Tag: ಗರ್ಭಿಣಿಯರು

  • ಸೆ.7 ರಕ್ತಚಂದ್ರಗ್ರಹಣ – ಗರ್ಭಿಣಿಯರು ಏನು ಮಾಡಬೇಕು? ತಜ್ಞ ವೈದ್ಯರ ಸಲಹೆಗಳೇನು?

    ಸೆ.7 ರಕ್ತಚಂದ್ರಗ್ರಹಣ – ಗರ್ಭಿಣಿಯರು ಏನು ಮಾಡಬೇಕು? ತಜ್ಞ ವೈದ್ಯರ ಸಲಹೆಗಳೇನು?

    ಬೆಂಗಳೂರು: ನಾಳೆ ರಾತ್ರಿ ನಭೋ ಮಂಡಲದಲ್ಲಿ ಕೌತುಕದ ರಕ್ತ ಚಂದನ ಚಂದ್ರಗ್ರಹಣ (Chandra Grahan) ಸಂಭವಿಸಲಿದೆ. ಸುದೀರ್ಘ 3 ಗಂಟೆ 28 ನಿಮಿಷಗಳ ಕಾಲ ನಡೆಯುವ ಭೂಮಿ, ಸೂರ್ಯ ಹಾಗೂ ಚಂದ್ರನ ನಡುವಿನ ನೆರಳಿನಾಟಕ್ಕೆ ಭಾರತ ಕೂಡ ಸಾಕ್ಷಿಯಾಗಲಿದೆ. ಗ್ರಹಣದ ವೇಳೆ ನಮ್ಮಲ್ಲಿ ಗ್ರಹಗತಿಗಳ ಬದಲಾವಣೆ ಆಗುತ್ತೆ ಅನ್ನೋ ನಂಬಿಕೆ ದಟ್ಟವಾಗಿದ್ದು, ಅದರಲ್ಲೂ ಗರ್ಭಿಣಿಯರು (Pregnant Womens) ಮೇಲೆ ಹೆಚ್ಚಿನ ಪ್ರಭಾವ ಬೀರುತ್ತೆ ಅನ್ನೋ ನಂಬಿಕೆ ಕೂಡ ಇದೆ.

    ಹೌದು, ನಾಳೆ ರಾತ್ರಿ ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ. ಹುಣ್ಣಿಮೆಯ ಚಂದ್ರ ರಕ್ತಚಂದನದ ರೀತಿ ಗೋಚರಿಸಲಿದ್ದಾನೆ. ಗ್ರಹಣ ಅಂದ್ರೆ ಒಂದು ರೀತಿಯಲ್ಲಿ ಭಯದ ಭಾವನೆ ಇನ್ನೂ ಜನರಲ್ಲಿದೆ. ಗ್ರಹಣದ ವೇಳೆ ಊಟ ಮಾಡಬಾರದು, ಗ್ರಹಣದ ವೇಳೆ ಹೊರಗೆ ಬರಬಾರದು ಅನ್ನೋ ನಿಯಮಗಳನ್ನೂ ಕೂಡ ಮಾಡಿಕೊಂಡು ಬರಲಾಗಿದೆ. ಅದ್ರೆ ವೈಜ್ಞಾನಿಕವಾಗಿ ನೋಡಿದಾಗ ಇದು ಆಕಾಶದಲ್ಲಿ ನಡೆಯುವ ಒಂದು ಸಹಜ ಪ್ರಕ್ರಿಯೆ. ಚಂದ್ರಗ್ರಹಣದಿಂದ ಸೂಸುವ ಕಿರಣಗಳಿಂದ ಅಷ್ಟಾಗಿ ಯಾವುದೇ ಪರಿಣಾಮ ಬೀರೋದಿಲ್ಲ. ಇದನ್ನೂ ಓದಿ: ಭಾರತ ಇನ್ನೆರಡು ತಿಂಗಳಲ್ಲಿ ಟ್ರಂಪ್‌ ಕ್ಷಮೆಯಾಚಿಸುತ್ತೆ: ಅಮೆರಿಕ ವಾಣಿಜ್ಯ ಕಾರ್ಯದರ್ಶಿ

     ಇನ್ನೂ ಗ್ರಹಣದ ವೇಳೆ ಗರ್ಭಿಣಿಯರ ಮೇಲೆ ಹೆಚ್ಚು ಪರಿಣಾಮ ಪ್ರಭಾವ ಬೀರುತ್ತೆ ಅಂತಾ ಜ್ಯೋತಿಷಿಗಳು ಹೇಳ್ತಾರೆ. ಆದ್ರೆ ವೈಜ್ಞಾನಿಕವಾಗಿ ನೋಡಿದ್ರೆ ಅತಂಹ ಯಾವುದೇ ಪರಿಣಾಮ ಬೀರಲ್ಲ ಎಂದು ಸ್ತ್ರೀ ರೋಗ ತಜ್ಞರು ಹೇಳುತ್ತಾರೆ. ಆದ್ರೆ ಗ್ರಹಣದ ಕಾರಣದಿಂದ ನಾರ್ಮಲ್ ಡೆಲಿವರಿಯನ್ನ ತಡೆಯಲು ಸಾಧ್ಯವಿಲ್ಲ. ಸಿ ಸೆಕ್ಷನ್ ಮಾಡಿಸಿಕೊಳ್ಳುವವರು ಗ್ರಹಣದ ದಿನ ಬೇಡ ಆಪರೇಷನ್ ಮುಂದಕ್ಕೆ ಹಾಕಿ ಅಂತಾ ಸಾಕಷ್ಟು ಗರ್ಭಿಣಿಯರು ಕೇಳಿದ್ದಾರೆ ಎಂದು ಸ್ತ್ರೀ ರೋಗ ತಜ್ಞರು ಹೇಳಿದ್ದಾರೆ. ಇದನ್ನೂ ಓದಿ: ಸೆಮಿಕಂಡಕ್ಟರ್‌ ವಲಯದಲ್ಲಿ ಭಾರತ ‘ವಿಕ್ರಮ’; ಏನಿದು ದೇಶೀಯ ವಿಕ್ರಮ್‌-32 ಚಿಪ್‌ – ಅಮೆರಿಕ, ಚೀನಾಗೆ ಟಕ್ಕರ್?

    ಗ್ರಹಣ ಆಚರಣೆ ಅಂತಾ ಗರ್ಭಿಣಿಯರು ಹೆಚ್ಚು ಕಾಲ ಉಪವಾಸ ಮಾಡಿದ್ರೆ ಮಗುವಿಗೆ ಸಮಸ್ಯೆ ಆಗಲಿದೆ. ಮಗುವಿಗೆ ಗ್ಲೂಕೋಸ್ ಕಡಿಮೆಯಾಗಿ ತಾಯಿ-ಮಗುವಿಗೆ ಸಮಸ್ಯೆ ಆಗುವ ಸಾಧ್ಯತೆ ಇದೆ. ಉಪವಾಸ ಮಾಡುವ ಅಗತ್ಯ ಇರೋದಿಲ್ಲ. ಗರ್ಭಿಣಿಯರು ಎಂದಿನಂತೆ ಇರುವ ಹಾಗೆ ಗ್ರಹಣದ ದಿನವೂ ಇದ್ದರೆ ಉತ್ತಮ ಎಂದು ವೈದ್ಯರು ಹೇಳುತ್ತಾರೆ.

