Tag: ಗರ್ಭಪಾತ

  • ಹೆಣ್ಣು ಮಗುವೆಂದು ಮಾತ್ರೆ ಸೇವಿಸಿ ಗರ್ಭಪಾತ-ಸ್ಕ್ಯಾನಿಂಗ್ ಸೆಂಟರ್ ಸೀಜ್

    ಹೆಣ್ಣು ಮಗುವೆಂದು ಮಾತ್ರೆ ಸೇವಿಸಿ ಗರ್ಭಪಾತ-ಸ್ಕ್ಯಾನಿಂಗ್ ಸೆಂಟರ್ ಸೀಜ್

    ಕೋಲಾರ: ಹೆಣ್ಣು ಮಗುವೆಂದು ಭಾವಿಸಿ, ಮಾತ್ರೆ ಸೇವಿಸಿ ಗಂಡು ಮಗುವಿನ ಗರ್ಭಪಾತವಾದ ಘಟನೆ ಕೋಲಾರ (Kolar) ಜಿಲ್ಲೆಯ ಮಾಲೂರು ನಗರದಲ್ಲಿ ನಡೆದಿದೆ.

    ಕೆಜಿಎಫ್ ತಾಲೂಕಿನ ಆಡಂಪಲ್ಲಿ ನಿವಾಸಿ ಮುರುಗೇಶ್ ಹಾಗೂ ಅನಿತಾ ದಂಪತಿಯ 3 ತಿಂಗಳ ಮಗು ಮೃತಪಟ್ಟಿದೆ.

    ನಡೆದಿದ್ದೇನು..?: ಕಳೆದ ಸೋಮವಾರ ದಂಪತಿ ಮಾಲೂರು ನಗರದ ಸಂಜನಾ ಖಾಸಗಿ ಆಸ್ಪತ್ರೆಗೆ ಸ್ಕ್ಯಾನಿಂಗ್ ಗೆಂದು ತೆರಳಿದ್ದರು. ಈ ಹಿಂದಿನ 2 ಮಕ್ಕಳು ಹೆಣ್ಣಾಗಿದ್ದು, ಮೂರನೇಯದ್ದು ಗಂಡು ಮಗುವಾಗಲಿ ಎಂದು ದಂಪತಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಹೊಟ್ಟೆಯಲ್ಲಿರುವ ಹೆಣ್ಣು ಮಗುವನ್ನು ಗಂಡಾಗಿ ಪರಿವರ್ತನೆ ಮಾಡಿಸುವುದಾಗಿ ಹೇಳಿ ವೈದ್ಯರು ಮಾತ್ರೆಗಳನ್ನು ಕೊಟ್ಟಿದ್ದಾರೆ ಎಂದು ಇದೀಗ ಪೋಷಕರು ಆರೋಪ ಮಾಡುತ್ತಿದ್ದಾರೆ.

    ಹೆಣ್ಣು ಮಗುವೆಂದು ಸುಳ್ಳು ಹೇಳಿ 25 ಸಾವಿರ ಹಣ ಪಡೆದು ವಂಚಿಸಿದ್ದಾರೆಂದು ತಂದೆ ಮುರುಗೇಶ್ ಆರೋಪ ಮಾಡಿದ್ದಾರೆ. ಇತ್ತ ಆಸ್ಪತ್ರೆ ಸಿಬ್ಬಂದಿ ಹಾಗೂ ವೈದ್ಯರು, ನಾವು ಗರ್ಭಪಾತಕ್ಕೆ ಮಾತ್ರೆ ಕೊಟ್ಟೆ ಇಲ್ಲ ಎಂದು ಹೇಳುತ್ತಿದ್ದಾರೆ. ಇದನ್ನೂ ಓದಿ: ಕೆಎಎಸ್ ಅಧಿಕಾರಿಯ ಪತ್ನಿ, ಹೈಕೋರ್ಟ್ ವಕೀಲೆ ಆತ್ಮಹತ್ಯೆ – ಕಾರಣ ನಿಗೂಢ!

    ಆಸ್ಪತ್ರೆಯಲ್ಲಿ ಭ್ರೂಣ ಲಿಂಗದ ಸ್ಕ್ಯಾನಿಂಗ್ ಮಾಡಿಸಿ ಸಾವಿರಾರು ಹಣ ಪೀಕುತ್ತಿರುವ ಆರೋಪ ಕೂಡ ಕೇಳಿಬಂದಿದೆ. ಹೀಗಾಗಿ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಾಲೂರು ತಾಲೂಕು ವೈದ್ಯಾದಿಕಾರಿಗೆ ಮುರುಗೇಶ್ ದೂರು ನೀಡಿದ್ದಾರೆ. ಈ ಬೆನ್ನಲ್ಲೇ ಸ್ಕ್ಯಾನಿಂಗ್ ಸೆಂಟರ್ ಸೀಜ್ ಮಾಡಲಾಗಿದೆ. ಡಿಹೆಚ್‍ಓ ಜಗದೀಶ್ ನೇತೃತ್ವದಲ್ಲಿ ಮಾಲೂರು ಪಟ್ಟಣದ ಸಂಜನಾ ಆಸ್ಪತ್ರೆ ಸ್ಕ್ಯಾನಿಂಗ್ ಸೆಂಟರ್ ಸೀಜ್ ಮಾಡಲಾಗಿದೆ.

    ಘಟನೆ ಸಂಬಂಧ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • 15ರ ರೇಪ್ ಸಂತ್ರಸ್ತೆಯ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಬಾಂಬೆ ಹೈಕೋರ್ಟ್

    ಮುಂಬೈ: 15 ವರ್ಷದ ಅಪ್ರಾಪ್ತ ಅತ್ಯಾಚಾರ (Rape) ಸಂತ್ರಸ್ತೆಯ 28 ವಾರಗಳ ಗರ್ಭಪಾತಕ್ಕೆ ಅನುಮತಿ ನೀಡಲು ಬಾಂಬೆ ಹೈಕೋರ್ಟ್ (Bombay Highcourt) ಔರಂಗಬಾದ್ ಪೀಠ ನಿರಾಕರಿಸಿದೆ.

    28 ವಾರಗಳ ಹಂತದಲ್ಲಿ ಬಲವಂತವಾಗಿ ಹೆರಿಗೆ ಮಾಡಿಸಿದರೆ ಮಗು ಜೀವಂತವಾಗಿ ಜನಿಸುತ್ತದೆ. ನವಜಾತ ಶಿಶುವಿಗೆ ಆರೈಕೆಯ ಅಗತ್ಯವಿರುತ್ತದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಆದ್ದರಿಂದ ಗರ್ಭಪಾತಕ್ಕೆ (Abortion) ಅನುಮತಿ ನೀಡಲು ನ್ಯಾಯಾಲಯ ನಿರಾಕರಿಸಿದೆ. ನ್ಯಾಯಾಧೀಶರಾದ ಆರ್‌ವಿ ಘುಗೆ (R.V.Ghuge) ಮತ್ತು ವೈಜಿ ಖೋಬ್ರಗಡೆ (Y.G.Khobragade) ಅವರ ಪೀಠವು ಜೂನ್ 20ರಂದು ಈ ಆದೇಶವನ್ನು ನೀಡಿದೆ. ಇದನ್ನೂ ಓದಿ: 16ನೇ ವಯಸ್ಸಿನವ್ರಿಗೆ ಲೈಂಗಿಕ ವಿಚಾರದ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವಿದೆ: ಮೇಘಾಲಯ ಹೈಕೋರ್ಟ್

    ಅತ್ಯಾಚಾರಕ್ಕೆ ಒಳಗಾದ ಬಾಲಕಿಯ 28 ವಾರಗಳ ಗರ್ಭಪಾತಕ್ಕೆ ಅನುಮತಿ ಕೋರಿ ಸಂತ್ರಸ್ತೆಯ ತಾಯಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿತ್ತು. 2023ರ ಫೆಬ್ರವರಿಯಲ್ಲಿ ತನ್ನ ಮಗಳು ನಾಪತ್ತೆಯಾಗಿದ್ದು, 3 ತಿಂಗಳ ಬಳಿಕ ರಾಜಸ್ಥಾನದಲ್ಲಿ ಒಬ್ಬ ವ್ಯಕ್ತಿಯೊಂದಿಗೆ ಪತ್ತೆಯಾಗಿದ್ದಾಳೆ ಎಂದು ಮಹಿಳೆ ಮನವಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸೌಜನ್ಯ ರೇಪ್‌, ಮರ್ಡರ್‌ ಕೇಸ್‌- ಆರೋಪಿ ಸಂತೋಷ್‌ ರಾವ್‌ ಖುಲಾಸೆ

