ಗಣಿಗಾರಿಕೆಯಿಂದ ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿತ್ತು. 9 ಕೋಟಿ ವೆಚ್ಚದಲ್ಲಿ ಹೆಚ್ಪಿವಿ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದೆ. ತುಮಕೂರು, ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಜಿಲ್ಲೆಗಳ 20 ತಾಲೂಕುಗಳಲ್ಲಿ 14 ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ಹೆಚ್ಪಿವಿ ವ್ಯಾಕ್ಸಿನ್ ನೀಡುವಂತೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ತರಾತುರಿಯಲ್ಲಿ ದೆಹಲಿಗೆ ತೆರಳಿದ ಡಿಕೆಶಿ – ಸಿಎಂ ಮುಜುಗರದ ಹೇಳಿಕೆಗಳಿಗೆ ಬೇಸತ್ರಾ ಡಿಸಿಎಂ?
ಗರ್ಭಕಂಠ ಕ್ಯಾನ್ಸರ್ (Cervical cancer) ಕುರಿತಂತೆ ಸಾವಿನ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆಗೆ (Poonam Pandey) ಮಾನನಷ್ಟ ಸಂಕಷ್ಟ ಎದುರಾಗಿದೆ. ಈಕೆ ಮಾಡಿದ ನಾಟಕದಿಂದಾಗಿ ಬಾಲಿವುಡ್ ನಟ ನಟಿಯರ, ಮಾಡೆಲ್ ಗಳನ್ನು ಅನುಮಾನದಿಂದ ನೋಡುವಂತಾಗಿದೆ ಎಂದು ಫೈಜರ್ ಅನ್ಸಾರಿ ಎನ್ನುವವರು ಕಾನ್ಪುರ ಪೊಲೀಸ್ ಕಮಿಷ್ನರ್ ಗೆ ದೂರು ಸಲ್ಲಿಸಿದ್ದಾರೆ.
ಇದಷ್ಟೇ ಅಲ್ಲದೇ, ಮೊನ್ನೆಯಷ್ಟೇ ಪೂನಂ ಪಾಂಡೆ ಮೇಲೆ ಎಫ್.ಐ.ಆರ್ (F.I.R) ದಾಖಲಾಗಿದೆ. ಅಲಿ ಕಾಶಿಪ್ ಅನ್ನೋ ವಕೀಲರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೂನಂ ಮತ್ತು ಆಕೆಯ ಮ್ಯಾನೇಜರ್ ಮೇಲೆ ಎಫ್.ಐ.ಆರ್ ದಾಖಲಾಗಿದೆ.
ಈ ಪ್ರಕರಣದ ಕುರಿತಂತೆ ಪೂನಂ ಮೇಲೆ ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಔಷಧಿ ಕಂಪನಿಗಳು ಈಕೆಗೆ ಹಣ ನೀಡಿ, ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪವಿತ್ತು. ಈ ಕುರಿತಂತೆ ಸ್ವತಃ ಪೂನಂ ಸ್ಪಷ್ಟನೆ ನೀಡಿದ್ದಾರೆ. ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ ಕಂಪನಿಗಳು ತಮಗೆ ಹಣ ನೀಡಿಲ್ಲ ಎಂದು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ.
ತನ್ನ ತಾಯಿ ಕೂಡ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್ ರೋಗಿಗಳು ಹೇಗೆ ನರಳುತ್ತಾರೆ ಎನ್ನುವುದನ್ನು ಸ್ವತಃ ನಾನು ನೋಡಿದ್ದೇನೆ. ಸದ್ಯ ತಾಯಿ ಆರೋಗ್ಯವಾಗಿದ್ದಾರೆ. ಅವರ ನೋವನ್ನು ನೋಡಿಯೇ ನಾನು ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಬೇಕು ಅಂತ ನಿರ್ಧಾರ ಮಾಡಿದ್ದು. ನೀವು ಟೀಕೆಗಳನ್ನು ಮಾಡುತ್ತಿದ್ದೀರಿ. ಆದರೆ, ನಾನು ಮಾಡಿದ್ದರ ಹಿಂದಿನ ಪರಿಣಾಮವನ್ನೂ ನೀವು ಗಮನಿಸಬೇಕು ಎಂದು ಅವರು ಪೋಸ್ಟ್ ಮಾಡಿದ್ದಾರೆ.