    ಭಾನುವಾರ ಸಂಭವಿಸುತ್ತಿರೋ ರಕ್ತಚಂದನ ಚಂದ್ರಗ್ರಹಣ ಆಗಸದಲ್ಲಿ ಹೊಸ ಚಿತ್ತಾರ ಮೂಡಿಸಲಿದೆ. ಗರ್ಭಿಣಿಯರು ಆತಂಕ ಬಿಟ್ಟು ಸಹಜವಾಗಿರಿ. ಮಾನಸಿಕ ಗೊಂದಲಕ್ಕೆ ಒಳಗಾಗಿ ಸಮಸ್ಯೆ ಮಾಡಿಕೊಂಡು ಇದು ಗ್ರಹಣದ ಪರಿಣಾಮ ಎಂದೆಲ್ಲ ಅಂದುಕೊಳ್ಳಬೇಡಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

  • ವಿಶ್ವದ ಪ್ರತಿ ದೇಶದಲ್ಲೂ ನನ್ನದೊಂದು ಮಗು ಇರಬೇಕು – ಅಮೆರಿಕದ ವೀರ್ಯದಾನಿಯ ಹೆಬ್ಬಯಕೆ

    ವಿಶ್ವದ ಪ್ರತಿ ದೇಶದಲ್ಲೂ ನನ್ನದೊಂದು ಮಗು ಇರಬೇಕು – ಅಮೆರಿಕದ ವೀರ್ಯದಾನಿಯ ಹೆಬ್ಬಯಕೆ

    – 100 ಮಕ್ಕಳ ತಂದೆಯಾಗುವ ಸನಿಹದಲ್ಲಿ ಕೈಲ್‌ ಗೋರ್ಡಿ

    ವಾಷಿಂಗ್ಟನ್‌: ಪ್ರಸಿದ್ಧ ವೀರ್ಯ ದಾನಿ (Sperm Donor) ಎಂದು ಖ್ಯಾತಿ ಪಡೆದಿರುವ ಅಮೆರಿಕದ ಕೈಲ್‌ ಗೋರ್ಡಿ (Kyle Gordy) ಇದೀಗ 100 ಮಕ್ಕಳ ತಂದೆಯಾಗುವ ಸನಿಹದಲ್ಲಿದ್ದಾರೆ.

    ಕಳೆದ ಕೆಲ ವರ್ಷಗಳಿಂದ ಅಮೆರಿಕದ (America) ಲಾಸ್‌ ಏಂಜಲೀಸ್‌ನಲ್ಲಿ ಗರ್ಭಧಾರಣೆಗಾಗಿ ಹೋರಾಡುತ್ತಿದ್ದ ಮಹಿಳೆಯರಿಗೆ ಉಚಿತ ವೀರ್ಯಧಾನ ಮಾಡುತ್ತಿದ್ದ ಗೋರ್ಡಿ ಈವರೆಗೆ 87 ಮಕ್ಕಳ (Childrens) ತಂದೆಯಾಗಿದ್ದಾರೆ. ʻಬಿ ಪ್ರೆಗ್ನೆಂಟ್ ನೌʼ ವೆಬ್‌ಸೈಟ್‌ ಆರಂಭಿಸಿ ಮಹಿಳೆಯರಿಗೆ ವೀರ್ಯದಾನ ಮಾಡುತ್ತಾ ಬರುತ್ತಿದ್ದಾರೆ. ಇದೀಗ ಅವರು ನೂರು ಮಕ್ಕಳಿಗೆ ತಂದೆಯಾಗುವ ಸನಿಹದಲ್ಲಿದ್ದಾರೆ ಎಂದು ನ್ಯೂಯಾರ್ಕ್‌ಪೋಸ್ಟ್‌ ವರದಿ ಮಾಡಿದೆ. ಇದನ್ನೂ ಓದಿ: 12 ಗಂಟೆಯಲ್ಲಿ 1,057 ಪುರುಷರೊಂದಿಗೆ ಸೆಕ್ಸ್‌ – ವಿಶ್ವದಾಖಲೆ ಬರೆದ ನೀಲಿ ತಾರೆ

    ನೂರು ಮಕ್ಕಳ ಗುರಿ ಪೂರೈಸಲು ಸ್ವೀಡನ್, ನಾರ್ವೆ, ಇಂಗ್ಲೆಂಡ್ ಮತ್ತು ಸ್ಕಾಟ್ಲೆಂಡ್‌ನ 13 ಮಹಿಳೆಯರಿಗೆ ವೀರ್ಯದಾನ ಮಾಡಲು ಮುಂದಾಗಿದ್ದಾರೆ.‌ ಇದನ್ನೂ ಓದಿ: ಅದಾನಿ ಕಂಪನಿಗಳನ್ನು ಕಾಡಿದ್ದ ಹಿಂಡನ್‌ಬರ್ಗ್‌ಗೆ ಬೀಗ – ಬಂದ್‌ ಆಗಿದ್ದು ಯಾಕೆ?

    ಅಲ್ಲದೇ ಕೈಲ್‌ ಗೋರ್ಡಿ ವಿಶ್ವದ ಎಲ್ಲಾ ದೇಶಗಳಲ್ಲೂ ಒಂದೊಂದು ಮಗು ಹೊಂದಬೇಕೆಂಬ ಹೆಬ್ಬಯಕೆಯನ್ನೂ ವ್ಯಕ್ತಪಡಿಸಿದ್ದಾರೆ. ಅದ್ಕಕಾಗಿ ತಾನು ನಿರ್ದಿಷ್ಟ ಮಕ್ಕಳನ್ನು ಹೊಂದಬೇಕೆಂಬ ಗುರಿ ಹಾಕಿಕೊಂಡಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಸುದೀರ್ಘ ಯುದ್ಧ ಅಂತ್ಯಗೊಳಿಸಲು ನಿರ್ಧಾರ; ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್-ಹಮಾಸ್ ಒಪ್ಪಿಗೆ

    ಪ್ರಸಕ್ತ ವರ್ಷದಲ್ಲಿ ಜಾಗತೀಕ ಪ್ರವಾಸ ಹಮ್ಮಿಕೊಂಡಿದ್ದೇನೆ. ಜಪಾನ್‌, ಐರ್ಲೆಂಡ್‌ ಮತ್ತು ಕೊರಿಯಾ ಸೇರಿದಂತೆ ಹಲವು ಹೊಸ ರಾಷ್ಟ್ರಗಳಿಗೆ ಪ್ರವಾಸ ಕೈಗೊಂಡಿದ್ದೇನೆ. ಅಲ್ಲಿ ನಿರ್ದಿಷ್ಟ ಸಂಸ್ಥೆಗಳನ್ನು ಸಂಪರ್ಕಿಸಿ, ಗರ್ಭಧರಿಸಲು ಹಂಬಲಿಸುತ್ತಿರುವ ಮಹಿಳೆಯರಿಗೆ ವೀರ್ಯದಾನ ಮಾಡುತ್ತೇನೆ. ಈ ಮೂಲಕ 2026ರ ವೇಳೆಗೆ ವಿಶ್ವದ ಪ್ರತಿಯೊಂದು ದೇಶದಲ್ಲೂ ಒಂದೊಂದು ಮಗುವನ್ನು ಹೊಂದುವ ಯೋಜನೆ ಹಾಕಿಕೊಂಡಿದ್ದೇನೆ ಎಂಬುದಾಗಿ ಹೇಳಿಕೊಂಡಿದ್ದಾರೆ.

