Tag: ಗದಗ ಪೊಲೀಸ್

  • ಗೋವಾದ ಬಸ್, ಕಾರ್‌ ನಡ್ವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

    ಗೋವಾದ ಬಸ್, ಕಾರ್‌ ನಡ್ವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

    ಗದಗ: ಗೋವಾ ರಾಜ್ಯಕ್ಕೆ ಸಂಬಂಧಿಸಿದ ಕದಂಬ ಬಸ್ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಹರ್ಲಾಪೂರ ಕ್ರಾಸ್ ಬಳಿ ನಡೆದಿದೆ.

    ಮೃತರು ಹಾವೇರಿ ಜಿಲ್ಲೆ ಬಂಕಾಪೂರ ತಾಲೂಕಿನ ಹುನಗುಂದ ನಿವಾಸಿ ಎನ್ನಲಾಗ್ತಿದೆ. ಇನ್ನು ಬಸ್ ಚಾಲಕನಿಗೂ ಗಾಯಗಳಾಗಿವೆ. ಹಾವೇರಿ ಜಿಲ್ಲೆ ಪೊಲೀಸ್ ಕಂಟ್ರೋಲ್ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದ ಪೇದೆ ಅರ್ಜುನ್ ನೆಲ್ಲೂರ (32), ಸಹೋದರ ಸಂಬಂಧಿ ರವಿ ನೆಲ್ಲೂರ (35) ಹಾಗೂ ಕೊಪ್ಪಳ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮಿನಲ್ಲಿ ಕೆಲಸ ಮಾಡುತ್ತಿದ್ದ ಪೇದೆ ಈರಣ್ಣ ಉಪ್ಪಾರ (36) ಮೃತ ದುರ್ದೈವಿಗಳು.

    ಗೋವಾ ರಾಜ್ಯದ ಕದಂಬ ಬಸ್ ಪೋಂಡಾ, ಹುಬ್ಬಳ್ಳಿ, ಗದಗ ಮಾರ್ಗವಾಗಿ ಹೊಸಪೇಟೆ ಹೊರಡಿದ್ದ ಬಸ್ ಇದಾಗಿದೆ. ಗಂಗಾವತಿಯಿಂದ ಕೊಪ್ಪಳ, ಗದಗ ಮಾರ್ಗವಾಗಿ ಬಂಕಾಪೂರ ಕಡೆಗೆ ಹೊರಟಿದ್ದ ಕಾರ್. ಕಾರ್ ಚಾಲಕನ ನಿರ್ಲಕ್ಷ್ಯದಿಂದ ರೋಡ್ ಡಿವೈಡರ್ ದಾಟಿಕೊಂಡು ಎದುರು ಬರುವ ಬಸ್‌ಗೆ ಡಿಕ್ಕಿ ಹೊಡೆದ್ದಾರೆ. ಕಾರ್ ಚಾಲಕನ ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.

    ಬಸ್ ಮುಂದಿನ ಭಾಗ ಹಾಗೂ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತ ಹಾಗೂ ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Gadag | ಹೊಳೆಯಲ್ಲಿ ಬೈಕ್ ಸಮೇತ ಕೊಚ್ಚಿ ಹೋದ ವ್ಯಕ್ತಿ ಶವವಾಗಿ ಪತ್ತೆ

    Gadag | ಹೊಳೆಯಲ್ಲಿ ಬೈಕ್ ಸಮೇತ ಕೊಚ್ಚಿ ಹೋದ ವ್ಯಕ್ತಿ ಶವವಾಗಿ ಪತ್ತೆ

    ಗದಗ: ಹೊಳೆಯಲ್ಲಿ ಬೈಕ್ ಸಮೇತ ಕೊಚ್ಚಿ ಹೋದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಗದಗ(Gadag) ತಾಲೂಕಿನ ಬೆನಕೊಪ್ಪ(Benakoppa) ಗ್ರಾಮದಲ್ಲಿ ನಡೆದಿದೆ.