    ಘಟನೆಯ ಕುರಿತು ವ್ಯಕ್ತಿಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಳಿಗೆ ಒಳಪಡಿಸಿದ ಬಳಿಕ ಮಗು ಜೀವಂತವಾಗಿ ಜನಿಸುತ್ತದೆ ಮತ್ತು ನವಜಾತ ಶಿಶುವನ್ನು ಆರೈಕೆ ಮಾಡಬೇಕಾಗುತ್ತದೆ. ಅಲ್ಲದೇ ಸಂತ್ರಸ್ತೆಗೆ ಅಪಾಯವಾಗುವ ಸಾಧ್ಯತೆಗಳಿವೆ ಎಂದು ವೈದ್ಯರು ಕೋರ್ಟ್ ಗಮನಕ್ಕೆ ತಂದಿದ್ದರು. ಇದನ್ನೂ ಓದಿ: ಬ್ರಿಜ್ ಭೂಷಣ್ ವಿರುದ್ಧ 1,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ – ಪೋಕ್ಸೊ ಕೇಸ್‌ ರದ್ದಿಗೆ ದೆಹಲಿ ಪೊಲೀಸರ ಶಿಫಾರಸ್ಸು

    ಈ ಕುರಿತು ಹೈಕೋರ್ಟ್ ಬಲತ್ಕಾರವಾಗಿ ಹೆರಿಗೆಯಾದರೆ ಮಗುವಿನ ಆರೋಗ್ಯದಲ್ಲಿ ಅಥವಾ ಬೆಳವಣಿಗೆಯಲ್ಲಿ ಸಮಸ್ಯೆ ಕಾಣಿಸುವ ಸಾಧ್ಯತೆಯಿದೆ. ಒಂದು ವೇಳೆ ಸಾಮಾನ್ಯ ಹೆರಿಗೆಗೆ 12 ವಾರಗಳ ಮುನ್ನ ಮಗುವಿನ ಜನನವಾದರೆ ಅದರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ಪರಿಗಣಿಸುವ ಅಗತ್ಯವಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ದೆಹಲಿಯಲ್ಲಿ ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಸುಪ್ರೀಂ ತಡೆ

    ಮಗು ಜೀವಂತವಾಗಿ ಜನಿಸುವ ಕಾರಣ 12 ವಾರಗಳ ನಂತರ ವೈದ್ಯರ ಸಲಹೆಯ ಮೇರೆಗೆ ಮಗು ಹುಟ್ಟಲು ಅವಕಾಶ ಮಾಡಿಕೊಡಬಹುದು. ಮಗುವಿನ ಜನನವಾದ ಬಳಿಕ ಸಂತ್ರಸ್ತೆ ಆ ಶಿಶುವನ್ನು ಅನಾಥಾಶ್ರಮಕ್ಕೆ (Orphanage) ಕೊಡಲು ಬಯಸುವುದಾದರೆ ಸಂತ್ರಸ್ತೆಗೆ ಈ ಕುರಿತು ಸಂಪೂರ್ಣ ಸ್ವಾತಂತ್ರ್ಯವಿದೆ ಎಂದು ನ್ಯಾಯಾಲಯ ಹೇಳಿದೆ. ಬಲವಂತದ ಹೆರಿಗೆಗೆ ಅನುಮತಿ ನೀಡುವುದರಿಂದ ಅವಧಿ ಪೂರ್ವ ಹಂತದಲ್ಲಿ ಮಗುವನ್ನು ಈ ಜಗತ್ತಿಗೆ ತರಬೇಕಾಗುತ್ತದೆ ಎಂದು ತಿಳಿಸಿದೆ. ಇದನ್ನೂ ಓದಿ: 14ರ ಹಿಂದೂ ಬಾಲಕಿ ಕಿಡ್ನ್ಯಾಪ್‌ ಮಾಡಿ ಇಸ್ಲಾಂಗೆ ಮತಾಂತರ – ಪೋಷಕರ ಜೊತೆ ಕಳುಹಿಸಲು ಪಾಕ್‌ ಕೋರ್ಟ್‌ ನಿರಾಕರಣೆ

    ಮಗು ಸಂಪೂರ್ಣ ಬೆಳವಣಿಗೆಯಾಗಿ ಸ್ವಾಭಾವಿಕ ಹೆರಿಗೆಯಾದರೆ ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ ಮತ್ತು ದತ್ತು ಪಡೆಯುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ ಎಂದು ಕೋರ್ಟ್ ತಿಳಿಸಿದೆ. ಬಳಿಕ ಸಂತ್ರಸ್ತೆಯ ತಾಯಿ ಬಾಲಕಿ ಮಗುವಿಗೆ ಜನ್ಮ ನೀಡುವವರೆಗೂ ಯಾವುದಾದರೂ ಎನ್‌ಜಿಒ ಅಥವಾ ಆಸ್ಪತ್ರೆಯಲ್ಲಿ ಆಕೆಯನ್ನು ಇರಿಸಿಕೊಳ್ಳಲು ಅನುಮತಿ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ. ಈ ಮನವಿಯನ್ನು ಆಲಿಸಿದ ಬಳಿಕ ಸಂತ್ರಸ್ತೆಯನ್ನು ನಾಸಿಕ್‌ನಲ್ಲಿರುವ (Nashik) ಗರ್ಭಿಣಿಯರನ್ನು ಆರೈಕೆ ಮಾಡುವ ಆಶ್ರಯ ಮನೆ ಅಥವಾ ಔರಂಗಬಾದ್‌ನಲ್ಲಿ ಮಹಿಳೆಯರಿಗಾಗಿ ಇರುವ ಸರ್ಕಾರಿ ಆಶ್ರಯ ಮನೆಗಳಲ್ಲಿ ಇರಿಸಬಹುದು ಎಂದು ನ್ಯಾಯಾಲಯ ತಿಳಿಸಿದೆ. ಇದನ್ನೂ ಓದಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ- ಯುವಕನಿಗೆ 20 ವರ್ಷ ಜೈಲು, 1 ಲಕ್ಷದ 10 ಸಾವಿರ ರೂ. ದಂಡ

    ಅಷ್ಟು ಮಾತ್ರವಲ್ಲದೇ ಹೆರಿಗೆಯ ಬಳಿಕ ಮಗುವನ್ನು ಇಟ್ಟುಕೊಳ್ಳುವ ಅಥವಾ ದತ್ತು ನೀಡುವ ನಿರ್ಧಾರವನ್ನು ತೆಗೆದುಕೊಳ್ಳುವ ಸಂಪೂರ್ಣ ಹಕ್ಕು ಸಂತ್ರಸ್ತೆಗೆ ಇದೆ ಎಂದು ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ. ಇದನ್ನೂ ಓದಿ: ಲಿಂಗಾಯತ ಅವಹೇಳನ ಕೇಸಲ್ಲಿ ಸಿದ್ದರಾಮಯ್ಯಗೆ ರಿಲೀಫ್

  • ಗರ್ಭಪಾತಕ್ಕೆ ಯತ್ನ – 19ರ ಯುವತಿ ಸಾವು

    ಗರ್ಭಪಾತಕ್ಕೆ ಯತ್ನ – 19ರ ಯುವತಿ ಸಾವು

    ಚಂಡೀಗಢ: ಅಕ್ರಮ ಗರ್ಭಪಾತಕ್ಕೆ (Abortion) ಯತ್ನಿಸಿದ ಹಿನ್ನೆಲೆಯಲ್ಲಿ 19 ವರ್ಷದ ಯವತಿಯು (Woman) ಸಾವನ್ನಪ್ಪಿದ ಘಟನೆ ಹರಿಯಾಣದ (Haryana) ಹಿಸಾರ್ ಜಿಲ್ಲೆಯಲ್ಲಿ ನಡೆದಿದೆ.