  • ದಾವಣಗೆರೆ | 7 ತಿಂಗಳಲ್ಲಿ 135 ಶಿಶುಗಳು, 28 ಗರ್ಭಿಣಿಯರು ಸಾವು!

    ದಾವಣಗೆರೆ | 7 ತಿಂಗಳಲ್ಲಿ 135 ಶಿಶುಗಳು, 28 ಗರ್ಭಿಣಿಯರು ಸಾವು!

    ದಾವಣಗೆರೆ: ನಾಲ್ಕೈದು ಜಿಲ್ಲೆಗಳ ಜೀವನಾಡಿಯಾಗಿರುವ ದಾವಣಗೆರೆ ಜಿಲ್ಲಾಸ್ಪತ್ರೆ (Davanagere District Hospital) ಇದೀಗ ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ. ಕಳೆದ 7 ತಿಂಗಳಲ್ಲಿ ನೂರಾರು ನವಜಾತ ಶಿಶುಗಳು ಹಾಗೂ ಗರ್ಭಿಣಿಯರು ಸಾವನ್ನಪ್ಪಿದ್ದಾರೆ.

    ದಾವಣಗೆರೆ (Davanagere) ಜಿಲ್ಲಾಸ್ಪತ್ರೆ ಎಂದರೆ ಸುತ್ತಮುತ್ತಲಿನ ನಾಲ್ಕೈದು ಜಿಲ್ಲೆಗಳ ಸಾವಿರಾರು ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಈ ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಹೆಚ್ಚಾಗಿದೆ ಎನ್ನುವ ಆತಂಕಕಾರಿ ವರದಿ ಕೇಳಿ ಬಂದಿದೆ. ಇದನ್ನೂ ಕೇಳಿದ ಆರೋಗ್ಯ ಸಚಿವರೇ ನಿಬ್ಬೆರಗಾಗಿದ್ದಾರೆ.

    ಹೌದು, ಜಿಲ್ಲೆಯಲ್ಲಿ ಕಳೆದ 7 ತಿಂಗಳಲ್ಲಿ 135 ನವಜಾತ ಶಿಶುಗಳು 28 ಗರ್ಭಿಣಿಯರು ಸಾವನ್ನಪ್ಪಿರುವ ವರದಿಯಾಗಿದೆ. ಅದರಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಐದು ಸಾವಾಗಿದ್ದರೆ, ಇನ್ನುಳಿದವರು ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪ್ರತಿ ತಿಂಗಳು 600 ರಿಂದ 700 ಹೆರಿಗೆ ಆಗುವ ಜಿಲ್ಲಾಸ್ಪತ್ರೆಯಲ್ಲಿ ನವಜಾತ ಶಿಶುಗಳ ಸಾವಿನ ಸಂಖ್ಯೆ ಕೂಡ ಹೆಚ್ಚಾಗಿದೆ. ಇದರಿಂದ ನಾಲ್ಕು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮುಂಚಿತವಾಗಿ ಗರ್ಭಿಣಿಯರನ್ನು ಕಳಿಸುವಂತೆ ಸೂಚನೆ ನೀಡಲಾಗಿದೆ.

    ಇನ್ನೂ ಜಿಲ್ಲೆಯ ಪ್ರಾಥಮಿಕ ಹಾಗು ತಾಲೂಕು ಆಸ್ಪತ್ರೆಗಳಲ್ಲಿ ತೀವ್ರ ನಿಗಾವಹಿಸುವಂತೆ ಡಿಹೆಚ್‌ಓ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ. ಗರ್ಭಿಣಿಯರ ಹಾಗೂ ನವಜಾತ ಶಿಶುಗಳ ಸಾವಿನ ಪ್ರಮಾಣ ಕಡಿಮೆ ಮಾಡಲು ಅಭಿಯಾನವನ್ನೇ ಹಮ್ಮಿಕೊಂಡಿದ್ದು, ಜಿಲ್ಲಾಸ್ಪತ್ರೆಯ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸೌಲಭ್ಯಗಳ ಕೊರತೆ ಕೂಡ ಹೆಚ್ಚಿದೆ. ಅಲ್ಲದೆ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಕೂಡ ಸಿಜೇರಿಯನ್ ಡೆಲಿವರಿಗಳು ಶೇ.75ರಷ್ಟು ಜಾಸ್ತಿ ಇದೆ. ಅದರ ಬಗ್ಗೆ ಕ್ರಮ ವಹಿಸುವಂತೆ ಆರೋಗ್ಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

    ಒಟ್ಟಾರೆ ಕಳೆದ 7 ತಿಂಗಳಲ್ಲಿ ಗರ್ಭಿಣಿಯರ ಹಾಗೂ ನವಜಾತ ಶಿಶುಗಳ ಸಾವಿನ ಸಂಖ್ಯೆ ಹೆಚ್ಚಾಗಿದ್ದು, ಇದರ ಬಗ್ಗೆ ಆರೋಗ್ಯ ಇಲಾಖೆ ಎಚ್ಚರ ವಹಿಸಿದೆ. ಅಲ್ಲದೆ ಜಿಲ್ಲಾಸ್ಪತ್ರೆಯಲ್ಲಿ ಸರ್ಕಾರ ಇನ್ನು ಹೆಚ್ಚಿನ ಸೌಲಭ್ಯ ಒದಗಿಸಿದರೆ ಬಡ ರೋಗಿಗಳ ಜೀವ ಉಳಿಸಿದಂತಾಗುತ್ತದೆ.