    ಹಿರೇಕೊಪ್ಪ ಗ್ರಾಮದ ಶರಣಪ್ಪ ಹಡಗಲಿ(39) ಮೃತ ದುರ್ದೈವಿ. ಮಂಗಳವಾರ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗಿದ್ದು, ಹಳ್ಳಕೊಳ್ಳಗಳೆಲ್ಲಾ ತುಂಬಿ ಉಕ್ಕಿ ಹರಿದಿದೆ. ಇದನ್ನೂ ಓದಿ: 108 ಅಂಬುಲೆನ್ಸ್ ಸೇವೆ ಸರ್ಕಾರದಿಂದಲೇ ನಿರ್ವಹಣೆ: ದಿನೇಶ್ ಗುಂಡೂರಾವ್

    ಬೆನಕೊಪ್ಪ ಗ್ರಾಮದಲ್ಲಿ ಹೊಳೆಯೊಂದು ಉಕ್ಕಿ ರಸ್ತೆ ಮೇಲೆ ಹರಿದಿದೆ. ಶರಣಪ್ಪ ನಿನ್ನೆ ಸಂಜೆ ಪತ್ನಿಯ ತವರೂರು ಬೆನಕೊಪ್ಪ ಗ್ರಾಮಕ್ಕೆ ಹೊರಟ್ಟಿದ್ದರು. ಶರಣಪ್ಪ ಹೊಳೆಯ ನೀರನ್ನು ಲೆಕ್ಕಿಸದೇ ಬೈಕ್ ಸಮೇತ ಹೊಳೆ ದಾಟಲು ಮುಂದಾಗಿದ್ದು, ಈ ವೇಳೆ ನೀರಿನ ರಭಸಕ್ಕೆ ಸಿಕ್ಕಿ ಕೊಚ್ಚಿ ಹೋಗಿದ್ದರು. ಇದನ್ನೂ ಓದಿ: KSRTC ಬಸ್, ಕಾರು ಮುಖಾಮುಖಿ ಡಿಕ್ಕಿ – ಚಾಲಕ ಸಾವು, ಓರ್ವ ಗಂಭೀರ


    ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಶೋಧ ಕಾರ್ಯ ನಡೆಸಿದರು. ಇಂದು ಸುಮಾರು ನಾಲ್ಕು ಕಿ.ಮೀ ದೂರದಲ್ಲಿ ನಿರಲಗಿ ಚೆಕ್ ಡ್ಯಾಂ ಬಳಿಯ ಶರಣಪ್ಪ ಶವ ಪತ್ತೆಯಾಗಿದೆ. ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ(Gadag Rural Police Station) ಪ್ರಕರಣ ದಾಖಲಾಗಿದೆ.

  • ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ!

    ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ!

    ಗದಗ: ಇಲ್ಲಿನ ದಾಸರ ಓಣಿಯಲ್ಲಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆಯಾಗಿರುವ (Murder) ಘಟನೆ ನಡೆದಿದ್ದು, ಸಾರ್ವಜನಿಕರನ್ನು ಬೆಚ್ಚಿಬೀಳುವಂತೆ ಮಾಡಿದೆ.

    ಗದಗ (Gadag) ಜಿಲ್ಲೆಯ ಬೇಟಗೇರಿ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಹತ್ಯೆಯಾಗಿದೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55) ಪತ್ನಿ ಲಕ್ಷ್ಮಿ (45), ಪುತ್ರಿ ಆಕಾಂಕ್ಷಾ (16) ಕೊಲೆಯಾಗಿದ್ದಾರೆ. ಕೊಲೆ ಮಾಡಿದ್ದ ದುಷ್ಕರ್ಮಿಗಳು ಪರಾರಿಯಾಗಿದ್ದು, ಆರೋಪಿಗಳಿಗಾಗಿ ಪೊಲೀಸರು (Gadag Police) ಹುಡುಕಾಟ ನಡೆಸಿದ್ದಾರೆ.