ಸಾವಿನ ನಾಟಕವಾಡಿ ಅಭಿಮಾನಿಗಳ ಶಾಕ್ ಗೆ ಕಾರಣವಾಗಿದ್ದ ಪೂನಂ ಪಾಂಡೆ (Poonam Pandey) ಪರವಾಗಿ ಅವರ ಡಿಜಿಟಲ್ ಟೀಮ್ ಕ್ಷಮೆ ಕೇಳಿದೆ. ಪೂನಂ ಅವರ ಉದ್ದೇಶ ಒಳ್ಳೆಯದಾಗಿತ್ತು. ಆದರೆ, ಆಯ್ಕೆ ಮಾಡಿಕೊಂಡ ಕ್ರಮಕ್ಕಾಗಿ ನಾವು ವಿಷಾದಿಸುತ್ತೇವೆ ಎಂದು ಟೀಮ್ ಹೇಳಿಕೊಂಡಿದೆ. ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಕೂಡ ಮಾಡಿದೆ.
ಗರ್ಭಕಂಠ ಕ್ಯಾನ್ಸರ್ (Cervical Cancer) ಕುರಿತಂತೆ ಜಾಗೃತಿಗಾಗಿ ಸತ್ತಂತೆ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ವಿಷಾದ ವ್ಯಕ್ತ ಪಡಿಸಿದ್ದರೂ, ಅವರ ಮೇಲೆ ಎಫ್.ಐ.ಆರ್ (F.I.R) ದಾಖಲಾಗಿದೆ. ಅಲಿ ಕಾಶಿಪ್ ಅನ್ನೋ ವಕೀಲರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೂನಂ ಮತ್ತು ಆಕೆಯ ಮ್ಯಾನೇಜರ್ ಮೇಲೆ ಎಫ್.ಐ.ಆರ್ ದಾಖಲಾಗಿದೆ.
ಈ ಪ್ರಕರಣದ ಕುರಿತಂತೆ ಪೂನಂ ಮೇಲೆ ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಔಷಧಿ ಕಂಪನಿಗಳು ಈಕೆಗೆ ಹಣ ನೀಡಿ, ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪವಿತ್ತು. ಈ ಕುರಿತಂತೆ ಸ್ವತಃ ಪೂನಂ ಸ್ಪಷ್ಟನೆ ನೀಡಿದ್ದಾರೆ. ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ ಕಂಪನಿಗಳು ತಮಗೆ ಹಣ ನೀಡಿಲ್ಲ ಎಂದು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ.
ತನ್ನ ತಾಯಿ ಕೂಡ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್ ರೋಗಿಗಳು ಹೇಗೆ ನರಳುತ್ತಾರೆ ಎನ್ನುವುದನ್ನು ಸ್ವತಃ ನಾನು ನೋಡಿದ್ದೇನೆ. ಸದ್ಯ ತಾಯಿ ಆರೋಗ್ಯವಾಗಿದ್ದಾರೆ. ಅವರ ನೋವನ್ನು ನೋಡಿಯೇ ನಾನು ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಬೇಕು ಅಂತ ನಿರ್ಧಾರ ಮಾಡಿದ್ದು. ನೀವು ಟೀಕೆಗಳನ್ನು ಮಾಡುತ್ತಿದ್ದೀರಿ. ಆದರೆ, ನಾನು ಮಾಡಿದ್ದರ ಹಿಂದಿನ ಪರಿಣಾಮವನ್ನೂ ನೀವು ಗಮನಿಸಬೇಕು ಎಂದು ಅವರು ಪೋಸ್ಟ್ ಮಾಡಿದ್ದಾರೆ.