    ಹಿಸಾರ್ ಜಿಲ್ಲೆಯ ಆಗ್ರೋಹಾದಲ್ಲಿ ಈ ಘಟನೆ ನಡೆದಿದೆ. ಯುವತಿ ಅವಿವಾಹಿತೆಯಾಗಿದ್ದು, 4 ತಿಂಗಳ ಗರ್ಭಿಣಿಯಾಗಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ಸಂಬಂಧಿಕರು ಆಕೆಯನ್ನು ಗರ್ಭಪಾತಕ್ಕಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಆಕೆಗೆ ಗರ್ಭಪಾತಕ್ಕೆ ಪ್ರಯತ್ನಿಸಲಾಗಿದೆ. ಆದರೆ ಇದರಿಂದಾಗಿ ಯುವತಿಯ ಸ್ಥಿತಿ ಇನ್ನಷ್ಟು ಹದಗೆಟ್ಟಿದೆ.

    ಅದಾದ ಬಳಿಕ ಆಕೆಯ ಸ್ಥಿತಿ ಹದಗೆಟ್ಟಿರುವುದನ್ನು ಕಂಡು, ಪೋಷಕರು ಆಕೆಯನ್ನು ಸಿವಿಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿಂದ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಯಿತು. ಆದರೆ ಅಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಯುವತಿಯ ಕರುಳುಗಳು ಹೊರಬಂದಿದ್ದು, ಗರ್ಭಾಶಯದಲ್ಲಿ ಗಾಯಗಳಾಗಿವೆ. ಅಷ್ಟೇ ಅಲ್ಲದೇ ಮೂತ್ರಪಿಂಡಗಳು ಸಹ ವಿಫಲವಾಗಿತ್ತು. ಇದನ್ನೂ ಓದಿ: ಯುಗಾದಿ ಹಬ್ಬಕ್ಕೆ ಜನರಿಗೆ ಶಾಕ್ – ಹೂವು, ಹಣ್ಣಿನ ಬೆಲೆ ದುಪ್ಪಟ್ಟು

    ಗಂಭೀರ ಸ್ಥಿತಿಯಲ್ಲಿದ್ದ ಯುವತಿಯನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಯುವತಿ ಬಹುಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: 18 ವರ್ಷಕ್ಕೂ ಮೊದಲೇ ತಾಯಿಯಂದಿರಾದ 15 ಸಾವಿರ ಹೆಣ್ಮಕ್ಕಳು – ಕಾರಣ ಕೇಳಿದ್ರೆ ಶಾಕ್‌!

  • ತಾಯಿಯ ಆಯ್ಕೆಯೇ ಅಂತಿಮ – 33 ವಾರಗಳ ಗರ್ಭಿಣಿಯ ಗರ್ಭಪಾತಕ್ಕೆ ಹೈಕೋರ್ಟ್ ಅಸ್ತು

    ತಾಯಿಯ ಆಯ್ಕೆಯೇ ಅಂತಿಮ – 33 ವಾರಗಳ ಗರ್ಭಿಣಿಯ ಗರ್ಭಪಾತಕ್ಕೆ ಹೈಕೋರ್ಟ್ ಅಸ್ತು

    ನವದೆಹಲಿ: 33 ವಾರಗಳ ಗರ್ಭಿಣಿಯ (Pregnant Women) ಗರ್ಭಪಾತಕ್ಕೆ ದೆಹಲಿ ಹೈಕೋರ್ಟ್ (Delhi High Court) ಅನುಮತಿ ನೀಡಿದೆ. ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾ. ಪ್ರತಿಭಾ ಎಂ. ಸಿಂಗ್ (Prathiba M Singh), ತಾಯಿಯ ಆಯ್ಕೆಯೇ ಅಂತಿಮವಾಗಿದ್ದು, ಅದರ ಆಧಾರದ ಮೇಲೆ ಅನುಮತಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

    33 ವಾರಗಳ ಗರ್ಭಿಣಿಯಾಗಿರುವ 26 ವರ್ಷದ ಮಹಿಳೆಯೊಬ್ಬರು ತಮ್ಮ ಗರ್ಭಾವಸ್ಥೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಪ್ರತಿಭಾ ಸಿಂಗ್, ಎನ್‌ಎನ್‌ಜೆಪಿ ಆಸ್ಪತ್ರೆ (LNJP Hospital) ವೈದ್ಯರ ಸಲಹೆ ಕೇಳಿದ್ದರು. ಆದರೆ ವರದಿಯಲ್ಲಿ ವೈದ್ಯರು ಗರ್ಭಪಾತವನ್ನು ತಿರಸ್ಕರಿಸಿದ್ದರು. ಇದನ್ನೂ ಓದಿ: ಭಾರತ ಜಾತ್ಯತೀತ ರಾಷ್ಟ್ರ ಎಂದ ಸುಪ್ರೀಂ – ಠಾಕೂರ್‌ ಚಂದ್ರರನ್ನು ʼಪರಮಾತ್ಮʼ ಎಂದು ಘೋಷಿಸಲು ಕೋರಿದ್ದ PIL ವಜಾ

    ಬಳಿಕ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಮತ್ತು ಸ್ತ್ರೀರೋಗತಜ್ಞರಿಂದ ವರದಿ ಕೇಳಿದರು. ನರಶಸ್ತ್ರಚಿಕಿತ್ಸಕರು ಮಗುವಿಗೆ ಏನಾದರೂ ನ್ಯೂನತೆ ಇರುವ ಸಾಧ್ಯತೆಯಿದೆ, ಮಗುವಿನ `ಜೀವನದ ಗುಣಮಟ್ಟ’ವನ್ನು ಊಹಿಸಲು ಸಾಧ್ಯವಿಲ್ಲ ಎಂದು ವರದಿ ನೀಡಿದ್ದರು. ಆದರೆ ಮಗುವಿನ ಜನನದ ಬಳಿಕ ಸುಮಾರು 10 ವಾರಗಳ ನಂತರ ಕೆಲವು ಸಮಸ್ಯೆಗಳಿಗೆ ಶಸ್ತ್ರಚಿಕಿತ್ಸೆ ನಡೆಸಬಹುದು ಎಂದು ತಿಳಿಸಿದ್ದರು.

    ವರದಿ ಆಧರಿಸಿ ತೀರ್ಪು ನೀಡಿದ ನ್ಯಾ. ಪ್ರತಿಭಾ ಸಿಂಗ್, ಭಾರತದ ಕಾನೂನಿನಲ್ಲಿ ಮಹಿಳೆ ತಾನು ಗರ್ಭಾವಸ್ಥೆಯಲ್ಲಿ ಮುಂದುವರಿಯಬೇಕೆ ಅಥವಾ ಬೇಡವೇ ಎಂಬುದು ಅಂತಿಮವಾಗಿ ಅವರೇ ನಿರ್ಧರಿಸಬೇಕು. ಈ ರೀತಿಯ ಪ್ರಕರಣಗಳಲ್ಲಿ ಮಹಿಳೆಯ ತೀವ್ರ ಸಂದಿಗ್ಧತೆಯನ್ನು ಎತ್ತಿ ತೋರಿಸುತ್ತವೆ. ಆಧುನಿಕ ತಂತ್ರಜ್ಞಾನದ ಸಹಾಯದಿಂದ ಗರ್ಭಪಾತ ಮಾಡಬಹುದು ಎಂದು ಆದೇಶಿಸಿದರು. ಇದನ್ನೂ ಓದಿ: ಮೋರ್ಬಿ ಸೇತುವೆ ದುರಂತದ ಬಗ್ಗೆ ಟ್ವೀಟ್ ಮಾಡಿದ TMC ವಕ್ತಾರ ಅರೆಸ್ಟ್ – ಮೋದಿ ವಿರುದ್ಧ ಮಮತಾ ಗರಂ

    ತಾಯಿಯ ಆಯ್ಕೆ ಮೇಲೆ ಈ ಆದೇಶ ನೀಡಲಾಗುತ್ತಿದ್ದು, ಅರ್ಜಿದಾರ ಮಹಿಳೆ ಎನ್‌ಎನ್‌ಜೆಪಿ ಅಥವಾ ಇತರೆ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಬಹುದು ಎಂದು ತಿಳಿಸಿದರು. ವೈದ್ಯರು ಅಗತ್ಯ ನೆರವು ನೀಡುವಂತೆ ನಿರ್ದೇಶಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಕ್ಕಳನ್ನು ಹೆರುವ ವಿಷಯದ ಆಯ್ಕೆ ಮಹಿಳೆಗೆ ಬಿಟ್ಟಿದ್ದು – ಹೈಕೋರ್ಟ್

    ಮಕ್ಕಳನ್ನು ಹೆರುವ ವಿಷಯದ ಆಯ್ಕೆ ಮಹಿಳೆಗೆ ಬಿಟ್ಟಿದ್ದು – ಹೈಕೋರ್ಟ್

    ತಿರುವನಂತಪುರಂ: ಗರ್ಭ ಧರಿಸುವ ಅಥವಾ ಧರಿಸದೇ ಇರುವ ಮಹಿಳೆಯ ಸಂತಾನೋತ್ಪತ್ತಿ (Reproductive) ಆಯ್ಕೆ ವಿಚಾರದಲ್ಲಿ ಮಹಿಳಾ ಹಕ್ಕಿಗೆ (Woman’s Right) ಯಾವುದೇ ನಿರ್ಬಂಧವಿಲ್ಲ ಎಂದು ಕೇರಳ ಹೈಕೋರ್ಟ್ (Kerala High Court) ಹೇಳಿದೆ.