    ಮೃತ ನಾಲ್ವರ ಪೈಕಿ ಮೂವರು ದಾಸರ ಓಣಿಯಲ್ಲಿ ತಮ್ಮ ಮನೆಯ ಮೊದಲ ಮಹಡಿಯಲ್ಲಿ ಮಲಗಿದ್ದರು. ಈ ಮೂವರು ಮೂಲತಃ ಕೊಪ್ಪಳ ಜಿಲ್ಲೆಯವರು. ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್‌ನ ಮದುವೆ ಸಹ ನಡೆದಿತ್ತು. ವಿವಾಹ ಕಾರ್ಯಕ್ರಮಕ್ಕಾಗಿ ಸಂಬಂಧಿಕರು ಆಗಮಿಸಿದ್ದರು ಎಂದು ಹೇಳಲಾಗಿದೆ. ಇದನ್ನೂ ಓದಿ: ಲೋಕಸಭೆಗೆ ಶುಕ್ರವಾರ ಮೊದಲ ಹಂತದ ಮತದಾನ – 21 ರಾಜ್ಯಗಳ 102 ಕ್ಷೇತ್ರಗಳಲ್ಲಿ ಎಲೆಕ್ಷನ್

    ಸದ್ಯ ಸ್ಥಳಕ್ಕೆ ಶ್ವಾನದಳ, ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಸ್ಥಳಕ್ಕೆ ಸಚಿವ ಹೆಚ್‌.ಕೆ ಪಾಟೀಲ್‌ ಸಹ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

    ಚರಂಡಿಯಲ್ಲಿ ಮಾರಕಾಸ್ತ್ರ ಪತ್ತೆ:
    ಇನ್ನು ದುಷ್ಕರ್ಮಿಗಳು ಕೊಲೆಗೆ ಬಳಸಿದ್ದ ಮಾರಕಾಸ್ತ್ರಗಳನ್ನು ಚರಂಡಿಯಲ್ಲಿ ಎಸೆದು ಹೋಗಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಇದನ್ನೂ ಓದಿ: Lok Sabha Polls: ಇಂದು ಮೊದಲ ಹಂತದ ಮತದಾನ- ಬೆಂಗಳೂರಿನಿಂದ ತಮಿಳುನಾಡಿನತ್ತ ಮತದಾರರು

    ಪ್ರಕರಣ ಕುರಿತು ಮಾಹಿತಿ ನೀಡಿರುವ ಬಿ.ಎಸ್ ನೇಮಗೌಡ ಅವರು, ಮಧ್ಯರಾತ್ರಿ ನಾಲ್ವರ ಕೊಲೆಯಾಗಿದೆ. ಕುಟುಂಬಸ್ಥರು ಹೇಳುವ ಪ್ರಕಾರ ತಡರಾತ್ರಿ ರಾತ್ರಿ 2 ರಿಂದ 3 ಗಂಟೆ ಸಮಯದಲ್ಲಿ ಕೊಲೆ ಆಗಿದೆ. ಮಾರಕಾಸ್ತ್ರಗಳಿಂದ ಹತ್ಯೆಯಾಗಿದೆ. ಮೊದಲಿಗೆ ಹಂತಕರು ಬಾಗಿಲು ಬಡಿದಿದ್ದಾರೆ, ಯಾರೊಬ್ಬರೂ ಬಾಗಿಲು ತೆರೆಯದ ಕಾರಣ ಅವರು, ಮಹಡಿಯಿಂದ ಬಂದು ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ಹಂತಕರು ಯಾರು ಅನ್ನೋದು ತಿಳಿದುಬಂದಿಲ್ಲ. ಆದಷ್ಟು ಬೇಗ ಅವರನ್ನ ಪತ್ತೆಹಚ್ಚಿ, ಬಂಧಿಸುತ್ತೇವೆ ಎಂದಿದ್ದಾರೆ.