ಗರ್ಭಕಂಠ ಕ್ಯಾನ್ಸರ್ ಕುರಿತಾಗಿ ಜಾಗೃತಿ ಮೂಡಿಸುವುದಕ್ಕಾಗಿ ತಾನು ಸತ್ತಿರುವುದಾಗಿ ಮ್ಯಾನೇಜರ್ ಮೂಲಕ ಸುದ್ದಿ ಮಾಡಿಸಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಆದರೆ, ಹೆಸರಾಂತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (RGV) ಮಾತ್ರ ನಟಿಯ ಬೆಂಬಲಕ್ಕೆ ನಿಂತಿದ್ದಾರೆ. ಪೂನಂ ಮಾಡಿದ ಕೆಲಸ ಉತ್ತಮವಾದದ್ದು ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ನೀವು ಮಾಡಿದ ಕೆಲಸಕ್ಕೆ ಟೀಕೆಗಳು ಬರಬಹುದು. ಆದರೆ, ನೀವು ಮಾಡಿದ ಕೆಲಸ ಮೆಚ್ಚುವಂಥದ್ದು. ನಿಮ್ಮಿಂದಾಗಿ ಗರ್ಭಕಂಠ ಕ್ಯಾನ್ಸರ್ ಕುರಿತಂತೆ ವ್ಯಾಪಕವಾಗಿ ಪ್ರಚಾರ ಸಿಕ್ಕಿದೆ. ನಿಮ್ಮಂತೆಯೇ ನಿಮ್ಮ ಆತ್ಮ ಕೂಡ ಸುಂದರ. ನಿಮಗೆ ಮತ್ತಷ್ಟು ಆಯುಷ್ಯ ಹೆಚ್ಚಲಿ ಎಂದು ವರ್ಮಾ ಬರೆದುಕೊಂಡಿದ್ದಾರೆ.
ಗರ್ಭಕಂಠ ಕ್ಯಾನ್ಸರ್ ಕುರಿತಾಗಿ ಜಾಗೃತಿ ಮೂಡಿಸುವುದಕ್ಕಾಗಿ ತಾನು ಸತ್ತಿರುವುದಾಗಿ ಮ್ಯಾನೇಜರ್ ಮೂಲಕ ಸುದ್ದಿ ಮಾಡಿಸಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಆದರೆ, ಹೆಸರಾಂತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Verma) ಮಾತ್ರ ನಟಿಯ ಬೆಂಬಲಕ್ಕೆ (Support) ನಿಂತಿದ್ದಾರೆ. ಪೂನಂ ಮಾಡಿದ ಕೆಲಸ ಉತ್ತಮವಾದದ್ದು ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ನೀವು ಮಾಡಿದ ಕೆಲಸಕ್ಕೆ ಟೀಕೆಗಳು ಬರಬಹುದು. ಆದರೆ, ನೀವು ಮಾಡಿದ ಕೆಲಸ ಮೆಚ್ಚುವಂಥದ್ದು. ನಿಮ್ಮಿಂದಾಗಿ ಗರ್ಭಕಂಠ ಕ್ಯಾನ್ಸರ್ ಕುರಿತಂತೆ ವ್ಯಾಪಕವಾಗಿ ಪ್ರಚಾರ ಸಿಕ್ಕಿದೆ. ನಿಮ್ಮಂತೆಯೇ ನಿಮ್ಮ ಆತ್ಮ ಕೂಡ ಸುಂದರ. ನಿಮಗೆ ಮತ್ತಷ್ಟು ಆಯುಷ್ಯ ಹೆಚ್ಚಲಿ ಎಂದು ವರ್ಮಾ ಬರೆದುಕೊಂಡಿದ್ದಾರೆ.
ಗರ್ಭಕಂಠ ಕ್ಯಾನ್ಸರ್ (Cervical cancer) ಕುರಿತಂತೆ ಜಾಗೃತಿ ಮೂಡಿಸುವುದಕ್ಕಾಗಿ ವಾಮಮಾರ್ಗ ಹಿಡಿದಿರುವ ಬಾಲಿವುಡ್ ನಟಿ, ಕಾಂಟ್ರವರ್ಸಿ ಕ್ವೀನ್ ಪೂನಂ ಪಾಂಡೆಯನ್ನು (Poonam Pandey) ಅರೆಸ್ಟ್ ಮಾಡಬೇಕು ಎಂದು ಅಭಿಮಾನಿಗಳು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ‘ಬಾಯ್ಕಾಟ್ ಪೂನಂ ಪಾಂಡೆ’ (Boycott) ಟ್ರೆಂಡ್ ಶುರು ಮಾಡಿದ್ದಾರೆ. ಈ ಬೆನ್ನಲ್ಲೇ ಪೂನಂ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಶಾಸಕ ಸತ್ಯಜೀತ್ ತಾಂಬೆ ಮುಂಬೈ ಪೊಲೀಸರಿಗೆ ಸೂಚನೆ ಕೊಟ್ಟಿದ್ದಾರೆ.