  • ರಾಮಮಂದಿರ ಉದ್ಘಾಟನೆ ದಿನವೇ ನಮಗೆ ಹೆರಿಗೆಯಾಗಲಿ: ವೈದ್ಯರ ಬಳಿ ಗರ್ಭಿಣಿಯರ ಮನವಿ

    ರಾಮಮಂದಿರ ಉದ್ಘಾಟನೆ ದಿನವೇ ನಮಗೆ ಹೆರಿಗೆಯಾಗಲಿ: ವೈದ್ಯರ ಬಳಿ ಗರ್ಭಿಣಿಯರ ಮನವಿ

    ಲಕ್ನೋ: ಜನವರಿ 22, ಶ್ರೀರಾಮಭಕ್ತರಿಗೆ ಸುದಿನ. ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದೆ. ರಾಮಲಲ್ಲಾ (ಬಾಲ ರಾಮ) ಪ್ರಾಣ ಪ್ರತಿಷ್ಠಾಪನೆಯಾಗಲಿದೆ. ಈ ಪುಣ್ಯ ದಿನವೇ ನಮಗೆ ಹೆರಿಗೆ ಆಗಬೇಕು ಎಂದು ಅನೇಕ ಗರ್ಭಿಣಿಯರು ವೈದ್ಯರಲ್ಲಿ ಮನವಿ ಮಾಡಿದ್ದಾರೆ.

    ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯುವ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ (ಜನವರಿ 22) ಸಿಸೇರಿಯನ್ ಹೆರಿಗೆ ಮಾಡುವಂತೆ ಹಲವಾರು ಗರ್ಭಿಣಿಯರು ಉತ್ತರ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಗೆ ಮನವಿ ಮಾಡಿದ್ದಾರೆ.

    ಗಣೇಶ್ ಶಂಕರ್ ವಿದ್ಯಾರ್ಥಿ ಮೆಮೋರಿಯಲ್ ಮೆಡಿಕಲ್ ಕಾಲೇಜಿನ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಸೀಮಾ ದ್ವಿವೇದಿ ಮಾತನಾಡಿ, ಒಂದು ಲೇಬರ್ ರೂಮ್‌ನಲ್ಲಿ 12 ರಿಂದ 14 ಗರ್ಭಿಣಿಯರು ಸಿಸೇರಿಯನ್ ಹೆರಿಗೆಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.

    ಕೋರಿಕೆ ಮೇರೆಗೆ ಜನವರಿ 22 ರಂದು 35 ಸಿಸೇರಿಯನ್ ಆಪರೇಷನ್‌ಗಳಿಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕೆಲ ಗರ್ಭಿಣಿಯರ ಹೆರಿಗೆ ದಿನಾಂಕವು ಜನವರಿ 22 ರ ಮುಂಚೆ ಅಥವಾ ನಂತರದ ದಿನದಲ್ಲಿತ್ತು. ಆದರೆ ಬಹುಪಾಲು ಗರ್ಭಿಣಿಯರು ತಮಗೆ ಜ.22 ರಂದೇ ಹೆರಿಗೆ ಆಗಬೇಕು ಎಂದು ಮನವಿ ಮಾಡಿದ್ದಾರೆ. ಅವರ ಆರೋಗ್ಯವನ್ನೂ ಗಮನದಲ್ಲಿಟ್ಟುಕೊಂಡು ಕೆಲವರ ಮನವಿಗೆ ಒಪ್ಪಿಗೆ ಸೂಚಿಸಲಾಗಿದೆ.

    ರಾಮಮಂದಿರದ ಮೊದಲ ಹಂತದ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಜನವರಿ 22ರಂದು ನಡೆಯಲಿರುವ ರಾಮಲಲ್ಲಾ ಮೂರ್ತಿಯ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಕೆಲ ಗರ್ಭಿಣಿಯರು ಮತ್ತು ಅವರ ಕುಟುಂಬದ ಸದಸ್ಯರು ಪುರೋಹಿತರು ನೀಡಿರುವ ಮುಹೂರ್ತದಲ್ಲೇ ತಮಗೆ ಹೆರಿಗೆ ಆಗಬೇಕು ಎಂದು ಕೇಳಿಕೊಂಡಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

    ಶ್ರೀರಾಮನು ಶೌರ್ಯ, ವಿಧೇಯತೆಯ ಪ್ರತೀಕ ಎಂದು ಜನರು ನಂಬುತ್ತಾರೆ. ಆದ್ದರಿಂದ ದೇವಾಲಯದಲ್ಲಿ ‘ಪ್ರಾಣ ಪ್ರತಿಷ್ಠಾ’ ದಿನದಂದು ಜನಿಸಿದ ಶಿಶುಗಳು ಸಹ ಶ್ರೀರಾಮನ ಗುಣಗಳನ್ನು ಹೊಂದಿರುತ್ತಾರೆ ಎಂಬುದು ಅವರ ನಂಬಿಕೆ.

  • ಗರ್ಭಿಣಿಯರು, ವಿಕಲಚೇತನರು ಮನೆಯಿಂದ್ಲೇ ಸರ್ಕಾರಿ ಕೆಲಸ ಮಾಡ್ಬೋದು: ಜಿತೇಂದ್ರ ಸಿಂಗ್

    ಗರ್ಭಿಣಿಯರು, ವಿಕಲಚೇತನರು ಮನೆಯಿಂದ್ಲೇ ಸರ್ಕಾರಿ ಕೆಲಸ ಮಾಡ್ಬೋದು: ಜಿತೇಂದ್ರ ಸಿಂಗ್

    ನವದೆಹಲಿ: ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಕೆಲಸ ಮಾಡುತ್ತಿದ್ದ ಗರ್ಭಿಣಿಯರು ಮತ್ತು ‘ದಿವ್ಯಾಂಗ್’ (ವಿಕಲಚೇತನ) ಉದ್ಯೋಗಿಗಳು ಇನ್ನೂ ಮುಂದೆ ಮನೆಯಲ್ಲಿಯೇ ಕುಳಿತು ಕೆಲಸ ಮಾಡಬಹುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದರು.

    ಧಾರಕ ವಲಯವನ್ನು ಡಿ-ನೋಟಿಫೈ ಮಾಡುವವರೆಗೆ ಕೋವಿಡ್ ಕಂಟೈನ್‍ಮೆಂಟ್ ವಲಯದಲ್ಲಿ ವಾಸಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗೆ ಬರುವುದರಿಂದ ವಿನಾಯಿತಿ ನೀಡಲಾಗಿದೆ. ಅಧೀನ ಕಾರ್ಯದರ್ಶಿ ಮಟ್ಟಕ್ಕಿಂತ ಕೆಳಗಿರುವ ಸರ್ಕಾರಿ ನೌಕರರ ದೈಹಿಕ ಹಾಜರಾತಿಯನ್ನು 50% ಕ್ಕೆ ನಿರ್ಬಂಧಿಸಲಾಗಿದೆ. ಉಳಿದ 50% ರಷ್ಟು ಜನರು ಮನೆಯಿಂದಲೇ ಕೆಲಸ ಮಾಡುತ್ತಾರೆ ಎಂದು ಸಿಬ್ಬಂದಿ ಸಚಿವಾಲಯ ಇಂದು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ನೀವು ಸರಿಯಾಗಿ ಮಾಸ್ಕ್ ಧರಿಸಿದ್ರೆ ಲಾಕ್‍ಡೌನ್ ಮಾಡಲ್ಲ: ಅರವಿಂದ್ ಕೇಜ್ರಿವಾಲ್

    ಈ ಕುರಿತು ಮಾಹಿತಿ ನೀಡಿದ ಸಿಂಗ್ ಅವರು, ಭಾರತದಲ್ಲಿ ಕೋವಿಡ್ ಪ್ರಕರಣಗಳು ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಗರ್ಭಿಣಿಯರು ಮತ್ತು ‘ದಿವ್ಯಾಂಗ್’ (ವಿಕಲಚೇತನ) ಉದ್ಯೋಗಿಗಳು ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ. ಅವರು ಮನೆಯಿಂದಲೇ ಕೆಲಸ ಮಾಡಬಹುದು ಎಂದು ತಿಳಿಸಿದರು.