    ಸುಚಿತ್ರಾ ಶ್ರೀವಾಸ್ತವ ವರ್ಸಸ್ ಚಂಡೀಗಢ ಆಡಳಿತ ಪ್ರಕರಣದಲ್ಲಿ ಸುಪ್ರೀಂಕೋರ್ಟ್ (Supreme Court) ನೀಡಿದ ತೀರ್ಪನ್ನು ಉಲ್ಲೇಖಿಸಿ ನ್ಯಾಯಮೂರ್ತಿ ವಿ.ಜಿ ಅರುಣ್ ನೇತೃತ್ವದ ಏಕಸದಸ್ಯ ಪೀಠವು, ಸಂವಿಧಾನದ-21 (Constitution of India) ವಿಧಿಯ ಅಡಿ ಸಂತಾನೋತ್ಪತ್ತಿ ಆಯ್ಕೆ ವಿಚಾರದಲ್ಲಿ ನಿರ್ಧಾರ ಕೈಗೊಳ್ಳುವ ಹಕ್ಕು ಮಹಿಳೆಗೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: 

    ಗರ್ಭಧರಿಸುವ ಅಥವಾ ಗರ್ಭಧರಿಸದೇ ಇರುವ ತನ್ನ ಆಯ್ಕೆಯ ಹಕ್ಕನ್ನು ಚಲಾಯಿಸಲು ಮಹಿಳೆಗೆ ಯಾವುದೇ ನಿರ್ಬಂಧವಿರುವುದಿಲ್ಲ. ಇದು ಆಕೆಯ ವೈಯಕ್ತಿಕ ಸ್ವಾತಂತ್ರ‍್ಯದ ಭಾಗವಾಗಿದೆ ಎಂದು ಪೀಠವು ತನ್ನ ಆದೇಶದಲ್ಲಿ ತಿಳಿಸಿದೆ.

    20 ವಾರ ಮೀರಿದ ಗರ್ಭಾವಸ್ಥೆಯನ್ನು ಗರ್ಭಪಾತ ಮಾಡಿಸುವ ಆಯ್ಕೆ ವಿಧಾನದಿಂದ ಅವಿವಾಹಿತ ಮಹಿಳೆಯನ್ನು ಹೊರಗಿಡುವುದು ಸಂವಿಧಾನ 14ನೇ ವಿಧಿಗೆ ವಿರುದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ (Supreme Court) ಇತ್ತೀಚೆಗೆ ಹೇಳಿದ್ದನ್ನು ನ್ಯಾಯಾಲಯ ತೀರ್ಪಿನಲ್ಲಿ ಉಲ್ಲೇಖಿಸಿತು.

    ಸಹಪಾಠಿಯೊಂದಿಗೆ ನಡೆಸಿದ ಒಪ್ಪಿತ ಲೈಂಗಿಕ ಸಂಪರ್ಕದಿಂದಾಗಿ ಗರ್ಭ ಧರಿಸಿದ್ದನ್ನು ತೆಗೆಸಲು ಕೋರಿ 23 ವರ್ಷದ ಎಂಬಿಎ ವಿದ್ಯಾರ್ಥಿನಿ (MBA Student) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಪೀಠವು ಈ ಆದೇಶ ಮಾಡಿತು.

    ಏನಿದು ಪ್ರಕರಣ?
    ಗರ್ಭ ನಿರೋಧಕ ವಿಫಲವಾಗಿದ್ದರಿಂದ ಎಂಬಿಎ ವಿದ್ಯಾರ್ಥಿನಿ ಗರ್ಭ ಧರಿಸಿದ್ದಳು. ಅಲ್ಲದೇ ಆಕೆ ಪಾಲಿಸಿಸ್ಟಿಕ್ ಓವೇರಿಯನ್ ಕಾಯಿಲೆಯಿಂದ ಬಳಲುತ್ತಿದ್ದಳು. ಅಲ್ಟ್ರಾ ಸೌಂಡ್ ಸ್ಕ್ಯಾನ್ ಮಾಡಿಸಿದ ಬಳಿಕ ಗರ್ಭಧರಿಸುವ ವಿಚಾರ ತಿಳಿದಿದೆ.

    ವಿದ್ಯಾರ್ಥಿನಿ ನಿಯಂತ್ರಿತವಾಗಿ ಮುಟ್ಟಾಗದೇ ಇರುವುದರಿಂದ ತಪಾಸಣೆಗೆ ವೈದ್ಯರ ಬಳಿ ತೆರಳಿದ್ದಳು. ಈ ವೇಳೆ ವೈದ್ಯರು ಅಲ್ಟ್ರಾ ಸ್ಕ್ಯಾನ್ ಮಾಡಿಸಲು ಸೂಚಿಸಿದ್ದಾರೆ. ಬಳಿಕವೇ ಈ ವಿಚಾರ ತಿಳಿದಿದೆ. ಇದರಿಂದ ಮಾನಸಿಕ ಮತ್ತು ದೈಹಿಕವಾಗಿ ಯಾತನೆ ಅನುಭವಿಸುತ್ತಿದ್ದು, ಲೈಂಗಿಕ ಸಂಬಂಧ ಹೊಂದಿದ್ದ ಸಹಪಾಠಿಯು ಉನ್ನತ ಶಿಕ್ಷಣ ಪಡೆಯಲು ವಿದೇಶಕ್ಕೆ ತೆರಳಿದ್ದಾನೆ ಎಂದು ಆಕೆ ಮನವಿಯಲ್ಲಿ ವಿವರಿಸಿದ್ದಾಳೆ.

    ಗರ್ಭಧಾರಣೆಯನ್ನು ಮುಂದವರಿಸಿದರೆ ಮಾನಸಿಕ ವೇದನೆ ಹೆಚ್ಚಾಗಲಿದೆ. ಜೊತೆಗೆ ಮಗು ಪಡೆಯುವುದು ಶಿಕ್ಷಣ ಮತ್ತು ಜೀವನ ನಿರ್ವಹಣೆಗೆ ಅಡ್ಡಿಯಾಗಲಿದೆ. ಗರ್ಭಾವಸ್ಥೆಯು 24 ವಾರ ದಾಟಿರುವುದರಿಂದ ಯಾವುದೇ ಆಸ್ಪತ್ರೆ ಗರ್ಭಪಾತ ಮಾಡಿಸಲು ಸಿದ್ಧವಿಲ್ಲ. ಹೀಗಾಗಿ, ನ್ಯಾಯಾಲಯ ಮೆಟ್ಟಿಲೇರಿದ್ದಾಗಿ ಆಕೆ ಮನವಿಯಲ್ಲಿ ಉಲ್ಲೇಖಿಸಿದ್ದಳು. ಇದನ್ನೂ ಓದಿ: ಕೋಟೆ ನಾಡಿನಲ್ಲಿ ದಾರುಣ ಘಟನೆ – ಒಂದೇ ಕುಟುಂಬದ ಮೂವರು ಆತ್ಮಹತ್ಯೆ

    ಇದನ್ನು ಪರಿಗಣಿಸಿರುವ ಪೀಠವು ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸಿಕೊಳ್ಳಲು ಅನುಮತಿಸಿದೆ. ಪ್ರಕ್ರಿಯೆ ನಡೆಸಲು ವೈದ್ಯಕೀಯ ತಂಡ ರಚಿಸುವಂತೆ ಸಂಬಂಧಿತ ಆಸ್ಪತ್ರೆಗೆ ನಿರ್ದೇಶಿಸಿದೆ. ಒಂದೊಮ್ಮೆ ಮಗು ಜೀವಂತವಾಗಿ ಉಳಿದರೆ ಮಗುವಿಗೆ ಅತ್ಯುತ್ತಮ ವೈದ್ಯಕೀಯ ವ್ಯವಸ್ಥೆ ಮಾಡುವಂತೆ ನ್ಯಾಯಾಲಯವು ಆಸ್ಪತ್ರೆಗೆ ನಿರ್ದೇಶನ ನೀಡಿದೆ.