ತಮ್ಮ ಪ್ರಚಾರಕ್ಕಾಗಿ ಇಂತಹ ಸ್ಟಂಟ್ಗಳನ್ನ ಮಾಡುವಂತವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಸಾವಿನ ಸುದ್ದಿಯಿಂದ ಗರ್ಭಕಂಠ ಕ್ಯಾನ್ಸರ್ ರೋಗದ ಬಗ್ಗೆ ಜಾಗೃತಿ ಮೂಡಿಸಲು ಸಾಧ್ಯವಿಲ್ಲ. ಇದು ಕ್ಯಾನ್ಸರ್ ಸಮಸ್ಯೆಯಿಂದ ಬುದುಕುಳಿದಿರುವವರನ್ನು ಗೇಲಿ ಮಾಡಿದಂತಾಗಿದೆ. ಇದರಿಂದ ಪೂನಂ ವಿರುದ್ಧ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಮುಂಬೈ: ಗರ್ಭಕಂಠ ಕ್ಯಾನ್ಸರ್ (Cervical cancer) ಕುರಿತಂತೆ ಜಾಗೃತಿ ಮೂಡಿಸುವುದಕ್ಕಾಗಿ ವಾಮಮಾರ್ಗ ಹಿಡಿದಿರುವ ಬಾಲಿವುಡ್ ನಟಿ, ಕಾಂಟ್ರವರ್ಸಿ ಕ್ವೀನ್ ಪೂನಂ ಪಾಂಡೆಯನ್ನು (Poonam Pandey) ಅರೆಸ್ಟ್ ಮಾಡಬೇಕು ಎಂದು ಅಭಿಮಾನಿಗಳು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ‘ಬಾಯ್ಕಾಟ್ ಪೂನಂ ಪಾಂಡೆ’ (Boycott) ಟ್ರೆಂಡ್ ಶುರು ಮಾಡಿದ್ದಾರೆ. ಈ ಬೆನ್ನಲ್ಲೇ ಪೂನಂ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಶಾಸಕ ಸತ್ಯಜೀತ್ ತಾಂಬೆ ಮುಂಬೈ ಪೊಲೀಸರಿಗೆ ಸೂಚನೆ ಕೊಟ್ಟಿದ್ದಾರೆ.
ತಮ್ಮ ಪ್ರಚಾರಕ್ಕಾಗಿ ಇಂತಹ ಸ್ಟಂಟ್ಗಳನ್ನ ಮಾಡುವಂತವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಸಾವಿನ ಸುದ್ದಿಯಿಂದ ಗರ್ಭಕಂಠ ಕ್ಯಾನ್ಸರ್ ರೋಗದ ಬಗ್ಗೆ ಜಾಗೃತಿ ಮೂಡಿಸಲು ಸಾಧ್ಯವಿಲ್ಲ. ಇದು ಕ್ಯಾನ್ಸರ್ ಸಮಸ್ಯೆಯಿಂದ ಬುದುಕುಳಿದಿರುವವರನ್ನು ಗೇಲಿ ಮಾಡಿದಂತಾಗಿದೆ. ಇದರಿಂದ ಪೂನಂ ವಿರುದ್ಧ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ನಾನು ಬದುಕಿದ್ದೇನೆ : ವಿಡಿಯೋ ಮಾಡಿ ಶಾಕ್ ಕೊಟ್ಟ ಪೂನಂ
ಏನಿದು ಗಿಮಿಕ್ ರಾಣಿಯ ಕಾಂಟ್ರವರ್ಸಿ?
ಗರ್ಭಕಂಠದ ಕ್ಯಾನ್ಸರ್ನಿಂದಾಗಿ ಪೂನಂ ಪಾಂಡೆ ನಿಧನರಾಗಿದ್ದಾರೆ ಎಂದು ನಟಿಯ ಮ್ಯಾನೇಜರ್ ಪೂನಂ ಅವರ ಅಧಿಕೃತ ಇನ್ಸ್ಟಾ ಪೇಜ್ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಈ ಸುದ್ದಿ ಓದಿ ಅನೇಕರು ಶಾಕ್ ಆಗಿದ್ದರು. ಅದರಲ್ಲೂ ಈ ಕ್ಯಾನ್ಸರ್ನಿಂದ ಬಳಲುತ್ತಿರುವವರು ಆತಂಕಕ್ಕೀಡಾಗಿದ್ದರು.