    ಸಂಬಂಧಪಟ್ಟ ಎಲ್ಲ ಇಲಾಖೆಗಳಿಂದ ರೋಸ್ಟರ್‍ಗಳನ್ನು ಸಿದ್ಧಪಡಿಸಲಾಗುವುದು. ಕಚೇರಿಗೆ ಹಾಜರಾಗದ ಮತ್ತು ಮನೆಯಿಂದಲೇ ಕೆಲಸ ಮಾಡುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವಾಗಲೂ ದೂರವಾಣಿ ಮತ್ತು ಇತರ ಎಲೆಕ್ಟ್ರಾನಿಕ್ ಸಂವಹನಗಳ ಮೂಲಕ ಲಭ್ಯವಿರುತ್ತಾರೆ ಎಂದು ಹೇಳಿದರು.

    ದೆಹಲಿಯಲ್ಲಿ ನಿನ್ನೆ ಕೋವಿಡ್‍ನಿಂದಾಗಿ ಏಳು ಸಾವುಗಳು ಮತ್ತು 20,181 ಹೊಸ ಪ್ರಕರಣಗಳು ದಾಖಲಾಗಿದೆ. ಪಾಸಿಟಿವ್ ಪ್ರಮಾಣವು 19.60 ಪ್ರತಿಶತಕ್ಕೆ ಏರಿದೆ. ನವೀಕರಿಸಿದ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಇಂದು ದೆಹಲಿಯಲ್ಲಿ ಒಂದೇ ದಿನದಲ್ಲಿ 1,59,632 ಪ್ರಕರಣಗಳು ಮತ್ತು 327 ಸಾವುಗಳು ಸಂಭವಿಸಿವೆ ಎಂದು ಆತಂಕ ವ್ಯಕ್ತಪಡಿಸಿದರು.

    ಕೊರೊನಾ ವೈರಸ್ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ತರಬೇತಿ ಇಲಾಖೆ(ಡಿಒಪಿಟಿ) ಆದೇಶವನ್ನು ಹೊರಡಿಸಿದೆ. ಇದರ ಪ್ರಕಾರ ಸಾಧ್ಯವಾದಷ್ಟು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಅಧಿಕೃತ ಸಭೆಗಳನ್ನು ನಡೆಸಲಾಗುವುದು ಎಂದು ಹೇಳಿದರು.

    ಕಚೇರಿ ಆವರಣದಲ್ಲಿ ನೂಕುನುಗ್ಗಲು ಉಂಟಾಗುವುದನ್ನು ತಪ್ಪಿಸಲು ಅಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾಗಿ ಸಮಯ ಪಾಲನೆ ಮಾಡಬೇಕು. ಆಗಾಗ್ಗೆ ಕೈ ತೊಳೆಯುವುದು, ಸ್ವಚ್ಫವಾಗಿರುವುದು, ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಬೇಕು. ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಟೈರ್ ಕೆಳಗೆ ಸಿಕ್ಕ ನೋಟ್ ತೆಗೆದುಕೊಳ್ಳಲು ವ್ಯಕ್ತಿ ಸರ್ಕಸ್

    ಡಿಒಪಿಟಿ ಆದೇಶದ ಪ್ರಕಾರ, ಪ್ರಸ್ತುತ ಹೊರಡಿಸಲಾದ ಮಾರ್ಗಸೂಚಿಗಳು ಜನವರಿ 31 ರವರೆಗೆ ಜಾರಿಯಲ್ಲಿರುತ್ತವೆ ಎಂದು ಹೇಳಿದರು.

  • ಕೋವಿಡ್‍ನಿಂದ 41 ಗರ್ಭಿಣಿಯರು ಸಾವು, 149 ಮಂದಿ ಆತ್ಮಹತ್ಯೆ- ಕೇರಳ ಆರೋಗ್ಯ ಸಚಿವೆ

    ಕೋವಿಡ್‍ನಿಂದ 41 ಗರ್ಭಿಣಿಯರು ಸಾವು, 149 ಮಂದಿ ಆತ್ಮಹತ್ಯೆ- ಕೇರಳ ಆರೋಗ್ಯ ಸಚಿವೆ

    ತಿರುವನಂತಪುರಂ: ಕೋವಿಡ್‍ನಿಂದಾಗಿ ಕೇರಳ ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷಗಳ ಅವಧಿಯಲ್ಲಿ 41 ಗರ್ಭಿಣಿಯರು ಮೃತಪಟ್ಟಿದ್ದಾರೆ. ಅಲ್ಲದೇ ಕೊರೊನಾ ಸೋಂಕಿಗೆ ಒಳಗಾಗಿ ಸಂಕಷ್ಟ ಅನುಭವಿಸಿದ 149 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.

    PREGNANT

    ಕೇರಳ ಅಸೆಂಬ್ಲಿಯಲ್ಲಿ ಕಾಂಗ್ರೆಸ್ ಶಾಸಕ ಟಿ.ಜೆ.ವಿನೋದ್ ಅವರ ಪ್ರಶ್ನೆಗೆ ಆರೋಗ್ಯ ಸಚಿವೆ ಬುಧವಾರ ಉತ್ತರಿಸಿದರು. ಈ ಮಾಹಿತಿಯು ಆಯಾ ಜಿಲ್ಲೆಗಳಿಂದ ಸಂಗ್ರಹಿಸಿದ ವರದಿಯನ್ನು ಆಧರಿಸಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೊರೊನಾ ಕೇಸ್‌ ಹೆಚ್ಚಳ- ಪಶ್ಚಿಮ ಬಂಗಾಳದಲ್ಲಿ ಲಾಕ್‍ಡೌನ್ ಜಾರಿ

    ಮ್ಯಾಥ್ಯೂ ಕುಜಲನಾಡನ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಜ್ಯ ಆರೋಗ್ಯ ಇಲಾಖೆ ನಡೆಸಿದ ವೈಜ್ಞಾನಿಕ ಅಧ್ಯಯನ ಹಾಗೂ ಉನ್ನತ ವೈದ್ಯಕೀಯ ಸಂಸ್ಥೆ ಐಸಿಎಂಆರ್ ಸಮೀಕ್ಷೆಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    COVID

    ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ವರದಿ ಪ್ರಕಾರ, ಕೇರಳ ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. 0.88 ಇದೆ. 2020ರ ಮೇ, ಆಗಸ್ಟ್ ಮತ್ತು ಡಿಸೆಂಬರ್ ಅವಧಿಯಲ್ಲಿ ಶೇ. 11.6 ಇತ್ತು. 2021ರ ಮೇ ನಲ್ಲಿ ಪಾಸಿಟಿವಿಟಿ ದರ ಶೇ. 44.4 ಆಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಾರ್ ಮಾಲೀಕರಿಂದ ದುಪ್ಪಟ್ಟು ಹಣ ವಸೂಲಿ – ವೀಡಿಯೋ ವೈರಲ್

    “ಈ ವರ್ಷದ ಆಗಸ್ಟ್, ಸೆಪ್ಟೆಂಬರ್‍ನಲ್ಲಿ ನಡೆಸಿದ ಸಿರೊ ಅಧ್ಯಯನದಲ್ಲಿ ಪಾಸಿಟಿವಿಟಿ ದರ ಶೇ. 82.61ರಷ್ಟು ಏರಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರದಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಕೋವಿಡ್ ಲಸಿಕೆಯಲ್ಲಿನ ಪ್ರಗತಿ ಹಾಗೂ ಜನರ ಜೀವನಶೈಲಿಯೇ ಇದಕ್ಕೆ ಕಾರಣ ಎನ್ನಬಹುದು” ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

  • ಬಳ್ಳಾರಿಯಲ್ಲಿ 180 ಗರ್ಭಿಣಿಯರಿಗೆ ಕೋವಿಡ್ ಸೋಂಕು, ಏಳು ಜನ ಸಾವು

    ಬಳ್ಳಾರಿಯಲ್ಲಿ 180 ಗರ್ಭಿಣಿಯರಿಗೆ ಕೋವಿಡ್ ಸೋಂಕು, ಏಳು ಜನ ಸಾವು

    ಬಳ್ಳಾರಿ: ಗಣಿ ನಾಡಿನಲ್ಲಿ ಗರ್ಭಿಣಿಯರಿಗೆ ಆತಂಕ ಹೆಚ್ಚಾಗಿದ್ದು, ಕೊರೊನಾ ಎರಡನೇ ಅಲೆಯಲ್ಲಿ 180ಕ್ಕೂ ಹೆಚ್ಚು ಗರ್ಭಿಣಿಯರಿಗೆ ಸೋಂಕು ದೃಢಪಟ್ಟಿದ್ದು, 7 ಜನ ಸಾವನ್ನಪ್ಪಿದ್ದಾರೆ. ಹೀಗಾಗಿ ಜಿಲ್ಲೆಯ ಜನತೆ ಬೆಚ್ಚಿ ಬಿದ್ದಿದ್ದಾರೆ.

    ಒಟ್ಟು 180 ಗರ್ಭಿಣಿಯರಿಗೆ ಸೋಂಕು ತಗುಲಿದ್ದು, ಈವರೆಗೆ 7 ಸೋಂಕಿತ ಗರ್ಭಿಣಿಯರನ್ನು ಮಹಾಮಾರಿ ಬಲಿ ಪಡೆದಿದೆ. ಅಲ್ಲದೆ ನಾಲ್ಕು ಸೋಂಕಿತ ಗರ್ಭಿಣಿಯರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಮಗು ಬದುಕಿಲ್ಲ. ಇದರ ಜೊತೆಗೆ ಕಳೆದ ಹತ್ತು ದಿನಗಳಲ್ಲಿ 7 ಸೋಂಕಿತ ಗರ್ಭಿಣಿಯರ ಗರ್ಭದಲ್ಲೆ ಕಂದಮ್ಮಗಳು ಸಾವಿಗೀಡಾಗಿವೆ. ಹೀಗಾಗಿ ಜಿಲ್ಲೆಯ ಗರ್ಭಿಣಿಯರಲ್ಲಿ ಭಯ ಕಾಡುತ್ತಿದೆ.

    ಜಿಲ್ಲೆಯಲ್ಲಿ ಈ ವರೆಗೆ ಎರಡನೇ ಅಲೆಯಲ್ಲಿ 180 ಸೋಂಕಿತ ಗರ್ಭಿಣಿಯರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 134 ಗರ್ಭಿಣಿಯರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಹೆರಿಗೆ ಸಮಯದಲ್ಲಿ ಯಾವುದೇ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಕೋವಿಡ್ ಟೆಸ್ಟ್ ಮಾಡಿಸಿದಾಗ ಸೋಂಕು ಪತ್ತೆಯಾಗಿದೆ. ಹೀಗಾಗಿ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಗರ್ಭಿಣಿಯರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿ ಮಾಡುವುದರಿಂದ ಮುಂದೆ ಆಗುವ ಅನಾಹುತ ತಪ್ಪಿಸಿಬಹುದಾಗಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

  • ಅಮ್ಮಂದಿರೇ ಎಚ್ಚರ – ಪಾಲಿಷ್ ಮಾಡಿದ ಅಕ್ಕಿ ತಿಂದ್ರೆ ಶಿಶುಗಳಲ್ಲಿ ಹೃದಯ ಸಂಬಂಧಿ ಕಾಯಿಲೆ

    ಅಮ್ಮಂದಿರೇ ಎಚ್ಚರ – ಪಾಲಿಷ್ ಮಾಡಿದ ಅಕ್ಕಿ ತಿಂದ್ರೆ ಶಿಶುಗಳಲ್ಲಿ ಹೃದಯ ಸಂಬಂಧಿ ಕಾಯಿಲೆ

    – ಬೆಚ್ಚಿ ಬೀಳಿಸುವಂತ ರೈಸ್ ಕಹಾನಿ ಬಿಚ್ಚಿಟ್ಟ ವೈದ್ಯರ ಸರ್ವೆ

    ಬೆಂಗಳೂರು: ಓವರ್ ಪಾಲಿಷ್ ಮಾಡಿದ ಅಕ್ಕಿ ಬಳಸುವುದರಿಂದ ಆಗ ತಾನೇ ಹುಟ್ಟಿದ ನವಜಾತ ಶಿಶುಗಳಲ್ಲಿ ಹೃದಯಾಘಾತ ಕಾಣಿಸಿಕೊಳ್ಳುತ್ತಿದೆ ಎಂದು ವೈದ್ಯರು ನಡೆಸಿದ ಸಮೀಕ್ಷೆಯಲ್ಲಿ ತಿಳಿದು ಬಂದಿದೆ.