    ಅರ್ಜಿದಾರರ ಪರ ವಕೀಲರಾದ ಆಕಾಶ್ ಎಸ್, ಗಿರೀಶ್ ಕುಮಾರ್, ವಿ.ಎಸ್ ವರಲಕ್ಷ್ಮೀ ಹಾಗೂ ಎಸ್. ನೀತು ವಾದಿಸಿದರು.

    Live Tv
    [brid partner=56869869 player=32851 video=960834 autoplay=true]

  • 5 ಬಾರಿ ಗರ್ಭಪಾತ, ಮೂರನೇ ಪತ್ನಿಯಾಗಿರುವಂತೆ ಒತ್ತಡ- ಸಿಪಿಐ ವಿರುದ್ಧ ರೇಪ್ ಕೇಸ್!

    5 ಬಾರಿ ಗರ್ಭಪಾತ, ಮೂರನೇ ಪತ್ನಿಯಾಗಿರುವಂತೆ ಒತ್ತಡ- ಸಿಪಿಐ ವಿರುದ್ಧ ರೇಪ್ ಕೇಸ್!

    ಚಿತ್ರದುರ್ಗ: ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಜಿ.ಬಿ ಉಮೇಶ್ ವಿರುದ್ಧ ರೇಪ್ ಕೇಸ್ ದಾಖಲು ಮಾಡಲಾಗಿದೆ.

    ಶಿವಮೊಗ್ಗದಲ್ಲಿ ಯುವತಿ ಬಿಇಡಿ ಓದುತ್ತಿದ್ದಳು. ಇದೀಗ ಈಕೆ ಸೋದರ ಮಾವನ ಮಗನಾಗಿರುವ ಉಮೇಶ್ ವಿರುದ್ಧ ಚಿತ್ರದುರ್ಗ ನಗರದ ಮಹಿಳಾ ಠಾಣೆ (Chitradurga women Police Station) ಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

    5 ವರ್ಷದ ಹಿಂದೆ ದಾವಣಗೆರೆಯಲ್ಲಿ ಉಮೇಶ್ (Umesh) ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ದಾವಣಗೆರೆ (Davanagere) ಯಲ್ಲಿ ನಿವೇಶನದ ಸಮಸ್ಯೆ ಹಿನ್ನೆಲೆ ಸಹಾಯ ಕೇಳಿದ್ದೆವು. ಆಗ ದಾವಣಗೆರೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಆರೋಪಿಸಲಾಗಿದೆ.

    ಆತ ಕರೆದಾಗ ಹೋಗದಿದ್ದಕ್ಕೆ ಶಿವಮೊಗ್ಗ (Shivamogga)ಕ್ಕೆ ಬಂದು ಬಲತ್ಕಾರ ಮಾಡಿದ್ದಾರೆ. ಐದು ಸಲ ಯುವತಿಗೆ ಗರ್ಭಪಾತ ಮಾಡಿಸಿರುವ ಆರೋಪವೂ ಕೇಳಿಬಂದಿದೆ. ಇದನ್ನೂ ಓದಿ: ನರ್ಸ್‍ನ್ನು ಕಟ್ಟಿ ಹಾಕಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ

    ಸಿಪಿಐ ಉಮೇಶ್‍ಗೆ ಈಗಾಗಲೇ ಇಬ್ಬರು ಹೆಂಡತಿಯರಿದ್ದಾರೆ. 3ನೇ ಪತ್ನಿಯಾಗಿ ಇರುವಂತೆ ಸಿಪಿಐ ಉಮೇಶ್ ಒತ್ತಡ ಹೇರಿದ್ದಾನೆ. ದಾವಣಗೆರೆಯ ನಿವೇಶನ ನಿನಗೆ ಸಿಗದಂತೆ ಮಾಡುತ್ತೇನೆ. ನಿಮ್ಮ ತಂದೆ-ತಾಯಿಯ ಬದುಕು ಬೀದಿಗೆ ತರುತ್ತೇನೆಂದು ಪ್ರಾಣ ಬೆದರಿಕೆ ಹಾಕಿರುವುದಾಗಿ ಯುವತಿ ಆರೋಪಿಸಿದ್ದಾಳೆ.

    ಕಲಂ 376 ಕ್ಲಾಸ್ (2)(ಞ)(ಟಿ), 323 (ಗಾಯಗೊಳಿಸುವುದು), 504 (ಉದ್ದೇಶಪೂರ್ವಕ ಅವಮಾನ), 506 (ಅಪರಾಧ ಬೆದರಿಕೆ) ಐಪಿಸಿ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಪ್ರಕರಣ ದಾಖಲಾದ ಬಳಿಕ ಸಿಪಿಐ ಜಿ.ಬಿ.ಉಮೇಶ್ ನಾಪತ್ತೆಯಾಗಿದ್ದಾನೆ.

    Live Tv
    [brid partner=56869869 player=32851 video=960834 autoplay=true]

  • 14 ದಲಿತ ಕೂಲಿ ಕಾರ್ಮಿಕರನ್ನು ಕೂಡಿ ಹಾಕಿ ಮಾಲೀಕನಿಂದ ಹಲ್ಲೆ- ಮಹಿಳೆಗೆ ಗರ್ಭಪಾತ

    14 ದಲಿತ ಕೂಲಿ ಕಾರ್ಮಿಕರನ್ನು ಕೂಡಿ ಹಾಕಿ ಮಾಲೀಕನಿಂದ ಹಲ್ಲೆ- ಮಹಿಳೆಗೆ ಗರ್ಭಪಾತ

    ಚಿಕ್ಕಮಗಳೂರು: ತೋಟದಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರ (Labour) ಮೇಲೆ ತೋಟದ ಮಾಲೀಕ (Owner) ಹಲ್ಲೆ (Assault) ಮಾಡಿದ್ದು, ಇದರಿಂದ 2 ತಿಂಗಳ ಗರ್ಭಿಣಿಗೆ (Pregnant) ಗರ್ಭಪಾತವಾಗಿದೆ (Miscarriage) ಎಂದು ಕೂಲಿ ಕಾರ್ಮಿಕರು ತೋಟದ ಮಾಲೀಕನ ವಿರುದ್ಧ ಅಸಮಾಧಾನ ಹೊರಹಾಕಿ, ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ತಾಲೂಕಿನ ಜೇನುಗದ್ದೆ ಸಮೀಪದ ಪುರ ಗ್ರಾಮದಲ್ಲಿ ನಡೆದಿದೆ.