ಶನಿವಾರ ಬೆಳಗ್ಗೆ ಅದೇ ಇನ್ಸ್ಟಾ ಪೇಜ್ನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದ ಪೂನಂ, ಇದೊಂದು ಜಾಗೃತಿಗಾಗಿ ಮಾಡಿರುವ ಗಿಮಿಕ್ ಎಂದು ಒಪ್ಪಿಕೊಂಡಿದ್ದಾರೆ. ಗಿಮಿಕ್ ಮಾಡಿ ಕ್ಷಮೆಯನ್ನೂ ಕೇಳಿದ್ದಾರೆ. ಈ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಪೂನಂ ವಿರುದ್ಧ ಕಾನೂನು ಕ್ರಮಕ್ಕೆ ಅನೇಕರು ಆಗ್ರಹ ಮಾಡಿದ್ದಾರೆ. ಇದನ್ನೂ ಓದಿ: ಪೂನಂ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ: ಭುಗಿಲೆದ್ದ ಜನಾಕ್ರೋಶ
ಸಾವಿನ ವಿಚಾರದಲ್ಲಿ ಸುಳ್ಳು ಸುದ್ದಿ ಹರಡಿ ಜನರ ಭಾವನೆ ಜೊತೆ ಚೆಲ್ಲಾಟ ಆಡಬಾರದು. ಇದು ಗಂಭೀರ ವಿಚಾರ. ಜೊತೆಗೆ ಪೂನಂ ಪಾಂಡೆ ಸಾವಿನ ಸುಳ್ಳಿನಿಂದ ಇತರೆ ಗರ್ಭಕಂಠದ ಕ್ಯಾನ್ಸರ್ನಿಂದ ಬಳಲುತ್ತಿರುವವರು ಮಹಿಳೆಯರು ಕೂಡ ಆತಂಕಕ್ಕೆ ಒಳಗಾಗಿರುತ್ತಾರೆ. ಹೀಗಾಗಿ ಈ ರೀತಿ ಸುಳ್ಳು ಸುದ್ದಿ ಹರಡಿಸಿ ಗಿಮಿಕ್ ಮಾಡಿದ ಪೂನಂ ವಿರುದ್ಧ ಕ್ರಮ ತೆಗೆದುಕೊಳ್ಳಿ ಅನೇಕರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಚುನಾವಣೆ ಟಿಕೆಟ್ ಕೊಡಿಸೋದಾಗಿ ಹಣ ಪಡೆದು ವಂಚಿಸಿದ ಡ್ರೋನ್ ಪ್ರತಾಪ್: ದೂರು ದಾಖಲು
ಗರ್ಭಕಂಠ ಕ್ಯಾನ್ಸರ್ (Cervical cancer) ಕುರಿತಂತೆ ಜಾಗೃತಿ ಮೂಡಿಸುವುದಕ್ಕಾಗಿ ವಾಮಮಾರ್ಗ ಹಿಡಿದಿರುವ ಬಾಲಿವುಡ್ ನಟಿ ಪೂನಂ ಪಾಂಡೆಯನ್ನು (Poonam Pandey) ಅರೆಸ್ಟ್ ಮಾಡಬೇಕು ಎಂದು ಅಭಿಮಾನಿಗಳು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ‘ಬಾಯ್ಕಾಟ್ ಪೂನಂ ಪಾಂಡೆ’ (Boycott) ಟ್ರೆಂಡ್ ಶುರು ಮಾಡಿದ್ದಾರೆ.
ಗರ್ಭಕಂಠದ ಕ್ಯಾನ್ಸರ್ನಿಂದಾಗಿ ಪೂನಂ ಪಾಂಡೆ ನಿಧನರಾಗಿದ್ದಾರೆ (Death) ಎಂದು ಈ ನಟಿಯ ಮ್ಯಾನೇಜರ್ ನಿನ್ನೆಯಷ್ಟೇ ಪೂನಂ ಅವರ ಅಧಿಕೃತ ಇನ್ಸ್ಟಾ ಪೇಜ್ನಲ್ಲಿ ಹಾಕಲಾಗಿತ್ತು. ಈ ಸುದ್ದಿ ಓದಿ ಅನೇಕರು ಶಾಕ್ ಆಗಿದ್ದರು. ಅದರಲ್ಲೂ ಈ ಕ್ಯಾನ್ಸರ್ನಿಂದ ಬಳಲುತ್ತಿರುವವರು ಆತಂಕಕ್ಕೀಡಾಗಿದ್ದರು.