    ಆಗ ತಾನೇ ಹುಟ್ಟುವ ನವಜಾತ ಶಿಶುಗಳಿಗೆ ಹೃದಯಘಾತ, ಉಸಿರಾಟದ ತೊಂದರೆ, ರಕ್ತದೊತ್ತಡ, ಧ್ವನಿಯ ಸಮಸ್ಯೆ ಹೆಚ್ಚಳವಾಗಿದ್ದು, ಇದು ವೈದ್ಯರ ಗಮನಕ್ಕೆ ಬಂದಿದೆ. ಇದರಿಂದ ಭಯಗೊಂಡ ವೈದ್ಯರು ಇದಕ್ಕೆ ಕಾರಣ ಹುಡುಕಲು ಸಮೀಕ್ಷೆ ಮಾಡಿದ್ದಾರೆ. ಈ ಸಮೀಕ್ಷೆಯಲ್ಲಿ ಭಯಾನಕ ವಿಚಾರವೊಂದು ಬೆಳಕಿಗೆ ಬಂದಿದ್ದು, ಪಾಲಿಷ್ ಮಾಡಿದ ಅಕ್ಕಿಯನ್ನು ಹೆಚ್ಚು ತಿನ್ನುವುದರಿಂದ ಈ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ ಎಂದು ಗೊತ್ತಾಗಿದೆ.

    ರೈಸ್ ತಿನ್ನಲು ಚೆನ್ನಾಗಿ ಇರಬೇಕು. ಬೆಳ್ಳಗೆ ಕಾಣಬೇಕು ಎಂದು ಇತ್ತೀಚೆಗೆ ಪಾಲಿಷ್ ಮಾಡಿದ ಅಕ್ಕಿಯನ್ನು ಹೆಚ್ಚು ಬಳಕೆ ಮಾಡಲಾಗುತ್ತದೆ. ಆದರೆ ಇದರಿಂದ ಹುಟ್ಟುವ ಮಕ್ಕಳಿಗೆ ತೊಂದರೆಯಾಗುತ್ತದೆ ಎಂದು ವೈದ್ಯರ ಸಮೀಕ್ಷೆ ಬಹಿರಂಗಪಡಿಸಿದೆ. ಓವರ್ ಪಾಲಿಷ್ ಮಾಡಿದ ಅಕ್ಕಿಯನ್ನು ತಿನ್ನೋದ್ರಿಂದ ವಿಟಮಿನ್ ಬಿ-1 ಕೊರತೆಯಾಗುತ್ತದೆ. ಈ ಜೀವಸತ್ವ ಕೊರತೆಯಿಂದ ಹುಟ್ಟುವ ಮಕ್ಕಳಿಗೆ ಹೃದಯ ಸಂಬಂಧಿ ಕಾಯಿಲೆಗಳು ಬರುತ್ತವೆ ಎಂದು ವೈದ್ಯರು ಹೇಳಿದ್ದಾರೆ.

    ಅಕ್ಕಿಯ ಮೇಲ್ಪದರದಲ್ಲಿ ಈ ವಿಟಮಿನ್ ಬಿ-1 ಇರುತ್ತದೆ. ಆದರೆ ನಾವು ಅಕ್ಕಿಯನ್ನು ಪಾಲಿಷ್ ಮಾಡಿಸಿದಾಗ ಈ ವಿಟಮಿನ್ ಹೊರಟು ಹೋಗುತ್ತೆ. ಈ ಅಕ್ಕಿಯನ್ನು ಸೇವಿಸುವ ತಾಯಿಯರು ಮಕ್ಕಳಿಗೆ ಎದೆ ಹಾಲು ನೀಡಿದಾಗ ಇದರಲ್ಲಿ ವಿಟಮಿನ್ ಬಿ-1 ಕೊರೆತೆ ಬರುತ್ತದೆ. ಇದರಿಂದ ಮಕ್ಕಳಿಗೆ ಹೃದಯ ಸಂಬಂಧಿ ಕಾಯಿಲೆ ಬರುತ್ತದೆ. ಹೀಗಾಗಿ ಗರ್ಭಿಣಿಯರು ಪಾಲಿಷ್ ಮಾಡಿದ ಅಕ್ಕಿಯನ್ನು ಸೇವನೆ ಮಾಡದಂತೆ ಜಯದೇವ ಆಸ್ಪತ್ರೆಯಿಂದ ಗರ್ಭಿಣಿಯರಿಗೆ ಸಂದೇಶ ನೀಡಲಾಗಿದೆ.

    ಇತ್ತೀಚೆಗೆ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳನ್ನು ಸಮೀಕ್ಷೆಗೆ ಒಳಪಡಿಸಿದಾಗ ಈ ವಿಚಾರ ಬಯಲಾಗಿದೆ. ಸುಮಾರು 250 ನವಜಾತ ಶಿಶುಗಳನ್ನು ಈ ಸರ್ವೇಗೆ ಒಳಪಡಿಸಲಾಗಿದೆ ಎಂದು ಜಯದೇವ ಆಸ್ಪತ್ರೆ ವೈದ್ಯರ ತಂಡ ತಿಳಿಸಿದೆ. ಪಾಲಿಷ್ ಅಕ್ಕಿಯ ಬದಲು ಕುಚ್ಚಲಕ್ಕಿ, ರೆಡ್ ರೈಸ್ ಅಥವಾ ಹೆಚ್ಚು ಪಾಲಿಷ್ ಆಗದ ಅಕ್ಕಿಯ ಅನ್ನವನ್ನು ತಿನ್ನುವಂತೆ ಡಾ. ಮಂಜುನಾಥ್ ಅವರು ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಸಲಹೆ ನೀಡಿದ್ದಾರೆ.

  • ಗಂಡು ಮಕ್ಕಳಿಗೆ ಜನ್ಮ ನೀಡಿದ ಕೊರೊನಾ ಸೋಂಕಿತ ತಾಯಂದಿರು

    ಗಂಡು ಮಕ್ಕಳಿಗೆ ಜನ್ಮ ನೀಡಿದ ಕೊರೊನಾ ಸೋಂಕಿತ ತಾಯಂದಿರು

    ಬಳ್ಳಾರಿ: ನಗರದಲ್ಲಿ ಇಂದು ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಕೊರೊನಾ ಸೋಂಕಿತ ಗರ್ಭಿಣಿಯರು ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ.

    ಬಳ್ಳಾರಿಯ ಕೋವಿಡ್-19 ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ಮಹಿಳೆಯೊಬ್ಬರು ಚಿಕಿತ್ಸೆ ಪಡೆಯುತ್ತಿದ್ದು, ಗರ್ಭಿಣಿಯಾದ್ದರಿಂದ ತೀವ್ರ ನಿಗಾ ವಹಿಸಿ ನೋಡಿಕೊಳ್ಳಲಾಗಿತ್ತು. ಇಂದು ಬೆಳಗ್ಗೆ ಗರ್ಭಿಣಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದೆ. ಮಗು ಕೂಡ ಆರೋಗ್ಯವಾಗಿದ್ದು, 2.7 ಕೆಜಿ ತೂಕ ಇದೆ ಎಂದು ವೈದ್ಯರು ತಿಳಿಸಿದ್ದಾರೆ.