    ಪುರ ಗ್ರಾಮದ ಜಗದೀಶ್ ಎಂಬವರ ತೋಟದಲ್ಲಿ ಆಲ್ದೂರು ಸಮೀಪದ 6-7 ಕುಟುಂಬಗಳು ಕಳೆದ 4-5 ತಿಂಗಳಿಂದ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿತ್ತು. ಆದರೆ, ತೋಟದ ಲೈನ್ ಮನೆಗಳಲ್ಲಿ ವಾಸವಿದ್ದ ಕುಟುಂಬಗಳ ಚಿಕ್ಕ ಮಕ್ಕಳ ಜಗಳ ದೊಡ್ಡವರನ್ನು ಮುಟ್ಟಿ ಮಾಲೀಕರ ಬಳಿಯೂ ಹೋಗಿತ್ತು. ಈ ವೇಳೆ ಮಾಲೀಕ ಮಕ್ಕಳ ಜಗಳ ಸುಮ್ಮನರ‍್ರೋ ಎಂದು ಹೇಳಿ ಸುಮ್ಮನಾಗಿದ್ದರೆ ಮುಗಿದೋಗುತ್ತಿತ್ತು. ಸಾಹುಕಾರರು ದೊಡ್ಡವರಾಗುತ್ತಿದ್ದರು. ಆದರೆ ಕಾರ್ಮಿಕರು ದೂರು ಹೇಳುತ್ತಿದ್ದಂತೆ ಏಕಾಏಕಿ ಬಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಸಿಪಿಐ(ಎಂ) ಮುಖಂಡನ ಮನೆಯಲ್ಲಿ ಬಾಂಬ್ ಪತ್ತೆ – ತಾಜ್ ಉದ್ದೀನ್ ಮಲ್ಲಿಕ್ ಅರೆಸ್ಟ್

    ತೋಟದ ಮಾಲೀಕ ಜಗದೀಶ್ ತಮಗೆ ಹೊಡೆದಿರುವುದು ಮಾತ್ರವಲ್ಲದೇ 6 ಕುಟುಂಬದ 14 ಕಾರ್ಮಿಕರನ್ನು ಒಂದು ದಿನವಿಡೀ ತೋಟದ ಮನೆಯಲ್ಲಿ ಕೂಡಿ ಹಾಕಿದ್ದಾರೆ ಎಂದು ನೊಂದ ಕಾರ್ಮಿಕರು ಮಾಲೀಕನ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಕಾರ್ಮಿಕರ ಬಳಿ ಇದ್ದ ಮೊಬೈಲ್ ಅನ್ನೂ ಕೂಡ ಮಾಲೀಕ ಕಿತ್ತುಕೊಂಡಿದ್ದು, ಗರ್ಭಿಣಿಯೊಬ್ಬಳು ತನ್ನ ಫೋನ್ ಅನ್ನು ಕೊಡಲು ಹಿಂದೇಟು ಹಾಕಿದ್ದಾಗ ಆಕೆಯ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿದ್ದಾರೆ.

    ಮಾಲೀಕ 2 ತಿಂಗಳ ಗರ್ಭಿಣಿ ಮೇಲೆ ಹಲ್ಲೆ ನಡೆಸಿದ್ದರಿಂದ ಆಕೆಗೆ ಗರ್ಭಪಾತವಾಗಿರುವುದಾಗಿ ಆಕೆಯ ತಾಯಿ ಗೀತಾ ಆರೋಪಿಸಿ, ಆಕ್ರೋಶ ಹೊರಹಾಕಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತೋಟದ ಮಾಲೀಕ ಜಗದೀಶ್ ಹಾಗೂ ತಿಲಕ್ ಎಂಬವರ ವಿರುದ್ಧ ಬಾಳೆಹೊನ್ನೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಸೆಕ್ಷನ್ 504(ಶಾಂತಿ ಭಂಗವನ್ನು ಮಾಡಲು ಉದ್ದೇಶಿಸುವುದಕ್ಕಾಗಿ ಉದ್ದೇಶ ಪೂರ್ವಕ ಅವಮಾನ), 323(ಸ್ವಯಿಚ್ಛೆಯಿಂದ ಗಾಯವನ್ನುಂಟುಮಾಡಿದ್ದಕ್ಕೆ ದಂಡನೆ), 342(ಅಕ್ರಮ ಬಂಧನಕ್ಕಾಗಿ ದಂಡನೆ) ಹಾಗೂ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಮೊರಾರ್ಜಿ ಶಾಲೆಗಳಲ್ಲಿ ನಡೆದಿದ್ಯಾ ಆರ್‌ಎಸ್‍ಎಸ್ ಶಿಬಿರ..?

    Live Tv
    [brid partner=56869869 player=32851 video=960834 autoplay=true]

  • ಎಲ್ಲಾ ಮಹಿಳೆಯರು ಸುರಕ್ಷಿತ ವೈದ್ಯಕೀಯ ಗರ್ಭಪಾತಕ್ಕೆ ಅರ್ಹರು: ಸುಪ್ರೀಂಕೋರ್ಟ್

    ಎಲ್ಲಾ ಮಹಿಳೆಯರು ಸುರಕ್ಷಿತ ವೈದ್ಯಕೀಯ ಗರ್ಭಪಾತಕ್ಕೆ ಅರ್ಹರು: ಸುಪ್ರೀಂಕೋರ್ಟ್

    ನವದೆಹಲಿ: ದೇಶದಲ್ಲಿ ಮಹಿಳೆಯರ ಗರ್ಭಪಾತದ (Abortion) ಕುರಿತಾಗಿ ಸುಪ್ರೀಂಕೋರ್ಟ್ (Supreme Court) ಮಹತ್ವದ ತೀರ್ಪು ನೀಡಿದ್ದು, ವಿವಾಹಿತರು ಅಥವಾ ಅವಿವಾಹಿತ ಎಲ್ಲಾ ವರ್ಗದ ಮಹಿಳೆಯರೂ ಸುರಕ್ಷಿತವಾದ ಗರ್ಭಪಾತ ಮಾಡಿಸಿಕೊಳ್ಳಬಹುದು ಎಂದು ತೀರ್ಪು ನೀಡಿದೆ.

    ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು ಗರ್ಭದಾರಣೆ ಕುರಿತಾಗಿ ಸಲ್ಲಿಸಿದ್ದ ಅರ್ಜಿ ಒಂದರ ವಿಚಾರಣೆ ವೇಳೆ ಈ ಮಹತ್ವದ ತೀರ್ಪನ್ನು ನೀಡಿದೆ. ಮದುವೆಯಾಗದ ಮಹಿಳೆಯರು ಸುರಕ್ಷಿತ ಮತ್ತು ವೈದ್ಯಕೀಯವಾಗಿ ಸುರಕ್ಷಿತ ಗರ್ಭಪಾತ ಮಾಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಹಕ್ಕು ಹೊಂದಿದ್ದಾರೆ. ಮದುವೆ ಆದವರು, ಮತ್ತು ಆಗದವರು ಎಂಬ ಬೇಧವನ್ನು ಗರ್ಭಪಾತ ಕಾನೂನಿನಲ್ಲಿ ಮಾಡಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ. ಇದನ್ನೂ ಓದಿ: ಗರ್ಭಪಾತದ ಹಕ್ಕನ್ನು ರದ್ದುಗೊಳಿಸಿದ ಅಮೆರಿಕ – ಭುಗಿಲೆದ್ದ ಪ್ರತಿಭಟನೆ

    ಬಲವಂತದ ಗರ್ಭಧಾರಣೆಯನ್ನು ವೈವಾಹಿಕ ಅತ್ಯಾಚಾರ ಎಂದು ಪರಿಗಣಿಸಬೇಕು. ಸಂತ್ರಸ್ಥೆ ಗರ್ಭಪಾತಕ್ಕೆ ಇಚ್ಚಿಸಿದರೆ ಅದನ್ನು ವೈವಾಹಿಕ ಅತ್ಯಾಚಾರ ಎಂದು ಪರಿಗಣಿಸಿ ಅವಕಾಶ ನೀಡಬೇಕು. ಪ್ರಸ್ತುತ ದಿನಗಳಲ್ಲಿ ಮದುವೆಯ ಕಟ್ಟುಪಾಡುಗಳು ಪೂರ್ವ ನಿರ್ಧರಿತ ಎಂದು ಕಾನೂನಿನಲ್ಲಿ ಅಭಿಪ್ರಾಯ ಹೊಂದಲು ಸಾಧ್ಯವಿಲ್ಲ. ವೈಯಕ್ತಿಕ ಸ್ವಾತಂತ್ರ್ಯಕ್ಕೆ ಮನ್ನಣೆ ನೀಡಬೇಕಿದೆ. ಸಮಾಜದಲ್ಲಿ ಇಂದಿನ ನೈಜತೆಯನ್ನು ಪರಿಗಣಿಸಬೇಕು ಮತ್ತು ಹಳೆಯ ಕಟ್ಟುಪಾಡುಗಳನ್ನು ಮುಂದುವರಿಸಬಾರದು. ಸಾಮಾಜಿಕ ಬದಲಾವಣೆಗಳು ಮತ್ತು ಪರಿಸ್ಥಿತಿಗೆ ತಕ್ಕಂತೆ ಕಾನೂನಿನ ಜಾರಿ ಮತ್ತು ನಿರ್ಧಾರ ಬದಲಾಗಬೇಕು. ಕಾನೂನು ನಿಂತ ನೀರಾಗಬಾರದು ಹಾಗಾಗಿ ಸುಪ್ರೀಂಕೋರ್ಟ್ ಈ ಮಹತ್ವದ ತೀರ್ಪು ನೀಡುತ್ತಿದೆ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಇಂದು ಸ್ಯಾನಿಟರಿ ಪ್ಯಾಡ್, ನಾಳೆ ಕಾಂಡೋಮ್ ಕೇಳ್ತೀರಿ- ಮಹಿಳಾ ಐಎಎಸ್ ಅಧಿಕಾರಿ ವೀಡಿಯೋ ವೈರಲ್