ಇಂದು ಬೆಳಗ್ಗೆ ಅದೇ ಇನ್ಸ್ಟಾ ಪೇಜ್ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಪೂನಂ, ಇದೊಂದು ಜಾಗೃತಿಗಾಗಿ ಮಾಡಿರುವ ಗಿಮಿಕ್ ಎಂದು ಒಪ್ಪಿಕೊಂಡಿದ್ದಾರೆ. ಗಿಮಿಕ್ ಮಾಡಿ ಐಯಾಮ್ ಸಾರಿ ಎಂದೂ ಕೇಳಿದ್ದಾರೆ. ಈ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಪೂನಂ ವಿರುದ್ಧ ಕಾನೂನು ಕ್ರಮಕ್ಕೆ ಅನೇಕರು ಆಗ್ರಹ ಮಾಡಿದ್ದಾರೆ.
ಸಾವಿನ ವಿಚಾರದಲ್ಲಿ ಸುಳ್ಳು ಸುದ್ದಿ ಹರಡಿ ಜನರ ಭಾವನೆ ಜೊತೆ ಚೆಲ್ಲಾಟ ಆಡಬಾರದು. ಇದು ಗಂಭೀರ ವಿಚಾರ. ಜೊತೆಗೆ ಪೂನಂ ಪಾಂಡೆ ಸಾವಿನ ಸುಳ್ಳಿನಿಂದ ಇತರೆ ಗರ್ಭಕಂಠದ ಕ್ಯಾನ್ಸರ್ನಿಂದ ಬಳಲುತ್ತಿರುವವರು ಮಹಿಳೆಯರು ಕೂಡ ಶಾಕ್ಗೆ ಒಳಗಾಗಿರುತ್ತಾರೆ. ಹೀಗಾಗಿ ಈ ರೀತಿ ಸುಳ್ಳು ಸುದ್ದಿ ಹರಡಿಸಿ ಗಿಮಿಕ್ ಮಾಡಿದ ಪೂನಂ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದಿದ್ದಾರೆ ಅನೇಕರು.
ಕ್ಯಾನ್ಸರ್ ಬಗ್ಗೆ ಜಾಗೃತಿಯನ್ನು ಅನೇಕ ಸಲಬ್ರಿಟಿಗಳು ಮೂಡಿಸ್ತಾರೆ. ಆದ್ರೇ ಈ ರೀತಿ ಸಾವಿನ ಸುಳ್ಳು ಸುದ್ದಿ ಹರಡಿಸಿ ಜಾಗೃತಿ ಮೂಡಿಸೋದು ಅಲ್ಲ. ಜಾಗೃತಿ ಮೂಡಿಸೋಕೆ ನಾನಾ ದಾರಿಗಳಿವೆ. ಆದರೆ, ಈ ರೀತಿ ಮಾಡಿದ್ದು ಎಷ್ಟರ ಮಟ್ಟಿಗೆ ಸರಿ ಅನ್ನೋ ಪ್ರಶ್ನೆ ಈಗ ಎಲ್ಲರಲ್ಲೂ ಮೂಡಿದೆ.
ಬೆಂಗಳೂರು: ನಿನ್ನೆಯಷ್ಟೇ ಮಂಡನೆಯಾದ ಕೇಂದ್ರದ ಮಧ್ಯಂತರ ಬಜೆಟ್ ನಲ್ಲಿ 9-14 ವರ್ಷದ ಹೆಣ್ಣು ಮಕ್ಕಳಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ವ್ಯಾಕ್ಸಿನೇಷನ್ ಅನ್ನು ಘೋಷಣೆ ಮಾಡಲಾಗಿತ್ತು. ಇದಾದ ಮರುದಿನವೇ ಬಾಲಿವುಡ್ ಖ್ಯಾತ ನಟಿ ಪೂನಂ ಪಾಂಡೆ ನಿಧನದಿಂದಾಗಿ ಇದೀಗ ಗರ್ಭಕಂಠ ಕ್ಯಾನ್ಸರ್ ಭಾರೀ ಚರ್ಚೆ ಹುಟ್ಟುಹಾಕಿದೆ.