    ಮತ್ತೊಬ್ಬ ಕಾರ್ಮಿಕ ಮಹಿಳೆ ಸಹ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಗರ್ಭಕೋಶದ ತೊಂದರೆಯಿಂದ ಸಹ ಬಳಲುತ್ತಿದ್ದರು. ಹೀಗಾಗಿ ಇಂದು ಶಸ್ತ್ರಚಿಕಿತ್ಸೆ ಮೂಲಕ ಮಹಿಳೆಗೆ ಸುರಕ್ಷಿತ ಹೆರಿಗೆ ಮಾಡಿಸಲಾಗಿದೆ. ಗಂಡು ಮಗುವಿಗೆ ಜನ್ಮ ನೀಡಿದ ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ. ಜಿಲ್ಲಾ ಸರ್ಜನ್ ಡಾ.ಬಸರೆಡ್ಡಿ ನೇತೃತ್ವದ ತಂಡ ಸೋಂಕಿತ ಮಹಿಳೆಯರಿಗೆ ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದಾರೆ. ಸೋಂಕಿತ ಮಹಿಳೆಯರಿಗೆ ಹೆರಿಗೆ ಮಾಡಿಸುವುದು ಸವಾಲಿನ ಕೆಲಸ. ಹೆಚ್ಚಿನ ಅಪಾಯ ಸಹ ಇರುತ್ತದೆ ಎಂದು ಹೇಳಿದ್ದಾರೆ.

  • ಲಾಕ್‍ಡೌನ್‍ನಿಂದಾಗಿ ಜನಸಂಖ್ಯಾ ಸ್ಫೋಟ – 70 ಲಕ್ಷ ಗರ್ಭಿಣಿಯರು ಸೃಷ್ಟಿ

    ಲಾಕ್‍ಡೌನ್‍ನಿಂದಾಗಿ ಜನಸಂಖ್ಯಾ ಸ್ಫೋಟ – 70 ಲಕ್ಷ ಗರ್ಭಿಣಿಯರು ಸೃಷ್ಟಿ

    ನ್ಯೂಯಾರ್ಕ್: ಮಹಾಮಾರಿ ಕೋವಿಡ್ 19 ತಡೆಗಟ್ಟಲು ಹಲವು ದೇಶಗಳಲ್ಲಿ ಲಾಕ್‍ಡೌನ್ ಜಾರಿಯಾದ ಪರಿಣಾಮ ವಿಶ್ವಾದ್ಯಂತ 70 ಲಕ್ಷ ಗರ್ಭಿಣಿಯರು ಸೃಷ್ಟಿಯಾಗಲಿದ್ದಾರೆ ಎಂದು ವಿಶ್ವಸಂಸ್ಥೆಯ ಅಧ್ಯಯನ ತಿಳಿಸಿದೆ.

    ವಿಶ್ವಸಂಸ್ಥೆಯ ಜನಸಂಖ್ಯಾ ನಿಧಿ(ಯುಎನ್‍ಎಫ್‍ಪಿಎ) ಅಮೆರಿಕದ ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಮತ್ತು ಆಸ್ಟ್ರೇಲಿಯಾದ ವಿಕ್ಟೋರಿಯಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಈ ಅಧ್ಯಯನ ನಡೆಸಿದೆ. ಲಾಕ್‍ಡೌನ್‍ನಿಂದಾಗಿ ಆಧುನಿಕ ಗರ್ಭ ನಿರೋಧಕಗಳು ಸರಿಯಾದ ಸಮಯಕ್ಕೆ ಸಿಗದ ಪರಿಣಾಮ ಮಹಿಳೆಯರು ಇಚ್ಛೆ ಇಲ್ಲದಿದ್ದರೂ ಗರ್ಭವತಿಯಾಗಲಿದ್ದಾರೆ ಎಂದು ತಿಳಿಸಿದೆ. ಇದನ್ನೂ ಓದಿ: ಕೊರೊನಾ ಎಫೆಕ್ಟ್- ಸ್ಯಾನಿಟೈಜರ್‌ಗಿಂತಲೂ ಕಾಂಡೋಮ್‍ಗಳಿಗೆ ಭಾರೀ ಬೇಡಿಕೆ

    ಬಡ ಮತ್ತು ಮಧ್ಯಮ ವರ್ಗದ ಸುಮಾರು 4.7 ಕೋಟಿ ಮಹಿಳೆಯರಿಗೆ ಗರ್ಭ ನಿರೋಧಕ ಬಳಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ 70 ಲಕ್ಷ ಗರ್ಭಿಣಿಯರು ಸೃಷ್ಟಿಯಾಗಲಿದ್ದಾರೆ ಎಂದು ಅಧ್ಯಯನ ಹೇಳಿದೆ.

    ಲಾಕ್ ಡೌನ್ ಬಿಕ್ಕಟ್ಟಿನಿಂದಾಗಿ ಮಹಿಳೆಯರು ಕುಟುಂಬ ಯೋಜನೆ ಪಾಲಿಸಲು ಸಾಧ್ಯವಾಗುತ್ತಿಲ್ಲ. ಜನಸಂಖ್ಯಾ ಸ್ಫೋಟದಿಂದಾಗಿ ಮುಂದಿನ 10 ವರ್ಷದಲ್ಲಿ 2 ಲಕ್ಷ ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಬಹುದು ಎಂದು ಅಂದಾಜಿಸಿದೆ.  ಇದನ್ನೂ ಓದಿ: ಜಾಗತಿಕ ಕೊರತೆ – ಕಾಂಡೋಮ್ ಕಾರ್ಖಾನೆಯ ನೌಕರರನ್ನು ‘ಅಗತ್ಯ ಸೇವೆ’ ಪಟ್ಟಿಗೆ ಸೇರ್ಪಡೆ

    ಯುಎನ್‍ಎಫ್‍ಪಿಎ ಕಾರ್ಯಕಾರಿ ನಿರ್ದೇಶಕಿ ನಟಾಲಿಯಾ ಕನೇಮ್ ಪ್ರತಿಕ್ರಿಯಿಸಿ, ಈ ಅವಧಿಯಲ್ಲಿ ಲಕ್ಷಾಂತರ ಮಹಿಳೆಯರು ಕೌಟುಂಬಿಕ ದೌರ್ಜನ್ಯ, ಲೈಂಗಿಕ ಹಿಂಸಾಚಾರ ಮತ್ತು ಇತರ ಗಂಭೀರ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಲಕ್ಷಾಂತರ ಮಹಿಳೆಯರು ಮತ್ತು ಯುವತಿಯರ ಆರೋಗ್ಯ ಮತ್ತು ದೇಹದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗರ್ಭಿಣಿ ವೈದ್ಯೆಯನ್ನ ತಡರಾತ್ರಿ ಮನೆಯಿಂದ ಹೊರ ಹಾಕಿದ ಟೆಕ್ಕಿ ಪತಿ