  • 15 ವರ್ಷಗಳಿಂದ ಮಕ್ಕಳಿಲ್ಲದೇ ಹರಕೆ ಹೊತ್ತು ಹಿಂದಿರುಗುವಾಗಲೇ ದುರಂತ – ದಂಪತಿ ಸಾವು

    15 ವರ್ಷಗಳಿಂದ ಮಕ್ಕಳಿಲ್ಲದೇ ಹರಕೆ ಹೊತ್ತು ಹಿಂದಿರುಗುವಾಗಲೇ ದುರಂತ – ದಂಪತಿ ಸಾವು

    ಗದಗ: 15 ವರ್ಷಗಳಿಂದ ಮಕ್ಕಳಿಲ್ಲದೇ, ತಮಗೆ ಮಕ್ಕಳನ್ನು ಕರುಣಿಸುವಂತೆ ದೇವರಿಗೆ ಹರಕೆ ಹೊತ್ತು ಹಿಂದಿರುಗಿ ಬರುತ್ತಿರುವಾಗಲೇ ಭೀಕರ ಅಪಘಾತಕ್ಕೀಡಾಗಿ (Accident) ದಂಪತಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

    ಹುಬ್ಬಳ್ಳಿ (Hubballi) ಮೂಲದ ಬೈಕ್ ಸವಾರ ಸಹದೇವಪ್ಪ ದೇವರಮನಿ (45) ಹಾಗೂ ದೀಪಾ ದೇವರಮನೆ (36) ಮೃತ ದಂಪತಿ. ಜಿಲ್ಲೆಯ ನರಗುಂದ ತಾಲ್ಲೂಕಿನ ಬೈರನಹಟ್ಟಿ ಬಳಿ, ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಡಿಕ್ಕಿ ರಭಸಕ್ಕೆ ಕಾರು ಮತ್ತು ಬೈಕು ಸುಟ್ಟು ಭಸ್ಮವಾಗಿದೆ. ಇದನ್ನೂ ಓದಿ: ಕುಕ್ಕರ್ ಬಾಂಬ್ ಬ್ಲಾಸ್ಟ್‌ – ತಮಿಳುನಾಡು, ಕೇರಳದಲ್ಲೂ ತನಿಖೆ ಚುರುಕು : ಪ್ರವೀಣ್ ಸೂದ್

    ಮದುವೆಯಾಗಿ (Marriage) 15 ವರ್ಷವಾದ್ರೂ ಮಕ್ಕಳಾಗಿರಲಿಲ್ಲ. ಮಕ್ಕಳಿಗಾಗಿ ಹರಕೆ ಹೊತ್ತು ಬಾದಾಮಿ ತಾಲೂಕಿನ ಹೆಬ್ಬಳ್ಳಿ ಗ್ರಾಮದ ದೇವರಿಗೆ ಪ್ರತಿ ಅಮವಾಸ್ಯೆಗೆ ಹೋಗುತ್ತಿದ್ದರು. ಇಂದು ಬಾಗಲಕೋಟೆ ಜಿಲ್ಲೆ ಮುಧೋಳ ಪಟ್ಟಣದ ಮಹಿಂದ್ರಾ TUV-300 ಕಾರು ಸರ್ವಿಸ್‌ಗಾಗಿ ಹುಬ್ಬಳ್ಳಿಗೆ ಹೊರಟಿತ್ತು. ಇದೇ ಮಾರ್ಗದಲ್ಲಿ ದಂಪತಿ ಬೈಕ್‌ನಲ್ಲಿ ಬರುತ್ತಿದ್ದಾಗ ಅಪಘಾತ (Road Accident) ಸಂಭವಿಸಿದೆ. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬರಲು ತಿರುಕನ ಕನಸು ಕಾಣುತ್ತಿದೆ: ಯಡಿಯೂರಪ್ಪ

    ಕಾರ್ ನಲ್ಲಿದ್ದ ಇಬ್ಬರು ಸಹ ಗಾಯಗೊಂಡಿದ್ದು, ಅವರನ್ನ ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿ ರಭಸಕ್ಕೆ ಸ್ಪೋಟಗೊಂಡು ಹೊತ್ತಿ ಉರಿದ ವಾಹನಗಳ ಬೆಂಕಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ನಂದಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗದಗ ಜಿಲ್ಲೆ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ (FIR) ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]