ಹೌದು, ಸ್ತನ ಕ್ಯಾನ್ಸರ್ ಹಾಗೂ ಗರ್ಭಕೋಶ ಕ್ಯಾನ್ಸರ್ ಮಹಿಳೆಯರಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇತ್ತೀಚೆಗೆ ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ (Cervical Cancer) ಹೆಚ್ಚಾಗುತ್ತಿದೆ. ಭಾರತದಲ್ಲಿ ಪ್ರತಿ 8 ನಿಮಿಷಕ್ಕೆ ಒಂದು ಮಹಿಳೆ ಗರ್ಭಕಂಠದ ಕ್ಯಾನ್ಸರ್ನಿಂದ ಪ್ರಾಣಕಳೆದುಕೊಳ್ಳುತ್ತಿದ್ದಾರೆ ಎಂದು ಮುಂಬೈನ ಟಾಟಾ ಮೆಮೋರಿಯಲ್ ಆಸ್ಪತ್ರೆ ಶಾಕಿಂಗ್ ವರದಿಯೊಂದನ್ನು ನೀಡಿದೆ.
ಏನಿದು ಗರ್ಭಕಂಠ ಕ್ಯಾನ್ಸರ್?:
ಇದು ಸಾಮಾನ್ಯವಾಗಿ ಲೈಂಗಿಕವಾಗಿ ಹರಡುವ ಸೋಂಕು ಆಗಿದೆ. ಗಂಟಲು, ಜನನಾಂಗ ಹಾಗೂ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಗರ್ಭಕಂಠದ ದ್ವಾರ ಅಥವಾ ಅದರ ಸುತ್ತ ಮುತ್ತ ಕಂಡು ಬರುವ ತೀವ್ರ ಸ್ವರೂಪದ ಗೆಡ್ಡೆಯಾಗಿದೆ. ಇದು ಯೋನಿ ಸ್ರಾವದಲ್ಲಿ ಕಂಡು ಬಂದರೂ ರೋಗಲಕ್ಷಣಗಳು ಮಾತ್ರ ಕ್ಯಾನ್ಸರ್ನ ಮುಂದುವರಿದ ಹಂತಗಳಲ್ಲಷ್ಟೇ ಕಂಡು ಬರಬಹುದಾಗಿದೆ.
ಗರ್ಭಕಂಠವು ಗರ್ಭಾಶಯದ ಕೆಳಗಿನ ಭಾಗವಾಗಿದ್ದು, ಯೋನಿಯೊಂದಿಗೆ ಸಂಪರ್ಕಿಸುತ್ತದೆ. ಹ್ಯೂಮನ್ ಪ್ಯಾಪಿಲೋಮ ವೈರಸ್ (HPV) ಎಂದು ಕರೆಯಲ್ಪಡುವ ವಿವಿಧ ತಳಿಗಳು ಈ ಗರ್ಭಕಂಠದ ಕ್ಯಾನ್ಸರ್ ಉಂಟುಮಾಡುವಲ್ಲಿ ಮುಖ್ಯವಾದ ಪಾತ್ರ ವಹಿಸುತ್ತವೆ. HPV ಲೈಂಗಿಕ ಸಂಪರ್ಕದ ಮೂಲಕ ಹಾದುಹೋಗುವ ಸಾಮಾನ್ಯ ಸೋಂಕು. HPVಗೆ ಒಡ್ಡಿಕೊಂಡಾಗ ನಮ್ಮ ದೇಹದ ರೋಗನಿರೋಧಕ ಶಕ್ತಿಯು ಸಾಮಾನ್ಯವಾಗಿ ಈ ವೈರಸ್ ದೇಹದ ಅಂಗಗಳಿಗೆ ಹಾನಿ ಮಾಡದಂತೆ ತಡೆಯುತ್ತದೆ. ಆದರೆ ಕೆಲವು ಪ್ರಕರಣಗಳಲ್ಲಿ ಈ ವೈರಸ್ ಹಲವು ವರ್ಷಗಳವರೆಗೆ ಬದುಕುತ್ತದೆ. ಇದು ಗರ್ಭಕಂಠದ ಕೋಶಗಳನ್ನು ಕ್ಯಾನ್ಸರ್ ಕೋಶಗಳಾಗಿ ಪರಿವರ್ತಿಸುತ್ತದೆ.
ಹೇಗೆ ಬರುತ್ತೆ ಈ ಕ್ಯಾನ್ಸರ್?
* HPV ವೈರಸ್ ನಿಂದ ಈ ಸೋಂಕು ಹರಡುತ್ತದೆ
* ಕೆಲವೊಮ್ಮೆ ಅಸುರಕ್ಷಿತ ಲೈಂಗಿಕ ಸಂಪರ್ಕದಿಂದಲೂ ಈ ಕಾಯಿಲೆ ಹರಡುತ್ತದೆ
* ಹಲವು ಸಂದರ್ಭಗಳಲ್ಲಿ ಕುಡಿತ, ಸ್ಮೋಕ್ ಮಾಡುವ ಮಾದಕ ವ್ಯಸನಿಗಳಲ್ಲಿ ಇದು ಕಂಡುಬರುತ್ತದೆ.