    ವಿವಾಹಿತ ಮತ್ತು ಅವಿವಾಹಿತ ಮಹಿಳೆಯರು ವೈದ್ಯಕೀಯ ಗರ್ಭಪಾತ ಮತ್ತು ಮಸೂದೆ ಮತ್ತು ನಿಯಮದ ಅಡಿಯಲ್ಲಿ ಗರ್ಭಪಾತ ಮಾಡಿಸಬಹುದಾದ ಹಕ್ಕನ್ನು 24 ವಾರದವರೆಗೂ ಹೊಂದಿರುತ್ತಾರೆ ಎಂದು ಕೋರ್ಟ್ ತಿಳಿಸಿದೆ. ಇದನ್ನೂ ಓದಿ: ಪತಿಯ ಅನುಮತಿಯಿಲ್ಲದೇ ಪತ್ನಿ ಗರ್ಭಪಾತ ಮಾಡಿಸಿಕೊಳ್ಳಬಹುದು – ಕೇರಳ ಹೈಕೋರ್ಟ್

    ಅಮೆರಿಕದಲ್ಲಿ ಏನಾಗಿತ್ತು:
    ಕೆಲದಿನಗಳ ಹಿಂದೆ ಅಮೆರಿಕದ (America) ಸುಪ್ರೀಂಕೋರ್ಟ್ ಇತ್ತೀಚೆಗೆ ಗರ್ಭಪಾತಕ್ಕೆ ಸಂಬಂಧಿಸಿದಂತೆ ಮಹತ್ವದ ಆದೇಶವನ್ನು ಹೊರಡಿಸಿತ್ತು. ಗರ್ಭಪಾತದ ಸಾಂವಿಧಾನಿಕ ಹಕ್ಕನ್ನು ಅಮೆರಿಕದ ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು. ಈ ಆದೇಶದಿಂದ ಕೆಲವು ಪ್ರಮುಖ ನಗರಗಳಲ್ಲಿ ಮಹಿಳೆಯರು ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸುತ್ತಿದ್ದಾರೆ. ಆ ಬಳಿಕ ಗರ್ಭಪಾತದ ಬಗ್ಗೆ ಸಾಕಷ್ಟು ಚರ್ಚೆಗಳು ಆರಂಭವಾಗಿತ್ತು. ಅಮೆರಿಕದಲ್ಲಿ ಸುಪ್ರೀಂಕೋರ್ಟ್ ಗರ್ಭಪಾತಕ್ಕೆ ಕೆಲವು ಕಾನೂನು ನಿಬಂಧನೆಗಳನ್ನು ವಿಧಿಸಿದೆ. ಈ ಹಿಂದೆ ಗರ್ಭಪಾತದ ಸಂಪೂರ್ಣ ಹಕ್ಕು ಮಹಿಳೆಯರಿಗಿತ್ತು. ಆ ಬಳಿಕ ಸುಪ್ರೀಂಕೋರ್ಟ್ ಈ ಬಗ್ಗೆ ಕೆಲ ಬದಲಾವಣೆ ಮಾಡಿರುವುದರಿಂದ ಮಹಿಳೆಯರು ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಪತಿಯ ಅನುಮತಿಯಿಲ್ಲದೇ ಪತ್ನಿ ಗರ್ಭಪಾತ ಮಾಡಿಸಿಕೊಳ್ಳಬಹುದು – ಕೇರಳ ಹೈಕೋರ್ಟ್

    ಪತಿಯ ಅನುಮತಿಯಿಲ್ಲದೇ ಪತ್ನಿ ಗರ್ಭಪಾತ ಮಾಡಿಸಿಕೊಳ್ಳಬಹುದು – ಕೇರಳ ಹೈಕೋರ್ಟ್

    ತಿರುವನಂತಪುರಂ: ವಿವಾಹಿತ ಮಹಿಳೆ ಗರ್ಭಪಾತ ಮಾಡಿಸಲು ಪತಿಯ ಅನುಮತಿಯನ್ನು ಪಡೆಯುವ ಅಗತ್ಯವಿಲ್ಲ ಎಂದು ಕೇರಳ ಹೈಕೋರ್ಟ್ (Kerala High Court) ಸೋಮವಾರ ತಿಳಿಸಿದೆ.

    ಕೇರಳ ಹೈಕೋರ್ಟ್‍ನಲ್ಲಿ ನ್ಯಾಯಮೂರ್ತಿ ವಿಜಿ ಅರುಣ್ ಅವರಿದ್ದ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿತು. 21 ವರ್ಷ ವಯಸ್ಸಿನ ಗರ್ಭಿಣಿಯೊಬ್ಬರು (Pregnancy) 21 ವಾರಗಳ ಗರ್ಭಾವಸ್ಥೆಯನ್ನು ವೈದ್ಯಕೀಯವಾಗಿ (Medical Termination of Pregnancy Act) ಮುಕ್ತಾಯಗೊಳಿಸಲು ಅನುಮತಿ ಕೋರಿ ಸಲ್ಲಿಸಿದ ಮನವಿಯ ಮೇರೆಗೆ ನ್ಯಾಯಾಲಯವು ಈ ಆದೇಶವನ್ನು ನೀಡಿದೆ. ಈ ವೇಳೆ ಗರ್ಭಿಣಿ ಕಾನೂನುಬದ್ಧವಾಗಿ ವಿಚ್ಛೇದನ ಪಡೆದಿರುವುದಿಲ್ಲ ಅಥವಾ ವಿಧವೆಯಾಗಿರುವುದಿಲ್ಲ.

    ಗರ್ಭಾವಸ್ಥೆಯ ಮತ್ತು ಹೆರಿಗೆಯ ಸಮಯದಲ್ಲಿ ಒತ್ತಡ ಮತ್ತು ನೋವು ಅನುಭವಿಸುವುದು ಮಹಿಳೆಯರು ಎಂಬ ಕಾರಣವನ್ನು ಉಲ್ಲೇಖಿಸಿ, ಗರ್ಭಾವಸ್ಥೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸಲು ಮಹಿಳೆ ತನ್ನ ಪತಿಯ ಅನುಮತಿಯನ್ನು ಪಡೆಯುವ ಯಾವುದೇ ಅಗತ್ಯವಿರುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇದನ್ನೂ ಓದಿ: ಎಕ್ಸಾಂ ನಡೆಯುತ್ತಿದ್ದ ಸ್ಕೂಲ್‍ಗೆ ನುಗ್ಗಿದ ಹಿಂದೂ ಮುನ್ನನ್ನಿ ಸದಸ್ಯರು – ಶಾಲೆ ಮುಚ್ಚುವಂತೆ ಒತ್ತಾಯ

    court order law

    ಮಹಿಳೆ ತಾನು ಪ್ರೀತಿ ಮಾಡುತ್ತಿದ್ದ ವ್ಯಕ್ತಿ ಜೊತೆಗೆ ಕೆಲವು ತಿಂಗಳ ಹಿಂದೆಯಷ್ಟೇ ಓಡಿ ಹೋಗಿ ಮದುವೆಯಾಗಿದ್ದಳು. ಆದರೆ ಮದುವೆಯ ನಂತರ ಆತ ಮತ್ತು ಆತನ ತಾಯಿ ಇಬ್ಬರು ಆಕೆಯನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದರು. ಅಲ್ಲದೇ ಮಹಿಳೆ ಗರ್ಭಿಣಿಯಾದ ವೇಳೆ ಆಕೆಯನ್ನು ಅನುಮಾನದಿಂದ ಕಾಣಲು ಆರಂಭಿಸಿದ. ಆಕೆಯನ್ನು ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ. ಆಕೆಯ ಭಾವನೆಗಳಿಗೆ ಸ್ಪಂದಿಸುತ್ತಿರಲಿಲ್ಲ. ದಿನೇ ದಿನೆ ಆಕೆಯ ಪತಿ ಮತ್ತು ಅತ್ತೆ ಚಿತ್ರಹಿಂಸೆ ನೀಡಲಾರಂಭಿಸಿದರು. ಕೊನೆಗೆ ಗಂಡನ ಮನೆ ಬಿಟ್ಟು ಮಹಿಳೆ ತವರು ಸೇರಬೇಕಾಯಿತು.

