರೋಮ್ಯಾಂಟಿಕ್ ಜೋಡಿಗಳ ಜೊತೆ ಮನರಂಜನೆಯ ಮೋಡಿ ಮಾಡೋಕೆ ನಿಮ್ಮ ಮುಂದೆ ತರ್ತಿದೀನಿ ಇಸ್ಮಾರ್ಟ್ ಜೋಡಿ’ ಎಂದು ಬರೆದುಕೊಂಡಿದ್ದಾರೆ.

    Live Tv