* ಬೊಜ್ಜು, ರೋಗ ನಿರೋಧಕ ಶಕ್ತಿ ಕಡಿಮೆ ಆದಾಗ
ಗುಣಲಕ್ಷಣಗಳು ಏನು..!?
– ವಾಸನೆಯುಕ್ತ ಬಿಳಿಸೆರಗು, ಆಗಾಗ ರಕ್ತಸ್ರಾವ ಸಮಸ್ಯೆ ಕಂಡುರುತ್ತದೆ.
– ಸಂಭೋಗದ ನಂತರ, ಪಿರಿಯಡ್ಸ್ ಮುಗಿದ ನಂತರ ಯೋನಿಯಲ್ಲಿ ರಕ್ತಸ್ರಾವ ಉಂಟಾಗುವುದು.
– ಮುಟ್ಟಿನ ಸಮಯದಲ್ಲಿ ವಿಪರೀತ ರಕ್ತಸ್ರಾವ ಹಾಗೂ ಇದು ದೀರ್ಘಕಾಲದವರೆಗೆ ಇರುವುದು.
– ಸಂಭೋಗದ ಸಮಯದಲ್ಲಿ ನೋವು ಉಂಟಾಗುವುದು
– ಇಡೀ ಜೀವಕೋಶಗಳ ಮೇಲೆ ಈ ಗರ್ಭಕಂಠದ ಕ್ಯಾನ್ಸರ್ ಪರಿಣಾಮ ಬೀರುತ್ತದೆ. ನಾಲ್ಕನೆ ಹಂತಕ್ಕೆ ಹೋದಾಗ ಇದ್ರ ಚಿಕಿತ್ಸೆ ಕಷ್ಟ.
– ಮೂತ್ರವಿಸರ್ಜನೆಯ ಸಂದರ್ಭದಲ್ಲಿ ನೋವು
– ಋತುಚಕ್ರದ ಅವಧಿಯಲ್ಲಿ ಬೆನ್ನು ನೋವು, ತುರಿಕೆ ಮತ್ತು ಉರಿ, ಹೆಚ್ಚು ಆಯಾಸ, ತುರ್ತು ಮೂತ್ರ ವಿಸರ್ಜನೆ, ಹೊಟ್ಟೆ ಉಬ್ಬರ
ಚಿಕಿತ್ಸೆ:
ಬಹುತೇಕರಿಗೆ ಮೊದಲ ಹಂತದ ಗರ್ಭಕಂಠದ ಕ್ಯಾನ್ಸರ್ ಗುಣಲಕ್ಷಣಗಳು ಪತ್ತೆಯಾಗುವುದಿಲ್ಲ. ಈ ಗರ್ಭಕಂಠ ಕ್ಯಾನ್ಸರ್ 30 ಮತ್ತು 65 ವರ್ಷ ವಯೋಮಾನದ ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಹೀಗಾಗಿ ಈ ವಯಸ್ಸಿನಲ್ಲಿ ಪ್ರತಿ ಐದು ವರ್ಷಗಳಿಗೆ ಒಮ್ಮೆ ತಪಾಸಣೆ ಮಾಡಿಸಿಕೊಳ್ಳಬೇಕು. HPV ಸೋಂಕಿನಿಂದ ರಕ್ಷಿಸುವ ಲಸಿಕೆಯನ್ನು ಪಡೆಯುವ ಮೂಲಕ ನೀವು ಗರ್ಭಕಂಠದ ಕ್ಯಾನ್ಸರ್ ಅಪಾಯದಿಂದ ಪಾರಾಗಬಹುದು.
ಆರಂಭಿಕ ಹಂತದಲ್ಲಿಯೇ ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಸುಳಿವು ಸಿಕ್ಕಲ್ಲಿ ರೆಡಿಯೇಷನ್ ಥೆರಪಿ, ಶಸ್ತ್ರಚಿಕಿತ್ಸೆಯ ಮೂಲಕ ಕ್ಯಾನ್ಸರ್ಕಾರಕ ಕೋಶಗಳನ್ನು ಸಾಯಿಸಿ ರೋಗಿಯನ್ನು ಬದುಕಿಸಬಹುದು.