    ನಂತರ ಮಹಿಳೆ ತನ್ನ ಗರ್ಭಾವಸ್ಥೆಯನ್ನು ಮುಕ್ತಾಯಗೊಳಿಸಲು ನಿರ್ಧರಿಸಿ, ಕ್ಲಿನಿಕ್ ಅನ್ನು ಸಂಪರ್ಕಿಸಿದರು. ಆದರೆ ಕ್ಲಿನಿಕ್‍ನವರು ನೀವು ಪತಿಯಿಂದ ಬೇರ್ಪಟ್ಟಿರುವುದು ಸಾಬೀತಾಗಿದೆ ಎನ್ನಲು ಯಾವುದಾದರೂ ದಾಖಲೆ ನೀಡುವಂತೆ ತಿಳಿಸಿತು. ಈ ವೇಳೆ ಯಾವುದೇ ಕಾನೂನು ದಾಖಲೆ ಇಲ್ಲದ ಕಾರಣ ಮಹಿಳೆ ಈ ಕುರಿತಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಳು. ಇದನ್ನೂ ಓದಿ: ಕಟೀಲ್ ಒಬ್ಬ ವಿದೂಷಕ, ಪಾಪ ಇನ್ನೂ ಮೆಚ್ಯೂರಿಟಿ ಇಲ್ಲ: ಸಿದ್ದರಾಮಯ್ಯ

    ಮಹಿಳೆ ತನ್ನ ಪತಿಯ ಮೇಲೆ ಕ್ರಿಮಿನಲ್ ದೂರು ದಾಖಲಿಸಿದ್ದು, ಪತಿ ತನ್ನೊಂದಿಗೆ ಜೀವನ ನಡೆಸಲು ಇಚ್ಛಿಸುತ್ತಿಲ್ಲ ಎಂಬ ಅಂಶವನ್ನು ಕೋರ್ಟ್ ವಿಚಾರಣೆ ವೇಳೆ ಗಮನಿಸಿದೆ. ಆಕೆಯ ವೈವಾಹಿಕ ಜೀವನದಲ್ಲಿ ತೀವ್ರ ಬದಲಾವಣೆಯಾಗಿರುವುದನ್ನು ನ್ಯಾಯಾಲಯ ಗಮನದಲ್ಲಿಟ್ಟುಕೊಂಡು, ಅರ್ಜಿದಾರರಿಗೆ ಕೊಟ್ಟಾಯಂನ ವೈದ್ಯಕೀಯ ಕಾಲೇಜು ಅಥವಾ ಇತರ ಯಾವುದೇ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆ ಗರ್ಭಧಾರಣೆಯನ್ನು ಮುಕ್ತಾಯಗೊಳಿಸಲು ಅನುಮತಿ ನೀಡಿ ಆದೇಶವನ್ನು ಹೊರಡಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಅವಿವಾಹಿತೆಗೂ ಗರ್ಭಪಾತಕ್ಕೆ ಅವಕಾಶ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

    ಅವಿವಾಹಿತೆಗೂ ಗರ್ಭಪಾತಕ್ಕೆ ಅವಕಾಶ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

    ನವದೆಹಲಿ: ಒಮ್ಮತದ ಸಂಬಂಧದಿಂದ ಅವಿವಾಹಿತೆ ಗರ್ಭಧರಿಸಿದ್ದರೆ, ಆಕೆ ಇಚ್ಛಿಸಿದರೆ ಗರ್ಭಪಾತಕ್ಕೆ ಅವಕಾಶ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪೊಂದನ್ನು ಹೊರಡಿಸಿದೆ.

    ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಸೂರ್ಯ ಕಾಂತ್ ಮತ್ತು ಎ.ಎಸ್.ಬೋಪಣ್ಣ ಅವರ ಪೀಠವು, ಅವಿವಾಹಿತೆ ಪರೀಕ್ಷಿಸಲು ಇಬ್ಬರು ವೈದ್ಯರ ವೈದ್ಯಕೀಯ ಮಂಡಳಿಯನ್ನು ಸ್ಥಾಪಿಸಲು ಏಮ್ಸ್‌ ನಿರ್ದೇಶಕರಿಗೆ ನಿರ್ದೇಶನ ನೀಡಿದೆ. ಎಂಟಿಪಿ ಕಾಯ್ದೆಯ ಸೆಕ್ಷನ್ 3(2)(ಡಿ) ಅಡಿಯಲ್ಲಿ ಮಂಡಳಿ ರಚಿಸಬೇಕು. ಆಕೆಯ ಜೀವಕ್ಕೆ ಅಪಾಯ ಆಗದಂತೆ ಗರ್ಭಪಾತ ಮಾಡಬೇಕು ಎಂದು ಆದೇಶಿಸಿತು. ಇದನ್ನೂ ಓದಿ: ಆಗಸ್ಟ್ 13 ರಿಂದ 15ರವರೆಗೆ ನಿಮ್ಮ ಮನೆಮುಂದೆ ತ್ರಿವರ್ಣ ಧ್ವಜವನ್ನು ಹಾರಿಸಿ: ಮೋದಿ ಕರೆ

    SUPREME COURT

    ವೈದ್ಯಕೀಯ ಗರ್ಭಪಾತ ಕಾಯ್ದೆಗೆ 2021ರಲ್ಲಿ ತಂದಿರುವ ತಿದ್ದುಪಡಿಯು ಅವಿವಾಹಿತೆಯೂ ಒಳಗೊಳ್ಳುವಂತೆ ಪತಿಗೆ ಬದಲಾಗಿ ʼಪಾರ್ಟ್ನರ್‌ʼ ಎಂಬ ಪದ ಬಳಸಿದೆ ಎಂದು ಪೀಠವು ಹೇಳಿದೆ.

    ಒಮ್ಮತದ ಸಂಬಂಧದಿಂದ ಗರ್ಭಧರಿಸಿದ್ದ 25 ವರ್ಷದ ಅವಿವಾಹಿತೆಯೊಬ್ಬರು ದೆಹಲಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ತನಗೆ ಬೇಡವಾದ 24 ವಾರಗಳ ಭ್ರೂಣದ ಗರ್ಭಪಾತಕ್ಕೆ ಅನುಮತಿ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು. ಆದರೆ ಜು.16 ಅನುಮತಿ ನಿರಾಕರಿಸಿ ಕೋರ್ಟ್‌ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅವಿವಾಹಿತೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಇದನ್ನೂ ಓದಿ: ವಿಮಾನದಲ್ಲಿ ಪ್ರಯಾಣಿಸಲು ಬಂದ ಪೋಷಕರಿಗೆ ಸರ್‌ಪ್ರೈಸ್‌ ಕೊಟ್ಟ ಪೈಲಟ್

    ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, 20-24 ವಾರಗಳ ಭ್ರೂಣದ ಗರ್ಭಪಾತಕ್ಕೆ ವಿಧವೆ ಅಥವಾ ವಿಚ್ಛೇದಿತ ಮಹಿಳೆಗೂ ಅನುಮತಿಸಲಾಗಿದೆ. ಆದರೆ ಈ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಅನಪೇಕ್ಷಿತ ದೃಷ್ಟಿಕೋನ ಹೊಂದಿದೆ ಎಂದು ಕೋರ್ಟ್‌ ಹೇಳಿತು. ಅಲ್ಲದೇ ಈ ಕಾನೂನು ನಿಯಮಗಳ ವ್ಯಾಖ್ಯಾನ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್ ಜಾರಿ ಮಾಡಿತು.

    Live Tv
    [brid partner=56869869 player=32851 video=960834 autoplay=true]